ಪುಸ್ತಕಗಳು ಮನುಕುಲ ಉಳಿಸಿಕೊಳ್ಳುವ ಜ್ಞಾನನಿಧಿಗಳು: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ - Vistara News

ಕಲೆ/ಸಾಹಿತ್ಯ

ಪುಸ್ತಕಗಳು ಮನುಕುಲ ಉಳಿಸಿಕೊಳ್ಳುವ ಜ್ಞಾನನಿಧಿಗಳು: ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ

ಸಪ್ನಾ ಬುಕ್‌ ಹೌಸ್‌ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ 67ನೇ ಕನ್ನಡ ರಾಜ್ಯೋತ್ಸವ ಹಾಗೂ 67 ಕನ್ನಡ ಪುಸ್ತಕಗಳ ಬಿಡುಗಡೆ ಶನಿವಾರ ನಡೆಯಿತು.

VISTARANEWS.COM


on

book realese
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸಪ್ನಾ ಬುಕ್‌ ಹೌಸ್‌ನಿಂದ 67 ಕೃತಿ ಲೋಕಾರ್ಪಣೆ

ಬೆಂಗಳೂರು: ಮಾನವ, ದಾನವನಾಗುವುದನ್ನು ತಪ್ಪಿಸುವಲ್ಲಿ ಒಳ್ಳೆಯ ಪುಸ್ತಕಗಳ ಕೊಡುಗೆ ಗಣನೀಯವಾದುದು. ಪುಸ್ತಕಗಳು ನಮ್ಮ ಚಿಂತನೆಗಳನ್ನು ರೂಪಿಸಿದ್ದು, ಇವುಗಳ ಸಂಗದಲ್ಲಿ ಸಮಯ ಕಳೆಯುವುದು ಚೇತೋಹಾರಿ ಎಂದು ಆದಿಚುಂಚನಗಿರಿ ಮಠದ ಶ್ರೀ ಡಾ. ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು.

ಪ್ರತಿಷ್ಠಿತ ಸಪ್ನಾ ಬುಕ್‌ ಹೌಸ್‌ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ನಡೆದ 67ನೇ ಕನ್ನಡ ರಾಜ್ಯೋತ್ಸವ ಹಾಗೂ 67 ಕನ್ನಡ ಪುಸ್ತಕಗಳ ಬಿಡುಗಡೆ ಸಮಾರಂಭದಲ್ಲಿ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಮನುಷ್ಯನನ್ನು ನಾಶ ಮಾಡಲು ರೋಬೋಟ್‌ಗಳು ಬೇಕಿಲ್ಲ. ಮನುಷ್ಯನೇ ಸಾಕು. ಮನುಕುಲವನ್ನು ಉಳಿಸಿಕೊಳ್ಳುವಂಥ ಜ್ಞಾನನಿಧಿಗಳು ನಮಗೆ ಬೇಕಿವೆ ಎಂದವರು ನುಡಿದರು.

ತಾಯಿನುಡಿಯಲ್ಲಿ ಓದುವ ಮಗುವಿನ ಬೌದ್ಧಿಕ ಬೆಳವಣಿಗೆ ಚುರುಕಾಗಿ ಆಗುತ್ತದೆ. ಆದ್ದರಿಂದ ಅದಕ್ಕೆ ಪೂರಕವಾದ ಮಕ್ಕಳ, ತಾರುಣ್ಯದ ಪುಸ್ತಕಗಳು ಬರಬೇಕಿವೆ ಎಂದು ಪುಸ್ತಕಗಳ ಲೋಕಾರ್ಪಣೆ ಮಾಡಿದ ಲೇಖಕಿ, ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಹೇಳಿದರು.

ಕನ್ನಡದಲ್ಲಿ ಬಿಡುಗಡೆಯಾಗುತ್ತಿರುವ ಹೊಸ ಪುಸ್ತಕಗಳು ಕನ್ನಡ ಸಂಸ್ಕೃತಿಯನ್ನು ವಿಸ್ತರಿಸುವ ಕಾಯಕದಲ್ಲಿ ತೊಡಗಿಕೊಂಡಿವೆ. ಇಂದು ಬಿಡುಗಡೆಯಾದ ಪುಸ್ತಕಗಳು ನಾಡಿನ ಎಲ್ಲ ಕಡೆಯ ಲೇಖಕರನ್ನೂ ಹೊಂದಿದ್ದು, ಸಮಗ್ರ ನಾಡಿನ ಸಂಸ್ಕೃತಿಯನ್ನು ಪ್ರಾತಿನಿಧಿಕವಾಗಿ ಬಿಂಬಿಸಿವೆ. ಇಂಥ ಪರಂಪರೆ ಮುಂದುವರಿಯಲಿ ಎಂದು ಪುಸ್ತಕ ಪರಿಚಯ ಮಾಡಿದ ವಿದ್ವಾಂಸ ಮಲ್ಲೇಪುರಂ ಜಿ. ವೆಂಕಟೇಶ ನುಡಿದರು.

ಇದನ್ನೂ ಓದಿ | Kannada Sahitya Sammelana | ಸಮ್ಮೇಳನದ ಪ್ರತಿನಿಧಿ ನೋಂದಣಿ, ಪುಸ್ತಕ, ವಾಣಿಜ್ಯ ಮಳಿಗೆಗಳ ನೋಂದಣಿಗೆ ಚಾಲನೆ

ಕನ್ನಡ ಪುಸ್ತಕ ಸಂಸ್ಕೃತಿ ಬೆಳವಣಿಗೆ ಕಾಣುತ್ತಿದ್ದು, ಇಷ್ಟೊಂದು ಕೃತಿಗಳು ಬೆಳಕು ಕಾಣುತ್ತಿರುವುದು ನಮ್ಮಲ್ಲಿ ಓದಿನ ರೂಢಿ ಬೆಳೆಯುತ್ತಿರುವುದನ್ನು ಸೂಚಿಸುತ್ತಿದೆ. ಇದನ್ನು ನಮ್ಮ ಹಾಗೂ ಮುಂದಿನ ತಲೆಮಾರಿನವರು ಪೋಷಿಸದಿದ್ದರೆ ಪಶ್ಚಾತ್ತಾಪಪಡಬೇಕಾಗುತ್ತದೆ ಎಂದು ಪ್ರಜಾವಾಣಿ ಸಂಪಾದಕ ರವೀಂದ್ರ ಭಟ್ಟ ನುಡಿದರು. ಕನ್ನಡ ಸಾಹಿತ್ಯ ಸಮ್ಮೇಳನ ನಿಯೋಜಿತ ಅಧ್ಯಕ್ಷ ದೊಡ್ಡರಂಗೇಗೌಡ ಅವರು ಮಾತನಾಡಿ, ನಾಡಿನ ಪುಸ್ತಕೋದ್ಯಮಕ್ಕೆ ಸಪ್ನಾ ಬುಕ್‌ ಹೌಸ್‌ ನೀಡಿದ ಕೊಡುಗೆಯನ್ನು ಸ್ಮರಿಸಿದರು.

ಸಪ್ನಾ ಬುಕ್‌ ಹೌಸ್‌ನ ಸಂಸ್ಥಾಪಕರಾದ ನಿತಿನ್‌ ಶಾ, ವ್ಯವಸ್ಥಾಪಕರಾದ ದೊಡ್ಡೇಗೌಡ, ಹಿರಿಯ ಸಾಹಿತಿಗಳಾದ ಹಂಪನಾ, ಕಮಲಾ ಹಂಪನಾ, ಎಚ್‌ಎಸ್‌ವಿ, ಬಿಆರ್‌ ಲಕ್ಷ್ಮಣರಾವ್‌, ಟಿಎನ್‌ ಸೀತಾರಾಂ, ಮುಂತಾದವರಿದ್ದರು. ಕುಂವೀ, ಜೋಗಿ, ಎಚ್‌ಎಸ್‌ವಿ, ವಿಶ್ವೇಶ್ವರ ಭಟ್‌, ದೊಡ್ಡರಂಗೇಗೌಡ, ಬಿಆರ್‌ಎಲ್‌, ರಾಘವೇಂದ್ರ ಪಾಟೀಲ, ಸುಧಾ ಮೂರ್ತಿ, ಜಗದೀಶ ಶರ್ಮ ಸೇರಿದಂತೆ 67 ಲೇಖಕರ ಕೃತಿಗಳು ಲೋಕಾರ್ಪಣೆಗೊಂಡವು.

ಇದನ್ನೂ ಓದಿ | Kannada books | ಪುಸ್ತಕ ಖರೀದಿಯ ಬಾಕಿ ಮೊತ್ತ ಬಿಡುಗಡೆಗೆ ಕ್ರಮ ಕೈಗೊಳ್ಳಿ; ಬಿಎಸ್‌ವೈಗೆ ಪ್ರಕಾಶಕರ ಸಂಘ ಮನವಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Youngest Artist: ಅಂಬೆಗಾಲಿಡುವ ಬಾಲಕ ಈಗ ವಿಶ್ವದ ಅತಿ ಕಿರಿಯ ಚಿತ್ರ ಕಲಾವಿದ!

ಸುಮಾರು ಆರು ತಿಂಗಳ ಮಗುವಿದ್ದಾಗಲೇ ಚಿತ್ರ ರಚಿಸಲು ಪ್ರಾರಂಭಿಸಿದ ವಿಶ್ವದ ಕಿರಿಯ ಚಿತ್ರಕಲಾವಿದ (Youngest Artist) ಘಾನಾದ ಆಂಕ್ರಾ ಹಲವಾರು ವರ್ಣಚಿತ್ರಗಳನ್ನು ರಚಿಸಿರುವುದು ಮಾತ್ರವಲ್ಲ ಅವುಗಳಲ್ಲಿ ಒಂಬತ್ತು ಚಿತ್ರಗಳನ್ನು ಪ್ರದರ್ಶನದಲ್ಲಿ ಮಾರಾಟ ಮಾಡಿದ್ದಾನೆ! ಈ ಅತಿ ಕಿರಿಯ ಕಲಾವಿದನ ಕುರಿತು ವ್ಯಾಪಕ ಕುತೂಹಲ ಉಂಟಾಗಿದೆ.

VISTARANEWS.COM


on

By

Youngest Artist
Koo

ಅಂಬೆಗಾಲಿಡುವ (Toddler) ಮಗು ವರ್ಣಚಿತ್ರಗಳನ್ನು (Youngest Artist) ರಚಿಸಿ ಗಿನ್ನೆಸ್ ವಿಶ್ವ ದಾಖಲೆ (Guinness World Records) ಬರೆದಿದೆ. ವಿಶ್ವದ ಅತ್ಯಂತ ಕಿರಿಯ ಚಿತ್ರ ಕಲಾವಿದ ಎನ್ನುವ ಖ್ಯಾತಿಗೆ ಈ ಮಗು ಪಾತ್ರವಾಗಿದೆ. ಘಾನಾದ (Ghana) 1 ವರ್ಷ 152 ದಿನಗಳ ಏಸ್-ಲಿಯಾಮ್ ನಾನಾ ಸ್ಯಾಮ್ ಆಂಕ್ರಾ (Ace-Liam Nana Sam Ankrah) ತಾನೇ ರಚಿಸಿದ 9 ವರ್ಣಚಿತ್ರಗಳನ್ನು ಮಾರಾಟ ಮಾಡಿ ಈ ದಾಖಲೆ ನಿರ್ಮಿಸಿದೆ.

ಏಸ್- ಲಿಯಾಮ್ ನಾನಾ ಸ್ಯಾಮ್ ಆಂಕ್ರಾ ವಿಶ್ವದ ಅತ್ಯಂತ ಕಿರಿಯ ಪುರುಷ ಚಿತ್ರ ಕಲಾವಿದನಾಗಿ ಪ್ರತಿಷ್ಠಿತ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ (GWR) ನಲ್ಲಿ ತನ್ನ ಹೆಸರನ್ನು ಬರೆದಿದ್ದಾನೆ.

ಸುಮಾರು ಆರು ತಿಂಗಳ ಮಗುವಿದ್ದಾಗಲೇ ಚಿತ್ರ ರಚಿಸಲು ಪ್ರಾರಂಭಿಸಿದ ಆಂಕ್ರಾ ಹಲವಾರು ವರ್ಣಚಿತ್ರಗಳನ್ನು ರಚಿಸಿರುವುದು ಮಾತ್ರವಲ್ಲ ಅವುಗಳಲ್ಲಿ ಒಂಬತ್ತು ವರ್ಣಚಿತ್ರಗಳನ್ನು ಪ್ರದರ್ಶನದಲ್ಲಿ ಮಾರಾಟ ಮಾಡಿದ. ಆಂಕ್ರಾನ ಈ ಸಾಧನೆ ಹಲವಾರು ಮಂದಿಯ ಗಮನ ಸೆಳೆದಿದ್ದ್ದು, ಜಾಗತಿಕ ಮೆಚ್ಚುಗೆಯನ್ನು ಗಳಿಸಿತ್ತು. ಇದೀಗ ವಿಶ್ವ ದಾಖಲೆ ಪಟ್ಟಿಯಲ್ಲಿ ಆಂಕ್ರಾ ಹೆಸರು ಸೇರ್ಪಡೆಗೆ ಸಾಕಷ್ಟು ಮಂದಿ ಅಚ್ಚರಿಯನ್ನೂ ವ್ಯಕ್ತಪಡಿಸಿದ್ದಾರೆ.


ಯಾವಾಗ ಚಿತ್ರಕಲೆ ಪ್ರಾರಂಭಿಸಿದ್ದು?

ಈಗಷ್ಟೇ ಅಂಬೆಗಾಲಿಡುತ್ತಿರುವ ಆಂಕ್ರಾ ಕೇವಲ ಆರು ತಿಂಗಳಲ್ಲೇ ಚಿತ್ರಕಲೆಯನ್ನು ಪ್ರಾರಂಭಿಸಿದನು ಎನ್ನುತ್ತಾರೆ ಆತನ ತಾಯಿ. ಚಿತ್ರಕಲೆಯ ಮೇಲಿನ ಆತನ ಉತ್ಸಾಹವು ಚಿಕ್ಕ ವಯಸ್ಸಿನಿಂದಲೂ ಸ್ಪಷ್ಟವಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಆತ ಕಲಿಯಲು ಪ್ರಾರಂಭ ಮಾಡಿದಾಗಲೇ ಕ್ಯಾನ್ವಾಸ್‌ನ ತುಂಡನ್ನು ನೆಲದ ಮೇಲೆ ಹರಡಿ ಅದರ ಮೇಲೆ ಸ್ವಲ್ಪ ಬಣ್ಣವನ್ನು ಬೀಳಿಸಿದೆ. ಕ್ಯಾನ್ವಾಸ್‌ನಾದ್ಯಂತ ಆತ ಬಣ್ಣವನ್ನು ಹರಡಿ ಕೊನೆಗೊಳಿಸಿದ. ಇದು ಆತನ ಮೊದಲ ವರ್ಣಚಿತ್ರ ‘ದಿ ಕ್ರಾಲ್’ ಎಂದು ಅವರು ವಿವರಿಸಿದರು.


ಅಂಬೆಗಾಲಿಡುವ ಘಾನಾದ ಆಂಕ್ರಾ ಈಗ ಸೆಲೆಬ್ರಿಟಿಯಾಗಿದ್ದಾನೆ. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಾಧ್ಯಮಗಳಿಂದ ಮಾತ್ರವಲ್ಲದೆ ಘಾನಾ ಗಣರಾಜ್ಯದ ಪ್ರಥಮ ಮಹಿಳೆಯ ಗಮನವನ್ನೂ ಆತ ಸೆಳೆದಿದ್ದಾನೆ.

ಮೊದಲ ಪ್ರದರ್ಶನ

ಏಸ್- ಲಿಯಾಮ್ ಆಂಕ್ರಾ ಇತ್ತೀಚೆಗೆ ತನ್ನ ಚಿತ್ರಗಳನ್ನು ಮೊದಲ ಬಾರಿಗೆ ಸಾರ್ವಜನಿಕ ಪ್ರದರ್ಶನ ನಡೆಸಿದ. ಇದರಲ್ಲಿ ಆತನ ಹತ್ತು ಕಲಾಕೃತಿಗಳನ್ನು ಪ್ರದರ್ಶಿಸಲಾಯಿತು. ಅವುಗಳಲ್ಲಿ ಒಂಬತ್ತು ಮಾರಾಟವಾಗಿವೆ. ಏಸ್- ಲಿಯಾಮ್‌ನ ಕಲೆಯು ನಿರ್ದಿಷ್ಟ ಸಂದೇಶಗಳನ್ನು ರವಾನಿಸುವುದಕ್ಕಿಂತ ಹೆಚ್ಚಾಗಿ ಅಭಿವ್ಯಕ್ತಿ ಮತ್ತು ಅನ್ವೇಷಣೆಯ ಬಗ್ಗೆ ಹೆಚ್ಚಾಗಿದೆ ಎಂದು ಆತನ ತಾಯಿ ಹೇಳಿದ್ದಾರೆ.

ಅವನ ಅಮೂರ್ತ ವರ್ಣಚಿತ್ರಗಳು ಸುತ್ತಲಿನ ಪ್ರಪಂಚದಿಂದ ಪ್ರೇರಿತವಾಗಿವೆ. ಬಣ್ಣ, ಆಕಾರ, ಟೆಕಶ್ಚರ್ ಮತ್ತು ಅವನ ಮನಸ್ಥಿತಿಯನ್ನು ಇದು ಅವಲಂಬಿಸಿದೆ. ಪ್ರತಿ ಚಿತ್ರಕಲೆಯು ಹೊಸ ವಿಷಯಗಳನ್ನು ಕಂಡುಹಿಡಿಯುವಲ್ಲಿ ಆತನ ಕುತೂಹಲ ಮತ್ತು ಸಂತೋಷದ ಅಭಿವ್ಯಕ್ತಿಯಾಗಿದೆ ಎಂದಿದ್ದಾರೆ ಅವರು.


ಭವಿಷ್ಯದ ಯೋಜನೆಗಳು

ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಪ್ರಕಾರ, ವಿಶ್ವದ ಅತ್ಯಂತ ಕಿರಿಯ ಕಲಾವಿದ ಲಿಯಾಮ್ ಅವರ ದಾಖಲೆಯನ್ನು ಅನುಮೋದಿಸಿದ ಬಳಿಕ ಆತನ ಕುಟುಂಬವು ಆತನ ಕಲಾತ್ಮಕ ಪ್ರತಿಭೆಗೆ ಗುಣಮಟ್ಟದ ಶಿಕ್ಷಣದ ಮೂಲಕ ಪೋಷಿಸಲು ಅವಕಾಶಗಳನ್ನು ಹುಡುಕುತ್ತಿದೆ. ಅಂತಾರಾಷ್ಟ್ರೀಯ ವಿದ್ಯಾರ್ಥಿ ವೇತನದ ಅವಕಾಶಗಳು ಅವರಿಗೆ ದೊರೆಯುತ್ತದೆ ಮತ್ತು ಆತನ ಕಲಾಕೃತಿಗಳನ್ನು ಮಾರಾಟ ಮಾಡಲು ಬಯಸುತ್ತಿದೆ ಎಂದು ಹೇಳಿದೆ.

ಇದನ್ನೂ ಓದಿ: Guinness World Records: ಬರೋಬ್ಬರಿ 168 ಅಕ್ಷರಗಳನ್ನೊಳಗೊಂಡ ಈ ನಗರದ ಹೆಸರಿನಲ್ಲಿದೆ ವಿಶ್ವ ದಾಖಲೆ

ಏಸ್-ಲಿಯಾಮ್ ತಾಯಿಯ ಸಲಹೆ ಏನು?

ತಮ್ಮ ಆಸಕ್ತಿಗಳನ್ನು ಕಂಡುಕೊಳ್ಳಲು ಮಕ್ಕಳನ್ನು ಪ್ರೋತ್ಸಾಹಿಸಲು ಪೋಷಕರಿಗೆ ಸಲಹೆ ನೀಡಿದ ಅವರು, ಪ್ರತಿ ಮಗು ಅನನ್ಯವಾಗಿದೆ ಮತ್ತು ಅವರ ಭಾವೋದ್ರೇಕಗಳನ್ನು ಪೋಷಿಸುವುದು ಅದ್ಭುತ ಆವಿಷ್ಕಾರಗಳು ಮತ್ತು ಸಾಧನೆಗಳಿಗೆ ಕಾರಣವಾಗಬಹುದು. ಅದನ್ನು ಪ್ರಯತ್ನಿಸುವ ಮೊದಲು ಅದನ್ನು ಮತ್ತೆ ಮತ್ತೆ ಓದಿ ಮತ್ತು ನೆನಪಿಡಿ. ಪ್ರಯಾಣ ಮತ್ತು ಅದು ತರುವ ಸಂತೋಷವು ತುಂಬಾ ತೃಪ್ತಿಕರವಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.

Continue Reading

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ಮೇ 26ರಂದು ʼಭಾರತದ ಧೀರ ಚೇತನಗಳುʼ ಕೃತಿ ಲೋಕಾರ್ಪಣೆ

Bengaluru News: ಡಾ. ವಿಕ್ರಮ್‌ ಸಂಪತ್‌ ಅವರ ʼಭಾರತದ ಧೀರ ಚೇತನಗಳುʼ (ಭಾರತೀಯ ಇತಿಹಾಸದ ವೀರರರ ಬಗೆಗೆ ನುಡಿಚಿತ್ರಗಳು) ಎಂಬ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ಇದೇ ಮೇ 26 ರಂದು ಭಾನುವಾರ ಬೆಳಿಗ್ಗೆ 10.30 ಕ್ಕೆ ಬೆಂಗಳೂರಿನ ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ ನಲ್ಲಿ ನಡೆಯಲಿದೆ. ಸಾಹಿತಿ ಎಸ್‌.ಎಲ್‌.ಭೈರಪ್ಪ ಕೃತಿ ಬಿಡುಗಡೆ ಮಾಡಲಿದ್ದಾರೆ.

VISTARANEWS.COM


on

Bharathada dheera chethanagalu kruthi lokarpane in Bengaluru on May 26
Koo

ಬೆಂಗಳೂರು: ಡಾ. ವಿಕ್ರಮ್‌ ಸಂಪತ್‌ ಅವರ ʼಭಾರತದ ಧೀರ ಚೇತನಗಳುʼ (ಭಾರತೀಯ ಇತಿಹಾಸದ ವೀರರರ ಬಗೆಗೆ ನುಡಿಚಿತ್ರಗಳು) ಎಂಬ ಕೃತಿಯ ಲೋಕಾರ್ಪಣೆ ಕಾರ್ಯಕ್ರಮವು ಇದೇ ಮೇ 26ರಂದು ಭಾನುವಾರ ಬೆಳಗ್ಗೆ 10.30ಕ್ಕೆ ನಗರದ (Bengaluru News) ಬಸವನಗುಡಿಯ ಬಿ.ಪಿ. ವಾಡಿಯಾ ರಸ್ತೆಯಲ್ಲಿರುವ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ವರ್ಲ್ಡ್‌ ಕಲ್ಚರ್‌ನಲ್ಲಿ ಜರುಗಲಿದೆ.

ಇದನ್ನೂ ಓದಿ: COMEDK UGET Result 2024: ಕಾಮೆಡ್‌ ಕೆ ಫಲಿತಾಂಶ ಪ್ರಕಟ; ಬೆಂಗಳೂರಿನ ಬಾಲಸತ್ಯ ಸರವಣನ್ ಫಸ್ಟ್‌ ರ‍್ಯಾಂಕ್‌

ಹುಬ್ಬಳ್ಳಿಯ ಸಾಹಿತ್ಯ ಪ್ರಕಾಶನದಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದೇ ವೇಳೆ ಎಸ್‌.ಎಲ್‌. ಭೈರಪ್ಪನವರ ಇಂಗ್ಲೀಷ್‌ ಅನುವಾದಿತ 3 ಕಾದಂಬರಿಗಳನ್ನು ಡಾ. ವಿಕ್ರಮ್‌ ಸಂಪತ್‌ ಅವರು ಲೋಕಾರ್ಪಣೆ ಮಾಡಲಿದ್ದಾರೆ.

ಇದನ್ನೂ ಓದಿ: Rotary June Run: ರೋಟರಿಯಿಂದ ಬೆಂಗಳೂರಿನಲ್ಲಿ ಜೂನ್​ 9ರಂದು ಮ್ಯಾರಥಾನ್​; ವಿಸ್ತಾರ ನ್ಯೂಸ್‌ ಸಹಯೋಗ

ಕಾರ್ಯಕ್ರಮದಲ್ಲಿ ಡಾ. ವಿಕ್ರಮ್‌ ಸಂಪತ್‌ ಅವರೊಂದಿಗೆ ಅರ್ಧಗಂಟೆಯ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅನುವಾದಕರಾದ ಎಲ್‌.ವಿ. ಶಾಂತಕುಮಾರಿ, ಪ್ರೊ. ಜಿ.ಎಲ್‌. ಶೇಖರ್‌ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ ಎಂದು ಎಂ.ಎ. ಸುಬ್ರಮಣ್ಯ ಮತ್ತು ಎಂ.ಎಸ್‌. ಋತ್ವಿಕ್‌ ತಿಳಿಸಿದ್ದಾರೆ.

Continue Reading

ಕರ್ನಾಟಕ

ಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಇವು ಗುರು ಸಕಲಮಾ ಬದುಕಿನ ಅಧ್ಯಾಯಗಳು!

ಉತ್ತರದ ಹಿಮಾಲಯ ಭಾರತೀ ಗುರು ಪರಂಪರೆ ಹಾಗೂ ದಕ್ಷಿಣದ ವಿದ್ಯಾರಣ್ಯ ಗುರು ಪರಂಪರೆಗಳೆರಡರಲ್ಲೂ ಪಾರಮ್ಯ ಸಾಧಿಸಿ ಇದೀಗ ಸಕಲಮಾ ಆಗಿ, ಸಾವಿರಾರು ಮಂದಿಗೆ ಶ್ರೀವಿದ್ಯಾ ಸಾಧನೆಯ ಅರಿವು ಹೆಚ್ಚಿಸುತ್ತಿರುವ ಗುರು ಸಕಲಮಾ ಅವರ ಆತ್ಮಕಥನ ಸದ್ಯದಲ್ಲೇ ಹೊರಬರಲಿದೆ.

VISTARANEWS.COM


on

ಗುರು ಸಕಲಮಾ guru sakalamaa
Koo

ಹಿಮಾಲಯದ ಮಹಾನ್‌ ಯೋಗಿ ಸ್ವಾಮಿ ರಾಮ (Himalayan Yogi Swami Rama) ಹಾಗೂ ಬಹುಶ್ರುತ ವಿದ್ವಾಂಸ, ಶ್ರೀವಿದ್ಯಾ ಗುರು, ಪದ್ಮಶ್ರೀ ಪುರಸ್ಕೃತ ಡಾ. ರಾ. ಸತ್ಯನಾರಾಯಣ (R Satyanarayana) ಅವರುಗಳ ನೇರ ಶಿಷ್ಯೆ, ಶ್ರೀವಿದ್ಯಾ (Shrividya) ಸಾಧಕಿ ಸಕಲಮಾ ಅವರ ʻಹಿಮಾಲಯ ಋಷಿಗಳ ದಿವ್ಯ ಸಂದೇಶಗಳು- ಸಕಾಲಿಕ ಮತ್ತು ಕಾಲಾತೀತʼ ಆತ್ಮಕಥನ ಪುಸ್ತಕ ರೂಪದಲ್ಲಿ ಕನ್ನಡ ಹಾಗೂ ಇಂಗ್ಲೀಷ್‌ ಭಾಷೆಯಲ್ಲಿ (Messages from Himalayan Sages- Timely and Timeless) ಸದ್ಯದಲ್ಲೇ ಹೊರಬರಲಿದೆ. ಈ ಹಿನ್ನೆಲೆಯಲ್ಲಿ, ಕೃತಿಯ ಮುಖಪುಟ ಅನಾವರಣ (cover page launch) ಇದೇ ಮೇ 26ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಸುಚಿತ್ರಾ ಫಿಲಂ ಸೊಸೈಟಿಯಲ್ಲಿ ನಡೆಯಲಿದೆ. ಸಂಸದ ತೇಜಸ್ವಿ ಸೂರ್ಯ (Tejaswi Surya), ಸಾಹಿತಿ, ಪತ್ರಕರ್ತ ಜೋಗಿ (Jogi), ಕಾಂತಾರ (Kantara) ಸಿನಿಮಾ ಖ್ಯಾತಿಯ ನಟಿ ಸಪ್ತಮಿ ಗೌಡ (Saptami Gowda) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಗುರು ಸಕಲಮಾ ತಮ್ಮ ಪೂರ್ವಾಶ್ರಮದಲ್ಲಿ ಜ್ಯೋತಿ ಪಟ್ಟಾಭಿರಾಂ ಹೆಸರಿನಿಂದಲೇ ನೃತ್ಯವಲಯದಲ್ಲಿ, ಶೈಕ್ಷಣಿಕ ವಲಯದಲ್ಲಿ ಸಾಕಷ್ಟು ಹೆಸರು ಮಾಡಿದವರು. ಮೂವತ್ತಕ್ಕೂ ಹೆಚ್ಚು ವರ್ಷಗಳ ಕಾಲ ಪ್ರೊಫೆಸರ್‌ ಆಗಿ ಸಾವಿರಾರು ಮಕ್ಕಳಿಗೆ ಇಂಗ್ಲೀಷ್‌ ಬೋಧನೆ ಮಾಡಿದವರು. ಇದರ ಜೊತೆಜೊತೆಗೇ, ತಾನು ಬಾಲ್ಯದಿಂದ ಕಲಿತ ಭರತನಾಟ್ಯವನ್ನೂ ಪೋಷಿಸಿ, ತನ್ನದೇ ಆದ ನೃತ್ಯ ಸಂಸ್ಥೆಯನ್ನು ಕಟ್ಟಿ ನೀರೆರೆದು, ಹಲವಾರು ನೃತ್ಯಪ್ರತಿಭೆಗಳನ್ನು ಬೆಳೆಸಿದವರು. ನೃತ್ಯಕ್ಷೇತ್ರದ ಇವರ ಸಾಧನೆಗೆ ಕರ್ನಾಟಕ ಸರ್ಕಾರ ಕೊಡುವ ಉನ್ನತ ನಾಗರಿಕ ಪ್ರಶಸ್ತಿಯಾದ ರಾಜ್ಯೋತ್ಸವ ಪ್ರಶಸ್ತಿ ಇವರನ್ನು ಹುಡುಕಿಕೊಂಡು ಬಂದಿರುವುದು ಇವರ ಸಾಧನೆಯ ಹಾದಿಯ ಮೈಲುಗಲ್ಲುಗಳಲ್ಲಿ ಒಂದು. ಇವಿಷ್ಟೇ ಅಲ್ಲದೆ, ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿ, ಯೋಗ- ನಾಟ್ಯ ಸರಸ್ವತಿ, ಆಸ್ಟ್ರೇಲಿಯಾ ಕನ್ನಡ ಸಂಘ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರ ಸನ್ಮಾನಗಳು ಇವರಿಗೆ ಸಂದಿವೆ. ನೂರಾರು ಪ್ರದರ್ಶನಗಳನ್ನೂ ನೀಡಿ ಅಪಾರ ನೃತ್ಯಾಭಿಮಾನಿಗಳನ್ನೂ ಹೊಂದಿದ್ದಾರೆ.

ಇವೆಲ್ಲ ಸಾಧನೆಯ ಜೊತೆಜೊತೆಗೇ, ಜ್ಯೋತಿ ಪಟ್ಟಾಭಿರಾಂ ಅವರು ಇನ್ನೊಂದು ಕ್ಷೇತ್ರದಲ್ಲೂ ಸಮನಾಗಿ ಹೆಜ್ಜೆಯೂರಿ ಬೆಳೆದಿದ್ದೇ ಒಂದು ವಿಸ್ಮಯದ ಗಾಥೆ. ಅದು ಅಧ್ಯಾತ್ಮ. 1992ರವರೆಗೆ ಜ್ಯೋತಿ ಪಟ್ಟಾಭಿರಾಂ ಅವರು ತಮ್ಮ ಬದುಕಿನ ಹಾದಿ ಈ ದಿಕ್ಕಿನಲ್ಲಿ ಹೊರಳೀತು ಎಂಬ ಕಲ್ಪನೆಯನ್ನೂ ಹೊಂದಿರಲಿಲ್ಲ. ಯೋಗಾಚಾರ್ಯ ಪಟ್ಟಾಭಿರಾಂ ಅವರ ಜೀವನ ಸಂಗಾತಿಯಾಗಿ, ತನ್ನ ಕಾಲೇಜು, ನೃತ್ಯ ತರಗತಿಗಳು, ನೃತ್ಯ ಪ್ರದರ್ಶನಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದ ಅವರಿಗೆ ಹಿಮಾಲಯನ್‌ ಯೋಗಿ ಸ್ವಾಮಿ ರಾಮ ಅವರ ಭೇಟಿಯಾದದ್ದೇ ಒಂದು ಆಸಕ್ತಿದಾಯಕ ಕತೆ. ಅಲ್ಲಿಂದ ನಂತರ ಬದುಕು ಬೇರೆಯದೇ ದಿಕ್ಕಿನತ್ತ ಮುಖ ಮಾಡಿದರೂ, ಅಧ್ಯಾತ್ಮವನ್ನೂ, ನೃತ್ಯವನ್ನೂ, ತನ್ನ ಉದ್ಯೋಗವನ್ನೂ ಸಮದೂಗಿಸಿಕೊಂಡು ಕೆಲಸ ಮಾಡಿದರು. ತಮ್ಮ ಗುರು ಸ್ವಾಮಿ ರಾಮ ಅವರಿಂದ ಶ್ರೀವಿದ್ಯೆಯಲ್ಲಿ ಅತ್ಯಂತ ಶ್ರೇಷ್ಠವಾದ ಶಾಂಭವ ದೀಕ್ಷೆಯನ್ನು ಪಡೆದ ಇವರು, ಗುರುವಿನ ದೇಹತ್ಯಾಗದ ನಂತರವೂ ಅವರಿಂದ ಮಾರ್ಗದರ್ಶನಗಳನ್ನು ಪಡೆಯುತ್ತಾ ಬಂದವರು. ಅವರ ಈ ಅಧ್ಯಾತ್ಮದ ಹಾದಿಗೆ ಇನ್ನಷ್ಟು ಬಲ ಬಂದಿದ್ದು ಸ್ವಾಮಿ ರಾಮ ಅವರ ಮಾರ್ಗದರ್ಶನದ ಮೇರೆಗೆ ಮೈಸೂರಿನ ಖ್ಯಾತ ವಿದ್ವಾಂಸ, ಪದ್ಮಶ್ರೀ ಪುರಸ್ಕೃತ ರಾ ಸತ್ಯನಾರಾಯಣ ಅವರ ಬಳಿ ದಕ್ಷಿಣದ ವಿದ್ಯಾರಣ್ಯ ಪರಂಪರೆಯಲ್ಲಿ ಶ್ರೀವಿದ್ಯೆಯ ಹೆಚ್ಚಿನ ಕಲಿಕೆಗೆ ತೆರಳಿದ ಮೇಲೆ.

ಹೀಗಾಗಿ ಉತ್ತರದ ಹಿಮಾಲಯನ್‌ ಭಾರತೀ ಪರಂಪರೆ ಹಾಗೂ ದಕ್ಷಿಣದ ವಿದ್ಯಾರಣ್ಯ ಪರಂಪರೆಗಳೆರಡರಲ್ಲೂ ಪಾರಮ್ಯ ಸಾಧಿಸಿ ಇದೀಗ ಸಕಲಮಾ ಆಗಿ, ಈಗ ಸಾವಿರಾರು ಮಂದಿಗೆ ಶ್ರೀವಿದ್ಯಾ ಸಾಧನೆಯ ಅರಿವು ಹೆಚ್ಚಿಸುವಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದಾರೆ. ಅವರ ಈ ಬದುಕಿನ ಪುಟಗಳಲ್ಲಿ ನೂರಾರು ರೋಮಾಂಚನಗೊಳಿಸುವ ಅಧ್ಯಾತ್ಮದ ಅನುಭವಗಳಿವೆ. ಸುಮಾರು 30 ವರ್ಷಗಳ ಸುದೀರ್ಘ ಅಧ್ಯಾತ್ಮ ಸಾಧನೆಯ ವಿವಿಧ ಮಜಲುಗಳೆಲ್ಲವೂ, ಮೈನವಿರೇಳಿಸುವಂತ ಹಲವಾರು ಅನುಭವಗಳ ಜೊತೆಗೆ ಪುಸ್ತಕದ ಮೂಲಕ ಅಧ್ಯಾತ್ಮ ಆಸಕ್ತರನ್ನೂ ಸಾಧಕರನ್ನೂ, ಜನಸಾಮಾನ್ಯರನ್ನೂ ತಲುಪಲಿದ್ದು, ಋಷಿ ಪರಂಪರೆಯ ಬಗೆಗಿನ ಸಾಮಾನ್ಯರ ಅರಿವಿನ ವಿಸ್ತಾರಕ್ಕೆ ಹೊಸ ಭಾಷ್ಯ ಬರೆಯಲಿದ್ದಾರೆ.

ಕೃತಿ ಮುಖಪುಟ ಅನಾವರಣ, ಸ್ಥಳ: ಸುಚಿತ್ರಾ ಫಿಲಂ ಸೊಸೈಟಿ
ದಿನಾಂಕ: ಮೇ 26, ಭಾನುವಾರ
ಸಮಯ: ಬೆಳಗ್ಗೆ 10.30
ಸಾನಿಧ್ಯ: ಗುರು ಸಕಲಮಾ
ಅತಿಥಿಗಳು: ಸಾಹಿತಿ ಜೋಗಿ, ಸಂಸದ ತೇಜಸ್ವಿ ಸೂರ್ಯ, ನಟಿ ಸಪ್ತಮಿ ಗೌಡ

ಇದನ್ನೂ ಓದಿ: Daredevil Mustafa: ಪುಸ್ತಕ ರೂಪ ಪಡೆದ ʻಡೇರ್ ಡೆವಿಲ್‌ ಮುಸ್ತಾಫಾʼ ಸಿನಿಮಾ!

Continue Reading

ಬೆಂಗಳೂರು

Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

Bengaluru News: ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ ಸಮಾರಂಭವು ಇದೇ ಮೇ 19 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತು ಮಂದಿರದಲ್ಲಿ ನಡೆಯಲಿದೆ. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ, ಕೃಷಿ ವಿಜ್ಞಾನಿ ಡಾ.ಕೆ.ಎನ್‌. ಗಣೇಶಯ್ಯ, ಕಥೆಗಾರ, ಕಾದಂಬರಿಕಾರ ಜೋಗಿ, ಉಪನ್ಯಾಸಕಿ, ಲೇಖಕಿ ಸಂಧ್ಯಾರಾಣಿ, ಉಪನ್ಯಾಸಕ, ಕಥೆಗಾರ ಶಿವಕುಮಾರ ಮಾವಲಿ ಅವರು ಪಾಲ್ಗೊಳ್ಳಲಿದ್ದಾರೆ.

VISTARANEWS.COM


on

7 books release programme on May 19 in Bengaluru
Koo

ಬೆಂಗಳೂರು: ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ ಸಮಾರಂಭವು ಇದೇ ಮೇ 19ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ (Bengaluru News) ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷತ್ತು ಮಂದಿರದಲ್ಲಿ ನಡೆಯಲಿದೆ.

ಇದನ್ನೂ ಓದಿ: SubAir facility: ಸಬ್‌ ಏರ್‌ ಸಿಸ್ಟಮ್‌ ಹೇಗೆ ಕಾರ್ಯನಿರ್ವಹಿಸುತ್ತದೆ?; ಮಳೆ ನಿಂತು ಎಷ್ಟು ಗಂಟೆಯಲ್ಲಿ ಪಂದ್ಯ ಆರಂಭ?

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ, ಕೃಷಿ ವಿಜ್ಞಾನಿ ಡಾ. ಕೆ.ಎನ್‌. ಗಣೇಶಯ್ಯ, ಕಥೆಗಾರ, ಕಾದಂಬರಿಕಾರ ಜೋಗಿ, ಉಪನ್ಯಾಸಕಿ, ಲೇಖಕಿ ಸಂಧ್ಯಾರಾಣಿ, ಉಪನ್ಯಾಸಕ, ಕಥೆಗಾರ ಶಿವಕುಮಾರ ಮಾವಲಿ ಅವರು ಪಾಲ್ಗೊಳ್ಳಲಿದ್ದಾರೆ.

ವೀರಕಪುತ್ರ ಆಶಯನುಡಿಗಳನ್ನಾಡಲಿದ್ದಾರೆ. ಶೋಭಾ ರಾವ್‌ ಮತ್ತು ಅನಂತ ಕುಣಿಗಲ್‌ ಪುಸ್ತಕ ಪರಿಚಯ ಮಾಡಿಕೊಡಲಿದ್ದಾರೆ.

ಇದನ್ನೂ ಓದಿ: Karnataka Weather : ತುಮಕೂರಲ್ಲಿ ಸಿಡಿಲಿಗೆ ಜಾನುವಾರು ಬಲಿ; ಚಿಕ್ಕಮಗಳೂರಲ್ಲಿ ಮಳೆ ಅವಾಂತರಕ್ಕೆ ಜನ ತತ್ತರ

ಲೋಕಾರ್ಪಣೆಗೊಳ್ಳಲಿರುವ ಕೃತಿಗಳು ಹಾಗೂ ಕೃತಿಕಾರರ ವಿವರ

ಡಾ. ಲಕ್ಷ್ಮಣಕೌಂಟೆ ಅವರ ಮಹಾವಿನಾಶ (ಕಾದಂಬರಿ), ಕೌಂಡಿನ್ಯ ಅವರ ಬೆಳವಡಿ ಮಲ್ಲಮ್ಮ (ಕಾದಂಬರಿ), ರಾಘವೇಂದ್ರ ಪ್ರಭು ಎಂ. ಅವರ ಬಹುತ್ವ ಭಾರತ ಕಟ್ಟಿದವರು (ಬದುಕು ಬರಹಗಳು), ವಿ. ಗೋಪಕುಮಾರ್‌ ಅವರ ಕಗ್ಗಕ್ಕೊಂದು ನ್ಯಾನೋ ಕಥೆ (ನ್ಯಾನೋ ಕತೆಗಳು), ಗೀತಾ ದೊಡ್ಮನೆ ಅವರ ನೀಲಿ ಶಾಯಿಯ ಕಡಲು (ಕವಿತೆಗಳು), ಮೇದಿನಿ ಕೆಸವಿನಮನೆ ಅವರ ಮಿಸ್ಸಿನ ಡೈರಿ (ಅನುಭವ ಕಥನ), ಪಾರ್ವತಿ ಪಿಟಗಿ ಅವರ ಪುನರುತ್ಥಾನ (ಕಾದಂಬರಿ) ಲೋಕಾರ್ಪಣೆಗೊಳ್ಳಲಿವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Continue Reading
Advertisement
Dina Bhavishya
ಭವಿಷ್ಯ12 mins ago

Dina Bhavishya : ಈ ರಾಶಿಯವರಿಗೆ ಇಂದು ಆಪ್ತರಿಂದಲೇ ಸಮಸ್ಯೆ; ದಿನದ ಕೊನೆಯಲ್ಲಿ ಕೌಟುಂಬಿಕ ಕಲಹ

Snake
ಕರ್ನಾಟಕ5 hours ago

Snake: ಸ್ಟ್ಯಾಂಡ್‌ನಲ್ಲಿಟ್ಟಿದ್ದ ಚಪ್ಪಲಿಯೊಳಗೆ ಕೂತಿದ್ದ ಬುಸ್‌ ಬುಸ್‌ ನಾಗಪ್ಪ; ಸ್ವಲ್ಪ ಹುಷಾರಾಗಿರ‍್ರಪ್ಪ! Video ಇಲ್ಲಿದೆ

Varanasi
ದೇಶ6 hours ago

Varanasi: ಮೋದಿ ಕುರಿತು ವಾರಾಣಸಿಯಲ್ಲಿರುವ ಕನ್ನಡಿಗರು ಏನಂತಾರೆ? ಇಲ್ಲಿದೆ ‘ವಿಸ್ತಾರ ನ್ಯೂಸ್’ ಗ್ರೌಂಡ್‌ ರಿಪೋರ್ಟ್!

Virat kohli
ಕ್ರೀಡೆ6 hours ago

Virat Kohli : ಐಪಿಎಲ್​ 2024ರ ಆರೆಂಜ್ ಕ್ಯಾಪ್ ಗೆದ್ದು ಹೊಸ ದಾಖಲೆ ಬರೆದ ವಿರಾಟ್​ ಕೊಹ್ಲಿ

IPL 2024 Final
ಪ್ರಮುಖ ಸುದ್ದಿ7 hours ago

IPL 2024 Final : 3ನೇ ಬಾರಿ ಐಪಿಎಲ್ ಚಾಂಪಿಯನ್ ಪಟ್ಟಕ್ಕೇರಿದ ಕೆಕೆಆರ್​​; ಹೈದರಾಬಾದ್​ಗೆ ನಿರಾಸೆ

The Kapil Sharma Show
ದೇಶ7 hours ago

Physical Abuse: ಕಪಿಲ್‌ ಶರ್ಮಾ ಶೋನಲ್ಲಿ ಪಾತ್ರ ಕೊಡುವುದಾಗಿ ನಂಬಿಸಿ ಮಹಿಳೆ ಮೇಲೆ ಅತ್ಯಾಚಾರ

IPL 2024
ಕ್ರೀಡೆ7 hours ago

IPL 2024 Final : ಐಪಿಎಲ್ ಫೈನಲ್​​ನಲ್ಲಿ ಕಡಿಮೆ ಸ್ಕೋರ್​ನ ಕಳಪೆ ದಾಖಲೆ ಬರೆದ ಸನ್​ರೈಸರ್ಸ್​ ಹೈದರಾಬಾದ್​​

Hardik Pandya
ಕ್ರೀಡೆ8 hours ago

Hardik Pandya : ಡೈವೋರ್ಸ್​ ಗಾಸಿಪ್​ ನಡುವೆ ಹಾರ್ದಿಕ್ ಪಾಂಡ್ಯ ನಾಪತ್ತೆ!

Rain News
ಕರ್ನಾಟಕ8 hours ago

Rain News: ಮಳೆ ಅವಾಂತರ; ಮನೆಯ ಶೀಟ್‌ ಮೇಲಿದ್ದ ಕಲ್ಲು ಬಿದ್ದು ಬಾಲಕಿ ಸಾವು

Phalody Satta Bazar
ದೇಶ8 hours ago

Phalodi Satta Bazar: ಮೋದಿಗೆ 330 ಸೀಟು ಖಚಿತ ಎಂದ ಸಟ್ಟಾ ಬಜಾರ್‌ ಸಮೀಕ್ಷೆ; ರಾಜ್ಯವಾರು ವರದಿ ಇಲ್ಲಿದೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು12 hours ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ4 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ7 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

ಟ್ರೆಂಡಿಂಗ್‌