ವಿಸ್ತಾರ TOP 10 NEWS | ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆ- ವಿಸ್ತಾರ ನ್ಯೂಸ್‌ ಅಭಿಯಾನ ಆರಂಭ ಸೇರಿದಂತೆ ಪ್ರಮುಖ ಸುದ್ದಿಗಳು - Vistara News

ಕರ್ನಾಟಕ

ವಿಸ್ತಾರ TOP 10 NEWS | ನಮ್ಮೂರ ಶಾಲೆ ನಮ್ಮೆಲ್ಲರ ಶಾಲೆ- ವಿಸ್ತಾರ ನ್ಯೂಸ್‌ ಅಭಿಯಾನ ಆರಂಭ ಸೇರಿದಂತೆ ಪ್ರಮುಖ ಸುದ್ದಿಗಳು

ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆದ ಎಲ್ಲ ವಿದ್ಯಮಾನಗಳಲ್ಲಿ ಆಯ್ದ ಟಾಪ್‌ 10 ಸುದ್ದಿಗಳ ಗುಚ್ಛ ಇದು.

VISTARANEWS.COM


on

Vistara Top 10 News 19-11
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯದ ಮಾಧ್ಯಮ ಇತಿಹಾಸದಲ್ಲೇ ಅತ್ಯಂತ ವಿಶೇಷವಾದ ಅಭಿಯಾನವೊಂದನ್ನು ವಿಸ್ತಾರ ನ್ಯೂಸ್‌ ಅರಂಭಿಸಿದೆ. ಸಾರ್ವಜನಿಕರು ಮತ್ತು ದಾನಿಗಳ ನೆರವಿನಿಂದ ಸರ್ಕಾರಿ ಶಾಲೆಗಳ ಗುಣಮಟ್ಟ ಮತ್ತು ಮೂಲ ಸೌಕರ್ಯವನ್ನು ಎತ್ತರಕ್ಕೇರಿಸುವ ʻನಮ್ಮೂರ ಶಾಲೆ ನಮ್ಮೆಲ್ಲರ ಶಾಲೆʼ ಅಭಿಯಾನಕ್ಕೆ ಶನಿವಾರ ರಾಜ್ಯದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಚಾಲನೆ ನೀಡಿದರು. ಮತದಾರರ ಮಾಹಿತಿ ಕಳವು ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ಹಾಗೂ ಬಿಜೆಪಿ ನಡುವಿನ ಸಂಘರ್ಷ ಶನಿವಾರ ಮತ್ತಷ್ಟು ತೀವ್ರಗೊಂಡಿತು. ದಕ್ಷಿಣ ಮತ್ತು ಉತ್ತರ ಭಾರತವನ್ನು ಬೆಸೆಯುವ ಕಾಶಿ ತಮಿಳು ಸಂಗಮಂಗೆ ಮೋದಿ ಚಾಲನೆ ನೀಡಿದರೆ, ನಾಳೆಯಿಂದ ಆರಂಭವಾಗಲಿರುವ ಜಾಗತಿಕ ಫುಟ್ಬಾಲ್‌ ಕದನವನ್ನು ತುಂಬಿಕೊಳ್ಳಲು ಜಗತ್ತು ಅಣಿಯಾಗಿದೆ. ಇಂಥ ಹಲವು ಪ್ರಮುಖ ಸುದ್ದಿಗಳ ಗುಚ್ಛವೇ ವಿಸ್ತಾರ TOP ೧೦ NEWS.

೧. ನಮ್ಮೂರ ಶಾಲೆ, ನಮ್ಮೆಲ್ಲರ ಶಾಲೆ ಅಭಿಯಾನ ಸಕಾರಾತ್ಮಕ ಭಾಗೀದಾರಿಕೆಯ ಮಾದರಿ ಎಂದ ಶಿಕ್ಷಣ ಸಚಿವರು
ಸಮಾಜ ಬೆಳೆಯಬೇಕಾದರೆ ಶಿಕ್ಷಣ ಕ್ಷೇತ್ರ ಬೆಳೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳ ಮೂಲಸೌಕರ್ಯಗಳಿಗೆ ನೆರವಾಗುವ ʼನಮ್ಮೂರ ಶಾಲೆ, ನಮ್ಮೆಲ್ಲರ ಶಾಲೆʼ ಅಭಿಯಾನ ಆರಂಭಿಸುತ್ತಿರುವುದು ಸಕಾರಾತ್ಮಕ ಕಾರ್ಯಕ್ರಮ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ. ಅವರು ವಿಸ್ತಾರ ನ್ಯೂಸ್‌ ವಾಹಿನಿ ಆರಂಭಿಸುತ್ತಿರುವ ʼನಮ್ಮೂರ ಶಾಲೆ, ನಮ್ಮೆಲ್ಲರ ಶಾಲೆʼ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು. ಪೂರ್ಣ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ

ವಿಸ್ತಾರ ನ್ಯೂಸ್‌ನ ʼನಮ್ಮೂರ ಶಾಲೆ, ನಮ್ಮೆಲ್ಲರ ಶಾಲೆʼ ಅಭಿಯಾನದ ಉದ್ದೇಶವೇನು? ಹೇಗೆ ನಡೆಯುತ್ತದೆ?

೨. Voter data | ಸಿಎಂ ಬೊಮ್ಮಾಯಿ ಹಗರಣದ ರಿಯಲ್‌ ಕಿಂಗ್‌ ಪಿನ್‌ ಎಂದ ಕಾಂಗ್ರೆಸ್‌, ರಾಜೀನಾಮೆಗೆ ಒತ್ತಾಯ
ಬೆಂಗಳೂರು:
ಮತದಾರರ ಮಾಹಿತಿ ಕಳವು ಮತ್ತು ಮತದಾರರ ಪಟ್ಟಿಯಿಂದ ಹೆಸರುಗಳನ್ನು ಡಿಲೀಟ್‌ ಮಾಡಿರುವ ಪ್ರಕರಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಕಿಂಗ್‌ ಪಿನ್‌ ಎಂದು ಕಾಂಗ್ರೆಸ್‌ ನೇರ ಆರೋಪ ಮಾಡಿದೆ. ಇಷ್ಟೆಲ್ಲ ದಾಖಲೆಗಳಿದ್ದರೂ ಮುಖ್ಯಮಂತ್ರಿಗಳ ವಿರುದ್ಧ ಕೇಸು ದಾಖಲಾಗಿಲ್ಲ, ಬಿಬಿಎಂಪಿ ಕಮೀಷನರ್‌ ಮೇಲೆ ಕೇಸು ದಾಖಲಾಗಿಲ್ಲ. ಈ ಪ್ರಕರಣದ ಮೊದಲ ಮತ್ತು ಎರಡನೇ ಆರೋಪಿಗಳಾಗಿರುವ ಇವರ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್‌ ಕೆಂಡ ಕಾರಿದೆ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ

೩. ಮಾವನ ಮನೆಯಲ್ಲಿ ದಾಖಲೆ ಬಚ್ಚಿಟ್ಟು ಪರಾರಿ ಆದ ರವಿಕುಮಾರ್‌ ನಿಜಕ್ಕೂ ಯಾರು? ಸಮಗ್ರ ವಿವರ
ರಾಜ್ಯಾದ್ಯಂತ ಭಾರಿ ಸುದ್ದಿಯಲ್ಲಿರುವ ಚಿಲುಮೆ ಗ್ರೂಪ್ಸ್‌ನ ಮಾಲೀಕ ರವಿಕುಮಾರ್‌ ಮತ್ತು ಅವರ ಸಹೋದರ ಕೆಂಪೇಗೌಡ ಅವರ ಇತಿಹಾಸ ಮತ್ತು ಕೆಲವೊಂದು ಅಕ್ರಮಗಳ (Voter data) ಬಗ್ಗೆ ಸಾಕಷ್ಟು ಮಾಹಿತಿಗಳು ಬಯಲಾಗಿವೆ. ಈ ಇಬ್ಬರು ಆರೋಪಿಗಳು ತಮ್ಮ ಮೇಲೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗುತಿದ್ದಂತೆಯೇ ದಾಖಲೆಗಳನ್ನೆಲ್ಲ ತಮ್ಮ ಮಾವನ ತೋಟದ ಮನೆಯಲ್ಲಿ ಅಡಗಿಸಿಟ್ಟು ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಈಗ ಅಣ್ಣ, ತಮ್ಮಂದಿರ ಪತ್ನಿಯರನ್ನು ಪೊಲೀಸರು ತೀವ್ರ ವಿಚಾರಣೆಗೆ ಗುರಿಪಡಿಸಿದ್ದು ಅವರಿಗೆ ಸಂಕಷ್ಟ ಎದುರಾಗಿದೆ. ಪೂರ್ಣ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ

೪. ದಕ್ಷಿಣ ಹಾಗೂ ಉತ್ತರ ಭಾರತ ಬೆಸೆಯುವ ಕಾಶಿ ತಮಿಳು ಸಂಗಮಂಗೆ ಮೋದಿ ಚಾಲನೆ
ಉತ್ತರ ಪ್ರದೇಶದ ವಾರಾಣಸಿಯಲ್ಲಿ ದಕ್ಷಿಣ ಭಾರತ ಹಾಗೂ ಉತ್ತರ ಭಾರತದ ನಡುವಿನ ವಿಶೇಷ ನಂಟು, ಕಲೆ, ಆಚಾರ, ವಿಚಾರ, ಸಂಸ್ಕೃತಿಯಲ್ಲಿರುವ ಸಮಾನ ಅಂಶಗಳು, ಪುರಾತನ ಬೆಸುಗೆ ಕುರಿತು ಅರಿಯುವ, ಅಧ್ಯಯನ ನಡೆಸುವ, ಇತಿಹಾಸಕ್ಕೆ ಎಡತಾಕುವ ವಿಶೇಷ “ಕಾಶಿ ತಮಿಳು ಸಂಗಮಂ”ಗೆ (Kashi Tamil Sangamam) ಪ್ರಧಾನಿ ನರೇಂದ್ರ ಮೋದಿ ಅವರು ಕಾಶಿಯಲ್ಲಿ ಚಾಲನೆ ನೀಡಿದ್ದಾರೆ. ಪೂರ್ಣ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ

5. ಬಿಲ್ಲವ, ಈಡಿಗಕ್ಕೆ 2ಎ ಮೀಸಲಾತಿ ಹೆಚ್ಚಳಕ್ಕಾಗಿ ಮಂಗಳೂರು to ಬೆಂಗಳೂರು ಪಾದಯಾತ್ರೆ
ರಾಜ್ಯದಲ್ಲಿ ಮೀಸಲಾತಿ ಕೂಗು ದಿನೇ ದಿನೆ ಹೆಚ್ಚಾಗುತ್ತಿದೆ. ಒಂದು ಸಮುದಾಯಕ್ಕೆ, ವರ್ಗಕ್ಕೆ ಮೀಸಲಾತಿ (Reservation in Karnataka) ಸಿಗುತ್ತಿದ್ದಂತೆ ಇನ್ನೊಂದು, ಮಗದೊಂದು ವರ್ಗಗಳು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಒತ್ತಡ ಹೇರುತ್ತಿವೆ. ಈಗ ಬಿಲ್ಲವ, ಈಡಿಗ, ನಾಮಧಾರಿ ಸಮಾಜಕ್ಕೆ 2ಎ ಮೀಸಲಾತಿ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜ. ೬ರಿಂದ ಮಂಗಳೂರಿನಿಂದ ಬೆಂಗಳೂರುವರೆಗೆ ಪಾದಯಾತ್ರೆಯನ್ನು ಹಮ್ಮಿಕೊಳ್ಳುತ್ತಿರುವುದಾಗಿ ಬ್ರಹ್ಮಶ್ರೀ ನಾರಾಯಣಗುರು ಶಕ್ತಿ ಪೀಠದ ಶ್ರೀ ಪ್ರಣವಾನಂದ ಸ್ವಾಮೀಜಿ ಹೇಳಿದರು. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

೬. ಸವಿಸ್ತಾರ ಅಂಕಣ | ಆರ್‌ಎಸ್‌ಎಸ್ ಚಿಂತನೆಗಳೊಂದಿಗೆ ಬಿಜೆಪಿ ನಾಯಕರ ಆಲೋಚನೆಗಳೇಕೆ ತಾಳೆ ಆಗುತ್ತಿಲ್ಲ?
ವಿಶ್ವದ ಅತ್ಯಂತ ದೊಡ್ಡ ಮಾನವ ಸಂಘಟನೆಯಾದ ಆರ್‌ಎಸ್‌ಎಸ್ ಪ್ರಮುಖರು ಒಂದು ಸಂದೇಶವನ್ನು ಹಲವು ವರ್ಷಗಳಿಂದ ಪುನರುಚ್ಚರಿಸುತ್ತಿದ್ದಾರೆ. ಆದರೆ ಬಿಜೆಪಿ ನಾಯಕರು ಅದನ್ನು ಇನ್ನೂ ಅರ್ಥ ಮಾಡಿಕೊಂಡಿಲ್ಲ ಎನ್ನುತ್ತಾರೆ ವಿಸ್ತಾರ ನ್ಯೂಸ್‌ ಪ್ರಧಾನ ಸಂಪಾದಕರಾದ ಹರಿಪ್ರಕಾಶ್‌ ಕೋಣೆಮನೆ ತಮ್ಮ ʻಸವಿಸ್ತಾರʼ ಅಂಕಣದಲ್ಲಿ. ಪೂರ್ಣ ಲೇಖನ ಓದಲು ಈ ಲಿಂಕ್‌ ಕ್ಲಿಕ್‌ ಮಾಡಿ

೭. ಬನ್ನಿ ನಮ್ಜೊತೆ ಕೆಲಸ ಮಾಡಿ, ಟ್ವಿಟರ್‌ನ ಮಾಜಿ ಉದ್ಯೋಗಿಗಳಿಗೆ ಕೂ ಆ್ಯಪ್ ಆಹ್ವಾನ
ಜಗತ್ತಿನ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಅವರು ಟ್ವಿಟರ್ (Twitter) ಖರೀದಿಸುತ್ತಿದ್ದಂತೆ, ಅರ್ಧದಷ್ಟು ಉದ್ಯೋಗಿಗಳನ್ನು ಮನೆಗೆ ಕಳುಹಿಸಿದ್ದಾರೆ. ಇದೀಗ, ಭಾರತದಲ್ಲಿ ಟ್ವಿಟರ್ ಎದುರಾಳಿ ಎನಿಸಿಕೊಂಡಿರುವ ಕೂ ಆ್ಯಪ್ (Koo App), ಟ್ವಿಟರ್‌ನಿಂದ ವಜಾಗೊಂಡಿರುವ ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

8. ಚಿಕ್ಕಮಗಳೂರಿನಲ್ಲಿ ಲವ್‌ ಜಿಹಾದ್‌ ಕೂಗು; ಹಿಂದು ಯುವತಿಯ ಫೋಟೊ ಹರಿಬಿಟ್ಟ ಮುಸ್ಲಿಂ ಯುವಕ
ಕಳೆದ 2 ತಿಂಗಳಿಂದ ಮೊಹಮ್ಮದ್‌ ರೋಫ್‌ ಎಂಬ ಕೊಪ್ಪ ಮೂಲದ ವ್ಯಕ್ತಿಯೊಬ್ಬ ಹಿಂದು ಯುವತಿಯೊಬ್ಬಳ ಖಾಸಗಿ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದಾನೆ. ಇದರ ಹಿಂದೆ ಲವ್‌ ಜಿಹಾದ್‌ (Love Jihad) ಸಂಚು ಇದೆ ಎಂದು ಯುವತಿಯ ಸಹೋದರ ಆರೋಪಿಸಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

೯. ಶ್ರದ್ಧಾ ಕೊಲೆ: ಮೆಹ್ರೌಲಿ ಕಾಡಿನಲ್ಲಿ ಪತ್ತೆಯಾದ ಮೂರು ಎಲುಬುಗಳು; ವಿಧಿ ವಿಜ್ಞಾನ ಲ್ಯಾಬ್​ಗೆ ರವಾನೆ
ದೆಹಲಿ ಶ್ರದ್ಧಾ ವಾಳ್ಕರ್​ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ವಿಷಯ ಬಹಿರಂಗಗೊಳ್ಳುತ್ತಿದೆ. ಅಫ್ತಾಬ್​ ಎಂಬ ವಿಕೃತ ಹಂತಕ ಶ್ರದ್ಧಾಳನ್ನು 35 ತುಂಡುಗಳನ್ನಾಗಿ ಕತ್ತರಿಸಿ, ದೆಹಲಿಯ ವಿವಿಧ ಕಡೆ ಎಸೆದಿದ್ದಾನೆ. ಆ ದೇಹದ ಭಾಗಗಳನ್ನು ಪತ್ತೆ ಮಾಡುವುದೇ ಪೊಲೀಸರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಇದೀಗ ಶ್ರದ್ಧಾ ಕೇಸ್​​ನಲ್ಲಿ ಮತ್ತೊಂದು ಬೆಳವಣಿಗೆಯಾಗಿದ್ದು, ಮೆಹ್ರೌಲಿ ಅರಣ್ಯದಲ್ಲಿ ಶ್ರದ್ಧಾಳ ಮೂರು ಮೂಳೆಗಳು ಪತ್ತೆಯಾಗಿವೆ. ಅವು ಶ್ರದ್ಧಾಳದ್ದೇ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

೧೦. ಇನ್ನು 29 ದಿನ ಫುಟ್ಬಾಲ್ ಅಭಿಮಾನಿಗಳು ನಿದ್ದೆ ಮಾಡುವುದಿಲ್ಲ! ಕಣ್ತುಂಬ ದೃಶ್ಯಕಾವ್ಯ!
ಬಿಸಿಲ ದೇಶವಾದ ಕತಾರಿನಲ್ಲಿ ನವೆಂಬರ್ 20ರಂದು ಆರಂಭವಾಗಿ ಮುಂದಿನ 29 ದಿನ ಜಗತ್ತಿನ ಅತೀ ದೊಡ್ಡ ಕ್ರೀಡಾಹಬ್ಬ ವೇದಿಕೆ ಏರಲಿದೆ. ಅದು ಫಿಫಾ ವಿಶ್ವಕಪ್ ಫುಟ್ಬಾಲ್! ಕತಾರ್‌ನ 5 ನಗರಗಳ 8 ಕ್ರೀಡಾಂಗಣಗಳಲ್ಲಿ ಲಕ್ಷ ಲಕ್ಷ ಫುಟ್ಬಾಲ್ ಅಭಿಮಾನಿಗಳು ಸೇರಿ ಕುಣಿದು ಕುಪ್ಪಳಿಸುತ್ತಾರೆ. ಈ ವಿಶ್ವಕಪ್ ಫುಟ್ಬಾಲ್ ಒಂದು ಜಾಗತಿಕ ಆಕರ್ಷಣೆಯೇ ಸರಿ! ಒಂದು ಅದ್ಭುತ ಸೆಲೆಬ್ರೇಶನ್! ಒಂದು ಅದ್ಭುತ ವೈಬ್ರೇಶನ್! ಒಂದು ಅದ್ಭುತ ದೃಶ್ಯ ಕಾವ್ಯ!
ಪೂರ್ಣ ಲೇಖನಕ್ಕೆ ಈ ಲಿಂಕ್‌ ಕ್ಲಿಕ್‌ ಮಾಡಿ

ನೀವು ಓದಲೇಬೇಕಾದ ಇನ್ನಷ್ಟು ಕುತೂಹಲಕಾರಿ ಸುದ್ದಿಗಳು ಇಲ್ಲಿವೆ
೧. ವಿಶ್ವ ಪುರುಷರ ದಿನದ ಆಚರಣೆ ಏಕೆ? ಭಾರತದಲ್ಲಿ ಇದನ್ನು ಪ್ರಾರಂಭಿಸಿದ ಮಹಿಳೆ ಯಾರು?
2. ವಿಸ್ತಾರ Explainer | ಉಗ್ರರಿಗೆ ಹಣಕಾಸಿನ ನೆರವಿನ ವಿರುದ್ಧ ಭಾರತದ ಸಮರ! ನಿರೀಕ್ಷೆ, ಸವಾಲುಗಳೇನು?
೩. ವಾರದ ವ್ಯಕ್ತಿಚಿತ್ರ ಫೇಸ್‌ಬುಕ್‌ನ ಭಾರತೀಯ ಘಟಕದ ಹೊಸ ಸಾರಥಿ ಸಂಧ್ಯಾ ದೇವನಾಥನ್
೪. Kantara Movie | ನಟ ಕಮಲ್ ಹಾಸನ್‌ಗೆ ಕಮಾಲ್ ಮಾಡಿದ ಕಾಂತಾರ ಸಿನಿಮಾ!
5. ನಿಶ್ಚಿತಾರ್ಥ ಮಾಡಿಕೊಂಡ ಆಮಿರ್​ ಖಾನ್ ಪುತ್ರಿ ಇರಾ ಖಾನ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ

Uttara Kannada Landslide: ನೀರು ನುಗ್ಗಿದ ರಭಸದಿಂದ ಮೂರು ಮನೆಗಳು ನೆಲಸಮವಾಗಿವೆ. ಮನೆಯಲ್ಲಿದ್ದ ಸೀಥಿಗೌಡ (65) ಎನ್ನುವ ವೃದ್ಧೆ ನಾಪತ್ತೆಯಾಗಿದ್ದಾರೆ. 14 ಜನರಿಗೆ ಗಾಯವಾಗಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಎನ್‌ಡಿಆರ್‌ಎಫ್ ಹಾಗೂ ತಾಲೂಕು ಆಡಳಿತದಿಂದ ಮಹಿಳೆಗಾಗಿ ಶೋಧಕಾರ್ಯ ಆರಂಭವಾಗಿದೆ.

VISTARANEWS.COM


on

uttara kannada landslide shirur
Koo

ಕಾರವಾರ: ಅಂಕೋಲಾ- ಶಿರೂರು ಹೆದ್ದಾರಿಯಲ್ಲಿ (Ankola Shiruru Lanslide) ಗುಡ್ಡ ಕುಸಿದ (Uttara Kannada Landslide) ಪ್ರಕರಣದಲ್ಲಿ ಇನ್ನೊಂದು ಅವಾಂತರ ಉಂಟಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಗುಡ್ಡ ಕುಸಿತದಿಂದ ಭಾರಿ ಪ್ರಮಾಣದ ಮಣ್ಣು ಗಂಗಾವಳಿ ನದಿಗೆ (Gangavali River) ಬಿದ್ದ ಪರಿಣಾಮ ನದಿ ಬದಿಯ ಉಳುವರೆ ಗ್ರಾಮಕ್ಕೂ ಡ್ಯಾಮೇಜ್ ಆಗಿದೆ. ಸುನಾಮಿ ಅಲೆಯ ರೀತಿ ಗ್ರಾಮಕ್ಕೆ ನೀರು ನುಗ್ಗಿದ್ದು, ನೀರಿನ ರಭಸಕ್ಕೆ ಮೂರು ಮನೆಗಳು ನಾಶವಾಗಿ (homes collapse) ಮಹಿಳೆಯೊಬ್ಬರು (Woman swept) ಕೊಚ್ಚಿಹೋಗಿದ್ದಾರೆ.

ನೀರು ನುಗ್ಗಿದ ರಭಸದಿಂದ ಮೂರು ಮನೆಗಳು ನೆಲಸಮವಾಗಿವೆ. ಮನೆಯಲ್ಲಿದ್ದ ಸೀಥಿಗೌಡ (65) ಎನ್ನುವ ವೃದ್ಧೆ ನಾಪತ್ತೆಯಾಗಿದ್ದಾರೆ. 14 ಜನರಿಗೆ ಗಾಯವಾಗಿದ್ದು, ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದೆ. ಎನ್‌ಡಿಆರ್‌ಎಫ್ ಹಾಗೂ ತಾಲೂಕು ಆಡಳಿತದಿಂದ ಮಹಿಳೆಗಾಗಿ ಶೋಧಕಾರ್ಯ ಆರಂಭವಾಗಿದೆ.

ಕುಮಟ ತಾಲ್ಲೂಕು ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗಿದೆ. ಉಳುವರೆ ಗ್ರಾಮದ ಗಣಪತಿ ಬೊಮ್ಮಾ ಗೌಡ, ಸಾವಿತ್ರಿ ನೀಲಾ ಗೌಡ, ದಿವ್ಯಾ ನೀಲಾ ಗೌಡ, ಆಶಾ ಮಂಗೇಶ ಗೌಡ, ಹರ್ಶಿತಾ ಗಣಪತಿ ಗೌಡ, ದಿಕ್ಷಾ ವಿನಾಯಕ ಗೌಡ, ದೀಪಾ ಹೂವಾ ಗೌಡ, ಧನ್ಯ ಹೂವಾ ಗೌಡ, ಹೂವಾ ಸೋಮಾ ಗೌಡ, ಸೋಮಾ ಅನಂತ ಗೌಡ, ಮಂಗೇಶ ಮಾಣಿ ಗೌಡ, ನೀಲಾ ಮುದ್ದು ಗೌಡ, ನಾಗೀ ಬೊಮ್ಮಾ ಗೌಡ, ತಮ್ಮಣ್ಣಿ ಅನಂತ ಗೌಡ ಗಾಯಗೊಂಡವರು.

ಸ್ಥಳಕ್ಕೆ ಅಂಕೋಲ ತಹಶೀಲ್ದಾರ್ ಅನಂತ ಶಂಕರ ಭೇಟಿ ನೀಡಿದ್ದಾರೆ. ಈಗಾಗಲೇ ನಾಲ್ಕು ಮೃತದೇಹ ಪತ್ತೆಯಾಗಿದೆ. ಇನ್ನಿಬ್ಬರಿಗಾಗಿ ಶೋಧ ನಡೆಯುತ್ತಿದೆ ಎಂದಿದ್ದಾರೆ. ಖಚಿತವಾಗಿ ಎಷ್ಟು ಜನ ಮಣ್ಣಿನಲ್ಲಿ ಸಿಲುಕಿದ್ದಾರೆ ಎಂಬ ಮಾಹಿತಿ ಇಲ್ಲ. ಎನ್‌ಡಿಆರ್‌ಎಫ್ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿಯಿಂದ ಮೃತದೇಹ ಹುಡುಕಾಟ ನಡೆಯುತ್ತಿದೆ‌. ನೀರಿನಲ್ಲಿ ಒಬ್ಬರ ಮೃತದೇಹ ಹೋಗಿರುವ ಶಂಕೆ ಇದೆ. ಮಣ್ಣಿನಲ್ಲಿ ಒಬ್ಬರು ಸಿಲುಕಿಕೊಂಡಿದ್ದಾರೆ ಎಂದಿದ್ದಾರೆ.

ತೆರವಾಗದ ಗುಡ್ಡದ ಮಣ್ಣು

ಶಿರಸಿ ತಾಲ್ಲೂಕಿನ ರಾಗಿಹೊಸಳ್ಳಿ ಬಳಿ ನಿನ್ನೆ ಗುಡ್ಡ ಜರಿದು ಅಪಾರ ಪ್ರಮಾಣದ ಮಣ್ಣು ಹೆದ್ದಾರಿಯ ಮೇಲೆ ಕೂತಿದ್ದು, ನಿನ್ನೆಯಿಂದ ಕಾರ್ಯಾಚರಣೆ ನಡೆಯುತ್ತಿದ್ದರೂ ತೆರವಾಗಿಲ್ಲ. ಇದರಿಂದ ಕುಮಟಾ- ಶಿರಸಿ ರಾಷ್ಟ್ರೀಯ ಹೆದ್ದಾರಿ 766EEಯಲ್ಲಿ ಸಂಚಾರ ಅಸ್ತವ್ಯಸ್ತವಾಗಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ತೆರವು ಕಾರ್ಯಾಚರಣೆಗೆ ಹಿನ್ನಡೆಯಾಗಿದೆ. ಹೆದ್ದಾರಿಯ ಸುಮಾರು 100 ಮೀಟರ್ ವ್ಯಾಪ್ತಿಯಲ್ಲಿ ಮರ ಸಹಿತ ಗುಡ್ಡ ಕುಸಿದಿದ್ದು, ಶಿರಸಿ-ಕುಮಟಾ ಹೆದ್ದಾರಿ ನಿನ್ನೆಯಿಂದ ಬಂದ್ ಆಗಿದೆ. ರಸ್ತೆ ಅಗಲೀಕರಣ ಹಿನ್ನೆಲೆಯಲ್ಲಿ ಗುಡ್ಡ ಕೊರೆಯಲಾಗಿತ್ತು. ಜೆಸಿಬಿ ಮೂಲಕ ನಿನ್ನೆಯಿಂದ ಮಣ್ಣು ತೆರವು ನಡೆಯುತ್ತಿದ್ದು, ಇನ್ನೂ 50 ಮೀಟರ್‌ನಷ್ಟು ಮಣ್ಣು ತೆರವು ಬಾಕಿಯಿದೆ.

ಶೃಂಗೇರಿಯಲ್ಲಿ ನೆರೆ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಕೆರೆಕಟ್ಟೆ, ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ತುಂಗಾ ನದಿ ಆರ್ಭಟದಿಂದ ಹರಿಯುತ್ತಿದೆ. ತುಂಗಾ ನದಿ ಅಬ್ಬರಕ್ಕೆ ಭಾರತಿ ತೀರ್ಥ ರಸ್ತೆ ಜಲಾವೃತವಾಗಿದ್ದು, ಪಟ್ಟಣದ ಗಾಂಧಿ ಮೈದಾನ ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ಅಂಗಡಿ ಮುಂಗಟ್ಟು, ಮನೆಗಳು ಜಲಾವೃತವಾಗಿವೆ. ಶೃಂಗೇರಿಯಲ್ಲಿ ನಿನ್ನೆಯಿಂದಲೂ ನೆರೆ ಪರಿಸ್ಥಿತಿ ತಗ್ಗಿಲ್ಲ. ಭಾರತಿ ತೀರ್ಥ ರಸ್ತೆ ಮುಳುಗಡೆ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಇದನ್ನೂ ಓದಿ: Landslide: ಶಿರೂರಿನಲ್ಲಿ ಕುಸಿದ ಗುಡ್ಡದಡಿ 5 ಶವ ಪತ್ತೆ, ಇನ್ನುಳಿದವರಿಗೆ ಹುಡುಕಾಟ; ಗೋಕರ್ಣದಲ್ಲೂ ಭೂಕುಸಿತ

Continue Reading

ಪ್ರಮುಖ ಸುದ್ದಿ

GT World Mall: ಪಂಚೆ ಧರಿಸಿ ಬಂದ ರೈತರಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ ಜಿಟಿ ವರ್ಲ್ಡ್‌ ಮಾಲ್‌

GT World Mall: ʼಪಂಚೆ ಧರಿಸಿದವರನ್ನು ಒಳಗೆ ಬಿಡುವುದಿಲ್ಲ, ಈ ಬಗ್ಗೆ ನಮಗೆ ಸೂಚನೆ ಇದೆʼ ಎಂದು ಸೆಕ್ಯುರಿಟಿ ಸಿಬ್ಬಂದಿ ಮುಖ್ಯಸ್ಥರು ಹೇಳಿದ್ದಾರೆ. ಯಾಕೆ ಬಿಡುವುದಿಲ್ಲ ಎಂದು ಮರುಪ್ರಶ್ನಿಸಿದ ರೈತರ ಮಗನಿಗೆ ʼನಿಮ್ಮ ಮೇಲೆ ಕೇಸ್‌ ಹಾಕುತ್ತೇವೆʼ ಎಂದು ಕೂಡ ಬೆದರಿಸಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

gt world mall
Koo

ಬೆಂಗಳೂರು: ಬೆಂಗಳೂರಿನ ಜಿಟಿ ವರ್ಲ್ಡ್‌ ಮಾಲ್‌ನಲ್ಲಿ (GT World Mall) ಪಂಚೆ (Dhoti) ಧರಿಸಿ ಬಂದ ರೈತರೊಬ್ಬರಿಗೆ ಮಾಲ್‌ ಸೆಕ್ಯುರಿಟಿ ಒಳಗೆ ಬಿಡದೆ ಅವಮಾನ (Insult) ಮಾಡಿ ಕಳಿಸಿದ ಘಟನೆ ನಡೆದಿದೆ.

ಬೆಂಗಳೂರಿನ ಮಾಗಡಿ ರಸ್ತೆಯ ಬಳಿ ಇರುವ ಜಿಟಿ ವರ್ಲ್ಡ್‌ ಮಾಲ್‌ಗೆ ಇಂದು ಬಂದ ರೈತರೊಬ್ಬರನ್ನು ಪಂಚೆ ಧರಿಸಿದ್ದಾರೆ ಎಂಬ ಕಾರಣದಿಂದ ಮಾಲ್‌ನ ಸಿಬ್ಬಂದಿ ಒಳಗೆ ಬಿಡಲಿಲ್ಲ. ಈ ಕುರಿತು ಪ್ರಶ್ನಿಸಿದಾಗ, ʼಪಂಚೆ ಧರಿಸಿದವರನ್ನು ಒಳಗೆ ಬಿಡುವುದಿಲ್ಲ, ಈ ಬಗ್ಗೆ ನಮಗೆ ಸೂಚನೆ ಇದೆʼ ಎಂದು ಸೆಕ್ಯುರಿಟಿ ಸಿಬ್ಬಂದಿ ಮುಖ್ಯಸ್ಥರು ಹೇಳಿದ್ದಾರೆ. ಯಾಕೆ ಬಿಡುವುದಿಲ್ಲ ಎಂದು ಮರುಪ್ರಶ್ನಿಸಿದ ರೈತರ ಮಗನಿಗೆ ʼನಿಮ್ಮ ಮೇಲೆ ಕೇಸ್‌ ಹಾಕುತ್ತೇವೆʼ ಎಂದು ಕೂಡ ಬೆದರಿಸಿದ್ದಾರೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ವಿಜಯನಗರದ ನಿವಾಸಿಯಾದ ನಾಗರಾಜ್ ಎಂಬವರ ತಂದೆ ಮೂಲತಃ ರೈತರಾಗಿದ್ದು ಅವರು ಹಾವೇರಿಯಿಂದ ಬೆಂಗಳೂರಿನಲ್ಲಿರುವ ಮಗನ ಮನೆಗೆ ಬಂದಿದ್ದರು. ಜು. 16ರಂದು ತಮ್ಮ ವೃದ್ಧ ತಂದೆಯವರಿಗೆ ಸಿನಿಮಾ ತೋರಿಸಿ ಖುಷಿಪಡಿಸಲು ನಿರ್ಧರಿಸಿದ ನಾಗರಾಜ್, ತಂದೆಯನ್ನು ಜಿಟಿ ಮಾಲ್‌ಗೆ ಕರೆದೊಯ್ದಿದ್ದರು. ಸಾಮಾನ್ಯವಾಗಿ ಪಂಚೆ ಉಡುವ ಹವ್ಯಾಸವಿರುವ ಅವರು ಎಂದಿನಂತೆಯೇ ಪಂಚೆ ಉಟ್ಟು ಮಗನ ಜೊತೆಗೆ ಮಾಲ್‌ಗೆ ತೆರಳಿದ್ದರು.

ಇದರಿಂದ ಆಕ್ರೋಶಗೊಂಡಿರುವ ರೈತ ವೇದಿಕೆಯ ಮುಖಂಡರು ಜಿಟಿ ವರ್ಲ್ಡ್‌ ಮಾಲ್‌ಗೆ ಪಂಚೆ ಧರಿಸಿ ಪ್ರವೇಶಿಸುವ ಹೋರಾಟ ಹಮ್ಮಿಕೊಳ್ಳಲು ನಿರ್ಧರಿಸಿದ್ದಾರೆ. ಪಂಚೆ ಧರಿಸಿದವರನ್ನು, ರೈತರನ್ನು ಕೀಳಾಗಿ ಕಾಣುವ ಈ ಮನೋಭಾವ ಕೊನೆಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಚಡ್ಡಿ ಧರಿಸಿ ಬಂದವರನ್ನು ಒಳಗೆ ಬಿಡುತ್ತೀರಿ, ಪಂಚೆ ಧರಿಸಿದ ರೈತರನ್ನು ಯಾಕೆ ಬಿಡುವುದಿಲ್ಲ ಎಂದು ಆಕ್ರೋಶಿತ ಜನತೆ ಸೋಶಿಯಲ್‌ ಮೀಡಿಯಾಗಳಲ್ಲಿ ಪ್ರಶ್ನಿಸಿದ್ದಾರೆ.

ಕೆಲವು ತಿಂಗಳ ಹಿಂದೆ ಪಂಚೆ ಧರಿಸಿ ಬಂದ ರೈತರೊಬ್ಬರನ್ನು ಮೆಟ್ರೋ ಸಿಬ್ಬಂದಿ ಒಳಗೆ ಬಿಟ್ಟಿರಲಿಲ್ಲ. ಇದು ಬಹಳ ದೊಡ್ಡ ಸುದ್ದಿಯಾಗಿತ್ತು. ಬಳಿಕ ಮೆಟ್ರೋ ಎಂಡಿಯೇ ಈ ಬಗ್ಗೆ ಕ್ಷಮೆ ಯಾಚಿಸಿ, ಹೀಗೆ ಮಾಡಿದ ಮೆಟ್ರೋ ಸಿಬ್ಬಂದಿಯ ಮೇಲೆ ಕ್ರಮ ಕೈಗೊಂಡಿದ್ದರು.

ಇಂದು ಬೆಂಗಳೂರಿನ ಡಬಲ್ ಡೆಕ್ಕರ್ ಫ್ಲೈಓವರ್‌ಗೆ ಚಾಲನೆ

ಬೆಂಗಳೂರು: ರಾಜಧಾನಿಯ ಬಹು ನಿರೀಕ್ಷಿತ 3.3 ಕಿಮೀ ಉದ್ದದ ಡಬಲ್ ಡೆಕ್ಕರ್ ಮೇಲ್ಸೇತುವೆ (Double-Decker Flyover), ದಕ್ಷಿಣ ಭಾರತದ (South India) ಮೊದಲ ಮೆಟ್ರೋ ಕಂ ಮೇಲ್ಸೇತುವೆ (Metro Cum Flyover) ಇಂದು (Inauguration) ಉದ್ಘಾಟನೆಗೊಳ್ಳಲಿದೆ. ಮಧ್ಯಾಹ್ನ 3 ಗಂಟೆಗೆ ಇದನ್ನು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DCM DK Shivakumar) ಉದ್ಘಾಟಿಸಲಿದ್ದಾರೆ. ಸಾರಿಗೆ ಸಚಿವ ಮತ್ತು ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ (Ramalinga Reddy) ಮತ್ತು ಶಾಸಕರು ಇರಲಿದ್ದಾರೆ.

ಈ ಫ್ಲೈಓವರ್‌ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (ಸಿಎಸ್‌ಬಿ) ಜಂಕ್ಷನ್‌ವರೆಗೆ (Silk Board Junction) ಜೋಡಿಸಲಿದೆ. ಈ ಡಬಲ್ ಡೆಕ್ಕರ್-ಫ್ಲೈಓವರ್ ಮೇಲಿನ ಡೆಕ್‌ನಲ್ಲಿ ಎಲಿವೇಟೆಡ್ ಮೆಟ್ರೋ ಕಾರಿಡಾರ್ ಇದೆ. ಕೆಳಗಿನ ಡೆಕ್‌ನಲ್ಲಿ ವಾಹನ ಸಂಚಾರಕ್ಕಾಗಿ ಎಲಿವೇಟೆಡ್ ರಸ್ತೆಯನ್ನು ಒಳಗೊಂಡಿದೆ. ವಾಹನ ದಟ್ಟಣೆಗಾಗಿ ಕುಖ್ಯಾತವಾಗಿರುವ ಸಿಎಸ್‌ಬಿ ಜಂಕ್ಷನ್‌ನಲ್ಲಿ ಟ್ರಾಫಿಕ್ ಅವ್ಯವಸ್ಥೆಯನ್ನು ಈ ಮೇಲ್ಸೇತುವೆ ಹಗುರಗೊಳಿಸಲಿದೆ.

ಫ್ಲೈಓವರ್ ನಿರ್ಮಿತವಾಗಿದ್ದರೂ ಅದನ್ನು ವಾಹನ ಸಂಚಾರಕ್ಕೆ ತೆರೆಯಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ವಿಳಂಬ ಮಾಡಿತ್ತು. ಬಲವಂತವಾಗಿ ತೆರೆಯುವುದಾಗಿ ಕಳೆದ ವಾರ ಎಎಪಿ ನಾಯಕರು ಎಚ್ಚರಿಕೆ ನೀಡಿದ್ದರು.

ಇದನ್ನೂ ಓದಿ: Steel Flyover: ಬೆಂಗಳೂರಿನ ಮೊದಲ ಸ್ಟೀಲ್‌ ಫ್ಲೈಓವರ್‌ ಸೇತುವೆಯಲ್ಲಿ ಬಿರುಕು

Continue Reading

ಪ್ರಮುಖ ಸುದ್ದಿ

Double-Decker Flyover: ಇಂದು ಬೆಂಗಳೂರಿನ ಡಬಲ್ ಡೆಕ್ಕರ್ ಫ್ಲೈಓವರ್‌ಗೆ ಚಾಲನೆ; ದಕ್ಷಿಣ ಭಾರತದ ಪ್ರಥಮ ಮೆಟ್ರೋ ಕಂ ಮೇಲ್ಸೇತುವೆ

Double-Decker Flyover: ಈ ಫ್ಲೈಓವರ್‌ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (ಸಿಎಸ್‌ಬಿ) ಜಂಕ್ಷನ್‌ವರೆಗೆ (Silk Board Junction) ಜೋಡಿಸಲಿದೆ. ಈ ಡಬಲ್ ಡೆಕ್ಕರ್-ಫ್ಲೈಓವರ್ ಮೇಲಿನ ಡೆಕ್‌ನಲ್ಲಿ ಎಲಿವೇಟೆಡ್ ಮೆಟ್ರೋ ಕಾರಿಡಾರ್ ಇದೆ. ಕೆಳಗಿನ ಡೆಕ್‌ನಲ್ಲಿ ವಾಹನ ಸಂಚಾರಕ್ಕಾಗಿ ಎಲಿವೇಟೆಡ್ ರಸ್ತೆಯನ್ನು ಒಳಗೊಂಡಿದೆ.

VISTARANEWS.COM


on

Double-Decker Flyover
Koo

ಬೆಂಗಳೂರು: ರಾಜಧಾನಿಯ ಬಹು ನಿರೀಕ್ಷಿತ 3.3 ಕಿಮೀ ಉದ್ದದ ಡಬಲ್ ಡೆಕ್ಕರ್ ಮೇಲ್ಸೇತುವೆ (Double-Decker Flyover), ದಕ್ಷಿಣ ಭಾರತದ (South India) ಮೊದಲ ಮೆಟ್ರೋ ಕಂ ಮೇಲ್ಸೇತುವೆ (Metro Cum Flyover) ಇಂದು (Inauguration) ಉದ್ಘಾಟನೆಗೊಳ್ಳಲಿದೆ. ಮಧ್ಯಾಹ್ನ 3 ಗಂಟೆಗೆ ಇದನ್ನು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DCM DK Shivakumar) ಉದ್ಘಾಟಿಸಲಿದ್ದಾರೆ. ಸಾರಿಗೆ ಸಚಿವ ಮತ್ತು ಬಿಟಿಎಂ ಲೇಔಟ್ ಶಾಸಕ ರಾಮಲಿಂಗಾ ರೆಡ್ಡಿ (Ramalinga Reddy) ಮತ್ತು ಶಾಸಕರು ಇರಲಿದ್ದಾರೆ.

ಈ ಫ್ಲೈಓವರ್‌ ರಾಗಿಗುಡ್ಡದಿಂದ ಸೆಂಟ್ರಲ್ ಸಿಲ್ಕ್ ಬೋರ್ಡ್ (ಸಿಎಸ್‌ಬಿ) ಜಂಕ್ಷನ್‌ವರೆಗೆ (Silk Board Junction) ಜೋಡಿಸಲಿದೆ. ಈ ಡಬಲ್ ಡೆಕ್ಕರ್-ಫ್ಲೈಓವರ್ ಮೇಲಿನ ಡೆಕ್‌ನಲ್ಲಿ ಎಲಿವೇಟೆಡ್ ಮೆಟ್ರೋ ಕಾರಿಡಾರ್ ಇದೆ. ಕೆಳಗಿನ ಡೆಕ್‌ನಲ್ಲಿ ವಾಹನ ಸಂಚಾರಕ್ಕಾಗಿ ಎಲಿವೇಟೆಡ್ ರಸ್ತೆಯನ್ನು ಒಳಗೊಂಡಿದೆ. ವಾಹನ ದಟ್ಟಣೆಗಾಗಿ ಕುಖ್ಯಾತವಾಗಿರುವ ಸಿಎಸ್‌ಬಿ ಜಂಕ್ಷನ್‌ನಲ್ಲಿ ಟ್ರಾಫಿಕ್ ಅವ್ಯವಸ್ಥೆಯನ್ನು ಈ ಮೇಲ್ಸೇತುವೆ ಹಗುರಗೊಳಿಸಲಿದೆ.

ಫ್ಲೈಓವರ್ ನಿರ್ಮಿತವಾಗಿದ್ದರೂ ಅದನ್ನು ವಾಹನ ಸಂಚಾರಕ್ಕೆ ತೆರೆಯಲು ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್‌ಸಿಎಲ್) ವಿಳಂಬ ಮಾಡಿತ್ತು. ಬಲವಂತವಾಗಿ ತೆರೆಯುವುದಾಗಿ ಕಳೆದ ವಾರ ಎಎಪಿ ನಾಯಕರು ಎಚ್ಚರಿಕೆ ನೀಡಿದ್ದರು.

ಮೇಲ್ಸೇತುವೆಯ ಲೂಪ್‌ಗಳು ಮತ್ತು ಇಳಿಜಾರುಗಳ ನಿರ್ಮಾಣವನ್ನು M/s ಅಫ್ಕಾನ್ಸ್ ಇನ್‌ಫ್ರಾಸ್ಟ್ರಕ್ಚರ್ ಲಿಮಿಟೆಡ್‌ ಕಾರ್ಯಗತಗೊಳಿಸಿದೆ. ರಾಗಿಗುಡ್ಡದಿಂದ ಡಬ್ಬಲ್ ಡೆಕ್ಕರ್ ಮೇಲ್ಸೇತುವೆ ಮೂಲಕ ಬರುವ ವಾಹನ ಬಳಕೆದಾರರು ಎ ರ‍್ಯಾಂಪ್ ಮೂಲಕ ಹೊಸೂರು ರಸ್ತೆ ಮತ್ತು ಸಿ ರ‍್ಯಾಂಪ್ ಮೂಲಕ ಎಚ್ಎಸ್ಆರ್ ಲೇಔಟ್ ತಲುಪುತ್ತಾರೆ.

ನೆಲಮಟ್ಟದಲ್ಲಿರುವ ರ‍್ಯಾಂಪ್ ಬಿ, ಬಿಟಿಎಂ ಬದಿಯಿಂದ ಹೊರವರ್ತುಲ ರಸ್ತೆ ಮತ್ತು ಹೊಸೂರು ರಸ್ತೆಯನ್ನು ಪ್ರವೇಶಿಸಲು ರ‍್ಯಾಂಪ್ ಎ ಅನ್ನು ಸಂಪರ್ಕಿಸುತ್ತದೆ. ಎಚ್‌ಎಸ್‌ಆರ್ ಲೇಔಟ್‌ನಿಂದ ಬರುವವರು ರ‍್ಯಾಂಪ್ ಎ ಮತ್ತು ಹಳದಿ ಲೈನ್ ಮೆಟ್ರೋ ಲೈನ್‌ನ ಮೇಲೆ ಹಾದು ಹೋಗುವ ರ‍್ಯಾಂಪ್ ಡಿ ಮೂಲಕ ರಾಗಿಗುಡ್ಡ ಕಡೆಗೆ ತಲುಪಲು ಸಾಧ್ಯವಾಗುತ್ತದೆ ಮತ್ತು ಬಿಟಿಎಂ ಲೇಔಟ್‌ಗೆ ಪ್ರವೇಶಿಸಲು ಡೌನ್ ರ‍್ಯಾಂಪ್ ಇಯೊಂದಿಗೆ ಮುಂದುವರಿಯುತ್ತದೆ.

ರ‍್ಯಾಂಪ್ ಎ ಮತ್ತು ರ‍್ಯಾಂಪ್ ಬಿ ಎರಡೂ ಅಸ್ತಿತ್ವದಲ್ಲಿರುವ ಮಡಿವಾಳ ಮೇಲ್ಸೇತುವೆಯ ಮೇಲೆ ವಿಲೀನಗೊಳ್ಳುತ್ತವೆ. ಇವು ಅತ್ಯಂತ ಜನನಿಬಿಡ ರಾಷ್ಟ್ರೀಯ ಹೆದ್ದಾರಿ (NH-44) ನಲ್ಲಿ ನಿರಂತರವಾಗಿ ಮುಂದುವರಿಯುತ್ತವೆ. ಇವು ನಾಲ್ಕು ನಿರಂತರ ವೇಗಳನ್ನು ಒಳಗೊಂಡಿವೆ.

ರಾಗಿಗುಡ್ಡದಿಂದ ಸಿಎಸ್‌ಬಿ ಜಂಕ್ಷನ್‌ವರೆಗೆ ಹಳದಿ ಮಾರ್ಗದ ಮೆಟ್ರೋಗಾಗಿ ರಸ್ತೆ ಮೇಲ್ಸೇತುವೆಯ ಮೊದಲ ಹಂತವನ್ನು ಈಗಾಗಲೇ ನಿರ್ಮಿಸಲಾಗಿದೆ. BMRCL ಪ್ರಕಾರ, A, B ಮತ್ತು C ರ್ಯಾಂಪ್‌ಗಳು ಮೇ 2024ರೊಳಗೆ ಪೂರ್ಣಗೊಂಡು ಕಾರ್ಯಾರಂಭಿಸಬೇಕಿತ್ತು. D ಮತ್ತು E ರ‍್ಯಾಂಪ್‌ಗಳನ್ನು ಡಿಸೆಂಬರ್ 2024ರೊಳಗೆ ಕಾರ್ಯಾರಂಭ ಮಾಡಲಾಗುತ್ತದೆ.

ಇದನ್ನೂ ಓದಿ: Steel Flyover: ಬೆಂಗಳೂರಿನ ಮೊದಲ ಸ್ಟೀಲ್‌ ಫ್ಲೈಓವರ್‌ ಸೇತುವೆಯಲ್ಲಿ ಬಿರುಕು

Continue Reading

ಉತ್ತರ ಕನ್ನಡ

Landslide: ಶಿರೂರಿನಲ್ಲಿ ಕುಸಿದ ಗುಡ್ಡದಡಿ 5 ಶವ ಪತ್ತೆ, ಇನ್ನುಳಿದವರಿಗೆ ಹುಡುಕಾಟ; ಗೋಕರ್ಣದಲ್ಲೂ ಭೂಕುಸಿತ

Landslide: ಭೂಕುಸಿತ ಪ್ರದೇಶದಲ್ಲೇ ಸಡಿಲಗೊಂಡಿರುವ ಗುಡ್ಡ ಮತ್ತೆ ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲೂ ಮತ್ತೆ ಕುಸಿಯುವ ಸಾಧ್ಯತೆ ಕಂಡುಬಂದಿದೆ. ಗುಡ್ಡದ ಮದ್ಯ ಭಾಗದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ರಸ್ತೆಯ ಪಕ್ಕದಲ್ಲಿರುವ ಹೊಳೆಗೆ ಮಣ್ಣನ್ನು ಒಯ್ಯುತ್ತಿದೆ.

VISTARANEWS.COM


on

landslide Karnataka Rain
Koo

ಕಾರವಾರ: ಅಂಕೋಲಾ ಶಿರೂರು ಬಳಿ ಹೆದ್ದಾರಿಯಲ್ಲಿ (Highway landslide) ಭಾರಿ ಗುಡ್ಡ ಕುಸಿದು (Uttarakannada landslide) ಹತ್ತು ಮಂದಿ ನಾಪತ್ತೆಯಾದ ಘೋರ ದುರಂತದ ಸ್ಥಳದಲ್ಲಿ ಐದು ಶವಗಳು ಪತ್ತೆಯಾಗಿವೆ. ಇಂದು ಮುಂಜಾನೆಯಿಂದ ಮತ್ತೆ ಶವ ಪತ್ತೆ ಕಾರ್ಯಾಚರಣೆ ಆರಂಭಿಸಲಾಗಿದೆ.

ಎರಡು ಹಿಟಾಚಿ, ಎರಡು ಜೆಸಿಬಿ ಯಂತ್ರಗಳ ಮೂಲಕ ಗುಡ್ಡದ ಮಣ್ಣು ತೆರವು ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ. ಕಾರ್ಯಾಚರಣೆಯಲ್ಲಿ ಎನ್‌ಡಿಆರ್‌ಎಫ್ ತಂಡ ಪಾಲ್ಗೊಂಡಿದೆ. ಈಗಾಗಲೇ ಐದು ಮೃತದೇಹಗಳು ಪತ್ತೆಯಾಗಿವೆ. ಮತ್ತಷ್ಟು ಜನ ಮಣ್ಣಿನಲ್ಲಿ ಸಿಲುಕಿಕೊಂಡಿರುವ ಸಾಧ್ಯತೆ ಇದೆ. ಹತ್ತು ಮಂದಿ ಮಣ್ಣಿನೊಳಗೆ ಸಿಲುಕಿದ್ದಾರೆ ಎಂದು ಶಂಕಿಸಲಾಗಿತ್ತು. ನಿನ್ನೆ ಮಹಿಳೆಯೊಬ್ಬರ ಶವ ದೊರೆತಿತ್ತು. ನಿನ್ನೆ ಕತ್ತಲಾದ್ದರಿಂದ ಹಾಗೂ ಮಳೆಯ ಕಾರಣ ಕಾರ್ಯಾಚರಣೆ ನಿಲ್ಲಿಸಲಾಗಿತ್ತು.

ಗುಡ್ಡದ ಮಣ್ಣು ಹೆದ್ದಾರಿಗೆ ಭಾರಿ ಪ್ರಮಾಣದಲ್ಲಿ ಕುಸಿದಿದೆ. ತೆರವು ಕಾರ್ಯಾಚರಣೆಗೆ ಹತ್ತಾರು ಲಾರಿ ಬಳಸಲಾಗುತ್ತಿದೆ. ರಕ್ಷಣಾ ಕಾರ್ಯದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸ್, ಎನ್‌ಡಿಆರ್‌ಎಫ್ ಸಿಬ್ಬಂದಿ ಭಾಗಿಯಾಗಿದ್ದಾರೆ.

ಭೂಕುಸಿತ ಪ್ರದೇಶದಲ್ಲೇ ಸಡಿಲಗೊಂಡಿರುವ ಗುಡ್ಡ ಮತ್ತೆ ಬಿರುಕು ಬಿಟ್ಟಿದ್ದು, ಯಾವುದೇ ಕ್ಷಣದಲ್ಲೂ ಮತ್ತೆ ಕುಸಿಯುವ ಸಾಧ್ಯತೆ ಕಂಡುಬಂದಿದೆ. ಗುಡ್ಡದ ಮದ್ಯ ಭಾಗದಲ್ಲಿ ನೀರು ಉಕ್ಕಿ ಹರಿಯುತ್ತಿದ್ದು, ರಸ್ತೆಯ ಪಕ್ಕದಲ್ಲಿರುವ ಹೊಳೆಗೆ ಮಣ್ಣನ್ನು ಒಯ್ಯುತ್ತಿದೆ. ರಕ್ಷಣಾ ಕಾರ್ಯಕ್ಕೆ ಅಡ್ಡಿಯೂ ಆಗುತ್ತಿದೆ. ಅವೈಜ್ಞಾನಿಕ ಹೆದ್ದಾರಿ ಕಾಮಗಾರಿಯಿಂದಾಗಿ ಗುಡ್ಡಕ್ಕೆ ಸರಿಪಡಿಸಲಾಗದ ಧಕ್ಕೆಯಾಗಿದ್ದು, ಇನ್ನಷ್ಟು ಬಲಿ ಪಡೆಯುವ ಭೀತಿಯಿದೆ ಎನ್ನಲಾಗಿದೆ.

ಸಂಚಾರ ನಿಷೇಧ

ಭೂಕುಸಿತ ಕಾರ್ಯಾಚರಣೆ ಹಿನ್ನಲೆ ಶಿರೂರು ವ್ಯಾಪ್ತಿಯಲ್ಲಿ ಸಾರ್ವಜನಿಕರ ಓಡಾಟಕ್ಕೆ ನಿಷೇಧ ವಿಧಿಸಲಾಗಿದೆ. ಅಂಕೋಲಾ ತಾಲ್ಲೂಕಿನ ವಾಸರಕುದ್ರಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಕಾರ್ಯಾಚರಣೆ ನಡೆಯುತ್ತಿರುವ ಪ್ರದೇಶದ ಸುತ್ತ ಸಾರ್ವಜನಿಕರು, ವಾಹನ ಸವಾರರು ಓಡಾಡದಂತೆ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕೆ. ಆದೇಶಿಸಿದ್ದಾರೆ. ಕಾರ್ಯಾಚರಣೆಗೆ ಅಡ್ಡಿಯಾಗದಂತೆ ಮುನ್ನೆಚ್ಚರಿಕೆಯಾಗಿ ನಿಷೇಧ ವಿಧಿಸಲಾಗಿದೆ.

ಉಸ್ತುವಾರಿ ಸಚಿವ ಭೇಟಿ

ಸ್ಥಳಕ್ಕೆ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ ಭೇಟಿ ನೀಡಿ ಪರಿಶೀಲಿಸಿದರು. ಈಗಾಗಲೇ ಐದು ಮೃತ ದೇಹ ಪತ್ತೆಯಾಗಿದೆ. ಕಾರ್ಯಾಚರಣೆ ನಡೆಯುತ್ತಿದೆ. ಇದು ದೊಡ್ಡ ದುರಂತ, ಹೀಗೆ ಆಗಬಾರದಿತ್ತು. ಇದರ ಹೊಣೆಗಾರಿಕೆ ಐಆರ್ ಬಿಯವರದು. ಹತ್ತು ವರ್ಷದಿಂದ ಒಂದು ರಸ್ತೆ ಕ್ಲೀಯರ್ ಮಾಡೋಕೆ ಆಗಿಲ್ಲ. ಒಂದು ವರ್ಷದಿಂದ ಐಆರ್ ಬಿಯವರಿಗೆ ಹೇಳಿದ್ದೆ. ಅವರು ವ್ಯತ್ಯಾಸ ಮಾಡಿದ್ದರಿಂದ ಹೀಗೆ ಆಗಿದೆ. ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ಕೋಡೋಕೆ ತಯಾರಿ ಮಾಡಿಕೊಂಡಿದ್ದೇವೆ ಎಂದಿದ್ದಾರೆ.

ಗೋಕರ್ಣದಲ್ಲೂ ಭೂಕುಸಿತ

ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಸ್ವಲ್ಪ ತಗ್ಗಿದೆಯಾದರೂ, ಗುಡ್ಡ ಕುಸಿತ ಪ್ರಕರಣಗಳು ನಿಂತಿಲ್ಲ. ಕುಮಟಾ ತಾಲೂಕಿನ ಗೋಕರ್ಣದಲ್ಲಿ (Gokarna landslide) ಇಂದು ಬೆಳ್ಳಂಬೆಳಿಗ್ಗೆ ಗುಡ್ಡ ಕುಸಿದಿದೆ. ಗೋಕರ್ಣ ಮುಖ್ಯ ಕಡಲತೀರದ ಹತ್ತಿರದ ರಾಮಮಂದಿರ ಬಳಿ ಗುಡ್ಡ ಕುಸಿತವಾಗಿದೆ. ಅದೃಷ್ಟವಶಾತ್ ದೇವಸ್ಥಾನದಲ್ಲಿ ಯಾರೂ ಇಲ್ಲದ ಹಿನ್ನೆಲೆಯಲ್ಲಿ ಅನಾಹುತ ತಪ್ಪಿದೆ.

ಉರುಳಿಕೊಂಡು ಬಂದ ಗುಡ್ಡದ ಬೃಹತ್‌ ಕಲ್ಲು ದೇವಸ್ಥಾನದ ಗೋಡೆಗೆ ತಾಗಿ ನಿಂತಿದೆ. ರಾಮಮಂದಿರ ದೇವಸ್ಥಾನಕ್ಕೆ ಯಾವುದೇ ಹಾನಿ ಆಗಿಲ್ಲ. ಅವ್ಯಾಹತವಾಗಿ ನಡೆಯುತ್ತಿರುವ ಕಲ್ಲುಗಣಿಗಾರಿಕೆಯ ಪರಿಣಾಮ ಗುಡ್ಡದ ಮಣ್ಣು ಸಡಿಲವಾಗಿದ್ದು, ಮಳೆಗೆ ಕುಸಿದಿದೆ ಎಂದು ಆರೋಪಿಸಲಾಗಿದೆ.

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಾದ್ಯಂತ ಧಾರಾಕಾರ ಗಾಳಿ ಮಳೆ ಮುಂದುವರಿದಿದ್ದು, ಸುವರ್ಣಾ, ಸೀತಾ ನದಿಗಳು ತುಂಬಿ ಹರಿಯುತ್ತಿವೆ. ಆಗುಂಬೆ, ಚಿಕ್ಕಮಗಳೂರಿನಲ್ಲಿ ಮಳೆಯಾದ ಪರಿಣಾಮ ಕರಾವಳಿಯ ನದಿಗಳು ಭರ್ತಿಯಾಗಿವೆ. ನದಿ, ಹೊಳೆ ಪಾತ್ರದ ಗದ್ದೆಗಳಲ್ಲಿ ನೆರೆಯ ವಾತಾವರಣ ಕಂಡುಬಂದಿದೆ. ನದಿ, ಸಮುದ್ರ ತೀರದ ಜನಕ್ಕೆ ಉಡುಪಿ ಜಿಲ್ಲಾಡಳಿತ ಕಟ್ಟೆಚ್ಚರ ನೀಡಿದ್ದು, ಎರಡು ದಿನ ಸಮುದ್ರ ಮೀನುಗಾರಿಕೆ ನಿಷೇಧಿಸಿದೆ.

ಇದನ್ನೂ ಓದಿ: Uttara Kannada Rain: ಭಾರಿ ಮಳೆಗೆ ತತ್ತರಿಸಿದ ಉತ್ತರ ಕನ್ನಡ; ಭೂಕುಸಿತಕ್ಕೆ 11 ಸಾವು, ರಸ್ತೆಗಳೇ ಮಾಯ, ತೋಟ ಗದ್ದೆ ಮುಳುಗಡೆ

Continue Reading
Advertisement
Sudha Murty praised for simplicity at Ambani wedding
ಟಾಲಿವುಡ್5 mins ago

Sudha Murty: ಅಂಬಾನಿ ಮದುವೆಗೆ ಮಂಗಳ ಸೂತ್ರ ಮಾತ್ರವೇ ಧರಿಸಿ ಬಂದ ಸುಧಾ ಮೂರ್ತಿ; ಶೋ-ಆಫ್ ಇಲ್ಲ ಅಂದ್ರು ನೆಟ್ಟಿಗರು!

Ravindra Jadeja
ಕ್ರೀಡೆ13 mins ago

Ravindra Jadeja: ವಿಶ್ವಕಪ್​ ಟ್ರೋಫಿಯೊಂದಿಗೆ ತಾಯಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಜಡೇಜಾ

Terror Attacks in India
ದೇಶ16 mins ago

Terror Attacks in India: ಭಾರತದೊಳಕ್ಕೆ ನುಸುಳಲು ಉಗ್ರರಿಗೆ ಪಾಕಿಸ್ತಾನ ಧನಸಹಾಯ: ಬೆಚ್ಚಿ ಬೀಳಿಸುವ ಮಾಹಿತಿ ಬಹಿರಂಗ

Director Arrest gajendra in murder case
ಸ್ಯಾಂಡಲ್ ವುಡ್31 mins ago

Director Arrest: ಕೊಲೆ ಕೇಸ್​​ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಸ್ಯಾಂಡಲ್​ವುಡ್ ನಿರ್ದೇಶಕ ಅರೆಸ್ಟ್​!

Vicky Kaushal Kissing Scenes of 27 Seconds deleated From Bad Newz
ಬಾಲಿವುಡ್58 mins ago

Vicky Kaushal: 27 ಸೆಕೆಂಡುಗಳ ಕಾಲ ಚುಂಬಸಿದ ವಿಕ್ಕಿ ಕೌಶಲ್ -ತೃಪ್ತಿ; ಸೆನ್ಸಾರ್‌ ಬೋರ್ಡ್‌ನಿಂದ ಬಿತ್ತು ಕತ್ತರಿ!

uttara kannada landslide shirur
ಉತ್ತರ ಕನ್ನಡ1 hour ago

Uttara Kannada Landslide: ಭೂಕುಸಿತದ ಜಾಗದ ಬಳಿಯೇ ʼಸುನಾಮಿʼ ಎಫೆಕ್ಟ್‌; ನೀರಿನ ರಭಸಕ್ಕೆ ಕೊಚ್ಚಿಹೋದ ಮಹಿಳೆ

Ajit Pawar
ರಾಜಕೀಯ1 hour ago

Ajit Pawar: ಮಹಾರಾಷ್ಟ್ರದಲ್ಲಿ ಅಜಿತ್‌ ಪವಾರ್‌ಗೆ ಶಾಕ್‌; ಎನ್‌ಸಿಪಿಗೆ ರಾಜೀನಾಮೆ ನೀಡಿದ ಆಪ್ತ

KL Rahul
ಕ್ರೀಡೆ1 hour ago

KL Rahul: ಮುಂದಿನ ವರ್ಷ ಆರ್​ಸಿಬಿ ಪರ ಆಡಲಿದ್ದಾರೆ ಕೆ.ಎಲ್​ ರಾಹುಲ್​; ಪೋಸ್ಟರ್ ವೈರಲ್

Samarjit Lankesh Monalisa Kannada Movie 20 Years Celebration Gowri Movie 2 Songs Released
ಸ್ಯಾಂಡಲ್ ವುಡ್2 hours ago

Samarjit Lankesh: ‘ಮೊನಾಲಿಸಾ’ ಚಿತ್ರಕ್ಕೆ 20 ವರ್ಷಗಳ ಸಂಭ್ರಮ: ರಿಲೀಸ್ ಆಯ್ತು ‘ಗೌರಿ’ ಚಿತ್ರದ ಹಾಡುಗಳು

gt world mall
ಪ್ರಮುಖ ಸುದ್ದಿ2 hours ago

GT World Mall: ಪಂಚೆ ಧರಿಸಿ ಬಂದ ರೈತರಿಗೆ ಪ್ರವೇಶ ನಿರಾಕರಿಸಿ ಅವಮಾನಿಸಿದ ಜಿಟಿ ವರ್ಲ್ಡ್‌ ಮಾಲ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ22 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌