Hanuman Vratham 2022 | ಎಣೆಯಾರೊ ನಿನಗೆ ಹನುಮಂತರಾಯ, ಪ್ರಣತಜನ ಮಂದಾರ ಪವನ ಸುಕುಮಾರ - Vistara News

ಧಾರ್ಮಿಕ

Hanuman Vratham 2022 | ಎಣೆಯಾರೊ ನಿನಗೆ ಹನುಮಂತರಾಯ, ಪ್ರಣತಜನ ಮಂದಾರ ಪವನ ಸುಕುಮಾರ

ಇಂದು ಹನುಮದ್‌ ವ್ರತ (Hanuman Vratham 2022). ಹನುಮನ ಹೆಸರೇ ಒಂದು ತಾರಕನಾಮ. ಹನುಮದ್‌ ವ್ರತದ ಮಹತ್ವವೇನು? ಆಚರಣೆ ಹೇಗೆ ಎಂದು ತಿಳಿಸುವ ವಿಶೇಷ ಲೇಖನ ಇಲ್ಲಿದೆ.

VISTARANEWS.COM


on

Hanuman Chalisa: Significance and importance Of Reciting Hanuman Chalisa in kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
Hanuman Vratham 2022

ಡಾ.ಪ್ರಕಾಶ್.ಕೆ.ನಾಡಿಗ್ 
ಭಾರತೀಯ ಸಂಸ್ಕೃತಿಯು ಋಷಿ ಜೀವನದ ತಳಹದಿಯ ಮೇಲೆ ಮೂಡಿದಂತದ್ದು, ಅದು ಭಕ್ತಿಗೆ ಮಹತ್ವದ ಸ್ಥಾನ ನೀಡಿದೆ. ಭಕ್ತಿಯೆಂಬುದು ಒಂದು ದಿವ್ಯವಾದ ಯೋಗ. ಈ ಭಕ್ತಿಯೋಗದ ಮುಖಾಂತರ ಲೋಕದ ಭವ್ಯಶಕ್ತಿಯಾಗಿ ಹಲವು ಭಕ್ತಾಗ್ರೇಸರರು ಬಾಳಿ, ನಂದಾದೀಪವಾಗಿ ಇಂದಿಗೂ ಬೆಳಗುತ್ತಿದ್ದಾರೆ. ಇಂತಹ ಪ್ರಾತಃಸ್ಮರಣೀಯರಲ್ಲಿ ಹನುಮನು ಓರ್ವ. ಆದರ್ಶ ಚಾರಿತ್ರ್ಯ, ಜಿತೇಂದ್ರಿಯತ್ವ, ಶಾಸ್ತ್ರಪಟುತ್ವ, ವಾಕ್ ಪಟುತ್ವ, ಸದಾಚಾರ ಸಂಪನ್ನತೆ, ಇವುಗಳ ಸಾಕಾರ ಮೂರ್ತಿ ಹನುಮಂತ ದೇವರು (Hanuman Vratham 2022).

ಮೇರುಮಂದಾರ ಗಾತ್ರನೂ, ಜಯಾಸಂಕರ್ಷಣ ಪುತ್ರನೂ, ಪರಮ ಪವಿತ್ರನೂ, ಸಾಧಕ ಜನರ ಗತಿಗೋತ್ರನೂ, ಚಿತ್ರ ಚರಿತ್ರನೂ, ಸೂತ್ರನಾಮಕನೂ, ಗೋತ್ರೋದ್ಧಾರಕನೂ ಆದ ಹನುಮಂತ ಯುಗಯುಗಗಳಲ್ಲಿಯೂ ಪೂಜಿತನಾಗಿದ್ದಾನೆ. ಭಾರತದಲ್ಲಿ ಹನುಮನಿಲ್ಲದ ಹಳ್ಳಿಯಿಲ್ಲ, ಕರ್ನಾಟಕ ಹನುಮ ಜನಿಸಿದ ನಾಡು, ಹಾಗಾಗಿ ಕರ್ನಾಟಕದ ಊರು ಊರುಗಳಲ್ಲಿ ಹನುಮಂತನ ದೇವಾಲಯಗಳು ರಾರಾಜಿಸುತ್ತಿವೆ.

ಎಲ್ಲಾರಿಗೂ ಬದುಕಿನಲ್ಲಿ ಏನಾದರೂ ಸಾಧಿಸಬೇಕೆಂಬ ಛಲ, ನಮ್ಮ ಜೀವನ ಸಾರ್ಥಕವಾಗಿರಬೇಕು ಎಂದು ಯೋಚಿಸಿ ಕೆಲವು ಮಹಾತ್ಮರ  ಆದರ್ಶವನ್ನು ಪಾಲಿಸಲು ಮುಂದಾಗುತ್ತೇವೆ. ಅವರು ನಡೆದ ಹಾದಿ ನಮಗೆ ಅನುಕರಣೀಯವಾಗುತ್ತದೆ. ಇಂತಹ ಮಹಾನ್ ಪುರುಷರಲ್ಲಿ ನಮಗೆ ಅಗ್ರಗಣ್ಯರಾಗಿ ಕಾಣುವುದು ರಾಮಾಯಣದ ಒಂದು ಪಾತ್ರವಾದ ಹನುಮಂತ. ಈತ ರಾಮಾಯಣವೆಂಬ ಮಹಾಕಾವ್ಯದ ವ್ಯಕ್ತಿ ಚಿತ್ರಣವಾಗಷ್ಟೇ ಉಳಿಯುವುದಿಲ್ಲ, ಬದಲಾಗಿ ಸಾಧಿಸಬೇಕೆಂಬುವವರಿಗೆ ಈತನೊಬ್ಬ ಮ್ಯಾನೇಜ್‌ಮೆಂಟ್ ಕೌಶಲ್ಯವನ್ನು ಕಲಿಸುವ ಗುರುವಾಗಿ ಕಾಣುತ್ತಾನೆ. ಹನುಮನನ್ನು ಬಂಧಿಸಿ ರಾವಣನ ಮುಂದೆ ಹಾಜರು ಪಡಿಸಿದಾಗ ನೀನು ಯಾರು ಎಂದು ಕೇಳಿದಾಗ ಹನುಮ ಹೇಳುತ್ತಾನೆ “ಅಹಂ ದಾಸಃ ಕೋಸಲೇಂದ್ರಸ್ಯ” ಅಂದರೆ ತನ್ನನ್ನು ರಾಮಚಂದ್ರನ ದಾಸನೆಂದು ಪರಿಚಯಿಸಿಕೊಳ್ಳುವ ಮೂಲಕ ದಾಸ ಪಂಥಕ್ಕೆ ಅಡಿಪಾಯ ಹಾಕಿದವನು ಹನುಮಂತನೆಂದರೆ ತಪ್ಪಾಗಲಾರದು.  ಅವನ ಕಾಲದಿಂದ ದಾಸ ಪಂಥ ಉದಯವಾಗಿ “ಜಗದಿ ದಾಸತ್ವವೇ ಲೇಸು” ಎಂದು ಮುಂದಿನ ದಾಸವರೇಣ್ಯರೇ ಒಪ್ಪಿಕೊಂಡರು. 

ರಾಮನಿಗೆ ಹೆಚ್ಚಿಗೆ ಸೇವೆ ಮಾಡಿದ ವ್ಯಕ್ತಿ ಎಂದರೆ ಹನುಮಂತ. ರಾಮನ ಭೇಟಿಯಾಗುವ ಮುಂಚೆ ಹನುಮ ಯಾರೊಡನಿದ್ದ ಎಂಬುದನ್ನು ನೋಡಿದರೆ ನಮಗೆ ಕಾಣುವ ವ್ಯಕ್ತಿ “ಸುಗ್ರೀವ”  ಸುಗ್ರೀವ ಆಡಿದ್ದೇ ಮಾತು ಹಾಗೂ ಮಾಡಿದ್ದೇ ಶಾಸನ. ಸುಗ್ರೀವ ಹೊರಡಿಸಿದ ಆಜ್ಞೆ ಅಂದರೆ ಎಲ್ಲರೂ ಹೆದರುತ್ತಿದ್ದರು. ಸುಗ್ರೀವ ಒಬ್ಬ ಚರಿತ್ರಾರ್ಹ ವ್ಯಕ್ತಿ. ಇಂಥವನ ಬಳಿ ಇದ್ದ ಆಂಜನೇಯನದು ಅಪರಿಮಿತವಾದ ವ್ಯಕ್ತಿತ್ವ. ಧರ್ಮ, ಅರ್ಥ, ಮೋಕ್ಷ, ಕಾಮ ಎಂಬ ಪದಗಳಿಗೆ ಮೌಲ್ಯವನ್ನು ಕೊಟ್ಟವನು.

ಹನುಮ ಜಯಂತಿಯಲ್ಲ, ಹನುಮದ್‌ ವ್ರತ
ಮಾರ್ಗಶಿರ ಶುದ್ಧ ತ್ರಯೋದಶಿಯಂದು ದೇಶಾದ್ಯಂತ ಭಕ್ತಿಭಾವಗಳಿಂದ ಹನುಮದ್ ವ್ರತವನ್ನು ಆಚರಿಸಲಾಗುತ್ತದೆ (Hanuman Vratham 2022).  ಆದರೆ ಕೆಲವರು ಇದನ್ನು ಹನುಮ ಜಯಂತಿಯೆಂದು ಆಚರಿಸುತ್ತಾರೆ. ಇದು ತಪ್ಪು ಹನುಮ ಜಯಂತಿ ಹನುಮ ಹುಟ್ಟಿದ  ದಿನ, ಚೈತ್ರ ಶುದ್ಧ ಹುಣ್ಣಿಮೆಯಂದು ಹನುಮ ಜಯಂತಿಯನ್ನು ಆಚರಿಸುತ್ತಾರೆ. ಹನುಮದ್ ವ್ರತವನ್ನು ಬ್ರಹ್ಮದೇವರು ದೇವಾದಿದೇವತಿಗಳಿಗೆ ಉಪದೇಶಿಸಿದರೆಂದು ಪ್ರತೀತಿ ಇದೆ.

ವ್ರತದ ಹಿನ್ನೆಲೆ ಏನು?
ಕೌರವರ ಮೋಸದಿಂದ ಸೋತ ಪಾಂಡವರು ವನವಾಸದಲ್ಲಿದ್ದಾಗ ಒಮ್ಮೆ ವೇದವ್ಯಾಸರು ಅವರನ್ನು ಭೇಟಿಮಾಡುತ್ತಾರೆ. ಪಾಂಡವರ ಕಷ್ಟಕಾರ್ಪಣ್ಯದಿಂದ ಬಿಡುಗಡೆ ಹೊಂದಲು ವೇದವ್ಯಾಸರು ಅವರಿಗೆ ಹನುಮದ್ ವ್ರತದ ಉಪದೇಶವನ್ನು ಮಾಡುತ್ತಾರೆ. ಈವ್ರತವನ್ನು ಶ್ರದ್ಧೆಯಿಂದ ಮಾಡಿ ನಿಮ್ಮ ಕಷ್ಟಗಳೆಲ್ಲವೂ ಪರಿಹಾರವಾಗಿ ನಿಮಗೆ ನಿಮ್ಮ ರಾಜ್ಯ ಮತ್ತೆ ಸಿಗುತ್ತದೆ ಎಂದು ಹೇಳುತ್ತಾನೆ. ಆಗ ಧರ್ಮರಾಜನ ವ್ರತದ ಹಿನ್ನೆಯೆಯನ್ನು ಕೇಳಲು ವೇದವ್ಯಾಸರು ಹೇಳುತ್ತಾರೆ, ಒಮ್ಮೆ ಹನುಮಂತ ರಾಹುಗ್ರಹಣವಾದ ಕೆಂಪುಬಣ್ಣದಿಂದ ಕೂಡಿದ್ದ ಸೂರ್ಯನನ್ನೇ ಹಣ್ಣೆಂದು ಹಿಡಿಯಲು ಹೋಗುವಾಗ ಇಂದ್ರನು ಹನುಮಂತ ಸೂರ್ಯನನ್ನು ಹಿಡಿಯಬಹುದೆಂದು ತಿಳಿದು, ಹನುಮಂತನ ಮೇಲೆ ವಜ್ರಾಯುಧವನ್ನು ಪ್ರಯೋಗಿಸುತ್ತಾನೆ. ಇದರಿಂದ ಪೆಟ್ಟಾದ ಹನುಮಂತ ಕೆಳಗೆ ಬೀಳುವಾಗ ವಾಯುದೇವರು ಹನುಮಂತನನ್ನು ಎತ್ತಿಕೊಂಡು ಒಂದು ಗುಹೆಯನ್ನು ಪ್ರವೇಶಿಸುತ್ತಾರೆ. ಆಗ ಪ್ರಪಂಚದಲ್ಲೆಲ್ಲಾ ಗಾಳಿಯಿಲ್ಲದೇ ಹಾಹಾಕಾರವಾಗುತ್ತದೆ.

ಆಗ ಎಲ್ಲಾ ದೇವತೆಗಳು ಬ್ರಹ್ಮದೇವನನ್ನು ಪ್ರಾರ್ಥಿಸಿದಾಗ್, ಬ್ರಹ್ಮದೇವರು ವಾಯುವಿನ ಬಳಿಗೆ ಬಂದು ನಿನ್ನ ಮಗನಿಗೆ ಯಾವ ಆಯುಧವೂ ಏನೂ ಮಾಡುವುದಿಲ್ಲ. ಅವನು ಚಿರಂಜೀವಿ, ಹಾಗೇಯೇ ಮಾರ್ಗಶಿರ ಶುದ್ಧ ತ್ರಯೋದಶಿ ದಿನದಂದು ಯಾರು ಹನುಮದ್ ವ್ರತವನ್ನು ಆಚರಿಸುತ್ತಾರೋ ಅವರಿಗೆ ಸಕಲ ಸೌಭಾಗ್ಯವೂ ಪ್ರಾಪ್ತವಾಗುತ್ತದೆ ಎಂದು ಹೇಳುತ್ತಾರೆ. ಆಂದಿನಿಂದ ಹನುಮದ್ ವ್ರತ ಮುನ್ನೆಲೆಗೆ ಬಂದಿತೆಂದು ಪ್ರತೀತಿ. ಶ್ರೀರಾಮಚಂದ್ರ ಹನುಮಂತನನ್ನು ಆನುಗ್ರಹಿಸಲು ಈ ವ್ರತವನ್ನು ಮಾಡಿದ್ದರು. ಸುಗ್ರೀವ, ದ್ರೌಪದಿ ತಮ್ಮ ಇಷ್ಟಾರ್ಥಕ್ಕಾಗಿ ಈ  ವ್ರತವನ್ನು ಮಾಡಿದ್ದರು. ವಿಭೀಷಣನು ಈ ವ್ರತದ ಪ್ರಭಾವದಿಂದಲೇ ಲಂಕಾದಿಪತಿಯಾದನು.

Hanuman Vratham
Anjanadri Hill Temple 
anjaneya temple
ಅಂಜನಾದ್ರಿಯಲ್ಲಿನ ಆಂಜನೇಯ

ವ್ರತದ ಆಚರಣೆ ಹೇಗೆ?
ವ್ರತವನ್ನು ಆಚರಿಸುವವರು ವ್ರತದ ದಿನ ಮನೆಯ ಸೂಕ್ತಜಾಗದಲ್ಲಿ ಹನುಮಂತನ ಫ಼ೋಟೊ ಇಟ್ಟು ಅಲಂಕಾರಾದಿಗಳನ್ನು ಮಾಡಿ  ಹದಿಮೂರು ಗಂಟುಗಳುಳ್ಳ ದೋರವನ್ನು ದೇವರ ಮುಂದೆ ಇರಿಸಿ ಅದರಲ್ಲಿ ಹನುಮಂತದೇವರನ್ನು ಆವಾಹಿಸಿ ಷೋಡಶೋಪಚಾರ ಪೂಜೆಯನ್ನು ಮಾಡಿ ಧೂಪ ದೀಪ ನೈವೇದ್ಯವನ್ನು ಆರ್ಪಿಸಬೇಕು. ಇಂದು ವಿಶೇಷವಾಗಿ ಪೂಜೆಮಾಡಿಸುವ ಆಚಾರ್ಯರಿಗೆ ವಾಯನದಾನದಲ್ಲಿ ಗೋದಿಯನ್ನು ದಾನ ಮಾಡಬೇಕು. ಪೂಜೆಯನಂತರ ಹದಿಮೂರು ಗಂಟುಗಳುಳ್ಳ ಹಳದಿ ವರ್ಣದ ದೋರವನ್ನು ಕಟ್ಟಿಕೊಳ್ಳಬೇಕು. ಈ ವ್ರತವನ್ನು ಒಮ್ಮೆ ಪ್ರಾರಂಭಿಸಿದರೆ ಹದಿಮೂರು ವರ್ಷಗಳ ಪರ್ಯಂತ ಮಾಡಿ ನಂತರ ಉದ್ಯಾಪನೆಯನ್ನು ಮಾಡಬೇಕು. ಈ ವ್ರತವನ್ನು ಶ್ರದ್ದೆಯಿಂದ ಮಾಡುವುದರಿಂದ ಸಕಲ ಇಷ್ಟಾರ್ಥಗಳು ಲಭಿಸುವವು. 

ನವವಿಧ ಭಕ್ತಿಯಲ್ಲೂ ಅಂದರೆ ಶ್ರವಣ, ಕೀರ್ತನ, ಸ್ಮರಣ, ಪಾದಸೇವನ, ಅರ್ಚನ, ವಂದನ, ದಾಸ್ಯ, ಸಖ್ಯ, ಆತ್ಮ ನಿವೇದನೆಯಲ್ಲಿ ನಿಷ್ಣಾತವಾದ ವ್ಯಕ್ತಿತ್ವವೆಂದರೆ ಅದು ಹನುಮಂತನದೇ. ಈ ಒಂಭತ್ತು ವಿಧಗಳಲ್ಲೂ ತನ್ನ ಒಡೆಯ ಶ್ರೀರಾಮಚಂದ್ರನ ಅನುಸಂಧಾನ ಮಾಡಿದ ಮಹಾನುಭಾವ, ಈ ಗುಣಗಳೊಂದಿಗೆ ನಮನ, ಯಾಚನ, ಅರ್ಪಣಗಳೆಂಬ ತ್ರಿವಿಧವಾದ ಪ್ರಾರ್ಥನೆಯನ್ನು ಸದಾ ಸಲ್ಲಿಸಿದ ಸತ್ಪುರಷನೀತ. ಪೂರ್ತಿಯಾಗಿ ತನ್ನನ್ನು ಭಗವಂತನಿಗೆ ಅರ್ಪಿಸಿಕೊಂಡ ಅಸೀಮ ಭಕ್ತ, ಅಪೂರ್ವವಾದ ವ್ಯಕ್ತಿತ್ವ.

ಹನುಮಂತ, ಪವನಪುತ್ರ, ವಾಯುಪುತ್ರ, ಕೇಸರಿನಂದನ ಮುಂತಾದ ಹೆಸರುಗಳಿಂದ ಸ್ತುತಿಸಲ್ಪಡುವ ಹನುಮಂತ ತ್ರೇತಾಯುಗದಲ್ಲಿ  ಇದ್ದ, ದ್ವಾಪರಯುಗದಲ್ಲಿ ಇದ್ದ, ಕಲಿಯುಗದಲ್ಲೂ ಇದ್ದು ಮುಂದೆ ಶ್ರೀರಾಮ ನಾಮ ಇರುವವರೆಗೂ ಸೂರ್ಯ ಚಂದ್ರರಿರುವವರೆಗೂ ಇದ್ದು ಭಕ್ತರ ಅಭೀಷ್ಟಗಳನ್ನು ಈಡೇರಿಸುತ್ತಾ ಚಿರಂಜೀವಿ ಯಾಗಿದ್ದಾನೆ. ದೂರ್ವಾಸ ಮುನಿಗಳಿಂದ ಹಿಡಿದು, ಜನಮೇಜಯ ರಾಜ, ಶ್ರೀವ್ಯಾಸ ತೀರ್ಥರು, ಬ್ರಹ್ಮಣ್ಯತೀರ್ಥರಲ್ಲದೇ ಅನೇಕ ಯತಿವರ್ಯರು ಭಕ್ತರ ಉದ್ಧಾರಕ್ಕಾಗಿ ಅನೇಕ ಹನುಮ ಮೂರ್ತಿಗಳನ್ನು ಸ್ಥಾಪಿಸಿದ್ದಾರೆ. ಅದರಲ್ಲೂ ಹದಿನೈದನೇ ಶತಮಾನದಲ್ಲಿ ಶ್ರೀಕೃಷ್ಣದೇವರಾಯನ ಆಸ್ಥಾನದಲ್ಲಿ ರಾಜಗುರುಗಳಾಗಿದ್ದ ಶ್ರೀವ್ಯಾಸರಾಜರು ದೇಶಾದ್ಯಂತ ಸುಮಾರು 732 ಮುಖ್ಯಪ್ರಾಣನ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಇಲ್ಲಿಗೆ ಬರುವ ಭಕ್ತರ ಕೋರಿಕೆಗಳನ್ನು ಈಡೇರಿಸುತ್ತಾ ಭಕ್ತರ ಬಾಳು ಬೆಳಗುತ್ತಾ ಭಕ್ತರ ಪಾಲಿಗೆ ಕಲ್ಪವೃಕ್ಷವೆನಿಸಿಕೊಂಡಿದ್ದಾನೆ.

ರಾಮನ ಗುಡಿಯಿಲ್ಲದ ಊರಿರಬಹುದು, ಆದರೆ ಹನುಮನ ಗುಡಿಯಿಲ್ಲದ ಊರಿಲ್ಲವೆಂದೇ ಹೇಳಬೇಕು. ಕಲಿಯುಗದಲ್ಲಿ ಹನುಮನಿಗೆ ಸಲ್ಲುವಷ್ಟು ಪೂಜೆ ಪುನಸ್ಕಾರಗಳು ಬೇರೆ ಯಾವ ದೇವರಿಗೂ ಸಲ್ಲುವುದಿಲ್ಲವೆಂದರೆ ತಪ್ಪಾಗಲಾರದು, ಜಾತಿ, ಮತ ಪಂಥದ ಭೇದವಿಲ್ಲದೆ ಎಲ್ಲರಿಂದಲೂ ಪೂಜೆಗೊಳ್ಳುತ್ತಿರುವ ದೇವರು ಹನುಮಂತ. ದೇಶಾದ್ಯಂತ ಸಾವಿರಾರು ಜಾಗೃತ ಹನುಮ ಕ್ಷೇತ್ರಗಳು ಈ ನಿಟ್ಟಿನಲ್ಲಿ ಮಹತ್ವವನ್ನು ಪಡೆದುಕೊಳ್ಳುತ್ತದೆ.  ಹಲವು ದೇವಸ್ಥಾನಗಳಲ್ಲಿ ಹಲವು ಬಗೆಯ ಭಕ್ತರ ಕಷ್ಟ ಕಾರ್ಪಣ್ಯಗಳಿಗೆ ಹನುಮಂತ ಪರಿಹಾರ ನೀಡುತ್ತಾ ಆಶೀರ್ವದಿ ಸುತ್ತಿದ್ದಾನೆ. ಯುಗಯುಗಗಳಿಂದಲೂ ಪೂಜೆಗೊಳ್ಳುತ್ತಿರುವ “ಹನುಮ ದೇಹಿʼʼ ಎಂದು ಬಂದ ಭಕ್ತರನ್ನು ತನ್ನ ಮಕ್ಕಳಂತೆ ಪೊರೆಯುತ್ತಾನೆ. ಅಂತೆಯೇ ದಾಸರು ಇವನನ್ನು ಹನುಮ ನಮ್ಮ ತಾಯಿ ತಂದೆ ಎಂದು ಸ್ತುತಿಸಿದ್ದಾರೆ. ಹನುಮದ್ ವ್ರತದ ಈ ಶುಭಸಂದರ್ಭದಲ್ಲಿ ಹನುಮಂತನನ್ನು ಧ್ಯಾನಿಸಿ ಪುನೀತರಾಗೋಣ.

ಲೇಖಕರು “ಭಕ್ತರ ಪ್ರಾಣ ಮುಖ್ಯ ಪ್ರಾಣʼʼ (ಭಾರತೀಯ ಸಂಸ್ಕೃತಿಯಲ್ಲಿ ಹನುಮ)
ಎಂಬ ಕೃತಿಯನ್ನು ಬರೆದಿದ್ದಾರೆ.

ಇದನ್ನೂ ಓದಿ| Hanuma Jayanti | ಹನುಮ ಜಯಂತಿಗೆ ಸಕಲ ರೀತಿಯಲ್ಲಿ ಸಜ್ಜಾದ ಅಂಜನಾದ್ರಿ ಬೆಟ್ಟ; ಪೊಲೀಸ್‌ ಬಿಗಿ ಬಂದೋಬಸ್ತ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಶಿವಮೊಗ್ಗ

Shivamogga News: ಮನುಷ್ಯ ಜನ್ಮವನ್ನು ಸಾರ್ಥಕಗೊಳಿಸಿಕೊಳ್ಳಲೇಬೇಕು! ಅಮರೇಶ್ವರ ಶ್ರೀ

Shivamogga News: ಸೊರಬ ತಾಲೂಕಿನ ಜಡೆ ಸಮೀಪದ ಬಂಕಸಾಣದ ಗ್ರಾಮದ ವರದಾ ಉತ್ತರವಾಹಿನಿ ಕ್ಷೇತ್ರದ ಸಮಾಧಾನದಲ್ಲಿ ಮಾಸಿಕ ಶಿವಾನುಭವ ಹಾಗೂ ಅರಿವಿನೆಡೆಗೆ ಕಾರ್ಯಕ್ರಮ ನಡೆಯಿತು.

VISTARANEWS.COM


on

Maasika Shivanubhava programme at soraba
Koo

ಸೊರಬ: ಮನುಷ್ಯ ಜನ್ಮ ಬಹು ಅಮೂಲ್ಯವಾದದು. ಈ ಜನ್ಮವನ್ನು ಪಡೆಯುವುದಕ್ಕಾಗಿ ಹಿಂದಿನ ಜನ್ಮದಲ್ಲಿ ಬಹಳ ಕಷ್ಟ ಪಟ್ಟಿದ್ದೇವೆ. ಲಕ್ಷಾಂತರ ಜನ್ಮಗಳಲ್ಲಿ ಕ್ರಿಮಿ, ಕೀಟಾದಿಗಳಾಗಿ, ಜಂತು ಜೀವವಾಗಿ ಜನಿಸಿ ಆ ಜನ್ಮದ ಸುಖ ದುಃಖವನ್ನು ಅನುಭವಿಸಿ, ಆ ಜನ್ಮಗಳಲ್ಲಿ ಮಾಡಿದ ಪುಣ್ಯದ ಫಲವಾಗಿ ಈಗ ಮನುಷ್ಯ ಜನ್ಮ ಸಿಕ್ಕಿದೆ. ಆದ್ದರಿಂದ ಇಂತಹ ಮನುಷ್ಯ ಜನ್ಮವನ್ನು ಸಾರ್ಥಕಪಡಿಸಿಕೊಳ್ಳಬೇಕು ಎಂದು ಜಡೆ ಬಂಕಸಾಣ ಸಮಾಧಾನ ಹಿರೇಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ (Shivamogga News) ಹೇಳಿದರು.

ತಾಲೂಕಿನ ಜಡೆ ಸಮೀಪದ ಬಂಕಸಾಣದ ಗ್ರಾಮದ ವರದಾ ಉತ್ತರವಾಹಿನಿ ಕ್ಷೇತ್ರದ ಸಮಾಧಾನದಲ್ಲಿ ಆಯೋಜಿಸಿದ್ದ ಮಾಸಿಕ ಶಿವಾನುಭವ ಹಾಗೂ ಅರಿವಿನೆಡೆಗೆ ಕಾರ್ಯಕ್ರಮದಲ್ಲಿ ಶ್ರೀಗಳು ಮಾತನಾಡಿದರು.

ನಿಸರ್ಗ ಬಹು ಅಪರೂಪವಾದದು. ಬಚ್ಚಲ ರೊಚ್ಚಿಯ ನೀರು ಹೋಗುವಲ್ಲಿ ಒಂದು ತೆಂಗಿನ ಸಸಿ ನೆಟ್ಟರೆ ಅದು ರುಚಿ ರುಚಿಯಾದ ಎಳೆನೀರನ್ನು ಕೊಡುತ್ತದೆ. ಸ್ವಾದಿಷ್ಟಕರವಾದ ತರಕಾರಿಗಳನ್ನು ನೀಡುತ್ತದೆ. ಇದು ನಿಸರ್ಗದ ನಿಯಮ. ಆದರೆ ಮನುಷ್ಯ ಈ ನಿಸರ್ಗವನ್ನು ಬಳಸಿ, ಅದನ್ನು ವಿರೂಪಗೋಳಿಸುತ್ತಾನೆ. ನಿಸರ್ಗವನ್ನು ಬಳಸಲು ಮನುಷ್ಯನಿಗೆ ಹಕ್ಕಿದೆಯೇ ಹೊರತು ವಿರೂಪಗೊಳಿಸಲು ಅಲ್ಲ. ಎಲ್ಲರೂ ಈ ಬದುಕನ್ನು ಅಂದಗೊಳಿಸಿಕೊಳ್ಳಬೇಕು ಎಂದರು.

ಇದನ್ನೂ ಓದಿ: Gold Rate Today: ಏರಿಕೆಯೂ ಇಲ್ಲ ಇಳಿಕೆಯೂ ಇಲ್ಲ; ಯಥಾಸ್ಥಿತಿ ಕಾಯ್ದುಕೊಂಡ ಚಿನ್ನದ ದರ

ಕಾರ್ಯಕ್ರಮದಲ್ಲಿ ಉಪನ್ಯಾಸಕಿ ಪ್ರಿಯದರ್ಶಿನಿ ಜಂಬೂರುಮಠ ಮಾತನಾಡಿ, ಮನುಷ್ಯನಿಗೆ ಸಂಬಂಧಗಳು ಮುಖ್ಯ. ಸಂಬಂಧಗಳನ್ನು ಉಳಿಸಿಕೊಳ್ಳಬೇಕು. ಮನೆಯಲ್ಲಿ ಮಕ್ಕಳಿಗೆ ಸಂಬಂಧಗಳ ಬಗ್ಗೆ ತಿಳಿ ಹೇಳಬೇಕು ಎಂದರು.

ಸಾಗರದ ವೀರಶೈವ ಸಮಾಜದ ನಿಕಟಪೂರ್ವ ಅಧ್ಯಕ್ಷ ಸಿದ್ಧಲಿಂಗೇಶ್ವರ ಮಾತನಾಡಿದರು.

ಇದನ್ನೂ ಓದಿ: Milk Price: ನಂದಿನಿ ಹಾಲು ದರ ಏರಿಕೆ ಶಾಕ್‌; ಅರ್ಧ ಲೀಟರ್‌ಗೂ ₹2, ಒಂದು ಲೀಟರ್‌ಗೂ ₹2 ಬೆಲೆ ಏರಿಕೆ!

ಕಾರ್ಯಕ್ರಮದಲ್ಲಿ ಮಾತೋಶ್ರೀ ಸುಶೀಲಮ್ಮ ಚನ್ನಬಸವಯ್ಯನವರ ಶ್ರದ್ಧಾಂಜಲಿ ನಡೆಯಿತು. ಈ ಸಂದರ್ಭದಲ್ಲಿ ಶಿವಕುಮಾರ ಸ್ವಾಮಿ, ರೇಣುಕಯ್ಯ ಸ್ವಾಮಿ, ಬಂಗಾರಸ್ವಾಮಿ, ತಾರಕೇಶ್ವರ, ಸಿದ್ಧಲಿಂಗಯ್ಯ, ಸುಪ್ರಸನ್ ಶಾಸ್ತ್ರಿ, ಪಂಚಾಕ್ಷರಿ, ಗಂಗಣ್ಣ, ಹೊಳೆಬಸಯ್ಯನವರು, ಮಹೇಶಯ್ಯ, ಮಧುಮತಿ ವರ್ಷಭೇಂದ್ರ ಗೌಡ, ಹೇಮಲತಾ, ಸುಮಂಗಳಾ, ಶಿವಲೀಲಾ, ಇರಾಜಮ್ಮ ಹಾಗೂ ಇತರರು ಉಪಸ್ಥಿತರಿದ್ದರು. ನಿಶ್ಚಿಂತ ಪ್ರಾರ್ಥಿಸಿದರು. ಸನ್ಮತಿ ನಿರೂಪಿಸಿದರು.

Continue Reading

Latest

Ayodhya Temple: ಕಡಿಮೆಯಾದ ಭಕ್ತರ ದಟ್ಟಣೆ; ಅಯೋಧ್ಯೆಗೆ ಭೇಟಿ ನೀಡಲು ಇದು ಸಕಾಲ

Ayodhya Temple: ಕಳೆದ ಆರು ವಾರಗಳಲ್ಲಿ ಅಯೋಧ್ಯೆ ನಗರಕ್ಕೆ ಬರುವ ವಿಮಾನಗಳು, ರೈಲುಗಳು ಮತ್ತು ಬಸ್ ಸೇವೆ ಗಮನಾರ್ಹವಾಗಿ ಕಡಿಮೆಯಾದಂತೆ ಕಂಡುಬಂದಿದೆ. ಜನವರಿ 22ರಂದು ಪ್ರಾಣ ಪ್ರತಿಷ್ಠಾ ಸಮಾರಂಭ ನಡೆದ ನಂತರ ಅಯೋಧ್ಯೆಗೆ ಬರುವ ಭಕ್ತರ ಸಂಖ್ಯೆ ವಿಪರೀತ ಹೆಚ್ಚಾಗಿತ್ತು. ಜನವರಿಯಿಂದ ಮಾರ್ಚ್ 2024ರವರೆಗೆ ಪ್ರತಿದಿನ ಸುಮಾರು 1.5 ಲಕ್ಷ ಭಕ್ತರು ಭೇಟಿ ನೀಡುತ್ತಿದ್ದರು. ಆದರೆ ಏಪ್ರಿಲ್‌ನಿಂದ ಭಕ್ತರ ಸಂಖ್ಯೆ ಕಡಿಮೆಯಾಗುತ್ತ ಬಂತು. ಏಪ್ರಿಲ್- ಮೇನಲ್ಲಿ ಸುಮಾರು 1 ಲಕ್ಷ ಭಕ್ತರು ಭೇಟಿ ನೀಡಿದ್ದರು.

VISTARANEWS.COM


on

Ram Mandir
Koo

ಅಯೋಧ್ಯೆ ರಾಮಮಂದಿರ (Ayodhya Temple) ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾಗಿ ಹೊರಹೊಮ್ಮಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದು ಕೋಟ್ಯಂತರ ಹಿಂದೂಗಳ ಕನಸಾಗಿತ್ತು. ಹಾಗಾಗಿ ರಾಮಮಂದಿರ ಉದ್ಘಾಟನೆಯಾದ ಬೆನ್ನಿಗೇ ಲಕ್ಷಾಂತರ ಸಂಖ್ಯೆಯ ಭಕ್ತಾದಿಗಳು ರಾಮನ ದರ್ಶನಕ್ಕೆ ಬರುತ್ತಿದ್ದರು. ಆದರೆ ಮಂದಿರ ಉದ್ಘಾಟನೆಯಾಗಿ ಈಗಾಗಲೇ ಆರು ತಿಂಗಳು ಕಳೆದಿರುವುದರಿಂದ ಭಕ್ತರ ಸಂಖ್ಯೆ ಸಹಜವಾಗಿಯೇ ಕಡಿಮೆಯಾಗುತ್ತಿದೆ.

ಕಳೆದ ಆರು ವಾರಗಳಲ್ಲಿ ಅಯೋಧ್ಯೆ ನಗರಕ್ಕೆ ಬರುವ ವಿಮಾನಗಳು, ರೈಲುಗಳು ಮತ್ತು ಬಸ್ ಸೇವೆ ಗಮನಾರ್ಹವಾಗಿ ಕಡಿಮೆಯಾಗುತ್ತ ಬಂದಿದೆ. ಕೆಲವು ವಿಶೇಷ ರೈಲುಗಳ ಕಾರ್ಯಾಚರಣೆ ನಿಲ್ಲಿಸಲಾಗಿದೆ. ಇತರ ರಾಜ್ಯಗಳಿಂದ ಅಯೋಧ್ಯೆಗೆ ಬರುವ ವಿಶೇಷ ಬಸ್ಸುಗಳ ಸಂಖ್ಯೆಯಲ್ಲೂ ಕಡಿತವಾಗಿದೆ. ಇದು ಪ್ರಯಾಣಿಕರು ಅಯೋಧ್ಯೆಗೆ ಬರುವ ಪ್ರಮಾಣ ಕಡಿಮೆಯಾಗಿದೆ ಎಂಬುದನ್ನು ಸೂಚಿಸುತ್ತದೆ.

ಈಗಾಗಲೇ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಕಡಿಮೆ ಬೇಡಿಕೆಯಿಂದಾಗಿ ಹೈದರಾಬಾದ್, ಬೆಂಗಳೂರು ಮತ್ತು ಪಾಟ್ನಾದಿಂದ ಅಯೋಧ್ಯೆಗೆ ನೇರ ವಿಮಾನಯಾನವನ್ನು ನಿಲ್ಲಿಸಿದೆ. ಸೇವೆ ಪ್ರಾರಂಭವಾದ ಕೇವಲ ಎರಡು ತಿಂಗಳ ನಂತರ ಸಂಸ್ಥೆ ಈ ನಿರ್ಧಾರ ತೆಗೆದುಕೊಂಡಿದೆ. ಏಪ್ರಿಲ್ 2024ರಲ್ಲಿ ಸ್ಪೈಸ್ ಜೆಟ್ ಹೈದರಾಬಾದ್‌ನಿಂದ ಅಯೋಧ್ಯೆಗೆ ವಿಮಾನವನ್ನು ಪ್ರಾರಂಭಿಸಿದ್ದು, ವಾರಕ್ಕೆ ಮೂರು ಬಾರಿ ಕಾರ್ಯ ನಿರ್ವಹಿಸುತ್ತಿತ್ತು. ಆದರೆ ಪ್ರಯಾಣಿಕರ ಸಂಖ್ಯೆ ಕಡಿಮೆಯಾದ ಕಾರಣ ವಿಮಾನಯಾನವನ್ನು ನಿಲ್ಲಿಸಲಾಗಿದೆ. ಆದರೆ ಮಳೆಗಾಲ ಮುಗಿದ ನಂತರ ಮತ್ತೆ ಪ್ರಯಾಣಿಕರು ಹೆಚ್ಚಾಗುವ ನಿರೀಕ್ಷೆ ಇದೆ ಎಂಬ ನಿರೀಕ್ಷೆ ಇದೆ. ಅಯೋಧ್ಯೆಗೆ ದಕ್ಷಿಣ ಭಾರತದವರು ಹೆಚ್ಚಾಗಿ ಬರುತ್ತಿದ್ದರು. ಅವರೀಗ ಕೃಷಿ ಕಾರ್ಯಗಳಲ್ಲಿ ಮುಳುಗಿದ್ದಾರೆ. ಹಾಗಾಗಿ ಕೃಷಿ ಚಟುವಟಿಕೆ ಮುಗಿದ ಬಳಿಕ ಭಕ್ತರ ಸಂಖ್ಯೆ ಮತ್ತೆ ಏರುವ ನಿರೀಕ್ಷೆ ಇದೆ.

Ayodhya Temple

ಭಾರತೀಯ ರೈಲ್ವೆ ಕೂಡ ಅಯೋಧ್ಯೆಗೆ ವಿಶೇಷ ರೈಲುಗಳ ವ್ಯವಸ್ಥೆಯನ್ನು ಕಡಿಮೆ ಮಾಡಿದೆ. ಇದರ ಹೊರತಾಗಿ ಪ್ರತಿದಿನ 32ರಿಂದ 35 ರೈಲುಗಳು ಅಯೋಧ್ಯಾ ಧಾಮ್ ಮತ್ತು ಅಯೋಧ್ಯಾ ಕ್ಯಾಂಟ್ ನಿಲ್ದಾಣಗಳಿಗೆ ಆಗಮಿಸುತ್ತಲೇ ಇರುತ್ತವೆ. ರೈಲುಗಳು ನಿತ್ಯ ಸುಮಾರು 28,000 ಪ್ರಯಾಣಿಕರನ್ನು ಹೊತ್ತು ಬರುತ್ತವೆ ಎನ್ನಲಾಗಿದೆ. ಮೇ 15ರವರೆಗೆ ಅಯೋಧ್ಯೆಗೆ ಹೋಗಲು ರೈಲುಗಳಿಗೆ ಹೆಚ್ಚಿನ ಬೇಡಿಕೆಯಿದ್ದರೂ ನಂತರ ಕಡಿಮೆಯಾಗಿದೆ. ಆದರೂ ಅಯೋಧ್ಯೆಗೆ ತೆರಳುವ ಎಲ್ಲಾ ರೈಲುಗಳು ತುಂಬಿರುತ್ತವೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅದೇರೀತಿ ಇತರ ರಾಜ್ಯಗಳಿಂದ ಅಯೋಧ್ಯೆಗೆ ಬಸ್‌ಗಳ ಸಂಖ್ಯೆಯಲ್ಲೂ ಕಡಿಮೆಯಾಗಿದೆ. ಪ್ರಸ್ತುತ 396 ರಸ್ತೆ ಮಾರ್ಗದಲ್ಲಿ ಬಸ್‌ಗಳು ಅಯೋಧ್ಯೆಗೆ ಆಗಮಿಸುತ್ತಿವೆ. ಸದ್ಯಕ್ಕೆ ಮಧ್ಯಪ್ರದೇಶ, ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ದೆಹಲಿಯಿಂದ ತಲಾ ಒಂದು ಬಸ್ ಮಾತ್ರ ಕಾರ್ಯ ನಿರ್ವಹಿಸುತ್ತಿದೆ ಎಂಬುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಮತ್ತೊಂದು ರೀಲ್‌ ಕ್ರೇಜ್‌; ಚಲಿಸುವ ರೈಲಿನಲ್ಲಿ ಯುವತಿಯ ಡೇಂಜರಸ್‌ ಡ್ಯಾನ್ಸ್‌!

ಜನವರಿ 22ರಂದು ಪ್ರಾಣ ಪ್ರತಿಷ್ಠಾ ಸಮಾರಂಭ ನಡೆದ ನಂತರ ಅಯೋಧ್ಯೆಗೆ ಬರುವ ಭಕ್ತರ ಸಂಖ್ಯೆ ವಿಪರೀತ ಹೆಚ್ಚಾಗಿತ್ತು. ಜನವರಿಯಿಂದ ಮಾರ್ಚ್ 2024ರವರೆಗೆ ಪ್ರತಿದಿನ ಸುಮಾರು 1.5 ಲಕ್ಷ ಭಕ್ತರು ಭೇಟಿ ನೀಡುತ್ತಿದ್ದರು. ಆದರೆ ಏಪ್ರಿಲ್‌ನಿಂದ ಭಕ್ತರ ಸಂಖ್ಯೆ ಕಡಿಮೆಯಾಗುತ್ತ ಬಂತು. ಏಪ್ರಿಲ್- ಮೇನಲ್ಲಿ ಸುಮಾರು 1 ಲಕ್ಷ ಭಕ್ತರು ಭೇಟಿ ನೀಡಿದ್ದರು. ಸಾಕಷ್ಟು ಭಕ್ತರು ಜನದಟ್ಟಣೆ ಕಡಿಮೆ ಆಗಲಿ ಎನ್ನುವುದನ್ನೇ ಕಾಯುತ್ತಿದ್ದಾರೆ. ಹಾಗಾಗಿ ಇನ್ನು ಮುಂದೆ ಅಯೋಧ್ಯೆಗೆ ಭಕ್ತರ ಸಂಖ್ಯೆ ಏರಲಿದೆ ಎಂಬ ನಿರೀಕ್ಷೆಯನ್ನು ಸ್ಥಳೀಯ ವ್ಯಾಪಾರಸ್ಥರು ಹೊಂದಿದ್ದಾರೆ.

Continue Reading

Latest

Tirupathi Laddu: ತಿರುಪತಿ ಲಡ್ಡು, ವಿಶೇಷ ದರ್ಶನ ದರದ ಬಗ್ಗೆ ಟಿಟಿಡಿ ಸ್ಪಷ್ಟನೆ

Tirupathi Laddu: ತಿರುಪತಿ ಎಂದಾಕ್ಷಣ ಮೊದಲು ನೆನಪಿಗೆ ಬರುವುದು ಅಲ್ಲಿಯ ರುಚಿಕರವಾದ ಲಡ್ಡು. ವೆಂಕಟೇಶ್ವರ ದೇವರಿಗೆ ಶ್ರೀವಾರಿ ಲಡ್ಡು ಎಂದು ಕರೆಯಲ್ಪಡುವ ಲಡ್ಡನ್ನು ನೈವೇದ್ಯದ ರೂಪದಲ್ಲಿ ಅರ್ಪಿಸಲಾಗುತ್ತದೆ. ಸೋಷಿಯಲ್ ಮೀಡಿಯಾದಲ್ಲಿ ಈ ಲಡ್ಡು ಮತ್ತು ವಿಶೇಷ ದರ್ಶನದ ಬೆಲೆಯನ್ನು ಕಡಿತಗೊಳಿಸಿದೆ ಎಂಬ ವದಂತಿಯನ್ನು ಹಬ್ಬಿಸಿ ಜನರಲ್ಲಿ ಗೊದಲವನ್ನುಂಟುಮಾಡಲಾಗಿತ್ತು. ಲಡ್ಡು ಬೆಲೆಯನ್ನು 50 ರೂ. ಯಿಂದ 25 ರೂ.ಗೆ ಮತ್ತು ವಿಶೇಷ ದರ್ಶನದ ಬೆಲೆಯನ್ನು 300 ರೂ.ನಿಂದ 200ರೂ.ಗೆ ಕಡಿತಗೊಳಿಸಲಾಗಿದೆ ಎಂದು ತಿಳಿಸಲಾಗಿತ್ತು. ಆದರೆ ಈಗ ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

VISTARANEWS.COM


on

Tirupathi Laddu
Koo

ತಿರುಪತಿ : ಸಾಮಾಜಿಕ ಮಾಧ್ಯಮಗಳು (social media) ಜನರಿಗೆ ಪ್ರಸ್ತುತ ವಿಚಾರಗಳ ಬಗ್ಗೆ ಹಲವು ಮಾಹಿತಿಗಳನ್ನು ನೀಡುತ್ತದೆ. ಹೆಚ್ಚಿನ ವಿಚಾರಗಳು ಜನರಿಗೆ ಸಾಮಾಜಿಕ ಮಾಧ್ಯಮದಿಂದಲೇ ತಿಳಿಯುತ್ತಿದೆ. ಅಂದಮಾತ್ರಕ್ಕೆ ಇದರಲ್ಲಿ ಬರುವ ಎಲ್ಲಾ ಮಾಹಿತಿಯೂ ಸತ್ಯವಾಗಿರುವುದಿಲ್ಲ. ಕೆಲವೊಂದು ಊಹಾಪೋಹಗಳು ಇರುತ್ತದೆ. ಹಾಗಾಗಿ ಸಾಮಾಜಿಕ ಮಾಧ್ಯಮದ ಎಲ್ಲಾ ಮಾಹಿತಿಗಳನ್ನು ನಿಜವೆಂದು ನಂಬಬೇಡಿ. ಇದಕ್ಕೆ ತಿರುಪತಿ ಲಡ್ಡು (Tirupathi Laddu) ಹಾಗೂ ವಿಶೇಷ ದರ್ಶನಕ್ಕೆ ಸಂಬಂಧಪಟ್ಟ ಸುದ್ದಿಯೊಂದು ನಿದರ್ಶನವಾಗಿದೆ.

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳು ತಿರುಪತಿಯ ಶ್ರೀವೆಂಕಟೇಶ್ವರ ದೇವಸ್ಥಾನದ ಅಧಿಕೃತ ಉಸ್ತುವಾರಿಗಳಾದ ತಿರುಮಲ ತಿರುಪತಿ ದೇವಸ್ಥಾನಮ್ಸ್ (ಟಿಟಿಡಿ) ತಿರುಮಲ ಲಡ್ಡು ಮತ್ತು ವಿಶೇಷ ದರ್ಶನದ ಬೆಲೆಯನ್ನು ಕಡಿತಗೊಳಿಸಿದೆ ಎಂಬ ವದಂತಿಯನ್ನು ಹಬ್ಬಿಸಿ ಜನರಲ್ಲಿ ಗೊದಲವನ್ನುಂಟು ಮಾಡಿದ್ದವು.

ಸಾಮಾಜಿಕ ಮಾಧ್ಯಮದಲ್ಲಿ ಮಾಡಲಾದ ಪೋಸ್ಟ್ ನಲ್ಲಿ ಲಡ್ಡು ಬೆಲೆಯನ್ನು 50ರೂ. ಯಿಂದ 25 ರೂ.ಗೆ ಮತ್ತು ವಿಶೇಷ ದರ್ಶನದ ಬೆಲೆಯನ್ನು 300 ರೂ.ನಿಂದ 200 ರೂ.ಗೆ ಕಡಿತಗೊಳಿಸಲಾಗಿದೆ ಎಂದು ತಿಳಿಸಲಾಗಿತ್ತು. ಈ ಸುದ್ದಿಯನ್ನು ನಿಜವೆಂದು ನಂಬಿದ ಭಕ್ತಾಧಿಗಳು ಸಂತೋಷದಿಂದ ಟಿಟಿಡಿಗೆ ಕೃತಜ್ಞತೆ ಸಲ್ಲಿದ್ದರು.

ಆದರೆ ಈ ಬಗ್ಗೆ ಟಿಟಿಡಿ ತನ್ನ ವೆಬ್ ಸೈಟ್ ಅಥವಾ ಅಧಿಕೃತ ಪುಟಗಳಲ್ಲಿ ಅಂತಹ ಯಾವುದೇ ಬೆಲೆ ಕಡಿತದ ಬಗ್ಗೆ ಘೋಷಣೆ ಮಾಡಿಲ್ಲ ಮತ್ತು ಸರ್ಕಾರ ಕೂಡ ಯಾವುದೇ ಹೇಳಿಕೆ ನೀಡಿಲ್ಲ. ಹಾಗಾಗಿ ಸಂಶಯಗೊಂಡ ಕೆಲವು ಭಕ್ತರು ಈ ಸುದ್ದಿಯನ್ನು ಪರಿಶೀಲಿಸಲು ಟಿಟಿಡಿ ಅಧಿಕಾರಿಗಳನ್ನು ಸಂಪರ್ಕಿಸಿದ್ದಾರೆ. ಆಗ ಈ ಸುದ್ದಿ ಸುಳ್ಳು ಎಂಬುದಾಗಿ ತಿಳಿದುಬಂದಿದೆ. ಈ ದಾರಿತಪ್ಪಿಸುವಂತಹ ಪೋಸ್ಟ್ ಗಳನ್ನು ನಂಬಬೇಡಿ. ಟಿಕೆಟ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಟಿಟಿಡಿ ಅಧಿಕೃತವಾಗಿ ಹೇಳಿಕೆ ನೀಡಿದೆ. ಆ ಮೂಲಕ ಸಾಮಾಜಿಕ ಮಾಧ್ಯಮದ ಈ ಸುದ್ದಿ ಸುಳ್ಳು ಎಂಬುದು ಭಕ್ತರಿಗೆ ಮನದಟ್ಟಾಗಿದೆ.

ಈ ದೇವಸ್ಥಾನದಲ್ಲಿ ವೆಂಕಟೇಶ್ವರ ದೇವರಿಗೆ ಶ್ರೀವಾರಿ ಲಡ್ಡು ಎಂದು ಕರೆಯಲ್ಪಡುವ ಲಡ್ಡನ್ನು ನೈವೇದ್ಯದ ರೂಪದಲ್ಲಿ ಅರ್ಪಿಸಲಾಗುತ್ತದೆ. ದೇವಸ್ಥಾನದಲ್ಲಿ ಭಕ್ತರಿಗೆ ದೇವರ ದರ್ಶನ ಪಡೆದ ನಂತರ ಈ ಲಡ್ಡನ್ನು ಪ್ರಸಾದದ ರೂಪದಲ್ಲಿ ನೀಡಲಾಗುತ್ತದೆ. ಇದು ತುಂಬಾ ಸಿಹಿ, ರುಚಿ ಮತ್ತು ಪರಿಮಳಯುಕ್ತವಾಗಿದೆ. ಹಾಗಾಗಿ ಈ ಲಡ್ಡುಗಳಿಗೆ ಹೆಚ್ಚಿನ ಬೇಡಿಕೆ ಇರುವ ಕಾರಣ ಅದರ ಬೆಲೆ ಇಳಿಕೆಯ ಸುದ್ದಿ ವೈರಲ್ ಆಗಿದೆ ಎನ್ನಲಾಗಿದೆ.

ಇದನ್ನೂ ಓದಿ: Viral Video: ಮತ್ತೊಂದು ರೀಲ್‌ ಕ್ರೇಜ್‌; ಚಲಿಸುವ ರೈಲಿನಲ್ಲಿ ಯುವತಿಯ ಡೇಂಜರಸ್‌ ಡ್ಯಾನ್ಸ್‌!

ವಿಶ್ವದಾದ್ಯಂತ ಪ್ರಸಿದ್ಧಿಯಾಗಿರುವ 1933ರಲ್ಲಿ ಸ್ಥಾಪನೆಯಾದ ತಿರುಮಲ ವೆಂಕಟೇಶ್ವರ ದೇವಸ್ಥಾನವು ಮೊದಲ ಬಾರಿಗೆ ತನ್ನ ನಿವ್ವಳ ಮೌಲ್ಯವನ್ನು ಘೋಷಿಸಿದೆ. ಇದರ ಪ್ರಕಾರ ಬ್ಯಾಂಕ್‌ಗಳಲ್ಲಿ 10.25 ಟನ್ ಚಿನ್ನದ ಠೇವಣಿ, 2.5 ಟನ್ ಚಿನ್ನಾಭರಣ, ಸುಮಾರು 16,000 ಕೋಟಿ ರೂ. ಬ್ಯಾಂಕ್ ಠೇವಣಿ ಮತ್ತು ಭಾರತದಾದ್ಯಂತ 960 ಆಸ್ತಿಗಳನ್ನು ಒಳಗೊಂಡಂತೆ ಒಟ್ಟು 2.5 ಲಕ್ಷ ಕೋಟಿ ರೂ. ನಿವ್ವಳ ಮೌಲ್ಯವನ್ನು ಹೊಂದಿದೆ ಎನ್ನಲಾಗಿದೆ. ಐಟಿ ಸೇವಾ ಸಂಸ್ಥೆಯಾದ ವಿಪ್ರೋ, ಆಹಾರ ಮತ್ತು ಪಾನೀಯ ಕಂಪನಿ ನೆಸ್ಲೆ ಮತ್ತು ಸರ್ಕಾರಿ ಸ್ವಾಮ್ಯದ ತೈಲ ಒಎನ್ ಜಿಸಿ ಮತ್ತು ಐಒಸಿಗಳ ಮಾರುಕಟ್ಟೆ ಬಂಡವಾಳ ಕೂಡ ಇಷ್ಟು ಪ್ರಮಾಣದಲ್ಲಿಲ್ಲ!

Continue Reading

Latest

Last Rites: ಅಂತ್ಯಕ್ರಿಯೆ ಮುಗಿಸಿ ಬರುವಾಗ ಸ್ಮಶಾನದತ್ತ ಹಿಂತಿರುಗಿ ನೋಡಬಾರದು ಅನ್ನೋದು ಏಕೆ ಗೊತ್ತಾ?

ಅಂತಿಮ ವಿಧಿವಿಧಾನಗಳಲ್ಲಿ (Last Rites) ಅಜ್ಞಾನ ಅಥವಾ ಮಾಹಿತಿಯ ಕೊರತೆಯಿಂದಾಗಿ ಕೆಲವರು ಇಂತಹ ಆಚರಣೆಗಳನ್ನು ಮಾಡುವುದಿಲ್ಲ. ಇನ್ನು ಕೆಲವು ಮಾಡಬಾರದ ಆಚರಣೆಗಳನ್ನು ಮಾಡುತ್ತಾರೆ. ಶವಸಂಸ್ಕಾರ ಮಾಡಿದ ಅನಂತರ ಸ್ಮಶಾನದತ್ತ ಹಿಂತಿರುಗಿ ನೋಡುವುದನ್ನು ತಪ್ಪಿಸುವುದು ಇವುಗಳಲ್ಲಿ ಒಂದು. ಹಿಂತಿರುಗಿ ನೋಡಬಾರದು ಎಂದು ಹಿರಿಯರು ಹೇಳುವುದೇಕೆ? ಇಲ್ಲಿದೆ ಮಾಹಿತಿ.

VISTARANEWS.COM


on

By

Last Rites
Koo

ಪ್ರತಿಯೊಂದು ಧರ್ಮದಲ್ಲೂ ವಿವಿಧ ಆಚರಣೆಗಳಿವೆ (rituals). ಅದರಲ್ಲೂ ಮುಖ್ಯವಾಗಿ ಸನಾತನ ಧರ್ಮದಲ್ಲಿ (sanatana dharma) ಸಾಕಷ್ಟು ವಿಶೇಷ ಮತ್ತು ಅರ್ಥಪೂರ್ಣವಾದ ಆಚರಣೆಗಳಿವೆ. ಕೆಲವೊಂದು ಆಚರಣೆಗಳ ಬಗ್ಗೆ ನಮಗೆ ಗೊತ್ತಿದ್ದರೂ ಮರಣಾನಂತರದ (post-death ceremony) ಕೆಲವು ಆಚರಣೆಗಳ ನಾವು ತಿಳಿದಿರುವುದಿಲ್ಲ. ಈ ಆಚರಣೆಗಳನ್ನು (Last Rites) ಪಾಲಿಸುವುದು ಬಹುಮುಖ್ಯ.

ಮರಣಾನಂತರದ ಆಚರಣೆಗಳಲ್ಲಿ 16 ಪ್ರಮುಖ ಆಚರಣೆಗಳಿವೆ. ಇದರಲ್ಲಿ ಅನೇಕ ನಿಯಮಗಳಿವೆ. ಅದನ್ನು ಪ್ರತಿಯೊಬ್ಬರೂ ಪಾಲಿಸುವುದು ಮುಖ್ಯವಾಗಿದೆ.

ಅಂತಿಮ ವಿಧಿವಿಧಾನಗಳಲ್ಲಿ ಅಜ್ಞಾನ ಅಥವಾ ಮಾಹಿತಿಯ ಕೊರತೆಯಿಂದಾಗಿ ಕೆಲವರು ಇಂತಹ ಆಚರಣೆಗಳನ್ನು ಮಾಡುವುದಿಲ್ಲ. ಇನ್ನು ಕೆಲವು ಮಾಡಬಾರದ ಆಚರಣೆಗಳನ್ನು ಮಾಡುತ್ತಾರೆ. ಶವಸಂಸ್ಕಾರ ಮಾಡಿದ ಅನಂತರ ಸ್ಮಶಾನದತ್ತ ಹಿಂತಿರುಗಿ ನೋಡುವುದನ್ನು ತಪ್ಪಿಸುವುದು ಇವುಗಳಲ್ಲಿ ಒಂದು.

ಗರುಡ ಪುರಾಣದ ಪ್ರಕಾರ ಒಬ್ಬ ವ್ಯಕ್ತಿಯು ಸತ್ತಾಗ ಆತನ ಆತ್ಮವು ದೇಹವನ್ನು ತೊರೆಯುತ್ತದೆ. ಅಂತಿಮ ವಿಧಿಗಳನ್ನು ನಡೆಸಿದ ಬಳಿಕ ದೇಹವು ಬೂದಿಯಾಗುತ್ತದೆ. ಆದರೆ ಆತ್ಮವು ಅಲ್ಲೇ ಇರುತ್ತದೆ. ಆತ್ಮವನ್ನು ಶಾಶ್ವತ ಮತ್ತು ಅವಿನಾಶಿ ಎಂದು ಭಗವದ್ಗೀತೆಯಲ್ಲಿ ಶ್ರೀಕೃಷ್ಣ ಹೇಳಿದ್ದಾನೆ. ಯಾವುದೇ ಕತ್ತಿ, ಬೆಂಕಿ ಅಥವಾ ನೀರು ಆತ್ಮವನ್ನು ನಾಶಮಾಡುವುದಿಲ್ಲ.

ಸ್ಮಶಾನ ಕಾರ್ಯದ ಬಳಿಕ ವ್ಯಕ್ತಿಯ ಆತ್ಮವು ಬೇರೆ ಲೋಕಕ್ಕೆ ಪ್ರಯಾಣ ಬೆಳೆಸುತ್ತದೆ ಎಂದು ಹೇಳಲಾಗುತ್ತದೆ. ಆದರೆ ಸತ್ತವರ ಕುಟುಂಬದ ಸದಸ್ಯರು ಅಂತ್ಯಕ್ರಿಯೆಯ ಅನಂತರ ಅಂತ್ಯಕ್ರಿಯೆ ನಡೆದ ಸ್ಥಳಕ್ಕೆ ಹಿಂತಿರುಗಿ ನೋಡಿದಾಗ ಕುಟುಂಬಕ್ಕೆ ಆತ್ಮದ ಬಾಂಧವ್ಯವು ಅದನ್ನು ಇನ್ನೊಂದು ಲೋಕಕ್ಕೆ ಹಾದುಹೋಗದಂತೆ ತಡೆಯುತ್ತದೆ.

ಗರುಡ ಪುರಾಣದಲ್ಲಿ ಉಲ್ಲೇಖಿಸಿದಂತೆ ಮರಣದ ಅನಂತರ ಸತ್ತ ವ್ಯಕ್ತಿಯ ಆತ್ಮವು ಸ್ಮಶಾನದಲ್ಲಿ ನಡೆಯುವ ಅವನ ಕೊನೆಯ ಚಟುವಟಿಕೆಗಳನ್ನು ವೀಕ್ಷಿಸುತ್ತದೆ. ಮೃತನ ಕುಟುಂಬದ ಸದಸ್ಯರು ಸ್ಮಶಾನದಲ್ಲಿ ಇರುವುದರಿಂದ ಸತ್ತ ವ್ಯಕ್ತಿಯ ಅಂತ್ಯಕ್ರಿಯೆಯ ಕಡೆಗೆ ಹಿಂತಿರುಗಿ ನೋಡಿದರೆ ಮೃತನ ಆತ್ಮವು ಆ ವ್ಯಕ್ತಿಯೊಂದಿಗೆ ಬರುತ್ತದೆ ಮತ್ತು ಆ ಬಂಧವನ್ನು ಮುರಿಯಲಾಗುವುದಿಲ್ಲ.

ಹೀಗಾಗಿ ಅಂತಿಮ ವಿಧಿಗಳನ್ನು ನಡೆಸಿದ ಅನಂತರ ತಿರುಗಬಾರದು ಎಂದು ಹೇಳಲಾಗುತ್ತದೆ. ಯಾಕೆಂದರೆ ಅಂತಹ ಸಂದರ್ಭದಲ್ಲಿ ಆತ್ಮವು ಮರಣಾನಂತರದ ಜೀವನಕ್ಕೆ ಪರಿವರ್ತನೆ ಕಷ್ಟವಾಗುತ್ತದೆ.

ಇದನ್ನೂ ಓದಿ: Vastu Tips: ಗಂಗಾ ಜಲ ಮನೆಯಲ್ಲಿಟ್ಟರೆ ಸಾಲದು; ಅದನ್ನು ಎಲ್ಲಿ ಇಡಬೇಕು, ಹೇಗೆ ಇಡಬೇಕು?

ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು 13 ದಿನಗಳ ಕಾಲ ಹಲವು ವಿಧಿವಿಧಾನಗಳನ್ನು ನಡೆಸಲಾಗುತ್ತದೆ. ಇದರ ಹೊರತಾಗಿ ಅಂತ್ಯಕ್ರಿಯೆಯಿಂದ ಹಿಂದಿರುಗಿದ ಅನಂತರ ಅನುಸರಿಸಬೇಕಾದ ಕೆಲವು ನಿಯಮಗಳಿವೆ.

ತಕ್ಷಣ ಸ್ನಾನ ಮಾಡಿ ಮತ್ತು ವ್ಯಕ್ತಿಯ ಬಟ್ಟೆಗಳನ್ನು ತೊಳೆಯಬೇಕು. ನಕಾರಾತ್ಮಕ ಶಕ್ತಿಗಳನ್ನು ತೊಡೆದುಹಾಕಲು ಗಂಗಾಜಲವನ್ನು ಇಡೀ ಮನೆಯಲ್ಲಿ ಸಿಂಪಡಿಸಬೇಕು. ವ್ಯಕ್ತಿ ಸತ್ತ ಮನೆಯಲ್ಲಿ ಮೃತರ ಆತ್ಮಕ್ಕೆ ಶಾಂತಿಗಾಗಿ 12 ದಿನಗಳ ಕಾಲ ದೀಪವನ್ನು ಬೆಳಗಿಸಬೇಕು. ಪಿತೃ ಪಕ್ಷದಲ್ಲಿ ಪಿಂಡದಾನ ಮಾಡಬೇಕು‌ ಎಂಬೆಲ್ಲ ಉಲ್ಲೇಖ ಗರುಡ ಪುರಾಣದಲ್ಲಿದೆ.

Continue Reading
Advertisement
Women's Asia Cup
ಪ್ರಮುಖ ಸುದ್ದಿ5 hours ago

Women’s Asia Cup 2024 : ಮಹಿಳೆಯರ ಏಷ್ಯಾ ಕಪ್​ ಕ್ರಿಕೆಟ್​ನ ವೇಳಾಪಟ್ಟಿ ಬಿಡುಗಡೆ, ಜುಲೈ 19ಕ್ಕೆ ಭಾರತ- ಪಾಕ್ ಪಂದ್ಯ

minister mb patil visit japan and discuss about investment in Karnataka
ಕರ್ನಾಟಕ5 hours ago

Foreign Investment: 100 ಕೋಟಿ ರೂ. ವೆಚ್ಚದ ತ್ಯಾಜ್ಯ ನೀರು ನಿರ್ವಹಣಾ ಉಪಕರಣಗಳ ತಯಾರಿಕಾ ಘಟಕ ಸ್ಥಾಪನೆಗೆ ಒಪ್ಪಂದ

Arvind Kejriwal
ಪ್ರಮುಖ ಸುದ್ದಿ6 hours ago

Arvind Kejriwal : ಜಾಮೀನು ಅರ್ಜಿ ವಿಚಾರಣೆಗೂ ಮುನ್ನ ಅರವಿಂದ್ ಕೇಜ್ರಿವಾಲ್ ಬಂಧಿಸಿದ ಸಿಬಿಐ

Kodagu News
ಕೊಡಗು6 hours ago

Kodagu News: ಕಳೆದುಕೊಂಡಿದ್ದ ಚಿನ್ನದ ನಾಣ್ಯ ವಾರಸುದಾರನ ಕೈ ಸೇರುವಂತೆ ಮಾಡಿದ ಪೊಲೀಸರು!

Lok Sabha Speaker
ಪ್ರಮುಖ ಸುದ್ದಿ6 hours ago

Lok Sabha Speaker : ಸ್ಪೀಕರ್​ ಚುನಾವಣೆಯಲ್ಲಿ ವೈಎಸ್​ಆರ್​ ಪಕ್ಷದಿಂದ ಬಿಜೆಪಿಗೆ ಬೆಂಬಲ

Rahul Gandhi
ಪ್ರಮುಖ ಸುದ್ದಿ7 hours ago

Rahul Gandhi : ಲೋಕ ಸಭೆಯಲ್ಲಿ ಪ್ರತಿ ಪಕ್ಷದ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ

Ayodhya Ram Mandir
ಪ್ರಮುಖ ಸುದ್ದಿ7 hours ago

Ayodhya Ram Mandir : ಅಯೋಧ್ಯೆಯಲ್ಲಿ ನಿರ್ಮಾಣವಾಗಲಿದೆ ‘ಟೆಂಪಲ್ ಮ್ಯೂಸಿಯಮ್​’; ಯೋಗಿ ಸಂಪುಟದ ಸಮ್ಮತಿ

Milk Price
ಪ್ರಮುಖ ಸುದ್ದಿ8 hours ago

Milk Price: ನಂದಿನಿ ಹಾಲಿನ ಹೊಸ ದರ ಹೇಗಿದೆ; ಯಾವುದಕ್ಕೆ ಎಷ್ಟು ಹೆಚ್ಚಳ?

Ayodhya Ram Mandir:
ಪ್ರಮುಖ ಸುದ್ದಿ8 hours ago

Ayodhya Ram Mandir : ರಾಮಮಂದಿರದ ಚಾವಣಿ ಸೋರುತ್ತಿಲ್ಲ; ನಿರ್ಮಾಣ ಸಮಿತಿ ಸ್ಪಷ್ಟನೆ

Bengaluru Power Cut power outage in many parts of Bengaluru On June 27
ಬೆಂಗಳೂರು8 hours ago

Bengaluru Power Cut: ಜೂ.27ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 day ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ4 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ5 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌