Fifa World Cup | ಲಿಯೊನೆಲ್ ಮೆಸ್ಸಿ ಆಟ ನೋಡಲು ಕೇರಳದಿಂದ ಕತಾರ್​ಗೆ ಕಾರಿನಲ್ಲೇ ಪ್ರಯಾಣಿಸಿ ಬಂದ 5 ಮಕ್ಕಳ ತಾಯಿ! - Vistara News

ಕ್ರೀಡೆ

Fifa World Cup | ಲಿಯೊನೆಲ್ ಮೆಸ್ಸಿ ಆಟ ನೋಡಲು ಕೇರಳದಿಂದ ಕತಾರ್​ಗೆ ಕಾರಿನಲ್ಲೇ ಪ್ರಯಾಣಿಸಿ ಬಂದ 5 ಮಕ್ಕಳ ತಾಯಿ!

ಅರ್ಜೆಂಟೀನಾ ಆಟಗಾರ ಲಿಯೊನೆಲ್ ಮೆಸ್ಸಿ ಆಟ ನೋಡಲು ಕೇರಳದಿಂದ ಕತಾರ್‌ಗೆ 5 ಮಕ್ಕಳ ತಾಯಿಯೊಬ್ಬರು ಏಕಾಂಗಿಯಾಗಿ ಪ್ರಯಾಣಿಸಿ ಎಲ್ಲರ ಗಮನ ಸೆಳೆದಿದ್ದಾರೆ.

VISTARANEWS.COM


on

fifa world cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ದೋಹಾ: ಕತಾರ್​ನಲ್ಲಿ ನಡೆಯುತ್ತಿರುವ ಫಿಫಾ ವಿಶ್ವ ಕಪ್ (Fifa World Cup) ಟೂರ್ನಿಯಲ್ಲಿ ತಮ್ಮ ನೆಚ್ಚಿನ ಆಟಗಾರರನ್ನು ನೋಡುವ ಸಲುವಾಗಿಯೇ ಲಕ್ಷಾಂತರ ಫುಟ್ಬಾಲ್ ಅಭಿಮಾನಿಗಳು ಕತಾರ್ ತಲುಪಿದ್ದಾರೆ. ಆದರೆ ಐವರು ಮಕ್ಕಳ ತಾಯಿಯೊಬ್ಬರು ಕೇರಳದಿಂದ ಕತಾರ್‌ಗೆ ಅರ್ಜೆಂಟೀನಾ ಆಟಗಾರ ಲಿಯೊನೆಲ್ ಮೆಸ್ಸಿ ಅವರ ಆಟ ನೋಡಲು ತಮ್ಮ ಎಸ್‌ಯುವಿ ಕಾರಿನಲ್ಲಿ ಏಕಾಂಗಿಯಾಗಿ ಪ್ರಯಾಣಿಸಿ ಎಲ್ಲಡೆ ಸುದ್ದಿಯಾಗಿದ್ದಾರೆ.

ಮೆಸ್ಸಿ ಆಟಕ್ಕೆ ಮನಸೋತು ಅವರನ್ನು ಕಾಣಲೇಬೇಕು ಎಂಬ ಹಟಕ್ಕೆ ಬಿದ್ದ ಕೇರಳದ ನಾಝಿ ನೌಶಿ ಅವರು ಅಕ್ಟೋಬರ್ 15ರಿಂದ ಕೇರಳದಿಂದ ಕೊಲ್ಲಿ ರಾಷ್ಟ್ರಗಳ ಪ್ರವಾಸ ಆರಂಭಿಸಿ ಇದೀಗ ಯುನೈಟೆಡ್ ಅರಬ್ ಎಮಿರೇಟ್ಸ್‌ ತಲುಪಿದ್ದಾರೆ. ನೌಶಿ ಯುಎಇ ತಲುಪಿದ ವಿಚಾರವನ್ನು ಖಲೀಜ್ ಟೈಮ್ಸ್‌ ಪತ್ರಿಕೆ ವರದಿ ಮಾಡಿದೆ.

ಈ ಬಗ್ಗೆ ಮಾತನಾಡಿದ ನೌಶಿ, ‘ನನ್ನ ಅಚ್ಚುಮೆಚ್ಚಿನ ಹೀರೊ ಮೆಸ್ಸಿ ಆಡುವುದನ್ನು ನೋಡಲೇಂದೆ ಇಲ್ಲಿಗೆ ಬಂದೆ. ಸೌದಿ ಅರೇಬಿಯಾ ತಂಡದ ವಿರುದ್ಧ ಮೆಸ್ಸಿಯ ಅರ್ಜೆಂಟೀನಾ ತಂಡವು ಸೋತಿದ್ದು ಮನಸ್ಸಿಗೆ ಬಹಳ ನೋವಾಯಿತು. ಆದರೆ ಮುಂದಿನ ಹಂತದಲ್ಲಿ ತಂಡ ಪುಟಿದೇಳುತ್ತದೆ. ವಿಶ್ವಕಪ್ ಗೆಲ್ಲುತ್ತದೆ’ ಎಂದು ಹೇಳಿದ್ದಾರೆ .

ಎಸ್‌ಯುವಿ ಕಾರಿನಲ್ಲಿ ಏಕಾಂಗಿಯಾಗಿ ಕೊಲ್ಲಿ ರಾಷ್ಟ್ರಗಳಲ್ಲಿ ಪ್ರವಾಸ ಮಾಡುತ್ತಿರುವ ಅವರು ಮಸ್ಕತ್‌ನಿಂದ ಪ್ರಯಾಣ ಆರಂಭಿಸಿ ಹೆಟ್ಟಾ ಬಾರ್ಡರ್‌ ಮುಖಾಂತರ ಪ್ರಯಾಣ ಮಾಡಿರುವ ಅವರು ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ನೋಡಲು ದುಬೈನಲ್ಲಿ ತಂಗಿದ್ದಾರೆ.

ಕಾರಿನೊಳಗೆ ಅಡುಗೆಮನೆ

ತನ್ನ ಎಸ್‌ಯುವಿ ಕಾರಿನಲ್ಲಿ ಕೇರಳದಿಂದ ಮುಂಬೈಗೆ ಪ್ರಯಾಣ ಬೆಳೆಸಿದ ನೌಶಿ ಅಲ್ಲಿಂದ ಹಡಗಿನ ಮೂಲಕ ಒಮಾನ್‌ ತಲುಪಿದ್ದಾರೆ. ನಂತರ ಮಸ್ಕತ್‌ನಿಂದ ತನ್ನ ಪ್ರಯಾಣವನ್ನು ಮುಂದುವರೆಸಿದ ನೌಶಿ, ಹಟಾ ಗಡಿ ಮೂಲಕ ಯುಎಇ ತಲುಪಿದ್ದಾರೆ. ಜತೆಗೆ ತಮ್ಮ ಕಾರನ್ನು ಕೂಡ ಅವರು ವಿಶೇಷವಾಗಿ ವಿನ್ಯಾಸಗೊಳಿಸಿದ್ದಾರೆ. ಅದರಲ್ಲಿ ಸುಸಜ್ಜಿತವಾದ ಅಡುಗೆಮನೆ ಇದೆ. ಛಾವಣಿಯ ಮೇಲೆ ಟೆಂಟ್ ಹಾಕಿಕೊಳ್ಳುವ ವ್ಯವಸ್ಥೆ ಇದೆ. ಇದರಿಂದ ಊಟ ಮತ್ತು ವಸತಿ ವ್ಯವಸ್ಥೆ ಮಾಡಿಕೊಳ್ಳಲು ಅನುಕೂಲವಾಗಿದೆ. ಅಡುಗೆ ತಯಾರಿಗಾಗಿ ಅಕ್ಕಿ, ನೀರು, ಹಿಟ್ಟು, ಮಸಾಲೆ ಮತ್ತು ಇತರ ಒಣ ವಸ್ತುಗಳನ್ನು ಇಟ್ಟುಕೊಂಡಿದ್ದಾರೆ.

ಇದನ್ನೂ ಓದಿ | Fifa World Cup | ಮೆಕ್ಸಿಕೋ ವಿರುದ್ಧ ಅರ್ಜೆಂಟೀನಾಕ್ಕೆ ಗೆಲುವು; ಡೀಗೊ ಮರಡೋನಾ ದಾಖಲೆ ಸರಿಗಟ್ಟಿದ ಮೆಸ್ಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Rahul Dravid: ಟಿ20 ವಿಶ್ವಕಪ್​ ಟೂರ್ನಿ ಬಳಿಕ ರಾಹುಲ್​ ದ್ರಾವಿಡ್​ ಅವರು ಭಾರತ ತಂಡದ ಕೋಚ್​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಈಗಾಗಲೇ ಅವರು ತಮ್ಮ ಈ ನಿರ್ಧಾರವನ್ನು ಕೂಡ ಪ್ರಕಟಿಸಿದ್ದಾರೆ. ದ್ರಾವಿಡ್ ನವೆಂಬರ್ 2021ರಲ್ಲಿ ಭಾರತ ತಂಡದ ಕೋಚ್ ಆಗಿ ಆಯ್ಕೆಯಾದರು.

VISTARANEWS.COM


on

Rahul Dravid
Koo

ನ್ಯೂಯಾರ್ಕ್​: ಟೀಮ್​ ಇಂಡಿಯಾ ಇಂದು(ಬುಧವಾರ) ಐರ್ಲೆಂಡ್(India vs Ireland)​ ವಿರುದ್ಧ ತನ್ನ ಮೊದಲ ಟಿ20 ವಿಶ್ವಕಪ್(T20 World Cup 2024)​ ಪಂದ್ಯವನ್ನಾಡಲಿದೆ. ಈ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಭಾರತ ತಂಡದ ಮುಖ್ಯ ಕೋಚ್(head coach Rahul Dravid)​ ರಾಹುಲ್ ದ್ರಾವಿಡ್(Rahul Dravid)​ ಅವರು ಉರ್ದುವಿನಲ್ಲಿ(Dravid Speaks Urdu) ಮಾತನಾಡಿ ಎಲ್ಲರನ್ನು ಅಚ್ಚರಿ ಪಡುವಂತೆ ಮಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ದ್ರಾವಿಡ್​ ತಮ್ಮ ತಂಡದ ತಯಾರಿಯ ಬಗ್ಗೆ ಮಾತನಾಡುವ ವೇಳೆಯಲ್ಲಿ ಉರ್ದು ಭಾಷೆಯಲ್ಲಿಯೂ ಮಾತನಾಡಿದರು. ‘ಈ ಸ್ವರೂಪದ ಕ್ರಿಕೆಟ್​ನಲ್ಲಿ ಯಾರನ್ನೂ ಕಡೆಗಣಿಸಲು ಅಥವಾ ಯಾರನ್ನೂ ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ” ಎಂದು ಉರ್ದುವಿನಲ್ಲಿ ಹೇಳಿ ಜೋರಾಗಿ ನಕ್ಕಿದ್ದಾರೆ. ಜತೆಗೆ ವೆಲ್​ ಡನ್​ ರಾಹುಲ್​ ಎಂದು ಸ್ವತಃ ತಮ್ಮನ್ನು ತಾವೇ ಪ್ರಶಂಶಿಸಿದ್ದಾರೆ. ಈ ವೇಳೆ ಸುದ್ದಿಗೋಷ್ಠಿಯಲ್ಲಿದ್ದ ಪತ್ರಕರ್ತರು ಕೂಡ ಜೋರಾಗಿ ನಗಾಡಿದ್ದಾರೆ. ದ್ರಾವಿಡ್ ಉರ್ದುವಿನಲ್ಲಿ ಮಾತನಾಡಿದ ವಿಡಿಯೊ ವೈರಲ್(viral video)​ ಆಗಿದೆ.

ಇದನ್ನೂ ಓದಿ Rahul Dravid: ಕೋಚ್ ಹುದ್ದೆಯಲ್ಲಿ ಮುಂದುವರಿಯಲ್ಲ; ಅಧಿಕೃತ ಹೇಳಿಕೆ ನೀಡಿದ ದ್ರಾವಿಡ್


ಟಿ20 ವಿಶ್ವಕಪ್​ ಟೂರ್ನಿ ಬಳಿಕ ರಾಹುಲ್​ ದ್ರಾವಿಡ್​ ಅವರು ಭಾರತ ತಂಡದ ಕೋಚ್​ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ. ಈಗಾಗಲೇ ಅವರು ತಮ್ಮ ಈ ನಿರ್ಧಾರವನ್ನು ಕೂಡ ಪ್ರಕಟಿಸಿದ್ದಾರೆ. ದ್ರಾವಿಡ್ ನವೆಂಬರ್ 2021ರಲ್ಲಿ ಭಾರತ ತಂಡದ ಕೋಚ್ ಆಗಿ ಆಯ್ಕೆಯಾದರು. ದ್ರಾವಿಡ್ ಕೋಚ್​ ಆದಾಗ ಅವರ ಮೇಲೆ ಅತಿಯಾದ ನಿರೀಕ್ಷೆಯಿತ್ತು. ಆದರೆ ನಿರೀಕ್ಷೆಗೆ ತಕ್ಕ ಪ್ರದರ್ಶನ ಅವರ ಕೋಚಿಂಗ್​ ಅವಧಿಯಲ್ಲಿ ಕಂಡು ಬರಲಿಲ್ಲ. ಹೀಗಾಗಿ ಅವರ ಕೋಚಿಂಗ್​ ಬಗ್ಗೆ ಹಲವು ಟೀಕೆಗಳು ಕೂಡ ವ್ಯಕ್ತವಾಗಿತ್ತು. ರಾಹುಲ್ ದ್ರಾವಿಡ್ ಅವರು ಭಾರತ ತಂಡದ ಹೆಡ್ ಕೋಚ್ ಆದ ಬಳಿಕ ನಿರೀಕ್ಷಿತ ಯಶಸ್ಸು ತಂಡಕ್ಕೆ ಸಿಕ್ಕಿಲ್ಲ. ಅಂಡರ್​-19 ಕ್ರಿಕೆಟ್​ ಮಾರ್ಗದರ್ಶನದಲ್ಲಿ ಅವರಿಗೆ ಸಿಕ್ಕಷ್ಟು ಯಶಸ್ಸು ಸೀನಿಯರ್ಸ್‌ ತಂಡದಲ್ಲಿ ಸಿಗಲಿಲ್ಲ.

ದ್ರಾವಿಡ್​ಗೆ ಟೀಮ್​ ಇಂಡಿಯಾದ ಕೋಚಿಂಗ್​ ಬಗ್ಗೆ ಮೊದಲಿನಿಂದಲೇ ಆಸಕ್ತಿ ಇರಲಿಲ್ಲ. ಆದರೆ, ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಅಂದಿನ ಅಧ್ಯಕ್ಷ ಸೌರವ್ ಗಂಗೂಲಿ ಅವರ ಒತ್ತಾಯದ ಮೇರೆಗೆ ದ್ರಾವಿಡ್​ ಕೋಚ್​ ಹುದ್ದೆ ವಹಿಸಿಕೊಂಡಿದ್ದರು. ಕೊನೆಯ ಬಾರಿಗೆ ಕೋಚಿಂಗ್​ ನಡೆಸುತ್ತಿರುವ ದ್ರಾವಿಡ್​ ಟಿ20 ವಿಶ್ವಕಪ್​ನಲ್ಲಾದರೂ ಕಪ್​ ಗೆದ್ದು ಗೆಲುವಿನ ವಿದಾಯ ಸಿಗಲಿ ಎನ್ನುವುದು ಕ್ರಿಕೆಟ್​ ಅಭಿಮಾನಿಗಳ ಆಶಯ.

Continue Reading

T20 ವಿಶ್ವಕಪ್

Pakistan Players: ನ್ಯೂಯಾರ್ಕ್​ನಲ್ಲಿ ದರೋಡೆಗಿಳಿದ ಪಾಕಿಸ್ತಾನ ಕ್ರಿಕೆಟಿಗರು; ತನಿಖೆಗೆ ಆಗ್ರಹ

Pakistan Players: ಇನ್ನೊಂದು ಮೂಲಗಳ ಪ್ರಕಾರ ಈ ನಿರ್ಧಾರದ ಹಿಂದೆ ಪಾಕಿಸ್ತಾನ ಕ್ರಿಕೆಟ್​ ಮಂಡಳಿಯ ಕೈವಾಡವೂ ಇದೆ ಎಂದು ಹೇಳಲಾಗಿದೆ. ಈಗಾಗಲೇ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಆರ್ಥಿಕ ಸಂಕಷ್ಟದಲ್ಲಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಸಂಕಷ್ಟದಿಂದ ಹೊರ ಬರುವ ನಿಟ್ಟಿನಲ್ಲಿ ಆಟಗಾರರ ಮೂಲಕ ಮಂಡಳಿ ಈ ಕೆಲಸ ಮಾಡಿತೇ ಎಂಬ ಅನುಮಾನ ಕೂಡ ಹುಟ್ಟಿಕೊಂಡಿದೆ.

VISTARANEWS.COM


on

Pakistan Players
Koo

ನ್ಯೂಯಾರ್ಕ್​: ಎಲ್ಲ ದೇಶಗಳು ಟಿ20 ವಿಶ್ವಕಪ್​ ಟ್ರೋಫಿ(T20 World Cup) ಗೆಲ್ಲುವತ್ತ ಗಮನಹರಿಸಿದರೆ, ನಮ್ಮ ನೆರೆ ರಾಷ್ಟ್ರ ಪಾಕಿಸ್ತಾನದ ಆಟಗಾರರು(Pakistan Players) ಆರ್ಥಿಕ ಸಂಕಷ್ಟದಿಂದ ಪಾರಾಗುವತ್ತ ಗಮನ ಹರಿಸಿದಂತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪಾಕಿಸ್ತಾನ ಆಟಗಾರರು ದಂಧೆಗೆ ಇಳಿದು ವಿವಾದಕ್ಕೀಡಾಗಿದ್ದಾರೆ.

ಪಾಕಿಸ್ತಾನದ ಆಟಗಾರರು ಖಾಸಗಿ ಔತಣಕೂಟ(Pakistan Players Host Private Dinner) ಒಂದನ್ನು ಆಯೋಜಿಸಿ ಈ ಔತಣಕೂಟದಲ್ಲಿ ಅಭಿಮಾನಿಗಳು ಕೂಡ ಪಾಲ್ಗೊಳ್ಳಬಹುದು ಎಂದು ಹೇಳಲಾಗಿದೆ. ಆದರೆ ಒಂದು ಕ್ಷರತ್ತು ಕೂಡ ವಿಧಿಸಿದೆ. ಈ ಔತಣ ಕೂಟದಲ್ಲಿ ಪಾಲ್ಗೊಳ್ಳುವ ಅಭಿಮಾನಿಗಳು 25 ಯುಎಸ್​ ಡಾಲರ್​ ಪಾವತಿಸಬೇಕು ಎಂದು ಹೇಳಿದೆ. ಇದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ಪಾಕ್​ ಆಟಗಾರರನ್ನು ಸ್ವತಃ ಪಾಕಿಸ್ತಾನದ ಜನರೇ ಸಾಮಾಜಿಕ ಜಾಲತಾಣಗಳಲ್ಲಿ ಟೀಕಿಸುತ್ತಿದ್ದಾರೆ. ಇಷ್ಟು ಗತಿಗೆಟ್ಟು ನೀವು ದೇಶವನ್ನು ಪ್ರತಿನಿಧಿಸಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ IND vs PAK: ಭಾರತ ವಿರುದ್ಧ ಶಾಂತ ಚಿತ್ತರಾಗಿ ಆಡುವ ಉಪಾಯ ಮಾಡಿದ ಕುತಂತ್ರಿ ಪಾಕ್​

ಅಭಿಮಾನಿಗಳು ನೀಡಿದ 25 ಯುಎಸ್ ಡಾಲರ್​ಗಳನ್ನೆಲ್ಲ ಒಟ್ಟುಗೂಡಿಸಿ ಅಂತಿಮವಾಗಿ ಎಲ್ಲ ಆಟಗಾರರು ಸಮಾನವಾಗಿ ಹಂಚಿಕೊಂಡು ಹಣ ಗಳಿಸುವುದು ಆಟಗಾರರ ಉಪಾಯವಾಗಿತ್ತು. ಆದರೆ, ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗರು ಆಕ್ರೋಶ ಹೊರಹಾಕಿದ್ದಾರೆ. ಕ್ರಿಕೆಟ್ ಆಡಲು ತೆರಳಿದ ತಂಡವೊಂದು ಔತಣಕೂಟ ಏರ್ಪಡಿಸಿ ಅಭಿಮಾನಿಗಳಿಂದ ದುಡ್ಡುಗಳಿಸಲು ಮುಂದಾಗುತ್ತಿರುವ ಅತ್ಯಂತ ನಾಚಿಕೆಗೇಡಿನ ಸಂಗತಿ. ಇದೊಂದು ದರೋಡೆ ಎಂದು ಅನೇಕರು ಕಿಡಿಕಾರಿದ್ದಾರೆ.

ಇನ್ನೊಂದು ಮೂಲಗಳ ಪ್ರಕಾರ ಈ ನಿರ್ಧಾರದ ಹಿಂದೆ ಪಾಕಿಸ್ತಾನ ಕ್ರಿಕೆಟ್​ ಮಂಡಳಿಯ ಕೈವಾಡವೂ ಇದೆ ಎಂದು ಹೇಳಲಾಗಿದೆ. ಈಗಾಗಲೇ ಪಾಕಿಸ್ತಾನ ಕ್ರಿಕೆಟ್​ ಮಂಡಳಿ ಆರ್ಥಿಕ ಸಂಕಷ್ಟದಲ್ಲಿರುವುದು ಎಲ್ಲರಿಗೂ ತಿಳಿದ ವಿಚಾರ. ಈ ಸಂಕಷ್ಟದಿಂದ ಹೊರ ಬರುವ ನಿಟ್ಟಿನಲ್ಲಿ ಆಟಗಾರರ ಮೂಲಕ ಮಂಡಳಿ ಈ ಕೆಲಸ ಮಾಡಿತೇ ಎಂಬ ಅನುಮಾನ ಕೂಡ ಹುಟ್ಟಿಕೊಂಡಿದೆ. ಈ ಅನುಮಾನ ಹುಟ್ಟಿಕೊಳ್ಳಲು ಕೂಡ ಕಾರಣವಿದೆ, ಇಷ್ಟೆಲ್ಲಾ ನಡೆದರೂ ಪಾಕ್​ ಕ್ರಿಕೆಟ್​ ಮಂಡಳಿ ಈ ಘಟನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಈ ಕೃತ್ಯದ ಹಿಂದೆ ಮಂಡಳಿಯ ಕೈವಾಡವಿದೆ ಎನ್ನಲಾಗಿದೆ.

ಭಾರತ ಮತ್ತು ಪಾಕಿಸ್ತಾನ ನಡುವಣ ಹೈವೋಲ್ಟೇಜ್​ ಪಂದ್ಯ ಜೂನ್​ 9, ಭಾನುವಾರ ನಡೆಯಲಿದೆ. ಉಭಯ ತಂಡಗಳು ಇದುವರೆಗೆ ಟಿ20 ಮಾದರಿಯಲ್ಲಿ 12 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಗರಿಷ್ಠ 9 ಪಂದ್ಯಗಳಲ್ಲಿ ಗೆದ್ದು ಬೀಗಿದೆ. ಪಾಕಿಸ್ತಾನ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಭಾರತಕ್ಕೆ ಇದರಲ್ಲೊಂದು ಸೋಲು 2021ರಲ್ಲಿ ನಡೆದಿದ್ದ ವಿಶ್ವಕಪ್​ನಲ್ಲಿ ಎದುರಾಗಿತ್ತು. ಅದು ಕೂಡ 10 ವಿಕೆಟ್​ ಅಂತರದ ಹೀನಾಯ ಸೋಲಾಗಿತ್ತು.

Continue Reading

ಕ್ರೀಡೆ

Virat Kohli: ಬೌಂಡರಿ ಮೂಲಕ ವಿಶ್ವ ದಾಖಲೆ ಬರೆಯಲು ಸಜ್ಜಾದ ಕಿಂಗ್​ ಕೊಹ್ಲಿ

Virat Kohli: ಅತ್ಯಧಿಕ ಸಿಕ್ಸರ್​ ಬಾರಿಸಿದ ದಾಖಲೆ ರೋಹಿತ್​ ಶರ್ಮ ಹೆಸರಿನಲ್ಲಿದೆ. ಹಿಟ್ ಮ್ಯಾನ್ ಖ್ಯಾತಿಯ ರೋಹಿತ್, ಉದ್ಘಾಟನ ಆವೃತ್ತಿಯ ಟಿ20 ವಿಶ್ವಕಪ್​ನಿಂದ ಇದುವರೆಗೆ 35 ಸಿಕ್ಸರ್​ ಬಾರಿಸಿದ್ದಾರೆ.

VISTARANEWS.COM


on

Virat Kohli
Koo

ನ್ಯೂಯಾರ್ಕ್​: ಟಿ20 ವಿಶ್ವಕಪ್(T20 World Cup)​ ಕ್ರಿಕೆಟ್​ ಟೂರ್ನಿಯಲ್ಲಿ ಈಗಾಗಲೇ ಹಲವು ದಾಖಲೆಗಳನ್ನು ಹೊಂದಿರುವ ಟೀಮ್​ ಇಂಡಿಯಾದ ವಿರಾಟ್​ ಕೊಹ್ಲಿ(Virat Kohli) ಇದೀಗ ಮತ್ತೊಂದು ವಿಶ್ವ ದಾಖಲೆಯನ್ನು ತಮ್ಮ ಹೆಸರಿಗೆ ಬರೆಯಲು ಸಜ್ಜಾಗಿ ನಿಂತಿದ್ದಾರೆ. ಈ ಬಾರಿ ಕೊಹ್ಲಿ ಕಣ್ಣಿಟ್ಟಿರುವ ದಾಖಲೆ ಎಂದರೆ ಬೌಂಡರಿಯದ್ದು.

ಇಂದು(ಬುಧವಾರ) ನಡೆಯುವ ಐರ್ಲೆಂಡ್(India vs Ireland)​ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ 9 ಬೌಂಡರಿ ಬಾರಿಸಿದರೆ, ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಅತ್ಯಧಿಕ ಬೌಂಡರಿ ಬಾರಿಸಿದ ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ(Mahela Jayawardene) ಅವರ ದಾಖಲೆಯನ್ನು ಮುರಿದು ಅಗ್ರಸ್ಥಾನ ಪಡೆಯಲಿದ್ದಾರೆ. ಜಯವರ್ಧನೆ 111 ಬೌಂಡರಿ ಬಾರಿಸಿದ್ದರೆ, ಕೊಹ್ಲಿ ಸದ್ಯ 103* ಬೌಂಡರಿ ದಾಖಲಿಸಿದ್ದಾರೆ.

ಟ20 ವಿಶ್ವಕಪ್​ನಲ್ಲಿ ಅತ್ಯಧಿಕ ಬೌಂಡರಿ ಸಾಧಕರು

ಆಟಗಾರದೇಶಇನಿಂಗ್ಸ್​ಬೌಂಡರಿ
ಮಹೇಲಾ ಜಯವರ್ಧನೆಶ್ರೀಲಂಕಾ31111
ವಿರಾಟ್ ಕೊಹ್ಲಿಭಾರತ27103*
ತಿಲಕರತ್ನೆ ದಿಲ್ಶನ್ಶ್ರೀಲಂಕಾ35101
ರೋಹಿತ್​ ಶರ್ಮಭಾರತ3691*
ಡೇವಿಡ್​ ವಾರ್ನರ್​ಆಸ್ಟ್ರೇಲಿಯಾ3486
ಕ್ರಿಸ್​ ಗೇಲ್​ವೆಸ್ಟ್​ ಇಂಡೀಸ್​3178
ಜಾಸ್​ ಬಟ್ಲರ್​ಇಂಗ್ಲೆಂಡ್​2769*
ಕೇನ್​ ವಿಲಿಯಮ್ಸನ್​ನ್ಯೂಜಿಲ್ಯಾಂಡ್​2568*
ಬ್ರೆಂಡನ್ ಮೆಕಲಮ್ನ್ಯೂಜಿಲ್ಯಾಂಡ್2567
ಕುಮಾರ್ ಸಂಗಕ್ಕಾರಶ್ರೀಲಂಕಾ3163

ಅತ್ಯಧಿಕ ಸಿಕ್ಸರ್​ ಬಾರಿಸಿದ ದಾಖಲೆ ರೋಹಿತ್​ ಶರ್ಮ ಹೆಸರಿನಲ್ಲಿದೆ. ಹಿಟ್ ಮ್ಯಾನ್ ಖ್ಯಾತಿಯ ರೋಹಿತ್, ಉದ್ಘಾಟನ ಆವೃತ್ತಿಯ ಟಿ20 ವಿಶ್ವಕಪ್​ನಿಂದ ಇದುವರೆಗೆ 35 ಸಿಕ್ಸರ್​ ಬಾರಿಸಿದ್ದಾರೆ. ಇದೀಗ 2024 ರ ವಿಶ್ವ ಕಪ್​ನಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿರುವ ರೋಹಿತ್​ ತಮ್ಮ ಸಿಕ್ಸರ್​ಗಳ ಸಂಖ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ಇರಾದೆಯಲ್ಲಿದ್ದಾರೆ. 2007-2022ರ ವಿಶ್ವಕಪ್​ ಆವೃತ್ತಿಯಲ್ಲಿ ರೋಹಿತ್​ ಒಟ್ಟು 39 ಪಂದ್ಯಗಳನ್ನು ಆಡಿದ್ದಾರೆ.

ವರ್ಷ ಏಕದಿನ ಪ್ರಶಸ್ತಿ ಗೆದ್ದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಕೆಲವು ದಿನಗಳ ಹಿಂದಷ್ಟೇ ವರ್ಷದ ಏಕದಿನ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದರು. ಕೊಹ್ಲಿ 2023ರ ಏಕದಿನ ಮಾದರಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. 24 ಇನ್ನಿಂಗ್ಸ್‌ನಲ್ಲಿ 72.47ರ ಸರಾಸರಿಯಲ್ಲಿ 1,377 ರನ್‌ ಕಲೆಹಾಕಿದ್ದರು. 6 ಶತಕಗಳು ಮತ್ತು 8 ಅರ್ಧ ಶತಕಗಳು ಬಾರಿಸಿದ್ದರು.

2023ರಲ್ಲಿ ಭಾರತದ ಏಷ್ಯಾ ಕಪ್‌ ಗೆಲುವಿನಲ್ಲಿ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅದರಲ್ಲೂ ಸೂಪರ್‌-4 ಹಂತದ ಪಾಕಿಸ್ಥಾನ ವಿರುದ್ಧದ ಹೈ ವೋಲ್ಟೇಜ್​ ಪಂದ್ಯದಲ್ಲಿ 94 ಎಸೆತಗಳಲ್ಲಿ ಅಜೇಯ 122 ರನ್‌ ಬಾರಿಸಿ ತಂಡದ ಗೆಲುವಿಗೆ ಕಾರಣರಾಗಿದ್ದರು. ಏಕದಿನ ವಿಶ್ವಕಪ್‌ನಲ್ಲಿಯೂ 11 ಪಂದ್ಯಗಳಲ್ಲಿ 765 ರನ್‌ ಬಾರಿಸಿ ಗಮನ ಸೆಳೆದಿದ್ದರು. ಇದೇ ವೇಳೆ ಕಿವೀಸ್​ ವಿರುದ್ಧದ ಸೆಮಿಫೈನಲ್‌ನಲ್ಲಿ ಶತಕ ಬಾರಿಸಿ ಏಕದಿನದಲ್ಲಿ 50 ಶತಕಗಳ ಸಾಧನೆಗೈದಿದ್ದರು. ಈ ಮೂಲಕ ಸಚಿನ್‌ ಹೆಸರಿನಲ್ಲಿದ್ದ 49 ಶತಕಗಳ ದಾಖಲೆಯನ್ನು ಮುರಿದಿದ್ದರು. ಇದೀಗ ಟಿ20 ವಿಶ್ವಕಪ್​ನಲ್ಲಿಯೂ ಅಮೋಘ ಬ್ಯಾಟಿಂಗ್​ ನಡೆಸುವ ವಿಶ್ವಾಸದಲ್ಲಿದ್ದಾರೆ.

Continue Reading

ಕ್ರೀಡೆ

R Ashwin: ಮೆಗಾ ಹರಾಜಿಗೂ ಮುನ್ನ ಚೆನ್ನೈ ಫ್ರಾಂಚೈಸಿ ಸೇರಿದ ಆರ್​. ಅಶ್ವಿನ್; ಹೊಸ ಜವಾಬ್ದಾರಿ

R Ashwin: ಅಶ್ವಿನ್ ನಮ್ಮ ಫ್ರಾಂಚೈಸಿಗೆ ಮರಳುತ್ತಿರುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಅವರು ಸೂಪರ್‌ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ. ಅವರ ಬದ್ಧತೆ ಮತ್ತು ಅತ್ಯುತ್ತಮ ಆಟವು ಭಾರತ, ತಮಿಳುನಾಡು ತಂಡಕ್ಕೆ ತಿಳಿದಿದೆ ಎಂದು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಹೇಳಿದ್ದಾರೆ.

VISTARANEWS.COM


on

R Ashwin
Koo

ಚೆನ್ನೈ: ಮುಂಬರುವ ಐಪಿಎಲ್​ 2025(IPL 2025) ಆಟಗಾರರ ಮೆಗಾ ಹರಾಜಿಗೆ(IPL 2025 Auction) ಮುನ್ನವೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ರಾಜಸ್ಥಾನ್​​ ರಾಯಲ್ಸ್​ ತಂಡದ ಆರ್​. ಅಶ್ವಿನ್​(R Ashwin) ಮರಳಿ ಚೆನ್ನೈ ಸೂಪರ್​ ಕಿಂಗ್ಸ್​ ಫ್ರಾಂಚೈಸಿಗೆ(CSK) ಮರಳಿದ್ದಾರೆ. 2008 ರಿಂದ 2015 ರವರೆಗೆ ಅಶ್ವಿನ್​ ಚೆನ್ನೈ ತಂಡದ ಪರ ಆಡಿದ್ದರು. ಇದೀಗ ಅವರಿಗೆ ಫ್ರಾಂಚೈಸಿ ಹೊಸ ಜವಾಬ್ದಾರಿ ನೀಡಿದೆ. ಆಟಗಾರನಾಗಿ ಅಲ್ಲ. ಬದಲಾಗಿ ಸಿಎಸ್‌ಕೆಯ ಹೈ-ಪರ್ಫಾರ್ಮೆನ್ಸ್ ಸೆಂಟರ್‌ ಕೇಂದ್ರದಲ್ಲಿ ಆಟಗಾರರ ಅಭಿವೃದ್ಧಿ ಮತ್ತು ಕಾರ್ಯಕ್ಷಮತೆಯ ಸುಧಾರಣೆಯ ಮಾಡುವ ಜವಾಬ್ದಾರಿ ನೀಡಿದೆ.

‘ಕ್ರಿಕೆಟ್ ಅನ್ನು ಬೆಳೆಸುವುದು ಮತ್ತು ಕ್ರಿಕೆಟ್ ಬಳಗಕ್ಕೆ ಕೊಡುಗೆ ನೀಡುವುದು ನನ್ನ ಮುಖ್ಯ ಗುರಿಯಾಗಿದೆ. ತಮ್ಮ ಕ್ರಿಕೆಟ್ ವೃತ್ತಿಜೀವನದ ಆರಂಭಿಕ ಹಂತಗಳಲ್ಲಿ ಮಹತ್ವದ ಪಾತ್ರವನ್ನು ವಹಿಸಿದ ಸಂಸ್ಥೆಗೆ ಇದೀಗ ಮರಳಿರುವುದು ಸಂತೋಷವಾಗಿದೆ.’ ಎಂದು ಅಶ್ವಿನ್ ಹೇಳಿದ್ದಾರೆ.

‘ಅಶ್ವಿನ್ ನಮ್ಮ ಫ್ರಾಂಚೈಸಿಗೆ ಮರಳುತ್ತಿರುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಅವರು ಸೂಪರ್‌ಕಿಂಗ್ಸ್ ವೆಂಚರ್ಸ್ ಮತ್ತು ನಮ್ಮ ಹೈ-ಪರ್ಫಾರ್ಮೆನ್ಸ್ ಸೆಂಟರ್‌ನಲ್ಲಿ ದೊಡ್ಡ ಪಾತ್ರವನ್ನು ವಹಿಸಲಿದ್ದಾರೆ. ಅವರ ಬದ್ಧತೆ ಮತ್ತು ಅತ್ಯುತ್ತಮ ಆಟವು ಭಾರತ, ತಮಿಳುನಾಡು ತಂಡಕ್ಕೆ ತಿಳಿದಿದೆ’ ಎಂದು ಸಿಎಸ್‌ಕೆ ಸಿಇಒ ಕಾಶಿ ವಿಶ್ವನಾಥನ್ ಹೇಳಿದರು.

ಮುಂದಿನ ವರ್ಷ ನಡೆಯುವ 18ನೇ ಆವೃತ್ತಿಯ ಐಪಿಎಲ್​ ಟೂರ್ನಿಗೆ(IPL 2025 Mega Auction) ಇದೇ ವರ್ಷಾಂತ್ಯದಲ್ಲಿ ಆಟಗಾರರ ಮಿನಿ ಹರಾಜು ನಡೆಯಲಿದೆ. ಈ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಇದರ ಬೆನ್ನಲ್ಲೇ ಎಲ್ಲ 10 ತಂಡಗಳಿಗೆ ಗರಿಷ್ಠ 3 ಆಟಗಾರರನ್ನು ರಿಟೇನ್​ ಮಾಡಿಕೊಳ್ಳಲು ಬಿಸಿಸಿಐ ಅವಕಾಶ ಕಲ್ಪಿಸಲಿದೆ ಎಂದು ವರದಿಯಾಗಿದೆ. ಜತೆಗೆ ಹರಾಜಿನಲ್ಲಿ ಒಂದು ರೈಟ್​ ಟು ಮ್ಯಾಚ್​ (ಆರ್​ಟಿಎಂ) ಕಾರ್ಡ್​ ಬಳಸಲು ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ Ravichandran Ashwin : ಪಂದ್ಯದ ನಡುವೆ ಪತಿ ಎದುರಿಸಿದ ಕಷ್ಟಗಳನ್ನು ವಿವರಿಸಿದ ಆರ್​. ಅಶ್ವಿನ್ ಪತ್ನಿ

ಏನಿದು ಆರ್​ಟಿಎಂ ಕಾರ್ಡ್​?


ಆರ್​ಟಿಎಂ ಅನ್ವಯ ಫ್ರಾಂಚೈಸಿಯೊಂದು ತನ್ನ ತಂಡದ ಆಟಗಾರನೊಬ್ಬ ಬೇರೆ ತಂಡಕ್ಕೆ ಹೆಚ್ಚಿನ ಮೊತ್ತಕ್ಕೆ ಮಾರಾಟವಾದಾಗ ಅದೇ ಮೊತ್ತಕ್ಕೆ ಆತನನ್ನು ತನ್ನ ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ನೀಡಲಾಗುತ್ತದೆ. ಇದನ್ನು ಆರ್​ಟಿಎಂ ಎನ್ನಲಾಗುತ್ತದೆ. ಈ ಬಾರಿ ಒಂದೇ ಕಾರ್ಡ್​ ಬಳಕೆಗೆ ಅವಕಾಶ ನೀಡುವುದಾಗಿ ಹೇಳಲಾಗಿದೆ. ಹೆಚ್ಚಿನ ಆರ್​ಟಿಎಂ ಬಳಸಲು ಅವಕಾಶ ನೀಡಿದರೆ ಹರಾಜು ಪ್ರಕ್ರಿಯೆ ಮಹತ್ವ ಕಳೆದುಕೊಳ್ಳುತ್ತದೆ ಎಂದು ಬಿಸಿಸಿಐ ಅಧಿಕಾರಿಗಳ ಅಭಿಪ್ರಾಯ. ಐಪಿಎಲ್​ನಲ್ಲಿ ಇದುವರೆಗೆ ವಿರಾಟ್​ ಕೊಹ್ಲಿ (ಆರ್​ಸಿಬಿ), ಜಸ್​ಪ್ರೀತ್​ ಬುಮ್ರಾ(ಮುಂಬೈ) ಮಾತ್ರ ಒಂದೇ ತಂಡದ ಪರ ಆಡಿದ್ದಾರೆ. ಉಳಿದ ಆಟಗಾರರು ಬೇರೆ ಬೇರೆ ಫ್ರಾಂಚೈಸಿ ಪರ ಕನಿಷ್ಠ ಒಂದೆರಡು ವರ್ಷಗಳ ಕಾಲ ಆಡಿದ್ದಾರೆ.

ಇಂಪ್ಯಾಕ್ಟ್​ ನಿಯಮ ಕೈಬಿಡುವ ಸಾಧ್ಯತೆ!


ರೋಹಿತ್​ ಶರ್ಮ, ವಿರಾಟ್​ ಕೊಹ್ಲಿ ಸೇರಿ ಹಲವು ಅನುಭವಿ ಆಟಗಾರರಿಂದ ಇಂಪ್ಯಾಕ್ಟ್​ ನಿಯಮದ ಬಗ್ಗೆ ಅಪಸ್ವರ ಕೇಳಿ ಬಂದಿತ್ತು. ಬಿಸಿಸಿಐ ಕೂಡ ಮುಂದಿನ ಬಾರಿ ಈ ನಿಯಮದ ಬಗ್ಗೆ ಚಿಂತಿಸಲಾಗುವುದು ಎಂದು ಹೇಳಿತ್ತು. ಹೀಗಾಗಿ ಮುಂದಿನ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ನಿಯಮ ಕೈ ಬಿಟ್ಟರೂ ಅಚ್ಚರಿಯಿಲ್ಲ. ಧೋನಿ ಅವರು ಇಂಪ್ಯಾಕ್ಟ್​ ನಿಯಮ ಇಲ್ಲವಾದರೆ ಮುಂದಿನ ಆವೃತ್ತಿ ಆಡುವುದು ಅನುಮಾನ ಎಂದು ಫ್ರಾಂಚೈಸಿ ಅಧಿಕಾರಿಯೊಬ್ಬರು ಹೇಳಿದ್ದರು. ಒಂದೊಮ್ಮೆ ಈ ನಿಯಮ ಕೈಬಿಟ್ಟರೆ ಆಗ ಧೋನಿ ಆಡುತ್ತಾರಾ ಎನ್ನುವ ಪ್ರಶ್ನೆಯೊಂದು ಮೂಡುವುದು ಸಹಜ.

Continue Reading
Advertisement
Rahul Dravid
ಕ್ರೀಡೆ2 mins ago

Rahul Dravid: ಸುದ್ದಿಗೋಷ್ಠಿಯಲ್ಲಿ ಉರ್ದು ಮಾತನಾಡಿದ ರಾಹುಲ್​ ದ್ರಾವಿಡ್​; ವಿಡಿಯೊ ವೈರಲ್​

Drowned in Water young man drowned in tungabhadra river and died
ಕರ್ನಾಟಕ8 mins ago

Drowned in Water: ನದಿಗೆ ಬಿದ್ದವನು ಬದುಕಿದ, ರಕ್ಷಿಸಲು ಹೋದವನು ಸತ್ತ

Operation London Cafe movie will be released very soon
ಕರ್ನಾಟಕ16 mins ago

Kannada New Movie: ಅತೀ ಶೀಘ್ರದಲ್ಲೇ ತೆರೆಗೆ ಬರಲಿದೆ ‘ಆಪರೇಷನ್ ಲಂಡನ್ ಕೆಫೆ’!

Lok Sabha Election 2024
ರಾಜಕೀಯ22 mins ago

Lok Sabha Election 2024: ಹಿಂದೂಗಳಿಗೆ ಬುದ್ಧಿ ಇದ್ದಿದ್ದರೆ ಬಿಜೆಪಿ ಇಷ್ಟು ಹಿನ್ನಡೆ ಕಾಣುತ್ತಿರಲಿಲ್ಲ! ವಿಡಿಯೊ ವೈರಲ್‌

HD Kumaraswamy
ಕರ್ನಾಟಕ23 mins ago

HD Kumaraswamy: ಮೋದಿ ಬಯಸಿದ್ರೆ ಮಂತ್ರಿಯಾಗಲು ರೆಡಿ; ಮನದಾಸೆ ತೆರೆದಿಟ್ಟ ಕುಮಾರಸ್ವಾಮಿ!

Star Street Fashion
ಫ್ಯಾಷನ್33 mins ago

Star Street Fashion: ಬೆಂಗಳೂರಿನ ರಸ್ತೆಯಲ್ಲಿ ಕಾಂತಾರ ಬೆಡಗಿಯ ಹೈ ಸ್ಟ್ರೀಟ್‌ ಫ್ಯಾಷನ್‌!

Narendra Modi
ದೇಶ50 mins ago

Narendra Modi: ಜೂನ್‌ 7ರಂದು ಸಂಜೆ 5ಕ್ಕೆ ಪ್ರಧಾನಿಯಾಗಿ ಮೋದಿ ಪ್ರಮಾಣವಚನ?

Vitamin A
ಆರೋಗ್ಯ54 mins ago

Vitamin A: ವಿಟಮಿನ್‌ ಎ ಕೊರತೆಯಾದರೆ ಏನಾಗುತ್ತದೆ?

Pakistan Players
T20 ವಿಶ್ವಕಪ್57 mins ago

Pakistan Players: ನ್ಯೂಯಾರ್ಕ್​ನಲ್ಲಿ ದರೋಡೆಗಿಳಿದ ಪಾಕಿಸ್ತಾನ ಕ್ರಿಕೆಟಿಗರು; ತನಿಖೆಗೆ ಆಗ್ರಹ

Cabinet meeting
ದೇಶ1 hour ago

Cabinet Meeting: “ನಂಬರ್‌ ಬಗ್ಗೆ ಚಿಂತೆ ಬೇಡ…ಉತ್ತಮ ಕೆಲಸ ಮಾಡಿ”- ನಿರ್ಗಮಿತ ಸಚಿವರಿಗೆ ಮೋದಿ ಕಿವಿಮಾತು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌