Job News | ಸ್ಯಾಮ್‌ಸಂಗ್‌ನಿಂದ ಒಂದು ಸಾವಿರ ಎಂಜಿನಿಯರ್‌ಗಳ ನೇಮಕ - Vistara News

ಉದ್ಯೋಗ

Job News | ಸ್ಯಾಮ್‌ಸಂಗ್‌ನಿಂದ ಒಂದು ಸಾವಿರ ಎಂಜಿನಿಯರ್‌ಗಳ ನೇಮಕ

ಸ್ಯಾಮ್‌ಸಂಗ್‌ ಕಂಪನಿಯು ದೇಶಾದ್ಯಂತ ಇರುವ ತನ್ನ ಸಂಶೋಧನಾ ಘಟಕಗಳಲ್ಲಿ ಕಾರ್ಯನಿರ್ವಹಿಸಲು ಪ್ರತಿಭಾವಂತ ಎಂಜಿನಿಯರ್‌ಗಳನ್ನು ನೇಮಕ (Job News) ಮಾಡಿಕೊಳ್ಳುತ್ತಿದೆ. ಮುಂದಿನ ವರ್ಷವೇ ಈ ನೇಮಕ ನಡೆಯಲಿದೆ.

VISTARANEWS.COM


on

Job News
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗುರುಗ್ರಾಮ: ಮೊಬೈಲ್‌ ತಯಾರಿಕೆಯಲ್ಲಿ ಮುಂಚುಣಿಯಲ್ಲಿರುವ ಸ್ಯಾಮ್‌ಸಂಗ್‌ ದೇಶಾದ್ಯಂತ ಇರುವ ತನ್ನ ಸಂಶೋಧನಾ ಘಟಕಗಳಲ್ಲಿ ಕಾರ್ಯನಿರ್ವಹಿಸಲು ಒಂದು ಸಾವಿರ ಎಂಜಿನಿಯರ್‌ಗಳನ್ನು ನೇಮಕ ಮಾಡಿಕೊಳ್ಳುವುದಾಗಿ (Job News) ಪ್ರಕಟಿಸಿದೆ.

2023ರ ವೇಳೆಗೆ ಈ ಎಂಜಿನಿಯರ್‌ಗಳನ್ನು ಕೆಲಸಕ್ಕೆ ತೆಗೆದುಕೊಳ್ಳಲಾಗುವುದು ಎಂದು ಕಂಪನಿಯು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ. ನವ ಯುಗದ ತಂತ್ರಜ್ಞಾನಗಳಾದ ಆರ್ಟಿಫಿಷಿಯಲ್‌ ಇಂಟಲಿಜೆನ್ಸಿ (ಎಐ), ಮೆಷಿನ್‌ ಲರ್ನಿಂಗ್‌ (ಎಂಎಲ್‌), ಡೀಪ್‌ ಲರ್ನಿಂಗ್‌, ಇಮೇಪ್‌ ಪ್ರೊಸೆಸಿಂಗ್‌, ಇಂಟರ್ನೆಟ್‌ ಆಫ್‌ ಥಿಂಗ್ಸ್‌, ಕನೆಕ್ಟಿವಿಟಿ, ಕ್ಲೌಡ್‌, ಬಿಗ್‌ ಡೇಟಾ, ಬಿಸ್ನೆಸ್‌ ಇಂಟಲಿಜೆನ್ಸಿ, ಪ್ರೆಡಿಕ್ಟೀವ್‌ ಅನಾಲಿಸೀಸ್‌, ಕಮ್ಯುನಿಕೇಷನ್‌ ನೆಟ್‌ವರ್ಕ್‌, ಸಿಸ್ಟಮ್‌ ಆನ್‌ ಎ ಚಿಪ್‌ ಮತ್ತು ಸ್ಟೋರೇಜ್‌ ಸಲ್ಯೂಷನ್‌ ಕುರಿತು ಈ ಎಂಜಿನಿಯರ್‌ಗಳು ಸಂಶೋಧನೆ ನಡೆಸಲಿದ್ದಾರೆ ಎಂದು ಅದು ಹೇಳಿದೆ.

“ಅತ್ಯಾಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಸ್ಯಾಮ್‌ಸಂಗ್‌ನ ಸಂಶೋಧನೆ ಮತ್ತು ಅಭಿವೃದ್ಧಿ ಘಟಕಗಳಿಗೆ ಈ ನೇಮಕ ನಡೆಯುತ್ತಿದೆ. ಭಾರತದ ಪ್ರತಿಷ್ಠಿತ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಕಲಿತ ಪ್ರತಿಭಾವಂತ ಎಂಜಿನಿಯರ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ತಂತ್ರಜ್ಞಾನ, ಉತ್ಪನ್ನ, ವಿನ್ಯಾಸ, ಭಾರತೀಯ ಅಗತ್ಯಕ್ಕೆ ತಕ್ಕಂತೆ ಮೊಬೈಲ್‌ಗಳನ್ನು ರೂಪಿಸುವುದು ಮತ್ತಿತರ ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಇವರುಗಳು ಸಂಶೋಧನೆ ನಡೆಸಲಿದ್ದಾರೆʼʼ ಎಂದು ಸ್ಯಾಮ್‌ಸಂಗ್‌ ಇಂಡಿಯಾದ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಸಮೀರ್‌ ವಾದ್ವಾನ್‌ ಹೇಳಿದ್ದಾರೆ.

ವಿವಿಧ ಸ್ಟ್ರೀಮ್‌ಗಳಲ್ಲಿ ಅಂದರೆ ಕಂಪ್ಯೂಟರ್‌ ಸೈನ್ಸ್‌, ಇನ್ಫಾರ್ಮೆಷನ್‌ ಟೆಕ್ನಾಲಜಿ, ಎಲೆಕ್ಟ್ರಾನಿಕ್ಸ್‌, ಇನ್‌ಸ್ಟ್ರುಮೆಂಟೇಷನ್‌, ಕಮ್ಯುನಿಕೇಷನ್‌ ನೆರ್ಟ್‌ವರ್ಕ್‌ ಇತ್ಯಾದಿಗಳನ್ನು ಓದಿದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಇದಲ್ಲದೆ, ಗಣಿತ, ಕಂಪ್ಯೂಟಿಂಗ್‌ ಮತ್ತು ಸಾಫ್ಟ್‌ವೇರ್‌ ಎಂಜಿನಿಯರಿಂಗ್‌ ಕಲಿತವರಿಗೂ ಅವಕಾಶ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಒಂದು ಸಾವಿರ ಎಂಜಿನಿಯರ್‌ಗಳಲ್ಲಿ 200 ಎಂಜಿನಿಯರ್‌ಗಳನ್ನು ಐಐಟಿಗಳಿಂದ ನೇಮಕ ಮಾಡಿಕೊಳ್ಳಲಾಗುತ್ತದೆ.

ನೇಮಕ ಹೇಗೆ?
ಸ್ಯಾಮ್‌ಸಂಗ್‌ ಕಂಪನಿಯು ಪ್ರತಿಭಾವಂತರನ್ನು ಕ್ಯಾಂಪಸ್‌ ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳುತ್ತದೆ. ಅನುಭವಿಗಳನ್ನು ನೇರವಾಗಿಯೂ ನೇಮಕ ಮಾಡಿಕೊಳ್ಳುವುದುಂಟು. ನೇಮಕಾತಿಯ ಮಾಹಿತಿಯನ್ನು ಕಂಪನಿಯು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಆಗಾಗ ನೀಡುತ್ತಿರುತ್ತದೆ. ಅಲ್ಲದೆ ಕಂಪನಿಯ ಸಾಮಾಜಿಕ ಜಾಲತಾಣಗಳಲ್ಲಿಯೂ ಇದನ್ನು ಹಂಚಿಕೊಳ್ಳುತ್ತದೆ. ಇತ್ತೀಚೆಗೆ ಸ್ಯಾಮ್‌ಸಂಗ್‌ ಕಂಪನಿಯ ಹೆಸರಿನಲ್ಲಿಯೂ ವಂಚಕರು ಉದ್ಯೋಗ ನೀಡುವುದಾಗಿ ಅಭ್ಯರ್ಥಿಗಳನ್ನು ವಂಚಿಸಿದ ಪ್ರಕರಣಗಳು ವರದಿಯಾಗಿದ್ದವು. ಹೀಗಾಗಿ ಆಕಾಂಕ್ಷಿಗಳು ಎಚ್ಚರಿಕೆಯಿಂದ ಇರಬೇಕೆಂದು ಕಂಪನಿಯು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಕಂಪನಿಯ ಅಧಿಕೃತ ವೆಬ್‌ ಸೈಟ್‌: www.samsung.com/in

ಭಾರತದಲ್ಲಿರುವ ಸ್ಯಾಮ್‌ಸಂಗ್‌ನ ಸಂಶೋಧನಾ ಘಟಕಗಳು ಇದುವರೆಗೆ ಸುಮಾರು 7,500 ಪೇಟೆಂಟ್‌ಗಳಿಗೆ ಅರ್ಜಿ ಸಲ್ಲಿಸಿವೆ. ಮಲ್ಟಿ ಕ್ಯಾಮರಾ ಸಲ್ಯೂಷನ್‌, ಟೆಲಿವಿಷನ್ಸ್‌, ಡಿಜಿಟಲ್‌ ಅಪ್ಲಿಕೇಷನ್ಸ್‌, 5G ಮೊಬೈಲ್‌ ಸಿಸ್ಟಮ್‌ ಹೀಗೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಲ್ಲಿ ಸಂಶೋಧನೆ ನಡೆಯುತ್ತಿದೆ. ಮೊಬೈಲ್‌ ಮಾತ್ರವಲ್ಲದೆ, ಸ್ಮಾರ್ಟ್‌ ವಾಚ್‌, ನೆಟ್‌ವರ್ಕ್‌ ಎಕ್ಯುಪ್‌ಮೆಂಟ್‌ಗಳ ಕುರಿತೂ ಸಂಶೋಧನೆಗಳು ನಡೆಯುತ್ತಿವೆ. ಉತ್ಪನ್ನಗಳ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಚುರುಕುಗೊಳಿಸಲು ಈ ನೇಮಕ ನಡೆಯುತ್ತಿದೆ.

ಇದನ್ನೂ ಓದಿ | 5G | ಕಳೆದ 12 ತಿಂಗಳಲ್ಲಿ ಟೆಲಿಕಾಂ ಸಂಬಂಧಿತ ಉದ್ಯೋಗ ಹೆಚ್ಚಳ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Job News: ನಿಗಮ-ಮಂಡಳಿ ನೇಮಕಾತಿ; 684 ಹುದ್ದೆವಾರು ಪರಿಷ್ಕೃತ ಅಂಕಪಟ್ಟಿ ಪ್ರಕಟ

Job News: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಯ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕೆಇಎ ಪ್ರಕಟಿಸಿದೆ.

VISTARANEWS.COM


on

Job News
Koo

ಬೆಂಗಳೂರು: ಕಿಯೋನಿಕ್ಸ್, ಎಂಎಸ್ಐಎಲ್ ಸೇರಿ ಐದು ನಿಗಮ-ಮಂಡಳಿಗಳ ವಿವಿಧ ವೃಂದದ 684 ಹುದ್ದೆಗಳ (Job News) ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ 6,18,148 ಅಭ್ಯರ್ಥಿಗಳು ಪಡೆದ ಅಂಕಗಳ ಹುದ್ದೆವಾರು ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಶುಕ್ರವಾರ ಬಿಡುಗಡೆ ಮಾಡಿದೆ.

ಏ.22ರಂದು ಪ್ರಕಟಿಸಿದ್ದ ತಾತ್ಕಾಲಿಕ ಅಂಕ ಪಟ್ಟಿಗೆ ಬಂದ ಆಕ್ಷೇಪಣೆಗಳನ್ನು ಪರಿಶೀಲಿಸಿದ ನಂತರ ಈ ಪರಿಷ್ಕೃತ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ (386), ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ (186), ಎಂಎಸ್ಐಎಲ್ (72), ಕಿಯೋನಿಕ್ಸ್ (26), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ (14) ವಿವಿಧ ವೃಂದದ ಒಟ್ಟು 684 ಹುದ್ದೆಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಪರಿಷ್ಕೃತ ಅಂಕ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಇದೇ ಜೂನ್ 14ರೊಳಗೆ ಇ-ಮೇಲ್ (kea2023exam@gmail.com) ಮೂಲಕ ಸಲ್ಲಿಸಬೇಕು ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ | Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

ರೈಲ್ವೆ ಇಲಾಖೆಯಲ್ಲಿನ 1,202 ಹುದ್ದೆಗಳಿಗೆ ಐಟಿಐ ಪಾಸಾದವರು ಆನ್‌ಲೈನ್‌ ಮೂಲಕ ಇಂದೇ ಅರ್ಜಿ ಸಲ್ಲಿಸಿ

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅದರಲ್ಲಿಯೂ ಹೆಚ್ಚಿನ ಯುವ ಜನತೆ ಸರ್ಕಾರಿ ಕೆಲಸ ಪಡೆಯಬೇಕು ಎನ್ನುವ ಆಕಾಂಕ್ಷೆ ಹೊತ್ತಿರುತ್ತಾರೆ. ಅಂತಹವರಿಗೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ರೈಲ್ವೆ ಇಲಾಖೆ ಖಾಲಿ ಇರುವ ವಿವಿಧ 1,202 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಗ್ನೇಯ ರೈಲ್ವೆಯ ನೇಮಕಾತಿ ಕೋಶ (South Eastern Railway Recruitment Cell) ಖಾಲಿ ಇರುವ ಲೋಕೋ ಪೈಲಟ್‌ ಮತ್ತು ಟ್ರೈನ್ಸ್‌ ಮ್ಯಾನೇಜರ್‌ ಹುದ್ದೆಗಳಿಗೆ ಎಸ್ಸೆಸ್ಸೆಲ್ಸಿ, ಐಟಿಐ, ಪದವಿ ತೇರ್ಗಡೆಯಾದವರನ್ನು ನೇಮಿಸಿಕೊಳ್ಳುತ್ತಿದೆ (RRC SER Recruitment 2024). ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಜೂನ್‌ 12 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಅಸಿಸ್ಟಂಟ್‌ ಲೋಕೋ ಪೈಲಟ್‌ – 827 ಮತ್ತು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) – 375 ಹುದ್ದೆಗಳಿವೆ. ಅಸಿಸ್ಟಂಟ್‌ ಲೋಕೋ ಪೈಲಟ್‌ ಹುದ್ದೆಗೆ ಅರ್ಜಿ ಸಲ್ಲಿಸುವವರು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಜತೆಗೆ ಐಟಿಐ ಪಾಸ್‌ ಮಾಡಿರಬೇಕು ಅಥವಾ ಅಂಗೀಕೃತ ಸಂಸ್ಥೆಯಿಂದ ಎಂಜಿನಿಯರಿಂಗ್‌ನಲ್ಲಿ 3 ವರ್ಷದ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು. ಇನ್ನು ಟ್ರೈನ್ಸ್‌ ಮ್ಯಾನೇಜರ್‌ (ಗೂಡ್ಸ್‌ ಗಾರ್ಡ್‌) ಹುದ್ದೆಗೆ ಅರ್ಜಿ ಸಲ್ಲಿಸುವವರು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ವಯೋಮಿತಿ ಮತ್ತು ಅರ್ಜಿ ಶುಲ್ಕ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 42 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ. ಯಾರಿಗೂ ಅರ್ಜಿ ಶುಲ್ಕವಿಲ್ಲ.

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಯ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 5,200 ರೂ. – 20,200 ರೂ. ಮಾಸಿಕ ವೇತನ ದೊರೆಯಲಿದೆ.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ನೀವು ಅರ್ಜಿ ಸಲ್ಲಿಸಬೇಕಾದ ಹುದ್ದೆಯನ್ನು ಆಯ್ಕೆ ಮಾಡಿ ಅದರ ಮೇಲೆ ಕ್ಲಿಕ್‌ ಮಾಡಿ (South Eastern Railway Trains Manager (Goods Guard) ಅಥವಾ South Eastern Railway Assistant Loco Pilot (ALP))
  • ಪುಟದ ಕೆಳಗಡೆ ಕಾಣಿಸುವ Apply Now ಬಟನ್‌ ಆಯ್ಕೆ ಮಾಡಿ.
  • ನಿಮ್ಮ ಇಮೇಲ್‌ ಐಡಿ, ಫೋನ್‌ ನಂಬರ್‌ ಬಳಸಿ ಹೆಸರು ನೋಂದಾಯಿಸಿ.
  • ರಿಜಿಸ್ಟರ್‌ ನಂಬರ್‌, ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ. ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Sumbit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Continue Reading

ಉದ್ಯೋಗ

Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Job Alert: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection) ಬೃಹತ್‌ ನೇಮಕಾತಿಗೆ ಮುಂದಾಗಿದೆ. ದೇಶದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 9,923 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IBPS RRB Recruitment 2024). ಆಫೀಸರ್, ಕಚೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳಿದ್ದು, ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್‌ 27.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಅಂತಹವರ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಯಾಕೆಂದರೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection) ಬೃಹತ್‌ ನೇಮಕಾತಿಗೆ ಮುಂದಾಗಿದೆ. ದೇಶದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 9,923 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IBPS RRB Recruitment 2024). ಆಫೀಸರ್, ಕಚೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳಿದ್ದು, ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್‌ 27 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕಚೇರಿ ಸಹಾಯಕ – 5,538 ಹುದ್ದೆ, ಆಫೀಸರ್ ಸ್ಕೇಲ್ 1 – 2,485 ಹುದ್ದೆ, ಆಫೀಸರ್ ಸ್ಕೇಲ್ 2 – 315 ಹುದ್ದೆ, ಆಫೀಸರ್ ಸ್ಕೇಲ್ 2 – 68 ಹುದ್ದೆ, ಆಫೀಸರ್ ಸ್ಕೇಲ್ 2 – 21 ಹುದ್ದೆ, ಆಫೀಸರ್ ಸ್ಕೇಲ್ 2 – 24 ಹುದ್ದೆ, ಆಫೀಸರ್ ಸ್ಕೇಲ್ 2 – 8 ಹುದ್ದೆ, ಆಫೀಸರ್ ಸ್ಕೇಲ್ 2 – 3 ಹುದ್ದೆ, ಆಫೀಸರ್ ಸ್ಕೇಲ್ 2 – 59 ಹುದ್ದೆ, ಆಫೀಸರ್ ಸ್ಕೇಲ್ 3 – 73 ಹುದ್ದೆಗಳಿವೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಆಫೀಸರ್ ಸ್ಕೇಲ್ 1 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಆಫೀಸರ್ ಸ್ಕೇಲ್ 2 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ. ಆಫೀಸರ್ ಸ್ಕೇಲ್ 3 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ. ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 850 ರೂ. ಮತ್ತು ಪ.ಜಾ. / ಪ.ಪಂ. / ಅಂಗವಿಕಲ ಅಭ್ಯರ್ಥಿಗಳು 175 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಇಂಟರ್‌ನೆಟ್‌ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Continue Reading

ಪ್ರಮುಖ ಸುದ್ದಿ

Unemployment Rate : ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಒಂದೇ ವರ್ಷದಲ್ಲಿ ಶೇಕಡಾ 4 ಇಳಿಕೆ; ವರದಿ

Unemployment Rate : ಹಿಂದಿನ ವರ್ಷಕ್ಕೆ ಹೋಲಿಸಿದರೆ 2023ರಲ್ಲಿ ಭಾರತದಲ್ಲಿ ಹೈ ನೆಟ್​ ವರ್ಥ್​ ಇಂಡಿವಿಜುಯಲ್ಸ್- HNWI (10 ಲಕ್ಷ ಡಾಲರ್​ಗೂ ಹೆಚ್ಚು ಆಸ್ತಿ ಹೊಂದಿರುವ ವ್ಯಕ್ತಿಗಳನ್ನು ಈ ರೀತಿ ಹೇಳಲಾಗುತ್ತದೆ) ​ ಸಂಖ್ಯೆ ಶೇಕಡಾ 12.2 ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಎಚ್ಎನ್​ಡಬ್ಲ್ಯು ಐ ಸಂಪತ್ತು 2022 ರಲ್ಲಿ 1,286.7 ಬಿಲಿಯನ್ ಡಾಲರ್​ನಿಂದ 2023 ರಲ್ಲಿ ಶೇಕಡಾ 12.4 ರಷ್ಟು ಏರಿಕೆಯಾಗಿದ್ದು, 1,445.7 ಬಿಲಿಯನ್ ಡಾಲರ್​ಗೆ ತಲುಪಿದೆ

VISTARANEWS.COM


on

Unemployment Rate
Koo

ನವದೆಹಲಿ: ಕಳೆದ ಒಂದು ವರ್ಷದಲ್ಲಿ ಭಾರತವು ಉದ್ಯೋಗದ ಪ್ರಮಾಣದಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದೆ ಎಂದು ವರದಿಯೊಂದು ಹೇಳಿದೆ ಭಾರತದ ನಿರುದ್ಯೋಗ ದರವು 2023ರಲ್ಲಿ ಶೇಕಡಾ 3.1 ಕ್ಕೆ ಇಳಿಕೆಯಾಗಿದ್ದು. ಇದು 2022 ರಲ್ಲಿ ಶೇಕಡಾ 7 ರಷ್ಟಿತ್ತು ಎಂದು ಕ್ಯಾಪ್​ಜೆಮಿನಿ ರೀಸರ್ಚ್​ ಸೆಂಟರ್​ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಜಿಡಿಪಿಯಲ್ಲಿನ ಒಟ್ಟು ಶೇಕಡಾವಾರು ರಾಷ್ಟ್ರೀಯ ಉಳಿತಾಯವು 2022 ರಲ್ಲಿ ಶೇಕಡಾ 29.9 ಕ್ಕೆ ಹೋಲಿಸಿದರೆ 2023 ರಲ್ಲಿ ಶೇಕಡಾ 33.4 ಕ್ಕೆ ಏರಿಕೆಯಾಗಿದೆ ಎಂದೂ ವರದಿ ಹೇಳಿದೆ.

ಹಿಂದಿನ ವರ್ಷಕ್ಕೆ ಹೋಲಿಸಿದರೆ 2023ರಲ್ಲಿ ಭಾರತದಲ್ಲಿ ಹೈ ನೆಟ್​ ವರ್ಥ್​ ಇಂಡಿವಿಜುಯಲ್ಸ್- HNWI (10 ಲಕ್ಷ ಡಾಲರ್​ಗೂ ಹೆಚ್ಚು ಆಸ್ತಿ ಹೊಂದಿರುವ ವ್ಯಕ್ತಿಗಳನ್ನು ಈ ರೀತಿ ಹೇಳಲಾಗುತ್ತದೆ) ​ ಸಂಖ್ಯೆ ಶೇಕಡಾ 12.2 ರಷ್ಟು ಹೆಚ್ಚಾಗಿದೆ. ದೇಶದಲ್ಲಿ ಎಚ್ಎನ್​ಡಬ್ಲ್ಯು ಐ ಸಂಪತ್ತು 2022 ರಲ್ಲಿ 1,286.7 ಬಿಲಿಯನ್ ಡಾಲರ್​ನಿಂದ 2023 ರಲ್ಲಿ ಶೇಕಡಾ 12.4 ರಷ್ಟು ಏರಿಕೆಯಾಗಿದ್ದು, 1,445.7 ಬಿಲಿಯನ್ ಡಾಲರ್​ಗೆ ತಲುಪಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಈ ವಿಚಾರದಲ್ಲಿ ಜಾಗತಿಕವಾಗಿ ಭಾರತ ಮತ್ತು ಆಸ್ಟ್ರೇಲಿಯಾ ಅತ್ಯುತ್ತಮವಾಗಿದೆ. ಇಲ್ಲಿ ಎಚ್ಎನ್​ಡಬ್ಲ್ಯುಐ ಸಂಪತ್ತಿನ ಬೆಳವಣಿಗೆಯನ್ನು ಕ್ರಮವಾಗಿ ಶೇಕಡಾ 12.4 ಮತ್ತು ಶೇಕಡಾ 7.9 ಮತ್ತು ಎಚ್​ಎನ್​ಡಬ್ಲ್ಯು ಜನಸಂಖ್ಯೆಯ ಬೆಳವಣಿಗೆ ಕ್ರಮವಾಗಿ ಶೇಕಡಾ 12.2 ಮತ್ತು ಶೇಕಡಾ 7.8 ರಷ್ಟು ದಾಖಲಾಗಿದೆ.

ಈ ಎರಡೂ ದೇಶಗಳಲ್ಲಿನ ಸಂಪತ್ತಿನ ಬೆಳವಣಿಗೆಯು ಸ್ಥಿರ ಆರ್ಥಿಕತೆ ಮತ್ತು ಈಕ್ವಿಟಿ ಮಾರುಕಟ್ಟೆಗಳ ದೃಢವಾದ ಕಾರ್ಯಕ್ಷಮತೆ ಆಗಿದೆ ಎಂದು ವರದಿ ತೋರಿಸಿವೆ. ಕಳೆದ ಆರು ತ್ರೈಮಾಸಿಕಗಳಲ್ಲಿ ಭಾರತದ ಆರ್ಥಿಕತೆಯು ತನ್ನ ತ್ವರಿತ ಗತಿಯಲ್ಲ ಬೆಳೆದಿದೆ. ಇದು ದೃಢವಾದ ಖಾಸಗಿ ಬಳಕೆ ಮತ್ತು ಉತ್ಪಾದನೆ ಮತ್ತು ನಿರ್ಮಾಣ ಚಟುವಟಿಕೆಗಳಲ್ಲಿನ ಸಕಾರಾತ್ಮಕ ಪ್ರವೃತ್ತಿಗಳಿಂದ ಆಗಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: Lok Sabha Election : ಶತಕ ಬಾರಿಸಿದ ಕಾಂಗ್ರೆಸ್​​; ಪಕ್ಷೇತರನ ಬೆಂಬಲದೊಂದಿಗೆ ಕಾಂಗ್ರೆಸ್​ನ ಸೀಟ್​ಗಳ ಸಂಖ್ಯೆ 100ಕ್ಕೆ ಏರಿಕೆ

2022 ರಲ್ಲಿ ಶೇಕಡಾ 6 ರಷ್ಟು ಹೆಚ್ಚಳದ ನಂತರ ದೇಶದ ಮಾರುಕಟ್ಟೆ ಬಂಡವಾಳೀಕರಣವು ಕಳೆದ ವರ್ಷ ಶೇಕಡಾ 29 ರಷ್ಟು ಹೆಚ್ಚಾಗಿದೆ. ಸುಧಾರಿತ ಬಂಡವಾಳ ವೆಚ್ಚ, ಬಲವಾದ ಬ್ಯಾಂಕಿಂಗ್ ವ್ಯವಸ್ಥೆ, ಸಾಲದ ಬೆಳವಣಿಗೆ, ವಾಹನಗಳು ಮತ್ತು ವಿದ್ಯುತ್​ಗೆ ಹೆಚ್ಚಿದ ಬೇಡಿಕೆ ಮತ್ತು ಡಿಜಿಟಲೀಕರಣ-ಚಾಲಿತ ಉತ್ಪಾದನೆಗಳ ಹೆಚ್ಚಳದಂತಹ ಅಂಶಗಳು ಈ ಪ್ರವೃತ್ತಿಯನ್ನು ಹೆಚ್ಚಿಸಿದೆ ಎಂದು ವರದಿಯು ತಿಳಿಸಿದೆ.

ವಿದೇಶಿ ಬಂಡವಾಳ ಹೂಡಿಕೆ (ಎಫ್ಪಿಐ) ಹರಿವು 2023-24ರಲ್ಲಿ ಗಮನಾರ್ಹ ಏರಿಕೆ ಕಂಡಿದೆ. ಒಟ್ಟು ಎಫ್ಪಿಐ ಒಳಹರಿವು 24.9 ಬಿಲಿಯನ್ ಡಾಲರ್ (ಡಿಸೆಂಬರ್ 6 ರವರೆಗೆ) ಹಿಂದಿನ ಎರಡು ವರ್ಷಗಳ ನಿವ್ವಳ ಹೊರಹರಿವಿಗೆ ಹೋಲಿಸಿದರೆ ಹೆಚ್ಚಾಗಿದೆ ಎಂದು ವರದಿ ತಿಳಿಸಿದೆ.

Continue Reading

ಶಿಕ್ಷಣ

NEET UG 2024: ನೀಟ್‌ನಲ್ಲಿ ಹೆಚ್ಚು ಅಂಕ ಗಳಿಸಲು ಏನು ಮಾಡಬೇಕು? ಈ ಟಾಪರ್‌ ಹೇಳೋದು ಕೇಳಿ

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ (NEET UG 2024) ಮಹಾರಾಷ್ಟ್ರ ನಾಗ್ಪುರದ ವೇದ್ ಸುನೀಲ್‌ಕುಮಾರ್ ಶೆಂದೆ ಅವರು ಭಾರತದಲ್ಲೇ ಅಗ್ರ ಸ್ಥಾನವನ್ನು ಗಳಿಸಿದ್ದು, ಇವರು ಶೇ. 99.99 ಅಂಕಗಳೊಂದಿಗೆ ಅಖಿಲ ಭಾರತ ಶ್ರೇಣಿ (AIR) 1 ಅನ್ನು ಗಳಿಸಿದ್ದಾರೆ. ಈ ಕುರಿತು ಅವರು ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ.

VISTARANEWS.COM


on

By

NEET UG 2024
Koo

ಮಹಾರಾಷ್ಟ್ರ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿರುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆಯಲ್ಲಿ (NEET-UG) ಮಹಾರಾಷ್ಟ್ರ (maharastra) ನಾಗ್ಪುರದ ವೇದ್ ಸುನೀಲ್‌ಕುಮಾರ್ ಶೆಂದೆ (Ved Sunilkumar Shende) ಅವರು ಭಾರತದಲ್ಲೇ (India) ಅಗ್ರ ಸ್ಥಾನವನ್ನು ಗಳಿಸಿದ್ದಾರೆ. ಇವರು ಶೇ. 99.99 ಅಂಕಗಳನ್ನು ಗಳಿಸಿ ಅಖಿಲ ಭಾರತ ಶ್ರೇಣಿ (AIR) 1 ಅನ್ನು ಗಳಿಸಿದ್ದಾರೆ.

ತಮ್ಮ ಈ ಸಾಧನೆಯ ಕುರಿತು ಮಾತನಾಡಿರುವ ಅವರು, ನೀಟ್ ಫಲಿತಾಂಶದಿಂದ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ. ಎರಡು ವರ್ಷಗಳ ಕಾಲ ಶ್ರದ್ಧೆಯಿಂದ ಪರೀಕ್ಷೆಗೆ ತಯಾರಿ ನಡೆಸಿರುವ ಅವರು ತಮ್ಮ ಅನುಭವವನ್ನು ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ.

ಎನ್‌ಸಿಇಆರ್‌ಟಿ ಪಠ್ಯಪುಸ್ತಕ ಅಧ್ಯಯನ ಮತ್ತು ಮಾದರಿ ಪ್ರಶ್ನೆಗಳನ್ನು ಅಭ್ಯಾಸ ಮಾಡುವುದರ ಮೇಲೆ ಹೆಚ್ಚು ಗಮನ ಕೇಂದ್ರೀಕರಿಸಿದೆ. ನಿರಂತರ ಪರೀಕ್ಷೆಗಳನ್ನು ನಡೆಸಿ ಅಭ್ಯಾಸ ನಡೆಸುತ್ತಿದ್ದೆ. ನಿರಂತರ ಪರೀಕ್ಷೆಗಳನ್ನು ಬರೆಯುತ್ತಿದ್ದೆ. ಪರೀಕ್ಷೆಗಳನ್ನು ಹೊರತುಪಡಿಸಿ ಸಾಮಾನ್ಯವಾಗಿ ಆರು ಗಂಟೆಗಳ ಕಾಲ ಅಧ್ಯಯನಕ್ಕೆ ಮೀಸಲಿಡುತ್ತಿದ್ದೆ ಎಂದು ಅವರು ತಿಳಿಸಿದ್ದಾರೆ.

ಸಮಯ ನಿರ್ವಹಣೆಯ ಕುರಿತು ಮಾತನಾಡಿರುವ ಅವರು, ಬೆಳಗ್ಗೆ 4 ಗಂಟೆಗೆ ಎದ್ದು ಪೂರ್ಣ ಪಠ್ಯಕ್ರಮ ಪರೀಕ್ಷೆಗಳನ್ನು ಅಭ್ಯಾಸ ಮಾಡುತ್ತೇನೆ. ಆಗಾಗ ವಿರಾಮದೊಂದಿಗೆ ಮತ್ತು ನಿಗದಿತ ಸಮಯವಿಲ್ಲದೆ ಒಟ್ಟು ಆರರಿಂದ ಎಂಟು ಗಂಟೆಗಳ ಕಾಲ ಅಧ್ಯಯನ ಮಾಡಿದ್ದೇನೆ ಹೇಳಿದ್ದಾರೆ.

ನನಗೆ ಯಾವುದೇ ಒತ್ತಡವಿರಲಿಲ್ಲ. ಕೊನೆಯವರೆಗೂ ಆಸಕ್ತಿಯಿಂದಲೇ ಅಧ್ಯಯನ ನಡೆಸಿದ್ದೇನೆ ಎಂದು ಹೇಳಿದ ಅವರು, ಅಧ್ಯಯನದ ವೇಳೆಯಲ್ಲಿ ನಾನು ಯಾವುದೇ ಒತ್ತಡವನ್ನು ಅನುಭವಿಸಲಿಲ್ಲ. ಆದರೆ ಹೆಚ್ಚು ಅಧ್ಯಯನಕ್ಕೆ ಒತ್ತು ಕೊಟ್ಟಿದ್ದರಿಂದ ನನಗೆ ಆಯಾಸವಾಗಿದ್ದು ನಿಜ ಎಂದಿದ್ದಾರೆ.

ಒತ್ತಡ ನಿರ್ವಹಣೆ ಹೇಗಿತ್ತು?

ಒತ್ತಡ ನಿರ್ವಹಣೆ ಕುರಿತು ಮಾತನಾಡಿರುವ ಅವರು, ದೈನಂದಿನ ಓದಿನಿಂದ ಒತ್ತಡ ಉಂಟಾದಾಗ ಅದನ್ನು ನಿರ್ವಹಿಸುವಲ್ಲಿ ಸ್ನೇಹಿತರು ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ಉತ್ತಮ ಸ್ನೇಹಿತರನ್ನು ಹೊಂದುವುದು ಮುಖ್ಯ ಮತ್ತು ನಾನು ಉತ್ತಮ ಸ್ನೇಹಿತರನ್ನು ಹೊಂದಲು ಅದೃಷ್ಟಶಾಲಿಯಾಗಿದ್ದೇನೆ. ನನ್ನ ಸ್ನೇಹಿತರೊಬ್ಬರು ಸಹ 720 ಅಂಕಗಳನ್ನು ಗಳಿಸಿದರು ಮತ್ತು AIR 1 ಗಳಿಸಿದರು. ಅವರ ಸಮರ್ಪಣೆಯನ್ನು ನೋಡಿ ನನಗೆ ಪ್ರೇರಣೆಯಾಯಿತು. ಯಾಕೆಂದರೆ ಅವರು ನನಗಿಂತ ಹೆಚ್ಚು ಅಧ್ಯಯನ ಮಾಡಿದ್ದಾರೆ. ಅವರು 10-12-14 ಗಂಟೆಗಳ ಕಾಲ ಅಧ್ಯಯನಕ್ಕೆ ಸಮಯ ಮೀಸಲು ಇಟ್ಟಿದ್ದರು. ಆದರೆ ಪರೀಕ್ಷೆಗಳಲ್ಲಿ ನಮ್ಮ ಅಂಕಗಳನ್ನು ಹೋಲಿಸಲಾಗುವುದಿಲ್ಲ ಎಂದರು.

ಭವಿಷ್ಯದ ಕುರಿತು ಮಾತನಾಡಿದ ಅವರು, ಎಐಐಎಂಎಸ್ ದೆಹಲಿಗೆ ಅರ್ಜಿ ಸಲ್ಲಿಸುವ ಯೋಜನೆ ರೂಪಿಸಿರುವುದಾಗಿ ತಿಳಿಸಿದರು.

ಇದನ್ನೂ ಓದಿ: NEET UG Result 2024 : ಮೊದಲ ರ‍್ಯಾಂಕ್‌ ಪಡೆದ 100 ವಿದ್ಯಾರ್ಥಿಗಳಲ್ಲಿ ಕರ್ನಾಟಕದ ಆರು ಮಂದಿ ನೀಟ್‌ ಟಾಪರ್ಸ್‌

ವೈದ್ಯಕೀಯ ವೃತ್ತಿಯ ಒಲವು

ವೈದ್ಯಕೀಯ ವೃತ್ತಿ ಮತ್ತು ಜೀವಶಾಸ್ತ್ರದ ಮೇಲಿನ ಆಸಕ್ತಿಯಿಂದಾಗಿ ಶೆಂಡೆ ಅವರು ನೀಟ್ ಯುಜಿ ಪರೀಕ್ಷೆಯನ್ನು ತೆಗೆದುಕೊಳ್ಳಲು ಒಲವು ತೋರಿರುವುದಾಗಿ ಹೇಳಿದರು.

ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸಹ ಪ್ರಾಧ್ಯಾಪಕಿಯಾಗಿರುವ ಶೆಂಡೆ ಅವರ ತಾಯಿ ಇಂದಿರಾಗಾಂಧಿ ಮತ್ತು ಶೆಂಡೆ ಅವರ ತಂದೆ ಇಎನ್‌ಟಿ ಶಸ್ತ್ರಚಿಕಿತ್ಸಕರಾದ ಸುನೀಲಕುಮಾರ ಶೆಂದೆ ಮಗನ ಸಾಧನೆಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ಆತನ ಕಠಿಣ ಪರಿಶ್ರಮ ಮತ್ತು ಅಧ್ಯಯನದ ಬಗ್ಗೆ ಸ್ಥಿರತೆ ಅಂತಿಮವಾಗಿ ಫಲ ನೀಡಿದೆ. ಕಲಿಸಿದ ವಿಷಯಗಳನ್ನು ಆತ ನಿರಂತರವಾಗಿ ಅಧ್ಯಯನ ನಡೆಸುತ್ತಿದ್ದ. ಎಂದಿಗೂ ಒತ್ತಡಕ್ಕೆ ಒಳಗಾಗಲಿಲ್ಲ; ಕೆಲವೊಮ್ಮೆ ಒತ್ತಡವನ್ನು ನಿವಾರಿಸಲು ಚೆಸ್ ಆಡುತ್ತಿದ್ದ ಎಂದು ತಿಳಿಸಿದರು.

Continue Reading
Advertisement
crime news
ಕರ್ನಾಟಕ5 seconds ago

ಸಂಬಂಧ ಕಡಿಯಲು ಸೆಂಟಿಮೆಂಟ್ ಬೇಕಿಲ್ಲ, ಕ್ಷುಲ್ಲಕ ಕಾರಣ ಸಾಕು; ಪತಿಯ ಪೊಸೇಸೀವ್‌ನೆಸ್‌ಗೆ ಬೇಸತ್ತ ಪತ್ನಿ ಪರಾರಿ

Viral Video
ವೈರಲ್ ನ್ಯೂಸ್7 mins ago

Viral Video: ಗ್ರಹಚಾರ ಕೆಟ್ಟಾಗ ಕಾರಿನ ಚಕ್ರ ಕಳಚಿ ತಲೆಗೆ ಅಪ್ಪಳಿಸಬಹುದು! ವಿಡಿಯೊ ನೋಡಿ

Ramoji Rao passed away
ದೇಶ17 mins ago

Ramoji Rao passed away: ಮಾಧ್ಯಮ ಲೋಕದ ದಿಗ್ಗಜ ಇನ್ನಿಲ್ಲ; ರಾಮೋಜಿ ರಾವ್ ವಿಧಿವಶ

Vastu Tips
ಧಾರ್ಮಿಕ40 mins ago

Vastu Tips: ಮನೆಯ ಗೋಡೆಗಳ ಮೇಲೆ ಎಲ್ಲೆಂದರಲ್ಲಿ ಫೋಟೊ ಅಳವಡಿಸಿದರೆ ಏನಾಗುತ್ತದೆ?

Monsoon Tour
ದೇಶ41 mins ago

Monsoon Tour: ಮಳೆಗಾಲದ ಪ್ರವಾಸಕ್ಕೆ ಸೂಕ್ತ ಬೆಂಗಳೂರು ಸಮೀಪದ ಈ 8 ಅದ್ಭುತ ಸ್ಥಳಗಳು

Karnataka Weather Forecast
ಮಳೆ2 hours ago

Karnataka Weather : ರಾಜ್ಯಾದ್ಯಂತ ಮುಂದುವರಿದ ಮಳೆ; 19 ಜಿಲ್ಲೆಗಳಿಗೆ ಯೆಲ್ಲೋ, ಆರೆಂಜ್‌ ಅಲರ್ಟ್‌

Rishabh Pant
ಪ್ರಮುಖ ಸುದ್ದಿ2 hours ago

Rishabh Pant : ಸಂಜು ಸ್ಯಾಮ್ಸನ್​ ಜತೆಗಿನ ಒಳ ಜಗಳದ ಬಗ್ಗೆ ಸ್ಪಷ್ಟನೆ ನೀಡಿದ ರಿಷಭ್ ಪಂತ್​

Health Tips Kannada
ಆರೋಗ್ಯ2 hours ago

Health Tips Kannada: ಯಾವ ಬೀಜ ತಿಂದರೆ ನಮ್ಮ ಆರೋಗ್ಯಕ್ಕೆ ಏನು ಪ್ರಯೋಜನ?

Health Tips
ಆರೋಗ್ಯ3 hours ago

Health Tips: ಹಿಮೋಗ್ಲೋಬಿನ್ ಮಟ್ಟ ಹೆಚ್ಚಿಸಿಕೊಳ್ಳಬೇಕೆ? ಈ ಆಹಾರ ಸೇವಿಸಿ

Dina Bhavishya
ಭವಿಷ್ಯ3 hours ago

Dina Bhavishya : ಹಣ ಗಳಿಸುವ ವಿವಿಧ ಮಾರ್ಗಗಳಿಗೆ ಈ ರಾಶಿಯವರಿಗೆ ಸಿಗಲಿದೆ ಪುಷ್ಟಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ15 hours ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ4 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ5 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ5 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ6 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು7 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌