Chiranjeevi | ʻರೇಮೊʼ ನಟ ಇಶಾನ್‌ಗೆ ಮೆಗಾ ಸ್ಟಾರ್ ಚಿರಂಜೀವಿ ಸಾಥ್‌! - Vistara News

ಸಿನಿಮಾ

Chiranjeevi | ʻರೇಮೊʼ ನಟ ಇಶಾನ್‌ಗೆ ಮೆಗಾ ಸ್ಟಾರ್ ಚಿರಂಜೀವಿ ಸಾಥ್‌!

ʻರೇಮೊ’ ಸಿನಿಮಾ ನಟ ಇಶಾನ್‌ ಅವರಿಗೆ (Chiranjeevi) ಮೆಗಾ ಸ್ಟಾರ್ ಚಿರಂಜೀವಿ ಶುಭ ಹಾರೈಸಿದ್ದಾರೆ. ನಟ ಭೇಟಿಯಾಗಿರುವ ಫೋಟೊ ವೈರಲ್‌ ಆಗಿದೆ.

VISTARANEWS.COM


on

Chiranjeevi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡದ ʻರೇಮೊ’ ಸಿನಿಮಾ ಮೂಲಕ ಬೆಳ್ಳಿತೆರೆ ಮೇಲೆ ಮಿಂಚಲು ಸಜ್ಜಾಗಿರುವ ನಟ ಇಶಾನ್‌ ಅವರಿಗೆ ಸಿನಿರಸಿಕರಿಂದ ಶುಭ ಹಾರೈಕೆ ಸಿಗುತ್ತಿದೆ. ಸ್ಯಾಂಡಲ್‌ವುಡ್‌ ಸೂಪರ್ ಸ್ಟಾರ್‌ಗಳಾದ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ಕ್ರೇಜಿ ಸ್ಟಾರ್ ರವಿಚಂದ್ರನ್ ಹೀಗೆ ಎಲ್ಲರೂ ಬೆನ್ನು ತಟ್ಟಿ ಪ್ರೋತ್ಸಾಹ ನೀಡಿದ್ದಾರೆ. ಇದೀಗ ತೆಲುಗು ಚಿತ್ರರಂಗದ ಮೆಗಾ ಸ್ಟಾರ್ ಚಿರಂಜೀವಿ (Chiranjeevi) ಕೂಡ ಇಶಾನ್‌ಗೆ ಶುಭ ಹಾರೈಸಿದ್ದಾರೆ.

ʻರೇಮೊ’ ಸಿನಿಮಾ ಇದೇ ನವೆಂಬರ್ 25ರಂದು ಅದ್ಧೂರಿಯಾಗಿ ರಾಜ್ಯಾದ್ಯಂತೆ ತೆರೆ ಕಾಣುತ್ತಿದೆ. ಸಿನಿಮಾ ಪ್ರಚಾರ ಕಾರ್ಯವೂ ಭರ್ಜರಿಯಾಗಿ ನಡೆಯುತ್ತಿದೆ. ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿರುವ ನಾಯಕ ನಟ ಇಶಾನ್ ಇದೇ ವೇಳೆ ತೆಲುಗು ಮೆಗಾ ಸ್ಟಾರ್ ಚಿರಂಜೀವಿಯನ್ನು ಭೇಟಿ ಮಾಡಿದ್ದಾರೆ. ಇಶಾನ್ ಬಗ್ಗೆ ಮೆಚ್ಚುಗೆಯ ಮಾತನಾಡಿರುವ ಚಿರಂಜೀವಿ ಅವರು ಸಿನಿಮಾಗೆ ಶುಭ ಹಾರೈಸಿದ್ದಾರೆ. ಇದೀಗ ನಟ ಇಶಾನ್ ಅವರು ಚಿರಂಜೀವಿ ಅವರನ್ನು ಭೇಟಿಯಾದ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Drishyam 2 | ದೃಶ್ಯಂ-2 ಸಿನಿಮಾ ಮೂರನೇ ದಿನದ ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಎಷ್ಟು?

ಪವನ್ ಒಡೆಯರ್ ನಿರ್ದೇಶನದ ʻರೇಮೊ’ ಸಿನಿಮಾ ರೋಮ್ಯಾಂಟಿಕ್ ಸಬ್ಜೆಕ್ಟ್ ಒಳಗೊಂಡಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಚಿತ್ರವನ್ನು ಜಯಾದಿತ್ಯ ಬ್ಯಾನರ್ ನಡಿ ಸಿ. ಆರ್. ಮನೋಹರ್ ನಿರ್ಮಾಣ ಮಾಡಿದ್ದಾರೆ. ಸಿ ಆರ್ ಗೋಪಿ ಅವರ ಸಹ ನಿರ್ಮಾಣವೂ ಚಿತ್ರಕ್ಕಿದೆ. ವೈದಿ ಕ್ಯಾಮೆರಾ ವರ್ಕ್, ಕೆ.ಎಂ. ಪ್ರಕಾಶ್ ಸಂಕಲನ, ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ | Powerful Kannada Movies | ಈ ಹಳೇ ಕನ್ನಡ ಸಿನಿಮಾಗಳಿಗೂ ಪ್ಯಾನ್ ಇಂಡಿಯಾ ಖದರು‌ ಇತ್ತು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Vettaiyan Movie: ಸೂಟು ಬೂಟು ಹಾಕಿಕೊಂಡು ಸ್ಟೈಲಿಶ್‌ ಆಗಿ ಪೋಸ್‌ ಕೊಟ್ಟ ರಜನಿ!

Vettaiyan Movie: ಈ ಚಿತ್ರಕ್ಕಾಗಿ ತಮಿಳಿನ ಸೂಪರ್‌ಸ್ಟಾರ್ ಮತ್ತು ಲೆಜೆಂಡರಿ ಬಾಲಿವುಡ್ ಸ್ಟಾರ್ 33 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ. ಸದ್ಯ ಮುಂಬೈನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರುವ ಫೋಟೊಗಳನ್ನು ಪೋಸ್ಟ್ ಮಾಡಿದೆ.ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ.

VISTARANEWS.COM


on

Vettaiyan Movie Rajinikanth And Amitabh Bachchan Poses Together
Koo

ಬೆಂಗಳೂರು: ಸೂಪರ್ ಸ್ಟಾರ್ ರಜನಿಕಾಂತ್ ನಟನೆಯ 170ನೇ ಸಿನಿಮಾ ʼವೆಟ್ಟೈಯಾನ್ʼ (Vettaiyan Movie) ಟೈಟಲ್ ಟೀಸರ್ ಮೂಲಕವೇ ಕುತೂಹಲ ಹೆಚ್ಚಿಸಿತ್ತು.  ಅಮಿತಾಭ್‌ ಬಚ್ಚನ್ ಸೇರಿದಂತೆ ಬೃಹತ್ ತಾರಾಗಣವನ್ನು ಒಳಗೊಂಡಿರುವ ʼವೆಟ್ಟೈಯಾನ್ʼ ನಿರ್ಮಾಣದ ಕೊನೆಯ ಹಂತದಲ್ಲಿದೆ. ಈ ಚಿತ್ರಕ್ಕಾಗಿ ತಮಿಳಿನ ಸೂಪರ್‌ಸ್ಟಾರ್ ಮತ್ತು ಲೆಜೆಂಡರಿ ಬಾಲಿವುಡ್ ಸ್ಟಾರ್ 33 ವರ್ಷಗಳ ನಂತರ ಮತ್ತೆ ಒಂದಾಗುತ್ತಿದ್ದಾರೆ. ಸದ್ಯ ಮುಂಬೈನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಲೈಕಾ ಪ್ರೊಡಕ್ಷನ್ ಸಂಸ್ಥೆ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಒಟ್ಟಿಗೆ ಇರುವ ಫೋಟೊಗಳನ್ನು ಪೋಸ್ಟ್ ಮಾಡಿದೆ.

‘ಭಾರತೀಯ ಸಿನಿಮಾ ರಂಗದ ದಿಗ್ಗಜರು. ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಮುಂಬೈನ ವೆಟ್ಟೈಯನ್ ಸಿನಿಮಾ ಸೆಟ್​ನಲ್ಲಿ’ ಎಂದು ಲೈಕಾ ಪ್ರೊಡಕ್ಷನ್ಸ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ರಜನಿಕಾಂತ್ ಹಾಗೂ ಅಮಿತಾಭ್ ಇಬ್ಬರೂ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ತಮಿಳು ನಟ ಸೂರ್ಯ ಅಭಿನಯದ ‘ಜೈ ಭೀಮ್’ ಚಿತ್ರದ ನಿರ್ದೇಶಕ ಟಿ.ಎಸ್. ಜ್ಞಾನವೇಲ್ ‘ವೆಟ್ಟೈಯಾನ್’ಗೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಈ ಚಿತ್ರದ ಮೇಲೆ ನಿರೀಕ್ಷೆ ದುಪ್ಪಟ್ಟಾಗೋದಿಕ್ಕೆ ಮತ್ತೊಂದು ಕಾರಣ ತಲೈವಾ ಹಾಗೂ ಬಿಗ್ ಬಿ ಸಂಗಮ. ಭಾರತೀಯ ಚಿತ್ರರಂಗದ ದಿಗ್ಗಜರಾದ ಬಿಗ್ ಬಿ ಅಮಿತಾಬ್ ಬಚ್ಚನ್ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ವೆಟ್ಟೈಯಾನ್ ಸಿನಿಮಾ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಅಭೂತಪೂರ್ವ ಸಮಾಗಮಕ್ಕೆ ವೇದಿಕೆ ನಿರ್ಮಿಸಿದೆ.

ಇದನ್ನೂ ಓದಿ: Jailer Cinema : ಬದರೀನಾಥ್​​ ದೇಗುಲಕ್ಕೆ ಭೇಟಿ ನೀಡಿದ ಸೂಪರ್ ಸ್ಟಾರ್ ರಜನಿಕಾಂತ್​

ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಲಿದ್ದಾರೆ. ಹೀಗಾಗಿಯೇ ಇದು ಬಹು ತಾರಾಗಣದ ಚಿತ್ರವಾಗಲಿದೆ.

ವೆಟ್ಟೈಯಾನ್ ಸಿನಿಮಾಗೆ ರಾಕ್ ಸ್ಟಾರ್ ಖ್ಯಾತಿಯ ಅನಿರುದ್ಧ್ ರವಿಚಂದರ್ ಸಂಗೀತ, ಎಸ್.ಆರ್. ಕಥಿರ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನವಿರಲಿದೆ. ತಿರುವನಂತಪುರಂ, ತಿರುನೆಲ್ವೇಲಿ, ಚೆನ್ನೈ, ಮುಂಬೈ, ಆಂಧ್ರಪ್ರದೇಶ ಮತ್ತು ಹೈದರಾಬಾದ್‌ನಲ್ಲಿ ಚಿತ್ರದ ಚಿತ್ರೀಕರಣ‌ ನಡೆಸಲಾಗಿದೆ. ಈ ವರ್ಷ ಅಕ್ಟೋಬರ್ ತಿಂಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎಂದು ತಿಳಿಸಿದ್ದಾರೆ.

Continue Reading

ಬಾಲಿವುಡ್

Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

Urfi Javed: ವೈರಲ್‌ ಆದ ವಿಡಿಯೊದಲ್ಲಿ ಉರ್ಫಿ ಅವರು ಚಪ್ಪಾಳೆ ತಟ್ಟುವಾಗ ಉಡುಪಿನಿಂದ ಚಿಟ್ಟೆಗಳು ಹಾರಿಹೋಗುತ್ತವೆ. ಉರ್ಫಿ ಧರಿಸಿರುವ ಬ್ಲ್ಯಾಕ್​ ಗೌನ್​​ ಮೇಲಿರುವ ಎಲೆ, ಹೂಗಳು ತನ್ನಷ್ಟಕ್ಕೆ ಅರಳಿಕೊಳ್ಳುತ್ತವೆ. ಒಂದಿಷ್ಟು ಡಿಸೈನ್ಸ್​​​ ನಟಿಯ ಸುತ್ತ ಬೀಳುತ್ತವೆ. ಈ ಬಾರಿ ಉರ್ಫಿ ಉಡುಪಿಗೆ ಸಮಂತಾ ರುತ್ ಪ್ರಭು ಸೇರಿದಂತೆ ಅನೇಕ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಮೆಚ್ಚಿದ್ದಾರೆ.

VISTARANEWS.COM


on

Urfi Javed magical butterflies dress Samantha reacts
Koo

ಬೆಂಗಳೂರು: ವಿಶಿಷ್ಟವಾದ ಬಟ್ಟೆಗಳಿಂದಲೇ ಹೆಸರುವಾಸಿಯಾಗಿರುವ ಸ್ಟೈಲ್ ಐಕಾನ್‌ ಉರ್ಫಿ ಜಾವೇದ್ (Urfi Javed) ಇದೀಗ ಮತ್ತೊಂದು ಅವತಾರದಲ್ಲಿ ಕಂಡಿದ್ದಾರೆ. ಈ ಬಾರಿ ಉರ್ಫಿ ಉಡುಪಿಗೆ ಸಮಂತಾ ರುತ್ ಪ್ರಭು ಸೇರಿದಂತೆ ಅನೇಕ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಮೆಚ್ಚಿದ್ದಾರೆ. ಉರ್ಫಿ ಕಪ್ಪು ಬಣ್ಣದ ಲೆಹೆಂಗಾ ಧರಿಸಿದ್ದರು. ಉರ್ಫಿ ಈ ಸಲ 3D ಫ್ಲವರ್​​ ಗೌನ್​​​​ ಧರಿಸಿದ್ದಾರೆ. ಇದರಲ್ಲಿರುವ ಮ್ಯಾಜಿಕಲ್​​ ಬಟರ್‌ಫ್ಲೈ, ಪ್ಲವರ್​​ ಥೀಮ್ ಗೌನ್ ಸಾಮಾಜಿಕ ಜಾಲತಾಣದಲ್ಲಿ ವಿಶೇಷವಾಗಿ ಗಮನ ಸೆಳೆಯುತ್ತಿದ್ದು, ಸಾಕಷ್ಟು ಮಂದಿ ಲೈಕ್‌ ಮಾಡಿದ್ದಾರೆ​.

ವೈರಲ್‌ ಆದ ವಿಡಿಯೊದಲ್ಲಿ ಉರ್ಫಿ ಅವರು ಚಪ್ಪಾಳೆ ತಟ್ಟುವಾಗ ಉಡುಪಿನಿಂದ ಚಿಟ್ಟೆಗಳು ಹಾರಿಹೋಗುತ್ತವೆ. ಉರ್ಫಿ ಧರಿಸಿರುವ ಬ್ಲ್ಯಾಕ್​ ಗೌನ್​​ ಮೇಲಿರುವ ಎಲೆ, ಹೂಗಳು ತನ್ನಷ್ಟಕ್ಕೆ ಅರಳಿಕೊಳ್ಳುತ್ತವೆ. ಒಂದಿಷ್ಟು ಡಿಸೈನ್ಸ್​​​ ನಟಿಯ ಸುತ್ತ ಬೀಳುತ್ತವೆ. ಅವು ಹೂ ಮತ್ತು ಚಿಟ್ಟೆಯಾಕಾರದಲ್ಲಿ ಕಂಡುಬಂದಿದ್ದು ಅದ್ಭುತ ಗಾರ್ಡನ್​​ ಥೀಮ್​ ಡ್ರೆಸ್​​​​​ನಂತೆ ಭಾಸವಾಗುತ್ತದೆ.

ಇನ್‌ಸ್ಟಾಗ್ರಾಮ್‌ನಲ್ಲಿ ತನ್ನ ಡ್ರೆಸ್‌ನಲ್ಲಿರುವವಿಡಿಯೊವನ್ನು ಹಂಚಿಕೊಂಡ ಉರ್ಫಿ, “ಮ್ಯಾಜಿಕ್ʼʼ ಎಂದು ಬರೆದಿದ್ದಾರೆ. ವಿಡಿಯೊಗೆ ಪ್ರತಿಕ್ರಿಯಿಸಿದ ಕುಶಾ ಕಪಿಲಾ, “ರಾಣಿ ರೀತಿ ಕಾಣುತ್ತಿದ್ದೀರಾ” ಎಂದು ಬರೆದಿದ್ದಾರೆ.

ಇದನ್ನೂ ಓದಿ: Uorfi Javed: ಉಫ್‌! 100 ಕೆ.ಜಿ. ತೂಕದ ಗೌನ್ ಧರಿಸಿದ ಉರ್ಫಿ ಜಾವೇದ್‌; ವಿಡಿಯೊ ಇಲ್ಲಿದೆ

ಉರ್ಫಿಯ ಉಡುಪಿಗೆ ಸಮಂತಾ ರಿಯಾಕ್ಷನ್‌!

ಸಮಂತಾ ರುತ್ ಪ್ರಭು ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಉರ್ಫಿ ವಿಡಿಯೊವನ್ನು ಹಂಚಿಕೊಂಡಿದ್ದಾರೆ. “ಸುಂದರವಾಗಿದೆ ಉರ್ಫಿ”ಎಂದು ಬರೆದುಕೊಂಡಿದ್ದಾರೆ. ಸಮಂತಾ ಶೇರ್‌ ಮಾಡಿಕೊಂಡ ಪೋಸ್ಟ್‌ನಲ್ಲಿ ಉರ್ಫಿ ಅವರು ಗೌನ್‌ವನ್ನು ಹೇಗೆ ತಯಾರಿಸಿದ್ದಾರೆ ಎಂಬುದರ ಕುರಿತು ಇದೆ. “ಹಾರುವ ಚಿಟ್ಟೆಗಳ ಉಡುಗೆ” ಎಂಬ ಶೀರ್ಷಿಕೆ ಶೇರ್‌ ಮಾಡಿಕೊಂಡ ವಿಡಿಯೊದಲ್ಲಿ ಇದೆ. ಮತ್ತೋರ್ವ ಅಭಿಮಾನಿ, ಉರ್ಫಿ ಸುಂದರವಾಗಿ ಕಾಣುತ್ತಿದ್ದಾರೆ ಎಂಬರ್ಥದಲ್ಲಿ ಬರೆದಿದ್ದಾರೆ. ಅಭಿಮಾನಿಗಳು ನಟಿಯನ್ನು ಮೆಟ್ ಗಾಲಾ 2024ರಲ್ಲಿ ನೋಡಲು ಬಯಸಿದ್ದಾರೆ.

ಬಾಲಿವುಡ್‌ಗೆ ಪದಾರ್ಪಣೆ

ಇದರ ಜತೆಗೆ ಉರ್ಫಿ ಜಾವೇದ್‌ ಬಾಲಿವುಡ್‌ಗೂ ಕಾಲಿಟ್ಟಿದ್ದಾರೆ. ಏಕ್ತಾ ಕಪೂರ್ ನಿರ್ಮಾಣದ ‘ಲವ್ ಸೆಕ್ಸ್ ಔರ್ ಧೋಖಾ 2’ ಸಿನಿಮಾದಲ್ಲಿ ಅವರು ಅಭಿನಯಿಸಿದ್ದರು. ಏಪ್ರಿಲ್ 19ರಂದು ಸಿನಿಮಾ ಬಿಡುಗಡೆಯಾಗಿತ್ತು. ಈ ಚಿತ್ರವನ್ನು ದಿವಾಕರ್ ಬ್ಯಾನರ್ಜಿ ನಿರ್ದೇಶಿಸಿದ್ದರು. ಈ ಹಿಂದೆ ಇವರು ʻಲವ್ ಸೆಕ್ಸ್ ಔರ್ ಧೋಖಾʼ ಸಿನಿಮಾಕ್ಕೆ ಆ್ಯಕ್ಷನ್‌ ಕಟ್‌ ಹೇಳಿದ್ದರು. ʼಲವ್ ಸೆಕ್ಸ್ ಔರ್ ಧೋಖಾ 2ʼನಲ್ಲಿ ಆಸಕ್ತಿದಾಯಕ ಕಥೆ ಇರಲಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಇಂಟರ್‌ನೆಟ್‌ ಜಗತ್ತಿನಲ್ಲಿ ನಡೆಯುವ ಪ್ರೀತಿಯ ಕಥೆ ಇರಲಿದೆ ಎನ್ನಲಾಗಿತ್ತು. ಬಾಲಿವುಡ್‌ ಕಲಾವಿದರಾದ ತುಷಾರ್ ಕಪೂರ್ ಮತ್ತು ಮೌನಿ ರಾಯ್ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ವಿಶೇಷ ಎಂದರೆ ಇದು ಉರ್ಫಿ ಜಾವೇದ್‌ ಅಭಿನಯದ ಮೊದಲ ಬಾಲಿವುಡ್‌ ಚಿತ್ರ. ಬಿಗ್‌ಬಾಸ್‌ ರಿಯಾಲಿಟಿ ಶೋದ ಮೂಲಕ ಗಮನ ಸೆಳೆದಿದ್ದ ಅವರು ಸಿನಿಮಾದಲ್ಲಿ ಯಾವ ರೀತಿ ಕಾಣಿಸಿಕೊಳ್ಳಬಹುದು ಎನ್ನುವ ಕುತೂಹಲ ಮೂಡಿತ್ತು. ಮಾತ್ರವಲ್ಲ ಅವರು ಸ್ಪ್ಲಿಟ್‌ವಿಲ್ಲಾ ಎಕ್ಸ್ 5 (Splitsvilla X5) ಶೋದಲ್ಲಿಯೂ ಕಾಣಿಸಿಕೊಂಡಿದ್ದಾರೆ.

Continue Reading

ಸಿನಿಮಾ

Salaar Movie: ಕಿರುತೆರೆಯಲ್ಲಿ ‘ಸಲಾರ್’ಗೆ ಕಡಿಮೆ ಟಿಆರ್‌ಪಿ: ಪ್ಲಾಪ್‌ ಆಗಲು ಕಾರಣವೇನು?

Salaar Movie: ಪ್ರಭಾಸ್ ಅಭಿನಯದ ‘ಸಲಾರ್’ ಸಿನಿಮಾವು ಬಾಕ್ಸ್ ಆಫೀಸ್​ನಲ್ಲಿ 700 ಕೋಟಿ ರೂ. ಕಮಾಯಿ ಮಾಡಿತ್ತು.  ಇದಾದ ಬಳಿಕ ಒಟಿಟಿಗೂ ಲಗ್ಗೆ ಇಟ್ಟಿತ್ತು. ಇದಾದ ಮೇಲೆ ಈ ಸಿನಿಮಾವು ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಸುವರ್ಣ ವರ್ಲ್ಡ್ ಪ್ರೀಮಿಯರ್ ಆಗಿದೆ. ಇನ್ನೊಂದು ಕಡೆ ಒಟಿಟಿಯಲ್ಲೂ ‘ಸಲಾರ್’ ರಿಲೀಸ್ ಆದ ಬಹಳ ದಿನಗಳ ಬಳಿಕ ಟಿವಿಯಲ್ಲಿ ರಿಲೀಸ್ ಆಗಿತ್ತು. ಈ ಕಾರಣಕ್ಕೆ ಟಿವಿಯಲ್ಲಿ ಜನ ನೋಡಲು ಮನಸ್ಸು ಮಾಡಿಲ್ಲ ಎಂದು ಹೇಳಲಾಗುತ್ತಿದೆ.

VISTARANEWS.COM


on

Salaar Movie Fails To Get Expected TRP Star Suvarna
Koo

ಬೆಂಗಳೂರು: ವಿಶ್ವ-ವಿಖ್ಯಾತಿ ಪಡೆದ ʻಕಾಂತಾರʼ, ʻಹೊಯ್ಸಳʼ, ʻಜೇಮ್ಸ್ʼ ನಂತಹ ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನು ಪ್ರಸಾರ ಮಾಡಿ ಪ್ರೇಕ್ಷಕರ ಮನಗೆದ್ದ ಸುವರ್ಣ ವಾಹಿನಿ (Star Suvarna)ಯಲ್ಲಿ 2023ರ ಬ್ಲಾಕ್ ಬಸ್ಟರ್ ಹಿಟ್ “ಸಲಾರ್” ಸಿನಿಮಾ (Salaar Movie) ಪ್ರಸಾರ ಕಂಡಿತ್ತು. ಆದರೆ ಸಿನಿಮಾ ಟಿವಿಯಲ್ಲಿ ನೀರಸ ಪ್ರತಿಕ್ರಿಯೆ ನೀಡಿದೆ. ಸಿನಿಮಾ ಟಿವಿಯಲ್ಲಿ ಗೆಲ್ಲಬಹುದು ಎಂಬ ನಿರೀಕ್ಷೆಯಿತ್ತು. ಕೇವಲ 6.5 ಟಿಆರ್‌ಪಿ ಗಿಟ್ಟಿಸಿಕೊಂಡಿದೆ. ಈ ಮೂಲಕ ಕಿರುತೆರೆಯಲ್ಲಿ ದೊಡ್ಡ ಫ್ಲಾಪ್ ಆಗಿದೆ ಸಲಾರ್‌.

ಪ್ರಭಾಸ್ ಅಭಿನಯದ ‘ಸಲಾರ್’ ಸಿನಿಮಾವು ಬಾಕ್ಸ್ ಆಫೀಸ್​ನಲ್ಲಿ 700 ಕೋಟಿ ರೂ. ಕಮಾಯಿ ಮಾಡಿತ್ತು.  ಇದಾದ ಬಳಿಕ ಒಟಿಟಿಗೂ ಲಗ್ಗೆ ಇಟ್ಟಿತ್ತು. ಇದಾದ ಮೇಲೆ ಈ ಸಿನಿಮಾವು ‘ಸ್ಟಾರ್ ಸುವರ್ಣ’ ವಾಹಿನಿಯಲ್ಲಿ ಸುವರ್ಣ ವರ್ಲ್ಡ್ ಪ್ರೀಮಿಯರ್ ಆಗಿದೆ. ಆದರೆ ಅಷ್ಟಾಗಿ ಕಿರುತೆರೆಯಲ್ಲಿ ರೆಸ್ಪಾನ್ಸ್‌ ಸಿಕ್ಕಿಲ್ಲ. ಥಿಯೇಟರ್‌ನಲ್ಲಿ ಬಹುತೇಕ ಮಂದಿ ‘ಸಲಾರ್’ ಸಿನಿಮಾ ವೀಕ್ಷಣೆ ಮಾಡಿದ್ದರು. ಇನ್ನೊಂದು ಕಡೆ ಒಟಿಟಿಯಲ್ಲೂ ‘ಸಲಾರ್’ ರಿಲೀಸ್ ಆದ ಬಹಳ ದಿನಗಳ ಬಳಿಕ ಟಿವಿಯಲ್ಲಿ ರಿಲೀಸ್ ಆಗಿತ್ತು. ಈ ಕಾರಣಕ್ಕೆ ಟಿವಿಯಲ್ಲಿ ಜನ ನೋಡಲು ಮನಸ್ಸು ಮಾಡಿಲ್ಲ ಎಂದು ಹೇಳಲಾಗುತ್ತಿದೆ.

ಐಪಿಎಲ್ ಪಂದ್ಯಗಳು ನಡೆಯುತ್ತಿರುವುದರಿಂದ ಕ್ರಿಕೆಟ್ ಪಂದ್ಯಗಳನ್ನೇ ಹೆಚ್ಚು ನೋಡುತ್ತಿದ್ದಾರೆ. ಇನ್ನೊಂದು ಕಡೆ ಆಂಧ್ರದಲ್ಲಿ ಚುನಾವಣೆಯಿದೆ. ಈ ಕಾರಣಕ್ಕೆ ಜನರ ಗಮನ ಬೇರೆ ಕಡೆಗೆ ಇದೆ ಎಂದೂ ವರದಿಯಾಗಿದೆ. ಆದರೆ ಮಹೇಶ್‌ ಬಾಬು ಅವರ ʻಗುಂಟೂರು ಖಾರಂʼ ಹಾಗೂ ನಾಗಾರ್ಜು ನಟನೆಯ ‘ನಾ ಸಾಮಿ ರಂಗ’ ಸಿನಿಮಾಗಳಿಗೆ ಥಿಯೇಟರ್‌ಗಳಲ್ಲಿ ಅಷ್ಟಾಗಿ ರೆಸ್ಲಾನ್ಸ್‌ ಇಲ್ಲವಿದ್ದರೂ ಕಿರುತೆರೆಯಲ್ಲಿ ಒಳ್ಳೆಯ ಟಿಆರ್‌ಪಿ ಕಂಡಿತ್ತು.

ಇದನ್ನೂ ಓದಿ: Salaar Movie: ಕಿರುತೆರೆಗೆ ಬಂದೇ ಬಿಡ್ತು ಬ್ಲಾಕ್ ಬಸ್ಟರ್ ಸಿನಿಮಾ ‘ಸಲಾರ್’!

ʻಸಲಾರ್‌ʼವನ್ನು ಕನ್ನಡದ ಹೆಸರಾಂತ ನಿರ್ದೇಶಕ ಪ್ರಶಾಂತ್ ನೀಲ್ ‘ಸಲಾರ್’ ಸಿನಿಮಾವನ್ನು ನಿರ್ದೇಶಿಸಿದ್ದು, ಹೊಂಬಾಳೆ ಫಿಲ್ಮ್ಸ್‌ ಈ ಸಿನಿಮಾವನ್ನು ನಿರ್ಮಿಸಿದೆ. ಇನ್ನು ಈ ಸಿನಿಮಾದ ಹಾಡುಗಳು ಅದ್ಭುತ ರೀತಿಯಲ್ಲಿ ಮೂಡಿ ಬಂದಿದ್ದು ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್‌ನಲ್ಲಿ ಇತ್ತು.

ಸಲಾರ್‌ʼ ಒಟಿಟಿ ಹಕ್ಕನ್ನು ನೆಟ್‌ಫ್ಲಿಕ್ಸ್‌ ಬರೋಬ್ಬರಿ 160 ಕೋಟಿ ರೂ.ಗೆ ಪಡೆದುಕೊಂಡಿತ್ತು. ಈ ಚಿತ್ರದಲ್ಲಿ ಮಾಲಿವುಡ್‌ ಸೂಪರ್‌ ಸ್ಟಾರ್‌, ಬಹುಭಾಷಾ ನಟ ಪೃಥ್ವಿರಾಜ್‌ ಸುಕುಮಾರನ್‌, ಶ್ರುತಿ ಹಾಸನ್‌, ಜಗಪತಿ ಬಾಬು, ಈಶ್ವರಿ ರಾವ್‌ ಮತ್ತಿತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದರು. ರವಿ ಬಸ್ರೂರು ಸಂಗೀತ ನೀಡಿದ್ದಾರೆ. ʼಕೆಜಿಎಫ್‌ʼ ಸರಣಿ ಮತ್ತು ʼಕಾಂತಾರʼ ಚಿತ್ರಗಳ ಬಹುದೊಡ್ಡ ಯಶಸ್ಸಿನ ಬಳಿಕ ಹೊಂಬಾಳೆ ಫಿಲ್ಮ್ಸ್‌ ʼಸಲಾರ್‌ʼ ಮೂಲಕ ಇನ್ನೊಂದು ಗೆಲುವು ದಾಖಲಿಸಿತ್ತು. ‘ಉಗ್ರಂ’ ಕಥೆಯನ್ನೇ ಸಾಕಷ್ಟು ಬದಲಾವಣೆಯೊಂದಿಗೆ ಬಹಳ ದೊಡ್ಡಮಟ್ಟದಲ್ಲಿ ನೀಲ್ ಕಟ್ಟಿಕೊಟ್ಟಿದ್ದರು ಆದರೂ ಈ ಚಿತ್ರ ಪ್ರೇಕ್ಷಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿತ್ತು.

ಇದನ್ನೂ ಓದಿ: Salaar Movie: ಬಾಕ್ಸ್‌ ಆಫೀಸ್‌ನಲ್ಲಿ ಧೂಳೆಬ್ಬಿಸಿದ ʼಸಲಾರ್‌ʼ; 625 ಕೋಟಿ ಗಳಿಕೆ

ಎರಡನೇ ಪಾರ್ಟ್‌ ಯಾವಾಗ?

ʼಸಲಾರ್‌ʼ ಎರಡು ಭಾಗಗಳಲ್ಲಿ ತಯಾರಾಗಿದೆ. ನೋಡುಗರಲ್ಲಿ ಕುತೂಹಲದ ಬೀಜ ಬಿತ್ತಿ ಮೊದಲ ಪಾರ್ಟ್‌ ಕೊನೆಗೊಂದಿದೆ. ಹೀಗಾಗಿ ಎರಡನೇ ಭಾಗಕ್ಕಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಆದರೆ ಎರಡನೇ ಭಾಗ ಯಾವಾಗ ತೆರೆಗೆ ಬರಲಿದೆ ಎನ್ನುವ ಬಗ್ಗೆ ಚಿತ್ರತಂಡ ಇದುವರೆಗೆ ಘೋಷಿಸಿಲ್ಲ.

Continue Reading

ಒಟಿಟಿ

Ajay Devgn: ಒಟಿಟಿಯಲ್ಲಿ ಸ್ಟ್ರೀಮಿಂಗ್‌ ಆಗ್ತಾ ಇದೆ ಅಜಯ್‌ ದೇವಗನ್‌ ʻಶೈತಾನ್ʼ ಸಿನಿಮಾ

Ajay Devgn: ʻಶೈತಾನ್’ ಗುಜರಾತಿ ಚಿತ್ರದ ‘ವಾಶ್’ ಶೀರ್ಷಿಕೆಯ ರಿಮೇಕ್ ಆಗಿದೆ. ‘ಶೈತಾನ್’ ಬ್ಲಾಕ್ ಮ್ಯಾಜಿಕ್ ಸುತ್ತ ಕಥೆ ಇದೆ. ಎರಡು ದಶಕಗಳಿಗೂ ಹೆಚ್ಚು ಸಮಯದ ನಂತರ ಬಾಲಿವುಡ್‌ಗೆ ಮರಳಿರುವ ಜ್ಯೋತಿಕಾ ಅವರು ʻಶೈತಾನ್ʼ ಸಿನಿಮಾ ಮೂಲಕ ಭರ್ಜರಿ ಜಯಭೇರಿ ಭಾರಿಸಿದ್ದರು. ಇದು ಜ್ಯೋತಿಕಾ ಅವರ ಪಾಲಿಗೆ 100 ಕೋಟಿ ರೂ. ಕ್ಲಬ್‌ ಸೇರಿದ ಮೊದಲ ಹಿಂದಿ ಸಿನಿಮಾ ಆಗಿತ್ತು.

VISTARANEWS.COM


on

Ajay Devgn 'Shaitaan' to stream on OTT
Koo

ಬೆಂಗಳೂರು:  ಅಜಯ್ ದೇವಗನ್ (Ajay Devgn) ಅವರ ಸೂಪರ್ ನ್ಯಾಚುರಲ್ ಥ್ರಿಲ್ಲರ್ ʻಶೈತಾನ್ʼ (Shaitaan box office ) ಸಿನಿಮಾ ವಿಶ್ವಾದ್ಯಂತ 100 ಕೋಟಿ ರೂ. ಕ್ಲಬ್ ಪ್ರವೇಶಿಸಿ ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ ಪಡೆದುಕೊಂಡಿತ್ತು. ಇದೀಗ ಶೈತಾನ್‌ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದೆ. ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್‌ ಆಗುತ್ತಿದೆ. ಅಜಯ್ ದೇವಗನ್, ಆರ್ ಮಾಧವನ್ (R Madhavan) ಮತ್ತು ಜ್ಯೋತಿಕಾ ( Jyotika) ಅಭಿನಯದ ಚಿತ್ರ ಮೇ 4 ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿದೆ.

ಹೃತಿಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ ಅವರ ʻಫೈಟರ್ʼ ಮತ್ತು ಶಾಹಿದ್ ಕಪೂರ್ ಮತ್ತು ಕೃತಿ ಸನೂನ್ ಅಭಿನಯದ ʻತೇರಿ ಬಾಟನ್ ಮೇ ಐಸಾ ಉಲ್ಜಾ ಜಿಯಾʼ (Teri Baaton Mein Aisa Uljha Jiya) ಬಳಿಕ ಈ ವರ್ಷ ಒಳ್ಳೆಯ ಮೈಲೇಜ್‌ ನೀಡಿದ ಮೂರನೇ ಹಿಂದಿ ಸಿನಿಮಾವಾಗಿ ಶೈತಾನ್‌ ಹೊರಹೊಮ್ಮಿತ್ತು. ಶೈತಾನ್‌ ತೆರೆ ಕಂಡ ಬಳಿಕ ಒಟ್ಟೂ 149.49 ಕೋಟಿ ರೂ. ಗಳಿಕೆ ಕಂಡಿತ್ತು. ಅಜಯ್ ದೇವಗನ್ ಅವರ ಸತತ ಮೂರನೇ ಸಕ್ಸೆಸ್‌ ಸಿನಿಮಾ ಇದಾಗಿದೆ.

ʻಶೈತಾನ್’ ಗುಜರಾತಿ ಚಿತ್ರದ ‘ವಾಶ್’ ಶೀರ್ಷಿಕೆಯ ರಿಮೇಕ್ ಆಗಿದೆ. ‘ಶೈತಾನ್’ ಬ್ಲಾಕ್ ಮ್ಯಾಜಿಕ್ ಸುತ್ತ ಕಥೆ ಇದೆ. ಎರಡು ದಶಕಗಳಿಗೂ ಹೆಚ್ಚು ಸಮಯದ ನಂತರ ಬಾಲಿವುಡ್‌ಗೆ ಮರಳಿರುವ ಜ್ಯೋತಿಕಾ ಅವರು ʻಶೈತಾನ್ʼ ಸಿನಿಮಾ ಮೂಲಕ ಭರ್ಜರಿ ಜಯಭೇರಿ ಭಾರಿಸಿದ್ದರು. ಇದು ಜ್ಯೋತಿಕಾ ಅವರ ಪಾಲಿಗೆ 100 ಕೋಟಿ ರೂ. ಕ್ಲಬ್‌ ಸೇರಿದ ಮೊದಲ ಹಿಂದಿ ಸಿನಿಮಾ ಆಗಿತ್ತು.

ಇದನ್ನೂ ಓದಿ: Ajay Devgn:‌ ಕನ್ನಡಿಗನ ಕಥೆ ಕದ್ದರಾ ಅಜಯ್‌ ದೇವಗನ್‌? ‘ಮೈದಾನ್’ ಚಿತ್ರಕ್ಕೆ ಕೋರ್ಟ್ ತಡೆ!

ಅಜಯ್ ದೇವಗನ್ ಹಾಗೂ ಆರ್ ಮಾಧವನ್ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ. ಇಬ್ಬರೂ ‘ಶೈತಾನ್’ ಚಿತ್ರಕ್ಕಾಗಿ ಒಂದಾಗಿ ಗಮನ ಸೆಳೆದಿದ್ದರು. ಮಾಧವನ್ ಅವರು ಮಾಂತ್ರಿಕನ ಪಾತ್ರದಲ್ಲಿ ಗಮನ ಸೆಳೆದಿದ್ದರು.

2023ರಲ್ಲಿ ರಿಲೀಸ್ ಆದ ‘ವಶ್’ ಹೆಸರಿನ ಗುಜರಾತಿ ಸಿನಿಮಾದ ರಿಮೇಕ್ ಆಗಿ ‘ಶೈತಾನ್’ ಮೂಡಿ ಬಂದಿತ್ತು. ಅಜಯ್ ದೇವಗನ್ ಜೊತೆ ಜ್ಯೋತಿಕಾ, ಆರ್​ ಮಾಧವನ್ ಪ್ರಮುಖ ಪಾತ್ರ ಮಾಡಿದ್ದರು. ದೇವಗನ್ ಫಿಲ್ಮ್ಸ್, ಜಿಯೋ ಸ್ಟುಡಿಯೋ ಹಾಗೂ ಪನೋರಮಾ ಸ್ಟುಡಿಯೋ ಒಟ್ಟಾಗಿ ಸಿನಿಮಾ ನಿರ್ಮಾಣ ಮಾಡಿತ್ತು.

Continue Reading
Advertisement
Josh Baker
ಕ್ರೀಡೆ55 seconds ago

Josh Baker: 6 ವಿಕೆಟ್‌ ಪಡೆದು ಸ್ನೇಹಿತನ ಮನೆಯಲ್ಲಿ ಶವವಾಗಿ ಪತ್ತೆಯಾದ ಇಂಗ್ಲೆಂಡ್ ಕ್ರಿಕೆಟಿಗ

International Firefighters Day 2024
ಪ್ರಮುಖ ಸುದ್ದಿ17 mins ago

International Firefighters Day 2024: ಇಂದು ಅಂತಾರಾಷ್ಟ್ರೀಯ ಅಗ್ನಿಶಾಮಕ ದಿನ; ಜೀವ ರಕ್ಷಕರಿಗೊಂದು ಸಲಾಂ

Nijjar Killling
ವಿದೇಶ19 mins ago

Nijjar Killing: ನಿಜ್ಜರ್‌ ಹಂತಕರ ಫೊಟೋ ರಿಲೀಸ್‌; ಭಾರತದತ್ತ ಮತ್ತೆ ಬೊಟ್ಟು ಮಾಡಿದ ಕೆನಡಾ

Vettaiyan Movie Rajinikanth And Amitabh Bachchan Poses Together
ಸಿನಿಮಾ21 mins ago

Vettaiyan Movie: ಸೂಟು ಬೂಟು ಹಾಕಿಕೊಂಡು ಸ್ಟೈಲಿಶ್‌ ಆಗಿ ಪೋಸ್‌ ಕೊಟ್ಟ ರಜನಿ!

Accident news
ಮಳೆ26 mins ago

Accident News: ಬಿರುಗಾಳಿಗೆ ಕೂಲಿಂಗ್ ಶೀಟ್ ತಲೆ ಮೇಲೆ ಬಿದ್ದು ವ್ಯಕ್ತಿ ಸಾವು; ಬಿಸಿಲಾಘಾತಕ್ಕೆ ಇಬ್ಬರು ಬಲಿ

cm siddaramaiah
ಕ್ರೈಂ39 mins ago

CM Siddaramaiah: ಸಿಎಂ ಸಿದ್ದರಾಮಯ್ಯ ಬಗ್ಗೆ ಪೋಸ್ಟ್:‌ ಮಹೇಶ್‌ ವಿಕ್ರಂ ಹೆಗ್ಡೆ, ವಸಂತ್‌ ಗಿಳಿಯಾರ್ ಬಂಧನವಿಲ್ಲ

Urfi Javed magical butterflies dress Samantha reacts
ಬಾಲಿವುಡ್40 mins ago

Urfi Javed: ಉರ್ಫಿ ʻಮ್ಯಾಜಿಕ್ʼ ಡ್ರೆಸ್‌ಗೆ ಸಮಂತಾ ಮೆಚ್ಚುಗೆ; ಗೌನ್‌ನಿಂದ ಹಾರಿತು ಬಣ್ಣದ ಚಿಟ್ಟೆ!

IPL 2024
ಕ್ರೀಡೆ50 mins ago

IPL 2024: ಬರೋಬ್ಬರಿ 12 ವರ್ಷಗಳ ಬಳಿಕ ವಾಂಖೆಡೆಯಲ್ಲಿ ಗೆಲುವು ಸಾಧಿಸಿದ ಕೆಕೆಆರ್​

Drama Artist
ಕರ್ನಾಟಕ51 mins ago

Drama Artist: ಶಕುನಿಯಾಗಿ ಗರ್ಜಿಸುತ್ತಿರುವಾಗಲೇ ಹೃದಯಾಘಾತ; ಮೊಬೈಲ್‌ನಲ್ಲಿ ಸೆರೆಯಾಯ್ತು ಕಲಾವಿದನ ಕೊನೆಯ ಕ್ಷಣ

Amith Shah
ದೇಶ1 hour ago

Amit Shah: ತೆಲಂಗಾಣದಲ್ಲಿ ಗೃಹಸಚಿವ ಅಮಿತ್ ಶಾ ವಿರುದ್ಧ FIR ದಾಖಲು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ7 hours ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ20 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ1 day ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ2 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20245 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20246 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

ಟ್ರೆಂಡಿಂಗ್‌