Incite Violence | ಯಾವ ಧರ್ಮವೂ ಹಿಂಸೆಯನ್ನು ಪ್ರಚೋದಿಸುವುದಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ - Vistara News

ಬೆಂಗಳೂರು

Incite Violence | ಯಾವ ಧರ್ಮವೂ ಹಿಂಸೆಯನ್ನು ಪ್ರಚೋದಿಸುವುದಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಶಿಕ್ಷಣ, ಉದ್ಯೋಗ, ಸಬಲೀಕರಣವನ್ನು ಸಾಧಿಸಲು ಅಲ್ಪಸಂಖ್ಯಾತರು ಸಂಘಟಿತರಾಗಬೇಕು. ದೇಶದ್ರೋಹದ ಕೃತ್ಯ ಎಸಗುವ ಕಿಡಿಗೇಡಿಗಳ ವಿರುದ್ಧ ಎದ್ದುನಿಲ್ಲಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಕರೆ ನೀಡಿದ್ದಾರೆ.

VISTARANEWS.COM


on

ತುಮಕೂರು ಜನಸಂಕಲ್ಪ ಯಾತ್ರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಡಿಯೊ ತಿರುಚುವಿಕೆ ಪ್ರಕರಣ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯಾವ ಧರ್ಮವೂ ಹಿಂಸೆಯನ್ನು ಪ್ರಚೋದಿಸುವುದಿಲ್ಲ (Incite Violence). ಹೀಗಾಗಿ ದೇಶದಲ್ಲಿ ಶಾಂತಿ ಕದಡುವ ಯಾವುದೇ ಶಕ್ತಿಯನ್ನು ಯಾರೂ ಬೆಂಬಲಿಸಬಾರದು. ದೇಶದ್ರೋಹದ ಕೃತ್ಯಗಳಿಗೆ ಬೆಂಬಲ ನೀಡದೆ, ಎಲ್ಲರೂ ಒಟ್ಟಾಗಿ ದೇಶ ಕಟ್ಟುವ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ವತಿಯಿಂದ ನಿರ್ಮಿಸಿರುವ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮತ್ತು ಉರ್ದು ಅಕಾಡೆಮಿ ನೂತನ ಕಚೇರಿಗಳ ಸಂಕೀರ್ಣ ʼಕೆ.ಎಂ.ಡಿ.ಸಿ. ಭವನʼ ಉದ್ಘಾಟಿಸಿ ಮಾತನಾಡಿದರು.

ಭಾರತದಲ್ಲಿ ಅನೇಕ ಧರ್ಮಗಳು ಹುಟ್ಟಿವೆ. ಎಲ್ಲರೂ ಮೊದಲು ದೇಶವನ್ನು ಪ್ರೀತಿಸಿ, ಮಾತೃಭೂಮಿಯನ್ನು ಪೂಜಿಸಬೇಕು. ಶಿಕ್ಷಣ, ಉದ್ಯೋಗ, ಸಬಲೀಕರಣವನ್ನು ಸಾಧಿಸಲು ಅಲ್ಪಸಂಖ್ಯಾತರು ಸಂಘಟಿತರಾಗಬೇಕು. ದೇಶದ್ರೋಹದ ಕೃತ್ಯ ಎಸಗುವ ಕಿಡಿಗೇಡಿಗಳ ವಿರುದ್ಧ ಎದ್ದುನಿಲ್ಲಬೇಕು. ಆಗ ಮಾತ್ರ ಸಮಾಜದಲ್ಲಿ ಸೌಹಾರ್ದತೆ ಬೆಳೆಯಲು ಸಾಧ್ಯ ಎಂದು ಹೇಳಿದರು.

ಸಮುದಾಯದವರ ಚಿಂತನೆ ಬದಲಾಗಬೇಕು
ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಣ್ಣು ಮಕ್ಕಳು ಬುದ್ಧಿವಂತರಿದ್ದಾರೆ. 21ನೇ ಶತಮಾನ ಜ್ಞಾನದ ಶತಮಾನ. ಆದರೆ, ಅಲ್ಪ ಸಂಖ್ಯಾತರನ್ನು ಕತ್ತಲಲ್ಲಿ ಇಡಲಾಗಿದೆ. ಹೀಗಾಗಿ ಸಮುದಾಯದವರ ಚಿಂತನೆ ಬದಲಾಗಬೇಕು. ನಾನು ಹೇಳುವುದು ಕೆಲವರಿಗೆ ಇಷ್ಟ ಆಗುವುದಿಲ್ಲ. ಪೆನ್ನು ಪೆನ್ಸಿಲ್ ಇರಬೇಕಾದ ಅಲ್ಪ ಸಂಖ್ಯಾತ ಮಕ್ಕಳ ಕೈಯಲ್ಲಿ ಪಾನಾ ಪಕ್ಕಡ್ ಇದೆ. ಸ್ಕೂಲ್ ಬ್ಯಾಗ್ ಇರಬೇಕಾದವರ ಬೆನ್ನಮೇಲೆ ಜೋಳ, ಅಕ್ಕಿಯ ಚೀಲ‌ ಇದೆ‌. ಅವರಿಗೆ ಓದುವ ಹಕ್ಕಿದೆ, ಆದರೆ, ಈ ಬಗ್ಗೆ ಹಿಂದಿನ ಸರ್ಕಾರಗಳು ಏಕೆ ಯೋಚನೆ ಮಾಡಲಿಲ್ಲ ಅಸಮಾಧಾನ ಹೊರ ಹಾಕಿದರು.

ಅಬ್ದುಲ್ ಅಜೀಂ ಅತ್ಯುತ್ತಮ ಅಧಿಕಾರಿಯಾಗಿದ್ದರು. ಅವರಂತೆ ಇಂದಿನ ಮಕ್ಕಳು ಯಶಸ್ವಿಯಾಗಬೇಕು. ಆದರೆ ಕೆಲವರು ನಮ್ಮ ಸರ್ಕಾರದ ಬಗ್ಗೆ ಆರೋಪ ಮಾಡುತ್ತಾರೆ. ನನ್ನ ಆರ್ಥಿಕ ಕಾರ್ಯದರ್ಶಿ ಜಾಫರ್ ಹಾಗೂ ಕೋವಿಡ್ ಸಂದರ್ಭದಲ್ಲಿ ಶ್ರಮವಹಿಸಿದ ಆರೋಗ್ಯ ಇಲಾಖೆಯ ಕಾರ್ಯದರ್ಶಿ ಜಾವೇದ್ ಅಖ್ತರ್ ಅಲ್ಪಸಂಖ್ಯಾತರು. ಈಗ ಬೆಂಗಳೂರಿನಲ್ಲಿ ವಾಹನ ದಟ್ಟಣೆ ನಿರ್ವಹಿಸಲು ವಿಶೇಷ ಆಯುಕ್ತರ ಹುದ್ದೆಗೆ ಸಲೀಂ ಅವರನ್ನು ನೇಮಕ ಮಾಡಲಾಗಿದೆ ಎಂದರು.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 1460 ಕೋಟಿ ರೂ.
ವಿದೇಶದಲ್ಲಿ ಉನ್ನತ ಶಿಕ್ಷಣ ವಿದ್ಯಾರ್ಥಿವೇತನ‌, ಐಎಎಸ್ ಕೆಎಎಸ್ ತರಬೇತಿ ನಿಲ್ಲಿಸಲಾಗಿತ್ತು. ಅದನ್ನು ಮತ್ತೆ ಪ್ರಾರಂಭಿಸಲಾಗಿದೆ. ನಮ್ಮ ಸರ್ಕಾರ ಮೌಲಾನಾ ಆಜಾದ್ ಶಾಲೆ, 30ಕ್ಕಿಂತ ಹೆಚ್ಚು ಸಿಬಿಎಸ್‌ಸಿ ಪಠ್ಯ ಕಲಿಸುವ ಅಬ್ದುಲ್ ಕಲಾಂ ಶಾಲೆಗಳು ಕರ್ನಾಟಕದಲ್ಲಿ ಯಶಸ್ವಿಯಾಗುತ್ತಿದೆ. ಈ ವಸತಿ ಶಾಲೆಗಳಿಗೆ ವಿದ್ಯಾರ್ಥಿ ವೇತನಗಳನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ನೀಡಲಾಗುತ್ತಿದೆ. ಅಲ್ಪಸಂಖ್ಯಾತರ ಶಾಲೆಗಳಿಗೆ 624 ಶಿಕ್ಷಕರನ್ನು ನಮ್ಮ ಸರ್ಕಾರ ನೇಮಕ ಮಾಡಿದೆ. ಈ ವರ್ಷ ಹಾಸ್ಟೆಲ್‌ಗಳಲ್ಲಿ 2500 ಮಕ್ಕಳು ಹೆಚ್ಚುವರಿಯಾಗಿ ಸೇರಿಸಿಕೊಳ್ಳಲಾಗಿದೆ. 1460 ಕೋಟಿ ರೂ. ಅನುದಾನವನ್ನು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ ನೀಡಲಾಗಿದೆ ಎಂದು ತಿಳಿಸಿದರು.

ವಕ್ಫ್‌ ಆಸ್ತಿ ರಕ್ಷಣೆ
ವಕ್ಫ್‌ ಆಸ್ತಿ ವಶಪಡಿಸಿಕೊಳ್ಳುವವರ ವಿರುದ್ಧ ವಕ್ಫ್ ಅಧ್ಯಕ್ಷರು ಕ್ರಮ ಕೈಗೊಳ್ಳಬೇಕು. ದೇವರ ಆಸ್ತಿ ಉಳಿಸುವ ಅವಕಾಶ ವಕ್ಫ್‌ ಅಧ್ಯಕ್ಷರಿಗೆ ಸಿಕ್ಕಿದೆ. ಹೀಗಾಗಿ ದೇವರ ಕೆಲಸ ಮಾಡಬೇಕು. ರಾಜ್ಯದಲ್ಲಿ 2,500 ಎಕರೆ ವಕ್ಫ್‌ ಆಸ್ತಿ ಖಾಸಗಿಯವರಿಂದ ಕಬಳಿಕೆಯಾಗಿದೆ. ಅದನ್ನು ವಶಪಡಿಸಿಕೊಳ್ಳಲು ಸಮುದಾಯ ನಿಲ್ಲಬೇಕು. ನಿಮ್ಮ ಜತೆಗೆ ಸರ್ಕಾರವಿದೆ. ವಕ್ಫ್ ಮಂಡಳಿ ಮುಸ್ಲಿಂ ಸಮುದಾಯದ ಹಕ್ಕುಗಳ ರಕ್ಷಣೆಗೆ ಬದ್ಧರಾಗಿರಬೇಕು ಎಂದರು.

ಕ್ರಿಶ್ಚಿಯನ್ ಧರ್ಮ ಪ್ರಗತಿಪರ ಧರ್ಮ, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಪ್ರತಿ ಭಾನುವಾರ ಪ್ರಾರ್ಥಿಸುತ್ತಾರೆ. ಅವರ ಜತೆಗೂ ನನಗೆ ಒಳ್ಳೆಯ ಸಂಬಂಧ ಇದೆ. ಜೈನಧರ್ಮದ ಮಹಾವೀರರು ತ್ಯಾಗಮೂರ್ತಿಯಾಗಿದ್ದರು. ಶಾಂತಿ, ಅಹಿಂಸೆ ತತ್ವಗಳನ್ನು ಪ್ರತಿಪಾದಿಸಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | Panchamasali Reservation | ಬೊಮ್ಮಾಯಿ ಸರ್ಕಾರ 2A ಮೀಸಲಾತಿ ನೀಡುತ್ತದೆ ಎಂಬ ವಿಶ್ವಾಸವಿದೆ: ವಚನಾನಂದ ಸ್ವಾಮೀಜಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Road Accident: ಜಮ್ಮು ಕಾಶ್ಮೀರದಲ್ಲಿ ಕಾರು ಅಪಘಾತ, ಬೆಂಗಳೂರಿನ ಮೂವರ ಸಾವು

Road Accident: ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿದ್ದ ಕುಟುಂಬ ಅಲ್ಲಿನ ಬಾಡಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿತ್ತು. ಹಾದಿಯಲ್ಲಿ ಎದುರಿದ್ದ ಕಾರೊಂದು ಕೆಟ್ಟು ನಿಂತಿದ್ದು, ಅದೇನೆಂದು ನೋಡಲು ಈ ಕಾರು ಚಾಲಕ ಇಳಿದಿದ್ದ. ಇಳಿಯುವಾಗ ಕಾರಿನ ಹ್ಯಾಂಡ್ ಬ್ರೇಕ್ ಹಾಕಿರಲಿಲ್ಲ.

VISTARANEWS.COM


on

road accident jammu kashmir
Koo

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ (Jammu Kashmir) ಪ್ರವಾಸಕ್ಕೆ (tour) ತೆರಳಿದ್ದ ಒಂದೇ ಕುಟುಂಬದ ಮೂವರು ಕಾರು ಅಪಘಾತವೊಂದರಲ್ಲಿ (Car Accident) ಮೃತಪಟ್ಟಿದ್ದಾರೆ. ಅಮರನಾಥ ಯಾತ್ರಾ (Amaranath yatra) ಹಾದಿ ಸಮೀಪದ ಝೋಜಿಲಾ ಪಾಸ್ ಬಳಿ ದುರಂತ ಘಟನೆ (Road Accident) ನಡೆದಿದೆ. ಕಾರು ಚಾಲಕ (Driver) ಹ್ಯಾಂಡ್‌ಬ್ರೇಕ್‌ (Hand Brake) ಹಾಕಲು ಮರೆತದ್ದೇ ದುರ್ಘಟನೆಗೆ ಕಾರಣವಾಗಿದೆ.

ಬೆಂಗಳೂರು ನಿವಾಸಿಗಳಾದ ತಂದ್ರಾ ದಾಸ್(67) ಮೊನಾಲಿಸಾ ದಾಸ್(41) ಹಾಗೂ ಮತ್ತೊಬ್ಬ ಪುರುಷ ಸಾವಿಗೀಡಾಗಿದ್ದಾರೆ. ಬಾಲಕಿ ಅದ್ರಿತಾ ಖಾನ್(9) ಎಂಬಾಕೆಗೆ ಗಾಯಗಳಾಗಿವೆ. ಇವರು ಬೆಳ್ಳಂದೂರಿನ ಗ್ರೀನ್ ಗ್ಲೆನ್ ಲೇಔಟ್ ನಿವಾಸಿಗಳಾಗಿದ್ದರು.

ಜಮ್ಮು ಕಾಶ್ಮೀರಕ್ಕೆ ಪ್ರವಾಸಕ್ಕೆ ಹೋಗಿದ್ದ ಕುಟುಂಬ ಅಲ್ಲಿನ ಬಾಡಿಗೆ ಕಾರಿನಲ್ಲಿ ಪ್ರಯಾಣ ಮಾಡುತ್ತಿತ್ತು. ಹಾದಿಯಲ್ಲಿ ಎದುರಿದ್ದ ಕಾರೊಂದು ಕೆಟ್ಟು ನಿಂತಿದ್ದು, ಅದೇನೆಂದು ನೋಡಲು ಈ ಕಾರು ಚಾಲಕ ಇಳಿದಿದ್ದ. ಇಳಿಯುವಾಗ ಕಾರಿನ ಹ್ಯಾಂಡ್ ಬ್ರೇಕ್ ಹಾಕಿರಲಿಲ್ಲ. ಹೀಗಾಗಿ ಜಾರಿ ಹೋದ ಕಾರು ಪ್ರಪಾತಕ್ಕೆ ಉರುಳಿದೆ. ಮೃತದೇಹಗಳನ್ನು ಸಿಆರ್‌ಪಿಎಫ್ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಹೊರತೆಗೆದಿದ್ದಾರೆ.

ಕೊಡಗಿನ ಸುಂಟಿಕೊಪ್ಪ ಬಳಿ ಟಿಪ್ಪರ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ದುರ್ಮರಣ

ಕೊಡಗು: ಬೈಕ್ ಹಾಗೂ‌ ಟಿಪ್ಪರ್ ನಡುವೆ ಭೀಕರ ಅಪಘಾತ ನಡೆದು, ಇಬ್ಬರು ಸವಾರರು ದುರ್ಮರಣ ಹೊಂದಿರುವ ಘಟನೆ (Road Accident) ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಕೊಡಗರ ಹಳ್ಳಿಯಲ್ಲಿ ನಡೆದಿದೆ. ಮಂಜು (25) ಹಾಗೂ ರಕ್ಷಿತ್ (24) ಮೃತರು.

ಸುಂಟಿಕೊಪ್ಪದಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ಕುಶಾಲನಗರದಿಂದ ಮಡಿಕೇರಿ ಕಡೆ ಬರುತ್ತಿದ್ದ ಟಿಪ್ಪರ್ ಡಿಕ್ಕಿಯಾಗಿವೆ, ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಓವರ್ ಟೇಕ್ ಮಾಡಲು ಹೋಗಿ ರಸ್ತೆ ಪಕ್ಕದ ತಗ್ಗಿಗೆ ಬಿದ್ದ ಬೈಕ್; ಇಬ್ಬರಿಗೆ ಗಾಯ

ಬಾಗಲಕೋಟೆ: ಓವರ್ ಟೇಕ್ ಮಾಡಲು ಹೋಗಿ ರಸ್ತೆ ಪಕ್ಕದ ತಗ್ಗಿಗೆ ಬೈಕ್ ಬಿದ್ದ ಹಿನ್ನೆಲೆಯಲ್ಲಿ ಪಿಯುಸಿ ಓದುವ ಇಬ್ಬರು ವಿದ್ಯಾರ್ಥಿಗಳು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ. ಬೈಕ್‌ನಿಂದ ಬಿದ್ದು ಕೈ ಮುರಿದು ಏಳೋಕಾಗದೇ ಸ್ಥಳದಲ್ಲೇ ಓರ್ವ ವಿದ್ಯಾರ್ಥಿ ನರಳಾಡುತ್ತಿದ್ದ. ಮತ್ತೋರ್ವನ ಮುಖ, ಹಣೆ, ತಲೆ, ಮೂಗಿಗೆ ಗಾಯಗಳಾಗಿ ರಕ್ತಸ್ರಾವವಾಗುತ್ತಿತ್ತು.

ಬಾದಾಮಿ ತಾಲೂಕಿನ ಹಾಲಿಗೇರಿ ಗ್ರಾಮದ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಬಸಯ್ಯ ಸೂಳಿಕೇರಿ (17), ಪ್ರಶಾಂತ್ (17) ಎಂಬ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಕಾಲೇಜು ಮುಗಿಸಿ ಕೆರೂರು ಪಟ್ಟಣದಿಂದ ಮನೆಗೆ ಹೋಗುವ ವೇಳೆ ಅಪಘಾತ ನಡೆದಿದೆ.

ಇದನ್ನೂ ಓದಿ | Sexual Abuse: ಮಧ್ಯವಯಸ್ಕ ಮಹಿಳೆಯ ಮೇಲೆ ಮಗನ ಸ್ನೇಹಿತನಿಂದಲೇ ಅತ್ಯಾಚಾರ!

Continue Reading

ಮಳೆ

Karnataka Weather : ಬಿರುಗಾಳಿ ಜತೆಗೆ ಅಬ್ಬರಿಸಲಿದ್ದಾನೆ ವರುಣ; ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka Weather Forecast: ಕರಾವಳಿ-ಮಲೆನಾಡು ಭಾಗದಲ್ಲಿ ವರುಣನ ರೌದ್ರಾವತಾರಕ್ಕೆ ಜನರು ನಲುಗಿ ಹೋಗಿದ್ದಾರೆ. ಮುಂದಿನ ನಾಲ್ಕೈದು ದಿನಗಳು ಗಾಳಿ ಜತೆಗೆ ಭಾರಿ ಮಳೆಯಾಗುವ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ (Heavy Rain Alert) ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಜು.17ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Heavy rain) ಎಚ್ಚರಿಕೆ ಇದ್ದು, ಮಲೆನಾಡಿನಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಸೇರಿದಂತೆ ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಕೋಲಾರದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್‌, ಧಾರವಾಡ, ಗದಗ, ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಅತ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರಿನಲ್ಲಿ ಮಳೆಯು ಅಬ್ಬರಿಸಲಿದೆ. ಕರಾವಳಿಯಲ್ಲಿ ವ್ಯಾಪಕ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಅಲರ್ಟ್‌ ನೀಡಲಾಗಿದೆ.

ಇದನ್ನೂ ಓದಿ: Rain Effect : ಭಾರಿ ಮಳೆಗೆ ಶಿರೂರು ಗುಡ್ಡ ಕುಸಿತ; ಮಣ್ಣಿನಡಿ ಸಿಲುಕಿದ್ದ ಮಹಿಳೆ ಮೃತದೇಹ ಪತ್ತೆ, ಉಳಿದವರಿಗಾಗಿ ಹುಡುಕಾಟ

ಬೆಂಗಳೂರಿನಲ್ಲಿ ಮರೆಯಾಗುವ ಸೂರ್ಯ

ಬೆಂಗಳೂರು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನಗಳು ಅನುಕ್ರಮವಾಗಿ 24 ಮತ್ತು 20 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ರೆಡ್‌ ಅಲರ್ಟ್‌ ಘೋಷಣೆ

ಗುಡುಗು ಸಹಿತ ವ್ಯಾಪಕ ಮಳೆಯಾಗಲಿದ್ದು, ಗಾಳಿ ವೇಗವು 40-50 ಕಿ.ಮೀ ವೇಗದಲ್ಲಿ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಮಳೆ ಅನಾಹುತದ ಚಿತ್ರಣ ಹೀಗಿದೆ ನೋಡಿ

Karnataka Rain
Rain Effect
karnataka Rain
Karnataka Rain
Karnataka Rain
karnataka Rain
karnataka rain
karnataka Rain
karnataka Rain

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ಗ್ಯಾಲರಿ ಜಿ ಯಿಂದ ‘ಮೊಸಾಯಿಕ್ ಆಫ್ ಮಾಡರ್ನಿಟಿ’ ಕಲಾ ಪ್ರದರ್ಶನ

Bengaluru News: ಬೆಂಗಳೂರಿನ ಗ್ಯಾಲರಿ ಜಿ, ಸಂದೀಪ್ ಮತ್ತು ಗೀತಾಂಜಲಿ ಮೈನಿ ಫೌಂಡೇಶನ್ ಸಹಯೋಗದಲ್ಲಿ ನಗರದ ಗ್ಯಾಲರಿ ಜಿ ಯಲ್ಲಿ ‘ಮೊಸಾಯಿಕ್ ಆಫ್ ಮಾಡರ್ನಿಟಿ ಎಕ್ಸ್‌ಪ್ಲೋರಿಂಗ್‌ ಡೈವರ್ಸಿಟಿ ಇನ್ ಆರ್ಟ್’ ಎಂಬ ಕಲಾಪ್ರದರ್ಶನಕ್ಕೆ ಸೋಮವಾರ ಚಾಲನೆ ನೀಡಲಾಯಿತು.

VISTARANEWS.COM


on

Mosaic of Modernity art exhibition by Gallery G in Bengaluru
Koo

ಬೆಂಗಳೂರು: ಗ್ಯಾಲರಿ ಜಿ, ಸಂದೀಪ್ ಮತ್ತು ಗೀತಾಂಜಲಿ ಮೈನಿ ಫೌಂಡೇಶನ್ ಸಹಯೋಗದಲ್ಲಿ ನಗರದ ಗ್ಯಾಲರಿ ಜಿ ಯಲ್ಲಿ ‘ಮೊಸಾಯಿಕ್ ಆಫ್ ಮಾಡರ್ನಿಟಿ ಎಕ್ಸ್‌ಪ್ಲೋರಿಂಗ್‌ ಡೈವರ್ಸಿಟಿ ಇನ್ ಆರ್ಟ್’ ಎಂಬ ಕಲಾಪ್ರದರ್ಶನಕ್ಕೆ ಸೋಮವಾರ ಚಾಲನೆ (Bengaluru News) ನೀಡಲಾಯಿತು.

ಈ ವಿಶಿಷ್ಟ ಗುಂಪು ಕಲಾ ಪ್ರದರ್ಶನದಲ್ಲಿ ಭಾರತದಾದ್ಯಂತದ ಎಂಟು ಪ್ರತಿಭಾವಂತ ಕಲಾವಿದರ ಕೃತಿಗಳು ಪ್ರದರ್ಶನಗೊಳ್ಳುತ್ತಿವೆ. ಪ್ರತಿಯೊಬ್ಬರೂ ತಮ್ಮ ವಿಶಿಷ್ಟ ಪ್ರಕಾರ ಮತ್ತು ಕಲಾ ಮಾಧ್ಯಮವನ್ನು ಗ್ಯಾಲರಿಯಲ್ಲಿ ಪ್ರಸ್ತುತಪಡಿಸುತ್ತಿದ್ದಾರೆ. ಈ ಪ್ರದರ್ಶನವು ಆಗಸ್ಟ್ 15ರವರೆಗೆ ನಡೆಯಲಿದೆ.

ಇದನ್ನೂ ಓದಿ: Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

ಈ ಪ್ರದರ್ಶನವು ವೀಕ್ಷಕ್ಷರಿಗೆ ಸ್ಪೂರ್ತಿದಾಯಕ ಮತ್ತು ಸೃಜನಶೀಲ ಜಾಗೃತಿಯ ಭರವಸೆ ಕೊಡುತ್ತದೆ. ಈ ಪ್ರದರ್ಶನದಲ್ಲಿ ಕಾಣಿಸಿಕೊಂಡ ಕಲಾವಿದರ ಮಾಹಿತಿ ಇಲ್ಲಿದೆ.

ಜೈ ಖನ್ನಾ: ಬಣ್ಣ ಮತ್ತು ಸಂಕೀರ್ಣ ವಿವರಗಳ ರೋಮಾಂಚಕ ಬಳಕೆಗೆ ಹೆಸರುವಾಸಿಯಾದ ಜೈ ಖನ್ನಾ ಅವರ ಕೆಲಸವು ಹೆಚ್ಚಾಗಿ ಪುರಾಣ ಮತ್ತು ಆಧ್ಯಾತ್ಮಿಕತೆಯ ವಿಷಯಗಳಿಗೆ ಸಂಬಂಧಿಸಿದ್ದು. ಅವರ ವರ್ಣಚಿತ್ರಗಳು ದೃಶ್ಯ ಕಾವ್ಯದಂತೆ ಇದ್ದು. ಸಾಂಪ್ರದಾಯಿಕ ಭಾರತೀಯ ಕಲಾಪ್ರಕಾರಗಳಲ್ಲದೆ ಸಮಕಾಲೀನ ಸೌಂದರ್ಯಶಾಸ್ತ್ರದೊಂದಿಗೆ ಸಮ್ಮಿಲನಗೊಂಡಿದೆ.

ದಿನೇಶ್ ಮಗರ್: ದಿನೇಶ್ ಮಗರ್ ಅವರ ಕಲಾಕೃತಿಗಳು ಅವುಗಳ ದಿಟ್ಟ ಸಂಯೋಜನೆಗಳು ಮತ್ತು ಕ್ರಿಯಾತ್ಮಕ ಶಕ್ತಿಗಾಗಿ ಖ್ಯಾತಿ ಪಡೆದಿದೆ. ಅವರ ಕೆಲಸವು ಹೆಚ್ಚಾಗಿ ದೈವಾಂಶ ಮತ್ತು ಪ್ರಕೃತಿಯೊಂದಿಗಿನ ಅವರ ಆಳವಾದ ಕಲ್ಪನೆಯನ್ನು ಪ್ರತಿಬಿಂಬಿಸುತ್ತದೆ, ಶಾಂತಿ ಮತ್ತು ಆಧ್ಯಾತ್ಮಿಕತೆಯ ಪ್ರಜ್ಞೆಯನ್ನು ಪ್ರಚೋದಿಸಲು ರೂಪಗಳು ಮತ್ತು ವಿನ್ಯಾಸಗಳನ್ನು ಬಳಸಲಾಗಿದೆ.

ಆರೋಹಿ ಸಿಂಗ್: ಆರೋಹಿ ಸಿಂಗ್ ಒಬ್ಬ ಬಹುಮುಖ ಪ್ರತಿಭೆಯ ಕಲಾವಿದೆಯಾಗಿದ್ದು, ಅವರ ಸಂಗ್ರಹಗಳು ಜಾನಪದ ಕಲೆಯಿಂದ ಹಿಡಿದು ಆಧುನಿಕ ಶೈಲಿ ಸೇರಿದಂತೆ ಎಲ್ಲವನ್ನೂ ಒಳಗೊಂಡಿದೆ. ಅವರ ಕೃತಿಗಳು ಭಾರತೀಯ ಸಾಂಸ್ಕೃತಿಕ ಪರಂಪರೆಯಿಂದ ಪಡೆಯಲಾದ ಶ್ರೀಮಂತ ನಿರೂಪಣೆಗಳು ಮತ್ತು ರೋಮಾಂಚಕ ಸಂಗತಿಗಳಿಂದ ನಿರೂಪಿಸಲ್ಪಟ್ಟಿದೆ.

ದಾಮೋದರ್ ಅವಾರೆ: ಅಬ್ಸ್ಟ್ರಾಕ್ ಕಲೆಯಲ್ಲಿ ನೈಪುಣ್ಯ ಹೊಂದಿರುವ ದಾಮೋದರ್ ಅವಾರೆ ಅವರ ವರ್ಣಚಿತ್ರಗಳು ಅವುಗಳ ಪ್ರಶಾಂತ ಮತ್ತು ಚಿಂತನಶೀಲ ಗುಣಗಳಿಂದ ಕೂಡಿದ್ದು ಭಿನ್ನವೆನಿಸುತ್ತದೆ. ಅವರ ಕೃತಿಗಳು ಆಗಾಗ್ಗೆ ಲ್ಯಾಂಡ್ಸ್ಕೇಪ್ ಮತ್ತು ಪಾಕೃತಿಕ ವಿಷಯಗಳನ್ನು ಆಧರಿಸಿದೆ. ಅವುಗಳ ಚಿಂತನಶೀಲ ಸೌಂದರ್ಯವನ್ನು ತನ್ನ ಕ್ಯಾನ್ವಾಸ್ನಲ್ಲಿ ಮೂಡಿಸುತ್ತಾರೆ.

ತುಷಾರ್ ಶಿಂಧೆ: ತುಷಾರ್ ಶಿಂಧೆ ಅವರ ಕಲೆಯು ಬಣ್ಣ ಮತ್ತು ರೂಪಗಳ ಆಚರಣೆಯಾಗಿದೆ. ಅವರ ವರ್ಣಚಿತ್ರಗಳು ತಮ್ಮ ಅಭಿವ್ಯಕ್ತಿಶೀಲ ಗೆರೆಗಳು ಮತ್ತು ದಿಟ್ಟ ಮಾದರಿಗಳಿಗೆ ಹೆಸರುವಾಸಿಯಾಗಿವೆ, ಹೆಚ್ಚಾಗಿ ನಗರ ಜೀವನ ಮತ್ತು ನಗರ ಪ್ರದೇಶಗಳ ಗದ್ದಲದ ಕುರಿತ ಪ್ರತಿಬಿಂಬವಾಗಿದೆ. ಅವರ ಕೃತಿಗಳು ಆಯಾಮ ಮತ್ತು ರೂಪದ ದಿಟ್ಟ ಪ್ರಯೋಗಗಳಾಗಿವೆ.

ರೂನಾ ಬಿಸ್ವಾಸ್: ರೂನಾ ಬಿಸ್ವಾಸ್ ಅವರ ಕೆಲಸವು ಹೆಗ್ಗುರುತು ಮತ್ತು ಸ್ಮರಣೆಯ ವಿಷಯಗಳನ್ನು ಒಳಗೊಂಡಿವೆ.. ಅವರ ಮಿಶ್ರ ಮಾಧ್ಯಮ ರಚನೆಗಳು ಆಳ ಮತ್ತು ವೈಯಕ್ತಿಕ, ಪದರಗಳು, ಆತ್ಮಾವಲೋಕನದ ತುಣುಕುಗಳನ್ನು ರಚಿಸಲು ಕೊಲಾಜ್ ಮತ್ತು ಪಠ್ಯಗಳನ್ನು ಅವರು ಉತ್ತಮವಾಗಿ ಬಳಸಿಕೊಂಡಿದ್ದಾರೆ.

ಅನಾಮಿಕ ಕುಚ್ಚನ್: ಅನಾಮಿಕ ಕುಚ್ಚನ್ ಅವರ ಕಲಾ ಪ್ರಕಾರವು ಸಾಂಪ್ರದಾಯಿಕ ಮತ್ತು ಆಧುನಿಕತೆಯ ಮಿಶ್ರಣವಾಗಿದೆ. ಅವರ ಕೃತಿಗಳು ಅತಿ ಸೂಕ್ಷ್ಮ ಕುಂಚ ಮತ್ತು ಸೂಕ್ಷ್ಮ ಬಣ್ಣಗಳನ್ನು ಒಳಗೊಂಡಿವೆ, ಪ್ರಕೃತಿ ಮತ್ತು ಜೀವನದ ವಿಷಯಗಳನ್ನು ಅದರಲ್ಲಿ ಚಿತ್ರಿಸಲಾಗಿದೆ.

ತ್ರಿದಿಬ್ ಬೇರಾ: ತ್ರಿದಿಬ್ ಬೆರಾ ಅವರ ವಿಶಿಷ್ಟ ಶೈಲಿಯು ಗಾಢವಾದ ಗೆರೆಗಳು ಮತ್ತು ವಿಶೇಷ ಕಾಂಟ್ರಾಸ್ಟ್ಗಳಿಂದ ತುಂಬಿದೆ. ಅವರ ಕಲೆಗಳು ಆಗಾಗ್ಗೆ ಮಾನವ ಭಾವನೆಗಳು ಮತ್ತು ಸಾಮಾಜಿಕ ಸಮಸ್ಯೆಗಳನ್ನು ಬೊಟ್ಟು ಮಾಡುತ್ತವೆ, ಆಲೋಚನೆ ಮತ್ತು ಸಂವಾದ ಪ್ರಕ್ರಿಯೆಯನ್ನು ಪ್ರಚೋದಿಸಲು ಶಕ್ತಿಯುತ ದೃಶ್ಯ ಭಾಷೆಯನ್ನು ಬಳಸುತ್ತಾರೆ.

ಇದನ್ನೂ ಓದಿ: Assembly Session: ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

ಪ್ರದರ್ಶನದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ಕಲಾವಿದ ವಿಶಿಷ್ಟ ದೃಷ್ಟಿಕೋನ ಮತ್ತು ವಿಷಯಾಧಾರಿತ ಸಿದ್ಧಾಂತವನ್ನು ಹೊಂದಿದ್ದಾರೆ. ಎಲ್ಲಾ ಕಲಾ ಉತ್ಸಾಹಿಗಳಿಗೆ ವೈವಿಧ್ಯಮಯ ಮತ್ತು ಸಮೃದ್ಧ ಅನುಭವವನ್ನು ಸೃಷ್ಟಿಸಿಕೊಟ್ಟಿದ್ದಾರೆ. ಈ ಪ್ರದರ್ಶನವು ವೈವಿಧ್ಯಮಯ ಕಲಾತ್ಮಕ ಅಭಿವ್ಯಕ್ತಿಗಳನ್ನು ಬೆರೆಸುವ ಗುರಿ ಹೊಂದಿದೆ, ಇದು ಭಾರತದ ಶ್ರೀಮಂತ ಸಾಂಸ್ಕೃತಿಕ ಚಿತ್ರಣವನ್ನು ಬಿಂಬಿಸಲಿದೆ.

Continue Reading

ಕರ್ನಾಟಕ

Assembly Session: ಅಧಿಕಾರಿಗಳು ಮಾಡಿದ ಅಕ್ರಮಕ್ಕೆ ಸಚಿವರ ವಿರುದ್ಧ ಆರೋಪಿಸುವುದು ಸರಿಯಲ್ಲ ಎಂದ ಡಿಕೆಶಿ!

Assembly Session: ಯಾರೋ ಅಧಿಕಾರಿ ಮಾಡಿದ ತಪ್ಪಿಗೆ ಸಚಿವರ ಮೇಲೆ ಆರೋಪ ಹೊರಿಸಲು ಆಗುವುದಿಲ್ಲ. ಮಂತ್ರಿಗಳು, ಶಾಸಕರು ಅಕ್ರಮಗಳಲ್ಲಿ ಭಾಗಿಯಾಗಿದ್ದರೆ ಯಾವುದೇ ಕಾರಣಕ್ಕೂ ನಾವು ಅದಕ್ಕೆ ಬೆಂಬಲವಾಗಿ ನಿಲ್ಲುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

Assembly Session
Koo

ಬೆಂಗಳೂರು: “ವಾಲ್ಮೀಕಿ ನಿಗಮದ ಅಕ್ರಮ ಹಣ ವರ್ಗಾವಣೆ ಹಗರಣದಲ್ಲಿ (Assembly Session) ರಾಷ್ಟ್ರೀಯ ಬ್ಯಾಂಕುಗಳು ಭಾಗಿಯಾಗಿದ್ದರೆ, ಅದಕ್ಕೆ ದೆಹಲಿಯ ಕೇಂದ್ರ ಸಚಿವರು ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲು ಸಾಧ್ಯವೇ?, ಅಧಿಕಾರಿಗಳು ಮಾಡುವ ಅಕ್ರಮಕ್ಕೆ ಸಚಿವರನ್ನು ತಪ್ಪಿತಸ್ಥರನ್ನಾಗಿ ಮಾಡಲು ಸಾಧ್ಯವೇ?” ಎಂದು ಎಂಎಲ್‌ಸಿ ಸಿ.ಟಿ. ರವಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.

ವಿಧಾನ ಪರಿಷತ್‌ನಲ್ಲಿ ಮಂಗಳವಾರ ನಡೆದ ಕಲಾಪದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಿ.ಟಿ.ರವಿ ಅವರು, “ವಾಲ್ಮೀಕಿ ನಿಗಮದ ಹಗರಣ ಪೂರ್ವನಿಯೋಜಿತವಾಗಿದ್ದು, ಮೊದಲೇ ಇ ಸ್ಟಾಂಪ್ ಪೇಪರ್ ಖರೀದಿ ಮಾಡಿ, ಒಂದೇ ದಿನದಲ್ಲಿ ಸಾಲಕ್ಕೆ ಅರ್ಜಿ ಹಾಕಿ, ಸೆಕ್ಯುರಿಟಿ ಓವರ್ ಡ್ರಾಫ್ಟ್ ತೆಗೆದುಕೊಂಡು ಹಣ ಪಡೆಯಲಾಗಿದೆ” ಎಂಬ ವಿಚಾರ ಪ್ರಸ್ತಾಪಿಸಿದರು.

ಇದಕ್ಕೆ ಪ್ರತ್ಯುತ್ತರ ನೀಡಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು, “ಸಿ.ಟಿ ರವಿ ಅವರು ಅಕ್ರಮದ ಬಗ್ಗೆ ಮಾತನಾಡುತ್ತಾ ಅಕ್ರಮ ಮಾಡಿದವರ ಒಂದು ಕೂಟ ಇದೆ ಎಂದೆಲ್ಲಾ ಪ್ರಸ್ತಾಪ ಮಾಡಿದ್ದಾರೆ. ಬ್ಯಾಂಕಿನಲ್ಲಿ ಆಗಿರುವ ಅಕ್ರಮದ ವಿಚಾರ ಪ್ರಸ್ತಾಪಿಸಿದ್ದಾರೆ. ಅಕ್ರಮವಾಗಿ ಬ್ಯಾಂಕಿಗೆ ವರ್ಗಾವಣೆಯಾದ ಹಣದ ಮೇಲೆ ಒಂದೇ ದಿನದಲ್ಲಿ ಸಾಲಕ್ಕೆ ಅರ್ಜಿ ಹಾಕಿದರು, ಓವರ್ ಡ್ರಾಫ್ಟ್ ತೆಗೆದುಕೊಂಡು ಹಣ ಬಿಡಿಸಿಕೊಂಡರು ಎಂದೆಲ್ಲ ವಿವರಿಸಿದ್ದಾರೆ. ಬ್ಯಾಂಕಿನಲ್ಲಿ ಒಂದೇ ದಿನದಲ್ಲಿ ಇಷ್ಟೆಲ್ಲಾ ಆಗಿದೆ ಎಂದರೆ ಇಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಸಹ ಭಾಗಿಯಾಗಿದೆ ಎಂದು ಅರ್ಥವಲ್ಲವೇ? ಹೀಗಾಗಿ ನಾನು ಇದರಲ್ಲಿ ದೆಹಲಿಯ ಸನ್ಮಾನ್ಯ ಕೇಂದ್ರ ಸಚಿವರು ಭಾಗಿಯಾಗಿದ್ದಾರೆ ಎಂದು ಹೇಳಲು ಆಗುತ್ತದೆಯೇ?” ಎಂದು ಪ್ರಶ್ನೆಸಿದರು.

ಇದನ್ನೂ ಓದಿ | Uttara Kannada News: ರಾಷ್ಟ್ರೀಯ ಹೆದ್ದಾರಿಯಲ್ಲಿ ಕೃತಕ ನೆರೆ ತಡೆಗೆ ಶಾಶ್ವತ ಪರಿಹಾರ; ಕಾಗೇರಿ

“ಯಾರೋ ಅಧಿಕಾರಿ ಮಾಡಿದ ತಪ್ಪಿಗೆ ಸಚಿವರ ಮೇಲೆ ಆರೋಪ ಹೊರಿಸಲು ಆಗುವುದಿಲ್ಲ. ಮಂತ್ರಿಗಳು, ಶಾಸಕರು ಅಕ್ರಮಗಳಲ್ಲಿ ಭಾಗಿಯಾಗಿದ್ದರೆ ಯಾವುದೇ ಕಾರಣಕ್ಕೂ ನಾವು ಅದಕ್ಕೆ ಬೆಂಬಲವಾಗಿ ನಿಲ್ಲುವುದಿಲ್ಲ. ಈ ಪ್ರಕರಣದಲ್ಲಿ ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ನಡೆದುಕೊಂಡು, ತನಿಖಾ ತಂಡ ರಚನೆ ಮಾಡಿದೆ. ತನಿಖಾ ತಂಡವು ಹಣವನ್ನು ಮರಳಿ ಪಡೆದಿದೆ. ಮಾಜಿ ಮಂತ್ರಿಗಳಿಗೆ ಹಾಗೂ ಶಾಸಕರಿಗೆ ನೋಟಿಸ್ ನೀಡಿದೆ. ಎಸ್ ಐಟಿ ಯಾವ ಕ್ರಮ ಬೇಕಾದರೂ ತೆಗೆದುಕೊಳ್ಳಲಿ. ಸಿಬಿಐ ಸೇರಿದಂತೆ ಯಾರು ಬೇಕಾದರೂ ಬಂದು ತನಿಖೆ ಮಾಡಲಿ. ಆದರೆ ನೀವು ಅದಕ್ಕಿಂತ ಮುಂಚಿತವಾಗಿ ಮಂತ್ರಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿಸಿದರೆ ಹೇಗೆ? ನೀವು ಯಾವ ದೃಷ್ಟಿಕೋನದಲ್ಲಿ ಸರಕಾರ ಆರೋಪಿಗಳ ರಕ್ಷಣೆ ಮಾಡುತ್ತಾ ಇದೆ ಎಂದು ಹೇಳಲು ಹೊರಟಿದ್ದೀರಿ ಎಂದು ನನಗೆ ತಿಳಿದಿದೆ. ನೀವು ಅವರ ಹೆಸರು ಹೇಳಿ. ನಾನು ಸಹ ನನಗೆ ಗೊತ್ತಿರುವ ಹೆಸರುಗಳನ್ನು ಹೇಳುತ್ತೇನೆ” ಎಂದು ಸಿ.ಟಿ.ರವಿ ಅವರಿಗೆ ಕುಟುಕಿದರು.

ಕಲಾಪದ ನಡುವೆ ವಿರೋಧ ಪಕ್ಷದವರ ದೋಷಗಳನ್ನು ಕುಳಿತಲ್ಲೇ ತಿದ್ದಿದ ಸಿಎಂ

7th Pay Commission

ಬೆಂಗಳೂರು: 16ನೇ ವಿಧಾನಸಭೆಯ ನಾಲ್ಕನೇ ಅಧಿವೇಶನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಪ್ರಕರಣ ಕುರಿತಂತೆ ಕಲಾಪದಲ್ಲಿ ಆಡಿದ ಪ್ರತೀ ಮಾತುಗಳನ್ನೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಳಿಸಿಕೊಂಡರು.

ಸೋಮವಾರ ಮಧ್ಯಾಹ್ನ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರಿಂದ ಮಂಗಳವಾರ ರಾತ್ರಿ ಜೆಡಿಎಸ್ ನ ಶಾರದಾ ಪೂರ್ಯಾನಾಯ್ಕ್ ಮತ್ತು ಬಿಜೆಪಿಯ ಅರವಿಂದ್ ಬೆಲ್ಲದ್ ಅವರು ಮಾತನಾಡುವವರೆಗೂ ಪ್ರತಿಯೊಬ್ಬರ ಮಾತನ್ನೂ ಕೇಳಿಸಿಕೊಂಡರು.

ಎರಡೂ ದಿನದಲ್ಲಿ ಆರ್.ಅಶೋಕ್ ಅವರ ಸುದೀರ್ಘ ನಾಲ್ಕು ಗಂಟೆಗಳ ಮಾತಿನ ಸಮೇತ ಸ್ವಪಕ್ಷದವರ ಮತ್ತು ವಿರೋಧ ಪಕ್ಷದವರ ಮಾತುಗಳನ್ನು ಕೇಳಿಸಿಕೊಂಡರು. ಕುಳಿತ ಜಾಗದಿಂದ ಕದಲದಂತೆ ಶಾಂತಚಿತ್ತವಾಗಿ ಪ್ರತಿಯೊಬ್ಬರ ಮಾತನ್ನೂ ‘ಪಿನ್ ಟು ಪಿನ್’ ಕೇಳಿಸಿಕೊಂಡ ಸಿದ್ದರಾಮಯ್ಯ ಅವರು, ಕಲಾಪದ ನಡುವೆ ವಿರೋಧ ಪಕ್ಷದವರ factual errors ಗಳನ್ನು ಕುಳಿತಲ್ಲೇ ತಿದ್ದುತ್ತಾ ಮುತ್ಸದ್ದಿತನ‌ ಮೆರೆದರು.

ಇದನ್ನೂ ಓದಿ | Manikanta Rathod: ಅನ್ನ ಭಾಗ್ಯ ಅಕ್ಕಿ ಕಳವು ಕೇಸ್‌ನಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಬಂಧನ

ವಿರೋಧ ಪಕ್ಷದವರ ಎಂಟತ್ತು ಗಂಟೆಗಳ ಆರೋಪ, ದಾಳಿ, ಆಕ್ರೋಶದ ನುಡಿಗಳನ್ನು ಬಹುತೇಕ ಎಲ್ಲವನ್ನೂ ಹೆಚ್ಚಿನ ಅಡ್ಡಿ ಪಡಿಸದೆ ಮುಖ್ಯಮಂತ್ರಿಗಳು ಮತ್ತು ಆಡಳಿತ ಪಕ್ಷದ ಸದಸ್ಯರು ಆಲಿಸಿ ಸದನದ ಘನತೆ ಹೆಚ್ಚಿಸಿದರು. ವಾಲ್ಮೀಕಿ ನಿಗಮ ಪ್ರಕರಣದ ವಿರೋಧ ಪಕ್ಷದವರ ಎಲ್ಲಾ ಆರೋಪ ಮತ್ತು ಮಾತುಗಳಿಗೆ ಮುಖ್ಯಮಂತ್ರಿಗಳು ಗುರುವಾರ ಉತ್ತರ ನೀಡಲಿದ್ದಾರೆ.

Continue Reading
Advertisement
CV Ananda Bose
ರಾಜಕೀಯ27 seconds ago

CV Ananda Bose: ಉಪಚುನಾವಣೆ ವೇಳೆ ವೋಟಿಂಗ್‌ ಹಕ್ಕು ಕಸಿದ ಟಿಎಂಸಿ ಕಾರ್ಯಕರ್ತರು; ಬಂಗಾಳ ರಾಜ್ಯಪಾಲರನ್ನು ಭೇಟಿಯಾದ ಮತದಾರರು

Anant Radhika Wedding
ವಾಣಿಜ್ಯ6 mins ago

Anant Radhika Wedding: ಅನಂತ್ ಅಂಬಾನಿ ಟರ್ಬನ್‌ನಲ್ಲಿದ್ದ ಡೈಮಂಡ್ ಬ್ರೋಚ್‌ ಮೌಲ್ಯ 150 ಫ್ಲಾಟ್‌ಗಳ ಬೆಲೆಗೆ ಸಮಾನ!

Tulsi Tea Benefits
ಆರೋಗ್ಯ21 mins ago

Tulsi Tea Benefits: ನಿತ್ಯವೂ ತುಳಸಿ ಚಹಾ ಕುಡಿಯುವುದರಿಂದ ಏನೆಲ್ಲ ಲಾಭಗಳಿವೆ ಗೊತ್ತೇ?

world emoji day ರಾಜಮಾರ್ಗ ಅಂಕಣ
ಪ್ರಮುಖ ಸುದ್ದಿ26 mins ago

ರಾಜಮಾರ್ಗ ಅಂಕಣ: ಈ ಚಿತ್ರಾಕ್ಷರಗಳಿಗೆ ಇಂದು 25 ವರ್ಷ ತುಂಬಿತು!

road accident jammu kashmir
ಪ್ರಮುಖ ಸುದ್ದಿ45 mins ago

Road Accident: ಜಮ್ಮು ಕಾಶ್ಮೀರದಲ್ಲಿ ಕಾರು ಅಪಘಾತ, ಬೆಂಗಳೂರಿನ ಮೂವರ ಸಾವು

Anant Radhika Wedding
Latest51 mins ago

Anant Radhika Wedding: ಅಂಬಾನಿ ಮದುವೆಯಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದ ಸ್ಟಾರ್ ಯಾರು?

karnataka Weather Forecast
ಮಳೆ1 hour ago

Karnataka Weather : ಬಿರುಗಾಳಿ ಜತೆಗೆ ಅಬ್ಬರಿಸಲಿದ್ದಾನೆ ವರುಣ; ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Warangal Tour
ಪ್ರವಾಸ1 hour ago

Warangal Tour: ಪ್ರವಾಸಿಗರಿಗೆ ಮೋಡಿ ಮಾಡುವ ವಾರಂಗಲ್; ಅಲ್ಲಿ ನೋಡಲೇಬೇಕಾದ ಸ್ಥಳಗಳ ಚಿತ್ರಣ ಇಲ್ಲಿದೆ

Vastu Tips
Latest2 hours ago

Vastu Tips: ಈ ದಿಕ್ಕಿಗೆ ತಲೆ ಹಾಕಿ ಮಲಗಿದರೆ ಅಪಾಯ ಗ್ಯಾರಂಟಿ!

dina Bhavishya
ಭವಿಷ್ಯ3 hours ago

Dina Bhavishya : ಆತುರದಲ್ಲಿ ಆಡಿದ ಮಾತು ಅಪಾಯ ತಂದಿತು ಎಚ್ಚರ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌