IND VS NZ | ಲ್ಯಾಥಮ್‌, ವಿಲಿಯಮ್ಸನ್‌ ಬ್ಯಾಟಿಂಗ್‌ ಆರ್ಭಟಕ್ಕೆ ಮಂಕಾದ ಟೀಮ್‌ ಇಂಡಿಯಾ; 7 ವಿಕೆಟ್‌ ಸೋಲು - Vistara News

Latest

IND VS NZ | ಲ್ಯಾಥಮ್‌, ವಿಲಿಯಮ್ಸನ್‌ ಬ್ಯಾಟಿಂಗ್‌ ಆರ್ಭಟಕ್ಕೆ ಮಂಕಾದ ಟೀಮ್‌ ಇಂಡಿಯಾ; 7 ವಿಕೆಟ್‌ ಸೋಲು

ಪ್ರವಾಸಿ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಆತಿಥೇಯ ನ್ಯೂಜಿಲ್ಯಾಂಡ್‌ 7 ವಿಕೆಟ್‌ಗಳಿಂದ ಗೆದ್ದು ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ.

VISTARANEWS.COM


on

Tom Latham
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಆಕ್ಲೆಂಡ್‌: ಕೇನ್‌ ವಿಲಿಯಮ್ಸನ್‌(94*) ಟಾಮ್‌ ಲ್ಯಾಥಮ್‌(145*) ಅವರ ಅಜೇಯ ಬ್ಯಾಟಿಂಗ್‌ ಸಾಹಸದಿಂದ ಭಾರತ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌ ತಂಡ 7 ವಿಕೆಟ್‌ ಗೆಲುವು ಸಾಧಿಸಿದೆ. ಕಿವೀಸ್‌ ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮನ್ನಡೆ ಕಾಯ್ದುಕೊಂಡಿದೆ.

ಆಕ್ಲೆಂಡ್​ನ ಈಡನ್​ ಪಾರ್ಕ್​ನಲ್ಲಿ ಶುಕ್ರವಾರ ನಡೆದ ಈ ಮುಖಾಮುಖಿಯಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಭಾರತ ನಿಗದಿತ 50 ಓವರ್​ಗಳಲ್ಲಿ 7 ವಿಕೆಟ್​ ನಷ್ಟಕ್ಕೆ 306 ರನ್​ ಗಳಿಸಿತು. ಗುರಿ ಬೆನ್ನಟಿದ ನ್ಯೂಜಿಲ್ಯಾಂಡ್‌ 47.1 ಓವರ್‌ಗಳಲ್ಲಿ ೩ ವಿಕೆಟ್‌ಗೆ 309 ರನ್‌ ಪೇರಿಸಿ ಗೆಲುವಿನ ನಗೆ ಬೀರಿತು.

ಚೇಸಿಂಗ್‌ ವೇಳೆ ನ್ಯೂಜಿಲ್ಯಾಂಡ್‌ ಆರಂಭಿಕ ಆಟಗಾರರಾದ ಫಿನ್‌ ಅಲೆನ್‌(೨೨), ಡೊವೋನ್‌ ಕಾನ್ವೆ (೨೪) ವಿಕೆಟ್‌ ಕಳೆದುಕೊಂಡು ಆಘಾತ ಎದುರಿಸಿತು. ಆದರೆ ತಂಡಕ್ಕೆ ಆಸರೆಯಾದ ನಾಯಕ ಕೇನ್‌ ವಿಲಿಯಮ್ಸನ್‌ ಮತ್ತು ಟಾಮ್‌ ಲ್ಯಾಥಮ್‌ ಭರ್ಜರಿ ಬ್ಯಾಟಿಂಗ್‌ ನಡೆಸಿ ತಂಡವನ್ನು ಗೆಲುವಿನಲ್ಲಿ ದಡ ಸೇರಿಸುವಲ್ಲಿ ಯಶಸ್ವಿಯಾದರು. ಲ್ಯಾಥಮ್‌ 145 ರನ್‌ ಗಳಿಸಿದರೆ, ವಿಲಿಯಮ್ಸನ್‌ 94 ರನ್‌ ಗಳಿಸಿ 6 ರನ್‌ ಅಂತರದಲ್ಲಿ ಶತಕ ತಪ್ಪಿಸಿಕೊಂಡರು. ಈ ಜೋಡಿ ಅಜೇಯ ಜತೆಯಾಟ ನಡೆಸಿತು.

ಇದಕ್ಕೂ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ಪರ ನಾಯಕ ಶಿಖರ್​ ಧವನ್(72)​, ಶುಭಮನ್​ ಗಿಲ್(50)​ ಮತ್ತು ಶ್ರೇಯಸ್‌​ ಅಯ್ಯರ್(80)​ ಪ್ರಚಂಡ ಅರ್ಧಶತಕದ ಬ್ಯಾಟಿಂಗ್​ ನಡೆಸಿ ಮಿಂಚಿದ್ದರು. ಆದರೆ ಕಿವೀಸ್‌ ಗೆಲುವಿನ ಆರ್ಭಟದ ಮುಂದೆ ಇವರ ಈ ಇನಿಂಗ್ಸ್‌ ವ್ಯರ್ಥವಾಯಿತು.

​ಭಾರತಕ್ಕೆ ಉತ್ತಮ ಆರಂಭ

ಹಂಗಾಮಿ ನಾಯಕ ಶಿಖರ್​ ಧವನ್​ ಮತ್ತು ಯುವ ಆಟಗಾರ ಶುಭಮನ್​ ಗಿಲ್​ ಶತಕದ ಜತೆಯಾಟ ನಡೆಸುವ ಮೂಲಕ ಭಾರತಕ್ಕೆ ಉತ್ತಮ ಆರಂಭ ಒದಗಿಸಿದರು. ಆರಂಭದಿಂದಲೇ ತಾಳ್ಮೆಯುತ ಬ್ಯಾಟಿಂಗ್​ ನಡೆಸಿದ ಉಭಯ ಆಟಗಾರರು ಅರ್ಧಶತಕ ಬಾರಿಸಿ ಮಿಂಚಿದರು. ಆದರೆ 65 ಎಸೆತಗಳಲ್ಲಿ 50 ರನ್‌ ಗಳಿಸಿದ ವೇಳೆ ಶುಭಮನ್ ಗಿಲ್‌ ವಿಕೆಟ್‌ ಒಪ್ಪಿಸಿದರು. ಈ ಜೋಡಿ ಮೊದಲ ವಿಕೆಟ್​ಗೆ ಭರ್ಜರಿ 124 ರನ್​ಗಳ ಕೊಡುಗೆ ನೀಡಿತು. ಗಿಲ್​ ಅವರ ವಿಕೆಟ್​ ಪತನದ ಬಳಿಕ ಮುಂದಿನ ಓವರ್​ನಲ್ಲಿ ಧವನ್​ ಅವರ ವಿಕೆಟ್​ ಕೂಡ ಉರುಳಿತು. ಇಲ್ಲಿಗೆ ನ್ಯೂಜಿಲ್ಯಾಂಡ್​ ಕೈ ಮೇಲಾಯಿತು. ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯ ವಿಕೆಟ್​ ಪತನದ ಬಳಿಕ ಭಾರತ ನಾಟಕೀಯ ಕುಸಿತ ಕಂಡಿತು. ರಿಷಭ್​ ಪಂತ್​(15),​ ಸೂರ್ಯಕುಮಾರ್ ಯಾದವ್​ (4) ವಿಕೆಟ್​ ಕಳೆದು ಸಂಕಷ್ಟಕ್ಕೆ ಸಿಲುಕಿತು.​

ಅಯ್ಯರ್​ ಅರ್ಧಶತಕ

ಆರಂಭಿಕ ವಿಕೆಟ್​ ಪತನದ ಬಳಿಕ ಸಂಕಷ್ಟಕ್ಕೆ ಸಿಲುಕಿದ ಭಾರತ ತಂಡಕ್ಕೆ ಶ್ರೇಯಸ್​ ಅಯ್ಯರ್​ ಮತ್ತು ಸಂಜು ಸ್ಯಾಮ್ಸನ್​ ಆಸರೆಯಾದರು. ಅಯ್ಯರ್​ ಕಿವೀಸ್​ ಬೌಲರ್​ಗಳ ಮೇಲೆರಗಿ ಸಿಕ್ಸರ್​ ಮತ್ತು ಫೋರ್​ ಬಾರಿಸುವ ಮೂಲಕ ತಮ್ಮ ಅರ್ಧಶತಕ ಪೂರೈಸಿದರು. ಜತೆಗೆ ತಂಡದ ಮೊತ್ತವನ್ನೂ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಮತ್ತೊಂದು ತುದಿಯಲ್ಲಿ ಸಂಜು ಸ್ಯಾಮ್ಸನ್​ ಕೂಡ ಅಯ್ಯರ್​ಗೆ ಉತ್ತಮ ಸಾಥ್​ ನೀಡಿದರು. ಸಂಜು 36 ರನ್​ ಗಳಿಸಿ ಮಿಲ್ನೆಗೆ ವಿಕೆಟ್​ ಒಪ್ಪಿಸಿದರು. ಅಯ್ಯರ್​ 76 ಎಸೆತ ಎದುರಿಸಿ 80 ರನ್​ ಬಾರಿಸಿದರು. ಈ ಇನಿಂಗ್ಸ್​ ವೇಳೆ ತಲಾ 4 ಫೋರ್​ ಮತ್ತು ಸಿಕ್ಸರ್​ ಸಿಡಿಯಿತು. ಅಂತಿಮವಾಗಿ ವಾಷಿಂಗ್ಟನ್​ ಸುಂದರ್(ಅಜೇಯ​ 37) ಸಿಡಿದು ನಿಂತ ಕಾರಣ ತಂಡ ಬೃಹತ್ ಮೊತ್ತ ಪೇರಿಸುವಲ್ಲಿ ನೆರವಾಯಿತು.​

ಉಮ್ರಾನ್​-ಅರ್ಶ್​ದೀಪ್​ ಪದಾರ್ಪಣೆ

ಭಾರತ ತಂಡದ ಪರ ಯುವ ವೇಗಿಗಳಾದ ಅರ್ಶ್​ದೀಪ್​ ಸಿಂಗ್‌ ಹಾಗೂ ಉಮ್ರಾನ್‌ ಮಲಿಕ್‌ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು. ಮತ್ತೊಂದೆಡೆ ಟಿ20 ಸರಣಿಯಲ್ಲಿ ಅವಕಾಶ ವಂಚಿತ ಸಂಜು ಸ್ಯಾಮ್ಸನ್‌ ಮೊದಲನೇ ಏಕದಿನ ಪಂದ್ಯದಲ್ಲಿ ಅವಕಾಶ ಪಡೆದರು.

ಸ್ಕೋರ್​ ವಿವರ

ಭಾರತ: 50 ಓವರ್​ಗಳಲ್ಲಿ 7 ವಿಕೆಟ್​ಗೆ 306 (ಶಿಖರ್​ ಧವನ್​ 72, ಶುಭಮನ್​ ಗಿಲ್​ 50, ಶ್ರೇಯಸ್​ ಅಯ್ಯರ್ 80 ​, ಲಾಕಿ ಫರ್ಗ್ಯುಸನ್​ 59ಕ್ಕೆ 3).

ನ್ಯೂಜಿಲ್ಯಾಂಡ್‌: 47.1 ಓವರ್‌ಗಳಲ್ಲಿ ೩ ವಿಕೆಟ್‌ಗೆ 309 (ಕೇನ್‌ ವಿಲಿಯಮ್ಸನ್‌ 94*, ಟಾಮ್‌ ಲ್ಯಾಥಮ್‌ 145*)

ಇದನ್ನೂ ಓದಿ | Casteist BCCI | ಬಾಂಗ್ಲಾದೇಶ ಪ್ರವಾಸಕ್ಕೆ ಸೂರ್ಯಕುಮಾರ್​ಗೆ ರೆಸ್ಟ್, ಸಂಜುಗೆ ಕೊಕ್‌,​ ಇದಕ್ಕೆ ಜಾತಿ ಕಾರಣವಂತೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

Election Results 2024 : ಬಾರಿ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ 543 ಸ್ಥಾನಗಳಲ್ಲಿ 15 ಮುಸ್ಲಿಂ ಅಭ್ಯರ್ಥಿಗಳು ಗೆದ್ದಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸೋಲಿಸಿ ಸಂಸತ್​ ಪ್ರವೇಶಿಸಿದ್ದಾರೆ.

VISTARANEWS.COM


on

Election Results 2024
Koo

ಬೆಂಗಳೂರು: ಬಿಜೆಪಿ ಕೇಂದ್ರದಲ್ಲಿ ಸತತ ಮೂರನೇ ಸರ್ಕಾರವನ್ನು ರಚಿಸಲಿದೆ. ನರೇಂದ್ರ ಮೋದಿ ಅವರು ಜೂನ್ 8ಕ್ಕೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂಬುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಲೋಕಸಭೆಯಲ್ಲಿ (Election Results 2024) ಸರಳ ಬಹುಮತಕ್ಕೆ 32 ಸ್ಥಾನಗಳ ಕೊರತೆಯಿದೆ. ಎನ್​ಡಿಎ ಹಾಗೂ ಇಂಡಿ ಒಕ್ಕೂಟದ ನಾಯಕರು ರಾಷ್ಟ್ರ ರಾಜಧಾನಿಯಲ್ಲಿ ಸಭೆ ಸೇರಿದ್ದು ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದಾರೆ. ಏತನ್ಮಧ್ಯೆ, ಈ ಬಾರಿ ಚುನಾವಣಾ ಫಲಿತಾಂಶ ಬದಲಾವಣೆಗೆ ಮುಸ್ಲಿಂ ಮತದಾರರೇ ಕಾರಣ ಎಂಬ ಚರ್ಚೆ ನಡೆಯುತ್ತಿದೆ. ಇಂಡಿ ಒಕ್ಕೂಟ ಅದರಲ್ಲೂ ಕಾಂಗ್ರೆಸ್​ಗೆ ಮುಸ್ಲಿಂ ಮತದಾರರ ಸಾರಾಸಗಟಾಗಿ ಮತ ಹಾಕಿದ್ದಾರೆ ಎನ್ನಲಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಈ ಬಾರಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಸಂಸದರ ಆಯ್ಕೆಯಾಗಿರವ ಪ್ರಮಾಣವೂ ಹೆಚ್ಚಾಗಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿರುವ 543 ಸ್ಥಾನಗಳಲ್ಲಿ 15 ಮುಸ್ಲಿಂ ಅಭ್ಯರ್ಥಿಗಳು ಗೆದ್ದಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಅಧೀರ್ ರಂಜನ್ ಚೌಧರಿ ಅವರನ್ನು ಸೋಲಿಸಿ ಸಂಸತ್​ ಪ್ರವೇಶಿಸಿದ್ದಾರೆ.

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 78 ಮುಸ್ಲಿಂ ಅಭ್ಯರ್ಥಿಗಳು ಕಣದಲ್ಲಿದ್ದರು. ಅವರಲ್ಲಿ 15 ಮಂದಿ ಆಯ್ಕೆಯಾಗಿದ್ದಾರೆ. 2019ರ ಚುನಾವಣೆಯಲ್ಲಿ 115 ಮುಸ್ಲಿಂ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಸಹರಾನ್ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಮಸೂದ್ 64,542 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕೈರಾನಾ ಕ್ಷೇತ್ರದ ಸಮಾಜವಾದಿ ಪಕ್ಷದ ಅಭ್ಯರ್ಥಿ ಇಕ್ರಾ ಚೌಧರಿ ಅವರು ಬಿಜೆಪಿಯ ಪ್ರದೀಪ್ ಕುಮಾರ್ ಅವರನ್ನು 69,116 ಮತಗಳ ಅಂತರದಿಂದ ಸೋಲಿಸಿ ಸಂಸತ್​ ಪ್ರವೇಶಿಸಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಬಿಜೆಪಿಯ ಮಾಧವಿ ಲತಾ ಕೊಂಪೆಲ್ಲಾ ಅವರನ್ನು 3,38,087 ಮತಗಳ ಅಂತರದಿಂದ ಮಣಿಸಿದ್ದಾರೆ.

ಲಡಾಖ್​ನಲ್ಲಿ ಸ್ವತಂತ್ರ ಅಭ್ಯರ್ಥಿ ಮೊಹಮ್ಮದ್ ಹನೀಫಾ 27,862 ಮತಗಳ ಅಂತರದಿಂದ ಗೆಲುವು ಸಾಧಿಸಿದರೆ, ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಕ್ಷೇತ್ರದಲ್ಲಿ ಮತ್ತೊಬ್ಬ ಸ್ವತಂತ್ರ ಅಭ್ಯರ್ಥಿ ಅಬ್ದುಲ್ ರಶೀದ್ ಶೇಖ್ 4.7 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮೊಹಿಬುಲ್ಲಾ 4,81,503 ಮತಗಳನ್ನು ಪಡೆಯುವ ಮೂಲಕ ರಾಂಪುರ ಸ್ಥಾನವನ್ನು ಗೆದ್ದರೆ, ಸಂಭಾಲ್​​ನಲ್ಲಿ ಜಿಯಾ ಉರ್ ರೆಹಮಾನ್ 1.2 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್-ರಾಜೌರಿ ಕ್ಷೇತ್ರದಲ್ಲಿ ನ್ಯಾಷನಲ್ ಕಾನ್ಫರೆನ್ಸ್​ನ ಮಿಯಾನ್ ಅಲ್ತಾಫ್ ಅಹ್ಮದ್ ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ವಿರುದ್ಧ 2,81,794 ಮತಗಳಿಂದ ಗೆದ್ದಿದ್ದಾರೆ. ಶ್ರೀನಗರದಲ್ಲಿ ಎನ್ಸಿ ಅಭ್ಯರ್ಥಿ ಅಗಾ ಸೈಯದ್ ರುಹುಲ್ಲಾ ಮೆಹ್ದಿ 3,56,866 ಮತಗಳನ್ನು ಪಡೆದಿದ್ದಾರೆ.

ಇದನ್ನೂ ಓದಿ:Lakshmi Hebbalkar : ಉಡುಪಿ ಜಿಲ್ಲಾ ಕಾಂಗ್ರೆಸ್​​ ಉಸ್ತುವಾರಿ ಲಕ್ಷ್ಮೀ ಹೆಬ್ಬಾಳ್ಕರ್​ಗೆ ‘ಗೋ ಬ್ಯಾಕ್​’ ಬಿಸಿ

ಪಶ್ಚಿಮ ಬಂಗಾಳದ ಬಹರಾಂಪುರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಯೂಸುಫ್ ಪಠಾಣ್ ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮತ್ತು ಆರು ಬಾರಿಯ ಸಂಸದ ಅಧೀರ್ ರಂಜನ್ ಚೌಧರಿ ಅವರನ್ನು 85,022 ಮತಗಳಿಂದ ಸೋಲಿಸಿದ್ದಾರೆ.

ಫಲಿತಾಂಶ ಏನಾಯಿತು?

ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟವು 231 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಬಿಜೆಪಿ ನೇತೃತ್ವದ ಎನ್ಡಿಎ 295 ಸ್ಥಾನಗಳನ್ನು ಗೆದ್ದಿದೆ. ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ಕಾರ ರಚಿಸಲು ಮಿತ್ರಪಕ್ಷಗಳ ಬೆಂಬಲವನ್ನು ಅವಲಂಬಿಸಬೇಕಾಗುತ್ತದೆ.

2014 ಮತ್ತು 2019 ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಪಿ 282 ಮತ್ತು 303 ಸ್ಥಾನಗಳನ್ನು ಗೆದ್ದಿತ್ತು. ಸರ್ಕಾರ ರಚಿಸಲು ಬೆಂಬಲವನ್ನು ಒಟ್ಟುಗೂಡಿಸುವ ಭರವಸೆಯಲ್ಲಿ ಭಾರತ ಬಣವು ಎನ್ಡಿಎ ಮಿತ್ರಪಕ್ಷಗಳೊಂದಿಗೆ ಮಾತುಕತೆಗಳನ್ನು ಕಳುಹಿಸುತ್ತಿದೆ ಎಂದು ವರದಿಯಾಗಿದೆ.

Continue Reading

ಪ್ರಮುಖ ಸುದ್ದಿ

Prajwal Revanna case : ಪ್ರಜ್ವಲ್​ನ ಪುರುಷತ್ವ ಸಾಮರ್ಥ್ಯ ಪರೀಕ್ಷೆ ನಡೆಸಲು ಕೋರ್ಟ್​ ಸಮ್ಮತಿ

Prajwal Revanna case : ಜ್ವಲ್ ಅವರ ಎಸ್​ಐಟಿ ಕಸ್ಟಡಿ ಅವಧಿ ಶುಕ್ರವಾರಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಒಂದು ದಿನ ಮುಂಚಿತವಾಗಿ ಅಧಿಕಾರಿಗಳು ಪರಿಕ್ಷೆ ನಡೆಸಿದ್ದಾರೆ. ಇದೇ ವೇಳೆ ಹಾಸನ ಹಾಗು ಬಸವನಗುಡಿಯ ಮನೆಗೆ ಕರೆದೊಯ್ದು ಸ್ಪಾಟ್ ಮಹಜರ್ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

VISTARANEWS.COM


on

Prajwal Revanna
Koo

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna case ) ಅತ್ಯಾಚಾರ ಮಾಡಲು ಸಮರ್ಥರೇ ಅಥವಾ ಇಲ್ಲವೇ ಎಂಬುದನ್ನು ತನಿಖೆಯಲ್ಲಿ ಪತ್ತೆ ಹಚ್ಚಲು ಪ್ರಮುಖ ವೈದ್ಯಕೀಯ ವಿಧಾನವಾಗಿರುವ ಪುರುಷತ್ವ ಪರೀಕ್ಷೆಗೆ ಕೋರ್ಟ್​ ಒಪ್ಪಿಗೆ ನೀಡಿದೆ. ಹೀಗಾಗಿ ಎಸ್​ಐಟಿ ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.

ಸಾವಿರಾರು ಹೆಣ್ಣು ಮಕ್ಕಳನ್ನು ವಯಸ್ಸಿನ ಭೇದವಿಲ್ಲದೇ ಅತ್ಯಾಚಾರ ಮಾಡಿರುವುದಲ್ಲದೇ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್​ಐಟಿ ಪೊಲೀಸರು ಮೇ 31ರಂದು ರಾತ್ರಿ ಬಂಧಿಸಿದ್ದರು. ಆದರೆ ಚುನಾವಣಾ ಫಲಿತಾಂಶ ಬರುವ ತನಕ ಕಾದಿದ್ದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.

ಪೊಲೀಸರ ವಶದಲ್ಲಿದ್ದ ಪ್ರಜ್ವಲ್ ರೇವಣ್ಣ ತಾನು ಸಂಸದ ಎಂಬ ಅಹಂನಲ್ಲಿ ತನಿಖೆಗೆ ಅಸಹಾಕಾರ ನೀಡುತ್ತಿದ್ದ. ಹೀಗಾಗಿ ತನಿಖೆಯಲ್ಲಿ ಹೆಚ್ಚಿನ ಪ್ರಗತಿ ನಡೆಯುತ್ತಿರಲಿಲ್ಲ. ಮಂಗಳವಾರ ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಪ್ರಜ್ವಲ್​ಗೆ ಹಾಸನದ ಜನರು ತಕ್ಕ ಶಿಕ್ಷೆ ಕೊಟ್ಟಿದ್ದಾರೆ. ಅದೇ ರೀತಿ ಪ್ರಜ್ವಲ್ ಅವರ ಎಸ್​ಐಟಿ ಕಸ್ಟಡಿ ಅವಧಿ ಶುಕ್ರವಾರಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಒಂದು ದಿನ ಮುಂಚಿತವಾಗಿ ಅಧಿಕಾರಿಗಳು ಪರಿಕ್ಷೆ ನಡೆಸಿದ್ದಾರೆ. ಇದೇ ವೇಳೆ ಹಾಸನ ಹಾಗು ಬಸವನಗುಡಿಯ ಮನೆಗೆ ಕರೆದೊಯ್ದು ಸ್ಪಾಟ್ ಮಹಜರ್ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: Valmiki Corporation Scam : ವಾಲ್ಮಿಕಿ ನಿಗಮ ಹಗರಣ; ಆಂಧ್ರದ ಫಸ್ಟ್​​ ಬ್ಯಾಂಕ್ ಅಧ್ಯಕ್ಷ . ಸಚಿವ ನಾಗೇಂದ್ರ ಆಪ್ತರ ಬಂಧನ

ಹಾಗಿದ್ರೆ ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

ಇದು ಲೈಂಗಿಕ ಸಾಮರ್ಥ್ಯ ಸಾಬೀತು ಪಡಿಸುವ ಪರೀಕ್ಷೆ. ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ದೂರುಗಳು ಕೇಳಿ ಬಂದಾಗ ಆರೋಪಿ ಪುರುಷತ್ವ ಪರೀಕ್ಷೆ ನಡೆಸಲಾಗುತ್ತೆ. ಪ್ರಾಥಮಿಕ ಹಂತದಲ್ಲಿ ಮೂರು ರೀತಿ ಪರೀಕ್ಷೆ ನಡೆಸಲಾಗುತ್ತದೆ.

1) ಪುರುಷರ ಜನನಾಂಗ ನಿಮಿರುವಿಕೆ, ವೀರ್ಯ ವಿಶ್ಲೇಷಣೆ, ಶಿಶ್ನಕ್ಕೆ ಪೂರೈಕೆಯಾಗುವ ರಕ್ತನಾಳಗಳ ಪರೀಕ್ಷೆಯನ್ನು ಮುಖ್ಯವಾಗಿ ನಡೆಸಲಾಗುತ್ತದೆ. ಆಂಡ್ರೋಲಜಿಸ್ಟ್ ಸೇರಿದಂತೆ ನಾಲ್ವರು ತಜ್ಞ ವೈದ್ಯರ ತಂಡ ಈ ಪರೀಕ್ಷೆ ನಡೆಸುತ್ತಾರೆ.

2) ನಂತರ ವೀರ್ಯ ವಿಶ್ಲೇಷಣೆ (A Semen Analysis) ನಡೆಯುತ್ತದೆ. ಪುರುಷನ ವೀರ್ಯ ಮತ್ತು ವೀರ್ಯಾಣುಗಳ ಗುಣಲಕ್ಷಣಗಳ ಮೌಲ್ಯಮಾಪನ ನಡೆಸುವ ಪರೀಕ್ಷೆ ಇದು.

3) ಡಾಪ್ಲರ್ ಅಲ್ಟ್ರಾಸೌಂಡ್ ಪರೀಕ್ಷೆ (Penile Doppler Ultrasound) ನಡೆಯಲಿದೆ. ಆರೋಪಿಯ ಖಾಸಗಿ ಅಂಗಕ್ಕೆ ಸರಿಯಾಗಿ ರಕ್ತ ಪೂರೈಕೆಯಾಗುತ್ತಿದೆಯೆ? ಕ್ತದ ಪ್ರಮಾಣ ಎಷ್ಟಿದೆ? ಎಂಬುದು ತಿಳಿಯುವ ಟೆಸ್ಟ್. ವಯಾಗ್ರಾದಂಥ ಮೆಡಿಸಿನ್ ಸೇವಿಸಿದರೂ ಕೂಡ ಈ ಪರೀಕ್ಷೆಯಲ್ಲಿ ಗೊತ್ತಾಗುತ್ತೆ.

4) Nocturnal Penile Tumescence (NPT) Test. ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುವ ಪರೀಕ್ಷೆ ಇದು. ಆರೋಪಿಯ ಖಾಸಗಿ ಅಂಗ ರಾತ್ರಿ ನಿದ್ರೆಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತೆ ಎಂದು ಎನ್‌ಪಿಟಿ ಪರೀಕ್ಷೆಯಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಈ ಪರೀಕ್ಷೆ ಸಾಮಾನ್ಯವಾಗಿ ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುತ್ತದೆ. ಆರೋಪಿಯ ಅರಿವಿಗೆ ಬಾರದಂತೆ ನಡೆಯುವ ಪರೀಕ್ಷೆ ಇದು. ಈ ಮೂರು ಟೆಸ್ಟ್ ಮೂಲಕ ಆರೋಪಿಯ ಪುರುಷತ್ವ ಪರೀಕ್ಷೆ ನಡೆಯುತ್ತವೆ. ಈ ಟೆಸ್ಟ್‌ನ ರಿಪೋರ್ಟ್‌ಗಳು ಅತ್ಯಾಚಾರ ಪ್ರಕರಣದಲ್ಲಿ ಬಹಳ ಮುಖ್ಯವಾಗುತ್ತವೆ.

Continue Reading

ಪ್ರಮುಖ ಸುದ್ದಿ

Valmiki Corporation Scam : ವಾಲ್ಮಿಕಿ ನಿಗಮ ಹಗರಣ; ಆಂಧ್ರದ ಫಸ್ಟ್​​ ಬ್ಯಾಂಕ್ ಅಧ್ಯಕ್ಷ . ಸಚಿವ ನಾಗೇಂದ್ರ ಆಪ್ತರ ಬಂಧನ

Valmiki Corporation Scam : ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿಯ ಅಧಿಕೃತ ಬ್ಯಾಂಕ್ ಖಾತೆಯಿಂದ ಆಂಧ್ರದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿತ್ತು. ಇದು ಅಕ್ರಮದ ಹಣ ಎಂಬ ಆರೋಪದ ಹಿನ್ನೆಲೆಯಲ್ಲಿ ಆಂಧ್ರದ ಫಸ್ಟ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಲಾಗಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮ (Valmiki development corporation) ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ (Officer self Harming) ಪ್ರಕರಣದ (Valmiki corporation Scam) ತನಿಖೆಯನ್ನು ಕೈಗೆತ್ತಿಕೊಂಡಿರುವ ಎಸ್ಐಟಿ (SIT) ಅಧಿಕಾರಿಗಳು ಹಣ ವರ್ಗಾವಣೆಯಾಗಿದೆ ಎನ್ನಲಾದ ಆಂಧ್ರಪ್ರದೇಶ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಿದ್ದಾರೆ. ಇದೇ ವೇಳೆ ಸಚಿವ ನಾಗೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಾಗರಾಜ್ ನೆಕ್ಕಂಟಿ ಮತ್ತು ನಾಗೆಶ್ ಎಂಬುವನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ.

ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿಯ ಅಧಿಕೃತ ಬ್ಯಾಂಕ್ ಖಾತೆಯಿಂದ ಆಂಧ್ರದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿತ್ತು. ಇದು ಅಕ್ರಮದ ಹಣ ಎಂಬ ಆರೋಪದ ಹಿನ್ನೆಲೆಯಲ್ಲಿ ಆಂಧ್ರದ ಫಸ್ಟ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಲಾಗಿದೆ. ಈ ಹಣ ನಾಗರಾಜ್ ನೆಕ್ಕಂಟಿ ಮತ್ತು ನಾಗೇಶ ಅಣತಿ ಮೇರೆಗೆ ಹಣ ವರ್ಗಾವಣೆಯಾಗಿರುವ ಅನುಮಾನ ಮೇರೆಗೆ ಅವರನ್ನೂ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Suicide Attempt : ಕಾಮಗಾರಿ ನಡೆಸಿದ 9 ಕೋಟಿ ರೂಪಾಯಿ ಬಿಲ್​ಬಾಕಿ , ಗುತ್ತಿಗೆದಾರನಿಂದ ಆತ್ಮಹತ್ಯೆ ಯತ್ನ

ಚುನಾವಣಾ ಹಿನ್ನೆಲೆಯಲ್ಲಿ ಕರ್ನಾಟಕದ ಬೊಕ್ಕಸದಿಂದ ಆಂಧ್ರ ಹಣ ವರ್ಗಾವಣೆಯಾಗಿತ್ತಾ ಎಂಬ ಅನುಮಾನ ಮೂಡಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ. ಸದ್ಯ ಅದೇ ಆಯಾಮದಲ್ಲಿ ಎಸ್ ಐಟಿ ತನಿಖೆ ನಡೆಸುತ್ತಿದೆ.

ವಾಲ್ಮೀಕಿ ನಿಗಮ ಹಗರಣ; ವರ್ಗಾವಣೆಯಾದ ಹಣ ಹಿಂಪಡೆಯಲು ಸರ್ಕಾರ ಕಸರತ್ತು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ (Valmiki Corporation Scam) ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನಿಗಮದಿಂದ ಅಕ್ರಮವಾಗಿ ವರ್ಗಾವಣೆ ಆಗಿದೆ ಎನ್ನಲಾದ 87 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಲು ಕಸರತ್ತು ನಡೆಸುತ್ತಿದೆ. ಮೊದಲ ಕಂತಿನಲ್ಲಿ 26 ಕೋಟಿ ವಾಪಸ್ ಆಗಿದೆ ಎಂದು ಸಚಿವ ಬಿ ನಾಗೇಂದ್ರ ಹೇಳಿದ್ದರು. ಎರಡನೇ ಕಂತಿನಲ್ಲಿ 42 ಕೋಟಿ ವಾಪಸ್ ಆಗಿದೆ ಎಂದು ಸಚಿವರ ಆಪ್ತ ವಲಯದ ಅಧಿಕಾರಿಗಳು ತಿಳಿಸಿದ್ದರು. ಆದರೆ, ಇದೀಗ ಇಷ್ಟು ಮೊತ್ತ ನಿಗಮಕ್ಕೆ ವಾಪಸ್‌ ಆಗಿಯೇ ಇಲ್ಲ ಎನ್ನಲಾಗುತ್ತಿದೆ.

87 ಕೋಟಿ ಅಕ್ರಮದಲ್ಲಿ ಸರ್ಕಾರಕ್ಕೆ ವಾಪಸ್ ಆಗಿದ್ದು ಕೇವಲ 5 ಕೋಟಿ. ಈವರೆಗೂ ಕೇವಲ 5 ಕೋಟಿ ಮಾತ್ರ ವಾಪಸ್ ಆಗಿದೆ ಎಂಬ ಮಾಹಿತಿ ಸರ್ಕಾರ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ನಿರೀಕ್ಷಿತ ಹಣ ವಾಪಸ್ ಆಗದೆ, ಸಚಿವರು 26 ಕೋಟಿ ಬಂದಿದೆ ಎಂದಿದ್ದು ಯಾಕೆ ಎಂಬ ಅನುಮಾನಗಳು ಮೂಡಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿಯಿಂದ ಸರ್ಕಾರಕ್ಕೆ ಗಡುವು ನೀಡಿದ್ದು, ಹೀಗಾಗಿ ಸಚಿವ ತಲೆದಂಡ ಬಹುತೇಕ ಫಿಕ್ಸ್ ಎನ್ನಲಾಗಿದೆ.

ಸಚಿವ ಬಿ‌ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿ ಪಟ್ಟು

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ಸಚಿವ ಬಿ‌.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟುಹಿಡಿದಿದೆ. ಸಚಿವರ ರಾಜೀನಾಮೆ ಪಡೆಯಲು ಜೂನ್ 6ರವರೆಗೂ ಗಡುವು ನೀಡಿರುವ ಬಿಜೆಪಿ, ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ರಾಜ್ಯವ್ಯಾಪಿ ಬೃಹತ್‌ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಮತ್ತೊಂದೆಡೆ ಬಿಜೆಪಿ ಕಾಲದ ಹಗರಣಗಳನ್ನು ಪ್ರಸ್ತಾಪ ಮಾಡಲು ನಾಗೇಂದ್ರ ಮುಂದಾಗಿದ್ದಾರೆ. ಪ್ರಕರಣದಲ್ಲಿ ತನಿಖೆಗೆ ಸಿಬಿಐ ಎಂಟ್ರಿ ತಪ್ಪಿಸಲು ಹೊಸ ದಾಳ ಪ್ರಯೋಗಕ್ಕೆ ನಾಗೇಂದ್ರ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಬಿಜೆಪಿ ಕಾಲದಲ್ಲಿ ಮಂಡ್ಯ, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಹಗರಣ ಕುರಿತು ಪ್ರಸ್ತಾಪ ಮಾಡಲು ಸಚಿವ ಪ್ಲ್ಯಾನ್‌ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

Chikkodi Lok Sabha Result : ಕಾಂಗ್ರೆಸ್​ ವಿಜಯೋತ್ಸವದಲ್ಲಿ ಪಾಕಿಸ್ತಾನ ಪರ ಜೈಕಾರ ಕೂಗಿದ ಜಮೀರನ ಬಂಧನ

Chikkodi Lok Sabha Result :ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ವಿಡಿಯೊ ಹಾಗೂ ಸ್ಥಳದಲ್ಲಿ ಹಾಜರಿದ್ದವರ ಸಾಕ್ಷಿಯನ್ನು ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆ ಮಾಡುತ್ತಿದ್ದು ಪಾಕಿಸ್ತಾನಕ್ಕೆ ಜೈಕಾರ ಹಾಕಲು ಕಾರಣವೇನು ಎಂಬುದನ್ನು ವಿಚಾರಿಸುತ್ತಿದ್ದಾರೆ.

VISTARANEWS.COM


on

Chikkodi Lok Sabha Result:
Koo

ಚಿಕ್ಕೋಡಿ: ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ (Chikkodi Lok Sabha Result : ) ಕಾಂಗ್ರೆಸ್​​ನ ಪ್ರಿಯಾಂಕ ಜಾರಕಿಹೊಳಿ ಗೆದ್ದ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುವಾಗ ಪಾಕಿಸ್ತಾನ ಪರ ಜೈಕಾರ ಕೂಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಜಮೀರ್​ ನಾಯಕವಾಡಿ ಎಂದು ಗುರುತಿಸಲಾಗಿದೆ. 25 ವರ್ಷದ ಆತ ಹುಂಬತನದಿಂದ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಪಾಕಿಸ್ತಾನಕ್ಕೆ ಜೈಕಾರ ಕೂಗಿದ್ದ. ಆ ತಕ್ಷಣವೇ ವಿಷಯ ಬಹಿರಂಗಗೊಂಡು ಆಕ್ರೋಶ ವ್ಯಕ್ತವಾಗಿತ್ತು.

ಪಾಕಿಸ್ತಾನ ಪರ ಘೋಷಣೆ ಕೂಗಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ವಿಡಿಯೊ ಹಾಗೂ ಸ್ಥಳದಲ್ಲಿ ಹಾಜರಿದ್ದವರ ಸಾಕ್ಷಿಯನ್ನು ಪಡೆದು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ಹೆಚ್ಚಿನ ವಿಚಾರಣೆ ಮಾಡುತ್ತಿದ್ದು ಪಾಕಿಸ್ತಾನಕ್ಕೆ ಜೈಕಾರ ಹಾಕಲು ಕಾರಣವೇನು ಎಂಬುದನ್ನು ವಿಚಾರಿಸುತ್ತಿದ್ದಾರೆ.

ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿ’ಹೋಳಿ’; ಜೊಲ್ಲೆಗೆ ಸೋಲು

ರಾಜ್ಯದ ಗಮನ ಸೆಳೆದಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ (Chikkodi Election Result 2024) ಬಾರಿಸಿದೆ. ಬಿಜೆಪಿಯ ಅಣ್ಣಾಸಾಹೇಬ್‌ ಜೊಲ್ಲೆ (Annasaheb Jolle) ಅವರ ವಿರುದ್ಧ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ (Priyanka Jarkiholi) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಯುವ ನಾಯಕಿ ಪ್ರಯಾಂಕಾ ಜಾರಕಿಹೊಳಿ ಅವರು ಬಿಜೆಪಿಯ ಭದ್ರಕೋಟೆಯನ್ನು ಭೇದಿಸುವ ಜತೆಗೆ ರಾಜ್ಯದ ಗಮನ ಸೆಳೆದಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಅವರು 96,253 ಮತಗಳ ಅಂತರದಿಂದ ಜಯಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ 6,80,179 ಮತ ಗಳಿಸಿದರೆ, ಬಿಜೆಪಿ ಅಭ್ಯರ್ಥಿ 5,83,926 ಮತಗಳನ್ನು ಪಡೆದರು.

ಹಾಲಿ ಸಂಸದರೂ ಆಗಿರುವ ಅಣ್ಣಾ ಸಾಹೇಬ್‌ ಜೊಲ್ಲೆ ಅವರಿಗೆ ಟಿಕೆಟ್‌ ತಪ್ಪಿಸಿ, ತಾವು ಟಿಕೆಟ್‌ ಗಿಟ್ಟಿಸಿಕೊಳ್ಳಲು ರಮೇಶ್‌ ಕತ್ತಿ ಅವರು ತಂತ್ರ ಹೆಣೆದರೂ ಅದು ಸಫಲವಾಗಿಲ್ಲ. ಬಳಿಕ ರಮೇಶ್‌ ಕತ್ತಿ ಅವರು ಕಾಂಗ್ರೆಸ್‌ ಸೇರುತ್ತಾರೆ ಎಂಬ ಮಾತುಗಳು ಕೇಳಿಬಂದರೂ, ಅದು ಸಫಲವಾಗಲಿಲ್ಲ. ಅಷ್ಟರಮಟ್ಟಿಗೆ, ಅಣ್ಣಾಸಾಹೇಬ್‌ ಜೊಲ್ಲೆ ಅವರು ಭಿನ್ನಮತವನ್ನು ತಡೆದಿದ್ದು, ಮೋದಿ ಅವರ ಅಲೆ, ಕ್ಷೇತ್ರಕ್ಕೆ ಸಿಕ್ಕ ಯೋಜನೆಗಳೇ ಅವರಿಗೆ ಸಕಾರಾತ್ಮಕವಾಗಲಿವೆ ಎಂದು ರಾಜಕೀಯ ತಜ್ಞರು ಹೇಳುತ್ತಿದ್ದರು. ಅಣ್ಣಾ ಸಾಹೇಬ್‌ ಜೊಲ್ಲೆ ಅವರ ಪತ್ನಿ ಶಶಿಕಲಾ ಜೊಲ್ಲೆ ಅವರು ಶಾಸಕಿ ಆಗಿರುವ ಕಾರಣ ಅವರ ಪ್ರಾಬಲ್ಯ ಜಾಸ್ತಿ ಇತ್ತು. ಇದೆಲ್ಲವನ್ನು ಪ್ರಿಯಾಂಕಾ ಜಾರಕಿಹೊಳಿ ಅವರು ಹಿಮ್ಮೆಟ್ಟಿ ನಿಂತಿದ್ದಾರೆ.

ಇದನ್ನೂ ಓದಿ: Chikkaballapur News : ಶಾಸಕ ಪ್ರದೀಪ್ ಈಶ್ವರ್​ ನಿವಾಸದ ಮೇಲೆ ಕಲ್ಲು ತೂರಾಟ, ಗಾಜು ಪುಡಿಪುಡಿ

ಎಂಬಿಎ ಪದವೀಧರೆ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಮೊದಲ ಬಾರಿಗೆ ಸ್ಪರ್ಧಿಸಿದ್ದರೂ ಅಪ್ಪ ಸತೀಶ್‌ ಜಾರಕಿಹೊಳಿ ಅವರ ರಾಜಕೀಯ ಅನುಭವವು ಜತೆಗಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಅವರು ಅಪ್ಪನ ಗೆಲುವಾಗಿ ಓಡಾಟ ನಡೆಸಿದ್ದರು. ಇನ್ನು, ಚಿಕ್ಕೋಡಿಯಲ್ಲಿ ಲಿಂಗಾಯತ ಸಮುದಾದಯವರ ಮತಗಳೇ ನಿರ್ಣಾಯಕವಾಗಿದ್ದವು. ಸುಮಾರು 4.10 ಲಕ್ಷ ಲಿಂಗಾಯತ ಮತಗಳಿದ್ದು, ಪರಿಶಿಷ್ಟ ಜಾತಿ 1.65 ಲಕ್ಷ, ಪರಿಶಿಷ್ಟ ಪಂಗಡ 9೦, ಮುಸ್ಲಿಮರ 1.80 ಲಕ್ಷ ಮತಗಳು ಕೂಡ ನಿರ್ಣಾಯಕವಾಗಿದ್ದವು.

Continue Reading
Advertisement
murder case infosys engineer
ಕ್ರೈಂ29 seconds ago

Murder Case: ಅಪ್ಪ-ಅಮ್ಮನ ಜಗಳ ಬಿಡಿಸಲು ಹೋದ ಇನ್‌ಫೋಸಿಸ್‌ ಎಂಜಿನಿಯರ್ ತಂದೆಯ ಇರಿತಕ್ಕೆ ಬಲಿ

Govt Employees Association
ಕರ್ನಾಟಕ33 mins ago

Govt Employees Association: ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆ ನಡೆಸಲು ಕಾರ್ಯಕಾರಿ ಸಮಿತಿ ತೀರ್ಮಾನ

pm narendra modi resignation
ಪ್ರಮುಖ ಸುದ್ದಿ40 mins ago

PM Narendra Modi: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ

India vs Ireland
ಕ್ರೀಡೆ46 mins ago

India vs Ireland: ಇಂದು ನಡೆಯುವ ಭಾರತ-ಐರ್ಲೆಂಡ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

Uttarkashi Trekking Tragedy
ಪ್ರಮುಖ ಸುದ್ದಿ1 hour ago

Uttarkashi Trekking Tragedy: ಉತ್ತರಕಾಶಿಯಲ್ಲಿ ಪ್ರತಿಕೂಲ ಹವಾಮಾನ; ಚಾರಣಕ್ಕೆ ತೆರಳಿದ್ದ ಕರ್ನಾಟಕದ ನಾಲ್ವರ ಸಾವು

Election Results 2024
Lok Sabha Election 20241 hour ago

Election Results 2024: ಎನ್‌ಡಿಎಗೆ ಬೆಂಬಲ ನೀಡುವುದಾಗಿ ಘೋಷಿಸಿದ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು; ಬಿಜೆಪಿಗೆ ಬಿಗ್‌ ರಿಲೀಫ್‌

Election Results 2024
ಪ್ರಮುಖ ಸುದ್ದಿ2 hours ago

Election Results 2024 : ಫಲಿತಾಂಶ ಬದಲಾಯಿಸಿದ್ದು ಮುಸ್ಲಿಂ ಮತಗಳೇ? ಈ ಬಾರಿ 15 ಮುಸ್ಲಿಂ ಸಂಸದರ ಆಯ್ಕೆ

prajwal revanna case
ಪ್ರಮುಖ ಸುದ್ದಿ2 hours ago

‌Prajwal Revanna Case: ಪ್ರಜ್ವಲ್ ರೇವಣ್ಣ‌ ಮನೆಯಲ್ಲಿ ಪತ್ತೆಯಾಯ್ತು ಸಂಶಯಾಸ್ಪದ ಕಲೆ ಇರುವ ಬೆಡ್‌ಶೀಟ್!

Odisha Assembly election 2024
ದೇಶ2 hours ago

Odisha Assembly Result 2024: ಬಿಜೆಡಿಗೆ ಆಘಾತಕಾರಿ ಸೋಲು; ಒಡಿಶಾ ಸಿಎಂ ರಾಜೀನಾಮೆ

Election results 2024
Lok Sabha Election 20242 hours ago

Election Results 2024: ಮೋದಿ ಪಟ್ಟಾಭಿಷೇಕಕ್ಕೆ ಮೂಹೂರ್ತ ಫಿಕ್ಸ್‌: ಜೂ. 8ರಂದು ಪ್ರಧಾನಿಯಾಗಿ ಪ್ರಮಾಣ ವಚನ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌