Prerane | ಭಾರತೀಯ ವಿದ್ಯೆಗಳ ವಿಶೇಷತೆ ಏನು? - Vistara News

ಧಾರ್ಮಿಕ

Prerane | ಭಾರತೀಯ ವಿದ್ಯೆಗಳ ವಿಶೇಷತೆ ಏನು?

“ಪ್ರೇರಣೆʼʼ (Prerane) ಇದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆಗಳನ್ನು ಬಿತ್ತುವ ಬೆಳಗಿನ ಹೊಳಹು. ಪ್ರತಿ ನಿತ್ಯ ಧಾರ್ಮಿಕ ಚಿಂತಕರು, ಪ್ರವಚನಕಾರರು, ಆಧ್ಯಾತ್ಮಚಿಂತಕರು ಇಲ್ಲಿ ಬರೆಯಲಿದ್ದಾರೆ.

VISTARANEWS.COM


on

indian knowledge prerane
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜಿ ನಾಗರಾಜ

ಇಂದು ‘ವಿದ್ಯೆ’ ಎನ್ನುವ ಪದವು ಬಹಳ ಹಗುರ ಅರ್ಥದಲ್ಲಿ ಬಳಕೆಯಲ್ಲಿದೆ. ಆರ್ಷ ವಿದ್ಯೆ, ಕಲೆಗಳಾದ, ಸಂಗೀತ, ನಾಟ್ಯ, ಯೋಗ ಮುಂತಾದವುಗಳಿಗೂ ವಿದ್ಯೆ ಎನ್ನುತ್ತೇವೆ ಮತ್ತು ಆಧುನಿಕ ವಿಜ್ಞಾನಕ್ಕೆ ಸಂಬಂಧಪಟ್ಟ ಫಿಸಿಕ್ಸ್, ಕೆಮಿಸ್ಟ್ರಿ, ಬಯಾಲಜಿ, ಕಂಪ್ಯೂಟರ್ ಸೈನ್ಸ್ ಮೊದಲಾದವು, ಹಾಗೆಯೇ ಆಧುನಿಕ ಸಂಗೀತ, ಆಧುನಿಕ ಚಿತ್ರಕಲೆ, ಸಿನಿಮಾ ಕಲೆ ಎಲ್ಲಕ್ಕೂ ವಿದ್ಯೆ, ಕಲೆ ಎನ್ನುವ ಪದ ಉಪಯೋಗಿ ಸುತ್ತೇವೆ. ಒಟ್ಟಿನಲ್ಲಿ, ಕಲಿಯಬೇಕಾದ ಪರಿಣತಿ ಪಡೆಯಬೇಕಾದ ಯಾವುದಾದರೂ ವಿಷಯವನ್ನು ಇಂದು ವಿದ್ಯೆ, ಕಲೆ ಎನ್ನುವ ಅರ್ಥದಲ್ಲಿ ಬಳಸುತ್ತಿದ್ದೇವೆ.

ಆದರೆ ಮಹರ್ಷಿಗಳ ಅಭಿಪ್ರಾಯ ವಿದ್ಯೆಯ ಬಗ್ಗೆ ಇಷ್ಟೇ ಇತ್ತೆ ಎಂದರೆ, ಹಾಗೇನಿಲ್ಲ! ಆರ್ಷ ಸಾಹಿತ್ಯದಲ್ಲಿ ವಿದ್ಯೆಗೆ “ಸಾ ವಿದ್ಯಾ ಯಾ ವಿಮುಕ್ತಯೇ”- ಅಂದರೆ ಯಾವುದು ಮುಕ್ತಿಯನ್ನು ಕೊಡುತ್ತದೆಯೋ ಅದು ವಿದ್ಯೆ ಎಂದು ವಿದ್ಯೆಯ ಬಗ್ಗೆ ವ್ಯಾಖ್ಯಾನವಿದೆ. ಜನನ ಮರಣ ಚಕ್ರದಿಂದ ಮುಕ್ತಿ ದೊರೆಯುವುದು ಆತ್ಮ ಜ್ಞಾನದಿಂದ. ಅಂದರೆ ಯಾವುದು ಆತ್ಮ ಜ್ಞಾನವನ್ನು ಉಂಟು ಮಾಡುತ್ತದೆಯೋ ಅದೇ ವಿದ್ಯೆಯೆನ್ನಿಸಿಕೊಳ್ಳುತ್ತದೆ.

ಈ ನೇರದಲ್ಲಿ ವಿದ್ಯೆಗಳ ಬಗ್ಗೆ ಆಮೂಲಾಗ್ರ ನೋಟವನ್ನು ನೀಡಿರುವ ಶ್ರೀರಂಗ ಮಹಾಗುರುಗಳು ವಿದ್ಯೆಯೆಂಬ ಪದಕ್ಕೆ ಇನ್ನೊಂದು ವ್ಯುತ್ಪತ್ತಿಯನ್ನು ಕೊಟ್ಟಿದ್ದಾರೆ: ವಿದ-ಜ್ಞಾನೇ, ಯಾ-ಪ್ರಾಪಣೇ, ಅಂದರೆ ಯಾವುದು ನಮ್ಮನ್ನು ಆತ್ಮಜ್ಞಾನದತ್ತ ಕರೆದೊಯ್ಯುತ್ತದೆಯೋ ಅದು ವಿದ್ಯೆ.

ಇಂದು ನಾವು ವಿದ್ಯೆಯೆಂದು ಕರೆಯುತ್ತಿರುವ ಎಲ್ಲ ವಿಷಯಗಳೂ ನಮಗೆ ಜ್ಯೋತಿರ್ದರ್ಶನ ಮಾಡಿಸಬಲ್ಲುದೇ ಎಂದರೆ, ಹಾಗೇನಿಲ್ಲ; ಏಕೆ ಹೀಗೆ? ಶ್ರೀರಂಗಮಹಾಗುರುಗಳು ಕೊಟ್ಟಿರುವ ಒಂದು ಮಾರ್ಮಿಕ ನೋಟದಿಂದ ಈ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬಹುದು. ಯಾವುದೇ ವಿಷಯವು ಯಾವ ನೆಲೆಯಿಂದ (ಮನಸ್ಸು ಬುದ್ಧಿಗಳು ಯಾವ ಆಳವನ್ನು ತಲುಪಿತೋ ಆ ಆಳದಿಂದ) ಹೊರಟಿತೋ ಅದು ಅನುಸಂಧಾನ ಮಾಡುವವರನ್ನು ಆ ನೆಲೆಯ ತನಕ ಮಾತ್ರ ತಲುಪಿಸಬಲ್ಲುದು ಆಧುನಿಕ ವಿಷಯಗಳು ಪ್ರಾಪಂಚಿಕ ಭಾವದಿಂದ ವಿಕಾಸವಾಗಿರುವುದರಿಂದ ಅದು ಅನುಸಂಧಾನ ಮಾಡುವವರನ್ನು ಪ್ರಾಪಂಚಿಕ ಭಾವದ ಒಂದು ಮಟ್ಟದವರೆವಿಗೂ ಕರೆದೊಯ್ಯಬಹುದೇ ಹೊರತು, ಆತ್ಮಸಾಕ್ಷಾತ್ಕಾರದವರೆವಿಗೂ ಕರೆದೊಯ್ಯುವುದಿಲ್ಲ. ಉದಾಹರಣೆಯ ಮೂಲಕ ಈ ಪ್ರಕ್ರಿಯೆಯನ್ನು ಗಮನಿಸಬಹುದು.

ನಾವು ಒಂದು ಕಥೆಯನ್ನು ತನ್ಮಯರಾಗಿ ಓದುತ್ತೇವೆಂದುಕೊಳ್ಳೋಣ. ಆ ಕಥೆಯ ಲೇಖಕರು ತಮ್ಮೊಳಗೇ ಮುಳುಗಿ ಕಥೆಯ ಪರಿಕಲ್ಪನೆ, ಚೌಕಟ್ಟುಗಳನ್ನು ರೂಪಿಸಿಕೊಳ್ಳುತ್ತಾರೆ. ಹೀಗೆ ರೂಪಿಸಿಕೊಳ್ಳಬೇಕಾದರೆ ಅವರ ಮನಸ್ಸು ಯಾವ ಭಾವವನ್ನು ಹೊಂದಿತ್ತೋ, ಯಾವ ಆಳವನ್ನು ತಲುಪಿತ್ತೋ ಅದಕ್ಕೆ ಅನುಗುಣವಾಗಿ ಕಥೆಯು ಬೆಳವಣಿಗೆ ಹೊಂದುತ್ತಾ ಹೋಗುತ್ತದೆ. ಓದುಗರು ಆ ಕಥೆಯನ್ನು ಓದುತ್ತಾ ಹೋದರೆ, ಲೇಖಕರ ಯಾವ ಭಾವ, ಕಥೆಯ ಹರಿವಿಗೆ ಮೂಲವಾ ಗಿತ್ತೋ ಆ ಭಾವದೆಡೆಗೆ ಸಾಗುತ್ತಾರೆ ಮತ್ತು ಅವರಲ್ಲಿ ಕೆಲವರು ಲೇಖಕರಿಗಿದ್ದ ಭಾವವನ್ನೇ ತಲುಪಬಹುದು. ಲೇಖಕರ ಮನಸ್ಸಿನಲ್ಲಿ ಸಾಹಸ ಪ್ರಧಾನವಾದ ಭಾವವಿದ್ದರೆ, ಓದುಗರು ರೋಚಕತೆಯನ್ನು ಅನುಭವಿಸುತ್ತಾರೆ, ದುಃಖ ಪ್ರಧಾನವಾದ ಕಥೆಯಾದರೆ ದುಃಖವನ್ನನುಭವಿಸುತ್ತಾರೆ, ಒಟ್ಟಿನಲ್ಲಿ ಕಥಾಮೂಲವಾದ ಲೇಖಕರ ಭಾವವನ್ನೇ ಹೊಂದುತ್ತಾರೆ.

ಇಂದಿನ ಬಹುತೇಕ ಕಥೆಗಳು, ಯಾವುದಾದರೂ ಪ್ರಾಪಂಚಿಕ ಅಥವಾ ಸಾಮಾಜಿಕ ಭಾವಕ್ಕೆ ಸಂಬಂಧ ಪಟ್ಟಿದ್ದಾಗಿರುತ್ತದೆ, ಮತ್ತು ಓದುಗರ ಮನಸ್ಸು ಆ ಪ್ರಾಪಂಚಿಕ ಅಥವಾ ಸಾಮಾಜಿಕ ಭಾವವನ್ನು ತಾಳುತ್ತದೆ. ಲೇಖಕರು ಆತ್ಮಭಾವದಲ್ಲಿ ನೆಲೆಸಿಲ್ಲದಿದ್ದರೆ, ಓದುಗರೂ ಸಹ ಆ ಆತ್ಮಭಾವವನ್ನು ಹೊಂದಲಾರರು. ಆದುದರಿಂದ ಲೌಕಿಕ ಸಾಹಿತ್ಯವನ್ನು ಪರಿಪೂರ್ಣವಾದ ಅರ್ಥದಲ್ಲಿ ವಿದ್ಯೆಯೆಂದು ಪರಿಗಣಿಸಲಿಕ್ಕಾಗುವುದಿಲ್ಲ. ಇದೇ ರೀತಿ, ಭೌತಿಕ ಪ್ರಪಂಚಕ್ಕೆ ಮಾತ್ರ ಸಂಬಂಧಿಸಿದ ಯಾವುದೇ ವಿಷಯವಾದರೂ ಅದು ಪ್ರಾಪಂಚಿಕ ಭಾವದ ಮೂಲದಿಂದ ಹೊರಟಿದ್ದಾದುದರಿಂದ ಆತ್ಮ ಜ್ಞಾನದವರೆವಿಗೂ ಕರೆದುಕೊಂಡು ಹೋಗುವುದಿಲ್ಲ.

ಆದರೆ ಭಾರತೀಯ ವಿದ್ಯೆಗಳ ವಿಷಯವು ಹಾಗಿಲ್ಲ. ಅವು ಆತ್ಮಮೂಲದಿಂದ ವಿಕಾಸವಾದ ವಿದ್ಯೆಗಳು. ಮಹರ್ಷಿಗಳು ತಮ್ಮ ಸತ್ಯಾನ್ವೇಷಣೆಯ ಪ್ರಯತ್ನದಲ್ಲಿ ಮನಸ್ಸನ್ನು ಅಂತರ್ಮುಖವಾಗಿ ತಿರುಗಿಸಿ ತಮ್ಮ ಮೂಲವನ್ನು ಕಂಡುಕೊಂಡರು. ನಮ್ಮೆಲ್ಲರ ಹಾಗೂ ವಿಶ್ವದ ಮೂಲದಲ್ಲಿ ಒಂದು ಅಖಂಡ ಜ್ಯೋತಿಯು ಬೆಳಗುತ್ತಿದೆ, ಇದನ್ನೇ ಪರಬ್ರಹ್ಮ, ಪರಮಾತ್ಮ ಎನ್ನುವುದು ಮತ್ತು ಈ ಜ್ಯೋತಿಗೆ ನಾದಬ್ರಹ್ಮವೆಂದು ಕರೆಯಲ್ಪಡುವ ಒಂದು ನಾದರೂಪವೂ ಇದೆ ಎನ್ನುವುದೇ ಮಹರ್ಷಿಗಳು ಸಾರಿರುವ ಸತ್ಯ. ಈ ನಾದವನ್ನು ಪ್ರಣವ ಅಥವಾ ಓಂಕಾರ ಎಂದೂ ಕರೆಯುತ್ತಾರೆ. ಈ ನಾದವು ಅನಾಹತವಾಗಿದೆ; ಅಂದರೆ, ಯಾವುದೇ ಆಹತ ಅಥವಾ ಘಾತ, ಘರ್ಷಣಗಳಿಲ್ಲದೇ ತಾನಾಗಿಯೇ ಸೃಷ್ಟಿಯಲ್ಲಿ ಸಹಜವಾಗಿ ಮೊಳಗುತ್ತಿರುವ ನಾದವಿದಾಗಿದೆ.

ಯೋಗಿಗಳು ತಮ್ಮ ಅಂತಃಶ್ರವಣದಿಂದ ತಮ್ಮೊಳಗೆ ಕೇಳಬಹುದಾದ ನಾದವಾಗಿದೆ ಓಂಕಾರ. ಈ ಓಂಕಾರವು ಬಿಂದು, ನಾದ, ಮಕಾರ, ಉಕಾರ, ಅಕಾರಗಳಿಂದ ಕೂಡಿದ್ದು, ಸೃಷ್ಟಿಯೆಲ್ಲಕ್ಕೂ ಬೀಜರೂಪದಲ್ಲಿದೆ. ಇದನ್ನೇ ಆರೋಹಣ ಕ್ರಮದಲ್ಲಿ ಹೇಳುವುದಾದರೆ, ಓಂಕಾರವು ಅಕಾರ, ಉಕಾರ, ಮಕಾರ, ನಾದ, ಬಿಂದುಗಳಿಂದ ಕೂಡಿದ್ದು ಎಲ್ಲ ಭಾರತೀಯ ವಿದ್ಯೆಗಳೂ ಈ ಪ್ರಣವ ಮೂಲದಿಂದಲೇ ವಿಕಾಸವಾಗಿವೆ.

ಭಾರತೀಯ ವಿದ್ಯೆಗಳು ಪ್ರಣವಮೂಲದಿಂದ ವಿಕಾಸವಾಗುವುದು ಎಂದರೇನು? ಇದನ್ನು ಕೆಲವು ವಿದ್ಯೆಗಳ ವಿಶ್ಲೇಷಣೆಯಿಂದ ಅರ್ಥ ಮಾಡಿಕೊಳ್ಳಬಹುದು. ಮಾನವದೇಹದಲ್ಲಿ, ನಾಡಿಗಳು ಸಂಧಿಸುವ ಸ್ಥಾನಗಳನ್ನು ಚಕ್ರಗಳೆನ್ನುತ್ತಾರೆ ಮತ್ತು ಇವು ಮೂಲಾಧಾರದಿಂದ ಆಜ್ಞಾಚಕ್ರದವರೆವಿಗೆ ಷಟ್ಚಕ್ರಗಳೆಂದೂ, ಅದಕ್ಕೂ ಮೇಲಿರುವ ಸಹಸ್ರಾರ ಚಕ್ರವನ್ನೂ ಸೇರಿಸಿದರೆ ಸಪ್ತ ಚಕ್ರಗಳೆಂದು ತಂತ್ರಶಾಸ್ತ್ರಗಳಲ್ಲಿ ಪ್ರಸಿದ್ಧವಾಗಿವೆ. ಈ ಚಕ್ರಗಳನ್ನು ಪದ್ಮಗಳೆಂದೂ ಕರೆಯುತ್ತಾರೆ ಮತ್ತು ಷಟ್ಚಕ್ರಗಳಲ್ಲಿ ಬೇರೆ ಬೇರೆ ಸಂಖ್ಯೆಯ ದಳಗಳಿದ್ದು ಒಟ್ಟಾರೆ ಐವತ್ತು ದಳಗಳಿರುತ್ತವೆ.

ಮೂಲದಲ್ಲಿರುವ ಓಂಕಾರವು ಈ ದಳಗಳ ಮೂಲಕ ಹೊರಹೊಮ್ಮಬೇಕಾದರೆ, 50 ಅಕ್ಷರಗಳಾಗಿ ವಿಭಜನೆ ಹೊಂದುತ್ತದೆ. ಈ ಅಕ್ಷರಗಳ ಸಮ್ಮಿಳನದಿಂದ ಪದಗಳೂ, ಪದಗಳು ಸೇರಿ ವಾಕ್ಯಗಳು, ವಾಕ್ಯಗಳು ಸೇರಿ ಸಾಹಿತ್ಯರಾಶಿಯು ಉಂಟಾಗುತ್ತದೆ. ಹೀಗಾಗಿ ಸಂಸ್ಕೃತ ಭಾಷೆಯು ಪ್ರಣವಮೂಲದಿಂದ ವಿಕಾಸವಾಗಿದ್ದು ಇದನ್ನು ದೇವಭಾಷೆ ಎಂದೂ ಕರೆಯುತ್ತಾರೆ. ಶಬ್ದ ಪ್ರಪಂಚದ ಸಹಜ ವಿಕಾಸ ಕ್ರಮದಲ್ಲಿ ಯಾವ ರೀತಿ ಅಕ್ಷರಗಳು ಸೇರಿ ಪದಗಳಾಗುತ್ತವೆ, ಪದಗಳು ವಾಕ್ಯಗಳಾಗುತ್ತವೆ ಎನ್ನುವ ನಿಯಮಗಳನ್ನು ತಿಳಿಸುವ ಸಂಸ್ಕೃತ ವ್ಯಾಕರಣವು ಪ್ರಣವದಿಂದ ವಿಕಾಸವಾಗಿರುವ ವಿದ್ಯೆಯಾಗಿದೆ. ಈ ವಿದ್ಯೆಯನ್ನು ಅನುಸಂಧಾನ ಮಾಡಿದರೆ ಅದು ತನ್ನ ಮೂಲದಲ್ಲಿರುವ ಪ್ರಣವದ ಸಾಕ್ಷಾತ್ಕಾರದವರೆವಿಗೂ ತಲುಪಿಸಬಲ್ಲ ಸಾಮರ್ಥ್ಯವನ್ನು ಹೊಂದಿರುತ್ತದೆ.

ಇದೇ ರೀತಿ, ಪ್ರಣವವು ಸಪ್ತ ಚಕ್ರಗಳಿಂದ ಹೊರಹೊಮ್ಮಬೇಕಾದರೆ ಸಪ್ತಸ್ವರಗಳಾಗಿಯೂ ರೂಪಾಂತರ ಹೊಂದುತ್ತದೆ. ಸರಿಗಮಪಧನಿ ಎಂಬ ಸಪ್ತಸ್ವರಗಳ ವಿಕಾಸವೇ ಭಾರತೀಯ ಸಂಗೀತ ವಿದ್ಯೆಯಾಗಿದೆ. ಭಾರತೀಯ ಸಂಗೀತವನ್ನು ಯೌಗಿಕ ರೀತಿಯಲ್ಲಿ ಅನುಸಂಧಾನ ಮಾಡಿದರೆ (ನಾದ ಯೋಗದ ರೂಪದಲ್ಲಿ), ಅದು ತಲ್ಲೀನತೆಯುಂಟು ಮಾಡಿ, ನಂತರ ಸಮಾಧಿ ಸ್ಥಿತಿಯನ್ನುಂಟು ಮಾಡಿ ನಾದಬ್ರಹ್ಮದ ಸಾಕ್ಷಾತ್ಕಾರವನ್ನೇ ಉಂಟು ಮಾಡಬಲ್ಲ ಸಾಮರ್ಥ್ಯವನ್ನು ಹೊಂದಿರುತ್ತದೆ.

ಹೀಗೆಯೇ ಬೇರೆ ಭಾರತೀಯ ವಿದ್ಯೆಗಳೂ ಪ್ರಣವದಿಂದಲೇ ವಿಕಾಸವಾದುವಾಗಿವೆ. ಇಂತಹ ವಿದ್ಯೆಗಳ ಪಟ್ಟಿಯನ್ನು ಗಮನಿಸುವುದಾದರೆ, ವಿದ್ಯೆಗಳನ್ನು 14, 18, 64, ಅನಂತ- ಹೀಗೆ ವಿಂಗಡಣೆ ಮಾಡುತ್ತಾರೆ. ಕೌಟಿಲ್ಯನ ಅರ್ಥಶಾಸ್ತ್ರ ದಲ್ಲಿರುವ 64 ವಿದ್ಯೆ, ಕಲೆಗಳ ಪಟ್ಟಿಯನ್ನು ಗಮನಿಸಿದರೆ, ಅವು ಆತ್ಮ ಸಮೃದ್ಧಿಯನ್ನುಂಟು ಮಾಡುವುದಲ್ಲದೇ ಲೋಕಜೀವನವನ್ನು ಸಮೃದ್ಧವಾಗಿ ನಡೆಸಲು ಬೇಕಾದ ವಿಷಯಗಳನ್ನೊಳಗೊಂಡಿವೆಯೆಂಬುದು ಕಂಡು ಬರುತ್ತದೆ.

ಕೃಷಿ, ಗೋರಕ್ಷೆ, ವಾಣಿಜ್ಯ, ಲೋಹ ವಿದ್ಯೆ, ಶಿಲ್ಪ ವಿದ್ಯೆ, ನೇಯ್ಗೆ, ಆಯುರ್ವೇದ, ಪಾಕ ಶಾಸ್ತ್ರ (ಆಯುರ್ವೇದದ ಅಂಗ), ಸಸ್ಯ ಶಾಸ್ತ್ರ (ವೃಕ್ಷಾಯುರ್ವೇದ), ವಾಸ್ತು ಶಾಸ್ತ್ರ (ಭೂಮಿಯ ಗುಣ ವಿಶ್ಲೇಷಣೆ, ಕಟ್ಟಡ ಪದಾರ್ಥಗಳು, ಗೃಹರಚನೆ, ದೇವಾಲಯ ರಚನೆ, ನಗರರಚನೆ, ಅರಮನೆಯ ರಚನೆ) ಮುಂತಾದ್ದಾಗಿ ಅನೇಕ ವಿದ್ಯೆಗಳಿದ್ದು ಮೂರು-ನಾಲ್ಕು ಶತಮಾನಗಳ ಹಿಂದಿನವರೆವಿಗೂ ಎಷ್ಟೋ ಮಟ್ಟಿಗೆ ಪ್ರಯೋಗದಲ್ಲಿಯೂ ಇದ್ದವು.

ದೆಹಲಿಯ ಕುತುಬ್ ಮಿನಾರ್ ನಲ್ಲಿರುವ 1600 ವರ್ಷಗಳ ಹಳೆಯ ಕಬ್ಬಿಣದ ಕಂಭವೊಂದು ಎಷ್ಟೇ ಮಳೆಗಾಳಿಗೆ ಒಡ್ಡಲ್ಪಟ್ಟಿದ್ದರೂ ತುಕ್ಕು ಹಿಡಿದಿಲ್ಲ. ಇಂತಹ ಅನೇಕ ವಿಸ್ಮಯಗಳು ಭಾರತೀಯರ ಲೋಹಶಾಸ್ತ್ರದ ಪರಿಣತಿಯನ್ನು ಹೇಳುತ್ತವೆ. ಬೇಲೂರು ಹಳೇಬೀಡು ದೇವಾಲಯಗಳು ಶಿಲ್ಪಕಲೆಯ ಅತ್ಯಂತ ಸೂಕ್ಷ್ಮಸ್ತರದ ನಿಪುಣತೆಗೂ, ತಂಜಾವೂರಿನ ದೇವಾಲಯಗಳು, ಇಂದಿನ ಕ್ರೇನ್ ಗಳಿಗೂ ಹೊರಲಾಗದಷ್ಟು ಭಾರವಾದ ಕಲ್ಲುಗಳನ್ನು ಮೇಲೆ ಸಾಗಿಸಲು ಇರಬೇಕಾದ ತಂತ್ರಜ್ಞಾನದ ಪರಿಣತಿಯನ್ನೂ ಎತ್ತಿ ತೋರಿಸುತ್ತವೆ. ಭಾರತೀಯರ ನೇಯ್ಗೆಗಳು ಇಂದಿಗೂ ಅತ್ಯಂತ ವೈವಿಧ್ಯಮಯ ಎಂಬುದು ಜಗತ್ಪ್ರಸಿದ್ಧವಾಗಿವೆ. ಇಂದಿಗೂ ಭಾರತೀಯರ ಆಹಾರ ವೈವಿಧ್ಯ ಮತ್ತು ಅದರಲ್ಲಿ ಅಡಕವಾಗಿರುವ ಔಷಧ ಗುಣಗಳೂ ಸಹ ವಿಶ್ವ ಮಾನ್ಯ.

ಹೀಗೆ ವೈಭವದಿಂದ ಕಂಗೊಳಿಸುತ್ತಿದ್ದ ವಿದ್ಯೆ, ಕಲೆಗಳು ಭವ್ಯವಾದ ಭಾರತೀಯ ಸಂಸ್ಕೃತಿ-ನಾಗರಿಕತೆಯನ್ನು ರೂಪಿಸಿದ್ದವು. ಆದರೆ ಬ್ರಿಟಿಷರ ಆಳ್ವಿಕೆಯಲ್ಲಿ ಶಿಕ್ಷಣ ಪದ್ಧತಿಯ ಮಾರ್ಪಾಡಿನಿಂದ ಈ ವಿದ್ಯೆಗಳೂ, ಮತ್ತು ಈ ವಿದ್ಯೆಗಳನ್ನನುಸರಿಸಿ ಚಾಲ್ತಿಯಲ್ಲಿದ್ದ ವೃತ್ತಿಗಳು ಹಾಗೂ ಜೀವನ ಶೈಲಿಯು ಬಹುತೇಕ ನಾಶವಾಗಿದ್ದು ಭಾರತೀಯ ವಿದ್ಯೆಗಳು ಇಂದು ಕುಟುಕು ಜೀವದಿಂದಿವೆ. ಇಷ್ಟಾದರೂ ಉಳಿದಿರುವ ವಿದ್ಯೆಗಳನ್ನು ಉಳಿಸಿ, ಬೆಳೆಸಿ ಮತ್ತೆ ಭಾರತೀಯ ಸಂಸ್ಕೃತಿ ನಾಗರಿಕತೆಯನ್ನು ಭವ್ಯವಾಗಿ ಮಾಡಬೇಕಾಗಿದೆ. ಈ ಕರ್ತವ್ಯವನ್ನೂ ಮತ್ತು ಈ ವಿದ್ಯೆಗಳನ್ನು ಬೆಳೆಸಿದ ಮಹರ್ಷಿಗಳನ್ನೂ, ಈ ವಿದ್ಯೆಗಳ ಬಗ್ಗೆ ನೋಟವನ್ನು ಕೊಟ್ಟಿರುವ ಶ್ರೀರಂಗಮಹಾಗುರುಗಳನ್ನೂ ಕೃತಜ್ಞತೆಯಿಂದ ಸ್ಮರಿಸಿ ಎಲ್ಲರಿಗೂ ಸನ್ಮಂಗಳವಾಗಲೆಂದು ಆಶಿಸೋಣ.

– ಲೇಖಕರು ಆಧ್ಯಾತ್ಮ ಚಿಂತಕರು ಮತ್ತು ಪ್ರವಚನಕಾರರು
ಅಷ್ಟಾಂಗಯೋಗ ವಿಜ್ಞಾನಮಂದಿರಂ

ಇದನ್ನು ಓದಿ| Prerane | ಸಪ್ತ ಪ್ರಾಣಗಳೆಂಬ ಸಪ್ತ ವೃಷಭಗಳು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Vastu Tips: ಸಣ್ಣ ವಾಸ್ತು ದೋಷವೇ ಕುಟುಂಬದಲ್ಲಿ ದೊಡ್ಡ ಸಮಸ್ಯೆಗೆ ಕಾರಣವಾಗಬಹುದು!

ಸಣ್ಣಪುಟ್ಟ ವಾಸ್ತು ದೋಷಗಳು ಮನೆ ಮಂದಿಯ ಸುಖ, ಶಾಂತಿ, ನೆಮ್ಮದಿಯನ್ನು ಮಾತ್ರವಲ್ಲ ಆರೋಗ್ಯವನ್ನು ಕೆಡಿಸುತ್ತದೆ. ಹೀಗಾಗಿ ಮನೆಯ ಒಳಾಂಗಣ, ಹೊರಾಂಗಣದ ಸಣ್ಣ ಪುಟ್ಟ ವಸ್ತುಗಳ ವಿಚಾರದಲ್ಲೂ ವಾಸ್ತು ನಿಯಮಗಳನ್ನು (Vastu Tips) ಅನುಸರಿಸಬೇಕು ಎನ್ನುತ್ತದೆ ವಾಸ್ತು ಶಾಸ್ತ್ರ. ಆ ನಿಯಮಗಳು ಯಾವುದು ಎನ್ನುವ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Vastu Tips
Koo

ವ್ಯಕ್ತಿಯ ಜೀವನದಲ್ಲಿ (life) ಅನೇಕ ಸಮಸ್ಯೆಗಳು (problems) ಸಣ್ಣಪುಟ್ಟ ವಾಸ್ತು ದೋಷಗಳಿಂದ (Vastu Tips) ಉಂಟಾಗುತ್ತವೆ. ಮನೆಯವರಲ್ಲಿ ಮನಸ್ತಾಪಗಳು, ಕುಟುಂಬ (family) ಸದಸ್ಯರಲ್ಲಿ ಭಿನ್ನಾಭಿಪ್ರಾಯಗಳು, ಆರೋಗ್ಯ ಸಮಸ್ಯೆಗಳು (health issues) ಕಾಡುತ್ತವೆ. ವಾಸ್ತುವಿಗೆ ಸಂಬಂಧಿಸಿದ ತಪ್ಪುಗಳನ್ನು ಮಾಡುವ ವ್ಯಕ್ತಿಗಳು ಮಾನಸಿಕ ಮತ್ತು ದೈಹಿಕ ಯಾತನೆ ಅನುಭವಿಸುತ್ತಾರೆ. ಆದ್ದರಿಂದ ಮನೆಯಲ್ಲಿ ಪ್ರತಿಯೊಂದು ವಿಚಾರದಲ್ಲೂ ವಾಸ್ತು ನಿಯಮಗಳನ್ನು ಅನುಸರಿಸುವುದು ಉತ್ತಮ.

ನಿರ್ದಿಷ್ಟ ವಿಷಯಗಳ ಬಗ್ಗೆ ಉತ್ತಮ ಕಾಳಜಿ ವಹಿಸುವ ಮೂಲಕ ಆರೋಗ್ಯಕರ ಜೀವನಶೈಲಿಯನ್ನುನಡೆಸಬಹುದು. ಅಲ್ಲದೇ ಮನೆಯ ಹಲವಾರು ಸಮಸ್ಯೆಗಳನ್ನು ಸರಿಪಡಿಸಬಹುದು.

ಹಳೆಯ ವಸ್ತುಗಳು ಬೇಡ

ವಾಸ್ತು ಶಾಸ್ತ್ರದ ಪ್ರಕಾರ, ಮನೆಯೊಳಗೆ ತುಂಬಾ ಹಳೆಯ ಮತ್ತು ನಿಷ್ಪ್ರಯೋಜಕ ವಸ್ತುಗಳನ್ನು ಸಂಗ್ರಹಿಸಬಾರದು. ಇವುಗಳನ್ನು ಮಲಗುವ ಕೋಣೆಗಳಲ್ಲಿ ಇಡಬಾರದು. ಒಂದು ವೇಳೆ ಇಟ್ಟರೆ ಇದರಿಂದ ಆರೋಗ್ಯ ಕೆಡುತ್ತದೆ.

ದೇವರ ಪ್ರತಿಮೆ

ಮಲಗುವ ಕೋಣೆಯಲ್ಲಿ ದೇವರ ಪ್ರತಿಮೆ ಅಥವಾ ಚಿತ್ರವನ್ನು ಇಡಬಾರದು. ಅದು ದುರದೃಷ್ಟಕರವೆಂದು ಪರಿಗಣಿಸಲಾಗಿದೆ.


ಅಚ್ಚುಕಟ್ಟಾಗಿರಲಿ

ಮಲಗುವ ಕೋಣೆಯನ್ನು ಅಚ್ಚುಕಟ್ಟಾಗಿ ಇರುವಂತೆ ವಿಶೇಷ ಗಮನ ನೀಡಬೇಕು. ಅಸ್ತವ್ಯಸ್ತವಾಗಿರುವ ಮಲಗುವ ಕೋಣೆಗಳಿಂದ ಮಾನಸಿಕ ಆರೋಗ್ಯದ ಮೇಲೆ ಋಣಾತ್ಮಕವಾಗಿ ಪರಿಣಾಮ ಬೀರುತ್ತದೆ.

ಆಹಾರ ಸೇವನೆ

ಮನೆಯಲ್ಲಿ ಆಹಾರ ಸೇವನೆ ಮಾಡುವಾಗ ಅಥವಾ ಏನನ್ನಾದರೂ ತಿನ್ನುವಾಗ ಯಾವಾಗಲೂ ಉತ್ತರ ಅಥವಾ ಪೂರ್ವಕ್ಕೆ ಮುಖ ಮಾಡಿ ಕುಳಿತುಕೊಂಡು ತಿನ್ನಬೇಕು.

ನಲ್ಲಿ ನೀರು

ಮನೆಯಲ್ಲಿ ಒಡೆದ ನಲ್ಲಿಯನ್ನು ಆದಷ್ಟು ಬೇಗ ಸರಿಪಡಿಸಿ. ನಲ್ಲಿಯಲ್ಲಿ ನೀರು ತೊಟ್ಟಿಕ್ಕುತ್ತಿರುವುದು ದುರದೃಷ್ಟಕರ ಎಂದು ಹೇಳಲಾಗುತ್ತದೆ.

ಮಲಗುವ ದಿಕ್ಕು

ಪೂರ್ವ ಅಥವಾ ದಕ್ಷಿಣಕ್ಕೆ ತಲೆ ಇಟ್ಟು ಮಲಗುವುದು ಆರೋಗ್ಯಕ್ಕೆ ಒಳ್ಳೆಯದು. ಇದು ಒತ್ತಡವನ್ನು ಕಡಿಮೆ ಮಾಡುತ್ತದೆ ಎಂದು ಭಾವಿಸಲಾಗ್ಗುತ್ತದೆ.


ಕಸ ಸಂಗ್ರಹ

ವಾಸ್ತು ಶಾಸ್ತ್ರದ ಪ್ರಕಾರ ಮನೆಯ ಮೆಟ್ಟಿಲುಗಳ ಕೆಳಗೆ ಹೆಚ್ಚಿನ ಪ್ರಮಾಣದ ಕಸವನ್ನು ಸಂಗ್ರಹಿಸಲು ಬಿಡಬಾರದು. ಇದು ಆರೋಗ್ಯದ ಮೇಲೆ ಪ್ರಭಾವ ಬೀರುತ್ತದೆ.

ಓದುವ ದಿಕ್ಕು

ಮಕ್ಕಳು ಓದುವಾಗ ಯಾವಾಗಲು ಉತ್ತರ ಅಥವಾ ಪೂರ್ವಕ್ಕೆ ಮುಖ ಮಾಡಬೇಕು. ಇದರಿಂದ ಓದಿದ್ದು ಹೆಚ್ಚು ಕಾಲ ನೆನಪಿನಲ್ಲಿರುತ್ತದೆ.

ಇದನ್ನೂ ಓದಿ: Vastu Tips: ಮನೆಯ ಗೋಡೆಗಳ ಮೇಲೆ ಎಲ್ಲೆಂದರಲ್ಲಿ ಫೋಟೊ ಅಳವಡಿಸಿದರೆ ಏನಾಗುತ್ತದೆ?

ಮರ, ಸಸ್ಯಗಳು

ಅತ್ಯುತ್ತಮ ಆರೋಗ್ಯಕ್ಕಾಗಿ, ಮನೆಯ ಸುತ್ತಮುತ್ತ ಮರ ಮತ್ತು ಸಸ್ಯಗಳನ್ನು ಬೆಳೆಸಿ. ಇದು ಕುಟುಂಬದ ಎಲ್ಲರನ್ನು ಸಂತೋಷವಾಗಿರಿಸುತ್ತದೆ ಮತ್ತು ಸಕಾರಾತ್ಮಕತೆಯನ್ನು ಉತ್ತೇಜಿಸುತ್ತದೆ.

ಕಿಟಕಿ, ಬಾಗಿಲು

ಮನೆಯೊಳಗೇ ಉತ್ತಮ ಶಕ್ತಿಯನ್ನು ಸ್ವಾಗತಿಸಲು, ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಸ್ವಲ್ಪ ಸಮಯದವರೆಗೆ ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಿರಿ.

Continue Reading

ಧಾರ್ಮಿಕ

Vastu Tips: ಮನೆಯ ಗೋಡೆಗಳ ಮೇಲೆ ಎಲ್ಲೆಂದರಲ್ಲಿ ಫೋಟೊ ಅಳವಡಿಸಿದರೆ ಏನಾಗುತ್ತದೆ?

ಗೋಡೆಗಳ ಮೇಲೆ ತೂಗು ಹಾಕುವ ಚಿತ್ರಗಳಿಗೂ ಪ್ರಮುಖ ನಿಯಮಗಳು ಮತ್ತು ಸಲಹೆಗಳನ್ನು ವಾಸ್ತು ಶಾಸ್ತ್ರದಲ್ಲಿ (Vastu Tips) ನೀಡಲಾಗಿದೆ. ಇವುಗಳನ್ನು ಅನುಸರಿಸುವ ಮೂಲಕ ಮನೆಯಲ್ಲಿ ಸಕಾರಾತ್ಮಕ ಶಕ್ತಿಯನ್ನು ತುಂಬಬಹುದು ಮತ್ತು ಕುಟುಂಬದಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಬಹುದು.

VISTARANEWS.COM


on

By

Vastu Tips
Koo

ಮನೆಯಲ್ಲಿ (home) ಪ್ರತಿಯೊಂದು ವಸ್ತುವನ್ನು ಇಡಲೂ ವಾಸ್ತು (Vastu Tips) ನಿಯಮವಿದೆ. ಯಾಕೆಂದರೆ ಮನೆಯೊಳಗಿರುವ ಪ್ರತಿಯೊಂದು ವಸ್ತುವಿನಲ್ಲೂ ಜೀವಕಳೆ ತುಂಬುತ್ತದೆ ಮತ್ತು ಶಕ್ತಿಯ ಕೇಂದ್ರವಾಗಿಸುತ್ತದೆ. ಗೋಡೆಯಲ್ಲಿ (wall) ತೂಗು ಹಾಕುವ ಚಿತ್ರಗಳನ್ನು (Picture) ಇಡುವಾಗಲೂ ವಾಸ್ತು ನಿಯಮವನ್ನು ಪಾಲಿಸಬೇಕು. ಯಾಕೆಂದರೆ ಗೋಡೆಗಳ ಮೇಲೆ ಇಡುವ ಚಿತ್ರಗಳು ಮತ್ತು ಅಲಂಕಾರಿಕ ವಸ್ತುಗಳು ಕೇವಲ ಮನೆಯ ಸೌಂದರ್ಯವನ್ನು ಮಾತ್ರ ಹೆಚ್ಚಿಸುವುದಿಲ್ಲ ಸಕಾರಾತ್ಮಕ ಶಕ್ತಿಯನ್ನು ಮನೆಯೊಳಗೆ ಪ್ರವಹಿಸುವಂತೆ ಮಾಡುತ್ತದೆ. ಎಲ್ಲೆಂದರಲ್ಲಿ ಅಳವಡಿಸಿದರೆ ನಕಾರಾತ್ಮಕತೆ ಹೆಚ್ಚುತ್ತದೆ.

ಮನೆಯ ಗೋಡೆಗಳ ಮೇಲೆ ತೂಗು ಹಾಕುವ ಚಿತ್ರ, ಸರಿಯಾದ ದಿಕ್ಕು ಮತ್ತು ನಿರ್ದಿಷ್ ಬಣ್ಣದದ್ದರೆ ಮಾತ್ರ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಮೃದ್ಧಿ ಉಳಿಯುತ್ತದೆ ಎನ್ನುತ್ತದೆ ವಾಸ್ತು.

ಉತ್ತರ ದಿಕ್ಕು

ಸಂಪತ್ತಿನ ದೇವರು ಕುಬೇರ ಈ ದಿಕ್ಕಿನಲ್ಲಿ ವಾಸಿಸುತ್ತಾನೆ. ಹಚ್ಚ ಹಸಿರಿನ ಮರಗಳು, ಸಸ್ಯವರ್ಗ ಮತ್ತು ನೀರಿನ ಮೂಲಗಳ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇಡುವುದು ಶುಭವೆಂದು ಪರಿಗಣಿಸಲಾಗಿದೆ. ಈ ಚಿತ್ರಗಳು ಸಂಪತ್ತು ಮತ್ತು ಸಮೃದ್ಧಿಯನ್ನು ಆಕರ್ಷಿಸುತ್ತವೆ.

ಪೂರ್ವ ದಿಕ್ಕು

ಈ ದಿಕ್ಕನ್ನು ಉದಯಿಸುತ್ತಿರುವ ಸೂರ್ಯನ ದಿಕ್ಕು ಎಂದು ಪರಿಗಣಿಸಲಾಗಿದೆ. ಭಗವಾನ್ ಸೂರ್ಯ, ಸಂತರು ಅಥವಾ ಸೂರ್ಯೋದಯದ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇಡುವುದು ಪ್ರಯೋಜನಕಾರಿ. ಈ ಚಿತ್ರಗಳು ಮನೆಯಲ್ಲಿ ಶಕ್ತಿ ಮತ್ತು ಸಕಾರಾತ್ಮಕತೆಯನ್ನು ತರುತ್ತವೆ.

ದಕ್ಷಿಣ ದಿಕ್ಕು

ಪೂರ್ವಜರು ಮತ್ತು ಧರ್ಮಗ್ರಂಥಗಳ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇರಿಸಬಹುದು. ದೆವ್ವ, ಆತ್ಮ ಅಥವಾ ನಕಾರಾತ್ಮಕ ಶಕ್ತಿಯ ಚಿತ್ರಗಳನ್ನು ಈ ದಿಕ್ಕಿನಲ್ಲಿ ಇಡಬಾರದು. ಕೆಂಪು, ಚಿನ್ನದ ಅಥವಾ ಕಿತ್ತಳೆ ಬಣ್ಣದ ಚಿತ್ರಗಳನ್ನು ದಕ್ಷಿಣ ದಿಕ್ಕಿನಲ್ಲಿ ಇಡುವುದು ಶುಭವೆಂದು ಪರಿಗಣಿಸಲಾಗುತ್ತದೆ.

ಪಶ್ಚಿಮ ದಿಕ್ಕು

ಈ ದಿಕ್ಕು ನೀರಿನ ಅಂಶದಿಂದ ಪ್ರಭಾವಿತವಾಗಿರುತ್ತದೆ. ಈ ದಿಕ್ಕಿನಲ್ಲಿ ನೀರು, ಸಮುದ್ರ, ನದಿ ಅಥವಾ ಕಾರಂಜಿ ಚಿತ್ರಗಳನ್ನು ಹಾಕುವುದು ಮಾನಸಿಕ ಶಾಂತಿ ಮತ್ತು ಸಮತೋಲನವನ್ನು ಕಾಯ್ದುಕೊಳ್ಳುತ್ತದೆ.


ಫೋಟೋಗಳು ಹೇಗಿರಬೇಕು?

ದೇವರು, ದೇವತೆಗಳು ಮತ್ತು ಧಾರ್ಮಿಕ ಸ್ಥಳಗಳ ಚಿತ್ರಗಳನ್ನು ಮನೆಯಲ್ಲಿ ಹಾಕುವುದು ಶುಭವೆಂದು ಪರಿಗಣಿಸಲಾಗಿದೆ. ಈ ಚಿತ್ರಗಳು ಕುಟುಂಬದಲ್ಲಿ ಶಾಂತಿ ಮತ್ತು ಭಕ್ತಿಯನ್ನು ಉತ್ತೇಜಿಸುತ್ತವೆ.

ಹಚ್ಚ ಹಸಿರಿನ ಮರ, ಹೂವುಗಳು, ಪರ್ವತ, ನದಿಗಳು ಮುಂತಾದ ಸುಂದರವಾದ ನೈಸರ್ಗಿಕ ದೃಶ್ಯಗಳ ಚಿತ್ರಗಳನ್ನು ಹಾಕುವುದು ಮನಸ್ಸಿನಲ್ಲಿ ಶಾಂತಿ ಮತ್ತು ಸಕಾರಾತ್ಮಕತೆಯನ್ನು ತರುತ್ತದೆ.

ಕುಟುಂಬ ಸದಸ್ಯರ ಗುಂಪು ಫೋಟೋಗಳನ್ನು ಅಥವಾ ಸಂತೋಷದ ಕುಟುಂಬ ಕ್ಷಣಗಳ ಚಿತ್ರಗಳನ್ನು ಹಾಕುವುದು ಕುಟುಂಬದಲ್ಲಿ ಪ್ರೀತಿ ಮತ್ತು ಏಕತೆಯನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ಏರುತ್ತಿರುವ ಸೂರ್ಯ, ಚಾಲನೆಯಲ್ಲಿರುವ ಕುದುರೆಗಳು, ಹಾರುವ ಪಕ್ಷಿಗಳು ಮುಂತಾದ ಶಕ್ತಿಯುತ ಮತ್ತು ಸ್ಪೂರ್ತಿದಾಯಕ ಚಿತ್ರಗಳನ್ನು ಇಡುವುದರಿಂದ ಮನೆಯವರಲ್ಲಿ ಶಕ್ತಿ ಮತ್ತು ಸ್ಫೂರ್ತಿ ನೀಡುತ್ತದೆ.

ಯಾವ ಎತ್ತರದಲ್ಲಿ ಇಡಬೇಕು?

ಚಿತ್ರಗಳನ್ನು ಸುಲಭವಾಗಿ ಗೋಚರಿಸುವಂತಹ ಎತ್ತರದಲ್ಲಿ ಗೋಡೆಯ ಮೇಲೆ ಇಡಬೇಕು ಮತ್ತು ಅವುಗಳನ್ನು ನೋಡುವಲ್ಲಿ ಯಾರೂ ಅನಾನುಕೂಲವಾಗಬಾರದು. ಚಿತ್ರಗಳನ್ನು ಮುಖ್ಯ ಬಾಗಿಲಿನ ಮುಂದೆ ಅಥವಾ ನೇರವಾಗಿ ಹಾಸಿಗೆಯ ಮುಂದೆ ಇಡುವುದನ್ನು ತಪ್ಪಿಸಬೇಕು. ಧಾರ್ಮಿಕ ಅಥವಾ ಕುಟುಂಬದ ಚಿತ್ರಗಳನ್ನು ಅಡುಗೆಮನೆ ಮತ್ತು ಸ್ನಾನಗೃಹದಲ್ಲಿ ಇಡಬಾರದು.

ಇದನ್ನೂ ಓದಿ: Vastu Tips: ವೈವಾಹಿಕ ಜೀವನ ಸುಖಮಯವಾಗಿರಲು ಈ ವಾಸ್ತು ನಿಯಮ ಅನುಸರಿಸಿ

ಫೋಟೋಗಳ ಬಣ್ಣ ಏನು?

ವರ್ಣಚಿತ್ರಗಳಲ್ಲಿ ಬಳಸುವ ಬಣ್ಣಗಳಿಗೆ ಗಮನ ಕೊಡುವುದು ಸಹ ಮುಖ್ಯವಾಗಿದೆ. ನೀಲಿ, ಹಸಿರು, ಹಳದಿ ಮುಂತಾದ ಬೆಳಕು ಮತ್ತು ಹಿತವಾದ ಬಣ್ಣಗಳು ಮಾನಸಿಕ ಶಾಂತಿ ಮತ್ತು ಸಕಾರಾತ್ಮಕತೆಯನ್ನು ಉತ್ತೇಜಿಸುತ್ತವೆ. ಕೆಂಪು, ಕಪ್ಪು ಮತ್ತು ಕಂದು ಬಣ್ಣಗಳಂತಹ ಗಾಢ ಮತ್ತು ಹೆಚ್ಚು ಉತ್ತೇಜಕ ಬಣ್ಣಗಳನ್ನು ಮಿತವಾಗಿ ಬಳಸಬೇಕು.

ಫೋಟೋಗಳನ್ನು ಹೇಗೆ ಇರಿಸಬೇಕು?

ಚಿತ್ರಗಳನ್ನು ಯಾವಾಗಲೂ ಸ್ವಚ್ಛವಾಗಿ ಮತ್ತು ಉತ್ತಮ ಸ್ಥಿತಿಯಲ್ಲಿಡಬೇಕು. ಧೂಳು, ಕೊಳಕು ಮತ್ತು ಹಾನಿಗೊಳಗಾದ ಚಿತ್ರಗಳು ನಕಾರಾತ್ಮಕ ಶಕ್ತಿಯನ್ನು ಉಂಟುಮಾಡಬಹುದು.

Continue Reading

ಮೈಸೂರು

Mysore News: ಗುರುಗಳ ಅನುಗ್ರಹವಿದ್ದರೆ ಜೀವನದಲ್ಲಿ ಎಲ್ಲ ಸಾಧನೆಗಳು ಸುಲಭ; ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ

Mysore News: ಮೈಸೂರಿನ ಜೆಪಿ ನಗರದ ವಿಠಲಧಾಮದ ಭವ್ಯ ವೇದಿಕೆಯಲ್ಲಿ ಶ್ರೀ ಸೋಸಲೆ ವ್ಯಾಸರಾಜ ಮಠ ಆಯೋಜನೆ ಮಾಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದ ಶುಕ್ರವಾರದ ವಿದ್ವತ್ ಸಭೆಯಲ್ಲಿ ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ ಆಶೀರ್ವಚನ ನೀಡಿದರು.

VISTARANEWS.COM


on

All achievements in life are easy if there is Guru's grace says Sri Satyatmatirtha Swamiji
Koo

ಮೈಸೂರು: ಗುರುಗಳ ಅನುಗ್ರಹವಿದ್ದರೆ ಜೀವನದಲ್ಲಿ ಎಲ್ಲ ಸಾಧನೆಗಳು ಸುಲಭ ಎಂದು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉತ್ತರಾದಿ ಮಠದ ಶ್ರೀ ಸತ್ಯಾತ್ಮತೀರ್ಥ ಸ್ವಾಮೀಜಿ (Mysore News) ತಿಳಿಸಿದರು.

ಜೆಪಿ ನಗರದ ವಿಠಲಧಾಮದ ಭವ್ಯ ವೇದಿಕೆಯಲ್ಲಿ ಶ್ರೀ ಸೋಸಲೆ ವ್ಯಾಸರಾಜ ಮಠ ಆಯೋಜನೆ ಮಾಡಿರುವ ಶ್ರೀಮನ್ ನ್ಯಾಯ ಸುಧಾ ಮಂಗಳ ಮಹೋತ್ಸವದ ಶುಕ್ರವಾರದ ವಿದ್ವತ್ ಸಭೆಯಲ್ಲಿ ಶ್ರೀಗಳು ಆಶೀರ್ವಚನ ನೀಡಿದರು.

ವಿದ್ಯಾರ್ಥಿಗಳು ಶ್ರಮ ವಹಿಸಿ ಅಧ್ಯಯನ ಮಾಡಿರುವುದು ಒಂದೆಡೆಯಾದರೆ ಅವರಲ್ಲಿ ಧೈರ್ಯ, ಸದಾಚಾರ, ಸಂಸ್ಕಾರ, ನೈತಿಕತೆ ಮತ್ತು ಜೀವನ ಕ್ರಮದ ಮಾರ್ಗವನ್ನು ಕಲಿಯುವುದು ಗುರುವಿನ ಅನುಸರಣೆಯಿಂದ ಮಾತ್ರ. ಈ ನಿಟ್ಟಿನಲ್ಲಿ ಇಂದು ಸುಧಾಮಂಗಳ ಮಾಡುತ್ತಿರುವ ವಿದ್ಯಾರ್ಥಿಗಳಾದ ಸೌಮಿತ್ರಿ, ಸುಘೋಷ, ಪ್ರಣವ ಮತ್ತು ಹೊನ್ನಾಳಿ ಆಯಾಚಿತ ಶ್ರೀಶ ಆಚಾರ್ಯರು ಪಂಡಿತರು ಮತ್ತು ವಿದ್ವಾಂಸರು ಮೆಚ್ಚುವಂತಹ ಮುಕ್ತ ಪರೀಕ್ಷೆ ನೀಡಿದ್ದಾರೆ. ಅವರಿಗೆ ಉನ್ನತೋನ್ನತ ಪ್ರಗತಿ ಆಗಲಿ ಎಂದು ಸತ್ಯಾತ್ಮ ಶ್ರೀಗಳು ಆಶೀರ್ವಾದ ಪೂರ್ವಕವಾಗಿ ಹೇಳಿದರು.

ಇದನ್ನೂ ಓದಿ: World Food Safety Day: ಆಹಾರ ಸುರಕ್ಷತೆಗಾಗಿ ನಾವು ಏನು ಮಾಡಬಹುದು?

ಮುಳಬಾಗಿಲು ಶ್ರೀಪಾದರಾಜರ ಮಠದ ಶ್ರೀ ಸುಜಯನಿಧಿ ತೀರ್ಥರು ಮಾತನಾಡಿ, ಶ್ರೀ ವಿದ್ಯಾಶ್ರೀಶ ತೀರ್ಥರು ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದ ಮೂಲಕ ಯುವ-ನವ ವಿದ್ವಾಂಸರನ್ನು ತರಬೇತುಗೊಳಿಸಿ ಸಮಾಜಕ್ಕೆ ಮಹತ್ವದ ಕೊಡುಗೆಯನ್ನಾಗಿ ನೀಡುತ್ತಿದ್ದಾರೆ. ಅವರ ಸೇವೆ ಮಹತ್ತರವಾಗಿದೆ. ವಿದ್ಯಾರ್ಥಿಗಳು ಪಂಡಿತರಾಗಿ ಭಾರತೀಯ ಸನಾತನ ಪರಂಪರೆಯ ಪ್ರತೀಕವೂ ಆಗಿ ದೇಶದ ಸಂಸ್ಕೃತಿಯನ್ನು ಮುನ್ನಡೆಸುವಂತಾಗಲಿ ಎಂದು ತಿಳಿಸಿದರು.

ಶ್ರೀ ವ್ಯಾಸ ತೀರ್ಥ ವಿದ್ಯಾಪೀಠದ ಗೌರವ ಕಾರ್ಯದರ್ಶಿ ಡಾ. ಡಿ.ಪಿ. ಮಧುಸೂದನಾಚಾರ್ಯರು ಮಾತನಾಡಿ, ಪೇಜಾವರ ಶ್ರೀ ವಿಶ್ವೇಶ ತೀರ್ಥರು ನಮ್ಮ ವಿದ್ಯಾಪೀಠಕ್ಕೆ ಪ್ರಪ್ರಥಮವಾಗಿ ಸ್ಪೂರ್ತಿ ಮತ್ತು ಚೈತನ್ಯ ನೀಡಿದವರು ಎಂದು ಸ್ಮರಿಸಿದರು.

ಕಳೆದ ಎಂಟು ವರ್ಷಗಳ ಹಿಂದೆ ಶ್ರೀ ವ್ಯಾಸ ತೀರ್ಥ ವಿದ್ಯಾಪೀಠ ತಿರುಮಕೂಡಲು ಕ್ಷೇತ್ರದಲ್ಲಿ ಆರಂಭವಾದಾಗ ಸ್ವತಃ ನನ್ನ ತಾಯಿಯವರೇ ಎಲ್ಲ ಮಕ್ಕಳಿಗೂ ಅಡುಗೆ ಮಾಡಿ ಕೈ ತುತ್ತು ಹಾಕಿ ಬೆಳೆಸಿದರು. ವಿದ್ಯಾರ್ಥಿಗಳ ಸಮಗ್ರ ಕ್ಷೇಮ ಪಾಲನೆಯಲ್ಲಿ ಪ್ರತಿನಿತ್ಯವೂ ನೂರಾರು ಸಮಸ್ಯೆ ಎದುರಾದರು ಅವೆಲ್ಲವೂ ಗುರುಗಳ ಪರಮ ಅನುಗ್ರಹದಿಂದ ನಿವಾರಣೆಯಾಗಿ ಇಂದು ನಾಲ್ವರು ಪಂಡಿತರಾಗುವ ಮಟ್ಟದವರೆಗೆ ಸಂಸ್ಥೆ ಬೆಳೆದಿದೆ. ಇವುಗಳ ಹಿಂದೆ ಸೋಸಲ ಶ್ರೀ ವಿದ್ಯಾಶ್ರೀಶ ತೀರ್ಥರ ಪರಿಶ್ರಮ ಅಗಾಧವಾಗಿದೆ ಎಂದರು.

ವಿದ್ಯಾಪೀಠದ ವ್ಯವಸ್ಥಾಪಕ ಟ್ರಸ್ಟಿ ಶೇಷಗಿರಿ ಆಚಾರ್ಯ ಮಾತನಾಡಿ, ಸುಧಾ ಪರೀಕ್ಷೆ ಎಂಬುದು ವಿದ್ಯಾರ್ಥಿಗಳಿಗೆ ಮಾತ್ರ ಅಲ್ಲ, ವಿದ್ವಾಂಸರೂ ತಮ್ಮನ್ನು ತಾವು ಸರಿಪಡಿಸಿಕೊಳ್ಳಲು, ಜ್ಞಾನದ ಶಾಖೆಯನ್ನು ಉನ್ನತೀಕರಿಸಿಕೊಳ್ಳಲು ಮಹೋನ್ನತವಾದ ವೇದಿಕೆಯಾಗಿದೆ ಎಂದರು.

ಇದನ್ನೂ ಒದಿ: Cyber Crime: ವಾಟ್ಸ್ಆ್ಯಪ್‌ ಗ್ರೂಪ್‌ ಮೆಸೇಜ್‌ ಓಪನ್‌ ಮಾಡಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಾಪಾರಿ

ಸುಧಾ ಪರೀಕ್ಷೆ ಎದುರಿಸಿ, ವಿದ್ವಾಂಸರ ಪ್ರಶಂಸೆಗೆ ಭಾಜನರಾದ ಆಯಾಚಿತ ಶ್ರೀ ಶ ಮತ್ತು ಸುಘೋಷ ಅವರು ತಮ್ಮ ಅನುಭವಗಳನ್ನು ಹಂಚಿಕೊಂಡರು.

ಆಯಾಚಿತ ಶ್ರೀ ಶ ಮಾತನಾಡಿ, ಬಡತನದ ಬೇಗೆಯಲ್ಲಿ ನಾನು ಇದ್ದರೂ ಬಾಲ್ಯದಲ್ಲಿಯೇ ತಾಯಿಯನ್ನು ಕಳೆದುಕೊಂಡರೂ ಸೋಸಲೆ ಶ್ರೀಗಳು ನನ್ನನ್ನು ಕೈಹಿಡಿದು ಅನ್ನ, ಆಹಾರವನ್ನು ನೀಡಿ ವಿದ್ಯಾದಾನ ಮಾಡಿದರು. ಕಳೆದ ವರ್ಷ ನನ್ನ ಸಹೋದರಿಯ ವಿವಾಹ ಸಂದರ್ಭದಲ್ಲಿಯೂ ನಮ್ಮ ಬಡತನವನ್ನು ಕಂಡು ಸಂಪೂರ್ಣ ವಿವಾಹದ ಜವಾಬ್ದಾರಿಯನ್ನು ಮಠದಿಂದಲೇ ನಿರ್ವಹಿಸಿದ್ದನ್ನು ಜೀವನದಲ್ಲಿ ಮರೆಯಲಾಗದು ಎಂದು ತಿಳಿಸಿದರು.

ಪ್ರಣವ ಆಚಾರ್ಯ ಮಾತನಾಡಿ, ನಮ್ಮ ಪರೀಕ್ಷೆ ಮತ್ತು ಯಶಸ್ವಿಗಾಗಿ ಹಗಲು ಇರುಳು ಶ್ರಮಿಸಿದ ಉಪನ್ಯಾಸಕರು ಮತ್ತು ಪಂಡಿತರನ್ನು ಸ್ಮರಿಸಿಕೊಂಡರು. ಹಿರಿಯರ ಅನುಗ್ರಹದಿಂದಲೇ ನಮ್ಮ ಉನ್ನತಿ ಸಾಧ್ಯವಾಗಿದೆ ಎಂದು ಧನ್ಯತೆ ಸಮರ್ಪಿಸಿದರು.

ಹಿರಿಯ ವಿದ್ವಾಂಸ ಎ.ವಿ. ನಾಗಸಂಪಿಗೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಶ್ರೀ ಮಠ ಆಯೋಜಿಸಿದ್ದ ವಿಶೇಷ ಪ್ರದರ್ಶಿನಿ ಗಮನ ಸೆಳೆಯಿತು. ರಾಮಾಯಣ, ಮಹಾಭಾರತ ಶ್ರೀಮನ್ ನ್ಯಾಯ ಸುಧಾ, ವ್ಯಾಸತ್ರಗಳು, ವೇದಗಳು ಮತ್ತು ಉಪನಿಷತ್ತಿನ ವರ್ಣ ಚಿತ್ರಗಳು ವೀಕ್ಷಕರ ಗಮನಸೆಳೆದವು. ಸಂಜೆ ವಿವಿಧ ಭಜನಾ ಮಂಡಳಿಗಳು ನಾದಸ್ವರ ವೇದಘೋಷದೊಂದಿಗೆ ಶೋಭಾ ಯಾತ್ರೆ ಸಂಪನ್ನಗೊಂಡಿತು.

ಶ್ರೀ ವ್ಯಾಸರಾಜರಿಗೆ ಸಾಂಪ್ರದಾಯಿಕವಾಗಿ ದರ್ಬಾರ್ ಸಮರ್ಪಿಸಲಾಯಿತು. ವಿವಿಧ ಪೀಠಾಧೀಶರು ವ್ಯಾಸರಾಜರಿಗೆ ರತ್ನದ ಅಭಿಷೇಕ ಸಮರ್ಪಣೆ ಮಾಡಿದರು.

ಇದನ್ನೂ ಓದಿ: Money Guide: ಪಿಎಫ್‌ ನಿಯಮಗಳಲ್ಲಿ ಮಹತ್ವದ ಬದಲಾವಣೆ; ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಶಸ್ತಿ ಪ್ರದಾನ

ವಿವಿಧ ರಂಗದಲ್ಲಿ ಅದ್ವಿತೀಯ ಸಾಧನೆ ಮಾಡಿದ ಕೆ.ಎಸ್. ಗುರುರಾಜ, ಎಚ್.ಆರ್. ನಾಗೇಂದ್ರ ಮತ್ತು ಎ.ಆರ್. ರಘುರಾಮ ಅವರಿಗೆ ಶ್ರೀಮಠದ ರಘುನಾಥ ತೀರ್ಥ ಅನುಗ್ರಹ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

Continue Reading

ಶಿವಮೊಗ್ಗ

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Sigandur launch: ಮಳೆ ಕೊರತೆಯಿಂದಾಗಿ ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತಗೊಂಡಿದೆ, ಹೀಗಾಗಿ ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹಾಕಲಾಗಿದೆ.

VISTARANEWS.COM


on

By

Sigandur launch
Koo

ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ ಹಿನ್ನೆಲೆಯಲ್ಲಿ ಸಿಗಂದೂರು ಲಾಂಚ್‌ನಲ್ಲಿ (Sigandur launch) ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಸದ್ಯಕ್ಕೆ ಲಾಂಚ್‌ನಲ್ಲಿ ಬೈಕ್ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಮಳೆ ಕೊರತೆ ಮುಂದುವರಿದ ಹಿನ್ನೆಲೆಯಲ್ಲಿ ಶಿವಮೊಗ್ಗದ ಸಾಗರ ತಾಲೂಕಿನ ಶರಾವತಿ ಹಿನ್ನೀರು ಭಾಗದಲ್ಲಿರುವ ಲಾಂಚ್ ಸಂಚಾರ ಸೇವೆ ಸ್ಥಗಿತವಾಗಿದೆ. ಎರಡು ಬದಿಯಲ್ಲಿ ಪ್ಲಾಟ್ ಫಾರ್ಮ್‌ಕ್ಕಿಂತ ನೀರು ಕಡಿಮೆ ಆದ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧ ಮಾಡಲಾಗಿದೆ. ಮಳೆ ಬಾರದೆ ಇದ್ದರೆ 16 ದಿನದಲ್ಲಿ ಸಂಪೂರ್ಣವಾಗಿ ಎಲ್ಲ ವಾಹನಗಳು ಹಾಗೂ ಸಾರ್ವಜನಿಕ ಪ್ರವೇಶವು ಬಂದ್ ಆಗಲಿದೆ ಎನ್ನಲಾಗಿದೆ.

ಶರಾವತಿ ಹಿನ್ನೀರು ಭಾಗದಲ್ಲಿರುವ ಇತಿಹಾಸ ಪ್ರಸಿದ್ಧ ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಈ ಲಾಂಚ್‌ ಸಂಪರ್ಕ ಕಲ್ಪಿಸಲಿದೆ. ಜತೆಗೆ ಸಾಗರ ತಾಲೂಕಿನ ಕಳಸವಳ್ಳಿ ಮತ್ತು ಅಂಬರಗೋಡ್ಲು, ಕರೂರು, ಬಾರಂಗಿ ಹೋಬಳಿಯ ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ಲಾಂಚ್ ಇದಾಗಿದೆ. ಲಾಂಚ್ ಸಂಪೂರ್ಣ ಸ್ಥಗಿತಗೊಂಡರೆ 90 ಕಿಲೋ ಮೀಟರ್ ಸುತ್ತಿ ಪ್ರಯಾಣಿಸುವ ಅನಿವಾರ್ಯತೆ ಇದೆ. ಇತ್ತ ಭಾರಿ ವಾಹನ ನಿರ್ಬಂಧದಿಂದ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಳೆಗಾಗಿ ಸ್ಥಳೀಯರು ಮತ್ತು ಪ್ರವಾಸಿಗರು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: Karnataka Rain : ಆಗುಂಬೆಯಲ್ಲಿ ದುರಂತ; ಅಡಿಕೆ ತೋಟದಲ್ಲಿ ಕಳೆ ಕೀಳುವಾಗ ಸಿಡಿಲು ಬಡಿದು ವ್ಯಕ್ತಿ ಸಾವು

Karnataka Rain : ಮಳೆ ಶುರುವಾದರೆ ಸಾಕು ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ!

ಬೆಳಗಾವಿ: ಬೆಳಗಾವಿಯ ಗೋಕಾಕ ತಾಲೂಕಿನ ಗೋಕಾಕ ಕೊಣ್ಣೂರ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ಗುಡ್ಡದ ಭೂತದ ಕಾಟ (Karnataka Rain) ಶುರುವಾಗಿದೆ. ಅದು ಕೂಡ ಮಳೆ ಪ್ರಾರಂಭವಾಗುತ್ತಿದ್ದಂತೆ ಗೋಕಾಕ ಜನರಿಗೆ ಗುಡ್ಡದ ಭೂತದ ಕಾಟ ಹೆಚ್ಚಾಗುತ್ತದೆ. ಇಷ್ಟಕ್ಕೂ ಏನಿದು ಗುಡ್ಡದ ಭೂತದ ಕಾಟ ಅಂದರೆ ಗೋಕಾಕ ಬೆಟ್ಟದಿಂದ ದೊಡ್ಡ ದೊಡ್ಡ ಬಂಡೆಕಲ್ಲುಗಳು ಉರುಳಿ ಬೀಳುತ್ತಿವೆ.

karnataka rain

ಗೋಕಾಕ ಹಾಗೂ ಕೊಣ್ಣೂರು ಸಂಪರ್ಕ ಕಲ್ಪಿಸುವ ರಸ್ತೆಯ ಮಧ್ಯೆ ಬಂಡೆಗಳು ಉರುಳಿ ಬೀಳುತ್ತಿವೆ. ಬೆಟ್ಟದಿಂದ ಉರುಳುತ್ತಿರುವ ಬಂಡೆಗಳಿಂದ ಸವಾರರು, ಜನರು ಭಯಭೀತರಾಗಿದ್ದಾರೆ. ಮಳೆಯಿಂದಾಗಿ ಬಂಡೆಗಳ ಕೆಳಗಿನ ಮಣ್ಣು ಕುಸಿಯುತ್ತಿದೆ. ಇದರಿಂದಾಗಿ ಬಂಡೆ ಕಲ್ಲುಗಳು ರಸ್ತೆಗೆ ಬಂದು ಬೀಳುತ್ತಿವೆ. ರಸ್ತೆಯಲ್ಲಿ ಸಂಚರಿಸುವವರು ಪ್ರಾಣ ಭಯದಲ್ಲೇ ಓಡಾಡುವಂತಾಗಿದೆ.

karnataka rain

ಕೊಚ್ಚಿ ಹೋದ ಬೈಕ್‌

ವಿಜಯಪುರದಲ್ಲಿ ನಿನ್ನೆ ಗುರುವಾರ ತಡರಾತ್ರಿ ಸುರಿದ ಭಾರಿ ಮಳೆಗೆ ನದಿ, ಹಳ್ಳಗಳು ತುಂಬಿ ಹರಿಯುತ್ತಿದೆ. ವಿಜಯಪುರ ಜಿಲ್ಲೆಯ ಸಾರವಾಡ ಗ್ರಾಮದಲ್ಲಿ ಡೋಣಿ ನದಿ ಉಕ್ಕಿ ಹರಿದಿದೆ. ಪರಿಣಾಮ ಅಕ್ಕ ಪಕ್ಕದ ಜಮೀನುಗಳಿಗೆ ನೀರು ನುಗ್ಗಿದೆ. ವಿಜಯಪುರ ನಗರದಲ್ಲಿ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ಮಳೆ ನೀರಲ್ಲಿ ಬೈಕ್‌ವೊಂದು ಕೊಚ್ಚಿ ಹೋದ ಘಟನೆ ವಿಜಯಪುರ ನಗರದ ಮನಗೂಳಿ ಅಗಸಿ ಬಳಿ ನಡೆದಿದೆ. ಉಕ್ಕಿ ಹರಿಯುತ್ತಿರುವ ಮಳೆ ನೀರಲ್ಲಿ ಬೈಕ್ ಕೊಂಡೊಯ್ಯುವ ಹರಸಾಹಸದ ವೇಳೆ ಕೊಚ್ಚಿಹೋಗಿದೆ.

ಇದನ್ನೂ ಓದಿ: Electric shock : ಶಾಲೆಗೆ ಹೋದವಳು ಮಸಣ ಸೇರಿದಳು; ಕರೆಂಟ್‌ ಶಾಕ್‌ಗೆ ಒದ್ದಾಡಿ ಪ್ರಾಣಬಿಟ್ಟಳು

ಇತ್ತ ತುಮಕೂರು ಜಿಲ್ಲೆಯಲ್ಲಿ ರಾತ್ರಿ ಧಾರಕಾರ ಸುರಿದ ಮಳೆ ರಭಸಕ್ಕೆ ಕೆರೆ, ಕಟ್ಟೆಗಳು ಕೋಡಿ ಬಿದ್ದಿದ್ದವು. ತುಮಕೂರು ಜಿಲ್ಲೆಯ ಕೊರಟಗೆರೆ ಬಳಿಯಿರುವ ಜಂಪೇನಹಳ್ಳಿ ಕೆರೆ ನೀರಿಲ್ಲದೇ ಬತ್ತಿಹೋಗಿತ್ತು. ಇದೀಗ ತುಂಬಿ ಹರಿಯುತ್ತಿದ್ದು, ರೈತರಲ್ಲಿ ಮಂದಹಾಸ ಮೂಡಿದೆ.

ಇತ್ತ ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿದೆ. ಕೃಷ್ಣಾ ನದಿ ಉಗಮ ಸ್ಥಾನ ಮಹಾಬಲೇಶ್ವರದಲ್ಲಿ ಭಾರೀ ಮಳೆ ಹಿನ್ನೆಲೆ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಒಳಹರಿವು ಆರಂಭವಾಗಿದೆ. ಈ ವರ್ಷದ ಮೊದಲ ಒಳಹರಿವು 1,768 ಕ್ಯೂಸೇಕ್ ದಾಖಲಾಗಿದ್ದು, ಕೃಷ್ಣಾ ನದಿ ಪಾತ್ರದ ಜನರು ಸಂತಸಗೊಂಡಿದ್ದಾರೆ. ಕಳೆದ ವರ್ಷ ಜೂನ್ ಕಳೆದರು ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರವೇ ಒಳಹರಿವು ಆರಂಭವಾಗಿದೆ.

ಗ್ರಾಮಕ್ಕೆ ರಭಸವಾಗಿ ನುಗ್ಗಿದ ನೀರು

ಚಿತ್ರದುರ್ಗ ಜಿಲ್ಲೆಯಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಕೂನಬೇವು ಗ್ರಾಮದ ಮನೆಗಳಿಗೆ ನೀರು ನುಗ್ಗಿದೆ. ವರುಣ ಅಬ್ಬರಕ್ಕೆ ಕೊನಬೇವು ಗ್ರಾಮ ಜಲಾವೃತಗೊಂಡಿತ್ತು. ಗ್ರಾಮದ ರಸ್ತೆಯಲ್ಲಿ ನೀರು ನದಿಯಂತೆ ಹರಿದಿತ್ತು. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಚಿತ್ರದುರ್ಗ ತಾಲೂಕಿನ ಬೆಳಘಟ್ಟ ಗ್ರಾಮದಲ್ಲಿ ನೀರಿನಲ್ಲಿ ಬಸ್ ಸಿಲುಕಿದ ಘಟನೆಯು ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Ramoji Rao Funeral
ಸಿನಿಮಾ38 mins ago

Ramoji Rao Funeral: ರಾಮೋಜಿ ರಾವ್ ಪಾರ್ಥಿವ ಶರೀರ ಹೊತ್ತ ಚಂದ್ರಬಾಬು ನಾಯ್ಡು; ವಿಡಿಯೊ ನೋಡಿ

Karnataka Rain
ಮಳೆ40 mins ago

Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

Modi 3.0 Cabinet
ದೇಶ50 mins ago

Modi 3.0 Cabinet: ಈ ನಾಲ್ಕು ಮಹತ್ವದ ಖಾತೆಗಳು ಬಿಜೆಪಿ ಕೈಯಲ್ಲೇ ಉಳಿಯಲಿವೆ!

Kangana Ranaut Slapped incident Hrithik Roshan Backs Post
ಬಾಲಿವುಡ್1 hour ago

Kangana Ranaut: ಕಂಗನಾ ರಣಾವತ್‌ಗೆ ಕಪಾಳಮೋಕ್ಷ; ಹೃತಿಕ್ ರೋಷನ್ ರಿಯಾಕ್ಷನ್‌ ಏನು?

Modi 3.0 Cabinet
Lok Sabha Election 20242 hours ago

Modi 3.0 Cabinet: ಎನ್‌ಡಿಎ ಸರ್ಕಾರದಲ್ಲಿ ರಾಜ್ಯದಿಂದ ಐವರಿಗೆ ಸ್ಥಾನ; ವಿ.ಸೋಮಣ್ಣ ಅಚ್ಚರಿಯ ಆಯ್ಕೆ?

Murder Case
ಬೆಂಗಳೂರು ಗ್ರಾಮಾಂತರ2 hours ago

Murder Case : ಬಾಡಿಗೆ ಹಣ ಪಡೆಯಲು ಕಿರಿಕ್‌; ಬೆಡ್‌ ರೂಮ್‌ನಲ್ಲೇ ಪತ್ನಿ ಕೊಂದಿದ್ದ ಹಂತಕ ಅರೆಸ್ಟ್‌

IND vs PAK
ಕ್ರೀಡೆ2 hours ago

IND vs PAK: ಭಾರತ-ಪಾಕ್​ ಪಂದ್ಯಕ್ಕೆ ಸಚಿನ್ ಹಾಜರ್; ಮಾಜಿ ಅಧ್ಯಕ್ಷ ಒಬಾಮಗೂ ಇರದ ಭದ್ರತೆಯಲ್ಲಿ ನಡೆಯಲಿದೆ ಪಂದ್ಯ

Modi 3.0 Cabinet
ದೇಶ2 hours ago

Modi 3.0 Cabinet: ಬಿಜೆಪಿಯ 5, NDAಯ 10 ಸಂಸದರು INDIA ಜೊತೆ ಸಂಪರ್ಕ? ಹೊಸ ಬಾಂಬ್‌ ಸ್ಫೋಟಿಸಿದ TMC

Road Accident
ಬೆಂಗಳೂರು2 hours ago

Road Accident : ವಾಕಿಂಗ್‌ ಹೊರಟಿದ್ದ ವೃದ್ಧೆಗೆ ಬೈಕ್‌ ಡಿಕ್ಕಿ; ಕ್ಷಣದಲ್ಲೇ ಹಾರಿಹೋಯ್ತು ಪ್ರಾಣ

Valmiki Corporation Scam
ಕರ್ನಾಟಕ2 hours ago

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ; ಬಿಜೆಪಿ ಆರೋಪಕ್ಕೆ ತಿರುಗೇಟು ನೀಡಿದ ಪರಮೇಶ್ವರ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ2 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ5 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ6 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ6 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌