ʼದಲಿತ ವಿರೋಧಿ ಕಾಂಗ್ರೆಸ್‌ʼ: ಅಂಬೇಡ್ಕರ್‌ ಮಹಾಪರಿನಿರ್ವಾಣ ದಿನದಂದು ದಾಳಿ ನಡೆಸಿದ ಬಿಜೆಪಿ - Vistara News

ಬೆಂಗಳೂರು

ʼದಲಿತ ವಿರೋಧಿ ಕಾಂಗ್ರೆಸ್‌ʼ: ಅಂಬೇಡ್ಕರ್‌ ಮಹಾಪರಿನಿರ್ವಾಣ ದಿನದಂದು ದಾಳಿ ನಡೆಸಿದ ಬಿಜೆಪಿ

ದಲಿತ ಮತಗಳನ್ನು ಪಡೆದುಕೊಳ್ಳಲು ಇತ್ತೀಚೆಗಷ್ಟೆ ಎಸ್‌ಸಿಎಸ್‌ಟಿ ಮೀಸಲಾತಿ ಪ್ರಮಾಣ ಹೆಚ್ಚಳ, ಒಬಿಸಿ ಸಮಾವೇಶಗಳನ್ನು ನಡೆಸಿರುವ ಬಿಜೆಪಿ, ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದೆ.

VISTARANEWS.COM


on

bjp-blames-congress-on-ambedkar-parinirvana-day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ಮಹಾಪರಿನಿರ್ವಾಣ ದಿನದಂದು ಕಾಂಗ್ರೆಸ್‌ ನಾಯಕರು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದರೆ ಇತ್ತ ಕಾಂಗ್ರೆಸ್‌ ವಿರುದ್ಧವೇ ಬಿಜೆಪಿ ದಾಳಿ ನಡೆಸಿದೆ. ದಲಿತ ವಿರೋಧಿ ಕಾಂಗ್ರೆಸ್‌ ಎಂದು ಫೇಸ್‌ಬುಕ್‌ ಹಾಗೂ ಟ್ವಿಟರ್‌ನಲ್ಲಿ ಬರಹವನ್ನು ರಾಜ್ಯ ಬಿಜೆಪಿ ಪ್ರಕಟಿಸಿದೆ.

ದಲಿತ ಮತಗಳನ್ನು ತನ್ನತ್ತ ಸೆಳೆಯಲು ಎಲ್ಲ ಕಸರತ್ತನ್ನೂ ಮಾಡುತ್ತಿರುವ ಬಿಜೆಪಿ, ಕಾಂಗ್ರೆಸ್‌ ಪಕ್ಷವೇ ಅಂಬೇಡ್ಕರ್‌ ಅವರಿಗೆ ಅನ್ಯಾಯ ಮಾಡಿದ್ದು ಎಂಬುದಾಗಿ ಪ್ರಕಟಣೆ ಹೊರಡಿಸಿದೆ.

ಬಾಬಾ ಸಾಹೇಬರಿಗೆ ಕಾಂಗ್ರೆಸ್ ಮಾಡಿದ ಅನ್ಯಾಯದ ಇತಿಹಾಸ ಎಂದು ಹೇಳಿರುವ ಬಿಜೆಪಿ, ಅಂಬೇಡ್ಕರ್‌ ಅವರನ್ನು ಚುನಾವಣೆಗಳಲ್ಲಿ ಸೋಲಿಸಿದರು, ಅಂಬೇಡ್ಕರ್‌ ಅಂತ್ಯಸಂಸ್ಕಾರಕ್ಕೆ ಭೂಮಿ ನೀಡಲು ನಿರಾಕರಿಸಿದರು, ಅಂಬೇಡ್ಕರ್‌ ಅವರನ್ನು ಬಿಟ್ಟು, ತಮಗೆ ತಾವೇ ಭಾರತ ರತ್ನ ಘೋಷಿಸಿಕೊಂಡರು, ತುರ್ತುಪರಿಸ್ಥಿತಿ ಹೇರಿ ಸಂವಿಧಾನದ ಆಶಯಕ್ಕೆ ಕೊಳ್ಳಿ ಇಟ್ಟರು ಎಂದು ತಿಳಿಸಿದೆ.

ಮುಂಬಯಿ ನಾರ್ಥ್ ಸೆಂಟ್ರಲ್‌ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಅಂಬೇಡ್ಕರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿ, ಕುತಂತ್ರದಿಂದ ಸೋಲಿಸಿದ್ದು ಇದೇ ಕಾಂಗ್ರೆಸ್. ‌ಆದರೆ ಈಗ ತನ್ನ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಅದೇ‌ ಅಂಬೇಡ್ಕರ್ ಹೆಸರು ಬಳಸಿಕೊಳ್ಳುತ್ತಿದೆ.

ಕಾಂಗ್ರೆಸ್ ಸಂವಿಧಾನ ವಿರೋಧಿ ಎಂಬ ಕಾರಣಕ್ಕೇ ಅಂಬೇಡ್ಕರ್ ಕಾಂಗ್ರೆಸ್‌ನ್ನು‌ ತ್ಯಜಿಸಿದ್ದು. “ಕಾಂಗ್ರೆಸ್‌ ಸೇರುವುದೆಂದರೆ, ಅದು ಆತ್ಮಹತ್ಯೆ ಮಾಡಿಕೊಂಡಂತೆ” ಎಂಬ ಅಂಬೇಡ್ಕರ್ ಮಾತು ಇಲ್ಲಿ ಉಲ್ಲೇಖಾರ್ಹ. ನಮ್ಮನ್ನೇ ಬಿಟ್ಟ ನಿಮಗೆ ಸೋಲೇ ಖಚಿತ ಎಂದು ಸಂವಿಧಾನ ಶಿಲ್ಪಿಯ ವಿರುದ್ಧ ಕಾಂಗ್ರೆಸ್ ಕುತಂತ್ರ ಮಾಡಿತ್ತು.

ನೆಹರೂ ಸಮಾಧಿಗೆ 52 ಎಕರೆಗೂ ಹೆಚ್ಚು ಜಾಗ ಕೊಟ್ಟ ಕಾಂಗ್ರೆಸ್‌ಗೆ ಡಾ. ಅಂಬೇಡ್ಕರ್ ಅವರ ಶವಸಂಸ್ಕಾರಕ್ಕೂ 6 ಅಡಿ ಜಾಗವನ್ನು ದೆಹಲಿಯಲ್ಲಿ ಬೇಕಂತಲೇ ಕೊಡಲಿಲ್ಲ. ದೇಶದ ಬಡವರಿಗೆ ಬದುಕುವ ಹಕ್ಕು ಕೊಟ್ಟ ಅಂಬೇಡ್ಕರರಿಗೆ ಕಾಂಗ್ರೆಸ್ ಅಂತಿಮ ಸಂಸ್ಕಾರವನ್ನು ಗೌರವದಿಂದ ನಡೆಸಲೂ ಬಿಡದೆ ಅವಮಾನಿಸಿದ್ದನ್ನು ಜನ ಮರೆತಿಲ್ಲ.

ಸಂವಿಧಾನ ಶಿಲ್ಪಿ ಅಂಬೇಡ್ಕರರಿಗೆ ಭಾರತ ರತ್ನ ನೀಡಲು ಕಾಂಗ್ರೆಸ್‌ ಹಿಂದೆ ಮುಂದೆ ನೋಡಿತ್ತು, ಆದರೆ ಅದಾಗಲೇ ನೆಹರೂ, ಇಂದಿರಾ ಗಾಂಧಿ ತಮಗೆ ತಾವೇ ಭಾರತ ರತ್ನಕ್ಕೆ ಕೊರಳೊಡ್ಡಿದ್ದರು! ಇಂಥ ಸಮಯದಲ್ಲೂ ಸಂವಿಧಾನ ಕೊಟ್ಟವರ ನೆನಪೂ ಆಗದ ಕಾಂಗ್ರೆಸ್‌ಗೆ ಈಗ ಅಂಬೇಡ್ಕರ್ ಜಪ ಕೇವಲ ಆಷಾಡಭೂತಿತನ ಅಷ್ಟೇ.

ಅಂಬೇಡ್ಕರ್ ಕರ್ನಾಟಕದಲ್ಲಿ ಭೇಟಿ ನೀಡಿದ 10 ಪ್ರಮುಖ ಸ್ಥಳಗಳ ಅಭಿವೃದ್ಧಿಗೆ 70 ವರ್ಷಗಳಲ್ಲಿ ಕಾಂಗ್ರೆಸ್ ಮುಂದಾಗಲಿಲ್ಲ, ಬಿಜೆಪಿ ಬರಬೇಕಾಯಿತು‌. ಅತೀ ಹೆಚ್ಚು ದಲಿತರ ಗೆಲ್ಲಿಸಿ ಕೇಂದ್ರ ಸಂಪುಟದಲ್ಲಿರಿಸಿದ್ದು ಬಿಜೆಪಿ. 70 ವರ್ಷ ದಲಿತರ ಮೀಸಲು ಹೆಚ್ಚಳ ಮಾಡಲಿಲ್ಲ, ಬಿಜೆಪಿಯೇ ಬಂದು ಮೀಸಲು ಕೊಡಬೇಕಾಯ್ತು.

ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರ ವಿಧಿ ತೆಗೆಯಬೇಕು ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಅಂದೇ ಹೇಳಿದ್ದರು. ಆದರೆ ಕಾಂಗ್ರೆಸ್ ಪಕ್ಷ ಅವರ ಆಶಯವನ್ನು ಗೌರವಿಸದೇ ಆರ್ಟಿಕಲ್ 370 ರ ವಿಧಿಯನ್ನು 70 ವರ್ಷ ಮುಂದುವರಿಸಿದರು. ಬಾಬಾ ಸಾಹೇಬರ ಆ ಆಶಯವನ್ನು ನನಸು ಮಾಡಿದ್ದು ಮೋದಿ ಸರ್ಕಾರ.

ಮೋದಿ‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರರಿಗೆ ಸಂಬಂಧಿಸಿದ ಪ್ರಮುಖ 5 ಸ್ಥಳಗಳನ್ನು ಪಂಚತೀರ್ಥ ಎಂಬ ಹೆಸರಿನಲ್ಲಿ ಅಭಿವೃದ್ಧಿ ಮಾಡಿದೆ. ಅರ್ಥಪೂರ್ಣವಾದ ಸಂವಿಧಾನ ದಿನಾಚರಣೆ ಜಾರಿಗೆ ತಂದಿದೆ ಎಂದು ಬಿಜೆಪಿ ಹೇಳಿದೆ.

ಇದನ್ನೂ ಓದಿ | ಅಂಬೇಡ್ಕರ್​ ಮಹಾ ಪರಿನಿರ್ವಾಣ ದಿನ; ಸಂಸತ್​ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಪ್ರಧಾನಿ ಮೋದಿ ಪುಷ್ಪ ನಮನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Physical Abuse : ಆರೋಪಿ ದೇವರಾಜ್​ ಲಗ್ಗೆರೆ ನಿವಾಸಿಯಾಗಿದ್ದು, 2021ರಲ್ಲಿ ಬಾಲಕಿಯನ್ನ ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ಆತನ ವಿರುದ್ಧ ವಿರುದ್ಧ ಫೊಕ್ಸೊ ಕಾಯ್ದೆಯಡಿ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.. ಅಂದಿನ ಇನ್ ಸ್ಪೆಕ್ಟರ್ ವೆಂಕಟೇಗೌಡ ಅವರು ಆರೋಪಿಯನ್ನ ಬಂಧಿಸಿದ್ದರು.

VISTARANEWS.COM


on

Physical Abuse
Koo

ಬೆಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಅಪರಾಧಿಯೊಬ್ಬನಿಗೆ 20 ವರ್ಷಗಳ ಕಾಲ ಕಠಿಣ ಜೈಲುಶಿಕ್ಷೆ ಹಾಗೂ ಒಂದು ಲಕ್ಷ ದಂಡ ವಿಧಿಸಿದ 1ನೇ ತ್ವರಿತಗತಿ ನ್ಯಾಯಾಲಯ ಆದೇಶಿಸಿದೆ. ದೇವರಾಜ್ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ.

ಆರೋಪಿ ದೇವರಾಜ್​ ಲಗ್ಗೆರೆ ನಿವಾಸಿಯಾಗಿದ್ದು, 2021ರಲ್ಲಿ ಬಾಲಕಿಯನ್ನ ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯವೆಸಗಿದ್ದ. ಆತನ ವಿರುದ್ಧ ವಿರುದ್ಧ ಫೊಕ್ಸೊ ಕಾಯ್ದೆಯಡಿ ನಂದಿನಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.. ಅಂದಿನ ಇನ್ ಸ್ಪೆಕ್ಟರ್ ವೆಂಕಟೇಗೌಡ ಅವರು ಆರೋಪಿಯನ್ನ ಬಂಧಿಸಿದ್ದರು. ಬಳಿಕ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಆರೋಪಿ ಕೃತ್ಯವೆಸಗಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಯನ್ನ ದೋಷಿ ನ್ಯಾಯಾಲಯ ಪರಿಗಣಿಸಿದೆ.

ಇದನ್ನೂ ಓದಿ ;Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ನೇಮಕ

ಆರೋಪಿ ದೇವರಾಜ್​​ ಬಾಲಕಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದ. ಅದೇ ದಿನವೇ ಬಾಲಕಿಗೆ ಜ್ವರ ಬಂದಿದ್ದರಿಂದ ಪೋಷಕರು ಆಸ್ಪತ್ರೆಗೆ ಕರೆದೊಯ್ದಿದ್ದರು. ತಪಾಸಣೆ ನಡೆಸಿದ ವೈದ್ಯರು ಬಾಲಕಿಯ ಗುಪ್ತಾಂಗಕ್ಕೆ ಬಲವಾದ ಏಟಾಗಿದೆ ಎಂದು ವರದಿ ನೀಡಿದ್ದರು. ಈ ಬಗ್ಗೆ ಪೋಷಕರು ಆಕೆಯನ್ನು ಪ್ರಶ್ನಿಸಿದಾಗ ಆರೋಪಿಯು ತನ್ನನ್ನು ಮನೆಗೆ ಕರೆದೊಯ್ದು ಕೃತ್ಯವೆಸಗಿರುವುದಾಗಿ ತಿಳಿಸಿದ್ದಳು.

ಈ ಸಂಬಂಧ ನಂದಿನಿಲೇಔಟ್ ಪೊಲೀಸರಿಗೆ ಪೋಷಕರು ದೂರು ನೀಡಿದ್ದರು. ಪೊಕ್ಸೊ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಪೊಲೀಸರು ಬಂಧಿಸಿದ್ದರು.

Continue Reading

ಪ್ರಮುಖ ಸುದ್ದಿ

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

Hemant Nimbalkar: ಹೇಮಂತ್ ಅವರು ಅಧಿಕಾರ ವಹಿಸಿಕೊಳ್ಳಲಿರುವ ಕಾರಣ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಅವರನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರಿಸಲಾಗಿದೆ.

VISTARANEWS.COM


on

Hemant Nimbalkar
Koo

ಬೆಂಗಳೂರು: ಐಪಿಎಸ್‌ ಅಧಿಕಾರಿ ಹೇಮಂತ್‌ ನಿಂಬಾಳ್ಕರ್‌ (Hemant Nimbalkar) ಅವರನ್ನು ಕರ್ನಾಟಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿ ಮರು ನಿಯೋಜನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಅವರು ಕಳೆದ ಮೂರು ತಿಂಗಳಿಂದ ಯಾವುದೇ ಹುದ್ದೆಯನ್ನು ಹೊಂದಿರಲಿಲ್ಲ. ಅವರ ಪತ್ನಿ ಅಂಜಲಿನಿಂಬಾಳ್ಕರ್​ ಚುನಾವಣೆಗೆ ಸ್ಪರ್ಧಿಸಿದ್ದ ಕಾರಣ ಈ ನಿಯೋಜನೆ ಮಾಡಲಾಗಿತ್ತು. ಇದೀಗ ಅವರಿಗೆ ಸ್ಥಾನ ನೀಡಲಾಗಿದೆ.

ಸರ್ಕಾರದ ಆದೇಶದ ಪ್ರತಿ ಇಲ್ಲಿದೆ

ಹೇಮಂತ್ ಅವರು ಅಧಿಕಾರ ವಹಿಸಿಕೊಳ್ಳಲಿರುವ ಕಾರಣ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಹಿರಿಯ ಐಎಎಸ್‌ ಅಧಿಕಾರಿ ವಿಕಾಸ್‌ ಕಿಶೋರ್‌ ಸುರಳ್ಕರ್‌ ಅವರನ್ನು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಆರೋಗ್ಯ ಶಾಖೆ ವಿಶೇಷ ಆಯುಕ್ತರನ್ನಾಗಿ ಮುಂದುವರಿಸಲಾಗಿದೆ.

ಇದನ್ನೂ ಓದಿ: Advocate G Devarajegowda: ಅತ್ಯಾಚಾರ ಕೇಸ್‌; ಜೈಲಿನಿಂದ ವಕೀಲ ದೇವರಾಜೇಗೌಡ ರಿಲೀಸ್‌

ಹೇಮಂತ್ ನಿಂಬಾಳ್ಕರ್ ಕಳೆದ ಒಂದು ವರ್ಷದಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಅವರನ್ನು ಪತ್ನಿ ಡಾ. ಅಂಜಲಿ ನಿಂಬಾಳ್ಕರ್‌ ಅವರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರಿಂದ ವರ್ಗ ಮಾಡಲಾಗಿತ್ತು. ಅವರಿಗೆ ಯಾವುದೇ ಹುದ್ದೆ ಸೂಚಿಸಿರದ ಕಾರಣ ಮೂರು ತಿಂಗಳಿನಿಂದ ಪೊಲೀಸ್‌ ಮಹಾನಿರ್ದೇಶಕರ ಕಚೇರಿಯಲ್ಲಿಯೇ ಇದ್ದರು. ಹೇಮಂತ್ ನಿಂಬಾಳ್ಕರ್‌ ಅವರು ಕಳೆದ ಜನವರಿಯಲ್ಲಿ ಬಡ್ತಿ ಹೊಂದಿದ್ದರು. ಅವರಿಗೆ ಐಜಿಪಿ ದರ್ಜೆಯಿಂದ ಎಡಿಜಿಪಿ ದರ್ಜೆಗೆ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶಿತ್ತು.

ಬಿಬಿಎಂಪಿ ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾಗಿದ್ದ ವಿಕಾಸ್ ಸುರಳ್ಕರ್​ಗೆ ಅವರನ್ನು ಆ ಹುದ್ದೆಯಲ್ಲಿ ಮುಂದುವರಿಸಲಾಗಿದೆ.

Continue Reading

ಬೆಂಗಳೂರು

Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

Bengaluru News: ಐಐಟಿ ಬಾಂಬೆಯ ಐಡಿಸಿ ಸ್ಕೂಲ್‌ ಆಫ್‌ ಡಿಸೈನ್‌ ಆಯೋಜಿಸಿದ್ದ ಡಿʼಸೋರ್ಸ್-ಡಿಐಸಿ, ಬಿಎಚ್‌ಯುಎಸ್‌ ಡಿಜಿ ಡಿಸೈನ್‌ ಚಾಲೆಂಜ್‌ನಲ್ಲಿ ಗೋಪಾಲನ್‌ ಆರ್ಕಿಟೆಕ್ಚರ್‌ ಮತ್ತು ಪ್ಲಾನಿಂಗ್‌ ವಿಭಾಗದ ವಿದ್ಯಾರ್ಥಿನಿ ಬೆಂಗಳೂರಿನ ವೈಷ್ಣವಿ ಎಂ. ವಿಜೇತರಾಗಿದ್ದಾರೆ.

VISTARANEWS.COM


on

bengaluru student Vaishnavi M who won the prestigious award from IIT Bombay
Koo

ಬೆಂಗಳೂರು: ಐಐಟಿ ಬಾಂಬೆಯ ಐಡಿಸಿ ಸ್ಕೂಲ್‌ ಆಫ್‌ ಡಿಸೈನ್‌ ಆಯೋಜಿಸಿದ್ದ ಡಿʼಸೋರ್ಸ್-ಡಿಐಸಿ, ಬಿಎಚ್‌ಯುಎಸ್‌ ಡಿಜಿ ಡಿಸೈನ್‌ ಚಾಲೆಂಜ್‌ನಲ್ಲಿ ಗೋಪಾಲನ್‌ ಆರ್ಕಿಟೆಕ್ಚರ್‌ ಮತ್ತು ಪ್ಲಾನಿಂಗ್‌ ವಿಭಾಗದ ವಿದ್ಯಾರ್ಥಿನಿ ಬೆಂಗಳೂರಿನ ವೈಷ್ಣವಿ ಎಂ. ವಿಜೇತರಾಗಿದ್ದಾರೆ.

ಸುಸ್ಥಿರ ಅಭಿವೃದ್ಧಿಯ ಗುರಿಯ ನಿಟ್ಟಿನಲ್ಲಿ ಕ್ರಿಯಾಶೀಲ ಹಾಗೂ ವಿನೂತನ ಪರಿಹಾರಗಳನ್ನು ನೀಡುವ ನಿಟ್ಟಿನಲ್ಲಿ ಡಿಡಿಎಸ್‌ಡಿಸಿ ಸ್ಪರ್ಧಿಗಳನ್ನು ಪ್ರೋತ್ಸಾಹಿಸುವ ಕಾರ್ಯ ಮಾಡುತ್ತಿದೆ.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಸ್ಪರ್ಧಿಗಳು ರಚನಾತ್ಮಕ ವಿನ್ಯಾಸ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುವುದರಿಂದ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳಲು, ವಿಶ್ಲೇಷಿಸಲು ಮತ್ತು ಅಂತಿಮವಾಗಿ ಕಲ್ಪನೆಯ ರೂಪಕೊಡಲು ನೆರವಾಗುತ್ತದೆ. ಶಬ್ದದ ತೀರ್ಪಿನ ಮೇಲೆ ಪರಿಹಾರಗಳನ್ನು ಖಾತರಿಪಡಿಸಿಕೊಳ್ಳುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ.

Continue Reading

ಕರ್ನಾಟಕ

Kannada New Movie: ಗೋಪಿನಾಥ ಬೆಟ್ಟದಲ್ಲಿ ನಡೆದ ಧರ್ಮ ಕೀರ್ತಿರಾಜ್ ಅಭಿನಯದ ʼಪ್ರೊಡಕ್ಷನ್ ನಂ 1ʼ ಚಿತ್ರದ ಮುಹೂರ್ತ

Kannada New Movie: ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ “ಪ್ರೊಡಕ್ಷನ್ ನಂ 1” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

VISTARANEWS.COM


on

Dharma Keerthiraj starrer production No 1 movie Muhurta
Koo

ಬೆಂಗಳೂರು: ಲಿತನ್ಯ ಗೋಲ್ಡ್ ಲೀಫ್ ಮೀಡಿಯಾ ವೆಂಚರ್ಸ್ ಪ್ರೈ.ಲಿ. ಹಾಗೂ ಸಾರ್ಥಕ್ ಕ್ರಿಯೇಟರ್ಸ್ ಲಾಂಛನದಲ್ಲಿ ಜಿ.ಎಚ್. ಜನಾರ್ದನ್ ಹಾಗೂ ಸಿ.ಎಲ್. ಹರ್ಷವರ್ಧನ್ ನಿರ್ಮಿಸುತ್ತಿರುವ ರಮೇಶ್ ರಾಜ್ ಅವರ ನಿರ್ದೇಶನದಲ್ಲಿ ಧರ್ಮ ಕೀರ್ತಿರಾಜ್ ನಾಯಕನಾಗಿ ನಟಿಸುತ್ತಿರುವ “ಪ್ರೊಡಕ್ಷನ್ ನಂ 1” ಚಿತ್ರದ (Kannada New Movie) ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

ಮಾಜಿ ಶಾಸಕ ಕೆ.ಪಿ.ಬಚ್ಚೇಗೌಡ, ಆರಂಭ ಫಲಕ ತೋರಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಎಂ. ಮುನೇಗೌಡ ಕ್ಯಾಮೆರಾ ಚಾಲನೆ ಮಾಡಿದರು.

ಇದನ್ನೂ ಓದಿ: Eshwar Khandre: ಚಾರಣಪಥಗಳ ಆನ್‌ಲೈನ್ ಟಿಕೆಟ್‌ಗೆ ಶೀಘ್ರ ಚಾಲನೆ; ಸಚಿವ ಈಶ್ವರ ಖಂಡ್ರೆ

ಆಕ್ಷನ್ ಡ್ರಾಮ ಜಾನರ್‌ನ ಈ ಚಿತ್ರಕ್ಕೆ ನಿರ್ದೇಶಕ ರಮೇಶ್ ರಾಜ್ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. “ಗ್ಯಾಂಗ್ ಲೀಡರ್”, ” ತವರಿನ ಋಣ” ಚಿತ್ರಗಳನ್ನು ನಿರ್ದೇಶಿಸಿರುವ ರಮೇಶ್ ರಾಜ್ ಅವರಿಗೆ ಇದು ಮೂರನೇ ಚಿತ್ರ.

ಈಶ್ವರಿ ಸುರೇಶ್ ಛಾಯಾಗ್ರಹಣ, ಶಶಿ ಸಂಕಲನ, ಬಿ.ವಿ. ರೆಡ್ಡಿ ಸಹ ನಿರ್ದೇಶನ ಹಾಗೂ ಮಂಜುನಾಥ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ವಂಟೂರು ಶ್ರೀನಿವಾಸ್ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಇದನ್ನೂ ಓದಿ: Yuva Sambhrama 2024: ಬೆಂಗಳೂರಿನಲ್ಲಿ ಜು.12ರಿಂದ 3 ದಿನ ಯುವ ಸಂಭ್ರಮ

ಧರ್ಮ ಕೀರ್ತಿರಾಜ್ ಅವರಿಗೆ ಪ್ರಿಯಾ ಹೆಗ್ಡೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗುತ್ತಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.

Continue Reading
Advertisement
Sudha Murty
ದೇಶ6 mins ago

Sudha Murty: ಕರ್ನಾಟಕ ಸೇರಿ ದೇಶದ ಪ್ರವಾಸೋದ್ಯಮಕ್ಕೆ ಒತ್ತು ನೀಡಿ; ರಾಜ್ಯಸಭೆಯಲ್ಲಿ ಸುಧಾಮೂರ್ತಿ ಮೊದಲ ಭಾಷಣ!

Physical Abuse
ಕರ್ನಾಟಕ39 mins ago

Physical Abuse : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

Mahua Moitra
ಪ್ರಮುಖ ಸುದ್ದಿ2 hours ago

Mahua Moitra: ಸುಮ್ನೆ ಕೂತ್ಕೊಳ್ಳಿ ರಾಹುಲ್‌ ಗಾಂಧಿ; ಸಂಸತ್ತಲ್ಲೇ ಮಹುವಾ ಮೊಯಿತ್ರಾ ಹೀಗೆ ಸಿಟ್ಟಾಗಿದ್ದೇಕೆ?

Viral Video
Latest2 hours ago

Viral Video: ಲೈವ್‌ ವರದಿ ಮಾಡುತ್ತಿದ್ದಾಗ ಪಾಕ್ ಟಿವಿ ವರದಿಗಾರ್ತಿ ಮೇಲೆ ಗೂಳಿ ದಾಳಿ!

Hemant Nimbalkar
ಪ್ರಮುಖ ಸುದ್ದಿ2 hours ago

Hemant Nimbalkar: ವಾರ್ತಾ ಇಲಾಖೆ ಆಯುಕ್ತರಾಗಿ ಐಪಿಎಸ್​ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಮರು ನೇಮಕ

Kolar News
ಕರ್ನಾಟಕ2 hours ago

Kolar News: ಕಾಲೇಜಿನ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ವಿದ್ಯಾರ್ಥಿನಿ; ಯುವಕನ ಬಂಧನ

Tamanna Bhatia
Latest2 hours ago

Tamanna Bhatia: ‘ಜೀ ಕರ್ದಾ’ದಲ್ಲಿ ತಮನ್ನಾ ಭಾಟಿಯಾ ಪೂರ್ತಿ ಟಾಪ್‌ಲೆಸ್‌! ವಿಡಿಯೊ ಇದೆ

bengaluru student Vaishnavi M who won the prestigious award from IIT Bombay
ಬೆಂಗಳೂರು2 hours ago

Bengaluru News: ಬೆಂಗಳೂರಿನ ವಿದ್ಯಾರ್ಥಿನಿಗೆ ಐಐಟಿ ಬಾಂಬೆಯ ಪ್ರತಿಷ್ಠಿತ ಪ್ರಶಸ್ತಿ

IPL 2025
ಪ್ರಮುಖ ಸುದ್ದಿ2 hours ago

IPL 2025 : ಐಪಿಎಲ್​ ತಂಡಗಳಲ್ಲಿ ಉಳಿಸಿಕೊಳ್ಳುವ ಆಟಗಾರರ ವಿಚಾರದಲ್ಲಿ ಫ್ರಾಂಚೈಸಿಗಳ ನಡುವೆ ಭಿನ್ನಾಭಿಪ್ರಾಯ

Dharma Keerthiraj starrer production No 1 movie Muhurta
ಕರ್ನಾಟಕ2 hours ago

Kannada New Movie: ಗೋಪಿನಾಥ ಬೆಟ್ಟದಲ್ಲಿ ನಡೆದ ಧರ್ಮ ಕೀರ್ತಿರಾಜ್ ಅಭಿನಯದ ʼಪ್ರೊಡಕ್ಷನ್ ನಂ 1ʼ ಚಿತ್ರದ ಮುಹೂರ್ತ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ4 hours ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ1 day ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ2 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು2 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ3 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ4 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ4 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ5 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ5 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌