PAK VS ENG |ಶೆಫ್‌ ಜತೆಗೆ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿರುವ ಇಂಗ್ಲೆಂಡ್​ ಟೆಸ್ಟ್​ ತಂಡ! - Vistara News

Latest

PAK VS ENG |ಶೆಫ್‌ ಜತೆಗೆ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿರುವ ಇಂಗ್ಲೆಂಡ್​ ಟೆಸ್ಟ್​ ತಂಡ!

ಡಿಸೆಂಬರ್‌ 1ರಿಂದ ಪಾಕಿಸ್ತಾನದಲ್ಲಿ ಆರಂಭವಾಗಲಿರುವ ಟೆಸ್ಟ್​ ಸರಣಿಗೆ ಇಂಗ್ಲೆಂಡ್​ ತಂಡ ಬಾಣಸಿಗನನ್ನು ಕೆರೆದೊಯ್ಯಲಿದೆ ಎಂದು ವರದಿಯಾಗಿದೆ.

VISTARANEWS.COM


on

england vs pakistan test
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್​: ಕಳೆದ ಸೆಪ್ಟೆಂಬರ್‌ನಲ್ಲಿ 7 ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿ ಸಲುವಾಗಿ ಇಂಗ್ಲೆಂಡ್‌(PAK VS ENG) ಕ್ರಿಕೆಟ್‌ ತಂಡ ಪಾಕಿಸ್ತಾನ ಪ್ರವಾಸ ಕೈಗೊಂಡಿತ್ತು. ಈ ಸಂದರ್ಭದಲ್ಲಿ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಒದಗಿಸಿದ್ದ ಆಹಾರದ ಗುಣಮಟ್ಟದ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದಿದ್ದವು. ಹೀಗಾಗಿ ಎಚ್ಚೆತ್ತುಕೊಂಡಿರುವ ಇಂಗ್ಲೆಂಡ್‌ ಮತ್ತು ವೇಲ್ಸ್‌ ಕ್ರಿಕೆಟ್‌ ಮಂಡಳಿ (ಇಸಿಬಿ) ಈ ಬಾರಿ ಪಾಕಿಸ್ತಾನ ಪ್ರವಾಸದ ವೇಳೆ ತಂಡದ ಜತೆಗೆ ಜತೆಗೆ ಬಾಣಸಿಗನನ್ನೂ (ಶೆಫ್‌) ಕಳುಹಿಸಿ ಕೊಡಲು ಮುಂದಾಗಿದೆ ಎಂದು ವರದಿಯಾಗಿದೆ.

ಕಳೆದ ಪಾಕಿಸ್ತಾನ ಪ್ರವಾಸದ ವೇಳೆ ಇಂಗ್ಲೆಂಡ್​ ತಂಡದ ಆಟಗಾರರು ಮತ್ತು ಸಹಾಯಕ ಸಿಬ್ಬಂದಿ ಪಾಕ್​ ಕ್ರಿಕೆಟ್​ ಮಂಡಳಿ ತಮಗೆ ನೀಡಿದ್ದ ಆಹಾರವು ನಿರೀಕ್ಷಿತ ಮಟ್ಟದಲ್ಲಿರಲಿಲ್ಲ ಎಂದು ಫೀಡ್ ಬ್ಯಾಕ್ ನೀಡಿದ್ದರು. ಅಲ್ಲದೆ ಪಾಕಿಸ್ತಾನ ಸರಣಿಯ ವೇಳೆ ಕೆಲವು ಇಂಗ್ಲೆಂಡ್ ಆಟಗಾರರು ಹೊಟ್ಟೆ ನೋವಿನಿಂದ ಬಳಲಿದ್ದರು. ಹೀಗಾಗಿ ಈ ಬಾರಿ ಟೆಸ್ಟ್ ಸರಣಿಗೆ ಹೋಗುವಾಗ ತಾವೇ ಬಾಣಸಿಗರನ್ನು ಕರೆದುಕೊಂಡು ಹೋಗುವುದಾಗಿ ಇಂಗ್ಲೆಂಡ್ ತಂಡ ತಿಳಿಸಿದೆ.

2018 ರ ಫಿಫಾ ವಿಶ್ವಕಪ್ ಮತ್ತು ಯುರೋ ಕಪ್ 2020ರ ಸಮಯದಲ್ಲಿ ಇಂಗ್ಲೆಂಡ್ ಪುರುಷರ ಫುಟ್ಬಾಲ್ ತಂಡದೊಂದಿಗೆ ಕೆಲಸ ಮಾಡಿದ ಒಮರ್ ಮೆಜಿಯಾನೆ ಇಂಗ್ಲೆಂಡ್‌ ಟೆಸ್ಟ್ ತಂಡದ ಬಾಣಸಿಗರಾಗಿರುತ್ತಾರೆ ಎಂದು ವರದಿ ತಿಳಿಸಿದೆ. ಇದೇ ಮೊದಲ ಬಾರಿಗೆ ದೇಶದ ಹೊರಗಿನ ಪ್ರವಾಸಕ್ಕೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ತಂಡದೊಂದಿಗೆ ವಿಶೇಷ ಬಾಣಸಿಗನನ್ನು ಕರೆದುಕೊಂಡು ಹೋಗುತ್ತಿದೆ.

ಐಸಿಸಿ ಟೆಸ್ಟ್‌ ವಿಶ್ವಚಾಂಪಿಯನ್‌ಷಿಪ್‌ ಟೂರ್ನಿಯ ಎರಡನೇ ಆವೃತ್ತಿಯ ಭಾಗವಾಗಿ ಇಂಗ್ಲೆಂಡ್‌ ತಂಡ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದ್ದು, ಮೂರು ಪಂದ್ಯಗಳ ಸರಣಿಯ ಮೊದಲ ಪಂದ್ಯ ರಾವಲ್ಪಿಂಡಿಯಲ್ಲಿ ಡಿಸೆಂಬರ್‌ 1ರಂದು ಆರಂಭವಾಗಲಿದೆ. ಈ ಮೂಲಕ ಬರೋಬ್ಬರಿ 18 ವರ್ಷಗಳ ಬಳಿಕ ಇಂಗ್ಲೆಂಡ್‌ ಟೆಸ್ಟ್‌ ತಂಡ ಪಾಕಿಸ್ತಾನಕ್ಕೆ ಕಾಲಿಡಲಿದೆ.

ಇದನ್ನೂ ಓದಿ | IND VS NZ | ಭಾರತ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧದ ಅಂತಿಮ ಟಿ20 ಪಂದ್ಯ ಟೈನಲ್ಲಿ ಅಂತ್ಯ; ಸರಣಿ ಗೆದ್ದ ಭಾರತ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sha Rukh Khan: ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

Sha Rukh Khan: ಕೋಟಿ ಕೋಟಿ ಸಂಭಾವನೆ ಪಡೆಯುವ ಬಾಲಿವುಡ್ ಬಾದ್ ಶಾ ಶಾರುಕ್ ಖಾನ್ ಕೂಡ ಒಂದು ಕಾಲದಲ್ಲಿ ಆರ್ಥಿಕ ಸಮಸ್ಯೆಯಿಂದ ಬಳಲಿದ್ದರಂತೆ. ಕಾರಿನ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂದು ಶಾರುಖ್ ಖಾನ್ ಬಗ್ಗೆ ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಶಾಕಿಂಗ್ ಹೇಳಿಕೆ ನೀಡಿದ್ದಾರೆ. ಆಗ ಶಾರುಕ್ ಖಾನ್ ನಟಿ ಜೂಹಿ ಚಾವ್ಲಾ ಹಾಗೂ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದರಂತೆ.

VISTARANEWS.COM


on

Sha Rukh Khan
Koo

ಮುಂಬೈ : ಹಣದ ಸಮಸ್ಯೆ ಎನ್ನುವುದು ಬಡವರಿಗೆ, ಮಧ್ಯಮವರ್ಗದವರಿಗೆ ಮಾತ್ರವಲ್ಲ, ಕೆಲವೊಮ್ಮೆ ಶ್ರೀಮಂತರು, ಸ್ಟಾರ್ ನಟರೂ ಕೂಡ ಆರ್ಥಿಕ ಸಮಸ್ಯೆಯಿಂದ ಬಳಲುತ್ತಾರೆ. ಶಾರುಖ್ ಖಾನ್ (Sha Rukh Khan) ಅವರು ಬಾಲಿವುಡ್ ಸ್ಟಾರ್ ನಟರಲ್ಲಿ ಒಬ್ಬರು. ಕೋಟಿ ಕೋಟಿ ಸಂಭಾವನೆ ಪಡೆಯುವ ಈ ಸ್ಟಾರ್ ನಟ ಕೂಡ ಆರ್ಥಿಕ ಸಮಸ್ಯೆಯಿಂದ ಒಂದು ಕಾಲದಲ್ಲಿ ಬಳಲಿದ್ದರು ಎಂದು ಅವರ ಸ್ನೇಹಿತೆ ನಟಿ ಜೂಹಿ ಚಾವ್ಲಾ ಹೇಳಿಕೆ ನೀಡಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Sha Rukh Khan

ಶಾರುಖ್ ಖಾನ್ ಮತ್ತು ಜೂಹಿ ಚಾವ್ಲಾ 90ರ ದಶಕದಲ್ಲಿ ಬಾಲಿವುಡ್‌ನ ಹಲವಾರು ಚಿತ್ರಗಳಲ್ಲಿ ಜೊತೆಯಾಗಿ ನಟಿಸಿದ್ದರು. ಆವಾಗಿನಿಂದ ಇವರಿಬ್ಬರು ಆಪ್ತ ಸ್ನೇಹಿತರಾಗಿದ್ದರು. ಇಬ್ಬರೂ ಸೇರಿ ಡ್ರೀಮ್ಸ್‌ ಅನ್‌ಲಿಮಿಟೆಡ್‌ ಎಂಬ ಚಿತ್ರ ನಿರ್ಮಾಣ ಸಂಸ್ಥೆಯನ್ನೂ ಸ್ಥಾಪಿಸಿದ್ದರು.

Sha Rukh Khan

ಅಲ್ಲದೇ ಇವರಿಬ್ಬರು ಐಪಿಎಲ್ ತಂಡದ ಮಾಲೀಕರಾಗಿ ಸಹ ಜೊತೆಯಾಗಿದ್ದರು. ಇತ್ತೀಚೆಗೆ, ಕಾರ್ಯಕ್ರಮವೊಂದರಲ್ಲಿ, ನಟಿ ಜೂಹಿ ಚಾವ್ಲಾ ಅವರು ಮಾತನಾಡಿ ಇಎಂಐ ಪಾವತಿಸಲು ಸಾಧ್ಯವಾಗದ ಕಾರಣ ಶಾರುಖ್ ಖಾನ್ ಅವರ ಕಾರನ್ನು ಬ್ಯಾಂಕ್‌ನವರು ತೆಗೆದುಕೊಂಡು ಹೋಗಿದ್ದರು ಎಂಬ ಸಂಗತಿಯನ್ನು ಶಾರುಖ್ ಖಾನ್ ವೃತ್ತಿ ಜೀವನದ ಆರಂಭದ ದಿನಗಳನ್ನು ಸ್ಮರಿಸಿಕೊಂಡು ಹೇಳಿದ್ದಾರೆ.

Sha Rukh Khan

ಶಾರುಖ್ ಖಾನ್ ಅವರ ಬಳಿ ಕಪ್ಪು ಜಿಪ್ಸಿ ಕಾರ್ ಇತ್ತು. ಶಾರುಖ್ ಖಾನ್ ಅವರು ಹಗಲಿರುಳು ತಮ್ಮ ಸಿನಿಮಾ ಶೂಟಿಂಗ್‌ಗಾಗಿ ಆ ಕಾರಿನಲ್ಲೇ ಹೋಗುತ್ತಿದ್ದರು. ಆದರೆ ಕೆಲವು ಕಾರಣಗಳಿಂದಾಗಿ, ಅವರು ತಮ್ಮ ಕಾರಿಗೆ ಇಎಂಐ ಪಾವತಿಸಲು ಸಾಧ್ಯವಾಗಲಿಲ್ಲ. ಹಾಗಾಗಿ ಅವರ ಕಾರನ್ನು ತೆಗೆದುಕೊಂಡು ಹೋದರು ಎಂದು ಹೇಳಿದ್ದಾರೆ. ಅಲ್ಲದೇ ಅವರಿಗೆ ಮುಂಬೈನಲ್ಲಿ ಮನೆ ಇರಲಿಲ್ಲ. ಹಾಗೇ ಅವರಿಗೆ ಅಡುಗೆ ಮಾಡಲು ಯಾರೂ ಇರಲಿಲ್ಲ. ಅವರ ಬಗ್ಗೆ ಚಿಂತಿಸುತ್ತಿದ್ದೆ ಎಂದು ನಟಿ ಹಿಂದೆ ನಡೆದ ಘಟನೆಗಳ ಬಗ್ಗೆ ಮೆಲುಕು ಹಾಕಿದ್ದಾರೆ. ಆದರೆ ಈಗ ಅವರು ದೊಡ್ಡ ನಟ ಆಗಿದ್ದಾರೆ ಎಂದು ಅವರು ಖುಷಿ ಪಟ್ಟಿದ್ದಾರೆ.

2015ರಲ್ಲಿ ಇದೇ ವಿಚಾರದ ಬಗ್ಗೆ ನಟ ಶಾರುಖ್ ಖಾನ್‌ವರು ಕೂಡ ಟಿವಿ ಚಾನೆಲ್‌ವೊಂದರಲ್ಲಿ ಹೇಳಿದ್ದರು. ತಾನು ಖರೀದಿಸಿದ ಮೊದಲ ಕಾರಿಗೆ ಇಎಂಐ ಕಟ್ಟಲು ಆಗದ ಕಾರಣ ಬ್ಯಾಂಕಿನವರು ತೆಗೆದುಕೊಂಡು ಹೋಗಿದ್ದರು. ಆಗ ನಟಿ ಜೂಹಿ ಚಾವ್ಲಾ ತಮ್ಮ ಕಾರನ್ನು ನೀಡಿರುವುದಾಗಿ ಹೇಳಿದ್ದರು. ಮತ್ತು ಕೆಲವೊಮ್ಮೆ ನಟ ಜಾಕಿಶ್ರಾಫ್ ಅವರ ಕಾರಿನಲ್ಲಿ ಓಡಾಡುತ್ತಿದ್ದೆ ಎಂದು ತಿಳಿಸಿದ್ದರು.

Sha Rukh Khan

ಇದನ್ನೂ ಓದಿ: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಇತ್ತೀಚಿಗೆ ನಡೆದ ಸಂದರ್ಶನವೊಂದರಲ್ಲಿ ಹಿರಿಯ ನಟ ಗೋವಿಂದ್ ನಾಮದೇವ್ ಅವರು 2000ರಲ್ಲಿ ಬಿಡುಗಡೆಯಾದ “ಫಿರ್ ಭಿ ದಿಲ್ ಹೈ ಹಿಂದೂಸ್ತಾನಿ” ಚಿತ್ರದ ಚಿತ್ರೀಕರಣ ಸಮಯದಲ್ಲಿ ಶಾರುಖ್ ಖಾನ್ ಅವರ ಜೊತೆ ಕಳೆದ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ಆ ವೇಳೆ ಅವರು ಕೆಲಸದ ಒತ್ತಡದಿಂದ ಅವರು ಧೂಮಪಾನ ಮಾಡುತ್ತಿದ್ದರು ಎಂದು ಶಾಕಿಂಗ್ ಹೇಳಿಕೆ ನೀಡಿದ್ದರು.

Continue Reading

Latest

Viral News: ಮಹಿಳೆಯ ಬೆತ್ತಲೆ ದೇಹದ ಮೇಲೆ ಮೃಷ್ಟಾನ್ನ ಬಡಿಸುವ ರೆಸ್ಟೋರೆಂಟ್‌!

Viral News: ಈಗ ಹಣ ಮಾಡುವುದಕ್ಕೆ ಜನ ಯಾವುದೆಲ್ಲಾ ದಾರಿ ಹಿಡಿಯುತ್ತಾರೆ ಎಂಬುದೇ ಗೊತ್ತಾಗುತ್ತಿಲ್ಲ. ತೈವಾನ್ ಕರಾವಳಿ ಭಾಗದ ತೈಚುಂಗ್‌ನ ರೆಸ್ಟೋರೆಂಟ್‌ವೊಂದರಲ್ಲಿ ಗ್ರಾಹಕರಿಗೆ ಪ್ಲೇಟ್ ಇಲ್ಲದೇ ಬೆತ್ತಲೆಯಾಗಿರುವ ಮಹಿಳೆಯ ಮೈಮೇಲೆ ಆಹಾರವನ್ನು ಬಡಿಸಲಾಗುತ್ತದೆಯಂತೆ. ಆದರೆ ಈ ಆಹಾರವನ್ನು ಸೇವಿಸುವವರು ಸ್ಪೂನ್ ಬಳಸುವಂತಿಲ್ಲ. ತಮ್ಮ ಕೈಯಿಂದ ತೆಗೆದುಕೊಂಡು ತಿನ್ನಬೇಕು. ಈ ಭೋಜನ ತುಂಬಾ ದುಬಾರಿಯಾಗಿದ್ದು, ಭಾರತೀಯ ರೂಪಾಯಿಗಳಲ್ಲಿ ಹೇಳುವುದಾದರೆ ಬರೋಬರಿ 2.58 ಲಕ್ಷ ರೂ. ಎನ್ನಲಾಗಿದೆ. ಈ ಭೋಜನಕ್ಕೆ ‘ನ್ಯೂಟೈಮೊರಿ ಡಿನ್ನರ್’ ಎಂದು ಹೆಸರಿಡಲಾಗಿದೆ.

VISTARANEWS.COM


on

Viral News
Koo

ಪುರಾತನ ಕಾಲದಲ್ಲಿ ಮಹಿಳೆಯರಿಗೆ ಅಪಾರ ಗೌರವ ನೀಡುತ್ತಿದ್ದರು. ಪರಸ್ತ್ರೀಯನ್ನು ಮುಟ್ಟಲೂ ಹೆದರುತ್ತಿದ್ದರು ಎಂಬ ಮಾತಿತ್ತು. ಆದರೆ ಇಂದಿನ ಕಾಲದಲ್ಲಿ ಮಹಿಳೆಯರ ದೇಹವನ್ನೇ ಬಳಸಿಕೊಂಡು ವ್ಯಾಪಾರ ಮಾಡಲು ಶುರುಮಾಡಿದ್ದಾರೆ. ಈಗ ಮಹಿಳೆಯರನ್ನು ನಗ್ನವಾಗಿ ಬಳಸಿಕೊಂಡು ವ್ಯಾಪಾರ ಮಾಡುವ ಪ್ರವೃತ್ತಿ ರೆಸ್ಟೋರೆಂಟ್‌ಗಳಲ್ಲಿಯೂ ಬಂದಿದೆ. ಗ್ರಾಹಕರನ್ನು ಆಕರ್ಷಿಸಲು ಕ್ಲಬ್ ರೆಸ್ಟೋರೆಂಟ್‌ಗಳು ಮಹಿಳೆಯರನ್ನು ಬೆತ್ತಲೆ ಮಾಡಿದ್ದು, ಇದಕ್ಕೆ ಸಂಬಂಧಪಟ್ಟ ಪೋಟೊ ವೈರಲ್ (Viral News) ಆಗಿದೆ. ತೈವಾನ್ ಕರಾವಳಿ ಭಾಗದ ತೈಚುಂಗ್‌ನ ರೆಸ್ಟೋರೆಂಟ್‌ವೊಂದರಲ್ಲಿ ಗ್ರಾಹಕರಿಗೆ ಪ್ಲೇಟ್ ಇಲ್ಲದೇ ಬೆತ್ತಲೆಯಾಗಿರುವ ಮಹಿಳೆಯ ಮೈಮೇಲೆ ಆಹಾರವನ್ನು ಬಡಿಸಲಾಗುತ್ತದೆ. ಆದರೆ ಈ ಆಹಾರವನ್ನು ಸೇವಿಸುವವರು ಸ್ಪೂನ್ ಬಳಸುವಂತಿಲ್ಲ. ತಮ್ಮ ಕೈಯಿಂದ ತೆಗೆದುಕೊಂಡು ತಿನ್ನಬೇಕು. ಈ ಭೋಜನ ತುಂಬಾ ದುಬಾರಿಯಾಗಿದ್ದು, ಭಾರತೀಯ ರೂಪಾಯಿಗಳಲ್ಲಿ ಹೇಳುವುದಾದರೆ ಬರೋಬ್ಬರಿ 2.58 ಲಕ್ಷ ರೂ. ಎನ್ನಲಾಗಿದೆ. ಈ ಭೋಜನಕ್ಕೆ ‘ನ್ಯೂಟೈಮೊರಿ ಡಿನ್ನರ್’ ಎಂದು ಹೆಸರಿಡಲಾಗಿದೆ.

Viral News

ಹಾಗೇ ಯುವತಿಯ ಬೆತ್ತಲೆ ದೇಹದ ಪ್ಲೇಟ್‌ಗೆ ‘ಸುಶಿ ಬೋಟ್’ ಎಂದು ಕರೆಯಲಾಗುತ್ತದೆ. ಈ ಭೋಜನಕ್ಕೆ ಭಾರೀ ಬೇಡಿಕೆ ಇದ್ದು, ಇದನ್ನು ಪಡೆಯಲು ಗ್ರಾಹಕರು ಮೊದಲೇ ಬುಕ್ ಮಾಡಬೇಕು. ನಂತರ ಅವರು ತಿಳಿಸಿದ ದಿನ ಕ್ಲಬ್ ಗೆ ಹೋದರೆ ಸಾಕಂತೆ. ಅಲ್ಲಿ ಮೊದಲು ಟೇಬಲ್ ಮೇಲೆ ಬೆತ್ತಲೆಯಾದ ಯುವತಿ ಬಂದು ಮಲಗುತ್ತಾಳೆ ನಂತರ ಅವಳ ಮೇಮೇಲೆ ವಿವಿಧ ರೀತಿಯ ಸಲಾಡ್, ಫುಡ್ ಅನ್ನು ಇಡಲಾಗುತ್ತದೆ.

Viral News

ಇದಕ್ಕೆ ಸಂಬಂಧಪಟ್ಟ ಪೋಟೊ ಸೋಶಿಯಲ್ ಮೀಡಿಯಾದಲ್ಲಿ ಸೋರಿಕೆಯಾಗಿದೆ. ಈ ಪ್ರಕರಣವು ಆನ್‌ಲೈನ್‌ನಲ್ಲಿ ಸಾಕಷ್ಟು ಟೀಕೆಗಳನ್ನು ಹುಟ್ಟುಹಾಕಿದೆ. ಅದರ ನಂತರ ಸ್ಥಳೀಯ ಅಧಿಕಾರಿಗಳು ಈ ಕ್ಲಬ್ ವಿರುದ್ಧ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆದರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳನ್ನು ಬಂದಿಲ್ಲ, ಆದರೂ ಈ ಬಗ್ಗೆ ತನಿಖೆ ಮಾಡುವುದಾಗಿ ಎಂದು ಅಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ನಡುರಸ್ತೆಯಲ್ಲಿ ಬಟ್ಟೆ ಕಳಚಿ ಬೆತ್ತಲೆಯಾಗಿ ನಡೆದ ಮಹಿಳೆ; ಪುರುಷರು ಕಕ್ಕಾಬಿಕ್ಕಿ!

ವರದಿ ಪ್ರಕಾರ, ಈ ‘ನ್ಯೂಟೈಮೊರಿ’ ಭೋಜನಾ ವ್ಯವಸ್ಥೆ 1980ರ ದಶಕದಲ್ಲಿ ಜಪಾನ್‌ನಲ್ಲಿ ಹುಟ್ಟಿಕೊಂಡಿತು. ಪುರುಷರ ದೇಹದ ಮೇಲೆ ಆಹಾರವನ್ನು ನೀಡುವುದಕ್ಕೆ ‘ನ್ಯೂಟೈಮೊರಿ’ ಎಂದು ಕರೆಯಲಾಗುತ್ತದೆ. ಈ ಬಗ್ಗೆ ಟೀಕೆಗಳನ್ನು ಕೇಳಿಬಂದರೂ ಕೂಡ ಇದು ಇನ್ನೂ ಅನೇಕ ಸ್ಥಳಗಳಲ್ಲಿ ಆಚರಣೆಯಲ್ಲಿದೆ ಎನ್ನಲಾಗಿದೆ. ಆದರೆ ಅತ್ಯಂತ ದುಬಾರಿಯಾದ್ದರಿಂದ ಸಾರ್ವಜನಿಕ ಆರೋಗ್ಯ ಕಾಳಜಿಗಳು ಮತ್ತು ನೈತಿಕ ಸಮಸ್ಯೆಗಳನ್ನು ಉಲ್ಲೇಖಿಸಿ ಚೀನಾ ಸರ್ಕಾರವು 2005 ರಲ್ಲಿ ‘ನ್ಯೂಟೈಮೊರಿ’ಯನ್ನು ನಿಷೇಧಿಸಿತು ಎನ್ನಲಾಗಿದೆ.

Continue Reading

Latest

Viral Video: 1 ನಿಮಿಷದಲ್ಲಿ 35 ಪುಲ್-ಅಪ್! ಮೇಜರ್ ಜನರಲ್ ವಿಡಿಯೊ ಫುಲ್ ವೈರಲ್

Viral Video: ಮೇಜರ್ ಜನರಲ್ ಪ್ರಸನ್ನ ಜೋಶಿ ಅವರು ಒಂದು ನಿಮಿಷದಲ್ಲಿ 35 ಪುಲ್-ಅಪ್ ಗಳನ್ನು ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ವಿಡಿಯೊವನ್ನು ಲೆಫ್ಟಿನೆಂಟ್ ಕರ್ನಲ್ ಜೆ.ಎಸ್.ಸೋಧಿ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದು, ಭಾರತೀಯ ಸೇನೆಯ ಮೇಜರ್ ಜನರಲ್ ಪ್ರಸನ್ನ ಜೋಶಿ ಅವರ ದೈಹಿಕ ಸಾಮರ್ಥ್ಯಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Viral Video
Koo

ಮುಂಬೈ : ಮೇಜರ್ ಜನರಲ್ ಪ್ರಸನ್ನ ಜೋಶಿ ಅವರು ಒಂದು ನಿಮಿಷದಲ್ಲಿ 35 ಪುಲ್-ಅಪ್ ಗಳನ್ನು ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video) ಆಗಿದ್ದು, ಫಿಟ್‌ನೆಸ್ ಮತ್ತು ಕಠಿಣ ವ್ಯಾಯಾಮಗಳನ್ನು ಮಾಡುವ ಅವರ ಸಾಮರ್ಥ್ಯದ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೊವನ್ನು ಲೆಫ್ಟಿನೆಂಟ್ ಕರ್ನಲ್ ಜೆ.ಎಸ್.ಸೋಧಿ ಅವರು ತಮ್ಮ ಸೋಶಿಯಲ್ ಮೀಡಿಯಾ ಪೇಜ್‌ನಲ್ಲಿ ಹಂಚಿಕೊಂಡಿದ್ದು, ಭಾರತೀಯ ಸೇನೆಯ ಮೇಜರ್ ಜನರಲ್ ಪ್ರಸನ್ನ ಜೋಶಿ ಅವರ ದೈಹಿಕ ಸಾಮರ್ಥ್ಯಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತ್ತು ಅಕ್ಟೋಬರ್ 2022 ರಲ್ಲಿ ಜರ್ಮನ್ ಪಬ್ಲಿಕೇಶನ್ ಸ್ಟ್ಯಾಟಿಸ್ಟಾ ಭಾರತೀಯ ಸೇನೆಯನ್ನು ವಿಶ್ವದ ಅತ್ಯುತ್ತಮ ಹೋರಾಟದ ಪಡೆ ಎಂದು ಹೊಗಳಿದೆ. ಹಾಗಾಗಿ ತಮಗೆ ಭಾರತೀಯ ಸೇನೆಯ ಬಗ್ಗೆ ಹೆಮ್ಮೆ ಇದೆ. ಜೈ ಹಿಂದ್ ಎಂದು ಬರೆದಿದ್ದಾರೆ.

ಈ ವಿಡಿಯೊದಲ್ಲಿ ಮೇಜರ್ ಜನರಲ್ ಜೋಶಿ ಅವರು ಇತರ ಸೇನಾ ಸಿಬ್ಬಂದಿಗಳ ಜೊತೆ ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದಾರೆ. ಆ ವೇಳೆ ಅವರು ನಿರಂತರವಾಗಿ ಪುಲ್-ಅಪ್‌ಗಳನ್ನು ಮಾಡುತ್ತಿರುವುದನ್ನು ಕಾಣಬಹುದು. ಅವರ ವರ್ಕೌಟ್ ಮುಗಿದ ಬಳಿಕ ಅಲ್ಲಿರುವ ಪ್ರತಿಯೊಬ್ಬರೂ ಅವರ ದೈಹಿಕ ಸಾಮರ್ಥ್ಯವನ್ನು ಕಂಡು ಹೊಗಳಿದ್ದಾರೆ.

Viral Video

ಇದನ್ನೂ ಓದಿ: ದಳಪತಿ ವಿಜಯ್‌ಗೆ ಭುಜದ ಮೇಲಿನ ಕೈ ತೆಗೆಯಲು ಹೇಳಿದ ಹುಡುಗಿ; ವಿಡಿಯೊ ವೈರಲ್

ಈ ವಿಡಿಯೊವನ್ನು ಜೂನ್ 29ರಂದು ಪೋಸ್ಟ್ ಮಾಡಿದ್ದು, ಈ ವಿಡಿಯೊ ಒಂದು ಲಕ್ಷಕ್ಕೂ ಹೆಚ್ಚು ವೀವ್ಸ್‌ಗಳು ಮತ್ತು 4,000 ಕ್ಕೂ ಹೆಚ್ಚು ಲೈಕ್ಸ್‌ಗಳು ಸಿಕ್ಕಿವೆ .ಇದಕ್ಕ ಹಲವರು ಕಾಮೆಂಟ್ ಮಾಡಿದ್ದಾರೆ. ಜಿಮ್‌ನಲ್ಲಿ 25 ಪುಲ್-ಅಪ್‌ಗಳನ್ನು ಮಾಡಿದ ನಂತರವೂ ಅವರು ಸಮವಸ್ತ್ರದ ಶರ್ಟ್ ಅನ್ನು ಸರಿಯಾಗಿ ಧರಿಸಿದ್ದಾರೆ ಎಂದು ಅವರ ಶಿಸ್ತಿನ ಬಗ್ಗೆ ಒಬ್ಬ ವ್ಯಕ್ತಿ ಬರೆದಿದ್ದಾರೆ. ಇನ್ನೊಬ್ಬರು ಅವರನ್ನು ರಿಯಲ್ ಹೀರೊ ಎಂದು ಹೊಗಳಿದ್ದಾರೆ. ಅತ್ಯಂತ ಸವಾಲಿನ ಪರಿಸ್ಥಿತಿಗಳನ್ನು ನಗುತ್ತಾ ಹೆದರದೆ ಎದುರಿಸುವ ವ್ಯಕ್ತಿ ಅವರು ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಹಾಗೇ ಇನ್ನೊಬ್ಬರು ಮೇಜರ್ ಜನರಲ್‌ಗೆ ಪುಲ್-ಅಪ್ ಗಳು ಮತ್ತು ಫಿಟ್ನೆಸ್ ಬಗ್ಗೆ ಇರುವ ಉತ್ಸಾಹದ ಬಗ್ಗೆ ತಿಳಿಸಿದ್ದಾರೆ.

Continue Reading

Latest

Viral Video: ನನ್ನ ಕಣ್ಣಲ್ಲಿ ಕಣ್ಣಿಟ್ಟು ನೋಡಿ ಪ್ಲೀಸ್‌ ಎಂದ ಸಂಸದೆ; ಹೆಂಗಸರನ್ನು ನೋಡಲ್ಲ ಎಂದ ಸ್ಪೀಕರ್‌!

Viral Video: ಇತ್ತೀಚೆಗೆ ಪಾಕಿಸ್ತಾನದ ಪಾರ್ಲಿಮೆಂಟ್‌ನಲ್ಲಿ ಇಮ್ರಾನ್ ಖಾನ್ ಅವರ ಪಕ್ಷದ ಮುಖಂಡ ಜರ್ತಾಜ್ ಗುಲ್ ಅವರು ತಾವು ಮಾತನಾಡುವಾಗ ಯಾವುದೋ ಕಡೆ ನೋಡುತ್ತಿದ್ದ ವಿಧಾನಸಭಾ ಸ್ಪೀಕರ್ ಅಯಾಜ್ ಸಾದಿಕ್ ಅವರ ಕುರಿತು, ತಾನು ಮಾತನಾಡುವಾಗ ಕಣ್ಣಿನ ಸಂಪರ್ಕವನ್ನು ತಪ್ಪಿಸಬೇಡಿ ಎಂದು ಹೇಳಿದ್ದಾರೆ. ನೀವು ನನ್ನತ್ತ ನೋಡದಿದ್ದರೆ, ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ ಎಂದು ಸ್ಪೀಕರ್‌ಗೆ ಹೇಳುವ ಮೂಲಕ ಪಾಕಿಸ್ತಾನ ಸಂಸತ್ತಿನಲ್ಲಿ ವಿವಾದವನ್ನು ಹುಟ್ಟುಹಾಕಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗಿದೆ.

VISTARANEWS.COM


on

Viral Video
Koo

ಸಾಮಾನ್ಯವಾಗಿ ಎಲ್ಲರೂ ಮಾತನಾಡುವಾಗ ಮುಂದೆ ಇರುವ ವ್ಯಕ್ತಿಗಳ ಕಣ್ಣುಗಳನ್ನು ನೋಡಿಕೊಂಡು ಮಾತನಾಡುತ್ತಾರೆ. ಆಗ ಅವರು ಯಾರ ಜೊತೆ ವಿಚಾರಗಳನ್ನು ಹಂಚಿಕೊಳ್ಳುತ್ತಿದ್ದಾರೆ ಎಂದು ಅರ್ಥವಾಗುತ್ತದೆ. ಆದರೆ ಕೆಲವು ಜನರು ಮಾತನಾಡುತ್ತಿರುವವರ ಕಣ್ಣುಗಳನ್ನು ನೋಡದೆ ಅತ್ತಿತ್ತ ನೋಡಿದರೆ ಮಾತನಾಡುವವರಿಗೆ ಅವರಿಗೆ ಈ ಬಗ್ಗೆ ಆಸಕ್ತಿ ಇಲ್ಲ ಎಂಬ ಭಾವನೆ ಮೂಡುತ್ತದೆ. ಇದು ಎಲ್ಲರಿಗೂ ಆಗುವುದು ಸಹಜ. ಇಂತಹದೊಂದು ವಿಚಾರದ ಬಗ್ಗೆ ಇತ್ತೀಚೆಗೆ ಪಾಕಿಸ್ತಾನದ ಪಾರ್ಲಿಮೆಂಟ್‌ನಲ್ಲಿ ಚರ್ಚೆಯಾಗಿದ್ದು, ವಿಡಿಯೊ ವೈರಲ್ (Viral Video) ಆಗಿದೆ.

Viral Video

ಇತ್ತೀಚೆಗೆ ಪಾಕಿಸ್ತಾನದ ಪಾರ್ಲಿಮೆಂಟ್‌ನಲ್ಲಿ ಇಮ್ರಾನ್ ಖಾನ್ ಅವರ ಪಕ್ಷದ ಮುಖಂಡ ಜರ್ತಾಜ್ ಗುಲ್ ಅವರು ತಾವು ಮಾತನಾಡುವಾಗ ಯಾವುದೋ ಕಡೆ ನೋಡುತ್ತಿದ್ದ ವಿಧಾನಸಭಾ ಸ್ಪೀಕರ್ ಅಯಾಜ್ ಸಾದಿಕ್ ಅವರ ಕುರಿತು, ತಾನು ಮಾತನಾಡುವಾಗ ಕಣ್ಣಿನ ಸಂಪರ್ಕವನ್ನು ತಪ್ಪಿಸಬೇಡಿ ಎಂದು ಹೇಳಿದ್ದಾರೆ.

ಜರ್ತಾಜ್ ಗುಲ್ ಅವರು ಸಭೆಯಲ್ಲಿ ಮಾತನಾಡುವಾಗ “ನೀವು ನನ್ನತ್ತ ನೋಡದಿದ್ದರೆ, ನಾನು ನಿಮ್ಮೊಂದಿಗೆ ಮಾತನಾಡುವುದಿಲ್ಲ ಎಂದು ಸ್ಪೀಕರ್‌ಗೆ ಹೇಳುವ ಮೂಲಕ ಪಾಕಿಸ್ತಾನ ಸಂಸತ್ತಿನಲ್ಲಿ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಈ ವಿಡಿಯೊ ಸಾಮಾಜಿಕ ಮಾಧ್ಯಮ ವೆಬ್‌ಸೈಟ್‌ಗಳಲ್ಲಿ ಹರಿದಾಡುತ್ತಿದ್ದು, ಸಖತ್ ವೈರಲ್ ಆಗಿದೆ.

Viral Video

ಪಾಕಿಸ್ತಾನ ವಿಧಾನಸಭೆಯಲ್ಲಿ ಇತ್ತೀಚೆಗೆ ನಡೆದ ಸಂಸತ್ತಿನ ಕಲಾಪಗಳಲ್ಲಿ ಈ ಘಟನೆ ನಡೆದಿದ್ದು, ಈ ವಿಡಿಯೊದಲ್ಲಿ ಸಚಿವೆ “ನನ್ನ ಪಕ್ಷದ ನಾಯಕರು ನನಗೆ ಕಣ್ಣುಗಳನ್ನು ನೋಡುತ್ತಾ ಮಾತನಾಡಲು ಕಲಿಸಿದ್ದಾರೆ. ನೀವು ಈ ರೀತಿಯ ಕಣ್ಣಿನ ಸಂಪರ್ಕವನ್ನು ತಪ್ಪಿಸಿದರೆ ನಾನು ಮಾತನಾಡುವುದನ್ನು ಮುಂದುವರಿಸಲು ಸಾಧ್ಯವಿಲ್ಲ. ನಿಮ್ಮ ಕನ್ನಡಕವನ್ನು ಧರಿಸಿ, ಸರ್” ಎಂದು ಜರ್ತಾಜ್ ಗುಲ್ ಸ್ಪೀಕರ್ ಅಯಾಜ್ ಸಾದಿಕ್ ಅವರಿಗೆ ಹೇಳಿದರು. ʼನಾನು ಒಬ್ಬಳು ಲೀಡರ್ʼ ನನಗೆ 1.5 ಲಕ್ಷ ಮತಗಳು ಬಂದಿವೆ. ನೀವು ನನ್ನ ಮಾತನ್ನು ಕೇಳದಿದ್ದರೆ, ನಾನು ನಿಮ್ಮೊಂದಿಗೆ ಮಾತನಾಡಲು ಸಾಧ್ಯವಾಗುವುದಿಲ್ಲ” ಎಂದು ಜರ್ತಾಜ್ ಗುಲ್ ಹೇಳಿದರು. ‌

ಇದಕ್ಕೆ ಪ್ರತಿಕ್ರಿಯಿಸಿದ ಸ್ಪೀಕರ್ ʼಮಹಿಳೆಯೊಂದಿಗೆ ಕಣ್ಣಿನ ಸಂಪರ್ಕ ಮಾಡುವುದು ಒಳ್ಳೆಯದಲ್ಲ ಎಂದು ನಾನು ಕೇಳಿದ್ದೇನೆ. ಆದಕಾರಣ ಹೆಣ್ಣಿನ ಕಣ್ಣಿನ ಸಂಪರ್ಕವನ್ನು ಮಾಡುವುದಿಲ್ಲʼ ಎಂದು ಪ್ರತಿಕ್ರಿಯಿಸಿದ್ದಾರೆ. ಇದಕ್ಕೆ ಮರು ಉತ್ತರಿಸಿದ ಸಚಿವೆ, ಈ ರೀತಿಯಲ್ಲಿ 52% ಮಹಿಳೆಯರನ್ನು ನೀವು ನಿರ್ಲಕ್ಷಿಸಿದರೆ, ಆಯ್ದ ಜನರು ಮಾತ್ರ ಇಲ್ಲಿಗೆ ಬರುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

ಜರ್ತಾಜ್ ಗುಲ್ 2024ರಲ್ಲಿ ಡೇರಾ ಘಾಜಿಯಿಂದ ಮರು ಆಯ್ಕೆಯಾದವರು. ಗುಲ್ ಪಾಕಿಸ್ತಾನದ ರಾಜಕಾರಣಿಯಾಗಿದ್ದು, ಇಮ್ರಾನ್ ಖಾನ್ ಅವರ ಸಂಪುಟದಲ್ಲಿ ಹವಾಮಾನ ಬದಲಾವಣೆಯ ರಾಜ್ಯ ಸಚಿವರಾಗಿ ಅಕ್ಟೋಬರ್ 5 ,2018ರಿಂದ ಏಪ್ರಿಲ್ 10, 2022ರವರೆಗೆ ಸೇವೆ ಸಲ್ಲಿಸಿದರು.

Continue Reading
Advertisement
CM Siddaramaiah
ವೈರಲ್ ನ್ಯೂಸ್11 mins ago

CM Siddaramaiah: ಏರ್‌ಪೋರ್ಟ್‌ನಲ್ಲೇ ಟಿ20 ವಿಶ್ವಕಪ್‌ ಫೈನಲ್‌ ವೀಕ್ಷಿಸಿದ್ದ ಸಿಎಂ ಸಿದ್ದರಾಮಯ್ಯ; 70 ಲಕ್ಷಕ್ಕೂ ಅಧಿಕ ವೀಕ್ಷಣೆ ಕಂಡ ವಿಡಿಯೊ!

Sha Rukh Khan
Latest30 mins ago

Sha Rukh Khan: ಸಾಲದ ಇಎಂಐ ಕಟ್ಟಲಾಗದೆ ಕಾರನ್ನು ಕಳೆದುಕೊಂಡಿದ್ದ ಶಾರುಖ್ ಖಾನ್!

ZIM v IND 2024
ಪ್ರಮುಖ ಸುದ್ದಿ31 mins ago

ZIM v IND 2024: ಭಾರತ ವಿರುದ್ಧ ಟಿ20 ಸರಣಿಗೆ ಜಿಂಬ್ವಾಬ್ವೆ ತಂಡ ಪ್ರಕಟ, ಸಿಕಂದರ್​ ನಾಯಕ

A total of Rs 13.93 crore livelihood relief for the farmer families of the district says DC Gangubai Manakar
ಉತ್ತರ ಕನ್ನಡ32 mins ago

Uttara Kannada News: ಜಿಲ್ಲೆಯ ರೈತ ಕುಟುಂಬಗಳಿಗೆ 13.93 ಕೋಟಿ ರೂ. ಜೀವನೋಪಾಯ ಪರಿಹಾರ: ಡಿಸಿ

IND vs SA:
ಪ್ರಮುಖ ಸುದ್ದಿ51 mins ago

IND vs SA: ದಕ್ಷಿಣ ಆಫ್ರಿಕಾ ವಿರುದ್ಧದ ಏಕೈಕ ಟೆಸ್ಟ್​​ನಲ್ಲಿ ಮಹಿಳೆಯರ ತಂಡಕ್ಕೆ10 ವಿಕೆಟ್​ ಭರ್ಜರಿ ಭರ್ಜರಿ ಜಯ

Viral News
Latest56 mins ago

Viral News: ಮಹಿಳೆಯ ಬೆತ್ತಲೆ ದೇಹದ ಮೇಲೆ ಮೃಷ್ಟಾನ್ನ ಬಡಿಸುವ ರೆಸ್ಟೋರೆಂಟ್‌!

Viral Video
Latest57 mins ago

Viral Video: 1 ನಿಮಿಷದಲ್ಲಿ 35 ಪುಲ್-ಅಪ್! ಮೇಜರ್ ಜನರಲ್ ವಿಡಿಯೊ ಫುಲ್ ವೈರಲ್

Hero MotoCorp has introduced the new motorcycle The Centennial
ವಾಣಿಜ್ಯ60 mins ago

Hero MotoCorp: ಹೊಸ ಬೈಕ್‌ ‘ದಿ ಸೆಂಟೆನಿಯಲ್’ ಪರಿಚಯಿಸಿದ ಹೀರೋ ಮೋಟೋಕಾರ್ಪ್

Praveen Tej starrer Jigar released on July 5
ಕರ್ನಾಟಕ1 hour ago

Kannada New Movie: ಪ್ರವೀಣ್ ತೇಜ್ ಅಭಿನಯದ ʼಜಿಗರ್ ಚಿತ್ರ ಜುಲೈ 5ರಂದು ಬಿಡುಗಡೆ

ವೈರಲ್ ನ್ಯೂಸ್1 hour ago

Viral News: ಇದೆಂಥಾ ಹುಚ್ಚಾಟ! ಎನ್‌ಡಿಎ ಕಳಪೆ ಪ್ರದರ್ಶನದಿಂದ ಖಿನ್ನತೆ; ವ್ಯಕ್ತಿ ಆತ್ಮಹತ್ಯೆಗೆ ಶರಣು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ3 hours ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ1 day ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

ಟ್ರೆಂಡಿಂಗ್‌