Urfi Javed | ರಿಯಾಲಿಟಿ ಶೋದತ್ತ ಮುಖ ಮಾಡಿದ ಉರ್ಫಿ ಜಾವೇದ್‌: ಟ್ರೋಲ್‌ ಆಗಿದ್ಯಾಕೆ? - Vistara News

ಬಾಲಿವುಡ್

Urfi Javed | ರಿಯಾಲಿಟಿ ಶೋದತ್ತ ಮುಖ ಮಾಡಿದ ಉರ್ಫಿ ಜಾವೇದ್‌: ಟ್ರೋಲ್‌ ಆಗಿದ್ಯಾಕೆ?

ಬಾಲಿವುಡ್‌ನ ʻಪಟಾಕಾʼ ಎಂದೇ ಹೆಸರುವಾಸಿಯಾಗಿರುವ ಉರ್ಫಿ (Urfi Javed) ರಿಯಾಲಿಟಿ ಶೋ ಸ್ಪ್ಲಿಟ್ಸ್‌ವಿಲ್ಲಾದಲ್ಲಿ X4 (MTV Splitsvilla X4) ಭಾಗವಹಿಸಿದ್ದಾರೆ.

VISTARANEWS.COM


on

Urfi Javed MTV Splitsvilla X4's
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಉರ್ಫಿ ಜಾವೇದ್‌ (Urfi Javed) ತಮ್ಮ ಉಡುಗೊರೆಗಳಿಂದ ಸಾಕಷ್ಟು ಸುದ್ದಿಯಲ್ಲಿ ಇರುತ್ತಾರೆ. ಇದೀಗ ಮತ್ತೆ ರಿಯಾಲಿಟಿ ಶೋ ಕಡೆ ಮುಖ ಮಾಡಿದ್ದಾರೆ. ಬಾಲಿವುಡ್‌ನ ʻಪಟಾಕಾʼ ಎಂದೇ ಹೆಸರುವಾಸಿಯಾಗಿರುವ ಉರ್ಫಿ ಜಾವೇದ್‌ ಸ್ಪರ್ಧಿಗಳಿಗೆ ಕಠಿಣ ಸ್ಪರ್ಧೆ ಹಾಗೂ ಪೈಪೋಟಿಯನ್ನು ನೀಡಲಿದ್ದಾರೆ. ರಿಯಾಲಿಟಿ ಶೋ ಸ್ಪ್ಲಿಟ್ಸ್‌ವಿಲ್ಲಾದಲ್ಲಿ X4ರಲ್ಲಿ (MTV Splitsvilla X4) ಉರ್ಫಿ ಭಾಗವಹಿಸಿದ್ದಾರೆ. ಇದೀಗ ಈ ವಿಚಾರಕ್ಕೆ ಉರ್ಫಿ ಜಾವೇದ್‌ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಸುದ್ದಿಯಲ್ಲಿದ್ದಾರೆ.

ʻʻಬರು ಬರುತ್ತಿದ್ದಂತೆ ನಾನೇ ಒಂದು ಬಾಂಬ್ ಆಗಿರುವೆ, ನಾನು ಎಲ್ಲಿ ಯಾವಾಗ ಸ್ಫೋಟಗೊಳ್ಳುತ್ತೇನೆ ಎಂಬುದು ನನಗೆ ತಿಳಿದಿಲ್ಲʼʼ ಎಂದು ಶೋನಲ್ಲಿ ಖಡಕ್‌ ಹೇಳಿಕೆ ನೀಡಿದ್ದಾರೆ ಉರ್ಫಿ. ಸ್ಪ್ಲಿಟ್ಸ್‌ವಿಲ್ಲಾದ 14 ನೇ ಸೀಸನ್‌ಗೆ ಉರ್ಫಿ ಜಾವೇದ್‌ ಬಂದಿದ್ದು, ಅಲ್ಲಿಯೂ ತಮ್ಮ ಬಟ್ಟೆಗಳಿಂದ ಸುದ್ದಿ ಆಗುತ್ತಿದ್ದಾರೆ.

ಇದನ್ನೂ ಓದಿ | Urfi Javed | ಮೊಬೈಲ್‌ಗಳಿಂದ ಮಾನ ಮುಚ್ಚಿಕೊಂಡ ಉರ್ಫಿ: ʻಲ್ಯಾಪ್‌ಟಾಪ್‌ ಇನ್ಮುಂದೆ ಸ್ಕರ್ಟ್‌ʼ ಅಂದ್ರು ನೆಟ್ಟಿಗರು!

ಏನಿದು ಸ್ಪ್ಲಿಟ್ಸ್‌ವಿಲ್ಲಾ X4 ?
ಎರಡು ದ್ವೀಪಗಳಲ್ಲಿ (ಗೋವಾದಲ್ಲಿ) ವಾಸಿಸುವ 10 ಹುಡುಗಿಯರು ಹಾಗೂ 10 ಹುಡುಗರು ಬೇರೆ ಬೇರೆ ಮಾದರಿಯ ಸವಾಲುಗಳ ಮೂಲಕ ತಮ್ಮ ಪ್ರೀತಿಯನ್ನು ಕಂಡುಕೊಳ್ಳುತ್ತಾರೆ. ಒಂದು ಜೋಡಿ ಸಿಂಹಾಸನವನ್ನು ಪಡೆದುಕೊಳ್ಳಲಿದ್ದು, ಅವರೇ ಕಾರ್ಯಕ್ರಮದ ಅಂತಿಮ ವಿಜೇತರಾಗುತ್ತಾರೆ. ನವೆಂಬರ್ 12ರಂದು ಆರಂಭಗೊಂಡಿರುವ ಸ್ಪ್ಲಿಟ್ಸ್‌ವಿಲ್ಲಾ X4 ಪ್ರತಿ ಶನಿವಾರ ಮತ್ತು ಭಾನುವಾರ ಸಂಜೆ 7 ಗಂಟೆಗೆ ಪ್ರಸಾರವಾಗುತ್ತಿದೆ.

MTV ಸ್ಪ್ಲಿಟ್ಸ್‌ವಿಲ್ಲಾ X4 ನ ಅಧಿಕೃತ ಇನ್‌ಸ್ಟಾಗ್ರಾಮ್ ಹೈ ಹೀಲ್ಸ್ ಧರಿಸಿ ಉರ್ಫಿ ಜಾವೇದ್ ನಡೆಯುತ್ತಿರುವ ವಿಡಿಯೊವನ್ನು ಪೋಸ್ಟ್ ಮಾಡಿದೆ. ಇದೀಗ ನೆಟ್ಟಿಗರು ಉರ್ಫಿ ಜಾವೇದ್‌ ಅವರನ್ನು ಟ್ರೋಲ್‌ ಮಾಡಿದ್ದಾರೆ. ಕೆಲವರು ʻಉರ್ಫಿ ಜಾವೇದ್‌ ಎಷ್ಟು ಕುಳ್ಳಗಿದ್ದಾಳೆʼ ಎಂದು ಕಮೆಂಟ್ ಮಾಡಿದರೆ ಇನ್ನು ಕೆಲವರು ʻಮೇಕಪ್ ಇಲ್ಲದೆಯೇ ಓಡಾಡುತ್ತಿದ್ದಾರೆʼ ಎಂದು ಹೇಳಿದ್ದಾರೆ.

ಈಗಾಗಲೇ ಉರ್ಫಿ ತುಂಡು ಬಟ್ಟೆಯ ವಿಚಾರಕ್ಕಾಗಿ ಮುಂಬೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದರ ಬೆನ್ನಲ್ಲೇ ರಿಯಾಲಿಟಿ ಶೋ ಮೂಲಕ ಮತ್ತೆ ಸುದ್ದಿಯಾಗುತ್ತಿದ್ದಾರೆ.

ಇದನ್ನೂ ಓದಿ | Urfi Javed | ಜೈಲಿಗೆ ಕಳುಹಿಸಬಲ್ಲೆ: ಹಿಂದೂಸ್ತಾನಿ ಭಾವುಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಉರ್ಫಿ ಜಾವೇದ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Saiyami Kher: ಜರ್ಮನಿಯ ಫೇಮಸ್‌ ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಲಿದ್ದಾರೆ ಖ್ಯಾತ ನಟಿ!

Saiyami Kher: ಐರನ್‌ಮ್ಯಾನ್ ಟ್ರಯಥ್ಲಾನ್ ಬರ್ಲಿನ್‌ಗೆ ಸಮೀಪವಿರುವ ಪಟ್ಟಣವಾದ ಎರ್ಕ್ನರ್‌ನಲ್ಲಿ ನಡೆಯಲಿದೆ. ಭಾಗವಹಿಸುವವರು ಈಜು, ಸೈಕ್ಲಿಂಗ್ ಮತ್ತು ಓಟ ಸೇರಿದಂತೆ ಈವೆಂಟ್‌ಗಳಲ್ಲಿ ಸ್ಪರ್ಧಿಸುತ್ತಾರೆ. ಸಯ್ಯಾಮಿ ಖೇರ್ ಹೊರತುಪಡಿಸಿ, ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಿದ ಏಕೈಕ ಬಾಲಿವುಡ್ ಸೆಲೆಬ್ರಿಟಿ ಮಿಲಿಂದ್ ಸೋಮನ್.

VISTARANEWS.COM


on

Saiyami Kher to participate in Ironman Triathlon in Germany
Koo

ಬೆಂಗಳೂರು: ನಟಿ ಸಯ್ಯಾಮಿ ಖೇರ್ (Saiyami Kher ) ಸೆಪ್ಟೆಂಬರ್ 15ರಂದು ಜರ್ಮನಿಯಲ್ಲಿ ನಡೆಯಲಿರುವ ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಲಿದ್ದಾರೆ ಎಂದು ನಟಿ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡುವ ಮೂಲಕ ಹೇಳಿಕೊಂಡಿದ್ದಾರೆ. ನಟಿ ಈಜು, ಸೈಕ್ಲಿಂಗ್ ಮತ್ತು ಜಿಮ್‌ನಲ್ಲಿ ತರಬೇತಿ ಪಡೆಯುವ ವಿಡಿಯೊ ಇದರಲ್ಲಿದೆ.

ನಟಿ ಪೋಸ್ಟ್‌ನಲ್ಲಿ ʻʻಕೊರೊನಾ ಆದ ಬಳಿಕ ಸಮಯ ಹೇಗೆ ಸಾಗಿತು ಗೊತ್ತಾಗಿಲ್ಲ. ಶೂಟಿಂಗ್‌ ಸೆಟ್‌ನಲ್ಲಿ ಪ್ರತಿದಿನ ಆನಂದಿಸುತ್ತಿದ್ದೆ. ಜೀವನ ರೋಲರ್ ಕೋಸ್ಟರ್ ಆಗಿತ್ತು. ಕಳೆದ ವರ್ಷ ಬೈಕ್ ಅಪಘಾತ ಕೂಡ ಆಯ್ತು. ಎಂಟು ತಿಂಗಳ ಕಾಲ ವ್ಯಾಯಾಮ ಏನೂ ಇಲ್ಲದೆ ಹಾಗೇ ಇದ್ದೆ. ಇದಾದ ಬಳಿಕ , ಟ್ರಯಥ್ಲಾನ್ ಈವೆಂಟ್‌ಗೆ ತರಬೇತಿ ಪಡೆಯುವುದು ಅತ್ಯಂತ ಕಠಿಣವಾಗಿತ್ತು. ಟ್ರಯಥ್ಲಾನ್ ಈವೆಂಟ್‌ಗಾಗಿ ಎರಡು ತಿಂಗಳ ತರಬೇತಿಯನ್ನು ಪಡೆದ ನಂತ ಇಂದು ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗಿಯಾಗಲು ಸಿದ್ಧನಿದ್ದೇನೆʼʼ ಎಂದು ಬರೆದುಕೊಂಡಿದ್ದಾರೆ.

ಐರನ್‌ಮ್ಯಾನ್ ಟ್ರಯಥ್ಲಾನ್ ಬರ್ಲಿನ್‌ಗೆ ಸಮೀಪವಿರುವ ಪಟ್ಟಣವಾದ ಎರ್ಕ್ನರ್‌ನಲ್ಲಿ ನಡೆಯಲಿದೆ. ಭಾಗವಹಿಸುವವರು ಈಜು, ಸೈಕ್ಲಿಂಗ್ ಮತ್ತು ಓಟ ಸೇರಿದಂತೆ ಈವೆಂಟ್‌ಗಳಲ್ಲಿ ಸ್ಪರ್ಧಿಸುತ್ತಾರೆ. ಸಯ್ಯಾಮಿ ಖೇರ್ ಹೊರತುಪಡಿಸಿ, ಐರನ್‌ಮ್ಯಾನ್ ಟ್ರಯಥ್ಲಾನ್‌ನಲ್ಲಿ ಭಾಗವಹಿಸಿದ ಏಕೈಕ ಬಾಲಿವುಡ್ ಸೆಲೆಬ್ರಿಟಿ ಮಿಲಿಂದ್ ಸೋಮನ್.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಸಿನಿಮಾ ವಿಚಾರಕ್ಕೆ ಬಂದರೆ, ಸಯ್ಯಾಮಿ ʻಅಗ್ನಿʼ ಚಿತ್ರದಲ್ಲಿ ಪ್ರತೀಕ್ ಗಾಂಧಿ ಮತ್ತು ದಿವ್ಯೆಂದು ಶರ್ಮಾ ಅವರೊಂದಿಗೆ ನಟಿಸಲಿದ್ದಾರೆ. ಫರ್ಹಾನ್ ಅಖ್ತರ್ ಮತ್ತು ರಿತೇಶ್ ಸಿಧ್ವಾನಿ ಅವರ ಬೆಂಬಲದೊಂದಿಗೆ ರಾಹುಲ್ ಧೋಲಾಕಿಯಾ ನಿರ್ದೇಶನವಿದೆ.

ಮರಾಠಿಯ ಖ್ಯಾತ ನಟಿ ಉಷಾ ಕಿರಣ್ ಅವರ ಮೊಮ್ಮಗಳು ಮತ್ತು ಪ್ರಮುಖ ಬಾಲಿವುಡ್ ನಟಿ ತನ್ವಿ ಅಜ್ಮಿ ಅವರ ಸೊಸೆ. ರಾಕೇಶ್ ಓಂಪ್ರಕಾಶ್ ಮೆಹ್ರಾ ನಿರ್ದೇಶಿಸಿದ ಮತ್ತು 2016 ರಲ್ಲಿ ಬಿಡುಗಡೆಯಾದ “ಮಿರ್ಜ್ಯಾ” ಚಿತ್ರದಲ್ಲಿನ ಅಭಿನಯಕ್ಕಾಗಿ ಸೈಯಾಮಿ ಖೇರ್ ಮನ್ನಣೆ ಗಳಿಸಿದರು.

Continue Reading

ಬಾಲಿವುಡ್

Malaika Arora: 38ರ ಅರ್ಜುನ್‌ ಕಪೂರ್‌ಗೆ 50ರ ಮಲೈಕಾ ಅರೋರಾ ಸಹವಾಸ ಸಾಕಾಯ್ತಾ?!

Malaika Arora: ಮಲೈಕಾ ಅರೋರಾ ಅವರಿಗೆ ಈಗ 50 ವರ್ಷ. ಅರ್ಜುನ್ ಕಪೂರ್​ಗೆ 38. ಇಬ್ಬರ ಮಧ್ಯೆ ಸುಮಾರು 11 ವರ್ಷಗಳ ಅಂತರ ಇದೆ. ಅರ್ಜುನ್ ಕಪೂರ್ ವಯಸ್ಸಿನಲ್ಲಿ ಸಣ್ಣವರು. ಮಾತ್ರವಲ್ಲ ಕೆಲವು ದಿನಗಳಿಂದ ಮಗು ವಿಚಾರವಾಗಿ ಸಾಕಷ್ಟು ಟ್ರೋಲ್‌ ಆಗಿತ್ತು ಜೋಡಿ. ಮಲೈಕಾ ಹಾಗೂ ಅರ್ಜುನ್ ಕಪೂರ್​ಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ಆದರೆ, ಈ ಬಗ್ಗೆ ಈ ಜೋಡಿ ಮೌನ ವಹಿಸಿದ್ದರು.

VISTARANEWS.COM


on

Malaika Arora respectfully part ways Here what we know
Koo

ಬೆಂಗಳೂರು: ಮಲೈಕಾ ಅರೋರಾ (Malaika Arora) ಮತ್ತು ಅರ್ಜುನ್ ಕಪೂರ್(Arjun Kapoor) ಆಗಾಗ ವಕೇಶನ್‌ ಮೂಡ್‌ನಲ್ಲಿರುವ ಫೋಟೊವನ್ನು ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಜತೆಗೆ ಅದೆಷ್ಟೋ ಬಾರಿ ಸಾರ್ವಜನಿಕವಾಗಿ ಕಾಣಿಸಿದ್ದುಂಟು. ಆದರೀಗ ಜೋಡಿ ಬೇರೆ ಆಗುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದೆ. ಪರಸ್ಪರರ ಭವಿಷ್ಯದ ಒಳಿತಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಮಲೈಕಾ ಮತ್ತು ಅರ್ಜುನ್ ʼವಿಶೇಷವಾದ ಸಂಬಂಧʼವನ್ನು ಹೊಂದಿದ್ದರು. ಇಬ್ಬರೂ ಪರಸ್ಪರರ ಹೃದಯದಲ್ಲಿ ವಿಶೇಷ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಆದರೆ ಇದೀಗ ಜೋಡಿ ಬೇರೆಯಾಗಬೇಕು ಎಂದು ನಿರ್ಧರಿಸಿದೆ. ಇಷ್ಟೂ ವರ್ಷಗಳಲ್ಲಿ, ಅವರು ತಮ್ಮ ಸಂಬಂಧಕ್ಕೆ ಗೌರವವನ್ನು ನೀಡಿದ್ದಾರೆ. ಒಂದು ವೇಳೆ ಬೇರೆಯಾಗಲು ನಿರ್ಧರಿಸಿದರೂ ಪರಸ್ಪರ ಅದೇ ಗೌರವವನ್ನು ಕಾಪಾಡಿಕೊಂಡು ಹೋಗುತ್ತಾರೆ ಎಂದು ವರದಿಯಾಗಿದೆ.

ಮಲೈಕಾ ಅರೋರಾ ಅವರಿಗೆ ಈಗ 50 ವರ್ಷ. ಅರ್ಜುನ್ ಕಪೂರ್​ಗೆ 38. ಇಬ್ಬರ ಮಧ್ಯೆ ಸುಮಾರು 11 ವರ್ಷಗಳ ಅಂತರ ಇದೆ. ಅರ್ಜುನ್ ಕಪೂರ್ ವಯಸ್ಸಿನಲ್ಲಿ ಸಣ್ಣವರು. ಮಾತ್ರವಲ್ಲ ಕೆಲವು ದಿನಗಳಿಂದ ಮಗು ವಿಚಾರವಾಗಿ ಸಾಕಷ್ಟು ಟ್ರೋಲ್‌ ಆಗಿತ್ತು ಜೋಡಿ. ಮಲೈಕಾ ಹಾಗೂ ಅರ್ಜುನ್ ಕಪೂರ್​ಗೆ ಮದುವೆ ಯಾವಾಗ ಎನ್ನುವ ಪ್ರಶ್ನೆ ಎದುರಾಗುತ್ತಲೇ ಇತ್ತು. ಆದರೆ, ಈ ಬಗ್ಗೆ ಈ ಜೋಡಿ ಮೌನ ವಹಿಸಿದ್ದರು.

ಇತ್ತೀಚಿನ ವರದಿಗಳ ಪ್ರಕಾರ ಇಬ್ಬರ ನಡುವೆ ಬಿರುಕು ಮೂಡಿದೆ ಎನ್ನಲಾಗಿದೆ. ಅರ್ಜುನ್‌ ಕಪೂರ್ ಕುಟುಂಬದವರನ್ನು ಅನ್​ಫಾಲೋ ಮಾಡಿದ್ದಾರೆ ಮಲೈಕಾ ಅರೋರಾ. ಅಷ್ಟೇ ಅಲ್ಲದೇ ಅರ್ಜುನ್ ಕಪೂರ್ ಈಗ ನಟಿ ಕುಶಾ ಕಪಿಲಾ (Kusha Kapila) ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ ಎಂತಲೂ ವರದಿಗಳಿವೆ.

ಇದನ್ನೂ ಓದಿ: Raghu Thatha: `ಪುಷ್ಪ 2′ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್‌ ಸೆಡ್ಡು: ‘ರಘು ತಾತಾ’ ರಿಲೀಸ್‌ ಡೇಟ್‌ ಅನೌನ್ಸ್‌!

ಈ ಮೊದಲು ಮಲೈಕಾ ಅವರು ಅರ್ಜುನ್ ಕಪೂರ್ ತಂದೆ ಬೋನಿ ಕಪೂರ್, ಕುಟುಂಬದ ಇತರ ಸದಸ್ಯರಾದ ಅನಿಲ್ ಕಪೂರ್, ಜಾನ್ವಿ ಕಪೂರ್, ಖುಷಿ ಕಪೂರ್ ಅವರನ್ನು ಇನ್​ಸ್ಟಾಗ್ರಾಮ್​ನಲ್ಲಿ ಫಾಲೋ ಮಾಡುತ್ತಿದ್ದರು. ಆದರೆ, ಇವರುಗಳನ್ನು ಮಲೈಕಾ ಅನ್​ಫಾಲೋ ಮಾಡಿದ್ದಾರೆ. ಆದರೆ, ಅರ್ಜುನ್ ಕಪೂರ್ ಅವರನ್ನು ಈಗಲೂ ಅವರು ಫಾಲೋ ಮಾಡುತ್ತಿದ್ದಾರೆ. ಇತ್ತೀಚೆಗೆ ಮುಂಬೈನಲ್ಲಿರುವ ಕರಣ್ ಜೋಹರ್ ಅವರ ಮನೆಯಲ್ಲಿ ಅರ್ಜುನ್ ಮತ್ತು ಕುಶಾ ಒಟ್ಟಿಗೆ ಪಾರ್ಟಿ ಮಾಡಿದ್ದಾಗಿನಿಂದಲೂ ಸಂಬಂಧದ ವದಂತಿಗಳು ಪ್ರಾರಂಭವಾದವು.

ಮಲೈಕಾ ಈ ಹಿಂದೆ ನಟ, ನಿರ್ಮಾಪಕ ಅರ್ಬಾಜ್ ಖಾನ್ ಅವರನ್ನು ವಿವಾಹವಾಗಿದ್ದರು. ಇಬ್ಬರು 2016ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದಾರೆ. ಅವರಿಗೆ ಅರ್ಹಾನ್ ಖಾನ್ ಹೆಸರಿನ ಮಗನಿದ್ದಾನೆ. ಮಲೈಕಾ ಮತ್ತು ಅರ್ಜುನ್ ಹಲವು ವರ್ಷಗಳಿಂದ ಪ್ರೀತಿಯಲ್ಲಿದ್ದು, 2019ರಲ್ಲಿ ಅದನ್ನು ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬಂದರೆ ಅರ್ಜುನ್‌ ಕಪೂರ್‌ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಅವರ ʼಸಿಂಗಮ್ ಅಗೇನ್ʼನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದಲ್ಲಿ ಅವರು ಅಜಯ್‌ ದೇವಗನ್‌ಗೆ ಪ್ರತಿಸ್ಪರ್ಧಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ದೀಪಿಕಾ ಪಡುಕೋಣೆ, ರಣವೀರ್ ಸಿಂಗ್, ಅಕ್ಷಯ್ ಕುಮಾರ್ ಮತ್ತು ಕರೀನಾ ಕಪೂರ್ ಖಾನ್ ಸೇರಿದಂತೆ ಇತರರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಆಗಸ್ಟ್ 15ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

Continue Reading

ಒಟಿಟಿ

OTT Releases: ಒಟಿಟಿಯಲ್ಲಿ ಈ ವಾರ ತೆರೆ ಕಾಣುತ್ತಿವೆ ಬಹು ನಿರೀಕ್ಷೆಯ ಈ ಐದು ಚಿತ್ರಗಳು

ಪ್ರತೀಕ್ ಗಾಂಧಿ ಅಭಿನಯದ ದೇಧ್ ಭೀಗಾ ಜಮೀನ್ ಸೇರಿದಂತೆ ಐದು ಬಹು ನಿರೀಕ್ಷೆಯ ಚಿತ್ರಗಳು ಈ ವಾರ ಒಟಿಟಿಯಲ್ಲಿದ್ದು (OTT Releases), ಮನೆಮಂದಿ, ಸ್ನೇಹಿತರೊಂದಿಗೆ ನಿಮ್ಮಿಷ್ಟದ ಚಿತ್ರವನ್ನು ನೋಡುತ್ತಾ ಈ ವಾರದ ರಜೆಯನ್ನು ಕಳೆಯಬಹುದು. ಈ ಐದು ಚಿತ್ರಗಳ ಮಾಹಿತಿ ಇಲ್ಲಿದೆ.

VISTARANEWS.COM


on

By

OTT Releases
Koo

ನಿಧಾನಕ್ಕಾದರೂ ಸರಿ ಮಳೆ (rain) ಮೆಲ್ಲನೆ ಅಡಿಯಿಡುತ್ತಿದೆ. ಬೇಸಿಗೆಯ (summer) ಬಿಸಿಲಿನಿಂದ ಬೇಸತ್ತು ತಂಪಾದ ವಾತಾವರಣದಲ್ಲಿ ಹೊದಿಕೆ ಹೊದ್ದು ಮಲಗುವುದು ಬೇಸರ ಮೂಡಿಸುತ್ತದೆ. ಇನ್ನು ಮನೆಯಲ್ಲಿ ರಜೆಯನ್ನು ಕಳೆಯುವುದಂತೂ ತುಂಬಾ ಬೋರು ಎಂದೆನಿಸುವುದು ಉಂಟು. ಆದರೆ ಈ ವಾರ ಐದು ಚಿತ್ರಗಳು (movies) ಒಟಿಟಿಯಲ್ಲಿ (OTT) ಬಿಡುಗಡೆಯಾಗುತ್ತಿದ್ದು (OTT Releases), ರಜೆಯನ್ನು ಖುಷಿಯಿಂದ ಕಳೆಯಬಹುದು.

ಚಿತ್ರಮಂದಿರಗಳಿಗೆ ಹೋಗಿ ಸರತಿಯಲ್ಲಿ ನಿಂತು ಟಿಕೆಟ್ ಪಡೆದು ಜನಜಂಗುಳಿಯ ಮಧ್ಯೆ ಚಿತ್ರ ವೀಕ್ಷಿಸಲು ಇಷ್ಟ ಪಡದವರಿಗೆ ಒಟಿಟಿಗಳು, ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ಹಲವಾರು ಹೊಸಹೊಸ ಚಲನಚಿತ್ರಗಳು ಮತ್ತು ಪ್ರದರ್ಶನಗಳು ಕಾಣಿಸುತ್ತಿವೆ. ಆದರೆ ಇತ್ತೀಚಿಗೆ ಪ್ರದರ್ಶನಗಳು ಕಡಿಮೆಯಾಗಿದ್ದರೂ ಈ ವಾರಾಂತ್ಯದಲ್ಲಿ ಭರ್ಜರಿಯಾಗಿ ಚಿತ್ರಗಳು ಸಿನಿ ಪರದೆಯ ಮೇಲೆ ಬಂದಿದೆ.

ದೇಧ್ ಭೀಗಾ ಜಮೀನ್ (Dedh Bhiga Zameen)

ಜಿಯೋ ಸಿನಿಮಾದಲ್ಲಿ (JioCinema) ಮೇ 31ರಿಂದ ಪ್ರದರ್ಶನ ಕಾಣಲಿರುವ ಈ ಚಿತ್ರದಲ್ಲಿ ಪ್ರತೀಕ್ ಗಾಂಧಿ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಕ್ಯಾಮ್ 1992ನ ಬಳಿಕ ಈ ಚಿತ್ರದಲ್ಲಿ ಪ್ರತೀಕ್ ಅವರ ಪ್ರತಿಭೆ ಮತ್ತಷ್ಟು ಪ್ರೇಕ್ಷಕರ ಮನ ಗೆಲ್ಲಲಿದೆ. ಮಡಗಾಂವ್ ಎಕ್ಸ್‌ಪ್ರೆಸ್‌ನ ಯಶಸ್ಸು ಮತ್ತು ದೋ ಔರ್ ದೋ ಪ್ಯಾರ್ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಅನಂತರ ಪ್ರತೀಕ್ ಈಗ ಸಂಪೂರ್ಣವಾಗಿ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಖುಶಾಲಿ ಕುಮಾರ್ ಅವರೊಂದಿಗೆ ಮೊದಲ ಬಾರಿಗೆ ಜೊತೆಯಾಗಿರುವ ಪ್ರತೀಕ್ ಸ್ವಂತ ಹಕ್ಕುಗಳಿಗಾಗಿ ಹೋರಾಡುತ್ತಿರುವ ಸಾಮಾನ್ಯ ವ್ಯಕ್ತಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕರ್ಮ ಮೀಡಿಯಾ ಆಂಡ್ ಎಂಟರ್‌ಟೈನ್‌ಮೆಂಟ್‌ನ ಬ್ಯಾನರ್‌ನಡಿಯಲ್ಲಿ ಶೈಲೇಶ್ ಆರ್ ಸಿಂಗ್, ಸುನಿಲ್ ಜೈನ್ ಮತ್ತು ಹಿತೇಶ್ ಠಕ್ಕರ್ ನಿರ್ಮಿಸಿದ ಪುಲ್ಕಿತ್ ಬರೆದು ನಿರ್ದೇಶಿಸಿದ ಈ ಚಿತ್ರವು ಭ್ರಷ್ಟ ವ್ಯವಸ್ಥೆಯ ವಿರುದ್ಧ ಮಧ್ಯಮ ವರ್ಗದ ಸಾಮಾನ್ಯ ಜನರ ಹೋರಾಟದ ಮೇಲೆ ಬೆಳಕು ಚೆಲ್ಲಿದೆ.


ವಿಗಿಲಿ 2 (Vigil 2)

ನೆಟ್‌ಫ್ಲಿಕ್ಸ್ (Netflix) ಮೇ 31ರಂದು ತೆರೆ ಕಾಣುವ ಟಾಮ್ ಎಡ್ಜ್ ಅವರ ಪೊಲೀಸ್ ಕಾರ್ಯಾಚರಣೆಯ ಎರಡನೇ ಸರಣಿ ಇದಾಗಿದೆ. 2021ರಲ್ಲಿ ಮೊದಲ ಸೀಸನ್ ಕೊನೆಗೊಂಡಾಗ ನಿಖರವಾಗಿ ಪ್ರಾರಂಭವಾಗುತ್ತದೆ ಎಂದು ಹೇಳಲಾಗಿತ್ತು. ಸುರನ್ನೆ ಜೋನ್ಸ್ ಅವರು ಡಿಟೆಕ್ಟಿವ್ ಚೀಫ್ ಇನ್‌ಸ್ಪೆಕ್ಟರ್ ಆಮಿ ಸಿಲ್ವಾ ಪಾತ್ರದಲ್ಲಿ ಈ ಸರಣಿಯಲ್ಲೂ ಕಾಣಿಸಿಕೊಂಡಿದ್ದಾರೆ. ಖಾಸಗಿ ಸಂಸ್ಥೆಗಳೊಂದಿಗೆ ಸೇರಿ ಯುಕೆ ಸರ್ಕಾರ ನಡೆಸುವ ಪಿತೂರಿಯ ಕಥೆಯನ್ನು ಇದು ಒಳಗೊಂಡಿದೆ.


ಎ ಪಾರ್ಟ್ ಆಫ್ ಯು (A Part of You )

ನೆಟ್‌ಫ್ಲಿಕ್ಸ್ ನಲ್ಲಿ ಮೇ 31ರಿಂದ ತೆರೆ ಕಾಣುವ ಈ ಚಿತ್ರದಲ್ಲಿ ಹದಿಹರೆಯದವರು ತಮ್ಮನ್ನು ಮತ್ತು ತಮ್ಮ ಹೊಸ ಪ್ರಪಂಚವನ್ನು ಅರ್ಥಮಾಡಿಕೊಳ್ಳಲು ಹೆಣಗಾಡುವ ಕಥೆಯನ್ನು ಒಳಗೊಂಡಿದೆ. ಸಿಗ್ಗೆ ಎಕ್ಲುಂಡ್ ಅವರ ನಿರ್ದೇಶನದ ಈ ಚಿತ್ರದಲ್ಲಿ ಫೆಲಿಸಿಯಾ ಮ್ಯಾಕ್ಸಿಮ್, ಎಡ್ವಿನ್ ರೈಡಿಂಗ್, ಇಡಾ ಎಂಗ್ವೊಲ್, ಅಲ್ವಾ ಬ್ರಾಟ್ ಮತ್ತು ಜರಾ ಲಾರ್ಸನ್ ಅವರ ಮೊದಲ ಬಾರಿಗೆ ಅಭಿನಯಿಸಿದ್ದಾರೆ.


ರೈಸಿಂಗ್ ವಾಯ್ಸೆಸ್‌ (Raising Voices )

ನೆಟ್‌ಫ್ಲಿಕ್ಸ್ ನಲ್ಲಿ ಮೇ 31ರಂದು ತೆರೆ ಕಾಣಲಿರುವ ಈ ಚಿತ್ರದಲ್ಲಿ 17 ವರ್ಷದ ಬಾಲಕಿ ಪ್ರೌಢಶಾಲೆಯಲ್ಲಿ ಲೈಂಗಿಕ ದೌರ್ಜನ್ಯವನ್ನು ವರದಿ ಮಾಡಿದಾಗ ತನಿಖೆಯಿಂದ ಅವಳ ಜೀವನವನ್ನು ಹೆಚ್ಚು ಚರ್ಚೆಯಾಗುತ್ತಿದೆ. ಅವಳ ಸಂಬಂಧಗಳನ್ನು ಪರೀಕ್ಷಿಸಲಾಗುತ್ತದೆ. ಜೋಸ್ ಮ್ಯಾನುಯೆಲ್ ಲೊರೆಂಜೊ ಮತ್ತು ಮಿಗುಯೆಲ್ ಸಾಯೆಜ್ ಕ್ಯಾರಲ್ ಅವರ ನಿರ್ದೇಶನದ ಈ ಚಿತ್ರದಲ್ಲಿ ನಿಕೋಲ್ ವ್ಯಾಲೇಸ್, ಕ್ಲಾರಾ ಗಲ್ಲೆ, ಐಚಾ ವಿಲ್ಲಾವರ್ಡೆ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ.


ಇದನ್ನೂ ಓದಿ:Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

ಎರಿಕ್ (Eric)

ನೆಟ್‌ಫ್ಲಿಕ್ಸ್ ನಲ್ಲಿ ಮೇ 30ರಿಂದ ಪ್ರದರ್ಶನ ಕಾಣುತ್ತಿರುವ ಈ ಚಿತ್ರದಲ್ಲಿ ಎರಿಕ್ ಬೆನೆಡಿಕ್ಟ್ ಕಂಬರ್ಬ್ಯಾಚ್, ಗೇಬಿ ಹಾಫ್ಮನ್ ಮತ್ತು ಮೆಕಿನ್ಲೆ ಬೆಲ್ಚರ್ III ನಟಿಸಿದ್ದಾರೆ. ಅಬಿ ಮೋರ್ಗನ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಒಂಬತ್ತು ವರ್ಷದ ಮಗು ಒಂದು ದಿನ ಬೆಳಗ್ಗೆ ಶಾಲೆಗೆ ಹೋಗುವ ದಾರಿಯಲ್ಲಿ ಕಣ್ಮರೆಯಾಗುತ್ತದೆ. ತಂದೆ ತನ್ನ ಮಗನಿಗಾಗಿ ಹುಡುಕುವ ಕಥೆ ಇದರಲ್ಲಿದೆ.

Continue Reading

ಬಾಲಿವುಡ್

Anant Ambani: ಅನಂತ್ ಅಂಬಾನಿ ಕ್ರೂಸ್ ಪಾರ್ಟಿಯಲ್ಲಿ ರಂಜಿಸಲಿದ್ದಾರೆ ‘ವಾಕಾ ವಾಕಾ’ ಖ್ಯಾತಿಯ ಪಾಪ್ ಗಾಯಕಿ!

Anant Ambani: ಅಂಬಾನಿಯ ಕ್ರೂಸ್ ಪಾರ್ಟಿ ಮೇ 29ರಂದು ಪ್ರಾರಂಭಗಿದ್ದು, ಮತ್ತು ಜೂನ್ 1ರವರೆಗೆ ನಡೆಯಲಿದೆ. ಸಲ್ಮಾನ್ ಖಾನ್, ಆಲಿಯಾ ಭಟ್, ರಣಬೀರ್ ಕಪೂರ್, ರಣವೀರ್ ಸಿಂಗ್, ಅನನ್ಯ ಪಾಂಡೆ, ಸಾರಾ ಅಲಿ ಖಾನ್, ಓರಿ ಮತ್ತು ಇತರರು ಇದ್ದಾರೆ. ಈ ಹಿಂದೆ ಗುಜರಾತ್‌ನ ಜಾಮ್‌ನಗರದಲ್ಲಿ ಅನಂತ್ ಮತ್ತು ರಾಧಿಕಾ ಅವರ ಮೊದಲ ಪೂರ್ವಭಾವಿ ಕಾರ್ಯಕ್ರಮಕ್ಕಾಗಿ ರಿಹಾನ್ನಾ ಅವರು ಪ್ರದರ್ಶನ ನೀಡಿದ್ದರು. 74 ಕೋಟಿ ರೂ. ಸಂಭಾವನೆ ಪಡೆದಿದ್ದರು. ಇದೀಗ ಶಕೀರಾ ಸರದಿ ಎನ್ನಲಾಗಿದೆ.

VISTARANEWS.COM


on

Anant Ambani Shakira set to perform 2nd pre-wedding
Koo

ಬೆಂಗಳೂರು: ಅನಂತ್ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚಂಟ್‌ ಫ್ರೆಂಚ್ ಕ್ರೂಸ್​ನಲ್ಲಿ ತಮ್ಮ ವಿವಾಹ ಪೂರ್ವ ಎರಡಡನೇ ಪಾರ್ಟಿಯನ್ನು ಪ್ರಾರಂಭಿಸುತ್ತಿದ್ದಂತೆ ಎಲ್ಲರ ಕಣ್ಣುಗಳು ಅವರ ಮೇಲೆ ನೆಟ್ಟಿದ್ದವು. , ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಇದೀಗ ನಾಲ್ಕು ದಿನಗಳ ವಿವಾಹ ಪೂರ್ವ ಸಮಾರಂಭದಲ್ಲಿ ಐಷಾರಾಮಿ ಫ್ರೆಂಚ್ ಕ್ರೂಸ್‌ನಲ್ಲಿ ತನ್ನ ಪವರ್‌ಪ್ಯಾಕ್ಡ್ ಪ್ರದರ್ಶನದೊಂದಿಗೆ ಅತಿಥಿಗಳನ್ನು ಮನರಂಜಿಸಲಿದ್ದಾರಂತೆ ಶಕೀರಾ.

ʻವಾಕಾ ವಾಕಾʼ ಹಾಡಿನ ಖ್ಯಾತ ಗಾಯಕಿ ಶಕೀರಾ 10ರಿಂದ 15 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಹಿಂದೆ ಗುಜರಾತ್‌ನ ಜಾಮ್‌ನಗರದಲ್ಲಿ ಅನಂತ್ ಮತ್ತು ರಾಧಿಕಾ ಅವರ ಮೊದಲ ಪೂರ್ವಭಾವಿ ಕಾರ್ಯಕ್ರಮಕ್ಕಾಗಿ ರಿಹಾನ್ನಾ ಅವರು ಪ್ರದರ್ಶನ ನೀಡಿದ್ದರು. 74 ಕೋಟಿ ರೂ. ಸಂಭಾವನೆ ಪಡೆದಿದ್ದರು. ಇದೀಗ ಶಕೀರಾ ಸರದಿ ಎನ್ನಲಾಗಿದೆ.

ಅಂಬಾನಿಯ ಕ್ರೂಸ್ ಪಾರ್ಟಿ ಮೇ 29ರಂದು ಪ್ರಾರಂಭವಾಗಿದ್ದು, ಮತ್ತು ಜೂನ್ 1ರವರೆಗೆ ನಡೆಯಲಿದೆ. ಸಲ್ಮಾನ್ ಖಾನ್, ಆಲಿಯಾ ಭಟ್, ರಣಬೀರ್ ಕಪೂರ್, ರಣವೀರ್ ಸಿಂಗ್, ಅನನ್ಯ ಪಾಂಡೆ, ಸಾರಾ ಅಲಿ ಖಾನ್, ಓರಿ ಮತ್ತು ಇತರರು ಇದ್ದಾರೆ.

ಇದನ್ನೂ ಓದಿ: Kannada New Movie: ಹಾಡಿನ ಮೂಲಕ ಸದ್ದು ಮಾಡ್ತಿದೆ ʻಬ್ಯಾಕ್ ಬೆಂಚರ್ಸ್ʼ ಸಿನಿಮಾ!

ಮದುವೆ ಯಾವಾಗ?

ವರದಿಯ ಪ್ರಕಾರ, ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ನಲ್ಲಿರುವ ಭವ್ಯವಾದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್​ನಲ್ಲಿ ಮದುವೆ ನಡೆಯಲಿದೆ.

ಭಾರತೀಯ ಸಂಪ್ರದಾಯದ ಉಡುಪುಗಳು

ಜುಲೈ 12ರಿಂದ ಮೂರು ದಿನಗಳ ಕಾಲ ವಿವಾಹ ಉತ್ಸವಗಳು ನಡೆಯಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 12ರಂದು ರಂದು ವಿವಾಹದೊಂದಿಗೆ ಆಚರಣೆಗೆ ಚಾಲನೆ ಸಿಗಲಿದೆ. ಅಂದು ಅತಿಥಿಗಳು ಭಾರತೀಯ ಸಾಂಪ್ರದಾಯಿಕ ಉಡುಪನ್ನು ಧರಿಸುವ ನಿರೀಕ್ಷೆಯಿದೆ. ಮದುವೆಯ ನಂತರ, ಮುಂದಿನ ಕಾರ್ಯಕ್ರಮವು ಜುಲೈ 13 ರಂದು ಶುಭ ಆಶಿರ್ವಾದ್ ಅಥವಾ ದೈವಿಕ ಆಶೀರ್ವಾದ ಕಾರ್ಯಕ್ರಮ. ಅಂದು ಡ್ರೆಸ್ ಕೋಡ್ ಭಾರತೀಯ ಕ್ಯಾಶುವಲ್ ಡ್ರೆಸ್​ ಆಗಿದೆ. ಜುಲೈ 14 ರಂದು ಆಯೋಜಿಸಲಾಗುವ ವಿವಾಹ ಆರತಕ್ಷತೆ ಅಥವಾ ಮಂಗಲ್ ಉತ್ಸವ್ ನಡೆಯಲಿದೆ. ಅಂದು ಅತಿಥಿಗಳು ಭಾರತೀಯ ಚಿಕ್ ಉಡುಪನ್ನು ಧರಿಸುವ ನಿರೀಕ್ಷೆಯಿದೆ.

Continue Reading
Advertisement
Anti Islam Rally
ವಿದೇಶ4 hours ago

Anti Islam Rally: ಇಸ್ಲಾಂ ವಿರೋಧಿ ರ‍್ಯಾಲಿಯಲ್ಲಿ ಸಿಕ್ಕಸಿಕ್ಕವರಿಗೆ ಚಾಕು ಇರಿದ ವ್ಯಕ್ತಿ; ಗುಂಡಿಕ್ಕಿದ ಪೊಲೀಸರು

Modi Meditation
ದೇಶ5 hours ago

Modi Meditation: ವಿವೇಕಾನಂದರ ಮೂರ್ತಿ ಎದುರು ಮೋದಿ ಗಾಢ ಧ್ಯಾನ; ಇಲ್ಲಿವೆ ಫೋಟೊಗಳು

Yamaha has opened a new Blue Square outlet in Bengaluru
ಬೆಂಗಳೂರು6 hours ago

Yamaha: ಬೆಂಗಳೂರಿನಲ್ಲಿ ಹೊಸ ‘ಬ್ಲೂ ಸ್ಕ್ವೇರ್’ ಔಟ್‌ಲೆಟ್ ತೆರೆದ ಯಮಹಾ

Neha Hiremath
ಕರ್ನಾಟಕ6 hours ago

Neha Hiremath: ಲಿಂಗಾಯತಳಾದ ನೇಹಾ ಹಿರೇಮಠ ಎಸ್‌ಸಿ ಪ್ರಮಾಣಪತ್ರ ಮಾಡಿಸಿದ್ದೇಕೆ? ಸರ್ಟಿಫಿಕೇಟ್‌ ಫೋಟೊ ಈಗ ವೈರಲ್

Kanyakumari Tour
ಪ್ರವಾಸ7 hours ago

Kanyakumari Tour: ನಿಮ್ಮ ಕನ್ಯಾಕುಮಾರಿ ಪ್ರವಾಸದ ಪಟ್ಟಿಯಲ್ಲಿರಲಿ ಈ 10 ಸಂಗತಿಗಳು

Sri Huligemma Devi Maharathotsava in Hulagi
ಧಾರ್ಮಿಕ7 hours ago

Koppala News: ವಿಜೃಂಭಣೆಯಿಂದ ಜರುಗಿದ ಹುಲಗಿಯ ಶ್ರೀ ಹುಲಿಗೆಮ್ಮ ದೇವಿ ಮಹಾರಥೋತ್ಸವ

Vijayanagara ZP CEO Sadashiva Prabhu instructed that Dadara Rubella Lasika Abhiyan should be conducted neatly
ಆರೋಗ್ಯ7 hours ago

Vijayanagara News: ದಡಾರ, ರುಬೆಲ್ಲಾ ಲಸಿಕಾ ಅಭಿಯಾನಕ್ಕೆ ಸಿದ್ಧತೆ

District administration all preparations for vote counting says DC Prashanth Kumar Mishra
ಬಳ್ಳಾರಿ7 hours ago

Lok Sabha Election 2024: ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಕಲ ಸಿದ್ಧತೆ

Exit Polls
Lok Sabha Election 20247 hours ago

Exit Poll: 2004, 2009, 2014, 2019ರಲ್ಲಿ ಎಕ್ಸಿಟ್ ಪೋಲ್ ಹೇಳಿದ್ದೇನು? ಆಗಿದ್ದೇನು?

Heart Attack
ದೇಶ8 hours ago

Heart Attack: ತಿರಂಗಾ ಹಿಡಿದು ಕುಣಿಯುವಾಗಲೇ ಹೃದಯಾಘಾತಕ್ಕೆ ನಿವೃತ್ತ ಯೋಧ ಬಲಿ; ಸಾವಿನಲ್ಲೂ ಸಾರ್ಥಕತೆ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ3 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ4 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ5 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು5 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌