ʻಮಿಂಚಿನ ವೇಗದಲ್ಲಿʼ ನೇಮಕಗೊಂಡ ನೂತನ ಚುನಾವಣಾ ಆಯುಕ್ತ ಅರುಣ್‌ ಗೋಯಲ್‌: ಯಾರಿವರು? - Vistara News

ಕೋರ್ಟ್

ʻಮಿಂಚಿನ ವೇಗದಲ್ಲಿʼ ನೇಮಕಗೊಂಡ ನೂತನ ಚುನಾವಣಾ ಆಯುಕ್ತ ಅರುಣ್‌ ಗೋಯಲ್‌: ಯಾರಿವರು?

ಮಿಂಚಿನ ವೇಗದಲ್ಲಿ ಚುನಾವಣಾ ಆಯುಕ್ತರಾಗಿ ಅರುಣ್‌ ಗೋಯಲ್‌ ಅವರ ನೇಮಕಾತಿ ಆಗಿರುವುದು ಸುಪ್ರೀಂ ಕೋರ್ಟ್‌ ಮಾತ್ರವಲ್ಲ ದೇಶದ ಕುತೂಹಲವನ್ನೂ ಕೆರಳಿಸಿದೆ.

VISTARANEWS.COM


on

arun goel
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ : ʼʼಇಷ್ಟೊಂದು ಅವಸರವೇಕೆ?ʼʼ ಎಂದು ನೂತನ ಚುನಾವಣಾ ಆಯುಕ್ತ ಅರುಣ್‌ ಗೋಯಲ್‌ ಅವರ ನೇಮಕಾತಿಯ ಬಗೆಗೆ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ಪ್ರಶ್ನಿಸಿದೆ. ಮಿಂಚಿನ ವೇಗದಲ್ಲಿ ಅರುಣ್‌ ಗೋಯಲ್‌ ಅವರ ನೇಮಕಾತಿ ಆಗಿರುವುದು ಸುಪ್ರೀಂ ಕೋರ್ಟ್‌ ಮಾತ್ರವಲ್ಲ ದೇಶದ ಕುತೂಹಲವನ್ನೂ ಕೆರಳಿಸಿದೆ.

1985ರ ಬ್ಯಾಚ್‌ನ ಐಎಎಸ್‌ ಅಧಿಕಾರಿಯಾಗಿರುವ ಅರುಣ್‌ ಗೋಯಲ್‌ ಅವರು ನ.18ರಂದು ತಮ್ಮ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿದ್ದರು. ಅದಾದ ಮರುದಿನವೇ, ಅಂದರೆ ನ.19ರಂದು ಚುನಾವಣಾ ಆಯುಕ್ತರಾಗಿ ಅವರನ್ನು ರಾಷ್ಟ್ರಪತಿ ನೇಮಕ ಮಾಡಿದ್ದರು. ಎರಡು ದಿನ ನಂತರ, ನ.21ರಂದು ಅವರು ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು. ನ.23ರಂದು, ಅವರ ನೇಮಕಾತಿಗೆ ಸಂಬಂಧಿಸಿದ ಕಡತಗಳನ್ನು ತನ್ನ ಮುಂದಿಡುವಂತೆ ಸುಪ್ರೀಂ ಕೋರ್ಟ್‌ ಹೇಳಿತ್ತು.

ನೇಮಕ ಪ್ರಕ್ರಿಯೆ ಸರಿಯಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಲು ಕೋರ್ಟ್‌ ಮುಂದಾಗಿದೆ. ಐವರು ನ್ಯಾಯಮೂರ್ತಿಗಳನ್ನು ಹೊಂದಿರುವ ಸಾಂವಿಧಾನಿಕ ಪೀಠವು, ಚುನಾವಣಾ ಆಯೋಗದ ನೇಮಕಗಳು ಹಾಗೂ ಸುಧಾರಣೆಯ ಕುರಿತಾದ ಅರ್ಜಿಗಳ ಪರಿಶೀಲನೆಯ ವಿಚಾರವನ್ನು ಎತ್ತಿಕೊಂಡಿದೆ.

ಅರುಣ್‌ ಗೋಯಲ್‌ ಅವರು ಪಂಜಾಬ್‌ ಕೇಡರ್‌ನ ಐಎಎಸ್‌ ಅಧಿಕಾರಿ. ಅವರು ಇಂಗ್ಲೆಂಡಿನ ಕೇಂಬ್ರಿಡ್ಜ್‌ ಯೂನಿವರ್ಸಿಟಿಯ ಚರ್ಚಿಲ್‌ ಕಾಲೇಜಿನಲ್ಲಿ ಡೆವಲಪ್‌ಮೆಂಟ್‌ ಎಜುಕೇಶನ್‌ನಲ್ಲಿ ಪಿಜಿ ಪದವಿ ಪಡೆದಿದ್ದಾರೆ. ಸ್ವಯಂ ನಿವೃತ್ತಿ ಪಡೆಯುವ ವೇಳೆಗೆ ಅವರು ಭಾರಿ ಕೈಗಾರಿಕೆಗಳ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿದ್ದರು. 2020ರಿಂದ ಅವರು ಅಲ್ಲಿದ್ದಾರೆ.

ಇದಕ್ಕೂ ಮುನ್ನ ಅವರು ಸಂಸ್ಕೃತಿ ಸಚಿವಾಲಯದಲ್ಲಿ ಕಾರ್ಯದರ್ಶಿ ಹಾಗೂ ದಿಲ್ಲಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಉಪಾಧ್ಯಕ್ಷರಾಗಿದ್ದರು. 2012-14ರ ನಡುವೆ ವಿತ್ತ ಸಚಿವಾಲಯದ ಕಂದಾಯ ವಿಭಾಗದಲ್ಲಿ ಸಹ ಕಾರ್ಯದರ್ಶಿಯಾಗಿದ್ದರು. ಅದಕ್ಕೂ ಮುನ್ನ 2011ರಲ್ಲಿ ನಗರಾಭಿವೃದ್ಧಿ ಸಚಿವಾಲಯದ ಸಹ ಕಾರ್ಯದರ್ಶಿಯಾಗಿದ್ದರು.‌

ಇದನ್ನೂ ಓದಿ | Supreme Court | ಪ್ರಧಾನಿ ವಿರುದ್ಧ ಎಲೆಕ್ಷನ್‌ ಕಮಿಷನರ್‌ ಕ್ರಮ ಕೈಗೊಳ್ಳುತ್ತಾರೆಯೇ? ಆ ಶಕ್ತಿ ಇದೆಯೇ? ಎಂದ ಸುಪ್ರೀಂ ಕೋರ್ಟ್

ಕೇಂದ್ರ ಸಚಿವಾಲಯಗಳಿಗೆ ಆಗಮಿಸುವ ಮುನ್ನ ಪಂಜಾಬ್‌ನ ಸರ್ಕಾರದಲ್ಲಿ ಸೇವೆ ಸಲ್ಲಿಸಿದ್ದರು. 1993- 95ರಲ್ಲಿ ಭಟಿಂಡಾ ಹಾಗು ಲುಧಿಯಾನ ಜಿಲ್ಲಾ ಚುನಾವಣಾಧಿಕಾರಿಯಾಗಿ, ನಂತರ ಪಂಜಾಬ್‌ ವೇರ್‌ಹೌಸಿಂಗ್‌ ಕಾರ್ಪೊರೇಶನ್‌ನ ಆಡಳಿತ ನಿರ್ದೇಶಕರಾಗಿ, ಪಂಜಾಬ್‌ ಉದ್ಯಮ ಮತ್ತು ರಫ್ತು ಆಡಳಿತ ನಿರ್ದೇಶಕರಾಗಿ, ವೆಚ್ಚ ವಿಭಾಗದ ಕಾರ್ಯದರ್ಶಿಯಾಗಿ, ವಿದ್ಯುತ್‌ ಮತ್ತು ನೀರಾವರಿ, ವಸತಿ ಮತ್ತು ನಗರಾಭಿವೃದ್ಧಿ ಕಾರ್ಯಾಲಯಗಳ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.

ಗೋಯಲ್‌ ಅವರಿಗೆ ನಿವೃತ್ತಿಗೆ 2022ರ ಡಿ.31ರವರೆಗೂ ಸಮಯವಿತ್ತು. ಚುನಾವಣಾ ಆಯೋಗದಲ್ಲಿ ಅವರು 2027ರ ಡಿಸೆಂಬರ್‌ವರೆಗೂ ಸೇವೆ ಸಲ್ಲಿಸಲಿದ್ದಾರೆ. ಈಗಿರುವ ಮುಖ್ಯ ಚುನಾವಣಾ ಆಯುಕ್ತ ರಾಜೀವ್‌ ಕುಮಾರ್‌ ಅವರ ಅವಧಿ 2025 ಫೆಬ್ರವರಿಯಲ್ಲಿ ಮುಗಿಯಲಿದ್ದು, ನಂತರ ಗೋಯಲ್‌ ಅವರು ಆ ಸ್ಥಾನಕ್ಕೆ ಹೋಗಲಿದ್ದಾರೆ.

ಇದನ್ನೂ ಓದಿ | Arun Goel | ಚುನಾವಣೆ ಆಯುಕ್ತರಾಗಿ ಅರುಣ್‌ ಗೋಯಲ್‌ ನೇಮಕ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

CM Siddaramaiah: ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌ ಡಿಕೆ ಶಿವಕುಮಾರ್ ಪರ ವಕೀಲರಾದ ದೀಪು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ.

VISTARANEWS.COM


on

cm Siddaramaiah And DK Shivakumar
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಇಬ್ಬರೂ ಇಂದು ಮಾನನಷ್ಟ ಮೊಕದ್ದಮೆಯೊಂದಕ್ಕೆ (Defamation case) ಸಂಬಂಧಿಸಿ ಎಸಿಎಂಎಂ ನ್ಯಾಯಾಲಯಕ್ಕೆ (ACMM court) ಹಾಜರಾಗಲಿದ್ದಾರೆ. ಬೆಳಗ್ಗೆ ಇಬ್ಬರೂ ಹಾಜರಾಗಿ ಜಾಮೀನು ಅರ್ಜಿ (bail plea) ಸಲ್ಲಿಸಲಿದ್ದಾರೆ.

ವಿಧಾನ ಪರಿಷತ್‌ ಸದಸ್ಯ, ಬಿಜೆಪಿ (BJP) ಮುಖಂಡ ಕೇಶವ ಪ್ರಸಾದ್ ಅವರು ಸಲ್ಲಿಸಿರುವ ಖಾಸಗಿ ದೂರು ವಿಚಾರಣೆಗೆ ಬಂದಿದ್ದು, ಇಂದು ನ್ಯಾಯಾಧೀಶರ ಮುಂದೆ ಸಿಎಂ, ಡಿಸಿಎಂ ಹಾಜರ್ ಆಗುತ್ತಿದ್ದಾರೆ. ವಿಧಾನಸಭೆ ಚುನಾವಣೆ (Assembly election) ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಆರೋಪಿಸಿದ್ದ ಕೈ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗಿದೆ.

“2500 ಕೋಟಿ ರೂಪಾಯಿ ಬಿಜೆಪಿ ಹೈಕಮಾಂಡ್‌ಗೆ ಕೊಟ್ಟರೆ ಸಿಎಂ ಹುದ್ದೆ ಸಿಗುತ್ತದೆ” ಎಂದಿದ್ದ ಆರೋಪ, ಕೋವಿಡ್ ಕಿಟ್ ಖರೀದಿ ಹಗರಣ, 40% ಕಮಿಷನ್ ಆರೋಪಗಳನ್ನು ಮಾಡಿದ್ದ ಕೈ ನಾಯಕರ ಮೇಲೆ ಕೇಶವ ಪ್ರಸಾದ್‌ ಮಾನನಷ್ಟ ಮೊಕದ್ದಮೆ ಹಾಕಿದ್ದರು. 08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರ ದಾಖಲು ಮಾಡಿದ್ದರು. ಈ ಪ್ರಕರಣದ ಕುರಿತು ಇಂದು ನಡೆಯುವ ವಿಚಾರಣೆಗೆ ಸಿಎಂ, ಡಿಸಿಎಂ ಹಾಜರ್ ಆಗಲಿದ್ದಾರೆ.

ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌ ಡಿಕೆ ಶಿವಕುಮಾರ್ ಪರ ವಕೀಲರಾದ ದೀಪು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ.

ಏನು ಹೇಳಿದ್ದರು?

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

ಇದನ್ನೂ ಓದಿ: DK Shivakumar: ಸಿಎಂ, ನನ್ನ ಮೇಲೆ ಶತ್ರು ಭೈರವಿ ಯಾಗ ನಡೆಯುತ್ತಿದೆ; ಡಿಕೆಶಿ ಹೊಸ ಬಾಂಬ್

Continue Reading

ಕರ್ನಾಟಕ

Bhavani Reavanna : ಭವಾನಿ ರೇವಣ್ಣಗೆ ಬಂಧನ ಭೀತಿ; ಜಾಮೀನು ಅರ್ಜಿ ತೀರ್ಪು ಮುಂದಕ್ಕೆ

Bhavani Reavanna : ಇದು ಅವರಿಗೆ ವಿಚಾರಣೆಗೆ ಹಾಜರಾಲು ನೀಡುತ್ತಿರುವ ಎರಡನೇ ನೋಟಿಸ್ ಆಗಿದೆ. ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆಯೊಬ್ಬಳನ್ನು ಅಪಹರಿಸಿರುವ ಪ್ರಕರಣದಲ್ಲಿ ಭವಾನಿ ರೇವಣ್ಣ ಎಸ್​ಐಟಿ ಪೊಲೀಸರ ತನಿಖೆಗೆ ಒಳಪಡಬೇಕಾಗಿತ್ತು. ಆದರೆ, ಯಾವುದೇ ಕಾರಣಕ್ಕೆ ಯಾರಿಗೂ ಕಾಣಿಸದೇ, ಪೊಲೀಸರ ವಿಚಾರಣೆಗೂ ಹಾಜರಾಗದೇ ತಲೆ ಮರಿಸಿಕೊಂಡ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

VISTARANEWS.COM


on

Bhavani Reavanna
Koo

ಬೆಂಗಳೂರು: ಲೈಂಗಿಕ ಹಗರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಭವಾನಿ ರೇವಣ್ಣ (Bhavani Reavanna) ಅವರಿಗೆ ಬಂಧನ ಭೀತಿ ಶುರುವಾಗಿದೆ. ತಮ್ಮನ್ನು ಬಂಧಿಸದಂತೆ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ಅವರ ವಕೀಲರು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ಅವರಿಗೆ ಬಂಧನ ಭೀತಿ ಶುರುವಾಗಿದೆ. ಏತನ್ಮಧ್ಯೆ ಲೈಂಗಿಕ ಹಗರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಭವಾನಿ ರೇವಣ್ಣ ಅವರಿಗೆ ಎಸ್​ಐಟಿ ಅಧಿಕಾರಿಗಳು ಮತ್ತೊಂದು ನೋಟಿಸ್​ ನೀಡಿದ್ದಾರೆ.

ಇದು ಅವರಿಗೆ ವಿಚಾರಣೆಗೆ ಹಾಜರಾಲು ನೀಡುತ್ತಿರುವ ಎರಡನೇ ನೋಟಿಸ್ ಆಗಿದೆ. ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆಯೊಬ್ಬಳನ್ನು ಅಪಹರಿಸಿರುವ ಪ್ರಕರಣದಲ್ಲಿ ಭವಾನಿ ರೇವಣ್ಣ ಎಸ್​ಐಟಿ ಪೊಲೀಸರ ತನಿಖೆಗೆ ಒಳಪಡಬೇಕಾಗಿತ್ತು. ಆದರೆ, ಯಾವುದೇ ಕಾರಣಕ್ಕೆ ಯಾರಿಗೂ ಕಾಣಿಸದೇ, ಪೊಲೀಸರ ವಿಚಾರಣೆಗೂ ಹಾಜರಾಗದೇ ತಲೆ ಮರಿಸಿಕೊಂಡ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

ಒಂದೆಡೆ ಮಗ ಪ್ರಜ್ವಲ್‌ ರೇವಣ್ಣ (prajwal revanna case) ನಿನ್ನೆ ರಾತ್ರಿ ಬಂಧನವಾಗಿದ್ದು, ಇಂದು ಮೆಡಿಕಲ್‌ ಟೆಸ್ಟ್‌ ನಡೆಸಲಾಗುತ್ತಿದೆ. ಇಂದೇ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಇಂದು ಭವಾನಿ ರೇವಣ್ಣ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತೀರ್ಪಿಗೆ ಬರುತ್ತಿದೆ. ಅದರ ಬೆನ್ನಲ್ಲೇ ಎಸ್‌ಐಟಿ ಮತ್ತೊಂದು ನೋಟೀಸ್ ನೀಡಿದೆ. ಕೆ.ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನೊಟೀಸ್ ನೀಡಿದೆ. “ಪ್ರಕರಣಕ್ಕೆ ಸಂಬಂಧಿಸಿ 01/06/2024ರಂದು ತನಿಖೆಗೆ ತನಿಖಾಧಿಕಾರಿಗಳು ಬರಲಿದ್ದು, ತಾವು ನೀಡಿದ ಈ ವಿಳಾಸದಲ್ಲಿ ತಮ್ಮನ್ನು ತನಿಖೆಗೆ ಒಳಪಡಿಸಲಾಗುವುದು. ಅಗತ್ಯ ಸಹಕಾರ ನೀಡಬೇಕು” ಎಂದು ನೊಟೀಸ್ ನೀಡಿದ್ದಾರೆ.

ಇದನ್ನೂ ಓದಿ ;Prajwal Revanna Case : ಪ್ರಜ್ವಲ್​ನನ್ನು ಮಹಿಳಾ ಪೊಲೀಸ್ ಸಿಬ್ಬಂದಿಯೇ ಬಂಧಿಸಿದ್ದು ಯಾಕೆ?

“ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರಿಸಿಲ್ಲ. 15-05-24ರಂದು ನೀಡಿದ ನೋಟೀಸ್‌ಗೆ, ಹೊಳೆನರಸೀಪುರದ ಚನ್ನಾಂಭಿಕ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದೀರಿ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅವಶ್ಯಕತೆ ಇದೆ. ಆದ್ದರಿಂದ ನೀವು ಹೇಳಿರುವಂತೆ ನಾವು ನಿಮ್ಮನ್ನು 01-06-24ರಂದು ವಿಚಾರಣೆಗೆ ಒಳಪಡಿಸಲಿದ್ದು, ಖುದ್ದು ಹಾಜರಿರಬೇಕು. ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಆಗಮಿಸುತ್ತೇವೆ. ಆ ಸಂದರ್ಭ ಖುದ್ದು ಮನೆಯಲ್ಲಿ ಹಾಜರಿರಬೇಕು” ಎಂದು ಎಸ್‌ಐಟಿ ಮುಖ್ಯಸ್ಥ ಹೇಮಂತ್‌ಕುಮಾರ್‌ ಆದೇಶಿಸಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಇದುವರೆಗೆ ಎರಡು ನೋಟೀಸ್‌ಗಳನ್ನು ನೀಡಲಾಗಿದೆ. ನಂತರ ಎಸ್ಐಟಿಗೆ ಪತ್ರ ಬರೆದಿದ್ದ ಭವಾನಿ, ಅವಶ್ಯವಿದ್ದರೆ ತನಿಖೆಗೆ ತಮ್ಮ ಮನೆಯಲ್ಲಿ ಲಭ್ಯವಿರುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ತಾವು ವಿಚಾರಣೆಗೆ ಬರುತ್ತಿರುವುದಾಗಿ ಎಸ್ಐಟಿಯಿಂದ ನೊಟೀಸ್‌ ಹೋಗಿದೆ. ಹಾಸನ ಹೊಳೆನರಸೀಪುರದ ಹೆಚ್.ಡಿ ರೇವಣ್ಣ ಹಾಗೂ ಭವಾನಿ ನಿವಾಸದ ಬಾಗಿಲಿಗೆ SIT ಟೀಂ ನೋಟೀಸ್ ಅಂಟಿಸಿದೆ. ಹೀಗಾಗಿ ನಾಳೆ ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಅವರ ಮೊದಲ ಸುತ್ತಿನ ವಿಚಾರಣೆ ನಡೆಯಲಿದೆ.

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರಂದೇ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದೆ. ಅತ್ತ, ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Muslim Personal Law : ಹಿಂದೂ- ಮುಸ್ಲಿಂ ಜೋಡಿಯ ಮದುವೆಗೆ ವೈಯಕ್ತಿಕ ಕಾನೂನಿನ ಮಾನ್ಯತೆ ಇಲ್ಲ ಎಂದ ಕೋರ್ಟ್​, ವಿವರಣೆ ಹೀಗಿದೆ

Muslim Personal Law: ವಿಶೇಷ ವಿವಾಹ ಕಾಯ್ದೆಯಡಿ ತಮ್ಮ ಮದುವೆಯ ನೋಂದಣಿಗೆ ನಿಗದಿಪಡಿಸಿದ ದಿನಾಂಕದಂದು ವಿವಾಹ ಅಧಿಕಾರಿಯ ಮುಂದೆ ಹಾಜರಾಗಲು ಅವರು ಇತರ ಪರಿಹಾರಗಳನ್ನು ನೀಡುವಂತೆ ಜೋಡಿ ರಕ್ಷಣೆ ಕೋರಿತ್ತು. ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಹಿಂದೂ ಮಹಿಳೆ ಮತ್ತು ಮುಸ್ಲಿಂ ಪುರುಷನ ನಡುವಿನ ವಿವಾಹವು ವೈಯಕ್ತಿಕ ಕಾನೂನಿನ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಹೇಳಿ ನ್ಯಾಯಾಲಯವು ರಕ್ಷಣೆ ನಿರಾಕರಿಸಿತ್ತು.

VISTARANEWS.COM


on

Muslim Personal Law
Koo

ಭೋಪಾಲ್​: ಮುಸ್ಲಿಂ ಪುರುಷ ಮತ್ತು ಹಿಂದೂ ಮಹಿಳೆಯ ನಡುವಿನ ವಿವಾಹವು ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ (Muslim Personal Law) ಅಮಾನ್ಯ ಎಂದು ಮಧ್ಯಪ್ರದೇಶ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಅಂತರ್ ಧರ್ಮೀಯ ದಂಪತಿಗೆ ರಕ್ಷಣೆ ನೀಡಲು ನಿರಾಕರಿಸಿತು. ಅರ್ಜಿದಾರರು ಪರಸ್ಪರ ಪ್ರೀತಿಸುತ್ತಿದ್ದರು. ಹೀಗಾಗಿ ವಿಶೇಷ ವಿವಾಹ ಕಾಯ್ದೆಯಡಿ ವಿವಾಹ ನೋಂದಣಾಧಿಕಾರಿಯನ್ನು ಸಂಪರ್ಕಿಸಿದ್ದರು. ಆದರೆ ಕುಟುಂಬದ ಆಕ್ಷೇಪಣೆಗಳಿಂದಾಗಿ, ಅವರು ವಿವಾಹ ಅಧಿಕಾರಿಯ ಮುಂದೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಪರಿಣಾಮವಾಗಿ ಅವರ ಮದುವೆಯನ್ನು ನೋಂದಾಯಿಸಲಾಗಿಲ್ಲ.

ವಿಶೇಷ ವಿವಾಹ ಕಾಯ್ದೆಯಡಿ ತಮ್ಮ ಮದುವೆಯ ನೋಂದಣಿಗೆ ನಿಗದಿಪಡಿಸಿದ ದಿನಾಂಕದಂದು ವಿವಾಹ ಅಧಿಕಾರಿಯ ಮುಂದೆ ಹಾಜರಾಗಲು ಅವರು ಇತರ ಪರಿಹಾರಗಳನ್ನು ನೀಡುವಂತೆ ಜೋಡಿ ರಕ್ಷಣೆ ಕೋರಿತ್ತು. ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಹಿಂದೂ ಮಹಿಳೆ ಮತ್ತು ಮುಸ್ಲಿಂ ಪುರುಷನ ನಡುವಿನ ವಿವಾಹವು ವೈಯಕ್ತಿಕ ಕಾನೂನಿನ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಹೇಳಿ ನ್ಯಾಯಾಲಯವು ರಕ್ಷಣೆ ನಿರಾಕರಿಸಿತ್ತು.

“ಮಹಮ್ಮದೀಯ ಕಾನೂನಿನ ಪ್ರಕಾರ, ಮುಸ್ಲಿಂ ಹುಡುಗನು ವಿಗ್ರಹಾರಾಧಕ ಅಥವಾ ಅಗ್ನಿ ಆರಾಧಕಳಾಗಿರುವ ಹುಡುಗಿಯನ್ನು ಮದುವೆಯಾಗುವುದು ಮಾನ್ಯ ವಿವಾಹವಲ್ಲ. ಮದುವೆಯನ್ನು ವಿಶೇಷ ವಿವಾಹ ಕಾಯ್ದೆಯಡಿ ನೋಂದಾಯಿಸಿದರೂ ಮಾನ್ಯ ವಿವಾಹವಾಗುವುದಿಲ್ಲ. ಅದು ಫಾಸಿದ್ ವಿವಾಹವಾಗಿರುತ್ತದೆ.

ಇದನ್ನೂ ಓದಿ: Radhika Merchant : ಅನಂತ್​​ ಅಂಬಾನಿ- ರಾಧಿಕಾ ಮರ್ಚೆಂಟ್​ ವಿವಾಹದ ಸ್ಥಳ ಬಹಿರಂಗ; ಇಲ್ಲಿದೆ ವಿವರ

ಮುಸ್ಲಿಂ ಹುಡುಗನೊಬ್ಬ ಹಿಂದೂ ಹುಡುಗಿಯನ್ನು ಮದುವೆಯಾಗುವುದು ಮಾನ್ಯವಾಗುತ್ತದೆಯೇ ಅಥವಾ ಇಲ್ಲವೇ ಎಂಬ ಪ್ರಶ್ನೆಯನ್ನು ನ್ಯಾಯಾಲಯ ಪರಿಗಣಿಸಿದೆ. “ವೈಯಕ್ತಿಕ ಕಾನೂನಿನ ಪ್ರಕಾರ, ಮದುವೆಯ ಆಚರಣೆಗೆ ಕೆಲವು ಆಚರಣೆಗಳನ್ನು ನಿರ್ವಹಿಸುವುದು ಅವಶ್ಯಕ. ವಿಶೇಷ ವಿವಾಹ ಕಾಯ್ದೆಯಡಿ ಮದುವೆಯನ್ನು ನಡೆಸಿದರೆ, ಅಂತಹ ಕಡ್ಡಾಯ ಆಚರಣೆಗಳನ್ನು ನಿರ್ವಹಿಸದ ಕಾರಣ ಅಂತಹ ಮದುವೆಯನ್ನು ಪ್ರಶ್ನಿಸಲಾಗುವುದಿಲ್ಲ. ವಿಶೇಷ ವಿವಾಹ ಕಾಯ್ದೆಯಡಿ ವಿವಾಹವು ವೈಯಕ್ತಿಕ ಕಾನೂನಿನಡಿಯಲ್ಲಿ ನಿಷೇಧಿಸಲಾದ ಮದುವೆಯನ್ನು ಕಾನೂನುಬದ್ಧಗೊಳಿಸುವುದಿಲ್ಲ.

Continue Reading

ಪ್ರಮುಖ ಸುದ್ದಿ

Cab Service : ಆ್ಯಪ್​ ಆಧಾರಿತ ಕ್ಯಾಬ್​ಗಳು ಶೇ. 5ಕ್ಕಿಂತ ಹೆಚ್ಚು ಸೇವಾ ಶುಲ್ಕ ವಿಧಿಸುವಂತಿಲ್ಲ; ಸರ್ಕಾರದ ಆದೇಶಕ್ಕೆ ಕೋರ್ಟ್​ ಮನ್ನಣೆ

Cab Service: ನ್ಯಾಯಾಲಯವು ಆದೇಶದಲ್ಲಿ. ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಕ್ಯಾಬ್ ಸಂಸ್ಥೆಗಳು ಈಗ ನಿಗದಿಪಡಿಸಿದ ಶೇಕಡಾ 5 ಸೇವಾ ಶುಲ್ಕ ಸಂಗ್ರಹಿಸಲು ಮಾತ್ರ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಅಪ್ಲಿಕೇಶನ್ ಆಧಾರಿತ ಆಟೋ ಚಾಲಕರ ಸೇವಾ ಶುಲ್ಕವನ್ನು ಕರ್ನಾಟಕ ಸಾರಿಗೆ ಇಲಾಖೆ ನವೆಂಬರ್ 25, 2022 ರಂದು ಶೇಕಡಾ 5 ಕ್ಕೆ (ಮೂಲ ಶುಲ್ಕಕ್ಕೆ ಅನ್ವಯವಾಗುವ ಜಿಎಸ್​ಟಿಯೊಂದಿಗೆ) ಮಿತಗೊಳಿಸಿತ್ತು.

VISTARANEWS.COM


on

Cab service
Koo

ಬೆಂಗಳೂರು: ಆ್ಯಪ್ ಮೂಲಕ ಕಾರ್ಯಾಚರಿಸುವ ಕ್ಯಾಬ್ ಅಗ್ರಿಗೇಟರ್​ಗಳು (Cab Service) ಗ್ರಾಹಕರಿಂದ ಸಂಗ್ರಹಿಸುವ ಸೇವಾ ಶುಲ್ಕ ನಿಗದಿಪಡಿಸುವ ಕರ್ನಾಟಕ ರಾಜ್ಯ ಸರ್ಕಾರದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ಬಾರ್ ಆ್ಯಂಡ್​ ಬೆಂಚ್ ವರದಿ ಮಾಡಿದೆ. ಕ್ಯಾಬ್​ ಕಂಪನಿಗಳು ಗರಿಷ್ಠ ಶೇಕಡಾ 5ರಷ್ಟು ಸೇವಾ ಶುಲ್ಕ ಮಾತ್ರ ಸಂಗ್ರಹಿಬಹುದು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ನ್ಯಾಯಾಲಯ ಎತ್ತಿಹಿಡಿದಿದೆ. ಇದರಿಂದಾಗಿ ಬೆಂಗಳೂರು ನಗರ ಸೇರಿದಂತೆ ಕರ್ನಾಟಕದಲ್ಲಿ ಆ್ಯಪ್ ಆಧಾರಿತ ಕ್ಯಾಬ್​​ಗಳನ್ನು ಬಳಸುವ ಗ್ರಾಹಕರಿಗೆ ಅನುಕೂಲವಾಗಲಿದೆ. ಮಿತಿ ಮೀರಿ ಶುಲ್ಕ ವಿಧಿಸುವ ಕಂಪನಿಗಳ ಯೋಜನೆಗೆ ಕಡಿವಾಣ ಬೀಳಲಿದೆ.

ನ್ಯಾಯಾಲಯವು ಆದೇಶದಲ್ಲಿ. ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ. ಕ್ಯಾಬ್ ಸಂಸ್ಥೆಗಳು ಈಗ ನಿಗದಿಪಡಿಸಿದ ಶೇಕಡಾ 5 ಸೇವಾ ಶುಲ್ಕ ಸಂಗ್ರಹಿಸಲು ಮಾತ್ರ ಅರ್ಹರಾಗಿರುತ್ತಾರೆ ಎಂದು ಸ್ಪಷ್ಟಪಡಿಸಲಾಗಿದೆ. ಅಪ್ಲಿಕೇಶನ್ ಆಧಾರಿತ ಆಟೋ ಚಾಲಕರ ಸೇವಾ ಶುಲ್ಕವನ್ನು ಕರ್ನಾಟಕ ಸಾರಿಗೆ ಇಲಾಖೆ ನವೆಂಬರ್ 25, 2022 ರಂದು ಶೇಕಡಾ 5 ಕ್ಕೆ (ಮೂಲ ಶುಲ್ಕಕ್ಕೆ ಅನ್ವಯವಾಗುವ ಜಿಎಸ್​ಟಿಯೊಂದಿಗೆ) ಮಿತಗೊಳಿಸಿತ್ತು. ಆದರೆ ಉಬರ್, ಓಲಾ ಮತ್ತು ರ್ಯಾಪಿಡೊದಂತಹ ರೈಡ್-ಹೆಯ್ಲಿಂಗ್ ಅಪ್ಲಿಕೇಶನ್ ಗಳು ಈ ಕ್ರಮವನ್ನು ಪ್ರಶ್ನಿಸಿದ್ದವು. ಶೇಕಡಾ 20 ರಷ್ಟು ಸಾಮಾನ್ಯ ದರ ವಿಧಿಸಲು ಅನುಮತಿ ನೀಡಬೇಕು ಮತ್ತು ಮೂಲ ದರದ ಜತೆಗೆ ಶೇಕಡಾ 20ರಷ್ಟು ಸರ್ಜ್​ ಪ್ರೈಸ್ ಅಥವಾ ದುಪ್ಪಟ್ಟು ಶುಲ್ಕ ವಿಧಿಸಲು ಅವಕಾಶ ನೀಡಬೇಕು ಎಂದು ಕೋರಿತ್ತು. ಈ ಎಲ್ಲ ಕಂಪನಿಗಳು ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕಾನೂನುಬಾಹಿರ, ನಿರಂಕುಶ ಮತ್ತು ತರ್ಕರಹಿತ ಎಂದು ವಾದಿಸಿದ್ದವು.

ಇದನ್ನು ಓದಿ : Lok Sabha Election : ಷೇರು ಮಾರುಕಟ್ಟೆ ಸಂಸ್ಥೆಯ ಪ್ರಕಾರ ಬಿಜೆಪಿ ಕಳೆದ ಬಾರಿಗಿಂತ ಹೆಚ್ಚು ಸೀಟು ಗೆಲ್ಲಲಿದೆ; ಲೆಕ್ಕಾಚಾರ ಹೀಗಿದೆ

ನೋಟಿಸ್ ಅನ್ನು ನ್ಯಾಯಾಲಯವು ಜನವರಿ 2023 ರಲ್ಲಿ ತಡೆಹಿಡಿದಿತ್ತು. ಶೇಕಡಾ 10 ರ ಅನುಕೂಲಕರ ಶುಲ್ಕದೊಂದಿಗೆ ಅಗ್ರಿಗೇಟರ್​ಗಳು ಅಲ್ಪಾವಧಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಿತು. ಸೋಮವಾರ, ನ್ಯಾಯಾಲಯವು ಅಂತಿಮವಾಗಿ ಅರ್ಜಿಗಳನ್ನು ವಜಾಗೊಳಿಸಿತು. ಈ ತೀರ್ಪಿನಿಂದ ಬೆಂಗಳೂರಿನ ಸಾವಿರಾರು ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

Continue Reading
Advertisement
T20 World Cup 2024
ಕ್ರಿಕೆಟ್5 mins ago

Team India: ವೆಸ್ಟ್​ ಇಂಡೀಸ್​ ಮೈದಾನ ಭಾರತದ ಪಾಲಿಗೆ ಅನ್ ಲಕ್ಕಿ; ಹಿಂದಿನ 2 ವಿಶ್ವಕಪ್ ಟೂರ್ನಿಯ​ ಹಿನ್ನೋಟ ಇಲ್ಲಿದೆ

Porsche Crash
ದೇಶ28 mins ago

Porsche Crash: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಪ್ರಕರಣ; ಸಾಕ್ಷ್ಯ ತಿರುಚಿದ ಅಪ್ರಾಪ್ತನ ತಾಯಿಯ ಬಂಧನ

Physical Abuse
ಉಡುಪಿ33 mins ago

Physical Abuse : ವೈದ್ಯಾಧಿಕಾರಿ ಅಶ್ಲೀಲ ವರ್ತನೆ; ರಾತ್ರಿಯಾದರೆ ವಿಡಿಯೊ ಕಾಲ್‌ನಲ್ಲಿ ವೈದ್ಯೆಗೆ ಟಾರ್ಚರ್‌‌

Nandamuri Balakrishna touch actress anjali back
ಟಾಲಿವುಡ್57 mins ago

Nandamuri Balakrishna: ನಟಿ ಅಂಜಲಿಯ ಹಿಂಭಾಗ ಟಚ್ ಮಾಡಿದ್ರಾ ಬಾಲಯ್ಯ?

Shubman Gill
ಕ್ರೀಡೆ60 mins ago

Shubman Gill: ಕಿರುತೆರೆ​ ನಟಿಯೊಂದಿಗೆ ಶುಭಮನ್​ ಗಿಲ್ ಮದುವೆ?; ಸ್ವತಃ ಸ್ಪಷ್ಟನೆ ನೀಡಿದ ನಟಿ

Narendra Modi
Lok Sabha Election 20241 hour ago

Narendra Modi: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಯುವ ಜನತೆಗೆ ಕರೆ ನೀಡಿದ ಪ್ರಧಾನಿ ಮೋದಿ

Murder Case in tumkur
ತುಮಕೂರು1 hour ago

Murder case : ಸ್ನೇಹಿತರೇ ದುಷ್ಮನ್‌ಗಳು; ಕಂಠಪೂರ್ತಿ ಕುಡಿಸಿ ಗೆಳೆಯನ ತಲೆ ಮೇಲೆ‌ ಕಲ್ಲು ಎತ್ತಿಹಾಕಿ ಕೊಲೆ

OpenAI
Lok Sabha Election 20242 hours ago

OpenAI: ಇಸ್ರೇಲ್‌ನ ಸಂಸ್ಥೆಯಿಂದ ಬಿಜೆಪಿ ವಿರುದ್ಧ ಪ್ರಚಾರ; ಶಾಕಿಂಗ್‌ ಮಾಹಿತಿ ಹಂಚಿಕೊಂಡ ಓಪನ್ಎಐ

Murder Case in Mysuru
ಕ್ರೈಂ2 hours ago

Murder case : ಜಸ್ಟ್‌ ಗುರಾಯಿಸಿದ್ದಕ್ಕೆ ಯುವಕನ ಬರ್ಬರ ಹತ್ಯೆ; ಸಾವಿನ ಕೊನೆ ಕ್ಷಣ ಸೆರೆ

Ambati Rayudu
ಕ್ರೀಡೆ2 hours ago

Ambati Rayudu: ಸ್ಟಾಂಡರ್ಡ್​ ಕಮ್ಮಿ ಮಾಡಿದರೆ ಉತ್ತಮ ಎಂದು ಕೊಹ್ಲಿಯ ಕಾಲೆಳೆದ ರಾಯುಡು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌