Actor Tabassum | ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ ಖ್ಯಾತಿಯ ನಟಿ ತಬಸ್ಸುಮ್‌ ನಿಧನ - Vistara News

ಪ್ರಮುಖ ಸುದ್ದಿ

Actor Tabassum | ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ ಖ್ಯಾತಿಯ ನಟಿ ತಬಸ್ಸುಮ್‌ ನಿಧನ

ಬಾಲ ಕಲಾವಿದೆಯಾಗಿ ಬಾಲಿವುಡ್‌ ಪ್ರವೇಶಿಸಿ ಹಲವಾರು ಸಿನಿಮಾ, ಟಿವಿ ಟಾಕ್‌ ಶೋಗಳ ಮೂಲಕ ಮನೆಮಾತಾಗಿದ್ದ ತಬಸ್ಸುಮ್‌ ಅವರು (Actor Tabassum) ನಿಧನರಾಗಿದ್ದಾರೆ.

VISTARANEWS.COM


on

Actor Tabassum Passes Away
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ (Phool Khile Hain Gulshan Gulshan) ಖ್ಯಾತಿಯ ಬಾಲಿವುಡ್‌ ನಟಿ ತಬಸ್ಸುಮ್‌ (78) (Actor Tabassum) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಾಲ ಕಲಾವಿದೆಯಾಗಿ ಬಾಲಿವುಡ್‌ ಸಿನಿಮಾ ರಂಗ ಪ್ರವೇಶಿಸಿ, ಹಲವು ಸಿನಿಮಾಗಳಲ್ಲಿ ನಟಿಸಿದ್ದ ಅವರು ದೂರದರ್ಶನದ ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ ಟಾಕ್‌ ಶೋ ಮೂಲಕವೂ ದೇಶಾದ್ಯಂತ ಮನೆಮಾತಾಗಿದ್ದರು.

“ನನ್ನ ತಾಯಿಗೆ ಹಲವು ದಿನಗಳಿಂದ ಅನಾರೋಗ್ಯ ಬಾಧಿಸುತ್ತಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೂ ಗುಣಮುಖರಾಗಿರಲಿಲ್ಲ. ಶುಕ್ರವಾರ ರಾತ್ರಿ ಎರಡು ಬಾರಿ ಹೃದಯಾಘಾತ ಉಂಟಾಗಿ ನಮ್ಮನ್ನೆಲ್ಲ ಅಗಲಿದ್ದಾರೆ” ಎಂದು ತಬಸ್ಸುಮ್‌ ಅವರ ಪುತ್ರ ಹೊಶಾಂಗ್‌ ಗೋವಿಲ್‌ ತಿಳಿಸಿದ್ದಾರೆ.

1944ರಲ್ಲಿ ಮುಂಬೈನಲ್ಲಿ ಜನಿಸಿದ ತಬಸ್ಸುಮ್‌ ತಮ್ಮ ಮೂರನೇ ವಯಸ್ಸಿನಲ್ಲಿ ಅಂದರೆ 1947ರಲ್ಲಿ ನರ್ಗಿಸ್‌ ಚಿತ್ರದ ಮೂಲಕ ಬಾಲನಟಿಯಾಗಿ ಸಿನಿಮಾ ರಂಗ ಪ್ರವೇಶಿಸಿದರು. ಮೇರಾ ಸುಹಾಗ್‌, ಬಾರಿ ಬೆಹೆನ್‌, ಸರ್ಗಮ್‌, ದೀದಾರ್‌ ಸೇರಿ ಹಲವು ಸಿನಿಮಾಗಳಲ್ಲಿ ಬಾಲನಟಿಯಾಗಿ ಕಾಣಿಸಿಕೊಂಡ ಅವರು “ಬೇಬಿ ತಬಸ್ಸುಮ್”‌ ಎಂದೇ ಖ್ಯಾತಿಯಾಗಿದ್ದರು.

ಅದರಲ್ಲೂ, 1960ರಲ್ಲಿ ಬಿಡುಗಡೆಯಾದ ಐತಿಹಾಸಿಕ ಮುಘಲ್‌ ಎ ಅಜಂ ಚಿತ್ರದಲ್ಲಿ ನಟಿಸಿದ್ದು ಅವರ ಖ್ಯಾತಿಯನ್ನು ಹೆಚ್ಚಿಸಿತು. ಹಲವು ಸಿನಿಮಾಗಳ ಬಳಿಕ ಕಿರುತೆರೆಗೂ ಕಾಲಿಟ್ಟ ಅವರು ದೂರದರ್ಶನದಲ್ಲಿ ಪ್ರಸಾರವಾಗುತ್ತಿದ್ದ ಫೂಲ್‌ ಖಿಲೆ ಹೈ ಗುಲ್ಶನ್‌ ಗುಲ್ಶನ್‌ ಟಾಕ್‌ ಶೋ ಮೂಲಕ ಜನಮನ್ನಣೆಗೆ ಪಾತ್ರವಾದರು. 1972ರಿಂದ 1993ರವರೆಗೆ ತಬಸ್ಸುಮ್‌ ಈ ಶೋ ನಡೆಸಿಕೊಟ್ಟರು. 1990ರಲ್ಲಿ ರಾಜೇಶ್‌ ಖನ್ನಾ ಹಾಗೂ ಗೋವಿಂದ ನಟನೆಯ ‘ಸ್ವರ್ಗ್’‌ ಅವರ ಕೊನೆಯ ಸಿನಿಮಾವಾಗಿದೆ.

ಇದನ್ನೂ ಓದಿ | Nishi Singh | ಜನ್ಮದಿನದ ಖುಷಿ ಮಾಸುವ ಮೊದಲೇ ಹಿಂದಿ ನಟಿ ನಿಶಿ ಸಿಂಗ್‌ ನಿಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IPL 2024 : ಮುಂದಿನ ವರ್ಷವೂ ಧೋನಿ ಐಪಿಎಲ್​ ಆಡ್ತಾರೆ; ಸಿಎಸ್​ಕೆ ಸಿಇಒ ಸ್ಪಷ್ಟನೆ

IPL 2024: ಐದು ಬಾರಿಯ ಚಾಂಪಿಯನ್‌ ತಂಡ 2024ರ ಆವೃತ್ತಿಯ ಗುಂಪು ಹಂತದಿಂದ ಹೊರಕ್ಕೆ ಹೋಗಿತ್ತು. ಹೀಗಾಗಿ ಧೋನಿ ಮುಂದಿನ ಋತುವಿಗೆ ಮರಳುತ್ತಾರೆಯೇ ಎಂಬುದರ ಕುರಿತು ಯಾವುದೇ ಸ್ಪಷ್ಟನೆ ಇಲ್ಲ. ಆದಾಗ್ಯೂ, ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಅವರು ಮುಂದೆ ಬಂದು ಧೋನಿ ಮರಳುವ ಭರವಸೆಯಲ್ಲಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

VISTARANEWS.COM


on

IPL 2024
Koo

ಬೆಂಗಳೂರು: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅನುಭವಿ ಬ್ಯಾಟರ್ ಎಂಎಸ್ ಧೋನಿ ಹಲವು ವರ್ಷಗಳಿಂದ ಫ್ರಾಂಚೈಸಿಗೆ ಬಲಿಷ್ಠ ಆಸ್ತಿಯಾಗಿದ್ದಾರೆ. ಐದು ಐಪಿಎಲ್ ಪ್ರಶಸ್ತಿಗಳಿಗೆ ತಂಡವನ್ನು ಮುನ್ನಡೆಸಿದ ಧೋನಿ ಕ್ರಿಕೆಟ್​ ಕ್ಷೇತ್ರದ ದಂತಕತೆ ಎನಿಸಿಕೊಂಡಿದ್ದಾರೆ. ಅವರು ಸಿಎಸ್‌ಕೆ ಅಭಿಮಾನಿಗಳಿಗೆ ದೇವರಂತಹ ವ್ಯಕ್ತಿ. 2020ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾಗಿರುವ ಧೋನಿ ಐಪಿಎಲ್‌ನಲ್ಲಿ ಸಿಎಸ್‌ಕೆ ಪರ ಆಡುವುದನ್ನು ಮುಂದುವರಿಸಿದ್ದಾರೆ. 2024ರ ಐಪಿಎಲ್​ನಲ್ಲಿಯೂ (IPL 2024) ಅವರು ಅಭಿಮಾನಿಗಳಿಂದ ಸಾಕಷ್ಟು ಪ್ರೀತಿ ಗಳಿಸಿದ್ದಾರೆ.

ತಂಡವು 2023ರಲ್ಲಿ ಐಪಿಎಲ್ ಗೆದ್ದ ನಂತರ, ಎಂಎಸ್ ಧೋನಿ ಆ ಋತುವಿನಲ್ಲಿ ಅಭಿಮಾನಿಗಳು ತೋರಿದ ಪ್ರೀತಿಗೆ ಪ್ರತಿಯಾಗಿ ಮತ್ತೊಂದು ಋತುವಿನಲ್ಲಿ ಆಡುವ ಭರವಸೆ ನೀಡಿದ್ದರು. ಹೀಗಾಗಿ ಐಪಿಎಲ್​ 2024 ರ ಆವೃತ್ತಿಯಲ್ಲಿ ಆಡಿದ್ದರು. ಆದಾಗ್ಯೂ ಧೋನಿಯ ಕ್ರಿಕೆಟ್​ ಅಧ್ಯಾಯದ ಕೊನೆ ಎಲ್ಲಿ ಎಂದು ಯಾರಿಗೂ ಗೊತ್ತಿಲ್ಲ. ಈ ಬಾರಿಯೂ ಅವರು ವಿದಾಯ ಘೋಷಿಸಿಲ್ಲ.

ಐದು ಬಾರಿಯ ಚಾಂಪಿಯನ್‌ ತಂಡ 2024ರ ಆವೃತ್ತಿಯ ಗುಂಪು ಹಂತದಿಂದ ಹೊರಕ್ಕೆ ಹೋಗಿತ್ತು. ಹೀಗಾಗಿ ಧೋನಿ ಮುಂದಿನ ಋತುವಿಗೆ ಮರಳುತ್ತಾರೆಯೇ ಎಂಬುದರ ಕುರಿತು ಯಾವುದೇ ಸ್ಪಷ್ಟನೆ ಇಲ್ಲ. ಆದಾಗ್ಯೂ, ಚೆನ್ನೈ ಸೂಪರ್ ಕಿಂಗ್ಸ್ ಸಿಇಒ ಕಾಶಿ ವಿಶ್ವನಾಥನ್ ಅವರು ಮುಂದೆ ಬಂದು ಧೋನಿ ಮರಳುವ ಭರವಸೆಯಲ್ಲಿದ್ದಾರೆ ಎಂದು ಬಹಿರಂಗಪಡಿಸಿದ್ದಾರೆ.

“ಧೋನಿಯ ಬಗ್ಗೆ ನನಗೆ ಗೊತ್ತಿಲ್ಲ. ಇದು ಅವರು ಮಾತ್ರ ಉತ್ತರಿಸಬಹುದಾದ ಪ್ರಶ್ನೆ, ನಮ್ಮ ಬದ್ಧತೆ ಏನೆಂದರೆ ಅವರು ತೆಗೆದುಕೊಂಡ ನಿರ್ಧಾರಗಳನ್ನು ನಾವು ಯಾವಾಗಲೂ ಗೌರವಿಸುವುದು. ಅದನ್ನು ನಾವು ಅವರಿಗೆ ಬಿಟ್ಟಿದ್ದೇವೆ. ನಿಮಗೆಲ್ಲ ತಿಳಿದಿರುವಂತೆ, ಅವರು ಯಾವಾಗಲೂ ಅತ್ಯುತ್ತಮ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅವರು ನಿರ್ಧರಿಸಿದಂತೆ ನಾವು ನಮ್ಮ ಕೆಲಸ ಮಾಡುತ್ತೇವೆ. ಆದಾಗ್ಯೂ ಮುಂದಿನ ವರ್ಷ ಅವರು ಸಿಎಸ್‌ಕೆಗೆ ಲಭ್ಯವಾಗುತ್ತಾರೆ ಎಂದೇ ನಾವು ಭಾವಿಸುತ್ತೇವೆ ” ಎಂದು ಕಾಶಿ ವಿಶ್ವನಾಥನ್ ಸಿಎಸ್​ಕೆ ಯ ಯೂಟ್ಯೂಬ್ ಚಾನೆಲ್‌ ಮೂಲಕ ಹೇಳಿದ್ದಾರೆ.

ಸ್ಟೀಫನ್ ಫ್ಲೆಮಿಂಗ್ ಬಗ್ಗೆ ಹೆಚ್ಚು ಚರ್ಚಿಸಿಲ್ಲ.

ಭಾರತೀಯ ಪುರುಷರ ಹಿರಿಯ ತಂಡದ ಮುಖ್ಯ ತರಬೇತುದಾರರಾಗಿ ಸಿಎಸ್​ಕೆ ಕೋಚ್​ ಸ್ಟೀಫನ್ ಫ್ಲೆಮಿಂಗ್ ಹೋಗುತ್ತಾರೆ ಎಂಬುದರ ಬಗ್ಗೆಯೂ ಕಾಶಿ ವಿಶ್ವನಾಥನ್ ಅವರು ಮಾತನಾಡಿದರು. ಸಿಎಸ್ಕೆ ತಂಡದ ಮುಖ್ಯ ಕೋಚ್ ಹುದ್ದೆಗೆ ಸ್ಟೀಫನ್ ಫ್ಲೆಮಿಂಗ್ ಬದ್ಧರಾಗಿದ್ದಾರೆ. ಭಾರತದ ಮುಖ್ಯ ತರಬೇತುದಾರನ ಹುದ್ದೆಯನ್ನು ವಹಿಸಿಕೊಳ್ಳುವುದು ಫ್ಲೆಮಿಂಗ್​ ಅವರಿಗೆ ಇಷ್ಟವಾಗುವುದಿಲ್ಲ ಎಂದು ವಿಶ್ವನಾಥನ್ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Virat Kohli : ಕೊಹ್ಲಿಯ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​
“ನಾನು ತಮಾಷೆಯಾಗಿ ಸ್ಟೀಫನ್ ಅವರನ್ನು ಕೇಳಿದ್ದೆ. ‘ನೀವು ಭಾರತೀಯ ಕೋಚಿಂಗ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದೀರಾ? ಸ್ಟೀಫನ್ ಸುಮ್ಮನೆ ನಕ್ಕರು ಮತ್ತು ಹೇಳಿದ್ದರು. ‘ನೀವು ನನ್ನನ್ನು ಬಯಸುತ್ತೀರಾ? ಎಂದು. ಅವರಿಗೆ ಆ ಹುದ್ದೆ ಆಗುವುದಿಲ್ಲ ಎಂದು ನನಗೆ ತಿಳಿದಿದೆ ಏಕೆಂದರೆ ಅವರು ವರ್ಷದಲ್ಲಿ ಒಂಬತ್ತು-ಹತ್ತು ತಿಂಗಳು [ತರಬೇತಿಯಲ್ಲಿ] ತೊಡಗಿಸಿಕೊಳ್ಳಲು ಇಷ್ಟಪಡುವುದಿಲ್ಲ. ಅದು ನನ್ನ ಭಾವನೆ. ನಾನು ಅವರ ಬಗ್ಗೆ ಹೆಚ್ಚು ಚರ್ಚಿಸಿಲ್ಲ “ಎಂದು ವಿಶ್ವನಾಥನ್ ಹೇಳಿದರು.

Continue Reading

ದೇಶ

Prashant Kishor: ಜೂನ್‌ 4ರಂದು ಪ್ರತಿಪಕ್ಷಗಳು ನೀರು ಕುಡಿಯಲಿವೆ; ಪ್ರಶಾಂತ್‌ ಕಿಶೋರ್‌ ಮಾತಿನ ಮರ್ಮವೇನು?

Prashant Kishor: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಪ್ರತಿಪಾದಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ, ಪ್ರಶಾಂತ್‌ ಕಿಶೋರ್‌ ಅವರು ಪ್ರತಿಪಕ್ಷಗಳಿಗೆ, ಟೀಕಾಕಾರರಿಗೆ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ. “ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಜೂನ್‌ 4ರಂದು ಪಕ್ಕದಲ್ಲಿ ನೀರು ಇಟ್ಟುಕೊಂಡಿರಿ” ಎಂದು ಪೋಸ್ಟ್‌ ಮಾಡಿದ್ದಾರೆ. ಬಿಜೆಪಿಗೆ 300ಕ್ಕೂ ಅಧಿಕ ಸ್ಥಾನಗಳು ಲಭಿಸುವುದು ನಿಶ್ಚಿತ ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಹೇಳಿದ್ದರು.

VISTARANEWS.COM


on

Prashant Kishor
Koo

ನವದೆಹಲಿ: ಚುನಾವಣಾ ರಣತಂತ್ರಗಾರ, ರಾಜಕೀಯ ತಜ್ಞ ಪ್ರಶಾಂತ್‌ ಕಿಶೋರ್‌ (Prashant Kishor) ಅವರು ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶದ ಬಗ್ಗೆ ಮಾತನಾಡಿರುವ, ಸಂದರ್ಶನದಲ್ಲಿ ಉಲ್ಲೇಖಿಸಿರುವ ಅಂಶಗಳು ದೇಶಾದ್ಯಂತ ಚರ್ಚೆಯಾಗುತ್ತಿವೆ. ನರೇಂದ್ರ ಮೋದಿ (Narendra Modi) ಅವರ ವರ್ಚಸ್ಸು ಕಡಿಮೆಯಾದರೂ ಬಿಜೆಪಿ ಬಹುಮತ ಸಾಬೀತುಪಡಿಸಲಿದೆ ಎಂಬುದಾಗಿ ವಿಶ್ಲೇಷಿಸಿದ್ದಾರೆ. ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಪ್ರತಿಪಾದಿಸಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ, ಪ್ರಶಾಂತ್‌ ಕಿಶೋರ್‌ ಅವರು ಪ್ರತಿಪಕ್ಷಗಳಿಗೆ, ಟೀಕಾಕಾರರಿಗೆ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ. “ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು. ಜೂನ್‌ 4ರಂದು ಪಕ್ಕದಲ್ಲಿ ನೀರು ಇಟ್ಟುಕೊಂಡಿರಿ” ಎಂದು ಪೋಸ್ಟ್‌ ಮಾಡಿದ್ದಾರೆ.

“ಹೆಚ್ಚಿನ ಪ್ರಮಾಣದ ನೀರು ಕುಡಿಯುವುದರಿಂದ ದೇಹ ಹಾಗೂ ಮನಸ್ಸು ನಿರ್ಜಲೀಕರಣಗೊಳ್ಳುತ್ತದೆ. ನಾನು ನೀಡಿರುವ ಸಮೀಕ್ಷಾ ವರದಿಯ ಕುರಿತು ಗಾಬರಿಗೊಂಡವರು ಜೂನ್‌ 4ರಂದು ಹೆಚ್ಚಿನ ಪ್ರಮಾಣದ ನೀರನ್ನು ಪಕ್ಕದಲ್ಲೇ ಇಟ್ಟುಕೊಳ್ಳುವುದು ತುಂಬ ಒಳಿತು” ಎಂಬುದಾಗಿ ಪ್ರಶಾಂತ್‌ ಕಿಶೋರ್‌ ಅವರು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. ಅಷ್ಟೇ ಅಲ್ಲ, 2021ರಲ್ಲಿ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆ ಫಲಿತಾಂಶ ಹಾಗೂ ಪ್ರಶಾಂತ್‌ ಕಿಶೋರ್‌ ಲೆಕ್ಕಾಚಾರ ನಿಖರವಾಗಿತ್ತು ಎಂಬುದನ್ನು ಕೂಡ ಅವರು ನೆನಪಿಸಿದ್ದಾರೆ.

ಪ್ರಶಾಂತ್‌ ಕಿಶೋರ್‌ ಹೇಳಿದ್ದೇನು?

ಕೆಲ ದಿನಗಳ ಹಿಂದಷ್ಟೇ ಸಂದರ್ಶನವೊಂದರಲ್ಲಿ ಪ್ರಶಾಂತ್‌ ಕಿಶೋರ್‌ ಹಲವು ವಿಷಯಗಳನ್ನು ಪ್ರಸ್ತಾಪಿಸಿದ್ದರು. “ದೇಶದಲ್ಲಿ ನರೇಂದ್ರ ಮೋದಿ ಅವರ ವರ್ಚಸ್ಸು ಕಡಿಮೆಯಾದರೂ ಜನಕ್ಕೆ ಅವರ ಮೇಲೆ ಸಿಟ್ಟಿಲ್ಲ. ಹಾಗಾಗಿ, ಬಿಜೆಪಿ 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ” ಎಂದಿದ್ದರು. ಹಾಗೆಯೇ, ವಿರೋಧ ಪಕ್ಷಗಳ ಕಾರ್ಯ ವೈಖರಿಯನ್ನೂ ಅವರು ಟೀಕಿಸಿದ್ದರು. ಬಿಜೆಪಿ ವಿರುದ್ಧ ಪ್ರಯೋಗಿಸಬಹುದಾದ ಅನೇಕ ಅಸ್ತ್ರಗಳನ್ನು, ಅವಕಾಶಗಳನ್ನು ʼಇಂಡಿಯಾʼ ಮೈತ್ರಿಕೂಟ ಸಮರ್ಪಕವಾಗಿ ಬಳಸಿಕೊಳ್ಳುತ್ತಿಲ್ಲ ಎಂದು ಹೇಳಿದ್ದರು.

ಕಾಂಗ್ರೆಸ್‌ ರಾಜ್ಯ ವಿಧಾನಸಭಾ ಚುನಾವಣೆಗಳ ಮೇಲೆ ಗಮನ ಕೇಂದ್ರೀಕರಿಸಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ ಮತ್ತು ಡಿಸೆಂಬರ್ ನಡುವಿನ ನಿರ್ಣಾಯಕ ತಿಂಗಳುಗಳು ವ್ಯರ್ಥವಾಗಿದೆ. ಇದು ʼಇಂಡಿಯಾʼ ಬಣದ ಮೇಲೆ ನಕಾರಾತ್ಮಕ ಪರಿಣಾಮ ಬೀರಿದೆ ಎಂದು ಅವರು ಒತ್ತಿ ಹೇಳಿದ್ದರು. ಡಿಸೆಂಬರ್‌ನಲ್ಲಿ ಮೂರು ರಾಜ್ಯಗಳಲ್ಲಿನ ಬಿಜೆಪಿಯ ಗೆಲುವು ಮತ್ತು ಜನವರಿಯಲ್ಲಿ ನಡೆದ ಅಯೋಧ್ಯೆ ರಾಮ ಮಂದಿರದ ಉದ್ಘಾಟನೆ ಕಮಲ ಪಡೆಯ ಗೆಲುವಿಗೆ ಇನ್ನಷ್ಟು ಶಕ್ತಿ ನೀಡಲಿದೆ ಎಂದಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗಿದ್ದವು.

ಇದನ್ನೂ ಓದಿ: Lok Sabha Election : ಬಿಜೆಪಿ 305 ಸೀಟ್ ಗೆಲ್ಲೋದು ಗ್ಯಾರಂಟಿ; ಅಮೆರಿಕದ ರಾಜಕೀಯ ಪಂಡಿತನ ಭವಿಷ್ಯ

Continue Reading

ಕ್ರೀಡೆ

Virat Kohli : ಕೊಹ್ಲಿಗೆ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​

Virat Kohli: ವಿರಾಟ್ ಕೊಹ್ಲಿ ಬ್ಯಾಟಿಂಗ್ ಸಾಮರ್ಥ್ಯವನ್ನು ಮಾತ್ರ ಮ್ಯಾಥ್ಯೂ ಹೇಡನ್ ಹೊಗಳಲಿಲ್ಲ. ಅವರ ಫೀಲ್ಡಿಂಗ್​ ಕರಾಮತ್ತನ್ನು ಕೂಡ ಮೆಚ್ಚಿದ್ದಾರೆ. ಮೈದಾನದಲ್ಲಿ ಚಿಗರೆಯಂತೆ ಓಡಿ ಫೀಲ್ಡಿಂಗ್ ಮಾಡುವ ಅವರಿಂದಾಗಿ ವಿಕೆಟ್​ಗಳು ಲಭಿಸಿವೆ ಎಂಬುದಾಗಿ ಹೇಡನ್​ ಹೇಳಿದ್ದಾರೆ. ಅವರ ಅತ್ಯುತ್ತಮ ಪ್ರಯತ್ನದಿಂದಾಗಿಯೇ ಆರ್​ಸಿಬಿ ತಂಡ ಪ್ಲೇಆಫ್​ ಹಂತಕ್ಕೆ ಏರಲು ಸಾಧ್ಯವಾಯಿತು. ಹೀಗಾಗಿ ಕೊಹ್ಲಿಗೆ ನಿಜವಾದ ಗೌರವ ಸಲ್ಲಬೇಕು ಎಂದು ಮಾಜಿ ಆರಂಭಿಕ ಬ್ಯಾಟರ್ ನುಡಿದಿದ್ದಾರೆ.

VISTARANEWS.COM


on

Virat Kohli
Koo

ಬೆಂಗಳೂರು: ಮೇ 22 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2024 ರ ಎಲಿಮಿನೇಟರ್‌ನಲ್ಲಿ ರಾಜಸ್ಥಾನ್ ರಾಯಲ್ಸ್ (Rajasthan Royals) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ನಾಲ್ಕು ವಿಕೆಟ್‌ಗಳ ಸೋಲನ್ನು ಆಸ್ಟ್ರೇಲಿಯಾದ ಮಾಜಿ ಬ್ಯಾಟರ್ ಮತ್ತು ವೀಕ್ಷಕ ವಿವರಣೆಗಾರ ಮ್ಯಾಥ್ಯೂ ಹೇಡನ್ ಬೇಸರದ ವಿಷಯ ಎಂದು ವಿಶ್ಲೇಷಿಸಿದ್ದಾರೆ. ಇದೇ ವೇಳೆ ಅವರು ವಿರಾಟ್​ ಕೊಹ್ಲಿಗೆ ನಿಜವಾದ ಗೌರವ ಸಲ್ಲಿಸಬೇಕು. ತಂಡದ ಸೋಲಿಗೆ ಅವರನ್ನು ಹೊಣೆಗಾರನನ್ನಾಗಿ ಮಾಡಬಾರದು ಒತ್ತಿ ಹೇಳಿದರು. ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟಿಗರು ಪಂದ್ಯದುದ್ದಕ್ಕೂ ಕೊಹ್ಲಿಯ ಸಮರ್ಪಣೆ ಮತ್ತು ಪ್ರಭಾವಶಾಲಿ ಆಟವನ್ನು ಶ್ಲಾಘಿಸಿದ್ದಾರೆ.

ವಿರಾಟ್ ಕೊಹ್ಲಿ ಬ್ಯಾಟಿಂಗ್ ಸಾಮರ್ಥ್ಯವನ್ನು ಮಾತ್ರ ಮ್ಯಾಥ್ಯೂ ಹೇಡನ್ ಹೊಗಳಲಿಲ್ಲ. ಅವರ ಫೀಲ್ಡಿಂಗ್​ ಕರಾಮತ್ತನ್ನು ಕೂಡ ಮೆಚ್ಚಿದ್ದಾರೆ. ಮೈದಾನದಲ್ಲಿ ಚಿಗರೆಯಂತೆ ಓಡಿ ಫೀಲ್ಡಿಂಗ್ ಮಾಡುವ ಅವರಿಂದಾಗಿ ವಿಕೆಟ್​ಗಳು ಲಭಿಸಿವೆ ಎಂಬುದಾಗಿ ಹೇಡನ್​ ಹೇಳಿದ್ದಾರೆ. ಅವರ ಅತ್ಯುತ್ತಮ ಪ್ರಯತ್ನದಿಂದಾಗಿಯೇ ಆರ್​ಸಿಬಿ ತಂಡ ಪ್ಲೇಆಫ್​ ಹಂತಕ್ಕೆ ಏರಲು ಸಾಧ್ಯವಾಯಿತು. ಹೀಗಾಗಿ ಕೊಹ್ಲಿಗೆ ನಿಜವಾದ ಗೌರವ ಸಲ್ಲಬೇಕು ಎಂದು ಮಾಜಿ ಆರಂಭಿಕ ಬ್ಯಾಟರ್ ನುಡಿದಿದ್ದಾರೆ.

ಆರ್‌ಆರ್ ವಿರುದ್ಧ 24 ಎಸೆತಗಳಲ್ಲಿ 33 ರನ್ ಬಾರಿಸಿದ ಕೊಹ್ಲಿ ಅದ್ಭುತ ಮೈಲಿಗಲ್ಲನ್ನು ಸಾಧಿಸಿದ್ದರು. ಐಪಿಎಲ್‌ನಲ್ಲಿ 8000 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಹೇಡನ್ ಇದನ್ನು ಅಸಾಮಾನ್ಯ ಸಾಧನೆ ಎಂದು ಕರೆದಿದ್ದಾರೆ. ಭಾರತೀಯ ಬ್ಯಾಟಿಂಗ್ ಮಾಸ್ಟರ್ ಅವರು ಎಂದು ಹೇಳಿದ್ದಾರೆ

ಇದಲ್ಲದೆ, ಐಪಿಎಲ್ 2024 ರಲ್ಲಿ ಆರ್​​ಬಿಗಾಗಿ ಕೊಹ್ಲಿ ತೋರಿದ ಸ್ಪರ್ಧಾತ್ಮಕ ಮನೋಭಾವ ಸ್ಥಿರ ಪ್ರದರ್ಶನವನ್ನು ಹೇಡನ್ ಶ್ಲಾಘಿಸಿದರು. ಬಲಗೈ ಬ್ಯಾಟರ್​ ಈ ಋತುವಿನಲ್ಲಿ ರನ್‌ಗಾಗಿ ಹಸಿದ ರೀತಿಯಲ್ಲಿ ತೋರುತ್ತಿದ್ದರು. ಮೈದಾದನದಲ್ಲಿ ಅವರ ಉಪಸ್ಥಿತಿಯು ಪರಿಣಾಮ ಬೀರಿತ್ತು. ಬೆಂಗಳೂರು ತಂಡ ಪ್ಲೇಆಫ್‌ ಪ್ರವೇಶಿಸುವಲ್ಲಿ ಅವರ ಪಾತ್ರ ಮುಖ್ಯ ಎಂದು ಹೇಳಿದರು.

ಆರ್‌ಆರ್‌ಗೆ ಆರ್‌ಸಿಬಿ ಸೋಲಿಗೂ ವಿರಾಟ್ ಕೊಹ್ಲಿಗೂ ಯಾವುದೇ ಸಂಬಂಧವಿಲ್ಲ: ಮ್ಯಾಥ್ಯೂ ಹೇಡನ್

ಮ್ಯಾಥ್ಯೂ ಹೇಡನ್ ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಹೀಗೆ ಹೇಳಿದ್ಧಾರೆ. “ಈ ಸೋಲಿಗೆ ಕೊಹ್ಲಿಯೊಂದಿಗೆ ಯಾವುದೇ ಸಂಬಂಧವಿಲ್ಲ. ನಮಗೆ ತಿಳಿದಿದೆ, ಅವರು ತನ್ನ ಸಂಪೂರ್ಣ ಹೃದಯ ಮತ್ತು ಆತ್ಮವನ್ನು ತಂಡಕ್ಕಾಗಿ ಕೊಟ್ಟಿದ್ದಾರೆ. ಅವರ ಫೀಲ್ಡಿಂಗ್ ಪ್ರಯತ್ನದ ಬಗ್ಗೆ ನೀವು ಯೋಚಿಸಿದಾಗ ಇನ್ನು ವಿಶೇಷ ಎನಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Glenn Maxwell : ಮ್ಯಾಕ್ಸ್​​ವೆಲ್​ಗೆ ಕೊಟ್ಟ ಹಣ ವಾಪಸ್​ ಪಡೆಯಿರಿ; ಅಭಿಮಾನಿಗಳ ಒತ್ತಾಯ

ವಿರಾಟ್ ಕೊಹ್ಲಿ ಈ ಋತುವಿನಲ್ಲಿ ಬ್ಯಾಟ್‌ನೊಂದಿಗೆ ಅದ್ಭುತವಾಗಿದ್ದರು. 15 ಪಂದ್ಯಗಳಲ್ಲಿ 154 ರ ಪ್ರಭಾವಶಾಲಿ ಸ್ಟ್ರೈಕ್ ರೇಟ್‌ನಲ್ಲಿ 741 ರನ್ ಗಳಿಸಿದ್ದಾರೆ. ಪಂದ್ಯಾವಳಿಯಲ್ಲಿ ಕೊಹ್ಲಿ ಆಗಾಗ್ಗೆ ಆರ್​ಸಿಬಿ ತಂಡವನ್ನು ಅನ್ನು ಏಕಾಂಗಿಯಾಗಿ ಗೆಲ್ಲಿಸಿದ್ದರು. 2024 ರಲ್ಲಿ ಮುಂಬರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕೊಹ್ಲಿ ಶೀಘ್ರದಲ್ಲೇ T20 ವಿಶ್ವಕಪ್ 2024 ಗಾಗಿ ಭಾರತೀಯ ತಂಡದೊಂದಿಗೆ ಯುಎಸ್​ಎ ಮತ್ತು ವೆಸ್ಟ್​ ಇಂಡೀಸ್​​ಗೆ ತೆರಳಲಿದ್ದಾರೆ. ಅವರು ಜೂನ್ 5 ರಂದು ನ್ಯೂಯಾರ್ಕ್‌ನಲ್ಲಿ ಐರ್ಲೆಂಡ್ ವಿರುದ್ಧ ತಮ್ಮ ಅಭಿಯಾನ ಪ್ರಾರಂಭಿಸಲಿದ್ದಾರೆ. ಆರ್​ಸಿಬಿ ಓಪನರ್ ಐಪಿಎಲ್ 2024 ರಲ್ಲಿ ಉತ್ತಮ ಫಾರ್ಮ್​ ತೋರಿದ ಕಾರಣ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಆರಂಭಿಕ ಆಟಗಾರನಾಗಿ ಆಡುವ ಸಾಧ್ಯತೆಯಿದೆ.

Continue Reading

ಕ್ರೈಂ

Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

Rave party: ಈಗಾಗಲೇ ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ. 73 ಮಂದಿ ಪುರುಷರಲ್ಲಿ 59 ಮಂದಿ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದ್ದರೆ, 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಹೀಗಾಗಿ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿದ್ದಾರೆ. ಟಿಯರಾದ ಹೇಮಾ ಹಾಗೂ ಆಶಿ ರಾಯ್‌ ಸಹ ಮಾದಕ ವಸ್ತುಗಳನ್ನು ಸೇವಿಸಿದ್ದಾರೆಂಬುದು ಸಾಬೀತಾಗಿವೆ ಎನ್ನಲಾಗಿದೆ.

VISTARANEWS.COM


on

Rave party 86 people including Hema and Ashi consumed drugs in the rave party Blood report positive
Koo

ಬೆಂಗಳೂರು: ಮೇ 19ರ ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ ಪಾರ್ಟಿಯಲ್ಲಿ (Rave party) ತೆಲುಗು ನಟಿಯರಾದ ಹೇಮಾ (Telugu actress Hema) ಹಾಗೂ ಆಶಿ ರಾಯ್ (Aashi Roy) ಒಳಗೊಂಡಂತೆ 103 ಮಂದಿ ಭಾಗಿಯಾಗಿದ್ದರು. ಇಲ್ಲಿ ಮಾದಕ ವಸ್ತುಗಳನ್ನು ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಅಷ್ಟೂ ಮಂದಿಯನ್ನು ತಪಾಸಣೆಗೊಳಪಡಿಸಲಾಗಿತ್ತು. ಈಗ ವೈದ್ಯಕೀಯ ವರದಿ ಬಂದಿದ್ದು, ಅವರಲ್ಲಿ 86 ಮಂದಿಯ ರಿಪೋರ್ಟ್ ಪಾಸಿಟಿವ್ ಬಂದಿದೆ. ನಟಿಯರಾದ ಹೇಮಾ ಹಾಗೂ ಆಶಿ ರಾಯ್‌ ಸಹ ಮಾದಕ ವಸ್ತುಗಳನ್ನು ಸೇವಿಸಿದ್ದಾರೆಂಬುದು ಸಾಬೀತಾಗಿವೆ ಎನ್ನಲಾಗಿದೆ.

ಈಗಾಗಲೇ ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ. 73 ಮಂದಿ ಪುರುಷರಲ್ಲಿ 59 ಮಂದಿ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದ್ದರೆ, 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಹೀಗಾಗಿ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿದ್ದಾರೆ.

ವಾಸು ಎಂಬಾತನ ಬರ್ತ್‌ ಡೇ ಪಾರ್ಟಿಗಾಗಿ ಏರ್ಪಡಿಸಲಾಗಿದ್ದ ಈ ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ದೊಡ್ಡ ಪ್ರಮಾಣದಲ್ಲಿ ಎಂಡಿಎಂಎ, ಕೊಕೇನ್, ಹೈಡ್ರೋ ಗಾಂಜಾ ಪತ್ತೆಯಾಗಿದ್ದವು.

Sunset To Sun Rise victory ಶೀರ್ಷಿಕೆಯಲ್ಲಿ ಈ ರೇವ್ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ಸುಮಾರು ನೂರೈವತ್ತು ಮಂದಿ ಸೇರಿದ್ದರು. ಪೊಲೀಸ್‌ ದಾಳಿ ವೇಳೆ ಕೆಲವರು ತಪ್ಪಿಸಿಕೊಂಡು ಓಡಿದ್ದರು. ಆದರೆ, ಬಹುತೇಕ ಮಂದಿ ಸಿಕ್ಕಿಬಿದ್ದಿದ್ದರು. ಈಗ ಸಿಕ್ಕಿಬಿದ್ದವರಲ್ಲಿ ಬಹುತೇಕರ ಬ್ಲಡ್ ರಿಪೋರ್ಟ್‌ನಲ್ಲಿ ಮಾದಕ ವಸ್ತು ಸೇವನೆ ಸಂಬಂಧ ಪಾಸಿಟಿವ್ ಅಂಶ ಪತ್ತೆಯಾಗಿದೆ. ಹೀಗಾಗಿ ಪಾಸಿಟಿವ್‌ ರಿಪೋರ್ಟ್‌ ಬಂದವರಿಗೆ ಸಿಸಿಬಿ ನೋಟಿಸ್ ನೀಡಲಿದ್ದು, ಅವರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತದೆ.

ʼರೇವ್‌ ಪಾರ್ಟಿಯಲ್ಲಿ ನಾನಿಲ್ಲʼ ಎಂದು ವಿಡಿಯೋ ಮಾಡಿದ್ದ ಹೇಮಾ!

ಈ ರೇವ್‌ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದಾರೆ ಎಂದು ಸುದ್ದಿಯಾಗಿದ್ದಂತೆ ವಿಡಿಯೊವೊಂದನ್ನು ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದ ಹೇಮಾ, ನಾನು ಆ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಲೇ ಇಲ್ಲ. ಹೈದರಾಬಾದ್‌ನ ಫಾರ್ಮ್‌ ಹೌಸ್‌ನಲ್ಲಿದ್ದೇನೆ ಎಂದು ವಿಡಿಯೊ ಸಂದೇಶವನ್ನು ಹರಿಬಿಟ್ಟಿದ್ದರು. ಆದರೆ, ಮುಜುಗರ ತಪ್ಪಿಸಲು ಅವರು ಅದೇ ಫಾರಂ ಹೌಸ್‌ನ ಒಂದು ಕಡೆ ಬಂದು ವಿಡಿಯೊ ಮಾಡಿದ್ದಾರೆ ಎಂದು ಹಲವರು ಅಂದೇ ಹೇಳಿದ್ದರು. ಹೆಬ್ಬಗೋಡಿ ಫಾರ್ಮ್ ಹೌಸ್ ಒಳಗಡೆಯೇ ವಿಡಿಯೋ ಮಾಡಿ, ತಾನು ಹೈದರಾಬಾದ್‌ ಫಾರ್ಮ್ ಹೌಸ್‌ನಲ್ಲಿದ್ದೀನಿ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಹಲವರು ವಾದಿಸಿದ್ದರು. ಈಗ ಈ ಸಂಬಂಧ ಪೊಲೀಸರಿಗೆ ಬಂದಿರುವ ರಿಪೋರ್ಟ್‌ ವೈರಲ್‌ ಆಗಿದ್ದು, ಅವರು ಸಹ ಮಾದಕ ವಸ್ತು ಸೇವನೆ ಮಾಡಿರುವುದು ಸಾಬೀತಾಗಿದೆ ಎಂದು ತಿಳಿದುಬಂದಿದೆ.

ಕಮೋಡ್‌ನಲ್ಲಿ ಫ್ಲಶ್‌ ಮಾಡಿದರು!

ಸಿಸಿಬಿ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಪಾರ್ಟಿ ಆಯೋಜಕರು ಸ್ಥಳದ ಡೋರ್‌ಲಾಕ್ ಮಾಡಿಕೊಂಡಿದ್ದಲ್ಲದೆ, ಎಂಡಿಎಂಎ ಮತ್ತು ಇನ್ನಿತರೆ ಮಾದಕ ವಸ್ತುಗಳನ್ನು ಸಿಕ್ಕಸಿಕ್ಕಲ್ಲಿ ಎಸೆದಿದ್ದರು. ಪೊಲೀಸರು ಎಂದು ಗೊತ್ತಾಗುತ್ತಿದ್ದಂತೆ ಓಡಿಹೋಗಲು ಯತ್ನಿಸಿದ್ದರು. ಡ್ರಗ್ಸ್‌ ಅನ್ನು ಬಾತ್ ರೂಂನ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ್ದರು.. ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಫಾರ್ಮ್ ಹೌಸ್‌ನ ಇಂಚಿಂಚನ್ನೂ ಜಾಲಾಡಿದ್ದರು.

3 ಜನ ಡ್ರಗ್ ಪೆಡ್ಲರ್‌ಗಳು, ಆಯೋಜಕ ವಾಸು ಸೇರಿ ಐದು ಜನರನ್ನು ಅಂದೇ ಪೊಲೀಸರು ಬಂಧಿಸಿದ್ದರು. ಪಾರ್ಟಿಯಲ್ಲಿ ಡ್ರಗ್ ಪೆಡ್ಲರ್‌ಗಳೂ ಭಾಗಿಗಳಾಗಿದ್ದರು. ಇವರು ಯಥೇಚ್ಛವಾಗಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದರು. ವಾಸು ಹುಟ್ಟಿದ ಹಬ್ಬಕ್ಕೆ ಪಾರ್ಟಿ ಆಯೋಜಿಸಿದ ಆರ್ಗನೈಸರ್ ಅರುಣ್, ಸಿದ್ಧಿಕಿ, ರಣಬೀರ್, ನಾಗಬಾಬುರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಮಾದಕ ವಸ್ತು ಸಿಕ್ಕಿದಂತಹ ಐಷಾರಾಮಿ ಮರ್ಸಿಡಿಸ್‌ ಬೆಂಜ್‌, ರೇಂಜ್ ರೋವರ್, ಆಡಿ ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು.

ಎಂಟ್ರಿಗೆ ಪಾಸ್‌ವರ್ಡ್‌ ನೀಡಿದ್ದ ವಾಸು

ಪಾರ್ಟಿ ಆಯೋಜಕ, ಆರೋಪಿ ವಾಸು ಪೊಲೀಸರಿಂದ ಬಚಾವಾಗಲು ʼನಾನು ಪಾರ್ಟಿಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆದಿದ್ದೇನೆಂದುʼ ಸುಳ್ಳು ಹೇಳಿಕೆ ನೀಡಿದ್ದ. ಆದರೆ, ಫಾರ್ಮ್ ಹೌಸ್ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ. ಪಾರ್ಟಿಗೆ ಬಂದವರು ಫಾರ್ಮ್ ಹೌಸ್ ಒಳಗೆ ಹೋಗಬೇಕಾದರೆ ಸೆಕ್ಯೂರಿಟಿಗೆ ಪಾಸ್ ವರ್ಡ್ ಹೇಳಬೇಕಿತ್ತು. ವಾಸು ನೀಡಿದ ಪಾಸ್‌ವರ್ಡ್ ಹೇಳಿದರೆ ಮಾತ್ರ ಒಳಗೆ ಎಂಟ್ರಿಯಾಗಬಹುದಿತ್ತು. ಡ್ರಗ್ ಪಾರ್ಟಿ ಹಿನ್ನೆಲೆಯಲ್ಲಿ ಬೇರೆ ಯಾರೂ ಬಾರದಿರಲಿ ಎಂಬ ಕಾರಣಕ್ಕೆ ವಾಸು ಪಾಸ್‌ವರ್ಡ್ ನೀಡಿದ್ದ.

ಮಾದಕ ವಸ್ತುಗಳ ವಶಕ್ಕೆ

ಫಾರಂ ಹೌಸ್‌ನಲ್ಲಿ ಸದ್ಯ ಭಾರಿ ಪ್ರಮಾಣದಲ್ಲಿ ಎಂಡಿಎಂಎ, ಕ್ಯಾಪ್ಸೂಲ್, ಕೊಕೇನ್ ಇತ್ಯಾದಿ ಮಾದಕ ವಸ್ತುಗಳು ದೊರೆತಿದ್ದವು. 45 ಗ್ರಾಂನಷ್ಟು ಡ್ರಗ್ ವಶಕ್ಕೆ ಪಡೆಯಲಾಗಿತ್ತು. 1 ಗ್ರಾಂ ಕೊಕೇನ್‌ಗೆ 8ರಿಂದ 9 ಸಾವಿರ ರೂ. ದರವಿದೆ. ಇಂತಹ ಕೊಕೇನ್ ಭಾರಿ ಪ್ರಮಾಣದಲ್ಲಿ ಪಾರ್ಟಿಯಲ್ಲಿ ಪತ್ತೆಯಾಗಿದೆ. ಸದ್ಯ ಸಿಕ್ಕಿರುವ ಡ್ರಗ್ಸ್‌ನ ಮೌಲ್ಯ ಪರಿಶೀಲನೆಯನ್ನು ಸಿಸಿಬಿ ನಡೆಸುತ್ತಿದೆ.

ಇದನ್ನೂ ಓದಿ: Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

ನಟಿ ಆಶಿ ರಾಯ್ ಹೇಳಿದ್ದೇನು?

ಈ ಪಾರ್ಟಿಯಲ್ಲಿ ಭಾಗಿಯಾಗಿದ್ದ ಆಶಿ ರಾಯ್‌ ಸಹ ವಿಡಿಯೊವೊಂದನ್ನು ಮಾಡಿ ಸ್ಪಷ್ಟನೆ ನೀಡಿದ್ದಾರೆ. ʻʻಅದೊಂದು ಬರ್ತ್‌ಡೇ ಪಾರ್ಟಿಯಾಗಿತ್ತು. ಒಳಗೆ ಏನು ನಡೀತಿತ್ತು ಎಂದು ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ದಯವಿಟ್ಟು ನೀವೆಲ್ಲ ನನ್ನ ಬೆಂಬಲಿಸಿ. ನಾನು ಕಷ್ಟಪಟ್ಟು ಉದ್ಯಮದಲ್ಲಿ ಬೆಳೆಯುತ್ತಿರುವ ಹುಡುಗಿ. ದಯವಿಟ್ಟು ನನಗೆ ಸಹಾಯ ಮಾಡಿʼʼ ಎಂದು ವಿಡಿಯೊವನ್ನು ಹಂಚಿಕೊಂಡಿದ್ದರು. ಆಶಿ ರಾಯ್‌ ಹಲವು ಸಂದರ್ಶನದಲ್ಲಿ ಪಾರ್ಟಿಯಲ್ಲಿ ಹೇಮಾ ಅವರನ್ನು ನೋಡಿಲ್ಲ ಎಂದಿದ್ದಾರೆ. ಆಶಿರಾಯ್‌ ಅವರು ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ.

Continue Reading
Advertisement
IPL 2024
ಕ್ರೀಡೆ1 min ago

IPL 2024 : ಮುಂದಿನ ವರ್ಷವೂ ಧೋನಿ ಐಪಿಎಲ್​ ಆಡ್ತಾರೆ; ಸಿಎಸ್​ಕೆ ಸಿಇಒ ಸ್ಪಷ್ಟನೆ

Golden Star Ganesh Krishnam Pranaya Sakhi movie first song release on May 25 in Mysore
ಸಿನಿಮಾ9 mins ago

Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

Prashant Kishor
ದೇಶ27 mins ago

Prashant Kishor: ಜೂನ್‌ 4ರಂದು ಪ್ರತಿಪಕ್ಷಗಳು ನೀರು ಕುಡಿಯಲಿವೆ; ಪ್ರಶಾಂತ್‌ ಕಿಶೋರ್‌ ಮಾತಿನ ಮರ್ಮವೇನು?

Virat Kohli
ಕ್ರೀಡೆ29 mins ago

Virat Kohli : ಕೊಹ್ಲಿಗೆ ಗೌರವ ಸಲ್ಲಿಸಲೇಬೇಕು ಎಂದು ಹೇಳಿದ ಆಸ್ಟ್ರೇಲಿಯಾದ ಮಾಜಿ ಬ್ಯಾಟರ್​​

Karnataka rain
ಮಳೆ1 hour ago

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Shivasharane Hemaraddi Mallamma Jayanti celebration in Srisailam
ಯಾದಗಿರಿ1 hour ago

Yadgiri News: ಶ್ರೀಶೈಲಂನಲ್ಲಿ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ

union minister Pralhad Joshi latest statement in bidar
ಕರ್ನಾಟಕ1 hour ago

Pralhad Joshi: ಅಮಾಯಕ ಹೆಣ್ಣುಮಕ್ಕಳ ಹತ್ಯೆಯಾದರೂ ಪೊಲೀಸರ ಮೌನ; ಪ್ರಲ್ಹಾದ ಜೋಶಿ ಆರೋಪ

Rave party 86 people including Hema and Ashi consumed drugs in the rave party Blood report positive
ಕ್ರೈಂ1 hour ago

Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

Remedies For SadeSati
ಧಾರ್ಮಿಕ1 hour ago

Remedies For SadeSati: ಶನಿಯ ವಕ್ರದೃಷ್ಟಿ ಕಡಿಮೆ ಮಾಡಲು ಇಲ್ಲಿದೆ ಸುಲಭ ಪರಿಹಾರ

Sharad Kelkar
ಸಿನಿಮಾ1 hour ago

Sharad Kelkar: ‘ಬಾಹುಬಲಿ’ಗೆ ಧ್ವನಿ ನೀಡಿದ್ದು ಮರೆಯಲಾಗದ ಅನುಭವ ಎಂದ ಶರದ್ ಕೇಳ್ಕರ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ15 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು2 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು2 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ3 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ4 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌