ಚೀನಾದ ಶಾಲಾ ಮಕ್ಕಳ ಪಠ್ಯ ಪುಸ್ತಕಗಳಲ್ಲಿ ಅಶ್ಲೀಲ, ಆಕ್ಷೇಪಾರ್ಹ ಜನಾಂಗೀಯ ಚಿತ್ರ! - Vistara News

ವಿದೇಶ

ಚೀನಾದ ಶಾಲಾ ಮಕ್ಕಳ ಪಠ್ಯ ಪುಸ್ತಕಗಳಲ್ಲಿ ಅಶ್ಲೀಲ, ಆಕ್ಷೇಪಾರ್ಹ ಜನಾಂಗೀಯ ಚಿತ್ರ!

ಬ್ಲೂಮ್‌ಬರ್ಗ್ ವರದಿಯ ಪ್ರಕಾರ, ಚೀನಾದ ಶಿಕ್ಷಣ ಸಚಿವಾಲಯವು ತನ್ನ ಪ್ರಾಥಮಿಕ ಶಾಲಾ ಪಠ್ಯಪುಸ್ತಕಗಳಲ್ಲಿನ ಚಿತ್ರಗಳನ್ನು ಬದಲಾಯಿಸಲು ಪ್ರಕಾಶಕರಿಗೆ ಆದೇಶಿಸಿದೆ.

VISTARANEWS.COM


on

china text book
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಾಂಘೈ: ನಮ್ಮ ದೇಶದಲ್ಲಿ ಆಗಾಗ ಪಠ್ಯಪುಸ್ತಕ ವಿವಾದಗಳು ಹೊಸತಲ್ಲ. ಆದರೆ ಈಗ ಚೀನಾದಲ್ಲೂ ಇಂಥ ವಿವಾದ ಉದ್ಭವಿಸಿದೆ. ಪಠ್ಯಪುಸ್ತಕಗಳಲ್ಲಿನ ಅಶ್ಲೀಲ ಚಿತ್ರಗಳು ಮತ್ತು ಆಕ್ಷೇಪಾರ್ಹ ಜನಾಂಗೀಯ ವಿಚಾರಗಳು ಇದೀಗ ವಿವಾದದ ಕಿಡಿ ಹಾರಿಸಿದೆ.

ಬ್ಲೂಮ್‌ಬರ್ಗ್ ವರದಿಯ ಪ್ರಕಾರ, ಚೀನಾದ ಶಿಕ್ಷಣ ಸಚಿವಾಲಯವು ತನ್ನ ಪ್ರಾಥಮಿಕ ಶಾಲಾ ಪಠ್ಯಪುಸ್ತಕಗಳಲ್ಲಿನ ಚಿತ್ರಗಳನ್ನು ಬದಲಾಯಿಸಲು ಪ್ರಕಾಶಕರಿಗೆ ಆದೇಶಿಸಿದೆ. ಪೀಪಲ್ಸ್ ಎಜುಕೇಶನ್ ಪ್ರೆಸ್ ಪ್ರಕಾಶಕರಿಗೆ ಪ್ರಕಟಣೆಗಳನ್ನು ‘ಸರಿಪಡಿಸಲು ಮತ್ತು ಸುಧಾರಿಸಲು’ ಸೂಚಿಸಿದೆ. ಪ್ರಸಕ್ತ ಋತುವಿನ ಸೆಮಿಸ್ಟರ್‌ ಮುಗಿಯುವವರೆಗೆ ಈ ತಿದ್ದುಪಡಿಗೆ ಕಾಲಾವಕಾಶ ನೀಡಿದೆ. ಅಷ್ಟರೊಳಗೆ ಪಠ್ಯದ ಪರಿಷ್ಕರಣೆಯಾಗಬೇಕು ಮತ್ತು ಅದನ್ನು ಸಚಿವಾಲಯವು ಪರಿಶೀಲಿಸಿ ಅನುಮೋದಿಸಬೇಕಾಗಿದೆ.

ವರ್ಣಭೇದ ನೀತಿಯ ಪಳೆಯುಳಿಕೆ

ಪಠ್ಯಪುಸ್ತಕದಲ್ಲಿ ಬಳಸಲಾದ ಕೆಲವು ಚಿತ್ರಗಳು ವರ್ಣಭೇದ ನೀತಿಯ ಪಳೆಯುಳಿಕೆಗಳಾಗಿವೆ ಎಂದು ಚೀನಾದ ಸಾರ್ವಜನಿಕರು ಆಕ್ಷೇಪಿಸಿದ್ದಾರೆ. ಈ ಚಿತ್ರಗಳಲ್ಲಿ ಚೀನೀಯರನ್ನು ಸಣ್ಣ ಕಣ್ಣುಗಳು, ಅಗಲವಾದ ಮುಖಗಳನ್ನು ಹೊಂದಿರುವ ಬಫೂನ್‌ಗಳಂತೆ ಚಿತ್ರಿಸಲಾಗಿದೆ. ಕೆಲವು ಚಿತ್ರಗಳಲ್ಲಿ, ಹುಡುಗರು ತಮ್ಮ ಪ್ಯಾಂಟ್‌ಗಳ ಮೇಲೆ ಪುರುಷ ಜನನಾಂಗದ ಬಾಹ್ಯರೇಖೆಗಳನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಬಳಕೆದಾರರು ಚೀನಾದ ಟ್ವಿಟರ್ ತರಹದ ಸಾಮಾಜಿಕ ಮಾಧ್ಯಮ ವೈಬೊದಲ್ಲಿ ಹೇಳಿಕೊಂಡಿದ್ದಾರೆ. ಕಳೆದ ವಾರದಿಂದ ವೈಬೋ ಸಾಮಾಜಿಕ- ಮಾಧ್ಯಮದಲ್ಲಿ ಇದು ಟಾಪ್ ಟ್ರೆಂಡಿಂಗ್ ಐಟಂಗಳಲ್ಲಿ ಒಂದಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಈ ವಿವಾದಕ್ಕೆ ಸಂಬಂಧಿಸಿದ ಹ್ಯಾಶ್‌ಟ್ಯಾಗ್ ಅನ್ನು ಹಲವಾರು ಮಿಲಿಯನ್‌ಗಿಂತಲೂ ಹೆಚ್ಚು ಬಾರಿ ವೀಕ್ಷಿಸಲಾಗಿದೆ ಮತ್ತು ಅವುಗಳ ಮೇಲೆ ಕಾಮೆಂಟ್ ಮಾಡಲಾಗಿದೆ. ಕಳೆದ ಶುಕ್ರವಾರದವರೆಗೆ, ಈ ವಿಷಯದ ಹ್ಯಾಶ್‌ಟ್ಯಾಗ್ ಅನ್ನು 2.2 ಬಿಲಿಯನ್ ಬಾರಿ ವೀಕ್ಷಿಸಲಾಗಿದೆ.

“ದೇಶದ್ರೋಹಿಗಳು ಎಲ್ಲೋ ಅಡಗಿಕೊಂಡಿದ್ದಾರೆ. ನಮ್ಮ ಶೈಕ್ಷಣಿಕ ವ್ಯವಸ್ಥೆಯೊಳಗೆ ಹೊಕ್ಕಿರುವ ಈ ವೈರಸ್‌ಗಳು ಯುಎಸ್ ಪರ ಅಂಶಗಳನ್ನು ಪಠ್ಯದಲ್ಲಿ ತುರುಕಿವೆ” ಎಂದು ವೈಬೋ-ಬಳಕೆದಾರರೊಬ್ಬರು ಕಾಮೆಂಟ್ ಮಾಡಿದ್ದಾರೆ.

ಅಮೆರಿಕದ ಧ್ವಜವನ್ನು ಹೋಲುವ ನಕ್ಷತ್ರಗಳು ಮತ್ತು ಬಣ್ಣದ ಪಟ್ಟೆಗಳನ್ನು ಹೊಂದಿರುವ ಬಟ್ಟೆಗಳನ್ನು ಧರಿಸಿರುವ ಮಕ್ಕಳನ್ನು ಚಿತ್ರಿಸಲಾಗಿದೆ, ಹೀಗಾಗಿ ಪಠ್ಯದಲ್ಲಿನ ಈ ದೋಷಗಳು ಅಮೆರಿಕದ ಪರವಾಗಿರುವ ಶಕ್ತಿಗಳಿಂದಲೇ ಉಂಟಾಗಿವೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಲು ಕಾರಣವಾಯಿತು.

ಚೀನಿ ಸಂಸ್ಕೃತಿಗೆ ಧಕ್ಕೆ

ಪೀಪಲ್ಸ್ ಎಜುಕೇಶನ್ ಪ್ರೆಸ್ ಪ್ರಕಾಶಕರಿಗೆ ‘ಸರಿಯಾದ ರಾಜಕೀಯ ಮಾರ್ಗಸೂಚಿ ಮತ್ತು ಮೌಲಿಕ ದೃಷ್ಟಿಕೋನವನ್ನು ಅನುಸರಿಸುವಂತೆ, ಅತ್ಯುತ್ತಮವಾದ ಚೀನೀ ಸಂಸ್ಕೃತಿಯನ್ನು ಉತ್ತೇಜಿಸುವಂತೆ ಹಾಗೂ ಪಠ್ಯದ ಪರಿಷ್ಕರಣೆಯಲ್ಲಿ ಸಾರ್ವಜನಿಕರ ಅಭಿರುಚಿಗೆ ಅನುಗುಣವಾಗಿರುವಂತೆ ನೋಡಿಕೊಳ್ಳಲು’ ಆದೇಶಿಸಿದೆ.

“ಈ ಪಠ್ಯಪುಸ್ತಕಗಳಲ್ಲಿನ ಎಲ್ಲಾ ಚಿತ್ರಗಳನ್ನು ಬದಲಿಸಲು ಗುಣಮಟ್ಟದ ವಿನ್ಯಾಸಕರನ್ನು ಆಯ್ಕೆ ಮಾಡಲು ವಿಶೇಷ ಕಾರ್ಯಕಾರಿ ಗುಂಪನ್ನು ರಚಿಸಲಾಗಿದೆ. ಇತರ ಬೋಧನಾ ಸಾಮಗ್ರಿಗಳ ಸಂಪೂರ್ಣ ಪರಿಶೀಲನೆಯನ್ನು ಪ್ರಾರಂಭಿಸಲು ಮತ್ತು ಪೋಷಕರ ಮತ್ತು ಶಿಕ್ಷಕರ ಸಲಹೆಯನ್ನು ಆಲಿಸುವುದಾಗಿ” ಪ್ರಕಾಶಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಗಣಿತದ ಪಠ್ಯಪುಸ್ತಕಗಳನ್ನು ‘ಜನಾಂಗೀಯ’ ಎಂದು ಕರೆಯಲ್ಪಡುವ ಚಿತ್ರಗಳೊಂದಿಗೆ ಪ್ರಕಟಿಸಿದ್ದಕ್ಕಾಗಿ ಅವರು ‘ಆಳವಾದ ಅಪರಾಧಿ ಭಾವನೆ’ ಅನುಭವಿಸುತ್ತಿರುವುದಾಗಿ ಪ್ರಕಾಶಕರು ಹೇಳಿಕೊಂಡಿದ್ದಾರೆ.

“ನಾವು ಎಲ್ಲಾ ವರ್ಗಗಳ ಉತ್ತಮ ಅಭಿಪ್ರಾಯಗಳು ಮತ್ತು ಸಲಹೆಗಳನ್ನು ನಮ್ರತೆಯಿಂದ ಅಳವಡಿಸಿಕೊಂಡಿದ್ದೇವೆ” ಎಂದು ಪೀಪಲ್ಸ್ ಎಜುಕೇಶನ್ ಪ್ರೆಸ್ ಹೇಳಿದೆ.

ಇದನ್ನೂ ಓದಿ | children story: ಮಕ್ಕಳಿಗೆ ಅಬ್ದುಲ್‌ ಕಲಾಂ ಹೇಳಿದ ಎರಡು ಕತೆಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Nishant Agarwal: ಬ್ರಹ್ಮೋಸ್‌ ಕ್ಷಿಪಣಿ ಕುರಿತು ಪಾಕ್‌ಗೆ ಮಾಹಿತಿ; ಮಾಜಿ ಎಂಜಿನಿಯರ್‌ ನಿಶಾಂತ್‌ ಅಗರ್ವಾಲ್‌ಗೆ ಜೀವಾವಧಿ ಶಿಕ್ಷೆ!

Nishant Agarwal: ಬ್ರಹ್ಮೋಸ್‌ ಏರೋಸ್ಪೇಸ್‌ನ ರಹಸ್ಯ ಮಾಹಿತಿ ಸೋರಿಕೆ ಪ್ರಕರಣವು 2018ರಲ್ಲಿ ಬಹಿರಂಗವಾಗಿತ್ತು. ಪಾಕಿಸ್ತಾನದ ಐಎಸ್‌ಐಗಾಗಿ ಕೆಲಸ ಮಾಡುವ ನೇಹಾ ಶರ್ಮಾ ಹಾಗೂ ಪೂಜಾ ರಂಜನ್‌ ಅವರ ಫೇಸ್‌ಬುಕ್‌ ಖಾತೆಗಳನ್ನು ಪರಿಶೀಲನೆ ನಡೆಸಲಾಗಿತ್ತು. ಇಸ್ಲಾಮಾಬಾದ್‌ ಮೂಲಕ ಫೇಸ್‌ಬುಕ್‌ ಖಾತೆಗಳನ್ನು ನಿರ್ವಹಿಲಾಗುತ್ತಿತ್ತು. ಇವರಿಬ್ಬರ ಜತೆಗೆ ನಿಶಾಂತ್‌ ಅಗರ್ವಾಲ್‌ ನಿರಂತರವಾಗಿ ಸಂಪರ್ಕ ಇರುವ ಕುರಿತು ಭಾರತದ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಅನುಮಾನ ವ್ಯಕ್ತವಾಗಿತ್ತು.

VISTARANEWS.COM


on

Nishant Agarwal
Koo

ನವದೆಹಲಿ: ಭಾರತದ ಬ್ರಹ್ಮೋಸ್‌ ಕ್ಷಿಪಣಿಯ ಕುರಿತು ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ಸೋರಿಕೆ ಮಾಡಿದ ಹಿನ್ನೆಲೆಯಲ್ಲಿ ಬ್ರಹ್ಮೋಸ್‌ ಏರೋಸ್ಪೇಸ್‌ನ (Brahmos Aerospace) ಮಾಜಿ ಎಂಜಿನಿಯರ್‌ ನಿಶಾಂತ್‌ ಅಗರ್ವಾಲ್‌ಗೆ (Nishant Agarwal) ನಾಗ್ಪುರ ನ್ಯಾಯಾಲಯವು (Nagpur Court) ಜೀವಾವಧಿ ಶಿಕ್ಷೆ ವಿಧಿಸಿದೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐಗೆ ನಿಶಾಂತ್‌ ಅಗರ್ವಾಲ್‌ ಅವರು ರಹಸ್ಯ ಮಾಹಿತಿ ಹಂಚಿಕೊಂಡಿರುವ ಹಿನ್ನೆಲೆಯಲ್ಲಿ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

ಭೂಮಿ, ಸಮುದ್ರ ಹಾಗೂ ಆಗಸದಿಂದಲೇ ವೈರಿಗಳನ್ನು ಹೊಡೆದುರುಳಿಸುವ ಬ್ರಹ್ಮೋಸ್ ಸೂಪರ್‌ಸಾನಿಕ್‌ ಕ್ರೂಸ್‌ ಕ್ಷಿಪಣಿಯನ್ನು ಬ್ರಹ್ಮೋಸ್‌ ಏರೋಸ್ಪೇಸ್‌ ಅಭಿವೃದ್ಧಿಪಡಿಸಿದ್ದು, ಇದರ ಕುರಿತು ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನೆ ಮಾಡಿದ ಆರೋಪದಲ್ಲಿ ನಿಶಾಂತ್‌ ಅಗರ್ವಾಲ್‌ನನ್ನು 2018ರಲ್ಲಿಯೇ ಬಂಧಿಸಲಾಗಿತ್ತು. ಬ್ರಹ್ಮೋಸ್‌ ಏರೋಸ್ಪೇಸ್‌ನಲ್ಲಿ ನಿಶಾಂತ್‌ ಅಗರ್ವಾಲ್‌ ಸೀನಿಯರ್‌ ಸಿಸ್ಟಮ್‌ ಎಂಜಿನಿಯರ್‌ ಆಗಿದ್ದರು. ಆಫೀಶಿಯಲ್‌ ಸೀಕ್ರೆಟ್ಸ್‌ ಆ್ಯಕ್ಟ್‌ ಅಡಿಯಲ್ಲಿ ನಿಶಾಂತ್‌ ಅಗರ್ವಾಲ್‌ಗೆ 14 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 3 ಸಾವಿರ ರೂ. ದಂಡ ವಿಧಿಸಲಾಗಿದೆ.

ಏನಿದು ಪ್ರಕರಣ?

ಬ್ರಹ್ಮೋಸ್‌ ಏರೋಸ್ಪೇಸ್‌ನ ರಹಸ್ಯ ಮಾಹಿತಿ ಸೋರಿಕೆ ಪ್ರಕರಣವು 2018ರಲ್ಲಿ ಬಹಿರಂಗವಾಗಿತ್ತು. ಪಾಕಿಸ್ತಾನದ ಐಎಸ್‌ಐಗಾಗಿ ಕೆಲಸ ಮಾಡುವ ನೇಹಾ ಶರ್ಮಾ ಹಾಗೂ ಪೂಜಾ ರಂಜನ್‌ ಅವರ ಫೇಸ್‌ಬುಕ್‌ ಖಾತೆಗಳನ್ನು ಪರಿಶೀಲನೆ ನಡೆಸಲಾಗಿತ್ತು. ಇಸ್ಲಾಮಾಬಾದ್‌ ಮೂಲಕ ಫೇಸ್‌ಬುಕ್‌ ಖಾತೆಗಳನ್ನು ನಿರ್ವಹಿಲಾಗುತ್ತಿತ್ತು. ಇವರಿಬ್ಬರ ಜತೆಗೆ ನಿಶಾಂತ್‌ ಅಗರ್ವಾಲ್‌ ನಿರಂತರವಾಗಿ ಸಂಪರ್ಕ ಇರುವ ಕುರಿತು ಭಾರತದ ಗುಪ್ತಚರ ಇಲಾಖೆ ಅಧಿಕಾರಿಗಳಿಗೆ ಅನುಮಾನ ವ್ಯಕ್ತವಾಗಿತ್ತು. ಇದರ ಕುರಿತು ತನಿಖೆ ನಡೆಸಿದಾಗ ನಿಶಾಂತ್‌ ಅಗರ್ವಾಲ್‌ ಕೃತ್ಯವು ಬಯಲಾಗಿತ್ತು.

ಡಿಆರ್‌ಡಿಒ ನೀಡುವ ಯಂಗ್‌ ಸೈಂಟಿಸ್ಟ್‌ ಅವಾರ್ಡ್‌ಗೆ ನಿಶಾಂತ್‌ ಅಗರ್ವಾಲ್‌ ಪಾತ್ರನಾಗಿದ್ದ. ಕುರುಕ್ಷೇತ್ರದಲ್ಲಿರುವ ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯಲ್ಲಿ ಓದಿದ್ದ ಈತ ವೃತ್ತಿಯಲ್ಲೂ ನೈಪುಣ್ಯತೆ ಹೊಂದಿದ್ದ. ಇದೇ ಕಾರಣಕ್ಕಾಗಿ ಬ್ರಹ್ಮೋಸ್‌ ಏರೋಸ್ಪೇಸ್‌ನಲ್ಲಿ ಸೀನಿಯರ್‌ ಸಿಸ್ಟಮ್‌ ಎಂಜಿನಿಯರ್‌ ಆಗಿ ಭಡ್ತಿ ಹೊಂದಿದ್ದ. ಆದರೆ, 2018ರಲ್ಲಿ ಈತನ ದೇಶದ್ರೋಹದ ಕೃತ್ಯವು ಬಯಲಾಗುತ್ತಲೇ ಸಹೋದ್ಯೋಗಿಗಳು ಸೇರಿ ಎಲ್ಲರೂ ಶಾಕ್‌ಗೀಡಾಗಿದ್ದರು. ಕಳೆದ ಏಪ್ರಿಲ್‌ನಲ್ಲಷ್ಟೇ ಈತ ಬಾಂಬೆ ಹೈಕೋರ್ಟ್‌ನಿಂದ ಜಾಮೀನು ಪಡೆದಿದ್ದ.

ಇದನ್ನೂ ಓದಿ: Chhota Rajan: ಹೊಟೇಲ್‌ ಉದ್ಯಮಿ ಹತ್ಯೆ ಕೇಸ್‌; ಗ್ಯಾಂಗ್‌ಸ್ಟರ್‌ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ

Continue Reading

ವಿದೇಶ

Pakistan Army: ಪಾಕಿಸ್ತಾನ ಸೇನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೊದಲ ಮಹಿಳಾ ಬ್ರಿಗೇಡಿಯರ್ ಆಗಿ ಇತಿಹಾಸ ಬರೆದ ಡಾ. ಹೆಲೆನ್ ಮೇರಿ

Pakistan Army: ಪಾಕಿಸ್ತಾನ ಸೈನ್ಯದ ಮೆಡಿಕಲ್ ಕಾರ್ಪ್ಸ್‌ನಲ್ಲಿ ಸೇವೆ ಸಲ್ಲಿಸುತ್ತಿರುವ ಡಾ.ಹೆಲೆನ್ ಮೇರಿ ರಾಬರ್ಟ್ಸ್ ಅವರು ಮುಸ್ಲಿಂ ಬಹುಸಂಖ್ಯಾತ ದೇಶದಲ್ಲಿ ಬ್ರಿಗೇಡಿಯರ್ ಶ್ರೇಣಿಯನ್ನು ಅಲಂಕರಿಸಿದ ಕ್ರಿಶ್ಚಿಯನ್ ಮತ್ತು ಅಲ್ಪಸಂಖ್ಯಾತ ಸಮುದಾಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಅವರು ಬ್ರಿಗೇಡಿಯರ್ ಆಗಿ ಬಡ್ತಿ ಪಡೆದ ಹೆಲೆನ್ ಅವರನ್ನು ಅಭಿನಂದಿಸಿದ್ದಾರೆ.

VISTARANEWS.COM


on

Pakistan Army
Koo

ಇಸ್ಲಾಮಾಬಾದ್‌: ಪಾಕಿಸ್ತಾನ ಸೈನ್ಯ (Pakistan Army)ದ ಮೆಡಿಕಲ್ ಕಾರ್ಪ್ಸ್‌ (Medical Corps)ನಲ್ಲಿ ಸೇವೆ ಸಲ್ಲಿಸುತ್ತಿರುವ ಡಾ.ಹೆಲೆನ್ ಮೇರಿ ರಾಬರ್ಟ್ಸ್ (Dr Helen Mary Roberts) ಅವರು ಮುಸ್ಲಿಂ ಬಹುಸಂಖ್ಯಾತ ದೇಶದಲ್ಲಿ ಬ್ರಿಗೇಡಿಯರ್ ಶ್ರೇಣಿಯನ್ನು ಅಲಂಕರಿಸಿದ ಕ್ರಿಶ್ಚಿಯನ್ ಮತ್ತು ಅಲ್ಪಸಂಖ್ಯಾತ ಸಮುದಾಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಆಯ್ಕೆ ಮಂಡಳಿಯಿಂದ ಬ್ರಿಗೇಡಿಯರ್ ಮತ್ತು ಪೂರ್ಣ ಕರ್ನಲ್‌ಗಳಾಗಿ ಬಡ್ತಿ ಪಡೆದ ಪಾಕಿಸ್ತಾನ ಸೇನಾ ಅಧಿಕಾರಿಗಳ ಪೈಕಿ ಡಾ.ಹೆಲೆನ್ ಮೇರಿ ರಾಬರ್ಟ್ಸ್ ಕೂಡ ಸೇರಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಪ್ರಧಾನ ಮಂತ್ರಿ ಶೆಹಬಾಜ್ ಷರೀಫ್ ಅವರು ಬ್ರಿಗೇಡಿಯರ್ ಆಗಿ ಬಡ್ತಿ ಪಡೆದ ಹೆಲೆನ್ ಅವರನ್ನು ಅಭಿನಂದಿಸಿದ್ದಾರೆ. ʼʼಇಡೀ ದೇಶವು ಅವರ ಬಗ್ಗೆ ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಅವರಂತಹ ಸಾವಿರಾರು ಶ್ರಮಜೀವಿ ಮಹಿಳೆಯರ ಬಗ್ಗೆ ಹೆಮ್ಮೆ ಪಡುತ್ತದೆʼʼ ಎಂದು ಹೇಳಿದ್ದಾರೆ.

ಅಭಿನಂದನೆ

“ಪಾಕಿಸ್ತಾನ ಸೇನೆಯಲ್ಲಿ ಬ್ರಿಗೇಡಿಯರ್ ಆಗಿ ಬಡ್ತಿ ಪಡೆದ ಅಲ್ಪಸಂಖ್ಯಾತ ಮೂಲದ ಮೊದಲ ಮಹಿಳೆ ಎಂಬ ಗೌರವವನ್ನು ಪಡೆದ ಬ್ರಿಗೇಡಿಯರ್ ಹೆಲೆನ್ ಮೇರಿ ರಾಬರ್ಟ್ಸ್ ಅವರನ್ನು ನಾನು ಮತ್ತು ರಾಷ್ಟ್ರವು ಅಭಿನಂದಿಸುತ್ತದೆ” ಎಂದು ಅವರು ತಿಳಿಸಿದರು. ಪಾಕಿಸ್ತಾನದ ಮಹಿಳೆಯರು ಯಾವುದೇ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು ಮತ್ತು ಯಾರಿಗೂ ಕಡಿಮೆಯಿಲ್ಲ ಎನ್ನುವುದನ್ನು ಇವರು ಸಾಬೀತುಪಡಿಸಿದ್ದಾರೆ ಎಂದೂ ಶೆಹಬಾಜ್ ಷರೀಫ್ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಬ್ರಿಗೇಡಿಯರ್ ಡಾ.ಹೆಲೆನ್ ಹಿರಿಯ ರೋಗಶಾಸ್ತ್ರಜ್ಞರಾಗಿದ್ದು, 26 ವರ್ಷಗಳಿಂದ ಪಾಕಿಸ್ತಾನ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಕಳೆದ ವರ್ಷ ರಾವಲ್ಪಿಂಡಿಯ ಕ್ರೈಸ್ಟ್ ಚರ್ಚ್‌ನಲ್ಲಿ ನಡೆದ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ದೇಶದ ಅಭಿವೃದ್ಧಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಪಾತ್ರವನ್ನು ಶ್ಲಾಘಿಸಿದ್ದರು.

ಪಾಕಿಸ್ತಾನ ಸಶಸ್ತ್ರ ಪಡೆಗಳ ಮಾಧ್ಯಮ ಮತ್ತು ಸಾರ್ವಜನಿಕ ಸಂಪರ್ಕ ವಿಭಾಗವಾದ ಇಂಟರ್ ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ (ISPR) “ಅರ್ಹತೆ ಮತ್ತು ರಾಷ್ಟ್ರೀಯ ಪ್ರಾತಿನಿಧ್ಯದ ಮತ್ತೊಂದು ಜೀವಂತ ಉದಾಹರಣೆ” ಎಂದು ಉಲ್ಲೇಖಿಸಿದೆ. ಬ್ರಿಗೇಡಿಯರ್ ಡಾ.ಹೆಲೆನ್ ಮೇರಿ ರಾಬರ್ಟ್ಸ್ ಅವರ ಬಡ್ತಿಗಿಂತ ಮೊದಲು, ಮೇಜರ್ ಜನರಲ್ ನಿಗರ್ ಜೋಹರ್ ಅವರು 2020ರಲ್ಲಿ ಲೆಫ್ಟಿನೆಂಟ್ ಜನರಲ್ ಹುದ್ದೆಗೆ ಬಡ್ತಿ ಪಡೆದ ಮೊದಲ ಮಹಿಳಾ ಅಧಿಕಾರಿ ಎನಿಸಿಕೊಂಡಿದ್ದರು. ಆ ಮೂಲಕ ಪುರುಷ ಪ್ರಾಬಲ್ಯದ ಪಾಕಿಸ್ತಾನ ಸೇನೆಯಲ್ಲಿ ಲಿಂಗ ಅಸಮಾನತೆಯನ್ನು ತೊಡೆದು ಹಾಕಿದ್ದರು. ನಿಗರ್ ಜೋಹರ್ ಅವರನ್ನು ಸೈನ್ಯದ ಮೊದಲ ಮಹಿಳಾ ಸರ್ಜನ್ ಜನರಲ್ ಆಗಿ ನೇಮಿಸಲಾಗಿತ್ತು.

ಇದನ್ನೂ ಓದಿ: Pakistan Prime Minster : ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶೆಹಬಾಜ್ ಷರೀಫ್ ಆಯ್ಕೆ

ಜನಸಂಖ್ಯೆಯ ಅಂಕಿ-ಅಂಶ

2021ರಲ್ಲಿ ಪಾಕಿಸ್ತಾನ ಬ್ಯೂರೋ ಆಫ್ ಸ್ಟ್ಯಾಟಿಸ್ಟಿಕ್ಸ್‌ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ದೇಶದಲ್ಲಿ ಶೇ. 96.47ರಷ್ಟು ಮುಸ್ಲಿಮರು, ಶೇ. 2.14ರಷ್ಟು ಹಿಂದೂಗಳು, ಶೇ. 1.27ರಷ್ಟು ಕ್ರಿಶ್ಚಿಯನ್ನರು, ಶೇ. 0.09ರಷ್ಟು ಅಹ್ಮದಿ ಮುಸ್ಲಿಮರು ಮತ್ತು ಶೇ. 0.02ರಷ್ಟು ಇತರರು ಇದ್ದಾರೆ.

Continue Reading

ವಿದೇಶ

Rupert Murdoch: ಮಾಧ್ಯಮ ಲೋಕದ ದೊರೆಗೆ ಐದನೇ ಮದುವೆ; 93ನೇ ವಯಸ್ಸಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ರೂಪರ್ಟ್ ಮುರ್ಡೋಕ್

Rupert Murdoch:ಜೂನ್ 1 ರಂದು ರೂಪರ್ಟ್ ಮುರ್ಡೋಕ್ ತಮ್ಮ ಕ್ಯಾಲಿಫೋರ್ನಿಯಾದ ವೈನ್‌ಯಾರ್ಡ್ ಮತ್ತು ಎಸ್ಟೇಟ್ ಮೊರಾಗದಲ್ಲಿ 62 ವರ್ಷದ ಎಲೆನಾ ಝುಕೋವಾ ಅವರನ್ನು ವಿವಾಹವಾಗಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಎಲೆನಾ ನಿವೃತ್ತ ಜೀವಶಾಸ್ತ್ರಜ್ಞೆ ಎಂದು ಹೇಳಲಾಗಿದೆ. ಅಲ್ಲದೆ ರಷ್ಯಾ ಮೂಲದವರಾದ ಅವರು ಅಮೆರಿಕಾಗೆ ವಲಸೆ ಬಂದಿದ್ದಾರೆ.

VISTARANEWS.COM


on

Rupert Murdoch
Koo

ಅಮೆರಿಕ: ಮಾಧ್ಯಮ ಲೋಕದ ಅನಭಿಷಿಕ್ತ ದೊರೆ ರೂಪರ್ಟ್ ಮುರ್ಡೋಕ್(Rupert Murdoch) ತಮ್ಮ 93ನೇ ವಯಸ್ಸಿನಲ್ಲಿ ಐದನೇ ಮದುವೆ ಮಾಡಿಕೊಂಡಿದ್ದಾರೆ. ತಮ್ಮ ಇಳಿವಯಸ್ಸಿನಲ್ಲಿ ರಷ್ಯಾ(Russia) ಮೂಲದ 67 ವರ್ಷದ ಎಲೆನಾ ಜೊತೆ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದು, ಅಮೆರಿಕಾದ ಕ್ಯಾಲಿಫೋರ್ನಿಯ(California)ದಲ್ಲಿರುವ ಅವರ ಫಾರ್ಮ್ ಹೌಸ್ ನಲ್ಲಿ ಈ ವಿವಾಹ ಸಮಾರಂಭ ನೆರವೇರಿದೆ. ಈ ಸಂದರ್ಭದಲ್ಲಿ ಆತ್ಮೀಯರು ಹಾಗೂ ಹತ್ತಿರದ ಸಂಬಂಧಿಗಳು ಉಪಸ್ಥಿತರಿದ್ದರು.

ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಇಬ್ಬರ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಎನ್ನಲಾಗಿತ್ತು. ಆದರೆ ಬಹುತೇಕರು ಇದು ಸುಳ್ಳು ಸುದ್ದಿ ಎಂದೇ ನಂಬಿದ್ದರು. ಆದರೆ ಇದೀಗ ಜೂನ್ 1ರಂದು ಈ ಜೋಡಿ ವಿವಾಹವಾಗಿದ್ದಾರೆ ಎಂದು ತಿಳಿದುಬಂದಿದೆ. ಜೂನ್ 1 ರಂದು ತಮ್ಮ ಕ್ಯಾಲಿಫೋರ್ನಿಯಾದ ವೈನ್‌ಯಾರ್ಡ್ ಮತ್ತು ಎಸ್ಟೇಟ್ ಮೊರಾಗದಲ್ಲಿ 62 ವರ್ಷದ ಎಲೆನಾ ಝುಕೋವಾ ಅವರನ್ನು ವಿವಾಹವಾಗಿದ್ದಾರೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ಎಲೆನಾ ನಿವೃತ್ತ ಜೀವಶಾಸ್ತ್ರಜ್ಞೆ ಎಂದು ಹೇಳಲಾಗಿದೆ. ಅಲ್ಲದೆ ರಷ್ಯಾ ಮೂಲದವರಾದ ಅವರು ಅಮೆರಿಕಾಗೆ ವಲಸೆ ಬಂದಿದ್ದಾರೆ.

ಮುರ್ಡೋಕ್ ಅವರ ಮೂರನೇ ಪತ್ನಿ ವೆಂಡಿ ಡೆಂಗ್ ಮೂಲಕ ನೂತನ ದಂಪತಿಯ ಸಂಬಂಧವು ಪ್ರಾರಂಭವಾಯಿತು. 1991 ರಲ್ಲಿ ಮಾಸ್ಕೋದಿಂದ ಅಮೆರಿಕಗೆ ವಲಸೆ ಬಂದ ನಿವೃತ್ತ ಆಣ್ವಿಕ ಜೀವಶಾಸ್ತ್ರಜ್ಞ ಝುಕೋವಾ ಅವರು ಹಿಂದೆ ಬಿಲಿಯನೇರ್ ಇಂಧನ ಹೂಡಿಕೆದಾರ ಅಲೆಕ್ಸಾಂಡರ್ ಝುಕೋವ್ ಅವರನ್ನು ವಿವಾಹವಾಗಿದ್ದರು. ಆಗಾಗ ಇಬ್ಬರು ಕೆಲವು ಪ್ರಸಿದ್ಧ ಹೋಟೆಲ್‌ಗಳು, ಹಾಲಿಡೆ ಡೆಸ್ಟಿನೇಷನ್‌ಗಳಲ್ಲಿ ಕಂಡುಬಂದಿದ್ದರು.

ಆರು ಮಕ್ಕಳನ್ನು ಹೊಂದಿರುವ ರೂಪರ್ಟ್ ಮುರ್ಡೋಕ್ ಮೊದಲಿಗೆ ಆಸ್ಟ್ರೇಲಿಯನ್ ಫ್ಲೈಟ್ ನಲ್ಲಿ ಪರಿಚಾರಿಕೆಯಾಗಿದ್ದ ಪೆಟ್ರಿಷಿಯಾ ಜೊತೆ ಮದುವೆಯಾಗಿದ್ದು, 1960ರಲ್ಲಿ ಅವರಿಂದ ವಿಚ್ಛೇದನ ಪಡೆದುಕೊಂಡಿದ್ದರು. ಆ ಬಳಿಕ ಅನ್ನಾ ಎಂಬ ವರದಿಗಾರ್ತಿಯನ್ನು ರೂಪರ್ಟ್ ಮುರ್ಡೂಕ್ ಮದುವೆ ಮಾಡಿಕೊಂಡಿದ್ದು ಅವರೊಂದಿಗೆ ಸುಧೀರ್ಘ 30 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿ 1999 ರಲ್ಲಿ ವಿಚ್ಛೇದನ ಪಡೆದುಕೊಂಡಿದ್ದರು. ಮುರ್ಡೂಕ್ ಅವರ ಮೂರನೇ ಮದುವೆ 2013ರಲ್ಲಿ ಮುರಿದು ಬಿದ್ದಿತ್ತು. ಮಾಡೆಲ್ ಜೆರ್ರಿ ಜೊತೆ ನಾಲ್ಕನೇ ಬಾರಿಗೆ ಮದುವೆಯಾಗಿದ್ದ ರೂಪರ್ಟ್ ಮುರ್ಡೋಕ್ ಬಳಿಕ ವಿಚ್ಛೇದನ ಪಡೆದುಕೊಂಡಿದ್ದು, ವಾಲ್ ಸ್ಟ್ರೀಟ್ ಜರ್ನಲ್, ಫಾಕ್ಸ್ ನ್ಯೂಸ್ ನಂತಹ ಬಹುದೊಡ್ಡ ಮಾಧ್ಯಮ ಸಂಸ್ಥೆಗಳ ಒಡೆಯರಾಗಿರುವ ಮುರ್ಡೋಕ್ ಈಗ ಐದನೇ ಮದುವೆ ಮಾಡಿಕೊಂಡಿದ್ದಾರೆ.

ಯಾರು ಈ ರೂಪರ್ಟ್ ಮುರ್ಡೋಕ್?

ರೂಪರ್ಟ್ ಮುರ್ಡೋಕ್ ದಿ ವಿಲ್ ಸ್ಟ್ರೀಟ್ ಜರ್ನಲ್, ದಿ ಸನ್, ದಿ ಟೈಮ್ಸ್, ನ್ಯೂಯಾರ್ಕ್ ಪೋಸ್ಟ್, ಹೆರಾಲ್ಡ್ ಸನ್ ಮತ್ತು ದಿ ಡೈಲಿ ಟೆಲಿಗ್ರಾಫ್ ಇತರೆ ಪ್ರಸಿದ್ಧ ಸುದ್ದಿ ಮಾಧ್ಯಮಗಳ ಒಡೆಯರಾಗಿದ್ದರು. ಇವರು ಪೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 2022ರಲ್ಲಿ 31ನೇ ಸ್ಥಾನ ಪಡೆದಿದ್ದರು. ರೂಬರ್ಟ್ ಮುರ್ಡೋಕ್ ಅವರ ನಿವ್ವಳ ಆಸ್ತಿ ಮೌಲ್ಯವು 21.7 ಬಿಲಿಯನ್ ಡಾಲರ್ ಆಗಿದೆ. ಆಸ್ಟ್ರೇಲಿಯಾದಲ್ಲಿ 1952 ರಲ್ಲಿ ತನ್ನ ತಂದೆಯಿಂದ ವಾರ್ತಾಪತ್ರಿಕೆಯನ್ನು ಪಡೆದ ಮುರ್ಡೋಕ್ ತನ್ನ ಸಾಮ್ರಾಜ್ಯವನ್ನು ಯುನೈಟೆಡ್ ಸ್ಟೇಟ್ಸ್ ಮತ್ತು ಬ್ರಿಟನ್‌ಗೂ ವಿಸ್ತರಿಸಿದ್ದರು. ಮುರ್ಡೋಕ್ 1996ರಲ್ಲಿ ಫಾಕ್ಸ್ ನ್ಯೂಸ್ ಚಾನೆಲ್ ಅನ್ನು ಸ್ಥಾಪಿಸಿದರು. ಬಳಿಕ ಫಾಕ್ಸ್ ನ್ಯೂಸ್ ಸಂಸ್ಥೆ ದೊಡ್ಡ ಜಾಲವಾಗಿ ಹರಡಿತು. ಫಾಕ್ಸ್ ನ್ಯೂಸ್‌ನ ಪೋಷಕ ಕಂಪನಿ ಮತ್ತು ನ್ಯೂಸ್ ಕಾರ್ಪೊರೇಷನ್‌ನ ಹುದ್ದೆಗಳಿಂದ ಅವರು ನಿವೃತ್ತಿ ಪಡೆದರು. ಬಳಿಕ ಅವರ ಪುತ್ರ ಲಾಚ್ಲಾನ್ ಮುರ್ಡೋಕ್, ಆಧುನಿಕತೆಯ ಮೇಲೆ ಸಾಕಷ್ಟು ಪ್ರಭಾವ ಬೀರಿದ ವ್ಯವಹಾರದ ನಿಯಂತ್ರಣವನ್ನು ವಹಿಸಿಕೊಂಡಿದ್ದಾರೆ.

ಇದನ್ನೂ ಓದಿ:Lok Sabha Election 2024: ವಿಜಯೋತ್ಸವಕ್ಕೆ ಬಿಜೆಪಿ ಪ್ಲ್ಯಾನ್‌ ಹೇಗಿದೆ? ಈಗಿನಿಂದಲೇ ಶುರು ಭರ್ಜರಿ ತಯಾರಿ

Continue Reading

ವಿದೇಶ

Shootout: ಬರ್ತ್‌ ಡೇ ಪಾರ್ಟಿಯಲ್ಲಿ ಭಾರೀ ಶೂಟೌಟ್‌-27 ಮಂದಿಗೆ ಗುಂಡೇಟು

Shootout: ಓಹಿಯೋ ರಾಜ್ಯದ ಅಕ್ರಾನ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಲ್ಲಿನ ಕೆಲ್ಲಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ 10 ಗಂಟೆಗೆ ಬರ್ತ್‌ ಡೇ ಪಾರ್ಟಿವೊಂದನ್ನು ಆಯೋಜಿಸಲಾಗಿತ್ತು. ಹೀಗಾಗಿ ಸುಮಾರು 200ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮನೆಯ ಎದುರುಗಡೆ ಇರುವ ರಸ್ತೆಯಲ್ಲಿ ಜನ ಕಿಕ್ಕಿರಿದಿದ್ದ ಹಿನ್ನೆಲೆ ಟ್ರಾಫಿಕ್‌ ಸಮಸ್ಯೆಯೂ ಉಂಟಾಗಿತ್ತು ಹೀಗಾಗಿ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಸ್ತೆ ಕ್ಲಿಯರ್‌ ಮಾಡುವಂತೆ ಸೂಚಿಸಿದ್ದರು. ಇದಾದ ಬಳಿಕ ಅವರು ಅಲ್ಲಿಂದ ತೆರಳಿದ್ದರು.

VISTARANEWS.COM


on

Shootout
Koo

ಅಕ್ರಾನ್‌ : ಕೆಲವೊಮ್ಮೆ ಸಣ್ಣ ಪುಟ್ಟ ಗಲಾಟೆ ಜಗಳ, ಕೋಪ, ಎಡವಟ್ಟಿನಿಂದಾಗಿ ಅದೆಂಥಾ ದೊಡ್ಡ ಸಂಭ್ರಮಾಚರಣೆ ಆಗಿದ್ದರೂ ಅದನ್ನು ಒಂದು ಕ್ಷಣದಲ್ಲಿ ಸ್ಮಶಾನವನ್ನಾಗಿಸಿ ಬಿಡುತ್ತದೆ. ಅಂತಹದ್ದೇ ಒಂದು ಘಟನೆ ಅಮೆರಿಕದ ಓಹಿಯೋ ರಾಜ್ಯದಲ್ಲಿ ನಡೆದಿದೆ. ಸಂಭ್ರಮದಿಂದ ನಡೆಯುತ್ತಿದ್ದ ಬರ್ತ್‌ ಡೇ ಪಾರ್ಟಿ(Birthday Party) ದುರಂತ ಅಂತ್ಯ ಕಂಡಿದೆ. ಏಕಾಏಕಿ ಶೂಟೌಟ್‌(Shootout) ನಡೆದಿದ್ದು, ಬರೋಬ್ಬರಿ 27 ಮಂದಿಗೆ ಗುಂಡೇಟು ಬಿದ್ದಿದೆ. ಇನ್ನು ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ರೆಕಾರ್ಡ್‌ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌(Viral Video) ಆಗಿದೆ.

ಘಟನೆ ವಿವರ:

ಓಹಿಯೋ ರಾಜ್ಯದ ಅಕ್ರಾನ್‌ನಲ್ಲಿ ಈ ದುರ್ಘಟನೆ ಸಂಭವಿಸಿದೆ. ಇಲ್ಲಿನ ಕೆಲ್ಲಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ 10 ಗಂಟೆಗೆ ಬರ್ತ್‌ ಡೇ ಪಾರ್ಟಿವೊಂದನ್ನು ಆಯೋಜಿಸಲಾಗಿತ್ತು. ಹೀಗಾಗಿ ಸುಮಾರು 200ಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಮನೆಯ ಎದುರುಗಡೆ ಇರುವ ರಸ್ತೆಯಲ್ಲಿ ಜನ ಕಿಕ್ಕಿರಿದಿದ್ದ ಹಿನ್ನೆಲೆ ಟ್ರಾಫಿಕ್‌ ಸಮಸ್ಯೆಯೂ ಉಂಟಾಗಿತ್ತು ಹೀಗಾಗಿ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ರಸ್ತೆ ಕ್ಲಿಯರ್‌ ಮಾಡುವಂತೆ ಸೂಚಿಸಿದ್ದರು. ಇದಾದ ಬಳಿಕ ಅವರು ಅಲ್ಲಿಂದ ತೆರಳಿದ್ದರು. ಇದಾದ ಕೆಲವೇ ಹೊತ್ತಲ್ಲಿ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿರುವ ಬಗ್ಗೆ ಪೊಲೀಸರಿಗೆ ಬ್ಯಾಕ್‌ ಟು ಬ್ಯಾಕ್‌ ಕರೆಗಳು ಹೋಗಿವೆ. ಸ್ಥಳಕ್ಕೆ ಬಂದು ನೋಡಿದಾಗ 25ಜನ ಗುಂಡೇಟು ತಗುಲಿ ಗಂಭಿರವಾಗಿ ಗಾಯಗೊಂಡು ಸ್ಥಳದಲ್ಲೇ ಜೀವನ್ಮರಣದ ನಡುವೆ ಹೋರಾಡುತ್ತಿದ್ದರು.

ಇನ್ನು ಘಟನೆಯಲ್ಲಿ 27ವರ್ಷದ ಒಬ್ಬ ಯುವಕ ಮೃತಪಟ್ಟಿದ್ದು, ನಾಲ್ವರ ಸ್ಥಿತಿ ಬಹಳ ಗಂಭೀರವಾಗಿದೆ. ಇನ್ನು ಎಲ್ಲಾ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳದಲ್ಲಿ, ರೈಫಲ್‌ನಿಂದ ಕೇಸಿಂಗ್‌ಗಳು ಸೇರಿದಂತೆ ಎರಡು ಬಂದೂಕುಗಳು ಮತ್ತು ಅನೇಕ ರೀತಿಯ ಶೆಲ್ ಕೇಸಿಂಗ್‌ಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Parvathi Menon: ಸದ್ದಿಲ್ಲದೇ ಮದುವೆಯಾದ್ರಾ ʻಮಿಲನʼ ನಾಯಕಿ ಪಾರ್ವತಿ ಮೆನನ್?

Continue Reading
Advertisement
Saree Fashion
ಫ್ಯಾಷನ್2 mins ago

Saree Fashion: ರಫಲ್‌ ಡಿಸೈನ್‌ನಲ್ಲಿ ಬಂದಿದೆ ಜಾರ್ಜೆಟ್ ಲೆಹೆಂಗಾ ಸೀರೆ!

Hornbill bird sighting in Gangavathi
ಕರ್ನಾಟಕ4 mins ago

Hornbill Bird: ಗಂಗಾವತಿಯಲ್ಲಿ ‘ಹಾರ್ನ್‌ಬಿಲ್’ ಪಕ್ಷಿ ಪ್ರತ್ಯಕ್ಷ

Samsung Big TV Days Sale Exciting offer on big TVs
ದೇಶ7 mins ago

Samsung: ಸ್ಯಾಮ್‌ಸಂಗ್‌ನ ʼಬಿಗ್‌ ಟಿವಿ ಡೇಸ್‌ʼ ಸೇಲ್‌; ದೊಡ್ಡ ಟಿವಿಗಳ ಮೇಲೆ ಅತ್ಯಾಕರ್ಷಕ ಆಫರ್‌!

Davangere Lok Sabha Constituency
ದಾವಣಗೆರೆ9 mins ago

Davangere Lok Sabha Constituency: ದಾವಣಗೆರೆಯಲ್ಲಿ ನಾರಿಶಕ್ತಿ ಕದನ, ಯಾರು ಗೆದ್ದರೂ ಇತಿಹಾಸ

Rahul Dravid
ಕ್ರಿಕೆಟ್10 mins ago

Rahul Dravid: ರೋಹಿತ್​, ಕೊಹ್ಲಿ, ಪಂತ್​ ಸೇರಿ ಎಲ್ಲ ಆಟಗಾರರಿಗೆ ಖಡಕ್​ ಎಚ್ಚರಿಕೆ ನೀಡಿದ ಕೋಚ್​ ದ್ರಾವಿಡ್​

Kannada New Movie Mandela nari shrinivas
ಸ್ಯಾಂಡಲ್ ವುಡ್10 mins ago

Kannada New Movie: `ಮಂಡೇಲಾ’ ಚಿತ್ರಕ್ಕೆ ನಾರಿ ಶ್ರೀನಿವಾಸ್ ನಾಯಕ!

Election Result 2024
ಪ್ರಮುಖ ಸುದ್ದಿ16 mins ago

Election Result 2024: ಇಂಡಿ ಒಕ್ಕೂಟ ಸಭೆ ಸೇರಿದ್ದ ಸ್ಥಳದಲ್ಲೇ ವಾಸ್ತುದೋಷ, ಅಂದು ಅಮವಾಸ್ಯೆ ಬೇರೆ; ಹಾಗಾಗಿ…

Fact Check
Fact Check28 mins ago

Fact Check: ಸೋಲುವ ಭೀತಿಯಲ್ಲಿ ಬ್ಯಾಂಕಾಕ್‌ಗೆ ಹಾರಲು ಸಿದ್ಧರಾದ್ರಾ ರಾಹುಲ್‌ ಗಾಂಧಿ? ವೈರಲ್‌ ಆಗಿರುವ ಬೋರ್ಡಿಂಗ್‌ ಪಾಸ್‌ನ ಅಸಲಿಯತ್ತೇನು?

Benefits Of Walk After Meal
ಆರೋಗ್ಯ32 mins ago

Benefits Of Walk After Meal: ಊಟದ ಬಳಿಕ ಲಘುವಾದ ವಾಕಿಂಗ್‌ ಮಾಡಿ, ಆರೋಗ್ಯದಲ್ಲಿನ ಬದಲಾವಣೆ ನೋಡಿ!

Dead Body Found Bodies found floating in Cauvery river
ಕ್ರೈಂ37 mins ago

Dead Body Found : ಕಾವೇರಿ ನದಿಯಲ್ಲಿ ತೇಲಿ ಬಂದ ಶವಗಳು; ನೋಡಲು ಮುಗಿಬಿದ್ದ ಜನರು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌