Rowdy politics | ಬೆತ್ತನಗೆರೆ ಶಂಕರ ರಾಜಕೀಯ ಪ್ರವೇಶಕ್ಕೆ ಪ್ರಯತ್ನ: ಬಿಜೆಪಿ ಬಾಗಿಲಲ್ಲಿ ಮತ್ತೊಬ್ಬ ರೌಡಿಶೀಟರ್‌ - Vistara News

ಕರ್ನಾಟಕ

Rowdy politics | ಬೆತ್ತನಗೆರೆ ಶಂಕರ ರಾಜಕೀಯ ಪ್ರವೇಶಕ್ಕೆ ಪ್ರಯತ್ನ: ಬಿಜೆಪಿ ಬಾಗಿಲಲ್ಲಿ ಮತ್ತೊಬ್ಬ ರೌಡಿಶೀಟರ್‌

ರೌಡಿಸಂ ಹಿನ್ನೆಲೆ (Rowdy politics) ಹೊಂದಿರುವ, ಕಳೆದ ಕೆಲವು ವರ್ಷಗಳಿಂದ ಹೆಗ್ಗಡದೇವನ ಕೋಟೆ ಭಾಗದಲ್ಲಿ ಸಾಮಾಜಿಕ ಚಟುವಟಿಕೆಯಲ್ಲಿ ಸಕ್ರಿಯನಾಗಿರುವ ಬೆತ್ತನಗೆರೆ ಶಂಕರ ಈಗ ಬಿಜೆಪಿ ಸೇರ್ಪಡೆಗೆ ಪ್ರಯತ್ನ ನಡೆಸುತ್ತಿದ್ದಾನೆ.

VISTARANEWS.COM


on

ಬೆತ್ತನಗೆರೆ ಶಂಕರ
ರಾಜಕೀಯ ಪ್ರವೇಶಕ್ಕೆ ಅಣಿಯಾಗಿರುವ ಬೆತ್ತನಗೆರೆ ಶಂಕರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನೆಲಮಂಗಲ: ನೆಲಮಂಗಲದಲ್ಲಿ ಫೈಟರ್‌ ರವಿ ಬಿಜೆಪಿ ಸೇರ್ಪಡೆ, ಬೆಂಗಳೂರಿನಲ್ಲಿ ರೌಡಿ ಸೈಲೆಂಟ್‌ ಸುನಿಲ್‌ ಆಯೋಜಿಸಿದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಭಾಗವಹಿಸಿದ್ದ ಬೆನ್ನಿಗೇ ರೌಡಿ ಪಾಲಿಟಿಕ್ಸ್‌ (Rowdy politics) ಚರ್ಚೆ ಜೋರಾಗಿದೆ. ಈ ಸರಣಿಯ ಮುಂದುವರಿದ ಭಾಗವಾಗಿ ನೆಲಮಂಗಲದ ಮತ್ತೊಬ್ಬ ರೌಡಿ ಶೀಟರ್‌ ಬೆತ್ತನಗೆರೆ ಶಂಕರ ರಾಜಕೀಯದ ಬಾಗಿಲಿಗೆ ಬಂದು ನಿಂತಿದ್ದಾನೆ. ಅಚ್ಚರಿ ಎಂದರೆ ಈತನೂ ಬಾಗಿಲು ತಟ್ಟುತ್ತಿರುವುದು ಬಿಜೆಪಿಯದ್ದೇ!

ನೆಲಮಂಗಲಕ್ಕೆ ರಕ್ತಮಂಗಲ ಎಂಬ ಹೆಸರು ತಂದ ಕುಖ್ಯಾತಿಯನ್ನು ಈತ ಹೊಂದಿದ್ದಾನೆ ಎಂದು ಹೇಳಲಾಗುತ್ತಿದೆ. ಇದೀಗ ಬಿಜೆಪಿ ನಾಯಕರ ಜತೆಗೆ ಆಗಾಗ ಕಾಣಿಸಿಕೊಳ್ಳುತ್ತಿದ್ದು, ಪಕ್ಷ ಸೇರ್ಪಡೆಯ ಬಗ್ಗೆ ಜೋರಾದ ಚರ್ಚೆ ನಡೆಯುತ್ತಿದೆ.

ಬಿಎಸ್‌ ಯಡಿಯೂರಪ್ಪ ಅವರ ಜತೆ ಕಾಣಿಸಿಕೊಂಡ ಬೆತ್ತನಗೆರೆ ಶಂಕರ
ಬಿವೈ ವಿಜಯೇಂದ್ರ ಜತೆ

ಇತ್ತೀಚೆಗೆ ಮೈಸೂರಿನ ಹೆಗ್ಗಡದೇವನ ಕೋಟೆಯಲ್ಲಿ (ಎಚ್‌.ಡಿ. ಕೋಟೆ) ಸಮಾಜಸೇವೆ ಮಾಡುತ್ತಿರುವ ನಲ್ಲೂರು ಶಂಕರೇ ಗೌಡರು ಅಲಿಯಾಸ್‌ ಬೆತ್ತನಗೆರೆ ಶಂಕರ ರಾಜಕೀಯ ಪ್ರವೇಶಕ್ಕೆ ಅವಕಾಶಕ್ಕಾಗಿ ಕಾಯುತ್ತಿರುವುದು ಸುಳ್ಳಲ್ಲ. ಬಿಜೆಪಿ ನಾಯಕನೆಂದೇ ಗುರುತಿಸಿಕೊಂಡು ಕಾರ್ಯಕ್ರಮಗಳನ್ನೂ ಮಾಡಿರುವ, ಜಾಹೀರಾತುಗಳನ್ನೂ ನೀಡಿರುವ ಶಂಕರ, ಬಿಜೆಪಿಯ ಹಿರಿಯ ನಾಯಕರಾದ ಬಿ.ಎಸ್‌. ಯಡಿಯೂರಪ್ಪ, ಸಂಸದ ಶ್ರೀನಿವಾಸ ಪ್ರಸಾದ್‌, ಬಿ.ವೈ.ವಿಜಯೇಂದ್ರ, ಬಿ.ಸಿ. ಪಾಟೀಲ್‌, ಎಸ್‌ಟಿ ಸೋಮಶೇಖರ್‌ ಮೊದಲಾದವರ ಜತೆಯಲ್ಲಿ ಕಾಣಿಸಿಕೊಂಡಿದ್ದಾರೆ. ಸಮಾಜ ಸೇವೆಯ ಹೆಸರಿನಲ್ಲಿ ನಾನಾ ಮಠಾಧೀಶರ ಆಶೀರ್ವಾದವನ್ನೂ ಪಡೆದುಕೊಳ್ಳುತ್ತಿರುವುದು ಕಂಡುಬಂದಿದೆ.

ಚಾಮರಾಜ ನಗರದ ಸಂಸದ ಶ್ರೀನಿವಾಸ ಪ್ರಸಾದ್‌ ಅವರ ಜತೆ
ಸಚಿವ ಬಿ.ಸಿ. ಪಾಟೀಲ್‌ ಅವರ ಜತೆ

ಹಾಲಿನ ಡೇರಿಯಿಂದ ರಕ್ತಚರಿತೆ ಶುರು: ಬೆಚ್ಚಿ ಬೀಳಿಸಿದ ನಾಲ್ಕು ಕೊಲೆ
ನೆಲಮಂಗಲದ ರಕ್ತ ಸಿಕ್ತ ಇತಿಹಾಸದಲ್ಲಿ ಬೆತ್ತನಗೆರೆ ಶಂಕರ ಹೆಸರು ಪ್ರಮುಖವಾಗಿ ಹೇಳಿಬರುತ್ತದೆ. ಗ್ರಾಮದ ಹಾಲಿನ ಡೇರಿ ಅಧ್ಯಕ್ಷೀಯ ಚುನಾವಣೆ ವಿಚಾರಕ್ಕೆ ಆರಂಭವಾದ ರೌಡಿಸಂ ಬಳಿಕ ದೊಡ್ಡ ಮಟ್ಟಕ್ಕೇರಿತು. ಚುನಾವಣೆಯಲ್ಲಿ ಬಾಳೆಕಾಯಿ ಬಸವಯ್ಯ ಎಂಬವರ ವಿರುದ್ಧ ಪರಾಭವಗೊಂಡಿದ್ದ ಶಂಕರ ೨೦೦೫ರ ಜೂನ್‌ ೧೬ರಂದು ಬಸವಯ್ಯ ಅವರನ್ನೇ ಕೊಲೆ ಮಾಡಿದ್ದ.

ಬಾಳೆಕಾಯಿ ಬಸವಯ್ಯನ ಕೊಲೆ ಪ್ರಕರಣದಲ್ಲಿ ತನ್ನ ವಿರುದ್ಧ ಸಾಕ್ಷಿ ಹೇಳುತ್ತಾರೆ ಎಂಬ ಸಿಟ್ಟಿನಲ್ಲಿ ಮುಖ್ಯ ಸಾಕ್ಷಿಗಳಾಗಿದ್ದ ಲಾಯರ್ ದೇವರಾಜು ಮತ್ತು ಕೃಷ್ಣಮೂರ್ತಿ ಅವರನ್ನು ೨೦೦೬ರ ಮೇ ೫ರಂದು ಕೊಲೆ ಮಾಡಿದ್ದು ಭಯಾನಕ ಕೃತ್ಯವಾಗಿ ದಾಖಲಾಗಿತ್ತು. ಇದಕ್ಕಿಂತಲೂ ಭಯಾನಕವಾದ ಮತ್ತೊಂದು ಘಟನೆಯೆಂದರೆ ಲಾಯರ್‌ ದೇವರಾಜು ಕೊಲೆ ವಿಚಾರದಲ್ಲಿ ಸಾಕ್ಷಿ ಹೇಳಬಾರದು ಎಂದು ಅವರ ತಂದೆ ಬೈಲಪ್ಪ ಅವರನ್ನೇ ಕೊಂದು ಹಾಕಿದ್ದ ಶಂಕರ. ಅಂದರೆ ಬಾಳೆಕಾಯಿ ಬಸವಯ್ಯ ಅವರ ಒಂದು ಕೊಲೆಯ ಬೆನ್ನಲ್ಲಿ ಸಾಕ್ಷ್ಯ ಹೇಳುತ್ತಾರೆಂಬ ಕಾರಣಕ್ಕೆ ಇಬ್ಬರು ವಕೀಲರು ಮತ್ತು ವಕೀಲರೊಬ್ಬರ ತಂದೆಯನ್ನೇ ಶಂಕರ ಮುಗಿಸಿಬಿಟ್ಟಿದ್ದ!

ಉದ್ಯಮಿಯ ಅಪಹರಣ, ಕೊಲೆಯತ್ನ
೨೦೦೮ರ ಡಿಸೆಂಬರ್‌ ೧೫ರಂದು ಲ್ಯಾಂಡ್‌ ಡೆವಲಪರ್‌ ರಂಗಧಾಮಯ್ಯ ಅವರನ್ನು ಅಪಹರಿಸಿದ್ದಲ್ಲದೆ ಹಣಕ್ಕಾಗಿ ಬೇಡಿಕೆ ಇಟ್ಟು ಕೊಲೆ ಯತ್ನ ಮಾಡಿದ್ದ. ಅದಕ್ಕಿಂತ ಮೊದಲು ಅಕ್ಟೋಬರ್‌ ೨ರಂದು ಉದ್ಯಮಿ ಪುಟ್ಟಚನ್ನಪ್ಪನವರ ಮನೆ ಮೇಲೆ ದಾಳಿ ಮಾಡಿ ಕೊಲೆಗೆ ಯತ್ನಿಸಿದ್ದ ಶಂಕರ.

ಮತ್ತೊಬ್ಬ ರೌಡಿಯ ಅಕ್ಕನ ಗಂಡನ ಕೊಲೆ
ಈ ನಡುವೆ ೨೦೦೯ರ ಮಾರ್ಚ್‌ ೧೭ರಂದು ಬೆತ್ತನಗೆರೆ ಸೀನ ಎಂಬ ಮತ್ತೊಬ್ಬ ರೌಡಿಯ ಅಕ್ಕನ ಗಂಡ ದೇವೇಂದ್ರಪ್ಪ ಅಲಿಯಾಸ್‌ ಹ್ಯಾಡಾಳ್‌ ದೇವಿಯನ್ನು ಕೊಲೆ ಮಾಡಿದ್ದ. ದೇವಾಲಯವೊಂದರ ಮುಂಭಾಗದಲ್ಲೇ ಅತ್ಯಂತ ಸಿನಿಮೀಯ ರೀತಿಯಲ್ಲಿ ದಾಳಿ ಮಾಡಿ ಕೊಲೆ ಮಾಡಲಾಗಿತ್ತು.

ಹಲವರ ಮೇಲೆ ಅಟ್ಯಾಕ್‌, ಹಣೆಗೆ ಗನ್‌ ಪಾಯಿಂಟ್‌
೨೦೦೯ರ ಸೆಪ್ಟೆಂಬರ್‌ ೧೯ರಂದು ಶಂಕರ ಮತ್ತು ಸಹಚರರು ಬಂಡೆ ಮಂಜನ ಮೇಲೆ ಅಟ್ಯಾಕ್‌ ಮಾಡಿದ್ದರು. ಅದಾದ ಬಳಿಕ ಡಿಸೆಂಬರ್‌ ೨೪ರಂದು ವಡೇರಹಳ್ಳಿ ಜಯರಾಮಯ್ಯನ ಮೇಲೆ ದಾಳಿ ನಡೆಸಿತ್ತು ಶಂಕರನ ಟೀಮ್‌. ತನ್ನ ವಿರೋಧಿಯಾಗಿರುವ ಬೆತ್ತನೆಗೆರೆ ಸೀನನಿಗೆ ವಡೇರಹಳ್ಳಿ ಜಯರಾಮಯ್ಯ ಆರ್ಥಿಕ‌ ನೆರವು ನೀಡಿತ್ತಿದ್ದರು ಎಂಬುದೇ ದಾಳಿಗೆ ಕಾರಣ. ಜಯರಾಮಯ್ಯನ ತಲೆಗೆ ಗನ್ ಪಾಯಿಂಟ್ ಇಟ್ಟಿದ್ದರು ಶಂಕರನ ಹುಡುಗರು. ಆದರೆ, ಇದು ಮಿಸ್‌ ಪೈರ್‌ ಆಗಿ ಜಯರಾಮಯ್ಯನ ಕೆನ್ನೆ ಸೀಳಿ ಜೀವ ಬಚಾವಾಗಿತ್ತು.

ಲವ್‌ ಕೇಸಿನಲ್ಲೂ ಮಧ್ಯ ಪ್ರವೇಶ
೨೦೧೦ರ ಜನವರಿ ೯ರಂದು ಪ್ರೇಮ ಪ್ರಕರಣದವೊಂದರಲ್ಲಿ ಮಧ್ಯ ಪ್ರವೇಶ ಮಾಡಿದ್ದ ಆರೋಪದಲ್ಲಿ ಗನ್‌ಮ್ಯಾನ್‌ ಗಂಗರಾಜು ಅವರ ಮೇಲೆ ಹಲ್ಲೆ ಮಾಡಲಾಗಿತ್ತು.

ಬಂಡೆ ಮಂಜ ಎಂದುಕೊಂಡು ಲಾಯರ್‌ ರವಿ ಕೊಲೆ
ಇನ್ನೊಬ್ಬ ರೌಡಿಯಾಗಿರುವ ಬಂಡೆ ಮಂಜನಿಗೂ ಬೆತ್ತನಗೆರೆ ಶಂಕರನಿಗೂ ಆಗಿ ಬರುತ್ತಿರಲಿಲ್ಲ. ಇಂಥ ಹೊತ್ತಲ್ಲಿ ಆತನ ಹತ್ಯೆಗೆ ಸ್ಕೆಚ್‌ ಹಾಕಿದ್ದ. ೨೦೧೦ರ ಜುಲೈ ೩ರಂದು ಕಾರು ಚಾಲನೆ ಮಾಡುತ್ತಿರುವುದು ಬಂಡೆ ಮಂಜ ಎಂದು ತಿಳಿದುಕೊಂಡು ಲಾಯರ್‌ ರವಿಯನ್ನು ಮಾರಕಾಸ್ತ್ರಗಳಿಂದ ಕೊಲೆ ಮಾಡಲಾಗಿತ್ತು.

ಬೆತ್ತನಗೆರೆ ಸೀನನ ಮೇಲೆ ದ್ವೇಷ
ಬೆತ್ತನಗೆರೆ ಶಂಕರ ಮತ್ತು ಸೀನನ ನಡುವೆ ತುಂಬಾ ಹಿಂದಿನಿಂದಲೇ ದ್ವೇಷವಿತ್ತು. ಇದು ಮುಂದುವರಿದು ೨೦೧೧ರ ಮಾರ್ಚ್‌ ೧೦ರಂದು ಮೈಸೂರಿನ ಕಾರಾಗೃಹದಲ್ಲೇ ಬೆತ್ತನಗೆರೆ ಸೀನನ ಮೇಲೆ ದಾಳಿ ನಡೆಸಿತ್ತು ಶಂಕರನ ಟೀಮ್‌. ಈ ನಡುವೆ ಬೆತ್ತನಗೆರೆ ಸೀನಾ ಹಾಗೂ ಶಂಕರ ಇಬ್ಬರ ಹಗೆತನದಲ್ಲಿ ಬೆಮೆಲ್ ಕೃಷ್ಣಪ್ಪ ಎಂಬಾತ ಜೀವ ತೆತ್ತಿದ್ದ.

ಶಂಕರನಿಗೆ ಬೆಮೆಲ್ ಕೃಷ್ಣಪ್ಪ ಸಾಥ್ ನೀಡುತ್ತಾನೆ ಎಂದು ಬಗೆದ ಸೀನ ಮತ್ತು ಗ್ಯಾಂಗ್‌ ೨೦೧೨ರ ಜುಲೈ ೨೫ರಂದು ಕೊಲೆ ಮಾಡಿತ್ತು.

ಜೈಲಿನಲ್ಲೂ ಐಷಾರಾಮಿ ಬದುಕು
ಆಗಾಗ ಜೈಲು ಸೇರುತ್ತಾ, ಜಾಮೀನು ಪಡೆಯುತ್ತಾ ಬಿಡುಗಡೆ ಆಗುತ್ತಿದ್ದ ಶಂಕರ ಜೈಲಿನಲ್ಲೂ ಐಷಾರಾಮಿ ಜೀವನ ನಡೆಸುತ್ತಿದ್ದ. ಆತ ಮಾಧ್ಯಮದವರಿಗೆ ಕರೆ ಮಾಡಿದ್ದು, ಐಷಾರಾಮಿಯಾಗಿ ಬದುಕುವುದನ್ನು ಅರಿತ ಪೊಲೀಸ್‌ ಇಲಾಖೆ ಇದಕ್ಕೆ ಅವಕಾಶ ಮಾಡಿಕೊಟ್ಟಿದ್ದ ಇಬ್ಬರು ಜೈಲು ಅಧಿಕಾರಿಗಳನ್ನು ಅಮಾನತುಗೊಳಿಸಿತ್ತು. ಇಷ್ಟೇ ಅಲ್ಲ ಜೈಲಿನಲ್ಲೇ ಕುಳಿತುಕೊಂಡು ಹಫ್ತಾ ವಸೂಲಿ ಕೆಲಸವನ್ನು ಮಾಡುತ್ತಿದ್ದ. 2009ರಲ್ಲಿ ಹಫ್ತಾ ವಸೂಲಿ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇಷ್ಟೆಲ್ಲ ಕ್ರಿಮಿನಲ್‌ ಇತಿಹಾಸ ಹೊಂದಿರುವ ಬೆತ್ತನಗೆರೆ ಶಂಕರ ಈಗ ಬಿಜೆಪಿ ಸೇರುವ ಧಾವಂತದಲ್ಲಿದ್ದಾನೆ ಎಂದು ತಿಳಿದುಬಂದಿದೆ. ಸೈಲೆಂಟ್‌ ಸುನಿಲ್‌ನನ್ನು ಬಿಜೆಪಿಗೆ ಸೇರಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಬೆತ್ತನಗೆರೆ ಶಂಕರನ ವಿಚಾರದಲ್ಲಿ ಯಾವ ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಾಗಿದೆ.

ಇದನ್ನೂ ಓದಿ | ರೌಡಿ ಸುನಿಲ್‌ BJP ಸೇರ್ಪಡೆ ಇಲ್ಲ ಎಂದ ನಳಿನ್‌ ಕುಮಾರ್‌ ಕಟೀಲ್‌; ಈಗಾಗಲೆ ಸೇರಿರುವ ಫೈಟರ್‌ ರವಿ ಬಗ್ಗೆ ʼಸೈಲೆಂಟ್‌ʼ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Murder Case: ಹಫ್ತಾ ಕೊಡದ ಯುವಕನನ್ನು ಕೊಚ್ಚಿ ಕೊಂದ ರೌಡಿಗಳು; ಗುಂಡು ಹಾರಿಸಿ ಆರೋಪಿ ಬಂಧನ

Murder Case: ನಿನ್ನೆ ಮುಂಜಾನೆ ಪುಡಿ ರೌಡಿಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಸತೀಶ್‌ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ರಾತ್ರಿ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಿನ್ನೆ ಬೆಳಗ್ಗೆ ಹಾಸನ ಹೊರವಲಯದ ಕೌಶಿಕ ಗೇಟ್ ಬಳಿ ಸತೀಶ್ ಮೇಲೆ ಮಾರಕಾಸ್ತ್ರಗಳಿಂದ ರೌಡಿಗಳು ಹಲ್ಲೆ ನಡೆಸಿದ್ದರು.

VISTARANEWS.COM


on

murder case hassan
ಸಾವಿಗೀಡಾದ ಸತೀಶ್
Koo

ಹಾಸನ: ಹಾಸನದಲ್ಲಿ (Hassan News) ಪುಡಿ ರೌಡಿಗಳು (Rowdy Sheeters) ನಡೆಸಿರುವ ಹಲ್ಲೆಯಲ್ಲಿ (Assault Case) ಯುವಕನೊಬ್ಬ ತೀವ್ರವಾಗಿ ಗಾಯಗೊಂಡು (Murder Case) ಸಾವಿಗೀಡಾಗಿದ್ದಾನೆ. ಪೊಲೀಸರು ಹಲ್ಲೆ ಆರೋಪಿಯ ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಿದ್ದಾರೆ. ನಂದಿನಿ ಪಾರ್ಲರ್‌ (Nandini Parlor) ನಡೆಸುತ್ತಿದ್ದ ಈ ಯುವಕನನ್ನು ರೌಡಿಗಳು ಹಣಕ್ಕಾಗಿ ಹಲವು ತಿಂಗಳಿಂದ ಪೀಡಿಸುತ್ತಿದ್ದರು ಎಂದು ಗೊತ್ತಾಗಿದೆ.

ನಿನ್ನೆ ಮುಂಜಾನೆ ಪುಡಿ ರೌಡಿಗಳಿಂದ ಹಲ್ಲೆಗೊಳಗಾಗಿದ್ದ ಯುವಕ ಸತೀಶ್‌ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು. ರಾತ್ರಿ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ನಿನ್ನೆ ಬೆಳಗ್ಗೆ ಹಾಸನ ಹೊರವಲಯದ ಕೌಶಿಕ ಗೇಟ್ ಬಳಿ ಸತೀಶ್ ಮೇಲೆ ಮಾರಕಾಸ್ತ್ರಗಳಿಂದ ರೌಡಿಗಳು ಹಲ್ಲೆ ನಡೆಸಿದ್ದರು. ನಂದಿನಿ ಪಾರ್ಲರ್ ನಡೆಸುತ್ತಿದ್ದ ಸತೀಶ್, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಮೃತದೇಹವನ್ನು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದ್ದು, ಸತೀಶ್ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಆರೋಪಿ ಮೇಲೆ ಫೈರಿಂಗ್‌

ಹಲ್ಲೆ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಆರೋಪಿ ಹಲ್ಲೆ ನಡೆಸಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಆರೋಪಿ ಸಮುದ್ರವಳ್ಳಿ ರಾಜು ಎಂಬಾತನನ್ನು ಬಂಧಿಸಲು ಹಾಸನ ತಾಲ್ಲೂಕಿನ ಕುಂತಿಬೆಟ್ಟಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಆತ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದ್ದಾನೆ. ಪೊಲೀಸರು ಗುಂಡು ಹಾರಿಸಿ ಆತನನ್ನು ಗಾಯಗೊಳಿಸಿ ಬಂದಿಸಿದ್ದು, ನಂತರ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ.

ಹಲ್ಲೆ ಆರೋಪಿ ರಾಜು ಈ ಹಿಂದೆ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದ. ಕ್ಷುಲ್ಲಕ ಕಾರಣಕ್ಕೆ ಯುವಕ ಸತೀಶ್‌ ಮೇಲೆ ಈತನ ಗ್ಯಾಂಗ್‌ ಮಾರಣಾಂತಿಕವಾಗಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಹಲವಾರು ಅಪರಾಧಗಳಲ್ಲಿ ರಾಜು ಗ್ಯಾಂಗ್ ಭಾಗಿಯಾಗಿದೆ. ಘಟನೆ ಹಿಂದೆ ರೌಡಿಶೀಟರ್ ಸಮುದ್ರವಳ್ಳಿ ಅಶೋಕ್ ಕೈವಾಡವಿದೆ ಎಂದು ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ. ʼತಿಂಗಳುಗಳ ಹಿಂದೆಯೇ ಈ ಬಗ್ಗೆ ಪೋಲೀಸರಿಗೆ ಮಾಹಿತಿ ನೀಡಿದ್ದೆವು. ಹಣಕ್ಕಾಗಿ ಅನೇಕ ತಿಂಗಳುಗಳಿಂದ ರೌಡಿಗಳು ಪೀಡಿಸುತ್ತಿದ್ದರು. ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳಲಿಲ್ಲʼ ಎಂದು ಆಸ್ಪತ್ರೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವಕನ ತಾಯಿ, ಪೊಲೀಸರ ಎದುರೇ ಪೊಲೀಸರಿಗೆ ಧಿಕ್ಕಾರ ಕೂಗಿದ್ದಾರೆ.

ಹಿಂಬಾಲಿಸಿಕೊಂಡು ಬಂದು ಹಲ್ಲೆ ಮಾಡಲು ಯತ್ನ, ರಾಜಧಾನಿ ಸೇಫಲ್ಲ!

ಬೆಂಗಳೂರು: ಕಾರೊಂದನ್ನು ಹಿಂಬಾಲಿಸಿಕೊಂಡು ಬಂದ ಕೆಲ ಪುಂಡರು ಚಾಲಕನ ಮೇಲೆ ಹಲ್ಲೆಗೆ (Assault Case) ಯತ್ನಿಸಿದ್ದಾರೆ. ಬೈಕ್‌ನಲ್ಲಿ ಬಂದ ಪುಂಡರು ತಡರಾತ್ರಿ ಕಾರನ್ನು ಚೇಸ್‌ ಮಾಡಿ ಎರಡು ಬಾರಿ ಕಾರಿಗೆ ಅಡ್ಡ ಹಾಕಿ ಹಲ್ಲೆಗೆ ಯತ್ನಿಸಿದ್ದಾರೆ. ಕಾರಿನ ಗ್ಲಾಸ್ ಹೊಡೆದು ದರ್ಪ ಮೆರೆದಿದ್ದಾರೆ. ಬೆಂಗಳೂರಿನ ವಿಜಯನಗರ ಸಮೀಪ ಪುಂಡರ ಕ್ರೌರ್ಯಕ್ಕೆ ಚಾಲಕರು ಬೆಚ್ಚಿ ಬಿದ್ದಿದ್ದಾರೆ. ಕಾರಿನ ಅಕ್ಕ ಪಕ್ಕ ಬೈಕ್‌ಗಳಲ್ಲಿ ಸುಮಾರು ಒಂದೂವರೆ ಕಿಲೋ ಮೀಟರ್‌ವರೆಗೂ ಚೇಸ್‌ ಮಾಡಿದ್ದಾರೆ. ಕಾರಿನ ಡ್ಯಾಷ್ ಬೋರ್ಡ್‌ನಲ್ಲಿ ಪುಂಡರ ಅಟ್ಟಹಾಸ ಬಯಲಾಗಿದೆ. ಡ್ಯಾನ್ಸರ್ ಹಾಗು ಕೋರಿಯಾಗ್ರಾಫರ್ ಆಗಿರುವ ಅರವಿಂದ್ ಎಂಬುವವರ ಕಾರಿನ್ನು ಚೇಸ್‌ ಮಾಡಿ ಗ್ಲಾಸ್‌ ಹೊಡೆದು, ಹಲ್ಲೆಗೆ ಯತ್ನಿಸಿದ್ದಾರೆ. ವಿಜಯನಗರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Assault Case

ವ್ಹೀಲಿಂಗ್‌ ಮಾಡಿ ಬೆದರಿಕೆ ಹಾಕಿದ ಪುಂಡಾರು

ರಸ್ತೆಯಲ್ಲಿ ವ್ಹೀಲಿಂಗ್‌ ಮಾಡಿ ಪುಂಡಾಟ ಮಾಡಿದ್ದಲ್ಲದೇ ಬೆದರಿಸಿ ಹಲ್ಲೆಗೆ ಯತ್ನಿಸಿದ ಕಿರಾತಕರನ್ನು ಪೊಲೀಸರು ಬಂಧಿಸಿದ್ದಾರೆ. ಕ್ರಿಮಿನಲ್ ಅಫೆನ್ಸ್ ಎಂಬ ಕಾರಣಕ್ಕೆ ಲಾ ಆ್ಯಂಡ್ ಆರ್ಡರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದೀಗ ಇಬ್ಬರು ಅಪ್ರಾಪ್ತರು ಸೇರಿ ಸಂಜಯ್ ಎಂಬ ಯುವಕನನ್ನು ಬಂಧಿಸಲಾಗಿದೆ. ಸಿಲ್ಕ್ ಬೋರ್ಡ್ ಬಳಿ ಇರುವ ಹೊಸ ಫ್ಲೈ ಓವರ್ ಸಮೀಪ ಈ ಮೂವರು ವ್ಹೀಲಿಂಗ್‌ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಬೆದರಿಕೆ ಹಾಕಿ ಹಲ್ಲೆಗೆ ಯತ್ನಿಸಿದ್ದರು. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ಪೊಲೀಸ್ ಠಾಣೆ ಹೊರತು ಪಡಿಸಿ ಲಾ ಆ್ಯಂಡ್ ಆರ್ಡರ್‌ನಲ್ಲಿ ಕೇಸ್ ದಾಖಲು ಮಾಡಲಾಗಿತ್ತು. ಇದೀಗ ಸುಮೋಟೋ ಕೇಸ್ ದಾಖಲಿಸಿ ಸುದ್ಗುಂಟೆಪಾಳ್ಯ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Police Firing: ದರೋಡೆ, ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆ

Continue Reading

ವೈರಲ್ ನ್ಯೂಸ್

Viral News: 195 ಕಿ.ಮೀ ಒಂಟಿಯಾಗಿ ನಡೆದು ಮಾಲೀಕನಲ್ಲಿಗೆ ಮರಳಿದ ನಾಯಿ ಮಹಾರಾಜ!

Dog Love: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿಯ ಜ್ಞಾನದೇವ ಕುಂಬಾರ ಎಂಬವರಿಗೆ ಸೇರಿದ ಶ್ವಾನವಿದು. ಇದರ ಹೆಸರು ಮಹಾರಾಜ. ಮಹಾರಾಷ್ಟ್ರದಲ್ಲಿ ನಾಪತ್ತೆಯಾಗಿದ್ದ ಈ ಶ್ವಾನ 4 ದಿನಗಳ ಬಳಿಕ ಮನೆಯ ಮುಂದೆ ಪ್ರತ್ಯಕ್ಷವಾದುದನ್ನು ಕಂಡು ಮಾಲೀಕ ದಂಗಾಗಿದ್ದಾರೆ. ಇದು ಹೇಗೆ ಮರಳಿ ದಾರಿ ಹುಡುಕಿಕೊಂಡಿರಬಹುದು ಎಂಬ ಆಶ್ಚರ್ಯ ಎಲ್ಲರಲ್ಲೂ ಮೂಡಿದೆ.

VISTARANEWS.COM


on

dog love
Koo

ಚಿಕ್ಕೋಡಿ: ನಾಯಿಗಳು ಸ್ವಾಮಿನಿಷ್ಠೆಗೆ (loyalty) ಹೆಸರಾದವು ಎಂಬುದು ನಮಗೆಲ್ಲ ಗೊತ್ತಿದ್ದದ್ದೇ. ಅಂಥ ಹಲವು ಘಟನೆಗಳನ್ನೂ ಕೇಳಿರುತ್ತೇವೆ. ಆದರೆ ಇಲ್ಲೊಂದು ನಾಯಿ ತನ್ನ ಸ್ವಾಮಿನಿಷ್ಠೆ, ಪ್ರೀತಿ, (Dog love) ಚುರುಕುತನದಿಂದ ಎಲ್ಲರನ್ನೂ ಅಚ್ಚರಿ ಆನಂದಲ್ಲಿ ಕೆಡವಿದೆ. 195 ಕಿಲೋಮೀಟರ್‌ ಕ್ರಮಿಸಿ ತನ್ನ ಮಾಲೀಕನ (Owner) ಮನೆಯ ಮುಂದೆ ಪ್ರತ್ಯಕ್ಷವಾಗಿದೆ! ಈ ಸುದ್ದಿ ಹಾಗೂ ನಾಯಿಯ ಫೋಟೋ ಎಲ್ಲೆಡೆ ವೈರಲ್‌ (Viral News) ಆಗುತ್ತಿದೆ.

ಬೆಳಗಾವಿ (Belagavi news) ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿಯ ಜ್ಞಾನದೇವ ಕುಂಬಾರ ಎಂಬವರಿಗೆ ಸೇರಿದ ಶ್ವಾನವಿದು. ಇದರ ಹೆಸರು ಮಹಾರಾಜ. ಮಹಾರಾಷ್ಟ್ರದಲ್ಲಿ ನಾಪತ್ತೆಯಾಗಿದ್ದ ಈ ಶ್ವಾನ 4 ದಿನಗಳ ಬಳಿಕ ಮನೆಯ ಮುಂದೆ ಪ್ರತ್ಯಕ್ಷವಾದುದನ್ನು ಕಂಡು ಮಾಲೀಕ ದಂಗಾಗಿದ್ದಾರೆ. ಇದು ಹೇಗೆ ಮರಳಿ ದಾರಿ ಹುಡುಕಿಕೊಂಡಿರಬಹುದು ಎಂಬ ಆಶ್ಚರ್ಯ ಎಲ್ಲರಲ್ಲೂ ಮೂಡಿದೆ.

ಇತ್ತೀಚೆಗೆ ಆಷಾಢ ಏಕಾದಶಿ ನಿಮಿತ್ತ ಇವರು ಕುಟುಂಬ ಸಮೇತ ಸೊಲ್ಹಾಪುರದ ಪಂಢರಪುರಕ್ಕೆ ತೀರ್ಥಯಾತ್ರೆಗೆ ಹೋಗಿದ್ದರು. ಜೊತೆಗೆ ಮಹಾರಾಜನೂ ತೆರಳಿತ್ತು. ಆದರೆ ಅಲ್ಲಿ ಜನಜಂಗುಳಿಯ ನಡುವೆ ಮಹಾರಾಜ ಮಿಸ್‌ ಆಗಿದ್ದ. ಎಷ್ಟೇ ಹುಡುಕಿದರೂ ಸಹ ಕಾಣದಾಗಿದ್ದ. ಆತನನ್ನು ಹುಡುಕಿ ಕಾಣದೆ ಇನ್ನು ಈತ ಸಿಗಲಾರ ಎಂದುಕೊಂಡ ಮರಳಿ ಬಂದಿದ್ದರು.

ಪಂಢರಪುರದಿಂದ ಯಮಗರ್ಣಿಗೆ 195 ಕಿಲೋಮೀಟರ್‌ ದೂರವಿದೆ. ಇವರು ಮನೆಗೆ ಬಂದ ನಾಲ್ಕು ದಿನಗಳ ಬಳಿಕ ಮಹಾರಾಜ, ಮನೆಯ ಮುಂದೆ ಕಾಣಿಸಿಕೊಂಡಿದ್ದಾನೆ! ಸುಮಾರು 195 ಕಿಮೀ ಕ್ರಮಿಸಿ ಮನೆಗೆ ಮರಳಿದ್ದಾನೆ. ಇದನ್ನು ಕಂಡು ಕುಟುಂಬದವರು ಮಾತ್ರವಲ್ಲ, ಇಡೀ ಗ್ರಾಮ ಚಕಿತವಾಗಿದೆ. ಶ್ವಾನಕ್ಕೆ ಹಾರ ಹಾಕಿ ಗುಲಾಲ್‌ ಹಚ್ಚಿ ಗ್ರಾಮಸ್ಥರು ಸಂಭ್ರಮಿಸಿದ್ದಾರೆ. ಶ್ವಾನ‌ ನಿಷ್ಠೆಗೆ ಇಡೀ ಯಮಗರ್ಣಿ‌ ಗ್ರಾಮಸ್ಥರು ಫಿದಾ ಆಗಿದ್ದಾರೆ.

ಕಚೇರಿಯ ಟೇಬಲ್‌ನೊಳಗೆ ಅಡಗಿದ್ದ ಬೃಹತ್‌ ಹಾವನ್ನು ಹಿಡಿದ ಮಹಿಳಾ ಸಿಬ್ಬಂದಿ!

ಸಾಮಾನ್ಯವಾಗಿ ಮಹಿಳೆಯರು ಹಾವನ್ನು ನೋಡಿದರೆ ಭಯಬೀಳುತ್ತಾರೆ. ಒಂದು ಚಿಕ್ಕ ಹುಳ ಮೈಮೇಲೆ ಹರಿದಾಡಿದರೆ ದೊಡ್ಡ ಹಾವು ಮೈಮೇಲೆ ಬಿದ್ದಂತೆ ಕಿರುಚುತ್ತಾ ಓಡುತ್ತಾರೆ. ಅಂತಹದರಲ್ಲಿ ಮಹಿಳೆಯೊಬ್ಬಳು ಯಾವುದೇ ಭಯವಿಲ್ಲದೆ ದೊಡ್ಡ ಗಾತ್ರದ ಹಾವನ್ನೇ ಕೈಯಲ್ಲಿ ಸಲೀಸಾಗಿ ಹಿಡಿದಿದ್ದಾಳೆ. ಮಹಿಳೆ ಕಚೇರಿಯಲ್ಲಿ ಕೈಯಲ್ಲಿ ಹಾವನ್ನು ಹಿಡಿದು ಸ್ಟಂಟ್ ಮಾಡುತ್ತಿರುವ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ಮಹಿಳೆಯ ಈ ಧೈರ್ಯಶಾಲಿ ಕೆಲಸವನ್ನು ಕಂಡು ಅಲ್ಲಿದ್ದ ಜನರು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಈ ಧೈರ್ಯಶಾಲಿ ಮಹಿಳೆ ಕಚೇರಿಯಲ್ಲಿ ಇರುವ ದೊಡ್ಡ ಗಾತ್ರದ ಹಾವನ್ನು ಯಾವುದೇ ಸುರಕ್ಷತಾ ಉಡುಗೆ ಅಥವಾ ಅಗತ್ಯ ಉಪಕರಣಗಳಿಲ್ಲದೆ ಬಹಳ ಸುಲಭವಾಗಿ ಹಿಡಿದಿದ್ದಾಳೆ.ಇದಕ್ಕೆ ಸಂಬಂಧಪಟ್ಟ ವಿಡಿಯೊವನ್ನು @moronhumor ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ, ವಿಡಿಯೊದಲ್ಲಿ ಮಹಿಳೆ ಒಬ್ಬ ವ್ಯಕ್ತಿಯೊಂದಿಗೆ ಬರುತ್ತಿದ್ದು, ಅಲ್ಲಿ ಕಂಪ್ಯೂಟರ್ ಕೇಬಲ್ ಅನ್ನು ಸರಿಪಡಿಸುತ್ತಿದ್ದಾಳೆ ಎಂದು ವೀಕ್ಷಕರು ಭಾವಿಸುವಂತಿದೆ.

ಆದರೆ ಆಕೆ ಸಡನ್ ಆಗಿ ಹಾವಿನ ತಲೆಯನ್ನು ಹಿಡಿದು ಮೇಲಕ್ಕೆ ಎತ್ತಿದ್ದಾಳೆ. ನಂತರ ಹಾವು ಕಚ್ಚುತ್ತದೆ ಎಂಬ ಭಯವು ಇಲ್ಲದೇ ಅದನ್ನು ಚೀಲದಲ್ಲಿ ತುಂಬಿಸಿ ದಿನಸಿ ಸಾಮಾಗ್ರಿಗಳನ್ನು ತೆಗೆದುಕೊಂಡು ಹೋಗುವಂತೆ ಹೊರಗೆ ತೆಗೆದುಕೊಂಡು ಬಂದಿದ್ದಾಳೆ. ಆ ವೇಳೆ ಅವಳ ಮುಖದಲ್ಲಿ ಭಯದ ಬದಲು ನಗು ಕಂಡುಬಂದಿದೆ. ಅಲ್ಲದೇ ಮಹಿಳೆ ಈ ವೇಳೆ ಹಾವಿನ ಬಗ್ಗೆ ಕೆಲವು ಸಲಹೆಗಳನ್ನು ಸಹ ಹಂಚಿಕೊಳ್ಳುತ್ತಾಳೆ. ಹಾವು ವಿಷಕಾರಿಯಲ್ಲ ಎಂದು ಅವಳು ತನ್ನ ಸಹೋದ್ಯೋಗಿಗಳಿಗೆ ಹೇಳಿದಳು. ಅವಳು ಹಾವುಗಳ ವಿವಿಧ ಲಕ್ಷಣಗಳು ಮತ್ತು ಹಾವನ್ನು ನಿರ್ವಹಿಸುವ ವಿಧಾನದ ಬಗ್ಗೆ ಜನರಿಗೆ ಮಾರ್ಗದರ್ಶನ ನೀಡಿದ್ದಾಳೆ. ಅಲ್ಲಿ ಹಾಜರಿದ್ದ ಜನರು ಆಕೆ ಸುಲಭವಾಗಿ ಹಾವನ್ನು ಹಿಡಿಯುವುದನ್ನು ಕಂಡು ಆಶ್ಚರ್ಯಚಕಿತರಾದರು. ಈ ವಿಡಿಯೊ ಅನೇಕರ ಗಮನವನ್ನು ಸೆಳೆದಿದೆ ಮತ್ತು ಅನೇಕರು ಕಾಮೆಂಟ್ ಮಾಡಿದ್ದಾರೆ. ನೆಟ್ಟಿಗರು ಮಹಿಳೆಯ ವೀಡಿಯೊವನ್ನು ಕಂಡು ಅವಳ ಶಾಂತ, ಧೈರ್ಯಶಾಲಿ ಕಾರ್ಯವನ್ನು ಕಂಡು ಹೊಗಳಿದ್ದಾರೆ.

ಬಳಕೆದಾರರೊಬ್ಬರು ಅವಳ ಕಾರ್ಯಕ್ಕೆ ಮತ್ತು ಅವಳ ತಿಳಿವಳಿಕೆಯನ್ನು ಕಂಡು ಆಕೆಯನ್ನು ರಾಕ್‌ಸ್ಟಾರ್‌ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಈ ಮೊದಲು ಸೋಶಿಯಲ್ ಮೀಡಿಯಾದಲ್ಲಿ ಯಾವುದೇ ಹೆಣ್ಣು ಹಾವು ಹಿಡಿಯುವುದನ್ನು ನೋಡಿಲ್ಲ ಎಂದು ಹೇಳಿ ಮಹಿಳೆಗೆ ಅಭಿನಂದನೆ ಸಲ್ಲಿಸಿದ್ದಾರೆ. ಮೂರನೆಯವರು ಈಕೆ ನಿಜವಾದ ನಾಯಕಿ. ಹೀರೋಗಳಿಗಿಂತ ಒಂದು ಹೆಜ್ಜೆ ಮುಂದೆ ಎಂದು ಹೊಗಳಿದ್ದಾರೆ.

ಇದನ್ನೂ ಓದಿ: Viral News: ಜಗಳವಾಡಿಕೊಂಡು ನಡುರಸ್ತೆಯಲ್ಲಿ ಬೆತ್ತಲೆ ಓಡಾಟ; ಜೋಡಿಯ ಹುಚ್ಚಾಟ ಮೊಬೈಲ್‌ನಲ್ಲಿ ಸೆರೆ; ಭಾರೀ ಆಕ್ರೋಶ ವ್ಯಕ್ತ

Continue Reading

ಮಳೆ

Karnataka Weather : 8 ಜಿಲ್ಲೆಗಳಿಗೆ ವ್ಯಾಪಕ ಮಳೆ ಎಚ್ಚರಿಕೆ, ಬಿರುಗಾಳಿ ಸಾಥ್‌

Karnataka Weather Forecast : ರಾಜ್ಯಾದ್ಯಂತ 50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಭಾರಿ ಮಳೆಯಾಗುವ (Rain News) ಸಾಧ್ಯತೆ ಇದೆ. 8 ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು (Karnataka Weather Forecast) ಸಾಮಾನ್ಯವಾಗಿತ್ತು. ಕರಾವಳಿ ಬಹುತೇಕ ಕಡೆಗಳಲ್ಲಿ ಹಾಗು ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆ (Rain News) ಮುಂದುವರಿದಿದೆ. ಮುಂದಿನ 24 ಗಂಟೆಯಲ್ಲಿ ಕರಾವಳಿ ಜಿಲ್ಲೆಯಲ್ಲಿ ಚದುರಿದಂತೆ ವ್ಯಾಪಕವಾಗಿ ಹರಡಿದ್ದು, ಹಗುರದಿಂದ ಮಧ್ಯಮ ಮಳೆಯಾಗಲಿದೆ. ಜತೆಗೆ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ (Heavy Rain Alert) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather forecast) ನೀಡಿದೆ.

ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಹಗುರದಿಂದ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಯಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ.

ಆರೆಂಜ್‌ ಅಲರ್ಟ್‌

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇತ್ತ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಹಾಸನ ಜಿಲ್ಲೆಗಳಲ್ಲಿ ಗಾಳಿ ವೇಗವು 50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ: Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

ಮಳೆಗಾಲದಲ್ಲಿ ಸೊಪ್ಪಿನ ಅಡುಗೆ ಮಾಡುವ ಮುನ್ನ ಈ ಎಚ್ಚರಿಕೆಗಳನ್ನು ವಹಿಸಿ

ಮಳೆಗಾಲ (Monsoon) ಜೋರಾಗಿದೆ. ಹಾಗಾಗಿ ವೈರಸ್‌, ಬ್ಯಾಕ್ಟೀರಿಯಾಗಳ ಸದ್ದೂ ಜೋರಾಗಿದೆ. ಎಲ್ಲೆಲ್ಲೂ ವೈರಲ್‌ ಜ್ವರಗಳು, ಇನ್‌ಫೆಕ್ಷನ್‌ ಸಮಸ್ಯೆಗಳು, ಮಳೆಗಾಲದಲ್ಲಿ ಕಾಡುವ ಶೀತ, ನೆಗಡಿ, ಕೆಮ್ಮು, ಕಫಗಳೂ ಹೆಚ್ಚಾಗಿವೆ. ಮಳೆಗಾಲದ ಸಂಭ್ರಮದ ಜೊತೆ ಈ ಎಲ್ಲ ಸಮಸ್ಯೆಗಳೂ ನಮ್ಮನ್ನು ಒಮ್ಮೆಯಾದರೂ ಕಾಡದೆ ಹೋಗುವುದಿಲ್ಲ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರವೂ ಮುಖ್ಯವಾಗುತ್ತದೆ. ಮಳೆಗಾಲದಲ್ಲಿ ಕೆಲವು ಆಹಾರಗಳನ್ನು ನಾವು ಕಡಿಮೆ ಮಾಡಬಹುದು. ಅವುಗಳಲ್ಲಿ ಮುಖ್ಯವಾದುದು ಹಸಿರು ಸೊಪ್ಪು. ಸೊಪ್ಪಿನ ಅಡುಗೆ ಮಾಡುವ ಮುನ್ನ ಮಳೆಗಾಲದಲ್ಲಿ ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಹಾಗಂತ ಮಳೆಗಾಲದಲ್ಲಿ ಇವನ್ನು ತಿನ್ನಲೇಬಾರದು ಎಂದಲ್ಲ. ಎಚ್ಚರಿಕೆ ಖಂಡಿತ ಬೇಕು. ಮಳೆಗಾಲದಲ್ಲಿ ಸೊಪ್ಪಿನ ಮೇಲೆ ಸಾಕಷ್ಟು ಬ್ಯಾಕ್ಟೀರಿಯಾ, ವೈರಸ್‌ ದಾಳಿಯಾಗಿರುತ್ತದೆ. ಹುಳು ಹುಪ್ಪಟೆಗಳೂ ಸಾಮಾನ್ಯ. ಆದ್ದರಿಂದ ಇವುಗಳು ನಮ್ಮ ದೇಹಕ್ಕೆ ಪ್ರವೇಶಿಸುವ ಮಾರ್ಗ ಸುಲಭವಾಗಿ ಬಿಡುತ್ತದೆ. ನಾವು ಅವುಗಳನ್ನು ಸರಿಯಾಗಿ ತೊಳೆದು ಬಳಸದಿದ್ದರೆ ಹೊಟ್ಟೆ ಕೆಡುವ ಸಮಸ್ಯೆ, ಬೇದಿ, ವಾಂತಿ ಇತ್ಯಾದಿಗಳೂ ಬರಬಹುದು. ಹಾಗಾಗಿ, ಮಳೆಗಾಲದಲ್ಲಿ ಸೊಪ್ಪು ಸದೆಗಳನ್ನು ಅಡುಗೆ ಮಾಡುವ ಮುನ್ನ ಸಾಕಷ್ಟು ಎಚ್ಚರಿಕೆ ವಹಿಸಿ ಎನ್ನುತ್ತಾರೆ ತಜ್ಞರು. ಬನ್ನಿ, ಸೊಪ್ಪು ಸೇವಿಸುವ ಮುನ್ನ ಯಾವ ಎಚ್ಚರಿಕೆಗಳು (Monsoon Healthy Cooking Tips) ಮುಖ್ಯ ಎಂಬುದನ್ನು ನೋಡೋಣ. ಮಳೆಗಾಲದಲ್ಲಿ, ಸಹಜವಾಗಿ ಕೆಲವು ಸೊಪ್ಪುಗಳು ತರಕಾರಿ ಮಾರುಕಟ್ಟೆಯಲ್ಲಿ ಕಾಣೆಯಾಗುತ್ತದೆ. ಬಹಳ ಸೂಕ್ಷ್ಮವಾಗಿರುವ ಪಾಲಕ್‌ನಂತಹ ಸೊಪ್ಪುಗಳು ಮಳೆಗಾಲದಲ್ಲಿ ಮಳೆಯ ಹೊಡೆತಕ್ಕೆ ಸಿಕ್ಕಿ ಹರಿದು ಛಿದ್ರವಾಗುವುದರಿಂದ ಮಾರುಕಟ್ಟೆಗೆ ಬರುವುದೇ ಇಲ್ಲ. ಮೆಂತ್ಯ ಸೊಪ್ಪೂ ಕೂಡಾ ಅಷ್ಟೇ, ಮಳೆಗಾಲದಲ್ಲಿ ಮಾರುಕಟ್ಟೆಯಲ್ಲಿರುವುದಿಲ್ಲ. ಕೆಲವು ಸೊಪ್ಪುಗಳು ಮಳೆಗಾಲಕ್ಕೆ ಸರಿಯಾಗಿ ಮಾರುಕಟ್ಟೆಯನ್ನು ಪ್ರವೇಶಿಸುತ್ತದೆ. ಆದರೆ, ಮಳೆಗಾಲವಾದ್ದರಿಂದ ಸೊಪ್ಪು ಹರದಿರುವುದು, ಬೇರುಗಳೆಲ್ಲ ಕೆಸರಾಗಿರುವುದು, ಹುಳು ಹುಪ್ಪಟೆಗಳು ಎಲೆಯನ್ನು ಕಚ್ಚಿ ಹರಿದಿರುವುದು, ಎಲೆಯ ಅಡುಭಾಗದಲ್ಲಿ ಹುಳಗಳು ಹರಿದುಹೋಗಿರುವ ಗುರುತು ಇವೆಲ್ಲವೂ ಸಾಮಾನ್ಯವಾಗಿರುತ್ತದೆ. ಹಾಗಾಗಿಯೇ ಸೊಪ್ಪಿನ ಅಡುಗೆ ಮಾಡುವಾಗ ಎಚ್ಚರಿಕೆ ಬಹಳ ಅಗತ್ಯ.

Healthy Cooking Tips

ಸೊಪ್ಪಿನ ಅಡುಗೆ ಮಳೆಗಾಲದಲ್ಲಿ ಮಾಡುವ ಮೊದಲು ಸೊಪ್ಪನ್ನು ಮೊದಲು ಬಿಡಿಸಿ. ನೀರಲ್ಲಿ ಹಾಕಿಟ್ಟು ತೊಳೆಯಿರಿ. ಹುಳ ಹುಪ್ಪಟೆಗಳಿರುವ ಎಲೆಗಳನ್ನು ಬಳಸದಿರಿ. ಸರಿಯಾಗಿರುವ, ಆರೋಗ್ಯವಾಗಿ ಕಾಣುವ ಎಲೆಗಳನ್ನು ಆರಿಸಿಕೊಂಡು ಪ್ರತ್ಯೇಕವಾಗಿಟ್ಟು, ಉಳಿದವನ್ನು ಎಸೆಯಿರಿ. ಪ್ರತಿಯೊಂದು ಎಲೆಯನ್ನೂ ಸೂಕ್ಷ್ಮವಾಗಿ ಗಮನಿಸಿ. ಸರಿಯಾಗಿರುವ ಎಲೆಯನ್ನು ಮಾತ್ರ ಚೆನ್ನಾಗಿ ಎರಡೆರಡು ಬಾರಿ ತೊಳೆದುಕೊಂಡು ಅದರ ಕಾಂಡಗಳನ್ನು ಕತ್ತರಿಸಿ ಎಸೆಯಿರಿ.

ಹರಿಯುವ ನೀರಿಗೆ ಹಿಡಿದು ತೊಳೆಯಿರಿ. ಮಾರುಕಟ್ಟೆಯಿಂದ ತಂದ ಕೃತಕ ತೊಳೆಯುವ ಲಿಕ್ವಿಡ್‌ಗಳಲ್ಲಿ ಹಾಕಿಟ್ಟು ತೊಳೆಯುವುದರಿಂದ ಎಲೆ ಮತ್ತಷ್ಟು ಹಾಳಾಗಬಹುದು. ಅದಕ್ಕಾಗಿ, ನಳ್ಳಿಯ ಅಡಿಯಲ್ಲಿ ಹಿಡಿದು ಹರಿಯುವ ನೀರಿನಲ್ಲಿ ತೊಳೆಯಿರಿ.

Hand Washing Leafy Greens

ತೊಳೆದ ಎಲೆಗಳನ್ನು ಆರಲು ಬಿಡುವುದು ಬಹಳ ಮುಖ್ಯ. ಒಣ ಟವೆಲ್‌ ಮೇಲೆ ತೊಳೆದ ಎಲೆಗಳನ್ನು ಹರವಿಟ್ಟು ಮೃದುವಾಗಿ ಒರೆಸಬಹುದು. ಅಥವಾ ಹಾಗೆಯೇ ಸ್ವಲ್ಪ ಹೊತ್ತು ಬಿಟ್ಟು ಹೆಚ್ಚಿನ ನೀರಿನಂಶ ಆರಲು ಬಿಡಬಹುದು.

ಎಲೆಗಳನ್ನು ತೊಳೆದುಕೊಂಡ ಮೇಳೆ ಒಂದೆರಡು ನಿಮಿಷಗಳ ಕಾಲ ಐಸ್‌ ನೀರಿನಲ್ಲಿ ಹಾಕಿಟ್ಟುಕೊಂಡು ನಂತರ ತೆಗೆಯಬಹುದು. ಹೀಗೆ ಮಾಡುವುದರಿಂದ ಎಲೆಯ ತಾಜಾತನ ಹಾಗೆಯೇ ಉಳಿದುಕೊಳ್ಳುತ್ತದೆ. ಹಸಿ ಎಲೆಗಳಿಂದ ಮಾಡುವ ಅಡುಗೆಯನ್ನು ಮಳೆಗಾಲದಲ್ಲಿ ಮಾಡಬೇಡಿ. ಬಾಣಲೆಯಲ್ಲಿ ಎಲೆಯನ್ನು ಬಾಡಿಸಿಕೊಂಡು, ಬಿಸಿ ಮಾಡುವ ಮೂಲಕ ಮಾಡುವ ಅಡುಗೆಯನ್ನೇ ಮಾಡಿ. ಮಳೆಗಾಲದಲ್ಲಿ ಹಸಿ ಸೊಪ್ಪು ತರಕಾರಿಗಳನ್ನು ಹಾಗೆಯೇ ಹಸಿಯಾಗಿ ಬಳಸಬೇಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Siddaramaiah: ಬಜೆಟ್ ಮೂಲಪಾಠವೇ ಗೊತ್ತಿಲ್ಲದ ನಿರ್ಮಲಾ ಸೀತಾರಾಮನ್; ಸಂಪುಟದಿಂದ ಕೈಬಿಡಲು ಸಿಎಂ ಒತ್ತಾಯ

CM Siddaramaiah: ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಇಂಥವರ ಕೈಯಲ್ಲಿ ಹಣಕಾಸು ಖಾತೆ ನೀಡಿರುವುದು ಅತ್ಯಂತ ಅಪಾಯಕಾರಿ ನಿರ್ಧಾರ ಎಂದು ಅವರು ಹೇಳಿದ್ದಾರೆ.

VISTARANEWS.COM


on

CM Siddaramaiah demands to Pm for drop the Nirmala Sitharaman from the cabinet
Koo

ಬೆಂಗಳೂರು: ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಇಂಥವರ ಕೈಯಲ್ಲಿ ಹಣಕಾಸು ಖಾತೆ ನೀಡಿರುವುದು ಅತ್ಯಂತ ಅಪಾಯಕಾರಿ ನಿರ್ಧಾರ ಎಂದು ಅವರು ಹೇಳಿದ್ದಾರೆ.

ಭಾನುವಾರದ ಪತ್ರಿಕಾಗೋಷ್ಠಿಯಲ್ಲಿ ನರೇಂದ್ರ ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಮರೆಮಾಚುವ ಹತಾಶ ಪ್ರಯತ್ನ ಮಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಾವೇ ಹೆಣೆದ ಬಲೆಯಲ್ಲಿ ಸಿಕ್ಕಿ ಹಾಕಿಕೊಡಿರುವುದು ದುರಂತ. ಸಚಿವರ ಗೊಂದಲಮಯ ಹೇಳಿಕೆಗಳ ಸಿಕ್ಕುಗಳನ್ನೆಲ್ಲ ಬಿಡಿಸುತ್ತಾ ಹೋದರೆ ಕೊನೆಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿರುವುದು ಚೊಂಬು ಮಾತ್ರ ಎನ್ನುವುದು ಸಾಬೀತಾಗುತ್ತದೆ.

ನಿರ್ಮಲಾ ಸೀತಾರಾಮನ್ ಅವರ ಪ್ರಕಾರ ಹಿಂದಿನ ಯುಪಿಎ ಸರ್ಕಾರ (2004-2014) ಹತ್ತು ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ನೀಡಿರುವ ಅನುದಾನ ರೂ.60,779 ಕೋಟಿ. ಎನ್‌ಡಿಎ ಸರ್ಕಾರ (2014-2024) ಹತ್ತು ವರ್ಷಗಳ ಅವಧಿಯಲ್ಲಿ ನೀಡಿದ್ದ ಹಣ ರೂ.2,36,955 ಕೋಟಿ ಎಂದು ಸಚಿವೆ ಆರೋಪಿಸಿದ್ದಾರೆ.

ಆದರೆ ಹತ್ತು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಎಷ್ಟು ಪಟ್ಟು ಹೆಚ್ಚಾಗಿದೆ ಎನ್ನುವುದನ್ನು ಅವರು ಮರೆತಿದ್ದಾರೆ. ಇದು ಅವರ ಅಜ್ಞಾನವೋ, ಇಲ್ಲವೇ ಜನತೆಯ ದಾರಿ ತಪ್ಪಿಸುವ ಹುನ್ನಾರವೋ? ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದರು.

ಇದನ್ನೂ ಓದಿ: Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

2013-14ರ ಕೇಂದ್ರ ಸರ್ಕಾರದ ಬಜೆಟ್ ರೂ.16,06 ಲಕ್ಷ ಕೋಟಿ. ಆಗ ಕರ್ನಾಟಕಕ್ಕೆ ಅನುದಾನದ ರೂಪದಲ್ಲಿ ರೂ. 16,428 ಕೋಟಿ ಮತ್ತು ತೆರಿಗೆ ಹಂಚಿಕೆಯಲ್ಲಿ ರೂ.15,005 ಕೋಟಿ ಹೀಗೆ ಒಟ್ಟು ರೂ.31,483 ಕೋಟಿ ನೀಡಲಾಗಿತ್ತು. ಈ ನೆರವು ಒಟ್ಟು ಬಜೆಟ್ ನ ಶೇಕಡಾ 1.9 ರಷ್ಟಾಗುತ್ತದೆ.

2024-25ರ ಅವಧಿಯ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ರೂ.48.02 ಲಕ್ಷ ಕೋಟಿಯಾಗಿದೆ. ಈ ಅವಧಿಯಲ್ಲಿ ನಮಗೆ ಕೇಂದ್ರ ಅನುದಾನದ ರೂಪದಲ್ಲಿ ರೂ.15,229 ಕೋಟಿ ಮತ್ತು ತೆರಿಗೆ ಹಂಚಿಕೆಯಲ್ಲಿ ರೂ.44.485 ಕೋಟಿ ನೀಡಲಾಗುತ್ತದೆ. ಇದು ಒಟ್ಟು ಬಜೆಟ್ ಗಾತ್ರದ ಶೇಕಡಾ 1.2 ರಷ್ಟಾಗುತ್ತದೆ.

ನರೇಂದ್ರ ಮೋದಿ ಸರ್ಕಾರದಿಂದ ಅನ್ಯಾಯ

2013-14ರ ಪ್ರಮಾಣದಲ್ಲಿ (ಶೇಕಡಾ 1.9)ಯೇ ಅನುದಾನ ಮತ್ತು ತೆರಿಗೆ ಹಂಚಿಕೆಯ ಹಣವನ್ನು 2024-25ರ ಅವಧಿಯಲ್ಲಿಯೂ ಕರ್ನಾಟಕಕ್ಕೆ ನೀಡಿದ್ದರೆ, ಕೇಂದ್ರ ಸರ್ಕಾರ ನೀಡುವ ಹಣದ ಮೊತ್ತ ರೂ.91,580 ಕೋಟಿಗಳಾಗುತ್ತಿತ್ತು. ಅಂದರೆ ನರೇಂದ್ರ ಮೋದಿ ಸರ್ಕಾರ ಮಾಡಿರುವ ಅನ್ಯಾಯದಿಂದಾಗಿ ಕಳೆದ ಒಂದು ವರ್ಷದ ಅವಧಿಯಲ್ಲಿ ಕರ್ನಾಟಕ 31,866 ಕೋಟಿ ರೂಪಾಯಿ ಕಳೆದುಕೊಂಡಿದೆ ಎಂದು ಆರೋಪಿಸಿದರು.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸುಳ್ಳಿನ ದಾರಿಯಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಬರುವ ತೆರಿಗೆ ಹಂಚಿಕೆಯಲ್ಲಿ ವೃದ್ಧಿಯಾಗಿದೆ ಎನ್ನುವ ದಾರಿ ತಪ್ಪಿಸುವ ಹೇಳಿಕೆ ನೀಡಿದ್ದಾರೆ. ಅವರ ಪ್ರಕಾರ ಯುಪಿಎ ಸರ್ಕಾರದ ಕಾಲದಲ್ಲಿ ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದ ಪಾಲು ರೂ.81,791 ಕೋಟಿ ಮಾತ್ರ. 2014-24ರ ಅವಧಿಯ ಎನ್‌ಡಿ.ಎ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಪಡೆದಿರುವುದು ರೂ. 2.9 ಲಕ್ಷ ಕೋಟಿ.

ಹದಿನಾಲ್ಕನೇ ಹಣಕಾಸು ಆಯೋಗ ಕರ್ನಾಟಕದ ತೆರಿಗೆ ಪಾಲು ಶೇ 4.72 ಎಂದು ನಿಗದಿಪಡಿಸಿತ್ತು, ಈಗಿನ 15ನೇ ಹಣಕಾಸು ಆಯೋಗ ಈ ಪಾಲನ್ನು ಕಡಿಮೆಗೊಳಿಸಿ ಶೇ 3.64ಕ್ಕೆ ಇಳಿಸಿತು. ಇದರಿಂದ ಕಳೆದ ಐದು ವರ್ಷಗಳಲ್ಲಿ ತೆರಿಗೆ ಪಾಲಿನಲ್ಲಿ ಅಂದಾಜು ರೂ.62,098 ಕೋಟಿಯನ್ನು ಕರ್ನಾಟಕ ಕಳೆದುಕೊಂಡಿದೆ. ಇದನ್ನು ನಿರ್ಮಲಾ ಸೀತಾರಾಮನ್ ಜಾಣತನದಿಂದ ಮರೆಮಾಚಲು ಪ್ರಯತ್ನಿಸಿದ್ದಾರೆ ಎಂದು ಸಿಎಂ ದೂರಿದರು.

ಇದನ್ನೂ ಓದಿ: Lakshmi Hebbalkar: ಪ್ರವಾಹ ಸಂತ್ರಸ್ತರ ಕಣ್ಣೀರು ಒರೆಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಜಿಎಸ್‌ಟಿ ಸಂಗ್ರಹದಲ್ಲಿ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿ ರಾಜ್ಯ ಇದೆ. ಇನ್ನು ಜಿಎಸ್‌ಟಿ ಸಂಗ್ರಹದ ಬೆಳೆವಣಿಗೆ ದರವನ್ನು ಗಮನಿಸಿದರೆ ಶೇ.17ರ ಸಾಧನೆಯ ಮೂಲಕ ದೇಶದಲ್ಲೇ ಮೊದಲ ಸ್ಥಾನದಲ್ಲಿ ಕರ್ನಾಟಕವಿದೆ. ವಿಪರ್ಯಾಸವೆಂದರೆ ಈ ಪ್ರಮಾಣದಲ್ಲಿ ಜಿಎಸ್‌ಟಿ ಹಣವನ್ನು ಕೇಂದ್ರಕ್ಕೆ ಸಂಗ್ರಹಿಸಿ ನೀಡಿದರೂ ಇದರಿಂದ ರಾಜ್ಯಕ್ಕೆ ಮರಳಿ ದೊರೆಯುತ್ತಿರುವುದು ಶೇ.52 ಪಾಲು ಮಾತ್ರ. ಜಿಎಸ್‌ಟಿಯ ಅವೈಜ್ಞಾನಿಕ ಅನುಷ್ಠಾನದಿಂದಾಗಿ ಕರ್ನಾಟಕವು 2017-18 ರಿಂದ 2023-24 ರವರೆಗೆ ಸುಮಾರು ರೂ. 59,274 ಕೋಟಿ ಹಣವನ್ನು ಕಳೆದುಕೊಂಡಿದೆ.

2023-24ರ ಅವಧಿಯಲ್ಲಿ ಕೇಂದ್ರವು ರಾಜ್ಯದಿಂದ ಕನಿಷ್ಠ ರೂ. 4.30 ಲಕ್ಷ ಕೋಟಿಗೂ ಹೆಚ್ಚು ಸಂಪನ್ಮೂಲವನ್ನು ತೆರಿಗೆ, ಸೆಸ್‌, ಸರ್‌ಚಾರ್ಜ್‌ ಮೂಲಕ ಸಂಗ್ರಹಿಸಿದೆ. ಆದರೆ, ಇದಕ್ಕೆ ಪ್ರತಿಯಾಗಿ ರೂ.50 ರಿಂದ 53 ಸಾವಿರ ಕೋಟಿ ಮಾತ್ರ ಕರ್ನಾಟಕಕ್ಕೆ ನೀಡಿದೆ. ನಾವು ನೂರು ರೂ. ಸಂಗ್ರಹಿಸಿ ಕೊಟ್ಟರೆ ನಮಗೆ ಮರಳಿ ದೊರೆಯುವುದು 12-13 ರೂಪಾಯಿ ಮಾತ್ರ. ಇದರಲ್ಲಿ ತೆರಿಗೆ ಪಾಲು ₹37,000 ಕೋಟಿ ಮತ್ತು ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ನೀಡಿದ ಪಾಲಿನ ಹಣ ₹13,005 ಕೋಟಿ.

ಕಳೆದ ಆರು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್‌ ಸರಿಸುಮಾರು ದುಪ್ಪಟ್ಟಾಗಿದೆ. 2018-19 ರಲ್ಲಿ ಕೇಂದ್ರ ಬಜೆಟ್‌ ಗಾತ್ರ ರೂ. 24,42,213 ಕೋಟಿ ಇತ್ತು. ಆಗ ಕೇಂದ್ರದಿಂದ ರಾಜ್ಯಕ್ಕೆ ದೊರೆಯುತ್ತಿದ್ದ ತೆರಿಗೆ ಪಾಲು ರೂ.35,895 ಕೋಟಿ ಹಾಗೂ ರೂ.16,082 ಕೋಟಿ ಅನುದಾನ ಸೇರಿ ಒಟ್ಟು ರೂ.46,288 ಕೋಟಿ ಲಭ್ಯವಾಗಿತ್ತು.

ಇದನ್ನೂ ಓದಿ: Paris Olympics 2024 : ಒಲಿಂಪಿಕ್ಸ್ ಕ್ವಾರ್ಟರ್​ಫೈನಲ್​ಗೇರಿ ದಾಖಲೆ ಸೃಷ್ಟಿಸಿದ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್​- ಚಿರಾಗ್​

ಆದರೆ, 2023-24ರಲ್ಲಿ ಕೇಂದ್ರದ ಬಜೆಟ್‌ ಗಾತ್ರ ರೂ.45,03,097 ಕೋಟಿಗೆ ಏರಿಕೆಯಾಗಿದೆ. ವಿಪರ್ಯಾಸವೆಂದರೆ, ಕರ್ನಾಟಕ್ಕೆ ಕೇಂದ್ರದಿಂದ ತೆರಿಗೆ ಪಾಲು ಹಾಗೂ ಅನುದಾನಗಳೆರಡೂ ಸೇರಿ ಸಿಕ್ಕಿರುವುದು ರೂ.50,257 ಕೋಟಿ ಮಾತ್ರ. ಅಂದರೆ ಐದು ವರ್ಷದ ಅವಧಿಯಲ್ಲಿ ಬಜೆಟ್‌ ದುಪ್ಪಟ್ಟಾದರೂ ರಾಜ್ಯಕ್ಕೆ ದೊರೆಯುತ್ತಿರುವ ಪಾಲಿನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪ್ರಸಕ್ತ ಬಜೆಟ್‌ ಗಾತ್ರದ ಹೋಲಿಕೆಯಲ್ಲಿ ಕರ್ನಾಟಕಕ್ಕೆ ವಾರ್ಷಿಕ ಕನಿಷ್ಠ ರೂ.1 ಲಕ್ಷ ಕೋಟಿಯಷ್ಟು ಹಣ ತೆರಿಗೆಯ ಪಾಲು ಹಾಗೂ ಅನುದಾನದ ಮುಖೇನ ದೊರೆಯಬೇಕಿತ್ತು, ಆದರೆ ದೊರೆತಿಲ್ಲ ಎಂದು ಸಿಎಂ ತಿಳಿಸಿದರು.

ಕರ್ನಾಟಕಕ್ಕೆ ದೊಡ್ಡ ಮಟ್ಟದ ಅನ್ಯಾಯ

ಕರ್ನಾಟಕಕ್ಕೆ ಈ ಪರಿಯ ದೊಡ್ಡ ಮಟ್ಟದ ಅನ್ಯಾಯ ಆಗಿರುವುದು ಮನವರಿಕೆಯಾದ ನಂತರವೇ ಹದಿನೈದನೇ ಹಣಕಾಸು ಆಯೋಗ ಕರ್ನಾಟಕಕ್ಕೆ ವಿಶೇಷ ಅನುದಾನದ ರೂಪದಲ್ಲಿ ₹5,495 ಕೋಟಿ ನೀಡಬೇಕೆಂದು ಶಿಫಾರಸು ಮಾಡಿತ್ತು. ಕನ್ನಡಿಗರ ಜನಪ್ರತಿನಿಧಿಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೇ ಈ ಶಿಫಾರಸನ್ನು ನಿರಾಕರಿಸಿರುವ ಕಾರಣ ಆ ದುಡ್ಡು ಕೂಡಾ ಬರಲಿಲ್ಲ.

ಕೇಂದ್ರ ಸರ್ಕಾರದ ಈ ತಾರತಮ್ಯ ನೀತಿ, ಮಲತಾಯಿ ಧೋರಣೆಯಿಂದಾಗಿ ಕರ್ನಾಟಕವು 2017-18ರಿಂದ ಈವರೆಗೆ ತನಗೆ ಸೇರಬೇಕಾದ ನ್ಯಾಯಯುತ ಪಾಲಾದ ರೂ. 1,87,867 ಕೋಟಿ ಹಣದಿಂದ ವಂಚಿತವಾಗಿದೆ. ಅಂದರೆ, ಕರ್ನಾಟಕದ ಪರಿಷ್ಕೃತ ಆಯವ್ಯಯದ ಗಾತ್ರ 3.24 ಲಕ್ಷ ಕೋಟಿಯ ಹೋಲಿಕೆಯಲ್ಲಿ ಅದರ ಅರ್ಧಕ್ಕಿಂತಲೂ ಹೆಚ್ಚು ಹಣ, ನಿಖರವಾಗಿ ಹೇಳಬೇಕೆಂದರೆ ಪ್ರಸಕ್ತ ಸಾಲಿನ ಬಜೆಟ್‌ನ‌ ಶೇ.57ರಷ್ಟು ಗಾತ್ರದ ಹಣ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ನಷ್ಟವಾಗಿದೆ ಎಂದು ಹೇಳಿದರು.

ಇದಲ್ಲದೆ, ಹದಿನೈದನೇ ಹಣಕಾಸು ಆಯೋಗವು ಬೆಂಗಳೂರಿನ ಫೆರಿಫೆರಲ್‌ ರಿಂಗ್‌ ರಸ್ತೆಗೆ ರೂ.3,000 ಕೋಟಿ ಮತ್ತು ಕೆರೆಗಳು ಸೇರಿದಂತೆ ಬೆಂಗಳೂರು ಜಲಮೂಲ ಅಭಿವೃದ್ಧಿಗೆ ರೂ. 3000 ನೀಡಲು ಶಿಫಾರಸ್ಸು ಮಾಡಿತ್ತು. ಆದರೆ, ಈ ಶಿಫಾರಸ್ಸುಗಳನ್ನು ತಿರಸ್ಕರಿಸಿದ ವಿತ್ತ ಸಚಿವರು ರಾಜ್ಯಕ್ಕೆ ಸುಮಾರು ರೂ.11,495 ಕೋಟಿ ದ್ರೋಹ ಮಾಡಿದ್ದಾರೆ.

ನರೇಂದ್ರ ಮೋದಿಯವರು ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೂಡಿಕೊಂಡು ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ದೇಶದ ವಿರೋಧ ಪಕ್ಷಗಳ ಸರ್ಕಾರ ಇರುವ ಪ್ರತಿಯೊಂದು ರಾಜ್ಯಗಳಿಗೆ ತೆರಿಗೆ ಮತ್ತು ಅನುದಾನದ ಹಂಚಿಕೆಯಲ್ಲಿ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.

ಇದನ್ನೂ ಓದಿ: Paris Olympics 2024 : ಪ್ಯಾರಿಸ್​ ಒಲಿಂಪಿಕ್ಸ್​ನಲ್ಲಿ ಜುಲೈ 30ರಂದು ಭಾರತದ ವೇಳಾಪಟ್ಟಿ ಈ ರೀತಿ ಇದೆ

ಆದರೆ ದುರಂತವೆಂದರೆ ನಿರ್ಮಲಾ ಸೀತಾರಾಮನ್ ಅವರು ಉಂಡ ಮನೆಗೆ ಎರಡು ಬಗೆದಿದ್ದಾರೆ. ತಮ್ಮನ್ನು ರಾಜ್ಯಸಭೆಗೆ ಆರಿಸಿ ಕಳಿಸಿದ ಕರ್ನಾಟಕಕ್ಕೆ ಅನ್ಯಾಯ ಮಾಡಲು ಹೇಸದ ನಿರ್ಮಲಾ ಸೀತಾರಾಮನ್ ಅವರಿಗೆ ರಾಜ್ಯದ ಹಣಕಾಸು ವ್ಯವಸ್ಥೆ ಬಗ್ಗೆ ಮಾತನಾಡುವ ಯಾವ ನೈತಿಕ ಅಧಿಕಾರ ಇದೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಖಾರವಾಗಿ ಪ್ರಶ್ನಿಸಿದ್ದಾರೆ.

Continue Reading
Advertisement
Train Accident
ದೇಶ15 mins ago

Train Accident: ಮತ್ತೊಂದು ರೈಲು ದುರಂತ: ಹೌರಾ-ಮುಂಬೈ ಎಕ್ಸ್‌ಪ್ರೆಸ್‌ ಹಳಿ ತಪ್ಪಿ 6 ಮಂದಿಗೆ ಗಾಯ

murder case hassan
ಕ್ರೈಂ25 mins ago

Murder Case: ಹಫ್ತಾ ಕೊಡದ ಯುವಕನನ್ನು ಕೊಚ್ಚಿ ಕೊಂದ ರೌಡಿಗಳು; ಗುಂಡು ಹಾರಿಸಿ ಆರೋಪಿ ಬಂಧನ

ಕೇರಂ ಬೋರ್ಡ್‌ rama and laxmana
ಅಂಕಣ53 mins ago

ಕೇರಂ ಬೋರ್ಡ್‌ ಅಂಕಣ: ಮಲೆನಾಡಿನ ಮಳೆಯಲ್ಲಿ ಶ್ರೀರಾಮ ಏನಾದ?

dog love
ವೈರಲ್ ನ್ಯೂಸ್56 mins ago

Viral News: 195 ಕಿ.ಮೀ ಒಂಟಿಯಾಗಿ ನಡೆದು ಮಾಲೀಕನಲ್ಲಿಗೆ ಮರಳಿದ ನಾಯಿ ಮಹಾರಾಜ!

golden memory ರಾಜಮಾರ್ಗ ಅಂಕಣ
ಅಂಕಣ1 hour ago

ರಾಜಮಾರ್ಗ ಅಂಕಣ: ಈ 20 ಅಂಶಗಳನ್ನು ಸರಿಯಾಗಿ ಪಾಲಿಸಿದರೆ ಗೋಲ್ಡನ್ ಮೆಮೊರಿ ನಿಮ್ಮದು!

Vitamin D Deficiency
ಆರೋಗ್ಯ2 hours ago

Vitamin D Deficiency: ನೀವು ಸಂತೋಷವಾಗಿಲ್ಲವೇ? ವಿಟಮಿನ್‌ ಡಿ ಕೊರತೆಯೂ ಇದಕ್ಕೆ ಕಾರಣವಿರಬಹುದು!

Taj Mahal
ದೇಶ2 hours ago

Taj Mahal : ತಾಜ್​ ಮಹಲ್ ಅಥವಾ ತೇಜೋ ಮಹಾಲಯ? ಐತಿಹಾಸಿಕ ಸ್ಮಾರಕ ಶಿವ ದೇವಾಲಯ ಎಂದು ವಾದಿಸಿ ಗಂಗಾಜಲ ಅರ್ಪಿಸಲು ಮುಂದಾದ ಮಹಿಳೆ!

Sadhguru  Jaggi Vasudev
ಆರೋಗ್ಯ2 hours ago

Sadhguru Jaggi Vasudev: ನಮ್ಮ ಹೃದಯವನ್ನು ಜೋಪಾನವಾಗಿ ಇಟ್ಟುಕೊಳ್ಳುವುದು ಹೇಗೆ? ಸದ್ಗುರು ಸಲಹೆ ಇಲ್ಲಿದೆ ಕೇಳಿ

Paris Olympics 2024
ಕ್ರೀಡೆ3 hours ago

Paris Olympics 2024 : ಒಲಿಂಪಿಕ್ಸ್​ನಲ್ಲಿ ಇಂದು ಭಾರತದ ಅಥ್ಲೀಟ್​ಗಳ ಸ್ಪರ್ಧೆಗಳ ವಿವರ ಇಲ್ಲಿದೆ

Side Effects Of Dry Fruits
ಆರೋಗ್ಯ3 hours ago

Side Effects Of Dry Fruits: ಆರೋಗ್ಯಕ್ಕೆ ಒಳ್ಳೆಯದೆಂದು ಒಣಬೀಜಗಳನ್ನು ಅತಿಯಾಗಿ ತಿನ್ನುತ್ತೀರಾ? ಎಚ್ಚರ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ14 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ15 hours ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ18 hours ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

Karnataka weather Forecast
ಮಳೆ3 days ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ3 days ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ3 days ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

ಟ್ರೆಂಡಿಂಗ್‌