ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು: CM ಬೊಮ್ಮಾಯಿ - Vistara News

ಬೆಂಗಳೂರು

ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು: CM ಬೊಮ್ಮಾಯಿ

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆಯು ಏರ್ಪಡಸಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿಯವರನ್ನು ಶ್ಲಾಘಿಸಿದ್ದಾರೆ.

VISTARANEWS.COM


on

ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಮಾಜದ ಕಟ್ಟಕಡೆಯ ಜನರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಮೇಲೆತ್ತುವ ಕೆಲಸವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಳೆದ ಎಂಟು ವರ್ಷಗಳಲ್ಲಿ ಮಾಡಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಮಿಡಿಯುವ ಹೃದಯ ಶ್ರೀಮಂತಿಕೆ ಮೋದಿಯವರದ್ದು. ಹಿಂದೆಂದೂ ಈ ಪ್ರಮಾಣದಲ್ಲಿ ಇಂತಹ ಕೆಲಸ ಆಗಿರಲಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟರು.

ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ಕೇಂದ್ರ ಪುರಸ್ಕೃತ ಯೋಜನೆಗಳ ಫಲಾನುಭವಿಗಳೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ರೈತರು, ವಿವಿಧ ಕೈಗಾರಿಕೆ, ನಿರ್ಮಾಣ ಕಾರ್ಮಿಕರು, ದುಡಿಯುವ ಮಹಿಳೆಯರು ದೇಶ ನಿರ್ಮಾಣದ ಕಾಯಕದಲ್ಲಿ ತೊಡಗಿದ್ದಾರೆ. ಈ ಸಮಾಜದ ಕಟ್ಟ ಕಡೆಯ ಜನರಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ, ಅವರು ಸ್ವಾವಲಂಬಿ, ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳಲು ನೆರವಾಗುವ ಅನೇಕ ಯೋಜನೆಯನ್ನು ಪ್ರಧಾನಿ ಮೋದಿಯವರು ಜಾರಿಗೆ ತಂದಿದ್ದಾರೆ. ಜನಧನ, ಸ್ವಚ್ಛ ಭಾರತ್, ಪಿಎಂ ಸ್ವನಿಧಿ, ಪಿಎಂ ಕಿಸಾನ್ ಸಮ್ಮಾನ್ ಯೋಜನೆ, ಆಯುಷ್ಮಾನ್ ಭಾರತ್ ಮುಂತಾದ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೆ ತಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ | ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಶೀಘ್ರ ತೀರ್ಮಾನ : CM ಬಸವರಾಜ ಬೊಮ್ಮಾಯಿ

ಪ್ರಧಾನಿ ಮೋದಿಯವರ ವಿವಿಧ ಯೋಜನೆ:

  • ಯೋಜನೆಗಳನ್ನು ತಳದಿಂದ ಮೇಲಕ್ಕೆ ರೂಪಿಸಬೇಕು. ಅಂತೆಯೇ ಇದರ ಯೋಜನೆ, ಹಣಕಾಸು ನೆರವು ಮೇಲಿನಿಂದ ತಳಕ್ಕೆ ಹರಿದುಬರಬೇಕು. ಹಿಂದೆ ಯೋಜನೆಗಳನ್ನು ರೂಪಿಸಿದರೂ ಅನುದಾನ ತಳಹಂತದವರೆಗೆ ತಲುಪುತ್ತಿರಲಿಲ್ಲ. ಆದರೆ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನೆರವು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗುತ್ತಿದೆ.
  • ಪ್ರಧಾನಿಯವರು ಕೆಂಪುಕೋಟೆಯಲ್ಲಿ ಭಾಷಣ ಮಾಡುವಾಗ ದೇಶವನ್ನು ಸ್ವಚ್ಛ ಭಾರತವನ್ನಾಗಿಸುವುದಾಗಿ ಘೋಷಿಸಿದರು. ಆ ಮೂಲಕ ತಳ ಹಂತದ ಜನರೂ, ಸ್ವಚ್ಛತೆಯಿಂದ ಆರೋಗ್ಯವಂತರಾಗಿ, ಸದೃಢ ಸಮಾಜ ಹಾಗೂ ಆ ಮೂಲಕ ಸದೃಢ ದೇಶ ನಿರ್ಮಾಣ ಮಾಡುವ ವಾತಾವರಣ ನಿರ್ಮಿಸಿದರು.
  • ಹಿಂದಿನ ಯಾವ ಪ್ರಧಾನಿಗಳೂ ಮನೆ ಮನೆಗೆ ನೀರು ಕೊಡುವ ಘೋಷಣೆ ಮಾಡುವ ಧೈರ್ಯ ಮಾಡಿರಲಿಲ್ಲ. ಆದರೆ ನರೇಂದ್ರ ಮೋದಿಯವರು ಪ್ರತಿ ಗ್ರಾಮೀಣ ಮನೆಗೆ ನೀರು ಒದಗಿಸುವ ಘೋಷಣೆ ಮಾಡಿರುವುದಲ್ಲದೆ, ಮನೆ ಮನೆಗೆ ನೀರು ಒದಗಿಸಲು ಸಮರೋಪಾದಿಯಲ್ಲಿ ಕೆಲಸ ಮಾಡುತ್ತಿದ್ದಾರೆ.
  • 2024ರ ವೇಳೆಗೆ ಪ್ರತಿಯೊಬ್ಬರಿಗೂ ಸೂರು ಒದಗಿಸುವ ದೃಷ್ಟಿಯಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆಯನ್ನು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜಾರಿಗೊಳಿಸುತ್ತಿದ್ದಾರೆ. ಈ ಯೋಜನೆಯಡಿ ರಾಜ್ಯದಲ್ಲಿ 18 ಲಕ್ಷ ಮನೆಗಳನ್ನು ಮುಂದಿನ ಮೂರು ವರ್ಷಗಳಲ್ಲಿ ನಿರ್ಮಿಸಲು ಅವಕಾಶ ನೀಡಿ, ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಸರಿಯಾದ ವ್ಯಕ್ತಿಗೆ ಜನಸೇವೆಯ ಅವಕಾಶ ಕೊಟ್ಟರೆ ಏನನ್ನೂ ಸಾಧಿಸಬಹುದು ಎಂದು ನರೇಂದ್ರ ಮೋದಿಯವರು ತೋರಿಸಿದ್ದಾರೆ. ಒಬ್ಬ ದಕ್ಷ ಆಡಳಿತಗಾರನಾಗಿ ಜನರಿಗೆ ನ್ಯಾಯಸಮ್ಮತ ಹಕ್ಕುಗಳನ್ನು ಒದಗಿಸಿದ್ದಾರೆ. ಒಬ್ಬ ದಿಟ್ಟನಾಯಕನಾಗಿ ದೇಶದ ಗಡಿ ರಕ್ಷಣೆ ಮಾಡಿದ್ದಾರೆ. ದೂರ ದೃಷ್ಟಿಯ ನಾಯಕನಾಗಿ ಇತರ ರಾಷ್ಟ್ರಗಳು ಭಾರತವನ್ನು ಗೌರವದಿಂದ ಕಾಣುವಂತೆ ಮಾಡಿದ್ದಾರೆ. ಆಡಳಿತದಲ್ಲಿ ತಂತ್ರಜ್ಞಾನದ ಬಳಕೆಯ ಮೂಲಕ ಸುಶಾಸನವನ್ನು ಸಾಧ್ಯವಾಗಿಸಿದ್ದಾರೆ. ಜನಸಂಖ್ಯೆ ದೇಶಕ್ಕೆ ಮಾರಕ ಎಂಬ ಅಭಿಪ್ರಾಯವನ್ನು ಬದಲಿಸಿ, ಮಾನವ ಸಂಪನ್ಮೂಲ ದೇಶದ ಶಕ್ತಿ ಎಂದು ತೋರಿಸಿದ್ದಾರೆ ಎಂದು ಸಿಎಂ ಅಭಿಪ್ರಾಯಪಟ್ಟರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ನಡೆಸುತ್ತಿರುವ ಜನಪರ ಆಡಳಿತಕ್ಕೆ ಎಂಟು ವರ್ಷಗಳು ತುಂಬಿದೆ. ಹಾಗೂ ನಾವು ಈಗ ಸ್ವಾತಂತ್ರ್ಯದ ಅಮೃತ ಮಹೋತ್ಸವ ವರ್ಷಾಚರಣೆಯ ಸಂಭ್ರಮದಲ್ಲಿದ್ದೇವೆ. ಆತ್ಮಾವಲೋಕನ ಹಾಗೂ ಸಿಂಹಾವಲೋಕನ ಮಾಡಲು ಇದೊಂದು ಸುಸಂದರ್ಭ. ಕಳೆದ 75 ವರ್ಷಗಳಲ್ಲಿ ಪ್ರಜಾಪ್ರಭುತ್ವವನ್ನು ಉಳಿಸಿ, ಬೆಳೆಸಿರುವುದೇ ನಮ್ಮ ದೇಶದ ದೊಡ್ಡ ಸಾಧನೆ. ಆದರೆ ತುರ್ತು ಪರಿಸ್ಥಿತಿ ಘೋಷಣೆ ನಮ್ಮ ಇತಿಹಾಸದಲ್ಲಿ ಒಂದು ಕಪ್ಪುಚುಕ್ಕೆಯಾಗಿ ಉಳಿದಿದೆ. ತುರ್ತುಪರಿಸ್ಥಿತಿಯ ವಿರುದ್ಧ ಜನಾಂದೋಲನ ನಡೆಸಿ, ಪ್ರಜಾಪ್ರಭುತ್ವವನ್ನು ಮರುಸ್ಥಾಪನೆ ಮಾಡಿರುವುದು, ನಮ್ಮ ಪ್ರಜಾಪ್ರಭುತ್ವದ ಅಂತಃಶಕ್ತಿಗೆ ಸಾಕ್ಷಿ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಪುರಸ್ಕೃತ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಬೊಮ್ಮಾಯಿ ಸಂವಾದ ನಡೆಸಿದರು. ಸಚಿವರಾದ ಗೋವಿಂದ ಎಂ. ಕಾರಜೋಳ, ಎಸ್.ಟಿ. ಸೋಮಶೇಖರ್, ಆರಗ ಜ್ಞಾನೇಂದ್ರ, ಶಶಿಕಲಾ ಜೊಲ್ಲೆ, ವಿ. ಸೋಮಣ್ಣ, ಬಿ.ಸಿ.ನಾಗೇಶ್, ಸಂಸದ ಪಿ.ಸಿ. ಮೋಹನ್ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: ಸರ್ಕಾರಿ ನೌಕರರ ಆರೋಗ್ಯ ಸಂಜೀವಿನಿ ಶೀಘ್ರ ಚಾಲನೆ: CM ಬೊಮ್ಮಾಯಿ ಭರವಸೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Ambulance Booking : ಬೆಂಗಳೂರಿನಲ್ಲಿ ಆ್ಯಪ್ ​ಮೂಲಕವೇ ಮಾಡಬಹುದು ಆಂಬ್ಯುಲೆನ್ಸ್​ ಬುಕಿಂಗ್

Ambulance Booking: ಈ ಸೇವೆಯನ್ನು ನೀಡವುದಕ್ಕಾಗಿ ಬಳಸಲಾದ ಆಕ್ಕೊದ ಅತ್ಯಾಧುನಿಕ ತಂತ್ರಜ್ಞಾನವು, ಜನರು ಆಂಬುಲೆನ್ಸ್‌ಅನ್ನು ಶೀಘ್ರವಾಗಿಯೂ ತಡೆರಹಿತವಾಗಿಯೂ ಪಡೆದುಕೊಳ್ಳಲು ನೆರವು ನೀಡುತ್ತದೆ. 3000 ವಾಹನಗಳ ಪ್ರಬಲ ಕಾರ್ಯಜಾಲದಿಂದ ಹತ್ತಿರದ ಆಂಬುಲೆನ್ಸ್ ಪಡೆದುಕೊಳ್ಳಲು ನೆರವಾಗುವ ಈ ಆ್ಯಪ್, ಕೇವಲ ಮೂರು ನಿಮಿಷಗಳೊಳಗೆ ಚಾಲಕರ ವಿವರಗಳನ್ನು ತಿಳಿಸುತ್ತದೆ. ಮೇಲಾಗಿ, ರಿಯಲ್ ಟೈಮ್​ ಟ್ರ್ಯಾಕಿಂಗ್​ನ ವಿಶಿಷ್ಟ ಅನುಕೂಲವನ್ನು ನೀಡಿದೆ.

VISTARANEWS.COM


on

ambulance-booking
Koo

ಬೆಂಗಳೂರು: ತಂತ್ರಜ್ಞಾನ ಆಧಾರಿತ ವಿಮಾ ಸಂಸ್ಥೆಯಾದ ಆಕ್ಕೊ (ACKO), ತನ್ನ ಅನೇಕ ಕೊಡುಗೆಗಳ ಪೋರ್ಟ್‌ಫೋಲಿಯೋಗೆ ತನ್ನ ಮೊಬೈಲ್ ಆ್ಯಪ್‌ನಲ್ಲಿ ಆಂಬುಲೆನ್ಸ್ ಬುಕ್ ಮಾಡುವ ಹೊಸ ಸೇವೆಯೊಂದನ್ನು ಸೇರಿಸಿದೆ. ತನ್ನ ಸೇವೆಗಳನ್ನು ವಿಮಾ ಪರಿಹಾರಗಳಾಚೆ ವಿಸ್ತರಿಸುವ ಮೂಲಕ ಎಲ್ಲಾ ಆರೋಗ್ಯ ಸುರಕ್ಷತಾ ಅಗತ್ಯಗಳಿಗೆ ಒಂದೇ ಸೂರಿನಡಿ ಸೇವೆ ಸಲ್ಲಿಸುವ ದೂರದೃಷ್ಟಿಯನ್ನು ಹೊಂದಿದೆ. ಪ್ರಸ್ತುತ ಬೆಂಗಳೂರಿನಲ್ಲಿ ಲಭ್ಯವಿರುವ ಸೇವೆಯು ಮುಂಬರುವ ವಾರಗಳಲ್ಲಿ ಚೆನ್ನೈ, ಮುಂಬೈ, ಹೈದರಾಬಾದ್, ದೆಹಲಿ ಮತ್ತು ಕೋಲ್ಕತ್ತಾದಲ್ಲೂ ಸಿಗಲಿದೆ ಎಂದು ಕಂಪನಿ ಹೇಳಿದೆ.

ದೇಶದ ಮುಂಚೂಣಿ ತುರ್ತು ಸೇವಾ ಸಂಸ್ಥೆಗಳ ಪೈಕಿ ಒಂದಾದ Red.Healthನ ಸಹಭಾಗಿತ್ವದೊಂದಿಗೆ ಈ ಸೇವೆಯನ್ನು ಆರಂಭಿಸಲಾಗಿದ್ದು ವೈದ್ಯಕೀಯ ತುರ್ತುಸ್ಥಿತಿಗಳಲ್ಲಿ ಎಲ್ಲರಿಗೂ ನೆರವು ಒದಗಿಸುವ ಗುರಿ ಹೊಂದಿದೆ. ಈ ಸೇವೆಯನ್ನು ನೀಡವುದಕ್ಕಾಗಿ ಬಳಸಲಾದ ಆಕ್ಕೊದ ಅತ್ಯಾಧುನಿಕ ತಂತ್ರಜ್ಞಾನವು, ಜನರು ಆಂಬುಲೆನ್ಸ್‌ಅನ್ನು ಶೀಘ್ರವಾಗಿಯೂ ತಡೆರಹಿತವಾಗಿಯೂ ಪಡೆದುಕೊಳ್ಳಲು ನೆರವು ನೀಡುತ್ತದೆ. 3000 ವಾಹನಗಳ ಪ್ರಬಲ ಕಾರ್ಯಜಾಲದಿಂದ ಹತ್ತಿರದ ಆಂಬುಲೆನ್ಸ್ ಪಡೆದುಕೊಳ್ಳಲು ನೆರವಾಗುವ ಈ ಆ್ಯಪ್, ಕೇವಲ ಮೂರು ನಿಮಿಷಗಳೊಳಗೆ ಚಾಲಕರ ವಿವರಗಳನ್ನು ತಿಳಿಸುತ್ತದೆ. ಮೇಲಾಗಿ, ರಿಯಲ್ ಟೈಮ್​ ಟ್ರ್ಯಾಕಿಂಗ್​ನ ವಿಶಿಷ್ಟ ಅನುಕೂಲವನ್ನು ನೀಡಿದೆ. ಗ್ರಾಹಕರು ಆಂಬುಲೆನ್ಸ್‌ನ ನಿಖರ ಲೊಕೇಶನ್‌ಅನ್ನು ಮ್ಯಾಪ್ ಮೇಲೆ ನೋಡಿ ಅದರ ಆಗಮನದ ಅಂದಾಜು ಸಮಯವನ್ನು ಲೆಕ್ಕ ಹಾಕಬಹುದು. ಆತಂಕದ ಸಮಯದಲ್ಲಿ ಅವರಿಗೆ ಅದು ನೆಮ್ಮದಿ ಒದಗಿಸಬಹುದು. ತಮ್ಮ ಪ್ರೀತಿಪಾತ್ರರ ಯೋಗಕ್ಷೇಮದ ಮೇಲೆ ಗಮನ ಕೇಂದ್ರೀಕರಿಸಬಹುದಾಗಿದೆ. ಈ ಆವಿಷ್ಕಾರವು ತುರ್ತುಸ್ಥಿತಿಗಳಲ್ಲಿ ತಡೆಯಿಲ್ಲದ ಮತ್ತು ತೊಂದರೆಯಿಲ್ಲದ ಅನುಭವ ಒದಗಿಸುತ್ತದೆ.

ಆಕ್ಕೊದ ಸಮಗ್ರ ವೇದಿಕೆಯ ಮೇಲಿರುವ ಆಂಬುಲೆನ್ಸ್ ಬುಕಿಂಗ್ ಆರೋಗ್ಯ ಸೇವಾ ಪರಿಹಾರಗಳನ್ನು ಒದಗಿಸುವ ಮೂಲಕ ಬಳಕೆದಾರ-ಸುರಕ್ಷತೆ ಹಾಗೂ ಕ್ಷೇಮಾಭಿವೃದ್ಧಿಯನ್ನು ಖಾತರಿಪಡಿಸುತ್ತದೆ. ಈ ಕ್ರಮವು, ಹೊಸ ಯುಗದಲ್ಲಿ ತುರ್ತುಸ್ಥಿತಿ ಆರೋಗ್ಯ ಶುಶ್ರೂಷೆಯನ್ನು ಪರಿವರ್ತಿಸುವ ಗುರಿ ಹೊಂದಿದೆ.

ಆಕ್ಕೊದ ಆಂಬುಲೆನ್ಸ್ ಬುಕಿಂಗ್ ಸೇವೆಯ ವಿಶೇಷತೆಗಳು

● ವ್ಯಾಪಕ ಕಾರ್ಯಜಾಲ: ಈ ಯೋಜನೆಯಡಿ ಐದು ನಗರಗಳಾದ್ಯಂತ 3000 ಆಂಬುಲೆನ್ಸ್‌ಗಳು ಲಭ್ಯವಿರುತ್ತವೆ.
● ತಡೆರಹಿತ ಬುಕಿಂಗ್: ACKO ಆಪ್ ಮೂಲಕ ಫೋನ್‌ನಲ್ಲಿ ಕೆಲವೇ ಕ್ಲಿಕ್‌ಗಳೊಂದಿಗೆ ಆಂಬುಲೆನ್ಸ್ ಪಡೆದುಕೊಳ್ಳಬಹುದು
● ನೈಜ -ಸಮಯ ಟ್ರ್ಯಾಕಿಂಗ್: ಗಂಭೀರ ಪರಿಸ್ಥಿತಿಗಳಲ್ಲಿ ನೆಮ್ಮದಿನೀಡುವಂಥ ಆಂಬುಲೆನ್ಸ್‌ನ ಆಗಮನದ ನೈಜ ಸಮಯವನ್ನು ಟ್ರ್ಯಾಕ್ ಮಾಡಬಹುದು.
● ಬಳಕೆದಾರ-ಕೇಂದ್ರಿತ ವಿನ್ಯಾಸ: ಸುಲಭವಾಗಿ ಬಳಸುವುದಕ್ಕಾಗಿಯೇ ಆಕ್ಕೊ ಆಪ್ ವಿನ್ಯಾಸಗೊಂಡಿದೆ.

ಇದನ್ನೂ ಓದಿ: Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

ವೈದ್ಯಕೀಯ ತುರ್ತುಸ್ಥಿತಿಗಳು ತಕ್ಷಣ ಪ್ರತಿಕ್ರಿಯೆಯನ್ನು ಬೇಡುತ್ತದೆ. ಆದರೆ ಅದು ಎಲ್ಲರಿಗೂ ಪೂರಕವಾಗಿಲ್ಲ ಎಲ್ಲಕ್ಕಿಂತ ಮಿಗಿಲಾಗಿ, ಆಂಬುಲೆನ್ಸ್ ಸೇವೆಗಳು, ನಿರ್ಲಕ್ಷಿತ ಕ್ಷೇತ್ರವಾಗಿಯೇ ಉಳಿದು ಪರಿಸ್ಥಿತಿಗಳನ್ನು ಮೀರಲು ಜನರು ಬಹಳ ಕಷ್ಟಪಡಬೇಕಾಗುತ್ತದೆ. ತುರ್ತುಸ್ಥಿತಿಗಳಲ್ಲಿ ಗಂಭೀರ ನೆರವು ಒದಗಿಸಲು ತಂತ್ರಜ್ಞಾನವನ್ನು ವರ್ಧಿಸುವ ಮೂಲಕ ಆಕ್ಕೊ, ಬಳಕೆದಾರ ಸುರಕ್ಷತೆ ಹಾಗೂ ಸಂತೃಪ್ತಿಗೆ ತನ್ನ ಅಚಲ ಬದ್ಧತೆಯನ್ನು ಪ್ರದರ್ಶಿಸಿದೆ.

ಆಂಬುಲೆನ್ಸ್-ಬುಕಿಂಗ್ ಅಂಶವು, ನಿಜಜೀವನದ ಸಮಸ್ಯೆಗಳಿಗೆ ವಾಸ್ತವ ಪರಿಹಾರ ಒದಗಿಸುತ್ತದೆ.

Continue Reading

ಶಿಕ್ಷಣ

SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

SSLC Grace Marks: ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಮೊದಲೇ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳು ಬರುತ್ತಿವೆ. ಅದರ ಮಧ್ಯೆ ಇದೂ ಒಂದು ಸೇರಿಕೊಂಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

VISTARANEWS.COM


on

SSLC Grace Marks 20 per cent grace marks CM Siddaramaiah slams education department
Koo

ಬೆಂಗಳೂರು: ಬರ ಪರಿಹಾರ, ಮುಂಗಾರು ಮಳೆ, ಬಿತ್ತನೆ ಬೀಜ, ರಸ ಗೊಬ್ಬರ ವಿತರಣೆ, ಶಿಕ್ಷಣ, ಕಾನೂನು ಸುವ್ಯವಸ್ಥೆ ಸೇರಿದಂತೆ ಇನ್ನಿತರ ವಿಷಯಗಳ ಬಗ್ಗೆ ಚರ್ಚೆ ನಡೆಸಲು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿರುವ ಸಿಎಂ ಸಿದ್ದರಾಮಯ್ಯ (CM Siddaramaiah), ಈ ಬಾರಿಯ ಎಸ್‌ಎಸ್‌ಎಲ್‌ಸಿಯಲ್ಲಿ ಶೇ. 20 ಗ್ರೇಸ್‌ ಮಾರ್ಕ್ಸ್‌ (SSLC Grace Marks) ಕೊಟ್ಟಿದ್ದಕ್ಕೆ ಗರಂ ಆಗಿದ್ದಾರೆ. ಯಾರನ್ನು ಕೇಳಿ ಹೆಚ್ಚುವರಿ ಅಂಕವನ್ನು ಕೊಟ್ಟಿರಿ? ಶಿಕ್ಷಣ ಗುಣಮಟ್ಟ ಕುಸಿದಿದ್ದು ಏಕೆ? ಎಂದು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡರು.

ಶಿಕ್ಷಣ ಇಲಾಖೆಗೆ ಸಂಬಂಧಪಟ್ಟಂತೆ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ, ಎಸ್‌ಎಸ್‌ಎಲ್‌ಸಿಗೆ ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರುವ ಬಗ್ಗೆ ತೀವ್ರ ಅಸಮಾಧಾನವನ್ನು ಹೊರಹಾಕಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಶೇಕಡಾ 20 ಮಾರ್ಕ್ಸ್‌ ಅನ್ನು ಏಕೆ ಕೊಟ್ಟಿರಿ? ಯಾರನ್ನು ಕೇಳಿ ಹೆಚ್ಚುವರಿ ಅಂಕ ಕೊಟ್ಟಿರಿ? ಹೀಗೆ ಅಂಕ ಕೊಡುವ ಅಗತ್ಯತೆ ಏನಿತ್ತು? ಶಿಕ್ಷಣದ ಗುಣಮಟ್ಟ ಕುಸಿದಿದ್ದೇಕೆ? ಎಂದು ಶಿಕ್ಷಣ ಇಲಾಖೆ ಕಾರ್ಯದರ್ಶಿ ಮೇಲೆ ಗರಂ ಆಗಿದ್ದಲ್ಲದೆ, ಪ್ರಶ್ನೆ ಮೇಲೆ ಪ್ರಶ್ನೆ ಮಾಡಿದರು.

ಗ್ರೇಸ್‌ ಮಾರ್ಕ್ಸ್‌ ಮರು ಪರಿಶೀಲಿಸಿ

ಗ್ರೇಸ್ ಮಾರ್ಕ್ಸ್ ಹೆಚ್ಚಳಕ್ಕೆ ಸಂಬಂಧಪಟ್ಟಂತೆ ಶಿಕ್ಷಣ ತಜ್ಞರು ಸೇರಿ ಹಲವರಿಂದ ವಿರೋಧಗಳು ಕೇಳಿ ಬರುತ್ತಿವೆ. ಮೊದಲೇ ನಮ್ಮ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪಗಳು ಬರುತ್ತಿವೆ. ಅದರ ಮಧ್ಯೆ ಇದೂ ಒಂದು ಸೇರಿಕೊಂಡಿದೆ. ಗ್ರೇಸ್ ಮಾರ್ಕ್ಸ್ ಕೊಡುವುದು ಅವೈಜ್ಞಾನಿಕ ಎಂಬ ಬಗ್ಗೆ ಅಭಿಪ್ರಾಯಗಳು ಬರುತ್ತಿವೆ. ಹಾಗಾಗಿ ಮುಂದಿನ ಶೈಕ್ಷಣಿಕ ವರ್ಷದಿಂದ ಗ್ರೇಸ್‌ ಮಾರ್ಕ್ಸ್ ಕೊಡುವ ಬಗ್ಗೆ ಮರುಪರಿಶೀಲನೆ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಇಲಾಖೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ಇದನ್ನೂ ಓದಿ: Prajwal Revanna Case: ವಕೀಲ ದೇವರಾಜೇಗೌಡರಿಗೆ ನ್ಯಾಯಾಂಗ ಬಂಧನ; ಪೊಲೀಸ್‌ ಕಸ್ಟಡಿ ಅಂತ್ಯ

ಮುಂದಿನ ವರ್ಷ ಹೀಗಿರುವುದಿಲ್ಲ

ಈ ವೇಳೆ ಸಚಿವ ಮಧು ಬಂಗಾರಪ್ಪ ಮಾತನಾಡಿ, ಎಸ್‌ಎಸ್‌ಎಲ್‌ಸಿಯಲ್ಲಿ ಯಾವಾಗಲೂ ಶೇಕಡಾ 5ರಷ್ಟು ಗ್ರೇಸ್‌ ಮಾರ್ಕ್ಸ್‌ ಇತ್ತು. ಕೋವಿಡ್ ವೇಳೆ ಅದನ್ನು ಶೇಕಡಾ 10ಕ್ಕೆ ಏರಿಕೆ ಮಾಡಲಾಗಿತ್ತು. ಈ ಬಾರಿ ವಿದ್ಯಾರ್ಥಿಗಳ ಆತ್ಮವಿಶ್ವಾಸ ಹೆಚ್ಚಳಕ್ಕಾಗಿ ಶೇಕಡಾ 20ರಷ್ಟು ಗ್ರೇಸ್‌ ಮಾರ್ಕ್ಸ್‌ ಕೊಟ್ಟು ಪಾಸ್‌ ಮಾಡಿದೆವು. ಇದು ಈ ವರ್ಷಕ್ಕೆ ಮಾತ್ರವಾಗಿದೆ. ಮುಂದಿನ ವರ್ಷದಿಂದ ಇದು ಮುಂದುವರಿಯುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಈ ತೀರ್ಮಾನವನ್ನು ತೆಗೆದುಕೊಂಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು. ಅಲ್ಲದೆ, ಇನ್ನು 15 ದಿನಗಳಲ್ಲಿ ಅಧಿಕೃತ ಮತ್ತು ಅನಧಿಕೃತ ಶಾಲೆಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ತಿಳಿಸಿದರು.

ಗ್ರೇಸ್‌ ಮಾರ್ಕ್ಸ್‌ ಕೊಟ್ಟಿದ್ದರಿಂದ 1.70 ಲಕ್ಷ ವಿದ್ಯಾರ್ಥಿಗಳು ಪಾಸ್!

ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಫಲಿತಾಂಶ ಕುಸಿತ (SSLC Result 2024) ಕಂಡಿದೆ. 2022-23ರಲ್ಲಿ 83.89% ಇದ್ದರೆ, ಈ ಬಾರಿ 73.40% ಮಂದಿ ಪಾಸ್, ಶೇಕಡಾ 10.49 ರಷ್ಟು ಫಲಿತಾಂಶ ಕುಸಿತವಾಗಿದೆ. ಇದು ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಬರೋಬ್ಬರಿ 20 ಪರ್ಸೆಂಟ್ ಗ್ರೇಸ್ ಮಾರ್ಕ್ಸ್‌ ಅನ್ನು ಕೊಟ್ಟು ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳನ್ನು ಪಾಸ್‌ ಮಾಡಲಾಗಿದೆ.

ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆ ಸರ್ಕಸ್ ಮಾಡಿದ್ದು, ಶೇಕಡಾ 20 ಗ್ರೇಸ್ ಮಾರ್ಕ್ಸ್‌ ಕೊಟ್ಟರೂ ಕಡಿಮೆ ಫಲಿತಾಂಶ ದಾಖಲಾಗಿದೆ. ಈ ಬಾರಿ ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಗಮನಿಸಿದಾಗ ಅಪಾರ ಸಂಖ್ಯೆಯಲ್ಲಿ ಅಂದರೆ ಕಳೆದ ಬಾರಿಗಿಂತ ಶೇಕಡಾ 30ರಷ್ಟು ಕುಸಿತವನ್ನು ಕಾಣಲಾಗಿತ್ತು. ಇದರಿಂದ ಚಿಂತೆಗೊಳಗಾದ ಶಿಕ್ಷಣ ಇಲಾಖೆಯು ಕೊನೆಗೆ ಪಾಸಿಂಗ್‌ ಮಾರ್ಕ್ಸ್‌ ಅನ್ನೇ ಕಡಿಮೆ ಮಾಡಿದೆ.

ಅಂದರೆ ಈ ವರೆಗೆ ಇದ್ದ ಪಾಸಿಂಗ್‌ ಮಾರ್ಕ್ಸ್‌ ಶೇಕಡಾ 35 ಅನ್ನು ಶೇಕಡಾ 25ಕ್ಕೆ ಇಳಿಸಿದೆ. ಅಂದರೆ 35 ಅಂಕಗಳ ಬದಲಿಗೆ 25 ಅಂಕವನ್ನು ಪಡೆದ ವಿದ್ಯಾರ್ಥಿಯೂ ಪಾಸ್‌ ಎಂದು ಮಾಡಲಾಗಿದೆ. ಅಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿದೆ. ಈ ಎರಡೂ ಕ್ರಮದಿಂದಾಗಿ ಒಟ್ಟಾರೆ 1 ಲಕ್ಷದ 70 ಸಾವಿರ ವಿದ್ಯಾರ್ಥಿಗಳು ಪಾಸ್‌ ಆಗಿದ್ದಾರೆ. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು ಶೇಕಡಾ 73.40ರಷ್ಟಾಗಿದೆ. ಇಲ್ಲದಿದ್ದರೆ ಭಾರಿ ಪ್ರಮಾಣದಲ್ಲಿ ಮಕ್ಕಳು ಅನುತ್ತೀರ್ಣರಾಗುತ್ತಿದ್ದರು.

ವೆಬ್‌ ಕಾಸ್ಟಿಂಗ್‌ನಲ್ಲಿ ನಡೆದ ಪರೀಕ್ಷೆ

ಪ್ರಪ್ರಥಮ ಬಾರಿಗೆ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ವೆಬ್ ಕಾಸ್ಟಿಂಗ್ ಮಾಡುವ ಹೊಸ ಪದ್ಧತಿಯನ್ನು ಪರಿಚಯಿಸಲಾಗಿದೆ. ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನು ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಆದರೆ, ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ. 30ರಷ್ಟು ಕಡಿಮೆಯಾಗಿದೆ. ಮೊದಲ ಬಾರಿಗೆ ವೆಬ್‌ ಕಾಸ್ಟಿಂಗ್ ವಿಧಾನವನ್ನು ಪರಿಚಯಿಸಿದ್ದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕಡಿಮೆಯಾಗಿರುವ ಫಲಿತಾಂಶವನ್ನು ಉತ್ತಮ ಪಡಿಸಲು ಶಿಕ್ಷಣ ಇಲಾಖೆ ಗ್ರೇಸ್‌ ಮಾರ್ಕ್ಸ್‌ ಹೆಚ್ಚಳದ ತೀರ್ಮಾನವನ್ನು ಮಾಡಿತ್ತು.

ಇದನ್ನೂ ಓದಿ: CM Siddaramaiah: ಸಿದ್ದರಾಮಯ್ಯ ಸರ್ಕಾರಕ್ಕೆ 1 ವರ್ಷ; ಚಾರ್ಜ್‌ಶೀಟ್‌ ರೆಡಿ ಮಾಡಿದ ಬಿಜೆಪಿ; ಕೌಂಟರ್‌ಗೆ ಕಾಂಗ್ರೆಸ್‌ ತಯಾರಿ

ಈ ಹಿನ್ನೆಲೆಯಲ್ಲಿ, ಒಂದು ಬಾರಿಯ ಕ್ರಮವಾಗಿ, 2024ರ ಎಲ್ಲ 3 ಎಸ್ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಎಲ್ಲ ವಿಷಯಗಳಲ್ಲಿ ನೀಡುವ ಕೃಪಾಂಕಗಳನ್ನು ಆಕರ್ಷಿಸಲು ಪಡೆಯಬೇಕಾದ ಅರ್ಹ ಅಂಕಗಳನ್ನು ಶೇ. 35 ರಿಂದ ಶೇ. 25ಕ್ಕೆ ಇಳಿಕೆ ಮಾಡಿದ್ದಲ್ಲದೆ, ಕೃಪಾಂಕದ ಪ್ರಮಾಣವನ್ನು ಶೇ. 10 ರಿಂದ ಶೇ. 20ಕ್ಕೆ ಹೆಚ್ಚಿಸಲಾಗಿತ್ತು. ಈ ಕ್ರಮದ ನಂತರ ಒಟ್ಟಾರೆ ಫಲಿತಾಂಶವು, ಮೇಲಿನ ಕೋಷ್ಟಕದಲ್ಲಿನಂತೆ, 73.40% ಆಗಿತ್ತು. ಮುಂಬರುವ ವರ್ಷಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ನೂತನ ವ್ಯವಸ್ಥೆಗೆ ಉತ್ತಮವಾಗಿ ಹೊಂದಿಕೊಳ್ಳುವುದರಿಂದ ಫಲಿತಾಂಶ ವೃದ್ಧಿಯ ಅಗತ್ಯವಿರುವುದಿಲ್ಲ ಎಂದು ಶಿಕ್ಷಣ ಇಲಾಖೆ ಅಭಿಪ್ರಾಯಪಟ್ಟಿತ್ತು. ಆದರೆ, ಇದಕ್ಕೆ ಈಗ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.

Continue Reading

ಬೆಂಗಳೂರು

KSRTC Bus : ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ

KSRTC Bus : ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಎಂಜಲು ಉಗುಳುವ ಬರದಲ್ಲಿ ಕಿಟಿಕಿಯ ಸಣ್ಣ ಸಂದಿಯೊಳಗೆ ತಲೆ ಹಾಕಿ ಪರದಾಡಿದ ಘಟನೆ ನಡೆದಿದೆ. ಮತ್ತೊಂದು ಕಡೆ ಕೆಎಸ್‌ಆರ್‌ಟಿಸಿ ಬಸ್‌ ಸಿಬ್ಬಂದಿ ಸೈಡ್‌ ಬಿಡಲಿಲ್ಲ ಎಂದು ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ.

VISTARANEWS.COM


on

By

KSRTC BUS Woman locks in window of KSRTC bus after going to spit
Koo

ಬೆಂಗಳೂರು/ಉಡುಪಿ: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ (KSRTC Bus) ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರ ತಲೆಯು ಲಾಕ್‌ ಆದ ಘಟನೆ ನಡೆದಿದೆ. ಕಿಟಿಕಿಯಲ್ಲಿ ತಲೆ ಸಿಕ್ಕಿಸಿಕೊಂಡ ಪರಿಣಾಮ ಮಹಿಳೆ ಕೆಲಕಾಲ ಪರದಾಡಬೇಕಾಯಿತು.

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಎಂಜಲು ಉಗುಳಲು ಬಸ್‌ನ ಕಿಟಿಕಿಯ ಸಣ್ಣ ಸಂದಿಯೊಳಗೆ ತಲೆಯನ್ನು ಹೊರಹಾಕಿದ್ದರು. ಹೀಗೆ ಹೊರ ಹಾಕಿದ ತಲೆಯು ವಾಪಸ್‌ ಹಿಂದಕ್ಕೆ ಬಾರದೇ ಅಲ್ಲೆ ಲಾಕ್‌ ಆಗಿತ್ತು. ಕಾರಣ ಕಿಟಕಿಯ ಸಣ್ಣ ಜಾಗಕ್ಕೆ ನುಗ್ಗಿದ ಪರಿಣಾಮ ಅರ್ಧ ಗಂಟೆಗೂ ಹೆಚ್ಚು ಕಾಲ ತಲೆ ಲಾಕ್ ಆಗಿತ್ತು.

ಈ ವೇಳೆ ಮಹಿಳೆಯ ಪರದಾಟ ಹಾಗೂ ಕೂಗಾಟ ಕಂಡು ಸಹ ಪ್ರಯಾಣಿಕರು ಸಹಾಯಕ್ಕೆ ಧಾವಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಲಿಲ್ಲ. ಬಳಿಕ ಮಹಿಳೆ ತಲೆ ಲಾಕ್‌ ಆಗಿರುವುದು ಗಮನಕ್ಕೆ ಬಂದಾಕ್ಷಣ ಕೆಎಸ್‌ಆರ್‌ಟಿಸಿ ಬಸ್ಸಿನ ಚಾಲಕ ಹಾಗೂ ನಿರ್ವಾಹಕರು ಬಸ್ ನಿಲ್ಲಿಸಿದ್ದಾರೆ. ಬಳಿಕ 15 ನಿಮಿಷಗಳ ಕಾರ್ಯಾಚರಣೆ ಮಾಡಿ, ಜಾಗರೂಕತೆಯಿಂದ ಮಹಿಳೆಯ ತಲೆಯನ್ನು ಕಿಟಿಕಿಯಿಂದ ಬಿಡಿಸಿ, ರಕ್ಷಿಸಿದ್ದಾರೆ.

ಇತ್ತ ಮಹಿಳೆಯು ಬದುಕಿತು ಬಡ ಜೀವ ಎಂಬಂತೆ ತಲೆಯನ್ನು ಒಳಗೆ ಎಳೆದುಕೊಂಡಿದ್ದಾರೆ. ಸದ್ಯ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಹಿಳೆಗೆ ಯಾಕ್ ಬೇಕಿತ್ತು ಈ ಅವಾಂತರ ಎಂದು ನೆಟ್ಟಿಗರು ಕಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Road Accident : ಮೈಸೂರು- ಬೆಂಗಳೂರಲ್ಲಿ ಮೂವರ ಪ್ರಾಣ ಕಸಿದ ಮೂರು ಪ್ರತ್ಯೇಕ ಅಪಘಾತ

ಉಡುಪಿಯಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲೆ ಹಲ್ಲೆ

ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿಯ ಮೇಲೆ ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ. ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಆಗುಂಬೆ ಘಾಟಿಯಲ್ಲಿ ಘಟನೆ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಆಗುಂಬೆಯಿಂದ ಹೆಬ್ರಿಗೆ ಹೊರಟಿತ್ತು. ಈ ವೇಳೆ ಬಸ್ ಹಿಂದೆ ಇದ್ದ ಪ್ರವಾಸಿಗರ ಕಾರಿಗೆ ಸೈಡ್ ನೀಡಲಿಲ್ಲ ಎನ್ನುವ ಆರೋಪವಿದೆ. ಹೀಗಾಗಿ ಗಾಟಿಯ ಮಧ್ಯೆ ಬಸ್‌ಗೆ ಅಡ್ಡಹಾಕಿ ನಿರ್ವಾಹಕ ಮತ್ತು ಚಾಲಕನಿಗೆ ಪ್ರವಾಸಿಗರು ಹಲ್ಲೆ ನಡೆಸಿದ್ದಾರೆ. ಈ ಗಲಾಟೆಯಿಂದಾಗಿ ಘಾಟಿಯಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೀಡೆ

RCB vs CSK: ವಾಹನ ಸವಾರರೇ ಗಮನಿಸಿ, ನಾಳೆ ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ

RCB vs CSK: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅತ್ಯಾಧುನಿಕ ಸಬ್ ಏರ್ ಸಿಸ್ಟಂ ಹೊಂದಿರುವ ಕಾರಣ. ಮಳೆ ಬಂದರೂ ಶೀಘ್ರವಾಗಿ ಮೈದಾನದಲ್ಲಿನ ನೀರನ್ನು ಹೀರಿಕೊಳ್ಳುತ್ತದೆ. ಹೀಗಾಗಿ ಎಷ್ಟೇ ಮಳೆಯಾದರೂ ಕೆಲವೇ ನಿಮಿಷಗಳಲ್ಲಿ ಮೈದಾನವನ್ನು ಸಜ್ಜುಗೊಳಿಸಬಹುದು. ಈ ಕಾರಣದಿಂದಾಗಿ ಬೆಂಗಳೂರಿನಲ್ಲಿ ಮಳೆ ಬಂದರೂ ಸೀಮಿತ ಓವರ್​ಗಳ ಪಂದ್ಯವನ್ನು ನಿರೀಕ್ಷಿಸಬಹುದು.

VISTARANEWS.COM


on

RCB vs CSK
Koo

ಬೆಂಗಳೂರು: ಕನ್ನಡಿಗರ ನೆಚ್ಚಿನ ತಂಡವಾದ ಆರ್​ಸಿಬಿ(Royal Challengers Bengaluru) ನಾಳೆ (ಮೇ​ 18) ತವರು ಮೈದಾನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (chinnaswamy stadium) ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ವಿರುದ್ಧ ಕಣಕ್ಕಿಳಿಯಲಿದೆ. ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಬೆಂಗಳೂರು ಟ್ರಾಫಿಕ್ ಪೊಲೀಸರು ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಿಲಾಗಿದ್ದು ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಪೂರ್ಣವಾಗಿ ಪಾರ್ಕಿಂಗ್ ನಿಷೇಧ ಮಾಡಲಾಗಿದೆ. ಶನಿವಾರ ಮಧ್ಯಾಹ್ನ 3.00 ಗಂಟೆಯಿಂದ ರಾತ್ರಿ 11.00ರವರೆಗೆ ಈ ವ್ಯತ್ಯಾಸಗಳು ಜಾರಿಯಲ್ಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಕೋರಲಾಗಿದೆ.

ಇಲ್ಲಿ ಪಾರ್ಕಿಂಗ್​ ನಿಷೇಧ


ನಗರದ ಕ್ರೀನ್ಸ್ ರಸ್ತೆ, ಎಂ.ಜಿ ರಸ್ತೆ, ಎಂ.ಜಿ ರಸ್ತೆ ಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್‌ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆಯಲ್ಲಿ ಪಾರ್ಕಿಂಗ್​ ನಿಷೇಧ ಮಾಡಲಾಗಿದೆ.

ಎಲ್ಲಿ ಪಾರ್ಕಿಂಗ್​ ಮಾಡಬಹುದು?


ಸೆಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಬಿ.ಎಂ.ಟಿ.ಸಿ ಬಸ್ ನಿಲ್ದಾಣದ ಮೊದಲನೆ ಮಹಡಿ & ಓಲ್ಸ್ ಕೆ.ಜಿ.ಐ.ಡಿ ಬಿಲ್ಡಿಂಗ್, ಕಿಂಗ್ಸ್ ರಸ್ತೆ, (ಕಬ್ಬನ್‌ಪಾರ್ಕ್ ಒಳಭಾಗ) ಈ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ವಿಶೇಷ ಮೆಟ್ರೋ ಸೇವೆ

ಕ್ರಿಕೆಟ್‌ ಪಂದ್ಯ ನೋಡಲು ಬರುವ ಕ್ರಿಕೆಟ್‌ ಪ್ರೇಮಿಗಳಿಗಾಗಿ ಮೆಟ್ರೋ ರೈಲು ವಿಶೇಷ ಓಡಾಟಕ್ಕೆ ಅನುಮತಿ ನೀಡಿವೆ. ಹೀಗಾಗಿ ಕ್ರಿಕೆಟ್‌ ನೋಡಲು ಬರುವವರು, ಕ್ರೀಡಾಂಗಣ ತಲುಪುವ ವಿಚಾರದಲ್ಲಿ ಯಾವುದೇ ಚಿಂತೆ ಮಾಡಬೇಕಾಗಿಲ್ಲ. ಪಂದ್ಯ ವೀಕ್ಷಣೆಗಾಗಿ ಬರುವ ಪ್ರಯಾಣಿಕರ ಅನುಕೂಲಕ್ಕಾಗಿ ಎಲ್ಲಾ ನಾಲ್ಕು ಟರ್ಮಿನಲ್ ಮೆಟ್ರೋ ನಿಲ್ದಾಣಗಳಿಂದ ಕೊನೆಯ ರೈಲು ಸೇವೆಗಳನ್ನು ರಾತ್ರಿ 11.30ಕ್ಕೆ ವಿಸ್ತರಿಸಲಾಗಿದೆ.

ಇದನ್ನೂ ಓದಿ IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳನ್ನು 50 ರೂ.ಗೆ ಮಾರಾಟ ಮಾಡಲಾಗುತ್ತಿದೆ. ಇದು ಕಬ್ಬನ್ ಪಾರ್ಕ್ ಮತ್ತು ಎಂ.ಜಿ ರಸ್ತೆ ಮೆಟ್ರೋ ನಿಲ್ದಾಣಗಳಿಂದ ಯಾವುದೇ ಇತರ ಮೆಟ್ರೋ ನಿಲ್ದಾಣಕ್ಕೆ ಒಂದೇ ಪ್ರಯಾಣಕ್ಕೆ ವಿತರಣೆಯ ದಿನದಂದು ರಾತ್ರಿ 8.00 ರಿಂದ ದಿನದ ಸೇವೆಗಳು ಕೊನೆಗೊಳ್ಳುವವರೆಗೆ ಮಾನ್ಯವಾಗಿರುತ್ತದೆ. ಈ ನಿಲ್ದಾಣಗಳಲ್ಲಿ ಟೋಕನ್ ಲಭ್ಯವಿರುವುದಿಲ್ಲ.

ಎಂದಿನಂತೆ, ಕ್ಯೂಆರ್‌ ( QR) ಕೋಡ್ ಟಿಕೆಟ್‌ಗಳು, ಸ್ಮಾರ್ಟ್ ಕಾರ್ಡ್‌ಗಳು ಮತ್ತು ಎನ್‌ಸಿಎಂಸಿ (NCMC) ಕಾರ್ಡ್‌ಗಳನ್ನು ಸಹ ಬಳಸಬಹುದು. ವಾಟ್ಸ್ ಆಪ್/ನಮ್ಮ ಮೆಟ್ರೋ ಆ್ಯಪ್/ಪೇ ಟಿಎಂ ಮೂಲಕ ಕ್ರಿಕೆಟ್ ಪಂದ್ಯದ ಆರಂಭಕ್ಕೆ ಮುಂಚಿತವಾಗಿ QR ಟಿಕೆಟ್‌ಗಳನ್ನು ಖರೀದಿಸಲು ಸಾರ್ವಜನಿಕರಿಗೆ ಸೂಚಿಸಲಾಗಿದೆ. ಕಬ್ಬನ್ ಪಾರ್ಕ್ ಮತ್ತು ಎಂಜಿ ರೋಡ್ ಮೆಟ್ರೋ ನಿಲ್ದಾಣಗಳಲ್ಲಿ ಟಿಕೆಟ್ ಖರೀದಿಸಲು ಟಿಕೆಟ್ ಕೌಂಟರ್‌ಗಳಲ್ಲಿ ಜನಸಂದಣಿಯನ್ನು ತಪ್ಪಿಸಲು ಈ ವ್ಯವಸ್ಥೆ ಮಾಡಲಾಗಿದೆ.

Continue Reading
Advertisement
Jr NTR and Prashanth Neel get the title Dragon from Karan
ಬಾಲಿವುಡ್1 min ago

Jr NTR: ಜ್ಯೂ. ಎನ್‌ಟಿಆರ್‌-ಪ್ರಶಾಂತ್‌ ನೀಲ್ ಸಿನಿಮಾ ಟೈಟಲ್‌ ಏನು? ಮೇ 20ಕ್ಕೆ ಸಿಗಲಿದ್ಯಾ ಅಪ್‌ಡೇಟ್‌?

Narendra Modi
ದೇಶ12 mins ago

Narendra Modi: ನೆಹರು-ಗಾಂಧಿ ಕುಟುಂಬಸ್ಥರಿಂದ ಸಂವಿಧಾನಕ್ಕೆ ಧಕ್ಕೆ; ಪ್ರಧಾನಿ ಮೋದಿ ವಾಗ್ದಾಳಿ

ambulance-booking
ಆರೋಗ್ಯ14 mins ago

Ambulance Booking : ಬೆಂಗಳೂರಿನಲ್ಲಿ ಆ್ಯಪ್ ​ಮೂಲಕವೇ ಮಾಡಬಹುದು ಆಂಬ್ಯುಲೆನ್ಸ್​ ಬುಕಿಂಗ್

SSLC Grace Marks 20 per cent grace marks CM Siddaramaiah slams education department
ಶಿಕ್ಷಣ22 mins ago

SSLC Grace Marks: ಯಾರನ್ನು ಕೇಳಿ ಶೇ. 20 ಗ್ರೇಸ್‌ ಮಾರ್ಕ್ಸ್‌ ಕೊಟ್ಟಿರಿ? ಶಿಕ್ಷಣ ಇಲಾಖೆ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ!

Kannada New Movie powder Teaser Out
ಸ್ಯಾಂಡಲ್ ವುಡ್33 mins ago

Kannada New Movie: ಬಹು ನಿರೀಕ್ಷಿತ ʻಪೌಡರ್‌ʼ ಸಿನಿಮಾ ಟೀಸರ್‌ ಔಟ್‌!

Drowned in water
ರಾಮನಗರ33 mins ago

Drowned In water : ನಮಾಜ್‌ ಮುಗಿಸಿ ಈಜಲು ಹೋದ ಮೂವರು ನೀರುಪಾಲು; ಐವರು ಪ್ರಾಣಾಪಾಯದಿಂದ ಪಾರು

Illegal sand mining
ಕರ್ನಾಟಕ34 mins ago

Illegal Sand Mining: ಅಕ್ರಮ ಮರಳುಗಾರಿಕೆ: ಪೊಲೀಸರು, ಅಧಿಕಾರಿಗಳಿಗೆ ರಕ್ಷಣೆ ಕೊಡುವಂತೆ ಗ್ರಾಮಸ್ಥರ ಮನವಿ!

RCB vs CSK
ಕ್ರಿಕೆಟ್36 mins ago

RCB vs CSK: ಚಿನ್ನಸ್ವಾಮಿಯಲ್ಲಿ ಆರ್​ಸಿಬಿ-ಚೆನ್ನೈ ತಂಡಗಳ ಐಪಿಎಲ್​ ದಾಖಲೆ ಹೇಗಿದೆ?

Narayana Murthy
ದೇಶ42 mins ago

Narayana Murthy: ಕೃತಕ ಬುದ್ಧಿಮತ್ತೆಯಿಂದ ಉದ್ಯೋಗಗಳಿಗೆ ಕತ್ತರಿ? ನಾರಾಯಣ ಮೂರ್ತಿ ಶಾಕಿಂಗ್‌ ಹೇಳಿಕೆ

IPL 2024
ಪ್ರಮುಖ ಸುದ್ದಿ50 mins ago

IPL 2024 : ಆರ್​ಸಿಬಿ ಮತ್ತು ಸಿಎಸ್​ಕೆ ನಡುವಿನ ಪಂದ್ಯದ ವಿಜೇತರು ಯಾರು ಎಂದು ತಿಳಿಸಿದ ಬ್ರಿಯಾನ್ ಲಾರಾ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ10 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ12 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌