Explainer: Sex work ಲೀಗಲ್‌ ಅಂದರೆ ಏನರ್ಥ? - Vistara News

EXPLAINER

Explainer: Sex work ಲೀಗಲ್‌ ಅಂದರೆ ಏನರ್ಥ?

ವೇಶ್ಯೆಯರನ್ನು ಬಂಧಿಸುವಂತಿಲ್ಲ, ಅವರನ್ನು ಹಿಂಸಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದ್ದರ ಹಿನ್ನೆಲೆ ಏನು? ವೇಶ್ಯಾವಾಟಿಕೆಯೂ ಒಂದು ವೃತ್ತಿ ಎಂಬ ತೀರ್ಪಿನ ಇಂಪ್ಯಾಕ್ಟ್‌ ಏನಾಗಲಿದೆ?

VISTARANEWS.COM


on

sex work india
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವೇಶ್ಯಾವಾಟಿಕೆ ಜಗತ್ತಿನ ಅತ್ಯಂತ ಹಳೇ ವೃತ್ತಿ- ಅಂತ ಬ್ರಿಟಿಷ್‌ಲೇಖಕ ರುಡ್‌ಯಾರ್ಡ್‌ಕಿಪ್ಲಿಂಗ್‌ತುಂಬಾ ಹಿಂದೇನೇ ಹೇಳಿದ್ದ. ಇದು ನಿಜ. ಎಲ್ಲ ದೇಶಗಳಲ್ಲೂ, ಎಲ್ಲ ಕಾಲಗಳಲ್ಲೂ ವೇಶ್ಯಾವಾಟಿಕೆ ಇದ್ದೇ ಇತ್ತು. ಭಾರತದ ಹಿಸ್ಟರಿ ನೋಡಿದರೆ ಕ್ರಿಸ್ತಪೂರ್ವ ಕಾಲದಲ್ಲೇ ಆಮ್ರಪಾಲಿ ಮುಂತಾದ ವೇಶ್ಯೆಯರ ಉದಾಹರಣೆ ಸಿಗುತ್ತೆ. ಇವರನ್ನು ʼನಗರವಧುʼ ಎಂದು ಕರೆಯಲಾಗ್ತಾ ಇತ್ತು. ಇವರು ರಾಜಮನೆತನದವರಿಗೆ, ಶ್ರೀಮಂತರಿಗೆ ಸಂತೋಷ ಕೊಡುವ, ಸುಖ ನೀಡುವ ವೃತ್ತಿಯನ್ನು ಮಾಡ್ತಾ ಇದ್ದರು. ಇನ್ನು ಪುರಾಣಗಳಲ್ಲಿ ಕಂಡುಬರೋ ಸ್ವರ್ಗದ ಅಪ್ಸರೆಯರ ಕೆಲಸವಂತೂ ಅದೇ ಆಗಿತ್ತು ಎಂಬುದನ್ನು ಬೇರೆ ಹೇಳಬೇಕಿಲ್ಲ. ಆಧುನಿಕ ಕಾಲಕ್ಕೆ ಬಂದರೆ, ಮುಂಬಯಿ, ಕೋಲ್ಕೊತಾ ಮುಂತಾದ ಬೃಹತ್‌ಮೆಟ್ರೋ ನಗರಗಳಲ್ಲಿ ದೊಡ್ಡ ದೊಡ್ಡ ಕಾಲೊನಿಗಳೇ ಈ ವೃತ್ತಿಗಾಗಿ ಮೀಸಲಾಗಿವೆ. ಇನ್ನು ಎಂಜಿ ರೋಡ್‌, ಬ್ರಿಗೇಡ್‌ರೋಡ್‌ನಂಥ ಐಷಾರಾಮಿ ಪ್ರದೇಶಗಳಲ್ಲಿ ನಡೆಯುವ ಹೈಟೆಕ್‌ ವೇಶ್ಯಾವಾಟಿಕೆಯೂ ಕಡಿಮೆಯೇನಲ್ಲ. ಹಾಗೆ ನಮ್ಮ ಜನಜೀವನದಲ್ಲಿ ಹಾಸುಹೊಕ್ಕಾಗಿರೋ ಲೈಂಗಿಕ ಕಾರ್ಯಕರ್ತೆಯರ ವೃತ್ತಿಯನ್ನು ಕಾನೂನುಬಾಹಿರ ಅಂತ ಘೋಷಿಸಿದ್ದಾದರೂ ಯಾರು?

supreme court

ನಂಬಿದ್ರೆ ನಂಬಿ, ಈ ದೇಶದಲ್ಲಿ ಯಾವತ್ತೂ ವೇಶ್ಯಾವಾಟಿಕೆ ಕಾನೂನುಬಾಹಿರ ಆಗಿರಲೇ ಇಲ್ಲ! ಯಾರೂ ಈ ವೃತ್ತಿಗೆ ಲೈಸೆನ್ಸ್‌, ಪರ್ಮಿಷನ್‌ ಅಂತೆಲ್ಲಾ ಮಾಡಿಲ್ಲವಾದರೂ, ಯಾರೂ ಅದನ್ನು ನಿಷೇಧಿಸಿಯೂ ಇಲ್ಲ.

ಹಾಗಿದ್ರೆ ಈಗ ಎದ್ದಿರೋ ಪ್ರಶ್ನೆ ಏನು?
ಸುಪ್ರೀಂ ಕೋರ್ಟ್‌ ನೀಡಿರುವ ಒಂದು ತೀರ್ಪಿನ ಕಾರಣದಿಂದ ಈಗ ದೇಶಾದ್ಯಂತ ಈ ಬಗ್ಗೆ ಚರ್ಚೆ ನಡೀತಾ ಇದೆ. ಈ ತೀರ್ಪಿಗೆ ಕಾರಣವಾಗಿರೋದು ಸ್ವತಃ ಸುಪ್ರೀಂ ಕೋರ್ಟ್‌ ನೇಮಿಸಿರುವ ಒಂದು ಸಮಿತಿ ನೀಡಿರುವ ಸಲಹೆಗಳು. ಈ ಸಮಿತಿಯನ್ನು 2011ರಲ್ಲೇ ರಚಿಸಲಾಗಿತ್ತು. ಪ್ರದೀಪ್‌ ಘೋಷ್‌ಎಂಬವರು ಈ ಸಮಿತಿಯ ಅಧ್ಯಕ್ಷರಾಗಿದ್ದರು. ಜಯಂತ್‌ ಭೂಷಣ್‌ ಮುಂತಾದವರು ಇದರ ಸದಸ್ಯರಾಗಿದ್ದರು. ಒಂದು ದಶಕ ಕಾಲ ಈ ಸಮಿತಿ ವೇಶ್ಯೆಯರ ಬದುಕು ಸ್ಥಿತಿಗತಿಗಳ ಮೇಲೆ ಅಧ್ಯಯನ ನಡೆಸಿ ಹಲವಾರು ಸಲಹೆ ಸೂಚನೆಗಳನ್ನು ನೀಡಿದ್ದು, ಆ ಸೂಚನೆಗಳಿಗೆ ಅನುಗುಣವಾಗಿ ಕೋರ್ಟ್‌ ತನ್ನ ನಿರ್ಣಯಗಳನ್ನು ಪ್ರಕಟಿಸಿದೆ.

ಸುಪ್ರೀಂ ಕೋರ್ಟ್‌ ಏನು ಹೇಳಿದೆ?
ಈ ದೇಶದ ಕಾನೂನಿನ ಸುರಕ್ಷತೆಯನ್ನು ವೇಶ್ಯೆಯರು ಕೂಡ ಹೊಂದಿದ್ದಾರೆ. ಇಂಥ ಸನ್ನಿವೇಶಗಳಲ್ಲಿ ಅಪರಾಧ ಕಾಯಿದೆಯನ್ನು ವ್ಯಕ್ತಿಯ ವಯಸ್ಸು ಮತ್ತು ಒಪ್ಪಿಗೆಯನ್ನು ನೋಡಿ ಅನ್ವಯಿಸಬೇಕು. ಸೆಕ್ಸ್‌ವರ್ಕರ್‌ ಪ್ರೌಢ ವಯಸ್ಕಳು ಹಾಗೂ ಸಮ್ಮತಿಯಿಂದಲೇ ಲೈಂಗಿಕ ಕ್ರಿಯೆಗೆ ಒಪ್ಪಿದ್ದಾಳೆ ಎಂದಾಗಿದ್ದರೆ ಪೊಲೀಸರು ಆಕೆಯ ಮೇಲೆ ಕೇಸು ದಾಖಲಿಸುವಂತಿಲ್ಲ. ವೃತ್ತಿ ಯಾವುದೇ ಇರಲಿ, ಈ ದೇಶದಲ್ಲಿ ಸಂವಿಧಾನದ ಆರ್ಟಿಕಲ್‌ 21ರ ಪ್ರಕಾರ ಪ್ರತಿಯೊಬ್ಬ ವ್ಯಕ್ತಿಗೂ ಘನತೆಯಿಂದ ಬದುಕುವ ಹಕ್ಕಿದೆ.

ಅಂದರೆ, ಲೈಂಗಿಕ ಕಾರ್ಯಕರ್ತರ ಬದುಕು ಕೂಡ ಘನತೆಯಿಂದ ಕೂಡಿದೆ, ವೇಶ್ಯಾವಾಟಿಕೆಗೆ ಕೂಡ ಅದರದ್ದೇ ಆದ ಘನತೆ ಇದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದಂತಾಗಿದೆ.

ಕೋರ್ಟ್‌ ಇನ್ನೂ ಮುಂದುವರಿದು ಹೀಗೆ ಹೇಳಿದೆ- ವೇಶ್ಯಾಗೃಹಗಳ ಮೇಲೆ ನಡೆಯುವ ದಾಳಿಗಳ ಸಂದರ್ಭ ಪೊಲೀಸರು ವೇಶ್ಯೆಯರನ್ನು ಬಂಧಿಸುವುದು, ಚಿತ್ರಹಿಂಸೆ ಕೊಡುವುದು, ಅಪರಾಧಿಯಾಗಿಸಿ ನಿಲ್ಲಿಸುವುದು ಮಾಡುವಂತಿಲ್ಲ. ಯಾಕೆಂದರೆ ಲೈಂಗಿಕ ವೃತ್ತಿ ಅಪರಾಧವಲ್ಲ, ವೇಶ್ಯಾಗೃಹ ನಡೆಸುವುದು ಮಾತ್ರ ಅಪರಾಧ- ಎಂದಿದೆ.

ವೇಶ್ಯಾವಾಟಿಕೆಯ ಬಗ್ಗೆ ನಮ್ಮ ಕಾನೂನು ಏನು ಹೇಳುತ್ತೆ ?
ಭಾರತೀಯ ದಂಡ ಸಂಹಿತೆಯ ಪ್ರಕಾರ, ಇಬ್ಬರು ವಯಸ್ಕರ ನಡುವೆ ಸಮ್ಮತಿಯಿಂದ ನಡೆಯುವ ಲೈಂಗಿಕ ಕ್ರಿಯೆ ಅಪರಾಧವೇ ಅಲ್ಲ. ಆದರೆ ಈ ಸೇವೆಯ ಸುತ್ತ ನಡೆಯುವ ಇತರ ಕೆಲವು ಚಟುವಟಿಕೆಗಳು ಅಪರಾಧ ಎನಿಸಿಕೊಳ್ಳುತ್ತವೆ. ಉದಾಹರಣೆಗೆ ಸಾರ್ವಜನಿಕ ಸ್ಥಳಗಳಲ್ಲಿ ವೇಶ್ಯಾವಾಟಿಕೆಯ ಸೇವೆಗಳನ್ನು ಪ್ರದರ್ಶಿಸುವುದು ಕಾನೂನುಬಾಹಿರ. ಹೋಟೆಲ್‌ಗಳಲ್ಲಿ ವೇಶ್ಯಾವಾಟಿಕೆ ನಡೆಸುವುದು ಕಾನೂನುಬಾಹಿರ. ಲೈಂಗಿಕ ಕಾರ್ಯಕರ್ತೆಯನ್ನು ಸಂಪರ್ಕಿಸಿಕೊಡುವುದು ಕಾನೂನುಬಾಹಿರ. ವೇಶ್ಯಾವಾಟಿಕೆಗೆ ಗಿರಾಕಿಗಳನ್ನು ಹೊಂದಿಸುವುದು ಕಾನೂನುಬಾಹಿರ.

ಅನೈತಿಕ ವ್ಯವಹಾರಗಳ (ತಡೆ) ಕಾಯಿದೆ- 1986ರ ಪ್ರಕಾರ, ವೇಶ್ಯಾವೃತ್ತಿಗಾಗಿ ಇತರರನ್ನು ಆಕರ್ಷಿಸುವುದು, ಪ್ರಚೋದಿಸುವುದು ಅಪರಾಧ ಎನಿಸಿಕೊಳ್ಳುತ್ತದೆ. ಕಾಲ್‌ಗರ್ಲ್‌ಗಳು ತಮ್ಮ ಫೋನ್‌ ನಂಬರ್‌ಗಳನ್ನು ಸಾರ್ವಜನಿಕಗೊಳಿಸುವುದು ಅಪರಾಧ. ಈ ಅಪರಾಧಗಳಿಗಾಗಿ ಅವರನ್ನು ಆರು ತಿಂಗಳ ಕಾರಾಗೃಹವಾಸಕ್ಕೆ ಒಳಪಡಿಸಬಹುದು.

ಭಾರತೀಯ ದಂಡಸಂಹಿತೆಯ ಸೆಕ್ಷನ್‌372 ಹಾಗೂ 373ರ ಪ್ರಕಾರ, ಅಪ್ರಾಪ್ತ ವಯಸ್ಕರನ್ನು ಲೈಂಗಿಕ ಕೃತ್ಯಗಳಿಗೆ ಬಳಸಿಕೊಳ್ಳುವುದು ಅಪರಾಧ. ಇನ್ನು ಸಂವಿಧಾನದ ಆರ್ಟಿಕಲ್‌23ರ ಪ್ರಕಾರ, ವೇಶ್ಯಾವಾಟಿಕೆಗಾಗಿ ಮಹಿಳೆಯರ ಕಳ್ಳಸಾಗಣೆ ಮತ್ತು ಅವರನ್ನು ಬಲವಂತವಾಗಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧ.

ಇನ್ನು ಶಿಕ್ಷೆಯ ಪ್ರಮಾಣ ಏನೇನು ಅಂತ ನೋಡೋಣ. ವೇಶ್ಯಾಗೃಹ ನಡೆಸುವವರಿಗೆ ಕನಿಷ್ಠ ಒಂದು ವರ್ಷ, ವೇಶ್ಯೆಯರ ಆದಾಯದಿಂದ ಬದುಕುವವನಿಗೆ ಕನಿಷ್ಠ ಎರಡು ವರ್ಷ, ಸೆಕ್ಸ್‌ವರ್ಕ್‌ಗಾಗಿ ಅಪ್ರಾಪ್ತ ವಯಸ್ಕ ಹುಡುಗಿಯರನ್ನು ಕಿಡ್‌ನ್ಯಾಪ್‌ಮಾಡುವವನಿಗೆ ಕನಿಷ್ಠ ಏಳು ವರ್ಷ, ವೇಶ್ಯಾಗೃಹದಲ್ಲಿ ಮಕ್ಕಳನ್ನು ಕೂಡಿ ಹಾಕುವವನಿಗೆ ಕನಿಷ್ಠ ಏಳು ವರ್ಷ, ಸಾರ್ವಜನಿಕ ಪ್ರದೇಶದಲ್ಲಿ ವೇಶ್ಯಾವಾಟಿಕೆಗೆ ಪ್ರಚೋದನೆ ಮಾಡುವವನಿಗೆ ಮೂರು ತಿಂಗಳು, ವೇಶ್ಯಾವಾಟಿಕೆಗೆ ಪ್ರೋತ್ಸಾಹ ನೀಡುವವನಿಗೆ ಆರು ತಿಂಗಳು, ಅಪ್ತಾಪ್ತರನ್ನು ವೇಶ್ಯಾವಾಟಿಕೆಗೆ ಪ್ರಚೋದಿಸುವವರಿಗೆ ಕನಿಷ್ಠ ಏಳು ವರ್ಷ ಶಿಕ್ಷೆ ನೀಡಲಾಗುತ್ತದೆ.

ಇದನ್ನೂ ಓದಿ : Sex work legal: ವೇಶ್ಯೆಯರನ್ನು ಬಂಧಿಸುವಂತಿಲ್ಲ, ದಂಡ ವಿಧಿಸುವಂತಿಲ್ಲ ಎಂದ ಸುಪ್ರೀಂಕೋರ್ಟ್

ಹಾಗಾಗಿ ಇದೆಲ್ಲದರ ಒಟ್ಟಾರೆ ಅರ್ಥ ಏನಂದ್ರೆ, ಸಮ್ಮತಿ ಮೂಲಕ ಗಿರಾಕಿಯ ಜೊತೆ ಲೈಂಗಿಕ ಕ್ರಿಯೆ ನಡೆಸುವುದು ಅಪರಾಧವಲ್ಲ. ಆದ್ರೆ ಅಂಥ ವೇಶ್ಯಾವಾಟಿಕೆಗೆ ಸಪೋರ್ಟ್‌ ಮಾಡುವ ಎಲ್ಲರೂ ಶಿಕ್ಷಾರ್ಹರು. ಈ ಕಾನೂನನ್ನು ಬಿಗಿಯಾಗಿ ಜಾರಿ ಮಾಡಿದ್ರೆ ಏನಾಗುತ್ತೆ? ಲೈಂಗಿಕ ಕಾರ್ಯಕರ್ತರು ತಮ್ಮ ಗಿರಾಕಿಗಳನ್ನು ತಾವೇ ಹುಡುಕಿಕೊಳ್ಳಬೇಕಾಗುತ್ತೆ, ಪಿಂಪ್‌ಗಳನ್ನು ಅವಲಂಬಿಸುವಂತಿಲ್ಲ. ಆದ್ರೂ ಸಾರ್ವಜನಿಕ ಸ್ಥಳದಲ್ಲಿ ಹಾವಭಾವಗಳಿಂದ ಯಾರನ್ನೂ ಪ್ರಚೋದಿಸುವಂತಿಲ್ಲ. ಅದು ಶಿಕ್ಷಾರ್ಹ.

ತೀರ್ಪಿನಿಂದ ಏನಾದರೂ ಬದಲಾಗುತ್ತಾ?
ಹೌದು, ಈ ತೀರ್ಪು ವೇಶ್ಯಾವಾಟಿಕೆಯಲ್ಲಿ ತೊಡಗಿದ ಮಹಿಳೆಯರಿಗೆ ಒಂದು ದೊಡ್ಡ ಮಟ್ಟದ ಧೈರ್ಯವನ್ನು ನೀಡಬಹುದು. ಕೋರ್ಟ್‌ ಹೇಳಿರೋ ಈ ಮಾತುಗಳನ್ನು ಕೇಳಿ-

ಹೆಚ್ಚಿನ ಸಲ ಪೊಲೀಸರು ವೇಶ್ಯೆಯ ಜತೆಗೆ ಹಿಂಸಾತ್ಮಕವಾಗಿ, ಕ್ರೌರ್ಯದಿಂದ ನಡೆದುಕೊಳ್ಳುತ್ತಾರೆ. ಇದು ತಪ್ಪು. ಸೆಕ್ಸ್‌ ವರ್ಕರ್‌ಗಳೂ ಅನೇಕ ಸಲ ಲೈಂಗಿಕ ಆಕ್ರಮಣ, ರೇಪ್‌ಇತ್ಯಾದಿಗಳಿಗೆ ತುತ್ತಾಗುತ್ತಾರೆ. ಇದನ್ನು ಪೊಲೀಸರು ಗಮನದಲ್ಲಿ ಇಟ್ಟುಕೊಬೇಕು ಹಾಗೂ ವೇಶ್ಯೆಯರು ದೂರು ನೀಡಲು ಬಂದಾಗ ಅವರ ವಿಚಾರದಲ್ಲಿ ತಾರತಮ್ಯ ತೋರಬಾರದು. ಅವರಿಗೆ ಸೂಕ್ತ ವೈದ್ಯಕೀಯ ಹಾಗೂ ಕಾನೂನು ನೆರವು ಒದಗಿಸಬೇಕು. ಯಾವುದೇ ವೇಶ್ಯಾಗೃಹದಲ್ಲಿ ಮಕ್ಕಳು ಸಿಕ್ಕಿದರೆ, ಅವರನ್ನು ವೇಶ್ಯಾವಾಟಿಕೆಗಾಗಿ ಬಳಸಲಾಗುತ್ತಿದೆ ಎಂಬ ತೀರ್ಮಾನಕ್ಕೆ ಏಕಾಏಕಿ ಬರಬಾರದು. ಅವರು ವೇಶ್ಯೆಯರ ಮಕ್ಕಳಾಗಿರಬಹುದು. ಅವರಿಗೂ ಮೂಲಭೂತ ಸುರಕ್ಷತೆ, ಶಿಕ್ಷಣ ಇತ್ಯಾದಿಗಳ ಅಗತ್ಯವಿದೆ. ಮೂಲಭೂತ ಮಾನವ ಘನತೆಯು ವೇಶ್ಯೆಯರಿಗೂ ಅನ್ವಯವಾಗುತ್ತದೆ ಹಾಗೂ ಮಕ್ಕಳನ್ನು ಅವರಿಂದ ಪ್ರತ್ಯೇಕಗೊಳಿಸುವಂತಿಲ್ಲ. ವೇಶ್ಯೆಯರ ಬಳಿ ಸಂಗ್ರಹಿಸಿದ ಕಾಂಡೋಮ್‌ಗಳನ್ನು ಅವರ ವಿರುದ್ಧ ಅಪರಾಧಕ್ಕೆ ಸಾಕ್ಷಿಯಾಗಿ ಬಳಸುವಂತಿಲ್ಲ. ರೈಡ್‌ನಲ್ಲಿ ಸಿಕ್ಕಿಬಿದ್ದ ಲೈಂಗಿಕ ಕಾರ್ಯಕರ್ತೆಯನ್ನು ಮರುವಸತಿ ಕೇಂದ್ರಗಳಿಗೆ ಕಳಿಸಬೇಕು. ತಾವು ಸಮ್ಮತಿಪೂರ್ವಕ ಕೃತ್ಯ ಎಸಗಿದೆವು ಎಂದು ಅವರು ತಿಳಿಸಿದರೆ ಮ್ಯಾಜಿಸ್ಟ್ರೇಟ್‌ ಅವರನ್ನು ಬಿಟ್ಟುಬಿಡಬಹುದು.

ಇವಿಷ್ಟು ವೇಶ್ಯಾವಾಟಿಕೆ ಬಗ್ಗೆ ಕೋರ್ಟ್‌ ಹೇಳಿರೋ ಮಾತು. ಅಂದರೆ, ಸಮ್ಮತಿಯಿಂದ ಲೈಂಗಿಕ ಕ್ರಿಯೆ ನಡೆಸೋಕೆ ವೇಶ್ಯೆಯರನ್ನು ಯಾರೂ ತಡೆಯುವಂತಿಲ್ಲ. ಆದರೆ ಅವರು ತಮ್ಮ ವಹಿವಾಟು ನಡೆಸೋಕೆ ಇನ್ನೊಬ್ಬರನ್ನು ಅವಲಂಬಿಸುವಂತಿಲ್ಲ. ಸಾರ್ವಜನಿಕ ಸ್ಥಳದಲ್ಲಿ ಇನ್ನೊಬ್ಬರನ್ನು ಪ್ರಚೋದಿಸುವಂತಿಲ್ಲ. ತಮ್ಮ ಫೋನ್‌ ನಂಬರ್‌ಗಳನ್ನು ಬಹಿರಂಗಪಡಿಸುವಂತಿಲ್ಲ. ಪಿಂಪ್‌ಗಳನ್ನು ಬಳಸುವಂತಿಲ್ಲ.

ಗಿರಾಕಿಗಳನ್ನು ಶಿಕ್ಷಿಸಬಹುದಾ?
ಹಾಗಾದ್ರೆ ವೇಶ್ಯೆಯರನ್ನು ತಮ್ಮ ದೈಹಿಕ ತೃಪ್ತಿಗಾಗಿ ಬಳಸಿಕೊಳ್ಳುವ ಗಂಡಸರನ್ನು ಶಿಕ್ಷೆಗೆ ಒಳಪಡಿಸಬಹುದಾ ಎಂಬ ಪ್ರಶ್ನೆ ಏಳುತ್ತೆ. ಇದರ ಬಗ್ಗೆ ಕೂಡ ಕೋರ್ಟ್‌ಗಳು ತಮ್ಮ ಅಭಿಪ್ರಾಯ ಹೇಳಿವೆ.

red light area

ʼʼವೇಶ್ಯೆಯರ ಜೊತೆಗೆ ಸಿಕ್ಕಿಬಿದ್ದ ಗಂಡಸರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತಿಲ್ಲʼʼ ಎಂದು ಕರ್ನಾಟಕ ಹೈಕೋರ್ಟ್‌ ಹಾಗೂ ಆಂಧ್ರಪ್ರದೇಶ ಹೈಕೋರ್ಟ್‌ಗಳು ರೂಲಿಂಗ್‌ ನೀಡಿವೆ. ಕೋರ್ಟ್‌ಗಳ ಪ್ರಕಾರ, ವೇಶ್ಯೆಯರ ಗಿರಾಕಿಗಳು ಕೂಡ ಶಿಕ್ಷಾರ್ಹರಲ್ಲ. ಯಾಕೆಂದರೆ ಅವರು ಆ ಮಹಿಳೆಯ ಜೊತೆ ಸಮ್ಮತಿ ಸೆಕ್ಸ್‌ನಲ್ಲಿ ಪಾಲ್ಗೊಂಡವರು ಅಷ್ಟೇ. ಅಂದ್ರೆ ವೇಶ್ಯೆಯ ಜೊತೆಗೆ ಆಕೆಯ ಗಿರಾಕಿಗಳೂ ಸುರಕ್ಷಿತ.

ಸರಿ ಹಾಗಾದ್ರೆ, ಬೇರೆ ದೇಶಗಳಲ್ಲೂ ನಮ್ಮದೇ ಥರ ಕಾನೂನು ಇದೆಯಾ? ಯಾವ್ಯಾವ ದೇಶಗಳಲ್ಲಿ ವೇಶ್ಯಾವಾಟಿಕೆ ಕಾನೂನುಬದ್ಧ? ಎಲ್ಲೆಲ್ಲಿ ಕಾನೂನುಬಾಹಿರ? ಅದನ್ನೂ ನೋಡೋಣ.

ಹೆಚ್ಚಿನ ಎಲ್ಲಾ ಮುಂದುವರಿದ ದೇಶಗಳಲ್ಲೂ ವೇಶ್ಯಾವಾಟಿಕೆ ಅನ್ನೋದು ಒಂದು ಅಪರಾಧವೇ ಅಲ್ಲ. ಅಮೆರಿಕ, ಯುರೋಪ್‌ನ ಹೆಚ್ಚಿನ ದೇಶಗಳಲ್ಲಿ ವೇಶ್ಯೆಯರು ಯಾವುದೇ ಭೀತಿಯಿಲ್ಲದೆ ಇತರ ಸಾರ್ವಜನಿಕರ ಸಮಾನವಾಗಿ ಓಡಾಡುವುದು, ತಮ್ಮ ಹಕ್ಕುಗಳನ್ನು ಪಡೆಯೋದನ್ನು ಕಾಣಬಹುದು. ಕೆನಡಾದಲ್ಲಿ ಲೈಂಗಿಕ ಕಾರ್ಯಕರ್ತರಿಗೆ ಎಲ್ಲ ಬಗೆಯ ಕಾನೂನಾತ್ಮಕ ರಕ್ಷಣೆಗಳಿವೆ. ಜರ್ಮನಿಯಲ್ಲಿ ವೇಶ್ಯಾವಾಟಿಕೆ ಕಾನೂನುಬದ್ಧ. ಇಲ್ಲಿ ಸರಕಾರವೇ ನಡೆಸುವ ಬ್ರಾತೆಲ್‌ಗಳಿವೆ ಹಾಗೂ ಲೈಂಗಿಕ ಕಾರ್ಯಕರ್ತೆಯರಿಗೆ ಆರೋಗ್ಯ ವಿಮೆ, ಪಿಂಚಣಿ ಥರದ ಸೋಶಿಯಲ್‌ಬೆನಿಫಿಟ್‌ಗಳಿವೆ. ಇವರು ಸರಕಾರಕ್ಕೆ ಟ್ಯಾಕ್ಸನ್ನೂ ಕೊಡಬೇಕಾಗುತ್ತೆ. ಫ್ರಾನ್ಸ್‌ನಲ್ಲಿ ವೇಶ್ಯಾವಾಟಿಕೆ ಓಕೆ, ಆದರೆ ಭಾರತದಂತೆಯೇ ಇಲ್ಲಿ ಕೂಡ ಅದರ ಸಾರ್ವಜನಿಕ ಪ್ರದರ್ಶನ ಇತ್ಯಾದಿಗಳು ನಿಷೇಧಿತವಾಗಿವೆ. ನ್ಯೂಜಿಲ್ಯಾಂಡ್‌ನಲ್ಲಿ 2003ರಿಂದೀಚೆಗೆ ಸೆಕ್ಸ್‌ವರ್ಕ್‌ ಕಾನೂನುಬದ್ಧವಾಗಿದೆ ಹಾಗೂ ಲೈಸೆನ್ಸ್‌ ಪಡೆದ ಬ್ರಾತೆಲ್‌ಗಳು ಕಾರ್ಯ ನಿರ್ವಹಿಸ್ತಾವೆ. ಗ್ರೀಸ್ ಮುಂತಾದ ದೇಶಗಳಲ್ಲಿ ಇವರಿಗೆ ಪುಗಸಟ್ಟೆ ಹೆಲ್ತ್‌ ಚೆಕಪ್‌ ಕೂಡ ಇದೆ. ಇನ್ನು ಆಫ್ರಿಕಾದಂಥ ಹಿಂದುಳಿದ ದೇಶಗಳಲ್ಲಿ, ಲೈಂಗಿಕ ಕಾರ್ಯಕರ್ತೆಯರನ್ನು ಎಚ್‌ಐವಿ ಅಥವಾ ಏಡ್ಸ್‌ ಹಬ್ಬಿಸುವವರು ಎನ್ನುವ ಅಸಹ್ಯ ದೃಷ್ಟಿಯಿಂದ ನೋಡಲಾಗ್ತಾ ಇತ್ತು. ಆದರೆ ಇತ್ತೀಚೆಗೆ ಅನೇಕ ಎನ್‌ಜಿಒಗಳು ಕಾಂಡೋಮ್‌ ಬಳಕೆ ಮುಂತಾದ ಸುರಕ್ಷತಾ ಕ್ರಮಗಳ ಬಗ್ಗೆ ಜಾಗ್ರತಿ ಮೂಡಿಸಿವೆ.

ಈಗ ಸುಪ್ರೀಂ ಕೋರ್ಟ್‌ ತೀರ್ಪಿನ ಪರಿಣಾಮ ಲೈಂಗಿಕ ಕಾರ್ಯಕರ್ತೆಯರಿಗೆ ಕಾನೂನು ರಕ್ಷಣೆ ಸಿಕ್ಕಿದಂತಾಗಿದೆ. ಇವರನ್ನು ಪೊಲೀಸರು ವಿನಾಕಾರಣ ಬೆದರಿಸುವುದು, ಸುಳ್ಳು ಕೇಸು ದಾಖಲಿಸುವುದು ಮಾಡುವ ಹಾಗಿಲ್ಲ. ಇವರಿಂದ ಮಕ್ಕಳನ್ನು ಪ್ರತ್ಯೇಕಿಸುವಂತಿಲ್ಲ. ಇವರ ಗಿರಾಕಿಗಳಿಗೆ ಕಿರುಕುಳ ಕೊಡುವಂತಿಲ್ಲ.

ತನ್ನ ಮೇಲೆ ಲೈಂಗಿಕ ದೌರ್ಜನ್ಯ, ಹಲ್ಲೆ ನಡೆದಿದೆ ಎಂದು ದೂರು ಕೊಡೋಕೆ ವೇಶ್ಯೆ ಪೊಲೀಸ್‌ ಠಾಣೆಗೆ ಬಂದರೆ ಆಕೆಯನ್ನು ಇತರ ಸಾರ್ಜನಿಕರಂತೆಯೇ ಗೌರವದಿಂದ ಕಂಡು, ಸೂಕ್ತ ಕಾನೂನು ಕ್ರಮಗಳನ್ನು ತೆಗೆದುಕೊಳ್ಳಬೇಕು. ಯಾವುದೆ ಬ್ರಾತೆಲ್‌ಗೆ ಪೊಲೀಸ್‌ ರೈಡ್‌ ನಡೆದರೆ, ಅಲ್ಲಿ ಲೈಂಗಿಕ ಕ್ರಿಯೆಯಲ್ಲಿ ತೊಡಗಿರುವ ವೇಶ್ಯೆಯರನ್ನಾಗಲೀ, ಗ್ರಾಹಕರನ್ನಾಗಲೀ ಕಿರುಕುಳಕ್ಕೆ ಒಳಪಡಿಸುವಂತಿಲ್ಲ.

ಇದನ್ನೂ ಓದಿ : ವಿಸ್ತಾರ Explainer: ಅಮೆರಿಕದ ಯುವಕರೇಕೆ ಕಿಲ್ಲರ್ ಆಗುತ್ತಿದ್ದಾರೆ?

ಕೋರ್ಟ್‌ ತೀರ್ಪಿನಿಂದ ವೇಶ್ಯೆಯರ ಸಬಲೀಕರಣ ಆಗುತ್ತೆ ಎಂದು ಈ ಕುರಿತು ಹೋರಾಡ್ತಾ ಇರುವ ಎನ್‌ಜಿಒಗಳು ಹೇಳುತ್ತವೆ. ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದು ಹಾಗೂ ಸೇವಾ ಯೋಜನೆಗಳನ್ನು ಪಡೆಯುವಂತೆ ಮಾಡುವುದು ಸುಲಭವಾಗಲಿದೆ. ಯಾಕೆಂದರೆ ಹೆಚ್ಚಾಗಿ ಈ ದೇಹ ಮಾರುವ ದಂಧೆಗೆ ಇಳಿಯೋರು ಬಡತನದ ಹಿನ್ನೆಲೆಯಿಂದ ಬರುವವರು. ಶ್ರೀಮಂತರ್ಯಾರೂ ಇಂಥ ಕೆಲಸಕ್ಕೆ ಇಳಿಯುವುದಿಲ್ಲ. ಹೈಟೆಕ್‌ ವೇಶ್ಯಾವಾಟಿಕೆಗಳ ಹಿನ್ನೆಲೆ ಹಾಗೂ ಸಮಸ್ಯೆಗಳು ಬೇರೆಯಾದರೂ ಇದೇ ಕಾನೂನುಗಳೇ ಅಲ್ಲಿಯೂ ಅನ್ವಯವಾಗುತ್ತವೆ. ಆದರೆ ದುರ್ಬಲ ವರ್ಗದ ವೇಶ್ಯೆಯರ ಆರೋಗ್ಯ, ಅವರ ಮಕ್ಕಳ ಶಿಕ್ಷಣ ಇತ್ಯಾದಿಗಳು ಸದಾಕಾಲ ಸಂಕಷ್ಟದಲ್ಲಿರುತ್ತವೆ. ಇವರ ಬದುಕಿನ ಸ್ಥಿತಿಗತಿಗಳನ್ನು ಉತ್ತಮಪಡಿಸಬಹುದು ಹಾಗೂ ಎರಡನೇ ತಲೆಮಾರು ಮತ್ತೆ ಈ ವ್ಯವಹಾರಕ್ಕೆ ಇಳಿಯದಂತೆ ನೋಡಿಕೊಳ್ಳಬಹುದು- ಎಂದು ವೇಶ್ಯೆಯರ ಪರ ವಾದಿಸುವವರು ಹೇಳ್ತಾರೆ.

ಸಮಾಜಕ್ಕೆ ಹಾನಿಕರ?
ಕೋರ್ಟ್‌ ತೀರ್ಪಿನ ಬಗ್ಗೆ ಆಕ್ಷೇಪ ವ್ಯಕ್ತಪಡಿಸುವವರೂ ತುಂಬಾ ಮಂದಿ ಇದ್ದಾರೆ. ಭಾರತದಂಥ ದೇಶದಲ್ಲಿ ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸುವುದು ಸರಿಯಲ್ಲ. ಇಲ್ಲಿನ ಸಾಂಪ್ರದಾಯಿಕ ಜೀವನಪದ್ಧತಿಗೆ ಇದರಿಂದ ಇನ್ನಷ್ಟು ಹೊಡೆತ ಬೀಳಲಿದೆ. ಈಗಾಗಲೇ ಇಂಟರ್‌ನೆಟ್‌ ಮುಂತಾದ ಆಧುನಿಕ ಮಾಧ್ಯಮಗಳ ಮೂಲಕ ಪೋರ್ನೋಗ್ರಫಿ ಮೊದಲಾದ ಪ್ರಚೋದನಕಾರಿ ಕಂಟೆಂಟ್‌ಗಳಿಗೆ ಯುವಜನತೆ ತೆರೆದುಕೊಂಡಿದ್ದಾರೆ. ವೇಶ್ಯಾವಾಟಿಕೆ ಇನ್ನಷ್ಟು ಮುಕ್ತಗೊಂಡರೆ, ಆಗ ನಮ್ಮ ಯುವಜನತೆ ಇದರತ್ತ ಹೆಚ್ಚೆಚ್ಚು ಆಕರ್ಷಿತವಾಗಬಹುದು ಹಾಗೂ ಸುಲಭವಾಗಿ ಹಣ ಮಾಡುವ ದಾರಿಗಳನ್ನು ಕಂಡುಕೊಳ್ಳಬಹುದು. ಸಮಾಜ ಕಾಪಾಡಿಕೊಂಡುಬಂದ ನೈತಿಕ ಮೌಲ್ಯಗಳು ಗಾಳಿಯಲ್ಲಿ ತೂರಿಹೋಗಲಿವೆ. ವೇಶ್ಯಾವಾಟಿಕೆಯಲ್ಲಿ ತೊಡಗಿದವರು ಇನ್ನಷ್ಟು ಧೈರ್ಯವಾಗಿ ತಮ್ಮ ವಹಿವಾಟನ್ನು ನಡೆಸುವುದರಿಂದ, ಸಭ್ಯ ಸಾಮಾಜಿಕ ಜೀವನವನ್ನು ನಡೆಸುವವರಿಗೆ ಮುಜುಗರ ಉಂಟಾಗುವ ಸನ್ನಿವೇಶಗಳು ಅಧಿಕಗೊಳ್ಳಬಹುದು. ಭಾರತೀಯ ಸಮಾಜದ ಸೂಕ್ಷ್ಮ ಹೆಣಿಗೆಯಲ್ಲಿ ಬಿರುಕುಗಳು ಉಂಟಾಗಬಹುದು ಎಂದು ಹಲವರು ಆತಂಕಪಡುತ್ತಾರೆ.

ವೇಶ್ಯಾವಾಟಿಕೆಯಲ್ಲಿ ತೊಡಗಿದವರಿಗೂ ಸಾಮಾಜಿಕ ಮಾನ್ಯತೆ ಮತ್ತು ಸರಕಾರದ ಕಲ್ಯಾಣ ಯೋಜನೆಗಳು ಸಿಗಲಿವೆಯಾ? ಅವರಿಗೂ ಗುರುತುಪತ್ರ ಮುಂತಾದವು ಸಿಗುತ್ತವಾ? ಸಮಾಜದಲ್ಲಿ ಅವರ ಬಗ್ಗೆ ಇರೋ ಹೀನಾಯ ಭಾವನೆ ನಿವಾರಣೆ ಆಗುತ್ತಾ? ಇತ್ಯಾದಿ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ.

ಇದನ್ನೂ ಓದಿ: ವಿಸ್ತಾರ EXPLAINER: ವೇಶ್ಯಾವಾಟಿಕೆಗೆ ಇನ್ನು ಓಪನ್‌ ಪರ್ಮಿಟ್‌ ಸಿಗುತ್ತಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿಜ್ಞಾನ

Nuclear Test In Pokhran: ಭಾರತ ಮೊದಲ ಪರಮಾಣು ಪರೀಕ್ಷೆ ನಡೆಸಿ ಇಂದಿಗೆ 50 ವರ್ಷ; ಏನಿದು ಸ್ಮೈಲಿಂಗ್‌ ಬುದ್ಧ?

ಭಾರತ ಪರಮಾಣು ಶಕ್ತಿ ರಾಷ್ಟ್ರವಾಗಿ ಇಂದಿಗೆ 50 ವರ್ಷ. ಇಂದಿಗೆ ಸುಮಾರು 50 ವರ್ಷಗಳ ಹಿಂದೆ ಭಾರತ ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯನ್ನು (Nuclear Test In Pokhran) ನಡೆಸಿತ್ತು. ಈ ಕುರಿತ ಕುತೂಹಲಕರ ಹಿನ್ನೋಟ ಇಲ್ಲಿದೆ.

VISTARANEWS.COM


on

By

Nuclear test at Pokhran
Koo

ಇಂದಿಗೆ 50 ವರ್ಷಗಳ ಹಿಂದೆ ಭಾರತದ (India) ಇತಿಹಾಸದಲ್ಲಿ ಒಂದು ಅಭೂತಪೂರ್ವ ಕ್ಷಣ ದಾಖಲಾಗಿತ್ತು. ಅದುವೇ ಅಣು ಪರೀಕ್ಷೆ. ಪೋಖ್ರಾನ್‌ನಲ್ಲಿ ಪರಮಾಣು ಪರೀಕ್ಷೆ (Nuclear Test In Pokhran) ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಆಗಿನ ಪ್ರಧಾನಿಯಾಗಿದ್ದ (Prime Minister) ಇಂದಿರಾ ಗಾಂಧಿಯವರು (Indira gandhi) 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ (BARC) ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಭಾರತ ಇಂದು ರಾಜಸ್ಥಾನದ ಪೋಖ್ರಾನ್‌ನಲ್ಲಿ ತನ್ನ ಮೊದಲ ಪರಮಾಣು ಪರೀಕ್ಷೆಯ 50ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ. ಅಂದಿನ ಪರೀಕ್ಷೆ ಭಾರತವನ್ನು ಪರಮಾಣು ಶಕ್ತಿಯನ್ನಾಗಿ ರೂಪಿಸಿತು.

ಸ್ಮೈಲಿಂಗ್ ಬುದ್ಧ ಹೆಸರು ನೀಡಿದ್ದು ಯಾಕೆ?

ಈ ಪರೀಕ್ಷೆಗೆ ‘ಸ್ಮೈಲಿಂಗ್ ಬುದ್ಧ’ ಎಂಬ ಸಂಕೇತನಾಮವನ್ನು ನೀಡಲಾಯಿತು. 1974ರ ಮೇ 18ರಂದು ಆ ವರ್ಷದ ಬುದ್ಧ ಪೂರ್ಣಿಮೆಯಂದು ಪರೀಕ್ಷೆಯನ್ನು ನಡೆಸಲಾಗಿದ್ದರಿಂದ ಈ ಹೆಸರನ್ನು ಆಯ್ಕೆ ಮಾಡಲಾಯಿತು. “ಬುದ್ಧ ಅಂತಿಮವಾಗಿ ಮುಗುಳ್ನಕ್ಕ” ಎಂಬುದು ಭಾರತದ ಪ್ರಧಾನ ಪರಮಾಣು ಸಂಶೋಧನಾ ಸಂಸ್ಥೆ ಭಾಭಾ ಪರಮಾಣು ಸಂಶೋಧನಾ ಕೇಂದ್ರದ (BARC) ನಿರ್ದೇಶಕ ರಾಜಾ ರಾಮಣ್ಣ ಅವರು ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ಸಂದೇಶವನ್ನು ರವಾನಿಸಿದ್ದರು!


ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ (ಯುಎನ್‌ಎಸ್‌ಸಿ) ಕಾಯಂ ಸದಸ್ಯತ್ವ ಹೊಂದಿರದ ರಾಷ್ಟ್ರವೊಂದು ನಡೆಸಿದ ಮೊದಲ ಪರಮಾಣು ಪರೀಕ್ಷೆ ಇದಾಗಿದೆ.

ಪೋಖ್ರಾನ್‌ನಲ್ಲಿ ಸ್ಫೋಟಿಸಿದ ಸಾಧನದ ಬಗ್ಗೆ ಚರ್ಚೆಯಾಗಿದ್ದರೂ, ಇದು ಸುಮಾರು 8- 12 ಕಿಲೋ ಟನ್‌ಗಳಷ್ಟು ಟಿಎನ್‌ಟಿ (ಪರಮಾಣು ಪರೀಕ್ಷೆ ಮಾಪನ) ಎಂದು ನಂಬಲಾಗಿದೆ. ಪರೀಕ್ಷೆಯ ಪ್ರಮುಖ ಅಂಶವೆಂದರೆ ಭಾರತವು ಯುನೈಟೆಡ್ ಸ್ಟೇಟ್ಸ್ ಮತ್ತು ಇತರ ಗುಪ್ತಚರ ಸಂಸ್ಥೆಗಳ ಪತ್ತೆಯನ್ನು ತಪ್ಪಿಸುವಲ್ಲಿ ಯಶಸ್ವಿಯಾಗಿದ್ದು. ಇಂತಹ ಪರೀಕ್ಷೆಗಳು ಪರಮಾಣು ಪ್ರಸರಣಕ್ಕೆ ಕಾರಣವಾಗಬಹುದು ಎಂದು ಹೇಳಿದ ಅಮೆರಿಕದಂತಹ ರಾಷ್ಟ್ರದ ನಿರ್ಬಂಧಗಳ ಸರಣಿಯನ್ನು ದೇಶವು ಎದುರಿಸಿತು.


ಎರಡು ವರ್ಷಗಳ ತಯಾರಿ

ಈ ಪರೀಕ್ಷೆಯನ್ನು ನಡೆಸಲು ಭಾರತಕ್ಕೆ ಸುಮಾರು ಎರಡು ವರ್ಷಗಳ ತಯಾರಿ ಬೇಕಾಯಿತು. ಇಂದಿರಾ ಗಾಂಧಿಯವರು 1972ರ ಸೆಪ್ಟೆಂಬರ್‌ನಲ್ಲಿ ಸ್ವದೇಶಿ ವಿನ್ಯಾಸದ ಪರಮಾಣು ಸಾಧನವನ್ನು ಸ್ಫೋಟಿಸಲು ಬಿಎಆರ್‌ಸಿ ವಿಜ್ಞಾನಿಗಳಿಗೆ ಅನುಮತಿ ನೀಡಿದ್ದರು.

ಇದನ್ನೂ ಓದಿ: Chinese Scientists: ಇನ್ನು ಮನುಷ್ಯರು 130 ವರ್ಷ ಬದುಕಬಹುದು! ಚೀನಾ ವಿಜ್ಞಾನಿಗಳ ಸಂಶೋಧನೆ

ಪೋಖ್ರಾನ್-II ಪರೀಕ್ಷೆ

1974ರ ಅನಂತರ ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ 1998ರಲ್ಲಿ ಭಾರತವು ಅದೇ ಸ್ಥಳದಲ್ಲಿ ಪೋಖ್ರಾನ್- II ಹೆಸರಿನಲ್ಲಿ ಮತ್ತೊಂದು ಪರಮಾಣು ಪರೀಕ್ಷೆ ನಡೆಸಿತು. ಈ ಪರೀಕ್ಷೆ ಮೇ 1998ರಲ್ಲಿ ಪೋಖ್ರಾನ್‌ನಲ್ಲಿ ಐದು ಪರಮಾಣು ಸ್ಫೋಟಗಳ ಸರಣಿಯನ್ನು ಕಂಡವು. ಪೋಖ್ರಾನ್-II ಪರೀಕ್ಷೆಗಳ ವಾರ್ಷಿಕೋತ್ಸವದ ನೆನಪಿಗಾಗಿ ಪ್ರತಿ ವರ್ಷ ಮೇ 11ರಂದು ರಾಷ್ಟ್ರೀಯ ತಂತ್ರಜ್ಞಾನ ದಿನವನ್ನು ಆಚರಿಸಲಾಗುತ್ತದೆ. 2020ರಿಂದ ಭಾರತವು 1974ರ ಪೋಖ್ರಾನ್ ಪರೀಕ್ಷೆಗಳ ವಾರ್ಷಿಕೋತ್ಸವವನ್ನು ಆಚರಿಸಲು ಪ್ರಾರಂಭಿಸಿತ್ತು.

Continue Reading

ರಾಜಕೀಯ

Prime Minister Of India: ಸುದೀರ್ಘ ಕಾಲ ಪ್ರಧಾನಿಯಾಗಿದ್ದ ನೆಹರೂ, ಇಂದಿರಾ ದಾಖಲೆಯನ್ನು ಮೋದಿ ಮುರಿಯಲು ಸಾಧ್ಯವೆ?

ಭಾರತ ಸ್ವಾತಂತ್ರ್ಯವಾದ ಬಳಿಕ 14 ಮಂದಿ ಪ್ರಧಾನ ಮಂತ್ರಿ (Prime Minister Of India) ಸ್ಥಾನವನ್ನು ಅಲಂಕರಿಸಿದ್ದಾರೆ. ಅವರಲ್ಲಿ ಕೆಲವರು ಮಾತ್ರ ಸುದೀರ್ಘಾವಧಿಗೆ ಪ್ರಧಾನಿಯಾಗಿದ್ದರು. ಯಾರು ಎಷ್ಟು ಅವಧಿಗೆ ಪ್ರಧಾನಮಂತ್ರಿಯಾಗಿದ್ದರು? ಈ ಕುರಿತ ದಾಖಲೆ ಇಲ್ಲಿದೆ.

VISTARANEWS.COM


on

By

Prime Minister of India
Koo

ಪ್ರತಿ ಬಾರಿಯೂ ಲೋಕಸಭಾ ಚುನಾವಣೆ (Lok sabha election) ಘೋಷಣೆಯಾದ ಬಳಿಕ ಮುಂದಿನ ಪ್ರಧಾನಿ (Prime Minister Of India) ಯಾರಾಗಬಹುದು ಎನ್ನುವ ಕುತೂಹಲವಂತೂ ಇದ್ದೇ ಇರುತ್ತದೆ.

ಭಾರತ ಸ್ವಾತಂತ್ರ್ಯವಾದ ಬಳಿಕ 14 ಮಂದಿ ಪ್ರಧಾನಮಂತ್ರಿ ಸ್ಥಾನವನ್ನು ಅಲಂಕರಿಸಿದ್ದಾರೆ. ಅವರೆಂದರೆ ಜವಾಹರ್ ಲಾಲ್ ನೆಹರೂ (Jawaharlal Nehru) , ಲಾಲ್ ಬಹಾದ್ದೂರ್ ಶಾಸ್ತ್ರೀ (Lal Bahadur Shastri), ಇಂದಿರಾ ಗಾಂಧಿ (Indira gandhi), ಮೊರಾರ್ಜಿ ದೇಸಾಯಿ (morarji desai), ಚರಣ್ ಸಿಂಗ್ (charan singh), ರಾಜೀವ್ ಗಾಂಧಿ (rajiv gandhi), ವಿಶ್ವನಾಥ್ ಪ್ರತಾಪ್ ಸಿಂಗ್ (vishwanath pratap singh), ಚಂದ್ರಶೇಖರ್ (chandra shekhar) , ಪಿ.ವಿ. ನರಸಿಂಹ ರಾವ್ (p.v. narasimha rao), ಅಟಲ್ ಬಿಹಾರಿ ವಾಜಪೇಯಿ (atal bihari vajpayee), ಎಚ್.ಡಿ. ದೇವೇಗೌಡ (h.d. deve gowda), ಇಂದರ್ ಕುಮಾರ್ ಗುಜ್ರಾಲ್ (inder kumar gujral), ಮನ್ ಮೋಹನ್ ಸಿಂಗ್ (manmohan singh), ನರೇಂದ್ರ ಮೋದಿ (narendra modi). ಇವರಲ್ಲಿ ಕೆಲವರು ಮಾತ್ರ ದೀರ್ಘಾವಧಿಗೆ ಪ್ರಧಾನಿ ಯಾಗಿದ್ದರು. ಅವರು ಯಾರು? ಇಲ್ಲಿದೆ ಮಾಹಿತಿ.


ಇಂದಿರಾ ಗಾಂಧಿ (1966ರಿಂದ1977, 1980ರಿಂದ1984)

ಜವಾಹರಲಾಲ್ ನೆಹರೂ ಅವರ ಪುತ್ರಿ ಇಂದಿರಾ ಗಾಂಧಿ ಒಟ್ಟು 15 ವರ್ಷ 350 ದಿನಗಳ ಕಾಲ ಪ್ರಧಾನಿಯಾಗಿದ್ದರು. 1975ರಲ್ಲಿ ತುರ್ತುಪರಿಸ್ಥಿತಿಯ ಜಾರಿ, ಆಪರೇಷನ್‌ ಬ್ಲೂ ಸ್ಟಾರ್‌ ಕಾರ್ಯಾಚರಣೆ ಸೇರಿದಂತೆ ಹಲವು ದಿಟ್ಟ ಮತ್ತು ವಿವಾದಾತ್ಮಕ ನಿರ್ಧಾರಗಳಿಗೆ ಹೆಸರುವಾಸಿಯಾಗಿದ್ದರು. ತುರ್ತು ಪರಿಸ್ಥಿತಿ ಹೇರಿಕೆ ವಿರುದ್ಧ ದೇಶಾದ್ಯಂತ ಜನಾಕ್ರೋಶ ಭುಗಿಲೆದ್ದು ಇಂದಿರಾ ಗಾಂಧಿ 1977ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಇಂದಿರಾ ಗಾಂಧಿ ಅವರು ಹೀನಾಯ ಹಿನ್ನಡೆ ಕಂಡು ಅಧಿಕಾರ ತ್ಯಜಿಸಬೇಕಾಯಿತು. ಆದರೆ 1980ರಲ್ಲಿ ಅವರು ಮತ್ತೆ ಭರ್ಜರಿ ಬಹುಮತದಿಂದ ಅಧಿಕಾರಕ್ಕೆ ಮರಳಿದರು. ಆದರೆ 1984ರಲ್ಲಿ ಸಿಖ್‌ ಭಯೋತ್ಪಾದನೆಗೆ ಬಲಿಯಾದರು.


ಅಟಲ್ ಬಿಹಾರಿ ವಾಜಪೇಯಿ (1996, 1998-2004)

ನುರಿತ ವಾಗ್ಮಿ ಮತ್ತು ದೂರದೃಷ್ಟಿಯ ನಾಯಕ, ಅಟಲ್ ಬಿಹಾರಿ ವಾಜಪೇಯಿ ಅವರು ಮೂರು ಬಾರಿ ಪ್ರಧಾನಿಯಾಗಿ ಸೇವೆ ಸಲ್ಲಿಸಿದರು. ಒಮ್ಮೆ 13 ದಿನ, ಮತ್ತೊಮ್ಮೆ 13 ತಿಂಗಳಷ್ಟೇ ಅವರು ಪ್ರಧಾನಿಯಾಗಿದ್ದರು. ಆದರೆ 1998ರಿಂದ 2004ರ ಅವರು ಪೂರ್ಣಾವಧಿ ಪ್ರಧಾನಿಯಾಗಿದ್ದರು. ಒಂದೆಡೆ ಪರಮಾಣು ಪರೀಕ್ಷೆಯ ದಿಟ್ಟತನ ಮತ್ತು ಇನ್ನೊಂದೆಡೆ ಪಾಕಿಸ್ತಾನದೊಂದಿಗೆ ಶಾಂತಿಯನ್ನು ಬೆಳೆಸುವ, ಸಂದರ್ಭ ಬಂದಾಗ ಅದಕ್ಕೆ ಬುದ್ಧಿ ಕಲಿಸುವ ಅವರ ಉಪಕ್ರಮಗಳಿಗಾಗಿ ವಾಜಪೇಯಿ ಸದಾ ನೆನಪಿನಲ್ಲಿರುತ್ತಾರೆ. ಹೆದ್ದಾರಿ ನಿರ್ಮಾಣದ ಕ್ರಾಂತಿ ನಡೆದಿದ್ದು ಅವರ ಕಾಲದಲ್ಲಿ.


ಮನಮೋಹನ್ ಸಿಂಗ್ (2004-2014)

ಖ್ಯಾತ ಅರ್ಥಶಾಸ್ತ್ರಜ್ಞರಾಗಿದ್ದ ಮನಮೋಹನ್ ಸಿಂಗ್ ಅವರು ಒಟ್ಟು 10 ವರ್ಷಗಳ ಕಾಲ ಪ್ರಧಾನಿಯಾಗಿ ಸತತ ಎರಡು ಬಾರಿ ಸೇವೆ ಸಲ್ಲಿಸಿದರು. ಅವರ ಅಧಿಕಾರಾವಧಿಯು ಗಮನಾರ್ಹ ಆರ್ಥಿಕ ಸುಧಾರಣೆಗಳು ಮತ್ತು ಉದಾರೀಕರಣದ ಉಪಕ್ರಮಗಳಿಂದ ಗುರುತಿಸಲ್ಪಟ್ಟಿದೆ.


ನರೇಂದ್ರ ಮೋದಿ (2014ರಿಂದ ಈಗಿನವರೆಗೆ)

ಪ್ರಸ್ತುತ ಭಾರತದ ಪ್ರಧಾನಮಂತ್ರಿ ಆಗಿರುವ ನರೇಂದ್ರ ಮೋದಿ ಅವರು ಸತತ ಎರಡನೇ ಅವಧಿಯಲ್ಲಿದ್ದಾರೆ. ವರ್ಚಸ್ವಿ ನಾಯಕತ್ವಕ್ಕೆ ಹೆಸರುವಾಸಿಯಾದ ಅವರು ದೇಶದಲ್ಲಿ ಗಮನಾರ್ಹ ಸುಧಾರಣೆಗಳನ್ನು ತಂದಿದ್ದಾರೆ. ದೇಶ ಮತ್ತು ವಿದೇಶಗಳಲ್ಲಿ ಭಾರಿ ಜನಪ್ರಿಯತೆ ಗಳಿಸಿದ್ದಾರೆ. ಇದೇ ವೇಳೆ ಅವರನ್ನು ವಿರೋಧಿಸುವವರೂ ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಸರ್ಜಿಕಲ್‌ ಸ್ಟ್ರೈಕ್‌ ಮೂಲಕ ಪಾಕಿಸ್ತಾನಕ್ಕೆ ನಡುವ ಹುಟ್ಟಿಸಿದ ಕೀರ್ತಿ ಖ್ಯಾತಿ ಇವರಿಗಿದೆ. ನೋಟ್‌ ಬ್ಯಾನ್‌, ಜಿಎಸ್‌ಟಿ ಜಾರಿಯಂಥ ಆರ್ಥಿಕ ಸುಧಾರಣೆ ಕ್ರಮಗಳನ್ನೂ ಕೈಗೊಂಡಿದ್ದಾರೆ. ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿ ವಿದೇಶಿ ನಾಯಕರೊಂದಿಗೆ ಮಾತುಕತೆ ನಡೆಸಿ ಶಾಂತಿ ನೆಲೆಸುವ ಕ್ರಮದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ಎರಡನೇ ಅವಧಿಯು 2019ರಲ್ಲಿ ಪ್ರಾರಂಭವಾಯಿತು. ಮೂರನೇ ಅವಧಿಯಲ್ಲೂ ನರೇಂದ್ರ ಮೋದಿ ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ ಎಂದು ಚುನಾವಣೆ ಪೂರ್ವ ಸಮೀಕ್ಷೆಗಳು ಹೇಳಿವೆ. ಆದರೆ ಮೋದಿ ಅವರು ಮೂರನೇ ಅವಧಿಯಲ್ಲಿ ಪ್ರಧಾನಿಯಾಗಿ ಪೂರ್ಣಾವಧಿ ಮುಗಿಸಿದರೂ ನೆಹರೂ ಮತ್ತು ಇಂದಿರಾ ಗಾಂಧಿ ಅವರ ಸುದೀರ್ಘ ಆಡಳಿತ ಅವಧಿಯ ದಾಖಲೆ ಹಾಗೆಯೇ ಮುಂದುವರಿಯುತ್ತದೆ. ಈ ದಾಖಲೆ ಮುರಿಯಬೇಕೆಂದರೆ ಮೋದಿ ನಾಲ್ಕನೇ ಬಾರಿಯೂ ಪ್ರಧಾನಿ ಆಗಬೇಕಾಗುತ್ತದೆ!

Continue Reading

ದೇಶ

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಕುತೂಹಲಕರ ಅಂಶಗಳು ಇಲ್ಲಿವೆ

Uttar Pradesh: 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯು ಉತ್ತರ ಪ್ರದೇಶದಲ್ಲಿ 71 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. 2019ರಲ್ಲಿ 62 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು. ಇದು ಕೇಂದ್ರದಲ್ಲಿ ಬಿಜೆಪಿಯು ಅಧಿಕಾರಕ್ಕೆ ಬರಲು ಕಾರಣವಾಗಿತ್ತು. ಆದರೆ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಜಕೀಯ ಸ್ಥಿತಿಗತಿ ಹೇಗಿದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Uttar Pradesh
Koo

ಲಖನೌ: ಲೋಕಸಭೆ ಚುನಾವಣೆಯ (Lok Sabha Election 2024) ನಾಲ್ಕನೇ ಹಂತದ ಮತದಾನ ಮುಕ್ತಾಯಗೊಂಡಿದೆ. ಅದರಲ್ಲೂ, ದೇಶದ ಗಮನವೀಗ ಉತ್ತರ ಪ್ರದೇಶದ (Uttar Pradesh) ರಾಜಕೀಯ ಸ್ಥಿತಿಗತಿಗಳ ಮೇಲೆ ನಿಂತಿದೆ. ಮೊದಲಿನಿಂದಲೂ, ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಗೆಲ್ಲುವ ಪಕ್ಷವು ಕೇಂದ್ರದಲ್ಲಿ ಅಧಿಕಾರ ಗಳಿಸುತ್ತದೆ ಎಂಬ ಮಾತಿದೆ. ಅದು ಬಹುತೇಕ ಚುನಾವಣೆಗಳಲ್ಲಿ ನಿಜವೂ ಆಗಿದೆ. ಉತ್ತರ ಪ್ರದೇಶದಲ್ಲಿ 80 ಲೋಕಸಭೆ ಕ್ಷೇತ್ರಗಳು ಇರುವುದೇ ಇದಕ್ಕೆ ಕಾರಣವಾಗಿದ್ದು, ಈ ಬಾರಿಯೂ ಕದನ ಕುತೂಹಲ ಮೂಡಿದೆ. ಹಾಗಾದರೆ, ಉತ್ತರ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಸಮರ ಹೇಗೆ ನಡೆಯುತ್ತಿದೆ? ಯಾವ ಪಕ್ಷಕ್ಕೆ ಗೆಲುವಾಗಬಹುದು? ಯಾವ ಪಕ್ಷಗಳ ರಾಜಕೀಯ ತಂತ್ರಗಾರಿಕೆ ಹೇಗಿದೆ ಎಂಬುದರ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ರಾಮಮಂದಿರ ವಿಷಯ ಪ್ರಧಾನ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಿರುವುದು ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಅಸ್ತ್ರವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್‌ ಅವರು ಅಬ್ಬರದ ಪ್ರಚಾರದ ವೇಳೆ ರಾಮಮಂದಿರ ನಿರ್ಮಾಣ, ಅದು ಹೇಗೆ ಉತ್ತರ ಪ್ರದೇಶದ ಅಸ್ಮಿತೆ ಎಂಬುದರ ಕುರಿತು ಹಲವು ಬಾರಿ ಪ್ರಸ್ತಾಪಿಸಿದ್ದಾರೆ. ಇದರಿಂದಾಗಿ, ಪ್ರತಿಪಕ್ಷಗಳೂ ರಾಮನ ಜಪ ಮಾಡುವಂತಾಗಿದೆ. ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮೊದಲು ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಭೇಟಿ ನೀಡಿರುವುದೂ ಪ್ರಮುಖ ಅಂಶವಾಗಿದೆ. ಅಷ್ಟರಮಟ್ಟಿಗೆ, ಉತ್ತರ ಪ್ರದೇಶದಲ್ಲಿ ರಾಮಮಂದಿರವು ಲೋಕಸಭೆ ಚುನಾವಣೆಯ ಪ್ರಬಲ ವಿಷಯವಾಗಿದೆ.

Ram Mandir

ಕಾಂಗ್ರೆಸ್‌-ಎಸ್‌ಪಿ ಮೈತ್ರಿಯ ರಣತಂತ್ರವೇನು?

ಇಂಡಿಯಾ ಒಕ್ಕೂಟದ ಸದಸ್ಯ ಪಕ್ಷಗಳೂ ಆದ ಬಿಜೆಪಿ ಹಾಗೂ ಸಮಾಜವಾದಿ ಪಕ್ಷವು ಉತ್ತರ ಪ್ರದೇಶದಲ್ಲಿ ಮೈತ್ರಿ ಮಾಡಿಕೊಂಡಿದ್ದು, ಸೀಟುಗಳನ್ನು ಹಂಚಿಕೊಂಡು ಚುನಾವಣೆ ಕಣಕ್ಕಿಳಿದಿವೆ. 2019ರಲ್ಲಿ ಬಿಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು, ಎಡವಿದ ಸಮಾಜವಾದಿ ಪಕ್ಷವು ಈ ಬಾರಿ ಹೊಸ ಹುರುಪಿನೊಂದಿಗೆ ಕಣಕ್ಕಿಳಿದಿದೆ. 2022ರ ವಿಧಾನಸಭೆ ಚುನಾವಣೆಯಲ್ಲಿ ಶೇ.3ರಷ್ಟು ಮತ ಪಡೆದರೂ ಕಾಂಗ್ರೆಸ್‌ ಉತ್ಸಾಹದಿಂದ ಪ್ರಚಾರ ಕೈಗೊಳ್ಳುತ್ತಿದೆ. ಉತ್ತರ ಪ್ರದೇಶದಲ್ಲಿ ಶೇ.20ರಷ್ಟು ಮುಸ್ಲಿಮರ ಮತಗಳಿದ್ದು, ಇವುಗಳನ್ನು ಪಡೆಯಲು ಸಮಾಜವಾದಿ ಪಕ್ಷವು ರಣತಂತ್ರ ರೂಪಿಸುತ್ತಿದೆ. ಕಾಂಗ್ರೆಸ್‌ ಹಾಗೂ ಎಸ್‌ಪಿ ಮೈತ್ರಿಕೂಟದ ಅಭ್ಯರ್ಥಿಗಳು, ನಾಯಕರು ಜತೆಗೂಡಿ ದಲಿತರು, ಮುಸ್ಲಿಮರು ಹಾಗೂ ಹಿಂದುಳಿದವರ ಮತಗಳನ್ನು ಸೆಳೆಯಲು ಕಸರತ್ತು ನಡೆಸುತ್ತಿದ್ದಾರೆ. ಇದು ಚುನಾವಣೆಯಲ್ಲಿ ಹೇಗೆ ಫಲ ನೀಡಲಿದೆ ಎಂಬುದು ಫಲಿತಾಂಶದ ಬಳಿಕವೇ ಗೊತ್ತಾಗಲಿದೆ.

ಮಾಯಾವತಿ ಮಾಡುವರೇ ಕಮಾಲ್?‌

ಬಹುಜನ ಸಮಾಜ ಪಕ್ಷದ ಮಾಯಾವತಿ ಅವರು ಒಂದು ಕಾಲದಲ್ಲಿ ಇಡೀ ರಾಜ್ಯಾದ್ಯಂತ ಪ್ರಾಬಲ್ಯ ಹೊಂದಿದ್ದರು. ಆದರೀಗ, ಅವರ ವರ್ಚಸ್ಸು, ಪಕ್ಷದ ಹಿಡಿತ ಸಡಿಲವಾಗಿದೆ. 2014ರ ಲೋಕಸಭೆ ಚುನಾವಣೆಯಲ್ಲಿ ಶೇ.19.70ರಷ್ಟು ಮತಗಳನ್ನು ಪಡೆದರೂ ಬಿಎಸ್‌ಪಿ ಒಂದೇ ಒಂದು ಸೀಟು ಗೆದ್ದಿರಲಿಲ್ಲ. ಇನ್ನು, 2019ರ ಲೋಕಸಭೆ ಚುನಾವಣೆಯಲ್ಲಿ ಎಸ್‌ಪಿ ಜತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸಿದರೂ 10 ಸೀಟುಗಳು ಮಾತ್ರ ಲಭಿಸಿದ್ದವು. ಇನ್ನು 2022ರ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಮತ ಪ್ರಮಾಣವು ಶೇ.12.8ಕ್ಕೆ ಕುಸಿದಿದೆ. ಮುಸ್ಲಿಮರ ಮತಗಳು ಎಂದೋ ಬಿಎಸ್‌ಪಿಯಿಂದ ದೂರಾಗಿವೆ. ಈಗೇನಿದ್ದರೂ ದಲಿತರು, ಹಿಂದುಳಿದವರ ಮತಗಳೇ ಬಿಎಸ್‌ಪಿಯ ಆಧಾರವಾಗಿವೆ. ಇಷ್ಟಾದರೂ, ಟಕ್ಕರ್‌ ಕೊಡಲು ಮಾಯಾವತಿ ರೆಡಿಯಾಗಿದ್ದಾರೆ.

Mayavati

ಯೋಗಿ ಎಂಬ ಬಲಿಷ್ಠ ನಾಯಕ

ಫೈರ್‌ಬ್ರ್ಯಾಂಡ್‌ ನಾಯಕ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರು ದೇಶದಲ್ಲಿಯೇ ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ ನಂತರ ಬಿಜೆಪಿಯಲ್ಲಿ ಹೆಚ್ಚು ವರ್ಚಸ್ಸು ಇರುವ ನಾಯಕರಾಗಿದ್ದಾರೆ. ಹಾಗಾಗಿಯೇ, ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ 109 ರ‍್ಯಾಲಿ ಸೇರಿ ಬಿಹಾರ, ಮಧ್ಯಪ್ರದೇಶ, ರಾಜಸ್ಥಾನ, ಪಶ್ಚಿಮ ಬಂಗಾಳ, ಉತ್ತರಾಖಂಡ ಹಾಗೂ ಜಮ್ಮು-ಕಾಶ್ಮೀರದಲ್ಲಿ ಒಟ್ಟು 135 ಚುನಾವಣೆ ಸಮಾವೇಶಗಳನ್ನು ಕೈಗೊಂಡಿದ್ದಾರೆ. ಅದರಲ್ಲೂ, 2017ರಿಂದಲೂ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್‌ ಅವರು ರಾಜ್ಯದಲ್ಲಿ ಅಪರಾಧವನ್ನು ನಿಯಂತ್ರಿಸುವ ಜತೆಗೆ ಅಭಿವೃದ್ಧಿಗೂ ಆದ್ಯತೆ ನೀಡಿ ವರ್ಚಸ್ವಿ ನಾಯಕ ಎನಿಸಿದ್ದಾರೆ. ರಾಜ್ಯದಲ್ಲಿ ಇವರ ನಾಯಕತ್ವವೂ ಬಿಜೆಪಿಗೆ ವರದಾನವಾಗಿದೆ.

Yogi Adityanath

ಜಾತಿ ರಾಜಕಾರಣದ ಸಮೀಕರಣ

ಉತ್ತರ ಪ್ರದೇಶದಲ್ಲಿ ದಶಕಗಳಿಂದಲೂ ಚುನಾವಣೆಗಳಲ್ಲಿ ಜಾತಿವಾರು ಮತಗಳ ಸಮೀಕರಣವೇ ನಿರ್ಣಾಯಕವಾಗಿದೆ. 1990ರಿಂದ 2012ರವರೆಗೆ ಉತ್ತರ ಪ್ರದೇಶದಲ್ಲಿ ದಲಿತರು ಹಾಗೂ ಒಬಿಸಿ ಮತಗಳು ಬಿಜೆಪಿಯಿಂದ ದೂರವೇ ಇದ್ದವು. ಆದರೆ, 2014ರಿಂದ ರಾಜ್ಯದಲ್ಲಿ ಜಾಟವರ ಹೊರತಾದ ದಲಿತರು, ಯಾದವರ ಹೊರತಾದ ಒಬಿಸಿಯವರು ಬಿಜೆಪಿಯ ಹಿಂದುತ್ವ ರಾಜಕಾರಣಕ್ಕೆ ಬಲ ತುಂಬುತ್ತಿದ್ದಾರೆ. ಮೇಲ್ವರ್ಗದವರ ಮತಗಳು ಬಿಜೆಪಿಗೆ ಸಲೀಸಾಗಿ ಲಭಿಸಲಿವೆ. ಆದರೆ, ಜಾತಿ ಗಣತಿ, ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ, ಮೀಸಲಾತಿಯನ್ನು ಕಿತ್ತೊಗೆಯುತ್ತದೆ ಎಂದು ಪ್ರತಿಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿದ್ದು, ಈ ಅಂಶಗಳು ಯಾವ ರೀತಿಯ ಪರಿಣಾಮ ಬೀರಲಿವೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

Continue Reading

ಆರೋಗ್ಯ

Most Costly Medicine: ಒಂದೇ ಒಂದು ಡೋಸ್ ಗೆ 17 ಕೋಟಿ ರೂ! ಈ ಔಷಧ ಏಕೆ ಇಷ್ಟೊಂದು ದುಬಾರಿ?

ಒಂದೂವರೆ ವರ್ಷದ ಬಾಲಕ ಸೊಂಟದ ಕೆಳಗಿನ ದೈಹಿಕ ಬಲವನ್ನು ಕಳೆದುಕೊಂಡಿದ್ದ. ಆತನ ಸಾಮಾನ್ಯ ಜೀವನ ನಡೆಸುವಂತೆ ಸಾಧ್ಯವಾಗಿಸಲು ಆತನಿಗೆ ಒಂದು ಚುಚ್ಚು ಮದ್ದು ನೀಡಲೇ ಬೇಕಿತ್ತು. ಇದರ ಮೌಲ್ಯ ಬರೋಬ್ಬರಿ 17.5 ಕೋಟಿ ರೂಪಾಯಿ. ತಂದೆ ತಾಯಿ ತಮ್ಮಿಂದ ಇದು ಸಾಧ್ಯವಾಗದು (Most costly medicine) ಎಂದು ಕೈಚೆಲ್ಲಿದ್ದರು. ಆದರೂ ಕೊನೆಯ ಪ್ರಯತ್ನವೆಂಬಂತೆ ಸಾರ್ವಜನಿಕರ ನೆರವು ಕೇಳಲು ಮುಂದಾಗಿ ಅದರಲ್ಲಿ ಯಶಸ್ವಿಯಾಗಿದ್ದಾರೆ.

VISTARANEWS.COM


on

By

Most costly medicine
Koo

ಜೈಪುರ: ಜನಪ್ರಿಯ ನಟ (actor), ಭಾರತ ತಂಡದ ಕ್ರಿಕೆಟಿಗ (cricketer), ವ್ಯಾಪಾರಿಗಳು (Vendor), ತರಕಾರಿ ಮಾರಾಟಗಾರರು ಮತ್ತು ಸಾಮಾನ್ಯ ಜನರು ಒಗ್ಗಟ್ಟಾಗಿ 22 ತಿಂಗಳ ಮಗುವೊಂದರ ಜೀವ ಉಳಿಸಲು ದುಬಾರಿ ಔಷಧ ಖರೀದಿಗಾಗಿ (Most costly medicine) ಹೊರಡಿರುವ ಹೃದಯಸ್ಪರ್ಶಿ ಕಥೆ ರಾಜಸ್ಥಾನದ (Rajasthan) ಜೈಪುರದಲ್ಲಿ (jaipur) ನಡೆದಿದೆ. ಈ ಔಷಧದ ಹಿನ್ನೆಲೆ ಕುತೂಹಲಕರವಾಗಿದೆ.

ಒಂದೂವರೆ ವರ್ಷದ ಬಾಲಕ ಸೊಂಟದ ಕೆಳಗಿನ ದೈಹಿಕ ಬಲವನ್ನು ಕಳೆದುಕೊಂಡಿದ್ದ. ಆತನ ಸಾಮಾನ್ಯ ಜೀವನ ನಡೆಸುವಂತೆ ಸಾಧ್ಯವಾಗಿಸಲು ಆತನಿಗೆ ಒಂದು ಚುಚ್ಚು ಮದ್ದು ನೀಡಲೇ ಬೇಕಿತ್ತು. ಇದರ ಮೌಲ್ಯ ಬರೋಬ್ಬರಿ 17.5 ಕೋಟಿ ರೂಪಾಯಿ. ತಂದೆ ತಾಯಿ ತಮ್ಮಿಂದ ಇದು ಸಾಧ್ಯವಾಗದು ಎಂದು ಕೈಚೆಲ್ಲಿದ್ದರು. ಆದರೂ ಕೊನೆಯ ಪ್ರಯತ್ನವೆಂಬಂತೆ ಸಾರ್ವಜನಿಕರ ನೆರವು ಕೇಳಲು ಮುಂದಾದರು.

ರಾಜಸ್ಥಾನ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನರೇಶ್ ಶರ್ಮಾ ಅವರ ಪುತ್ರ ಹೃದಯಾಂಶ್ ಶರ್ಮಾ ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಎಂಬ ಅಪರೂಪದ ಆನುವಂಶಿಕ ಕಾಯಿಲೆಯಿಂದ ಬಳಲುತ್ತಿದ್ದಾರೆ. ಇದನ್ನು ವಿಶ್ವದ ಅತ್ಯಂತ ದುಬಾರಿ ಔಷಧಿಗಳಲ್ಲಿ ಒಂದಾದ ಝೋಲ್ಗೆನ್ಸ್ಮಾ (Zolgensma) ಎಂಬ ಜೀನ್ ಥೆರಪಿ ಇಂಜೆಕ್ಷನ್‌ನೊಂದಿಗಿನ ಚಿಕಿತ್ಸೆಯಿಂದ ಮಾತ್ರ ಗುಣಪಡಿಸಬಹುದಾಗಿದೆ. ಇದರ ಬೆಲೆ 17.5 ಕೋಟಿ ರೂ.


ಚುಚ್ಚು ಮದ್ದು ನೀಡಲು ಗಡುವು

ಬಾಲಕ 20 ತಿಂಗಳ ಮಗುವಾಗಿದ್ದಾಗ ಫೆಬ್ರವರಿಯಲ್ಲಿ ರಾಜಸ್ಥಾನ ಪೊಲೀಸರು ಕಟ್ಟುನಿಟ್ಟಾದ ಗಡುವನ್ನು ಹೊಂದಿದ್ದ ಕ್ರೌಡ್‌ಫಂಡಿಂಗ್ ಅಭಿಯಾನವನ್ನು ಪ್ರಾರಂಭಿಸಿದರು. ಏಕೆಂದರೆ ಮಗುವಿಗೆ 2 ವರ್ಷ ವಯಸ್ಸಿನವರೆಗೆ ಮಾತ್ರ ಈ ಚುಚ್ಚುಮದ್ದನ್ನು ನೀಡಬಹುದು.

ನಟ, ಕ್ರಿಕೆಟಿಗನ ಬೆಂಬಲ

ಇವರ ಈ ಅಭಿಯಾನಕ್ಕೆ ಕ್ರಿಕೆಟಿಗ ದೀಪಕ್ ಚಾಹರ್ ಮತ್ತು ನಟ ಸೋನು ಸೂದ್ ಅವರೂ ಬೆಂಬಲ ನೀಡಿದರು. ಅವರು ಸಾಮಾಜಿಕ ಮಾಧ್ಯಮದಲ್ಲಿ ಮನವಿಗಳನ್ನು ಪೋಸ್ಟ್ ಮಾಡಿದರು ಮತ್ತು ಜೈಪುರದಾದ್ಯಂತ ಜನರಿಂದ ಹಣವನ್ನು ಸಂಗ್ರಹಿಸುವ ಚಾಲನೆ ನೀಡಲಾಯಿತು.

ಹಣ್ಣು, ತರಕಾರಿ ಮಾರಾಟಗಾರರು, ವ್ಯಾಪಾರಿಗಳು ಸೇರಿದಂತೆ ಎಲ್ಲಾ ವರ್ಗಗಳ ಜನರಿಂದ ಹಣದ ಸಹಾಯ ಪಡೆಯಲಾಯಿತು. ವಿವಿಧ ಎನ್‌ಜಿಒಗಳು ಮತ್ತು ಸಾಮಾಜಿಕ ಸಂಸ್ಥೆಗಳು ಪ್ರಚಾರಕ್ಕಾಗಿ ಹಣವನ್ನು ಸಂಗ್ರಹಿಸಲು ಸಹಾಯ ಮಾಡಿದವು.


ಮೂರು ತಿಂಗಳಲ್ಲಿ 9 ಕೋಟಿ ರೂ. ಸಂಗ್ರಹ

ರಾಜಸ್ಥಾನದಲ್ಲಿ ಈ ಪ್ರಮಾಣದಲ್ಲಿ ಕ್ರೌಡ್‌ಫಂಡಿಂಗ್ ನಡೆಯುತ್ತಿರುವುದು ಇದೇ ಮೊದಲು. ಮೂರು ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ 9 ಕೋಟಿ ರೂ. ಸಂಗ್ರಹವಾಗಿದ್ದು, ಜೈಪುರದ ಜೆಕೆ ಲೋನ್ ಆಸ್ಪತ್ರೆಯಲ್ಲಿ ಹೃದಯಾಂಶ್‌ಗೆ ಚುಚ್ಚುಮದ್ದನ್ನು ನೀಡಲಾಯಿತು. ಉಳಿದ ಮೊತ್ತವನ್ನು ಮೂರು ಕಂತುಗಳಲ್ಲಿ ಒಂದು ವರ್ಷದೊಳಗೆ ಆಸ್ಪತ್ರೆಗೆ ಜಮಾ ಮಾಡಬೇಕಿದೆ.

ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಎಂದರೇನು?

ಬೆನ್ನುಮೂಳೆಯ ಸ್ನಾಯುವಿನ ಕ್ಷೀಣತೆ ಅಥವಾ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ (SMA) ಎಂಬುದು ಒಂದು ಆನುವಂಶಿಕ ಅಸ್ವಸ್ಥತೆಯಾಗಿದೆ. ಇದರಲ್ಲಿ ಬೆನ್ನುಹುರಿ ಮತ್ತು ಮೆದುಳಿನ ಕಾಂಡದಲ್ಲಿನ ನರ ಕೋಶಗಳ ನಷ್ಟದಿಂದಾಗಿ ವ್ಯಕ್ತಿಯು ಸ್ನಾಯುಗಳ ಚಲನೆಯನ್ನು ನಿಯಂತ್ರಿಸಲು ಸಾಧ್ಯವಾಗುವುದಿಲ್ಲ. ಇದು ಸ್ನಾಯು ದೌರ್ಬಲ್ಯಕ್ಕೆ ಕಾರಣವಾಗುತ್ತದೆ ಮತ್ತು ಕೈಕಾಲುಗಳ ಚಲನೆ ಮತ್ತು ಉಸಿರಾಟದ ಮೇಲೆ ಪರಿಣಾಮ ಬೀರುತ್ತದೆ.

ಬೆನ್ನುಮೂಳೆಯ ಸ್ನಾಯುವಿನ ಕ್ಷೀಣತೆಯು ಸರ್ವೈವಲ್ ಮೋಟಾರ್ ನ್ಯೂರಾನ್‌ಗಳು 1 ಎಂಬ ಜೀನ್‌ನ ನಷ್ಟದಿಂದ ಉಂಟಾಗುತ್ತದೆ. ಇದು ಪ್ರೋಟೀನ್ ತಯಾರಿಸಲು ಅಗತ್ಯವಾದ ಮಾಹಿತಿಯನ್ನು ಹೊಂದಿರುತ್ತದೆ. ಇದು ದೇಹದ ಪ್ರತಿಯೊಂದು ಜೀವಕೋಶಕ್ಕೂ ಅಗತ್ಯವಾಗಿರುತ್ತದೆ. ಮಾನವ ಸಾಮಾನ್ಯವಾಗಿ ಹೆಚ್ಚುವರಿ ಜೀನ್ (SMN2) ಅನ್ನು ಹೊಂದಿರುತ್ತಾನೆ. ಆದರೆ ಅದು SMN1 ನಷ್ಟವನ್ನು ಭಾಗಶಃ ಸರಿದೂಗಿಸುತ್ತದೆ.

SMN1 ಗೆ ಹೋಲಿಸಿದರೆ SMN2 ಕೇವಲ ಒಂದು ಸಣ್ಣ ಪ್ರಮಾಣದ ಅಗತ್ಯ ಪ್ರೋಟೀನ್ ಅನ್ನು ಉತ್ಪಾದಿಸುತ್ತದೆ ಮತ್ತು ದೇಹದಲ್ಲಿನ ಅನೇಕ ಜೀವಕೋಶಗಳು ಮತ್ತು ಅಂಗಗಳು ಈ ಕಡಿಮೆ ಪೂರೈಕೆಯೊಂದಿಗೆ ಕಾರ್ಯನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ತೋರುತ್ತದೆಯಾದರೂ ಮೆದುಳಿನಿಂದ ಸ್ನಾಯುಗಳಿಗೆ ಸಂದೇಶಗಳನ್ನು ಕಳುಹಿಸುವ ಜವಾಬ್ದಾರಿಯುತ ಮೋಟಾರ್ ನ್ಯೂರಾನ್ ಗಳು ಕಡಿಮೆ ಮಟ್ಟದ SMNಗೆ ಸ್ಪಂದಿಸುವುದಿಲ್ಲ. ಹೀಗಾಗಿ ಇದು ಸ್ನಾಯು ನಿಯಂತ್ರಣವನ್ನು ಕಳೆದುಕೊಳ್ಳುವಂತೆ ಮಾಡುತ್ತದೆ.

17 ಕೋಟಿ ರೂ. ನ ದುಬಾರಿ ಔಷಧ

ಐಎಎನ್ ಎಸ್ ವರದಿ ಮಾಡಿದಂತೆ 17 ಕೋಟಿ ರೂ. ವೆಚ್ಚದ ವಿಶ್ವದ ಅತ್ಯಂತ ದುಬಾರಿ ಚುಚ್ಚುಮದ್ದನ್ನು ಬೆನ್ನುಮೂಳೆಯ ಸ್ನಾಯು ಕ್ಷೀಣತೆಯಿಂದ ಬಳಲುತ್ತಿರುವ ಎರಡು ವರ್ಷದೊಳಗಿನ ಮಕ್ಕಳಿಗೆ ನೀಡಬೇಕು. ಈ ಔಷಧವನ್ನು ಕ್ರೌಡ್‌ಫಂಡಿಂಗ್ ಸಹಾಯದಿಂದ ಝೋಲ್ಗೆನ್ಸ್ಮಾ ಎಂಬ ಈ ಇಂಜೆಕ್ಷನ್ ಅನ್ನು ಯುಎಸ್ ನಿಂದ ಜೈಪುರಕ್ಕೆ ತರಲಾಯಿತು. ಈ ಔಷಧ ಪಡೆಯಲು ಹಲವಾರು ಭಾರತೀಯ ಕುಟುಂಬಗಳು ಪರದಾಡುತ್ತಿವೆ.

ಭಾರತದಲ್ಲಿ ಬೆನ್ನುಮೂಳೆಯ ಸ್ನಾಯು ಕ್ಷೀಣತೆ

ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಕಾಯಿಲೆ ಹೊಂದಿರುವ ಭಾರತೀಯರ ಸಂಖ್ಯೆಯ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯಿಲ್ಲದಿದ್ದರೂ, ಅಸ್ತಿತ್ವದಲ್ಲಿರುವ ಪ್ರಕಾರ 10,000 ಜೀವಂತವಾಗಿ ಜನಿಸಿದ ಶಿಶುಗಳಲ್ಲಿ 1ರಲ್ಲಿ ಬೆನ್ನುಮೂಳೆಯ ಸ್ನಾಯು ಕ್ಷೀಣತೆ ಕಾಣಿಸಿಕೊಳ್ಳುತ್ತಿದೆ. ಒಂದು ಅಧ್ಯಯನದ ಪ್ರಕಾರ 38 ಭಾರತೀಯರಲ್ಲಿ ಒಬ್ಬರು ಬೆನ್ನುಮೂಳೆಯ ಸ್ನಾಯು ಕ್ಷೀಣತೆಗೆ ಒಳಗಾಗುತ್ತಾರೆ.

ಅತ್ಯಂತ ದುಬಾರಿ ಔಷಧ ಇದು

ಅಪರೂಪದ ಆನುವಂಶಿಕ ಕಾಯಿಲೆಯಾದ ಬೆನ್ನುಮೂಳೆಯ ಸ್ನಾಯು ಕ್ಷೀಣತೆಯೊಂದಿಗೆ ಜನಿಸಿದ ಶಿಶುಗಳು ಚಿಕಿತ್ಸೆಯಿಲ್ಲದೆ ಎರಡು ವರ್ಷ ಕೂಡ ಪೂರ್ಣಗೊಳಿಸುವುದಿಲ್ಲ. 1990ರ ದಶಕದವರೆಗೂ ಇದಕ್ಕೆ ಯಾವುದೇ ಚಿಕಿತ್ಸೆಗಳು ಇರಲಿಲ್ಲ. ಇದನ್ನು ತಡೆಗಟ್ಟಲು ಇತ್ತೀಚೆಗೆ ಪರವಾನಗಿ ಪಡೆದ ಎರಡು ಔಷಧಿಗಳಿವೆ. ಇದರಲ್ಲಿ ಒಂದು Zolgensma, ಯುಕೆಯಲ್ಲಿ ಶಿಶುಗಳಿಗೆ ಚಿಕಿತ್ಸೆ ನೀಡಲು ಇದು ಇತ್ತೀಚೆಗೆ ಅಷ್ಟೇ ಲಭ್ಯವಾಗುತ್ತಿದೆ. ಇದನ್ನು “ವಿಶ್ವದ ಅತ್ಯಂತ ದುಬಾರಿ ಔಷಧ” ಎಂದು ಕರೆಯಲಾಗುತ್ತದೆ. ಯಾಕೆಂದರೆ ಇದರ ಒಂದು ಡೋಸ್ ಗೆ ಸುಮಾರು 1.79 ಮಿಲಿಯನ್ ಡಾಲರ್ ಅಂದರೆ ಭಾರತೀಯ ಕರೆನ್ಸ್ ಮೌಲ್ಯ 17 ಕೋಟಿ ರೂ. ಪಾವತಿಸಬೇಕು.

ಇದನ್ನೂ ಓದಿ: Covaxin: ಕೋವಾಕ್ಸಿನ್‌ ಲಸಿಕೆ ಪಡೆದವರಿಗೂ ಬಿಗ್‌ ಶಾಕ್‌! ಆಘಾತಕಾರಿ ವರದಿ ಔಟ್‌

ಈ ಕಾಯಿಲೆಗೆ ಲಭ್ಯವಿರುವ ಇನ್ನೊಂದು ಔಷಧ ಸ್ಪಿನ್ರಾಜಾ (ಜೆನೆರಿಕ್ ಹೆಸರು ನುಸಿನೆರ್ಸೆನ್) ಇದು SMN2 ಜೀನ್ ದೇಹಕ್ಕೆ ಅಗತ್ಯವಿರುವ ಪ್ರೋಟೀನ್ ಅನ್ನು ಒದಗಿಸಲು ಸಹಾಯ ಮಾಡುವ ಡಿಎನ್‌ಎಯ ಒಂದು ಸಣ್ಣ ಭಾಗವಾಗಿದೆ. ಇದನ್ನು ನೇರವಾಗಿ ಬೆನ್ನುಮೂಳೆಯ ನಿರ್ಧಿಷ್ಟ ಭಾಗಕ್ಕೆ ಚುಚ್ಚಬೇಕಾಗುತ್ತದೆ. ಇದನ್ನು ನಿಯಮಿತವಾಗಿ ವರ್ಷದಲ್ಲಿ ಆರು ಬಾರಿ ಮಾಡಬೇಕು. ಚಿಕಿತ್ಸೆಯ ಮೊದಲ ವರ್ಷದಲ್ಲಿ ಆರು ಚುಚ್ಚುಮದ್ದುಗಳು ಪ್ರತಿ ಇಂಜೆಕ್ಷನ್‌ಗೆ 75,000 ಡಾಲರ್ ಪಾವತಿಸಬೇಕಾಗುತ್ತದೆ.

2021 ರಿಂದ ಲಭ್ಯವಿರುವ Zolgensma ಮಾನವನ SMN1 ಜೀನ್ ನ ನಕಲು ಮಾಡಲು ಸಹಾಯ ಮಾಡುತ್ತದೆ. SMN1 ಜೀನ್ ಅನ್ನು ರಕ್ತಪ್ರವಾಹಕ್ಕೆ ಚುಚ್ಚಿದಾಗ ಇದು ವ್ಯಕ್ತಿಗೆ ಅಗತ್ಯವಿರುವ ಹೆಚ್ಚಿನ ಪ್ರೋಟೀನ್‌ಗಳನ್ನು ಉತ್ಪಾದಿಸುತ್ತದೆ. ನಿರ್ವಹಣೆಗೆ ಸುಲಭ ಮತ್ತು ಕಡಿಮೆ ಅಡ್ಡ ಪರಿಣಾಮ ಉಂಟು ಮಾಡುವ Zolgensmaನ ಕೇವಲ ಒಂದು ಡೋಸ್ ಸಾಕಾಗುತ್ತದೆ.

ಭಾರತಕ್ಕೆ ಈ ಔಷಧ ತರಿಸಲು ಯಾವುದೇ ತೆರಿಗೆ ಪಾವತಿಸಬೇಕಿಲ್ಲ. ಆದರೆ ತೆರಿಗೆ ಇಲ್ಲದೇ ಇಲ್ಲಿ ಈ ಔಷಧೀಯ ದರ ಸುಮಾರು 17 ಕೋಟಿ ರೂ. ಆಗುತ್ತದೆ!

ನೊವಾರ್ಟಿಸ್ ವೆಬ್‌ಸೈಟ್‌ನ ಪ್ರಕಾರ, ಈ ಔಷಧವನ್ನು 45 ದೇಶಗಳಲ್ಲಿ ಅನುಮೋದಿಸಲಾಗಿದೆ. 2 500 ಕ್ಕೂ ಹೆಚ್ಚು ರೋಗಿಗಳು ಜಾಗತಿಕವಾಗಿ ಇದರ ಚಿಕಿತ್ಸೆ ಪಡೆಯುತ್ತಾರೆ. ಕಂಪೆನಿಯು 36 ದೇಶಗಳಲ್ಲಿ ಸುಮಾರು 300 ಮಕ್ಕಳಿಗೆ ಇದರ ಥೆರಪಿಯನ್ನು ಉಚಿತವಾಗಿ ನೀಡಿದೆ.

Continue Reading
Advertisement
West Nile fever Health department on alert
ಆರೋಗ್ಯ30 mins ago

West Nile fever : ಕೇರಳದಲ್ಲಿ ವೆಸ್ಟ್‌ ನೈಲ್ ಭೀತಿ; ಮೈಸೂರು ಗಡಿಭಾಗದಲ್ಲಿ ಆರೋಗ್ಯ ಇಲಾಖೆ ಅಲರ್ಟ್‌

Great Khali
ದೇಶ33 mins ago

Great Khali: ಜಗತ್ತಿನ ಕುಬ್ಜ ಮಹಿಳೆಯನ್ನು ಮಗುವಿನಂತೆ ಎತ್ತಿ ಆಡಿಸಿದ ಗ್ರೇಟ್‌ ಖಲಿ; ಜನ ಕೆಂಡವಾಗಿದ್ದು ಏಕೆ?

Kalki 2898 AD
ಪ್ರಮುಖ ಸುದ್ದಿ37 mins ago

Kalki 2898 AD: ಮೇ 22ಕ್ಕೆ ಭೈರವನ ನಂಬಿಕಸ್ಥ ಗೆಳೆಯ ಬುಜ್ಜಿಯ ಅನಾವರಣ; ಕಲ್ಕಿ ಚಿತ್ರದ 5ನೇ ಸೂಪರ್ ಸ್ಟಾರ್ ಯಾರು?

RCB vs CSK
ಕ್ರೀಡೆ56 mins ago

RCB vs CSK: ಆನ್​ಲೈನ್​ ವೀಕ್ಷಣೆಯಲ್ಲೂ ದಾಖಲೆ ಬರೆದ ಆರ್​ಸಿಬಿ-ಚೆನ್ನೈ ಪಂದ್ಯ

Rain News
ಕರ್ನಾಟಕ1 hour ago

Rain News: ಕುಷ್ಟಗಿಯಲ್ಲಿ ಸಿಡಿಲು ಬಡಿದು ರೈತ ಸಾವು, ಯುವಕನಿಗೆ ಗಂಭೀರ ಗಾಯ

Prajwal Revanna Case
ಕರ್ನಾಟಕ1 hour ago

ದೇವೇಗೌಡ ಇನ್ನೂ ಆತ್ಮಹತ್ಯೆ ಮಾಡಿಕೊಂಡಿಲ್ವಲ್ಲ; ಹೊಸ ಆಡಿಯೊದಲ್ಲಿ ಶಿವರಾಮೇಗೌಡ ಸ್ಫೋಟಕ ಹೇಳಿಕೆ

Rohit Sharma
ಕ್ರೀಡೆ2 hours ago

Rohit Sharma: ಐಪಿಎಲ್ ಪ್ರಸಾರಕರ ವಿರುದ್ಧ ಕಿಡಿ ಕಾರಿದ ಹಿಟ್​ಮ್ಯಾನ್​ ರೋಹಿತ್​

R Ashok
ರಾಜಕೀಯ2 hours ago

R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

Thailand Open 2024
ಬ್ಯಾಡ್ಮಿಂಟನ್2 hours ago

Thailand Open 2024: ಥಾಯ್ಲೆಂಡ್‌ ಓಪನ್‌ ಗೆದ್ದ ಭಾರತದ ಚಿರಾಗ್‌-ಸಾತ್ವಿಕ್‌ ಜೋಡಿ

Prajwal Revanna Case
ಕರ್ನಾಟಕ2 hours ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ಗೆ ಟ್ವಿಸ್ಟ್;‌ ದೇವರಾಜೇಗೌಡ, ಡಿಕೆಶಿ ಆಡಿಯೊ ಬಯಲು, ಇಲ್ಲಿದೆ ಸ್ಫೋಟಕ ಮಾಹಿತಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ3 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು3 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ4 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌