Weekly Horoscope | ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ ಫಲಗಳಿವೆ ನೋಡಿ - Vistara News

ಪ್ರಮುಖ ಸುದ್ದಿ

Weekly Horoscope | ಈ ವಾರ ದ್ವಾದಶ ರಾಶಿಗಳ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ ಫಲಗಳಿವೆ ನೋಡಿ

ಈ ವಾರ ಅಂದರೆ ನವೆಂಬರ್‌ 21 ರಿಂದ 27 ರವರೆಗೆ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ (Weekly Horoscope), ಯಾವ ರಾಶಿಯವರ ಅದೃಷ್ಟ ಸಂಖ್ಯೆ ಎಷ್ಟು, ಶುಭ ದಿಕ್ಕು ಯಾವುದು ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೇಷ: ಈ ರಾಶಿವರಿಗೆ ಗುರುವಿನ ಬಲವೇ ಶ್ರೀರಕ್ಷೆ

Weekly Horoscope

ಭೂತ ಕಾಲದ ತಪ್ಪುಗಳನ್ನು ಈಗ ನೆನಪಿಸಿಕೊಂಡರೆ, ನೆನಪಿಸಿಕೊಳ್ಳುತ್ತಿದ್ದರೆ ಅದರಿಂದ ಪ್ರಯೋಜನಗಳಿಲ್ಲ ಎಂಬುದನ್ನು ತಿಳಿಯಿರಿ. ಆದರೆ ಅದೇ ತಪ್ಪುಗಳನ್ನು ಮಾಡದಿರಿ. ಇದರ ಅರ್ಥ ಹೊಸ ತಪ್ಪುಗಳನ್ನು ಮಾಡಬಹುದು ಎಂದಲ್ಲ. ಬುಧನ ದೋಷದಿಂದ ಈ ವಾರ ನಿಮಗೆ ನಿಮ್ಮ ಬಗ್ಗೆ ನಂಬಿಕೆ ದೂರವಾಗುವ ಭಯವಿರುತ್ತದೆ. ಆದರೆ ನೀವು ಗುರುವಿನ ಕೆಲವು ಮಹತ್ವದ ಶಕ್ತಿ ದೊರಕಿರುವುದರಿಂದ ಕೆಲಸ ಕಾರ್ಯಗಳಲ್ಲಿ ಗಟ್ಟಿಯಾದ ಆಶಾವಾದಗಳೊಂದಿಗೆ ಮುನ್ನುಗ್ಗಿ ಗೆಲ್ಲುವ ಬಲವನ್ನು ಪಡೆಯುತ್ತೀರಿ. ಅರಿವಿರದ ಮೂಲದಿಂದ ಒಂದು ಬೆಂಬಲ ಏಕಾಏಕಿ ನಿಮಗೆ ಸಿಗುವ ಸಾಧ್ಯತೆ ಇದೆ. ದತ್ತನನ್ನು ಸ್ತುತಿಸಿ.
ಶುಭ ಸಂಖ್ಯೆ: 6 ಶುಭ ದಿಕ್ಕು: ವಾಯವ್ಯ

ವೃಷಭ: ಈ ರಾಶಿವರು ದೇವರನ್ನು ನಂಬಿದರೆ ಒಳಿತು

Weekly Horoscope

ವಿಳಂಬವನ್ನು ಸಹಿಸಿಕೊಳ್ಳುವುದು ನಿಮಗೆ ಅನಿವಾರ್ಯ. ಆದರೆ ಆಶಾವಾದದಿಂದ ಮುನ್ನುಗ್ಗಿ ಕೆಲಸ ಮಾಡಿ. ಮಾತುಗಳು ಜಾಸ್ತಿಯಾಗ ಕೂಡದು. ಪ್ರಾಜ್ಞರು ಹೇಳುವ ಮಾತುಗಳಿಗೆ ಚೆನ್ನಾಗಿ ಉತ್ತರಿಸಿ. ವಿನಯ ಪೂರ್ವಕ, ತೂಕ ಬದ್ಧ ಮಾತುಗಳಿಂದ ನಂಬಿ ಕೆಟ್ಟವರಿಲ್ಲವೋ ಎಂಬ ವ್ಯವಹಾರಿಕ ಮಾತನ್ನು ನೀವು ಕೇಳಿರುತ್ತೀರಿ. ದೇವರನ್ನು ನಂಬಿ. ಜತೆಗೆ ನಿಮ್ಮದಾದ ಕರ್ತವ್ಯ ಮುಂದುವರಿಸಿಕೊಂಡು ಹೋಗುವುದು. ನೀವೇ ಸರಿ ಎಂಬ ಧೋರಣೆ ಬಿಡಿ. ಚಂಡಿಕಾ ಹಾಗೂ ಮಾರುತಿಯ ಆರಾಧನೆಯಿಂದ ಒಳಿತು.
ಶುಭ ಸಂಖ್ಯೆ : 3 ಶುಭ ದಿಕ್ಕು: ಪಶ್ಚಿಮ

ಮಿಥುನ: ನರಸಿಂಹನನ್ನು ಆರಾಧಿಸಿದರೆ ಒಳಿತು

Weekly Horoscope

ಕೆಲವು ರೀತಿಯ ಭಯದಿಂದ ಬಳಲಿಕೆ ಸಾಧ್ಯ. ಆದರೆ ನೆನಪಿಡಿ, ನಿಮಗಿರುವ ಉತ್ತಮ ಗುರು ಬಲವು ನಿಮ್ಮನ್ನು ನಿಶ್ಚಯವಾಗಿಯೂ ನಡು ನೀರಿನಲ್ಲಿ ಕೈ ಬಿಡಲಾರದು. ಮುಖ್ಯವಾಗಿ ನರಸಿಂಹನನ್ನು ಸ್ತುತಿಸುವುದು ಆತ್ಮ ವಿಶ್ವಾಸವನ್ನು ಸಂವರ್ಧಿಸುವಲ್ಲಿ ಬೆಂಬಲಕ್ಕೆ ಬರುತ್ತದೆ. ಅನಗತ್ಯವಾದ ಘರ್ಷಣೆಯು ದಾಂಪತ್ಯದಲ್ಲಿ ಒಳನುಸುಳದಿರಲಿ. ಹುಳಿ ಹಿಂಡುವ ಕೆಲಸ ನಡೆಸುವವರು ಅಧಿಕವಾಗಿರುತ್ತಾರೆ. ಪ್ರಶ್ನಾರ್ಹವಾದ ಕೆಲವು ತಪ್ಪು ಹೆಜ್ಜೆಗಳು ಒಡ ಮೂಡದಂತೆ ನಿಗಾ ಇರಿಸಿ. ವ್ಯಾಜ್ಯದ ವಿಚಾರದಲ್ಲಿ ನಿಮ್ಮ ಪರವಾದ ಬೆಳವಣಿಗೆಗಳಿಂದ ಹರ್ಷ ಹೊಂದುವುದಕ್ಕೆ ವರ್ತಮಾನದಲ್ಲಿ ಅವಕಾಶವಿದೆ.
ಶುಭ ಸಂಖ್ಯೆ : 5 ಶುಭ ದಿಕ್ಕು: ನೈಋತ್ಯ

ಕಟಕ: ಈ ವಾರ ನಿಮಗೆ ಸಹನೆ ಇರಲಿ

Weekly Horoscope

ನಿರಾಶರಾಗುವ ಅವಶ್ಯಕತೆ ಬಾರದಂತೆ ಕೆಲಸ ಮಾಡಿ. ಅನ್ಯರನ್ನು ಸಹಿಸಿಕೊಂಡು ಹೋಗಲೇ ಬೇಕಾದ ಸಹನೆ ಇರಲಿ. ವರ್ತಮಾನದ ವಾಸ್ತವ ಏಕಾಗ್ರತೆಗೆ ಕೆಲವು ಭಂಗಗಳನ್ನು ತರುತ್ತಲೇ ಇರುತ್ತದೆ. ಹಿತ್ತಾಳೆ ಕಿವಿಯ ಜನರನ್ನು ಪ್ರತಿಯೊಬ್ಬನೂ ಟೀಕಿಸುತ್ತಾನೆಯೇ ವಿನಃ ಹಿತ್ತಾಳೆ ಕಿವಿಯವರ ಸಾಲಿನಲ್ಲಿ ತಾನೂ ಬರುತ್ತೇನೆ ಎಂದು ಯೋಚಿಸುವುದಿಲ್ಲ. ಇಂಥ ಜನರಿಂದ ನಿಮ್ಮ ಮಾನಸಿಕ ಶಾಂತಿಗೆ ಧಕ್ಕೆ ಬರಬಹುದು. ಮಧುರತೆ ನಿಮ್ಮ ಭಾಷೆಯಲ್ಲಿದೆ. ಅದನ್ನು ಶಕ್ತಿಯುತವಾಗಿ ರೂಪಿಸಿಕೊಳ್ಳುವುದಕ್ಕೆ ಮುಂದಡಿ ಇಡಿ. ಕಾರಣವಿರದೇ ಸುತ್ತಿಕೊಳ್ಳುವ ಖರ್ಚುಗಳ ಬಗ್ಗೆ ಎಚ್ಚರ ಇರಲಿ. ಭವಾನಿ ಶಂಕರನನ್ನು ಸ್ತುತಿಸಿ.
ಶುಭ ಸಂಖ್ಯೆ : 7 ಶುಭ ದಿಕ್ಕು: ಪೂರ್ವ

ಸಿಂಹ: ಬುದ್ಧಿ ಶಕ್ತಿಯ ಕಡೆಗೆ ಗಮನವಿರಲಿ

Weekly Horoscope

ಮದದಾನೆಗಳನ್ನೂ ಮೆಟ್ಟಿ ನಿಲ್ಲುವ ಕೇಸರಿಯ ಶಕ್ತಿ ನಿಮ್ಮದು. ಆದರೆ ಅದು ಯಾಕೆ ಸೂಕ್ತ ಸಮಯದಲ್ಲಿ ಚಿಮ್ಮಿ ಹೊರ ಬರಲಾರದು ಎಂಬ ಬೇಗುದಿ ನಿಮ್ಮಲ್ಲಿದೆ. ಕೆಲವು ಕೃತ್ತಿಮ ಶಕ್ತಿಗಳು ನಿಮ್ಮನ್ನು ಬಾಧಿಸುತ್ತಿವೆ. ಹಳೆಯ ಬಾವಿಯ ಸಮೀಪ, ಗಿಡ ಗುಂಟಿಗಳು ಬೆಳೆವ ಅಥವಾ ಹೆಮ್ಮರಗಳ ಸಾಲು ಸಾಲೇ ತುಂಬಿರುವ ಸಸ್ಯ, ಗಿಡ, ಮರಗಳ ಗುಂಪು ಪ್ರದೇಶಕ್ಕೆ ಒಂಟಿಯಾಗಿ ಹೋಗದಿರಿ. ಪಂಚಮ ಭಾವದಲ್ಲಿ ಕೇತುಯುಕ್ತ ಶನಿ ರವಿಗಳು ಬುದ್ಧಿ ಶಕ್ತಿಯನ್ನು ಒಂದು ಮಿತಿಗೆ ತಳ್ಳಿ ಸತಾಯಿಸುತ್ತವೆ. ಪ್ರಸ್ತುತ ಗೊಂದಲಗಳನ್ನು, ಇಬ್ಬದಿತನವನ್ನು ಶ್ರೀ ಲಲಿತಾಂಬಿಕಾಧ್ಯಾನ ಮತ್ತು ಪಂಚಮುಖಿ ಹನುಮಂತ ಕವಚ ಪಠಿಸುವ ಮೂಲಕ ನಿವಾರಿಸಿಕೊಳ್ಳಿ.
ಶುಭ ಸಂಖ್ಯೆ : 9 ಶುಭ ದಿಕ್ಕು: ನೈಋತ್ಯ

ಕನ್ಯಾ: ಸುಬ್ರಹ್ಮಣ್ಯನ ಅನುಗ್ರಹ ಪಡೆಯಿರಿ

Weekly Horoscope

ಲಾಭದ ದಾರಿಯಲ್ಲಿ ಸಾಗಲು ಅತ್ಯಂತ ಮಹತ್ವದ ಧೈರ್ಯ, ಸಾಮರ್ಥ್ಯಗಳು ನಿಮ್ಮಲ್ಲಿವೆಯಾದರೂ, ಕೆಲಸದ ಸ್ಥಳದಲ್ಲಿನ ನೀರವ ಸ್ಥಿತಿಯಿಂದಾಗಿ ಶೀಘ್ರವಾಗಿ ಹುರುಪಿನಿಂದ ಎದ್ದು ಕ್ಷಿಪ್ರವಾಗಿ ಕೆಲಸ ಮಾಡಿ ಮುಗಿಸಲು ಸಾಧ್ಯವಾಗದು. ಆಹಾರದಲ್ಲಿ ಉಪ್ಪನ್ನು ಈ ವಾರ ಅತಿಯಾಗಿ ಬಳಸಲೇಬಾರದು. ಜಲೋತ್ಪನ್ನ ಸರಕುಗಳು ನಿಮ್ಮ ಪಾಲಿಗೆ ವರದಾನವಾಗಬಲ್ಲದು. ರಾಜಕೀಯದಲ್ಲಿ ಆಸಕ್ತರಾದವರಿಗೆ, ರಾಜಕಾರಣವನ್ನೇ ಕಾಯಕ ಮಾಡಿಕೊಂಡವರಿಗೆ ಶ್ರಮ ಭರಿತ ಒಡಾಟ, ಪರದಾಟಗಳಿಂದ ಅಂತಿಮವಾಗಿ ವಿಜಯದತ್ತ ಹೊರಳಿ ಕೊಳ್ಳುವ ಶಕ್ತಿ ಸುಬ್ರಹ್ಮಣ್ಯನ ಅನುಗ್ರಹದಿಂದಾಗಿ ಸಾಧ್ಯವಿದೆ. ಸುಬ್ರಹ್ಮಣ್ಯನನ್ನು ಸ್ತುತಿಸಿ, ಅನ್ಯ ಲಿಂಗಿಗಳೊಡನೆ ಸಲಿಗೆ ಬೇಡ.
ಶುಭ ಸಂಖ್ಯೆ : 4 ಶುಭ ದಿಕ್ಕು: ಆಗ್ನೇಯ

ತುಲಾ: ಪ್ರಮುಖ ಯೋಜನೆಯಲ್ಲಿ ಯಶಸ್ಸು

Weekly Horoscope

ಹಳದಿ ಅಥವಾ ಕೆಂಪು ಬಣ್ಣಗಳು ಅಪಾಯ ತರುತ್ತವೆ. ಗೋದಿಯನ್ನು ನೆನಸಿಟ್ಟು ನೀರನ್ನು ಗೋದಿಯ ಜತೆ ಹಸುವಿಗೆ ಆಹಾರವಾಗಿ ನೀಡಿ. ದುರ್ಗಾಳ ಅನುಗ್ರಹಕ್ಕೆ ಪಾತ್ರರಾಗುವ ಅಪೂರ್ವ ಅವಕಾಶ ಲಭ್ಯ. ಶ್ರಮದಿಂದಲೇ ಸುಖವಿದೆ. ನಿರ್ದಿಷ್ಟವಾದುದು ಇದೇ ಎಂಬುದನ್ನು ಗುರುತಿಸಿಕೊಳ್ಳಿ. ಎರಡು ದೋಣಿಯ ಪಯಣ ಬೇಡ. ದೈವ ಶಕ್ತಿಯ ಪ್ರಾಬಲ್ಯವನ್ನು ಬೆಳಗಿನ ಹೊತ್ತಿನ ಸ್ನಾನಾ ನಂತರ “ಶ್ರೀ ಖಡ್ಗ ಮಾಲಿನಿ ಸ್ತೋತ್ರಾವಳಿʼʼಯನ್ನು ಪಠಿಸಿ, ಅಂತರ್ಗತವಾದ ಶಕ್ತಿ ಮೂಲವನ್ನು ಅನಾಹತ ಚಕ್ರಸಿಂಧು ಮೂಲಕ್ಕೆ ಸಂವೇದಿಸಿಕೊಂಡಾಗ ಸಂಕಲ್ಪಿತ ಕಾರ್ಯ ಸಿದ್ಧಿಗೆ ಅವಕಾಶ ಹೇರಳ. ಮನಸ್ಸಿನ ಪ್ರಮುಖ ಯೋಜನೆಗೆ ವಿಜಯ.
ಶುಭ ಸಂಖ್ಯೆ : 7 ಶುಭ ದಿಕ್ಕು: ಪಶ್ಚಿಮ

ವೃಶ್ಚಿಕ: ವ್ಯಾಪಾರ-ವಹಿವಾಟಿನಲ್ಲು ಯಶಸ್ಸು

Weekly Horoscope

ವ್ಯಕ್ತಿತ್ವದ ವಿಚಾರವಾಗಿ ಸುಹಾಸಕರ ಚೌಕಟ್ಟನ್ನು ನಿರ್ಮಿಸಲು ಅವಕಾಶ ಭದ್ರವಾಗಿದೆ. ನಿಮಗೆ ಸರ್‌ಅನೆ ಬರುವ ಕೋಪ, ಯೋಚಿಸಿದೆ ಸರ್‌ಅನೆ ಮಾತನಾಡುವ ಗುಣ, ವೈರಿಯನ್ನು ವಿನಯದಿಂದ ಮಾತನಾಡಿಸಲು ಸಾಧ್ಯವಾಗದ ಉದ್ವಿಗ್ನತೆಗಳನ್ನು ನಿಯಂತ್ರಿಸಲು ಸಾಧ್ಯವಾದರೆ ವ್ಯಾಪಾರ, ವಹಿವಾಟು, ಕುಶಲ ಕಲಾ ವಸ್ತುಗಳ ಮಾರಾಟ, ಎಲೆಕ್ಟ್ರಾನಿಕ್ಸ್‌ ಗೂಡ್ಸ್‌ ವಿತರಣಾ ಘಟಕ ಇತ್ಯಾದಿಗಳನ್ನು ಗರಿಷ್ಠ ಲಾಭ ಬರುವಂತೆ ನಿರ್ವಹಿಸಬಲ್ಲ ಚಾಕಚಕ್ಯತೆ ಪಡೆಯುತ್ತೀರಿ. ಸಿನಿಮಾ ತಯಾರಿಕೆ, ವಿತರಣೆ ಅಥವಾ ಅಭಿನಯ ದಿಗ್ದಶರ್ನಗಳಲ್ಲಿ ವ್ಯತ್ಯಯಗಳು ಬಂದು ಪರದಾಟವಾಗಬಹುದು. ಗರಿಕೆ ಮತ್ತು ಕೆಂಪು ಹೂಗಳಿಂದ ಗಣೇಶನನ್ನು ಆರಾಧಿಸಿ.
ಶುಭ ಸಂಖ್ಯೆ : 1 ಶುಭ ದಿಕ್ಕು: ಉತ್ತರ

ಧನಸ್ಸು: ಭೂ ವ್ಯವಹಾರ ಎಚ್ಚರಿಕೆ ಅಗತ್ಯ

Weekly Horoscope

ಫಟಾಫಟ್‌ ಎಲ್ಲವೂ ಆಗಬೇಕು ಎಂಬ ನಿಮ್ಮ ನಿರೀಕ್ಷೆಯನ್ನು ಗೆಲ್ಲಿಸುವುದು ಕಷ್ಟಕರವಾಗುವ ಸಮಯವಾಗಿದೆ ಇದು. ದುರ್ಗೆಯನ್ನು, ಶಕ್ತಿ ಮಾರುತಿಯನ್ನು ಆರಾಧಿಸಿ. ಭಾಷೆಯ ಬಗೆಗೆ, ಮಾತಿನ ಗಟ್ಟಿತನದ ಬಗೆಗೆ ಕಾಳಜಿ ಹೊಂದಿರುವಿರಾದರೂ ಮಾತನಾಡಿದಂತೆ ಕ್ಷಿಪ್ರವಾಗಿ ಆಡಿದ ಮಾತನ್ನು ಉಳಿಸಿಕೊಳ್ಳುವ ಚುರುಕುತನ ಪ್ರದರ್ಶಿಸಲೇಬೇಕು. ಮೇಧಾ ದಕ್ಷಿಣಾಮೂರ್ತಿಯನ್ನು ಅರಿಷಿಣ, ಅಕ್ಷತ, ಕುಂಕುಮ, ತ್ರಿದಳಗಳೊಂದಿಗೆ ಆರಾಧಿಸಿ. ವಿಷಮಯವಾಗಿರುವ ವರ್ತಮಾನವನ್ನು ಪರಿವರ್ತಿಸಿ, ಅಮೃತತ್ವಕ್ಕೆ ಹೊರಳಿಕೊಳ್ಳುವ ದಿಸೆಯತ್ತ ಸ್ವಾಮಿಯ ಅನುಗ್ರಹ ಪ್ರಾಪ್ತಿಯಾಗುತ್ತದೆ. ಭೂ ವ್ಯವಹಾರದಲ್ಲಿ ಬಿಸಿ ತಾಪಗಳಿವೆ ಎಚ್ಚರಿಕೆ.
ಶುಭ ಸಂಖ್ಯೆ: 3 ಶುಭ ದಿಕ್ಕು: ದಕ್ಷಿಣ

ಮಕರ: ಆಲಸ್ಯ ಬಿಟ್ಟರೆ ಧನ ಲಾಭ

Weekly Horoscope

ಯಾರ ಹಂಗಿನಲ್ಲೂ ಹೆಜ್ಜೆ ಇರಿಸಲಾರೆ ಎನ್ನುವ ಹಟಕ್ಕೆ ಬೀಳಬೇಡಿ. ಕಾಲದ ಪ್ರಕ್ಷುಬ್ಧತೆಯಲ್ಲಿ ತೇಜೋವಧೆ ಮಾಡುವ ದುರಹಂಕಾರಿಗಳನ್ನು ಬಿಟ್ಟು ಯಾರ ಜತೆ ಬೇಕಾದರೂ ಹೆಜ್ಜೆ ಇರಿಸಿ. ಸಾಮಾಜಿಕ ಜನ ಜೀವನದ ಶಾಂತಿ, ನೆಮ್ಮದಿಗಳನ್ನು ಹಾಳು ಮಾಡುವ ಜನರ ಜತೆ ಸ್ನೇಹ ಬೇಡ. ಮಹತ್ವದ ನಿಮ್ಮ ಯೋಜನೆಗಳನ್ನು ಕೈ ಬಿಡುವ ಸ್ಥಿತಿಗೆ ಈ ಸ್ನೇಹ ಮುಂದೆ ದಾರಿ ಮಾಡಬಹುದಾಗಿದೆ. ಇಚ್ಛಾ ಶಕ್ತಿಯ ಪ್ರದರ್ಶನದಿಂದ ಗೋಜಲುಗಳು ಬೇಡ ಎಂಬ ಕೆಲಸವೇ ನಿಮಗೆ ಸುಲಭವಾಗುತ್ತದೆ. ಆದರೆ ನಿಮ್ಮ ಆಲಸ್ಯದಿಂದ ಹೊರಬನ್ನಿ. ವಿಷ್ಣು ಸಹಸ್ರನಾಮಾವಳಿ, ಹನುಮಾನ್‌ ಚಾಲೀಸ್‌ ಓದಿ, ಇದು ಧನ ಲಾಭಕ್ಕೆ ದಾರಿ.
ಶುಭ ಸಂಖ್ಯೆ : 6 ಶುಭ ದಿಕ್ಕು: ಪೂರ್ವ

ಕುಂಭ: ಕಲಿಯುವ ಹಸಿವಿನಿಂದ ಲಾಭ

Weekly Horoscope

ಕಲಿತುಕೊಳ್ಳುವುದು ಅಗಾಧವಾದುದಿದೆ, ತಿಳಿದದ್ದು ಕಡಿಮೆಯಾಗಿದೆ ಎಂಬ ಜ್ಞಾನ ದಾಹದಿಂದಾಗಿ ಮಹತ್ವದ ಹೊಸದೇ ಕವಲುಗಳು ಬದುಕುವ ಮಾರ್ಗದಲ್ಲಿ ನಿಮಗೆ ವರವಾಗಿ ಒದಗಿ ಬರಲಿವೆ. ಧನ, ಧ್ಯಾನ, ಧಾನ್ಯ ಸಮೃದ್ಧಿಗೆ ಅವಕಾಶ ಹೇರಳ. ಆದರೆ ನಿಮ್ಮ ಉನ್ನತಿಯನ್ನು ಕ್ಷೀಣಗೊಳಿಸುವ ಅಪರ ಮಾರ್ಗಕ್ಕೆ ಇಳಿಯುವ ದುರ್ಬುದ್ಧಿಗಳು ನಿಮ್ಮನ್ನು ಬಸವಳಿಸಬಲ್ಲವು. ಯಾವಾಗಲೂ ಚೈತನ್ಯಮಯವಾದ, ಜಗದ ರಕ್ಷಕಿಯಾದ ಐಂದ್ರಿತಾಳನ್ನು ಆರಾಧಿಸಿ. ಕೆಂಪು ಬಟ್ಟೆಗಳು ಬೇಡ. ಕಪ್ಪು ಮತ್ತು ನೀಲಿ ಆವರಣಗಳಲ್ಲಿ ಗರುಡನ ರೂಪು ಮೂಡಿಸಿ ವಿನುತ ಪುತ್ರ ಗರುಡನನ್ನು ಆರಾಧಿಸಿ, ವರ್ಚಸ್ಸು ಸಂವರ್ಧಿಸಲಿದೆ.
ಶುಭ ಸಂಖ್ಯೆ : 2 ಶುಭ ದಿಕ್ಕು: ಈಶಾನ್ಯ

ಮೀನ: ಈ ವಾರ ಕಬ್ಬಿಣದ ಸಹವಾಸ ಬೇಡ

Weekly Horoscope

ಕಬ್ಬಿಣದ ವ್ಯಾಪಾರದ ವಿಷಯಗದಲ್ಲಿ ಅಥವಾ ಕಬ್ಬಿಣದ ಸರಕುಗಳ ಸಂಗ್ರಹದಲ್ಲಿ ಆಸಕ್ತಿ ತೋರಬೇಡಿ. ಪ್ರಖ್ಯಾತ ಉದ್ಯಮಿಯೊಬ್ಬರು ಹಳೆಯ ಕಬ್ಬಿಣದ ಸರಕನ್ನು ಹಣಕೊಟ್ಟು ಖರೀದಿಸಿ ತಂದು ತಮ್ಮನ್ನು ಬಿಕ್ಕಟ್ಟಿಗೆ ಸಿಕ್ಕಿಸಿಕೊಂಡು ದಿವಾಳಿಯಾಗಿದ್ದಾರೆ ಎಂಬ ವಿಷಯವನ್ನು ನೆನಪಿಡಿ. ಹೊಸದೇ ವಿನ್ಯಾಸದೊಂದಿಗೆ ಈಗಿರುವ ವಹಿವಾಟಿನ ಚೌಕಟ್ಟನ್ನು ಸಮೃದ್ಧಿಗೊಳಿಸಿಕೊಳ್ಳಿ. ನಿಮ್ಮ ಮಕ್ಕಳು ತುಸು ಕಿರಿಕಿರಿ ತೋರಿಸಬಹುದು. ಬಾಳ ಸಂಗಾತಿಯನ್ನು ಕ್ಲಿಷ್ಟ ಸಂದರ್ಭದಲ್ಲಿ ಸೂಕ್ತ ಸಲಹೆಗಳಿಗಾಗಿ ಅವಲಂಬಿಸುವುದು ಸೂಕ್ತ ವಿಷಯವೇ. ಲಿಂಬೆಯ ಹಣ್ಣಿನ ಬಳಿ ಇರಿಸಿದ ಅರಿಷಿನದ ಬೇರಿನ ತುಂಡಿಗೆ ಅಕ್ಷತೆ ಹಾಕಿ ಶ್ರೀ ಲಕ್ಷ್ಮೀಯನ್ನು ಸ್ತುತಿಸಿ, ಕ್ಷೇಮವಾಗಿರುವಿರಿ.
ಶುಭ ಸಂಖ್ಯೆ : 8 ಶುಭ ದಿಕ್ಕು: ಆಗ್ನೇಯ

ಎಂ.ಎಂ.ಕೆ. ಶರ್ಮ, ಬೆಂಗಳೂರು
ಮೊಬೈಲ್‌ ನಂ.: 9632980996

ಇದನ್ನೂ ಓದಿ | Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Actor Darshan: ಜೈಲಲ್ಲಿ ಮುದ್ದೆ-ಚಿಕನ್‌ ಸಾಂಬಾರ್‌ ಸವಿದ ದರ್ಶನ್;‌ ನಟನ ನೋಡಲು ಮುಗಿಬಿದ್ದ ಕೈದಿಗಳು!

Actor Darshan: ಶನಿವಾರ ಬೆಳಗ್ಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು (Parappana Agrahara) ಸೇರಿರುವ ನಟ ದರ್ಶನ್‌ (Actor Darshan) ಅವರಿಗೆ ಜೈಲಿನ ಮೆನು ಪ್ರಕಾರವೇ ಊಟ ನೀಡಲಾಗುತ್ತಿದೆ. ಅದರಂತೆ, ಶುಕ್ರವಾರ (ಜೂನ್‌ 28) ರಾತ್ರಿ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌, ಮುದ್ದೆ ಹಾಗೂ ಅನ್ನವನ್ನು ನೀಡಲಾಗಿದೆ. ಜೈಲಿನ ಅನ್ನ-ಸಾಂಬಾರ್‌ ತಿಂದು ಬಸವಳಿದಿದ್ದ ದರ್ಶನ್‌ ಅವರಿಗೆ ಚಿಕನ್‌ ಸಾಂಬಾರ್‌ ನೀಡಿರುವುದು ತುಸು ಸಮಾಧಾನ ತಂದಿದೆ. ಮುದ್ದೆ, ಚಿಕನ್‌ ಸಾಂಬಾರ್‌ ಸೇವಿಸಿದ ದರ್ಶನ್‌ ತಡವಾಗಿ ನಿದ್ದೆಗೆ ಜಾರಿದರು ಎಂದು ತಿಳಿದುಬಂದಿದೆ.

ಶನಿವಾರ (ಜೂನ್‌ 29) ಬೆಳಗ್ಗೆ 6 ಗಂಟೆಗೆ ಎದ್ದ ದರ್ಶನ್‌, ಕೆಲಹೊತ್ತು ಜೈಲಿನ ಕೊಠಡಿಯಲ್ಲಿಯೇ ವಾಕಿಂಗ್‌ ಮಾಡಿದರು. ಇದರ ಮಧ್ಯೆಯೇ, ಪದೇಪದೆ ಅನಾರೋಗ್ಯದ ನೆಪ ಹೇಳಿ ಜೈಲು ಆಸ್ಪತ್ರೆ ಕಡೆ ಸುಳಿಯುತ್ತಿದ್ದು, ಜೈಲಧಿಕಾರಿಗಳಿಗೆ ನಟ ತಲೆನೋವಾಗಿದ್ದಾರೆ. ಹೊಟ್ಟೆ ನೋವು, ತಲೆನೋವು ಸೇರಿ ಹಲವು ನೆಪಗಳನ್ನು ಹೇಳಿಕೊಂಡು ಅವರು ಆಸ್ಪತ್ರೆಗೆ ಹೋಗುತ್ತಿದ್ದಾರೆ. ಇದರ ಮಧ್ಯೆಯೇ, ನಟ ದರ್ಶನ್‌ ಅವರನ್ನು ನೋಡಲು ಜೈಲಿನಲ್ಲಿರುವ ಕೈದಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ಕೂಡ ತಿಳಿದುಬಂದಿದೆ.

Actor Darshan

6106 ಸ್ಟಿಕ್ಕರ್‌ಗಳಿಗೆ ಡಿಮ್ಯಾಂಡ್

ʻʻಡಿ 6106ʼʼಎಂದು ಒಬ್ಬ ಅಭಿಮಾನಿ ಕೈ ಮೇಲೆ ಟ್ಯಾಟೂ ಹಾಕಿಸಿಕೊಂಡಿದ್ದಾನೆ. ದರ್ಶನ್ ಕೈದಿ ನಂಬರ್‌ನಲ್ಲಿಯೇ ಮೊಬೈಲ್ ಕವರ್‌ ಕೂಡ ಬಂದಿದೆ. ಬೈಕ್,ಆಟೋಗಳ ಹಿಂದೆ ಕೂಡ ಇದೇ ಕೈದಿ ನಂಬರ್ ಸ್ಟಿಕ್ಕರ್ ಅಂಟಿಸುತ್ತಿದ್ದಾರೆ. ತಮ್ಮ ವಾಹನಗಳಿಗೆ ಈ ರೀತಿಯ ಸ್ಟಿಕ್ಕರ್‌ವನ್ನು ನೂರಾರು ಫ್ಯಾನ್ಸ್‌ ಹಾಕಿಕೊಂಡು ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡುತ್ತಿದ್ದಾರೆ. ಕೈದಿ ನಂಬರ್ 6106 ಸೋಶಿಯಲ್ ಮೀಡಿಯಾಗಳಲ್ಲಿ ಮತ್ತೆ ಟ್ರೆಂಡಿಂಗ್ ಆಗುತ್ತಿದೆ.

ಸದ್ಯ ಈಗ ಕೈದಿ ನಂಬರ್ 6106 ಸ್ಟಿಕ್ಕರ್ ಗಳಿಗೆ ಫುಲ್ ಡಿಮ್ಯಾಂಡ್ ಇದೆ ಎನ್ನಲಾಗಿದ್ದು ವಿಭಿನ್ನ ಬಣ್ಣ, ವಿನ್ಯಾಸದಲ್ಲಿ ದರ್ಶನ್ ಫ್ಯಾನ್ಸ್ ಇದನ್ನು ಮಾಡಿಸಿಕೊಂಡು ತಮ್ಮ ವಾಹನಗಳಿಗೆ ಅಂಟಿಸಿಕೊಳ್ಳುತ್ತಿದ್ದಾರೆ.ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇತ್ತೀಚೆಗೆ ಅವರ ವಿಶೇಷ ಚೇತನ ಅಭಿಮಾನಿಯೊಬ್ಬರು ಅವರನ್ನು ನೋಡಲು ಬಂದಿದ್ದರು. ಈ ಘಟನೆಯ ನಂತರ ಅಭಿಮಾನಿಗಳಿಗೆ ನಟ ದರ್ಶನ್ ಮನವಿ ಮಾಡಿದ್ದು ಜೈಲಿನಿಂದಲೇ ನಟ ದರ್ಶನ್ ಮನವಿ ತಿಳಿಸಿದ್ದಾರೆ.

ಇದನ್ನೂ ಓದಿ: Actor Darshan: ಒಂದಲ್ಲ, ಎರಡಲ್ಲ…. ಬರೋಬ್ಬರಿ 50 ನಿಮಿಷ ರೇಣುಕಾ ಸ್ವಾಮಿ ಮೇಲೆ ದರ್ಶನ್‌ ಕ್ರೌರ್ಯ!

Continue Reading

ಬೆಂಗಳೂರು

BBMP Scam: ನಕಲಿ ಸೊಸೈಟಿಗಳಿಗೆ ಬಿಬಿಎಂಪಿ 102 ಕೋಟಿ ರೂ. ವರ್ಗಾವಣೆ; ಬಯಲಾಯ್ತು ಮತ್ತೊಂದು ಹಗರಣ!

BBMP Scam: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣವು ರಾಜ್ಯಾದ್ಯಂತ ಸುದ್ದಿಯಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗಿದ್ದು, ಈಗಾಗಲೇ ಸಚಿವ ಬಿ. ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ, ಬಿಬಿಎಂಪಿ ಅಧಿಕಾರಿಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅಂದರೆ, 2020-21ರಲ್ಲಿ ನಕಲಿ ಸೊಸೈಟಿಗಳಿಗೆ 102 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

VISTARANEWS.COM


on

BBMP Scam
Koo

ಬೆಂಗಳೂರು: ರಾಜ್ಯದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂಪಾಯಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ ಪ್ರಕರಣವು ಗಂಭೀರ ಸ್ವರೂಪ ಪಡೆದಿರುವ ಬೆನ್ನಲ್ಲೇ ಮತ್ತೊಂದು ಬಹುಕೋಟಿ ಹಗರಣವು ಬಯಲಾಗಿದೆ. ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP Scam) ಅಧಿಕಾರಿಗಳು ಸುಮಾರು 102 ಕೋಟಿ ರೂಪಾಯಿಯನ್ನು ನಕಲಿ ಸೊಸೈಟಿಗಳಿಗೆ (Fake Societies) ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 9 ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಹೌದು, ಬಿಬಿಎಂಪಿ ಅಧಿಕಾರಿಗಳು ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಅಂದರೆ, 2020-21ರಲ್ಲಿ ನಕಲಿ ಸೊಸೈಟಿಗಳಿಗೆ 102 ಕೋಟಿ ರೂ. ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ದಲಿತರು, ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ವಿಧವೆಯರಿಗೆ ಮೀಸಲಾದ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 102 ಕೋಟಿ ರೂ. ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ. ಆದಾಗ್ಯೂ, ಹಗರಣದಲ್ಲಿ ಶಾಮೀಲಾದ ಅಧಿಕಾರಿಗಳ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಆಗ್ರಹ

ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆಗ್ರಹಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಚಿವ ಬಿ. ನಾಗೇಂದ್ರ 20% ತಿಂದಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ 80% ತಿಂದಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಈ ಕುರಿತು ಸದನದಲ್ಲೂ ಆಗ್ರಹಿಸುತ್ತೇವೆ. ಸಿಎಂ ರಾಜೀನಾಮೆ ನೀಡುವವರೆಗೂ ಹೋರಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್‌ ಸರ್ಕಾರ ಉಚಿತಗಳ ಹೆಸರಲ್ಲಿ ಬೆಲೆ ಏರಿಕೆ ಮಾಡಿದೆ. ಹಾಲಿನ ಬೆಲೆ ಏರಿಕೆ ಮಾಡಿದ್ದು ಏಕೆ ಎಂದು ಪ್ರಶ್ನೆ ಮಾಡಿದರೆ ಹೆಚ್ಚು ಹಾಲು ನೀಡಿದ್ದೇವೆ ಎನ್ನುತ್ತಾರೆ. ಆದರೆ ಹೆಚ್ಚಾದ ಹಣವನ್ನು ರೈತರಿಗೆ ಕೊಡುವುದಿಲ್ಲ. ಬಡವರು ಕೂಲಿ ಮಾಡಿ ದುಡಿದು ಮದ್ಯ ಸೇವಿಸಲು ಹೋದರೆ ಅದಕ್ಕೂ ದರ ಏರಿಕೆ ಮಾಡಿದ್ದಾರೆ. ಶ್ರೀಮಂತರು ಕುಡಿಯುವ ಮದ್ಯದ ದರವನ್ನು ಇಳಿಕೆ ಮಾಡಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ನಡೆಯುತ್ತಿಲ್ಲ. ಆದರೆ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ಮಾತ್ರ ಅಭಿವೃದ್ಧಿಯಾಗುತ್ತಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

Continue Reading

ದೇಶ

Rahul Gandhi: ರಾಹುಲ್‌ ಗಾಂಧಿ ಈಗ ಪ್ರತಿಪಕ್ಷ ನಾಯಕ; ಅವರಿಗಿರುವ ಅಧಿಕಾರ ಯಾವವು? ಸಂಬಳ ಎಷ್ಟು?

Rahul Gandhi: 10 ವರ್ಷಗಳ ಬಳಿಕ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನವು ಕಾಂಗ್ರೆಸ್‌ಗೆ ಲಭಿಸಿದ್ದು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕರಾಗಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯಲು ರಾಹುಲ್‌ ಗಾಂಧಿ ಅವರು ಸಜ್ಜಾಗಿದ್ದಾರೆ. ಇನ್ನು ಪ್ರತಿಪಕ್ಷ ನಾಯಕನಾಗಿರುವ ರಾಹುಲ್‌ ಗಾಂಧಿ ಅವರಿಗೆ ಸಿಗುವ ಸಂಬಳ ಎಷ್ಟು? ಅವರಿಗೆ ಇರುವ ವಿಶೇಷ ಅಧಿಕಾರಗಳು ಯಾವವು? ಸವಲತ್ತುಗಳು ಏನೇನು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Rahul Gandhi
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ (Leader Of The Opposition) ಆಯ್ಕೆಯಾಗಿದ್ದಾರೆ. ಕಳೆದ ಎರಡು (2014, 2019) ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವೂ ಪ್ರತಿಪಕ್ಷವಾಗುವಷ್ಟು ಸೀಟುಗಳನ್ನು ಗೆದ್ದಿರದ ಕಾರಣ ಪ್ರತಿಪಕ್ಷ ನಾಯಕರೇ ಇರಲಿಲ್ಲ. ಆದರೆ, ಕಳೆದ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ 99 ಕ್ಷೇತ್ರಗಳನ್ನು ಗೆದ್ದಿದ್ದು, ಈಗ ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇವರು ಆಡಳಿತಾರೂಢ ಪಕ್ಷಕ್ಕೆ ಸೆಡ್ಡು ಹೊಡೆಯುವ ಜತೆಗೆ ಹಲವು ಅಧಿಕಾರಗಳು ಹಾಗೂ ಸವಲತ್ತುಗಳನ್ನು ಪಡೆಯಲಿದ್ದಾರೆ. ಅವುಗಳ ಕುರಿತ ಮಾಹಿತಿ ಹೀಗಿದೆ…

ರಾಹುಲ್‌ ಗಾಂಧಿ ಸಂಬಳ ಎಷ್ಟು?

ರಾಹುಲ್‌ ಗಾಂಧಿ ಅವರು ಸಂಸದನಾಗಿ ಪಡೆಯುವ ಸಂಬಳದ ಜತೆಗೆ ಪ್ರತಿಪಕ್ಷ ನಾಯಕರೂ ಆಗಿರುವ ಕಾರಣ ಅವರಿಗೆ ಮಾಸಿಕ 3.3 ಲಕ್ಷ ರೂ. ಸಂಬಳ ಸಿಗಲಿದೆ. ಅಲ್ಲದೆ, ಕ್ಯಾಬಿನೆಟ್‌ ದರ್ಜೆಯ ಸಚಿವರಿಗೆ ಸಿಗುವ ಸವಲತ್ತುಗಳು, ಭದ್ರತೆ (ಝಡ್‌ ಪ್ಲಸ್‌) ಸಿಗಲಿದೆ. ಕ್ಯಾಬಿನೆಟ್‌ ಸಚಿವರೊಬ್ಬರಿಗೆ ಸಿಗುವ ಬಂಗಲೆಯೇ ರಾಹುಲ್‌ ಗಾಂಧಿ ಅವರಿಗೂ ನೀಡಲಾಗುತ್ತದೆ. ಇದರ ಜತೆಗೆ ಹಲವು ಭತ್ಯೆಗಳು ಕೂಡ ರಾಹುಲ್‌ ಗಾಂಧಿ ಅವರಿಗೆ ಸಿಗಲಿವೆ.

Rahul Gandhi

ಅವರ ಅಧಿಕಾರ ವ್ಯಾಪ್ತಿ ಹೇಗಿರಲಿದೆ?

ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಿ ಹಲವು ಸಂಸದೀಯ ಸಮಿತಿಗಳ ಸದಸ್ಯರೂ ಆಗಿರುತ್ತಾರೆ. ಜಂಟಿ ಸಂಸದೀಯ ಸಮಿತಿಗಳು, ಪಬ್ಲಿಕ್‌ ಅಕೌಂಟ್ಸ್‌ ಸಮಿತಿ ಸದಸ್ಯರಾಗಿರುತ್ತಾರೆ. ಹಾಗೆಯೇ, ಸಿಬಿಐ ನಿರ್ದೇಶಕ, ಮುಖ್ಯ ಚುನಾವಣಾ ಆಯುಕ್ತರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ, ಚೀಫ್‌ ವಿಜಿಲನ್ಸ್‌ ಕಮಿಷನರ್‌, ಕೇಂದ್ರೀಯ ಮಾಹಿತಿ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡುವಾಗ ರಾಹುಲ್‌ ಗಾಂಧಿ ಅವರು ಕೂಡ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.

ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಿ ಸದನದ ಮುಂದಿನ ಸಾಲಿನಲ್ಲಿರುವ ಆಸನದಲ್ಲಿ ಕುಳಿತುಕೊಳ್ಳಲಿದ್ದಾರೆ. ಹಾಗೆಯೇ, ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾತನಾಡುವಾಗ ಕೂಡ ಅವರಿಗೆ ಮುಂದಿನ ಸಾಲಿನಲ್ಲಿಯೇ ಆಸನದ ವ್ಯವಸ್ಥೆ ಮಾಡಲಾಗುತ್ತದೆ.

ಲೋಕಸಭೆಯ ಒಟ್ಟು ಕ್ಷೇತ್ರಗಳ ಶೇ.10ರಷ್ಟು ಅಂದರೆ 55 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಪಕ್ಷವು ಅಧಿಕೃತ ಪ್ರತಿಪಕ್ಷ ಸ್ಥಾನವನ್ನು ಪಡೆಯುತ್ತದೆ. ಆ ಪಕ್ಷದ ನಾಯಕ ಪ್ರತಿಪಕ್ಷ ನಾಯಕರಾಗುತ್ತಾರೆ. ಆದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 44 ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ 52 ಕ್ಷೇತ್ರ ಗೆದ್ದ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ಖಾಲಿ ಇತ್ತು. ಈ ಬಾರಿ 99 ಕ್ಷೇತ್ರಗಳನ್ನು ಗೆದ್ದಿರುವ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: Rahul Gandhi: ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್;‌ ಸ್ಪೀಕರ್‌ ಮಾಡಿದ್ರಾ?

Continue Reading

ದೇಶ

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Bridge Collapse: ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭೂತಾಹಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆಯು ಕುಸಿದಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. 2021ರಿಂದಲೂ ಕೇವಲ 75 ಮೀಟರ್‌ ಉದ್ದದ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಲೇ ಇದೆ.

VISTARANEWS.COM


on

Bridge Collapse
Koo

ಪಟನಾ: ಬಿಹಾರದಲ್ಲಿ (Bihar) ಕಳಪೆ ಕಾಮಗಾರಿಗಳು, ಸರ್ಕಾರದ ಕಾಮಗಾರಿಗಳಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರದ ಆರೋಪ ಕೇಳಿಬರುತ್ತಲೇ ಇವೆ. ಅದರಲ್ಲೂ, ಕಳೆದ ಕೆಲ ದಿನಗಳಲ್ಲಿ ಸಾಲು ಸಾಲು ನಿರ್ಮಾಣ ಹಂತದ ಸೇತುವೆಗಳು ಕುಸಿಯುತ್ತಿರುವುದು (Bridge Collapse) ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿಯಾಗಿದೆ. ಇದರ ಬೆನ್ನಲ್ಲೇ, ಶುಕ್ರವಾರ (ಜೂನ್‌ 28) ಬಿಹಾರದ ಮಧುಬನಿ (Madhubani Region) ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆಯೊಂದು ಕುಸಿದಿದೆ. ಆ ಮೂಲಕ ಕಳೆದ 9 ದಿನದಲ್ಲಿ ಬಿಹಾರದಲ್ಲಿಯೇ 5 ಸೇತುವೆಗಳು ಕುಸಿದಂತಾಗಿದೆ.

ಮಧುಬನಿ ಜಿಲ್ಲೆಯ ಭೇಜಾ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭೂತಾಹಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗುತ್ತಿದ್ದ ಸೇತುವೆಯು ಕುಸಿದಿದೆ. ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. 2021ರಿಂದಲೂ ಕೇವಲ 75 ಮೀಟರ್‌ ಉದ್ದದ ಸೇತುವೆ ನಿರ್ಮಾಣ ಕಾಮಗಾರಿ ನಡೆಯುತ್ತಲೇ ಇದೆ. ಸೇತುವೆ ನಿರ್ಮಾಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ, ಇದಕ್ಕಾಗಿಯೇ ವಿಳಂಬವಾಗುತ್ತಿದೆ ಎಂಬುದಾಗಿ ಸ್ಥಳೀಯರು ಆರೋಪಿಸುತ್ತಿದ್ದರೂ ಅಧಿಕಾರಿಗಳು ಗಮನ ಹರಿಸಿಲ್ಲ. ಈಗ ಸೇತುವೆಯು ನಿರ್ಮಾಣ ಹಂತದಲ್ಲಿಯೇ ಕುಸಿದಿರುವುದು ಜನರ ಆಕ್ರೋಶವನ್ನು ಕೆರಳಿಸಿದೆ.

ಬಿಹಾರ ರಾಜ್ಯದಲ್ಲಿ ಒಂದರ ಹಿಂದೆ ಒಂದರಂತೆ ಸೇತುವೆಗಳು ಕುಸಿಯುತ್ತಿರುವುದಕ್ಕೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಬಿಹಾರದಲ್ಲಿ ಸೇತುವೆ ಕುಸಿತದ ಪ್ರಕರಣಗಳು ಸುದ್ದಿಯಾಗುತ್ತಲೇ ಇವೆ. ಕಳೆದ 9 ದಿನಗಳಲ್ಲಿಯೇ ಇಂತಹ 5 ಪ್ರಕರಣಗಳು ಬೆಳಕಿಗೆ ಬಂದಿವೆ. ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರವು ಸೇತುವೆ ನಿರ್ಮಾಣದಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಹಾಗೂ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡುತ್ತಿದೆ. ಜನರ ದುಡ್ಡು ಹೀಗೆ ನೀರು ಪಾಲಾಗುತ್ತಿದ್ದರೂ ಮುಖ್ಯಮಂತ್ರಿಯು ಗಾಢ ನಿದ್ದೆಯಲ್ಲಿದ್ದಾರೆ” ಎಂಬುದಾಗಿ ಟೀಕಿಸಿದ್ದಾರೆ.

ಬಿಹಾರದಲ್ಲಿ ಕಳೆದ ಕೆಲ ದಿನಗಳಿಂದ ಸೇತುವೆ ಕುಸಿತದ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಗುರುವಾರವಷ್ಟೇ (ಜೂನ್‌ 27) ಕಿಶನ್‌ಗಂಜ್‌ ಜಿಲ್ಲೆಯಲ್ಲಿ ಸೇತುವೆಯೊಂದು ಕುಸಿದಿತ್ತು. ಜೂನ್‌ 23ರಂದು ಪೂರ್ವ ಚಂಪಾರಣ್‌ ಜಿಲ್ಲೆಯಲ್ಲಿ ಸಣ್ಣ ಸೇತುವೆಯೊಂದು ಕುಸಿದು ಅಧಿಕಾರಿಗಳು ಜನರ ಆಕ್ರೋಶಕ್ಕೆ ಗುರಿಯಾಗಿದ್ದರು. ಜೂನ್‌ 22ರಂದು ಕೂಡ ಸಿವಾನ್‌ ಜಿಲ್ಲೆಯಲ್ಲಿ ಸೇತುವೆ ಕುಸಿದಿತ್ತು. ಜೂನ್‌ 19ರಂದೂ ಅರಾತಿಯಾ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಧರೆಗುರುಳಿತ್ತು.  

ಇದನ್ನೂ ಓದಿ: ಬಾಲ್ಟಿಮೋರ್‌ ಸೇತುವೆ ಕುಸಿತ ಪ್ರಕರಣ; ಹಡಗಿನಲ್ಲಿದ್ದ ಭಾರತೀಯ ಸಿಬ್ಬಂದಿಯ ಸಮಯಪ್ರಜ್ಞೆಗೆ ಅಮೆರಿಕ ಅಧ್ಯಕ್ಷ ಬೈಡನ್ ಮೆಚ್ಚುಗೆ

Continue Reading
Advertisement
Kannada New Movie niveditha Shivarajkumar frefly cinema sudharani join
ಸಿನಿಮಾ2 mins ago

Kannada New Movie: ನಿವೇದಿತಾ ಶಿವರಾಜಕುಮಾರ್ ನಿರ್ಮಾಣದ ‘ಫೈರ್‌ಫ್ಲೈ’ ತಂಡ ಸೇರಿದ ಸುಧಾರಾಣಿ!

Actor Darshan
ಕರ್ನಾಟಕ21 mins ago

Actor Darshan: ಜೈಲಲ್ಲಿ ಮುದ್ದೆ-ಚಿಕನ್‌ ಸಾಂಬಾರ್‌ ಸವಿದ ದರ್ಶನ್;‌ ನಟನ ನೋಡಲು ಮುಗಿಬಿದ್ದ ಕೈದಿಗಳು!

Amarnath Yatra
ದೇಶ29 mins ago

Amarnath Yatra: ವ್ಯಾಪಕ ಬಿಗಿ ಭದ್ರತೆಯೊಂದಿಗೆ ಈ ಬಾರಿಯ ಅಮರನಾಥ ಯಾತ್ರೆ ಆರಂಭ; ಪವಿತ್ರ ಗುಹೆಯತ್ತ ಹೊರಟ ಮೊದಲ ತಂಡ

BBMP Scam
ಬೆಂಗಳೂರು53 mins ago

BBMP Scam: ನಕಲಿ ಸೊಸೈಟಿಗಳಿಗೆ ಬಿಬಿಎಂಪಿ 102 ಕೋಟಿ ರೂ. ವರ್ಗಾವಣೆ; ಬಯಲಾಯ್ತು ಮತ್ತೊಂದು ಹಗರಣ!

Assam Tour
ಪ್ರವಾಸ1 hour ago

Assam Tour: ಅಸ್ಸಾಂನ ಪೆಲ್ಲಿಂಗ್‌ನಲ್ಲಿ ಮೋಡಿ ಮಾಡುವ 8 ಆಕರ್ಷಕ ಸಂಗತಿಗಳಿವು

Ashada Month
ಧಾರ್ಮಿಕ1 hour ago

Ashada Month: ಆಷಾಢವನ್ನು ಅಶುಭ ತಿಂಗಳು ಅನ್ನುವುದೇಕೆ? ಇದಕ್ಕಿದೆ ವೈಜ್ಞಾನಿಕ ಕಾರಣ!

Mango Storage
ಆಹಾರ/ಅಡುಗೆ1 hour ago

Mango Storage: ಮಾವಿನ ಹಣ್ಣಿನ ಸೀಸನ್‌ ಮುಗಿದರೇನಂತೆ? ತಿಂಗಳ ಕಾಲ ಇದನ್ನು ಶೇಖರಿಸಿ ಇಡುವ ವಿಧಾನ ಇಲ್ಲಿದೆ

Rahul Gandhi
ದೇಶ1 hour ago

Rahul Gandhi: ರಾಹುಲ್‌ ಗಾಂಧಿ ಈಗ ಪ್ರತಿಪಕ್ಷ ನಾಯಕ; ಅವರಿಗಿರುವ ಅಧಿಕಾರ ಯಾವವು? ಸಂಬಳ ಎಷ್ಟು?

karnataka weather Forecast
ಮಳೆ2 hours ago

Karnataka Weather : ಕರಾವಳಿಯಲ್ಲಿ ಮುಂಗಾರು ಪ್ರಬಲ; ಮುಂದುವರಿಯಲಿದೆ ಮಳೆ ಅಬ್ಬರ

Bridge Collapse
ದೇಶ2 hours ago

Bridge Collapse: ಬಿಹಾರದಲ್ಲಿ ಮತ್ತೊಂದು ನಿರ್ಮಾಣ ಹಂತದ ಸೇತುವೆ ಕುಸಿತ; 9 ದಿನದಲ್ಲಿ 5ನೇ ಪ್ರಕರಣ!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ14 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ21 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌