Shoaib And Sania | ಡಿವೋರ್ಸ್ ರೂಮರ್ಸ್​ ಮಧ್ಯೆ ಸಾನಿಯಾ ಮಿರ್ಜಾ ಜತೆಗಿನ ವಿಡಿಯೊ ಹಂಚಿಕೊಂಡ ಶೋಯೆಬ್ ಮಲಿಕ್ - Vistara News

ಕ್ರಿಕೆಟ್

Shoaib And Sania | ಡಿವೋರ್ಸ್ ರೂಮರ್ಸ್​ ಮಧ್ಯೆ ಸಾನಿಯಾ ಮಿರ್ಜಾ ಜತೆಗಿನ ವಿಡಿಯೊ ಹಂಚಿಕೊಂಡ ಶೋಯೆಬ್ ಮಲಿಕ್

‘ದಿ ಮಿರ್ಜಾ ಮಲಿಕ್ ಶೋ’ ಎನ್ನುವ ಟಿವಿ ಕಾರ್ಯಕ್ರಮದಲ್ಲಿ ಜತೆಯಾಗಿ ಕಾಣಿಸಿಕೊಳ್ಳಲಿದ್ದಾರೆ ಶೋಯೆಬ್ ಮಲಿಕ್​ ಮತ್ತು ಸಾನಿಯಾ ಮಿರ್ಜಾ

VISTARANEWS.COM


on

Shoaib And Sania
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕರಾಚಿ: ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್​ ಮತ್ತು ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರು ತಮ್ಮ 12 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಕೆಲ ಕಾನೂನು ಪ್ರಕ್ರಿಯೆಗಳು ಮುಗಿದ ಬಳಿಕ ವಿಚ್ಛೇದನದ ಮಾಹಿತಿಯನ್ನು ಅಧಿಕೃತವಾಗಿ ಘೋಷಿಸಲಿದ್ದಾರೆ ಎಂಬ ವದಂತಿಗಳು ಹರಿದಾಡಿದ್ದವು. ಈ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಚರ್ಚೆಯೂ ನಡೆದಿತ್ತು. ಆದರೆ ಇದೀಗ ಸಾನಿಯಾ ಮಿರ್ಜಾ ಮತ್ತು ಶೋಯೆಬ್ ಒಟ್ಟಿಗೆ ಬರಲು ಸಜ್ಜಾಗುತ್ತಿದ್ದಾರೆ.

ಸಾನಿಯಾ ಮಿರ್ಜಾ ಮತ್ತು ಶೋಯೆಬ್​​ ಡಿವೋರ್ಸ್‌ ವಿಚಾರವಾಗಿ ಕಳೆದ ವಾರ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದ ಮಲಿಕ್​, ಇದು ನಮ್ಮ ವೈಯಕ್ತಿಕ ವಿಚಾರ. ಈ ಬಗ್ಗೆ ನಾನಾಗಲಿ, ನನ್ನ ಹೆಂಡತಿಯಾಗಲಿ ಇಲ್ಲಿಯವರೆಗೆ ಯಾವುದೇ ಹೇಳಿಕೆ ನೀಡಿಲ್ಲ. ಈ ವಿಚಾರವನ್ನು ಇಲ್ಲಿಯೇ ಬಿಟ್ಟುಬಿಡಿ ಎಂದು ಹೇಳಿದ್ದರು. ಆದರೂ ಸಾಮಾಜಿಕ ಜಾಲತಾಣದಲ್ಲಿ ಈ ಜೋಡಿ ಮಧ್ಯೆ ಎಲ್ಲವೂ ಸರಿಯಿಲ್ಲ ಎಂಬ ಸುದ್ದಿಯನ್ನೇ ಹಬ್ಬುತಿತ್ತು. ಇದೀಗ ಶೋಯೆಬ್​ ಮಲಿಕ್​ ಪತ್ನಿ ಸಾನಿಯಾ ಮಿರ್ಜಾ ಜತೆಗಿರುವ ವಿಡಿಯೊವೊಂದನ್ನು ಹಂಚಿಕೊಂಡಿದ್ದಾರೆ.

ಹೌದು ಸಾನಿಯಾ ಮಿರ್ಜಾ ಮತ್ತು ಮಲಿಕ್​ ಜೋಡಿ ‘ದಿ ಮಿರ್ಜಾ ಮಲಿಕ್ ಶೋ’ ಎನ್ನುವ ಟಿವಿ ಕಾರ್ಯಕ್ರಮವೊಂದನ್ನು ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದ ಪ್ರೋಮೊ ವಿಡಿಯೊವನ್ನು ಶೋಯೆಬ್​ ಮಲಿಕ್​ ಭಾನುವಾರ ತಮ್ಮ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಂಡಿದ್ದಾರೆ. ಈ ಕಾರ್ಯಕ್ರಮ ಒಟಿಟಿ ಪ್ಲಾಟ್‌ಫಾರ್ಮ್ ಉರ್ದುಫ್ಲಿಕ್ಸ್ ನಲ್ಲಿ ಪ್ರಸಾರವಾಗಲಿದೆ. ಇದೀಗ ಈ ಜೋಡಿ ಜತೆಯಾಗಿ ಕಾಣಿಸಿಕೊಳ್ಳುವ ಮೂಲಕ ತಾವು ವಿಚ್ಛೇದನ ಪಡೆದಿಲ್ಲ ಎಂಬ ಸಂದೇಶ ನೀಡಿದಂತಿದೆ.

ಇದನ್ನೂ ಓದಿ | Sania Mirza | ನಮ್ಮನ್ನು ಸುಮ್ಮನೆ ಬಿಟ್ಟುಬಿಡಿ, ಡೈವೋರ್ಸ್‌ ಪ್ರಶ್ನೆಗೆ ಶೋಯೆಬ್‌ ಮಲಿಕ್‌ ಕೊಟ್ಟ ಉತ್ತರವಿದು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Rohit Sharma: ಸಚಿನ್​, ಕೊಹ್ಲಿ ಜತೆ ಎಲೈಟ್​ ಪಟ್ಟಿ ಸೇರುವ ನಿರೀಕ್ಷೆಯಲ್ಲಿ ರೋಹಿತ್​

Rohit Sharma: ರೋಹಿತ್ ಏಕದಿನದಲ್ಲಿ 31, ಟೆಸ್ಟ್​ನಲ್ಲಿ 12, ಟಿ20ಯಲ್ಲಿ 5 ಶತಕ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಒಟ್ಟು 100 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್​ ಕೊಹ್ಲಿ 80 ಶತಕ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.

VISTARANEWS.COM


on

Rohit Sharma
Koo

ಕೊಲಂಬೊ: ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit Sharma) ಅವರು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಿಸುವ ಸನಿಹದಲ್ಲಿದ್ದಾರೆ. ರೋಹಿತ್​ ಈ ಸರಣಿಯಲ್ಲಿ 2 ಶತಕ ಬಾರಿಸಿದರೆ, ವಿರಾಟ್​ ಕೊಹ್ಲಿ(Virat Kohli) ಮತ್ತು ಸಚಿನ್ ತೆಂಡೂಲ್ಕರ್(Sachin Tendulkar)​ ಜತೆ ಎಲೈಟ್​ ಪಟ್ಟಿಗೆ ಸೇರ್ಪಡೆಗೊಳ್ಳಲಿದ್ದಾರೆ.

ರೋಹಿತ್​ 2 ಶತಕ ಬಾರಿಸಿದರೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 50 ಶತಕ ಪೂರ್ತಿಗೊಳಿಸಿದ ಸಾಧನೆ ಮಾಡಲಿದ್ದಾರೆ. ಈ ಸಾಧನೆ ಮಾಡಿದ ಮೂರನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್‌ ಕೊಹ್ಲಿ ಮೊದಲಿಗರು. ರೋಹಿತ್​ ಸದ್ಯ 48 ಶತಕ ಬಾರಿಸಿದ್ದಾರೆ. ಏಕದಿನದಲ್ಲಿ 31, ಟೆಸ್ಟ್​ನಲ್ಲಿ 12, ಟಿ20ಯಲ್ಲಿ 5 ಶತಕ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಒಟ್ಟು 100 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್​ ಕೊಹ್ಲಿ 80 ಶತಕ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.

ರೋಹಿತ್​ ಶರ್ಮ(Rohit sharma), ವಿರಾಟ್​ ಕೊಹ್ಲಿ(virat kohli) ಮತ್ತು ಜಸ್​ಪ್ರೀತ್​ ಬುಮ್ರಾ(jasprit bumrah) ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ. ಕಳೆದ ವರ್ಷ(2023) ನವೆಂಬರ್​ 19ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಏಕದಿನ ಫೈನಲ್​ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್​ ಅಂತರದ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದಾದ ಬಳಿಕ ಈ ಮೂವರು ಕ್ರಿಕೆಟಿಗರು ಯಾವುದೇ ಏಕದಿನ ಪಂದ್ಯವನ್ನಾಡಿರಲಿಲ್ಲ. ಇದೀಗ ಬರೋಬ್ಬರಿ 9 ತಿಂಗಳ ಬಳಿಕ ಏಕದಿನ ಸರಣಿಯನ್ನಾಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ Rohit Sharma : ಏಕ ದಿನ ಸರಣಿಗಾಗಿ ಶ್ರೀಲಂಕಾ ತಲುಪಿದ ರೋಹಿತ್, ವಿರಾಟ್​ ಕೊಹ್ಲಿ

ವಿರಾಟ್​ ಕೊಹ್ಲಿಗೆ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ಬರೆಯುವ ಅವಕಾಶವಿದೆ. ಹೌದು, ಕೊಹ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್​ ಕೊಹ್ಲಿ 13,848* ರನ್(virat kohli odi runs)​ ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್​ ಬಾರಿಸಿದರೆ 14 ಸಾವಿರ ರನ್​ ಮೈಲುಗಲ್ಲು ತಲುಪಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 18,426 ರನ್ ಗಳಿಸಿದ್ದರೆ, ಕುಮಾರ ಸಂಗಕ್ಕಾರ 404 ಪಂದ್ಯಗಳನ್ನಾಡಿ 14,234 ರನ್ ಬಾರಿಸಿದ್ದಾರೆ. ಕೊಹ್ಲಿಗೆ ಸಂಗಕ್ಕಾರ ದಾಖಲೆ ಮುರಿಯುವ ಅವಕಾಶವಿದೆ. ಆದರೆ ಸಚಿನ್​ ದಾಖಲೆ ಮುರಿಯುವುದು ಕಷ್ಟ ಸಾಧ್ಯ.

Continue Reading

ಕ್ರೀಡೆ

IND vs SL 1st ODI: ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಮೊದಲ ಏಕದಿನ ಆಡಲು ಸಜ್ಜಾದ ಕೊಹ್ಲಿ, ರೋಹಿತ್​, ಬುಮ್ರಾ

IND vs SL 1st ODI:ಕಳೆದ ವರ್ಷ(2023) ನವೆಂಬರ್​ 19ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಏಕದಿನ ಫೈನಲ್​ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್​ ಅಂತರದ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದಾದ ಬಳಿಕ ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ, ಜಸ್​ಪ್ರೀತ್​ ಬುಮ್ರಾ(jasprit bumrah) ಯಾವುದೇ ಏಕದಿನ ಪಂದ್ಯವನ್ನಾಡಿರಲಿಲ್ಲ.

VISTARANEWS.COM


on

IND vs SL 1st ODI
Koo

ಕೊಲಂಬೊ: ಭಾರತ ಮತ್ತು ಶ್ರೀಲಂಕಾ ನಡುವಣ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ(IND vs SL 1st ODI) ನಾಳೆ ನಡೆಯಲಿದೆ. ಟೀಮ್​ ಇಂಡಿಯಾದ ನಾಯಕ ರೋಹಿತ್​ ಶರ್ಮ(Rohit sharma), ವಿರಾಟ್​ ಕೊಹ್ಲಿ(virat kohli) ಸೇರಿ ಕೆಲ ಆಟಗಾರರು ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ ಸೋಲಿನ ಬಳಿಕ ಆಡುತ್ತಿರುವ ಮೊದಲ ಪಂದ್ಯ ಇದಾಗಿದೆ.

ಕಳೆದ ವರ್ಷ(2023) ನವೆಂಬರ್​ 19ರಂದು ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿದ್ದ ಏಕದಿನ ಫೈನಲ್​ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್​ ಅಂತರದ ಸೋಲು ಕಂಡು ನಿರಾಸೆ ಅನುಭವಿಸಿತ್ತು. ಇದಾದ ಬಳಿಕ ವಿರಾಟ್​ ಕೊಹ್ಲಿ, ರೋಹಿತ್​ ಶರ್ಮ, ಜಸ್​ಪ್ರೀತ್​ ಬುಮ್ರಾ(jasprit bumrah) ಯಾವುದೇ ಏಕದಿನ ಪಂದ್ಯವನ್ನಾಡಿರಲಿಲ್ಲ. ಇದೀಗ ಬರೋಬ್ಬರಿ 9 ತಿಂಗಳ ಬಳಿಕ ಏಕದಿನ ಸರಣಿಯನ್ನಾಡಲು ಸಜ್ಜಾಗಿದ್ದಾರೆ.

ಇದನ್ನೂ ಓದಿ IND vs SL : ಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲೂ ಭಾರತಕ್ಕೆ ಜಯ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ಪಡೆ

ಮುಂದಿನ ವರ್ಷ ಪಾಕ್​ ಆತಿಥ್ಯದಲ್ಲಿ ನಡೆಯುವ ಏಕದಿನ ಮಾದರಿಯ ಐಸಿಸಿ ಚಾಂಪಿಯನ್ಸ್​ ಟ್ರೋಫಿ ಟೂರ್ನಿಯ ನಿಟ್ಟಿನಲ್ಲಿ ಭಾರತಕ್ಕೆ ಈ ಸರಣಿ ಮಹತ್ವದ್ದಾಗಿದೆ. ಟಿ20 ಕ್ರಿಕೆಟ್​ಗೆ ವಿದಾಯ ಹೇಳಿರುವ ವಿರಾಟ್​ ಕೊಹ್ಲಿ ಮತ್ತು ನಾಯಕ ರೋಹಿತ್​ ಅವರು 2027ರ ಏಕದಿನ ವಿಶ್ವಕಪ್​ ಆಡಬೇಕಿದ್ದರೆ ಈ ಸರಣಿಯಿಂದಲೇ ತಮ್ಮ ಸಾಮರ್ಥ್ಯ ತೋರಬೇಕಿದೆ. ನೂತನ ಕೋಚ್​ ಗಂಭೀರ್​ ಮಾರ್ಗದರ್ಶನಲ್ಲಿ ಆಡುತ್ತಿರುವ ಮೊದಲ ಏಕದಿನ ಸರಣಿ ಕೂಡ ಇದಾಗಿದೆ.

ಭಾರತ ಟಿ20 ಕ್ರಿಕೆಟ್​ ತಂಡದಿಂದ ಕೈಬಿಟ್ಟಿರುವ ಕನ್ನಡಿಗ ಕೆ.ಎಲ್​ ರಾಹುಲ್(KL Rahul)​ ಅವರಿಗೆ ತಂಡದಲ್ಲಿ ಭದ್ರ ಸ್ಥಾನವೊಂದನ್ನು ಗಿಟ್ಟಿಸಿಕೊಳ್ಳಲು ಈ ಸರಣಿ ಮುಖ್ಯವಾಗಿದೆ. ತೀವ್ರ ಪೈಪೋಟಿಯ ಮಧ್ಯೆಯೂ ಅವರು ಏಕದಿನ ಸರಣಿಯಲ್ಲಿ ಅವಕಾಶ ಗಿಟ್ಟಿಸಿಕೊಂಡು ನಿರೀಕ್ಷಿತ ಬ್ಯಾಟಿಂಗ್​ ಪ್ರದರ್ಶನ ತೋದರೇ ಹೋದರೆ ಏಕದಿನ ತಂಡದಲ್ಲಿಯೂ ಅವರಿಗೆ ಬಾಗಿಲು ಬಂದ್​ ಆಗುವುದು ಖಚಿತ. ಈ ಹಿಂದೆ ಪಂತ್​ ಅನುಪಸ್ಥಿತಿಯಲ್ಲಿ ರಾಹುಲ್​ಗೆ ಕೀಪಿಂಗ್​ ಜವಾಬ್ದಾರಿ ನೀಡಿ ತಂಡದಲ್ಲಿ ಸ್ಥಾನ ನೀಡಲಾಗಿತ್ತು. ಆದರೆ ಈಗ ಪಂತ್​ ತಂಡಕ್ಕೆ ಆಗಮಿಸಿದ್ದಾರೆ.

ವಿರಾಟ್​ ಕೊಹ್ಲಿಗೆ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ ವಿಶೇಷ ದಾಖಲೆಯೊಂದನ್ನು ಬರೆಯುವ ಅವಕಾಶವಿದೆ. ಹೌದು, ಕೊಹ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್​ ಕೊಹ್ಲಿ 13,848* ರನ್(virat kohli odi runs)​ ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್​ ಬಾರಿಸಿದರೆ 14 ಸಾವಿರ ರನ್​ ಮೈಲುಗಲ್ಲು ತಲುಪಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 18,426 ರನ್ ಗಳಿಸಿದ್ದರೆ, ಕುಮಾರ ಸಂಗಕ್ಕಾರ 404 ಪಂದ್ಯಗಳನ್ನಾಡಿ 14,234 ರನ್ ಬಾರಿಸಿದ್ದಾರೆ. ಕೊಹ್ಲಿಗೆ ಸಂಗಕ್ಕಾರ ದಾಖಲೆ ಮುರಿಯುವ ಅವಕಾಶವಿದೆ. ಆದರೆ ಸಚಿನ್​ ದಾಖಲೆ ಮುರಿಯುವುದು ಕಷ್ಟ ಸಾಧ್ಯ.

Continue Reading

ಕ್ರೀಡೆ

Anshuman Gaekwad: ಮಾಜಿ ಕ್ರಿಕೆಟಿಗ ಅಂಶುಮಾನ್‌ ಗಾಯಕ್ವಾಡ್‌ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

Anshuman Gaekwad: ಭಾರತ ತಂಡದ ಮಾಜಿ ನಾಯಕರಾಗಿದ್ದ ದತ್ತಾಜಿರಾವ್‌ ಗಾಯಕ್ವಾಡ್‌ ಅವರ ಪುತ್ರನಾಗಿರುವ ಅಂಶುಮಾನ್‌ ಗಾಯಕ್ವಾಡ್‌, 1975 -1985ರ ಅವಧಿಯಲ್ಲಿ ಭಾರತದ ಪರ 40 ಟೆಸ್ಟ್‌ ಆಡಿದ್ದರು. ಮಧ್ಯಮ ಕ್ರಮಾಂಕದಲ್ಲಿ ಟೆಸ್ಟ್‌ ಬದುಕು ಆರಂಭಿಸಿದ ಗಾಯಕ್ವಾಡ್‌, ಬಳಿಕ ಆರಂಭಿಕನಾಗಿ ಭಡ್ತಿ ಪಡೆದಿದ್ದರು

VISTARANEWS.COM


on

Anshuman Gaekwad
Koo

ಮುಂಬಯಿ: ರಕ್ತದ ಕ್ಯಾನ್ಸರ್​ನಿಂದ ಬಳಲುತ್ತಿದ್ದ ಟೀಮ್​ ಇಂಡಿಯಾದ ಮಾಜಿ ಕ್ರಿಕೆಟಿಗ ಹಾಗೂ ಮಾಜಿ ಕೋಚ್‌ ಆಗಿದ್ದ ಅಂಶುಮಾನ್‌ ಗಾಯಕ್ವಾಡ್‌(Anshuman Gaekwad) ನಿಧನ ಹೊಂದಿದ್ದಾರೆ. ಕೆಲವು ವಾರಗಳ ಹಿಂದಷ್ಟೇ ಅವರ ಚಿಕಿತ್ಸೆಗೆ ಬಿಸಿಸಿಐ ಒಂದು ಕೋಟಿ ರೂ. ಆರ್ಥಿಕ ನೆರವು ಘೋಷಿಸಿತ್ತು. ಮಾಜಿ ಕ್ರಿಕೆಟಿಗರಾದ ಕಪಿಲ್‌ದೇವ್‌, ಸಂದೀಪ್‌ ಪಾಟೀಲ್‌ ಮೊದಲಾದವರ ಮನವಿ ಹಾಗೂ ಕಳಕಳಿಗೆ ಸ್ಪಂದಿಸಿದ ಬಿಸಿಸಿಐ ಈ ಮಾನವೀಯ ನಿರ್ಧಾರಕ್ಕೆ ಪ್ರಕಟಿಸಿತ್ತು. ಆದರೆ, ಇದೀಗ ಅವರು ನಮ್ಮನ್ನು ಅಗಲಿದ್ದಾರೆ. ನಿನ್ನೆ(ಬುಧವಾರ ಜುಲೈ 31) ತಡರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.

ಅಂಶುಮಾನ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮಾಜಿ ಆಟಗಾರರಾದ ಕಪಿಲ್‌ದೇವ್‌, ಸುನೀಲ್‌ ಗಾವಸ್ಕರ್‌, ಸಚಿನ್​ ತೆಂಡೂಲ್ಕರ್​, ರವಿಶಾಸ್ತ್ರಿ, ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ, ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ ಸೇರಿದಂತೆ ಹಲವು ಹಾಲಿ ಮತ್ತು ಮಾಜಿ ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ.

ಭಾರತ ತಂಡದ ಮಾಜಿ ನಾಯಕರಾಗಿದ್ದ ದತ್ತಾಜಿರಾವ್‌ ಗಾಯಕ್ವಾಡ್‌ ಅವರ ಪುತ್ರನಾಗಿರುವ ಅಂಶುಮಾನ್‌ ಗಾಯಕ್ವಾಡ್‌, 1975 -1985ರ ಅವಧಿಯಲ್ಲಿ ಭಾರತದ ಪರ 40 ಟೆಸ್ಟ್‌ ಆಡಿದ್ದರು. ಮಧ್ಯಮ ಕ್ರಮಾಂಕದಲ್ಲಿ ಟೆಸ್ಟ್‌ ಬದುಕು ಆರಂಭಿಸಿದ ಗಾಯಕ್ವಾಡ್‌, ಬಳಿಕ ಆರಂಭಿಕನಾಗಿ ಭಡ್ತಿ ಪಡೆದಿದ್ದರು. ಸುನೀಲ್‌ ಗಾವಸ್ಕರ್‌ ಅವರೊಂದಿಗೆ ಅನೇಕ ಉತ್ತಮ ಜತೆಯಾಟ ನಡೆಸಿದ್ದರು. 1999 ರ ವಿಶ್ವಕಪ್ ಸಮಯದಲ್ಲಿ ಕೀನ್ಯಾ ಕ್ರಿಕೆಟ್ ತಂಡಕ್ಕೆ ತರಬೇತುದಾರರಾಗಿದ್ದರು.

“ಅಂಶುಮಾನ್ ಗಾಯಕ್ವಾಡ್ ಭಾರತೀಯ ಕ್ರಿಕೆಟ್‌ಗೆ ನೀಡಿದ ಕೊಡುಗೆ ಅಪಾರ. ಪ್ರತಿಭಾನ್ವಿತ ಆಟಗಾರ ಮತ್ತು ಅತ್ಯುತ್ತಮ ತರಬೇತುದಾರರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು. ಓಂ ಶಾಂತಿ” ಎಂದು ಮೋದಿ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

“ಭಾರತೀಯ ಕ್ರಿಕೆಟ್‌ನ ಹೆಮ್ಮೆಯನ್ನು ಹೆಚ್ಚಿಸಿದ ಕ್ರಿಕೆಟ್ ಕೌಶಲವನ್ನು ಹೆಚ್ಚಿಸಿದ ದಿಗ್ಗಜ ಕ್ರಿಕೆಟಿಗ ಅಂಶುಮಾನ್ ಗಾಯಕ್ವಾಡ್ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಅವರ ಅಭಿಮಾನಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪವಿದೆ. ಓಂ ಶಾಂತಿ” ಎಂದು ಕೇಂದ್ರ ಗೃಹ ಸಚಿವ ಅಮಿತ್​ ಶಾ ಸಂತಾಪ ಸೂಚಿಸಿದ್ದಾರೆ.

Continue Reading

ಕ್ರೀಡೆ

Rashid khan 600 wickets: ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್​ ಪೂರ್ತಿಗೊಳಿಸಿದ ರಶೀದ್​ ಖಾನ್​; ಮೊದಲ ಸ್ಪಿನ್ನರ್

Rashid khan 600 wickets: ಟಿ20 ವಿಕೆಟ್ ಸಾಧಕರ ಪಟ್ಟಿಯಲ್ಲಿ ಸದ್ಯ ಡ್ವೇನ್ ಬ್ರಾವೊ ಅವರೇ ಅಗ್ರಸ್ಥಾನ ಪಡೆದಿದ್ದಾರೆ. ಅವರು ಒಟ್ಟು 630 ವಿಕೆಟ್​ ಕಬಳಿಸಿದ್ದಾರೆ. ಈ ದಾಖಲೆಯನ್ನು ಮುರಿಯಲು ರಶೀದ್ ಖಾನ್​ಗೆ ಇನ್ನು 31 ವಿಕೆಟ್​ಗಳ ಅಗತ್ಯವಿದೆ.

VISTARANEWS.COM


on

Rashid khan 600 wickets
Koo

ದುಬೈ: ಅಫಘಾನಿಸ್ತಾನ ತಂಡದ ಸ್ಟಾರ್​ ಸ್ಪಿನ್ನರ್ ರಶೀದ್ ಖಾನ್ (Rashid Khan) ಅವರು ಟಿ20 ಕ್ರಿಕೆಟ್​ನಲ್ಲಿ ಹೊಸ ದಾಖಲೆಯೊಂದನ್ನು ಬರೆದಿದ್ದಾರೆ. ಇಂಗ್ಲೆಂಡ್​ನಲ್ಲಿ ನಡೆಯುತ್ತಿರುವ ‘ದಿ ಹಂಡ್ರೆಡ್’ ಕ್ರಿಕೆಟ್​ ಲೀಗ್​ನಲ್ಲಿ 2 ವಿಕೆಟ್ ಕಬಳಿಸುವುದರೊಂದಿಗೆ ರಶೀದ್ ಖಾನ್ ಎಲ್ಲ ಮಾದರಿಯ ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್(Rashid khan 600 wickets)​ ಪೂರ್ತಿಗೊಳಿಸಿದ ವಿಶ್ವದ ಮೊದಲ ಸ್ಪಿನ್ನರ್ ಹಾಗೂ 2ನೇ ಬೌಲರ್​​ ಎನಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್​ ಪೂರ್ತಿಗೊಳಿಸಿದ್ದ ವಿಶ್ವ ದಾಖಲೆಯನ್ನು ಮೊದಲ ನಿರ್ಮಿಸಿದ್ದು ವೆಸ್ಟ್ ಇಂಡೀಸ್​ನ ಮಾಜಿ ಆಟಗಾರ ಡ್ವೇನ್ ಬ್ರಾವೊ. ಇದೀಗ ರಶೀದ್​ ಖಾನ್​ ಈ ದಾಖಲೆಯನ್ನು ಸರಿಗಟ್ಟಿದ್ದಾರೆ. ಅತೀ ವೇಗವಾಗಿ ಟಿ20 ಕ್ರಿಕೆಟ್​ನಲ್ಲಿ 600 ವಿಕೆಟ್ ಕಬಳಿಸಿದ ದಾಖಲೆ ರಶೀದ್ ಹೆಸರಿಗೆ ದಾಖಲಾಗಿದೆ. ಬ್ರಾವೊ 545 ಟಿ20 ಪಂದ್ಯಗಳ ಮೂಲಕ ಈ ಸಾಧನೆ ಮಾಡಿದ್ದರೆ, ರಶೀದ್​ ಖಾನ್​ ಕೇವಲ 441 ಪಂದ್ಯಗಳನ್ನಾಡಿ ಈ ಮೈಲುಗಲ್ಲು ನಿರ್ಮಿಸಿದ್ದಾರೆ.

ಬ್ರಾವೊ ದಾಖಲೆ ಮುರಿಯಲು 31 ವಿಕೆಟ್​ ಅಗತ್ಯ


ಟಿ20 ವಿಕೆಟ್ ಸಾಧಕರ ಪಟ್ಟಿಯಲ್ಲಿ ಸದ್ಯ ಡ್ವೇನ್ ಬ್ರಾವೊ ಅವರೇ ಅಗ್ರಸ್ಥಾನ ಪಡೆದಿದ್ದಾರೆ. ಅವರು ಒಟ್ಟು 630 ವಿಕೆಟ್​ ಕಬಳಿಸಿದ್ದಾರೆ. ಈ ದಾಖಲೆಯನ್ನು ಮುರಿಯಲು ರಶೀದ್ ಖಾನ್​ಗೆ ಇನ್ನು 31 ವಿಕೆಟ್​ಗಳ ಅಗತ್ಯವಿದೆ. 25 ವರ್ಷದ ರಶೀದ್​ಗೆ ಈ ದಾಖಲೆ ಮುರಿಯುವು ಕಷ್ಟದ ಮಾತಲ್ಲ. ಬ್ರಾವೊ ಈಗಾಗಲೇ ಕ್ರಿಕೆಟ್​ನಿಂದ ನಿವೃತ್ತಿ ಹೊಂದಿದ್ದಾರೆ. ರಶೀದ್​ ಇನ್ನೂ ಕನಿಷ್ಠ 10 ವರ್ಷಗಳ ಕಾಲ ಕ್ರಿಕೆಟ್​ ಆಡುವುದರಲ್ಲಿ ಯಾವುದೇ ಅನುಮಾನ ಬೇಡ. ಉಳಿದಂತೆ ಲೆಗ್ ಸ್ಪಿನ್ನರ್ ಇಮ್ರಾನ್ ತಾಹಿರ್ 405 ಪಂದ್ಯಗಳಲ್ಲಿ 502 ವಿಕೆಟ್ ಪಡೆದರೆ, ಶಕೀಬ್ ಅಲ್ ಹಸನ್ 444 ಪಂದ್ಯಗಳಲ್ಲಿ 492 ವಿಕೆಟ್ ಪಡೆದಿದ್ದಾರೆ.

ಇದನ್ನೂ ಓದಿ Rashid Khan: ರಶೀದ್ ಖಾನ್​ಗೆ ದಂಡ ವಿಧಿಸಿದ ಐಸಿಸಿ, ಅವರು ಮಾಡಿದ ತಪ್ಪೇನು?

ರಶೀದ್ ಖಾನ್ 93 ಅಂತಾರಾಷ್ಟ್ರೀಯ ಟಿ 20 ಪಂದ್ಯಗಳಲ್ಲಿ 14.14 ಸರಾಸರಿ ಮತ್ತು 6.08 ಎಕಾನಮಿ ರೇಟ್​ನಲ್ಲಿ 152 ವಿಕೆಟ್​ಗಳನ್ನು ಪಡೆದಿದ್ದಾರೆ. ಐಪಿಎಲ್​​ನಲ್ಲಿ 121 ಪಂದ್ಯಗಳಲ್ಲಿ 21.82ರ ಸರಾಸರಿಯಲ್ಲಿ 149 ವಿಕೆಟ್ ಪಡೆದಿದ್ದಾರೆ. ರಶೀದ್ 2017 ರಿಂದ 2021 ರವರೆಗೆ ಸನ್ರೈಸರ್ಸ್ ಹೈದರಾಬಾದ್ (ಎಸ್​ಆರ್​ಎಚ್​) ಪರ ಆಡಿದ್ದರು. ನಂತರ ಗುಜರಾತ್​ ಟೈಟನ್ಸ್ ಸೇರಿಕೊಂಡಿದ್ದಾರೆ.

Continue Reading
Advertisement
Paris Olympics
ಕ್ರೀಡೆ2 mins ago

Paris Olympics: ಒಲಿಂಪಿಕ್ಸ್​ ಅಭಿಯಾನ ಮುಗಿಸಿದ ಬಾಕ್ಸರ್​ ನಿಖತ್ ಜರೀನ್; ಪ್ರೀ ಕ್ವಾರ್ಟರ್​ನಲ್ಲಿ ಸೋಲು

Swapnil Kusale
ಪ್ರಮುಖ ಸುದ್ದಿ3 mins ago

Swapnil Kusale : ರೈಲ್ವೆ ಟಿಕೆಟ್​ ಕಲೆಕ್ಟರ್​ ಈಗ ಒಲಿಂಪಿಕ್​ ಹೀರೊ; ಧೋನಿಯಂತೆಯೇ ಸಾಧನೆ ಮಾಡಿ ಕಂಚು ಗೆದ್ದ ಶೂಟರ್​ ಸ್ವಪ್ನಿಲ್ ಕುಸಾಲೆ

Students
ಶಿಕ್ಷಣ4 mins ago

ಪದವಿ, ಸ್ನಾತಕೋತ್ತರ ಪದವಿ ಸೀಟುಗಳು ಖಾಲಿ ಉಳಿದರೆ ಸಿಇಟಿ ನಡೆಸಲು ವಿವಿಗಳಿಗೆ ಯುಜಿಸಿ ಅನುಮತಿ!

Krishna Janmabhoomi
ದೇಶ6 mins ago

Mathura Krishna Janmabhoomi: ಮಥುರಾ ಶ್ರೀಕೃಷ್ಣ ಜನ್ಮಭೂಮಿ ವಿವಾದ; ಮುಸ್ಲಿಂ ಪರ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

Darshan Judicial Custody extended till 14th August
ಸ್ಯಾಂಡಲ್ ವುಡ್9 mins ago

Actor Darshan: ದರ್ಶನ್​ & ಗ್ಯಾಂಗ್​ಗೆ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ!

Kannada Serials TRP TOP 5 bhagyalakshmi puttakkana makkalu number 1
ಕಿರುತೆರೆ30 mins ago

Kannada Serials TRP: ಟಾಪ್‌ 5ನಲ್ಲಿ ‘ಭಾಗ್ಯಲಕ್ಷ್ಮೀ’; ‘ಪುಟ್ಟಕ್ಕನ ಮಕ್ಕಳು’ ನಂಬರ್‌ 1!

Mohammed Deif
ವಿದೇಶ34 mins ago

Mohammed Deif: ಹಮಾಸ್‌ ಉಗ್ರರಿಗಿಲ್ಲ ಉಳಿಗಾಲ; ಹಮಾಸ್‌ ಮಿಲಿಟರಿ ಚೀಫ್‌ನನ್ನೂ ಕೊಂದ ಇಸ್ರೇಲ್‌!

Rohit Sharma
ಕ್ರೀಡೆ37 mins ago

Rohit Sharma: ಸಚಿನ್​, ಕೊಹ್ಲಿ ಜತೆ ಎಲೈಟ್​ ಪಟ್ಟಿ ಸೇರುವ ನಿರೀಕ್ಷೆಯಲ್ಲಿ ರೋಹಿತ್​

Road Accident
ಬೆಂಗಳೂರು39 mins ago

Road Accident : ಬೆಂಗಳೂರಲ್ಲಿ ಮಳೆಗೆ ಬೈಕ್‌ ಸವಾರ ಬಲಿ; ಕಂಟ್ರೋಲ್‌ ತಪ್ಪಿ ಬಿದ್ದವನ ಮೇಲೆ ಹರಿದ ವಾಹನಗಳು!

Dead Body in Ganga River
Latest50 mins ago

Viral Video: ಹಾವು ಕಚ್ಚಿದ ಮಹಿಳೆಯನ್ನು ಗಂಗಾ ನದಿಯಲ್ಲಿ ತೇಲಿ ಬಿಟ್ಟರು! ಆಕೆ ಬದುಕಿ ಬರುತ್ತಾಳೆ ಎಂದರು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ2 hours ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ3 hours ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ3 hours ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ2 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ2 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ3 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ3 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ3 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ4 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

ಟ್ರೆಂಡಿಂಗ್‌