Aadhaar card | ಆಧಾರ್‌ ಸ್ವೀಕರಿಸುವುದಕ್ಕೆ ಮುನ್ನ ದೃಢೀಕರಿಸಲು ರಾಜ್ಯ ಸರ್ಕಾರಗಳಿಗೆ ಯುಐಡಿಎಐ ಮನವಿ - Vistara News

ಪ್ರಮುಖ ಸುದ್ದಿ

Aadhaar card | ಆಧಾರ್‌ ಸ್ವೀಕರಿಸುವುದಕ್ಕೆ ಮುನ್ನ ದೃಢೀಕರಿಸಲು ರಾಜ್ಯ ಸರ್ಕಾರಗಳಿಗೆ ಯುಐಡಿಎಐ ಮನವಿ

ರಾಜ್ಯ ಸರ್ಕಾರಗಳ ನಾನಾ ಇಲಾಖೆಗಳು ಮತ್ತು ಸಂಸ್ಥೆಗಳು ಆಧಾರ್‌ ಕಾರ್ಡ್‌ ಅನ್ನು ಸಾರ್ವಜನಿಕರಿಂದ ಸ್ವೀಕರಿಸುವುದಕ್ಕೆ ಮುನ್ನ ದೃಢೀಕರಿಸಬೇಕು, ಇದರಿಂದ ಇವುಗಳ ದುರ್ಬಳಕೆ ತಡೆಯಬಹುದು ಎಂದು ಯುಐಡಿಎಐ (Aadhaar card) ತಿಳಿಸಿದೆ.

VISTARANEWS.COM


on

Aadhaar card Is your e-mail mobile linked with Aadhaar Be sure to do so
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರ (UIDAI) ಗುರುವಾರ ರಾಜ್ಯ ಸರ್ಕಾರಗಳು ಮತ್ತು ಸಂಸ್ಥೆಗಳಿಗೆ ನೀಡಿರುವ ನಿರ್ದೇಶನದಲ್ಲಿ, ಭೌತಿಕ ಅಥವಾ ಎಲೆಕ್ಟ್ರಾನಿಕ್‌ ಸ್ವರೂಪದಲ್ಲಿ ಆಧಾರ್‌ ಕಾರ್ಡ್‌ ( Aadhaar card) ಸ್ವೀಕರಿಸುವ ಸಂದರ್ಭ ದೃಢೀಕರಿಸಿಕೊಳ್ಳಬೇಕು ಎಂದು ತಿಳಿಸಿದೆ.

ಸಮಾಜ ವಿದ್ರೋಹಿ ಶಕ್ತಿಗಳು ಆಧಾರ್‌ ಅನ್ನು ದುರ್ಬಳಕೆ ಮಾಡದಂತೆ ತಡೆಯುವ ನಿಟ್ಟಿನಲ್ಲಿ ಯುಐಡಿಎಐ, ಈ ನಿರ್ದೇಶನವನ್ನು ನೀಡಿದೆ.

ಆಧಾರ್‌ ಕಾರ್ಡ್‌ ಅನ್ನು ನಾನಾ ಉದ್ದೇಶಗಳಿಗೆ ದೃಢೀಕರಣಕ್ಕಾಗಿ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಬಳಸಲಾಗುತ್ತಿದೆ. ಆಧಾರ್‌ ಕಾರ್ಡ್‌, ಇ-ಆಧಾರ್‌, ಆಧಾರ್‌ ಪಿವಿಸಿ ಕಾರ್ಡ್‌ ಮತ್ತು ಎಂ-ಆಧಾರ್‌ ಅನ್ನು ಸಾರ್ವಜನಿಕರು ಗುರುತಿನ ದೃಢೀಕರಣದ ದಾಖಲೆಯಾಗಿ ಪ್ರಸ್ತುತಪಡಿಸುತ್ತಾರೆ. ಹೀಗಾಗಿ ಮಹತ್ವದ ದಾಖಲೆಗಳಲ್ಲೊಂದಾಗಿದೆ.

ಆಧಾರ್‌ ದಾಖಲೆಗಳನ್ನು ಸಮಾಜ ಘಾತುಕರು ತಿರುಚುವ ಮತ್ತು ದರ್ಬಳಕೆ ಮಾಡುವುದನ್ನು ತಡೆಯದಂತೆ, ಆಫ್‌ಲೈನ್‌ ವೆರಿಫಿಕೇಶನ್‌ ಮಾಡಬಹುದು. ಒಂದು ವೇಳೆ ದಾಖಲೆಯನ್ನು ತಿರುಚಿದರೆ ಶಿಕ್ಷಾರ್ಹ ಅಪರಾಧವೆನಿಸುತ್ತದೆ. ಎಂಆಧಾರ್‌ ಆ್ಯಪ್ ಮೂಲಕ ಕ್ಯೂಆರ್‌ ಕೋಡ್‌ ಬಳಸಿ ಆಧಾರ್‌ನ ಎಲ್ಲ ಮಾದರಿಗಳನ್ನು ದೃಢೀಕರಿಸಬಹುದು ಎಂದು ಯುಐಡಿಎಐ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Signal-Free Corridor: ಬೆಂಗಳೂರಿಗೆ 17 ಸಿಗ್ನಲ್ ಮುಕ್ತ ಕಾರಿಡಾರ್‌; ಯಾವ ಮಾರ್ಗಗಳಲ್ಲಿ ನೋಡಿ

ನಾವು ಸುಮಾರು 17 ಸ್ಥಳಗಳನ್ನು ಗುರುತಿಸಿದ್ದೇವೆ. ಇವುಗಳನ್ನು ಯಶಸ್ವಿ ರಾಜಾಜಿನಗರ- ಕೆಆರ್ ಸರ್ಕಲ್ ಸಿಗ್ನಲ್-ಮುಕ್ತ ಕಾರಿಡಾರ್ (Signal-Free Corridor) ಮಾದರಿಯಲ್ಲಿ ರೂಪಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿದರು.

VISTARANEWS.COM


on

signal free corridor
Koo

ಬೆಂಗಳೂರು: ನಗರದ ಟ್ರಾಫಿಕ್ ದಟ್ಟಣೆಯನ್ನು (Bangalore Traffic congestion) ನಿವಾರಿಸುವ ಪ್ರಯತ್ನದಲ್ಲಿ, ಬೆಂಗಳೂರಿನ 17 ಸ್ಥಳಗಳಲ್ಲಿ ಸುಮಾರು 100 ಕಿಲೋಮೀಟರ್‌ನಷ್ಟು ಉದ್ದದ ಸಿಗ್ನಲ್-ಮುಕ್ತ ಕಾರಿಡಾರ್‌ (Signal-Free Corridor) ಅಭಿವೃದ್ಧಿಪಡಿಸುವ ಯೋಜನೆಯನ್ನು ಕರ್ನಾಟಕ ಸರ್ಕಾರ (Karnataka Govt) ಪ್ರಕಟಿಸಿದೆ.

ಸುದ್ದಿಗಾರರೊಂದಿಗೆ ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (DCM DK Shivakumar), ನಗರದ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಕುರಿತು ಎಲ್ಲಾ ರಾಜಕೀಯ ಪಕ್ಷಗಳ ಶಾಸಕರೊಂದಿಗೆ ಚರ್ಚಿಸಲಾಗಿದೆ ಎಂದು ತಿಳಿಸಿದರು. ನಾವು ಸುಮಾರು 17 ಸ್ಥಳಗಳನ್ನು ಗುರುತಿಸಿದ್ದೇವೆ. ಇವುಗಳನ್ನು ಯಶಸ್ವಿ ರಾಜಾಜಿನಗರ- ಕೆಆರ್ ಸರ್ಕಲ್ ಸಿಗ್ನಲ್-ಮುಕ್ತ ಕಾರಿಡಾರ್ (Signal-Free Corridor) ಮಾದರಿಯಲ್ಲಿ ರೂಪಿಸಲಾಗುವುದು ಎಂದು ಅವರು ಹೇಳಿದರು.

ನಗರದ ಸಂಪೂರ್ಣ ಸಂಚಾರ ವಿಶ್ಲೇಷಣೆ, ಮುಂದಿನ ಕೆಲವು ವರ್ಷಗಳ ಯೋಜಿತ ಬೆಳವಣಿಗೆಯ ಮಾದರಿಗಳನ್ನು ಆಧರಿಸಿ ಈ ಸ್ಥಳಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಯ್ಕೆ ಮಾಡಿದೆ. ಈ ಮಹತ್ವಾಕಾಂಕ್ಷೆಯ ಯೋಜನೆಗೆ 12,000 ಕೋಟಿ ರೂ. ವೆಚ್ಚವಾಗಲಿದೆ.

“ಇವುಗಳ ಅಗತ್ಯವನ್ನು ನಿರ್ಧರಿಸಲು ಟ್ರಾಫಿಕ್ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಲಾಗಿದೆ. ವಿಶ್ಲೇಷಕರು 2044ರವರೆಗೆ ನಿರೀಕ್ಷಿತ ಲೇನ್ ಅವಶ್ಯಕತೆಗಳನ್ನು ಸೂಚಿಸಿದ್ದಾರೆ. ನಿರ್ಣಾಯಕ ಜಂಕ್ಷನ್‌ಗಳಲ್ಲಿ ಸಿಗ್ನಲ್-ಮುಕ್ತ ಕಾರಿಡಾರ್‌ಗಳನ್ನು ಸೂಚಿಸಿದ್ದಾರೆ. ಅದನ್ನು ಈಗ ಜಾರಿಗೆ ಪ್ರಸ್ತಾಪಿಸಲಾಗಿದೆ” ಎಂದು ಬಿಬಿಎಂಪಿ ಹಿರಿಯ ಅಧಿಕಾರಿಯೊಬ್ಬರು ವಿವರಿಸಿದ್ದಾರೆ.

ಟ್ರಾಫಿಕ್ ಅಧ್ಯಯನದ ಮೂಲಕ ಕಂಡುಬಂದ ವಿಚಾರ ಎಂದರೆ, ಆಯ್ದ ಕಾರಿಡಾರ್‌ಗಳಲ್ಲಿ ಹೆಚ್ಚಿನ ಟ್ರಾಫಿಕ್ ಹರಿವು ಕಂಡುಬರುತ್ತದೆ. ಈ ಮಾರ್ಗಗಳಲ್ಲಿ ವೇಗ ಗಂಟೆಗೆ 15-20 ಕಿಲೋಮೀಟರ್‌ಗಳಷ್ಟು ಕಡಿಮೆಯಾಗಿದೆ. ಇದರಿಂದ ಇಂಧನ ವ್ಯರ್ಥವಾಗುತ್ತಿದೆ ಹಾಗೂ ಉತ್ಪಾದಕತೆ ನಷ್ಟವಾಗುತ್ತಿದೆ.

“ಪ್ರಸ್ತುತ ಈ ಕಾರಿಡಾರ್‌ಗಳಲ್ಲಿ ಹಲವು ನಾಲ್ಕು ಅಥವಾ ಆರು ಲೇನ್‌ಗಳಿವೆ. ಪ್ರಸ್ತುತ ಟ್ರಾಫಿಕ್ ಸಾಂದ್ರತೆಯ ಪ್ರಕಾರ ಇಲ್ಲಿ ಕನಿಷ್ಠ ಎಂಟು ಲೇನ್‌ಗಳ ಅವಶ್ಯಕತೆಯಿದೆ. 2044ರ ವೇಳೆಗೆ 12 ಲೇನ್‌ಗಳಿಗೆ ಹೆಚ್ಚಿಸುವ ಅವಶ್ಯಕತೆಯಿದೆ. ರಸ್ತೆ ಅಗಲೀಕರಣ, ಎಲಿವೇಟೆಡ್ ಕಾರಿಡಾರ್‌ಗಳು ಅಥವಾ ಅಂಡರ್‌ಪಾಸ್‌ಗಳ ನಿರ್ಮಾಣದ ಅವಶ್ಯಕತೆಯಿದೆ” ಎಂದು ವರದಿ ಬಹಿರಂಗಪಡಿಸಿದೆ.

ಯೋಜಿಸಲಾದ ಕೆಲವು ಪ್ರಮುಖ ಸಿಗ್ನಲ್-ಮುಕ್ತ ಕಾರಿಡಾರ್‌ಗಳು ಹೀಗಿವೆ:

1) ಕೆ.ಆರ್‌ ಪುರದಿಂದ ಯಶವಂತಪುರ- ಗೊರಗುಂಟೆಪಾಳ್ಯವರೆಗಿನ 23 ಕಿಲೋಮೀಟರ್ ವ್ಯಾಪ್ತಿಯ ಕಾರಿಡಾರ್.‌
2) ಆನೆಪಾಳ್ಯದಿಂದ ಸಿಲ್ಕ್ ಬೋರ್ಡ್‌ವರೆಗಿನ 5.5 ಕಿಲೋಮೀಟರ್ ಹೊಸೂರು ರಸ್ತೆ ಕಾರಿಡಾರ್
3) ಮಾರೇನಹಳ್ಳಿಯಿಂದ ಕನಕಪುರ ರಸ್ತೆ-ತಲಘಟ್ಟಪುರ ನೈಸ್ ರಸ್ತೆವರೆಗೆ 10 ಕಿಲೋಮೀಟರ್ ಎಲಿವೇಟೆಡ್ ಕಾರಿಡಾರ್
4) ಮಿನರ್ವದಿಂದ ಕಬ್ಬನ್ ಪಾರ್ಕ್‌ವರೆಗೆ 2.7 ಕಿಲೋಮೀಟರ್ ಎತ್ತರದ ರಸ್ತೆಯನ್ನು ಪ್ರಸ್ತಾಪಿಸಲಾಗಿದೆ.

ಟ್ರಾಫಿಕ್‌ ಪೊಲೀಸರಿಂದ ಬೆಂಗಳೂರಿನ ರಸ್ತೆಗಳಲ್ಲಿ ಮೊಳೆಗಳ ಸಂಗ್ರಹ

ಬೆಂಗಳೂರು: ಬೆಂಗಳೂರಿನ ಬೀದಿ ಬೀದಿಗಳಲ್ಲಿ ರಾಶಿಗಟ್ಟಲೆ ಮೊಳೆ (Nails) ಬಿಸಾಡಿ ವಾಹನಗಳ ಟಯರ್‌ ಪಂಕ್ಚರ್‌ (Puncture) ಆಗುವಂತೆ ಮಾಡಿ ದುಡ್ಡ ಮಾಡುವ ಮಾಫಿಯಾ (Mafia) ಕಾರ್ಯಪ್ರವೃತ್ತವಾಗಿದೆಯಾ ಎಂಬ ಅನುಮಾನ ಹೆಡೆಯೆತ್ತಿದೆ. ಜಾಲಹಳ್ಳಿಯ ಕುವೆಂಪು ವೃತ್ತದ (Kuvempu Circle) ಕೆಳಸೇತುವೆಯಲ್ಲಿ ಮುಷ್ಟಿಗಟ್ಟಲೆ ಮೊಳೆಗಳು ಒಂದೆಡೆಯೇ ಪತ್ತೆಯಾಗಿದ್ದು, ಸ್ವತಃ ಟ್ರಾಫಿಕ್‌ ಪೊಲೀಸರೇ (Traffic Police) ಇವುಗಳನ್ನು ಸ್ಥಳದಿಂದ ತೆಗೆದು ಕ್ಲೀನ್‌ ಮಾಡುವ ಅಭಿಯಾನ ನಡೆಸಿದ್ದಾರೆ. ಅದೀಗ ವೈರಲ್‌ (Viral Video) ಆಗಿದೆ.

ರಸ್ತೆ ಮಧ್ಯದಲ್ಲಿ ಮೊಳೆಗಳನ್ನು ಎಸೆದು ವಾಹನಗಳ ಪಂಕ್ಚರ್ ಮಾಡಿಸಲಾಗುತ್ತಿದೆ ಎಂಬ ವದಂತಿ ಮೊದಲಿನಿಂದಲೂ ಇದೆ. ಇದೀಗ ಸ್ವತಃ ಟ್ರಾಫಿಕ್ ಪೊಲೀಸರಿಂದಲೇ ರಾಶಿಗಟ್ಟಲೆ ಮೊಳೆಗಳ ಸಂಗ್ರಹ ನಡೆದಿದ್ದು, ಅನುಮಾನ ರುಜುವಾತು ಆದಂತಾಗಿದೆ. ನಗರದಲ್ಲಿ ಎಲ್ಲೆಂದರಲ್ಲಿ ವಾಹನಗಳು ಪಂಕ್ಚರ್ ಆಗುತ್ತಿದ್ದು, ಸಮೀಪದಲ್ಲಿರುವ ಪಂಕ್ಚರ್ ಅಂಗಡಿಗಳಿಗೆ ಸಾಕಷ್ಟು ವ್ಯಾಪಾರವಂತೂ ಆಗುತ್ತಿದೆ.

ನಿನ್ನೆ ಕುವೆಂಪು ವೃತ್ತದ ಅಂಡರ್‌ಪಾಸ್‌ನಲ್ಲಿ ರಾಶಿಗಟ್ಟಲೆ ಲೋಹದ ಮೊಳೆಗಳನ್ನು ಪತ್ತೆಹಚ್ಚಿದ ಬೆಂಗಳೂರು ಟ್ರಾಫಿಕ್‌ ಪೊಲೀಸರು ಅವುಗಳನ್ನು ಸ್ವಚ್ಛಗೊಳಿಸಿದರು. ಬೆಂಗಳೂರು ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಕುವೆಂಪು ಸರ್ಕಲ್ ಅಂಡರ್‌ಪಾಸ್‌ನಲ್ಲಿ ರಸ್ತೆಯನ್ನು ಗುಡಿಸುವ ವೀಡಿಯೊವನ್ನು ಎಕ್ಸ್‌ನಲ್ಲಿ ಅಪ್‌ಲೋಡ್‌ ಮಾಡಲಾಗಿದ್ದು, ಅದೀಗ ವೈರಲ್‌ ಆಗಿದೆ.

ಇದನ್ನೂ ಓದಿ: DK Shivakumar: ಬೆಂಗಳೂರಿನ ನೈಸ್‌ ರಸ್ತೆ ಬಳಿ ದೇಶದ ಅತಿ ಎತ್ತರದ ಸ್ಕೈಡೆಕ್!

Continue Reading

ದೇಶ

Ranbir Kapoor: ಮೋದಿಯದ್ದು ‘ಆಯಸ್ಕಾಂತದಂಥ ವ್ಯಕ್ತಿತ್ವ’ ಎಂದ ರಣಬೀರ್‌ ಕಪೂರ್;‌ ಕನ್ನಡಿಗನಿಗೆ ನಟ ಹೇಳಿದ ಕತೆ ಏನು?

Ranbir Kapoor: ರಾಜಕೀಯದ ಕುರಿತು ನಿಮ್ಮ ಅಭಿಪ್ರಾಯವೇನು ಎಂದು ನಿಖಿಲ್‌ ಕಾಮತ್‌ ಕೇಳಿದ ಪ್ರಶ್ನೆಗೆ ರಣಬೀರ್‌ ಕಪೂರ್‌ ಉತ್ತರಿಸಿದರು. ರಣಬೀರ್‌ ಕಪೂರ್‌ ಸೇರಿ ಹಲವು ನಟರು, ನಿರ್ದೇಶಕರು ಮೋದಿ ಅವರನ್ನು ಭೇಟಿಯಾಗಲು ಹೋದಾಗ ಮೋದಿ ಅವರು ಹೇಗೆ ಪ್ರತಿಕ್ರಿಯಿಸಿದರು ಎಂಬುದು ಸೇರಿ ಹಲವು ವಿಷಯಗಳ ಕುರಿತು ರಣಬೀರ್‌ ಕಪೂರ್‌ ಪ್ರಸ್ತಾಪಿಸಿದರು.

VISTARANEWS.COM


on

Ranbir Kapoor
Koo

ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಭಾರತ ಸೇರಿ ಜಗತ್ತಿನಾದ್ಯಂತ ಅಭಿಮಾನಿಗಳಿದ್ದಾರೆ. ರಾಜಕೀಯ ಭಿನ್ನಾಭಿಪ್ರಾಯದ ಹೊರತಾಗಿಯೂ ಮೋದಿ ಅವರ ಶ್ರಮ, ವ್ಯಕ್ತಿತ್ವವನ್ನು ಮೆಚ್ಚುವವರಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ನರೇಂದ್ರ ಮೋದಿ ಅವರ ಕುರಿತು ಬಾಲಿವುಡ್‌ ನಟ ರಣಬೀರ್‌ ಕಪೂರ್‌ (Ranbir Kapoor) ಅವರು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಜೆರೋದಾ ಸಂಸ್ಥಾಪಕ, ಕನ್ನಡಿಗ ನಿಖಿಲ್‌ ಕಾಮತ್‌ (Nikhil Kamath) ಅವರೊಂದಿಗಿನ ಪಾಡ್‌ಕಾಸ್ಟ್‌ ವೇಳೆ ರಣಬೀರ್‌ ಕಪೂರ್‌ ಅವರು ಮೋದಿ ಕುರಿತು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ರಾಜಕೀಯದ ಕುರಿತು ನಿಮ್ಮ ಅಭಿಪ್ರಾಯವೇನು ಎಂದು ನಿಖಿಲ್‌ ಕಾಮತ್‌ ಕೇಳಿದ ಪ್ರಶ್ನೆಗೆ ರಣಬೀರ್‌ ಕಪೂರ್‌ ಉತ್ತರಿಸಿದರು. “ನಾನು ರಾಜಕೀಯದ ಬಗ್ಗೆ ಜಾಸ್ತಿ ಯೋಚಿಸುವುದಿಲ್ಲ. ಆದರೆ, 4-5 ವರ್ಷಗಳ ಹಿಂದೆ ನಾನು ಸೇರಿ ಹಲವು ನಟರು ಹಾಗೂ ನಿರ್ದೇಶಕರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಹೋಗಿದ್ದೆವು. ನೀವು ಮೋದಿ ಅವರು ಹೇಗೆ ಮಾತನಾಡುತ್ತಾರೆ ಎಂಬುದನ್ನು ಟಿ.ವಿಯಲ್ಲಿ ನೋಡಿರುತ್ತೀರಿ. ನಮಗೂ ಕೂಡ ಅವರ ಆಯಸ್ಕಾಂತದಂತಹ ವ್ಯಕ್ತಿತ್ವದ ಅರಿವಾಯಿತು” ಎಂಬುದಾಗಿ ರಣಬೀರ್‌ ಕಪೂರ್‌ ಹೇಳಿದರು.

“ನಾವು ಅವರನ್ನು ಭೇಟಿಯಾಗಲು ಹೋಗಿದ್ದೆವು. ನಾವು ಕುಳಿತಿದ್ದಾಗ ಅವರು ಬಂದು ನಮ್ಮ ಜತೆ ಕುಳಿತರು. ಅವರು ಪ್ರತಿಯೊಬ್ಬರ ಜತೆಗೂ ಮಾತನಾಡಿದರು. ಪ್ರತಿಯೊಬ್ಬರ ವೈಯಕ್ತಿಕ ವಿಚಾರಗಳ ಬಗ್ಗೆ ಕೇಳಿದರು. ಆಗ ನನ್ನ ತಂದೆಯು ಚಿಕಿತ್ಸೆ ಪಡೆಯುತ್ತಿದ್ದರು. ಅದರ ಬಗ್ಗೆಯೂ ಮೋದಿ ಅವರು ಕೇಳಿದರು. ವಿಕ್ಕಿ ಕೌಶಲ್‌, ಕಿರಣ್‌ ಜೋಹರ್‌ ಸೇರಿ ಹಲವರ ವೈಯಕ್ತಿಕ ವಿಚಾರಗಳ ಕುರಿತು ಕೂಡ ಮೋದಿ ಮಾತನಾಡಿದರು. ಅದ್ಭುತ ವ್ಯಕ್ತಿಗಳು, ಸಾಧಕರು ಮಾತ್ರ ಇಷ್ಟೊಂದು ಶ್ರಮ ವಹಿಸಲು ಸಾಧ್ಯ. ಶಾರುಖ್‌ ಖಾನ್‌ ಸೇರಿ ಹಲವು ಸಾಧಕರು ಇಷ್ಟು ಶ್ರಮ ಹಾಕಲು ಸಾಧ್ಯ” ಎಂಬುದಾಗಿ ರಣಬೀರ್‌ ಕಪೂರ್‌ ಅವರು ಮೋದಿ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

ನಿಖಿಲ್‌ ಕಾಮತ್‌ ಕೂಡ ಬಣ್ಣನೆ

ನರೇಂದ್ರ ಮೋದಿ ಅವರ ಜತೆಗೆ ಸಮಯ ಕಳೆದ ಅನುಭವದ ಕುರಿತು ನೀವು ಹೇಳಿ ಎಂಬುದಾಗಿ ರಣಬೀರ್‌ ಕಪೂರ್‌ ಅವರು ಕೇಳಿದಾಗ ನಿಖಿಲ್‌ ಕಾಮತ್‌ ಕೂಡ ಮೋದಿ ಬಗ್ಗೆ ಮೆಚ್ಚಗೆಯ ಮಾತುಗಳನ್ನಾಡಿದ್ದರು. “ನರೇಂದ್ರ ಮೋದಿ ಅವರ ಜತೆ ಎರಡು ಕಾರ್ಯಕ್ರಮಗಳಲ್ಲಿ ಭಾಗಿಯಾದೆ. ನಾವು ಅಮೆರಿಕದಲ್ಲಿದ್ದಾಗ ಮೋದಿ ಅವರು ನಿರಂತರವಾಗಿ ಕಾರ್ಯಕ್ರಮಗಳಲ್ಲಿ ಭೇಟಿಯಾಗುತ್ತಿದ್ದರು. ಅವರು ಬೆಳಗ್ಗೆಯಿಂದ ರಾತ್ರಿವರೆಗೆ ಒಂದಲ್ಲ ಒಂದು ಕಾರ್ಯಕ್ರಮ, ಚಟುವಟಿಕೆಯಲ್ಲಿ ತೊಡಗಿರುತ್ತಿದ್ದರು. ಅವರ ವಯಸ್ಸಿನಲ್ಲಿ, ಅವರಷ್ಟು ಶ್ರಮ ವಹಿಸುವುದು ನನಗೆ ಅಚ್ಚರಿಯಾಯಿತು. ಅವರು ಕೂಡ ನನಗೆ ಸ್ಫೂರ್ತಿ” ಎಂದು ನಿಖಿಲ್‌ ಕಾಮತ್‌ ತಿಳಿಸಿದ್ದಾರೆ.

ಇದನ್ನೂ ಓದಿ: Manu Bhaker : ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಐತಿಹಾಸಿಕ ಪದಕ ಗೆದ್ದ ಮನು ಭಾಕರ್ ಗೆ ಪ್ರಧಾನಿ ಮೋದಿ ಅಭಿನಂದನೆ

Continue Reading

ಉದ್ಯೋಗ

BPNL Recruitment 2024: ಭಾರತೀಯ ಪಶುಪಾಲನಾ ನಿಗಮದಲ್ಲಿದೆ 2,250 ಹುದ್ದೆ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

BPNL Recruitment 2024: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಬರೋಬ್ಬರಿ 2,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಆಗಸ್ಟ್‌ 5.

VISTARANEWS.COM


on

BPNL Recruitment 2024
Koo

ಬೆಂಗಳೂರು: ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ (Bhartiya Pashupalan Nigam Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (BPNL Recruitment 2024). ಬರೋಬ್ಬರಿ 2,250 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಆಗಸ್ಟ್‌ 5 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಗೋ ಸಂವರ್ಧನಾ ವಿಸ್ತಾರಕ (Cow Promotion Extender)- 225 ಹುದ್ದೆ, ವಿದ್ಯಾರ್ಹತೆ: ಪದವಿ
ಕೌ ಬ್ರೀಡಿಂಗ್‌ ಅಸಿಸ್ಟಂಟ್‌ (Cow Breeding Assistant)- 675 ಹುದ್ದೆ, ವಿದ್ಯಾರ್ಹತೆ: 12ನೇ ತರಗತಿ
ಗೋ ಸೇವಕ (Cow Servant)- 1,350 ಹುದ್ದೆ, ವಿದ್ಯಾರ್ಹತೆ: 10ನೇ ತರಗತಿ

ವಯೋಮಿತಿ

ಗೋ ಸಂವರ್ಧನಾ ವಿಸ್ತಾರಕ ಹುದ್ದೆಗೆ 25 – 45 ವರ್ಷ, ಕೌ ಬ್ರೀಡಿಂಗ್‌ ಅಸಿಸ್ಟಂಟ್‌ ಹುದ್ದೆಗೆ 21 – 40 ವರ್ಷ, ಗೋ ಸೇವಕ ಹುದ್ದೆಗೆ 18 – 40 ವರ್ಷದವರು ಅರ್ಜಿ ಸಲ್ಲಿಸಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವರ್ಗಕ್ಕೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ವರ್ಗಕ್ಕೆ 5 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ಅರ್ಜಿ ಶುಲ್ಕದಲ್ಲಿ ವ್ಯತ್ಯಾಸವಿದೆ. ಗೋ ಸಂವರ್ಧನಾ ವಿಸ್ತಾರಕ ಹುದ್ದೆಗೆ – 944 ರೂ., ಕೌ ಬ್ರೀಡಿಂಗ್‌ ಅಸಿಸ್ಟಂಟ್‌ ಹುದ್ದೆಗೆ – 826 ರೂ. ಮತ್ತು ಗೋ ಸೇವಕ ಹುದ್ದೆಗೆ – 708 ರೂ. ಅರ್ಜಿ ಶುಲ್ಕ ಪಾವತಿಸಬೇಕು. ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಒಂದೇ ತೆರನಾಗಿದ್ದು, ಆನ್‌ಲೈನ್‌ ಮೂಲಕ ಪಾವತಿಸಬೇಕು. ಆನ್‌ಲೈನ್‌ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಮಾಸಿಕ ವೇತನ

ಆಯ್ಕೆಯಾದವರಿಗೆ ಗೋ ಸಂವರ್ಧನಾ ವಿಸ್ತಾರಕ ಹುದ್ದೆಗೆ – 26,000 ರೂ., ಕೌ ಬ್ರೀಡಿಂಗ್‌ ಅಸಿಸ್ಟಂಟ್‌ ಹುದ್ದೆಗೆ – 23,000 ರೂ. ಮತ್ತು ಗೋ ಸೇವಕ ಹುದ್ದೆಗೆ – 18,000 ರೂ. ಮಾಸಿಕ ವೇತನ ಲಭ್ಯ.

BPNL Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://pay.bharatiyapashupalan.com/onlinerequirment)
  • ಅಗತ್ಯ ಮಾಹಿತಿಗಳನ್ನು ತುಂಬಿ.
  • ಅಗತ್ಯವಾದ ಡಾಕ್ಯುಮೆಂಟ್‌, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ.
  • ಮತ್ತೊಮ್ಮೆ ವಿವರಗಳನ್ನು ಪರಿಶೀಲಿಸಿ ಎಲ್ಲವೂ ಸರಿ ಇದೆ ಎಂದು ಖಚಿತಪಡಿಸಿ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ ಭಾರತೀಯ ಪಶುಪಾಲನಾ ನಿಗಮ ಲಿಮಿಟೆಡ್‌ನ ವೆಬ್‌ಸೈಟ್‌ ವಿಳಾಸ: bharatiyapashupalan.comಗೆ ಭೇಟಿ ನೀಡಿ ಎಂದು ಪ್ರಕಟಣೆ ತಿಳಿಸಿದೆ.

Continue Reading

ಕರ್ನಾಟಕ

BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

BJP-JDS Padayatra: ಈ ಹಿಂದೆ ನಮಗೂ ಅನುಮತಿ ಕೊಟ್ಟಿರಲಿಲ್ಲ, ಆದರೂ ನಾವು ಪಾದಯಾತ್ರೆ ಮಾಡಿದ್ದೆವು. ಅವರು ಪ್ರತಿಭಟನೆ ಮಾಡಲಿ, ತಡೆ ಹಾಕಲು ಹೋಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

VISTARANEWS.COM


on

BJP-JDS Padayatra
Koo

ಬೆಂಗಳೂರು: ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ (BJP-JDS Padayatra) ನಾವು ಅನುಮತಿ ಕೊಡುವುದಿಲ್ಲ, ಬೇಕಿದ್ದರೆ ಪ್ರತಿಭಟನೆ ಮಾಡಿಕೊಳ್ಳಲಿ. ಈ ಹಿಂದೆ ನಮಗೂ ಅನುಮತಿ ಕೊಟ್ಟಿರಲಿಲ್ಲ, ಆದರೂ ನಾವು ಪಾದಯಾತ್ರೆ ಮಾಡಿದ್ದೆವು. ಅವರು ಪ್ರತಿಭಟನೆ ಮಾಡಲಿ, ತಡೆ ಹಾಕಲು ಹೋಗುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಪಕ್ಷದ ವತಿಯಿಂದ ರಾಜಕೀಯ ಮಾಡುತ್ತೇವೆ. ಆದರೆ ಸರ್ಕಾರ ಉಪಯೋಗಿಸಿ ರಾಜಕೀಯ ಮಾಡಲ್ಲ. ಅವರು ರಾಜಕೀಯ ಮಾಡುತ್ತಿದ್ದಾರೆ, ನಾವೂ ರಾಜಕೀಯ ಮಾಡಬೇಕಾಗುತ್ತದೆ. ಮುಡಾ ಹಗರಣ ತನಿಖೆಗೆ ಆಯೋಗ ರಚನೆ ಮಾಡಿದ್ದೇವೆ. ವರದಿಯಲ್ಲಿ ತಪ್ಪು ಅಂತ ಬಂದರೆ ಕ್ರಮ ತೆಗೆದುಕೊಳ್ಳುತ್ತೇವೆ. ಬಿಜೆಪಿ, ಜೆಡಿಎಸ್ ಪಾದಯಾತ್ರೆಗೆ ಮಾತ್ರ ಅನುಮತಿ ಕೊಡುವುದಿಲ್ಲ, ಆದರೂ ಪಾದಯಾತ್ರೆ ಮಾಡಲು ಮುಂದಾದರೆ ತಡೆಯಲು ಹೋಗಲ್ಲ ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಿಂದ ಕೌಂಟರ್ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯಿಸಿ, ಆ ಬಗ್ಗೆ ಪಕ್ಷದ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಣನೀತಿ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ | OBC Reservation: ಒಬಿಸಿ ಮೀಸಲಾತಿ ಹೆಚ್ಚಳಕ್ಕೆ ಸುಪ್ರೀಂ ಕೋರ್ಟ್‌ ತಡೆ; ನಿತೀಶ್‌ ಕುಮಾರ್‌ಗೆ ಮುಖಭಂಗ!ಇದನ್ನೂ ಓದಿ |

ರಾಜ್ಯದಲ್ಲಿ ಭಯದ ವಾತವರಣದ ಕಾರಣ ಬಂಡವಾಳ ಬರುತ್ತಿಲ್ಲ ಎಂಬ ನಿರ್ಮಲಾ ಸೀತಾರಾಮನ್ ಹೇಳಿಕೆಗೆ ಪ್ರತಿಕ್ರಿಯಿಸಿ, ಅನೇಕ ಕಾರಣಗಳಿಂದ ಕಂಪನಿಗಳು, ಆಯ್ಕೆಗಳನ್ನು ಇಟ್ಟುಕೊಂಡೇ ಬರುತ್ತವೆ. ಚೆನ್ನೈ, ಕರ್ನಾಟಕ, ಮಹಾರಾಷ್ಟ್ರ ಅಂತ ಆಯ್ಕೆ ಇರುತ್ತವೆ. ಅವರಿಗೆ ಎಲ್ಲಿ ಹೆಚ್ಚು ಸೌಲಭ್ಯಗಳು ಸಿಗುತ್ತವೋ ಅದರ ಪ್ರಕಾರ ತೀರ್ಮಾನ ಮಾಡುತ್ತಾರೆ. ಇಲ್ಲಿಯವರೆಗೆ ಯಾರು ಬಂದು ಹೊರಗೆ ಹೋಗುತ್ತೇವೆ ಎಂದು ಹೇಳಿಲ್ಲ. ಸುಮ್ಮನೆ ಇಲ್ಲಸಲ್ಲದ ಆಪಾದನೆ ಮಾಡುವುದು ಸರಿಯಲ್ಲ ಎಂದರು.

ಬಜೆಟ್‌ನಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ 15 ಸಾವಿರ ಕೋಟಿ ಕೊಟ್ಟಿದ್ದಾರೆ. ಕೊಡಬೇಡಿ ಎನ್ನಲ್ಲ, ಆದರೆ ಎಲ್ಲರಿಗೂ ಸರಿ ಸಮಾನವಾಗಿ ಕೊಡಬೇಕು. ನಮ್ಮ ಪಾಲನ್ನು ನಮಗೆ ಕೊಡಿ ಅಂತ ದೆಹಲಿ, ಸುಪ್ರೀಂ ಕೋರ್ಟ್‌ವರೆಗೆ ತಲುಪಿದ್ದೇವೆ. ಕೊಟ್ಟಿದ್ದೀವಿ, ಕೊಟ್ಟಿದ್ದೀವಿ ಎನ್ನುತ್ತಾರೆ. ಏನು ಕೊಟ್ಟಿದ್ದೀವಿ ಅಂತ ಹೇಳಬೇಕಲ್ಲವೇ? ಭದ್ರಾ ಯೋಜನೆಗೆ ಹಣಕೊಡಬೇಕಿತ್ತು, ಕೊಟ್ಟಿಲ್ಲ. ಈ ರೀತಿ ಮಲತಾಯಿ ದೋರಣೆ ತೋರಿಸಿ, ಬೆಂಗಳೂರಿಗೆ ಬಂದು ಎಲ್ಲಾ ಕೊಟ್ಟಿದ್ದೀವಿ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಬೆಂಗಳೂರು ದೇಶದ ಪ್ರತಿಷ್ಠಿತ ನಗರ, ಇದನ್ನ ಪ್ರಪಂಚಕ್ಕೆ ತೋರಿಸಬೇಕಲ್ವಾ? ನೀತಿ ಆಯೋಗಕ್ಕೆ ಮಮತಾ ಹೋಗಿ ವಾಕ್ ಔಟ್ ಮಾಡಿ ಬಂದಿದ್ದಾರೆ. ನಾವು ಹೋಗಿ ವಾಕ್ ಔಟ್ ಮಾಡಬೇಕಿತ್ತಾ? ರಾಜ್ಯ-ಕೇಂದ್ರದ ನಡುವಿನ ಸಂಬಂಧ ಚೆನ್ನಾಗಿರಬೇಕು. ಅದಕ್ಕೆ ರಾಜ್ಯವನ್ನು ಚೆನ್ನಾಗಿ ನಡೆಸಿಕೊಳ್ಳಬೇಕಲ್ವಾ ಎಂದರು.

ಬೆಂಗಳೂರಿನಲ್ಲಿ ನಾಯಿ ಮಾಂಸ ದಂಧೆ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ರೈಲ್ವೆ ನಿಲ್ದಾಣದಲ್ಲಿ ಗಲಾಟೆ ಆಗಿದೆ. ಇದಾದ ಮೇಲೆ ಆರೋಗ್ಯ ಇಲಾಖೆಯವರು, ಪೊಲೀಸರು ಸ್ಯಾಂಪಲ್‌ ಅನ್ನು ಲ್ಯಾಬ್‌ಗೆ ಕಳುಹಿಸಿದ್ದರು. ವರದಿಯಲ್ಲಿ ಮೇಕೆ ಮಾಂಸ ಎಂದು ಬಂದಿದೆ. ಸುಳ್ಳು ಆರೋಪ ಮಾಡಿದ್ದ ಪುನೀತ್ ಕೆರೆಹಳ್ಳಿ ಮತ್ತು ತಂಡದ ಮೇಲೆ ಕ್ರಮ ತೆಗೆದುಕೊಂಡಿದ್ದೇವೆ. ಗೊಂದಲ ಸೃಷ್ಟಿ ಮಾಡಬಾರದು ಎಂದು ಕ್ರಮ ಆಗಿದೆ. ಹೊರ ರಾಜ್ಯದಿಂದ ಮಾಂಸ ತಂದು ಮಾರೋದು ಹೊಸದಲ್ಲ, ಜನರಿಗೆ ಗೊಂದಲ ಬೇಡ, ಬಂದಿದ್ದು ಮೇಕೆ ಮಾಂಸ ಎಂದು ಸ್ಪಷ್ಟನೆ ನೀಡಿದರು.

Continue Reading
Advertisement
signal free corridor
ಪ್ರಮುಖ ಸುದ್ದಿ43 seconds ago

Signal-Free Corridor: ಬೆಂಗಳೂರಿಗೆ 17 ಸಿಗ್ನಲ್ ಮುಕ್ತ ಕಾರಿಡಾರ್‌; ಯಾವ ಮಾರ್ಗಗಳಲ್ಲಿ ನೋಡಿ

karnataka rain
ಮಳೆ13 mins ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tharun Sudhir and Sonal modeled by eco-friendly invitations
ಸ್ಯಾಂಡಲ್ ವುಡ್16 mins ago

Tharun Sudhir: ಪರಿಸರ ಸ್ನೇಹಿ ಇನ್ವಿಟೇಷನ್ ಮೂಲಕ ಮಾದರಿಯಾದ ಸೋನಾಲ್ ಮತ್ತು ತರುಣ್!

Ranbir Kapoor
ದೇಶ23 mins ago

Ranbir Kapoor: ಮೋದಿಯದ್ದು ‘ಆಯಸ್ಕಾಂತದಂಥ ವ್ಯಕ್ತಿತ್ವ’ ಎಂದ ರಣಬೀರ್‌ ಕಪೂರ್;‌ ಕನ್ನಡಿಗನಿಗೆ ನಟ ಹೇಳಿದ ಕತೆ ಏನು?

Viral News
ವೈರಲ್ ನ್ಯೂಸ್35 mins ago

Viral News: ಮನೆಯೊಳಗೆ ವಿಚಿತ್ರ ವಾಸನೆ, ಇಡೀ ಕುಟುಂಬ ಅಸ್ವಸ್ಥ; ರಹಸ್ಯ ಕೆಮೆರಾದಲ್ಲಿತ್ತು ಶಾಕಿಂಗ್‌ ದೃಶ್ಯ!

Actor Dhanush Shares FIRST Post After Speech
ಕಾಲಿವುಡ್52 mins ago

Actor Dhanush: ಮನೆ ಬಗ್ಗೆ ಮಾತಾಡಿ ಸಿಕ್ಕಾಪಟ್ಟೆ ಟ್ರೋಲ್ ಆದ ಬೆನ್ನಲ್ಲೇ ಹೊಸ ಪೋಸ್ಟ್‌ ಹಂಚಿಕೊಂಡ ನಟ ಧನುಷ್‌!

Curry Leaves
ಆರೋಗ್ಯ54 mins ago

Curry Leaves: ಇದರ ಮಹತ್ವ ತಿಳಿದರೆ ನೀವು ಇನ್ನೆಂದೂ ಕರಿ ಬೇವಿನ ಎಲೆಯನ್ನು ಪಕ್ಕಕ್ಕೆ ಎತ್ತಿಡುವುದಿಲ್ಲ!

BPNL Recruitment 2024
ಉದ್ಯೋಗ1 hour ago

BPNL Recruitment 2024: ಭಾರತೀಯ ಪಶುಪಾಲನಾ ನಿಗಮದಲ್ಲಿದೆ 2,250 ಹುದ್ದೆ; 10ನೇ ತರಗತಿ ಪಾಸಾದವರೂ ಅಪ್ಲೈ ಮಾಡಿ

BJP-JDS Padayatra
ಕರ್ನಾಟಕ1 hour ago

BJP-JDS Padayatra: ಬಿಜೆಪಿ-ಜೆಡಿಎಸ್‌ ಪಾದಯಾತ್ರೆಗೆ ಅನುಮತಿ ಕೊಡಲ್ಲ: ಗೃಹ ಸಚಿವ ಪರಮೇಶ್ವರ್‌

Physical Abuse
ದೇಶ1 hour ago

Physical Abuse: ತಂಗಿ ಮೇಲೆ 13 ವರ್ಷದ ಬಾಲಕನಿಂದ ಅತ್ಯಾಚಾರ, ಕೊಲೆ; ಕೇಸ್‌ ಮುಚ್ಚಲು ತಾಯಿಯೇ ಸಾಥ್!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ13 mins ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ20 hours ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ22 hours ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ24 hours ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ1 day ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ2 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ2 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ3 days ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ3 days ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

ಟ್ರೆಂಡಿಂಗ್‌