Gautam Adani | 2050ಕ್ಕೆ ಭಾರತ ಎರಡನೇ ಅತಿ ದೊಡ್ಡ ಆರ್ಥಿಕತೆ: ಗೌತಮ್‌ ಅದಾನಿ - Vistara News

ಪ್ರಮುಖ ಸುದ್ದಿ

Gautam Adani | 2050ಕ್ಕೆ ಭಾರತ ಎರಡನೇ ಅತಿ ದೊಡ್ಡ ಆರ್ಥಿಕತೆ: ಗೌತಮ್‌ ಅದಾನಿ

ಕೇಂದ್ರದಲ್ಲಿ ಪ್ರಬಲ ಬಹುಮತವಿರುವ ಸರ್ಕಾರದ ಆಡಳಿತ ಇರುವುದರಿಂದ ರಚನಾತ್ಮಕ ಸುಧಾರಣಾ ನೀತಿಗಳನ್ನು ಜಾರಿಗೊಳಿಸಲು ಸಾಧ್ಯವಾಗುತ್ತಿದೆ ಎಂದು ಉದ್ಯಮಿ ಗೌತಮ್‌ ಅದಾನಿ (Gautam Adani) ಹೇಳಿದ್ದಾರೆ.

VISTARANEWS.COM


on

Adani stocks
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಭಾರತವು 2050ರ ವೇಳೆಗೆ ಜಗತ್ತಿನ ಎರಡನೇ ಅತಿ ದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಬಿಲಿಯನೇರ್‌ ಉದ್ಯಮಿ ಗೌತಮ್‌ ಅದಾನಿ (Gautam Adani) ಹೇಳಿದ್ದಾರೆ.

ಭಾರತವು ಮೊದಲ ಟ್ರಿಲಿಯನ್‌ ಡಾಲರ್‌ ಕ್ಲಬ್‌ ಸೇರಿಕೊಳ್ಳಲು 58 ವರ್ಷಗಳನ್ನು ತೆಗೆದುಕೊಂಡಿತು. ಎರಡನೇ ಟ್ರಿಲಿಯನ್‌ಗೆ 12 ವರ್ಷ ತೆಗೆದುಕೊಂಡಿತು. ಮೂರನೇ ಟ್ರಿಲಿಯನ್‌ ಕೇವಲ ಐದು ವರ್ಷಗಳಲ್ಲಿ ಸಾಧ್ಯವಾಯಿತು. ಮುಂದಿನ ಪ್ರತಿ 12-18 ತಿಂಗಳುಗಳಲ್ಲಿ ಟ್ರಿಲಿಯನ್‌ ಡಾಲರ್‌ ಸೇರ್ಪಡೆಯಾಗಲಿದೆ. 2050ರ ವೇಳೆಗೆ 30 ಟ್ರಿಲಿಯನ್‌ ಡಾಲರ್‌ ಎಕಾನಮಿಯಾಗಲಿದೆ. ಷೇರು ಮಾರುಕಟ್ಟೆ 45 ಟ್ರಿಲಿಯನ್‌ ಡಾಲರ್‌ ಮಾರುಕಟ್ಟೆ ಮೌಲ್ಯವನ್ನು ಹೊಂದಲಿದೆ ಎಂದು ಅದಾನಿ ವಿವರಿಸಿದರು.

21ನೇ ವರ್ಲ್ಡ್‌ ಕಾಂಗ್ರೆಸ್‌ ಆಫ್‌ ಅಕೌಂಟೆಂಟ್ಸ್‌ನಲ್ಲಿ ಮಾತನಾಡಿದ ಅವರು, ಪ್ರಬಲ ಬಹುಮತ ಇರುವ ಸರ್ಕಾರ ಇರುವುದರಿಂದ ಹಲವಾರು ರಚನಾತ್ಮಕ ಆಡಳಿತ ಸುಧಾರಣೆಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.

ಆರ್ಥಿಕ ಸೂಪರ್‌ ಪವರ್‌ ಆಗುವತ್ತ ಭಾರತ ಎಂಬ ವಿಷಯದ ಬಗ್ಗೆ ಮಾತನಾಡಿದ ಅವರು, ಭಾರತವು 2030ಕ್ಕೆ ವಿಶ್ವದ ಮೂರನೇ ಅತಿ ದೊಡ್ಡ ಆರ್ಥಿಕತೆಯಾಗಲಿದೆ. ಮುಂಬರುವ ಮೂರು ದಶಕಗಳಲ್ಲಿ ದೇಶ ಉದ್ಯಮಶೀಲತೆಯಲ್ಲಿ ತ್ವರಿತ ಬೆಳವಣಿಗೆ ದಾಖಲಿಸಲಿದೆ. ಹಲವಾರು ಸ್ಟಾರ್ಟಪ್‌ಗಳು ವೆಂಚರ್‌ ಕ್ಯಾಪಿಟಲ್‌ ಫಂಡಿಂಗ್‌ಗೆ ಉತ್ತೇಜನ ನೀಡಲಿವೆ. ಕೇವಲ ಎಂಟು ವರ್ಷಗಳಲ್ಲಿ ವೆಂಚರ್‌ ಕ್ಯಾಪಿಟಲ್‌ ಫಂಡಿಂಗ್‌ 50 ಶತಕೋಟಿ ಡಾಲರ್‌ಗೆ (4.05 ಲಕ್ಷ ಕೋಟಿ ರೂ.) ಏರಿಕೆಯಾಗಿರುವುದನ್ನು ನಾವು ನೋಡಿದ್ದೇವೆ. ಕಳೆದ ವರ್ಷ ಪ್ರತಿ 9 ದಿನಗಳಿಗೊಮ್ಮೆ ಭಾರತದಲ್ಲಿ ಹೊಸ ಯುನಿಕಾರ್ನ್‌ ಹೊರಹೊಮ್ಮಿದೆ ಎಂದರು.

ಸೌರಶಕ್ತಿ ಮತ್ತು ಗ್ರೀನ್‌ ಪವರ್‌ ಸಂಯೋಜನೆ, ಗ್ರೀನ್‌ ಹೈಡ್ರೋಜನ್‌ ಉತ್ಪಾದನೆ ವೃದ್ಧಿಸಲಿದ್ದು, ಭವಿಷ್ಯವನ್ನು ಉಜ್ವಲಗೊಳಿಸಲಿದೆ. 2050ರ ವೇಳೆಗೆ ಭಾರತ, ಗ್ರೀನ್‌ ಎನರ್ಜಿಯ ನಿವ್ವಳ ರಫ್ತುದಾರ ಎನ್ನಿಸಲಿದೆ. 1947ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿದಾಗ ಪ್ರಜಾಪ್ರಭುತ್ವ ಉಳಿಯದು ಎಂದಿದ್ದರು. ಆದರೆ ಈಗ ಪ್ರಜಾಪ್ರಭುತ್ವ ಉಳಿದಿರುವುದು ಮಾತ್ರವಲ್ಲದೆ, ಸರ್ಕಾರಗಳಿಂದ ಸರ್ಕಾರಕ್ಕೆ ಅಧಿಕಾರ ಶಾಂತಿಯುತವಾಗಿ ವರ್ಗಾವಣೆಯಾಗುತ್ತದೆ. ಎರಡು ದಶಕಗಳ ಬಳಿಕ ತನ್ನದೇ ಸ್ವಂತ ಬಲದ, ಬಹುಮತ ಇರುವ ಸರ್ಕಾರ ಆಡಳಿತಾರೂಢವಾಗಿದೆ. ಇದರಿಂದಾಗಿ ರಚನಾತ್ಮಕ ಸುಧಾರಣೆಗಳನ್ನು ಜಾರಿಗೊಳಿಸಲು ಸಾಧ್ಯವಾಗಿದೆ ಎಂದು ಗೌತಮ್‌ ಅದಾನಿ ವಿವರಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Congress Guarantee: ಗ್ಯಾರಂಟಿ ಯೋಜನೆ ನಿಲ್ಲಲ್ಲ ನಿಲ್ಲಲ್ಲ ನಿಲ್ಲಲ್ಲ ಎಂದ ಸಿದ್ದರಾಮಯ್ಯ

Congress Guarantee: ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

VISTARANEWS.COM


on

Koo

ಮೈಸೂರು: ರಾಜ್ಯದಲ್ಲಿ ಐದು ಗ್ಯಾರಂಟಿಗಳೂ (Congress Guarantee) ಮುಂದುವರಿಯಲಿವೆ. ಅವು ಬಡವರಿಗೆ ಶಕ್ತಿ ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗ್ಯಾರಂಟಿಗಳನ್ನು ಮರು ಪರಿಶೀಲಿಸಲಾಗುವುದೇ ಎಂಬ ಪ್ರಶ್ನೆಗೆ ನಗರದ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿ, ಯಾವುದೇ ಕಾರಣಕ್ಕೂ ಗ್ಯಾರಂಟಿಗಳನ್ನು ನಿಲ್ಲಿಸುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುವುದಿಲ್ಲ

ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸಬಾರದು ಎಂಬ ನ್ಯಾಯಾಲಯದ ಆದೇಶದ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಹಾಗೂ ಜೆಡಿಎಸ್ ಈ ಪ್ರಕರಣದಲ್ಲಿ ಕಾಂಗ್ರೆಸ್‍ನದ್ದು ರಾಜಕೀಯ ಷಡ್ಯಂತ್ರ ಎಂದು ಆರೋಪಿಸುತ್ತಿದ್ದಾರೆ. ಆದರೆ, ದೂರು ನೀಡಿರುವವರು ಯಾರು? ಸರ್ಕಾರವೇ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷ ದ್ವೇಷದ ರಾಜಕಾರಣ ಮಾಡುವುದಿಲ್ಲ. ಕಾನೂನು ರೀತಿ ಕೆಲಸ ಮಾಡುವ ಪೊಲೀಸರ ಕೆಲಸದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ನ್ಯಾಯಾಲಯದ ಆದೇಶವನ್ನು ಎಲ್ಲರೂ ಒಪ್ಪಿ ಅದರಂತೆ ನಡೆದುಕೊಳ್ಳಬೇಕಾಗುತ್ತದೆ ಎಂದರು.

ಇದನ್ನೂ ಓದಿ | Pradeep Eshwar: ಸುಧಾಕರ್‌, ನಾವೆಲ್ಲ ಒಂದೇ; ನಮಗೋಸ್ಕರ ನೀವ್ಯಾಕೆ ಸುಮ್ನೆ ಹೊಡೆದಾಡ್ತೀರಾ ಎಂದ ಪ್ರದೀಪ್‌ ಈಶ್ವರ್!

ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ

ದೇವೇಗೌಡರ ಕುಟುಂಬವನ್ನು ನಾಶ ಮಾಡುವುದರಲ್ಲಿ ಯಶಸ್ಸು ಕಂಡಿರುವ ಕಾಂಗ್ರೆಸ್ ಈಗ ಯಡಿಯೂರಪ್ಪ ಅವರನ್ನು ನಾಶ ಮಾಡಲು ಹೊರಟಿದೆ ಎಂಬ ಎಚ್ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನಾವು ದ್ವೇಷದ ರಾಜಕಾರಣ ಮಾಡುವುದಿಲ್ಲ. ಈ ನೆಲದ ಕಾನೂನನ್ನು ನಾವು ಗೌರವಿಸುತ್ತೇವೆ. ಕಾನೂನು ಹೇಳಿದಂತೆ ನಡೆದುಕೊಳ್ಳುತ್ತೇವೆ ಹಾಗೂ ಕಾನೂನನ್ನು ಪಾಲಿಸುತ್ತೇವೆ ಎಂದು ಸ್ಪಷ್ಟಪಡಿಸಿದರು.

ದರ್ಶನ್ ಪ್ರಕರಣ: ಪ್ರಭಾವಿಗಳು ನನ್ನನ್ನು ಭೇಟಿಯಾಗಿಲ್ಲ

ದರ್ಶನ್ ಪ್ರಕರಣದಲ್ಲಿ ಪ್ರಭಾವಿಗಳು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದರು ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಅದು ಕೇವಲ ಸುದ್ದಿ. ನನ್ನನ್ನು ಭೇಟಿಯಾಗಲು ಯಾರೂ ಬಂದಿಲ್ಲ. ಬಿಜೆಪಿಯವರು ಬೇಕೆಂದೇ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ನಾವು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಳ್ಳುತ್ತೇವೆ. ಅದನ್ನು ಬಿಟ್ಟು ಬೇರೆ ಏನೂ ಮಾಡುವುದಿಲ್ಲ ಎಂದರು.

ಚಿತ್ರ ನಟ ದರ್ಶನ್ ಪ್ರಕರಣದಲ್ಲಿ ಪೊಲೀಸ್ ಠಾಣೆಯ ಸುತ್ತ ಶಾಮಿಯಾನ ಹಾಕುವ ಅಗತ್ಯವೇನಿತ್ತು ಎಂಬ ಪ್ರಶ್ನೆಗೆ ಪ್ರತಿಕ್ರೆಯೆ ನೀಡಿ, ಪೊಲೀಸ್‌ನವರು ಏನು ತೀರ್ಮಾನ ಮಾಡಿದ್ದಾರೆ ಎಂದು ಗೊತ್ತಿಲ್ಲ. ಅದನ್ನು ನಮ್ಮನ್ನು ಕೇಳಿ ಮಾಡಿಲ್ಲ. ಜನಸಾಮಾನ್ಯರಿಗೆ ಇದರಿಂದ ತೊಂದರೆಯಾಗಿದೆ ಎಂಬ ಪ್ರಶ್ನೆಗೆ, ಸಾಮಾನ್ಯ ಜನರಿಗಾಗಿ ಸರ್ಕಾರ ಕೆಲಸ ಮಾಡುತ್ತದೆ ಎಂದರು.

ಲೋಕಸಭಾ ಚುನಾವಣೆಯ ಫಲಿತಾಂಶ ನಿರೀಕ್ಷೆಯಂತೆ ಬಂದಿಲ್ಲ

ಲೋಕಸಭಾ ಚುನಾವಣೆಯ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿ ಒಂದು ಸ್ಥಾನದಿಂದ 9 ಸ್ಥಾನಗಳನ್ನು ಪಡೆದಿದ್ದೇವೆ. ನಮ್ಮ ನಿರೀಕ್ಷೆಯ ರೀತಿ ಫಲಿತಾಂಶ ಬಂದಿಲ್ಲ. ಮೈಸೂರು ಸೋತಿರುವುದು ಚಾಮರಾಜನಗರ ಲೊಕಸಭಾ ಕ್ಷೇತದಲ್ಲಿ ಗೆದ್ದಿರುವುದು ಸತ್ಯ. ಒಂದರಿಂದ 9 ಸ್ಥಾನಕ್ಕೇರಿದ್ದು, ಶೇ. 13% ರಷ್ಟು ಮತಗಳ ಹಂಚಿಕೆ ನಮ್ಮ ಪರವಾಗಿದೆ. ಹಾಗೆಂದು ನಮ್ಮ ಬೆನ್ನು ತಟ್ಟಿಕೊಳ್ಳುತ್ತಿಲ್ಲ. ನಮ್ಮ ಫಲಿತಾಂಶ ಕಳೆದ ಬಾರಿಗಿಂತ ಉತ್ತಮವಾಗಿದೆ. ಆದರೆ ನಿರೀಕ್ಷೆಯಂತೆ ಆಗಿಲ್ಲ ಎಂದರು.

ಇದನ್ನೂ ಓದಿ | Lok Sabha Election : ಅಹಂಕಾರ ತೋರಿಸಿದ್ದಕ್ಕೆ ರಾಮನೇ 241 ಸ್ಥಾನಕ್ಕೆ ನಿಲ್ಲಿಸಿದ; ಪರೋಕ್ಷ ಟಾಂಗ್​ ಕೊಟ್ಟ ಆರ್​ಎಸ್​ಎಸ್​​ ಸಿದ್ಧಾಂತವಾದಿ

ಮುಂಗಾರು ವಿಫಲವಾಗುತ್ತಿದೆ ಎಂಬ ಬಗ್ಗೆ ಮಾತನಾಡಿ, ಇನ್ನೂ 10 ದಿನಗಳಿವೆ. ಕಾದು ನೋಡೋಣ ಮೋಡ ಬಿತ್ತನೆ ಬಗ್ಗೆ ನಾನು ತಜ್ಞರ ಬಳಿ ಚರ್ಚಿಸುತ್ತೇನೆ ಎಂದು ತಿಳಿಸಿದರು.

Continue Reading

ದೇಶ

Arundhati Roy: ‘ಕಾಶ್ಮೀರ ಭಾರತದ್ದಲ್ಲ’ ಎಂದಿದ್ದ ಅರುಂಧತಿ ರಾಯ್‌ ವಿರುದ್ಧ ಉಗ್ರರ ನಿಗ್ರಹ ಕಾಯ್ದೆ ಅಡಿ ಕ್ರಮ!

Arundhati Roy: ಕಾಶ್ಮೀರದ ಕುರಿತು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸೈಯದ್‌ ಶಾ ಗೀಲಾನಿ ಹಾಗೂ ಅರುಂಧತಿ ರಾಯ್‌ ಅವರು, “ಭಾರತೀಯ ಸೇನೆಯೇ ಕಾಶ್ಮೀರವನ್ನು ಅಕ್ರಮವಾಗಿ ವಶಪಡಿಸಿಕೊಂಡಿದೆ. ಕಾಶ್ಮೀರವು ಎಂದಿಗೂ ಭಾರತದ ಭಾಗವಾಗಿರಲಿಲ್ಲ” ಎಂಬುದಾಗಿ ಹೇಳಿದ್ದರು ಎಂಬ ಆರೋಪವಿದೆ. ಇವರ ಭಾಷಣದ ಸಿ.ಡಿಗಳನ್ನು ಕೂಡ ಕೋರ್ಟ್‌ ಪರಿಗಣಿಸಿದೆ ಎಂದು ತಿಳಿದುಬಂದಿದೆ. ಇದರ ಬೆನ್ನಲ್ಲೇ, ಅರುಂಧತಿ ರಾಯ್‌ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ.

VISTARANEWS.COM


on

Arundhati Roy
Koo

ನವದೆಹಲಿ: ಜಮ್ಮು-ಕಾಶ್ಮೀರದ ಕುರಿತು ಪ್ರಚೋದನಾತ್ಮಕ ಹೇಳಿಕೆ ನೀಡಿದ ಪ್ರಕರಣದಲ್ಲಿ ಖ್ಯಾತ ಲೇಖಕಿ, ಸಾಮಾಜಿಕ ಹೋರಾಟಗಾರ್ತಿಯೂ ಆದ ಅರುಂಧತಿ ರಾಯ್‌ (Arundhati Roy) ಹಾಗೂ ಮಾಜಿ ಪ್ರೊಫೆಸರ್‌ ಶೇಖ್‌ ಶೌಕತ್‌ ಹುಸೇನ್‌ (Sheikh Showkat Hussain) ಅವರಿಗೆ ತೀವ್ರ ಸಂಕಷ್ಟ ಎದುರಾಗಿದೆ. ಇಬ್ಬರ ವಿರುದ್ಧವೂ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (UAPA) ಅಡಿಯಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲು ದೆಹಲಿ ಲೆಫ್ಟಿನೆಂಟ್‌ ಗವರ್ನರ್‌ ವಿ.ಕೆ.ಸಕ್ಸೇನಾ (V K Saxena) ಅನುಮತಿ ನೀಡಿದ್ದಾರೆ. ಉಗ್ರರನ್ನು ನಿಗ್ರಹಿಸಲು ಜಾರಿಗೆ ತಂದಿರುವ ಕಾಯ್ದೆಯ ಅಡಿಯಲ್ಲಿ ಇಬ್ಬರ ವಿರುದ್ಧ ಇನ್ನು ಕ್ರಮ ತೆಗೆದುಕೊಳ್ಳಲಾಗುತ್ತದೆ.

ಏನಿದು ಪ್ರಕರಣ?

2010ರ ಅಕ್ಟೋಬರ್‌ 21ರಂದು ನವದೆಹಲಿಯ ಎಲ್‌ಟಿಜಿ ಆಡಿಟೋರಿಯಂನಲ್ಲಿ ‘ಆಜಾದಿ-ದಿ ಓನ್ಲಿ ವೇ’ (Azadi- The Only Way) ಎಂಬ ಬ್ಯಾನರ್‌ ಅಡಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರತದಿಂದ ಜಮ್ಮು-ಕಾಶ್ಮೀರವನ್ನು ಪ್ರತ್ಯೇಕಿಸುವುದು ಸೇರಿ ಹಲವು ವಿಷಯಗಳ ಕುರಿತು ಚರ್ಚಿಸಲು ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅರುಂಧತಿ ರಾಯ್‌ ಹಾಗೂ ಕಾಶ್ಮೀರ ಕೇಂದ್ರೀಯ ವಿವಿಯ ಮಾಜಿ ಪ್ರೊಫೆಸರ್‌ ಶೇಖ್‌ ಶೌಕತ್‌ ಹುಸೇನ್‌ ಅವರು ಕಾಶ್ಮೀರ ಕುರಿತು ಮಾತನಾಡಿದ್ದರು. ಇವರು ಕಾಶ್ಮೀರ ಕುರಿತು ನೀಡಿದ ಹೇಳಿಕೆಗಳನ್ನು ಖಂಡಿಸಿದ ಕಾಶ್ಮೀರದ ಸುಶೀಲ್‌ ಪಂಡಿತ್‌ ಎಂಬ ಸಾಮಾಜಿಕ ಕಾರ್ಯಕರ್ತ 2010ರ ಅಕ್ಟೋಬರ್‌ 28ರಂದು ಎಫ್‌ಐಆರ್‌ ದಾಖಲಿಸಿದ್ದರು.

ಪ್ರತ್ಯೇಕವಾದಿ ಮುಖಂಡ ಸೈಯದ್‌ ಶಾ ಗೀಲಾನಿ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ. ಸೈಯದ್‌ ಶಾ ಗೀಲಾನಿ ಹಾಗೂ ಅರುಂಧತಿ ರಾಯ್‌ ಅವರು, “ಭಾರತೀಯ ಸೇನೆಯೇ ಕಾಶ್ಮೀರವನ್ನು ಅಕ್ರಮವಾಗಿ ವಶಪಡಿಸಿಕೊಂಡಿದೆ. ಕಾಶ್ಮೀರವು ಎಂದಿಗೂ ಭಾರತದ ಭಾಗವಾಗಿರಲಿಲ್ಲ” ಎಂಬುದಾಗಿ ಹೇಳಿದ್ದರು ಎಂಬ ಆರೋಪವಿದೆ. ಕಾರ್ಯಕ್ರಮದಲ್ಲಿ ಇವರೆಲ್ಲ ಮಾತನಾಡಿದ ಸಿ.ಡಿಗಳನ್ನು ಸುಶೀಲ್‌ ಪಂಡಿತ್‌ ಅವರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಅದರಂತೆ, ಹಲವು ಸೆಕ್ಷನ್‌ಗಳ ಅಡಿಯಲ್ಲಿ ಇವರ ವಿರುದ್ಧ ತನಿಖೆ ನಡೆಸಲಾಗುತ್ತಿದೆ. ಈಗ ಯುಎಪಿಎ ಅಡಿಯಲ್ಲಿ ದೆಹಲಿ ಪೊಲೀಸರು ಕ್ರಮ ತೆಗೆದುಕೊಳ್ಳಲಿದ್ದಾರೆ.

ಏನಿದು ಯುಎಪಿಎ?
ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯನ್ನು ಸಂಕ್ಷಿಪ್ತವಾಗಿ ಯುಎಪಿಎ ಎಂದ ಕರೆಯಲಾಗುತ್ತದೆ. ಭಾರತದಲ್ಲಿ ನಡೆಯುವ ಕಾನೂನುಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸುವುದೇ ಈ ಕಾನೂನಿನ ಮುಖ್ಯ ಉದ್ದೇಶ. ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ಉಂಟು ಮಾಡುವ ಶಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವ ಅಧಿಕಾರವನ್ನು ಈ ಕಾಯ್ದೆಯು ಸರ್ಕಾರಕ್ಕೆ ನೀಡುತ್ತದೆ. 1967ರ ಈ ಕಾಯ್ದೆಗೆ ಹಲವು ಬಾರಿ ತಿದ್ದುಪಡಿಯಾಗಿದೆ. ತೀರಾ ಇತ್ತೀಚಿನ ತಿದ್ದುಪಡಿ ಎಂದರೆ, 2019ರ ತಿದ್ದುಪಡಿ. ಈ ತಿದ್ದುಪಡಿ ಅನ್ವಯ ಕೇಂದ್ರ ಸರ್ಕಾರವು ಯಾವುದೇ ವ್ಯಕ್ತಿಯನ್ನು ಕಾನೂನು ಪ್ರಕ್ರಿಯೆಗೆ ಒಳಪಡಿಸದೇ ಉಗ್ರ ಎಂದು ತೀರ್ಮಾನಿಸಬಹುದಾಗಿದೆ. ಈ ಕಾನೂನನ್ನು ಉಗ್ರ ನಿಗ್ರಹ ಕಾಯಿದೆ ಎಂದೂ ಕರೆಯಲಾಗುತ್ತದೆ.

ಗರಿಷ್ಠ ಶಿಕ್ಷೆ ಏನು?
ಯುಎಪಿಎ ಕಾಯ್ದೆಯಡಿ ಅಪರಾಧಿಗೆ ಗರಿಷ್ಠ ಐದು ವರ್ಷಕ್ಕಿಂತ ಕಡಿಮೆ ಇಲ್ಲದಂತೆ ಜೀವಾವಧಿ ಶಿಕ್ಷೆ ವಿಧಿಸಬಹುದು. ಗರಿಷ್ಠ ಪ್ರಕರಣದಲ್ಲಿ ಗಲ್ಲು ಶಿಕ್ಷೆಯನ್ನೂ ವಿಧಿಸಬಹುದಾಗಿದೆ. ಈ ಕಾಯ್ದೆಯಡಿ ಬಂಧಿತರಾದವರಿಗೆ ಜಾಮೀನು ದೊರೆಯುವ ಅವಕಾಶಗಳು ಬಹಳ ಕಡಿಮೆಯಾಗಿರುತ್ತದೆ. ಆಸ್ತಿಯನ್ನು ವಶಪಡಿಸಿಕೊಳ್ಳುವ ಅಧಿಕಾರವನ್ನು ಎನ್ಐಎಗೆ ಈ ಕಾಯ್ದೆ ನೀಡುತ್ತದೆ.

ಇದನ್ನೂ ಓದಿ: Coimbatore Blast | ಯುಎಪಿಎ ಕಾಯ್ದೆಯಡಿ ಕೊಯಮತ್ತೂರು ಸ್ಫೋಟ ತನಿಖೆ, ಯಾಕೆ ಈ ನಿರ್ಧಾರ?

Continue Reading

ಕರ್ನಾಟಕ

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

Course Fee Hike: ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆಸಿದ ಸಭೆಯಲ್ಲಿ ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಹೆಚ್ಚಳದ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.

VISTARANEWS.COM


on

Koo

ಬೆಂಗಳೂರು: ವೃತ್ತಿಪರ ಕೋರ್ಸ್‌ ವ್ಯಾಸಾಂಗ ಮಾಡ ಬಯಸುವ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ. ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ ಮಾಡಲು ಸರ್ಕಾರ ನಿರ್ಧಾರ ಮಾಡಿದ್ದು, ಇದರಿಂದ ಖಾಸಗಿ, ಅನುದಾನ ರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್‌ ಕೋರ್ಸ್‌ಗಳ ಶುಲ್ಕ ಶೇ.10ರಷ್ಟು ಹೆಚ್ಚಳವಾಗಲಿದೆ.

ಪ್ರವೇಶ ಶುಲ್ಕದ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಖಾಸಗಿ ಅನುದಾನರಹಿತ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ 2024-25ನೇ ಸಾಲಿನ ಎಂಜಿನಿಯರಿಂಗ್‌, ಆರ್ಕಿಟೆಕ್ಚರ್ ಕಾಲೇಜುಗಳಲ್ಲಿ ವೃತ್ತಿಪರ ಕೋರ್ಸುಗಳ ಶುಲ್ಕವನ್ನು ಶೇ.10 ರಷ್ಟು ಹೆಚ್ಚಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದೆ.

ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅವರು ಖಾಸಗಿ ಅನುದಾನಿತ, ಅನುದಾನರಹಿತ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಒಕ್ಕೂಟದ ಪದಾಧಿಕಾರಿಗಳೊಂದಿಗೆ ಶುಕ್ರವಾರ ನಡೆಸಿದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟವು ಶೇ.15ರಷ್ಟು ಹೆಚ್ಚಳ ಮಾಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದರು. ಸುದೀರ್ಘವಾಗಿ ನಡೆದ ಮಾತುಕತೆಯಲ್ಲಿ ಅಂತಿಮವಾಗಿ ಕಳೆದ ವರ್ಷ ನಿಗದಿಪಡಿಸಿದ್ದ ಶುಲ್ಕಕ್ಕೆ ಶೇ. 10ರಷ್ಟು ಹೆಚ್ಚಳ ಮಾಡುವ ನಿರ್ಧಾರಕ್ಕೆ ಒಮ್ಮತ ಬರಲಾಯಿತು. ಈ ಸಂಬಂಧ ಸರ್ಕಾರದ ಅಧಿಕೃತ ಆದೇಶ ಶೀಘ್ರ ಹೊರಬೀಳಲಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ | NEET UG 2024: ನೀಟ್ ಯುಜಿ ವಿವಾದದ ಬಗ್ಗೆ ಸಿಬಿಐ ತನಿಖೆಗೆ ಮನವಿ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ಕೋರ್ಟ್‌ ನೋಟಿಸ್

ಸಭೆಯಲ್ಲಿ ಉನ್ನತ ಶಿಕ್ಷಣ ಪ್ರಧಾನ ಕಾರ್ಯದರ್ಶಿಗಳು ಶ್ರೀಕರ್, ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತರಾದ ಜಗದೀಶ್, ಕೆಇಎ, ಕಾರ್ಯ ನಿರ್ವಾಹಕ ನಿರ್ದೇಶಕ ಪ್ರಸನ್ನಕುಮಾರ್, ಹಾಗೂ ಖಾಸಗಿ ತಾಂತ್ರಿಕ ಶಿಕ್ಷಣ ಸಂಸ್ಥೆಯ ಒಕ್ಕೂಟದ ಅಧ್ಯಕ್ಷರಾದ ರಾಧಾಕೃಷ್ಣ, ಪ್ರಧಾನ ಕಾರ್ಯದರ್ಶಿ, ಶ್ಯಾಮ್, ಕರ್ನಾಟಕ ರಾಜ್ಯ ಮತೀಯ ಅಲ್ಪಸಂಖ್ಯಾತ ತಾಂತ್ರಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಶಫಿಅಹಮ್ಮದ್, ಎಂ.ಎಸ್.ರಾಮಯ್ಯ ತಾಂತ್ರಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ತರಾದ ಎಂ.ಆ‌ರ್.ಜಯರಾಮ್ ಮತ್ತು ಪದಾಧಿಕಾರಿಗಳು ಹಾಜರಿದ್ದರು.

Continue Reading

ದೇಶ

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾವು ನಿಯಮಗಳ ಉಲ್ಲಂಘನೆ ಕುರಿತು ಇತ್ತೀಚೆಗೆ ತನಿಖೆ ನಡೆಸಲಾಗಿತ್ತು. ವರದಿಯ ಬಳಿಕ ಬ್ಯಾಂಕ್‌ಗೆ ಆರ್‌ಬಿಐ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. ಆರ್‌ಬಿಐ ನಿಯಮಗಳ ಉಲ್ಲಂಘನೆ, ನೋಟಿಸ್‌ಗೆ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ನೀಡಿದ ಪ್ರತಿಕ್ರಿಯೆ ಆಧರಿಸಿ ದಂಡ ವಿಧಿಸಿದೆ ಎಂದು ಆರ್‌ಬಿಐ ಪ್ರಕಟಣೆ ತಿಳಿಸಿದೆ.

VISTARANEWS.COM


on

RBI Penalty
Koo

ಮುಂಬೈ: ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ (Central Bank Of India) ಭಾರತೀಯ ರಿಸರ್ವ್‌ ಬ್ಯಾಂಕ್‌ 1.45 ಕೋಟಿ ರೂ. ದಂಡ (RBI Penalty) ವಿಧಿಸಿದೆ. ಸಾಲಗಳು ಹಾಗೂ ಮುಂಗಡಗಳು, ಗ್ರಾಹಕರ ರಕ್ಷಣೆಯ ಕುರಿತು ಆರ್‌ಬಿಐ ಜಾರಿಗೆ ತಂದಿರುವ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿ ಮುಂಬೈ ಮೂಲದ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ ದಂಡ ವಿಧಿಸಿ ಜೂನ್‌ 11ರಂದು ಆರ್‌ಬಿಐ ಆದೇಶ ಹೊರಡಿಸಿದೆ.

ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾವು ನಿಯಮಗಳ ಉಲ್ಲಂಘನೆ ಕುರಿತು ಇತ್ತೀಚೆಗೆ ತನಿಖೆ ನಡೆಸಲಾಗಿತ್ತು. ವರದಿಯ ಬಳಿಕ ಬ್ಯಾಂಕ್‌ಗೆ ಆರ್‌ಬಿಐ ಶೋಕಾಸ್‌ ನೋಟಿಸ್‌ ಜಾರಿಗೊಳಿಸಿತ್ತು. ಆರ್‌ಬಿಐ ನಿಯಮಗಳ ಉಲ್ಲಂಘನೆ, ನೋಟಿಸ್‌ಗೆ ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾ ನೀಡಿದ ಪ್ರತಿಕ್ರಿಯೆ ಆಧರಿಸಿ ದಂಡ ವಿಧಿಸಿದೆ ಎಂದು ಆರ್‌ಬಿಐ ಪ್ರಕಟಣೆ ತಿಳಿಸಿದೆ. ಇದೇ ಕಾರಣಕ್ಕಾಗಿ, ಸೊನಾಲಿ ಬ್ಯಾಂಕ್‌ ಪಿಎಲ್‌ಸಿಗೂ ಆರ್‌ಬಿಐ 96.4 ಲಕ್ಷ ರೂ. ದಂಡ ವಿಧಿಸಿದೆ. ಪ್ರತ್ಯೇಕವಾಗಿ ಸೊನಾಲಿ ಬ್ಯಾಂಕ್‌ ಪಿಎಲ್‌ಸಿಗೆ ದಂಡ ವಿಧಿಸಲಾಗಿದೆ.

ಅನುತ್ಪಾದಕ ಆಸ್ತಿ (NPA) ಬಿಕ್ಕಟ್ಟು ನಿವಾರಣೆ, ಬ್ಯಾಂಕ್‌ಗಳ ದಿವಾಳಿತನ ತಡೆಗಾಗಿ ಹಲವು ನಿಯಮಗಳನ್ನು ಆರ್‌ಬಿಐ ಜಾರಿಗೆ ತಂದಿದೆ. ಹಾಗಾಗಿ, ಎಲ್ಲ ಬ್ಯಾಂಕ್‌ಗಳು ಕಠಿಣ ನಿಯಮಗಳನ್ನು ಪಾಲಿಸಬೇಕಾಗುತ್ತದೆ. ನಿಯಮಗಳನ್ನು ಪಾಲಿಸುವಲ್ಲಿ ಸ್ವಲ್ಪ ವ್ಯತ್ಯಾಸವಾದರೂ ಆರ್‌ಬಿಐ ದಂಡ ವಿಧಿಸುತ್ತದೆ. ಆರ್‌ಬಿಐ ನಿಯಮಗಳನ್ನು ಪಾಲಿಸದ ಹಿನ್ನೆಲೆಯಲ್ಲಿಯೇ ಪೇಟಿಎಂ ಪೇಮೆಂಟ್ಸ್‌ ಬ್ಯಾಂಕ್‌ ವಹಿವಾಟನ್ನು ಸ್ಥಗಿತಗೊಳಿಸಲಾಗಿದೆ.

ಕೆಲ ತಿಂಗಳ ಹಿಂದೆಯೂ ಮೂರು ಬ್ಯಾಂಕ್‌ಗಳಿಗೆ ಆರ್‌ಬಿಐ ದಂಡ ವಿಧಿಸಿತ್ತು. ಎಸ್‌ಬಿಐಗೆ 2 ಕೋಟಿ ರೂ. ದಂಡ ವಿಧಿಸಲಾಗಿತ್ತು. ಠೇವಣಿದಾರರ ಶೈಕ್ಷಣಿಕ ಜಾಗೃತಿ ಫಂಡ್‌ ಯೋಜನೆ (2014) ಅಡಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕಾಗಿ ದಂಡ ವಿಧಿಸಿತ್ತು. ಆದಾಯ ಗುರುತಿಸುವ ಮಾನದಂಡಗಳು, ಅನುತ್ಪಾದಕ ಆಸ್ತಿ ಪತ್ತೆಹಚ್ಚುವಲ್ಲಿ ಚ್ಯುತಿ ಸೇರಿ ಹಲವು ಕಾರಣಗಳಿಂದಾಗಿ ಸಿಟಿ ಯುನಿಯನ್‌ ಬ್ಯಾಂಕ್‌ಗೆ 66 ಲಕ್ಷ ರೂ. ದಂಡ ವಿಧಿಸಿತ್ತು. ಮತ್ತೊಂದೆಡೆ, ಆರ್‌ಬಿಐ ನಿರ್ದೇಶನಗಳನ್ನು ಪಾಲಿಸುವಲ್ಲಿ ವಿಫಲವಾದ ಕೆನರಾ ಬ್ಯಾಂಕ್‌ಗೆ 32.30 ಲಕ್ಷ ರೂ. ದಂಡ ವಿಧಿಸಿತ್ತು.

ಇದನ್ನೂ ಓದಿ: RBI news: ನಿಯಮ ಪಾಲಿಸದ ಎಲ್‌&ಟಿ ಫೈನಾನ್ಸ್‌ಗೆ ₹2.5 ಕೋಟಿ ದಂಡ ವಿಧಿಸಿದ ಆರ್‌ಬಿಐ

Continue Reading
Advertisement
Do not split BBMP says Karave State President TA Narayana Gowda
ಕರ್ನಾಟಕ19 mins ago

BBMP: ಬಿಬಿಎಂಪಿ ವಿಭಜನೆ ಬೇಡ; ಇದು ಕನ್ನಡಿಗರಿಗೆ ಮಾರಕ: ನಾರಾಯಣ ಗೌಡ

ಕರ್ನಾಟಕ26 mins ago

Congress Guarantee: ಗ್ಯಾರಂಟಿ ಯೋಜನೆ ನಿಲ್ಲಲ್ಲ ನಿಲ್ಲಲ್ಲ ನಿಲ್ಲಲ್ಲ ಎಂದ ಸಿದ್ದರಾಮಯ್ಯ

Arundhati Roy
ದೇಶ41 mins ago

Arundhati Roy: ‘ಕಾಶ್ಮೀರ ಭಾರತದ್ದಲ್ಲ’ ಎಂದಿದ್ದ ಅರುಂಧತಿ ರಾಯ್‌ ವಿರುದ್ಧ ಉಗ್ರರ ನಿಗ್ರಹ ಕಾಯ್ದೆ ಅಡಿ ಕ್ರಮ!

Sunny Leone
ಸಿನಿಮಾ1 hour ago

Sunny Leone: ಸನ್ನಿ ಲಿಯೋನ್ ಬೇಕೇಬೇಕೆಂದು ವಿದ್ಯಾರ್ಥಿಗಳ ಪಟ್ಟು; ಕೇರಳ ವಿವಿಗೆ ಇಕ್ಕಟ್ಟು!

ಕರ್ನಾಟಕ1 hour ago

Course Fee Hike: ತಾಂತ್ರಿಕ ಶಿಕ್ಷಣ ಕೋರ್ಸ್‌ಗಳ ಪ್ರವೇಶ ಶುಲ್ಕ ಶೇ.10ರಷ್ಟು ಹೆಚ್ಚಳ

engineering students have invented a unique fire extinguisher drone at bengaluru
ಕರ್ನಾಟಕ1 hour ago

Bengaluru News: ಬೆಂಕಿ ನಂದಿಸುವ ‘ವಿಶಿಷ್ಟ ಡ್ರೋನ್‌’; ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಆವಿಷ್ಕಾರ!

RBI Penalty
ದೇಶ1 hour ago

RBI Penalty: ಸೆಂಟ್ರಲ್‌ ಬ್ಯಾಂಕ್‌ ಆಫ್‌ ಇಂಡಿಯಾಗೆ 1.45 ಕೋಟಿ ರೂ. ದಂಡ ವಿಧಿಸಿದ ಆರ್‌ಬಿಐ; ಕಾರಣ ಏನು?

Government urdu school roof collapse in Shira
ತುಮಕೂರು2 hours ago

Shira News: ಸರ್ಕಾರಿ ಶಾಲಾ ಕೊಠಡಿ ಚಾವಣಿ ಕುಸಿತ; ಶಿಕ್ಷಕಿ ತಲೆಗೆ ಪೆಟ್ಟು, ವಿದ್ಯಾರ್ಥಿಗಳು ಪಾರು

Journalist Sunayana Suresh is now a director
ಕರ್ನಾಟಕ2 hours ago

Kannada Short Movie: ಪತ್ರಕರ್ತೆ ಸುನಯನಾ ಸುರೇಶ್ ಈಗ ನಿರ್ದೇಶಕಿ; ‘ಮೌನ ರಾಗ’ ಕಿರುಚಿತ್ರಕ್ಕೆ ನಿರ್ದೇಶನ

Road Accident
ಕರ್ನಾಟಕ2 hours ago

Road Accident: ಬೆಳಗಾವಿಯಲ್ಲಿ ಕಾಲೇಜು ಬಸ್‌ಗೆ ಟಿಪ್ಪರ್ ಡಿಕ್ಕಿ; 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ4 hours ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು5 hours ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು5 hours ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ6 hours ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

ಟ್ರೆಂಡಿಂಗ್‌