Rishab Shetty | ರಿವೀಲ್‌ ಆಯ್ತು ರಿಷಬ್‌ ಶೆಟ್ಟಿ ಕಾಣಿಸಿಕೊಳ್ಳುವ ಮುಂದಿನ ಸಿನಿಮಾ! - Vistara News

ಸಿನಿಮಾ

Rishab Shetty | ರಿವೀಲ್‌ ಆಯ್ತು ರಿಷಬ್‌ ಶೆಟ್ಟಿ ಕಾಣಿಸಿಕೊಳ್ಳುವ ಮುಂದಿನ ಸಿನಿಮಾ!

ರಿಷಬ್ ಶೆಟ್ಟಿ (Rishab Shetty) ಕಾಣಿಸಿಕೊಳ್ಳಲಿರುವ ಮುಂದಿನ ಸಿನಿಮಾ ಹೆಸರು ರಿವೀಲ್ ಆಗಿದೆ. ಸೋಷಿಯಲ್‌ ಮೀಡಿಯಾದಲ್ಲಿ ಈ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿತ್ತು.

VISTARANEWS.COM


on

Rishab Shetty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ರಿಷಬ್‌ ಶೆಟ್ಟಿ (Rishab Shetty ) ಅವರು ಕಾಂತಾರ ಸಿನಿಮಾ ಆದ ಮೇಲೆ ಯಾವ ಸಿನಿಮಾ ಮಾಡುತ್ತಾರೆ ಎಂಬ ಕುತೂಹಲ ಪ್ರೇಕ್ಷಕರಿಗಿತ್ತು. ಸೋಷಿಯಲ್‌ ಮೀಡಿಯಾದಲ್ಲಿ ಈ ಕುರಿತು ಸಾಕಷ್ಟು ಚರ್ಚೆಗಳು ನಡೆಯುತ್ತಿತ್ತು. ಆದರೀಗ ರಿಷಬ್ ಶೆಟ್ಟಿ ಕಾಣಿಸಿಕೊಳ್ಳಲಿರುವ ಮುಂದಿನ ಸಿನಿಮಾ ಹೆಸರು ರಿವೀಲ್ ಆಗಿದೆ. ಅದುವೇ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’.

ರಿಷಭ್ ಶೆಟ್ಟಿ ಅವರು ಈ ಚಿತ್ರದ ಪ್ರಮುಖ ಪಾತ್ರದಲ್ಲಿಯೇ ಕಾಣಿಸಿಕೊಳ್ಳುತ್ತಿದ್ದಾರೆ. ಹಾಸ್ಟೆಲ್‌ ಹುಡುಗರಿಗೆ ಸೀನಿಯರ್‌ ಫಾತ್ರ ನಿರ್ವಹಣೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಹಾಸ್ಟೆಲ್‌ ಹುಡುಗರು ಚಿತ್ರದ ಚಿತ್ರೀಕರಣ ಮುಗಿದಿದ್ದು, ಬಿಡುಗಡೆಗೆ ತಯಾರಾಗಿದೆ. ಚಿತ್ರತಂಡ ರಿಲೀಸ್‌ ಡೇಟ್‌ ಇನ್ನಷ್ಟೇ ಅನೌನ್ಸ್‌ ಮಾಡಬೇಕಿದೆ.

ರಿಷಬ್‌ ಅವರು ಕಾಂತಾರ -2ಗೆ ರೆಡಿಯಾಗುತ್ತಿದ್ದಾರೆ ಎನ್ನಲಾಗುತ್ತಿದೆ. ವರದಿ ಪ್ರಕಾರ ಕಾಂತಾರ ತಂಡಕ್ಕೆ ಈ ಸಿನಿಮಾ ಯಶಸ್ವಿಯಾಗುತ್ತದೆ ಎಂಬ ವಿಶ್ವಾಸವಿತ್ತು. ಆದರೆ ಈ ಮಟ್ಟದಲ್ಲಿ ಗೆಲ್ಲುತ್ತದೆ ಎಂದು ಎಣಿಸಿರಲಿಲ್ಲ. ತಂಡಕ್ಕೆ ಕಾಂತಾರ ಭಾಗ -2 ಮಾಡುವ ಯೋಚನೆ ಇದೆ. ರಿಷಬ್‌ ಅವರು ಕಾಂತಾರ-2ಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ | Ramya Actress | ʻಹಾಸ್ಟೆಲ್‌ ಹುಡುಗರು ಬೇಕಾಗಿದ್ದಾರೆʼ ಚಿತ್ರಕ್ಕೆ ಮೋಹಕ ತಾರೆ ರಮ್ಯಾ ಸಾಥ್‌!

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ, ಕಿಚ್ಚ ಸುದೀಪ ಅವರಿಂದ ಸಿನಿಮಾ ಪ್ರಮೋಷನಲ್ ಕಂಟೆಂಟ್ ಮಾಡಿಸಿ ಗಮನ ಸೆಳೆದಿತ್ತು. ಸ್ಟಾರ್ ನಟರ ಮೂಲಕ ಸಿನಿಮಾ ಪ್ರಚಾರ ಒಂದು ಕಡೆಯಾದರೆ ಇಂಟರೆಸ್ಟಿಂಗ್ ಪ್ರಮೋಷನಲ್ ಕಂಟೆಂಟ್ ಕೂಡ ಸಾಮಾಜಿಕ ಜಾಲತಾಣದಲ್ಲಿ ಎಲ್ಲರನ್ನು ಸಖತ್ ಇಂಪ್ರೆಸ್ ಮಾಡಿತ್ತು. ವರುಣ್‌ ಸ್ಟುಡಿಯೋಸ್‌ ಹಾಗೂ ಪ್ರಜ್ವಲ್ ಬಿ. ಪಿ ಅವರ ಗುಲ್‌ಮೊಹರ್ ಫಿಲ್ಮ್ಸ್‌ ಬ್ಯಾನರ್‌ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ಇದಾಗಿದೆ. ಜನವರಿಯಲ್ಲಿ ಸಿನಿಮಾ ತೆರೆಗೆ ತರುವ ಯೋಜನೆ ಇದೆ ಎಂದು ಚಿತ್ರತಂಡ ಹೇಳಿಕೊಂಡಿದೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.

ಇದನ್ನೂ ಓದ | Rishab Shetty | ರಿಷಬ್‌ ಶೆಟ್ಟಿ ನಿರ್ಮಾಣದ ʻಶಿವಮ್ಮʼ ಫ್ರಾನ್ಸ್‌ನ ʻಯುವ ತೀರ್ಪುಗಾರರ ಅವಾರ್ಡ್‌ʼಗೆ ಭಾಜನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸ್ಯಾಂಡಲ್ ವುಡ್

Actor Darshan: ಕೆಟ್ಟ ಕಮೆಂಟ್‌ ಮಾಡೋರನ್ನ ಬ್ಲಾಕ್‌ ಮಾಡಿ, ದರ್ಶನ್‌ ನಿರಪರಾಧಿ ಆಗಿ ಹೊರ ಬರಲಿ ಎಂದ ಅದ್ವಿತಿ ಶೆಟ್ಟಿ

Actor Darshan: ರಚಿತಾ ರಾಮ್, ರಕ್ಷಿತಾ, ಪ್ರೇಮ್ ಸೇರಿದಂತೆ ಸಾಕಷ್ಟು ಮಂದಿ ದರ್ಶನ್ ಪರ ನಿಂತಿದ್ದಾರೆ. ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೀಗ ಇದೀಗ, ಸ್ಯಾಂಡಲ್‌ವುಡ್ ನಟಿ ಅದ್ವಿತಿ ಶೆಟ್ಟಿ ಈ ಬಗ್ಗೆ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

VISTARANEWS.COM


on

Darshan support by Adviti Shetty Block the bad commenter
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್‌ (Actor Darshan) ಸೆರೆವಾಸ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ರಚಿತಾ ರಾಮ್, ರಕ್ಷಿತಾ, ಪ್ರೇಮ್ ಸೇರಿದಂತೆ ಸಾಕಷ್ಟು ಮಂದಿ ದರ್ಶನ್ ಪರ ನಿಂತಿದ್ದಾರೆ. ನಾದ ಬ್ರಹ್ಮ ಹಂಸಲೇಖ ಕೂಡ ದರ್ಶನ್ ಬಗ್ಗೆ ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇದೀಗ ಇದೀಗ, ಸ್ಯಾಂಡಲ್‌ವುಡ್ ನಟಿ ಅದ್ವಿತಿ ಶೆಟ್ಟಿ ಈ ಬಗ್ಗೆ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

‘ಈ ಘಟನೆ ನನಗೆ ಬೇಸರ ತಂದಿದೆ. ಯಾರೂ ಕೂಡ ಯಾರಿಗೂ ಕೆಟ್ಟ ಕಮೆಂಟ್ ಮಾಡಬೇಡಿ..ಕೆಟ್ಟ ಕಮೆಂಟ್ ಮಾಡುವರನ್ನ ಬ್ಲಾಕ್ ಮಾಡಿಬಿಡಿ.. ಮೃತ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಅಷ್ಟೇ. ದರ್ಶನ್ ಸರ್ ನಮ್ಮ ಫ್ಯಾಷನ್ ಶೋ ಕಾರ್ಯಕ್ರಮಕ್ಕೆ ಬಂದಿದ್ದರು.. ಆವತ್ತು ಸಿಕ್ಕಾಗ ಚೆನ್ನಾಗಿ ಮಾತನಾಡಿಸಿದ್ದರು. ಮತ್ತೆ ಯಾವತ್ತೂ ಮುಖಾಮುಖಿ ಭೇಟಿ ಆಗಿಲ್ಲ. ಈ ಕೇಸ್‌ನಲ್ಲಿ ನಟ ದರ್ಶನ್ ಸರ್ ನಿರಪರಾಧಿ ಎಂದೆನಿಸಿ ಆಚೆ ಬರಲಿ ಎಂದು ಕೇಳಿಕೊಳ್ಳುತ್ತೇನೆ’ ಎಂದಿದ್ದಾರೆ ಅದ್ವಿತಿ ಶೆಟ್ಟಿ.

ಇನ್ನು ದರ್ಶನ್‌ ಕುರಿತಾಗಿ ಹಂಸಲೇಖ ಕೂಡ ʻʻನಾವು ಸಿಟ್ಟನ್ನು ಸ್ಕ್ರಿಪ್ಟ್ ಮಾಡಬೇಕು. ದ್ವೇಷ ಇದೆಯಲ್ಲ ಅದನ್ನು ಕ್ಯಾರೆಕ್ಟರ್ ಮಾಡಬೇಕು. ಸಿಟ್ಟು ಅಂದರೆ ಅದೊಂದು ಸ್ಕ್ರಿಪ್ಟ್‌ . ದ್ವೇಷ ಅಂದರೆ ಅದು ಕ್ಯಾರೆಕ್ಟರ್ ಅಯ್ಯ. ಆತರ ಸಿನಿಮಾದಲ್ಲಿ ತೋರಿಸಬೇಕಷ್ಟೆ ನಾವು. ನಿಜ ಜೀವನದಲ್ಲಿ ಸ್ಕ್ರಿಪ್ಟ್ ತರಬಾರದು. ನಿಜ ಜೀವನದಲ್ಲಿ ಕ್ಯಾರೆಕ್ಟರ್ ಅನ್ನು ತರಬಾರದು. ಇದು ಕಲಾವಿದರ ಕರ್ತವ್ಯ.” ಎಂದು ಹಂಸಲೇಖ ಹೇಳಿದ್ದಾರೆ.

ಇದನ್ನೂ ಓದಿ; Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

“ದರ್ಶನ್ ನನ್ನ ಮಗು ಅಂತ ತಿಳಿದುಕೊಳ್ಳಿ. ನನ್ನ ಮಗು ತಪ್ಪು ಮಾಡಿದ್ದರೆ, ತಂದೆ ಎಷ್ಟು ನೋವು ತಿಂತಾನೋ ಅಷ್ಟೇ ನಾನು ನೋವು ತಿನ್ನುತ್ತೀನಿ. ಆ ಮಗು ಕೂಡ ಅಷ್ಟೇ ನೋವು ತಿನ್ನುತ್ತಿರುತ್ತೆ. ನಾವು ಆತ ಕೊಟ್ಟಿರುವ ಕೊಡುಗೆ ಕಡೆ ನೋಡೋಣ.” ಎಂದು ದರ್ಶನ್ ಜೈಲು ಸೇರಿರುವ ಬಗ್ಗೆ ಹಂಸಲೇಖ ಹೇಳಿಕೊಂಡಿದ್ದಾರೆ.

ಜೈಲೂಟ ಒಗ್ಗದೆ ಇದ್ದರೂ ವಿಧಿಯಿಲ್ಲದೆ ಜೈಲೂಟ ಸವಿಯುತ್ತಿರುವ ದರ್ಶನ್ ಇಂದು ಜೈಲಿನ ಮೆನುವಿನಂತೆ ಉಪ್ಪಿಟ್ಟು ಸೇವಿಸಿದ್ದಾನೆ. ಜೈಲಿನಲ್ಲಿ ಮಾನಸಿಕವಾಗಿ ಕುಗ್ಗಿ ಹೋಗಿರುವ ನಟ ದರ್ಶನ್ ತಾಯಿ ಮತ್ತು ಸಹೋದರ ಇಂದು ಭೇಟಿ ನೀಡಲಿದ್ದು, ದರ್ಶನ್‌ಗೆ ತಾಯಿ ಮತ್ತು ಸಹೋದರ ಧೈರ್ಯ ಹೇಳಲಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ದರ್ಶನ್ ಮಡದಿ ಮಗ ಆಗಮಿಸಿದ್ದರು. ಅವರು ಬಂದು ಹೋದ ದಿನ ಖುಷಿಯಾಗಿದ್ದ ದರ್ಶನ್‌, ಬಳಿಕ ಮತ್ತೆ ದೈಹಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿ ಹೋಗಿದ್ದಾನೆ. ಸಹ ಬಂಧಿಗಳ ಜೊತೆ ಬೆರೆಯದೆ ಒಬ್ಬಂಟಿಯಾಗಿ ಕುಳಿತು ಮೌನಕ್ಕೆ ಶರಣಾಗಿದ್ದಾನೆ.

Continue Reading

ಬಾಲಿವುಡ್

Munawar Faruqui: ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ!

Munawar Faruqui: ಕೊನೆಯ ಚಿತ್ರವು ಮುನಾವರ್ ಮತ್ತು ಮೆಹಜಬೀನ್ ಕೋಟ್ವಾಲಾ ಸಂಜೆ ಪರಸ್ಪರ ಕೈ ಹಿಡಿದುಕೊಂಡು ನಿಂತಿರುವುದು ಇದೆ. ಫೋಟೋದಲ್ಲಿ, ಮುನಾವರ್ ಕಪ್ಪು ಟೀ ಶರ್ಟ್, ಆಲಿವ್ ಹಸಿರು ಪ್ಯಾಂಟ್, ಶೂ ಮತ್ತು ಕ್ಯಾಪ್ ಧರಿಸಿದ್ದರು. ಮುದ್ರಿತ ಟಿ-ಶರ್ಟ್, ಡೆನಿಮ್ಸ್ ಮತ್ತು ಸ್ನೀಕರ್ಸ್‌ನಲ್ಲಿ ಮೆಹಜಬೀನ್ ಕಾಣಿಸಿಕೊಂಡಿದ್ದಾರೆ. ಮುನಾವರ್ ಅವರ ಪತ್ನಿಗೂ ಪೋಟೊವನ್ನು ಟ್ಯಾಗ್ ಮಾಡಿದ್ದಾರೆ.

VISTARANEWS.COM


on

Munawar Faruqui shares first pic with new wife
Koo

ಬೆಂಗಳೂರು:  ಬಿಗ್ ಬಾಸ್ 17 ವಿನ್ನರ್ ಮತ್ತು ಸ್ಟ್ಯಾಂಡ್-ಅಪ್ ಕಮಿಡಿಯನ್ಮು ಮುನಾವರ್ ಫಾರೂಕಿ (Munawar Faruqui) ಎರಡನೇ ಬಾರಿಗೆ ವಿವಾಹವಾದರು ಎಂದು ವರದಿಯಾಗಿತ್ತು. ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಅವರೊಂದಿಗೆ ಮದುವೆಯಾಗಿದ್ದರು. ಇದೀಗ ಇದೇ ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿಕೊಂಡಿದ್ದಾರೆ. ಒಂದು ತಿಂಗಳ ವಿವಾಹ ವಾರ್ಷಿಕೋತ್ಸವವನ್ನು ದುಬೈನಲ್ಲಿ ಸೆಲೆಬ್ರೆಟ್‌ ಮಾಡಿರುವ ಫೋಟೊವನ್ನು ಶೇರ್‌ ಮಾಡಿಕೊಂಡಿದ್ದಾರೆ.

ಮೊದಲ ಫೋಟೊದಲ್ಲಿ , ಮುನಾವರ್ ಅವರು ವಿಶ್ರಾಂತಿ ತೆಗೆದುಕೊಳ್ಳುವ, ಶಾಪಿಂಗ್ ಮುಗಿಸಿ ದುಬೈನ ಸ್ಟ್ರೀಟ್‌ನಲ್ಲಿ ಸುತ್ತಾಡುವ. ಸಂಜೆಯ ವಿಹಾರಕ್ಕೆ ಹೋವ, ಉಪಹಾರದ ಫೋಟೋ ಹಾಗೇ ತಮ್ಮ ಶೋ ಒಂದರ ಫೋಟೋವನ್ನು ಸಹ ಹಂಚಿಕೊಂಡಿದ್ದಾರೆ.

ಕೊನೆಯ ಚಿತ್ರವು ಮುನಾವರ್ ಮತ್ತು ಮೆಹಜಬೀನ್ ಕೋಟ್ವಾಲಾ ಸಂಜೆ ಪರಸ್ಪರ ಕೈ ಹಿಡಿದುಕೊಂಡು ನಿಂತಿರುವುದು ಇದೆ. ಫೋಟೋದಲ್ಲಿ, ಮುನಾವರ್ ಕಪ್ಪು ಟೀ ಶರ್ಟ್, ಆಲಿವ್ ಹಸಿರು ಪ್ಯಾಂಟ್, ಶೂ ಮತ್ತು ಕ್ಯಾಪ್ ಧರಿಸಿದ್ದರು. ಮುದ್ರಿತ ಟಿ-ಶರ್ಟ್, ಡೆನಿಮ್ಸ್ ಮತ್ತು ಸ್ನೀಕರ್ಸ್‌ನಲ್ಲಿ ಮೆಹಜಬೀನ್ ಕಾಣಿಸಿಕೊಂಡಿದ್ದಾರೆ. ಮುನಾವರ್ ಅವರ ಪತ್ನಿಗೂ ಪೋಟೊವನ್ನು ಟ್ಯಾಗ್ ಮಾಡಿದ್ದಾರೆ.

ಇದನ್ನೂ ಓದಿ: Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ಇದೀಗ ಈ ಫೋಟೊಗೆ ಮುನಾವರ್‌ ಫ್ಯಾನ್ಸ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ʻಕೊನೆಯ ಫೋಟೋ ನಮ್ಮ ಹೃದಯ ಕದ್ದಿದೆʼʼಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಇನ್ನೊಬ್ಬರು ʻʻನಿಮ್ಮಿಬ್ಬರ ಮುಂದಿನ ಜೀವನಕ್ಕಾಗಿ ದೇವರು ಆಶೀರ್ವದಿಸಲಿʼʼಎಂದು ಕಮೆಂಟ್‌ ಮಾಡಿದ್ದಾರೆ.

ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ

ಮೆಹಜಬೀನ್ ಮೇಕಪ್ ಕಲಾವಿದೆ. ಆರ್ ಮಾಧವನ್, ವರುಣ್ ಧವನ್, ಯುಜ್ವೇಂದ್ರ ಚಾಹಲ್ ನಂತಹ ನಟರುಗಳ ಪತ್ನಿಯರಿಗೆ, ನೃತ್ಯಗಾರ್ತಿ ಧನಶ್ರೀ ವರ್ಮಾ ಅವರಂತಹ ಅನೇಕ ಗಣ್ಯ ವ್ಯಕ್ಯಿಗಳಿಗೆ ಮೇಕಪ್‌ ಮಾಡಿದ್ದಾರೆ. ಸಾಕಷು ಫ್ಯಾನ್ಸ್‌ ಫಾಲೋವರ್ಸ್‌ ಕೂಡ ಹೊಂದಿದ್ದಾರೆ. ವರದಿಯ ಪ್ರಕಾರ, ಮುನಾವರ್‌ನಂತೆ, ಮೆಹಜಬೀನ್ ಅವರಿಗೆ ಕೂಡ ಇದು ಎರಡನೇ ಮದುವೆ. ಮುನಾವರ್ ಅವರಿಗೆ ಈಗಾಗಲೇ ಒಬ್ಬ ಮಗನೂ ಇದ್ದಾನೆ. ಮೊದಲ ಹೆಂಡತಿ ಜತೆ ವಿಚ್ಛೇದನ ಕೂಡ ಪಡೆದುಕೊಂಡಿದ್ದಾರೆ ಮುನಾವರ್‌.

ಇನ್ನು ಮೇಕಪ್ ಕಲಾವಿದೆ ಮೆಹಜಬೀನ್ ಕೋಟ್ವಾಲಾ ಕೂಡ ಸಿಂಗಲ್‌ ಪೇರೆಂಟ್‌ ಎಂದು ವರದಿಯಾಗಿದೆ. ಮೆಹಜಬೀನ್‌ಗೆ ಈಗಾಗಲೇ 10 ವರ್ಷದ ಮಗಳಿದ್ದಾಳೆ ಎಂದು ವರದಿಯಾಗಿದೆ. ಮೆಹಜಬೀನ್ ಕೋಟ್ವಾಲಾ ಆಗಗಾಗ ಮಗಳ ಜತೆ ಇರುವ ಫೋಟೊವನ್ನು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಳ್ಳುತ್ತಿರುತ್ತಾರೆ. ಮೆಹಜಬೀನ್ ಕೋಟ್ವಾಲಾ ಕೂಡ ಮೊದಲ ಗಂಡನಿಂದ ಡಿವೋರ್ಸ್‌ ಪಡೆದುಕೊಂಡಿದ್ದಾರೆ.

ಮುನಾವರ್‌ 2017ರಲ್ಲಿ ಜಾಸ್ಮಿನ್‌ ಎಂಬುವರನ್ನು ಮುನಾವರ್‌ ವಿವಾಹವಾಗಿದ್ದರು. ವಿಚ್ಛೇದನ ಬಳಿಕ ಮಗನನ್ನು ಇವರೇ ನೋಡಿಕೊಳ್ಳುತ್ತಿದ್ದಾರೆ. ಇದಾದ ಬಳಿಕ ಮುನಾವರ್‌ ನಾಜಿಲ್‌ ಸಿತೈಶಿ ಎಂಬುವರ ಜತೆ ಡೇಟಿಂಗ್‌ ನಡೆಸುತ್ತಿದ್ದರು. ಮುನಾವರ್‌ ಅವರು ಸಾಕಷ್ಟು ವಿವಾದಾತ್ಮಕ ಸುದ್ದಿಗಳಿಗೆ ಹೆಸರುವಾಸಿ. ಮುಂಬೈ ಬಂದರು ಪ್ರದೇಶದ ಹುಕ್ಕಾ ಬಾರ್‌ನಲ್ಲಿ ಪೊಲೀಸರು ಮಾ.26ರ ಮಂಗಳವಾರ ದಾಳಿ ನಡೆಸಿದ್ದರು. ಬಿಗ್ ಬಾಸ್ 17ರ ವಿಜೇತ ಮುನಾವರ್ ಫಾರೂಕಿ (Munawar Faruqui) ಸೇರಿದಂತೆ ಕೆಲವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಮೂಲಕ ಹೊರಗೆ ಬಂದಿದ್ದರು ಮುನಾವರ್.

Continue Reading

ಸ್ಯಾಂಡಲ್ ವುಡ್

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

Actor Darshan: ಹುಬ್ಬಳ್ಳಿಯಿಂದ ಅಜ್ಜಿ ರಾಜೇಶ್ವರಿ ದರ್ಶನ್‌ ನೋಡಲು ಬಂದಿದ್ದಾರೆ. ತುಂಬಾ ದೂರದಿಂದ ಬಂದಿದ್ದೇನೆ ನನ್ನನ್ನು ಭೇಟಿಯಾಗಲು ಬಿಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾರೆ. ʻಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ಕೆಲ ಅಭಿಮಾನಿಗಳು ಬಂದಿದ್ದರು. ಇದೀಗ ಪರಪ್ಪನ ಅಗ್ರಹಾರ ಜೈಲು ಬಳಿ ದರ್ಶನ್‌ ಭೇಟಿಗೆ ವಯೋವೃದ್ಧೆ ಬಂದಿದ್ದಾರೆ.

VISTARANEWS.COM


on

Actor Darshan grandmother came running distant town to see and not punish him
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ (Actor Darshan ) ತೂಗುದೀಪ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತಿದ್ದಾರೆ. ಹಲವು ಅಭಿಮಾನಿಗಳು ದರ್ಶನ್​ರನ್ನು ಭೇಟಿಯಾಗಲು ಪ್ರತಿನಿತ್ಯ ಜೈಲಿನ ಬಳಿ ಬರುತ್ತಿದ್ದಾರೆ. ಆದರೆ ಪೊಲೀಸರು ಯಾರಿಗೂ ಅವಕಾಶ ನೀಡುತ್ತಿಲ್ಲ. ಕೇವಲ ಕುಟುಂಬ ಸದಸ್ಯರಿಗೆ ಹಾಗೂ ವಕೀಲರಿಗಷ್ಟೆ ಅವಕಾಶ ನೀಡಲಾಗಿದೆ. ಭಾನುವಾರ ರಜೆ ಹಿನ್ನೆಲೆಯಲ್ಲಿ ಯಾರಿಗೂ ಭೇಟಿಯಾಗುವ ಅವಕಾಶ ಇರುವುದಿಲ್ಲ. ಹೀಗಿದ್ದರೂ ಕೆಲ ಅಭಿಮಾನಿಗಳು ಬಂದಿದ್ದರು. ಇದೀಗ ಪರಪ್ಪನ ಅಗ್ರಹಾರ ಜೈಲು ಬಳಿ ದರ್ಶನ್‌ ಭೇಟಿಗೆ ವಯೋವೃದ್ಧೆ ಬಂದಿದ್ದಾರೆ.

ಹುಬ್ಬಳ್ಳಿಯಿಂದ ಅಜ್ಜಿ ರಾಜೇಶ್ವರಿ ಅವರು ದರ್ಶನ್‌ ನೋಡಲು ಬಂದಿದ್ದಾರೆ. ತುಂಬಾ ದೂರದಿಂದ ಬಂದಿದ್ದೇನೆ ನನ್ನನ್ನು ಭೇಟಿಯಾಗಲು ಬಿಡಿ ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾರೆ. ʻಎರಡು ಬಾರಿ ದರ್ಶನ್ ಅವರನ್ನು ನಾನು ಭೇಟಿ ಆಗಿದ್ದೇನೆ. ಅವನು ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ. ಎಲ್ಲರೂ ತಪ್ಪು ಮಾಡುತ್ತಾರೆ ಅವನು ಸಹ ಮಾಡಿದ್ದಾನೆ. ನಾನು ದೂರದಿಂದ ಬಸ್ಸಿನಲ್ಲಿ ಬಂದಿದ್ದೇನೆ ಎಂದು ಗೋಗೆರೆದಿದ್ದಾರೆ.

ನಿನ್ನೆ ಕೂಡ ಭಾನುವಾರ ಆದ ಕಾರಣ ದರ್ಶನ್‌ ಭೇಟಿಗೆ ಯಾರಿಗೂ ಅವಕಾಶ ಇರಲಿಲ್ಲ. ಆದರೂ ನಟ ದರ್ಶನ್ ಭೇಟಿಗೆ ವಿಶೇಷ ಚೇತನ ಆಗಮಿಸಿದ್ದರು, ದಾಸಪ್ಪ ವೃತ್ತಿ ಮಾಡುವ ವಿಶೇಷ ಚೇತನ ಅಭಿಮಾನಿ, ಕಿವಿ ಕೇಳಿಸದಿದ್ದರು ಶಂಖ ಊದುತ್ತಾ, ಜಾಗಟೆ ಬಾರಿಸುತ್ತ ಜೈಲಿನ ಬಳಿ ಬಂದಿದ್ದರು. ತುರುವೆಕೆರೆಯ ಜಡಿಯೊ ಗ್ರಾಮದ ವಿಶೇಷ ಚೇತನ ಅಭಿಮಾನಿಯಾಗಿದ್ದರು ʻʻನಟ ದರ್ಶನ್ ಒಳ್ಳೆಯ ವ್ಯಕ್ತಿ. ಅಂತಹವರನ್ನು ಜೈಲಿನಲ್ಲಿಟ್ಟರೆ ಸಿನಿ ಕಾರ್ಮಿಕರು, ನಿರ್ಮಾಪಕರಿಗೆ ತೊಂದರೆ. ಅವ್ರು ತಪ್ಪು ಮಾಡಿರಬಹುದು. ಆದರೆ ನಟ ದರ್ಶನ್ ಸಾಕಷ್ಟು ಸಮಾಜಸೇವೆ ಮಾಡಿದ್ದಾರೆ ಮಾನವೀಯತೆ ದೃಷ್ಟಿಯಿಂದ ಬಿಡುಗಡೆ ಮಾಡಬೇಕು. ದರ್ಶನ್ ಬಿಡುಗಡೆಗಾಗಿ ಗೃಹ ಮಂತ್ರಿ ಜಿ ಪರಮೇಶ್ವರ ಭೇಟಿಗೆ ಹೋಗಿದ್ದೆ. ಆದರೆ ಅವರು ಸಿಗಲಿಲ್ಲʼʼ ಎಂದು ವಿಶೇಷ ಚೇತನ ಅಭಿಮಾನಿ ಗೋವಿಂದ ರಾಜು ಹೇಳಿಕೆ ನೀಡಿದ್ದರು.

ಇದನ್ನೂ ಓದಿ; Actor Darshan: ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ; ಖಾಸಗಿ ಕಾರಿನಲ್ಲಿ ಕರೆದೊಯ್ದ ಪೊಲೀಸ್ ಸಿಬ್ಬಂದಿ

ರೇಣುಕಾ ಸ್ವಾಮಿ ಕೊಲೆ (Renuka Swamy Murder) ಪ್ರಕರಣದಲ್ಲಿ ಬಂಧಿಯಾಗಿರುವ ನಟ ದರ್ಶನ್‌ (Actor Darshan) ಸೆರೆವಾಸ ಇಂದು ಹತ್ತನೇ ದಿನಕ್ಕೆ ಕಾಲಿಟ್ಟಿದೆ. ಇಷ್ಟು ದಿನವೂ ದರ್ಶನ್‌ ಅವರ ಅಮ್ಮ ಹಾಗೂ ತಮ್ಮ ಮಗನ ಭೇಟಿಗೆ ಸೆರೆಮನೆಯತ್ತ ಕಾಲಿಟ್ಟಿರಲಿಲ್ಲ. ಇದೀಗ ದರ್ಶನ್‌ ತಾಯಿ, ತಮ್ಮ, ಪತ್ನಿ , ಮಗ ಭೇಟಿ ಮಾಡಿದ್ದಾರೆ. ಆದರೀಗ ಖಾಸಗಿ ವಾಹನದಲ್ಲಿಯೇ ನಟ ದರ್ಶನ್ ಕುಟುಂಬ ಜೈಲಿಗೆ ಎಂಟ್ರಿ ಕೊಟ್ಟಿರುವುದು ತಿಳಿದು ಬಂದಿದೆ. ಹೀಗಾಗಿ ಸಾಮಾನ್ಯರಿಗೊಂದು ಕಾನೂನು ನಟ ದರ್ಶನ್ ಕುಟುಂಬಕ್ಕೆ ಒಂದು ಕಾನೂನು ಎನ್ನುವಂತಾಗಿದೆ

Continue Reading

ಸ್ಯಾಂಡಲ್ ವುಡ್

Golden Star Ganesh Birthday:  ಈ ವರ್ಷವೂ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ ಗೋಲ್ಡನ್ ಸ್ಟಾರ್ ಗಣೇಶ್

Golden Star Ganesh Birthday:  ಗೋಲ್ಡನ್‌ ಸ್ಟಾರ್‌ ಗಣೇಶ್‌ ಮೂಲ ಹೆಸರು ಗಣೇಶ್‌ ಕಿಶಾನ್‌. ಇವರು ನಟ, ನಿರ್ದೇಶಕ, ನಿಮಾಪಕ ಮತ್ತು ಟಿವಿ ನಿರೂಪಕರಾಗಿ ಜನಪ್ರಿಯತೆ ಪಡೆದಿದ್ದಾರೆ. ಫಿಲ್ಮ್‌ ಫೇರ್‌ ಅವಾರ್ಡ್‌ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ಕೂಡ ತಮ್ಮ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

VISTARANEWS.COM


on

Golden Star Ganesh Birthday Not Celebrating His Birthday This Year
Koo

ಬೆಂಗಳೂರು: ಈ ಬಾರಿ ಗೋಲ್ಡನ್ ಸ್ಟಾರ್ ಗಣೇಶ್ ಕೂಡ ತಮ್ಮ ಬರ್ತ್​ಡೇ ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.2019ರಲ್ಲಿ ನಟ ಗಣೇಶ್‌ ಅವರು ತನ್ನ 41ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಕೆಲವು ವಾರಗಳ ಹಿಂದೆ ತಂದೆ ಅಗಲಿದ ಕಾರಣ ಹುಟ್ಟುಹಬ್ಬ ಕ್ಯಾನ್ಸಲ್‌ ಮಾಡಿಕೊಂಡಿದ್ದರು. 2021ರಲ್ಲೂ ಕೊರೊನಾದಿಂದ (Golden Star Ganesh Birthday) ಜಗತ್ತು ನೋವಿನಲ್ಲಿರುವ ಕಾರಣದಿಂದ ಹುಟ್ಟುಹಬ್ಬ ಆಚರಿಸಿಕೊಂಡಿರಲಿಲ್ಲ. ಇದೀಗ ಗಣೇಶ್‌ ಅವರು ʻʻನನ್ನ ಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯನಿಲ್ಲ.ಆದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ” ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಗಣೇಶ್‌ ಪೋಸ್ಟ್‌ನಲ್ಲಿ ʻʻಆತ್ಮೀಯ ಅಭಿಮಾನಿಗಳೇ, ಜುಲೈ 2ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯವಿಲ್ಲ. ಅದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತ್ತಿಲ್ಲ. ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ ತಾವು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವದಿಸಿ. ಮುಂದಿನ ವರ್ಷ ಖಂಡಿತ ಒಟ್ಟಿಗೆ ಹುಟ್ಟುಹಬ್ಬ ಆಚರಿಸೋಣ. ಅನಾನುಕೂಲಕ್ಕೆ ಕ್ಷಮೆಯಿರಲಿ. ಎಂದಿನ ತಮ್ಮ ಅಭಿಮಾನದ ನಿರೀಕ್ಷೆಯೊಂದಿಗೆ, ನಿಮ್ಮವ ಗಣೇಶ’ ಎಂದು ಬರೆದುಕೊಂಡಿದ್ದಾರೆ.

ಗೋಲ್ಡನ್‌ ಸ್ಟಾರ್‌ ಗಣೇಶ್‌ ಮೂಲ ಹೆಸರು ಗಣೇಶ್‌ ಕಿಶಾನ್‌. ಇವರು ನಟ, ನಿರ್ದೇಶಕ, ನಿಮಾಪಕ ಮತ್ತು ಟಿವಿ ನಿರೂಪಕರಾಗಿ ಜನಪ್ರಿಯತೆ ಪಡೆದಿದ್ದಾರೆ. ಫಿಲ್ಮ್‌ ಫೇರ್‌ ಅವಾರ್ಡ್‌ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: Samarjit Lankesh: ಇಂದ್ರಜಿತ್ ಲಂಕೇಶ್ ಪುತ್ರ ಸಮರ್ಜಿತ್ ಅಭಿನಯದ `ಗೌರಿ’ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಸಿನಿಮಾವು ಇದೇ ಆಗಸ್ಟ್‌ 15ರಂದು ಬಿಡುಗಡೆಯಾಗಲಿದೆ.

2006ರ ಮುಂಗಾರು ಮಳೆ ಸಿನಿಮಾದ ಮೂಲಕ ಗಣೇಶ್‌ ಜನಪ್ರಿಯತೆ ಪಡೆದರು. ಸ್ಯಾಂಡಲ್‌ವುಡ್‌ನಲ್ಲಿ ದಾಖಲೆ ನಿರ್ಮಿಸಿದ ಸಿನಿಮಾವದು.

Continue Reading
Advertisement
DCM Post
ಕರ್ನಾಟಕ5 mins ago

DCM Post: ಒನ್ ಮ್ಯಾನ್ ಒನ್ ಪೋಸ್ಟ್ ಕೂಗಿಗೆ ಡಿಕೆಶಿ ಡೋಂಟ್ ಕೇರ್‌; ಕೇಡರ್ ಬೇಸ್ ಪಾರ್ಟಿ ಕಟ್ಟಲು ಪಣ!

Sheikh Abdul Rashid
ದೇಶ7 mins ago

Sheikh Abdul Rashid: ಸೆರೆಮನೆಯಿಂದ ನೇರ ಸಂಸತ್‌ಗೆ ಎಂಟ್ರಿ! ಜೈಲಿನಿಂದಲೇ ಸ್ಪರ್ಧಿಸಿ ಗೆದ್ದ ಸಂಸದನ ಪ್ರಮಾಣವಚನಕ್ಕೆ NIA ಅಸ್ತು

karnataka Weather Forecast
ಮಳೆ11 mins ago

Karnataka Rain :‌ ಮುಂದುವರಿದ ಮಳೆ ಅಬ್ಬರ; ಸಿಡಿಲು ಬಡಿದು ಹೊತ್ತಿ ಉರಿದ ಮನೆ, ಸೇತುವೆ ಮುಳುಗಡೆ

reels obsession
ಕ್ರೈಂ16 mins ago

Reels Obsession: ಎಕೆ 47, ಬಾಡಿಗಾರ್ಡ್ಸ್‌, ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡಿದವನು ಜೈಲುಪಾಲು!

Parliament Sessions
ದೇಶ18 mins ago

Parliament Sessions: ಲೋಕಸಭೆಯಲ್ಲಿ ನೀಟ್‌ ವಿವಾದ ಚರ್ಚೆಗೆ ಆಗ್ರಹಿಸಿ ಸಭಾತ್ಯಾಗ ಮಾಡಿದ ಪ್ರತಿಪಕ್ಷ

Darshan support by Adviti Shetty Block the bad commenter
ಸ್ಯಾಂಡಲ್ ವುಡ್26 mins ago

Actor Darshan: ಕೆಟ್ಟ ಕಮೆಂಟ್‌ ಮಾಡೋರನ್ನ ಬ್ಲಾಕ್‌ ಮಾಡಿ, ದರ್ಶನ್‌ ನಿರಪರಾಧಿ ಆಗಿ ಹೊರ ಬರಲಿ ಎಂದ ಅದ್ವಿತಿ ಶೆಟ್ಟಿ

Inspirational Story
ಬೆಂಗಳೂರು42 mins ago

Inspirational Story: ಕಣ್ಣೆದುರೆ ಸುಟ್ಟು ಕರಕಲಾದ ಮಗಳ ದುರಂತ ಅಂತ್ಯ; ಬಡಮಕ್ಕಳಿಗೆ ದಾರಿದೀಪವಾದ ಎಎಸ್‌ಐ

Doctor's Day
ದೇಶ1 hour ago

Doctor’s Day: ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ವೃದ್ಧಿಗೆ ಕ್ರಮ; ಪ್ರಧಾನಿ ಮೋದಿ ಭರವಸೆ

Munawar Faruqui shares first pic with new wife
ಬಾಲಿವುಡ್1 hour ago

Munawar Faruqui: ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ!

Lok sabha Election 2024 DV Sadananda Gowda
ಪ್ರಮುಖ ಸುದ್ದಿ1 hour ago

DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ20 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌