Akhilesh Yadav | ಬಿಜೆಪಿಯ 100 ಶಾಸಕರನ್ನು ಕರೆತನ್ನಿ, ನೀವೇ ಮುಖ್ಯಮಂತ್ರಿ ಆಗಿ: ಇದು ಅಖಿಲೇಶ್‌ ಯಾದವ್‌ ಓಪನ್‌ ಆಫರ್ - Vistara News

ದೇಶ

Akhilesh Yadav | ಬಿಜೆಪಿಯ 100 ಶಾಸಕರನ್ನು ಕರೆತನ್ನಿ, ನೀವೇ ಮುಖ್ಯಮಂತ್ರಿ ಆಗಿ: ಇದು ಅಖಿಲೇಶ್‌ ಯಾದವ್‌ ಓಪನ್‌ ಆಫರ್

ಉತ್ತರ ಪ್ರದೇಶದಲ್ಲಿ ಬಿಜೆಪಿಯ 100 ಶಾಸಕರನ್ನು ಕರೆತಂದರೆ, ನಿಮಗೆ ಬೆಂಬಲ ನೀಡುವ ಜತೆಗೆ ಮುಖ್ಯಮಂತ್ರಿ ಹುದ್ದೆಯನ್ನೂ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳಿಗೆ ಅಖಿಲೇಶ್‌ ಯಾದವ್‌ (Akhilesh Yadav) ಆಫರ್‌ ನೀಡಿದ್ದಾರೆ.

VISTARANEWS.COM


on

Akhilesh Yadav
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಖನೌ: ದೇಶದ ಹಲವೆಡೆ ಇದುವರೆಗೆ ಪ್ರತಿಪಕ್ಷಗಳ ಶಾಸಕರ ಖರೀದಿ, ಹೈಜಾಕ್‌, ಆಪರೇಷನ್‌ ಕಮಲ ಸೇರಿ ಹಲವು ರೀತಿಯ ಆರೋಪಗಳು ಬಿಜೆಪಿ ವಿರುದ್ಧ ಕೇಳಿಬರುತ್ತಿದ್ದವು. ಬಿಜೆಪಿಯೂ ಕರ್ನಾಟಕ ಸೇರಿ ಹಲವೆಡೆ ಪ್ರತಿಪಕ್ಷಗಳ ಶಾಸಕರನ್ನು ಸೆಳೆದು ಪ್ರತಿಪಕ್ಷಗಳ ಆಕ್ರೋಶಕ್ಕೂ ತುತ್ತಾಗಿದೆ. ಆದರೆ, ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ (Akhilesh Yadav) ಅವರು ಬಿಜೆಪಿಯವರಿಗೇ ಓಪನ್‌ ಆಫರ್‌ ನೀಡಿದ್ದಾರೆ. ಆ ಮೂಲಕ ಬಿಜೆಪಿಗೆ ಸೆಡ್ಡು ಹೊಡೆದಿದ್ದಾರೆ.

ರಾಮ್‌ಪುರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಅಖಿಲೇಶ್‌ ಯಾದವ್‌, “ಉತ್ತರ ಪ್ರದೇಶದಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳು ಇದ್ದಾರೆ. ಅವರಿಬ್ಬರೂ ಮುಖ್ಯಮಂತ್ರಿಯಾಗುವ ಆಸೆ ಹೊಂದಿದ್ದಾರೆ. ನಾನು ಅವರಿಗೆ ಆಫರ್‌ ನೀಡುತ್ತಿದ್ದೇನೆ. ಇಬ್ಬರಲ್ಲಿ ಯಾರು ಬಿಜೆಪಿಯ ೧೦೦ ಶಾಸಕರನ್ನು ಕರೆತರುತ್ತಾರೋ, ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತೇವೆ. ನಾವು ಅವರಿಗೆ ಬೆಂಬಲ ನೀಡುತ್ತೇವೆ” ಎಂದು ಡಿಸಿಎಂಗಳಾದ ಕೇಶವ ಪ್ರಸಾದ್‌ ಮೌರ್ಯ ಹಾಗೂ ಬ್ರಜೇಶ್‌ ಪಾಠಕ್‌ ಅವರಿಗೆ ಓಪನ್‌ ಆಫರ್‌ ನೀಡಿದ್ದಾರೆ.

“ಉಪ ಮುಖ್ಯಮಂತ್ರಿ ಹುದ್ದೆಯಷ್ಟೇ, ಆ ಹುದ್ದೆಯಲ್ಲಿರುವವರಿಗೆ ಅಧಿಕಾರ ಇರುವುದಿಲ್ಲ. ಒಬ್ಬ ಮೆಡಿಕಲ್‌ ಆಫೀಸರ್‌ನನ್ನು ವರ್ಗಾವಣೆ ಮಾಡಲು ಕೂಡ ಆಗದಿರುವ ಹುದ್ದೆ ಇದ್ದರೆ ಏನು ಪ್ರಯೋಜನ? ನೀವು ಶಾಸಕರನ್ನು ಕರೆದುಕೊಂಡು ಬನ್ನಿ, ಮುಖ್ಯಮಂತ್ರಿ ಆಗಿ. ನಿಮ್ಮ ಜತೆ ಸಮಾಜವಾದಿ ಪಕ್ಷದ ಶಾಸಕರೂ ಇದ್ದಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ | ಭಾರಿ ಹಣದೊಂದಿಗೆ ಸಿಕ್ಕಿಬಿದ್ದ ಮೂವರು ಜಾರ್ಖಂಡ್‌ ಕೈ ಶಾಸಕರು, ಆಪರೇಷನ್‌ ಕಮಲದ ದುಡ್ಡು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Love Jihad: ಲವ್‌ ಜಿಹಾದ್‌ ವಿರುದ್ಧ ಯೋಗಿ ದಿಟ್ಟ ಕ್ರಮ; ಇನ್ನು ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಗ್ಯಾರಂಟಿ!

Love Jihad: ಬಲವಂತದ ಮತಾಂತರ, ಲವ್‌ ಜಿಹಾದ್‌ನಲ್ಲಿ ತೊಡಗುವವರಿಗೆ ಕಠಿಣ ಶಿಕ್ಷೆ ವಿಧಿಸುವ ವಿಧೇಯಕಕ್ಕೆ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ಇದರೊಂದಿಗೆ ಲವ್‌ ಜಿಹಾದಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಯೋಗಿ ಸರ್ಕಾರದ ಉದ್ದೇಶಕ್ಕೆ ಬಲ ಬಂದಂತಾಗಿದೆ.

VISTARANEWS.COM


on

Love Jihad
Koo

ಲಖನೌ: ಲವ್‌ ಜಿಹಾದ್‌ ವಿರುದ್ಧ ಕ್ರಮ ತೆಗೆದುಕೊಳ್ಳುವ ದಿಸೆಯಲ್ಲಿ ಉತ್ತರ ಪ್ರದೇಶ ಸರ್ಕಾರವು (Uttar Pradesh Government) ಮಹತ್ವದ ಹೆಜ್ಜೆ ಇರಿಸಿದೆ. ಲವ್‌ ಜಿಹಾದ್‌ನಲ್ಲಿ (Love Jihad) ತೊಡಗುವವರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ವಿಧಿಸುವ ಉತ್ತರ ಪ್ರದೇಶ ಕಾನೂನು ಬಾಹಿರ ಧಾರ್ಮಿಕ ಮತಾಂತರ (ತಿದ್ದುಪಡಿ) ವಿಧೇಯಕಕ್ಕೆ ಉತ್ತರ ಪ್ರದೇಶದ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ರಾಜ್ಯಪಾಲರ ಅಂಕಿತ ಸಿಕ್ಕರೆ ವಿಧೇಯಕವು ಕಾಯ್ದೆಯಾಗಿ ಜಾರಿಗೆ ಬರಲಿದೆ. ಕಾಯ್ದೆ ಜಾರಿಯಾದರೆ, ಲವ್‌ ಜಿಹಾದ್‌ನಲ್ಲಿ ತೊಡಗಿಸಿಕೊಂಡವರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ರೂ.ವರೆಗೆ ದಂಡ ವಿಧಿಸಲಾಗುತ್ತದೆ.

ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯ್ದೆ 2021ರಲ್ಲಿ ಬಲವಂತದ ಮತಾಂತರಕ್ಕೆ 1ರಿಂದ 10 ವರ್ಷಗಳವರೆಗೆ ಶಿಕ್ಷೆ ವಿಧಿಸಲು ಅವಕಾಶವಿತ್ತು. ಹೊಸ ಮಸೂದೆಯಡಿ ಮೋಸ ಅಥವಾ ಸುಳ್ಳಿನ ಮೂಲಕ ನಡೆಸುವ ಮತಾಂತರಗಳನ್ನು ಸಹ ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗುತ್ತದೆ. ಸ್ವಯಂಪ್ರೇರಿತ ಮತಾಂತರಕ್ಕಾಗಿ ವ್ಯಕ್ತಿಗಳು ಎರಡು ತಿಂಗಳ ಮುಂಚಿತವಾಗಿ ಮ್ಯಾಜಿಸ್ಟ್ರೇಟ್‌ಗೆ ತಿಳಿಸಬೇಕು. ಇಲ್ಲದಿದ್ದರೆ 6 ತಿಂಗಳಿನಿಂದ 3 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ಕನಿಷ್ಠ 10,000 ರೂ. ವಿಧಿಸಲಾಗುತ್ತದೆ ಎಂದು ಮಸೂದೆ ವಿವರಿಸುತ್ತದೆ.

ಈ ಮಸೂದೆಯು ಪ್ರಕಾರ ಬಲವಂತದ ಅಥವಾ ಮೋಸದ ಮತಾಂತರಕ್ಕೆ 1ರಿಂದ 5 ವರ್ಷಗಳ ಜೈಲು ಶಿಕ್ಷೆ ಮತ್ತು 15,000 ರೂ. ದಂಡ ವಿಧಿಸಲು ಪ್ರಸ್ತಾವಿಸುತ್ತದೆ. ಅಪ್ರಾಪ್ತ ವಯಸ್ಕರು, ಮಹಿಳೆಯರು ಅಥವಾ ಎಸ್‌ಸಿ-ಎಸ್‌ಟಿ ಸಮುದಾಯದ ಸದಸ್ಯರನ್ನು ಮತಾಂತರ ಮಾಡಿದರೆ ಶಿಕ್ಷೆಯ ಪ್ರಮಾಣ ಹೆಚ್ಚಲಿದೆ. ಅಂತಹ ಸಂದರ್ಭದಲ್ಲಿ 3ರಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 25,000 ರೂ. ದಂಡ ವಿಧಿಸುವ ಸಾಧ್ಯತೆ ಇದೆ.

ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ಲವ್‌ ಜಿಹಾದ್‌ ವಿರುದ್ಧ ಹಿಂದಿನಿಂದಲೂ ಕಠಿಣ ನಿಲುವು ತಾಳಿದೆ. 2017ರ ವಿಧಾನಸಭಾ ಚುನಾವಣೆಯಲ್ಲಿ ಲವ್ ಜಿಹಾದ್ ಅನ್ನು ಪ್ರಮುಖ ವಿಷಯವಾಗಿ ಕೈಗೆತ್ತಿಕೊಂಡಿತ್ತು. ಅಂದಿನಿಂದ ಈ ಸಮಸ್ಯೆಯನ್ನು ಪರಿಹರಿಸಲು ಕಠಿಣ ಕಾನೂನುಗಳನ್ನು ರಚಿಸಲು ಸರ್ಕಾರ ಬದ್ಧವಾಗಿದೆ. ಹೊಸ ಮಸೂದೆಯು ಸಂತ್ರಸ್ತರ ವೈದ್ಯಕೀಯ ವೆಚ್ಚಗಳನ್ನು ಸರಿದೂಗಿಸಲು ಹಣಕಾಸಿನ ನೆರವು ನೀಡುವ ನಿಬಂಧನೆಗಳನ್ನೂ ಒಳಗೊಂಡಿದೆ.

ಇದಲ್ಲದೆ ಈ ಮಸೂದೆಯು ಲವ್ ಜಿಹಾದ್ ಪ್ರಕರಣಗಳನ್ನು ಯಾರು ವರದಿ ಮಾಡಬಹುದು ಎಂಬ ವ್ಯಾಪ್ತಿಯನ್ನೂ ವಿವರಿಸುತ್ತದೆ. ಈ ಹಿಂದೆ ಸಂತ್ರಸ್ತರು ಅವರ ಪೋಷಕರು ಅಥವಾ ಒಡಹುಟ್ಟಿದವರು ಮಾತ್ರ ದೂರುಗಳನ್ನು ಸಲ್ಲಿಸಬಹುದಿತ್ತು. ಹೊಸ ಮಸೂದೆಯಡಿ ಯಾರು ಬೇಕಾದರೂ ಪೊಲೀಸರಿಗೆ ಲಿಖಿತ ದೂರುಗಳನ್ನು ಸಲ್ಲಿಸಬಹುದು. ನಂತರ ಅವರು ತನಿಖೆ ನಡೆಸಲಿದ್ದಾರೆ.

ಇದನ್ನೂ ಓದಿ: ‌Love Jihad: ಲವ್‌ ಜಿಹಾದ್‌ಗೆ ಮತ್ತೊಂದು ಬಲಿ? ಹೋಟೆಲ್ ರೂಮ್ ನಲ್ಲಿ ಹಿಂದೂ ಯುವತಿ ಶವ ಪತ್ತೆ; ಮುಸ್ಲಿಂ ಯುವಕ ಎಸ್ಕೇಪ್‌

Continue Reading

ದೇಶ

Nirmala Sitharaman: ಕಾಂಗ್ರೆಸ್‌ ಅವಧಿ ಬಜೆಟ್‌ನಲ್ಲಿ 26 ರಾಜ್ಯಗಳ ಹೆಸರೇ ಇರಲಿಲ್ಲ; ನಿರ್ಮಲಾ ಸೀತಾರಾಮನ್‌ ಟಾಂಗ್

Nirmala Sitharaman: ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನುದಾನ ನೀಡಿಲ್ಲ ಎಂಬುದಾಗಿ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಸಂಸತ್‌ನಲ್ಲಿ ಸ್ಪಷ್ಟನೆ ನೀಡಿದ್ದಾರೆ. ಬಜೆಟ್‌ ಭಾಷಣದಲ್ಲಿ ರಾಜ್ಯಗಳ ಹೆಸರು ಇಲ್ಲ ಎಂದ ಮಾತ್ರಕ್ಕೆ ಆ ರಾಜ್ಯಕ್ಕೆ ಅನುದಾನ ಹೋಗುವುದಿಲ್ಲ ಎಂಬ ಅರ್ಥವಲ್ಲ ಎಂದಿದ್ದಾರೆ.

VISTARANEWS.COM


on

Nirmala Sitharaman
Koo

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಕೆಲ ದಿನಗಳ ಹಿಂದೆ ಮಂಡಿಸಿದ ಬಜೆಟ್‌ನಲ್ಲಿ (Union Budget 2024) ಕರ್ನಾಟಕಕ್ಕೆ ಹೆಚ್ಚಿನ ಅನುದಾನ ಕೊಟ್ಟಿಲ್ಲ ಎಂದು ರಾಜ್ಯ ಕಾಂಗ್ರೆಸ್‌ ನಾಯಕರು ಆರೋಪಿಸುತ್ತಿದ್ದಾರೆ. ಜನರು ಕೂಡ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ದಕ್ಷಿಣ ಭಾರತದ ಹಲವು ರಾಜ್ಯಗಳು ಟೀಕಿಸುತ್ತಿದ್ದಾರೆ. ಇದರ ಬೆನ್ನಲ್ಲೇ, ಸಂಸತ್‌ನಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಪ್ರತಿಪಕ್ಷಗಳಿಗೆ ತಿರುಗೇಟು ನೀಡಿದ್ದು, “ಕಾಂಗ್ರೆಸ್‌ ನೇತೃತ್ವದ ಯುಪಿಎ ಅವಧಿಯ ಬಜೆಟ್‌ನಲ್ಲೂ 26 ರಾಜ್ಯಗಳ ಹೆಸರು ಇರಲಿಲ್ಲ. ಹಾಗಂತ, ಆ ರಾಜ್ಯಗಳಿಗೆ ಅನುದಾನ ನೀಡಿಲ್ಲ ಎಂದು ಅರ್ಥವೇ” ಎಂಬುದಾಗಿ ಪ್ರಶ್ನಿಸಿದ್ದಾರೆ.

“ಬಜೆಟ್‌ ಭಾಷಣದಲ್ಲಿ ಕೆಲ ರಾಜ್ಯಗಳ ಹೆಸರು ಇಲ್ಲದ ಕಾರಣ, ಕೇಂದ್ರ ಸರ್ಕಾರವು ಆ ರಾಜ್ಯಗಳಿಗೆ ಅನುದಾನವನ್ನೇ ಕೊಟ್ಟಿಲ್ಲ ಎಂಬ ರೀತಿ ಪ್ರತಿಪಕ್ಷಗಳು ಬಿಂಬಿಸುತ್ತಿಲ್ಲ. ಆದರೆ, ನಾನು 2004-05ರಿಂದಲೂ ಮಂಡಿಸಿದ ಬಜೆಟ್‌ ಪ್ರತಿಗಳನ್ನು ಗಮನಿಸಿದ್ದೇನೆ. 2004-05ರ ಬಜೆಟ್‌ನಲ್ಲಿ ಅಂದರೆ ಯುಪಿಎ ಅವಧಿಯಲ್ಲಿ ಪ್ರಸ್ತುತಪಡಿಸಿದ ಬಜೆಟ್‌ ಭಾಷಣದಲ್ಲಿ 17 ರಾಜ್ಯಗಳ ಹೆಸರು ಇರಲಿಲ್ಲ. 2006-07ರಲ್ಲಿ 16, 2009ರಲ್ಲಿ 26 ರಾಜ್ಯಗಳ ಹೆಸರುಗಳೇ ಇರಲಿಲ್ಲ. ಹಾಗಂತ, ಈ ರಾಜ್ಯಗಳಿಗೆ ಹಣವೇ ನೀಡಲಿಲ್ಲವೇ” ಎಂಬುದಾಗಿ ಬಜೆಟ್‌ ಕುರಿತ ಚರ್ಚೆಯ ವೇಳೆ ನಿರ್ಮಲಾ ಸೀತಾರಾಮನ್‌ ಅವರು ಪ್ರತಿಪಕ್ಷಗಳನ್ನು ಪ್ರಶ್ನಿಸಿದ್ದಾರೆ.

“ಸಂಸತ್‌ನ ಎಲ್ಲ ಸದಸ್ಯರಿಗೂ ನಾನು ಒಂದು ಮನವಿ ಮಾಡುತ್ತೇನೆ. ಬಜೆಟ್‌ ಭಾಷಣದಲ್ಲಿ ಯಾವುದಾದರೂ ರಾಜ್ಯಗಳ ಹೆಸರು ಇಲ್ಲ ಎಂದರೆ, ಆ ರಾಜ್ಯಗಳಿಗೆ ಹಣ ನೀಡುವುದಿಲ್ಲ ಎಂದು ಅರ್ಥವಲ್ಲ. ಸುಳ್ಳು ಹಾಗೂ ಜನರ ದಾರಿ ತಪ್ಪಿಸುವ ರೀತಿ ಅಭಿಯಾನ ಆರಂಭಿಸಲಾಗುತ್ತಿದೆ. ಒಂದು ರಾಜ್ಯದ ಹೆಸರನ್ನು ಬಜೆಟ್‌ ಭಾಷಣದಲ್ಲಿ ಪ್ರಸ್ತಾಪಿಸಿಲ್ಲ ಎಂದ ಮಾತ್ರಕ್ಕೆ, ಆ ರಾಜ್ಯಕ್ಕೆ ಅನುದಾನವನ್ನೇ ನೀಡಿಲ್ಲ ಎಂಬ ರೀತಿ ಹೇಳುತ್ತಿರುವುದು ನೋವು ತಂದಿದೆ” ಎಂಬುದಾಗಿ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಬಜೆಟ್‌ನಲ್ಲಿ ಕರ್ನಾಟಕಕ್ಕೆ ಅನುದಾನ ನೀಡಿಲ್ಲ ಎಂಬುದಾಗಿ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್‌ ಅವರು ಸ್ಪಷ್ಟನೆ ನೀಡಿದ್ದರು. ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದರು. ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದರು.

ನಿರ್ಮಲಾ ಸೀತಾರಾಮನ್ ಅವರ ಪ್ರಕಾರ ಹಿಂದಿನ ಯುಪಿಎ ಸರ್ಕಾರ (2004-2014) ಹತ್ತು ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ನೀಡಿರುವ ಅನುದಾನ ರೂ.60,779 ಕೋಟಿ. ಎನ್‌ಡಿಎ ಸರ್ಕಾರ (2014-2024) ಹತ್ತು ವರ್ಷಗಳ ಅವಧಿಯಲ್ಲಿ ನೀಡಿದ್ದ ಹಣ ರೂ.2,36,955 ಕೋಟಿ ಎಂದು ಸಚಿವೆ ಹೇಳಿದ್ದಾರೆ. ಆದರೆ ಹತ್ತು ವರ್ಷಗಳ ಅವಧಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ಗಾತ್ರ ಎಷ್ಟು ಪಟ್ಟು ಹೆಚ್ಚಾಗಿದೆ ಎನ್ನುವುದನ್ನು ಅವರು ಮರೆತಿದ್ದಾರೆ. ಇದು ಅವರ ಅಜ್ಞಾನವೋ, ಇಲ್ಲವೇ ಜನತೆಯ ದಾರಿ ತಪ್ಪಿಸುವ ಹುನ್ನಾರವೋ? ಎಂಬುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದರು.

ಇದನ್ನೂ ಓದಿ: HD Devegowda: ಮೋದಿ ಬಜೆಟ್‌ಗೆ ಎಚ್‌.ಡಿ.ದೇವೇಗೌಡರ ಮೆಚ್ಚುಗೆ; ಬೆಂಗಳೂರು ನೀರಿನ ಸಮಸ್ಯೆ ಬಗೆಹರಿಸಲು ಮನವಿ

Continue Reading

ದೇಶ

ಜಾಬ್‌ ಸಿಕ್ಕಿದೆ ಎಂದು ಗೆಳೆಯರಿಗೆ ಪಾರ್ಟಿ ಕೊಟ್ಟ ಯುವತಿ; ಕುಡಿದ ಸ್ನೇಹಿತರು ಆಕೆಯನ್ನೇ ರೇಪ್ ಮಾಡಿದರು!

ತೆಲಂಗಾಣದಲ್ಲಿ ಕಳೆದ 24 ಗಂಟೆಯಲ್ಲಿಯೇ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಜಾಬ್‌ ಸಿಕ್ಕ ಖುಷಿಯಲ್ಲಿ ಪಾರ್ಟಿ ಕೊಟ್ಟ ಗೆಳತಿ ಮೇಲೆಯೇ ಇಬ್ಬರು ಗೆಳೆಯರು ಅತ್ಯಾಚಾರ ಎಸಗಿದ್ದಾರೆ. ಮತ್ತೊಂದು ಪ್ರಕರಣದಲ್ಲಿ, ಖಾಸಗಿ ಬಸ್‌ನಲ್ಲಿ ಬಸ್‌ ಚಾಲಕನು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಸ್‌ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Girl
Koo

ಹೈದರಾಬಾದ್:‌ ಹೆಣ್ಣುಮಕ್ಕಳಿಗೆ ಮನೆಯ ಹೊರಗೆ ಬಿಡಿ ಮನೆಯ ಒಳಗೆ ಕೂಡ ರಕ್ಷಣೆ ಇಲ್ಲದಂತಾಗಿದೆ. ಅಪರಿಚಿತರು ಬಿಡಿ ಸಂಬಂಧಿಕರನ್ನೇ ನಂಬದಂತಹ ಸ್ಥಿತಿ ಎದುರಾಗಿದೆ. ಮಧ್ಯಪ್ರದೇಶದ ರೇವಾದಲ್ಲಿ 13 ವರ್ಷದ ಬಾಲಕನು 9 ವರ್ಷದ ತಂಗಿಯ ಮೇಲೆಯೇ ಅತ್ಯಾಚಾರ (Rape Case) ಎಸಗಿ, ಕೊಲೆ ಮಾಡಿದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಇಂತಹ ಪ್ರಕರಣಗಳು ಹೆಣ್ಣುಮಕ್ಕಳ ಸುರಕ್ಷತೆ ಕುರಿತು ಭಯ ಹುಟ್ಟಿಸುತ್ತಿವೆ. ಇದರ ಬೆನ್ನಲ್ಲೇ, ಹೈದರಾಬಾದ್‌ನಲ್ಲಿ (Hyderabad) ಒಬ್ಬ ಬಾಲ್ಯ ಸ್ನೇಹಿತ ಸೇರಿ ಇಬ್ಬರು ಯುವಕರು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಹೈದರಾಬಾದ್‌ ಯುವತಿಗೆ ಸಾಫ್ಟ್‌ವೇರ್‌ ಎಂಜಿನಿಯರ್‌ ಜಾಬ್‌ ಸಿಕ್ಕಿದ್ದು, ಬಾಲ್ಯದ ಸ್ನೇಹಿತನಾದ ಗೌತಮ್‌ ರೆಡ್ಡಿಗೆ ವಿಷಯ ತಿಳಿಸಿದ್ದಾಳೆ. ಆಗ ಗೆಳೆಯನು ಪಾರ್ಟಿ ಕೊಡಿಸು ಎಂದಿದ್ದಾನೆ. ಜಾಬ್‌ ಸಿಕ್ಕ ಖುಷಿಯಲ್ಲಿದ್ದ ಯುವತಿಯು ಬಾರ್‌ & ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಕೊಡಿಸುವುದಾಗಿ ಒಪ್ಪಿಕೊಂಡಿದ್ದಾಳೆ. ಸೋಮವಾರ (ಜುಲೈ 29) ಸಂಜೆ ಗೌತಮ್‌ ರೆಡ್ಡಿಯು ತನ್ನ ಮತ್ತೊಬ್ಬ ಸ್ನೇಹಿತನೊಂದಿಗೆ ವನಸ್ಥಲಿಪುರಂನಲ್ಲಿರುವ ರೆಸ್ಟೋರೆಂಟ್‌ಗೆ ತೆರಳಿದ್ದಾನೆ. ಅಲ್ಲಿ, ಯುವತಿ, ಗೌತಮ್‌ ರೆಡ್ಡಿ ಹಾಗೂ ಆತನ ಗೆಳೆಯ ಸೇರಿ ಪಾರ್ಟಿ ಮಾಡಿದ್ದಾರೆ. ಅದಾದ ಬಳಿಕ ಇಬ್ಬರೂ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ.

Crime Scene
Crime Scene

“ಗೌತಮ್‌ ರೆಡ್ಡಿ ಹಾಗೂ ಯುವತಿಯು 2ನೇ ಕ್ಲಾಸ್‌ನಿಂದ 10ನೇ ತರಗತಿವರೆಗೆ ಒಂದೇ ಶಾಲೆಯಲ್ಲಿ ಓದಿದ್ದಾರೆ. ಜಾಬ್‌ ಸಿಕ್ಕ ಖುಷಿಯಲ್ಲಿ ಯುವತಿಯು ಪಾರ್ಟಿಗೆ ಕರೆದಿದ್ದಾಳೆ. ಬಾರ್‌ & ರೆಸ್ಟೋರೆಂಟ್‌ನಲ್ಲಿ ಪಾರ್ಟಿ ಮಾಡಿದ ಬಳಿಕ ಕುಡಿದ ಮತ್ತಿನಲ್ಲಿ ಯುವತಿಯನ್ನು ಇಬ್ಬರೂ ಕೋಣೆಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಇಬ್ಬರೂ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ” ಎಂಬುದಾಗಿ ವನಸ್ಥಲಿಪುರಂ ಪೊಲೀಸ್‌ ಇನ್ಸ್‌ಪೆಕ್ಟರ್‌ ಡಿ ಜಲೇಂದರ್‌ ರೆಡ್ಡಿ ಮಾಹಿತಿ ನೀಡಿದ್ದಾರೆ.

ಬಸ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ

ತೆಲಂಗಾಣದಲ್ಲಿಯೇ ಮಂಗಳವಾರ (ಜುಲೈ 30) ಬಸ್‌ನಲ್ಲಿ ಮಹಿಳೆ ಮೇಲೆ ಬಸ್‌ ಚಾಲಕನು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಿರ್ಮಲ್‌ದಿಂದ ಖಾಸಗಿ ಬಸ್‌ನಲ್ಲಿ ಪ್ರಕಾಶಂ ಜಿಲ್ಲೆಗೆ ಮಹಿಳೆ ತೆರಳುತ್ತಿದ್ದರು. ಬೆಳಗಿನ ಜಾವ ಬಸ್‌ ಚಾಲಕನು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ಕುರಿತು ಮಹಿಳೆಯು ಪೊಲೀಸರಿಗೆ ದೂರು ನೀಡಿದ್ದಾರೆ. ಬಳಿಕ ಪೊಲೀಸರು ಬಸ್‌ ಚಾಲಕನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Physical Abuse: 85 ವರ್ಷದ ವೃದ್ಧೆಯ ಮೇಲೆ ಅತ್ಯಾಚಾರ; ಭೀಕರ ಘಟನೆ ಬಳಿಕ ಮಹಿಳೆ ಸಾವು

Continue Reading

ದೇಶ

8th Pay Commission: 8ನೇ ವೇತನ ಆಯೋಗ ಜಾರಿಯಾಗುತ್ತಾ? ಕೇಂದ್ರ ಸರ್ಕಾರ ಹೇಳಿದ್ದೇನು?

8th Pay Commission: 8ನೇ ವೇತನ ಆಯೋಗವು ಜನವರಿ 1, 2026 ರಂದು ಜಾರಿಗೆ ಬರಲಿದೆ. ಸಾಮಾನ್ಯವಾಗಿ, ಸರ್ಕಾರಿ ನೌಕರರ ಸಂಭಾವನೆಯನ್ನು ಪರಿಷ್ಕರಿಸಲು ಕೇಂದ್ರ ಸರ್ಕಾರವು ಪ್ರತಿ 10 ವರ್ಷಗಳಿಗೊಮ್ಮೆ ವೇತನ ಆಯೋಗವನ್ನು ರಚಿಸುತ್ತದೆ. 7 ನೇ ವೇತನ ಆಯೋಗವನ್ನು ಫೆಬ್ರವರಿ 2014 ರಲ್ಲಿ ಸ್ಥಾಪಿಸಲಾಯಿತು. ಅದರ ಶಿಫಾರಸುಗಳನ್ನು ಜನವರಿ 1, 2016 ರಿಂದ ಜಾರಿಗೆ ತರಲಾಯಿತು.

VISTARANEWS.COM


on

8th Pay Commission
Koo

ನವದೆಹಲಿ: 8ನೇ ವೇತನ ಆಯೋಗ(8th Pay Commission) ಜಾರಿಗೊಳಿಸಲು ಎರಡು ಪ್ರಸ್ತಾವನೆಗಳು ಬಂದಿದ್ದು, ಅವುಗಳನ್ನು ಪರಿಗಣಿಸಿಲ್ಲ ಎಂದು ಕೇಂದ್ರ ಸರ್ಕಾರವು ಸಂಸತ್‌(Parliament Session)ನಲ್ಲಿ ಹೇಳಿದೆ. ಈ ಕುರಿತು ಪ್ರತಿಪಕ್ಷಗಳ ಪ್ರಶ್ನೆಗೆ ಲಿಖಿತ ರೂಪದಲ್ಲಿ ಉತ್ತರಿಸಿರುವ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್‌ ಚೌಧರಿ, ಜೂನ್ 2024 ರಲ್ಲಿ 8 ನೇ ಕೇಂದ್ರ ವೇತನ ಆಯೋಗದ ಸಂವಿಧಾನಕ್ಕಾಗಿ ಎರಡು ಪ್ರಾತಿನಿಧ್ಯಗಳನ್ನು ಸ್ವೀಕರಿಸಲಾಗಿದೆ. ಅಂತಹ ಯಾವುದೇ ಪ್ರಸ್ತಾವನೆಯು ಪ್ರಸ್ತುತ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಹೇಳಿದೆ.

8ನೇ ವೇತನ ಆಯೋಗವು ಜನವರಿ 1, 2026 ರಂದು ಜಾರಿಗೆ ಬರಲಿದೆ. ಸಾಮಾನ್ಯವಾಗಿ, ಸರ್ಕಾರಿ ನೌಕರರ ಸಂಭಾವನೆಯನ್ನು ಪರಿಷ್ಕರಿಸಲು ಕೇಂದ್ರ ಸರ್ಕಾರವು ಪ್ರತಿ 10 ವರ್ಷಗಳಿಗೊಮ್ಮೆ ವೇತನ ಆಯೋಗವನ್ನು ರಚಿಸುತ್ತದೆ. 7ನೇ ವೇತನ ಆಯೋಗವನ್ನು ಫೆಬ್ರವರಿ 2014 ರಲ್ಲಿ ಸ್ಥಾಪಿಸಲಾಯಿತು. ಅದರ ಶಿಫಾರಸುಗಳನ್ನು ಜನವರಿ 1, 2016 ರಿಂದ ಜಾರಿಗೆ ತರಲಾಯಿತು.

8ನೇ ವೇತನ ಆಯೋಗದತ್ತ ಗಮನ ಕ್ರಮೇಣ ಹರಿದರೆ, 7ನೇ ವೇತನ ಆಯೋಗವು ಕೇಂದ್ರ ಸರಕಾರಿ ನೌಕರರ ವೇತನದ ಮೇಲೆ ಪ್ರಭಾವ ಬೀರುತ್ತಲೇ ಇದೆ. ಕೇಂದ್ರ ಸರ್ಕಾರಿ ನೌಕರರಿಗೆ ಹಣದುಬ್ಬರದ ಕಾರಣದಿಂದ ಅವರ ಸಂಬಳದ ನೈಜ ಮೌಲ್ಯದಲ್ಲಿನ ಸವೆತವನ್ನು ಸರಿದೂಗಿಸಲು, ಅವರಿಗೆ ತುಟ್ಟಿಭತ್ಯೆ (ಡಿಎ) ನೀಡಲಾಗುತ್ತದೆ ಮತ್ತು ಹಣದುಬ್ಬರದ ದರವನ್ನು ಆಧರಿಸಿ ಪ್ರತಿ ಆರು ತಿಂಗಳಿಗೊಮ್ಮೆ ಡಿಎ ದರವನ್ನು ನಿಯತಕಾಲಿಕವಾಗಿ ಪರಿಷ್ಕರಿಸಲಾಗುತ್ತದೆ.

ವೇತನ ಆಯೋಗ ಎಂದರೇನು?

ವೇತನ ಆಯೋಗವು ಭಾರತದಲ್ಲಿ ಸರ್ಕಾರದಿಂದ ನೇಮಕಗೊಂಡ ಸಂಸ್ಥೆಯಾಗಿದ್ದು, ಕೇಂದ್ರ ಸರ್ಕಾರಿ ನೌಕರರ ಸಂಬಳ ರಚನೆ, ಭತ್ಯೆಗಳು ಮತ್ತು ಇತರ ಪ್ರಯೋಜನಗಳಿಗೆ ಬದಲಾವಣೆಗಳನ್ನು ಪರಿಶೀಲಿಸಲು ಮತ್ತು ಶಿಫಾರಸು ಮಾಡಲು ಕಾರಣವಾಗಿದೆ. ಹಣದುಬ್ಬರ, ಆರ್ಥಿಕ ಬೆಳವಣಿಗೆ ಮತ್ತು ಬದಲಾಗುತ್ತಿರುವ ಉದ್ಯೋಗದ ಪಾತ್ರಗಳನ್ನು ಮುಂದುವರಿಸಲು ಈ ಆಯೋಗಗಳನ್ನು ಸಾಮಾನ್ಯವಾಗಿ ಪ್ರತಿ 10 ವರ್ಷಗಳಿಗೊಮ್ಮೆ ರಚಿಸಲಾಗುತ್ತದೆ. 7ನೇ ವೇತನ ಆಯೋಗದ ಶಿಫಾರಸುಗಳನ್ನು 2016ರ ಜನವರಿಯಲ್ಲಿ ಜಾರಿಗೊಳಿಸಲಾಗಿತ್ತು. ಇದು ಪರಿಷ್ಕೃತ ವೇತನ ಮ್ಯಾಟ್ರಿಕ್ಸ್ ಮತ್ತು ಹೆಚ್ಚಿದ ಭತ್ಯೆಗಳನ್ನು ಒಳಗೊಂಡಂತೆ ಸಂಬಳದ ರಚನೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ತಂದಿತು.

ಇತ್ತೀಚೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಿಸಲು ರಚನೆ ಮಾಡಿದ್ದ 7ನೇ ವೇತನ ಆಯೋಗದ (7th Pay Commission) ಶಿಫಾರಸುಗಳನ್ನು ಆ.1ರಿಂದ ಜಾರಿ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಯಾರಿಗೆ ಎಷ್ಟು ವೇತನ ಹೆಚ್ಚಾಗಲಿದೆ ಎಂಬ ಕುರಿತ ಪರಿಷ್ಕೃತ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಪ್ರಕಟ ಮಾಡಲಾಗಿತ್ತು.

ಈ ಬಗ್ಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್‌.ಕೆ.ಅತೀಕ್‌ ಆದೇಶ ಹೊರಡಿಸಿದ್ದಾರೆ. 2022ರ ನ.19ರಂದು ರಚಿಸಲಾಗಿದ್ದ 7ನೇ ರಾಜ್ಯ ವೇತನ ಆಯೋಗವು ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು ಹಾಗೂ ಪಿಂಚಣಿ ಪರಿಷ್ಕರಣೆ ಕುರಿತಂತೆ ತನ್ನ ವರದಿಯ ಸಂಪುಟ-1 ನ್ನು ಸಲ್ಲಿಸಿದೆ. ವರದಿಯಲ್ಲಿನ ಶಿಫಾರಸುಗಳನ್ನು ಸರ್ಕಾರವು ಪರಿಗಣಿಸಿದ್ದು, ಅದರಂತೆ, 7ನೇ ರಾಜ್ಯ ವೇತನ ಆಯೋಗವು ಶಿಫಾರಸು ಮಾಡಿರುವ ಮುಖ್ಯ ವೇತನ ಶ್ರೇಣಿ ಮತ್ತು ಪರಿಷ್ಕೃತ 25 ಸ್ಥಾಯಿ ವೇತನ ಶ್ರೇಣಿಗಳನ್ನು ಜುಲೈ 1ರಿಂದ ರಿಂದ ಜಾರಿಗೆ ಬರುವಂತೆ ಅನುಷ್ಠಾನಗೊಳಿಸಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Parliament Session: ಪತಿ ಅಮಿತಾಬ್‌ ಹೆಸರು ಜಯಾ ಬಚ್ಚನ್‌ಗೆ ಅಲರ್ಜಿ! ಸಂಸತ್‌ನಲ್ಲಿ ಆ ಹೆಸರು ಹೇಳಬೇಡಿ ಎಂದ ನಟಿ!

Continue Reading
Advertisement
Kenchanala Marikamba Jatra
ಶಿವಮೊಗ್ಗ6 mins ago

Shivamogga News: ವಿಜೃಂಭಣೆಯಿಂದ ನಡೆದ ಕೆಂಚನಾಲ ಮಾರಿಕಾಂಬಾ ಜಾತ್ರೆ

Aryan Khan
ಸಿನಿಮಾ11 mins ago

Aryan Khan: ದಿಲ್ಲಿಯ ಸಣ್ಣ ಮನೆಯಲ್ಲಿದ್ದ ಶಾರುಖ್‌ ದಂಪತಿ; ಅಲ್ಲಿನ ಬಂಗಲೆಯನ್ನು 37 ಕೋಟಿ ರೂ.ಗೆ ಖರೀದಿಸಿದ ಪುತ್ರ!

IND vs SL
ಪ್ರಮುಖ ಸುದ್ದಿ14 mins ago

IND vs SL : ಭಾರತ ವಿರುದ್ಧದ ಏಕ ದಿನ ಸರಣಿಗೆ ಶ್ರೀಲಂಕಾ ತಂಡ ಪ್ರಕಟ; ಹೊಸ ನಾಯಕನ ಘೋಷಣೆ

ಪ್ರಮುಖ ಸುದ್ದಿ19 mins ago

Wayanad Landslide: ಕೇರಳದಲ್ಲಿ ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

Star Saree Styling Tips
ಫ್ಯಾಷನ್19 mins ago

Star Saree Styling Tips: ಎಂಬ್ರಾಯ್ಡರಿ ಸೀರೆಯಲ್ಲಿ ನಟಿ ರಶ್ಮಿಕಾ ಮಂದಣ್ಣರಂತೆ ಕಾಣಿಸಬೇಕೇ? ಈ 5 ಟಿಪ್ಸ್ ಫಾಲೋ ಮಾಡಿ

karnataka Weather Forecast
ಮಳೆ21 mins ago

Karnataka Weather : ಮುಂದಿನ 24 ಗಂಟೆಯಲ್ಲಿ ಭಾರಿ ಮಳೆ; ಮಲೆನಾಡಿನ ಶಾಲಾ-ಕಾಲೇಜು ರಜೆ

Love Jihad
ದೇಶ33 mins ago

Love Jihad: ಲವ್‌ ಜಿಹಾದ್‌ ವಿರುದ್ಧ ಯೋಗಿ ದಿಟ್ಟ ಕ್ರಮ; ಇನ್ನು ಜಿಹಾದಿಗಳಿಗೆ ಜೀವಾವಧಿ ಶಿಕ್ಷೆ ಗ್ಯಾರಂಟಿ!

Tata Motors launched two programs Vidyadhana and Utkarsha to facilitate higher education of technician children
ವಾಣಿಜ್ಯ34 mins ago

Tata Motors: ಮಕ್ಕಳ ಉನ್ನತ ಶಿಕ್ಷಣಕ್ಕೆ ನೆರವಾಗಲು ಟಾಟಾ ಮೋಟಾರ್ಸ್‌ನಿಂದ ‘ವಿದ್ಯಾಧನ’, ‘ಉತ್ಕರ್ಷ’ ಯೋಜನೆ

ಕರ್ನಾಟಕ42 mins ago

Wayanad Landslide: ಕೇರಳ ಭೂ ಕುಸಿತ; ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರಕ್ಕೆ ಎಚ್‌ಡಿಕೆ ಸಲಹೆ

Custard Apple Benefits
Latest1 hour ago

Custard Apple Benefits: ಕ್ಯಾನ್ಸರ್‌ ಸೇರಿದಂತೆ ಹಲವು ರೋಗಗಳನ್ನು ತಡೆಯುವ ಶಕ್ತಿ ಸೀತಾಫಲಕ್ಕಿದೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ7 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ1 day ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ1 day ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ1 day ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ2 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ2 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ2 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ2 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌