ಮಹಿಳೆಯ ಪಕ್ಕೆಲುಬು ಮುರಿಯಲು ಕಾರಣ ಸ್ಪೈಸಿ ಫುಡ್​; ಕೆಮ್ಮುತ್ತಿದ್ದಾಗಲೇ ಎದೆ ಭಾಗದಿಂದ ಕೇಳಿತ್ತು ಶಬ್ದ! - Vistara News

ವೈರಲ್ ನ್ಯೂಸ್

ಮಹಿಳೆಯ ಪಕ್ಕೆಲುಬು ಮುರಿಯಲು ಕಾರಣ ಸ್ಪೈಸಿ ಫುಡ್​; ಕೆಮ್ಮುತ್ತಿದ್ದಾಗಲೇ ಎದೆ ಭಾಗದಿಂದ ಕೇಳಿತ್ತು ಶಬ್ದ!

ಹುವಾಂಗ್​ 57 ಕೆಜಿ ಇದ್ದರೂ, ಆಕೆಯ ಸೊಂಟಕ್ಕಿಂತ ಮೇಲ್ಭಾಗ ತುಂಬ ಸಪೂರ ಇದೆ. ಚರ್ಮದ ಕೆಳಗೆ ಮಾಂಸಖಂಡಗಳು ಇದ್ದು, ಅದರಡಿಯಲ್ಲಿ ಎಲುಬುಗಳು ಸಂರಕ್ಷಿಸಲ್ಪಡಬೇಕು. ಆದರೆ ಹುವಾಂಗ್​​ಗೆ ಮಾಂಸಖಂಡಗಳು ಬಲವಾಗಿ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

VISTARANEWS.COM


on

Woman fractured four ribs After Eat Spicy Food
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಿದ್ದಾಗ ಅಥವಾ ಇನ್ಯಾವುದೇ ರೀತಿಯ ಬಲವಾದ ಏಟುಗಳು ಬಿದ್ದಾಗ ಪಕ್ಕೆಲುಬು ಮುರಿತಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಆದರೆ ಚೀನಾದಲ್ಲಿ ಒಬ್ಬರು ಮಹಿಳೆ ಕೆಮ್ಮಿ-ಕೆಮ್ಮಿ ಎದೆ ಭಾಗದ 4 ಪಕ್ಕೆಲುಬು ಮುರಿದುಕೊಂಡಿದ್ದಾರೆ. ಅಂದಹಾಗೇ, ಈ ಪರಿಯ ಕೆಮ್ಮಿಗೆ ಕಾರಣವಾಗಿದ್ದು ಸ್ಪೈಸಿ ತಿಂಡಿ (ಮಸಾಲೆಯುಕ್ತ ಘಾಟಿನ ಆಹಾರ).

ಚೀನಾದ ಹುವಾಂಗ್ (ಇದು ಸರ್​ನೇಮ್​) ಎಂಬ ಮಹಿಳೆಯೊಬ್ಬಳು ಅತಿಯಾದ ಮಸಾಲೆಯುಕ್ತ ತಿಂದಿದ್ದಳು. ಆ ಘಾಟಿಗೆ ಸಿಕ್ಕಾಪಟೆ ಕೆಮ್ಮು ಬಂದಿತ್ತು. ಆಕೆ ದೊಡ್ಡದಾಗಿ, ಗಟ್ಟಿಯಾಗಿ ಕೆಮ್ಮುವ ವೇಳೆ ಎದೆ ಭಾಗದಲ್ಲಿ ಏನೋ ಮುರಿದ ಶಬ್ದ ಕೇಳಿದೆ. ಆದರೆ ಶಬ್ದವನ್ನು ಹುವಾಂಗ್​ ಗಂಭೀರವಾಗಿ ಪರಿಗಣಿಸಿರಿಲಿಲ್ಲ. ಆದರೆ ಬರುಬರುತ್ತ ಆಕೆಗೆ ಮಾತನಾಡುವಾಗ, ಉಸಿರಾಡುವಾಗ ಎದೆನೋವು ಬರಲು ಪ್ರಾರಂಭವಾಯಿತು. ಹೀಗಾಗಿ ವೈದ್ಯರ ಬಳಿ ಹೋದರು.

ಸಂಪೂರ್ಣವಾಗಿ ತಪಾಸಣೆ ಮಾಡಿ, ಸಿಟಿ ಸ್ಕ್ಯಾನ್​ ಮಾಡಿದ ಬಳಿಕ ಬಂದ ವರದಿಯಲ್ಲಿ ಅಚ್ಚರಿಯ ವಿಷಯ ಇತ್ತು. ಆಕೆಯ ಪಕ್ಕೆಲುಬುಗಳು ಮುರಿದಿದ್ದವು. ಹುವಾಂಗ್​ 57 ಕೆಜಿ ಇದ್ದರೂ, ಆಕೆಯ ಸೊಂಟಕ್ಕಿಂತ ಮೇಲ್ಭಾಗ ತುಂಬ ಸಪೂರ ಇದೆ. ಚರ್ಮದ ಕೆಳಗೆ ಮಾಂಸಖಂಡಗಳು ಇದ್ದು, ಅದರಡಿಯಲ್ಲಿ ಎಲುಬುಗಳು ಸಂರಕ್ಷಿಸಲ್ಪಡಬೇಕು. ಆದರೆ ಹುವಾಂಗ್​ ದೇಹದಲ್ಲಿ ಮಾಂಸಖಂಡಗಳು ಬಲವಾಗಿ ಇಲ್ಲದ ಕಾರಣ ನೇರವಾಗಿ ಪಕ್ಕೆಲುಬುಗಳಿಗೆ ಹೊಡೆತ ಬೀಳುತ್ತದೆ. ಗಟ್ಟಿಯಾಗಿ ಕೆಮ್ಮುವಾಗ ಇಡೀ ದೇಹದ ಮೇಲೆ ಬಲಪ್ರಯೋಗ ಆಗುತ್ತದೆ. ಅದೇ ವೇಳೆ ಮುರಿತಕ್ಕೆ ಒಳಗಾಗಿರಬಹುದು ಎಂದು ವೈದ್ಯರು ಹೇಳಿದ್ದಾರೆ.

ಇದನ್ನೂ ಓದಿ: Viral Video| ಹಳೇ ಬಜಾಜ್​ ಸ್ಕೂಟರ್​​ನ್ನು ಹೀಗೂ ಬಳಸಿಕೊಳ್ಳಬಹುದಾ? ಕಟ್ಟಡ ನಿರ್ಮಾಣ ಕಾರ್ಮಿಕರ ಭರ್ಜರಿ ಐಡಿಯಾ ನೋಡಿ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma: ಮರಾಠಿಯಲ್ಲೇ ಮಾತನಾಡಿದ ರೋಹಿತ್​, ಸೂರ್ಯಕುಮಾರ್​; ವಿಡಿಯೊ ವೈರಲ್​

Rohit Sharma: ಸನ್ಮಾನ ಸ್ವೀಕರಿಸಿದ ಬಳಿಕ ಮರಾಠಿಯಲ್ಲೇ ಮಾತನಾಡಿದ ರೋಹಿತ್ ‘ಚೆಂಡು ಸೂರ್ಯಕುಮಾರ್​ ಕೈಯಲ್ಲಿ ಕುಳಿತದ್ದು ಒಳ್ಳೆಯದಾಯಿತು. ಕ್ಯಾಚ್​ ಹಿಡಿಯದೇ ಇದಿದ್ದರೆ ನಾನು ಅವನನ್ನು ತಂಡದಿಂದ ಹೊರಗೆ ಕೂರಿಸುತ್ತಿದ್ದೆ’ ಎಂದು ಹೇಳಿದರು. ರೋಹಿತ್​ ಮಾತು ಕೇಳಿ ಸಂಪೂರ್ಣ ಸದನ ನಗೆಗಡಲಲ್ಲಿ ತೇಲಿತು. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Rohit Sharma
Koo

ಮುಂಬಯಿ: ಟಿ20 ವಿಶ್ವಕಪ್(T20 World Cup) ವಿಜೇತ ತಂಡದ ಮುಂಬೈಯ ನಾಲ್ವರು ಆಟಗಾರರಾದ ಕಪ್ತಾನ ರೋಹಿತ್ ಶರ್ಮ, ಸೂರ್ಯಕುಮಾರ್ ಯಾದವ್, ಯಶಸ್ವಿ ಜೈಸ್ವಾಲ್ ಮತ್ತು ಶಿವಂ ದುಬೆ ಅವರನ್ನು ಶುಕ್ರವಾರ ಮಾಹಾರಾಷ್ಟ್ರ ವಿಧಾನ ಭವನದಲ್ಲಿ ಅಭಿನಂದಿಸಲಾಗಿತ್ತು. ಈ ವೇಳೆ ಸೂರ್ಯಕುಮಾರ್(Suryakumar Yadav)​ ಮತ್ತು ರೋಹಿತ್(Rohit Sharma)​ ಮರಾಠಿಯಲ್ಲಿ ಮಾತನಾಡಿದ ವಿಡಿಯೊ ವೈರಲ್​ ಆಗಿದೆ. ಅದರಲ್ಲೂ ರೋಹಿತ್​ ಅವರು ಸೂರ್ಯ ಹಿಡಿದ ಕ್ಯಾಚ್​ ಬಗ್ಗೆ ಹೇಳಿದ ಮಾತುಗಳನ್ನು ಕೇಳಿ ಮುಖ್ಯಮಂತ್ರಿ ಏಕನಾಥ್ ಶಿಂಧೆ(Maharashtra CM Eknath Shinde) ಸೇರಿ ವಿಧಾನ ಭವನದಲ್ಲಿ ಸೇರಿದ ಸದ್ಯಸ್ಯರೆಲ್ಲ ಜೋರಾಗಿ ನಕ್ಕ ಪ್ರಸಂಗ ಕೂಡ ನಡೆಯಿತು.

ಸನ್ಮಾನ ಸ್ವೀಕರಿಸಿದ ಬಳಿಕ ಮರಾಠಿಯಲ್ಲೇ ಮಾತನಾಡಿದ ರೋಹಿತ್​, 13 ವರ್ಷಗಳ ಬಳಿಕ ಭಾರತಕ್ಕೆ ಐಸಿಸಿ ಟ್ರೋಫಿಯೊಂದನ್ನು ಗೆದ್ದು ತಂದಿರುವುದು ನಮಗೆಲ್ಲ ಸಂತಸದ ವಿಚಾರ. 2013ರಲ್ಲಿ ನಾವು ಐಸಿಸಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದ್ದೆವು. ನನ್ನ ಸಹ ಆಟಗಾರರಾದ ಶಿವಂ ದುಬೆ, ಸೂರ್ಯ ಮತ್ತು ಯಶಸ್ವಿ ಜೈಸ್ವಾಲ್ ಮಾತ್ರವಲ್ಲದೆ ಭಾರತದ ಯಶಸ್ಸಿಗೆ ಕೊಡುಗೆ ನೀಡಿದ ಎಲ್ಲರಿಗೂ ನಾನು ತುಂಬಾ ಕೃತಜ್ಞನಾಗಿದ್ದೇನೆ. ಇಂತಹ ತಂಡ ಸಿಕ್ಕಿದ್ದು ನನ್ನ ಅದೃಷ್ಟ ಎಂದರು. ಇದಾದ ಬಳಿಕ ಸೂರ್ಯಕುಮಾರ್​ ಕ್ಯಾಚ್​ ಬಗ್ಗೆ ಮಾತನಾಡಿ, ‘ಚೆಂಡು ಸೂರ್ಯಕುಮಾರ್​ ಕೈಯಲ್ಲಿ ಕುಳಿತದ್ದು ಒಳ್ಳೆಯದಾಯಿತು. ಕ್ಯಾಚ್​ ಹಿಡಿಯದೇ ಇದಿದ್ದರೆ ನಾನು ಅವನನ್ನು ತಂಡದಿಂದ ಹೊರಗೆ ಕೂರಿಸುತ್ತಿದ್ದೆ’ ಎಂದು ಹೇಳಿದಾಗ ಸಂಪೂರ್ಣ ಸದನ ನಗೆಗಡಲಲ್ಲಿ ತೇಲಿತು. ಈ ವಿಡಿಯೊ ವೈರಲ್​ ಆಗಿದೆ.

ಇದನ್ನೂ ಓದಿ Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​

ರೋಹಿತ್​ ಬಳಿಕ ಸೂರ್ಯಕುಮಾರ್​ ಯಾದವ್ ಕೂಡ ಮರಾಠಿಯಲ್ಲೇ ಮಾತನಾಡಿದರು. ಮಾತು ಶುರು ಮಾಡುವ ಮೊದಲೇ ಸಚಿವರು, ಶಾಸಕರು ಸೇರಿದಂತೆ ಸೆಂಟ್ರಲ್ ಹಾಲ್‌ನಲ್ಲಿದ್ದವರು ಕ್ಯಾಚ್​ ಬಗ್ಗೆ ಹೇಳಿ ಎಂದು ಜೋರಾಗಿ ಕೂಗಿದರು. ಈ ವೇಳೆ ಕ್ಯಾಚ್ ಬಸ್ಲಾ ಹತಾತ್ (ಕ್ಯಾಚ್ ನನ್ನ ಕೈಗೆ ಬಂದು ಕೂತಿತು) ಎಂದು ನಗುತ್ತಲೇ ತಾವು ಯಾವ ರೀತಿ ಕ್ಯಾಚ್​ ಹಿಡಿದೆ ಎನ್ನುವುದನ್ನು ನಟನೆಯ ಮೂಲಕ ತೋರಿಸಿದರು. ಬಳಿಕ ತಮ್ಮ ವಿಶ್ವಕಪ್​ ಅನುಭವ ಹಂಚಿಕೊಂಡು ಸನ್ಮಾನ ಮಾಡಿದ ಮುಖ್ಯಮಂತ್ರಿಗಳಿಗೆ ಹಾಗೂ ನೆರದಿದ್ದ ಎಲ್ಲ ಸಚಿವರಿಗೂ ಧನ್ಯವಾದ ತಿಳಿಸಿದರು.

ಕೊನೆಯ ಓವರ್​ನಲ್ಲಿ ದಕ್ಷಿಣ ಆಫ್ರಿಕಾ ಗೆಲುವಿಗೆ 16 ರನ್ ಅಗತ್ಯವಿತ್ತು. ಹಾರ್ದಿಕ್ ಪಾಂಡ್ಯ ಎಸೆದ ಮೊದಲ ಎಸೆತವನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ನತ್ತ ಬಾರಿಸಿದ್ದರು. ಬೌಂಡರಿ ಲೈನ್ ನಲ್ಲಿದ್ದ ಸೂರ್ಯ ಕುಮಾರ್ ಯಾದವ್ ಯಾರೂ ಊಹಿಸದಂತೆ ಸಾಹಸಮಯ ಅಮೋಘ ಕ್ಯಾಚ್ ಪಡೆದರು. 21 ರನ್ ಗಳಿಸಿದ್ದ ಡೇವಿಡ್​ ಮಿಲ್ಲರ್ ವಿಕೆಟ್​ ಕೈಚೆಲ್ಲಿದರು. ಸೂರ್ಯ ಈ ಕ್ಯಾಚ್​ ಪಡೆಯದೇ ಹೋಗಿದ್ದರೆ ಭಾರತ ಪಂದ್ಯ ಸೋಲುವ ಸಾಧ್ಯತೆ ಇತ್ತು.

Continue Reading

Latest

Viral Video : ಕೀರ್ತಿ ಚಕ್ರ ಸ್ವೀಕರಿಸಿದ ಹುತಾತ್ಮ ಯೋಧನ ಪತ್ನಿ; ಭಾವುಕರಾದ ದ್ರೌಪದಿ ಮುರ್ಮು‌,ರಾಜನಾಥ್ ಸಿಂಗ್!

Viral Video ಕಳೆದ ವರ್ಷ ನಡೆದ ಬೆಂಕಿ ಅನಾಹುತದಲ್ಲಿ 26 ವರ್ಷದ ಅಂಶುಮಾನ್ ಸಿಂಗ್ ಅವರು ಅಸಾಧಾರಣ ಶೌರ್ಯವನ್ನು ಪ್ರದರ್ಶಿಸಿ ಬೆಂಕಿ ಅನಾಹುತದಲ್ಲಿ ಅನೇಕ ಜನರನ್ನು ರಕ್ಷಿಸಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದರು. ಹಾಗಾಗಿ ಅವರಿಗೆ ಮರಣೋತ್ತರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕೀರ್ತಿ ಚಕ್ರವನ್ನು ಪ್ರದಾನ ಮಾಡಿದ್ದಾರೆ. ಆ ವೇಳೆ ಸೇನಾ ವೈದ್ಯಕೀಯ ದಳದ ಕ್ಯಾಪ್ಟನ್ ಅವರ ಪತ್ನಿಯನ್ನು ನೋಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾವುಕರಾಗಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

VISTARANEWS.COM


on

Viral Video
Koo


ನವದೆಹಲಿ : ಗಡಿಯಲ್ಲಿ ಕಾವಲು ಕಾಯುವ ಸೈನಿಕರ ಜೀವನ ಸರಳವಾಗಿರಲ್ಲ. ಅವರು ದೇಶಕ್ಕಾಗಿ ತಮ್ಮ ಜೀವವನ್ನೇ ಒತ್ತೆ ಇಡಬೇಕಾದ ಸಂದರ್ಭಗಳು ಬರುತ್ತದೆ. ಇದರಿಂದ ಅವರು ತಮ್ಮ ಹೆಂಡತಿ, ಮಕ್ಕಳು, ಕುಟುಂಬಸ್ಥರನ್ನು ತೊರೆಯಬೇಕಾಗುತ್ತದೆ. ಇಂತಹ ಶೌರ್ಯವನ್ನು ಪ್ರದರ್ಶಿಸಿದ ಭಾರತೀಯ ಸೇನೆ ಮತ್ತು ಅರೆಸೈನಿಕ ಪಡೆಗಳ ಸಿಬ್ಬಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜುಲೈ 5, 2024 ರಂದು ಮರಣೋತ್ತರವಾಗಿ 10 ಕೀರ್ತಿ ಚಕ್ರಗಳನ್ನು ಪ್ರದಾನ ಮಾಡಿದ್ದಾರೆ. ಆ ವೇಳೆ ಸೇನಾ ವೈದ್ಯಕೀಯ ದಳದ ಕ್ಯಾಪ್ಟನ್ ಅವರ ಪತ್ನಿಯನ್ನು ನೊಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಭಾವುಕರಾಗಿದ್ದಾರೆ. ಈ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ (Viral Video)ಆಗಿದೆ.

ಕಳೆದ ವರ್ಷ ನಡೆದ ಬೆಂಕಿ ಅನಾಹುತದಲ್ಲಿ 26 ವರ್ಷದ ಅಂಶುಮಾನ್ ಸಿಂಗ್ ಅವರು ಅಸಾಧಾರಣ ಶೌರ್ಯವನ್ನು ಪ್ರದರ್ಶಿಸಿ ಬೆಂಕಿ ಅನಾಹುತದಲ್ಲಿ ಅನೇಕ ಜನರನ್ನು ರಕ್ಷಿಸಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದರು. ಹಾಗಾಗಿ ಅವರಿಗೆ ಮರಣೋತ್ತರವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಕೀರ್ತಿ ಚಕ್ರವನ್ನು ಪ್ರದಾನ ಮಾಡಿದ್ದಾರೆ. ಆ ವೇಳೆ ಪ್ರಶಸ್ತಿಯನ್ನು ಸ್ವೀಕರಿಸಲು ಬಿಳಿ ಸೀರೆಗೆ ಚಿನ್ನದ ಬಣ್ಣದ ಅಂಚು ಹೊಂದಿರುವ ಸೀರೆಯುಟ್ಟು ಚಿಕ್ಕ ಹುಡುಗಿಯೊಬ್ಬಳು ತಾಯಿಯ ಜೊತೆ ಬರುತ್ತಿರುವುದನ್ನು ಕಂಡು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ರಕ್ಷಣಾ ಸಚಿವ ರಾಜನಾಥ್‌ಸಿಂಗ್ ಅವರು ಅಚ್ಚರಿಗೊಂಡಿದ್ದಾರೆ.

ಆಕೆ ಅಂಶುಮಾನ್ ಸಿಂಗ್ ಅವರ ಪತ್ನಿ ಸೃಷ್ಟಿ ಸಿಂಗ್ ಆಗಿದ್ದು, ಬಾಳಿ ಬದುಕಬೇಕಾಗಿದ್ದ ಆಕೆ ಚಿಕ್ಕ ವಯಸ್ಸಿನಲ್ಲಿ ಪತಿಯನ್ನು ಕಳೆದುಕೊಂಡು ವಿಧವೆಯಾಗಿರುವುದನ್ನು ಕಂಡು ಅಲ್ಲಿದ್ದವರೆಲ್ಲರೂ ಒಂದು ಕ್ಷಣ ಭಾವುಕರಾಗಿದ್ದಾರೆ. ಆಕೆ ಮದುವೆಯಾಗಿ ಕೇವಲ 5 ತಿಂಗಳಿನಲ್ಲೇ ತನ್ನ ಪತಿಯನ್ನು ಕಳೆದುಕೊಂಡಿದ್ದಾಳೆ. ಪತಿಯ ವೀರತೆಯ ಬಗ್ಗೆ ವಿವರಣೆ ನೀಡುವಾಗ ಆಕೆಯ ಕಣ್ಣಂಚಿನಲ್ಲಿ ಕಣ್ಣೀರು ಬರಲು ಶುರುವಾಗಿದೆ. ಇದನ್ನು ಕಂಡು ಕೀರ್ತಿ ಚಕ್ರವನ್ನು ಪ್ರದಾನ ಮಾಡಲು ಬಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದಕವನ್ನು ನೀಡಿ ಆಕೆಯ ಕೈ ಹಿಡಿದು ಸಮಾಧಾನ ಮಾಡಿದ್ದಾರೆ. ರಾಷ್ಟ್ರಪತಿಯವರು ತಮ್ಮ ಮಗಳಂತೆ ಆಕೆಯನ್ನು ಸಂತೈಸಿದ್ದನ್ನು ಕಂಡು ಎಲ್ಲರಿಗೂ ಅಚ್ಚರಿಗೊಂಡಿದ್ದಾರೆ. ಈ ವಿಡಿಯೊ ಸೊಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಬಿಕಿನಿ ತೊಟ್ಟು ಪಡ್ಡೆ ಹುಡುಗರ ನಿದ್ದೆ ಉಡಾಯಿಸಿದ ಸುಂದರಿಯರಿವರು!

ಕಳೆದ ಜುಲೈನಲ್ಲಿ ಲಡಾಕ್‌ನ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಆರ್ಮಿ ಬಂಕರ್‌ನಲ್ಲಿ ಬೆಂಕಿಯ ಅಪಘಾತ ಸಂಭವಿಸಿತ್ತು. ಶಾಕ್ ಸರ್ಕ್ಯೂಟ್‌ನಿಂದ ಅನೇಕ ಟೆಂಟ್‌ಗಳು ಬೆಂಕಿಯ ಜ್ವಾಲೆಗೆ ಸುಟ್ಟು ಹೋಗಿದ್ದವು. ಈ ವೇಳೆ ಸೇನಾ ವೈದ್ಯಕೀಯ ದಳದ ಕ್ಯಾಪ್ಟನ್ ಆಗಿದ್ದ 26 ವರ್ಷದ ಅಂಶುಮಾನ್ ಸಿಂಗ್ ಅವರು ಅಸಾಧಾರಣ ಶೌರ್ಯವನ್ನು ಪ್ರದರ್ಶಿಸಿ ಬೆಂಕಿ ಅನಾಹುತದಲ್ಲಿ ಅನೇಕ ಜನರನ್ನು ರಕ್ಷಿಸಿದರು. ಆದರೆ ಈ ಅಪಘಾತದಲ್ಲಿ ಅಂಶುಮಾನ್ ಹಾಗೂ ಮೂವರು ಗಂಭೀರವಾಗಿ ಗಾಯಗೊಂಡರು. ತಕ್ಷಣವೇ ಅವರನ್ನು ಏರ್ ಲಿಫ್ಟ್ ಮಾಡಲಾಯಿತು. ಆದರೂ ಚಿಕಿತ್ಸೆಗೆ ಸ್ಪಂದಿಸದೆ ಅಂಶುಮಾನ್ ಅವರು ನಿಧನರಾಗಿದ್ದರು.

Continue Reading

ಕ್ರೀಡೆ

Hardik Pandya: ನತಾಶಾ ಜತೆ ವಿಚ್ಛೇದನ ಖಚಿತ; ಸುಳಿವು ನೀಡಿದ ಹಾರ್ದಿಕ್​ ಪಾಂಡ್ಯ ಪೋಸ್ಟ್​!

Hardik Pandya: ತವರಿಗೆ ಬಂದಿರುವ ಪಾಂಡ್ಯ ತಮ್ಮ ಮಗ ಅಗಸ್ತ್ಯನ ಜತೆಗೆ ಕೇಕ್​ ಕತ್ತರಿಸಿ, ತಾವು ಗೆದ್ದ ಪದಕವನ್ನು ಮಗನ ಕೊರಳಿಗೆ ಹಾಕಿ ಸಂಭ್ರಮಿಸಿದ್ದಾರೆ. ಈ ಎಲ್ಲ ಸುಂದರ ಕ್ಷಣದ ಫೋಟೊ ಹಂಚಿಕೊಂಡು ‘ಎಲ್ಲವೂ ನಿನಗಾಗಿ. ನಾನೇನು ಮಾಡುತ್ತೇನೆಯೋ, ಅದು ನಿನ್ನ ಖುಷಿಗಾಗಿ ಮಾತ್ರ..’ ಎಂದು ಅವರು ಬರೆದುಕೊಂಡಿದ್ದಾರೆ.

VISTARANEWS.COM


on

Hardik Pandya
Koo

ಮುಂಬಯಿ: ಈ ಹಿಂದೆ ವರದಿಯಾದ ಪ್ರಕಾರ ಹಾರ್ದಿಕ್ ಪಾಂಡ್ಯ(Hardik Pandya) ಮತ್ತು ನತಾಶಾ ಸ್ಟಾನ್‌ಕೋವಿಕ್‌(Nataša Stanković) ಅವರ ವಿವಾಹ ಮುರಿದು ಬಿದ್ದಿರುವುದು ಮತ್ತು ವಿಚ್ಛೇದನ ಪಡೆಯುವುದು ಬಹುತೇಖ ಖಚಿತ ಎನ್ನುವಂತಿದೆ. ಹೌದು, ಟಿ20 ವಿಶ್ವಕಪ್​ ಗೆದ್ದು ತವರಿಗೆ ಮರಳಿರುವ ಹಾರ್ದಿಕ್​ ಪಾಂಡ್ಯ ತಮ್ಮ ಮಗನೊಂದಿಗೆ ವಿಶ್ವಕಪ್​ ಗೆಲುವನ್ನು ಸಂಭ್ರಮಿಸಿದ್ದಾರೆ. ಈ ಫೋಟೊ ಮತ್ತು ವಿಡಿಯೊಗಳನ್ನು ಪಾಂಡ್ಯ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಆದರೆ ಪತ್ನಿ ಈ ಕಾರ್ಯಕ್ರಮಕ್ಕೆ ಗೈರಾಗಿರುವುದು ಕಂಡು ಈ ಜೋಡಿ ದೂರವಾದಂತೆ ತೋರುತ್ತಿದೆ.

ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನವೇ ಹಾರ್ದಿಕ್ ಪಾಂಡ್ಯ ಮತ್ತು ನತಾಶಾ ಸ್ಟಾನ್‌ಕೋವಿಕ್‌ ವಿಚ್ಛೇದನದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಯಾಗಿತ್ತು. ಆದರೆ, ಈ ಜೋಡಿ ಮಾತ್ರ ಈ ವಿಚಾರದಲ್ಲಿ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಕೇವಲ ನಿಗೂಡ ಅರ್ಥದ ಪೋಸ್ಟ್​ಗಳನ್ನು ಮಾತ್ರ ಮಾಡುತ್ತಿದ್ದರು.

ವಿಚ್ಛೇದನದ ಸುದ್ದಿಯ ನಡುವೆ, ಕೆಲ ದಿನಗಳ ಹಿಂದೆ ನತಾಶಾ ಮೊದಲ ಬಾರಿಗೆ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದರು. ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದರು. ಈ ವೇಳೆ ನತಾಶಗೆ ಪಾಪರಾಜಿಗಳು ಪಾಂಡ್ಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ನತಾಶ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದರು.

ಇದಾಗ ಬಳಿಕ ನತಾಶಾ ಸ್ಟಾನ್‌ಕೋವಿಕ್‌ ಅವರು ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದರು. ಯೇಸು ತನ್ನ ಜಾಡನ್ನು ಹಿಂಬಾಲಿಸಿದಾಗ ಕುರಿಮರಿ ಮುಂದಾಳತ್ವ ವಹಿಸುತ್ತಿರುವ ಫೋಟೊ ಇದಾಗಿತ್ತು. ಈ ಫೋಟೊವನ್ನು ಕಂಡಾಗ ಈ ಜೋಡಿ ಶೀಘ್ರದಲ್ಲೇ ದೂರವಾಗುವುದು ಖಚಿತ ಎನ್ನುವಂತಿತ್ತು. ಅಲ್ಲದೆ ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು ಎಂದು ವರದಿಯಾಗಿತ್ತು.

ಇದನ್ನೂ ಓದಿ Team India: ತವರಿಗೆ ಬಂದ ಖಷಿಯಲ್ಲಿ ಕುಣಿದು ಕುಪ್ಪಳಿಸಿದ ನಾಯಕ ರೋಹಿತ್​, ಹಾರ್ದಿಕ್​, ಪಂತ್; ವಿಡಿಯೊ ವೈರಲ್​​

ಟಿ20 ವಿಶ್ವಕಪ್​ ಗೆದ್ದಾಗ ಆಟಗಾರರ ಪತ್ನಿಯರು ಈ ಗೆಲುವಿನ ಕುರಿತು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪತಿಯ ಫೋಟೊ ಮತ್ತು ಸಾಧನೆಯನ್ನು ಕೊಂಡಾಡಿದ್ದರು. ಆದರೆ ನತಾಶ ಯಾವುದೇ ಪೋಸ್ಟ್​ ಕೂಡ ಮಾಡಿರಲಿಲ್ಲ. ಇದೀಗ ತವರಿಗೆ ಬಂದಿರುವ ಪಾಂಡ್ಯ ತಮ್ಮ ಮಗ ಅಗಸ್ತ್ಯನ ಜತೆಗೆ ಕೇಕ್​ ಕತ್ತರಿಸಿ, ತಾವು ಗೆದ್ದ ಪದಕವನ್ನು ಮಗನ ಕೊರಳಿಗೆ ಹಾಕಿ ಸಂಭ್ರಮಿಸಿದ್ದಾರೆ. ಈ ಎಲ್ಲ ಸುಂದರ ಕ್ಷಣದ ಫೋಟೊ ಹಂಚಿಕೊಂಡು ‘ಎಲ್ಲವೂ ನಿನಗಾಗಿ. ನಾನೇನು ಮಾಡುತ್ತೇನೆಯೋ, ಅದು ನಿನ್ನ ಖುಷಿಗಾಗಿ ಮಾತ್ರ..’ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನು ನೋಡುವಾಗ ಪಾಂಡ್ಯ ಶೀಘ್ರದಲ್ಲೇ ನತಾಶಾಗೆ ವಿಚ್ಛೇದನ ನೀಡುವುದು ಖಚಿತ ಎನ್ನುವಂತಿದೆ.

ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇದಕ್ಕೂ ಮುನ್ನ ಈ ಜೋಡಿ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು.

Continue Reading

ವೈರಲ್ ನ್ಯೂಸ್

ತನಗೆ ಒಮ್ಮೆ ಕಚ್ಚಿದ ಹಾವಿಗೆ ಮೂರು ಬಾರಿ ಕಚ್ಚಿ ಸೇಡು ತೀರಿಸಿಕೊಂಡ ವ್ಯಕ್ತಿ; ಕೊನೆಗೆ ಬದುಕುಳಿದಿದ್ದು ಯಾರು?

ಬಿಹಾರದ ರಾಜೌಲಿ ಪ್ರದೇಶದಲ್ಲಿ ಜಾರ್ಖಂಡ್‌ ಮೂಲದ ಸಂತೋಷ್‌ ಲೋಹರ್‌ ಎಂಬ ವ್ಯಕ್ತಿಗೆ ಹಾವು ಕಚ್ಚಿದೆ. ಹಾವು ಕಚ್ಚಿದ ಬಳಿಕ ಗಾಬರಿಯಾಗದ ಆತನು ಆಸ್ಪತ್ರೆಗೆ ಓಡದೆ, ಹಾವಿಗೇ ವಾಪಸ್‌ ಮೂರು ಬಾರಿ ಕಚ್ಚಿದ್ದಾನೆ. ಇದಾದ ಬಳಿಕವೇ ಆತನು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾನೆ. ಹಾವು ಹಾಗೂ ವ್ಯಕ್ತಿ ನಡುವಿನ ಕಾಳಗದಲ್ಲಿ ಯಾರು ಗೆದ್ದರು? ಇಲ್ಲಿದೆ ಮಾಹಿತಿ.

VISTARANEWS.COM


on

Snake
Koo

ಪಟನಾ: ಹಾವುಗಳು (Snakes) ಎಂದರೆ ಎಲ್ಲರಿಗೂ ಭಯ ಇದ್ದೇ ಇರುತ್ತದೆ. ಸಣ್ಣ ಹಾವು ಕಚ್ಚಿದರೂ ಗಾಬರಿಯಾಗುತ್ತದೆ. ಕೂಡಲೇ ಆಸ್ಪತ್ರೆಗೆ ಹೋಗಿ, ಚಿಕಿತ್ಸೆ ಪಡೆಯುತ್ತೇವೆ. ಹಳ್ಳಿಯಲ್ಲಾದರೆ ಆಯುರ್ವೇದದಿಂದ ಹಾವಿನ ವಿಷಯವನ್ನು ನಿಗ್ರಹಿಸಲಾಗುತ್ತದೆ. ಅಷ್ಟರಮಟ್ಟಿಗೆ, ಹಾವು ಕಚ್ಚಿದರೆ (Snake Bite) ಗಾಬರಿ, ಆತಂಕ, ಭಯ ಆಗುತ್ತದೆ. ಆದರೆ, ಬಿಹಾರದಲ್ಲೊಬ್ಬ (Bihar) ಭೂಪನು, ತನಗೆ ಕಚ್ಚಿದ ಹಾವಿಗೇ ವಾಪಸ್‌ ಮೂರು ಬಾರಿ ಕಚ್ಚಿದ್ದಾನೆ. ಎಂತಹ ಅದೃಷ್ಟ ನೋಡಿ, ಹಾವು ಕಚ್ಚಿಸಿಕೊಂಡ ವ್ಯಕ್ತಿಯು ಬದುಕುಳಿದರೆ, ಈತನಿಂದ ಕಚ್ಚಿಸಿಕೊಂಡ ಹಾವು ಸತ್ತುಹೋಗಿದೆ.

ಹೌದು, ಬಿಹಾರದ ರಾಜೌಲಿ ಪ್ರದೇಶದಲ್ಲಿ ಇಂತಹದ್ದೊಂದು ವಿಸ್ಮಯಕಾರಿ ಘಟನೆ ನಡೆದಿದೆ. ಜಾರ್ಖಂಡ್‌ ಮೂಲದ ಸಂತೋಷ್‌ ಲೋಹರ್‌ ಎಂಬ ವ್ಯಕ್ತಿಯು ರೈಲ್ವೆ ಲೈನ್‌ನಲ್ಲಿ ಉದ್ಯೋಗ ಮಾಡುತ್ತಿದ್ದಾನೆ. ಈತನ ದಿನದ ಕೆಲಸ ಮುಗಿಸಿ ರೌಜಲಿಯಲ್ಲಿರುವ ಕ್ಯಾಂಪ್‌ನಲ್ಲಿ ಕಳೆದ ಮಂಗಳವಾರ (ಜುಲೈ 2) ಮಲಗಿದ್ದಾನೆ. ಇದೇ ವೇಳೆ ಹಾವೊಂದು ಸಂತೋಷ್‌ ಲೋಹರ್‌ಗೆ ಕಚ್ಚಿದೆ. ಹಾವು ಕಚ್ಚಿದ ಬಳಿಕ ಗಾಬರಿಯಾಗದ, ಆಸ್ಪತ್ರೆಗೆ ಓಡದ ಈತನು ಕಬ್ಬಿಣದ ರಾಡ್‌ನಿಂದ ಹಾವನ್ನು ಹಿಡಿದು, ಅದಕ್ಕೇ ಮೂರು ಬಾರಿ ಕಚ್ಚಿದ್ದಾನೆ. ಈತನು ಕಚ್ಚಿದ ತೀವ್ರತೆಗೆ ಹಾವೇ ಸತ್ತುಹೋಗಿದೆ.

Snake bite

ಸಂತೋಷ್‌ ಲೋಹರ್‌ನನ್ನು ಕೂಡಲೇ ಆತನ ಸಹೋದ್ಯೋಗಿಗಳು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವ ಈತನು ಬಹುತೇಕ ಗುಣಮುಖನಾಗಿದ್ದಾನೆ. “ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ದಾಖಲಿಸಿದ ಕಾರಣ ವ್ಯಕ್ತಿಯು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಶೀಘ್ರದಲ್ಲೇ ಆತನನ್ನು ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಮಾಡಲಾಗುವುದು” ಎಂದು ಚಿಕಿತ್ಸೆ ನೀಡಿದ ಡಾ.ಸತೀಶ್‌ ಚಂದ್ರ ಅವರು ಮಾಹಿತಿ ನೀಡಿದ್ದಾರೆ. ಈತನ ಸಾಹಸವನ್ನು ಕೇಳಿದ ಸುತ್ತಮುತ್ತಲಿನ ಗ್ರಾಮಸ್ಥರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಸಂತೋಷ್‌ ಲೋಹರ್‌ನು ಹಾವಿಗೆ ವಾಪಸ್‌ ಕಚ್ಚಿದ ಕುರಿತು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಈತನ ಸಂದರ್ಶನವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. “ನಮ್ಮ ಊರಿನಲ್ಲಿ ಒಂದು ಮಾತಿದೆ. ನಮಗೇನಾದರೂ ಹಾವು ಕಚ್ಚಿದರೆ, ಅದಕ್ಕೆ ಎರಡು ಬಾರಿ ವಾಪಸ್‌ ಕಚ್ಚಬೇಕು ಎಂಬ ಪದ್ಧತಿ ಇದೆ. ಅದರಂತೆ, ನಾನು ಹಾವಿಗೆ ವಾಪಸ್‌ ಕಚ್ಚಿದೆ. ಇದರಿಂದ ನಾನು ಬದುಕುಳಿದೆ” ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಸ್ಥಳೀಯರ ಪ್ರಕಾರ, ಈತನಿಗೆ ಕಚ್ಚಿದ ಹಾವಿನಲ್ಲಿ ವಿಷ ಇರಲಿಲ್ಲ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Viral News: ಒಂದು ತಿಂಗಳಲ್ಲಿ ಐದು ಬಾರಿ ಹಾವು ಕಡಿತ; ಪವಾಡ ರೀತಿಯಲ್ಲಿ ವ್ಯಕ್ತಿ ಬಜಾವ್‌!

Continue Reading
Advertisement
assault case in Jigani
ಬೆಂಗಳೂರು ಗ್ರಾಮಾಂತರ17 mins ago

Assault Case : ಆಮ್ಲೇಟ್‌ನಲ್ಲಿ ಕಲ್ಲು ಸಿಕ್ಕಿದ್ದನ್ನು ಪ್ರಶ್ನಿಸಿದ್ದಕ್ಕೆ ಗ್ರಾಹಕನ ತಲೆಬುರುಡೆ ತೂತು ಮಾಡಿದ ಸಪ್ಲೇಯರ್‌

Rohit Sharma
ಕ್ರೀಡೆ26 mins ago

Rohit Sharma: ಮರಾಠಿಯಲ್ಲೇ ಮಾತನಾಡಿದ ರೋಹಿತ್​, ಸೂರ್ಯಕುಮಾರ್​; ವಿಡಿಯೊ ವೈರಲ್​

Anant Ambani -Radhika Salman Khan dances
ಬಾಲಿವುಡ್26 mins ago

Anant Ambani -Radhika:  ಸಂಗೀತ ಕಾರ್ಯಕ್ರಮದಲ್ಲಿ ಅನಂತ್ ಅಂಬಾನಿ ಜತೆ ಡ್ಯಾನ್ಸ್‌ ಮಾಡಿದ ಸಲ್ಮಾನ್ ಖಾನ್!

Viral Video
Latest38 mins ago

Viral Video : ಕೀರ್ತಿ ಚಕ್ರ ಸ್ವೀಕರಿಸಿದ ಹುತಾತ್ಮ ಯೋಧನ ಪತ್ನಿ; ಭಾವುಕರಾದ ದ್ರೌಪದಿ ಮುರ್ಮು‌,ರಾಜನಾಥ್ ಸಿಂಗ್!

Hathras Stampede
ದೇಶ41 mins ago

Hathras Stampede: ಹತ್ರಾಸ್‌ ಕಾಲ್ತುಳಿತದಿಂದ ತೀವ್ರ ದುಃಖವಾಗಿದೆ ಎಂದ ಭೋಲೆ ಬಾಬಾ; Video ಇಲ್ಲಿದೆ

Zika Virus
ಶಿವಮೊಗ್ಗ43 mins ago

Zika Virus : ಡೆಂಗ್ಯೂ ಬೆನ್ನಲ್ಲೇ ಶಿವಮೊಗ್ಗದಲ್ಲಿ ಝಿಕಾ ವೈರಸ್‌ಗೆ ವೃದ್ಧ ಬಲಿ

spicejet news
ಪ್ರಮುಖ ಸುದ್ದಿ58 mins ago

SpiceJet News: ಬೆಂಗಳೂರಿನ ಪ್ರಯಾಣಿಕರನ್ನು ದಿಲ್ಲಿಯಲ್ಲಿ ವಿಮಾನದೊಳಗೇ 12 ಗಂಟೆ ಕೊಳೆಹಾಕಿದ ಸ್ಪೈಸ್‌ಜೆಟ್!

Kiran Raj celebrate Family day on his birthday
ಸ್ಯಾಂಡಲ್ ವುಡ್59 mins ago

Kiran Raj: ಜನುಮದಿನ ʻಫ್ಯಾಮಿಲಿ ಡೇʼ ಎಂದು ಆಚರಿಸಿ, ಅಭಿಮಾನಿಗಳಿಂದ ಸೈ ಎನಿಸಿಕೊಂಡ ʻಕನ್ನಡತಿʼ ಸೀರಿಯಲ್‌ ನಟ!

Wild Animal Attack Elephant attack
ರಾಮನಗರ1 hour ago

Wild Animal Attack : ತೋಟದಲ್ಲಿ ನೀರು ಹಾಯಿಸುತ್ತಿದ್ದವನ ತುಳಿದು ಸಾಯಿಸಿದ ಆನೆ

gold rate today
ವಾಣಿಜ್ಯ1 hour ago

Gold Rate Today: ಮತ್ತೆ ಏರಿಕೆ ಕಂಡ ಚಿನ್ನದ ದರ; ಸ್ವರ್ಣ ಪ್ರಿಯರಿಗೆ ಶಾಕ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ6 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಇಂದು ನಾನ್‌ ಸ್ಟಾಪ್‌ ಮಳೆ; ಬೆಂಗಳೂರಲ್ಲಿ ಹೇಗೆ?

karnataka Weather Forecast
ಮಳೆ18 hours ago

Karnataka Weather: ಧಾರಾಕಾರ ಮಳೆಗೆ ಜನರ ಒದ್ದಾಟ- ಸೇತುವೆಗಳು ಮುಳುಗಿ ಪರದಾಟ; ಶಾಲಾ-ಕಾಲೇಜುಗಳಿಗೆ ರಜೆ

Lovers Fighting
ಚಿಕ್ಕಬಳ್ಳಾಪುರ20 hours ago

Lovers Fighting: ಪ್ರೀತಿಸಿ ಕೈಕೊಟ್ಟವನಿಗೆ ನಡುರಸ್ತೆಯಲ್ಲೇ ಚಳಿ ಬಿಡಿಸಿದ ಗರ್ಭಿಣಿ

Medical negligence
ದಾವಣಗೆರೆ21 hours ago

Medical negligence: ಸಿಸೇರಿಯನ್ ಮಾಡುವಾಗ ಶಿಶುವಿನ ಮರ್ಮಾಂಗವನ್ನೇ ಕತ್ತರಿಸಿ ಸಾಯಿಸಿದ ವೈದ್ಯ!

karnataka rain
ಮಳೆ22 hours ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ24 hours ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು1 day ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು1 day ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ1 day ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಟ್ರೆಂಡಿಂಗ್‌