IND VS NZ | ಭಾರತ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧದ ದ್ವಿತೀಯ ಪಂದ್ಯ ಮಳೆಯಿಂದ ರದ್ದು - Vistara News

Latest

IND VS NZ | ಭಾರತ ಮತ್ತು ನ್ಯೂಜಿಲ್ಯಾಂಡ್​ ವಿರುದ್ಧದ ದ್ವಿತೀಯ ಪಂದ್ಯ ಮಳೆಯಿಂದ ರದ್ದು

ಭಾರತ ಮತ್ತು ನ್ಯೂಜಿಲ್ಯಾಂಡ್ ವಿರುದ್ಧದ ದ್ವಿತೀಯ ಏಕದಿನ ಪಂದ್ಯ ಮಳೆಯಿಂದ ರದ್ದುಗೊಂಡಿದ್ದು ಕಿವೀಸ್ ನಾಡಲ್ಲಿ ಸರಣಿ ಗೆಲ್ಲುವ ಭಾರತದ ಕನಸು ಭಗ್ನವಾಗಿದೆ.

VISTARANEWS.COM


on

No result
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವೆಲ್ಲಿಂಗ್ಟನ್​: ಪ್ರವಾಸಿ ಭಾರತ ಮತ್ತು ನ್ಯೂಜಿಲ್ಯಾಂಡ್​ ನಡುವಿನ ಎರಡನೇ ಏಕದಿನ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹವಾಮಾನ ಇಲಾಖೆಯ ಮಾಹಿತಿಯಂತೆಯೇ ಹ್ಯಾಮಿಲ್ಟನ್​ನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಪಂದ್ಯ ಫಲಿತಾಂಶವಿಲ್ಲದೆ ಅಂತ್ಯಗೊಂಡಿದೆ.

ವೆಲಿಂಗ್ಟನ್​ನ ಸೀಡನ್​ ಪಾರ್ಕ್​ನಲ್ಲಿ ಏರ್ಪಟ್ಟಿದ ಈ ಮುಖಾಮುಖಿಯಲ್ಲಿ ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್ ಮಾಡಲು ಆರಂಭಿಸಿತು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದ ನಾಯಕ ಶಿಖರ್ ಧವನ್ ಮತ್ತು ಶುಭಮನ್ ಗಿಲ್ ಜೋಡಿ 4.5 ಓವರ್‌ಗಳಲ್ಲಿ 22 ರನ್ ಗಳಿಸಿತು. ಈ ವೇಳೆ ಮಳೆ ಸುರಿದ ಕಾರಣ ಆಟವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಯಿತು. ಮಳೆ ನಿಂತ ಬಳಿಕ ಮತ್ತೆ ಪಂದ್ಯ ಆರಂಭಿಸಿದರೂ 2 ಎಸೆತ ಕಾಣುವ ವೇಳೆ ಮತ್ತೆ ಮಳೆ ಕಾಡಿತು. ಇದರಿಂದ ಡಕ್​ವರ್ತ್​ ಲೂಯಿಸ್​ ನಿಯಮದ ಪ್ರಕಾರ ಪಂದ್ಯವನ್ನು 29 ಓವರ್​ಗಳಿಗೆ ಸೀಮಿತಗೊಳಿಸಲಾಯಿತು.

ಇದಾದ ಬಳಿಕ ಮತ್ತೆ ಪಂದ್ಯ ಆರಂಭಗೊಂಡು ಭಾರತ 12.5 ಓವರ್‌ಗಳಲ್ಲಿ 1 ವಿಕೆಟ್‌ ಕಳೆದುಕೊಂಡು 89 ರನ್ ಗಳಿಸಿತ್ತು. ಆದರೆ ಮತ್ತೆ ಮಳೆಯಿಂದಾಗಿ ಪಂದ್ಯವನ್ನು ನಿಲ್ಲಿಸಲಾಯಿತು. ಹ್ಯಾಮಿಲ್ಟನ್‌ನಲ್ಲಿ ಭಾನುವಾರ ಧಾರಾಕಾರ ಮಳೆ ಸುರಿದಿದ್ದು, ಸುದೀರ್ಘ ಕಾಯುವಿಕೆಯ ಬಳಿಕ ಉಭಯ ತಂಡಗಳ ಜತೆ ಚರ್ಚಿಸಿ ಅಂತಿಮವಾಗಿ ಅಂಪೈರ್​ಗಳು ಪಂದ್ಯವನ್ನು ಫಲಿತಾಂಶವಿಲ್ಲದೆ ರದ್ದುಗೊಳಿಸಲಾಯಿತು.

ಈಗಾಗಲೇ ಮೊದಲ ಪಂದ್ಯವನ್ನು ಸೋತ ಭಾರತ ತಂಡಕ್ಕೆ ಈ ಪಂದ್ಯ ರದ್ದಾದ ಕಾರಣ ಸರಣಿ ವಶಪಡಿಸುವ ಕನಸು ಮಳೆಯಿಂದ ಕೊಚ್ಚಿಹೋಯಿತು.

ಇದನ್ನೂ ಓದಿ | INDvsPAK | ರಮೀಜ್‌ ರಾಜಾಗೆ ಖಡಕ್‌ ಉತ್ತರ ಕೊಟ್ಟ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Samrat Choudhary: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

Samrat Choudhary: ನಿತೀಶ್ ಕುಮಾರ್ ಅವರು ಮಹಾಘಟಬಂಧನ್ ಮೈತ್ರಿಕೂಟವನ್ನು ತೊರೆದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಪೇಟವನ್ನು ಧರಿಸುವುದಾಗಿ ಪ್ರತಿಜ್ಞೆ ಮಾಡಿದ್ದ ಬಿಹಾರ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡ ಸಾಮ್ರಾಟ್ ಚೌಧರಿ ತಮ್ಮ ಪ್ರತಿಜ್ಞೆಯನ್ನು ಪೂರೈಸಿದ್ದಾರೆ. ನಿತೀಶ್ ಕುಮಾರ್ ಅವರು ಇಂಡಿ-ಮೈತ್ರಿಕೂಟಕ್ಕೆ ರಾಜೀನಾಮೆ ನೀಡಿ ಎನ್‌ಡಿಎಗೆ ಮರಳಿದ್ದಾರೆ. ಹಾಗಾಗಿ ಸಾಮ್ರಾಟ್ ಚೌಧರಿ ಅವರು ಈಗ ಅಯೋಧ್ಯೆಯಲ್ಲಿ ಭಗವಾನ್ ರಾಮನಿಗೆ ತಮ್ಮ ಮುಡಿಯನ್ನು ಅರ್ಪಿಸಿ ತಮ್ಮ ಪೇಟವನ್ನು ರಾಮನ ಪಾದಗಳಿಗೆ ಅರ್ಪಿಸುವ ಮೂಲಕ ತಮ್ಮ ಪ್ರತಿಜ್ಞೆಯನ್ನು ಪೂರೈಸಿದ್ದಾರೆ.

VISTARANEWS.COM


on

Samrat Choudhary
Koo

ಈ ಹಿಂದೆ ಜೆಡಿಯು ಮುಖ್ಯಸ್ಥರಾದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಾಘಟಬಂಧನ್ ಮೈತ್ರಿಕೂಟವನ್ನು ತೊರೆದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಪೇಟವನ್ನು ಧರಿಸುವುದಾಗಿ ಪ್ರತಿಜ್ಞೆ ಮಾಡಿದ್ದ ಬಿಹಾರ ಉಪ ಮುಖ್ಯಮಂತ್ರಿ ಮತ್ತು ಬಿಜೆಪಿ ಮುಖಂಡ ಸಾಮ್ರಾಟ್ ಚೌಧರಿ (Samrat Choudhary) ಅವರು ಇದೀಗ ತಮ್ಮ ಪ್ರತಿಜ್ಞೆಯನ್ನು ನೆನಪಿಸಿಕೊಂಡಿದ್ದು ಅದನ್ನು ಪೂರೈಸಿದ್ದಾರೆ.

ಇದೀಗ ಇಂಡಿ-ಮೈತ್ರಿಕೂಟಕ್ಕೆ ರಾಜೀನಾಮೆ ನೀಡಿದ ನಂತರ ನಿತೀಶ್ ಕುಮಾರ್ ಅವರು ಎನ್‍ಡಿಎಗೆ ಮರಳಿದ್ದಾರೆ. ಹಾಗಾಗಿ ಸಾಮ್ರಾಟ್ ಚೌಧರಿ ಅವರು ಈಗ ಅಯೋಧ್ಯೆಯಲ್ಲಿ ಭಗವಾನ್ ರಾಮನಿಗೆ ತಮ್ಮ ಮುಡಿಯನ್ನು ಅರ್ಪಿಸಿ ತಮ್ಮ ಪೇಟವನ್ನು ರಾಮನ ಪಾದಗಳಿಗೆ ಅರ್ಪಿಸುವ ಮೂಲಕ ತಮ್ಮ ಪ್ರತಿಜ್ಞೆಯನ್ನು ಪೂರೈಸಿದ್ದಾರೆ.

ಈ ಕುರಿತು ಮಾತನಾಡಿದ ಸಾಮ್ರಾಟ್ ಚೌಧರಿ “ನಿತೀಶ್ ಕುಮಾರ್ ಅವರು ಇಂಡಿ- ಮೈತ್ರಿಕೂಟದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎನ್‍ಡಿಎಗೆ ಮರಳಿದ ದಿನ, ನಾನು ನನ್ನ ಪೇಟವನ್ನು ಭಗವಾನ್ ರಾಮನಿಗೆ ಅರ್ಪಿಸುತ್ತೇನೆ ಎಂದು ಘೋಷಿಸಿದೆ. ನಿತೀಶ್ ಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಪೇಟ ಧರಿಸುವುದಾಗಿ ಪ್ರತಿಜ್ಞೆ ಮಾಡಿದ್ದೆ ಎಂಬುದು ನಿಜ. ಆದರೆ ಈಗ ಅವರು ಇಂಡಿ-ಮೈತ್ರಿಕೂಟದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (ಎನ್‍ಡಿಎ) ಮರಳಿದ್ದಾರೆ, ಹಾಗಾಗಿ ನನ್ನ ಪೇಟವನ್ನು ಭಗವಾನ್ ರಾಮನ ಪಾದಗಳಿಗೆ ಅರ್ಪಿಸುವ ಸಮಯ ಬಂದಿದೆ” ಎಂದು ಹೇಳಿದ್ದಾರೆ.

ಈ ವರ್ಷದ ಆರಂಭದಲ್ಲಿ ನಿತೀಶ್ ಕುಮಾರ್ ಎನ್‍ಡಿಎಗೆ ಮರಳಿದ್ದು ಕಳೆದ ದಶಕದಲ್ಲಿ ಮೈತ್ರಿಗಳಲ್ಲಿ ಐದನೇ ಬದಲಾವಣೆಯನ್ನು ಸೂಚಿಸುತ್ತದೆ, ಇದರ ಪರಿಣಾಮವಾಗಿ ಮಹಾಘಟಬಂಧನ್ ಸರ್ಕಾರದ ಪತನವಾಯಿತು ಮತ್ತು ಬಿಹಾರದಲ್ಲಿ ಹೊಸ ಎನ್‍ಡಿಎ ನೇತೃತ್ವದ ಸರ್ಕಾರ ರಚನೆಯಾಯಿತು. ಬಿಜೆಪಿ ನಾಯಕರಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: ಮಕ್ಕಳನ್ನು ಬೆಲ್ಟ್‌ನಿಂದ ಕ್ರೂರವಾಗಿ ಥಳಿಸಿದ ತಾಯಿ; ವಿಡಿಯೊ ನೋಡಿ ಜನಾಕ್ರೋಶ

ಈ ನಡುವೆ ತಮ್ಮ ಪ್ರತಿಜ್ಞೆಯನ್ನು ನೆನೆಪಿಸಿಕೊಂಡ ಚೌಧರಿ ಜೂನ್ 2ರಂದು ಅಯೋಧ್ಯೆಗೆ ತೆರಳಿ ತಲೆ ಬೋಳಿಸಿಕೊಂಡ ನಂತರ ಅವರು ಇಂದು ರಾಮ ಮಂದಿರದಲ್ಲಿ ತಮ್ಮ ಪೇಟವನ್ನು ಅರ್ಪಿಸಿದ್ದಾರಂತೆ.

Continue Reading

Latest

Viral Video: ರಜೆಯಲ್ಲೂ ಮಗುವಿನ ಹೋಮ್‌ ವರ್ಕ್ ನೋಡಿ ಸಿಟ್ಟಾದ ತಾಯಿ ಮಾಡಿದ್ದೇನು? ವಿಡಿಯೊ ನೋಡಿ!

Viral Video: ಮಕ್ಕಳಿಗೆ ರಜಾ ದಿನಗಳಲ್ಲಿ ಶಿಕ್ಷಕರು ಹೋಂವರ್ಕ್ ನೀಡುವುದು ಸಾಮಾನ್ಯವಾಗಿದೆ. ಆದರೆ ಇಲ್ಲೊಬ್ಬ ತಾಯಿ ಮಗುವಿಗೆ ಶಾಲೆಯಲ್ಲಿ ಶಿಕ್ಷಕರು ನೀಡಿದ ಹೋಮ್‌ ವರ್ಕ್ ನೋಡಿ ಸಿಟ್ಟಾಗಿದ್ದಾರೆ. ಆಕೆ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿಡಿಯೊಂದನ್ನು ಮಾಡಿ ಶಿಕ್ಷಕರು ಹಾಗೂ ಶಿಕ್ಷಣ ವ್ಯವಸ್ಥೆಯ ವಿರುದ್ಧ ತನ್ನ ಹತಾಶೆಯ ಹೊರಹಾಕಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಇದೀಗ ಚರ್ಚೆಗೆ ಕಾರಣವಾಗಿದೆ. ಈ ವಿಡಿಯೊದಲ್ಲಿ ಮಹಿಳೆಯೊಬ್ಬರು ಶಿಕ್ಷಕರು ಮಕ್ಕಳಿಗೆ ಮಾಡಲು ಕಷ್ಟಕರವಾದ ಹೋಮ್ ವರ್ಕ್ ಅನ್ನು ನೀಡುತ್ತಾರೆ. ಅದಕ್ಕೆ ನಿಮ್ಮ ಪೋಷಕರ ಸಹಾಯ ತೆಗೆದುಕೊಳ್ಳುವಂತೆ ಹೇಳುತ್ತಾರೆ. ಅದರ ಬದಲು ಶಿಕ್ಷಕರು ಮಕ್ಕಳಿಗೆ ಅವರಿಗೆ ಮಾಡಲು ಸಾಧ್ಯವಾಗುವಂತಹ ಹೋಮ್ ವರ್ಕ್ ಅನ್ನು ನೀಡಿ. ಇದರಿಂದ ಅವರು ಪೋಷಕರ ಮೇಲೆ ಅವಲಂಬಿತವಾಗದೆ ಅವರೇ ಅದನ್ನು ಪೂರ್ಣಗೊಳಿಸುತ್ತಾರೆ. ಇದರಿಂದ ಪೋಷಕರಿಗೆ ಹೊರೆಯಾಗುವುದಿಲ್ಲ ಎಂದು ಸಲಹೆ ನೀಡಿದ್ದಾರೆ.

VISTARANEWS.COM


on

Viral Video
Koo

ಹಿಂದೆಲ್ಲ ಮಕ್ಕಳ ಶಾಲಾ ಹೋಮ್‌ ವರ್ಕ್ ಬಗ್ಗೆ ಪೋಷಕರು ತಲೆ ಕೆಡಿಸಿಕೊಳ್ಳುತ್ತಿರಲಿಲ್ಲ. ಆದರೆ ಇಂದಿನ ಕಾಲದಲ್ಲಿ ಶಾಲೆಯ ಹೋಮ್‌ ವರ್ಕ್‍ಗೆ ಮಕ್ಕಳಿಗಿಂತ ತಾಯಂದಿರೇ ಹೆಚ್ಚು ತಲೆ ಕೆಡಿಸಿಕೊಳ್ಳುತ್ತಾರೆ. ಮಕ್ಕಳು ಶಾಲೆಯ ಹೋಮ್‌ ವರ್ಕ್ ಮಾಡಲು ಹೆಚ್ಚಾಗಿ ತಾಯಿಯ ಮೇಲೆ ಅವಲಂಬಿತರಾಗುತ್ತಾರೆ. ಹಾಗಾಗಿ ಮನೆಗೆಲಸದ ಜೊತೆಗೆ ಮಕ್ಕಳ ಶಾಲೆಯ ಹೋಮ್ ವರ್ಕ್ ಮಾಡಿಸುವುದರಲ್ಲಿ ತಾಯಂದಿರಿಗೆ ಸಾಕು ಸಾಕಾಗಿ ಹೋಗುತ್ತದೆ. ಹಾಗಾಗಿ ಹಲವು ತಾಯಂದಿರು ಮಕ್ಕಳಿಗೆ ಯಾವಾಗ ಬೇಸಿಗೆ ರಜೆ ಸಿಗುತ್ತದೆ, ತಮಗೆ ಯಾವಾಗ ಈ ಕೆಲಸದಿಂದ ಫ್ರೀಡಂ ಸಿಗುತ್ತದೆ ಎಂದು ಕಾಯುತ್ತಿರುತ್ತಾರೆ. ಆದರೆ ಈ ರಜಾದಿನಗಳಲ್ಲಿಯೂ ಮಕ್ಕಳಿಗೆ ಶಾಲೆಯಲ್ಲಿ ಹೋಮ್‌ ವರ್ಕ್ ನೀಡಿದರೆ ತಾಯಂದಿರು ಕೋಪಗೊಳ್ಳುವುದು ಸಹಜ. ಅಂತಹದೊಂದು ಘಟನೆ ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ಮಕ್ಕಳಿಗೆ ರಜಾ ದಿನಗಳಲ್ಲಿ ಶಿಕ್ಷಕರು ಹೋಮ್ ವರ್ಕ್ ನೀಡುವುದು ಸಾಮಾನ್ಯವಾಗಿದೆ. ಆದರೆ ಇಲ್ಲೊಬ್ಬ ತಾಯಿ ಮಗುವಿಗೆ ಶಾಲೆಯಲ್ಲಿ ಶಿಕ್ಷಕರು ನೀಡಿದ ಹೋಮ್ ವರ್ಕ್ ನೋಡಿ ಸಿಟ್ಟಾಗಿದ್ದಾರೆ. ಆಕೆ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿಡಿಯೊಂದನ್ನು ಮಾಡಿ ಶಿಕ್ಷಕರು ಹಾಗೂ ಶಿಕ್ಷಣ ವ್ಯವಸ್ಥೆಯ ವಿರುದ್ಧ ತನ್ನ ಹತಾಶೆಯ ಹೊರಹಾಕಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಇದೀಗ ಚರ್ಚೆಗೆ ಕಾರಣವಾಗಿದೆ.

ಈ ವಿಡಿಯೊದಲ್ಲಿ ಮಹಿಳೆಯೊಬ್ಬರು ಶಿಕ್ಷಕರು ಮಕ್ಕಳಿಗೆ ಮಾಡಲು ಕಷ್ಟಕರವಾದ ಹೋಮ್ ವರ್ಕ್ ಅನ್ನು ನೀಡುತ್ತಾರೆ. ಅದಕ್ಕೆ ನಿಮ್ಮ ಪೋಷಕರ ಸಹಾಯ ತೆಗೆದುಕೊಳ್ಳುವಂತೆ ಹೇಳುತ್ತಾರೆ. ಅದರ ಬದಲು ಶಿಕ್ಷಕರು ಮಕ್ಕಳಿಗೆ ಅವರಿಗೆ ಮಾಡಲು ಸಾಧ್ಯವಾಗುವಂತಹ ಹೋಂವರ್ಕ್ ಅನ್ನು ನೀಡಿ. ಇದರಿಂದ ಅವರು ಪೋಷಕರ ಮೇಲೆ ಅವಲಂಬಿತವಾಗದೆ ಅವರೇ ಅದನ್ನು ಪೂರ್ಣಗೊಳಿಸುತ್ತಾರೆ. ಇದರಿಂದ ಪೋಷಕರಿಗೆ ಹೊರೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

Viral Video

ಇದನ್ನೂ ಓದಿ: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

ಈ ವಿಡಿಯೊವನ್ನು ಜೂನ್ 30ರಂದು ಹಂಚಿಕೊಳ್ಳಲಾಗಿದ್ದು, ಇದಕ್ಕೆ “ಶಿಕ್ಷಣ ವ್ಯವಸ್ಥೆಯು ಪೋಷಕರನ್ನು ಶೋಷಿಸುತ್ತಿದೆ” ಎಂಬರ್ಥದ ಶೀರ್ಷಿಕೆ ನೀಡಿದ್ದಾರೆ. ಈ ವಿಡಿಯೊಗೆ 10 ಲಕ್ಷಕ್ಕೂ ಹೆಚ್ಚು ವೀವ್ಸ್ ಬಂದಿದೆ. ತಾಯಿಯ ಈ ಮನವಿಗೆ ಅನೇಕರು ಪ್ರತಿಕ್ರಿಯೆ ನೀಡಿದ್ದಾರೆ. ಹಾಗೇ ಇದರಲ್ಲಿ ಶಿಕ್ಷಣ ವ್ಯವಸ್ಥೆಯ ಬಗ್ಗೆ ಕೆಲವರು ಮಾತನಾಡಿದರೆ, ಕೆಲವು ಪೋಷಕರು ತಮ್ಮ ಮಕ್ಕಳಿಗೆ ರಜಾ ದಿನಗಳಲ್ಲಿ ನೀಡಿದ ಹೋಂವರ್ಕ್ ಗಳ ಬಗ್ಗೆ ವಿವರಣೆ ನೀಡಿದ್ದಾರೆ. ಹಾಗೂ ಇನ್ನು ಕೆಲವರು ಈ ಹೋಮ್ ವರ್ಕ್‌ನಿಂದ ಮಕ್ಕಳು ತಮ್ಮ ಕಲಿಕೆಯ ಅಭ್ಯಾಸದಲ್ಲೇ ತೊಡಗಿರುತ್ತಾರೆ. ಇದರಿಂದ ಅವರು ತಮ್ಮ ಪೋಷಕರೊಂದಿಗೆ ಸಮಯ ಕಳೆಯಲು ಸಾಧ್ಯವಾಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Continue Reading

Latest

Sexual Harassment: ಎಲ್ಲಾ ತಂದೆಯರೂ ಹೀಗೇ ಮಾಡುತ್ತಾರೆ ಎನ್ನುತ್ತ ಮಗಳನ್ನೇ ಗರ್ಭಿಣಿ ಮಾಡಿದ್ದ ನೀಚ ತಂದೆಗೆ 101 ವರ್ಷ ಶಿಕ್ಷೆ!

Sexual Harassment: ಹೆಣ್ಣುಮಕ್ಕಳಿಗೆ ಅಪ್ಪನೆಂದರೆ ಆಕಾಶ ಎಂಬ ಭಾವ ಇರುತ್ತದೆ. ಆದರೆ ಈಗ ಸಮಾಜದಲ್ಲಿ ನಡೆಯುತ್ತಿರುವ ಘಟನೆ ನೋಡಿದರೆ ಅಪ್ಪನೆಂದರೆ ಅನುಮಾನ ಪಡುವ ಹಾಗೇ ಆಗಿದೆ. ತನ್ನ ಮಗಳನ್ನು ಜತನದಿಂದ ಕಾಪಾಡಬೇಕಾದ ತಂದೆಯೇ ಮಗಳಿಗೆ ಸುಳ್ಳು ಹೇಳಿ ನಂಬಿಸಿ ಅವಳೊಂದಿಗೆ ಕಾಮದಾಟವಾಡಿದ್ದಾನೆ. ಸತತ ಆರು ವರ್ಷಗಳ ಕಾಲ ಮಗಳನ್ನು ತನ್ನ ಕಾಮತೃಷೆಗೆ ಬಳಸಿಕೊಂಡು ಗರ್ಭಿಣಿ ಮಾಡಿದಂತಹ ನೀಚಕೃತ್ಯ ಬಯಲಿಗೆ ಬಂದಿತ್ತು. ಇದೀಗ ಆತನಿಗೆ ಕೋರ್ಟ್‌ ಕಠಿಣ ಶಿಕ್ಷೆ ವಿಧಿಸಿದೆ.

VISTARANEWS.COM


on

Sexual Harassment
Koo

ತಂದೆ ತಮ್ಮ ಹೆಣ್ಣುಮಕ್ಕಳ ರಕ್ಷಕನಾಗಿರುತ್ತಾನೆ. ಆದರೆ ಈ ರಕ್ಷಕನೇ ಭಕ್ಷಕನಾದರೆ ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡುವವರು ಯಾರು? ಕೆಲವು ತಂದೆಯರು ತಮ್ಮ ಹೆಣ್ಣು ಮಕ್ಕಳನ್ನು ನೀಚರಿಂದ ಕಾಪಾಡಲು ತಮ್ಮ ಪ್ರಾಣವನ್ನೇ ಕೊಡುತ್ತಾರೆ. ಆದರೆ ಕೆಲವರು ತಮ್ಮ ಹೆಣ್ಣು ಮಕ್ಕಳನ್ನೇ ಕಾಮದಾಟಕ್ಕೆ(Sexual Harassment) ಬಳಸಿಕೊಳ್ಳುತ್ತಾರೆ. ಅಂತಹ ಒಂದು ಘಟನೆ ಕೇರಳದಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಆಕೆಯ ತಂದೆಯೇ ಆರು ವರ್ಷಗಳ ಕಾಲ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಕೇರಳದಲ್ಲಿ ನಡೆದಿದ್ದು, ಕೋರ್ಟ್ ಆತನಿಗೆ ತಕ್ಕ ಶಿಕ್ಷೆ ವಿಧಿಸಿದೆ. ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ, ಇದು ವೈರಲ್ ಆಗಿದ್ದು ಇದಕ್ಕೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ.  ನೀಚ ತಂದೆಯ ಕೃತ್ಯದ ವಿರುದ್ಧ ಜನರು ಕಿಡಿಕಾರಿದ್ದಾರೆ. ಇದೀಗ ಈ ಪಾಪಿ ತಂದೆಗೆ ಕೋರ್ಟ್‌ ಕಠಿಣ ಶಿಕ್ಷೆ ವಿಧಿಸಿದೆ.

ಆರೋಪಿ ಮುಹಮ್ಮದ್ ಎಚ್ ಮಗಳ ಮೇಲೆ ಅತ್ಯಾಚಾರ ಎಸಗಿದ ಪಾಪಿ ತಂದೆ. ಈತ ತನ್ನ 10 ವರ್ಷದ ಮಗಳಿಗೆ ʼಎಲ್ಲಾ ತಂದೆಯರು ತಮ್ಮ ಹೆಣ್ಣು ಮಕ್ಕಳಿಗೆ ಈ ರೀತಿ ಮಾಡುತ್ತಾರೆʼ ಎಂದು ಹೇಳುವ ಮೂಲಕ ಆಕೆಯನ್ನು ಆರು ವರ್ಷಗಳ ಕಾಲ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎನ್ನಲಾಗಿದೆ. ತಾಯಿ ಮನೆಯಲ್ಲಿ ಇಲ್ಲದ ಸಮಯದಲ್ಲಿ ತಂದೆ ಮಗಳ ಮೇಲೆ ಇಂತಹ ಘೋರ ಕೃತ್ಯ ಎಸಗಿದ್ದಾನೆ. ಇದರ ಪರಿಣಾಮವಾಗಿ ಬಾಲಕಿ 16ನೇ ವಯಸ್ಸಿಗೆ ಗರ್ಭಿಣಿಯಾಗಿದ್ದಾಳೆ. ಅಸ್ವಸ್ಥಗೊಂಡ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಈ ವಿಚಾರ ಬಯಲಿಗೆ ಬಂದಿತ್ತು.

ಈ ಬಗ್ಗೆ ಮಗಳು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು ಮಕ್ಕಳ ರಕ್ಷಣೆ ಕಾಯ್ದೆ, 2012 (ಪೋಕ್ಸೊ ಕಾಯ್ದೆ), ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಬಾಲನ್ಯಾಯ ಕಾಯ್ದೆ (ಜೆಜೆ ಕಾಯ್ದೆ) ಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದರು.

ಇದನ್ನೂ ಓದಿ: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

ಡಿಎನ್‍ಎ ಪರೀಕ್ಷೆಯಲ್ಲಿ ಸತ್ಯಾಂಶ ತಿಳಿದುಬಂದಿದೆ. ಹಾಗಾಗಿ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಂಡ ಕೇರಳ ನ್ಯಾಯಾಲಯವು ಮುಹಮ್ಮದ್‍ಗೆ ಜೀವಾವಧಿ ಶಿಕ್ಷೆಯೊಂದಿಗೆ 101 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅಂದರೆ ಹಲವು ಪ್ರತ್ಯೇಕ ಶಿಕ್ಷೆ ಸೇರಿ 101 ವರ್ಷ ಶಿಕ್ಷೆಯಾಗುತ್ತದೆ. ಈ ಶಿಕ್ಷೆಯನ್ನು ಜೀವಿತಾವಧಿಯಲ್ಲಿ ಒಟ್ಟಿಗೇ ಅನುಭವಿಸಬೇಕಾಗುತ್ತೆ.

Continue Reading

Latest

Ananth Ambani: ಸಾಮೂಹಿಕ ವಿವಾಹದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ಅಂಬಾನಿ ಕುಟುಂಬ

Ananth Ambani ಅನಂತ್ ಮತ್ತು ರಾಧಿಕಾ ಅವರ ವಿವಾಹ ಸಮಾರಂಭವು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಜುಲೈ 2 ರಂದು ಅಂಬಾನಿ ಕುಟುಂಬವು ದೀನದಲಿತರಿಗೆ ಸಾಮೂಹಿಕ ವಿವಾಹವನ್ನು ಆಯೋಜಿಸಿದೆ. ಈ ಸಮಾರಂಭವು ರಿಲಯನ್ಸ್ ಕಾರ್ಪೊರೇಟ್ ಪಾರ್ಕ್‍ನಲ್ಲಿ ನಡೆಯಿತು. ಮುಕೇಶ್ ಅಂಬಾನಿ, ನೀತಾ ಅಂಬಾನಿ, ಆಕಾಶ್ ಅಂಬಾನಿ, ಶ್ಲೋಕಾ ಅಂಬಾನಿ, ಇಶಾ ಅಂಬಾನಿ ಮತ್ತು ಆನಂದ್ ಪಿರಮಾಲ್ ಸೇರಿದಂತೆ ಇಡೀ ಕುಟುಂಬ ಮಂಗಳವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

VISTARANEWS.COM


on

Ananth Ambani
Koo

ಮುಂಬೈ : ಅಂಬಾನಿ ಕುಟುಂಬದ ಕುಡಿ ಅನಂತ್ ಅಂಬಾನಿ (Ananth Ambani) ಜುಲೈ 12ರಂದು ರಾಧಿಕಾ ಮರ್ಚೆಂಟ್ ಅವರನ್ನು ವಿವಾಹವಾಗಲಿದ್ದಾರೆ. ಈಗಾಗಲೇ ಮುಕೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಪುತ್ರನ ಮದುವೆಯ ಹಿನ್ನಲೆಯಲ್ಲಿ ಎರಡು ಅದ್ಧೂರಿ ವಿವಾಹಪೂರ್ವ ಉತ್ಸವಗಳನ್ನು ಆಚರಿಸಿದ್ದರು. ಈ ನಡುವೆ ಮದುವೆ ತಯಾರಿ ಭರದಿಂದ ಸಾಗುತ್ತಿದೆ. ಈ ಮಧ್ಯೆ ಅನಂತ್ ಮದುವೆಗೂ ಮುನ್ನ ಅಂಬಾನಿ ದಂಪತಿ ಇತ್ತೀಚೆಗೆ ದೀನದಲಿತರಿಗೆ ಸಾಮೂಹಿಕ ವಿವಾಹವನ್ನು ಆಯೋಜಿಸಿದ್ದರು.

ಅನಂತ್ ಮತ್ತು ರಾಧಿಕಾ ಅವರ ವಿವಾಹ ಸಮಾರಂಭವು ಸಮೀಪಿಸುತ್ತಿರುವ ಈ ಸಂದರ್ಭದಲ್ಲಿ ಜುಲೈ 2 ರಂದು ಅಂಬಾನಿ ಕುಟುಂಬವು ದೀನದಲಿತರಿಗೆ ಸಾಮೂಹಿಕ ವಿವಾಹವನ್ನು ಆಯೋಜಿಸಿದೆ. ಈ ಸಮಾರಂಭವು ರಿಲಯನ್ಸ್ ಕಾರ್ಪೊರೇಟ್ ಪಾರ್ಕ್‍ನಲ್ಲಿ ನಡೆಯಿತು.

ಮುಕೇಶ್ ಅಂಬಾನಿ, ನೀತಾ ಅಂಬಾನಿ, ಆಕಾಶ್ ಅಂಬಾನಿ, ಶ್ಲೋಕಾ ಅಂಬಾನಿ, ಇಶಾ ಅಂಬಾನಿ ಮತ್ತು ಆನಂದ್ ಪಿರಮಾಲ್ ಸೇರಿದಂತೆ ಇಡೀ ಕುಟುಂಬ ಮಂಗಳವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಮುಂಬೈ ಬಳಿಯ ಪಾಲ್ಘರ್ ಪ್ರದೇಶದ 50 ಬಡ ದಂಪತಿಗಳೊಂದಿಗೆ ಸಾಮೂಹಿಕ ವಿವಾಹವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸುಮಾರು 800 ಜನರು ಭಾಗವಹಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ನೀತಾ ಅಂಬಾನಿ, ಇಶಾ ಅಂಬಾನಿ, ಶ್ಲೋಕಾ ಅಂಬಾನಿ ಸಾಂಪ್ರದಾಯಿಕ ಉಡುಗೆಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇಶಾ ಅಂಬಾನಿ ಮತ್ತು ಶ್ಲೋಕಾ ಮೆಹ್ತಾ ಆಗಮಿಸಿದ ವಿಡಿಯೋ ವೈರಲ್ ಆಗಿದೆ. ಲೈಟ್ ಮೇಕಪ್ ಮತ್ತು ಶರಾರಾ ಸೂಟ್‍ನಲ್ಲಿ ಶ್ಲೋಕಾ ಸುಂದರವಾಗಿ ಕಾಣುತ್ತಿದ್ದರು. ಮತ್ತೊಂದೆಡೆ, ಅವರ ಪತಿ ಆಕಾಶ್ ಗರಿಗರಿಯಾದ ಬಿಳಿ ಬಣ್ಣದ ಶರ್ಟ್‍ನಲ್ಲಿ ಸ್ಮಾರ್ಟ್ ಆಗಿ ಕಾಣುತ್ತಿದ್ದರು. ಹಾಗೇ ಅನಾರ್ಕಲಿಯನ್ನು ಧರಿಸಿಕೊಂಡ ಇಶಾ ಅಂಬಾನಿ, ಅವರ ಪತಿ ಆನಂದ್ ಪಿರಮಾಲ್ ಅವರೊಂದಿಗೆ ಕಾಣಿಸಿಕೊಂಡರು. ನೀತಾ ಅಂಬಾನಿಯವರು ಕೆಂಪು-ಗುಲಾಬಿ ಬಣ್ಣ ಮಿಶ್ರಿತ ಸೀರೆಯಲ್ಲಿ ಮಿಂಚಿದ್ದಾರೆ.

ಸಮಾಜ ಸೇವೆಯಲ್ಲಿ ನಂಬಿಕೆ ಹೊಂದಿರುವ ಅಂಬಾನಿ ಕುಟುಂಬವು ಸಾಮೂಹಿಕ ವಿವಾಹ ಸಮಾರಂಭವನ್ನು ಆಯೋಜಿಸಿತ್ತು. ಕುಟುಂಬವು ಇತರರಿಗೆ ಸೇವೆ ಸಲ್ಲಿಸುವ ಮೂಲಕ ದೊಡ್ಡ ಸಮಾರಂಭವನ್ನು ಪ್ರಾರಂಭಿಸುವ ಸಂಪ್ರದಾಯವನ್ನು ಹೊಂದಿದೆ. ಮುಕೇಶ್ ಅಂಬಾನಿ ತಮ್ಮ ಕುಟುಂಬ ಸದಸ್ಯರೊಂದಿಗೆ ಸಮಾರಂಭದಲ್ಲಿ ಭಾಗವಹಿಸಿ ದಂಪತಿಗಳಿಗೆ ತಮ್ಮ ಹೃತ್ಪೂರ್ವಕ ಶುಭಾಶಯಗಳನ್ನು ತಿಳಿಸಿದರು. ಸಾಮೂಹಿಕ ವಿವಾಹದಲ್ಲಿ ಅಂಬಾನಿ ಕುಟುಂಬವು ದಂಪತಿಗಳಿಗೆ ಚಿನ್ನದ ಆಭರಣಗಳನ್ನು ಉಡುಗೊರೆಯಾಗಿ ನೀಡಿತು. ವಧುವಿಗೆ ಮಂಗಳಸೂತ್ರ, ಮದುವೆಯ ಉಂಗುರಗಳು ಮತ್ತು ಮೂಗುತಿ ಸೇರಿದಂತೆ ಚಿನ್ನದ ಆಭರಣಗಳನ್ನು ಉಡುಗೊರೆಯಾಗಿ ನೀಡಿದರು.

ಇದನ್ನೂ ಓದಿ: ಬಸ್‌ ಬ್ರೇಕ್ ಫೇಲ್; ಜೀವ ಉಳಿಸಿಕೊಳ್ಳಲು ಬಸ್‌ನಿಂದ ಜಿಗಿದ ಅಮರನಾಥ ಯಾತ್ರಿಕರು! ವಿಡಿಯೊ ಇದೆ

ಹಾಗೇ ಅವರು ಕಾಲುಂಗುರ ಮತ್ತು ಕಾಲ್ಗೆಜ್ಜೆಗಳು ಸೇರಿದಂತೆ ಬೆಳ್ಳಿಯ ಆಭರಣಗಳನ್ನು ದಂಪತಿಗಳಿಗೆ ನೀಡಿದರು. ವಧುವಿಗೆ 1.01 ಲಕ್ಷ ರೂ.ಗಳ ಚೆಕ್ ಅನ್ನು ನೀಡಲಾಯಿತು. ಪ್ರತಿ ದಂಪತಿಗೆ 36 ಅಗತ್ಯ ವಸ್ತುಗಳು ಮತ್ತು ಪಾತ್ರೆಗಳು, ಗ್ಯಾಸ್ ಸ್ಟೌವ್, ಮಿಕ್ಸರ್ ಮತ್ತು ಫ್ಯಾನ್‍ನಂತಹ ಉಪಕರಣಗಳು, ಹಾಸಿಗೆ ಮತ್ತು ದಿಂಬುಗಳು ಸೇರಿದಂತೆ ಒಂದು ವರ್ಷಕ್ಕೆ ಸಾಕಾಗುವಷ್ಟು ದಿನಸಿ ಮತ್ತು ಗೃಹೋಪಯೋಗಿ ವಸ್ತುಗಳನ್ನು ಉಡುಗೊರೆಯಾಗಿ ನೀಡಲಾಯಿತು.

Continue Reading
Advertisement
Bridge Collapse
ದೇಶ9 mins ago

Bridge Collapse: ಬಿಹಾರದಲ್ಲಿ ಮತ್ತೆರಡು ಸೇತುವೆ ಕುಸಿತ; 15 ದಿನಗಳಲ್ಲಿ ಇದು 7ನೇ ಪ್ರಕರಣ!

Stabbing Case
ಕರ್ನಾಟಕ12 mins ago

Stabbing Case: ಕಾಲೇಜಿನೊಳಗೆ ಬಿಡದ್ದಕ್ಕೆ ಸೆಕ್ಯೂರಿಟಿ ಗಾರ್ಡ್‌ನ ಇರಿದು ಕೊಂದ ವಿದ್ಯಾರ್ಥಿ!

ಕರ್ನಾಟಕ57 mins ago

Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

Cabinet Committees
ದೇಶ1 hour ago

Cabinet Committees: ಸಂಪುಟ ಸಮಿತಿಗಳನ್ನು ರಚಿಸಿದ ಕೇಂದ್ರ; ಭದ್ರತಾ ಸಮಿತಿಗೆ ಮೋದಿಯೇ ಮುಖ್ಯಸ್ಥ!

Hemant Soren
ದೇಶ2 hours ago

Hemant Soren: ‌ಜಾಮೀನು ಸಿಕ್ಕ ಬೆನ್ನಲ್ಲೇ ಮತ್ತೆ ಜಾರ್ಖಂಡ್‌ ಸಿಎಂ ಆಗಲಿರುವ ಹೇಮಂತ್‌ ಸೊರೆನ್

MUDA site scandal
ಕರ್ನಾಟಕ2 hours ago

MUDA site scandal: ಮುಡಾ ಸೈಟ್ ಅಕ್ರಮ; ನಾನು ಯಾಕಪ್ಪ ರಾಜೀನಾಮೆ ಕೊಡಲಿ, ನನ್ನ ಪಾತ್ರ ಏನಿದೆ ಎಂದ ಸಿಎಂ!

Kannada New Movie Odo Odo Odo Kailash Kher
ಸಿನಿಮಾ2 hours ago

Kannada New Movie: ‘ಫಾರೆಸ್ಟ್’ ಸಿನಿಮಾದ ಮೊದಲ ಹಾಡು ರಿಲೀಸ್!

Team India
ಕ್ರೀಡೆ2 hours ago

T20 World Cup Winners: ಟಿ20 ವಿಶ್ವಕಪ್​ ಗೆದ್ದ ಭಾರತ ತಂಡಕ್ಕೆ ನಾಳೆ ಮುಂಬೈಯಲ್ಲಿ ಅದ್ಧೂರಿ ಸ್ವಾಗತ

Money Guide
ಮನಿ-ಗೈಡ್2 hours ago

Money Guide: ಮಗುವಿನ ಬರ್ತ್‌ಡೇಗೆ ಒಂದೊಳ್ಳೆ ಉಡುಗೊರೆ ನೀಡಬೇಕೆ? ಬಾಲ ಜೀವನ್ ಬಿಮಾ ಯೋಜನೆಯಲ್ಲಿ ಹೂಡಿಕೆ ಮಾಡಿ

Kangana Ranaut
ದೇಶ3 hours ago

Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕಾನ್‌ಸ್ಟೇಬಲ್‌ ಬೆಂಗಳೂರಿಗೆ ವರ್ಗಾವಣೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ24 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು3 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌