Viral Video| ಮೊಸಳೆ ಪಕ್ಕ, ಮೊಸಳೆಯಂತೆಯೇ ಹೋಗಿ ಮಲಗಿ ಅದರ ಕಾಲು ಎಳೆದು ಕೀಟಲೆ ಕೊಟ್ಟವನಿಗೆ ನೆಟ್ಟಿಗರಿಂದ ಬುದ್ಧಿವಾದ! - Vistara News

ವೈರಲ್ ನ್ಯೂಸ್

Viral Video| ಮೊಸಳೆ ಪಕ್ಕ, ಮೊಸಳೆಯಂತೆಯೇ ಹೋಗಿ ಮಲಗಿ ಅದರ ಕಾಲು ಎಳೆದು ಕೀಟಲೆ ಕೊಟ್ಟವನಿಗೆ ನೆಟ್ಟಿಗರಿಂದ ಬುದ್ಧಿವಾದ!

ವಿಡಿಯೊ ನೋಡಿದ ಅನೇಕರು ಇದು ಮೂರ್ಖತನದ ಪರಮಾವಧಿ ಎಂದೇ ಹೇಳಿದ್ದಾರೆ. ‘ಈತ ಅತ್ಯಂತ ಸೃಜನಾತ್ಮಕವಾಗಿ ಸಾಯಲು ಹೊರಟಿದ್ದಾನೆ’ ಎಂದೂ ಟೀಕಿಸಿದ್ದಾರೆ.

VISTARANEWS.COM


on

Man Wears Crocodile Costume pull its leg video viral
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೊಸಳೆ ಅದೆಷ್ಟು ಭಯಂಕರ ಸರೀಸೃಪ ಎಂಬುದು ನಮಗೆಲ್ಲ ಗೊತ್ತು. ಅದು ನರಭಕ್ಷಕ..ಮೊಸಳೆಯಿದ್ದ ನದಿ-ಕೆರೆಗಳ ದಡಕ್ಕೆ ಹೋದಾಗ ಮೈಯೆಲ್ಲ ಕಣ್ಣಾಗಿರಬೇಕು. ಇಲ್ಲದೆ ಇದ್ದರೆ ಅದರ ಬಾಯಿಗೆ ಬೀಳಲು ನಿಮಿಷ ಸಾಕು.. ಹೀಗಿರುವಾಗ ವ್ಯಕ್ತಿಯೊಬ್ಬ ಮೊಸಳೆಯ ಪಕ್ಕದಲ್ಲಿ ಮಲಗಿ, ಅದರ ಕಾಲು- ಮೈ ಮುಟ್ಟುತ್ತ ತಮಾಷೆಯಾಡಿದ್ದಾನೆ. ಆದರೆ ಅವನು ಇದಕ್ಕಾಗಿ ಬೊಂಬಾಟ್​ ಐಡಿಯಾ ಮಾಡಿದ್ದ. ಮೊಸಳೆಯಂಥ ವೇಷ ಧರಿಸಿ ಆ ಸರೀಸೃಪದ ಪಕ್ಕ ಮಲಗಿಕೊಂಡಿದ್ದ.

ಈಗಂತೂ ಎಲ್ಲ ರೀತಿಯ ಪ್ರಾಣಿಗಳ ಕಾಸ್ಟ್ಯೂಮ್​​ಗಳು (ಉಡುಪು) ಮಾರುಕಟ್ಟೆಯಲ್ಲಿ ಲಭ್ಯ. ಹುಲಿ, ಕರಡಿ, ಗೊರಿಲ್ಲಾ, ನಾಯಿ ಸೇರಿ ವಿವಿಧ ಪ್ರಾಣಿಗಳ ಮಾದರಿಯ ಬಟ್ಟೆಗಳು ಸಿಗುತ್ತವೆ. ಈ ವ್ಯಕ್ತಿ ಮೊಸಳೆಯಂಥ ಉಡುಪು ಖರೀದಿಸಿದ್ದ. ನದಿ ದಡದ ಮೇಲೆ, ಮೊಸಳೆಯ ಚರ್ಮದಂಥ ಬಟ್ಟೆ ಧರಿಸಿ, ನಿಜವಾದ ಮೊಸಳೆ ಪಕ್ಕದಲ್ಲಿ ಮಲಗಿದ್ದ. ಹಾಗೇ, ಮಲಗಿದವನು ಸುಮ್ಮನಿರದೆ, ಅದರ ಕಾಲನ್ನು ಮುಟ್ಟುತ್ತಿದ್ದ. ಹಿಡಿದು ಎಳೆಯುತ್ತಿದ್ದ. ಒಟ್ಟಾರೆ ಅದಕ್ಕೆ ಕೀಟಲೆ ಕೊಡುತ್ತಿದ್ದ. ಆದರೆ ಆ ಮೊಸಳೆ ಸುಮ್ಮನೆ ಮಲಗಿತ್ತು. ಬಹುಶ್ಯಃ ಅವನನನ್ನು ಅದು ಇನ್ನೊಂದು ಮೊಸಳೆ ಎಂದೇ ಭಾವಿಸಿತ್ತು. ಈ ವಿಡಿಯೊವನ್ನು ನರೇಂದ್ರ ಸಿಂಗ್​ ಎಂಬುವರು ಟ್ವಿಟರ್​​ನಲ್ಲಿ ಶೇರ್​ ಮಾಡಿಕೊಂಡು ‘ಈತ ಅದ್ಯಾವ ಡ್ರಗ್ಸ್​ ತೆಗೆದುಕೊಂಡಿರಬಹುದು?’ ಎಂದು ಫನ್ನಿ ಕ್ಯಾಪ್ಷನ್​ ಬರೆದಿದ್ದಾರೆ.

ಆದರೆ ನೆಟ್ಟಿಗರು ಆ ವ್ಯಕ್ತಿಯ ಈ ಕೀಟಲೆಯನ್ನು ಪ್ರೋತ್ಸಾಹಿಸಿಲ್ಲ. ‘ಶೌರ್ಯಕ್ಕೂ, ಮೂರ್ಖತನಕ್ಕೂ ಒಂದು ಚಿಕ್ಕ ಅಂತರವಷ್ಟೇ ಇದೆ’ ಎಂದು ಒಬ್ಬರು ಕಮೆಂಟ್ ಬರೆದಿದ್ದರೆ, ಇನ್ನೊಬ್ಬರು ‘ಅತ್ಯಂತ ಸೃಜನಶೀಲ ಮಾರ್ಗದಲ್ಲಿ ಸಾಯಲು ಹೊರಟಿದ್ದಾನೆ’ ಎಂದು ಹೇಳಿದ್ದಾರೆ. ಮೊಸಳೆಯೊಂದಿಗೆ ಆಟವೆಂದರೆ ಅಪಾಯದ ಪರಮಾವಧಿ ಎಂದೇ ಎಲ್ಲರೂ ಹೇಳುತ್ತಾರೆ. ಅಂಥದ್ದರಲ್ಲಿ ಈತ ತಾನಾಗೇ ಹೋಗಿ, ಕೆಣಕಿ ಅದರ ಬಾಯಿಗೆ ಬೀಳುತ್ತಿದ್ದಾನೆ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮನಕಲಕುವ ಸುದ್ದಿ ಇದು; ಬೋಟ್​ ಕಟ್ಟುತ್ತಿದ್ದ ಅಪ್ಪನ ಎದುರೇ 1 ವರ್ಷದ ಮಗುವನ್ನು ಎಳೆದೊಯ್ದು, ನುಂಗಿದ ಮೊಸಳೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral News: ಇವನು ಅಂತಿಂತಾ ಕಳ್ಳನಲ್ಲ…ಮನೆ ಎಲ್ಲಾ ದೋಚಿ, ಲೆಟರ್‌ ಬರೆದಿಟ್ಟು ಕ್ಷಮೆ ಕೇಳ್ತಾನೆ!

Viral News: ಸೆಲ್ವಿನ್‌ ಕುಟುಂಬಸ್ಥರು ಪರಿಶೀಲನೆ ನಡೆಸಿದಾಗ 60,000 ನಗದು, 12 ಗ್ರಾಂ ಚಿನ್ನ ಮತ್ತು ಬೆಳ್ಳಿಯ ವಸ್ತುಗಳು ದೋಚಿರುವುದು ತಿಳಿದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆಗ ಪೊಲೀಸರಿಗೆ ಪತ್ರವೊಂದು ಪತ್ತೆಯಾಗಿತ್ತು. ಆ ಪತ್ರವನ್ನು ಕಳ್ಳನೇ ಮನೆಯ ಮಾಲೀಕನಿಗೆ ಬರೆದಿದ್ದು, “ದಯವಿಟ್ಟು ಕ್ಷಮಿ..ಒಂದು ತಿಂಗಳಲ್ಲಿ ನಿಮ್ಮ ಎಲ್ಲಾ ವಸ್ತುಗಳನ್ನು ವಾಪಸ್‌ ಮಾಡುತ್ತೇನೆ. ನನ್ನ ಮನೆಯ ಸದಸ್ಯರೊಬ್ಬರ ಆರೋಗ್ಯ ಸ್ಥಿತಿ ಬಹಳ ಹದಗೆಟ್ಟಿದೆ. ಅದಕ್ಕಾಗಿ ಈ ಕೃತ್ಯ ಎಸಗಿದ್ದೇನೆ” ಎಂದು ಬರೆದಿದ್ದ.

VISTARANEWS.COM


on

Viral News
Koo

ಚೆನ್ನೈ: ಒಬ್ಬ ವ್ಯಕ್ತಿ ಕಳ್ಳನಾಗಬೇಕೆಂದರೆ ಅದರ ಹಿಂದೆ ಯಾವುದಾದರೂ ಬಲವಾದ ಕಾರಣವಿರುತ್ತೆ ಅನ್ನುತ್ತಾರೆ ಮನಶಾಸ್ತ್ರಜ್ಞರು. ಆದ್ರೆ ಒಮ್ಮೆ ಕಳ್ಳತನ ಮಾಡಿದ ಮೇಲೆ ಅದೇ ಕಸುಬು ಚೆನ್ನಾಗಿದೆ ಎಂದು ಮುಂದುವರೆಸುವವರೇ ಹೆಚ್ಚು. ಇನ್ನು ಕೆಲವೇ ಕೆಲವರು ಏನೋ ಅನಿವಾರ್ಯತೆಗೆ ಕಟ್ಟು ಬಿದ್ದು ಇಂತಹ ಕೆಲಸಕ್ಕೆ ಕೈ ಹಾಕುವುದೂ ಇದೆ. ಇದೀಗ ಮನೆಗೆ ನುಗ್ಗಿದ ಕಳ್ಳನೋರ್ವ ಸಾಮಾನುಗಳನ್ನೆಲ್ಲಾ ದೋಚಿ ಬಳಿಕ ಕ್ಷಮಾಪಣೆ ಪತ್ರ ಬರೆದಿಟ್ಟಿರುವ ಘಟನೆ(Viral News) ತಮಿಳುನಾಡಿನಲ್ಲಿ ನಡೆದಿದೆ.

ಘಟನೆ ವಿವರ

ಮೆಗ್ನಾನಪುರಂನ ಸಾತನ್‌ಕುಲಂನಲ್ಲಿ ಈ ಘಟನೆ ನಡೆದಿದ್ದು, ನಿವೃತ ಶಿಕ್ಷಕ ದಂಪತಿ ಮನೆಯಲ್ಲಿ ಜೂನ್‌ 17ರಂದು ಕಳ್ಳತನ ನಡೆದಿತ್ತು. ಸೆಲ್ವಿನ್‌ ಮತ್ತು ಅವರ ಪತ್ನಿ ತಮ್ಮ ಮಗನನ್ನು ಭೇಟಿಯಾಗಲು ಚೆನ್ನೈಗೆ ತೆರಳಿದ್ದರು. ಈ ವೇಳ ಕಳ್ಳನೋರ್ವ ಮನೆಗೆ ನುಗ್ಗಿದ್ದಾರೆ. ನುಗ್ಗಿ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾನೆ. ಇನ್ನು ದಂಪತಿ ತಾವು ಇಲ್ಲದಾಗ ಮನೆ ಸ್ವಚ್ಛಗೊಳಿಸಲು ಸೆಲ್ವಿ ಎಂಬ ಕೆಲಸದಾಕೆಯನ್ನು ನಿಯೋಜಿಸಿದ್ದರು. ಸೆಲ್ವಿ ಎಂದಿನಂತೆ ಮನೆ ಕೆಲಸಕ್ಕೆಂದು ಬಂದಾಗ ಬಾಗಿ ಒಡೆದಿರುವುದನ್ನು ಕಂಡು ಗಾಬರಿ ಆಗಿದ್ದಾಳೆ. ತಕ್ಷಣ ಮನೆಯ ಯಜಮಾನ ಸೆಲ್ವಿನ್‌ಗೆ ಕರೆ ಮಾಡಿ ವಿಷಯ ತಿಳಿಸಿದ್ದಳು.

ತಕ್ಷಣ ಸ್ಥಳಕ್ಕೆ ಬಂದ ಸೆಲ್ವಿನ್‌ ಕುಟುಂಬಸ್ಥರು ಪರಿಶೀಲನೆ ನಡೆಸಿದಾಗ 60,000 ನಗದು, 12 ಗ್ರಾಂ ಚಿನ್ನ ಮತ್ತು ಬೆಳ್ಳಿಯ ವಸ್ತುಗಳು ದೋಚಿರುವುದು ತಿಳಿದಿದೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಆಗ ಪೊಲೀಸರಿಗೆ ಪತ್ರವೊಂದು ಪತ್ತೆಯಾಗಿತ್ತು. ಆ ಪತ್ರವನ್ನು ಕಳ್ಳನೇ ಮನೆಯ ಮಾಲೀಕನಿಗೆ ಬರೆದಿದ್ದು, “ದಯವಿಟ್ಟು ಕ್ಷಮಿ..ಒಂದು ತಿಂಗಳಲ್ಲಿ ನಿಮ್ಮ ಎಲ್ಲಾ ವಸ್ತುಗಳನ್ನು ವಾಪಸ್‌ ಮಾಡುತ್ತೇನೆ. ನನ್ನ ಮನೆಯ ಸದಸ್ಯರೊಬ್ಬರ ಆರೋಗ್ಯ ಸ್ಥಿತಿ ಬಹಳ ಹದಗೆಟ್ಟಿದೆ. ಅದಕ್ಕಾಗಿ ಈ ಕೃತ್ಯ ಎಸಗಿದ್ದೇನೆ” ಎಂದು ಬರೆದಿದ್ದ.

ಇನು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದು, ಕಳ್ಳನಿಗಾಗಿ ಬಲೆ ಬೀಸಿದ್ದಾರೆ. ಕಳೆದ ವರ್ಷ ಕೇರಳದಲ್ಲಿ ಇಂತಹುದೇ ಘಟನೆ ನಡೆದಿದ್ದು, ಮೂರು ವರ್ಷದ ಮಗುವಿನ ಚಿನ್ನದ ಸರವನ್ನು ಕದ್ದ ಕಳ್ಳನೊಬ್ಬ ಅದನ್ನು ಮಾರಿ ಬಂದ ಹಣವನ್ನು ಕ್ಷಮಾಪಣೆ ಪತ್ರದೊಂದಿಗೆ ಹಿಂದಿರುಗಿಸಿದ್ದಾನೆ. ಪಾಲಕ್ಕಾಡ್ ಬಳಿ ಈ ಘಟನೆ ನಡೆದಿತ್ತು.

ಮಧ್ಯಪ್ರದೇಶದ ಭಿಂದ್ ನಗರದಲ್ಲೂ ಖದೀಮನೊಬ್ಬ ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ಬೆಲೆ ಬಾಳುವ ವವಸ್ತುಗಳನ್ನು ಕಳ್ಳತನ ಮಾಡಿ ಪತ್ರ ಬರೆದಿಟ್ಟು ಕ್ಷಮೆ ಕೇಳಿರುವ ಘಟನೆ ನಡೆದಿತ್ತು. ನಗರದ ಪೊಲೀಸ್​ ಅಧಿಕಾರಿಯ ಮನೆಯಿಂದ ಬೆಲೆಬಾಳುವ ವಸ್ತುಗಳನ್ನು ಕದ್ದು ಕ್ಷಮೆಯಾಚಿಸುವ ಪತ್ರವೊಂದನ್ನು ಕಳ್ಳ ಬರೆದಿಟ್ಟು ಪರಾರಿಯಾಗಿದ್ದ. ಸ್ನೇಹಿತನ ಜೀವ ಉಳಿಸುವ ಸಲುವಾಗಿ ನಾನು ನಿಮ್ಮ ಮನೆಯಲ್ಲಿ ಕಳ್ಳತನ ಮಾಡುತ್ತಿದ್ದೇನೆ ಮತ್ತು ಕದ್ದ ಹಣವನ್ನು ಹಿಂದಿರುಗಿಸುತ್ತೇನೆ ಎಂದು ಕಳ್ಳ ತನ್ನ ಪತ್ರದಲ್ಲಿ ಬರೆದಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Continue Reading

ಕ್ರೀಡೆ

Virat Kohli: ಕಟ್ಲೆಟ್‌ ಬಿಸಿ ಮಾಡಲು ಪರದಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Virat Kohli: ಓವನ್​ ಒಳಗಡೆ ಹೋದ ಕಟ್ಲೆಟ್‌ ಹೊರಬಾರದೇ ಇದ್ದಾಗ ಕೊಹ್ಲಿ ಓವನ್​ ಒಳಗಡೆ ಕೈ ಕಾಕಿ ಕೊನೆಗೂ ಕಟ್ಲೆಟ್‌ ಹೊರಗಡೆ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Virat Kohli
Koo

ಬಾರ್ಬಡೋಸ್​: ಟೀಮ್​ ಇಂಡಿಯಾದ ಸ್ಟಾರ್​ ಆಟಗಾರ ವಿರಾಟ್​ ಕೊಹ್ಲಿ(Virat Kohli) ಅವರು ಬಾರ್ಬಡೋಸ್​ನಲ್ಲಿ ತಾವು ತಂಗಿದ್ದ ಹೋಟೆಲ್​ನಲ್ಲಿ ಕಟ್ಲೆಟ್‌ ಬಿಸಿ ಮಾಡಲು ಪರದಾಡಿದ(Kohli’s Breakfast Trouble) ವಿಡಿಯೊವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್(viral video)​ ಆಗಿದೆ.

ಟಿ20 ವಿಶ್ವಕಪ್​ ಗೆಲುವಿನ ಬಳಿಕ ದ್ವೀಪ ರಾಷ್ಟ್ರಕ್ಕೆ ಅಪ್ಪಳಿಸಿದ ಬೆರಿಲ್ ಚಂಡಮಾರುತದಿಂದಾಗಿ ಟೀಮ್​ ಇಂಡಿಯಾ ಆಟಗಾರರು 2 ದಿನಗಳ ಕಾಲ ಬಾರ್ಬಡೋಸ್​ನ ಹೋಟೆಲ್​ನಲ್ಲಿಯೇ ಉಳಿದುಕೊಂಡಿದ್ದರು. ಈ ವೇಳೆ ಕೊಹ್ಲಿ ಕಟ್ಲೆಟ್‌ ಅನ್ನು ಓವನ್​ನಲ್ಲಿ ಬಿಸಿ ಮಾಡಲು ಯತ್ನಿಸಿದ್ದಾರೆ. ಓವನ್​ ಒಳಗಡೆ ಹೋದ ಕಟ್ಲೆಟ್‌ ಹೊರಬಾರದೇ ಇದ್ದಾಗ ಕೊಹ್ಲಿ ಓವನ್​ ಒಳಗಡೆ ಕೈ ಕಾಕಿ ಕೊನೆಗೂ ಕಟ್ಲೆಟ್‌ ಹೊರಗಡೆ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ. ಇದೇ ಹೋಟೆಲ್​ನಲ್ಲಿ ತಿಂಡಿ ತಿನ್ನುತ್ತಿದ್ದವರು ಇದನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೊ ವೈರಲ್​ ಆಗಿದೆ.

ಸಹೋದರನಿಂದ ಭರ್ಜರಿ ಸ್ವಾಗತ


ಟಿ20 ವಿಶ್ವಕಪ್​ ಗೆದ್ದ ಭಾರತ ತಂಡ ಆಟಗಾರರು ಇಂದು(ಗುರುವಾರ) ನವದೆಹಲಿಗೆ ಆಗಮಿಸಿದರು. ಈ ವೇಳೆ ಕೊಹ್ಲಿಯ ಸಹೋದರ ವಿಕಾಸ್​ ಕೊಹ್ಲಿ ಮತ್ತು ಅವರ ಮಕ್ಕಳು ವಿಮಾನ ನಿಲ್ದಾಣದಲ್ಲಿ ಕೊಹ್ಲಿಯನ್ನು ಸ್ವಾಗತಿಸಿದ್ದಾರೆ. ಕೊಹ್ಲಿ ಗೆದ್ದ ಪದಕವನ್ನು ಕೊರಳಿಗೆ ಹಾಕಿ ಸಂಭ್ರಮಿಸಿದರು. ಈ ಫೋಟೊ ವೈರಲ್​ ಆಗಿದೆ.

ಇದನ್ನೂ ಓದಿ Virat Kohli: ಬುರ್ಜ್‌ ಖಲೀಫಾದಲ್ಲಿ ಕಣ್ಮನ ಸೆಳೆದ ವಿರಾಟ್​ ಕೊಹ್ಲಿಯ ಫೋಟೊ; ವಿಡಿಯೊ ವೈರಲ್​

ಚಂಡಮಾರುತದ ಅಬ್ಬರದ ದೃಶ್ಯವನ್ನು ವಿರಾಟ್​ ಕೊಹ್ಲಿ(virat kohli) ಅವರು ತಮ್ಮ ಪತ್ನಿ ಅನುಷ್ಕಾ ಶರ್ಮಗೆ(Virat- Anushka) ವಿಡಿಯೊ ಕಾಲ್ ಮೂಲಕ ತೋರಿಸುತ್ತಿರುವ ವಿಡಿಯೊ ಇದೀಗ ವೈರಲ್​ ಆಗಿತ್ತು. ವಿರಾಟ್​ ಕೊಹ್ಲಿ ತಾವು ತಂಗಿರುವ ಹೊಟೇಲ್‌ ಕಿಟಕಿಯಿಂದ ಸಮುದ್ರದಲ್ಲಿ ಅಪ್ಪಳಿಸುತ್ತಿರುವ ಭಾರೀ ಗಾತ್ರದ ಅಲೆಗಳನ್ನು, ಮತ್ತು ಅಲ್ಲಿನ ಪರಿಸ್ಥಿತಿ ಹೇಗಿದೆ ಎನ್ನುವುದನ್ನು ಪತ್ನಿ ಅನುಷ್ಕಾಗೆ(anushka sharma) ವಿಡಿಯೊ ಕಾಲ್​ ಮೂಲಕ ತೋರಿಸಿದ್ದರು. ಕುಟುಂಬಕ್ಕೆ ಮೊದಲ ಪ್ರಾಧಾನ್ಯತೆ ನೀಡುವ ಕೊಹ್ಲಿ ಯಾವುದೇ ಪಂದ್ಯ ಇರಲಿ ಇದು ಮುಕ್ತಾಯಗೊಂಡ ತಕ್ಷಣ ಪತ್ನಿಗೆ ವಿಡಿಯೊ ಕಾಲ್​ ಮಾಡಿ ಮಾತನಾಡುತ್ತಾರೆ. ಕೆಲವೊಮ್ಮೆ ಕ್ರಿಕೆಟ್​ ಸರಣಿ ಇದ್ದರೂ ಕೂಡ ಇದರಿಂದ ಹಿಂದೆ ಸರಿದು ಕುಟುಂಬದ ಜತೆ ಕಾಲ ಕಳೆಯುತ್ತಾರೆ.

ಟಿ20ಗೆ ವಿದಾಯ ಹೇಳಿದ ಕೊಹ್ಲಿ


ವಿರಾಟ್​ ಕೊಹ್ಲಿ ಅವರು ಟಿ20 ವಿಶ್ವಕಪ್​ ಸ್ಮರಣೀಯ ಗೆಲುವಿನ ಬಳಿಕ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಫೈನಲ್​ ಪಂದ್ಯದಲ್ಲಿ 76 ರನ್​ ಬಾರಿಸಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ವೇಳೆ ಕೊಹ್ಲಿ ತಮ್ಮ ನಿವೃತ್ತಿ ಘೋಷಿಸಿದ್ದರು. ‘ದೇವರು ದೊಡ್ಡವನು. ಭಾರತಕ್ಕಾಗಿ ಇದು ನನ್ನ ಕೊನೆಯ ಟಿ20 ಪಂದ್ಯವಾಗಿತ್ತು. ನಾವು ಆ ಕಪ್ ಎತ್ತಲು ಬಯಸಿದ್ದೆ. ಇದು ಸಾಕಾರಗೊಂಡಿದೆ. ಮುಂದಿನ ಪೀಳಿಗೆಗೆ ಟಿ20 ಆಟವನ್ನು ಮುಂದಕ್ಕೆ ಕೊಂಡೊಯ್ಯುವ ಸಮಯ ಇದು. ಅದ್ಭುತ ದಿನದಂದು ವಿದಾಯ ಹೇಳುವ ಸೌಭಾಗ್ಯ ನನಗೆ ಒದಗಿದ್ದು ನಿಜ್ಜಕ್ಕೂ ಸಂತಸ ತಂದಿದೆ” ಎಂದಿದ್ದರು. ಕೊಹ್ಲಿ ತಮ್ಮ 125 ಪಂದ್ಯಗಳ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನವನ್ನು ಭಾರತದ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಸ್ವರೂಪದಲ್ಲಿ ಕೊನೆಗೊಳಿಸಿದ್ದಾರೆ. 4188 ರನ್, 48.69 ಸರಾಸರಿ ಮತ್ತು ಸ್ಟ್ರೈಕ್ ರೇಟ್ 137.04 ಹೊಂದಿದ್ದಾರೆ.

Continue Reading

ಕ್ರೀಡೆ

MS Dhoni: ಪತ್ನಿಗೆ ಕೇಕ್​ ತಿನ್ನಿಸಿ 15ನೇ ವರ್ಷದ ವಿವಾಹ ವಾರ್ಷಿಕೋತ್ಸವ ಆಚರಿಸಿದ ಧೋನಿ; ವಿಡಿಯೊ ವೈರಲ್​

MS Dhoni: ಧೋನಿ ಕೇಕ್​ ಕತ್ತರಿಸಿ ಪತ್ನಿಗೆ ತಿನ್ನಿಸುವ ಮೂಲಕ ತಮ್ಮ 15ನೇ ವರ್ಷದ ವಿವಾಹ ವಾರ್ಷಿಕೋತ್ಸವನ್ನು ಸಂಭ್ರಮಿಸಿದರು. ಈ ಜೋಡಿಗೆ ಝಿವಾ ಎಂಬ ಮುದ್ದಾಗ ಮಗಳಿದ್ದಾಳೆ. ಐಪಿಎಲ್​ ವೇಳೆ ಗ್ಯಾಲರಿಯಲ್ಲಿ ಕುಳಿತು ಅಪ್ಪನಿಗೆ ಚಿಯರ್​ ಅಪ್​ ಮಾಡುವ ದೃಶ್ಯಗಳು ಹಲವು ಬಾರಿ ವೈರಲ್​ ಆಗಿತ್ತು.

VISTARANEWS.COM


on

MS Dhoni
Koo

ರಾಂಚಿ​: ಟೀಮ್​ ಇಂಡಿಯಾದ ಮಾಜಿ ಆಟಗಾರ ಎಂ.ಎಸ್​ ಧೋನಿ ಮತ್ತು ಸಾಕ್ಷಿ ಸಿಂಗ್(Sakshi Dhoni)​ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಇಂದಿಗೆ 15 ವರ್ಷ ಕಳೆದಿದೆ. ಜುಲೈ 4, 2010ರಲ್ಲಿ ಧೋನಿ ಅವರು ಸಾಕ್ಷಿ ಅವರನ್ನು ಡೆಹರಾಡೂನ್​ನಲ್ಲಿ ​ವಿವಾಹವಾಗಿದ್ದರು. ಇದೀಗ ದಂಪತಿ ಕೇಕ್​ ಕತ್ತರಿಸಿ(Wedding Anniversary MS Dhoni & Sakshi) ತಮ್ಮ 15ನೇ ವರ್ಷದ ವಿವಾಹ ವಾರ್ಷಿಕೋತ್ಸವ(ms dhoni wedding anniversary) ಆಚರಿಸಿದ್ದಾರೆ. ಈ ವಿಡಿಯೊವನ್ನು ಚೆನ್ನೈ ಸೂಪರ್​ ಕಿಂಗ್ಸ್​ ತನ್ನ ಟ್ವಿಟರ್​ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ.

​ಸಾಮಾಜಿಕ ಜಾಲಾತಾಣದಿಂದ ದೂರ ಉಳಿದಿರುವ ಧೋನಿ, ತಮ್ಮ ಯಾವುದೇ ಶುಭ ಸಮಾಚಾರವನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಲು ಬಯಸುವುದಿಲ್ಲ. ಆದರೂ ಚೆನ್ನೈ ಸೂಪರ್ ಕಿಂಗ್ಸ್​ ಟ್ವಿಟರ್​​ನಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದು, “ನಮ್ಮ ರಾಜ ಮತ್ತು ರಾಣಿಗೆ ವಿವಾಹ ವಾರ್ಷಿಕೋತ್ಸವದ ಶುಭಾಶಯಗಳು” ಎಂದಿದೆ. ಧೋನಿ ಅಭಿಮಾನಿ ಬಳಗದಿಂದಲೂ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳು ಬಂದಿದೆ.

ಧೋನಿ ಕೇಕ್​ ಕತ್ತರಿಸಿ ಪತ್ನಿಗೆ ತಿನ್ನಿಸುವ ಮೂಲಕ ತಮ್ಮ 15ನೇ ವರ್ಷದ ವಿವಾಹ ವಾರ್ಷಿಕೋತ್ಸವನ್ನು ಸಂಭ್ರಮಿಸಿದರು. ಈ ಜೋಡಿಗೆ ಝಿವಾ ಎಂಬ ಮುದ್ದಾಗ ಮಗಳಿದ್ದಾಳೆ. ಐಪಿಎಲ್​ ವೇಳೆ ಗ್ಯಾಲರಿಯಲ್ಲಿ ಕುಳಿತು ಅಪ್ಪನಿಗೆ ಚಿಯರ್​ ಅಪ್​ ಮಾಡುವ ದೃಶ್ಯಗಳು ಹಲವು ಬಾರಿ ವೈರಲ್​ ಆಗಿತ್ತು.

ಧೋನಿ ಆಗಸ್ಟ್​ 15 2020ರಂದು ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿದ್ದರ. ಸದ್ಯ ಐಪಿಎಲ್​ನಲ್ಲಿ ಮಾತ್ರ ಸಕ್ರಿಯರಾಗಿದ್ದಾರೆ. ಹಿಂದೊಮ್ಮೆ ಧೋನಿ ಅವರು ನನ್ನ ಪತ್ನಿಗೆ ಟ್ರಾವೆಲ್​ ಎಂದರೆ ಬಲು ಇಷ್ಟ. ಕ್ರಿಕೆಟ್​ ನಿವೃತ್ತಿ ಬಳಿಕ ನಾನು ಖಂಡಿತಾ ಹಲವು ದೇಶಕ್ಕೆ ಪ್ರವಾಸ ಮಾಡುವ ಎಲ್ಲ ಯೋಜನೆಗಳನ್ನು ರೂಪಿಸಿದ್ದೇನೆ ಎಂದು ಹೇಳಿದ್ದರು. ಬಿಡುವಿನ ವೇಳೆಯಲ್ಲಿ ಪತ್ನಿ ಮತ್ತು ಮಗಳ ಜತೆ ಧೋನಿ ಆಗಾಗ ವಿದೇಶಕ್ಕೆ ಭೇಟಿ ನೀಡುತ್ತಾ ಪ್ರವಾಸವನ್ನು ಎಂಜಾಯ್​ ಮಾಡುತ್ತಿರುತ್ತಾರೆ.

ಇದನ್ನೂ ಓದಿ MS Dhoni Instagram Post: ಭಾರತ 2ನೇ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಅಚ್ಚರಿಯ ಪೋಸ್ಟ್ ಮಾಡಿದ ಧೋನಿ

ಈಗಾಗಲೇ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿರುವ ಧೋನಿ ಈ ಬಾರಿಯ ಐಪಿಎಲ್​ ಟೂರ್ನಿಯಲ್ಲಿ ಐಪಿಎಲ್​ಗೂ ವಿದಾಯ ಹೇಳುವ ಮೂಲಕ ಎಲ್ಲ ಕ್ರಿಕೆಟ್​ಗೆ ಗುಡ್​ ಬೈ ಹೇಳಲಿದ್ದಾರೆ ಎನ್ನಲಾಗಿತ್ತು. ಚೆನ್ನೈ ತಂಡ ತನ್ನ ಕೊನೆಯ ಲೀಗ್​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿತ್ತು. ಆದರೆ ಧೋನಿ ಮಾತ್ರ ಐಪಿಎಲ್​ ವಿದಾಯ ಹೇಳಿಲ್ಲ. ಮುಂದಿನ ಆವೃತ್ತಿಯಲ್ಲಿಯೂ ಆಡುವ ನಿರೀಕ್ಷೆಯಲ್ಲಿದ್ದಾರೆ.

2011ರ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡದ ಗೆಲುವಿಗೆ 275 ರನ್​ಗಳು ಬೇಕಾಗಿದ್ದವು. ಅಂತೆಯೇ ಆರಂಭಿಕ ಬ್ಯಾಟರ್​ ಗೌತಮ್​ ಗಂಭೀರ್​ 97 ರನ್​ ಬಾರಿಸಿ ಉತ್ತಮ ಅಡಿಪಾಯ ಹಾಕಿಕೊಟ್ಟಿದ್ದರು. ಸೆಹ್ವಾಗ್​ ಸೊನ್ನೆಗೆ ಔಟಾಗಿದ್ದರೆ ಸಚಿನ್​​ ಕೊಡಗೆ 18 ರನ್​. ಆದರೆ, ಕೊನೇ ಹಂತದಲ್ಲಿ ಕ್ರೀಸ್​ಗೆ ತಳವೂರಿ ಆಡಿದ್ದ ನಾಯಕ ಧೋನಿ ಅಜೇಯ 91 ರನ್​ ಬಾರಿಸಿ ಭಾರತದ ಗೆಲುವಿಗೆ ಕಾರಣರಾಗಿದ್ದರು. ಅಂತೆಯೇ ಇನಿಂಗ್ಸ್​ನ ಕೊನೇ ಓವರ್​ನಲ್ಲಿ ಲಂಕಾ ಬೌಲರ್​ ನುವಾನ್​ ಕುಲಶೇಖರ ಅವರ ಎಸೆತಕ್ಕೆ ಸಿಕ್ಸರ್​ ಬಾರಿಸಿದ್ದರು. ಅದು ಭಾರತದ ವಿಜಯ ರನ್​ ಆಗಿತ್ತು. 

Continue Reading

ಕ್ರೀಡೆ

Team India: ತವರಿಗೆ ಬಂದ ಖಷಿಯಲ್ಲಿ ಕುಣಿದು ಕುಪ್ಪಳಿಸಿದ ನಾಯಕ ರೋಹಿತ್​, ಹಾರ್ದಿಕ್​, ಪಂತ್; ವಿಡಿಯೊ ವೈರಲ್​​

Team India: ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಯಕ ರೋಹಿತ್‌ ಶರ್ಮಾ ಗೆದ್ದಿರುವ ವಿಶ್ವಕಪ್‌ ಟ್ರೋಫಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾಗೆ ಹಸ್ತಾಂತರಿಸಲಿದ್ದಾರೆ. ಬಳಿಕ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಯಲಿದೆ.

VISTARANEWS.COM


on

Team India
Koo

ನವದೆಹಲಿ: 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಚುಟುಕು ಕ್ರಿಕೆಟ್‌ನಲ್ಲಿ 2ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿರುವ ಭಾರತ(Team India) ಕ್ರಿಕೆಟ್‌ ತಂಡ ಇಂದು (ಗುರುವಾರ) ಬೆಳಗ್ಗೆ ತವರಿಗೆ ಮರಳಲಿದೆ. ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ವಿಮಾನ ನಿಲ್ದಾಣದ ಬಳಿ ನೆರೆದಿದ್ದ ಜನಸ್ತೋಮ ರೋಹಿತ್​ ಪಡೆಗೆ ಜೈಕಾರ, ಡೊಳ್ಳು, ತಮಟೆ ಬಾರಿಸುವ ಮೂಲಕ ಅದ್ಧೂರಿ ಸ್ವಾಗತ ಕೋರಲಾಯಿತು. ತಮಟೆ ಮತ್ತು ಡೊಳ್ಳಿನ ಸದ್ದಿಗೆ ರೋಹಿತ್​ ಶರ್ಮ(Rohit Sharma), ಹಾರ್ದಿಕ್​ ಪಾಂಡ್ಯ(Hardik Pandya), ರಿಷಭ್​ ಪಂತ್(Rishabh Pant)​ ವಿಶ್ವಕಪ್​ ಟ್ರೋಫಿಯನ್ನು ಕೈಯಲ್ಲಿ ಹಿಡಿದ ಮಸ್ತ್​ ಹೆಜ್ಜೆ ಹಾಕಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ತಾಯ್ನಾಡಿಗೆ ಕಾಲಿಡುತ್ತಿದ್ದಂತೆ ರೋಹಿತ್​ ಶರ್ಮ ವಿಶ್ವಕಪ್​ ಮೇಲೆತ್ತಿ ಪ್ರದರ್ಶಿಸಿದರು. ತಮಟೆ ಬಡಿಯುತ್ತಾ ಸ್ವಾಗತ ಕೋರುತ್ತಿದ್ದವ ಜತೆ ಒಂದೆಡರು ಹೆಜ್ಜೆ ಹಾಕಿ ಸಂಭ್ರಮಿಸಿದರು. ತಮಡೆ ಬಡಿಯುತ್ತಿರುವವರು ಕೂಡ ರೋಹಿತ್​ಗೆ ಸಾಥ್​ ನೀಡಿದರು. ನಾಯಕ ನೃತ್ಯ ಮಾಡುವುದನ್ನು ಕಂಡ ಉಪನಾಯಕ ಹಾರ್ದಿಕ್​ ಪಾಂಡ್ಯ, ವಿಕೆಟ್​ ಕೀಪರ್​ ರಿಷಭ್ ಪಂತ್​ ಕೂಡ ತಾವೇನು ಕಮ್ಮಿ ಇಲ್ಲ ಎನ್ನುವಂತೆ ಕುಣಿದು ಕುಪ್ಪಳಿಸಿದರು.

ಸುಮಾರು 18 ಗಂಟೆಗಳ ಸುದೀರ್ಘ ಪ್ರಯಾಣದ ನಂತರ, ತಂಡವು ಅಂತಿಮವಾಗಿ ಭಾರತಕ್ಕೆ ಬಂದಿಳಿದೆ. ವಿಮಾನ ನಿಲ್ದಾಣಕ್ಕೆ ತಂಡ ಆಗಮಿಸುತ್ತಿದ್ದಂತೆ ವಿಶ್ವಕಪ್​ ಟ್ರೋಫಿಯ ಆಕೃತಿಯ ಕೇಕ್​ ಕತ್ತರಿಸಲಾಯಿತು. ಇದೇ ವೇಳೆ ಕೊಹ್ಲಿಯ ಕುಟುಂಬಸ್ಥರು ಕೂಡ ಹಾಜರಾಗಿದ್ದರು.

ಭಾರತ ತಂಡದ ಆಟಗಾರರು 11 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಬೆಳಗ್ಗಿನ ತಿಂಡಿ ಸವಿಯಲಿದ್ದಾರೆ. ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿಯೇ ಭಾರತ ಕ್ರಿಕೆಟ್‌ ತಂಡದ ಆಟಗಾರರನ್ನು ಭೇಟಿಯಾಗಿ, ಅವರ ಜತೆ ತಿಂಡಿ ತಿನ್ನಲಿದ್ದಾರೆ. ಇದೇ ವೇಳೆ ಆಟಗಾರರಿಗೆ ಮೋದಿ ಅವರು ಅಭಿನಂದನೆ ಸಲ್ಲಿಸಲಿದ್ದಾರೆ.

ಮೋದಿ ಭೇಟಿಯ ಬಳಿಕ ನವದೆಹಲಿಯಿಂದ ವಿಶೇಷ ವಿಮಾನ ಮೂಲಕ ಆಟಗಾರರು ಮುಂಬೈಗೆ ಆಗಮಿಸಿ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ನಾಯಕ ರೋಹಿತ್‌ ಶರ್ಮಾ ಗೆದ್ದಿರುವ ವಿಶ್ವಕಪ್‌ ಟ್ರೋಫಿಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾಗೆ ಹಸ್ತಾಂತರಿಸಲಿದ್ದಾರೆ. ಬಳಿಕ ತೆರೆದ ವಾಹನದಲ್ಲಿ ರೋಡ್‌ ಶೋ ನಡೆಯಲಿದೆ.

ಇದನ್ನೂ ಓದಿ Suryakumar Yadav: ದಿಲ್ಲಿಯಲ್ಲಿ ತಮಟೆ ಸದ್ದಿಗೆ ಹೆಜ್ಜೆ ಹಾಕಿದ ಸೂರ್ಯಕುಮಾರ್​ ಯಾದವ್​; ವಿಡಿಯೊ ವೈರಲ್​

ಸಹಾಯಕ ಸಿಬ್ಬಂದಿ, ಆಟಗಾರರ ಕುಟುಂಬ ಸದಸ್ಯರು, ಕ್ರಿಕೆಟ್‌ ಮಂಡಳಿಯ ಅಧಿಕಾರಿಗಳು ಮತ್ತು ಪತ್ರಕರ್ತರೊಂದಿಗೆ ಭಾರತೀಯ ತಂಡದ ಆಟಗಾರರು ಗ್ರಾಂಟ್ಲಿ ಆಡಮ್ಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬುಧವಾರ ವಿಶೇಷ ಚಾರ್ಟರ್ ವಿಮಾನ ಏರಿದ್ದರು. ಏರ್ ಇಂಡಿಯಾ ಚಾಂಪಿಯನ್ಸ್ 24 ವರ್ಲ್ಡ್‌ ಕಪ್‌ (Air India Champions 24 World Cup) ಎನ್ನುವ ಹೆಸರಿನ ವಿಮಾನವು ಬೆಳಿಗ್ಗೆ 6:20ರ ಸುಮಾರಿಗೆ ದೆಹಲಿಯ ಇಂದಿರಾ ಗಾಂಧಿ ಇಂಟರ್​ನ್ಯಾಷನ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಬೆರಿಲ್ ಚಂಡಮಾರುತದಿಂದ ಉಂಟಾದ ವಿಳಂಬದಿಂದಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿಶೇಷ ಚಾರ್ಟರ್ ವಿಮಾನದ ವ್ಯವಸ್ಥೆ ಮಾಡಿತ್ತು.

ಜೂನ್‌ 29ರಂದು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ನಲ್ಲಿ ನಡೆದಿದ್ದ ಟಿ20 ವಿಶ್ವಕಪ್​ 2024ರ ಫೈನಲ್​ನಲ್ಲಿ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾವನ್ನು 7 ರನ್​ಗಳ ಅಂತರದಿಂದ ಸೋಲಿಸುವ ಮೂಲಕ ಚಾಂಪಿಯನ್ ಆಗಿ ಹೊರ ಹೊಮ್ಮಿತ್ತು. ಆ ಮೂಲಕ ಸುಮಾರು 17 ವರ್ಷಗಳ ಬಳಿಕ ಟಿ-20 ವಿಶ್ವಕಪ್‌ ಮುಡಿಗೇರಿಸಿಕೊಂಡಿತ್ತು.

Continue Reading
Advertisement
Om Birla
ದೇಶ5 mins ago

Om Birla: ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕರಿಸುವಾಗ ಸಂಸದರು ಘೋಷಣೆ ಕೂಗುವಂತಿಲ್ಲ; ಹೊಸ ನಿಯಮದಲ್ಲಿ ಏನಿದೆ?

Hathras Stampede
ದೇಶ6 mins ago

Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ; 6 ಜನರನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

wild animal attack
ಬೆಂಗಳೂರು ಗ್ರಾಮಾಂತರ14 mins ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Agnipath Scheme
ದೇಶ15 mins ago

Agnipath Scheme: ಅಗ್ನಿವೀರರಿಗೆ ಪರಿಹಾರ ಸಿಕ್ಕಿಲ್ಲ ಎಂದ ರಾಹುಲ್‌ ಗಾಂಧಿಗೆ ಭಾರತೀಯ ಸೇನೆ ತಿರುಗೇಟು

Robbery Video
Latest16 mins ago

Robbery Video: ಬೆಂಗಳೂರಿನಲ್ಲಿ ನಡುರಸ್ತೆಯಲ್ಲೇ ಕಳ್ಳರು ಬ್ಯಾಗ್‌ ಕಸಿದು ಓಡುತ್ತಾರೆ! ಪೋಲಿಸ್ರು ಏನ್‌ ಮಾಡ್ತಿದ್ದಾರೋ!

Sumalatha Ambareesh Reaction about darshan
ಸ್ಯಾಂಡಲ್ ವುಡ್23 mins ago

Sumalatha Ambareesh: ಕೊಲೆ ಮಾಡುವ ವ್ಯಕ್ತಿತ್ವ ದರ್ಶನ್ ಅವರದ್ದಲ್ಲ ಎಂದ ಸುಮಲತಾ; ದೊಡ್ಡ ಮಗನ ಬಗ್ಗೆ ಹೇಳಿದಿಷ್ಟು!

Kalki 2898 AD
ಸಿನಿಮಾ26 mins ago

Kalki 2898 AD: ಕಲ್ಕಿ 2898 ಎಡಿ ಚಿತ್ರದ 10 ಕುತೂಹಲಕರ ಸಂಗತಿಗಳಿವು!

Costliest City
ದೇಶ30 mins ago

Costliest City: ಮುಂಬಯಿ ಈಗ ಭಾರತದ ಅತ್ಯಂತ ದುಬಾರಿ ನಗರ; ಬೆಂಗಳೂರಿಗೆ ಎಷ್ಟನೇ ಸ್ಥಾನ?

Actor Darshan
ಕರ್ನಾಟಕ36 mins ago

Actor Darshan: ದರ್ಶನ್‌ಗೆ ಮತ್ತೆ ಪರಪ್ಪನ ಅಗ್ರಹಾರವೇ ಗತಿ; ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

Team India
ಕ್ರೀಡೆ37 mins ago

Team India: ಮೋದಿಗೆ ನಮೋ ಹೆಸರಿನ ಟೀಮ್​ ಇಂಡಿಯಾ ಜೆರ್ಸಿ ಉಡುಗೊರೆ ನೀಡಿದ ಬಿಸಿಸಿಐ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

wild animal attack
ಬೆಂಗಳೂರು ಗ್ರಾಮಾಂತರ14 mins ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ2 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ2 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ4 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ5 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ5 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

ಟ್ರೆಂಡಿಂಗ್‌