ವಿಸ್ತಾರ Explainer | ಉಗ್ರರಿಗೆ ಹಣಕಾಸಿನ ನೆರವಿನ ವಿರುದ್ಧ ಭಾರತದ ಸಮರ! ನಿರೀಕ್ಷೆ, ಸವಾಲುಗಳೇನು? - Vistara News

EXPLAINER

ವಿಸ್ತಾರ Explainer | ಉಗ್ರರಿಗೆ ಹಣಕಾಸಿನ ನೆರವಿನ ವಿರುದ್ಧ ಭಾರತದ ಸಮರ! ನಿರೀಕ್ಷೆ, ಸವಾಲುಗಳೇನು?

ಭಯೋತ್ಪಾದನೆಯನ್ನು ಹತ್ತಿಕ್ಕಲು ಅದಕ್ಕೆ ಪೂರೈಕೆಯಾಗುವ ಹಣಕಾಸಿನ ಜಾಲವನ್ನು ಕತ್ತರಿಸುವುದು ಪ್ರಮುಖ ಪರಿಹಾರವಾಗಿದೆ. ಈ ನಿಟ್ಟಿನಲ್ಲಿ ಭಾರತದ ಸವಾಲುಗಳು ಮತ್ತು ನಿರೀಕ್ಷೆಗಳ ಕುರಿತು ವಿಸ್ತಾರ Explainer.

VISTARANEWS.COM


on

Finance Support to Terror
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

| ಗಿರೀಶ್ ಲಿಂಗಣ್ಣ, ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ
ಭಯೋತ್ಪಾದನೆಯನ್ನು ತಡೆಗಟ್ಟಲು ಇರುವ ಅತ್ಯಂತ ಪ್ರಮುಖ ಕ್ರಮಗಳಲ್ಲಿ ಭಯೋತ್ಪಾದಕರಿಗೆ ಹಣಕಾಸಿನ ಪೂರೈಕೆಯನ್ನು ತಡೆಯುವುದೂ ಪ್ರಮುಖವಾದದ್ದು. ಅಂತಾರಾಷ್ಟ್ರೀಯ ಸಮುದಾಯ ಇದರ ಪ್ರಾಮುಖ್ಯತೆಯನ್ನು ಸೆಪ್ಟೆಂಬರ್ 11, 2001ರ ಬಳಿಕ ಅರಿತುಕೊಂಡಿತು. ಫೈನಾನ್ಷಿಯಲ್ ಆ್ಯಕ್ಷನ್ ಟಾಸ್ಕ್ ಫೋರ್ಸ್, ಅಥವಾ ಗ್ರೂಪ್ ಡಿ ಆ್ಯಕ್ಷನ್ ಫಿನಾನ್ಸಿರ್ ಎಂದು ಕರೆಯಲಾಗುವ ಇದೊಂದು ಅಂತರಾಷ್ಟ್ರೀಯ ಸಂಸ್ಥೆಯಾಗಿದ್ದು, ಜಿ7 ಒಕ್ಕೂಟದಿಂದ 1989ರಲ್ಲಿ ಅಧಿಕೃತ ಹಣದ ಪೂರೈಕೆ ತಡೆಗಟ್ಟಲು ಆರಂಭಗೊಂಡಿತು. 2001ರಲ್ಲಿ ಸಂಸ್ಥೆಯ ಉದ್ದೇಶಗಳು ಇನ್ನಷ್ಟು ಹೆಚ್ಚಿ, ಭಯೋತ್ಪಾದನೆಗೆ ಹಣಕಾಸಿನ ನೆರವನ್ನು ತಡೆಯುವುದನ್ನು ಸೇರಿಸಲಾಯಿತು.

ನವೆಂಬರ್ 18 ಹಾಗೂ 19ರಂದು ಭಾರತ ‘ನೋ ಮನಿ ಫಾರ್ ಟೆರರ್’ (ಎನ್ಎಮ್ಎಫ್‌ಟಿ) ಸಮ್ಮೇಳನವನ್ನು ಆಯೋಜಿಸುತ್ತಿದೆ. ಈ ಸಮ್ಮೇಳನ ನಾಲ್ಕು ವಿಚಾರಗಳನ್ನು ಕುರಿತು ಚರ್ಚಿಸುತ್ತದೆ.
| ಅವೆಂದರೆ, “ಭಯೋತ್ಪಾದನೆ ಮತ್ತು ಭಯೋತ್ಪಾದನೆಗೆ ಹಣಕಾಸಿನ ನೆರವಿನಲ್ಲಿ ಜಾಗತಿಕ ಪ್ರವೃತ್ತಿಗಳು”,
| “ಭಯೋತ್ಪಾದನೆಗೆ ಹಣಕಾಸು ಒದಗಿಸಲು ಔಪಚಾರಿಕ ಮತ್ತು ಅನೌಪಚಾರಿಕ ಮಾರ್ಗಗಳ ಬಳಕೆ”,
| “ನೂತನ ತಂತ್ರಜ್ಞಾನಗಳು ಮತ್ತು ಭಯೋತ್ಪಾದನೆಗೆ ಹಣಕಾಸು ಪೂರೈಕೆ”,
| ” ಭಯೋತ್ಪಾದನೆಗೆ ಹಣಕಾಸು ತಡೆಯುವಲ್ಲಿನ ಸವಾಲುಗಳನ್ನು ಎದುರಿಸಲು ಅಂತಾರಾಷ್ಟ್ರೀಯ ಸಹಕಾರ”

ಇದಲ್ಲದೆ, ಸಾಮಾಜಿಕ ಜಾಲತಾಣಗಳ ದುರ್ಬಳಕೆ ಹಾಗೂ ಅವುಗಳಲ್ಲಿನ ನಿಯಂತ್ರಣದ ಕೊರತೆ, ಭಯೋತ್ಪಾದನೆಗೆ ಹಣ ಒದಗಿಸಲು ಕ್ರೌಡ್ ಫಂಡಿಂಗ್, ಹಣಕಾಸಿನ ನೆರವು ಪಡೆಯಲು ಡಾರ್ಕ್ ವೆಬ್ ಬಳಕೆ ಹಾಗೂ ಕ್ರಿಪ್ಟೊ ಕರೆನ್ಸಿಯ ಬಳಕೆಗಳೂ ಸಮ್ಮೇಳನದಲ್ಲಿ ಚರ್ಚೆಯಾಗುವ ಪ್ರಮುಖ ವಿಚಾರಗಳಾಗಿವೆ.

ಈ ಮೊದಲು ಏಪ್ರಿಲ್ 2018ರಲ್ಲಿ ಪ್ಯಾರಿಸ್‌ನಲ್ಲಿ ಹಾಗೂ ನವೆಂಬರ್ 2019ರಲ್ಲಿ ಮೆಲ್ಬೋರ್ನ್ ನಲ್ಲಿ ನಡೆದ ಸಮ್ಮೇಳನಗಳ ಯಶಸ್ಸು ಹಾಗೂ ಪಾಠಗಳ ಆಧಾರದಲ್ಲಿ ಈ ಸಮ್ಮೇಳನವನ್ನು ನಡೆಸಲಾಗುತ್ತದೆ. ಸಮ್ಮೇಳನವು ಭಯೋತ್ಪಾದಕರಿಗೆ ಹಣಕಾಸಿನ ನೆರವು ಹಾಗೂ ಸುರಕ್ಷಿತ ತಾಣಗಳನ್ನು ತಡೆಗಟ್ಟಲು ಅಂತಾರಾಷ್ಟ್ರೀಯ ಸಹಕಾರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ.

ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು ಜಗತ್ತು ಭಯೋತ್ಪಾದನೆಯನ್ನು ಎದುರಿಸಲು ಎಲ್ಲರನ್ನೂ ಒಳಗೊಂಡ ವಿಧಾನವನ್ನು ಅನುಸರಿಸಬೇಕು ಎಂದರು. ಕಳೆದ ಕೆಲವು ತಿಂಗಳಲ್ಲಿ ಭಾರತವು ರಕ್ಷಣಾ ವಿಚಾರಗಳಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ಸಮ್ಮೇಳನಗಳನ್ನು ಆಯೋಜಿಸಿದೆ. ಇವುಗಳಲ್ಲಿ 90ನೆಯ ಇಂಟರ್‌ಪೋಲ್ ಜನರಲ್ ಅಸೆಂಬ್ಲಿ ಹಾಗೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಕೌಂಟರ್ ಟೆರರಿಸಂ ಸಮಿತಿಯ ಸಭೆ ಮುಂಬೈನಲ್ಲಿ ನಡೆದಿದೆ. ಎನ್ಎಮ್ಎಫ್‌ಟಿ ಮೂಲಕ ಭಾರತ ಜಾಗತಿಕವಾಗಿ ಭಯೋತ್ಪಾದನೆಗೆ ಹಣಕಾಸಿನ ನೆರವಿನ ವಿರುದ್ಧ ಜಾಗೃತಿ ಮೂಡಿಸುತ್ತಿದೆ ಎಂದರು.

ತನ್ನ ಭಾಷಣದಲ್ಲಿ ಪ್ರಧಾನಿ ಭಯೋತ್ಪಾದಕ ಮತ್ತು ಭಯೋತ್ಪಾದನಾ ಸಂಘಟನೆಗಳ ವ್ಯತ್ಯಾಸವನ್ನು ವಿವರಿಸಿದರು. ಭಯೋತ್ಪಾದನಾ ಸಂಘಟನೆಗಳು ಭಯೋತ್ಪಾದನಾ ಕೃತ್ಯಗಳಿಗೆ ಹಣಕಾಸಿನ ನೆರವು ಒದಗಿಸುವುದರಿಂದ ಅವುಗಳು ವೈಯಕ್ತಿಕ ಭಯೋತ್ಪಾದನಾ ಕೃತ್ಯಗಳಿಗೆ ಹಣಕಾಸು ಪೂರೈಸದಂತೆ ತಡೆಗಟ್ಟಬೇಕು ಎಂದರು.

ಭಯೋತ್ಪಾದನಾ ಹಣಕಾಸಿನ ವಿರುದ್ಧದ ಸಮರದಲ್ಲಿ ತಂತ್ರಜ್ಞಾನ ಸವಾಲೂ ಆಗಿದೆ ಮತ್ತು ಅವಕಾಶವೂ ಆಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ನಾವು ತಂತ್ರಜ್ಞಾನವನ್ನು ಬಳಸಿ ಭಯೋತ್ಪಾದನೆಯ ವಿರುದ್ಧ ಹೋರಾಡಬೇಕಿದೆ. ಡಾರ್ಕ್ ನೆಟ್ ಹಾಗೂ ಖಾಸಗಿ ಕರೆನ್ಸಿಗಳ ಮೂಲಕ ಭಯೋತ್ಪಾದನೆಗೆ ಹಣಕಾಸು ಒದಗಿಸಲಾಗುತ್ತಿದ್ದು, ಇನ್ನಷ್ಟು ತಂತ್ರಜ್ಞಾನಗಳು ರೂಪುಗೊಳ್ಳುತ್ತಿವೆ. ಇದನ್ನು ತಡೆಯುವ ಪ್ರಯತ್ನಗಳಲ್ಲಿ ಖಾಸಗಿ ವಲಯವೂ ಸಹಕರಿಸಬೇಕು ಎಂದು ಪ್ರಧಾನಿ ಕರೆ ನೀಡಿದ್ದಾರೆ. ಅವರು ಇದಕ್ಕಾಗಿ ಒಂದು ಸಮಾನ ಅರ್ಥೈಸುವಿಕೆ, ನಿಯಮಾವಳಿಗಳು ಮೂಡಿಬರಬಹುದು ಎಂದು ಅಭಿಪ್ರಾಯ ಪಟ್ಟರು.

ನರೇಂದ್ರ ಮೋದಿಯವರು ದೇಶ ದೇಶಗಳ ಮಧ್ಯ ಹೆಚ್ಚಿನ ಸಹಕಾರಕ್ಕಾಗಿ ಕರೆ ನೀಡಿ, ಬೇರೆ ದೇಶಗಳಲ್ಲಿ ಭಯೋತ್ಪಾದಕರ ಕೃತ್ಯಗಳಲ್ಲಿನ ವಿಭಿನ್ನತೆಯ ಲಾಭ ಪಡೆದುಕೊಳ್ಳಲು ಬಿಡಬಾರದು ಎಂದರು.

ಭಯೋತ್ಪಾದನೆಗೆ ಹಣಕಾಸಿನ ನೆರವಿನ ವಿರುದ್ಧ ಭಾರತದ ಕಾರ್ಯತಂತ್ರಗಳು ಆರು ಸ್ತಂಭಗಳನ್ನು ಒಳಗೊಂಡಿವೆ. ಅವೆಂದರೆ ಶಾಸಕಾಂಗ ಮತ್ತು ತಾಂತ್ರಿಕತೆಗಳ ಬಲವರ್ಧನೆ, ಸಮಗ್ರ ಮೇಲ್ವಿಚಾರಣಾ ವ್ಯವಸ್ಥೆಯ ರಚನೆ, ಗುಪ್ತಚರ ಮಾಹಿತಿಗಳ ಹಂಚಿಕೆ ವ್ಯವಸ್ಥೆ ಮತ್ತು ವಿಚಾರಣೆ ಹಾಗೂ ಪೊಲೀಸ್ ಕಾರ್ಯಾಚರಣೆಗಳ ಬಲವರ್ಧನೆ, ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಅನುಮತಿ, ಕಾನೂನು ಘಟಕಗಳು ಹಾಗೂ ನೂತನ ತಂತ್ರಜ್ಞಾನಗಳ ದುರ್ಬಳಕೆಯ ತಡೆ, ಹಾಗೂ ಅಂತಾರಾಷ್ಟ್ರೀಯ ಸಹಕಾರ ಮತ್ತು ಸಮನ್ವಯದ ಸ್ಥಾಪನೆ ಎಂದು ಪ್ರಧಾನಿ ಮೋದಿ ವಿವರಿಸಿದ್ದಾರೆ.

ಈ ವರ್ಷದ ಅಂತ್ಯದವರೆಗೆ ಕೌಂಟರ್ ಟೆರರಿಸಂ ಸಮಿತಿಯ ನಾಯಕತ್ವ ಭಾರತ ನಿರ್ವಹಿಸುತ್ತಿದೆ. ಸಮಿತಿಯ ಅಧ್ಯಕ್ಷರಾದ, ಭಾರತದ ರಾಯಭಾರಿ ರುಚಿರಾ ಕಾಂಬೋಜ್ ನ್ಯೂಯಾರ್ಕ್‌ನಲ್ಲಿ ಮಾಧ್ಯಮಗಳೊಡನೆ ಮಾತನಾಡುತ್ತಾ, ಉನ್ನತ ಹಂತದ ಚರ್ಚೆಗಳು ಪ್ರಸ್ತುತ ಘಟನೆಗಳನ್ನು ಅವಲೋಕಿಸಿ, ಭಯೋತ್ಪಾದನೆ ಮತ್ತು ತಂತ್ರಜ್ಞಾನದ ಬಳಕೆಯ ಕುರಿತು ಅಧ್ಯಯನ ನಡೆಸಲಿವೆ ಎಂದರು.

ಅದರೊಡನೆ, ಈ ಸಮ್ಮೇಳನದಲ್ಲಿ ತಂತ್ರಜ್ಞಾನದ ಬುದ್ಧಿವಂತ ಬಳಕೆದಾರರಾದ ಉಗ್ರರು ಹೇಗೆ ತಂತ್ರಜ್ಞಾನಗಳನ್ನು ಕ್ರೌಡ್ ಫಂಡಿಂಗ್, ಉತ್ಪನ್ನಗಳ ಮಾರಾಟ, ಸಾಮಾಜಿಕ ಜಾಲತಾಣಗಳಲ್ಲಿ ಹಣದ ನೆರವು ಪಡೆಯಲು, ಇತ್ಯಾದಿಗಳಿಗೆ ಬಳಸುತ್ತಾರೆ ಎಂಬ ಕುರಿತೂ ಬೆಳಕು ಚೆಲ್ಲಲಿದೆ.

ಕ್ರಿಮಿನಲ್ ಉದ್ದೇಶಕ್ಕಾಗಿ ತ್ರೀಡಿ ಪ್ರಿಂಟಿಂಗ್ ತಂತ್ರಜ್ಞಾನದ ಬಳಕೆ, ರೊಬೋಟಿಕ್ಸ್, ಕೃತಕ ಬುದ್ಧಿಮತ್ತೆ (ಎಐ), ಯಂತ್ರ ಕಲಿಕೆ (ಮೆಷಿನ್ ಲರ್ನಿಂಗ್), ಅನ್ ಮ್ಯಾನ್ಡ್ ಏರಿಯಲ್ ಸಿಸ್ಟಮ್ಸ್ ಹಾಗೂ ಸಿಂತೆಟಿಕ್ ಬಯೋ ಟೆಕ್ನಾಲಜಿ ಬಳಕೆಯನ್ನೂ ವಿಚಾರಿಸಲಾಗುವುದು.

ಸಮಿತಿಯ ಮಾಹಿತಿ ತಂತ್ರಜ್ಞಾನ ವಿಭಾಗದ ಸಂಯೋಜಕರಾದ ಜೆನ್ನಿಫರ್ ಬ್ರಾಮ್ಲೆಟ್ ಅವರು ಸದಸ್ಯ ರಾಷ್ಟ್ರಗಳು ಈಗಾಗಲೇ ಹೆಚ್ಚುತ್ತಿರುವ ಡ್ರೋನ್ ಬಳಕೆಯನ್ನು ಪರಿಶೀಲಿಸಲು ಕ್ರಮ ಕೈಗೊಳ್ಳುತ್ತಿವೆ ಎಂದಿದ್ದಾರೆ.

ವಿಮಾನ ನಿಲ್ದಾಣಗಳು ಹಾಗೂ ಪ್ರಮುಖ ಪ್ರದೇಶಗಳನ್ನು ಹಾರಾಟ ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಈ ಕಾರಣದಿಂದ ಡ್ರೋನ್ ಉತ್ಪಾದನಾ ಸಂಸ್ಥೆಗಳಿಗೆ ಜಿಯೋ ಲಾಕಿಂಗ್ ವ್ಯವಸ್ಥೆ ಅಳವಡಿಸುವ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದ್ದು, ನಿರ್ಬಂಧಿತ ಪ್ರದೇಶಗಳ ಬಳಿ ಬಂದಾಗ ಡ್ರೋನ್‌ಗಳು ಸ್ವಯಂಚಾಲಿತವಾಗಿ ನಿಲುಗಡೆಗೊಳ್ಳುತ್ತವೆ ಎಂದು ಅವರು ತಿಳಿಸಿದ್ದಾರೆ. ಭವಿಷ್ಯದಲ್ಲಿ ಡ್ರೋನ್‌ಗಳನ್ನು ಹೇಗೆ ಮಾರಾಟ ಮಾಡಬಹುದು ಮತ್ತು ಅವುಗಳನ್ನು ಯಾರು ಖರೀದಿಸಬಹುದು ಎಂಬ ಕುರಿತೂ ಹಲವು ಚರ್ಚೆಗಳು ನಡೆಯುತ್ತಿವೆ ಎಂದರು.

ಡಾರ್ಕ್ ವೆಬ್ ಎಂದರೇನು?
ಪ್ರಸ್ತುತ ಉಪಯೋಗದಲ್ಲಿರುವ ವರ್ಲ್ಡ್ ವೈಡ್ ವೆಬ್ ಅನ್ನು (ಡಬ್ಲ್ಯು ಡಬ್ಲ್ಯು ಡಬ್ಲ್ಯು) ಸಾಮಾನ್ಯವಾಗಿ ಒಂದು ಮಂಜುಗಡ್ಡೆಗೆ ಹೋಲಿಸಲಾಗುತ್ತದೆ. ಈ ತೆರೆದ ಆವೃತ್ತಿಯ ವೆಬ್ ಬಹುತೇಕ ಎಲ್ಲರಿಗೂ ಲಭ್ಯವಿದೆ. ಆದರೆ ಡೀಪ್ ವೆಬ್ ಸಾಮಾನ್ಯ ಸರ್ಚ್ ಇಂಜಿನ್‌ಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಇದನ್ನು ಸಾಮಾನ್ಯ ಜನರು ಬಳಸುವುದು ಕಷ್ಟಕರವಾಗುತ್ತದೆ. ಡೀಪ್ ವೆಬ್ ನಲ್ಲಿ ಲಭ್ಯವಿರುವ ಬಹುತೇಕ ಮಾಹಿತಿಗಳು ಅಕ್ರಮವಾಗಿದ್ದು, ಪಾಸ್‌ವರ್ಡ್ ಹೊಂದಿರುವ ಅಕೌಂಟ್‌ಗಳನ್ನು ಬಳಸಿ ಅವುಗಳ ವಿವಿಧ ಸೇವೆಗಳನ್ನು ಪಡೆಯಬೇಕು. ಡಾರ್ಕ್ ನೆಟ್ ಅಥವಾ ಡಾರ್ಕ್ ವೆಬ್ ಡೀಪ್ ವೆಬ್‌ನ ಅತ್ಯಂತ ಸಣ್ಣ ಭಾಗವಾಗಿದ್ದು, ಕೇವಲ 0.01% ಮಾತ್ರ ಹೊಂದಿದೆ. ಅದನ್ನು ಆನಿಯನ್ ರೂಟರ್ (ಟಾರ್ ಬ್ರೌಸರ್) ಅಥವಾ ಇನ್‌ವಿಸಿಬಲ್ ಇಂಟರ್‌ನೆಟ್ ಪ್ರಾಜೆಕ್ಟ್ (ಐ2ಪಿ) ಥರದ ಪ್ರತ್ಯೇಕ ಬ್ರೌಸರ್‌ಗಳನ್ನು ಬಳಸಿ ಉಪಯೋಗಿಸಬೇಕಾಗುತ್ತದೆ. ಇದು ಬಳಕೆದಾರರ ವೈಯಕ್ತಿಕ ಮಾಹಿತಿ, ಸ್ಥಳದ ಕುರಿತ ಮಾಹಿತಿಗಳನ್ನು ಸಿಗದಂತೆ ತಡೆಯುತ್ತದೆ. ಡಾರ್ಕ್ ವೆಬ್‌ನಲ್ಲಿ ಸಾವಿರಾರು ಜಾಲತಾಣಗಳಿದ್ದು, ಅನಾಮಧೇಯತೆ ತಂತ್ರಜ್ಞಾನಗಳನ್ನು ಬಳಸಿ, ಇಂಟರ್‌ನೆಟ್ ಪ್ರೊಟೋಕಾಲ್ (ಐಪಿ) ಅಡ್ರೆಸ್ ಬಚ್ಚಿಡಲು ನೆರವಾಗುತ್ತದೆ. ಇದರಲ್ಲಿರುವ ಬಹುತೇಕ ಮಾಹಿತಿಗಳು, ಸಂವಹನಗಳು ಕಾನೂನು ಬಾಹಿರ ಚಟುವಟಿಕೆಗಳಾದ ಡ್ರಗ್ಸ್ ಹಾಗೂ ಆಯುಧ ಸಾಗಣೆ, ನಕಲಿ ದಾಖಲೆ ಸೃಷ್ಟಿ, ಪೋರ್ನೋಗ್ರಫಿ, ಹಣಕಾಸು ಅವ್ಯವಹಾರ, ಭಯೋತ್ಪಾದನಾ ಸಂವಹನ ಹಾಗೂ ಉಗ್ರಗಾಮಿ ಯೋಜನೆಗಳಿಗೆ ಸಂಬಂಧಿಸಿವೆ.

ಕ್ರಿಪ್ಟೋ ಕರೆನ್ಸಿ ಎಂದರೇನು?
ಕ್ರಿಪ್ಟೋ ಕರೆನ್ಸಿಯನ್ನು ಅರ್ಥ ಮಾಡಿಕೊಳ್ಳುವ ಮೊದಲು ನಾವು ಸಾಂಪ್ರದಾಯಿಕ ಹಣವನ್ನು ಅರ್ಥ ಮಾಡಿಕೊಳ್ಳಬೇಕು. ಜಗತ್ತಿನಲ್ಲಿ ಹಣ ಜಾರಿಗೆ ಬರುವ ಮೊದಲು ಜನರು ಬಾರ್ಟರ್ ವ್ಯವಸ್ಥೆ, ಅಂದರೆ ತಮ್ಮಲ್ಲಿರುವ ವಸ್ತು ಅಥವಾ ಸೇವೆಯ ಬದಲಿಗೆ ಇನ್ನೊಂದನ್ನು ಪಡೆದುಕೊಳ್ಳುತ್ತಿದ್ದರು. ಆದರೆ ವಸ್ತು ಮತ್ತು ಸೇವೆಗಳು, ಜನರು ಅಪಾರ ಸಂಖ್ಯೆಯಲ್ಲಿ ಇರುವುದರಿಂದ ಈ ವ್ಯವಸ್ಥೆ ಪ್ರಾಯೋಗಿಕವಾಗಿ ಸಾಧ್ಯವಿಲ್ಲ.

ಆದರೆ ಹಣದ ಮೌಲ್ಯ ಒಂದೇ ಆಗಿರುತ್ತದೆ. ಮುಂದೆ ಅಗತ್ಯ ಬಿದ್ದಾಗ ಅದನ್ನು ನೀಡಿ, ಅದರ ಮೌಲ್ಯದ ವಸ್ತು ಅಥವಾ ಸೇವೆಗಳನ್ನು ಪಡೆದುಕೊಳ್ಳಬಹುದು. ಆದರೆ ಕೆಲವರು ಹಣವನ್ನೂ ನಕಲಿಯಾಗಿ ಮಾಡಲು ಆರಂಭಿಸಿದರು. ಆದರೆ ಜನರು ಅವರ ಸಮಯ ಮತ್ತು ಶ್ರಮವನ್ನು ಐಒಯುಗಳಾಗಿ ಪರಿವರ್ತಿಸಲು ಆರಂಭಿಸಿದಾಗ, ಒಂದಷ್ಟು ಜನ ಐಓಯುಗಳನ್ನು ಫೋರ್ಜ್ ಮಾಡತೊಡಗಿದರು. ಹಾಗೂ ಅದನ್ನು ನಕಲಿಯಾಗಿಸುವುದು ಹಾನಿಕರವಾಗಿತ್ತು.

ಈ ಕಾರಣಕ್ಕಾಗಿ ಹಣ ಜಗತ್ತಿನ ವಿರಳ ಅಥವಾ ಸೀಮಿತ ಸಂಪನ್ಮೂಲಗಳ ಮೇಲೆ ಹೆಚ್ಚಾಗಿ ಅವಲಂಬಿತವಾಗಿತ್ತು. ಇದಕ್ಕೆ ಚಿನ್ನ ಒಂದು ಉದಾಹರಣೆಯಾಗಿದೆ. ಚಿನ್ನ ಒಂದು ವಿರಳ ಲೋಹವಾಗಿದ್ದು, ಪ್ರಕೃತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಲಭಿಸುತ್ತದೆ. ಆದ್ದರಿಂದ ಯಾರ ಬಳಿಯಾದರೂ ಚಿನ್ನ ಇದ್ದರೆ ಅದರಲ್ಲಿ ಎರಡೇ ಸಾಧ್ಯತೆಗಳಿರುತ್ತವೆ. ಒಂದು ಅವರು ಪ್ರಕೃತಿಯಿಂದ ಚಿನ್ನ ಪಡೆದುಕೊಂಡಿದ್ದಾರೆ. ಎರಡು, ನೇರವಾಗಿ ಪ್ರಕೃತಿಯಿಂದ ಚಿನ್ನ ಪಡೆದವರಿಂದ ತೆಗೆದುಕೊಂಡಿದ್ದಾರೆ.

ಈಗ ಸಾಕಷ್ಟು ಸಮಯ ಸರಿದು ಹೋಗಿದೆ. ಚಿನ್ನದ ಸ್ಟ್ಯಾಂಡರ್ಡ್ ನಿಂದ ಜನರು ಸಾಕಷ್ಟು ಮುಂದೆ ಸಾಗಿದ್ದಾರೆ. ಉದಾಹರಣೆಗೆ, ಅಮೆರಿಕಾದಲ್ಲಿ ನಗದು ಹಣ ಚಿನ್ನಕ್ಕೆ ಈಗ ಐಒಯು ಆಗಿ ಉಳಿದಿಲ್ಲ. ಅದರ ಬದಲಿಗೆ ನಗದೇ ಒಂದು ಸಂಪನ್ಮೂಲವಾಗಿದೆ. ಸರ್ಕಾರ ನಗದನ್ನು ಸೃಷ್ಟಿಸುತ್ತದೆ. ಆದ್ದರಿಂದ ಅದು ವಿರಳವಾಗಿದ್ದು, ನಕಲು ಮಾಡುವುದರಿಂದ ರಕ್ಷಿಸಲ್ಪಡುತ್ತದೆ. ಈ ವಿಶ್ವಾಸ ಮತ್ತು ಬೆಲೆಗಳೇ ಹಣಕ್ಕೆ ಇಷ್ಟು ಬೆಲೆ ತಂದಿವೆ.

ಕ್ರಿಪ್ಟೋ ಕರೆನ್ಸಿಗಳು ಮಹತ್ವ ಹೊಂದಿರುವ ಡಿಜಿಟಲ್ ಕರೆನ್ಸಿಯ ಒಂದು ಭಾಗವಾಗಿದೆ. ಈ ವಿಚಾರದಲ್ಲಿ ಪೂರ್ತಿ ನಕಲು ಮಾಡುವುದೇ ಪ್ರಮುಖ ಸವಾಲಾಗಿ ಚರ್ಚಿಸಲಾಗಿದೆ. ಅದಲ್ಲದೆ, ಯಾವುದೇ ವಸ್ತುವಿನ ಡಿಜಿಟಲ್ ನಕಲು ನಿರ್ಮಿಸುವುದು ಅತ್ಯಂತ ಸುಲಭವಾಗಿದೆ.

ಅದೇನೇ ಇದ್ದರೂ, ಕ್ರಿಪ್ಟೋ ಕರೆನ್ಸಿಗಳು ಜನರಿಗೆ ಅವರ ಶ್ರಮವನ್ನು ಡಿಜಿಟಲ್ ಟೋಕನ್ ವ್ಯವಸ್ಥೆಗೆ ಪರಿವರ್ತಿಸಲು ಸಾಧ್ಯವಾಗಿಸಿವೆ. ಈ ಟೋಕನ್‌ಗಳು ನಕಲು ಮಾಡದಂತೆ ಸುರಕ್ಷಿತವಾಗಿವೆ. ಸರಳವಾಗಿ ಹೇಳುವುದಾದರೆ, ಅವುಗಳು ಡಿಜಿಟಲ್ ಲೋಕದಲ್ಲಿ ಚಿನ್ನವಿದ್ದ ಹಾಗೇ. ನೈಜವಾಗಿ ಈ ಟೋಕನ್‌ಗಳು ವಿರಳವಾಗಿದ್ದು, ಚಿನ್ನದಂತೆಯೇ ಹಣದ ಅಂಶವನ್ನು ಹೊಂದಿವೆ. ಇಲ್ಲಿ “ಮೈನಿಂಗ್” ಎನ್ನುವುದು ಚಿನ್ನಕ್ಕೆ ಗಣಿಗಾರಿಕೆ ನಡೆಸುವಂತೆಯೇ. ಇದು ವ್ಯವಸ್ಥೆಗೆ ಹೊಸ ವಸ್ತುಗಳನ್ನು ಸೇರಿಸಲು ಇರುವ ಏಕೈಕ ಮಾರ್ಗವಾಗಿದೆ. ಬಳಿಕ ಅದನ್ನು ನಗದಿನ ರೀತಿಯಲ್ಲಿ ಬಳಸಿಕೊಳ್ಳಲು ಸಾಧ್ಯವಾಗುತ್ತದೆ. ಬಿಟ್ ಕಾಯಿನ್ನಿನ ವಿಚಾರದಲ್ಲಿ, ಮೈನಿಂಗ್ ಸಂಪೂರ್ಣ ವ್ಯವಸ್ಥೆಯನ್ನು ಸುರಕ್ಷಿತವಾಗಿ ಮತ್ತು ಕಾರ್ಯಾಚರಿಸುವಂತೆ ಮಾಡುತ್ತದೆ.

ಕ್ರಿಪ್ಟೋ ಕರೆನ್ಸಿಗಳು ಹೇಗೆ ಭಯೋತ್ಪಾದನೆಗೆ ನೆರವು ನೀಡುತ್ತವೆ?
ಕ್ರಿಪ್ಟೋ ಕರೆನ್ಸಿಯನ್ನು ಭಯೋತ್ಪಾದನೆಗೆ ಹೇಗೆ ಬಳಸಲಾಗುತ್ತದೆ ಎನ್ನುವುದಕ್ಕಿಂತ, ಭಯೋತ್ಪಾದನಾ ಸಂಘಟನೆಗಳು ಹಣವನ್ನು ಹೇಗೆ ಬಳಸುತ್ತವೆ ಎಂಬ ವಿಚಾರವನ್ನು ಗಮನಿಸಬೇಕಾಗುತ್ತದೆ.

ಭಯೋತ್ಪಾದಕ ಸಂಘಟನೆಗಳ ಹಣದ ಉಪಯೋಗವನ್ನು ಮೂರು ಭಾಗಗಳಲ್ಲಿ ಅಧ್ಯಯನ ಮಾಡಬಹುದು. ರಶೀದಿ, ನಿರ್ವಹಣೆ, ಹಾಗೂ ಖರ್ಚು. ಈ ಮೂರೂ ಭಾಗಗಳೂ ಭಯೋತ್ಪಾದನಾ ಸಂಘಟನೆಗಳಿಗೆ ಕ್ರಿಪ್ಟೋ ಕರೆನ್ಸಿಯ ಬಳಕೆಗೆ ಸಾಕಷ್ಟು ಅಡ್ಡಿಯನ್ನು ಉಂಟುಮಾಡುತ್ತವೆ. ದೊಡ್ಡ ಪ್ರಮಾಣದ ರಶೀದಿ ಹೊಂದಿರುವ ಮೊತ್ತವನ್ನು ಅನಾಮಧೇಯವಾಗಿ ನಿರ್ವಹಿಸುವುದಾಗಲಿ, ಖರ್ಚು ಮಾಡುವುದಾಗಲಿ ಅತ್ಯಂತ ಕಷ್ಟಕರವಾಗಿರುತ್ತದೆ. ಯಾಕೆಂದರೆ ಕ್ರಿಪ್ಟೋ ಕರೆನ್ಸಿಯ ನಿರ್ವಹಣೆ ಮತ್ತು ವೆಚ್ಚಕ್ಕೆ ಒಂದು ವ್ಯವಸ್ಥೆಯ ಅನಿವಾರ್ಯತೆ ಇದೆ. ಪ್ರಸ್ತುತ ಭಯೋತ್ಪಾದನಾ ಸಂಘಟನೆಗಳು ಕ್ರಿಪ್ಟೋ ಕರೆನ್ಸಿಯನ್ನು ಬಳಸುವ ಕುರಿತಾಗಲೀ, ಈ ಉದ್ದೇಶ ಹೊಂದಿರುವ ಕುರಿತಾಗಲಿ ಯಾವ ಸಾಕ್ಷಿಯೂ ಲಭ್ಯವಿಲ್ಲ. ಆದರೆ ಭಯೋತ್ಪಾದನೆಗೆ ಹಣದ ಪೂರೈಕೆ ತಡೆದ ಹಾಗೇ, ಕ್ರಿಪ್ಟೋ ಕರೆನ್ಸಿ ಅಭಿವೃದ್ಧಿ ಹೊಂದಿದಂತೆ ಈ ಪರಿಸ್ಥಿತಿ ಬದಲಾಗುವ ಸಾಧ್ಯತೆಗಳಿವೆ.

ಭಯೋತ್ಪಾದನಾ ಸಂಘಟನೆಗಳು ಕ್ರಿಪ್ಟೋ ಕರೆನ್ಸಿಯನ್ನು ಬಳಸುತ್ತವೆಯೇ ಇಲ್ಲವೇ ಎನ್ನುವುದು ಲಭ್ಯವಿರುವ ತಂತ್ರಜ್ಞಾನ ಮತ್ತು ಅದರ ಗುಣಗಳ ಮೇಲೆ ಆಧಾರಿತವಾಗಿದೆ. ನೂತನ ಕ್ರಿಪ್ಟೋ ಕರೆನ್ಸಿಗಳು ಬಂದಾಗ ಅವುಗಳಲ್ಲಿ ಭಯೋತ್ಪಾದಕ ಸಂಘಟನೆಗಳನ್ನು ಈಗ ಬಳಕೆಯಲ್ಲಿರುವ ಕ್ರಿಪ್ಟೋ ಕರೆನ್ಸಿಗಳಿಗಿಂತ ಹೆಚ್ಚು ಸೆಳೆಯುವ ಗುಣಗಳಿರಬಹುದು. ಒಂದು ವೇಳೆ ಭವಿಷ್ಯದ ಕ್ರಿಪ್ಟೋ ಕರೆನ್ಸಿ ಹೆಚ್ಚಿನ ಮೊತ್ತದ ವ್ಯವಹಾರದಲ್ಲಿ ಪ್ರಸ್ತುತ ಇರುವ ಬಿಟ್ ಕಾಯಿನ್‌ಗಿಂತ ಹೆಚ್ಚಿನ ಖಾಸಗಿತನವನ್ನು ಒದಗಿಸಲು ಸಾಧ್ಯ ಎಂದಾದರೆ ಭಯೋತ್ಪಾದಕ ಸಂಘಟನೆಗಳು ಅವುಗಳನ್ನು ಆಯ್ದ ಚಟುವಟಿಕೆಗಳಲ್ಲಿ ಬಳಸಲು ಹೆಚ್ಚು ಸಿದ್ಧವಾಗಬಲ್ಲವು ಮತ್ತು ಅದನ್ನು ಜ಼ೆಡ್ ಕ್ಯಾಷ್‌ಗಿಂತ ಹೆಚ್ಚಾಗಿ ಬಳಸಬಹುದು. ಅದರೊಡನೆ, ನಿರ್ದಿಷ್ಟ ಭಯೋತ್ಪಾದಕ ಸಂಘಟನೆಗಳು ಕ್ರಿಪ್ಟೋ ಕರೆನ್ಸಿಯಿಂದ ಏನನ್ನು ಬಯಸುತ್ತವೆ ಹಾಗೂ ಅವುಗಳನ್ನು ಲಭ್ಯವಿರುವ ಕ್ರಿಪ್ಟೋ ಕರೆನ್ಸಿಗಳ ಗುಣ ಲಕ್ಷಣಗಳೊಡನೆ ಹೋಲಿಸಿ ನೋಡಬೇಕಾಗುತ್ತದೆ.

ಎಫ್ಎಟಿಎಫ್ ಗ್ರೇ ಲಿಸ್ಟ್ ಎಂದರೇನು?
ನಾಲ್ಕು ವರ್ಷಗಳಿಗೂ ಹಿಂದೆ, ಪಾಕಿಸ್ತಾನ ತನ್ನಲ್ಲಿ ನಡೆಯುವ ಅಕ್ರಮ ಹಣ ವರ್ಗಾವಣೆಯ ಅಪಾಯವನ್ನು ತಡೆಯಲು ವಿಫಲವಾದ ಕಾರಣ ಎಫ್ಎಟಿಎಫ್ ಪಾಕಿಸ್ತಾನವನ್ನು ತನ್ನ ಬೂದು ಪಟ್ಟಿಗೆ ಸೇರಿಸಿತು. ಈ ಅಕ್ರಮ ಹಣ ವರ್ಗಾವಣೆ ಭ್ರಷ್ಟಾಚಾರ ಹಾಗೂ ಭಯೋತ್ಪಾದನೆಗೆ ಹಣಕಾಸು ನೆರವು ಒದಗಿಸುವ ಸಾಧ್ಯತೆಗಳಿದ್ದವು. ಪಾಕಿಸ್ತಾನವನ್ನು ಬೂದು ಪಟ್ಟಿಯಿಂದ ಬಿಳಿ ಪಟ್ಟಿಗೆ ಸೇರಿಸಲು 39ರಲ್ಲಿ 12 ಮತಗಳ ಅಗತ್ಯವಿದೆ. ಕಪ್ಪು ಪಟ್ಟಿಗೆ ಸೇರದಂತೆ ತಡೆಯಲು ಮೂರು ರಾಷ್ಟ್ರಗಳ ಮತ ಬೇಕಾಗುತ್ತದೆ. ಪಾಕಿಸ್ತಾನ ತಾನು ಕಪ್ಪು ಪಟ್ಟಿಗೆ ಸೇರಿದಂತೆ ತಡೆಯಲು ತನ್ನ ಮಿತ್ರ ರಾಷ್ಟ್ರಗಳಾದ ಚೀನಾ, ಟರ್ಕಿ ಹಾಗೂ ಮಲೇಷಿಯಾಗಳ ಬೆಂಬಲ ಪಡೆದಿದೆ.

ಒಂದು ವೇಳೆ ಯಾವುದಾದರೂ ರಾಷ್ಟ್ರ ಅಕ್ರಮ ಹಣ ವರ್ಗಾವಣೆ ಹಾಗೂ ಭಯೋತ್ಪಾದನೆಗೆ ಹಣಕಾಸಿನ ನೆರವು ಒದಗಿಸುತ್ತದೆ ಎಂದರೆ ಅದನ್ನು ಎಫ್ಎಟಿಎಫ್ ಬೂದು ಪಟ್ಟಿಗೆ ಸೇರಿಸುತ್ತದೆ. ಈ ಪ್ರಕ್ರಿಯೆ ಆ ದೇಶದ ಅಕ್ರಮ ಹಣ ವರ್ಗಾವಣೆ ತಡೆ ಹಾಗೂ ಭಯೋತ್ಪಾದನೆಗೆ ಹಣಕಾಸಿನ ನೆರವು ತಡೆಯುವ ಕಾನೂನುಗಳಲ್ಲಿ ವೈಫಲ್ಯವಿದೆ ಎಂಬುದನ್ನು ಸಾಬೀತುಪಡಿಸುತ್ತದೆ. ಈ ಪ್ರಕ್ರಿಯೆ ಅತ್ಯಂತ ತೀಕ್ಷ್ಣವಾದ ಕಪ್ಪು ಪಟ್ಟಿಗೆ ಸೇರದಂತೆ ಎಚ್ಚರ ವಹಿಸಲು ಆ ರಾಷ್ಟ್ರಕ್ಕೆ ಎಚ್ಚರಿಕೆಯ ಗಂಟೆಯಾಗಿರುತ್ತದೆ. ಎಫ್ಎಟಿಎಫ್ ಕಪ್ಪು ಪಟ್ಟಿಯಲ್ಲಿ ಉತ್ತರ ಕೊರಿಯಾ ಹಾಗೂ ಇರಾನ್ ಎರಡೇ ರಾಷ್ಟ್ರಗಳಿವೆ.

ಭವಿಷ್ಯದ ಮೇಲಿನ ಪರಿಣಾಮಗಳು
ಮುಂದಿನ ದಿನಗಳಲ್ಲಿ ಕ್ರಿಪ್ಟೋ ಕರೆನ್ಸಿಯಂತಹ ಪರ್ಯಾಯ ಹಣದ ಬಳಕೆ ಹೆಚ್ಚಾಗುತ್ತವೆ. ಇದರೊಡನೆ ಇಂಟರ್‌ನೆಟ್ ಸೇವೆಗಳು ಅತ್ಯಂತ ವ್ಯಾಪಕವಾಗಿ ಲಭ್ಯವಾಗುವುದರಿಂದ, ಡಿಜಿಟಲ್‌ ವ್ಯವಹಾರಗಳ ಕಾನೂನುಬದ್ಧತೆಯನ್ನು ಗುರುತಿಸುವುದು ಹಾಗೂ ಖಚಿತಪಡಿಸುವುದು ಕಷ್ಟಕರವಾಗಲಿದೆ. ಆದ್ದರಿಂದ ಹಣಕಾಸಿನ ಮೋಸದ ಅಥವಾ ದುರುದ್ದೇಶಪೂರಿತ ವರ್ಗಾವಣೆಗಳು ನಡೆದರೆ, ಡಿಜಿಟಲ್ ವ್ಯವಹಾರದಲ್ಲಿರುವ ಬಳಕೆದಾರರ ಹೆಸರು ನೋಡಿ ಅದು ಓರ್ವ ನೈಜ ವ್ಯಕ್ತಿಯದೇ ಎಂದು ಹೇಳುವುದು ಕಷ್ಟಕರವಾಗಲಿದೆ.

ಭಯೋತ್ಪಾದನಾ ಚಟುವಟಿಕೆಗಳಿಗೆ ಹಣಕಾಸಿನ ಪೂರೈಕೆ ಯಾವಾಗಲೂ ಡ್ರಗ್ಸ್ ಪೂರೈಕೆಯಂತಹ ಕ್ರಿಮಿನಲ್ ಕಾರ್ಯಾಚರಣೆಗಳು ಹಾಗೂ ವ್ಯವಹಾರಗಳನ್ನು ಒಳಗೊಂಡಿರುತ್ತವೆ. ಮಾದಕ ದ್ರವ್ಯಗಳ ಸಾಗಾಣಿಕೆಗೆ ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನಗಳು ಚಿನ್ನದ ಹಾದಿ ಹಾಕಿಕೊಡುತ್ತಿವೆ. ಆ ದೇಶಗಳಲ್ಲಿ ಬೆಳೆದ ಮಾದಕ ವಸ್ತುಗಳನ್ನು ಭಯೋತ್ಪಾದಕರು ತಮ್ಮ ಗುರಿಯಾದ ಭಾರತದಂತಹ ರಾಷ್ಟ್ರಗಳಲ್ಲಿ ಹಂಚಲು ಪ್ರಯತ್ನಿಸುತ್ತಾರೆ. ಇದಕ್ಕಾಗಿ ಅವರು ಭಾರತದಲ್ಲಿ ನಗದು ವ್ಯವಹಾರ ನಡೆಸಿ, ಯಾವುದೇ ಡಿಜಿಟಲ್ ವ್ಯವಹಾರದ ಸಾಕ್ಷಿ ಉಳಿಯದಂತೆ ನೋಡಿಕೊಳ್ಳುತ್ತಾರೆ.

ಇದನ್ನೂ ಓದಿ | ಭಯೋತ್ಪಾದನೆ ನಿಗ್ರಹಕ್ಕೆ ಚೀನಾ ಅಡ್ಡಗಾಲು; ಅಮೆರಿಕ-ಭಾರತ ಜಂಟಿ ಯತ್ನಕ್ಕೆ ವಿಶ್ವಸಂಸ್ಥೆಯಲ್ಲಿ ಹಿನ್ನಡೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ ಹೇಗಾಯ್ತು? ಸತ್ಸಂಗ ನಡೆಸಿದ ಭೋಲೆ ಬಾಬಾ ಯಾರು? ಇಲ್ಲಿದೆ ಮಾಹಿತಿ

Hathras Stampede: ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ.

VISTARANEWS.COM


on

Hathras Stampede
Koo

ಲಖನೌ: ಉತ್ತರ ಪ್ರದೇಶದ ಹತ್ರಾಸ್‌ ಜಿಲ್ಲೆ ಮೊಘಲ್‌ಘರಾಹಿ ಎಂಬ ಗ್ರಾಮದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ (Hathras Stampede) ಸಂಭವಿಸಿದ್ದು, 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ನಾರಾಯಣ ಸಕಾರ್‌ ಹರಿ (Narayan Sakaar Hari) ಅಥವಾ ಸಕಾರ್‌ ವಿಶ್ವ ಹರಿ ಅಥವಾ ಭೋಲೆ ಬಾಬಾ (Bhole Baba) ಅವರು ಸತ್ಸಂಗ ನೆರವೇರಿಸಿದ ಬಳಿಕ ಉಂಟಾದ ಕಾಲ್ತುಳಿತವು ನೂರಾರು ಜನರ ಸಾವಿಗೆ ಕಾರಣವಾಗಿದೆ. ಇನ್ನು, ದುರಂತದ ಕುರಿತು ಪ್ರಧಾನಿ ನರೇಂದ್ರ ಮೋದಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘೋಷಣೆ ಮಾಡಿದ್ದಾರೆ. ಇನ್ನು ಕಾಲ್ತುಳಿತ ಹೇಗಾಯಿತು? ನೂರಾರು ಜನರ ಸಾವಿಗೆ ಕಾರಣವೇನು? ಪ್ರತ್ಯಕ್ಷದರ್ಶಿಗಳು ಹೇಳುವುದು ಏನು ಎಂಬುದರ ಮಾಹಿತಿ ಇಲ್ಲಿದೆ.

ಪ್ರತ್ಯಕ್ಷದರ್ಶಿಗಳು ಹೇಳುವುದಿಷ್ಟು…

ಸತ್ಸಂಗ ಮುಗಿದ ಬಳಿಕ ನೂರಾರು ಜನ ಹೊರಗೆ ಬಂದಿದ್ದಾರೆ. ಎತ್ತರದ ಚರಂಡಿ ಮೇಲೆ ನಿರ್ಮಿಸಿದ ರಸ್ತೆ ಮೇಲೆ ಸಾವಿರಾರು ಜನ ನಿಂತಿದ್ದಾರೆ. ಆಗ ರಸ್ತೆಯ ಒಂದು ಭಾಗ ಚರಂಡಿಯೊಳಗೆ ಕುಸಿದಿದೆ. ಕೂಡಲೇ ಹತ್ತಾರು ಜನ ಚರಂಡಿಯೊಳಗೆ ಬಿದ್ದಿದ್ದು, ಒಬ್ಬರ ಮೇಲೆ ಒಬ್ಬರು ಬಿದ್ದ ಕಾರಣ ಹೆಚ್ಚಿನ ಜನ ಸಾವಿಗೀಡಾಗಿದ್ದಾರೆ. ಇನ್ನು ಚರಂಡಿ ಮೇಲಿನ ರಸ್ತೆ ಕುಸಿದ ಸುದ್ದಿ ಹರಿದಾಡುತ್ತಲೇ ಎಲ್ಲರೂ ಓಡಲು ಶುರು ಮಾಡಿದರು. ಆಗಲೂ ಒಬ್ಬರ ಮೇಲೆ ಒಬ್ಬರು ಬಿದ್ದು, ತುಳಿದಾಡಿದ ಕಾರಣ ಸಾವಿನ ಸಂಖ್ಯೆ ಜಾಸ್ತಿಯಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಧ್ಯಮಗಳಿಗೆ ಘಟನೆ ಕುರಿತು ವಿವರ ನೀಡಿದ್ದಾರೆ.

ಇನ್ನೊಂದಿಷ್ಟು ಮೂಲಗಳ ಪ್ರಕಾರ, ಸಣ್ಣದೊಂದು ಹಾಲ್‌ನಲ್ಲಿ ಸತ್ಸಂಗ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹೊರಗಡೆ ಚರಂಡಿ ಮೇಲಿನ ಸ್ಲ್ಯಾಬ್‌ ಕುಸಿದಿದೆ ಎಂಬ ಸುದ್ದಿ ಕೇಳಿ ಎಲ್ಲರೂ ಓಡಲು ಶುರು ಮಾಡಿದರು. ಹೊರಗೆ ಹೋಗುವ ಗೇಟ್‌ ಚಿಕ್ಕದಿದ್ದ ಕಾರಣ ಎಲ್ಲರೂ ನುಗ್ಗಿದಾಗ ಕಾಲ್ತುಳಿತ ಸಂಭವಿಸಿದೆ. ಹೆಣ್ಣುಮಕ್ಕಳು ಓಡಲೂ ಆಗದೆ, ನೂಕುತ್ತಿದ್ದ ಪುರುಷರನ್ನು ಹಿಮ್ಮೆಟ್ಟಿಸಲೂ ಆಗದೆ ನೆಲಕ್ಕೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಯಾರಿವರು ಭೋಲೆ ಬಾಬಾ?

ಭೋಲೆ ಬಾಬಾ ಅವರು ಉತ್ತರ ಪ್ರದೇಶದ ಎತಾಹ್‌ ಜಿಲ್ಲೆಯ ಬಹದ್ದೂರ್‌ ಗ್ರಾಮದವರಾಗಿದ್ದಾರೆ. ಇವರು ಈಗ ಪ್ರಮುಖ ಧಾರ್ಮಿಕ ಮುಖಂಡರೆನಿಸಿದ್ದು, ಇವರ ಭಾಷಣ, ಬೋಧನೆಗಳನ್ನು ಕೇಳಲು ಸಾವಿರಾರು ಜನ ಆಗಮಿಸುತ್ತಾರೆ. ಇವರು ದೇಶದ ಗುಪ್ತಚರ ಇಲಾಖೆಯಲ್ಲಿ (IB) ಕಾರ್ಯನಿರ್ವಹಿಸಿದ್ದು, 26 ವರ್ಷಗಳ ಹಿಂದೆಯೇ ಸರ್ಕಾರಿ ನೌಕರಿ ತೊರೆದು, ಸ್ವಯಂಘೋಷಿತ ದೇವಮಾನವರಾಗಿದ್ದಾರೆ.

ಭೋಲೆ ಬಾಬಾ ಅವರಿಗೆ ಭಾರತದಾದ್ಯಂತ ಅನುಯಾಯಿಗಳು ಇದ್ದಾರೆ. ಅದರಲ್ಲೂ, ಉತ್ತರ ಪ್ರದೇಶದ ಪಶ್ಚಿಮ ಭಾಗ, ಉತ್ತರಾಖಂಡ, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿಯಲ್ಲಿ ಹೆಚ್ಚು ಅನುಯಾಯಿಗಳು ಇದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಖಾತೆ ಹೊಂದಿರದಿದ್ದರೂ ಇವರ ಧಾರ್ಮಿಕ ಕಾರ್ಯಕ್ರಮವನ್ನು ಭಕ್ತರು ತಪ್ಪಿಸಿಕೊಳ್ಳುವುದಿಲ್ಲ. ಪ್ರತಿ ಮಂಗಳವಾರ ಅಲಿಗಢದಲ್ಲಿ ಅವರ ಕಾರ್ಯಕ್ರಮ ನಡೆಯುತ್ತದೆ. ಅಲ್ಲಿಯೂ ಸಾವಿರಾರು ಜನ ಸೇರುತ್ತಾರೆ. ಕೊರೊನಾ ನಿರ್ಬಂಧದ ಮಧ್ಯೆಯೂ ಸಾವಿರಾರು ಜನರನ್ನು ಸೇರಿಸಿ, ಸತ್ಸಂಗ ಆಯೋಜಿಸಿದ್ದು ವಿವಾದಕ್ಕೂ ಕಾರಣವಾಗಿತ್ತು.

ಇದನ್ನೂ ಓದಿ: Uttar Pradesh stampede: ಹತ್ರಾಸ್‌ ಕಾಲ್ತುಳಿತ ದುರ್ಘಟನೆ; ಸಾವಿನ ಸಂಖ್ಯೆ 60ಕ್ಕೆ ಏರಿಕೆ

Continue Reading

ದೇಶ

Rahul Gandhi: ರಾಹುಲ್‌ ಗಾಂಧಿ ಈಗ ಪ್ರತಿಪಕ್ಷ ನಾಯಕ; ಅವರಿಗಿರುವ ಅಧಿಕಾರ ಯಾವವು? ಸಂಬಳ ಎಷ್ಟು?

Rahul Gandhi: 10 ವರ್ಷಗಳ ಬಳಿಕ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನವು ಕಾಂಗ್ರೆಸ್‌ಗೆ ಲಭಿಸಿದ್ದು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕರಾಗಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯಲು ರಾಹುಲ್‌ ಗಾಂಧಿ ಅವರು ಸಜ್ಜಾಗಿದ್ದಾರೆ. ಇನ್ನು ಪ್ರತಿಪಕ್ಷ ನಾಯಕನಾಗಿರುವ ರಾಹುಲ್‌ ಗಾಂಧಿ ಅವರಿಗೆ ಸಿಗುವ ಸಂಬಳ ಎಷ್ಟು? ಅವರಿಗೆ ಇರುವ ವಿಶೇಷ ಅಧಿಕಾರಗಳು ಯಾವವು? ಸವಲತ್ತುಗಳು ಏನೇನು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Donald Trump Assassination Bid
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ (Leader Of The Opposition) ಆಯ್ಕೆಯಾಗಿದ್ದಾರೆ. ಕಳೆದ ಎರಡು (2014, 2019) ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವೂ ಪ್ರತಿಪಕ್ಷವಾಗುವಷ್ಟು ಸೀಟುಗಳನ್ನು ಗೆದ್ದಿರದ ಕಾರಣ ಪ್ರತಿಪಕ್ಷ ನಾಯಕರೇ ಇರಲಿಲ್ಲ. ಆದರೆ, ಕಳೆದ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ 99 ಕ್ಷೇತ್ರಗಳನ್ನು ಗೆದ್ದಿದ್ದು, ಈಗ ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇವರು ಆಡಳಿತಾರೂಢ ಪಕ್ಷಕ್ಕೆ ಸೆಡ್ಡು ಹೊಡೆಯುವ ಜತೆಗೆ ಹಲವು ಅಧಿಕಾರಗಳು ಹಾಗೂ ಸವಲತ್ತುಗಳನ್ನು ಪಡೆಯಲಿದ್ದಾರೆ. ಅವುಗಳ ಕುರಿತ ಮಾಹಿತಿ ಹೀಗಿದೆ…

ರಾಹುಲ್‌ ಗಾಂಧಿ ಸಂಬಳ ಎಷ್ಟು?

ರಾಹುಲ್‌ ಗಾಂಧಿ ಅವರು ಸಂಸದನಾಗಿ ಪಡೆಯುವ ಸಂಬಳದ ಜತೆಗೆ ಪ್ರತಿಪಕ್ಷ ನಾಯಕರೂ ಆಗಿರುವ ಕಾರಣ ಅವರಿಗೆ ಮಾಸಿಕ 3.3 ಲಕ್ಷ ರೂ. ಸಂಬಳ ಸಿಗಲಿದೆ. ಅಲ್ಲದೆ, ಕ್ಯಾಬಿನೆಟ್‌ ದರ್ಜೆಯ ಸಚಿವರಿಗೆ ಸಿಗುವ ಸವಲತ್ತುಗಳು, ಭದ್ರತೆ (ಝಡ್‌ ಪ್ಲಸ್‌) ಸಿಗಲಿದೆ. ಕ್ಯಾಬಿನೆಟ್‌ ಸಚಿವರೊಬ್ಬರಿಗೆ ಸಿಗುವ ಬಂಗಲೆಯೇ ರಾಹುಲ್‌ ಗಾಂಧಿ ಅವರಿಗೂ ನೀಡಲಾಗುತ್ತದೆ. ಇದರ ಜತೆಗೆ ಹಲವು ಭತ್ಯೆಗಳು ಕೂಡ ರಾಹುಲ್‌ ಗಾಂಧಿ ಅವರಿಗೆ ಸಿಗಲಿವೆ.

Rahul Gandhi

ಅವರ ಅಧಿಕಾರ ವ್ಯಾಪ್ತಿ ಹೇಗಿರಲಿದೆ?

ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಿ ಹಲವು ಸಂಸದೀಯ ಸಮಿತಿಗಳ ಸದಸ್ಯರೂ ಆಗಿರುತ್ತಾರೆ. ಜಂಟಿ ಸಂಸದೀಯ ಸಮಿತಿಗಳು, ಪಬ್ಲಿಕ್‌ ಅಕೌಂಟ್ಸ್‌ ಸಮಿತಿ ಸದಸ್ಯರಾಗಿರುತ್ತಾರೆ. ಹಾಗೆಯೇ, ಸಿಬಿಐ ನಿರ್ದೇಶಕ, ಮುಖ್ಯ ಚುನಾವಣಾ ಆಯುಕ್ತರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ, ಚೀಫ್‌ ವಿಜಿಲನ್ಸ್‌ ಕಮಿಷನರ್‌, ಕೇಂದ್ರೀಯ ಮಾಹಿತಿ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡುವಾಗ ರಾಹುಲ್‌ ಗಾಂಧಿ ಅವರು ಕೂಡ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.

ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಿ ಸದನದ ಮುಂದಿನ ಸಾಲಿನಲ್ಲಿರುವ ಆಸನದಲ್ಲಿ ಕುಳಿತುಕೊಳ್ಳಲಿದ್ದಾರೆ. ಹಾಗೆಯೇ, ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾತನಾಡುವಾಗ ಕೂಡ ಅವರಿಗೆ ಮುಂದಿನ ಸಾಲಿನಲ್ಲಿಯೇ ಆಸನದ ವ್ಯವಸ್ಥೆ ಮಾಡಲಾಗುತ್ತದೆ.

ಲೋಕಸಭೆಯ ಒಟ್ಟು ಕ್ಷೇತ್ರಗಳ ಶೇ.10ರಷ್ಟು ಅಂದರೆ 55 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಪಕ್ಷವು ಅಧಿಕೃತ ಪ್ರತಿಪಕ್ಷ ಸ್ಥಾನವನ್ನು ಪಡೆಯುತ್ತದೆ. ಆ ಪಕ್ಷದ ನಾಯಕ ಪ್ರತಿಪಕ್ಷ ನಾಯಕರಾಗುತ್ತಾರೆ. ಆದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 44 ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ 52 ಕ್ಷೇತ್ರ ಗೆದ್ದ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ಖಾಲಿ ಇತ್ತು. ಈ ಬಾರಿ 99 ಕ್ಷೇತ್ರಗಳನ್ನು ಗೆದ್ದಿರುವ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: Rahul Gandhi: ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್;‌ ಸ್ಪೀಕರ್‌ ಮಾಡಿದ್ರಾ?

Continue Reading

ಕರ್ನಾಟಕ

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

CM Siddaramaiah: ‘ಗ್ಯಾರಂಟಿ’ ಹೆಸರಲ್ಲಿ ನಮಗೆ ಗೊತ್ತಿಲ್ಲದಂತೆಯೇ ಜೇಬು ಖಾಲಿ ಆಗುತ್ತಿದೆ. ಇತ್ತೀಚೆಗೆ ಸರಕಾರ ಮಾಡುತ್ತಿರುವ ಬೆಲೆ ಏರಿಕೆಗಳನ್ನು, ಇಷ್ಟರಲ್ಲಿಯೇ ಮಾಡಲಿರುವ ಬೆಲೆಯೇರಿಕೆಗಳನ್ನು ಗಮನಿಸಿ ಈ ಮಾತು ಆಡಲಾಗುತ್ತಿದೆ. ಒಂದು ಕಡೆಯಿಂದ ಕೊಟ್ಟಂತೆ ನಟಿಸುತ್ತಿರುವ ಸರಕಾರ, ಇನ್ನೊಂದು ಕಡೆಯಿಂದ ಅದರ ದುಪ್ಪಟ್ಟು ಹಣ ನಮ್ಮ ಕಿಸೆಯಿಂದ ಪೀಕುತ್ತಿದೆ!

VISTARANEWS.COM


on

cm siddaramaiah price hikes
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್‌ ಸರಕಾರ (Congress government) ರಾಜ್ಯದಲ್ಲಿ ಬಂದ ಕೂಡಲೇ ಚುನಾವಣೆ (Assembly Election) ಸಂದರ್ಭದಲ್ಲಿ ನೀಡಿದ ʼಗ್ಯಾರಂಟಿ ಯೋಜನೆʼಗಳನ್ನು (Guarantee schemes) ಜಾರಿ ಮಾಡಿತು. ಇದಕ್ಕಾಗಿ ಮುಂದೆ ಯಾವ ಬೆಲೆ ತೆರಬೇಕಾಗಲಿದೆಯೋ ಎಂಬ ಆತಂಕ ಆಗಲೇ ರಾಜ್ಯದ ಜನತೆಯನ್ನು ಕಾಡಿತ್ತು. ಅದು ಈ ನಿಜವಾಗುತ್ತಿದೆ. ಒಂದು ಕಡೆಯಿಂದ ಕೊಟ್ಟಂತೆ ನಟಿಸುತ್ತಿರುವ ಸರಕಾರ, ಇನ್ನೊಂದು ಕಡೆಯಿಂದ ಅದರ ದುಪ್ಪಟ್ಟು ಹಣ ನಮ್ಮ ಕಿಸೆಯಿಂದ ಪೀಕುತ್ತಿದೆ!

ಹೌದು, ಈ ಲೆಕ್ಕಾಚಾರ ನೋಡಿದರೆ ನೀವು ಖಂಡಿತಾ ಬಾಯಿ ಬಾಯಿ ಬಡಿದುಕೊಳ್ಳುತ್ತೀರಿ. ‘ಗ್ಯಾರಂಟಿ’ ಹೆಸರಲ್ಲಿ ನಮಗೆ ಗೊತ್ತಿಲ್ಲದಂತೆಯೇ ಜೇಬು ಖಾಲಿ ಆಗುತ್ತಿದೆ. ಇತ್ತೀಚೆಗೆ ಸರಕಾರ ಮಾಡುತ್ತಿರುವ ಬೆಲೆ ಏರಿಕೆಗಳನ್ನು, ಇಷ್ಟರಲ್ಲಿಯೇ ಮಾಡಲಿರುವ ಬೆಲೆಯೇರಿಕೆಗಳನ್ನು ಗಮನಿಸಿ ಈ ಮಾತು ಆಡಲಾಗುತ್ತಿದೆ. ಪೆಟ್ರೋಲ್‌, ಡೀಸೆಲ್‌ ಬೆಲೆ (Petrol price hike) ಏರಿಸಲಾಗಿದೆ; ಹಾಲು ದರವೂ (milk price hike) ಹೆಚ್ಚಿತು. ಮುಂದೆ ಕುಡಿಯವ ಕಾವೇರಿ ನೀರು (Kaveri Water Price hike) ಮತ್ತು ಆಲ್ಕೋಹಾಲ್‌ ದರಕ್ಕೂ (Liquor rates) ಸರಕಾರ ಕೈಹಾಕಲಿದೆ. ಶೀಘ್ರದಲ್ಲೇ ಟೀ- ಕಾಫಿ ರೇಟ್‌ ಏರಿಕೆಯೂ ಆಗಬಹುದು. ಮೆಡಿಕಲ್‌ ಸೀಟು ಶುಲ್ಕಗಳು ಹೆಚ್ಚಲಿವೆ, ಆಟೋ ದರ (Auto Fare) ಅಧಿಕವಾಗಲಿದೆ.

ಈಗ ಲೆಕ್ಕಾಚಾರ ತುಸು ನೋಡೋಣ. ಮೊದಲಿಗೆ ಸರಕಾರ ಏನು ಕೊಟ್ಟಿದೆ ಎಂಬ ಲೆಕ್ಕ.

ಗ್ಯಾರಂಟಿ ಯೋಜನೆಗಳು

ಗೃಹಲಕ್ಷ್ಮೀ – 2,000 ರೂ.
ಯುವನಿಧಿ – ಡಿಪ್ಲೊಮಾ 1500/- ಪದವೀಧರರಿಗೆ 3000/-
ಶಕ್ತಿಯೋಜನೆ – ಮಹಿಳೆಯರಿಗೆ ಸರ್ಕಾರಿ ಬಸ್​​ನಲ್ಲಿ ಉಚಿತ ಪ್ರಯಾಣ
ಅನ್ನಭಾಗ್ಯ – 5ಕೆಜಿ ಅಕ್ಕಿ & 170 ರೂಪಾಯಿ
ಗೃಹಜ್ಯೋತಿ – 200 ಯೂನಿಟ್​​ವರೆಗೆ ಉಚಿತ ವಿದ್ಯುತ್​​

ಇನ್ನು ಬೆಲೆ ಏರಿಕೆಗಳು

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಪೆಟ್ರೋಲ್ – 3 ರೂಪಾಯಿ ಏರಿಕೆ
ಡೀಸೆಲ್ – 3.50 ರೂ. ಏರಿಕೆ
ಪೆಟ್ರೋಲ್ ಸದ್ಯದ ದರ – 103 ರೂ.
ಡೀಸೆಲ್ ಸದ್ಯದ ದರ – 89.20 ರೂ.
1 ದ್ವಿಚಕ್ರ ವಾಹನ – ದಿನಕ್ಕೆ 1 ಲೀಟರ್ ಬಳಕೆ
ತಿಂಗಳಿಗೆ ​ಬಳಕೆ ಸರಾಸರಿ ಹೆಚ್ಚಳ 30 ಲೀಟರ್​​ – ತಿಂಗಳಿಗೆ 100 ರೂ. ಹೆಚ್ಚಳ

ಹಾಲಿನ ದರ ಹೆಚ್ಚಳ

ಹಾಲಿನ ದರ – ವರ್ಷದಲ್ಲಿ 2 ಬಾರಿ ಏರಿಕೆ
ಮೊದಲು ಲೀಟರ್​​ಗೆ ಹೆಚ್ಚಾಗಿದ್ದು – 3 ರೂಪಾಯಿ
ಇದೀಗ ಲೀಟರ್​ಗೆ ಹೆಚ್ಚಾಗಿದ್ದು – 2 ರೂಪಾಯಿ
ಲೀಟರ್ ಹಾಲಿನ ಸದ್ಯದ ದರ – 44 ರೂ. (ನೀಲಿ ಪ್ಯಾಕೆಟ್)
1 ಕುಟುಂಬದಿಂದ ಹಾಲು ಬಳಕೆ – 1 ಲೀಟರ್
ತಿಂಗಳಿಗೆ ಕುಟುಂಬದಿಂದ ಬಳಕೆ – 30 ಲೀಟರ್
ಹಾಲಿನ ದರ ಹೆಚ್ಚಳದಿಂದ ಹೊರೆ – 150 ರೂ.

ತರಕಾರಿ ದರ ಏರಿಕೆ

ಹಣ್ಣು, ತರಕಾರಿ, ಸೊಪ್ಪು ಬೆಲೆ ನಿರಂತರ ಏರಿಕೆ
ಹಣ್ಣು, ತರಕಾರಿ ಏರಿಕೆಯಿಂದ ಹೆಚ್ಚುವರಿ ಹೊರೆ
ಟ್ರಾನ್ಸ್​ಪೋರ್ಟ್ ಚಾರ್ಜಸ್ ಸೇರಿ ವಿವಿಧ ಚಾರ್ಜಸ್
ಪ್ರತಿ ತಿಂಗಳಿಗೆ ಜನರಿಗೆ ಅಂದಾಜು 500 ರೂ. ಹೊರೆ

ದಿನಸಿ ವಸ್ತುಗಳ ಬೆಲೆ ಏರಿಕೆ

ದಿನಸಿ ವಸ್ತುಗಳು, ದಿನಬಳಕೆ ವಸ್ತುಗಳ ಬೆಲೆ ಏರಿಕೆ
ಅಕ್ಕಿ, ಬೇಳೆ, ಡಿಟರ್ಜೆಂಟ್​​ ಸೇರಿ ವಸ್ತುಗಳ ಬೆಲೆ ಗಗನಕ್ಕೆ
ದಿನಸಿ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಹೊರೆ
ತಿಂಗಳಿಗೆ ಅಂದಾಜು 700 ರೂಪಾಯಿಯಷ್ಟು ಜನರಿಗೆ ಹೊರೆ

ಮಾಂಸಪ್ರಿಯರಿಗೂ ಶಾಕ್

ರಾಜ್ಯದಲ್ಲಿ ಮಾಂಸದ ಬೆಲೆಯಲ್ಲೂ ಹೆಚ್ಚಳ
ಮಾಂಸದ ಬೆಲೆ ಹೆಚ್ಚಳದಿಂದ ಹೆಚ್ಚುವರಿ ಹೊರೆ
ಜನರಿಗೆ ತಿಂಗಳಿಗೆ ಅಂದಾಜು 300 ರೂಪಾಯಿ ಹೆಚ್ಚಳ

ಮದ್ಯಪ್ರಿಯರಿಗೆ ಬಿಗ್ ಶಾಕ್

2023ರ ಜುಲೈನಲ್ಲಿ ಬಿಯರ್ 10%, ಮದ್ಯ 20% ಏರಿಕೆ
3 ತಿಂಗಳ ಹಿಂದೆ ಬಿಯರ್ 10%, ಮದ್ಯ 25% ದರ ಹೆಚ್ಚಳ
ಜುಲೈ 1ರಿಂದ ಮತ್ತೆ ಅಬಕಾರಿ ದರ ಹೆಚ್ಚಳಕ್ಕೆ ನಿರ್ಧಾರ?

ವಾಣಿಜ್ಯ ವಿದ್ಯುತ್ ಬಳಕೆದಾರರಿಗೆ ಶಾಕ್!?

ಉಚಿತ ವಿದ್ಯುತ್​ ಮಧ್ಯೆಯೂ ವಾಣಿಜ್ಯ ಬಳಕೆ ವಿದ್ಯುತ್​ ದರ ಏರಿಕೆ
ಕೈಗಾರಿಕೆ ಸೇರಿ ವಾಣಿಜ್ಯ ಬಳಕೆಯ ವಿದ್ಯುತ್​ ದರ ಹೆಚ್ಚಳ
ವಿದ್ಯುತ್ ದರ ಹೆಚ್ಚಳದಿಂದ ವಸ್ತುಗಳ ಮೇಲೆ ಪರಿಣಾಮ
ಅಂದಾಜು 300 ರೂಪಾಯಿಯಷ್ಟು ಹೊರೆ ಬೀಳುವ ಸಾಧ್ಯತೆ

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್?

ಉಚಿತ ಪ್ರಯಾಣದ ನಡುವೆ ಬಸ್ ಟಿಕೆಟ್ ದರ ಏರಿಕೆ ಚಿಂತನೆ
ಗಂಡಸರ ಪ್ರಯಾಣದ ದರ ಹೆಚ್ಚಿಸಲು ಸರ್ಕಾರದ ಚಿಂತನೆ
ಶೀಘ್ರದಲ್ಲೇ ಸರ್ಕಾರಿ ಬಸ್​ಗಳ ಪ್ರಯಾಣದ ದರ ಏರಿಕೆ ಸಾಧ್ಯತೆ
ಖಾಸಗಿ ಬಸ್‌ಗಳ ದರವೂ ದುಬಾರಿಯಾಗುವ ಸಾಧ್ಯತೆ
ಟಿಕೆಟ್ ದರ ಏರಿಕೆಯಿಂದ ಪ್ರತಿ ಕುಟುಂಬಕ್ಕೂ ಹೆಚ್ಚುವರಿ ಹೊರೆ
1 ಕುಟುಂಬಕ್ಕೆ ಅಂದಾಜು 200 ರೂಪಾಯಿಯಷ್ಟು ಹೆಚ್ಚು ಹೊರೆ

ಜನರಿಗೆ ಜಲ‘ಶಾಕ್’!
ರಾಜ್ಯದ ಹಲವು ಕಡೆ ಕುಡಿಯುವ ನೀರಿನ ಸಮಸ್ಯೆ
ಹೆಚ್ಚು ಟ್ಯಾಂಕರ್ ನೀರು ಅವಲಂಬಿಸಿರುವ ಜನರು
ಟ್ಯಾಂಕರ್​ ಮೂಲಕ ನೀರು ತರಿಸಿಕೊಳ್ತಿರುವ ಜನರು
ಒಂದು ಟ್ಯಾಂಕರ್​​ ನೀರಿನ ಬೆಲೆ ಸುಮಾರು ₹2000

ತಿಂಗಳಿಗೆ 1 ಕುಟುಂಬಕ್ಕೆ ಅಂದಾಜು ಹೊರೆ

ಹಾಲು 30 ಲೀಟರ್ ಬಳಕೆ – 150 ರೂ.
ಪೆಟ್ರೋಲ್, ಡೀಸೆಲ್ 30 ಲೀ. – 90 ರೂ.
ತರಕಾರಿ – 500 ರೂಪಾಯಿ
ಮದ್ಯ – 500 ರೂಪಾಯಿ
ವಿದ್ಯುತ್ ವಾಣಿಜ್ಯ ಬಳಕೆ – 300 ರೂ.
ಬಸ್ ಟಿಕೆಟ್ ದರ – 200 ರೂ.
ದಿನಸಿ – 700 ರೂ.
ಮಾಂಸ – 300 ರೂ.
ಟ್ಯಾಂಕರ್ ನೀರು – 2,000 ರೂ.
ಒಟ್ಟು ಅಂದಾಜು ಹೊರೆ – 4740

ವರ್ಷಕ್ಕೆ ಎಷ್ಟು ಹೊರೆ?

ಪ್ರತಿ 1 ಕುಟುಂಬಕ್ಕೆ ತಿಂಗಳಿಗೆ 4740 ರೂ. ಅಧಿಕ ಹೊರೆ
ಪ್ರತಿ 1 ಕುಟುಂಬಕ್ಕೆ ವರ್ಷಕ್ಕೆ 56,880 ರೂ. ಅಧಿಕ ಹೊರೆ

ವರ್ಷಕ್ಕೆ ಎಷ್ಟು ಹೆಚ್ಚುವರಿ ಹೊರೆ?

ಕುಟುಂಬಕ್ಕೆ ಸರ್ಕಾರ ಕೊಡೋದು ವರ್ಷಕ್ಕೆ 24 ಸಾವಿರಕ್ಕೂ ಹೆಚ್ಚು
ಆದರೆ ಪ್ರತಿ 1 ಕುಟುಂಬಕ್ಕೆ ವರ್ಷಕ್ಕೆ 56,880 ರೂ. ಹೊರೆ
ಸರ್ಕಾರ ಕೊಟ್ಟ 24 ಸಾವಿರ ಬಿಟ್ಟರೆ 32,880 ರೂ. ಹೆಚ್ಚುವರಿ ಹೊರೆ
ಪ್ರತಿ 1 ಕುಟುಂಬಕ್ಕೆ ತಿಂಗಳಿಗೆ 4740 ರೂ. ಅಧಿಕ ಹೊರೆ
ಸರ್ಕಾರ ಕೊಡುವ 2 ಸಾವಿರ ಹೊರತುಪಡಿಸಿದರೆ 2740 ರೂ. ಹೆಚ್ಚುವರಿ ಹೊರೆ

ಇದನ್ನೂ ಓದಿ: CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Continue Reading

Latest

Members of Parliament: ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ? ಜೈಲಿನಲ್ಲಿದ್ದವರ ಕತೆಯೇನು?

ಲೋಕ ಸಭಾ ಚುನಾವಣೆ ಬಳಿಕ ಸಂಸದರಾಗಿ (Members of Parliament) ಆಯ್ಕೆಯಾಗುವವರು ಯಾವ ರೀತಿ ಪ್ರಮಾಣ ವಚನ ಸ್ವೀಕರಿಸಬೇಕು ಎಂಬುದನ್ನು ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಮತ್ತು ಪ್ರಮುಖ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗದೇ ಇದ್ದರೆ ಮುಂದಿನ ನಡೆ ಹೇಗಿರುತ್ತದೆ ಎಂಬಿತ್ಯಾದಿ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

By

Members of Parliament
Koo

18ನೇ ಲೋಕಸಭೆಯ (loksabha election) ಮೊದಲ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಹೊಸದಾಗಿ ಚುನಾಯಿತರಾದ ಸಂಸತ್ ಸದಸ್ಯರು (Members of Parliament) ಸೋಮವಾರದಿಂದ ಪ್ರಮಾಣ ವಚನ (taking oath) ಸ್ವೀಕರಿಸಲು ಆರಂಭಿಸಿದ್ದಾರೆ. ಎರಡು ದಿನಗಳಲ್ಲಿ ಕೆಳಮನೆಯ (lower house) 543 ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 26ರಂದು ನೂತನ ಲೋಕಸಭಾ ಸ್ಪೀಕರ್ (Speaker) ಆಯ್ಕೆ ನಡೆಯಲಿದೆ.

ಪ್ರಮಾಣ ವಚನ ಬೋಧಿಸುವವರು ಯಾರು?

ಸಂಸದೀಯ ಪದ್ಧತಿಗಳ ಪ್ರಕಾರ ಪ್ರತಿ ಸಾರ್ವತ್ರಿಕ ಚುನಾವಣೆಯ ಅನಂತರ ಲೋಕಸಭೆಗೆ ಹೊಸದಾಗಿ ಚುನಾಯಿತರಾದ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಸ್ವೀಕರಿಸುವ ಹೊಣೆ ನಿರ್ವಹಿಸುತ್ತಾರೆ. ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಯನ್ನು ನಡೆಸುವ ಜವಾಬ್ದಾರಿ ಕೂಡ ಈ ಹಂಗಾಮಿ ಸ್ಪೀಕರ್‌ದೇ ಆಗಿರುತ್ತದೆ.

ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಅನಾರೋಗ್ಯದ ಕಾರಣ ಅಥವಾ ಅವರ ಸ್ಥಳದಿಂದ ತೆರಳಲು ಸಾಧ್ಯವಾಗದ ಕಾರಣ ಪ್ರಮಾಣ ವಚನ ಸ್ವೀಕರಿಸದಿರುವ ಸಾಧ್ಯತೆಯಿದೆ.

ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ?

1. ಮೊದಲ ದಿನ ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡದ ಚುನಾಯಿತ ಸಂಸದರು ಸದನದ ಅಧಿವೇಶನದ ಪ್ರಾರಂಭದಲ್ಲಿ ಅದೇ ಅಧಿವೇಶನದಲ್ಲಿ ಅಥವಾ ಅನಂತರದ ಅಧಿವೇಶನದಲ್ಲಿ ಯಾವುದೇ ನಂತರದ ದಿನದಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು.

2. ಸಂಸದರ ಕೋರಿಕೆಯ ಮೇರೆಗೆ ಸಭಾಧ್ಯಕ್ಷರ ಚೇಂಬರ್‌ನಲ್ಲಿ ಮಧ್ಯಂತರ ಅವಧಿಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಲಾಗುತ್ತದೆ.

3. ಅನಾರೋಗ್ಯದಿಂದ ಬಳಲುತ್ತಿರುವವರು, ಸದನಕ್ಕೆ ಬರಲು ಸಾಧ್ಯವಾಗದ ಸಂದರ್ಭದಲ್ಲಿ ಅವರು ಬಯಸಿದಲ್ಲಿ ಪ್ರಮಾಣ ಅಥವಾ ದೃಢೀಕರಣವನ್ನು ಮಾಡಬಹುದು. ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಯು ಸದಸ್ಯರಿಗೆ ಸಂಬಂಧಿತ ಪ್ರಮಾಣ ಅಥವಾ ದೃಢೀಕರಣ ಕಾರ್ಡ್ ಅನ್ನು ನೀಡುತ್ತಾರೆ.

4. ಸಂವಿಧಾನದ ಪ್ರಕಾರ ಚುನಾಯಿತ ಸಂಸದರು 60 ದಿನಗಳವರೆಗೆ ಸಂಸತ್ತಿಗೆ ಹಾಜರಾಗದಿದ್ದರೆ ಅವರ ಸ್ಥಾನವನ್ನು ಖಾಲಿ ಎಂದು ಘೋಷಿಸಬಹುದು. ಇದೇ ಆಧಾರದಲ್ಲಿ ನ್ಯಾಯಾಲಯಗಳು ಜೈಲಿನಲ್ಲಿರುವ ಸಂಸದರಿಗೆ ಪ್ರಮಾಣ ವಚನ ಸ್ವೀಕರಿಸುವುದಕ್ಕಾಗಿ ಸಂಸತ್‌ಗೆ ಬರಲು ಅವಕಾಶ ನೀಡಬಹುದು. ಆದರೆ ಪ್ರಮಾಣ ವಚನ ಸ್ವೀಕರಿಸಿದ ಅನಂತರ ಅವರು ಮತ್ತೆ ಜೈಲಿಗೆ ಮರಳಬೇಕಾಗುತ್ತದೆ.

5. ದೃಷ್ಟಿ ಸಮಸ್ಯೆಯಿಂದ ಸದಸ್ಯರಿಗೆ ಸಹಿ ಮಾಡಲು, ಪ್ರಮಾಣ ಪತ್ರ ಓದಲು ಸಾಧ್ಯವಾಗದೇ ಇದ್ದರೆ ಇನ್ನೊಬ್ಬ ಸದಸ್ಯರು ಇವರಿಗೆ ಓದಿ ಹೇಳಬಹುದಾಗಿದೆ.

6. ನ್ಯಾಯಾಲಯದ ಆದೇಶದ ಪರಿಣಾಮವಾಗಿ ಒಬ್ಬ ವ್ಯಕ್ತಿಯು ಸದಸ್ಯರಾಗುವುದನ್ನು ತಡೆದರೆ ಮತ್ತು ಅವರ ಸ್ಥಾನದಲ್ಲಿ ಇನ್ನೊಬ್ಬರು ಚುನಾಯಿತರೆಂದು ಘೋಷಿಸಲ್ಪಟ್ಟರೆ ಮತ್ತೆ ಹೊಸದಾಗಿ ಪ್ರಮಾಣವಚನ ಅಥವಾ ದೃಢೀಕರಣವನ್ನು ಮಾಡಬೇಕು.

7. ಮೊದಲ ಸುತ್ತಿನಲ್ಲಿ ಪ್ರಮಾಣವಚನಕ್ಕೆ ಹಾಜರಾಗದ ಸದಸ್ಯರ ಹೆಸರನ್ನು ಕೊನೆಯಲ್ಲಿ ಮತ್ತೆ ಕರೆಯಲಾಗುತ್ತದೆ.

ಯಾವ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂವಿಧಾನದ ಮೂರನೇ ಶೆಡ್ಯೂಲ್ ಸಂಸತ್ತಿನ ಪ್ರಮಾಣ ವಚನದ ಪಠ್ಯವನ್ನು ಒಳಗೊಂಡಿದೆ. ಅದು ಹೀಗೆ ಹೇಳುತ್ತದೆ: ನಾನು…. ಚುನಾಯಿತನಾದ ಅಥವಾ ನಾಮನಿರ್ದೇಶನಗೊಂಡ ಸದಸ್ಯರ ಸಂಸತ್‌ ಸದಸ್ಯನಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ನಾನು ಕಾನೂನಿನ ಮೂಲಕ ಸ್ಥಾಪಿಸಿದಂತೆ ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುತ್ತೇನೆ ಎಂದು ಸ್ಪಷ್ಟವಾಗಿ ದೃಢಪಡಿಸುತ್ತೇನೆ. ನಾನು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುತ್ತೇನೆ. ನನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ.

ಪ್ರಮಾಣ ವಚನ ಏಕೆ ಮಹತ್ವದ್ದಾಗಿದೆ?

ಲೋಕಸಭೆಯಲ್ಲಿ ಚರ್ಚೆ ಮತ್ತು ಮತ ಚಲಾಯಿಸುವ ಅಧಿಕಾರವನ್ನು ಪಡೆಯಲು ಸಂವಿಧಾನದಲ್ಲಿ (ಆರ್ಟಿಕಲ್ 99) ಸೂಚಿಸಿದಂತೆ ಸಂಸದರು ಪ್ರಮಾಣ ವಚನ ಸ್ವೀಕರಿಸಬೇಕು.

ಕೇವಲ ಚುನಾವಣೆಯಲ್ಲಿ ಗೆದ್ದು ಅವಧಿಯನ್ನು ಪ್ರಾರಂಭಿಸುವುದರಿಂದ ಅವರು ಸದನದ ಕಲಾಪಗಳಲ್ಲಿ ಭಾಗವಹಿಸಲು ಸ್ವಯಂಚಾಲಿತವಾಗಿ ಸಾಧ್ಯವಾಗುವುದಿಲ್ಲ.

ಹೇಗೆ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂಸದರು ಮೊದಲು ತಮ್ಮ ಚುನಾವಣಾ ಪ್ರಮಾಣಪತ್ರವನ್ನು ಲೋಕಸಭೆಯ ಸಿಬ್ಬಂದಿಗೆ ಸಲ್ಲಿಸಬೇಕಾಗುತ್ತದೆ. 1957ರಲ್ಲಿ ನಡೆದ ಘಟನೆಯ ಅನಂತರ ಸಂಸತ್ತು ಈ ಸುರಕ್ಷತೆಯನ್ನು ಸೇರಿಸಿತು. ಮಾನಸಿಕವಾಗಿ ಅಸ್ವಸ್ಥ ವ್ಯಕ್ತಿಯೊಬ್ಬರು ಸಂಸದರೆಂದು ಪೋಸ್ ನೀಡಿ ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು!

ಪ್ರಮಾಣಪತ್ರದ ಜೊತೆಗೆ ಸಂಸದರು ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡಲು ಬಯಸಿದ ಭಾಷೆಯನ್ನು ಸಹ ನಮೂದಿಸಬೇಕು.

ಸದಸ್ಯರು ಪ್ರಮಾಣ ವಚನ ಮಾಡುವಾಗ ಹಂಗಾಮಿ ಸ್ಪೀಕರ್ ಜೊತೆ ಹಸ್ತಲಾಘವ ಮಾಡುತ್ತಾರೆ. ಅನಂತರ ಅವರು ಸದನದಲ್ಲಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಸದಸ್ಯರಿಗೆ ಸ್ಪೀಕರ್‌ ಅನುಮತಿ ನೀಡುತ್ತಾರೆ. ಸದಸ್ಯರು ದಾಖಲಾತಿ ಪುಸ್ತಕದಲ್ಲಿ ಸಹಿ ಮಾಡುತ್ತಾರೆ.

ಯಾವ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು?

ಸಂಸದರು ಇಂಗ್ಲಿಷ್ ಅಥವಾ ಅಸ್ಸಾಮಿ, ಬೆಂಗಾಲಿ, ಬೋಡೋ, ಡೋಗ್ರಿ, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮೈಥಿಲಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒಡಿಯಾ, ಪಂಜಾಬಿ, ಸಂಸ್ಕೃತ, ಸಂತಾಲಿ, ಸಿಂಧಿ, ತಮಿಳು, ತೆಲುಗು ಮತ್ತು ಉರ್ದು.. ಹೀಗೆ 22 ಭಾಷೆಗಳಲ್ಲಿ ಪ್ರಮಾಣವಚನವನ್ನು ಸ್ವೀಕರಿಸಬಹುದು.

ಅರ್ಧದಷ್ಟು ಸಂಸದರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಹಿಂದಿನ ಎರಡು ಲೋಕಸಭೆಯಲ್ಲಿ ಸಂಸ್ಕೃತವು ಜನಪ್ರಿಯ ಭಾಷೆಯಾಗಿ ಮಾರ್ಪಟ್ಟಿದ್ದು, ಹಲವು ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: Bansuri Swaraj: ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಸುಷ್ಮಾ ಸ್ವರಾಜ್‌ರನ್ನು ನೆನಪಿಸಿದ ಮಗಳು! ವಿಡಿಯೊ ನೋಡಿ

ಯಾವಾಗ ಸದನದ ಸದಸ್ಯರಾಗುತ್ತಾರೆ?

ಒಬ್ಬ ವ್ಯಕ್ತಿಯು ಚುನಾವಣಾ ಅಧಿಕಾರಿಯಿಂದ ಚುನಾಯಿತರೆಂದು ಘೋಷಿಸಲ್ಪಟ್ಟ ದಿನಾಂಕದಿಂದ ಸದನದ ಸದಸ್ಯರಾಗುತ್ತಾರೆ. ಸದನವನ್ನು ರಚಿಸುವ ಚುನಾವಣಾ ಆಯೋಗದ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ ಅವರು ಸಂಸದರಾಗಿ ಸಂಬಳವನ್ನು ಸ್ವೀಕರಿಸಲು ಪ್ರಾರಂಭಿಸುತ್ತಾರೆ. ಸಂಸದರು ಸದನದ ಅಧಿವೇಶನಗಳಿಗೆ ಗೈರುಹಾಜರಿಯನ್ನು ಕೇಳಬಹುದಾಗಿದೆ.

Continue Reading
Advertisement
Niveditha Gowda new reels with brother
ಸ್ಯಾಂಡಲ್ ವುಡ್1 min ago

Niveditha Gowda: ನಾನೇನು ಬಾತ್‌ರೂಮ್‌ ಸಿಂಗರ್‌ ಅಲ್ಲ! ಚಂದನ್‌ ಶೆಟ್ಟಿಗೆ ಟಾಂಗ್‌ ಕೊಟ್ರಾ ನಿವೇದಿತಾ ಗೌಡ?

Gold Rate Today
ಚಿನ್ನದ ದರ2 mins ago

Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ; ಇಂದಿನ ದರ ಇಷ್ಟಿದೆ

IND vs SL
ಕ್ರೀಡೆ16 mins ago

IND vs SL: ಲಂಕಾ ವಿರುದ್ಧದ ಏಕದಿನ ಸರಣಿಗೆ ಶ್ರೇಯಸ್ ಅಯ್ಯರ್ ಆಯ್ಕೆ ಸಾಧ್ಯತೆ

gt world mall 2
ಪ್ರಮುಖ ಸುದ್ದಿ24 mins ago

GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

Made In India
ದೇಶ29 mins ago

Made In India: ಜಾಗತಿಕವಾಗಿ ಪ್ರಭಾವ ಬೀರಿದ ʼಮೇಡ್‌ ಇನ್‌ ಇಂಡಿಯಾʼ ಉತ್ಪನ್ನಗಳು; ಪ್ರಧಾನಿ ಮೋದಿ ಮೆಚ್ಚುಗೆ

Mahanati Show Darshan wished Priyanka the contestant
ಕಿರುತೆರೆ57 mins ago

Mahanati Show: ಈ` ಮಹಾನಟಿ’ ಸ್ಪರ್ಧಿಗೆ ಶುಭ ಹಾರೈಸಿದ್ರಂತೆ ದರ್ಶನ್‌; ಅವರ ತಂದೆ ಕೂಡ ದಚ್ಚುಗೆ ಕ್ಲೋಸ್‌ ಫ್ರೆಂಡ್‌!

Suryakumar Yadav
ಕ್ರೀಡೆ1 hour ago

Suryakumar Yadav: ಹಾರ್ದಿಕ್​ ಕೈಬಿಟ್ಟು ಸೂರ್ಯಕುಮಾರ್​ಗೆ ಟಿ20 ನಾಯಕತ್ವ ನೀಡಲು ಬಿಸಿಸಿಐ ಮುಂದಾಗಿದ್ದೇಕೆ?

Viral Video
Latest1 hour ago

Viral Video: ಚಾಕೋಲೇಟ್ ತಿನ್ನುವ ಆಸೆಯಾಗಿ ಅಂಗಡಿಗೆ ಹೋಗಿದ್ದ ಬಾಲಕ ಶವವಾಗಿ ಮನೆಗೆ ಬಂದ; ಆಗಿದ್ದೇನು? ವಿಡಿಯೊ ನೋಡಿ

Anant Radhika Wedding
ವಾಣಿಜ್ಯ1 hour ago

Anant Radhika Wedding: ಮನಮುಟ್ಟುವಂತೆ ಕನ್ಯಾದಾನದ ಮಹತ್ವ ತಿಳಿಸಿದ ನೀತಾ ಅಂಬಾನಿ; ಭಾವುಕರಾದ ಅತಿಥಿಗಳು; ವಿಡಿಯೊ ನೋಡಿ

Chandan Shetty vidyarthi vidyarthiniyare kannada movie dubai premere
ಸ್ಯಾಂಡಲ್ ವುಡ್2 hours ago

Chandan Shetty: ಚಂದನ್‌ ಶೆಟ್ಟಿ ಅಭಿನಯದ ಸಿನಿಮಾ ದುಬೈನಲ್ಲಿ ಪ್ರೀಮಿಯರ್‌ ಶೋ; ಪ್ರೇಕ್ಷಕರಿಂದ ಭರಪೂರ ಮೆಚ್ಚುಗೆ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ24 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌