Gujarat Election | ಅಡುಗೆ ಅನಿಲ ಸಿಲಿಂಡರ್‌ನೊಂದಿಗೆ ಸೈಕಲ್ ಮೇಲೆ ಬಂದು ವೋಟ್ ಮಾಡಿದ ಕಾಂಗ್ರೆಸ್ ಶಾಸಕ - Vistara News

ದೇಶ

Gujarat Election | ಅಡುಗೆ ಅನಿಲ ಸಿಲಿಂಡರ್‌ನೊಂದಿಗೆ ಸೈಕಲ್ ಮೇಲೆ ಬಂದು ವೋಟ್ ಮಾಡಿದ ಕಾಂಗ್ರೆಸ್ ಶಾಸಕ

ಗುಜರಾತ್‌ನಲ್ಲಿ(Gujarat Election) ಕಾಂಗ್ರೆಸ್ ಶಾಸಕರೊಬ್ಬರು ವಿಶಿಷ್ಟ ರೀತಿಯಲ್ಲಿ ಮತದಾನ ಕೇಂದ್ರಕ್ಕೆ ಆಗಮಿಸಿ ಗಮನ ಸೆಳೆದಿದ್ದಾರೆ.

VISTARANEWS.COM


on

Congress MLA @ Gujarat Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಗುಜರಾತ್‌ ವಿಧಾನಸಭೆ ಚುನಾವಣೆಗೆ (Gujarat Election) ಗುರುವಾರ ಮೊದಲನೆ ಹಂತದ ಮತದಾನ ನಡೆಯುತ್ತಿದ್ದು, ಕಾಂಗ್ರೆಸ್ ಶಾಸಕ ಪರೇಶ್ ಧನಾನಿ ಅವರು ಮತದಾನ ಕೇಂದ್ರಕ್ಕೆ ಸೈಕಲ್ ಮೇಲೆ ಅಡುಗೆ ಅನಿಲ ಸಿಲಿಂಡರ್‌ನೊಂದಿಗೆ ಬಂದು ಗಮನ ಸೆಳೆದರು. ಈ ಮೂಲಕ ಅವರು ಸಿಲಿಂಡರ್ ಬೆಲೆ ಹೆಚ್ಚಳ ವಿರುದ್ಧ ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಿದರು.

ಬಿಜೆಪಿ ಸರ್ಕಾರದ ದುರಾಡಳಿತದ ಫಲವಾಗಿ ಗುಜರಾತ್‌ನಲ್ಲಿ ನಿರುದ್ಯೋಗ ಮತ್ತು ಹಣದುಬ್ಬರ ಹೆಚ್ಚಳವಾಗಿದೆ. ಅಡುಗೆ ಅನಿಲ ಸಿಲಿಂಡರ್ ಮತ್ತು ಇಂಧನ ದರಗಳು ಗಗನಮುಖಿಯಾಗಿವೆ. ಶಿಕ್ಷಣವನ್ನು ಖಾಸಗಿಕರಣಗೊಳಿಸಲಾಗುತ್ತಿದೆ. ಈ ಬಾರಿ ಅಧಿಕಾರದ ಹಸ್ತಾಂತರವಾಗಲಿದ್ದು, ಕಾಂಗ್ರೆಸ್ ಸರ್ಕಾರ ಬರಲಿದೆ ಎಂದು ಅಮ್ರೇಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪರೇಶ್ ಧನಾನಿ ಅವರು ತಮ್ಮ ಮತವನ್ನು ಚಲಾಯಿಸಿ ತಿಳಿಸಿದರು.

ಗುರುವಾರ ಬೆಳಗ್ಗೆ ಮತದಾನ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಹೆಚ್ಚಿನ ಸಂಖ್ಯೆಯಲ್ಲಿ ಜನರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು. ಅದರಲ್ಲೂ ಮೊದಲ ಬಾರಿಗೆ ಮತ ಚಲಾಯಿಸಲು ಅರ್ಹರಾಗಿರುವವರು ತಪ್ಪದೇ ಮತ ಚಲಾಯಿಸಲು ಕೋರಿದರು. ಎರಡನೇ ಹಂತದ ಮತದಾನವು ಡಿಸೆಂಬರ್ 5ರಂದು ನಡೆಯಲಿದ್ದು, ಡಿ.8ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ | Opinion Poll | ಗುಜರಾತ್‌, ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿಗೇ ಅಧಿಕಾರ? ಸಮೀಕ್ಷೆ ಹೇಳುವುದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Mukesh Khanna: ಅಯೋಧ್ಯೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಕೊಟ್ಟ ʼಮಹಾಭಾರತʼದ ಭೀಷ್ಮ

ಭವ್ಯವಾದ ರಾಮ ಮಂದಿರವನ್ನು ಉತ್ತರ ಪ್ರದೇಶದ ಫೈಜಾಬಾದ್ ನಲ್ಲಿ ನಿರ್ಮಿಸಿದ ಬಳಿಕವೂ ಬಿಜೆಪಿಗೆ ಅಲ್ಲಿ ಸೋಲಾಗಿದೆ. ಈ ಕುರಿತು ರಾಮಾಯಣದ ಲಕ್ಷಣ ಪಾತ್ರಧಾರಿ ಈ ಹಿಂದೆ ಪ್ರತಿಕ್ರಿಯೆ ನೀಡಿ ಅಯೋಧ್ಯೆ ಜನರು ದ್ರೋಹ ಮಾಡಿದ್ದಾರೆ ಎಂದು ಹೇಳಿದ್ದರು. ಇದೀಗ ಮಹಾಭಾರತ ಖ್ಯಾತಿಯ ಭೀಷ್ಮ ಪಾತ್ರಧಾರಿ ಮುಖೇಶ್ ಖನ್ನಾ (Mukesh Khanna) ಅವರು ಬಿಜೆಪಿ ಸೋಲಿಗೆ ಕಾರಣವನ್ನು ತಿಳಿಸಿದ್ದಾರೆ.

VISTARANEWS.COM


on

By

Mukesh Khanna
Koo

ಉತ್ತರಪ್ರದೇಶದ (uttaradesh) ಆಯೋಧ್ಯೆಯಲ್ಲಿ (ayodhya) ರಾಮ ಮಂದಿರವನ್ನು (ram mandir) ನಿರ್ಮಿಸಿದ ಮೇಲೂ ಬಿಜೆಪಿಗೆ (bjp) ಲೋಕಸಭಾ ಚುನಾವಣೆಯಲ್ಲಿ (loksabha election) ಸೋಲಾಗಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ. ಕೆಲವು ದಿನಗಳ ಹಿಂದೆ ಈ ಕುರಿತು ಪ್ರತಿಕ್ರಿಯಿಸಿದ್ದ ರಾಮಾಯಣದ (ramayana) ಲಕ್ಷಣ ಪಾತ್ರಧಾರಿ ಅಯೋಧ್ಯೆ ಜನರು ದ್ರೋಹ ಮಾಡಿದ್ದಾರೆ ಎಂದು ಹೇಳಿದ್ದರು. ಇದೀಗ ಮಹಾಭಾರತ (mahabharatha) ಖ್ಯಾತಿಯ ಭೀಷ್ಮ ಪಾತ್ರಧಾರಿ ಮುಖೇಶ್ ಖನ್ನಾ (Mukesh Khanna) ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

ಬಿ.ಆರ್. ಚೋಪ್ರಾ ಅವರ ನಿರ್ದೇಶನದ ಮಹಾಭಾರತದಲ್ಲಿ ಭೀಷ್ಮ ಪಾತ್ರಕ್ಕೆ ಹೆಸರುವಾಸಿಯಾದ ಮುಖೇಶ್ ಖನ್ನಾ 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸೋಲಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಜೂನ್ 4ರಂದು ಘೋಷಿಸಲಾದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಅವರು ಫೈಜಾಬಾದ್ ಕ್ಷೇತ್ರದಲ್ಲಿ ಸಮಾಜದ ಪಕ್ಷದ ಸೌಜೇಶ್ ಪ್ರಸಾದ್ ವಿರುದ್ಧ ಸೋಲು ಅನುಭವಿಸಿದ್ದರು.

ಈ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡ ಮುಖೇಶ್ ಖನ್ನಾ, ಅಯೋಧ್ಯೆಯಲ್ಲಿನ ಚುನಾವಣೆಯಲ್ಲಿ ಬಿಜೆಪಿಯ ಸೋಲು ಭವ್ಯವಾದ ದೇವಾಲಯದ ಜೊತೆಗೆ ಸರ್ಕಾರ ಸುತ್ತಮುತ್ತಲಿನ ಜನ ಜೀವನವನ್ನು ಸುರಕ್ಷಿತಗೊಳಿಸಲು ಪ್ರಯತ್ನಿಸಬೇಕು ಎನ್ನುವುದನ್ನು ಕಲಿಸುತ್ತದೆ. ಲಕ್ಷಾಂತರ ಜನರು ಅಲ್ಲಿ ವಾಸಿಸುತ್ತಿದ್ದಾರೆ. ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ಇಲ್ಲಿ ಸಾಮಾನ್ಯ ಜನರನ್ನು ಬಿಜೆಪಿ ನಿರ್ಲಕ್ಷಿಸಿರುವುದು ಸೋಲಿಗೆ ಕಾರಣ ಎಂದು ತಿಳಿಸಿದ್ದಾರೆ.

ಅಯೋಧ್ಯೆ ಚುನಾವಣಾ ಸೋಲಿನಿಂದ ನಾವು ಕಲಿಯಬೇಕು. ಭವ್ಯ ಮಂದಿರದ ಜೊತೆಗೆ ಹತ್ತಿರದ ಪಟ್ಟಣವಾಸಿಗಳ ಜೀವನವನ್ನು ಅದ್ದೂರಿಯಾಗಿ ಮಾಡಲು ಪ್ರಯತ್ನಿಸಬೇಕು. ಕೋಟಿಗಟ್ಟಲೆ ಬಜೆಟ್ ನಲ್ಲಿ ರಾಮಮಂದಿರವಾಗಲಿ, ಚಾರ್ ಧಾಮವಾಗಲಿ, ಜೈಪುರದ ಬಳಿಯಿರುವ ಖಾತು ಶಾಮ್ ಮಂದಿರವಾಗಲಿ ಅಲ್ಲಿಯ ಜನರ ಸಮಸ್ಯೆಗಳ ಪರಿಹಾರಕ್ಕೆ ಒಂದಿಷ್ಟು ಕೋಟಿಗಳನ್ನು ಇಡಬೇಕು ಎಂದು ಹೇಳಿದ್ದಾರೆ.


ಈ ವರ್ಷದ ಜನವರಿಯಲ್ಲಿ ರಾಮ್ ಮಂದಿರ ಉದ್ಘಾಟನೆಯ ಪವಿತ್ರ ಸಮಾರಂಭವು ಅದ್ದೂರಿಯಾಗಿ ನೆರವೇರಿತ್ತು. ಈ ಬಳಿಕ ಅಯೋಧ್ಯೆ ಇರುವ ಫೈಜಾಬಾದ್ ಕ್ಷೇತ್ರದಲ್ಲಿ ಬಿಜೆಪಿಯ ಸೋಲು ಅನೇಕರಿಗೆ ದೊಡ್ಡ ಆಘಾತವಾಗಿದೆ.
ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಸಂಬಂಧಿಸಿದಂತೆ ಹಲವಾರು ಮಂದಿ ತಮ್ಮದೇ ಆದ ಅಭಿಪ್ರಾಯಗಳನ್ನು ಹೇಳಿಕೊಳ್ಳುತ್ತಿದ್ದಾರೆ. ರಾಮಾನಂದ್ ಸಾಗರ್ ಅವರ ರಾಮಾಯಣದ ಲಕ್ಷ್ಮಣನ ಪಾತ್ರಕ್ಕೆ ಹೆಸರುವಾಸಿಯಾದ ಸುನಿಲ್ ಲಹ್ರಿ ಅವರು ಅಯೋಧ್ಯೆಯ ಮತದಾನದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Parliament Session 2024: ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ; ಸ್ಪೀಕರ್‌ ಆಯ್ಕೆ ಸೇರಿ ಏನೆಲ್ಲ ತೀರ್ಮಾನ?

ಇನ್‌ಸ್ಟಾಗ್ರಾಮ್‌ನಲ್ಲಿ ಸುನಿಲ್ ಮಾತನಾಡಿ, ಅಯೋಧ್ಯೆ ಜನರು ಸೀತಾ ದೇವಿಯನ್ನು ಗಡಿಪಾರು ಮಾಡಿದ ಅನಂತರವೂ ಸೀತಾ ದೇವಿಯನ್ನು ಅನುಮಾನಿಸಿದ್ದರು ಎಂಬುದನ್ನು ನಾವು ಮರೆಯುತ್ತಿದ್ದೇವೆ. ಸ್ವಾರ್ಥಿಗಳು ಅಯೋಧ್ಯೇಯ ನಾಗರಿಕರು. ಅವರು ಯಾವಾಗಲೂ ದ್ರೋಹ ಮಾಡಿದ್ದಾರೆ ಎಂಬುದಕ್ಕೆ ಇತಿಹಾಸವು ಪುರಾವೆಯಾಗಿದೆ ಎಂದು ಹೇಳಿದ್ದರು.

ಇನ್ನೊಂದು ಪೋಸ್ಟ್ ನಲ್ಲಿ ಅವರು, ಅಯೋಧ್ಯೆಯ ಪ್ರಿಯ ನಾಗರಿಕರೇ, ನಿಮ್ಮ ಹಿರಿಮೆಗೆ ನಾವು ನಮಸ್ಕರಿಸುತ್ತೇವೆ. ಸೀತಾದೇವಿಯನ್ನು ಸಹ ಬಿಡದ ನೀವು, ಶ್ರೀರಾಮನು ಆ ಸಣ್ಣ ಟೆಂಟ್ ನಿಂದ ಹೊರಬರುವಂತೆ ಮಾಡಿದ ವ್ಯಕ್ತಿಗೆ ನೀವು ದ್ರೋಹ ಬಗೆದುದರಲ್ಲಿ ಅಚ್ಚರಿಯಿಲ್ಲ. ಡೇರೆ ಇದ್ದ ಜಾಗದಲ್ಲಿ ಸುಂದರವಾದ ದೇವಾಲಯದಲ್ಲಿ ಸ್ಥಾಪಿಸಲಾಯಿತು. ಇಡೀ ರಾಷ್ಟ್ರವು ನಿಮ್ಮನ್ನು ಮತ್ತೆ ಗೌರವದಿಂದ ನೋಡುವುದಿಲ್ಲ ಎಂದು ಹೇಳಿದ್ದರು.

Continue Reading

ದೇಶ

Mohan Bhagwat: ಜನ ಸೇವಕ ಎಂದಿಗೂ ಅಹಂಕಾರಿ ಆಗಿರುವುದಿಲ್ಲ: ಮೋಹನ್‌ ಭಾಗವತ್‌

Mohan Bhagwat: ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಶಿಷ್ಟಾಚಾರವನ್ನು ಕಾಪಾಡಿಕೊಳ್ಳಲಿಲ್ಲ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

VISTARANEWS.COM


on

Mohan Bhagwat
Koo

ಮುಂಬೈ: ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಶಿಷ್ಟಾಚಾರವನ್ನು ಕಾಪಾಡಿಕೊಳ್ಳಲಿಲ್ಲ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ (Mohan Bhagwat) ಹೇಳಿದ್ದಾರೆ. ನಿಜವಾದ ಜನ ಸೇವಕ ಎಂದಿಗೂ ಅಹಂಕಾರವನ್ನು ತೋರಿಸುವುದಿಲ್ಲ ಮತ್ತು ಸಾರ್ವಜನಿಕ ಜೀವನದಲ್ಲಿ ಯಾವಾಗಲೂ ಸಭ್ಯತೆಯನ್ನು ಕಾಪಾಡಿಕೊಳ್ಳುತ್ತಾನೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದ ಆರ್‌ಎಸ್‌ಎಸ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ನಿಜವಾದ ಜನ ಸೇವಕನು ಕೆಲಸ ಮಾಡುವಾಗ ಸಭ್ಯತೆಯನ್ನು ಕಾಪಾಡಿಕೊಳ್ಳುತ್ತಾನೆ. ನಾನು ಇದನ್ನು ಮಾಡಿದ್ದೇನೆ ಎಂಬ ಅಹಂಕಾರವಿಲ್ಲದ ವ್ಯಕ್ತಿಗೆ ಮಾತ್ರ ಜನ ಸೇವಕ ಎಂದು ಕರೆಯಲ್ಪಡುವ ಹಕ್ಕಿದೆ” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. “ಮಣಿಪುರದಲ್ಲಿ ಕಳೆದ ಒಂದು ವರ್ಷದಿಂದ ಹಿಂಸಾಚಾರ ಭುಗಿಲೆದ್ದಿದೆ. ಮಣಿಪುರದ ನಾಗರಿಕರು ಶಾಂತಿ ಸ್ಥಾಪನೆಗಾಗಿ ಒಂದು ವರ್ಷದಿಂದ ಕಾಯುತ್ತಿದ್ದಾರೆ. ಹಾಗಾಗಿ ಮಣಿಪುರದಲ್ಲಿ ಆದ್ಯತೆಯ ಮೇರೆಗೆ ಶಾಂತಿಸ್ಥಾಪನೆ ಮಾಡಬೇಕು. ಈಶಾನ್ಯ ರಾಜ್ಯದಲ್ಲಿ ಹಿಂಸಾಚಾರವನ್ನು ಸಂಪೂರ್ಣವಾಗಿ ತಡೆಯಬೇಕು” ಎಂದು ಹೇಳಿದ್ದಾರೆ.

“ಮಣಿಪುರವು ಒಂದು ವರ್ಷದಿಂದ ಶಾಂತಿಯನ್ನು ಹುಡುಕುತ್ತಿದೆ. ಇದನ್ನು ಆದ್ಯತೆಯ ಮೇರೆಗೆ ಚರ್ಚಿಸಬೇಕು. ಕಳೆದ 10 ವರ್ಷಗಳಿಂದ ರಾಜ್ಯವು ಶಾಂತಿಯುತವಾಗಿತ್ತು. ಹಳೆಯ ‘ಬಂದೂಕು ಸಂಸ್ಕೃತಿ’ ಕೊನೆಗೊಂಡಂತೆ ಭಾಸವಾಗಿತ್ತು. ಆದರೆ ಅಲ್ಲಿ ಇದ್ದಕ್ಕಿದ್ದಂತೆ ಉದ್ಭವಿಸಿದ ಉದ್ವಿಗ್ನತೆಯ ಬೆಂಕಿ ಇನ್ನೂ ಉರಿಯುತ್ತಿದೆ. ಅದರ ಬಗ್ಗೆ ಯಾರು ಗಮನ ಹರಿಸುತ್ತಾರೆ? ಅದಕ್ಕೆ ಆದ್ಯತೆ ನೀಡುವುದು ಮತ್ತು ಅದನ್ನು ಗಮನಿಸುವುದು ಆದ್ಯ ಕರ್ತವ್ಯವಾಗಲಿ” ಎಂದು ಅವರು ಸಲಹೆ ನೀಡಿದ್ದಾರೆ. ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.

ಚುನಾವಣೆ ಸ್ಪರ್ಧೆ ಮಾತ್ರ ಯುದ್ಧವಲ್ಲ

ಇದೇ ವೇಳೆ ಅವರು ಚುನಾವಣೆ ಯುದ್ಧವಲ್ಲ, ಅದೊಂದು ಸ್ಪರ್ಧೆ ಮಾತ್ರ ಎಂದು ಹೇಳಿದ್ದಾರೆ. “ಚುನಾವಣೆಗಳು ಪ್ರಜಾಪ್ರಭುತ್ವದ ಅತ್ಯಗತ್ಯ ಪ್ರಕ್ರಿಯೆ. ಚುನಾವಣೆ ಸ್ಪರ್ಧೆ ಒಂದು ಮುಖವಾದರೆ, ಪ್ರಜಾಪ್ರಭುತ್ವದ ಘನತೆ ಮತ್ತೊಂದು ಮುಖವಾಗಿದೆ. ಹಾಗಾಗಿ, ಚುನಾವಣೆಯನ್ನು ಯುದ್ಧವಾಗಿ ಪರಿಗಣಿಸಬಾರದು. ಸುಳ್ಳುಗಳನ್ನು ಹೇಳಬಾರದು. ಸ್ಪರ್ಧಿಯೊಬ್ಬ ಎದುರಾಳಿ ಕುರಿತು ಟೀಕೆ ಮಾಡಬಹುದು, ವಿಮರ್ಶೆ ಮಾಡಬಹುದು. ಆದರೆ ಅವು ವೈಯಕ್ತಿಕವಾಗಿರಬಾರದು, ಸಮಾಜಕ್ಕೆ ಹಾನಿ ಮಾಡುವಂತೆ ಇರಬಾರದು. ಪ್ರತಿಯೊಬ್ಬ ವ್ಯಕ್ತಿಯ ಮನಸ್ಸು ವಿಭಿನ್ನವಾಗಿರುತ್ತದೆ. ಆದ್ದರಿಂದ ಎಲ್ಲರೂ ಒಂದೇ ರೀತಿಯ ಅಭಿಪ್ರಾಯಗಳನ್ನು ಹೊಂದಲು ಸಾಧ್ಯವಿಲ್ಲ. ಆದರೆ ಸಮಾಜದಲ್ಲಿನ ಜನರು ವಿಭಿನ್ನ ಮನಸ್ಸುಗಳನ್ನು ಹೊಂದಿದ್ದರೂ ಒಟ್ಟಿಗೆ ಮುಂದುವರಿಯಲು ನಿರ್ಧರಿಸಿದಾಗ, ಪರಸ್ಪರ ಒಪ್ಪಿಗೆ ರೂಪುಗೊಳ್ಳುತ್ತದೆ” ಎಂದು ತಿಳಿಸಿದ್ದಾರೆ.

ಆರ್‌ಎಸ್‌ಎಸ್‌ ಅನ್ನು ಚುನಾವಣೆಗೆ ಎಳೆದು ತರಲಾಗಿದೆ ಎಂದು ಅವರು ಆರೋಪಿಸಿದ್ದಾರೆ. ಜತೆಗೆ ಚುನಾವಣೆಯ ಸಮಯದಲ್ಲಿ ಶಿಷ್ಟಾಚಾರವನ್ನು ಅನುಸರಿಸುವುದು ಮುಖ್ಯ ಎಂದು ಒತ್ತಿ ಹೇಳಿದ್ದಾರೆ. “ಚುನಾವಣೆಯಲ್ಲಿ ಸ್ಪರ್ಧಿಸುವಾಗಲೂ ಸಭ್ಯತೆ ಇದೆ. ಈ ಬಾರಿ ಆ ಶಿಷ್ಟಾಚಾರವನ್ನು ಅನುಸರಿಸಲಾಗಿಲ್ಲ” ಎಂದು ಅವರು ತಿಳಿಸಿದ್ದಾರೆ. ನರೇಂದ್ರ ಮೋದಿ ಸರ್ಕಾರ ಹಲವು ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿದೆ ಎಂದು ಮೋಹನ್ ಭಾಗವತ್ ಶ್ಲಾಘಿಸಿದ್ದಾರೆ. ಆದಾಗ್ಯೂ, ಭಾರತವು ಸವಾಲುಗಳಿಂದ ಮುಕ್ತವಾಗಿಲ್ಲ ಎಂದು ಎಂದೂ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: Mohan Bhagwat: ಮಣಿಪುರ ಹಿಂಸೆ ನಿಲ್ಲಿಸಿ; ಅಧಿಕಾರ ಹಿಡಿದ ಮೋದಿಗೆ ಟಾಸ್ಕ್‌ ಕೊಟ್ಟ ಮೋಹನ್‌ ಭಾಗವತ್!

Continue Reading

ದೇಶ

Chandrababu Naidu: ಆಂಧ್ರ ಪ್ರದೇಶದ ರಾಜಧಾನಿ ಅಮರಾವತಿ; ಚಂದ್ರಬಾಬು ನಾಯ್ಡು ಘೋಷಣೆ

Chandrababu Naidu: ಆಂಧ್ರ ಪ್ರದೇಶದ ಮುಖುಮಂತ್ರಿಯಾಗಿ ತೆಲುಗು ದೇಶಂ ಪಾರ್ಟಿಯ ನಾಯಕ ಚಂದ್ರಬಾಬು ನಾಯ್ಡು ಅಧಿಕೃತವಾಗಿ ಆಯ್ಕೆಯಾಗಿದೆ. ಜೂನ್‌ 12 ರಂದು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಮಧ್ಯೆ ಅವರು ಅಮರಾವತಿಯನ್ನು ಆಂಧ್ರ ಪ್ರದೇಶದ ರಾಜಧಾನಿಯನ್ನಾಗಿ ಘೋಷಿಸಿದ್ದಾರೆ.

VISTARANEWS.COM


on

Chandrababu Naidu
Koo

ಅಮರಾವತಿ: ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು (Chandrababu Naidu) ನೇತೃತ್ವದ ತೆಲುಗು ದೇಶಂ ಪಾರ್ಟಿ (TDP) ಭರ್ಜರಿ ಬಹುಮತದೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದೆ. ಮುಖ್ಯಮಂತ್ರಿಯಾಗಿ ನಾಳೆ (ಜೂನ್‌ 12) ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕರಿಸಲಿದ್ದು, ಇದಕ್ಕಾಗಿ ಸಿದ್ಧತೆ ನಡೆಸಲಾಗಿದೆ. ಈ ಮಧ್ಯೆ ಮಂಗಳವಾರ ವಿಜಯವಾಡದಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಚಂದ್ರಬಾಬು ನಾಯ್ಡು ಅವರು, ಅಮರಾವತಿ (Amaravati)ಯನ್ನು ಆಂಧ್ರ ಪ್ರದೇಶದ ರಾಜಧಾನಿಯನ್ನಾಗಿ ಘೋಷಿಸಿದರು. ಈ ಬಾರಿ ಆಂಧ್ರ ಪ್ರದೇಶದಲ್ಲಿ ಟಿಡಿಪಿ, ಬಿಜೆಪಿ ಮತ್ತು ಜೆಎಸ್‌ಪಿ ಒಟ್ಟಾಗಿ ಚುನಾವಣೆ ಎದುರಿಸಿದ್ದವು.

ಎ-ಕನ್ವೆನ್ಷನ್ ಸೆಂಟರ್‌ನಲ್ಲಿ ನಡೆದ ಎನ್‌ಡಿಎ ಸಭೆಯಲ್ಲಿ ಟಿಡಿಪಿ, ಬಿಜೆಪಿ ಮತ್ತು ಪವನ್‌ ಕಲ್ಯಾಣ ನೇತೃತ್ವದ ಜನಸೇನಾ ಪಾರ್ಟಿ(JSP)ಯ ಶಾಸಕರು ಪಾಲ್ಗೊಂಡಿದ್ದರು. ಈ ವೇಳೆ ಮುಖ್ಯಮಂತ್ರಿ ಹುದ್ದೆಗೆ ಚಂದ್ರಬಾಬು ನಾಯ್ಡು ಅವರ ಹೆಸರನ್ನು ಪವನ್‌ ಕಲ್ಯಾಣ ಪ್ರಸ್ತಾಪಿಸಿದರು. ಇದಕ್ಕೆ ಬಿಜೆಪಿಯ ಡಿ.ಪುರಂದರೇಶ್ವರಿ ಬೆಂಬಲ ಸೂಚಿಸಿದರು. ಬಳಿಕ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ನಂತರ ಸಭೆಯನ್ನುದ್ದೇಶಿಸಿ ಮಾತನಾಡಿ ಚಂದ್ರಬಾಬು ನಾಯ್ಡು ಅವರು, ʼʼಅಮರಾವತಿ ಆಂಧ್ರ ಪ್ರದೇಶದ ರಾಜಧಾನಿಯಾಗಲಿದೆ. ನಾವು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುತ್ತೇವೆ. ಕೆಲವು ಭಾಗಗಳನ್ನು ಮಾತ್ರವಲ್ಲ ಇಡೀ ರಾಜ್ಯದ ಏಳಿಗೆಗೆ ಕೊಡುಗೆ ನೀಡುತ್ತೇವೆʼʼ ಎಂದು ಅವರು ಭರವಸೆ ನೀಡಿದರು.

ಈ ಮೂಲಕ ನಿರ್ಗಮಿತ ಮುಖ್ಯಮಂತ್ರಿ ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದರು. ವೈಎಸ್‌ಆರ್‌ಸಿಪಿ ಮುಖಂಡ, ವೈ.ಎಸ್‌.ಜಗನ್‌ ಮೋಹನ್‌ ರೆಡ್ಡಿ ಅವರು ಈ ಹಿಂದೆ ವಿಶಾಖಪಟ್ಟಣಂ ಅನ್ನು ಆಡಳಿತಾತ್ಮಕ ರಾಜಧಾನಿಯಾಗಿ ಅಭಿವೃದ್ಧಿಪಡಿಸುವುದಾಗಿ ಮತ್ತು ಅಲ್ಲಿ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದ್ದರು. ಇದನ್ನು ಪ್ರಸ್ತಾವಿಸಿದ ಚಂದ್ರಬಾಬು ನಾಯ್ಡು, ವಿಶಾಖಪಟ್ಟಣಂನಲ್ಲಿ ವೈಎಸ್‌ಆರ್‌ಸಿಪಿಯನ್ನು ಸೋಲಿಸುವ ಮೂಲಕ ಜನರು ತಕ್ಕ ಪಾಠ ಕಲಿಸಿದ್ದಾರೆ ಎಂದು ಹೇಳಿದರು. ಜಗನ್‌ ಮೋಹನ್‌ ರೆಡ್ಡಿ ಅವರು ಅಮರಾವತಿಯನ್ನು ಶಾಸಕಾಂಗ ರಾಜಧಾನಿಯಾಗಿ, ವಿಶಾಖಪಟ್ಟಣಂ ಅನ್ನು ಆಡಳಿತಾತ್ಮಕ ರಾಜಧಾನಿಯಾಗಿ ಮತ್ತು ಕರ್ನೂಲ್ ಅನ್ನು ನ್ಯಾಯಾಂಗ ರಾಜಧಾನಿಯನ್ನಾಗಿ ಮಾಡಿಕೊಳ್ಳುವ ಮೂಲಕ ರಾಜ್ಯದಲ್ಲಿ ವಿಕೇಂದ್ರೀಕೃತ ಅಭಿವೃದ್ಧಿಯ ಕಲ್ಪನೆಯನ್ನು ಹುಟ್ಟು ಹಾಕಿದ್ದರು.

ಸರ್ಕಾರದ ಧ್ಯೇಯವಾಕ್ಯ ‘ರಾಜ್ಯ ಮೊದಲು’ ಎಂದು ಚಂದ್ರಬಾಬು ನಾಯ್ಡು ತಿಳಿಸಿದರು. “ನಮ್ಮ ಆರ್ಥಿಕ ಪರಿಸ್ಥಿತಿ ಹೇಗಿದೆ ಎಂದು ನಮಗೆ ತಿಳಿದಿಲ್ಲ. ನಮ್ಮ ರಾಜ್ಯದ ಸಾಲ ಏನು, ಹಣವನ್ನು ಎಲ್ಲಿಂದ ಎರವಲು ಪಡೆಯಲಾಗಿದೆ ಮತ್ತು ಯಾವುದನ್ನು ಅಡಮಾನ ಇಡಲಾಗಿದೆ ಎಂಬುದೂ ತಿಳಿದಿಲ್ಲ. ಆದರೆ ನಾವು ‘ರಾಜ್ಯ ಮೊದಲು’ ಎಂಬ ಧ್ಯೇಯವಾಕ್ಯದೊಂದಿಗೆ ಕೆಲಸ ಮಾಡುತ್ತೇವೆ ಮತ್ತು ಸರ್ವಾಂಗೀಣ ಅಭಿವೃದ್ಧಿಯ ಗುರಿಯನ್ನು ಹೊಂದಿದ್ದೇವೆ” ಎಂದು ಭರವಸೆ ನೀಡಿದರು.

ಇದನ್ನೂ ಓದಿ: Modi 3.0 Government: ನರೇಂದ್ರ ಮೋದಿ ಮುಂದೆ ಚಂದ್ರಬಾಬು ನಾಯ್ಡು, ನಿತೀಶ್ ಕುಮಾರ್ ಇಟ್ಟಿರುವ ಬೇಡಿಕೆಗಳು ಇಷ್ಟು!

ಮೋದಿ ಭಾಗಿ

ಜೂ. 12ರಂದು ಆಯೋಜಿಸಿರುವ ಆಂಧ್ರಪ್ರದೇಶ ಮತ್ತು ಒಡಿಶಾ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ 164 ಸ್ಥಾನಗಳನ್ನು ಗೆದ್ದುಕೊಂಡಿದೆ.

Continue Reading

ದೇಶ

Parliament Session 2024: ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ; ಸ್ಪೀಕರ್‌ ಆಯ್ಕೆ ಸೇರಿ ಏನೆಲ್ಲ ತೀರ್ಮಾನ?

Parliament Session 2024: ಜೂನ್‌ 24 ಹಾಗೂ ಜೂನ್‌ 25ರಂದು ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್‌ 26ರಂದು ಲೋಕಸಭೆ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟು 8 ದಿನಗಳವರೆಗೆ ವಿಶೇಷ ಅಧಿವೇಶನ ನಡೆಯಲಿದೆ.

VISTARANEWS.COM


on

Parliament Session 2024
Koo

ನವದೆಹಲಿ: ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಕೂಟವು ಸ್ಪಷ್ಟ ಬಹುಮತದೊಂದಿಗೆ ಸರ್ಕಾರ ರಚಿಸಿದೆ. ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ 71 ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಇದರ ಬೆನ್ನಲ್ಲೇ, ಜೂನ್‌ 24ರಿಂದ ಜುಲೈ 3ರವರೆಗೆ ಸಂಸತ್ ವಿಶೇಷ ಅಧಿವೇಶನ (Parliament Session 2024) ಕರೆಯಲಾಗಿದೆ. ವಿಶೇಷ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್‌ ಆಯ್ಕೆ ಸೇರಿ ಹಲವು ತೀರ್ಮಾನಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ ಆರಂಭವಾಗುತ್ತದೆ. ಜೂನ್‌ 24 ಹಾಗೂ ಜೂನ್‌ 25ರಂದು ನೂತನ ಸಂಸದರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಜೂನ್‌ 26ರಂದು ಲೋಕಸಭೆ ಸ್ಪೀಕರ್‌ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟು 8 ದಿನಗಳವರೆಗೆ ವಿಶೇಷ ಅಧಿವೇಶನ ನಡೆಯಲಿದೆ ಎಂದು ತಿಳಿದುಬಂದಿದೆ. ಆದಾಗ್ಯೂ, ಯಾವುದೇ ವಿಧೇಯಕಗಳ ಮಂಡನೆ ಕುರಿತು ಮಾಹಿತಿ ಲಭ್ಯವಾಗಿಲ್ಲ.

Parliament Winter session will held from December 4 to 22

ಖಾತೆ ಹಂಚಿಕೆಯಲ್ಲಿ ಮೋದಿ ಪಾರಮ್ಯ

ಸಚಿವರಿಗೆ ಖಾತೆ ಹಂಚಿಕೆಯಲ್ಲೂ ನರೇಂದ್ರ ಮೋದಿ ಅವರೇ ಪ್ರಾಬಲ್ಯ ಮೆರೆದಿದ್ದಾರೆ. ಕೇಂದ್ರ ಗೃಹ ಖಾತೆಯನ್ನು ಅಮಿತ್‌ ಶಾ ಅವರಿಗೆ, ಹಣಕಾಸು ಖಾತೆಯನ್ನು ನಿರ್ಮಲಾ ಸೀತಾರಾಮನ್‌, ರಕ್ಷಣಾ ಖಾತೆಯನ್ನು ರಾಜನಾಥ್‌ ಸಿಂಗ್‌ ಹಾಗೂ ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿಗಳ ಖಾತೆಯನ್ನು ನಿತಿನ್‌ ಗಡ್ಕರಿ ಅವರಿಗೇ ನೀಡುವ ಮೂಲಕ ನರೇಂದ್ರ ಮೋದಿ ಅವರು ಮೊದಲಿನಂತೆಯೇ ಬಿಜೆಪಿ ಬಳಿಯೇ ಉಳಿಸಿಕೊಳ್ಳುವ ಮೂಲಕ ಚಾಣಾಕ್ಷತನ ಮೆರೆದಿದ್ದಾರೆ. ಅಷ್ಟೇ ಅಲ್ಲ, ಮೈತ್ರಿ ಸರ್ಕಾರದ ಮೇಲೆಯೂ ತಮ್ಮ ಹಿಡಿತ ಇದೆ ಎಂಬುದನ್ನು ಅವರು ಸಾಬೀತುಪಡಿಸಿದ್ದಾರೆ.

ಮೈತ್ರಿ ಸರ್ಕಾರ ರಚನೆಗೂ ಮೊದಲು, ನಿತೀಶ್‌ ಕುಮಾರ್‌ ಹಾಗೂ ಟಿಡಿಪಿ ಸೇರಿ ಮೈತ್ರಿ ಪಕ್ಷಗಳಿಗೇ ಪ್ರಮುಖ ನಾಲ್ಕು ಖಾತೆಗಳಲ್ಲಿ ಒಂದಷ್ಟನ್ನು ಮೋದಿ ನೀಡಬೇಕಾಗುತ್ತದೆ. ಅದರಲ್ಲೂ ಗೃಹ ಖಾತೆ ಹಾಗೂ ಹಣಕಾಸು ಖಾತೆಗಳನ್ನು ಮಿತ್ರಪಕ್ಷಗಳಿಗೆ ಬಿಟ್ಟುಕೊಡಬೇಕಾಗುತ್ತದೆ ಎಂಬುದಾಗಿ ಹೇಳಲಾಗುತ್ತಿತ್ತು. ಆದರೆ, ಮೊದಲ ಹಾಗೂ ಎರಡನೇ ಅವಧಿಯಂತೆ, ಮೂರನೇ ಅವಧಿಯಲ್ಲೂ ನರೇಂದ್ರ ಮೋದಿ ಅವರು ಪ್ರಮುಖ ಖಾತೆಗಳನ್ನು ಬಿಜೆಪಿ ಬಳಿಯೇ ಉಳಿಸಿಕೊಳ್ಳುವ ಮೂಲಕ ತಮ್ಮ ಹಿಡಿತವನ್ನು ಸಾಬೀತುಪಡಿಸಿದ್ದಾರೆ ಎಂದೇ ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: Narendra Modi: ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ಪ್ರಧಾನಿ ಮೋದಿ ಸಚಿವರಿಗೆ ಹೇಳಿದ ಕಿವಿ ಮಾತು ಇದು

Continue Reading
Advertisement
Mukesh Khanna
ದೇಶ2 mins ago

Mukesh Khanna: ಅಯೋಧ್ಯೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಕೊಟ್ಟ ʼಮಹಾಭಾರತʼದ ಭೀಷ್ಮ

union minister pralhad joshi takes charge of renewable energy Food Consumer Affairs ministry
ಕರ್ನಾಟಕ5 mins ago

Pralhad Joshi: ಹೊಸ ಖಾತೆಗಳ ಅಧಿಕಾರ ಸ್ವೀಕರಿಸಿದ ಪ್ರಲ್ಹಾದ್‌ ಜೋಶಿ; ಲಕ್ಷ್ಮಿ ಪೂಜೆಯೊಂದಿಗೆ ಕಾರ್ಯಾರಂಭ

Yamaha Fascino S
Latest16 mins ago

Yamaha Fascino S : ಎಲ್ಲಿದ್ದೀಯಾ ಅಂಥ ಕೇಳಿದ್ರೆ, ಇಲ್ಲಿದ್ದೀನಿ ಅನ್ನುತ್ತೆ ಈ ಸ್ಕೂಟರ್​! ವಿಶೇಷ ಫೀಚರ್ ಇರುವ ಸ್ಕೂಟರ್ ಈಗ ಭಾರತದಲ್ಲಿ

RSA vs BAN
ಕ್ರೀಡೆ23 mins ago

RSA vs BAN: ಬಾಂಗ್ಲಾ ಸೋಲಿಗೆ ಐಸಿಸಿ ಹೊಸ ನಿಯಮವೇ ಕಾರಣ; ಬೌಂಡರಿ ದಾಖಲಾದರೂ ರನ್​ ನೀಡಲಿಲ್ಲವೇಕೆ?

actor Darshan
ಚಿತ್ರದುರ್ಗ34 mins ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Mohan Bhagwat
ದೇಶ41 mins ago

Mohan Bhagwat: ಜನ ಸೇವಕ ಎಂದಿಗೂ ಅಹಂಕಾರಿ ಆಗಿರುವುದಿಲ್ಲ: ಮೋಹನ್‌ ಭಾಗವತ್‌

Lifetime achievement felicitation ceremony for retired Judge Chandrashekharaiah on June 29 in Bengaluru
ಬೆಂಗಳೂರು1 hour ago

Bengaluru News: ಬೆಂಗಳೂರಿನಲ್ಲಿ ಜೂ. 29ರಂದು ನಿವೃತ್ತ ನ್ಯಾ. ಚಂದ್ರಶೇಖರಯ್ಯಗೆ ಅಭಿನಂದನೆ

murder case
ಮೈಸೂರು1 hour ago

Murder case : ಹಿರಿಯ ಸ್ವಾಮೀಜಿ ಕೊಂದ‌ ಆರೋಪಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Womens Commission president Dr Nagalakshmi Chaudhary visit bisaadihatti village
ತುಮಕೂರು1 hour ago

Koratagere News: ಗ್ರಾಮೀಣ ಹೆಣ್ಣುಮಕ್ಕಳಿಗೆ ಮೂಲಸೌಕರ್ಯ ಒದಗಿಸುವುದು ಮೊದಲ ಆದ್ಯತೆ: ಮಹಿಳಾ ಆಯೋಗದ ಅಧ್ಯಕ್ಷೆ

IND vs USA
ಕ್ರೀಡೆ1 hour ago

IND vs USA: ಅಪಾಯಕಾರಿ ಅಮೆರಿಕ ಸವಾಲಿಗೆ ಸಡ್ಡು ಹೊಡೆದೀತೇ ಟೀಮ್​ ಇಂಡಿಯಾ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

actor Darshan
ಚಿತ್ರದುರ್ಗ34 mins ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ6 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

ಟ್ರೆಂಡಿಂಗ್‌