Leopard attack | ಬೆಂಗಳೂರು ತುರಹಳ್ಳಿ ಕಡೆ 4 ಚಿರತೆ ಇಲ್ಲವೇ ಇಲ್ಲ; ಚಿರತೆ ವಾಸಕ್ಕೆ ತುರಹಳ್ಳಿ ಅರಣ್ಯ ಯೋಗ್ಯವಲ್ಲ: ಡಿಆರ್‌ಎಫ್‌ಒ - Vistara News

ಕರ್ನಾಟಕ

Leopard attack | ಬೆಂಗಳೂರು ತುರಹಳ್ಳಿ ಕಡೆ 4 ಚಿರತೆ ಇಲ್ಲವೇ ಇಲ್ಲ; ಚಿರತೆ ವಾಸಕ್ಕೆ ತುರಹಳ್ಳಿ ಅರಣ್ಯ ಯೋಗ್ಯವಲ್ಲ: ಡಿಆರ್‌ಎಫ್‌ಒ

Leopard attack | ತುರಹಳ್ಳಿ ಅರಣ್ಯ ಪ್ರದೇಶದಿಂದ ಬೆಂಗಳೂರಿನ ಹಲವು ಕಡೆ 4 ಚಿರತೆಗಳು ಕಾಣಿಸಿಕೊಂಡಿವೆ ಎಂಬ ಚರ್ಚೆಗಳು ಹುಟ್ಟುಕೊಂಡ ಬೆನ್ನಲ್ಲೇ ಡಿಆರ್‌ಎಫ್‌ಒ ಪ್ರತಿಕ್ರಿಯೆ ನೀಡಿದ್ದಾರೆ. ಕುರುಹುಗಳನ್ನು ಗಮನಿಸಿದಾಗ ಒಂದೇ ಚಿರತೆ ಬಂದಿರಬಹುದು ಎಂದು ಹೇಳಿದ್ದಾರೆ.

VISTARANEWS.COM


on

ಉಡುಪಿಯ ಪರ್ಕಳದಲ್ಲಿ ಚಿರತೆ ದಾಳಿ
ಸಂಗ್ರಹ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬೆಂಗಳೂರಿನ ಜನತೆಯ ಆತಂಕಕ್ಕೆ ಕಾರಣವಾಗಿರುವ ಚಿರತೆ ದಾಳಿ (Leopard attack) ಬಗ್ಗೆ ನಾನಾ ಚರ್ಚೆಗಳು ಹುಟ್ಟಿಕೊಂಡಿದೆ. ಈ ಮಧ್ಯೆ ನಾಲ್ಕು ಚಿರತೆಗಳು ಕಾಣಿಸಿಕೊಂಡಿವೆ ಎಂದೆಲ್ಲ ಚರ್ಚೆಗಳು ನಡೆಯುತ್ತಿವೆ. ಆದರೆ, ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ೪ ಚಿರತೆಗಳು ಇಲ್ಲವೇ ಇಲ್ಲ, ಕಾಣಿಸಿಕೊಂಡಿದ್ದು ಒಂದು ಚಿರತೆ ಇದ್ದ ಕುರುಹು ಇದೆಯಷ್ಟೇ ಎಂದು ಅರಣ್ಯ ಇಲಾಖೆಯ ಡಿಆರ್‌ಎಫ್‌ಒ ರವಿ ಹೇಳಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತುರಹಳ್ಳಿ ಅರಣ್ಯ ಪ್ರದೇಶವು ಚಿರತೆ ವಾಸಕ್ಕೆ ಸೂಕ್ತವಲ್ಲ. ಚಿರತೆಯು ಆ ಭಾಗದಿಂದ ಹೊರಟು ಹೋಗಿರುವ ಸಾಧ್ಯತೆ ಇದೆ. ಮೇಲ್ನೋಟಕ್ಕೆ ಚಿರತೆ ಅಲ್ಲಿಯೇ ಇರುವ ಕುರಿತು ಕುರುಹುಗಳು ಸಿಕ್ಕಿಲ್ಲ. ಆದರೂ ಎಂದಿನಂತೆ ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾರೆ. ಮೊನ್ನೆ ಕಾಣಿಸಿಕೊಂಡ ಚಿರತೆ ಪುನಃ ಬನ್ನೇರುಘಟ್ಟಕ್ಕೆ ವಾಪಸ್ ಆಗಿರಬಹುದು ಎಂದು ತಿಳಿಸಿದರು.

ಸದ್ಯ ಖಾಸಗಿಯವರ ಜಾಗಗಳಲ್ಲಿ ಒಂದು ಬೋನ್ ಇಡಲಾಗಿದೆ. ಜನ ಆತಂಕಪಡುವ ಅಗತ್ಯವಿಲ್ಲ. ಜಾಗೃತಿ ಮೂಡಿಸುವ ಕೆಲಸ ಆಗುತ್ತಿದೆ. ಚಿರತೆ ಹೋಗಿರುವ ಮಾಹಿತಿ ಇದೆ. ಆದರೂ ಜನರ ಹಿತದೃಷ್ಟಿಯಿಂದ ಶೋಧ ಕಾರ್ಯವನ್ನು ನಾವು ಮುಂದುವರಿಸುತ್ತೇವೆ ಎಂದು ರವಿ ಹೇಳಿದರು.

ಇದನ್ನೂ ಓದಿ | Leopard attack | ಬೆಂಗಳೂರಲ್ಲಿ ಇನ್ನೂ ಸೆರೆಸಿಗದ ಚಿರತೆ; ಅರಣ್ಯ ಇಲಾಖೆ ಸಿಬ್ಬಂದಿ ಹೈ ಅಲರ್ಟ್‌, ಜನತೆಗೆ ಕಾಡಿದ ಜೀವಭಯ

514.26 ಎಕರೆ ಅರಣ್ಯ ಜಾಗ
ತುರಹಳ್ಳಿ ಅರಣ್ಯ ಪ್ರದೇಶವು ಸುಮಾರು 514.26 ಎಕರೆ ವ್ಯಾಪ್ತಿಯನ್ನು ಹೊಂದಿದೆ. ಸೋಂಪುರ, ಶ್ರೀನಿವಾಸಪುರ, ಆರ್.ಆರ್. ನಗರ, ಮೈಲಸಂದ್ರ, ಕೋಡಿಪಾಳ್ಯ, ಗೆಟ್ಟಿಗರಹಳ್ಳಿ ಪ್ರದೇಶಗಳನ್ನು ಅರಣ್ಯ ವ್ಯಾಪ್ತಿಯು ಒಳಗೊಂಡಿದೆ. ಹೀಗಾಗಿ ಈ ಅರಣ್ಯ ಸುತ್ತಮುತ್ತಲಿನ ಎಲ್ಲ ಸ್ಥಳೀಯರಿಗೂ ಚಿರತೆ ಭಯ ಕಾಡುತ್ತಿದೆ.

ಈಗಾಗಲೇ ಶ್ರೀನಿವಾಸಪುರದಲ್ಲಿ ಎರಡು ಬಾರಿ ಚಿರತೆ ದಾಳಿ ನಡೆಸಿದೆ. ಈ ಭಾಗಗಳಲ್ಲಿ ಹಂದಿ ಸಾಕಾಣಿಕೆ, ಕುರಿ ಸಾಕಾಣಿಕೆ ಹೆಚ್ಚಿರುವ ಕಾರಣ ಅವುಗಳನ್ನು ಬೇಟೆಯಾಡಲು ಕಾರಣವಾಗಿದೆ. ಹೀಗಾಗಿ ಸಾಕಣೆದಾರರು ಭಯಗೊಂಡಿದ್ದಾರೆ.

ಇದನ್ನೂ ಓದಿ | Leopard attack | ಹೊನ್ನಾವರದ ಹೊಸಾಕುಳಿಯ ಮನೆ ಅಂಗಳಕ್ಕೆ ಬಂದ ಚಿರತೆ, ನಾಯಿಯ ಅಬ್ಬರದ ಸದ್ದಿಗೆ ಎಸ್ಕೇಪ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Rain News : ಭಾನುವಾರ ರಾಯಚೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಮುಂದಿನ 24 ಗಂಟೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ರಾಯಚೂರು/ಬೆಂಗಳೂರು: ಭಾನುವಾರ ರಾಯಚೂರು ನಗರದಾದ್ಯಂತ ಭಾರಿ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಸುರಿದ ಮಳೆಗೆ (Rain News) ವಾತಾವರಣ ಕೂಲ್‌ (Karnataka weather Forecast) ಆಗಿತ್ತು. ದಿಢೀರ್‌ ಮಳೆಯಿಂದಾಗಿ ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಕೊಂಚ ನಿರಾಸೆಯಾಗಿತ್ತು. ಕೆಲವಡೆ ಮಳೆಯಿಂದ ವಾಹನ ಸವಾರರು ಪರದಾಡಿದರು.

ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿಯ ಹಲವು ಕಡೆಗಳಲ್ಲಿ ಹಾಗೂ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿತ್ತು. ಗೋಕರ್ಣದಲ್ಲಿ 2, ಶಿರಾಲಿ ಹಾಗೂ ಮಂಗಳೂರು ವಿಮಾನ ನಿಲ್ದಾಣದಲ್ಲಿ 1 ಸೆಂ.ಮೀ ಮಳೆಯಾಗಿತ್ತು.

ಮುಂದಿನ 24 ಗಂಟೆ ಮಳೆ ಸಾಧ್ಯತೆ

ಜೂ. 17, 18, 19 ರಂದು ಕರಾವಳಿಯ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಹಗುರದಿಂದ ಕೂಡಿದ ಮಳೆಯಾಗಹುದು. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಮತ್ತು 21 ಡಿ.ಸೆ ಇರಲಿದೆ.

ಬಳಿಕ ಜೂನ್‌ 20 ಮತ್ತು 21ರಂದು ಕರಾವಳಿ ಬಹುತೇಕ ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದೆಡೆ ಕೆಲವು ಸ್ಥಳಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Actor Darshan: ಚಿತ್ರರಂಗದಿಂದ ಒಬ್ಬರನ್ನು ಬ್ಯಾನ್ ಮಾಡುವುದಕ್ಕಿಂತ ನ್ಯಾಯ ಮುಖ್ಯ. ಫಿಲ್ಮ್‌ ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ಹಾಗೆಯೇ ರೇಣುಕಾಸ್ವಾಮಿ ಸಾವಿಗೂ ನ್ಯಾಯ ಸಿಗಬೇಕು ಎಂದು ನಟ ಕಿಚ್ಚ ಸುದೀಪ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Actor Darshan
Koo

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ (Actor Darshan) ಬಂಧನವಾಗಿರುವ ಬಗ್ಗೆ ನಟ ಕಿಚ್ಚ ಸುದೀಪ್‌ (Kiccha Sudeep) ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಕೊಲೆ ಕೇಸ್‌ನಲ್ಲಿ ಬಂಧನವಾಗಿರುವ ದರ್ಶನ್‌ ಅವರನ್ನು ಚಿತ್ರರಂಗದಿಂದ ಬ್ಯಾನ್‌ ಮಾಡಬೇಕು ಎಂಬ ಒತ್ತಾಯಗಳು ಕೇಳಿಬರುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಬ್ಯಾನ್ ಅನ್ನೋದಕ್ಕಿಂತ ನ್ಯಾಯ ಮುಖ್ಯ. ಫಿಲ್ಮ್‌ ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ರೇಣುಕಾಸ್ವಾಮಿ ಸಾವಿಗೂ ನ್ಯಾಯ ಬೇಕು, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ.

ದರ್ಶನ್‌ ಬಂಧನದ ಬಗ್ಗೆ ಪ್ರತಿಕ್ರಿಯಿಸಿ, ನೀವು ಮಾಧ್ಯಮಗಳಲ್ಲಿ ಏನು ತೋರಿಸುತ್ತಿದ್ದೀರಿ ಅಷ್ಟು ಮಾತ್ರ ನನಗೆ ಗೊತ್ತು. ಮಾಧ್ಯಮ, ಪೊಲೀಸ್ ಸಿಬ್ಬಂದಿ ಪ್ರಯತ್ನದಿಂದ ಸತ್ಯಾಂಶಗಳು ಬೆಳಕಿಗೆ ಬಂದಿವೆ. ಸಿಎಂ ಸಿದ್ದರಾಮಯ್ಯ ಹಠ ಹಿಡಿದು ಕುಳಿತ ಮೇಲೆ ಈ ಕೇಸ್ ಎಫೆಕ್ಟ್ ಗೊತಾಗ್ತಿದೆ. ಆ ಕುಟುಂಬದ ಹೆಣ್ಣು ಮಗಳಿಗೆ ನ್ಯಾಯ ಸಿಗಬೇಕು. ಬಾಳಿ ಬದುಕಬೇಕಿದ್ದ ರೇಣುಕಾಸ್ವಾಮಿಗೆ ನ್ಯಾಯ ಬೇಕು. ನ್ಯಾಯದ ಮೇಲೆ ನಂಬಿಕೆ ಹುಟ್ಟಬೇಕೆಂದರೆ ನ್ಯಾಯ ಸಿಗಬೇಕು. ಚಿತ್ರರಂಗಕ್ಕೂ ನ್ಯಾಯ ಸಿಗಬೇಕು ತಿಳಿಸಿದರು.

ದರ್ಶನ್ ಬ್ಯಾನ್ ಕುರಿತು ಮಾತನಾಡಿ, ನ್ಯಾಯ ಬೇರೆ, ಫ್ರೆಂಡ್‌ಶಿಪ್‌ ಬೇರೆ. ಚಿತ್ರರಂಗದ ಮೇಲೆ ಕಪ್ಪು ಚುಕ್ಕೆ ಬರುವುದು ನಮಗೂ ಇಷ್ಟವಿಲ್ಲ. ಯಾರೋ ಒಬ್ಬರಿಂದ ಚಿತ್ರರಂಗ ಹಾಳಾಗಬಾರದು. ನಾವು ಯಾರೂ ಕಾನೂನು ಅಲ್ಲ. ಈ ಕೇಸ್‌ನಿಂದ ಹೊರಬಂದರೆ ಬ್ಯಾನ್ ಅನ್ನೋದು ಬರೋದಿಲ್ಲ. ಬ್ಯಾನ್ ಅನ್ನೋದಕ್ಕಿಂತ ನ್ಯಾಯ ಮುಖ್ಯ. ಚೇಂಬರ್ ಇರುವುದು ನಿರ್ಮಾಪಕ, ಕಲಾವಿದರಿಗೆ ನ್ಯಾಯ ಕೊಡಿಸಲು. ಬ್ಯಾನ್ ಅನ್ನೋ ಪದ ಕಟ್ಟಬೇಡಿ. ಪೊಲೀಸ್ ಸಿಬ್ಬಂದಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಕೊಡಿ ಅಷ್ಟು ಸಾಕು ಎಂದು ಕೋರಿದರು.

ಇದನ್ನೂ ಓದಿ | Actor Darshan:  ಇನ್​ಸ್ಟಾಗ್ರಾಮ್‌ ಖಾತೆಯನ್ನು ಸಕ್ರಿಯಗೊಳಿಸಿದ ದರ್ಶನ್‌ ಪತ್ನಿ; ಮಾಧ್ಯಮದ ಮುಂದೆ ಬರ್ತಾರಾ?

ಚಿತ್ರರಂಗದಲ್ಲಿ ಹಿರಿಯರು ಇದ್ದಾರೆ. ಒಳ್ಳೆ ಸಿನಿಮಾ ಬಂದರೆ ಜನ ಥಿಯೇಟರ್‌ಗೆ ಬಂದೇ ಬರುತ್ತಾರೆ. ಪ್ರಯತ್ನ ಮಾಡೋಣ, ಚಿತ್ರರಂಗ ಬೆಳಿಯುತ್ತದೆ. ಮ್ಯಾಕ್ಸ್ ಸಿನಿಮಾ ಶೂಟಿಂಗ್ ಮುಕ್ತಾಯಗೊಂಡಿದೆ. ಆಗಸ್ಟ್‌ನಲ್ಲಿ ತೆರೆಗೆ ಬರೋ ಸಾಧ್ಯತೆ ಇದೆ ಎಂದು ಹೇಳಿದರು.

Continue Reading

ಸಿನಿಮಾ

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka Swamy murder : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ಸೇರಿ ಈಗಾಗಲೇ ಆರೋಪಿಗಳ ಬಂಧನವಾಗಿದೆ. ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿದ್ದ ಆಟೋ ಹಾಗೂ ಕಾರನ್ನು ಸೀಜ್ ಮಾಡಲಾಗಿದೆ. ಇದೇ ವೇಳೆ ಎ1 ಆರೋಪಿ ಪವಿತ್ರಾ ಗೌಡ ಸೇರಿ ಹಲವು ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ಮಾಡಲಾಯಿತು.

VISTARANEWS.COM


on

By

Renukaswamy murder case The location of the accused is complete
Koo

ಬೆಂಗಳೂರು/ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ (Renuka Swamy murder) ಪ್ರಕರಣ ಸಂಬಂಧ ತನಿಖೆಯು ಚುರುಕುಗೊಂಡಿದೆ. ಭಾನುವಾರ ಆರೋಪಿಗಳ ಮನೆಯಲ್ಲಿ ಸ್ಥಳ ಮಹಜರು ಪ್ರಕ್ರಿಯೆಯನ್ನು ನಡೆಸಲಾಯಿತು. ಚಿತ್ರದುರ್ಗದಲ್ಲಿ ಬೆಂಗಳೂರು ಪೊಲೀಸರಿಂದ ಸ್ಥಳ ಮಹಜರು ವೇಳೆ ರೇಣುಕಾಸ್ವಾಮಿ ಕಿಡ್ನ್ಯಾಪ್‌ಗೆ ಬಳಸಿದ್ದ ಆಟೋವನ್ನು ಸೀಜ್‌ ಮಾಡಲಾಯಿತು. ಜತೆಗೆ ಆರೋಪಿ ರವಿ ಮನೆ ಬಳಿ ಇದ್ದ ಟೊಯೊಟಾ ಇಟಿಯೋಸ್ ಕಾರನ್ನು ಜಪ್ತಿ ಮಾಡಲಾಗಿದೆ. ಭೀಕರವಾಗಿ ಕೊಂದರೂ ಆರೋಪಿಗಳಿಗೆ ಪಾಪಪ್ರಜ್ಞೆ ಕಾಡುತ್ತಿಲ್ವಾ? ಅಥವಾ ಪ್ರಭಾವಿಗಳ ಬೆಂಬಲ ಇದೆ ಎಂಬಂತೆ ನಗುತ್ತಲೇ ಪವಿತ್ರಾ ಗೌಡ ಹಾಗೂ ಪವನ್‌ ಮನೆಯಿಂದ ಹೊರಬಂದಿದ್ದಾರೆ.

ಪವಿತ್ರಾಗೌಡ ಮನೆಯಲ್ಲಿ ಸತತ 3 ಗಂಟೆಗಳ ಕಾಲ ಪರಿಶೀಲನೆ

ಬೆಂಗಳೂರಿನ ಆರ್‌ಆರ್ ನಗರದಲ್ಲಿ ಕಳೆದ 10 ವರ್ಷಗಳಿಂದ ಪವಿತ್ರಾಗೌಡ ವಾಸವಿದ್ದು, ಭಾನುವಾರ ಅವರ ನಿವಾಸದಲ್ಲಿ ಪೊಲೀಸರು ಸ್ಥಳ ಮಹಜರ್ ಮಾಡಿದರು. ಪವಿತ್ರಾ ಜೂನ್ 9 – 10ರಂದು ಎಲ್ಲಿದ್ದರು? ಎಷ್ಟೊತ್ತಿಗೆ ಮನೆಯಿಂದ ತೆರಳಿದ್ದರು ಎಂಬುದನ್ನು ತಿಳಿಯಲು ಸಿಸಿಟಿವಿ ಪರಿಶೀಲನೆ ನಡೆಸಲಾಯಿತು.

ಪವಿತ್ರಾಗೌಡ ಇರುವ ಮನೆಯು ಡುಪ್ಲೆಕ್ಸ್ ಆಗಿದ್ದು ಒಟ್ಟು ಮೂರು ಮಹಡಿ ಇದೆ. ಇದರಲ್ಲಿ ಕೆಳಗಡೆ ಪಾರ್ಕಿಂಗ್‌ ಜಾಗದೊಂದಿಗೆ ಪವನ್ ವಾಸಕ್ಕೆ ಮನೆಯೊಂದು ಇದೆ. ಪವನ್ ಪವಿತ್ರಾ ಗೌಡಗೆ ಮನೆ‌ ಕೆಲಸಗಾರ ಜತೆಗೆ ನಾಯಿಯನ್ನು ನೋಡಿಕೊಳ್ಳುತ್ತಿದ್ದ. ಆಗಾಗ ದರ್ಶನ್ ಈ ಮನೆಗೆ ಫಾರ್ಚುನರ್ ಕಾರಿನಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಅಕ್ಕಪಕ್ಕ ಮನೆಯವರ ಜತೆ ಪವಿತ್ರಾಗೆ ಸಂಪರ್ಕವೇ ಇರಲಿಲ್ಲ. ಪವಿತ್ರಾ ವೊಲ್ಸ್ ವ್ಯಾಗೆನ್ ಮತ್ತು ರೇಂಜ್ ರೋವರ್‌ ಕಾರಿನಲ್ಲಿ ಓಡಾಡುತ್ತಿದ್ದಳು ಎನ್ನಲಾಗಿದೆ. ಇನ್ನೂ ಪವಿತ್ರಾ ಗೌಡ ಮಗಳು ಹಾಸ್ಟೆಲ್‌ನಲ್ಲಿ ಇದ್ದು, ಆಗಾಗ ಬಂದು ಹೋಗುತ್ತಿದ್ದಳು.

ಗುಸು ಗುಸು ಮಾತು, ನಗುತ್ತಲೇ ಮಹಜರ್‌ ಪ್ರಕ್ರಿಯೆಯಲ್ಲಿ ಭಾಗಿ

ಪವಿತ್ರಾಗೌಡ ಜತೆಗೆ ಪವನ್‌ನನ್ನು ಸ್ಥಳ ಮಹಜರಿಗೆ ಕರೆತರಲಾಗಿತ್ತು. ಈ ವೇಳೆ ಇಬ್ಬರು ಗುಸು ಗುಸು ಎಂದು ಮಾತನಾಡುತ್ತಿರುವುದು ಕಂಡು ಬಂತು. ಪವನ್ ನಗು ನಗುತ್ತಲೇ ಮಹಜರ್ ಪ್ರಕ್ರಿಯೆಯಲ್ಲಿ ಭಾಗಿಯಾಗಿ, ಪ್ರಭಾವಿಗಳ ರಕ್ಷಣೆಯ ವಿಶ್ವಾಸ ತೋರಿದಂತೆ ಇತ್ತು. ಅತ್ತ ಸತತ ಮೂರು ಗಂಟೆಗಳ ಮಹಜರ್ ಪ್ರಕ್ರಿಯೆ ನಂತರ ಹೊರ ಬಂದ ಪವಿತ್ರ ಗೌಡ ಕೂಡ ನಗುಮುಖದಲ್ಲೇ ಪೊಲೀಸ್‌ ವ್ಯಾನ್‌ ಹತ್ತಿದ್ದರು.

ಎಫ್‌ಎಸ್‌ಎಲ್ ತಂಡದಿಂದ ಮಹತ್ತರ ಸಾಕ್ಷಿಗಳ ಸಂಗ್ರಹ ಮಾಡಿ, ಎರಡು ಬಟ್ಟೆಗಂಟುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಸ್ಥಳ ಮಹಜರು ಮುಗಿಸಿದ ಬಳಿಕ ಪವಿತ್ರಗೌಡ ಹಾಗೂ ಪವನ್‌ನನ್ನು ವಾಪಸ್‌ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕರೆತರಲಾಯಿತು.

ಇತ್ತ ಎ5 ಆರೋಪಿ ನಂದೀಶ್‌ನನ್ನು ಪಟ್ಟಣಗೆರೆ ಶೆಡ್‌ನಿಂದ ನೇರವಾಗಿ ದರ್ಶನ್‌ ಮನೆಗೆ ಕರೆತಂದು ಪರಿಶೀಲನೆ ಮಾಡಲಾಯಿತು. ಈ ವೇಳೆ ನಂದೀಶ್‌ ಶೂ ಮತ್ತೆ ಬಟ್ಟೆಯನ್ನು ಜಪ್ತಿ ಮಾಡಲಾಯಿತು. ಸ್ಥಳ ಮಹಜರಿಗಾಗಿ ಆರೋಪಿ ವಿನಯ್ ಜತೆಗೆ ನಿಖಿಲ್‌ನನ್ನು ಅವರ ಮನೆಯಲ್ಲಿ ಕರೆದುಕೊಂಡು ಹೋಗಲಾಗಿತ್ತು. ಕೃತ್ಯ ನಡೆದ ದಿನ ಧರಿಸಿದ್ದ ಬಟ್ಟೆ , ಶೂ ಇನ್ನಿತರ ವಸ್ತುಗಳ ರಿಕವರಿಗಾಗಿ ‌ಮುಂದಾದರು.

ಚಿತ್ರದುರ್ಗದಲ್ಲೂ ಸ್ಥಳ ಮಹಜರು

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿಗಳನ್ನು ಚಿತ್ರದುರ್ಗಕ್ಕೆ ಕರೆ ತಂದು ಸ್ಥಳ ಮಹಜರು ಮಾಡಲಾಯಿತು. ರೇಣುಕಾ ಸ್ವಾಮಿ ಕೊಲೆ ಆರೋಪಿಗಳಾದ ರಘು, ರವಿ, ಅನು, ಜಗ್ಗನ ಕರೆ ತರಲಾಯಿತು. ಪೊಲೀಸ್ ಬಿಗಿ ಬಂದೋಬಸ್ತ್‌ನಲ್ಲಿ ನಗರದ ಮಹಾವೀರ ನಗರದಲ್ಲಿರುವ ಜಗ್ಗ ಅಲಿಯಾಸ್‌ ಜಗದೀಶ್ ಮನೆಯನ್ನು ಪರಿಶೀಲನೆ ನಡೆಸಿದರು. ಗೋವಿಂದರಾಜ ನಗರ ಪೊಲೀಸ್ ಇನ್‌ಸ್ಪೆಕ್ಟರ್‌ ಸುಬ್ರಹ್ಮಣ್ಯ ನೇತೃತ್ವದಲ್ಲಿ ಮಹಜರು ನಡೆಸಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Petrol Diesel Price: ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ ಕಾಂಗ್ರೆಸ್ ಸರ್ಕಾರ: ಆರ್‌. ಅಶೋಕ್‌ ಕಿಡಿ

Petrol Diesel Price: ಹಿಂದಿನ ಬಿಜೆಪಿ ಸರ್ಕಾರದಲ್ಲಿ ಒಂದು ರೂಪಾಯಿ ಬೆಲೆ ಏರಿಕೆಯಾದಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಕೂಟರ್ ಶವ ಯಾತ್ರೆ ಮಾಡಿದ್ದರು.‌ ಇದೀಗ ಅವರೇ ಬೆಲೆ ಏರಿಕೆ ಮಾಡಿದ್ದಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಕಿಡಿಕಾರಿದ್ದಾರೆ.

VISTARANEWS.COM


on

Petrol Diesel Price
Koo

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಸೋತ ಸೇಡನ್ನು ತೀರಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ತೈಲ ದರವನ್ನು ಏರಿಕೆ (Petrol Diesel Price) ಮಾಡಿದೆ. ಈ ಮೂಲಕ ಜನರ ತಲೆ ಮೇಲೆ ಚಪ್ಪಡಿ ಕಲ್ಲು ಹಾಕಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಒಂದು ವರ್ಷದಲ್ಲಿ ಎಲ್ಲ ಬಗೆಯ ಬೆಲೆ ಏರಿಕೆಯ ಭಾಗ್ಯಗಳನ್ನು ನೀಡಿದೆ. ಹಾಲಿನ ದರ, ಆಲ್ಕೋಹಾಲ್ ದರ, ಸ್ಟಾಂಪ್ ಡ್ಯೂಟಿ, ಮಾರ್ಗಸೂಚಿ ದರ, ವಿದ್ಯುತ್ ದರ ಹಾಗೂ ಈಗ ತೈಲ ಬೆಲೆ ಏರಿಕೆ ಮಾಡಲಾಗಿದೆ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ಒಂದು ರೂಪಾಯಿ ಬೆಲೆ ಏರಿಕೆಯಾದಾಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಕೂಟರ್ ಶವ ಯಾತ್ರೆ ಮಾಡಿದ್ದರು.‌ 15 ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರಿಗೆ ಯೋಗ್ಯತೆ ಇಲ್ಲ. ಜನರ ಮೇಲೆ ಸೇಡು ತೀರಿಸಿಕೊಳ್ಳಲು ದರ ಏರಿಸಿದ್ದಾರೆ ಎಂದರು.

ಗ್ಯಾರಂಟಿಗಾಗಿ 55,000 ಕೋಟಿ ರೂ. ಮೀಸಲಿಟ್ಟಿರುವುದರಿಂದ ಹಣ ಕೊರತೆಯಾಗಿ ಸಂಬಳ ಕೊಡಲು ದುಡ್ಡಿಲ್ಲ. ಆದ್ದರಿಂದ ಜನರ ಮೇಲೆ 3-4 ಸಾವಿರ ಕೋಟಿ ರೂ‌. ಹೊರೆ ಹಾಕಿ ತೈಲ ದರ ಏರಿಸಲಾಗಿದೆ. ಇದರಿಂದ ಸಹಜವಾಗಿ ತರಕಾರಿ, ಹಾಲು, ಹಣ್ಣು, ಕೊನೆಗೆ ಟೀ ಕಾಫಿಗೂ ದರ ಏರಲಿದೆ. ನಾಳೆಯಿಂದಲೇ ಆಟೋ ರಿಕ್ಷಾದವರು, ಗೂಡ್ಸ್ ಗಾಡಿಗಳು ದರ ಏರಿಕೆ ಮಾಡುತ್ತಾರೆ ಎಂದರು.

ಕಳ್ಳ ದಾರಿ ಮೂಲಕ ಸೇಡು

ನ್ಯಾಯವಾಗಿ ಮಾಡುವುದಿದ್ದರೆ ಬಜೆಟ್‌ನಲ್ಲಿ ಸರ್ಕಾರ ತೈಲ ದರ ಏರಿಸಬೇಕಿತ್ತು. ಆದರೆ ಚುನಾವಣೆಯಲ್ಲಿ ಸೋತಿದ್ದರಿಂದ ನಂತರ ಕಳ್ಳ ದಾರಿಯಿಂದ ದರ ಏರಿಸಿ ಜನರ ಮೇಲೆ ಸೇಡು ತೀರಿಸಿಕೊಂಡಿದ್ದಾರೆ. ಸಂಸತ್ತಿನಲ್ಲಿ 100 ಸೀಟು ಪಡೆಯಲಾಗದ ಕಾಂಗ್ರೆಸ್ ಪೆಟ್ರೋಲ್ ದರವನ್ನು 100 ರೂಪಾಯಿಗೂ ಹೆಚ್ಚು ಮಾಡಿದೆ. ರಾಹುಲ್ ಗಾಂಧಿ ಹೇಳಿದಂತೆ ಟಕಾಟಕ್ ಎಂದು ತೈಲ ದರ ಏರಿಸಿದ್ದಾರೆ ಎಂದು ದೂರಿದರು.

ಜನರು ಮತ ನೀಡಿಲ್ಲ ಎಂಬ ಕಾರಣಕ್ಕೆ ಸರ್ಕಾರ ದರ ಏರಿಸಿದೆ. ಹಿಂದೆ ಬಿಜೆಪಿ ಸರ್ಕಾರ 7 ರೂ. ಕಡಿಮೆ ಮಾಡಿತ್ತು. ಕಾಂಗ್ರೆಸ್ ಗೆ ಮಾನವಿದ್ದರೆ ದರ ಏರಿಕೆ ವಾಪಾಸ್ ಪಡೆಯಲಿ ಎಂದು ಆಗ್ರಹಿಸಿದರು.

ಆಸ್ತಿ ಮಾರಾಟ

ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರ ಬಿಡಿಎ ಆಸ್ತಿಗಳ ಮಾರಾಟಕ್ಕೆ ಮುಂದಾಗಿದೆ. ಬಿಬಿಎಂಪಿ ಹಾಗೂ ಜಲಮಂಡಳಿಯ ಆಸ್ತಿಗಳನ್ನು ಕೂಡ ಮಾರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಶಿಸ್ತನ್ನು ಸರ್ವನಾಶ ಮಾಡಿದ್ದಾರೆ. ಇನ್ನೂ ಒಂದು ವರ್ಷದಲ್ಲಿ ವಿಧಾನಸೌಧವನ್ನೂ ಅಡಮಾನ ಇಡುತ್ತಾರೆ ಎಂದರು.

ಸರ್ಕಾರಿ ನೌಕರರು ಮತ ನೀಡಿಲ್ಲವೆಂಬ ಕಾರಣಕ್ಕೆ ವೇತನ ಹೆಚ್ಚಿಸಿಲ್ಲ. 7 ನೇ ವೇತನ ಆಯೋಗದ ವರದಿ ಜಾರಿ ‘ನಾಳೆ ಬಾ’ ಎಂಬ ಸ್ಥಿತಿಗೆ ಬಂದಿದೆ. 143 ಶಾಸಕರ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಮತ ಬಂದಿದೆ. ಅದಕ್ಕಾಗಿ ತೈಲ ದರ ಏರಿಸಿದ್ದಾರೆ. ಇದರಿಂದ ಕಾಂಗ್ರೆಸ್ ಶಾಸಕರು ಕೂಡ ಬೇಸರಗೊಂಡಿದ್ದಾರೆ‌. ಜಿಲ್ಲಾ ಪಂಚಾಯತ್ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಗೆ ಪಾಠ ಕಲಿಸಲಿದ್ದಾರೆ ಎಂದರು.

ಸೋಮವಾರ ಪ್ರತಿಭಟನೆ

ತೈಲ ದರ ಏರಿಕೆ ಇಳಿಕೆಗೆ ಒತ್ತಾಯಿಸಿ ಜೂನ್ 17 ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಯಲಿದೆ. ಜೊತೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ. ಜನ ವಿರೋಧಿ ನೀತಿಗಳ ವಿರುದ್ಧ ಇನ್ನು ಮುಂದೆಯೂ ನಿರಂತರವಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಆರ್.ಅಶೋಕ್‌ ತಿಳಿಸಿದರು.

Continue Reading
Advertisement
Karnataka Weather Forecast
ಮಳೆ38 mins ago

Karnataka weather : ಭಾನುವಾರ ರಾಯಚೂರಿನಲ್ಲಿ ಅಬ್ಬರಿಸಿದ ವರುಣ; ನಾಳೆಗೂ ಇದೆ ಮಳೆ ಅಲರ್ಟ್‌

Actor Darshan
ಪ್ರಮುಖ ಸುದ್ದಿ39 mins ago

Actor Darshan: ರೇಣುಕಾಸ್ವಾಮಿ ಕುಟುಂಬಕ್ಕಷ್ಟೇ ಅಲ್ಲ, ಚಿತ್ರರಂಗಕ್ಕೂ ನ್ಯಾಯ ಸಿಗಬೇಕು: ಕಿಚ್ಚ ಸುದೀಪ್‌

Lok Sabha Speaker
ದೇಶ53 mins ago

Lok Sabha Speaker: ಸ್ಪೀಕರ್‌ ಆಯ್ಕೆ ವಿಚಾರದಲ್ಲಿ ಟಿಡಿಪಿಗೆ ಬೆಂಬಲ ಎಂದ ಇಂಡಿಯಾ ಒಕ್ಕೂಟ; ಯಾರಾಗ್ತಾರೆ ಸ್ಪೀಕರ್?

Renukaswamy murder case The location of the accused is complete
ಸಿನಿಮಾ1 hour ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Petrol Diesel Price
ಕರ್ನಾಟಕ2 hours ago

Petrol Diesel Price: ಚುನಾವಣೆ ಸೋಲಿನ ಸೇಡು ತೀರಿಸಿಕೊಳ್ಳಲು ತೈಲ ದರ ಏರಿಸಿದ ಕಾಂಗ್ರೆಸ್ ಸರ್ಕಾರ: ಆರ್‌. ಅಶೋಕ್‌ ಕಿಡಿ

Renuka swamy murder
ಚಿತ್ರದುರ್ಗ2 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Road Accident
ಕರ್ನಾಟಕ2 hours ago

Road Accident: ಸುಂಟಿಕೊಪ್ಪ‌ ಬಳಿ ಖಾಸಗಿ ಬಸ್- ಸ್ಕೂಟರ್ ಡಿಕ್ಕಿಯಾಗಿ ಸವಾರ ಸಾವು

Kannada New Movie Chowkidar pruthvi ambaar
ಸಿನಿಮಾ2 hours ago

Kannada New Movie: ಪೃಥ್ವಿ ಅಂಬಾರ್ ಈಗ ‘ಚೌಕಿದಾರ್’: ರಥಾವರ ಡೈರೆಕ್ಟರ್ ಚಂದ್ರಶೇಖರ್ ಬಂಡಿಯಪ್ಪ ಹೊಸ ಹೆಜ್ಜೆ!

Patna Boat Accident
ದೇಶ2 hours ago

Patna Boat Accident: ಗಂಗಾ ನದಿಯಲ್ಲಿ ದೋಣಿ ಮುಳುಗಿ 6 ಮಂದಿ ನಾಪತ್ತೆ

Sachin Tendulkar
ಕ್ರೀಡೆ3 hours ago

Sachin Tendulkar: ವಿಶ್ವ ಅಪ್ಪಂದಿರ ದಿನದಂದು ವಿಶೇಷ ಫೋಟೊ ಹಂಚಿಕೊಂಡು ಭಾವುಕರಾದ ಸಚಿನ್​ ತೆಂಡೂಲ್ಕರ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ1 hour ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ2 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 day ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ2 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು2 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ2 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ5 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌