ನಗರಸಭೆ ಆಯುಕ್ತರ ಮೇಲೆ ಹಲ್ಲೆ ಮಾಡಿದವರ ಬಂಧಿಸದಿದ್ದರೆ ಮುಸ್ಲಿಮರಿಗೆ ಹಳ್ಳಿಯಲ್ಲೂ ವ್ಯಾಪಾರಕ್ಕೆ ಅವಕಾಶವಿಲ್ಲ; ಪ್ರತಿಭಟನಾಕಾರರ ಎಚ್ಚರಿಕೆ - Vistara News

ಕರ್ನಾಟಕ

ನಗರಸಭೆ ಆಯುಕ್ತರ ಮೇಲೆ ಹಲ್ಲೆ ಮಾಡಿದವರ ಬಂಧಿಸದಿದ್ದರೆ ಮುಸ್ಲಿಮರಿಗೆ ಹಳ್ಳಿಯಲ್ಲೂ ವ್ಯಾಪಾರಕ್ಕೆ ಅವಕಾಶವಿಲ್ಲ; ಪ್ರತಿಭಟನಾಕಾರರ ಎಚ್ಚರಿಕೆ

ಮಾರಿಕಾಂಬಾ ದೇವಸ್ಥಾನದ ಆವರಣದ ಮುಂದೆ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ವ್ಯಾಪಾರಿಯೊಬ್ಬನ ಅಂಗಡಿಯನ್ನು ಎತ್ತಂಗಡಿ ಮಾಡಿಸುವಾಗ ಹಲ್ಲೆ ನಡೆಸಲಾಗಿದೆ ಎಂದು ಆರೋಪಿಸಿ ನಡೆದಿದ್ದ ಪ್ರತಿಭಟನೆಯು ಉಗ್ರ ಸ್ವರೂಪವನ್ನು ಪಡೆದುಕೊಂಡಿದೆ.

VISTARANEWS.COM


on

ಸಾಗರ ನಗರಸಭೆ ಪ್ರತಿಭಟನೆ ಮುಸ್ಲಿಂ ವ್ಯಾಪಾರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಾಗರ: ಇಲ್ಲಿನ ಬೀದಿಬದಿ ವ್ಯಾಪಾರ ನಡೆಸುತ್ತಿದ್ದ ವ್ಯಾಪಾರಿಯೊಬ್ಬನ ಮೇಲೆ ಬುಧವಾರ (ನ.೩೦) ದೌರ್ಜನ್ಯ ನಡೆಸಿ ಅಂಗಡಿ ತೆರವು ಮಾಡಿಸಲಾಗಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಪ್ರತಿಭಟನೆ ಆರಂಭಿಸಿತ್ತು. ಈ ವೇಳೆ ಗಲಾಟೆಯು ತೀವ್ರ ಸ್ವರೂಪವನ್ನು ಪಡೆದುಕೊಳ್ಳುತ್ತಿದ್ದು, ಕೋಮು ಬಣ್ಣಕ್ಕೆ ತಿರುಗುವ ಲಕ್ಷಣ ಗೋಚರಿಸಿದೆ. ನಗರಸಭೆ ಆಯುಕ್ತರ ಮೇಲೆ ಪ್ರತಿಭಟನಾಕಾರರ ಗುಂಪು ಹಲ್ಲೆ ನಡೆಸಿದೆ ಎಂದು ಒಂದು ಸಮುದಾಯದವರು ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರ ಬಂಧನಕ್ಕೆ ಆಗ್ರಹಪಡಿಸಿತ್ತು. ಪೊಲೀಸರ ಮಧ್ಯಪ್ರವೇಶದಿಂದ ಸದ್ಯಕ್ಕೆ ಪರಿಸ್ಥಿತಿ ಶಾಂತಗೊಂಡಿದೆ.

ಸಾಗರ ನಗರಸಭೆ ಪ್ರತಿಭಟನೆ ಮುಸ್ಲಿಂ ವ್ಯಾಪಾರ
ಸಾಗರ ನಗರಸಭೆ ಪ್ರತಿಭಟನೆ ಮುಸ್ಲಿಂ ವ್ಯಾಪಾರ

ಕಾಂಗ್ರೆಸ್‌ ಜತೆ ಹೋರಾಟದಲ್ಲಿ ಭಾಗಿಯಾಗಿದ್ದ ಮುಸ್ಲಿಂ ಸಮುದಾಯದವರು ಸೇರಿ ಇತರರು ಹೋರಾಟದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಗರಸಭೆ ಆಯುಕ್ತರ ಕಚೇರಿಗೆ ಪ್ರತಿಭಟನಾನಿರತರ ಗುಂಪು ನುಗ್ಗಿದೆ. ಅದೇ ವೇಳೆ ಇನ್ನೊಂದು ಗುಂಪು ಆಯುಕ್ತರ ಪರವಾಗಿ ನಿಂತಿದೆ. ಈ ನಡುವೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆಯಲ್ಲಿ ಆಯುಕ್ತರ ಮೇಲೆ ಹಲ್ಲೆ ನಡೆದಿದೆ. ಇದನ್ನು ಖಂಡಿಸಿ ಈಡಿಗ ಸಮುದಾಯದವರು ನಗರಸಭೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಆಯುಕ್ತರ ಸಹೋದರ ಗಣಪತಿ ಎಂಬುವವರು ಹೃದಯಾಘಾತದಿಂದ ಮೃತಪಟ್ಟಿದ್ದರು. ಇದು ಹೋರಾಟ ಉಗ್ರ ಸ್ವರೂಪ ಪಡೆದುಕೊಳ್ಳಲು ಕಾರಣವಾಗಿತ್ತು.

ಏನಿದು ಪ್ರಕರಣ?
ಬೀದಿ ಬದಿಯ ಹಣ್ಣು ವ್ಯಾಪಾರಿ ಮೇಲೆ ದೌರ್ಜನ್ಯ ನಡೆಸಿ, ಅಂಗಡಿ ತೆರವುಗೊಳಿಸಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಬುಧವಾರ ಪ್ರತಿಭಟನೆ ನಡೆಸಿತ್ತು. ಈ ಹಿನ್ನೆಲೆಯಲ್ಲಿ ನಗರಸಭೆ ಆಯುಕ್ತರ ಕೊಠಡಿಯಲ್ಲಿ ಎರಡು ಗುಂಪಿನ ನಡುವೆ ಜಟಾಪಟಿಯೂ ನಡೆದಿತ್ತು. ನಗರಸಭೆ ಪ್ರಭಾರ ಆಯುಕ್ತ ನಾಗಪ್ಪ ಅವರ ಮೇಲೆ ಇದೇ ವೇಳೆ ಹಲ್ಲೆ ನಡೆದಿದೆ. ಇದಕ್ಕೆ ಪ್ರತಿಯಾಗಿ ಈಡಿಗ ಸಮುದಾಯದ ಜನ ಪ್ರತಿಭಟನೆ ನಡೆಸುವಾಗ ಆಯುಕ್ತರ ಸಹೋದರ ಗಣಪತಿ ಹೃದಯಾಘಾತದಿಂದ ನಿಧನರಾಗಿದ್ದರು. ಇದು ಪ್ರಕರಣ ಜಟಿಲಗೊಳ್ಳಲು ಕಾರಣವಾಗಿದೆ.

ಇದನ್ನೂ ಓದಿ | Muslim college | ವಕ್ಫ್‌ ಅಧ್ಯಕ್ಷರ ಹೇಳಿಕೆ ವೈಯಕ್ತಿಕ, ಮಹಿಳಾ ಕಾಲೇಜಿನ ಪ್ರಸ್ತಾಪವಿಲ್ಲ ಎಂದ ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ

ಗುರುವಾರ ಶವ ಇಟ್ಟು ಪ್ರತಿಭಟನೆ
ನಗರಸಭೆ ಎದುರು ಪ್ರಭಾರ ಆಯುಕ್ತ ಎಚ್.ಕೆ. ನಾಗಪ್ಪ ಸಹೋದರ ಗಣಪತಿ ಶವ ಇಟ್ಟು ಗುರುವಾರ (ಡಿ.೧) ಪತ್ರಿಭಟನೆ ನಡೆಸಲಾಗಿದೆ. ಆಯುಕ್ತರ ಮೇಲೆ ಹಲ್ಲೆ ಮಾಡಿದ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಪ್ರತಿಭಟನಾಕಾರರು‌ ಆಗ್ರಹಿಸಿದರು. ಗಣಪತಿ ಶವ ಸಂಸ್ಕಾರ ಮಾಡಲು ನಿರಾಕರಿಸಿದ ಪ್ರತಿಭಟನಾಕಾರರು, ಆರೋಪಿಗಳನ್ನು ಬಂಧಿಸುವಂತೆ ಪಟ್ಟುಹಿಡಿದರು. ಪೊಲೀಸರು ಆರೋಪಿಗಳನ್ನು ಬಂಧಿಸದೆ ಇದ್ದರೆ ಮುಸ್ಲಿಮರಿಗೆ ಹಳ್ಳಿ ಹಳ್ಳಿಗಳಲ್ಲೂ ವ್ಯಾಪಾರಕ್ಕೆ ಬಿಡುವುದಿಲ್ಲ. ಹಳ್ಳಿಗಳಿಗೆ ಮೀನು ಮಾರಾಟಕ್ಕೆ ಬರುವವರಿಗೂ ತಡೆ ಒಡ್ಡುತೇವೆ ಎಂದರು. ಕೊನೆಗೆ ಪೊಲೀಸರು ಮನವೊಲಿಸುವಲ್ಲಿ ಯಶಸ್ವಿಯಾದ ನಂತರ, ನಗರದಲ್ಲಿ ಶವದ ಮೆರವಣಿಗೆ ನಡೆಸಿ ಅಂತಿಮ ಸಂಸ್ಕಾರ ನಡೆಸಲಾಯಿತು.

ಸಾಗರ ನಗರಸಭೆ ಪ್ರತಿಭಟನೆ ಮುಸ್ಲಿಂ ವ್ಯಾಪಾರ
ಸಾಗರ ನಗರಸಭೆ ಪ್ರತಿಭಟನೆ ಮುಸ್ಲಿಂ ವ್ಯಾಪಾರ

ಹಲ್ಲೆಗೆ ಆಕ್ರೋಶ
ಸಾಗರದ ಮಾರಿಕಾಂಬ ದೇವಸ್ಥಾನದಲ್ಲಿ ತಳ್ಳುವ ಗಾಡಿಗಳನ್ನು ಬುಧವಾರ ತೆರವುಗೊಳಿಸಿರುವ ವಿಚಾರ ರಾಜಕೀಯ ಬಣ್ಣಪಡೆದು ನಂತರ ಆಯುಕ್ತರ ಕಚೇರಿ ಒಳಗೆ ನುಗ್ಗಿ ದಾಂಧಲೆ ನಡೆದ ಘಟನೆಯು ನಗರಸಭೆ ಸಿಬ್ಬಂದಿಯ ಆಕ್ರೋಶಕ್ಕೆ ಕಾರಣವಾಗಿತ್ತು. ದಾಂಧಲೆ ನಡೆಸಿದ ಆರೋಪಿಗಳನ್ನು ಬಂಧಿಸುವ ತನಕ ನಗರಸಭೆಯ ಪೌರಕಾರ್ಮಿಕರು ಕಸ ತೆಗೆಯುವುದಿಲ್ಲ ಮತ್ತು ಕುಡಿಯುವ ನೀರು ಬಿಡುವುದಿಲ್ಲವೆಂದು ಹೇಳಿ ಗುರುವಾರ ಬೆಳಗ್ಗೆಯಿಂದಲೇ ಪ್ರತಿಭಟನೆ ನಡೆಸಿದರು. ಆಯುಕ್ತರಿಗೇ ರಕ್ಷಣೆಯಿಲ್ಲದಿದ್ದರೆ ನಮ್ಮ ಗತಿ ಏನು ಎಂದು ಪ್ರಶ್ನಿಸಿದ್ದಾರೆ.

ಬಂಧನವಾಗದಿದ್ದರೆ ಮತ್ತೆ ಪ್ರತಿಭಟನೆ ಎಚ್ಚರಿಕೆ
ಈಗ ನಗರಸಭೆ ಆಯುಕ್ತರ ಮೇಲೆ ಹಲ್ಲೆ ಮಾಡಿದವರನ್ನು ಬಂಧನ ಮಾಡಬೇಕು. ಇಲ್ಲದಿದ್ದರೆ ಮತ್ತೆ ಪ್ರತಿಭಟನೆ ನಡೆಸುವುದಲ್ಲದೆ, ಮುಸ್ಲಿಂ ವ್ಯಾಪಾರಿಗಳ್ಯಾರಿಗೂ ಯಾವ ಪ್ರದೇಶದಲ್ಲಿಯೂ, ತಾಲೂಕಿನ ಯಾವ ಹಳ್ಳಿಯಲ್ಲಿಯೂ ವ್ಯಾಪಾರ ಮಾಡಲು ಬಿಡುವುದಿಲ್ಲ ಎಂಬ ಎಚ್ಚರಿಕೆಯನ್ನು ಪ್ರತಿಭಟನಾಕಾರರು ರವಾನಿಸಿದ್ದಾರೆ.

ಇದನ್ನೂ ಓದಿ | Muslim college | ವಕ್ಫ್‌ ಬೋರ್ಡ್‌ನಲ್ಲಿ ಚರ್ಚೆ ಆಗಿದೆ, ಕಾಲೇಜು ಮುಸ್ಲಿಂ ಹೆಣ್ಮಕ್ಕಳಿಗೆ ಸೀಮಿತವಲ್ಲ ಎಂದ ವಕ್ಫ್‌ ಅಧ್ಯಕ್ಷ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka rain : ಚಿಕ್ಕಮಗಳೂರಿನ ಭದ್ರಾ ನದಿಯ ಅಬ್ಬರಕ್ಕೆ ಮತ್ತೊಂದು ಹಸು ಕೊಚ್ಚಿ ಹೋದರೆ, ಬೈಂದೂರಿನಲ್ಲಿ ಬೃಹತ್‌ ಗಾತ್ರದ ಮೊಸಳೆ ಪ್ರತ್ಯಕ್ಷಗೊಂಡಿದೆ. ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ಇದ್ದರೆ, ನೇತ್ರಾವತಿ ಅಬ್ಬರಕ್ಕೆ ಮನೆಗಳು ಜಲಾವೃತಗೊಂಡಿದೆ.

VISTARANEWS.COM


on

By

karnataka Rain
Koo

ಚಿಕ್ಕಮಗಳೂರು: ಭಾರಿ ಮಳೆಗೆ (Karnataka rain) ಚಿಕ್ಕಮಗಳೂರಿನಲ್ಲಿ ಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಮತ್ತೊಂದು ಹಸು ಬಲಿಯಾಗಿದೆ. ಚಿಕ್ಕಮಗಳೂರಿನ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಬಳಿ ಘಟನೆ ನಡೆದಿದೆ. ಹೆಬ್ಬಾಳ ಸೇತುವೆ ಮೇಲೆ 5-6 ಅಡಿ ನೀರು ಹರಿಯುತ್ತಿದ್ದು, ಸೇತುವೆ ತುದಿಯಲ್ಲಿದ್ದ ಹಸು ನೀರಿನ ರಭಸಕ್ಕೆ ಕೊಚ್ಚಿ ಹೋಗಿದೆ. ಕಳೆದ ವಾರವೂ ಹಸುವೊಂದು ಇದೇ ಸೇತುವೆ ಮೇಲೆ ಕೊಚ್ಚಿ ಹೋಗಿತ್ತು. ಇದೀಗ ಮತ್ತೊಂದು ಹಸು ನೋಡನೋಡುತ್ತಿದ್ದಂತೆ ಕೊಚ್ಚಿ ಹೋಗಿದೆ. ಕುದುರೆಮುಖ ಘಟ್ಟ ಪ್ರದೇಶದಲ್ಲಿ ಕಳೆದ ರಾತ್ರಿಯಿಂದ ನಿರಂತರ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ.

ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ

ಮಲಪ್ರಭಾ ನದಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕೊಣ್ಣೂರ ಬಳಿಯ ಹಳೆಯ ಸೇತುವೆ ಮುಳುಗಡೆಯಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿಯ ಸೇತುವೆ ಮುಳುಗಡೆಯಾಗಿದೆ. ಹುಬ್ಬಳ್ಳಿ-ವಿಜಯಪುರ ಸಂಪರ್ಕ ಕಲ್ಪಿಸುವ ಹಳೆಯ ಸೇತುವೆ ಇದಾಗಿದ್ದು, ವಾಹನಗಳ ಸಂಚಾರ ಸ್ಥಗಿತಗೊಂಡಿದೆ. ಹೊಸ ಸೇತುವೆ ಮೇಲೆ ಮಾತ್ರ ವಾಹನಗಳು ಸಂಚಾರಿಸುತ್ತಿವೆ. ಮಲಪ್ರಭಾ ನದಿಗೆ 5,000 ಹೆಚ್ಚು ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಕೊಣ್ಣೂರು, ವಾಸನ, ಲಖಮಾಪುರ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ.

ಇದನ್ನೂ ಓದಿ: Yakshagana Artist: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು

ನೇತ್ರಾವತಿ ಅಬ್ಬರಕ್ಕೆ ಮನೆಗಳು ಜಲಾವೃತ

ಕ್ಷಣ ಕ್ಷಣಕ್ಕೂ ನೇತ್ರಾವತಿ ನದಿ ನೀರಿನ ಹರಿವು ಏರಿಕೆ ಆಗುತ್ತಿದ್ದು, ಬಂಟ್ವಾಳದ ಮಣಿಹಳ್ಳದ ಕಡವಿನಬಾಗಿಲು ಬಳಿ ಏಳು ಮನೆಗಳು ಜಲಾವೃತಗೊಂಡಿದೆ. ನದಿ ನೆರೆ ನೀರಿನಿಂದ ಮನೆಗಳು ಮುಳುಗಿದೆ. ಅಪಾಯದ ಮಟ್ಟವನ್ನು ಮೀರಿ ನೇತ್ರಾವತಿ ನದಿ ಹರಿಯುತ್ತಿದ್ದು, ಮನೆಗಳು ಕುಸಿಯುವ ಭೀತಿ ಇದೆ. ಮನೆಯಂಗಳದಲ್ಲಿ ಎದೆ ಮಟ್ಟದಲ್ಲಿ ಹರಿಯುತ್ತಿದೆ. ಬಂಟ್ವಾಳದ ಹಲವು ಭಾಗಗಳಲ್ಲಿ ಭಾರೀ ನೆರೆ ಸೃಷ್ಟಿಯಾಗಿದೆ. ಶಂಭೂರು ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆಯಾಗುತ್ತಿದೆ. ಸ್ಥಳೀಯ ನಿವಾಸಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಸೂಚನೆ ನೀಡಿದೆ.

ಬೈಂದೂರಿನಲ್ಲಿ ಪ್ರತ್ಯಕ್ಷವಾದ ಬೃಹತ್ ಗಾತ್ರದ ಮೊಸಳೆ

ಉಡುಪಿಯ ಬೈಂದೂರು ತಾಲೂಕಿನ ನಾಗೂರು ಉಡುಪರ ಹಿತ್ತಲಿನಲ್ಲಿ ಬೃಹತ್‌ ಗಾತ್ರದ ಮೊಸಳೆ ಪತ್ತೆಯಾಗಿದೆ. ತೋಟದಲ್ಲಿ ಸಿಹಿ ನೀರಿನ ಬಾವಿಯಲ್ಲಿ ಮೊಸಳೆ ತೇಲಾಡುತ್ತಿತ್ತು. ಮೊಸಳೆ ನೋಡಿ ಹೌಹಾರಿದ ಸ್ಥಳೀಯರು, ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈ ಭಾಗದಲ್ಲಿ ಮೊಸಳೆಗಳು ಕಾಣ ಸಿಗುವುದೇ ಅಪರೂಪ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.

ನಾಗೂರಿನ ರತ್ನಾಕರ ಉಡುಪ ಎನ್ನುವವರ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆಯಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಕೋಳಿ ಮಾಂಸ ಹಾಕಿ ಮೊಸಳೆ ಹಿಡಿಯುವ ಯತ್ನದಲ್ಲಿದ್ದಾರೆ. ಇತ್ತೀಚೆಗೆ ಸುರಿದ ಭಾರಿ ಮಳೆಯ ಹಿನ್ನೆಲೆಯಲ್ಲಿ ಮೊಸಳೆ ತೇಲಿ ಬಂದಿರುವ ಶಂಕೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Puneeth Kerehalli: ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

Puneeth Kerehalli: ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸವನ್ನು ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್‌ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು. ಈ ವೇಳೆ ಪೊಲೀಸರು ಹಿಂದು ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದರು.

VISTARANEWS.COM


on

Puneeth Kerehalli
Koo

ಬೆಂಗಳೂರು: ಮಾಂಸ ಸಾಗಾಟಕ್ಕೆ ಅಡಚಣೆ ಪ್ರಕರಣದಲ್ಲಿ ಬಂಧನವಾಗಿದ್ದ ರಾಷ್ಟ್ರ ಜಾಗೃತಿ ಸಂಘಟನೆ ಅಧ್ಯಕ್ಷ ಪುನೀತ್ ಕೆರೆಹಳ್ಳಿಗೆ (Puneeth Kerehalli) ನಗರದ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪರಿಶೀಲನೆ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪದಲ್ಲಿ ಅರೆಸ್ಟ್‌ ಅಗಿದ್ದ ಪುನೀತ್‌ ಕೆರೆಹಳ್ಳಿಗೆ ಜುಲೈ 27ರಂದು ಕೋರ್ಟ್‌ 14 ದಿನ ನ್ಯಾಯಾಂಗ ಬಂಧನ ವಿಧಿಸಿತ್ತು. ಇದರ ಬೆನ್ನಲ್ಲೇ ಷರತ್ತುಬದ್ಧ ಜಾಮೀನು ಮಂಜೂರು ಆಗಿದೆ.

ಪ್ರತಿ ತಿಂಗಳ ಮೊದಲ ಭಾನುವಾರ ಠಾಣೆಗೆ ಹಾಜರಾಗಿ ಸಹಿ ಮಾಡಬೇಕು. ದೇಶಬಿಟ್ಟು ಹೋಗಬಾರದು, ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಮತ್ತೆ ಇಂತಹದ್ದೆ ಅಪರಾಧ ಕೃತ್ಯದಲ್ಲಿ ಭಾಗಿ ಆಗಬಾರದು ಎಂದು ಕೋರ್ಟ್‌ ಷರತ್ತುಗಳನ್ನು ವಿಧಿಸಿ, ಜಾಮೀನು ಮಂಜೂರು ಮಾಡಿದೆ.

ಬೆಂಗಳೂರಿಗೆ ಕುರಿ ಮಾಂಸದ ನೆಪದಲ್ಲಿ ನಾಯಿ ಮಾಂಸವನ್ನು ಬೇರೆ ರಾಜ್ಯದಿಂದ ತರಿಸಿ ಮಾರಾಟ ಮಾಡಲಾಗುತ್ತಿದೆ ಎಂದು ಪುನೀತ್‌ ಕೆರೆಹಳ್ಳಿ ಆರೋಪಿಸಿ, ಮೆಜೆಸ್ಟಿಕ್‌ಗೆ ಬರುತ್ತಿದ್ದ ಮಾಂಸದ ವಾಹನಗಳನ್ನು ತಡೆದಿದ್ದರು. ಪೊಲೀಸರು ಮಧ್ಯಪ್ರವೇಶಿಸಿ, ಮಾಂಸವನ್ನು ವಶಪಡಿಸಿಕೊಂಡಿದ್ದರು. ಪೊಲೀಸರ ಭದ್ರತೆಯಲ್ಲಿ ಕೋಲ್ಡ್ ಸ್ಟೋರೇಜ್‌ಗೆ ಮಾಂಸ ತುಂಬಿದ ನಾಲ್ಕು ವಾಹನಗಳು ರವಾನೆಯಾಗಿದ್ದವು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರಿಂದ ಪುನೀತ್‌ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು.

ಇದನ್ನೂ ಓದಿ | Actor Darshan: ದರ್ಶನ್‌ ಸೆಲ್‌ ಭದ್ರತೆಗೆ 7 ಜನ ಸಿಬ್ಬಂದಿ ನಿಯೋಜನೆ! ಕಾರಣ ಇದು

ಮುಸ್ಲಿಂ ಮುಖಂಡ ಅಬ್ದುಲ್‌ ರಜಾಕ್‌ ಎಂಬುವವರಿಂದ ನಾಯಿ ಮಾಂಸ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ಪುನೀತ್‌ ಕೆರೆಹಳ್ಳಿ ಮತ್ತು ತಂಡ ದಾಳಿ ಮಾಡಿತ್ತು. ಆದರೆ, ಆಹಾರ ಸುರಕ್ಷತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಮಾಂಸದ ಸ್ಯಾಂಪಲ್‌ ಅನ್ನು ಲ್ಯಾಬ್‌ಗೆ ಕಳುಹಿಸಿದ್ದರು. ಆದರೆ, ಅದು ಮೇಕೆ ಮಾಂಸ ಎಂದು ವರದಿಯಲ್ಲಿ ಬಂದಿರುವುದಾಗಿ ಗೃಹ ಸಚಿವ ಪರಮೇಶ್ವರ್‌ ತಿಳಿಸಿದ್ದರು.

ಇನ್‌ಸ್ಟಾಗ್ರಾಮ್‌ ಗೆಳೆಯನಿಗಾಗಿ ಗಂಡನನ್ನೇ ಕೊಲೆ ಮಾಡಿಸಿದ ಐನಾತಿ ಹೆಂಡತಿ

murder case
murder case

ತುಮಕೂರು: ಪರಪುರುಷನ ಮೋಹಕ್ಕೆ ಸಿಲುಕಿದಾಕೆ ತನ್ನ ಪ್ರೀತಿಗೆ ಅಡ್ಡಿಯಾಗಿದ್ದ ಪತಿಯನ್ನೇ ಕೊಂದು (Murder case) ಮುಗಿಸಿದ್ದಾಳೆ. ಇನ್‌ಸ್ಟಾಗ್ರಾಮ್‌ ಪ್ರಿಯತಮನಿಗಾಗಿ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನೇ ಕೊಲೆ ಮಾಡಿಸಿದ್ದಾಳೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಮಲ್ಲೆಕಾವು ಗ್ರಾಮದ ಬಳಿ ಘಟನೆ ನಡೆದಿದೆ.

ಪ್ರಕಾಶ್ (30) ಮೃತ ದುರ್ದೈವಿ. ಹರ್ಷಿತಾ (28) ಪತಿಯನ್ನು ಕೊಲೆ ಮಾಡಿಸಿದವಳು. ಕಲಬುರಗಿ ಜಿಲ್ಲೆಯ ಚಿಂಚುಲಿ ಮೂಲದ ಪ್ರಕಾಶ್‌ಗೆ ಇದೇ ಇನ್‌ಸ್ಟಾಗ್ರಾಮ್‌ನಿಂದ ಮೂರು ವರ್ಷದ ಹಿಂದೆ ಈ ಹರ್ಷಿತಾಳ ಪರಿಚಯವಾಗಿತ್ತು. ಬಳಿಕ ಪರಸ್ಪರ ಪ್ರೀತಿಸಿ ಇಬ್ಬರೂ ಮದುವೆಯಾಗಿದ್ದರು.

ಮದುವೆಯಾದ್ಮೇಲೆ ಪ್ರಕಾಶ್‌ ಪತ್ನಿಯ ತವರಿನಲ್ಲೇ ವಾಸವಿದ್ದ. ಈ ದಂಪತಿಗೆ ಒಂದೂವರೆ ವರ್ಷದ ಮಗುವೂ ಇತ್ತು. ಆದರೆ ಇತ್ತೀಚೆಗೆ ಹರ್ಷಿತಾಳಿಗೆ ಇನ್‌ಸ್ಟಾಗ್ರಾಂನಲ್ಲಿ ಮಾಜಿ ಪ್ರಿಯತಮ ಗುಂಡ ಎಂಬಾತ ಸಂಪರ್ಕಕ್ಕೆ ಸಿಕ್ಕಿದ್ದ. ಗುಂಡನ ಮೋಹಕ್ಕೆ ಸಿಲುಕಿದ ಹರ್ಷಿತಾ, ಪ್ರಕಾಶ್‌ನನ್ನು ಕಡೆಗಣಿಸಿದ್ದಳು. ಹರ್ಷಿತಾ ಮತ್ತು ಗುಂಡ ಇಬ್ಬರಿಗೂ ಮರುಪ್ರೇಮಾಂಕುರವಾಗಿತ್ತು.

ಮಾತ್ರವಲ್ಲ, ಮಗು- ಗಂಡನನ್ನು ಬಿಟ್ಟು ಕಳೆದ 2 ತಿಂಗಳ ಹಿಂದೆ ಪ್ರಿಯತಮ ಗುಂಡನ ಜತೆಗೆ ಮನೆ ಬಿಟ್ಟು ಪರಾರಿಯಾಗಿದ್ದಳು. ಈ ವೇಳೆ ಪ್ರಕಾಶ್ ಪೊಲೀಸ್ ಠಾಣೆಗೆ ದೂರು ನೀಡಿದ್ದ. ಬಳಿಕ ಹರ್ಷಿತಾ ಮನೆಗೆ ವಾಪಾಸ್ಸಾಗಿದ್ದಳಿ. ಆದರೆ ಒಳಗೊಳಗೆ ಗಂಡನ ಕೊಲೆಗೆ ಸ್ಕೆಚ್ ಹಾಕಿದ್ದಳು. ಪತಿಯ ಕೊಲೆಗಾಗಿ ಸಹೋದರ ಸೋಮಶೇಖರ್ ಹಾಗೂ ಪ್ರಿಯತಮ ಗುಂಡನಿಗೆ ಸುಪಾರಿ ನೀಡಿದ್ದಳು.

ಪ್ರಕಾಶ್‌ನನ್ನು ಏನೇನೋ ಹೇಳಿ ಪುಸಲಾಯಿಸಿ ಸೋಮಶೇಖರ್‌ ಕರೆಸಿಕೊಂಡಿದ್ದ. ಗುಂಡ ಮತ್ತು ಆತನ ಸ್ನೇಹಿತ ರಂಗಸ್ವಾಮಯ್ಯ, ಪ್ರಕಾಶ್ ಬರುತ್ತಿದ್ದಂತೆ ಆತನ ಮೇಲೆ ಹಲ್ಲೆ ನಡೆಸಿದ್ದರು. ಡ್ರ್ಯಾಗರ್‌ನಿಂದ ಎದೆಭಾಗಕ್ಕೆ ಚುಚ್ಚಿ ಕೊಲೆ ಮಾಡಿದ್ದರು. ಬಳಿಕ ಅಪಘಾತದ ರೀತಿಯಲ್ಲಿ ಬಿಂಬಿಸಲು ಹೊರಟಿದ್ದರು. ಆದರೆ ಎದೆಭಾಗಕ್ಕೆ ಚುಚ್ಚಿದ ಗಾಯದ ಗುರುತು ಪತ್ತೆ ಮಾಡಿದ ಪೊಲೀಸರು ಇದು ಅಪಘಾತವಲ್ಲ ಬದಲಿಗೆ ಕೊಲೆ ಎಂದು ಖಚಿತ ಪಡಿಸಿಕೊಂಡಿದ್ದರು.

ಇದನ್ನೂ ಓದಿ: Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

ವಿಚಾರಣೆ ವೇಳೆ ಪತ್ನಿ ಹರ್ಷಿತಾಳ ಮಾಸ್ಟ್‌ರ್‌ ಪ್ಲ್ಯಾನ್‌ಗೆ ಪೊಲೀಸರೇ ದಂಗಾಗಿದ್ದಾರೆ. ಸದ್ಯ ಕೊರಟಗೆರೆ ಪೊಲೀಸರಿಂದ ಹರ್ಷಿತಾ, ಸೋಮಶೇಖರ್, ರಂಗಸ್ವಾಮಯ್ಯನನ್ನು ಬಂಧಿಸಲಾಗಿದೆ. ಮುಖ್ಯ ಆರೋಪಿ ಗುಂಡನಿಗಾಗಿ ಬಲೆ ಬೀಸಿದ್ದಾರೆ. ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Continue Reading

ಉಡುಪಿ

Yakshagana Artist: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ ನೇಣಿಗೆ ಶರಣು

Yakshagana Artist: ಯುವ ಯಕ್ಷಗಾನ ಕಲಾವಿದ ನೇಣು ಬಿಗಿದುಕೊಂಡು ಆತ್ಮಹತ್ಯೆಗೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ.

VISTARANEWS.COM


on

By

yakshagana artist
Koo

ಉಡುಪಿ: ಬಡಗುತಿಟ್ಟು ಯುವ ಯಕ್ಷಗಾನ ಕಲಾವಿದ (Yakshagana Artist) ನೇಣಿಗೆ (Self Harming) ಶರಣಾಗಿದ್ದಾರೆ. ಯಕ್ಷಗಾನ ಕಲಾವಿದ ಗುರುಪ್ರಸಾದ್ ಕುಲಾಲ್ (25) ಆತ್ಮಹತ್ಯೆ ಮಾಡಿಕೊಂಡವರು. ಕಲಾವಿದ ಗುರುಪ್ರಸಾದ್ ಉಡುಪಿಯ ಬ್ರಹ್ಮಾವರ ತಾಲೂಕು ಮಂದಾರ್ತಿ ಬಳಿಯ ನೀರ್ಜೆಡ್ಡು ನಿವಾಸಿಯಾಗಿದ್ದು, ಹಲವು ವರ್ಷಗಳಿಂದ ಬಡಗುತಿಟ್ಟು ಯಕ್ಷಗಾನ ರಂಗದಲ್ಲಿ ಸೇವೆ ಸಲ್ಲಿಸಿದ್ದರು.

ಮಂದಾರ್ತಿ, ಮಾರಣಕಟ್ಟೆ, ಹಾಲಾಡಿ ಹೀಗೆ ಹಲವು ಮೇಳಗಳಲ್ಲಿ ಸೇವೆ ನೀಡಿದ್ದರು. ಬಹುತೇಕ ಸ್ತ್ರೀ ಪಾತ್ರಗಳ ಮೂಲಕವೇ ಗುರುಪ್ರಸಾದ್ ಪ್ರಚಾರದಲ್ಲಿದ್ದರು. ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಕೈಗೊಂಡಿದ್ದಾರೆ.

yakshagana artist
yakshagana artist

ಇದನ್ನೂ ಓದಿ: Karnataka Rain : ಗಾಳಿ-ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಜಾನುವಾರುಗಳು ಸಾವು; ಮತ್ತೆ ಮುಳುಗಡೆಯಾದ ತ್ರಿವೇಣಿ ಸಂಗಮ

ಮಂಡ್ಯದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಸಾವು

ಮಂಡ್ಯದ ಹನಕೆರೆ ಗ್ರಾಮದ ರೈಲ್ವೆ ಗೇಟ್ ಬಳಿ ರೈಲಿಗೆ ಸಿಲುಕಿ ಅಪರಿಚಿತ ಮಹಿಳೆ ಮೃತಪಟ್ಟಿದ್ದಾರೆ. ಹನಕೆರೆ ಗ್ರಾಮದಿಂದ ಮಂಡ್ಯ ಕಡೆ ತೆರಳುವ ಮಾರ್ಗದಲ್ಲಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಮಂಡ್ಯ ರೈಲ್ವೆ ಹೊರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ವಾರಸುದಾರರು ಸಂಪರ್ಕಿಸಲು ಪೊಲೀಸರು ಮನವಿ ಮಾಡಿದ್ದಾರೆ. ಮೈಸೂರು ರೈಲ್ವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Kannada New Movie: ನಟ ಲಿಖಿತ್ ಶೆಟ್ಟಿ ಹುಟ್ಟುಹಬ್ಬಕ್ಕೆ ʼಫುಲ್ ಮೀಲ್ಸ್ʼ ಚಿತ್ರದ ಮೋಷನ್ ಪೋಸ್ಟರ್ ರಿಲೀಸ್‌

Kannada New Movie: ‘ಫುಲ್ ಮೀಲ್ಸ್ʼ ಚಿತ್ರವನ್ನು ನಿರ್ಮಿಸುವುದರ ಜತೆಗೆ ನಾಯಕ ನಟನಾಗಿ ನಟಿಸುತ್ತಿರುವ ಲಿಖಿತ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಮೋಷನ್ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ “ಫುಲ್ ಮೀಲ್ಸ್” ಚಿತ್ರತಂಡ ಲಿಖಿತ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ.

VISTARANEWS.COM


on

Likhith Shetty starrer Full Meals movie Motion poster release
Koo

ಬೆಂಗಳೂರು: “ಸಂಕಷ್ಟಕರ ಗಣಪತಿ”, “ಫ್ಯಾಮಿಲಿ ಪ್ಯಾಕ್”, “ಅಬ್ಬಬ್ಬ” ಚಿತ್ರಗಳ ಖ್ಯಾತಿಯ ನಟ ಲಿಖಿತ್ ಶೆಟ್ಟಿ ಪ್ರಸ್ತುತ ‘ಫುಲ್ ಮೀಲ್ಸ್ʼ ಚಿತ್ರವನ್ನು ನಿರ್ಮಿಸುವುದರ ಜತೆಗೆ ನಾಯಕ ನಟನಾಗಿ ನಟಿಸುತ್ತಿದ್ದಾರೆ. “ಫುಲ್ ಮೀಲ್ಸ್” ಚಿತ್ರದ ನಾಯಕ ಲಿಖಿತ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಮೋಷನ್ ಪೋಸ್ಟರ್ (Kannada New Movie) ಬಿಡುಗಡೆ ಮಾಡುವ ಮೂಲಕ “ಫುಲ್ ಮೀಲ್ಸ್” ಚಿತ್ರತಂಡ ಲಿಖಿತ್ ಶೆಟ್ಟಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದೆ.

ಲಿಖಿತ್ ಶೆಟ್ಟಿ ಇಬ್ಬರು ನಾಯಕಿಯರ ಸಾಂಗತ್ಯದಲ್ಲಿರುವ ರೊಮ್ಯಾಂಟಿಕ್ ಥೀಮ್ ಹೊಂದಿರುವ ಈ ಸುಂದರವಾದ ಮೋಷನ್ ಪೋಸ್ಟರ್ ನೋಡುಗರ ಗಮನ ಸೆಳೆದಿದ್ದು, ಸಿನಿಮಾದ ಬಗ್ಗೆ ಕುತೂಹಲ ಮೂಡಿಸಿದೆ.

ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸ ಬಹುತೇಕ ಸಂಪೂರ್ಣವಾಗಿದ್ದು, ಸದ್ಯ ರೀರೆಕಾರ್ಡಿಂಗ್ ನಡೆಯುತ್ತಿದೆ. ವರ್ಷಾಂತ್ಯದೊಳಗೆ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿರುವುದಾಗಿ ಲಿಖಿತ್ ಶೆಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ: UGCET 2024 : ಯುಜಿಸಿಇಟಿ ಆಪ್ಶನ್ ದಾಖಲಿಸಲು ಮತ್ತಷ್ಟು ದಿನ ಅವಕಾಶ

ವೆಡ್ಡಿಂಗ್ ಫೋಟೋಗ್ರಾಫರ್ ಸುತ್ತ ಸುತ್ತುವ ಕಥಾ ಹಂದರವನ್ನು ಹೊಂದಿರುವ ಸಿನಿಮಾ, ಮನೋರಂಜನೆಯ ಜತೆಗೆ ಸಾಕಷ್ಟು ಹೊಸ ವಿಷಯಗಳನ್ನು ಒಳಗೊಂಡಿದ್ದು, ಪ್ರೇಕ್ಷಕರು ಸಿನಿಮಾವನ್ನು ಇಷ್ಟಪಡುತ್ತಾರೆಂಬ ವಿಶ್ವಾಸ ಲಿಖಿತ್ ಶೆಟ್ಟಿಯವರಿಗಿದೆ.

ಚಿತ್ರದುರ್ಗದ ಪ್ರತಿಭೆ ಎನ್. ವಿನಾಯಕ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಸಿನಿಮಾಗೆ ಹರೀಶ್ ಗೌಡ ಸಂಭಾಷಣೆ ಬರೆದಿದ್ದು, ಮನೋಹರ್ ಜೋಷಿ ಛಾಯಾಗ್ರಹಣ, ಗುರು ಕಿರಣ್ ಸಂಗೀತ, ದೀಪು ಎಸ್. ಕುಮಾರ್ ಸಂಕಲನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಚಿತ್ರಕ್ಕಿದೆ.

ಇದನ್ನೂ ಓದಿ: Karnataka Rain : ಗಾಳಿ-ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ ತುಳಿದು ಜಾನುವಾರುಗಳು ಸಾವು; ಮತ್ತೆ ಮುಳುಗಡೆಯಾದ ತ್ರಿವೇಣಿ ಸಂಗಮ

ಲಿಖಿತ್ ಶೆಟ್ಟಿ ಅವರಿಗೆ ನಾಯಕಿಯರಾಗಿ ಖುಷಿ ರವಿ ಮತ್ತು ತೇಜಸ್ವಿನಿ ಶರ್ಮ ಅಭಿನಯಿಸಿದ್ದು, ಉಳಿದಂತೆ ತಾರಾಗಣದಲ್ಲಿ ರಂಗಾಯಣ ರಘು, ಸೂರಜ್ ಲೋಕ್ರೆ, ವಿಜಯ್ ಚಂಡೂರ್, ರವಿ ಶಂಕರ್ ಗೌಡ, ರಾಜೇಶ್ ನಟರಂಗ, ಸುಜಯ್ ಶಾಸ್ತ್ರಿ, ಚಂದ್ರಕಲಾ ಮೋಹನ್, ಹೊನ್ನವಳ್ಳಿ ಕೃಷ್ಣ, ರಮೇಶ್ ಪಂಡಿತ್, ಚೇತನ್ ದುರ್ಗಾ, ನಾಗೇಂದ್ರ ಅರಸ್, ಮೂಗು ಸುರೇಶ್ ಸೇರಿದಂತೆ ಬಹು ದೊಡ್ಡ ತಾರಾ ಬಳಗವೇ ಇದೆ.

Continue Reading
Advertisement
Paris Olympics 2024
ಪ್ರಮುಖ ಸುದ್ದಿ42 seconds ago

Paris Olympics 2024 : 7 ತಿಂಗಳ ಗರ್ಭಿಣಿಯಾಗಿದ್ದರೂ ಒಲಿಂಪಿಕ್ಸ್​ ಫೆನ್ಸಿಂಗ್​ ಸ್ಪರ್ಧೆಯಲ್ಲಿ ಭಾಗವಹಿಸಿ ಮೊದಲ ಪಂದ್ಯ ಗೆದ್ದ ಈಜಿಫ್ಟ್​​ನ ನಾದಾ ಹಫೀಜ್​

karnataka Rain
ಮಳೆ23 mins ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Actor Shahrukh Khan
ಸಿನಿಮಾ35 mins ago

Actor Shahrukh Khan: ಅಮೆರಿಕದಲ್ಲಿ ಶಾರುಖ್ ಖಾನ್‌ಗೆ ಶಸ್ತ್ರಚಿಕಿತ್ಸೆ; ಬಾಲಿವುಡ್‌ ಬಾದ್‌ಶಾಗೆ ಕಾಡುತ್ತಿರುವ ಸಮಸ್ಯೆ ಏನು?

Girl
ದೇಶ41 mins ago

ಜಾಬ್‌ ಸಿಕ್ಕಿದೆ ಎಂದು ಗೆಳೆಯರಿಗೆ ಪಾರ್ಟಿ ಕೊಟ್ಟ ಯುವತಿ; ಕುಡಿದ ಸ್ನೇಹಿತರು ಆಕೆಯನ್ನೇ ರೇಪ್ ಮಾಡಿದರು!

Sarabjot Singh
ಪ್ರಮುಖ ಸುದ್ದಿ45 mins ago

Sarabjot Singh : ಭಾರತಕ್ಕೆ 2ನೇ ಒಲಿಂಪಿಕ್ಸ್ ಪದಕ ತಂದುಕೊಟ್ಟ ಮನು ಭಾಕರ್ ಶೂಟಿಂಗ್ ಪಾಲುದಾರ ಸರಬ್ಜೋತ್ ಸಿಂಗ್​ ಹಿನ್ನೆಲೆ ಇಲ್ಲಿದೆ

8th Pay Commission
ದೇಶ51 mins ago

8th Pay Commission: 8ನೇ ವೇತನ ಆಯೋಗ ಜಾರಿಯಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

Richest Cricketers
ಕ್ರಿಕೆಟ್51 mins ago

Richest Cricketers: ವಿಶ್ವದ ಟಾಪ್‌ 5 ಶ್ರೀಮಂತ ಕ್ರಿಕೆಟಿಗರಿವರು! ಎಷ್ಟಿದೆ ಇವರ ಆಸ್ತಿ?

Puneeth Kerehalli
ಕರ್ನಾಟಕ58 mins ago

Puneeth Kerehalli: ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು

IPL 2025
ಕ್ರಿಕೆಟ್59 mins ago

IPL 2025: ಬಿಸಿಸಿಐ ಈ ನಿಯಮ ಜಾರಿಗೆ ತಂದರೆ ಧೋನಿ ಮುಂದಿನ ಐಪಿಎಲ್​ ಆಡುವುದು ಅನುಮಾನ!

Dinesh Mongia
ಪ್ರಮುಖ ಸುದ್ದಿ1 hour ago

Dinesh Mongia : ಭಾರತ ತಂಡದ ಮಾಜಿ ಆಟಗಾರ ದಿನೇಶ್ ಮೋಂಗಿಯಾ ಗೋವಾ ಕ್ರಿಕೆಟ್​ ತಂಡದಲ್ಲಿ ಹೊಸ ಜವಾಬ್ದಾರಿ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ23 mins ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ5 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ24 hours ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌