Yellapura News | ನಿರ್ಭೀತಿಯಿಂದ ವಾಸ ಮಾಡಿ, ನಿಮ್ಮ ಬೆನ್ನಿಗೆ ಸರ್ಕಾರವಿದೆ: ಸಿದ್ಧಿ ಜನಾಂಗಕ್ಕೆ ಸಚಿವ ಶ್ರೀರಾಮುಲು ಭರವಸೆ - Vistara News

ಉತ್ತರ ಕನ್ನಡ

Yellapura News | ನಿರ್ಭೀತಿಯಿಂದ ವಾಸ ಮಾಡಿ, ನಿಮ್ಮ ಬೆನ್ನಿಗೆ ಸರ್ಕಾರವಿದೆ: ಸಿದ್ಧಿ ಜನಾಂಗಕ್ಕೆ ಸಚಿವ ಶ್ರೀರಾಮುಲು ಭರವಸೆ

ಯಲ್ಲಾಪುರ (Yellapur News) ತಾಲೂಕಿನ ಮಾಗೋಡು ಗ್ರಾಮದ ಸಿದ್ಧಿ ಸಮುದಾಯದವರ ಮನೆಯಲ್ಲಿ ಗ್ರಾಮ ವಾಸ್ತವ್ಯ, ಸಂವಾದ ಹಾಗೂ ಸರ್ಕಾರದ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಸಚಿವ ಶ್ರೀರಾಮುಲು ಉದ್ಘಾಟಿಸಿದರು.

VISTARANEWS.COM


on

Magodu Vilage Minister Sriramulu
ಯಲ್ಲಾಪುರ ತಾಲೂಕಿನ ಮಾಗೋಡು ಗ್ರಾಮದ ಸಿದ್ಧಿ ಸಮುದಾಯದವರ ಮನೆಯಲ್ಲಿ ಗ್ರಾಮ ವಾಸ್ತವ್ಯ, ಸಂವಾದ ಹಾಗೂ ಸರ್ಕಾರದ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಸಚಿವ ಶ್ರೀರಾಮುಲು ಉದ್ಘಾಟಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಯಲ್ಲಾಪುರ: ಕಾಡನ್ನೇ ಸರ್ವಸ್ವವನ್ನಾಗಿಸಿಕೊಂಡಿರುವ ಸಿದ್ಧಿ ಜನಾಂಗವು, ಯಾವುದೇ ತೊಂದರೆಯಾಗದಂತೆ ತಮ್ಮ ಮೂಲ ಜಾಗದಲ್ಲಿ ನಿರ್ಭೀತಿಯಿಂದ ವಾಸ ಮಾಡಬೇಕು. ನಮ್ಮ ಸರ್ಕಾರ ಸದಾ ನಿಮ್ಮ ಬೆಂಬಲಕ್ಕಿದ್ದು, ಈ ಸಮುದಾಯದ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಕಾರ್ಯ ನಿರ್ವಹಿಸುತ್ತಿದೆ ಎಂದು‌ ಸಾರಿಗೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಶ್ರೀರಾಮುಲು ಯಲ್ಲಾಪುರ ತಾಲೂಕಿನಲ್ಲಿ (Yellapura News) ತಮ್ಮ ಗ್ರಾಮ ವಾಸ್ತವ್ಯದ ವೇಳೆ ತಿಳಿಸಿದರು.

ತಾಲೂಕಿನ ಮಾಗೋಡು ಗ್ರಾಮದ ಸಿದ್ಧಿ ಸಮುದಾಯದವರ ಮನೆಯಲ್ಲಿ ಗ್ರಾಮ ವಾಸ್ತವ್ಯ, ಸಂವಾದ ಹಾಗೂ ಸರ್ಕಾರದ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಬಹಳ ವರ್ಷಗಳಿಂದ ಅರಣ್ಯ ಹಕ್ಕು ಪತ್ರದಲ್ಲಿನ ನ್ಯೂನತೆಯಿಂದ ಅನುಭವಿಸುತ್ತಿರುವ ತೊಂದರೆಯನ್ನು ಈಗಾಗಲೇ ಮುಖ್ಯ ಮಂತ್ರಿಗಳ ಗಮನಕ್ಕೆ ತರಲಾಗಿದೆ. ತುರ್ತಾಗಿ ಅದನ್ನು ನಮ್ಮ ಇಲಾಖೆಯ ವತಿಯಿಂದ ಬಗೆಹರಿಸಿ ಕೊಡುತ್ತೇನೆ” ಎಂದರು.

ಯಲ್ಲಾಪುರ ತಾಲೂಕಿನ ಮಾಗೋಡು ಗ್ರಾಮದ ಸಿದ್ಧಿ ಸಮುದಾಯದವರಿಗೆ ಸಚಿವ ಶ್ರೀರಾಮುಲು ಸರ್ಕಾರದ ಸವಲತ್ತುಗಳನ್ನು ವಿತರಿಸಿದರು.

“ಈ ಹಿಂದೆ ಯಾವುದೇ ಸರ್ಕಾರ ಮಾಡದಂತಹ ಮಹತ್ತರ ಬದಲಾವಣೆಯಾಗಿ ನಮ್ಮ ಸರ್ಕಾರವು ಪರಿಶಿಷ್ಟ ವರ್ಗಗಳ ಮೀಸಲಾತಿಯನ್ನು ಶೇ.೩ ರಿಂದ ಶೇ.೭ಕ್ಕೆ ಏರಿಸಿದೆ. ಇದರಿಂದ ನಮ್ಮ ಸಮುದಾಯದ ಮಕ್ಕಳೂ ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗಳಿಗೆ ತಲುಪಲು ಸಹಾಯವಾಗುತ್ತದೆ. ಕೇವಲ ಆಶ್ವಾಸನೆ ನೀಡದೆ, ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದೊಡನೆ ಈ ಕೆಲಸವನ್ನು ಮಾಡಿದ್ದೇವೆ. ನಿಮ್ಮ ಮನವಿಗಳನ್ನು ಸಹ ಆಲಿಸಿದ್ದೇನೆ. ನಮ್ಮ ಇಲಾಖೆಯಿಂದ ಸಾಧ್ಯವಾದಷ್ಟು ಶೀಘ್ರದಲ್ಲಿ ಬಗೆಹರಿಸಲಾಗುವುದು. ಮುಂದೆಯೂ ಸಿದ್ಧಿ ಜನಾಂಗದವರೊಂದಿಗೆ ಸಂಪರ್ಕದಲ್ಲಿದ್ದು, ಆಗುಹೋಗುಗಳ ಬಗ್ಗೆ ನಿಗಾ ವಹಿಸುತ್ತೇನೆ ಎಂದು ತಿಳಿಸಿದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ಧಿ, ಪಪಂ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಟನಕರ್, ನಂದೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನರಸಿಂಹ ಕೋಣೆಮನೆ, ಉಪಾಧ್ಯಕ್ಷೆ ಮೀನಾಕ್ಷಿ ವೆಂಕಟ್ರಮಣ ಭಟ್, ಸದಸ್ಯೆ ಭವಾನಿ ಸಿದ್ಧಿ, ಲಕ್ಷ್ಮೀ ಸಿದ್ಧಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಪಿ.ಎಸ್. ಕಾಂತರಾಜು, ಕವಿತಾ ವಾರಂಗಲ್, ಅರುಣಕುಮಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಮೊರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಉಪನಿರ್ದೇಶಕರಾದ ರಾಜಕುಮಾರ್ ಸ್ವಾಗತಿಸಿದರು. ಕೆಂಗೇರಿ ಮಲ್ಲಿಕಾರ್ಜುನ, ವಸಂತ ಲಕ್ಷ್ಮೀ ನಿರ್ವಹಿಸಿದರು.

ಇದನ್ನೂ ಓದಿ | ಕೆಪಿಸಿಸಿ ಅಧ್ಯಕ್ಷ ಸ್ಥಾನ ನಿಭಾಯಿಸಲು ಹೆಣಗಾಡುತ್ತಿದ್ದಾರೆ ಎಂದ ಪರಮೇಶ್ವರ್‌ ಹೇಳಿಕೆ: ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ; ರೆಡ್‌ ಅಲರ್ಟ್‌ ಘೋಷಣೆ

Karnataka Weather Forecast : ರಾಜ್ಯಾದ್ಯಂತ ಮುಂಗಾರು ಆರ್ಭಟ ಜೋರಾಗಿದೆ. ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ನಿರೀಕ್ಷೆ ಇದ್ದು, ರೆಡ್‌ ಅಲರ್ಟ್‌ ಘೋಷಣೆ (Red Alert) ಮಾಡಲಾಗಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಜೂನ್‌ 10ರಂದು ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಣೆ (Red Alert) ಮಾಡಲಾಗಿದೆ. ಕರಾವಳಿಯಲ್ಲಿ ಸಾಧಾರಣದಿಂದ ಭಾರಿ (Rain News) ಮಳೆಯಾಗಲಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ವ್ಯಾಪಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಗುಡುಗು, ಮಿಂಚು ಇರಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ.

ಇದನ್ನೂ ಓದಿ: Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

ಈ ಜಿಲ್ಲೆಗಳಲ್ಲಿ ವೇಗವಾಗಿ ಬೀಸುತ್ತೆ ಗಾಳಿ

ಗುಡುಗು ಸಹಿತ ಭಾರೀ ಮಳೆಯೊಂದಿಗೆ ಗಾಳಿ ವೇಗವು ಗಂಟೆಗೆ 55-65 ಕಿ.ಮೀ ಇರಲಿದೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಮತ್ತು ಗದಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬಾಗಲಕೋಟೆ, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ. ಈ ಭಾಗದಲ್ಲಿ ಮಳೆ ಜತೆಗೆ ಗಾಳಿಯು ಗಂಟೆಗೆ 40-50 ಕಿ.ಮೀ ಇರಲಿದೆ. ದಕ್ಷಿಣ ಕನ್ನಡ, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು ಮತ್ತು ದಾವಣಗೆರೆ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಮೀನುಗಾರರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45 ರಿಂದ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್ 10 ರಿಂದ 12 ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು, ಹೊರ ಬಂತು ಸವಾರನ ಕರುಳು! ಮತ್ತಿಬ್ಬರು ಗಂಭೀರ

Karnataka Rain : ಭಾರಿ ಮಳೆಗೆ ಮರ ಬಿದ್ದು ಯುವಕರ್ನೊವ ದಾರುಣವಾಗಿ ಮೃತಪಟ್ಟಿದ್ದಾನೆ. ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರು ಸೇರಿ ಹಲವೆಡೆ ಮಳೆಯಾಗಿದ್ದು, ಅವಾಂತರವನ್ನೇ ಸೃಷ್ಟಿಸಿದೆ.

VISTARANEWS.COM


on

By

Karnataka Rain
Koo

ಬೆಳಗಾವಿ: ಭಾರಿ ಮಳೆಗೆ (Karnataka Rain) ಮರ ಬಿದ್ದು (Tree fall) ಯುವಕನೊರ್ವ ಮೃತಪಟ್ಟರೆ, ಮತ್ತಿಬ್ಬರು ಗಂಭೀರ ಗಾಯಗೊಂಡಿದ್ದಾರೆ. ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಬಳಿ ದುರ್ಘಟನೆ ನಡೆದಿದೆ. ಕರ್ಲೆ ಗ್ರಾಮದ ಸೋಮನಾಥ್ ಮುಚ್ಚಂಡಿಕರ್ (21) ಮೃತ ದುರ್ದೈವಿ.

ವಿಠ್ಠಲ್ ತಳವಾರ್, ಸ್ವಪ್ನಿಲ್ ದೇಸಾಯಿ ಗಾಯಾಳುಗಳು. ಈ ಮೂವರು ಬೈಕ್‌ನಲ್ಲಿ ಬೆಳಗಾವಿಗೆ ಬರುತ್ತಿದ್ದರು. ಇದೇ ವೇಳೆ ಭಾರಿ ಮಳೆ ಬರುತ್ತಿತ್ತು. ಮಳೆಯಲ್ಲೇ ಬೈಕ್‌ ಚಲಾಯಿಸಿಕೊಂಡು ಹೋಗುತ್ತಿದ್ದಾಗ ಏಕಾಏಕಿ ಬೃಹತ್‌ ಗಾತ್ರದ ಮರವೊಂದು ಧರೆಗುರುಳಿ ಬೈಕ್‌ ಮೇಲೆ ಬಿದ್ದಿದೆ.

ಮರ ಬಿದ್ದ ರಭಸಕ್ಕೆ ಮುಚ್ಚಂಡಿಕರ್‌ನ ಕರುಳು ಹೊರಗೆ ಬಂದಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತಿಬ್ಬರ ತಲೆಗೂ ಗಂಭೀರ ಗಾಯವಾಗಿದ್ದು, ಸ್ಥಳೀಯರು ಅವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬಂದ ಪೊಲೀಸರು, ಸ್ಥಳೀಯರ ಸಹಾಯದೊಂದಿಗೆ ರಸ್ತೆ ಮೇಲೆ ಬಿದ್ದಿದ್ದ ಮರ ತೆರವು ಮಾಡಿದರು. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಭಾರಿ ಗಾಳಿ-ಮಳೆಗೆ ಮರ ಬಿದ್ದು ಕಾರುಗಳು ಜಖಂ

ಉತ್ತರಕನ್ನಡ ಜಿಲ್ಲೆಯ ದಾಂಡೇಲಿ ನಗರ ಕೆ.ಸಿ.ವೃತ್ತದಲ್ಲಿ ಭಾರಿ ಗಾಳಿ ಮಳೆಗೆ ಬೃಹತ್‌ ಗಾತ್ರದ ಮರವೊಂದು ಬಿದ್ದ ಪರಿಣಾಮ ಎರಡು ಕಾರುಗಳಿಗೆ ಹಾನಿಯಾಗಿದೆ. ರಸ್ತೆ ಪಕ್ಕದಲ್ಲಿ‌‌ ನಿಲ್ಲಿಸಿದ್ದ ಕಾರುಗಳ ಮೇಲೆ ಮರ ಬಿದ್ದು ಜಖಂಗೊಂಡಿದೆ. ಕಳೆದೆರಡು ದಿನಗಳಿಂದ ದಾಂಡೇಲಿ ನಗರದಲ್ಲಿ ಭಾರಿ ಮಳೆ ಸುರಿಯುತ್ತಿದೆ.

ಇದನ್ನೂ ಓದಿ: Drowned in water : ಆಯತಪ್ಪಿ ಘಟಪ್ರಭಾ ನದಿಗೆ ಬಿದ್ದ ಟ್ರಾಕ್ಟರ್; ಓರ್ವ ನೀರುಪಾಲು, 12 ಮಂದಿ ಪಾರು

ರಾಜಧಾನಿ ಬೆಂಗಳೂರಲ್ಲಿ ಮಳೆ ಅಬ್ಬರ

ಭಾನುವಾರ ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗಿದೆ. ವೀಕೆಂಡ್‌ ಮೂಡ್‌ನಲ್ಲಿದ್ದವರಿಗೆ ಮಳೆಯು ಅಡ್ಡಿಯಾಗಿತ್ತು. ಶಿವಾಜಿನಗರ, ಮೆಜೆಸ್ಟಿಕ್‌, ರಾಜಾಜಿನಗರ, ವಿಧಾನಸೌಧ, ಕೆಆರ್‌ ಸರ್ಕಲ್‌ ಹಾಗೂ ಟೌನ್ ಹಾಲ್ ಹಾಗೂ ಜೆ.ಸಿ ರಸ್ತೆ ಸುತ್ತಮುತ್ತ ಮಳೆಯಾಗಿತ್ತು. ವೀಕೆಂಡ್ ಕಳೆಯಲು ಕಬ್ಬನ ಪಾರ್ಕ್‌ಗೆ ಬಂದವರಿಗೆ ದಿಢೀರ್‌ ಮಳೆಯಿಂದಾಗಿ ತೊಂದರೆ ಆಯಿತು. ಮಳೆಯಿಂದ ಆಶ್ರಯ ಪಡೆಯಲು ಓಡುತ್ತಿದ್ದ ದೃಶ್ಯ ಕಂಡು ಬಂತು. ಜೋರಾಗಿ ಸುರಿದ ಒಂದೂವರೆ ಗಂಟೆ ಮಳೆಗೆ ಕೆಆರ್‌ ಸರ್ಕಲ್‌ ರಸ್ತೆಯು ಕೆರೆಯಂತಾಗಿತ್ತು. ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಹಾಕಿ ಅಂಡರ್‌ ಪಾಸ್‌ ಕ್ಲೋಸ್‌ ಮಾಡಲಾಗಿತ್ತು.

ಉತ್ತರ ಕನ್ನಡದಲ್ಲಿ ಮುಂದುವರಿದ ವರುಣಾರ್ಭಟ

ಕರಾವಳಿ ಘಟ್ಟದ ಮೇಲಿನ ತಾಲೂಕುಗಳಲ್ಲಿ ಮೂರನೇ ದಿನವೂ ಧಾರಾಕಾರ ಮಳೆಯಾಗಿದೆ. ಮಳೆ ಅಬ್ಬರಕ್ಕೆ ತಗ್ಗು ಪ್ರದೇಶ, ಹಳ್ಳ, ಕೊಳ್ಳಗಳಲ್ಲಿ ನೀರು ತುಂಬಿ ಹರಿದಿತ್ತು. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳದಲ್ಲಿ ಹೆಚ್ಚಿನ ಮಳೆಯಾಗಿದೆ. ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳದಲ್ಲೂ ಮಳೆಯಾಗಿದೆ.

ಮಳೆಗೆ ತಿಪ್ಪೆಯಂತಾದ ರಸ್ತೆಯಲ್ಲಿ ಓಡಾಟ

ವಿಜಯಪುರ ಜಿಲ್ಲೆ ದೇವರ ಹಿಪ್ಪರಗಿ ತಾಲೂಕಿನ ಮಾರ್ಕಬ್ಬಿನಹಳ್ಳಿ ಗ್ರಾಮದ ಜನರ ಗೋಳು ಕೇಳುವವರು ಇಲ್ಲ. ಮಳೆ ಬಂದರೆ ರಸ್ತೆಗಳು ಎಲ್ಲವೂ ಕೆಸರು ಗದ್ದೆಯಂತಾಗುತ್ತದೆ. ಅತಿಯಾದ ಮಳೆ ಬಂದರೆ ಮನೆಯೊಳಗೆ ನೀರು ನುಗ್ಗುತ್ತದೆ. ಮಾರ್ಕಬ್ಬಿನಹಳ್ಳಿ ಗ್ರಾಮದ ದಲಿತರ ಕೆರಿಯಲ್ಲಿನ ರಸ್ತೆಗಳು ಸಂಪೂರ್ಣ ಕೆಸರುಮಯವಾಗಿದೆ.

ಬಾಗಲಕೋಟೆಯಲ್ಲಿ ಮನೆಗಳಿಗೆ ನುಗ್ಗಿದ ನೀರು

ಬಾಗಲಕೋಟೆ ಜಿಲ್ಲೆಯಲ್ಲಿ ಶನಿವಾರ ಅಬ್ಬರಿಸಿದ ಮಳೆಗಳಿಗೆ ನೀರು ನುಗ್ಗಿ, ತಗ್ಗು ಪ್ರದೇಶದ ನಿವಾಸಿಗಳು ಹೈರಾಣಾದರು. ರಬಕವಿ ನಗರದ ಬಾಬು ಗಂಗಾವತಿ ಅವರ ಮನೆ ಸಂಪೂರ್ಣ ಜಲಮಯವಾಗಿತ್ತು. ಸೂಕ್ತ ಒಳಚರಂಡಿ ವ್ಯವಸ್ಥೆ ಮಾಡದ ನಗರ ಸಭೆ ವಿರುದ್ಧ ನಿವಾಸಿಗಳು ಆಕ್ರೋಶ ಹೊರಹಾಕಿದರು. ಕುಟುಂಬದ ಸದಸ್ಯರು ಬಕೆಟ್‌ನಿಂದ ಮಳೆ ನೀರು ಹೊರ ಹಾಕಿದರು.

ಕೋಲಾರದಲ್ಲಿ ಬಿರುಗಾಳಿ ಸಹಿತ ಮಳೆಗೆ ನೆಲಕಚ್ಚಿದ ಬಿನ್ಸ್ ಬೆಳೆ

ಬಿರುಗಾಳಿ ಸಹಿತ ಸುರಿದ ಮಳೆಗೆ ಮೂರು ಎಕರೆಯಲ್ಲಿ ಪಾಲಿ ಹೌಸ್ ನಿರ್ಮಾಣ ಮಾಡಿ ಬೆಳೆದಿದ್ದ ಬಿನ್ಸ್ ಬೆಳೆ ಹಾಳಾಗಿತ್ತು. ಎರಡು ದಿನದ ಹಿಂದೆ ಸುರಿದ ಬಿರುಗಾಳಿ ಸಹಿತ ಮಳೆ ಪಾಲಿ ಹೌಸ್‌ ಧ್ವಂಸವಾಗಿತ್ತು. ಕೋಲಾರ ತಾಲ್ಲೂಕಿನ ಚೆಲ್ಲಹಳ್ಳಿ ಗ್ರಾಮದ ರೈತ ಅದಿ ಮೂರ್ತಿ ಎಂಬುವರು ಬೆಳೆದಿದ್ದ ಬಿನ್ಸ್ ಬೆಳೆಗೆ ಹಾನಿಯಾಗಿತ್ತು. ಉಷ್ಣಾಂಶದಿಂದ ಬೆಳೆ ಹಾನಿ ತಪ್ಪಿಸಲು ಪಾಲಿ ಹೌಸ್ ನಿರ್ಮಾಣಕ್ಕೆ ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗಿತ್ತು. ಸುಮಾರು ನಲವತ್ತು ಲಕ್ಷ ಖರ್ಚು ಮಾಡಿ ಮೂರು ಎಕರೆಯಲ್ಲಿ ಬೆಳೆದಿದ್ದ ಬೆಳೆಯು ನೆಲಕಚ್ಚಿದೆ.

ಮಳೆ ಅನಾಹುತ; ಉಕ್ಕಿ ಹರಿವ ನೀರಲ್ಲೆ ಜೆಸಿಬಿ ಮೂಲಕ ರಸ್ತೆ ದಾಟಿದ ಗ್ರಾಮಸ್ಥರು

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಹತ್ತರಕಿಹಾಳ ಗ್ರಾಮದಲ್ಲಿ ಶನಿವಾರ ರಾತ್ರಿ ಸುರಿದ ಮಳೆಯಿಂದಾಗಿ ಗ್ರಾಮದ ಹಳ್ಳ ತುಂಬಿ ಹರಿಯುತ್ತಿದೆ. ಹೀಗಾಗಿ ವಾಹನ ಸಂಚಾರ ಬಂದ್ ಆಗಿದ್ದರಿಂದ ಗ್ರಾಮಸ್ಥರು ಜೆಸಿಬಿ ಮೂಲಕ ಸೇತುವೆ ದಾಟಿದರು. ಹತ್ತರಕಿಹಾಳ ಗ್ರಾಮದಿಂದ ಬಸವನ ಬಾಗೇವಾಡಿ ರಸ್ತೆ ಸಂಚಾರ ಬಂದ್ ಆಗಿದೆ. ಬಸ್ಸಿನಲ್ಲಿ ಬಂದ ಗ್ರಾಮಸ್ಥರನ್ನು ಜೆಸಿಬಿ ಮೂಲಕ ಸೇತುವೆ ದಾಟಿಸಲಾಯಿತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರು ಸೇರಿ ರಾಜ್ಯದಲ್ಲಿ ಇನ್ನೆಷ್ಟು ದಿನ ಮಳೆ ಅಬ್ಬರ?

Rain News : ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯು ಮುಂದುವರಿಯಲಿದೆ. ಜೂ.9 ರಿಂದ 14ರವೆರೆಗೆ‌ ವ್ಯಾಪಕ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಿಗೆ ಮಳೆ ಅಲರ್ಟ್‌ ಇದೆ ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯದಲ್ಲಿ ಇನ್ನೊಂದು ವಾರ ಧಾರಾಕಾರ ಮಳೆ (Karnataka Weather Forecast) ಸುರಿಯಲಿದೆ. ಈ ಕುರಿತು ಹವಾಮಾನ ಇಲಾಖೆ ಎಚ್ಚರಿಕೆಯನ್ನು (Rain News) ನೀಡಿದೆ. ಕೆಲವೊಮ್ಮೆ ಗಾಳಿಯು ಗಂಟೆಗೆ 50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದ್ದು, ಗುಡುಗು, ಸಿಡಿಲಿನ ಆರ್ಭಟ ಇರಲಿದೆ.

ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ದಕ್ಷಿಣ ಕನ್ನಡಕ್ಕೂ ಎಚ್ಚರಿಕೆ ನೀಡಲಾಗಿದೆ. ಕೆಲವೊಮ್ಮೆ ಭಾರೀ ಗಾಳಿಯೊಂದಿಗೆ (40-50 kmph) ಮಳೆಯಾಗುವ ಸಾಧ್ಯತೆ ಇದೆ.

ಬಾಗಲಕೋಟೆ, ಕೊಪ್ಪಳ, ಧಾರವಾಡ, ಹಾವೇರಿ, ಬೆಳಗಾವಿ, ಗದಗ ಜಿಲ್ಲೆಗಳಲ್ಲಿ ಭಾರೀ ಗಾಳಿಯೊಂದಿಗೆ (40-50 kmph) ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗದ ಒಂದೆರಡು ಕಡೆಗಳಲ್ಲಿ ಮಳೆ ಸಂಭವಿಸುವ ಸಾಧ್ಯತೆಯಿದೆ. ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಲಘು ಮಳೆಯಾಗಬಹುದು.

ಬೆಂಗಳೂರಿನಲ್ಲಿ ಸಾಧಾರಣ ಮಳೆ ಸಾಧ್ಯತೆ

ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯಾಗಬಹುದು. ಕೆಲವೊಮ್ಮೆ ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವವಿದೆ. ಜತೆಗೆ ಮೇಲ್ಮೈ ಮಾರುತಗಳು ಕೆಲವೊಮ್ಮೆ ಬಲವಾದ ಮತ್ತು ಬಿರುಗಾಳಿಯ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 21 ಡಿ.ಸೆ ಇರಲಿದೆ.

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ವಿಜಯಪುರದ ದೋಣಿ ನದಿ ಸೇತುವೆ ಜಲಾವೃತ

ವಿಜಯಪುರದ ಯಾಳವಾರ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಭಾರಿ ಮಳೆಗೆ ಸಂಪೂರ್ಣ ದೋಣಿ ನದಿ ಸೇತುವೆ ಜಲಾವೃತದಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಸೇತುವೆ ಜಲಾವೃತದಿಂದ ಹೊಲಗಳಿಗೆ ತೆರಳುವ ರೈತರಿಗೂ ಸಂಕಷ್ಟ ಎದುರಾಗಿದೆ. ಡೋಣಿ ನದಿಗೆ ಕಟ್ಟಿರುವ ಹಳೆಯ ನೆಲ ಸೇತುವೆ ಜಲಾವೃತಗೊಂಡಿದೆ. ಹೊಸ ಸೇತುವೆ ಕಳಪೆ‌ ಕಾಮಗಾರಿಯಿಂದ ಶಿಥಿಲಗೊಂಡಿದೆ. ಹೀಗಾಗಿ ಜಲಾವೃತವಾದ ಹಳೆಯ ಸೇತುವೆಯ‌ ಮೇಲೆಯೇ ವಾಹನಗಳು ಸಂಚಾರಿಸುತ್ತಿದೆ. ಹೊಸ ಸೇತುವೆ ಅಲ್ಲಲ್ಲಿ ಬಿರುಕು ಬಿಟ್ಟು ಬೀಳುವ ಹಂತ ತಲುಪಿದೆ. ಹೀಗಾಗಿ ಹೊಸ ಸೇತುವೆ ಮೇಲೆ ಕಳೆದ ಎರಡು ವರ್ಷಗಳಿಂದ ಸಂಚಾರ‌ ನಿಷೇಧಿಸಲಾಗಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿರುವ ನೆಲ ಮಟ್ಟದ ಸೇತುವೆ ಮೇಲೆ ಓಡಾಟ ನಡೆಸುತ್ತಿದ್ದಾರೆ.

ಗ್ರಾಮಕ್ಕೆ ನುಗ್ಗಿದ ಹಳ್ಳದ ನೀರು

ವಿಜಯನಗರ ಜಿಲ್ಲೆಯ ಗುಡೇಕೋಟೆ ಹೋಬಳಿಯ ಮಹದೇವಪುರ ಗ್ರಾಮದಲ್ಲಿ ಮಳೆಯಿಂದಾಗಿ ಭಾರಿ ಪ್ರಮಾಣದ ಹಳ್ಳದ ನೀರು ಗ್ರಾಮಕ್ಕೆ ನುಗ್ಗಿದೆ. ಗ್ರಾಮದ ಬೀದಿಗಳಲ್ಲಿ ರಭಸವಾಗಿ ಹರಿದು ಮನೆ ಒಳಗೆ ನುಗ್ಗಿದೆ. ಮಹದೇವಪುರ ಗ್ರಾಮದ ಮಾರಿಗುಡ್ಡ ಏರಿಯಾದಿಂದ ಗ್ರಾಮಕ್ಕೆ ನೀರು ನುಗ್ಗುತ್ತಿದೆ. ಮಹದೇವಪುರ ಗ್ರಾಮದಲ್ಲಿ ದಲಿತ ಕೇರಿ ತಗ್ಗು ಪ್ರದೇಶದಲ್ಲಿ ಇದೆ.

ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರಾವಳಿಯ ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಚಿಕ್ಕಮಗಳೂರಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಗೆ ವಾಹನ ಸವಾರರು ಪರದಾಡಿದರು. ಮಳೆ ರಭಸಕ್ಕೆ ರಸ್ತೆ ಕಾಣದೆ ಇರುವುದರಿಂದ ಸವಾರರು ಕೊಟ್ಟಿಗೆಹಾರದಲ್ಲೇ ವಾಹನ ನಿಲ್ಲಿಸಿಕೊಂಡಿರುವುದು ಕಂಡು ಬಂತು.

ಗದಗದಲ್ಲಿ ಕೊಚ್ಚಿ ಹೋದ ಕಿರುಸೇತುವೆ

ಸತತ ಮಳೆಯಿಂದಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಧರ್ಮಾಪುರ ಗ್ರಾಮದ ಗಣಪತಿ ಕೆರೆಯ ಕಿರುಸೇತುವೆ ಕೊಚ್ಚಿ ಹೋದೆ. ಜಮೀನುಗಳಿಗೆ ಸಂಪರ್ಕ ಕಲ್ಪಿಸಲು ನಿರ್ಮಾಣ ಮಾಡಿದ್ದ ಕಿರುಸೇತುವೆ ನೀರುಪಾಲಾಗಿದೆ. ಕಳೆದ ವರ್ಷವಷ್ಟೇ ರೈತರು ತಮ್ಮ ಜಮೀನುಗಳಿಗೆ ತೆರಳಲು ನಿರ್ಮಿಸಲಾಗಿತ್ತು. ನಿರಂತರ ಮಳೆಯಿಂದಾಗಿ ಕಿರುಸೇತುವೆ ರಸ್ತೆ ಕೊಚ್ಚಿ ಹೋಗಿದ್ದು, ರೈತರು ಪರದಾಡುತ್ತಿದ್ದಾರೆ. ರಸ್ತೆ ಇಲ್ಲದ ಹಿನ್ನೆಲೆ ಇದೀಗ ರೈತರು ಕೃಷಿ ಚಟುವಟಿಕೆ ನಡೆಸಲು ಸಮಸ್ಯೆಯಾಗಿದೆ.

ಬೆಳಗಾವಿಯಲ್ಲಿ ಕೆರೆಯಂತಾದ ರಸ್ತೆಗಳು

ಮಳೆರಾಯನ ಅರ್ಭಟಕ್ಕೆ ಬೆಳಗಾವಿ ಕ್ಯಾಂಪ್‌ ಪ್ರದೇಶದ ಹತ್ತಿರ ರಸ್ತೆಗಳು ಕೆರೆಯಂತೆ ಮಾರ್ಪಾಟ್ಟಿವೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ. ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಬೆಳಗಾವಿಯ ಖಾನಾಪುರ ರಸ್ತೆಯಲ್ಲಿ ಎರಡು ‌ಅಡಿ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ಬೆಳಗಾವಿಯ ಗ್ಲೋಬ್ ಥೀಯೇಟರ್‌ ಅಂಗಳಕ್ಕೆ ನೀರು ನುಗ್ಗಿತ್ತು. ಟಿಕೆಟ್ ಕೌಂಟರ್ ಸಂಪೂರ್ಣ ಜಲಾವೃತಗೊಂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಉತ್ತರ ಒಳನಾಡು, ಕರಾವಳಿಯಲ್ಲಿ ವ್ಯಾಪಕ ಮಳೆ; ಶಾಲೆಗೆ ನುಗ್ಗಿದ ನೀರು, ಮಕ್ಕಳಿಗೆ ರಜೆ

Karnataka Weather Forecast : ರಾಜ್ಯಾದ್ಯಂತ ಮಳೆಯ (Rain News) ಅಬ್ಬರ ಮುಂದುವರಿದಿದೆ. ಭಾರಿ ಮಳೆಯಿಂದಾಗಿ ಉಡುಪಿಯ ಶಾಲೆಗೆ ನೀರು ನುಗ್ಗಿದ್ದರಿಂದ ಮಕ್ಕಳಿಗೆ ರಜೆ ನೀಡಲಾಗಿತ್ತು. ಕೆಲವೆಡೆ ರಸ್ತೆಗಳು ಕೆರೆಯಂತೆ ಮಾರ್ಪಾಡಾಗಿತ್ತು. ಎಲ್ಲೆಲ್ಲಿ ಏನೆಲ್ಲ ಅವಾಂತರಗಳು ಆಗಿವೆ. ಇನ್ನೂ ಎಷ್ಟು ದಿನ ಮಳೆಯಾಟ ಇರಲಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Karnataka weather Forecast
Koo

ಉಡುಪಿ: ಉತ್ತರ ಒಳನಾಡು, ಕರಾವಳಿ ಸೇರಿ ಮಲೆನಾಡು ಭಾಗದ ವಿವಿಧೆಡೆ ಭಾರಿ ವರ್ಷಧಾರೆಗೆ ಜನರು ತತ್ತರಿಸಿಹೋಗಿದ್ದಾರೆ. ನಾಲ್ಕೈದು ದಿನಗಳು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka weather Forecast) ನೀಡಿದೆ. ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಗೆ (Rain News) ಉಡುಪಿಯ ಬೈಂದೂರು ತಾಲೂಕಿನ ಯಡ್ತರೆ ಸಮೀಪ ರಾಹುತನಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನೀರು ನುಗ್ಗಿದೆ. ತರಗತಿ ಕೋಣೆಗಳು ಜಲಾವೃತಗೊಂಡ ಪರಿಣಾಮ ಶಾಲಾ ಮಕ್ಕಳಿಗೆ ಶನಿವಾರ ರಜೆ ನೀಡಲಾಗಿತ್ತು. ಶಾಲೆ ಸಮೀಪ ಸಮರ್ಪಕವಾದ ಚರಂಡಿ ವ್ಯವಸ್ಥೆಯಿಲ್ಲದೇ ರಾಷ್ಟ್ರೀಯ ಹೆದ್ದಾರಿಯಿಂದ ಹರಿದ ನೀರು ನೇರ ಶಾಲೆಗೆ ನುಗ್ಗುತ್ತಿದೆ. ಕಳೆದ ಹಲವು ವರ್ಷಗಳಿಂದ ಮಳೆಗಾಲದಲ್ಲಿ ಇದೇ ಸಮಸ್ಯೆ ಆಗುತ್ತಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ದಾವಣಗೆರೆಯಲ್ಲಿ ಕೆರೆಯಂತಾದ ಜಮೀನುಗಳು

ದಾವಣಗೆರೆಯ ಜಗಳೂರು ತಾಲೂಕಿನಲ್ಲಿ ಶನಿವಾರ ಭರ್ಜರಿ ಮಳೆಯಾಗಿದೆ. ಹನುಮಂತಪುರ, ದಿದ್ದಗಿ , ಹುಚ್ಚವನಹಳ್ಳಿ ಪಲ್ಲಾಗಟ್ಟೆ, ಮೇದಕೇರನಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭಾರಿ ಮಳೆಯಾಗಿದೆ. ಧಾರಾಕಾರವಾಗಿ ಸುರಿದ ಮಳೆಯಿಂದ ಜಮೀನುಗಳು ಕೆರೆಯಂತಾಗಿದೆ.

ಧಾರವಾಡದ ಆಯಟ್ಟಿ ಬ್ರಿಡ್ಜ್ ಬಂದ್‌

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಬ್ರಿಡ್ಜ್ ಮಳೆಗೆ ಮುಳುಗಡೆಯಾಗಿದ್ದು, ಸಂಚಾರ ಬಂದ್‌ ಮಾಡಲಾಗಿದೆ. ಹಲವಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆಯು ಮಳೆ ಬಂದರೆ ಸಾಕು ನೀರಿನಲ್ಲಿ ಮುಳುಗಡೆಯಾಗುತ್ತದೆ. ಹೀಗಾಗಿ ಸೇತುವೆ ಮೇಲೆ ನೀರು ತಗ್ಗುವವರೆಗೂ ಜನರ ಓಡಾಟ ಸಂಪೂರ್ಣ ಬಂದ್ ಮಾಡಲಾಗಿದೆ. ಇನ್ನೂ ಸೇತುವೆ ಎತ್ತರ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದರೂ ಅಧಿಕಾರಿಗಳು ಮಾತ್ರ ಕ್ಯಾರೆ ಎನ್ನುತಿಲ್ಲ. ಇತ್ತ ಹೊಸ ಬ್ರಿಡ್ಜ್ ನಿರ್ಮಾಣ ಮಾಡುವವರೆಗೂ ಜನರ ಸಮಸ್ಯೆ ತಪ್ಪಿದ್ದಲ್ಲ. ಬ್ರಿಡ್ಜ್ ಕಾಮಗಾರಿಗೆ ಟೆಂಡರ್ ಪ್ರಕ್ರಿಯೆ ಮುಗಿದರೂ ಸಹ ಕೆಲಸ ಮಾತ್ರ ಶುರುವಾಗಿಲ್ಲ.

karnataka weather Forecast

ಇದನ್ನೂ ಓದಿ: Murder Case : ತಂಗಿಗೆ ವರದಕ್ಷಿಣೆ ಟಾರ್ಚರ್‌; ಬಾಮೈದನ ಕೊಲೆ ಮಾಡಿದ ಬಾವ

ವಿಜಯಪುರದ ದೋಣಿ ನದಿ ಸೇತುವೆ ಜಲಾವೃತ

ವಿಜಯಪುರದ ಯಾಳವಾರ ಗ್ರಾಮದ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಭಾರಿ ಮಳೆಗೆ ಸಂಪೂರ್ಣ ದೋಣಿ ನದಿ ಸೇತುವೆ ಜಲಾವೃತದಿಂದ ರಸ್ತೆ ಸಂಪರ್ಕ ಕಡಿತವಾಗಿದೆ. ಸೇತುವೆ ಜಲಾವೃತದಿಂದ ಹೊಲಗಳಿಗೆ ತೆರಳುವ ರೈತರಿಗೂ ಸಂಕಷ್ಟ ಎದುರಾಗಿದೆ. ಡೋಣಿ ನದಿಗೆ ಕಟ್ಟಿರುವ ಹಳೆಯ ನೆಲ ಸೇತುವೆ ಜಲಾವೃತಗೊಂಡಿದೆ. ಹೊಸ ಸೇತುವೆ ಕಳಪೆ‌ ಕಾಮಗಾರಿಯಿಂದ ಶಿಥಿಲಗೊಂಡಿದೆ. ಹೀಗಾಗಿ ಜಲಾವೃತವಾದ ಹಳೆಯ ಸೇತುವೆಯ‌ ಮೇಲೆಯೇ ವಾಹನಗಳು ಸಂಚಾರಿಸುತ್ತಿದೆ. ಹೊಸ ಸೇತುವೆ ಅಲ್ಲಲ್ಲಿ ಬಿರುಕು ಬಿಟ್ಟು ಬೀಳುವ ಹಂತ ತಲುಪಿದೆ. ಹೀಗಾಗಿ ಹೊಸ ಸೇತುವೆ ಮೇಲೆ ಕಳೆದ ಎರಡು ವರ್ಷಗಳಿಂದ ಸಂಚಾರ‌ ನಿಷೇಧಿಸಲಾಗಿದೆ. ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾಗಿರುವ ನೆಲ ಮಟ್ಟದ ಸೇತುವೆ ಮೇಲೆ ಓಡಾಟ ನಡೆಸುತ್ತಿದ್ದಾರೆ.

ಗ್ರಾಮಕ್ಕೆ ನುಗ್ಗಿದ ಹಳ್ಳದ ನೀರು

ವಿಜಯನಗರ ಜಿಲ್ಲೆಯ ಗುಡೇಕೋಟೆ ಹೋಬಳಿಯ ಮಹದೇವಪುರ ಗ್ರಾಮದಲ್ಲಿ ಮಳೆಯಿಂದಾಗಿ ಭಾರಿ ಪ್ರಮಾಣದ ಹಳ್ಳದ ನೀರು ಗ್ರಾಮಕ್ಕೆ ನುಗ್ಗಿದೆ. ಗ್ರಾಮದ ಬೀದಿಗಳಲ್ಲಿ ರಭಸವಾಗಿ ಹರಿದು ಮನೆ ಒಳಗೆ ನುಗ್ಗಿದೆ. ಮಹದೇವಪುರ ಗ್ರಾಮದ ಮಾರಿಗುಡ್ಡ ಏರಿಯಾದಿಂದ ಗ್ರಾಮಕ್ಕೆ ನೀರು ನುಗ್ಗುತ್ತಿದೆ. ಮಹದೇವಪುರ ಗ್ರಾಮದಲ್ಲಿ ದಲಿತ ಕೇರಿ ತಗ್ಗು ಪ್ರದೇಶದಲ್ಲಿ ಇದೆ.

ಚಿಕ್ಕಮಗಳೂರು, ಉತ್ತರ ಕನ್ನಡದಲ್ಲಿ ಮಳೆಯ ಅಬ್ಬರ

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿದಿದೆ. ಕರಾವಳಿಯ ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇನ್ನೂ ಚಿಕ್ಕಮಗಳೂರಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್, ಬಾಳೂರು ಸುತ್ತಮುತ್ತ ಭಾರೀ ಮಳೆಯಾಗಿದೆ. ಚಾರ್ಮಾಡಿ ಘಾಟಿಯಲ್ಲಿ ಭಾರೀ ಮಳೆಗೆ ವಾಹನ ಸವಾರರು ಪರದಾಡಿದರು. ಮಳೆ ರಭಸಕ್ಕೆ ರಸ್ತೆ ಕಾಣದೆ ಇರುವುದರಿಂದ ಸವಾರರು ಕೊಟ್ಟಿಗೆಹಾರದಲ್ಲೇ ವಾಹನ ನಿಲ್ಲಿಸಿಕೊಂಡಿರುವುದು ಕಂಡು ಬಂತು.

ಗದಗದಲ್ಲಿ ಕೊಚ್ಚಿ ಹೋದ ಕಿರುಸೇತುವೆ

ಸತತ ಮಳೆಯಿಂದಾಗಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಧರ್ಮಾಪುರ ಗ್ರಾಮದ ಗಣಪತಿ ಕೆರೆಯ ಕಿರುಸೇತುವೆ ಕೊಚ್ಚಿ ಹೋದೆ. ಜಮೀನುಗಳಿಗೆ ಸಂಪರ್ಕ ಕಲ್ಪಿಸಲು ನಿರ್ಮಾಣ ಮಾಡಿದ್ದ ಕಿರುಸೇತುವೆ ನೀರುಪಾಲಾಗಿದೆ. ಕಳೆದ ವರ್ಷವಷ್ಟೇ ರೈತರು ತಮ್ಮ ಜಮೀನುಗಳಿಗೆ ತೆರಳಲು ನಿರ್ಮಿಸಲಾಗಿತ್ತು. ನಿರಂತರ ಮಳೆಯಿಂದಾಗಿ ಕಿರುಸೇತುವೆ ರಸ್ತೆ ಕೊಚ್ಚಿ ಹೋಗಿದ್ದು, ರೈತರು ಪರದಾಡುತ್ತಿದ್ದಾರೆ. ರಸ್ತೆ ಇಲ್ಲದ ಹಿನ್ನೆಲೆ ಇದೀಗ ರೈತರು ಕೃಷಿ ಚಟುವಟಿಕೆ ನಡೆಸಲು ಸಮಸ್ಯೆಯಾಗಿದೆ.

ಬೆಳಗಾವಿಯಲ್ಲಿ ಕೆರೆಯಂತಾದ ರಸ್ತೆಗಳು

ಮಳೆರಾಯನ ಅರ್ಭಟಕ್ಕೆ ಬೆಳಗಾವಿ ಕ್ಯಾಂಪ್‌ ಪ್ರದೇಶದ ಹತ್ತಿರ ರಸ್ತೆಗಳು ಕೆರೆಯಂತೆ ಮಾರ್ಪಾಟ್ಟಿವೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದೆ. ವಾಹನ ಸಂಚಾರಕ್ಕೆ ಅಡೆತಡೆ ಉಂಟಾಯಿತು. ಬೆಳಗಾವಿಯ ಖಾನಾಪುರ ರಸ್ತೆಯಲ್ಲಿ ಎರಡು ‌ಅಡಿ ನೀರು ನಿಂತು ಅವಾಂತರವೇ ಸೃಷ್ಟಿಯಾಗಿತ್ತು. ಬೆಳಗಾವಿಯ ಗ್ಲೋಬ್ ಥೀಯೇಟರ್‌ ಅಂಗಳಕ್ಕೆ ನೀರು ನುಗ್ಗಿತ್ತು. ಟಿಕೆಟ್ ಕೌಂಟರ್ ಸಂಪೂರ್ಣ ಜಲಾವೃತಗೊಂಡಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
IND vs PAK
ಕ್ರೀಡೆ13 mins ago

IND vs PAK : ಭಾರತಕ್ಕೆ ಗೆಲುವಿನ ಚಾನ್ಸ್ ಕೇವಲ ಶೇ. 8, ಪಾಕ್ ಗೆ ಶೇ.92 ಇತ್ತು; ಆದರೆ…

Poonam Pandey making cake with ice cream with hot look
ಬಾಲಿವುಡ್19 mins ago

Poonam Pandey: ಪೂನಂ ಪಾಂಡೆಯ ರೆಸಿಪಿಗಿಂತ ಏಪ್ರನ್ ಮೇಲೆ ನೆಟ್ಟಿಗರ ಕಣ್ಣು; ರಸಿಕರ ಕಣ್ಣರಳಿಸಿದ ಹಾಟ್‌ ಬೆಡಗಿ!

Vastu Tips
ಧಾರ್ಮಿಕ23 mins ago

Vastu Tips: ನೆಮ್ಮದಿಯಿಂದ ನಿದ್ದೆ ಮಾಡಬೇಕೆ? ಈ ವಾಸ್ತು ನಿಯಮ ಪಾಲಿಸಿ

pm narendra Modi Cabinet
ಪ್ರಮುಖ ಸುದ್ದಿ23 mins ago

PM Narendra Modi: ಇಂದು ಸಂಜೆ ನರೇಂದ್ರ ಮೋದಿ ಸಂಪುಟ ಮೊದಲ ಸಭೆ; ಏನು ಅಜೆಂಡಾ?

Narendra Modi Oath Ceremony Celebs Congratulate PM Modi
ಸಿನಿಮಾ40 mins ago

Narendra Modi: ಪ್ರಧಾನಿ ಮೋದಿಗೆ ಸೆಲೆಬ್ರಿಟಿಗಳಿಂದ ಅಭಿನಂದನೆಗಳ ಮಹಾಪೂರ !

IND vs PAK
ಪ್ರಮುಖ ಸುದ್ದಿ42 mins ago

IND vs PAK : ಭಾರತ ಪರ ಬೆಟ್ಟಿಂಗ್ ಕಟ್ಟಿ 5.4 ಕೋಟಿ ರೂಪಾಯಿ ಗೆದ್ದ ಕೆನಡಾದ ರ್ಯಾಪರ್ ಡ್ರೇಕ್!

IND vs PAK
ಕ್ರೀಡೆ1 hour ago

IND vs PAK : ಪಾಕಿಸ್ತಾನದ ಆಟಗಾರನಿಗೆ ಕಣ್ಣೀರು ಹಾಕಿಸಿದ ಭಾರತ ತಂಡ!

PM Narendra Modi and Siddaramaiah
ಪ್ರಮುಖ ಸುದ್ದಿ1 hour ago

PM Narendra Modi: “ಒಕ್ಕೂಟ ವ್ಯವಸ್ಥೆಯ ಆಶಯ…” ಪ್ರಧಾನಿ ಮೋದಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

IND vs PAK
ಕ್ರೀಡೆ2 hours ago

IND vs PAK : ‘ಗೆಲುವಿಗೆ ಮೊದಲೇ ಸಂಭ್ರಮಿಸಬೇಡಿ, ವಿಶ್ವ ಕಪ್​ನಲ್ಲಿ ನಮ್ದೇ ಹವಾ’; ಪಾಕಿಸ್ತಾನಕ್ಕೆ ತಿರುಗೇಟು ಕೊಟ್ಟ ಭಾರತದ ಅಭಿಮಾನಿಗಳು

road rage assault case
ಕ್ರೈಂ2 hours ago

Assault Case: ತುರ್ತು ಚಿಕಿತ್ಸೆಗೆ ತೆರಳುತ್ತಿದ್ದ ಆಂಬ್ಯುಲೆನ್ಸ್ ತಡೆಗಟ್ಟಿ ಹಲ್ಲೆ ಮಾಡಿದ ಕ್ರೂರಿಗಳು!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ7 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ7 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 weeks ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

ಟ್ರೆಂಡಿಂಗ್‌