Anjanadri Hill | ಅಂಜನಾದ್ರಿಯಲ್ಲಿ ಪೂಜೆಗೆ ಅವಕಾಶ ನೀಡದೆ ಕೋರ್ಟ್‌ ಆದೇಶ ಉಲ್ಲಂಘನೆ: ಅರ್ಚಕ ವಿದ್ಯಾದಾಸ ಬಾಬಾ ದೂರು - Vistara News

ಕೊಪ್ಪಳ

Anjanadri Hill | ಅಂಜನಾದ್ರಿಯಲ್ಲಿ ಪೂಜೆಗೆ ಅವಕಾಶ ನೀಡದೆ ಕೋರ್ಟ್‌ ಆದೇಶ ಉಲ್ಲಂಘನೆ: ಅರ್ಚಕ ವಿದ್ಯಾದಾಸ ಬಾಬಾ ದೂರು

2 ವರ್ಷಗಳ ಹಿಂದೆಯೇ ನನಗೆ ಅಂಜನಾದ್ರಿಯಲ್ಲಿ ಪೂಜೆಗೆ ಅವಕಾಶ ನೀಡಲಾಗಿದೆ. ಆದರೆ ರಾಜ್ಯಪಾಲರು ಆಗಮಿಸಿದಾಗ ಪೂಜೆಗೆ ಅವಕಾಶ ನೀಡಿಲ್ಲ. ಈ ಕುರಿತು ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ಅರ್ಚಕ ವಿದ್ಯಾದಾಸ ಬಾಬಾ ತಿಳಿಸಿದ್ದಾರೆ.

VISTARANEWS.COM


on

Anjanadri Hill
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕೊಪ್ಪಳ: ಹೈಕೋರ್ಟ್‌ ನನಗೆ ಅಂಜನಾದ್ರಿಯಲ್ಲಿ (Anjanadri Hill) ಆಂಜನೇಯನ ಪೂಜೆಗೆ ಅವಕಾಶ ನೀಡಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 9 ಗಂಟೆಯವರೆಗೂ ಅಂಜನಾದ್ರಿಯಲ್ಲಿಯ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸುವಂತೆ ಸೂಚನೆ ನೀಡಿದೆ. ಆದರೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಆಗಮಿಸಿದಾಗ ನನಗೆ ಪೂಜೆಗೆ ಅವಕಾಶ ನೀಡಿಲ್ಲ. ಇದು ನ್ಯಾಯಾಲಯದ ಆದೇಶ ಉಲ್ಲಂಘನೆ ಎಂದು ಅಂಜನಾದ್ರಿ ಪರ್ವತದ ಅರ್ಚಕ ವಿದ್ಯಾದಾಸ ಬಾಬಾ ಹೇಳಿದ್ದಾರೆ.

ರಾಜ್ಯಪಾಲರು ಅಂಜನಾದ್ರಿಗೆ ಬಂದಾಗ ಪೂಜೆಗೆ ಅವಕಾಶ ನೀಡದ ಬಗ್ಗೆ ಗಂಗಾವತಿಯಲ್ಲಿ ಪ್ರತಿಕ್ರಿಯಿಸಿ, 2 ವರ್ಷಗಳ ಹಿಂದೆಯೇ ನನಗೆ ಪೂಜೆಗೆ ಅವಕಾಶ ನೀಡಲಾಗಿದೆ. ಶುಕ್ರವಾರ ರಾಜ್ಯಪಾಲರು ಆಗಮಿಸಿದಾಗ ಪೂಜೆ ಅವಕಾಶ ನೀಡಿಲ್ಲ. ಈ ಕುರಿತು ನ್ಯಾಯಾಲಯಕ್ಕೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಗಂಗಾವತಿ ತಾಲೂಕಿನ ಅಂಜನಾದ್ರಿಗೆ ಡಿ.9ರಂದು ಭೇಟಿ ನೀಡಿದ್ದರು. ಈ ವೇಳೆ ವಿದ್ಯಾದಾಸ ಬಾಬಾ ಸ್ಥಳದಲ್ಲಿ ಪೂಜೆ ಸಲ್ಲಿಸಲು ಮುಂದಾದಾಗ ಭದ್ರತೆ ದೃಷ್ಟಿಯಿಂದ ಅವರನ್ನು ತಡೆಯಲಾಗಿತ್ತು. ಆಗ ಅರ್ಚಕ ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ | Janardhan Reddy | ಕಲ್ಯಾಣ ರಾಜ್ಯ ಪ್ರಗತಿ‌ ಪಕ್ಷ ಮೂಲಕ ಜನಾರ್ದನ ರೆಡ್ಡಿ ರಾಜಕೀಯ ಮರು ಪ್ರವೇಶ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Karnataka Rain : ರಾಜಧಾನಿ ಬೆಂಗಳೂರಿನಲ್ಲಿ (Bengaluru Rains) ಭಾನುವಾರ ಸುರಿದ ಎರಡು ಗಂಟೆಯ ಮಳೆಗೆ ಹಳೆಯ ದಾಖಲೆಗಳನ್ನು ಮುರಿದು ಮುನ್ನುಗ್ಗಿದೆ. 133 ವರ್ಷದ ದಾಖಲೆಯನ್ನು ಬೆಂಗಳೂರು ಮಳೆ ರೆಕಾರ್ಡ್ ಬ್ರೇಕ್ ಮಾಡಿದೆ. ಜತೆಗೆ ಸೋಮವಾರವು ಹಲವೆಡೆ ಮಳೆಯು ಅಬ್ಬರಿಸಿದೆ.

VISTARANEWS.COM


on

By

Karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru Rain) ಜೂನ್‌ ಮೊದಲ ವಾರವೇ ಮಳೆಯಲ್ಲಿ ರೆಕಾರ್ಡ್‌ ಬ್ರೇಕ್‌ ಮಾಡಿದೆ. ಜೂ.2ರ ಭಾನುವಾರ ಬೆಂಗಳೂರಿನಲ್ಲಿ 111.2 mm ಮಳೆಯಾಗಿದೆ. ಈ ಮೂಲಕ 133 ವರ್ಷಗಳ ದಾಖಲೆಯನ್ನು ಮುರಿದಿದೆ. ಬೆಂಗಳೂರಿನಲ್ಲಿ 1891ರ ಜೂನ್ 16ರಂದು 101.6 mm ಮಳೆ ಆಗಿತ್ತು. ಆದರೆ ನಿನ್ನೆ ಭಾನುವಾರ ಸುರಿದ ಜೂನ್ ತಿಂಗಳ ಮಳೆ 133 ವರ್ಷಗಳ ದಾಖಲೆ (Karnataka Rain) ಮುರಿದಿದೆ ಎಂದು ವಿಸ್ತಾರ ನ್ಯೂಸ್‌ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಾಖಲೆಯ ಮಳೆ ಅಬ್ಬರದ ಡಿಟೈಲ್ಸ್‌

ವರ್ಷ- ಮಳೆ ಪ್ರಮಾಣ
1891ರ ಜೂನ್ 16ರಂದು 101.6 mm
2013ರ ಜೂನ್‌ 1ರಂದು 100mm
2009ರ ಜೂನ್ 11ರಂದು 89.6 mm
2024ರ ಜೂನ್‌ 2ರಂದು 111.2 mm

ಇದನ್ನೂ ಓದಿ: Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

ಚಿಕ್ಕಮಗಳೂರಲ್ಲಿ ಮಳೆಗೆ 50 ಎಕರೆ ಅಡಿಕೆ ತೋಟ ಜಲಾವೃತ

ಚಿಕ್ಕಮಗಳೂರು ಬಯಲುಸೀಮೆ ಭಾಗದಲ್ಲಿ ಸೋಮವಾರ (ಜೂ. 3) ಭಾರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ 50 ಎಕರೆ ಅಡಿಕೆ ತೋಟ ಜಲಾವೃತಗೊಂಡಿದೆ. ಚಿಕ್ಕಮಗಳೂರು ತಾಲೂಕಿನ ಕ್ಯಾತನಬೀಡು, ಸಾದರಹಳ್ಳಿ ಗ್ರಾಮಗಳಲ್ಲಿ ಘಟನೆ ನಡೆದಿದೆ. ಗ್ರಾಮದ ಬಸವರಾಜು, ಲೋಕೇಶ್ ಸೇರಿದಂತೆ ಹಲವು ರೈತರ ತೋಟ ನೀರುಪಾಲಾಗಿದೆ. ಇನ್ನೂ ಚಿಕ್ಕಮಗಳೂರು, ಮುಡಿಗೆರೆ, ಕೊಪ್ಪ, ಶೃಂಗೇರಿ, ಎನ್‌ಆರ್ ಪುರದಲ್ಲಿ ನಿರಂತರ ಮಳೆಯಿಂದಾಗಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಕೊಟ್ಟಿಗೆಹಾರ, ಚಾರ್ಮಾಡಿ, ಕಿಗ್ಗಾ, ಬಸರಿ ಕಟ್ಟೆ ಭಾಗದಲ್ಲೂ ವ್ಯಾಪಕ ಮಳೆಯಾಗುತ್ತಿದೆ.

ದಾವಣಗೆರೆಯಲ್ಲಿ ಕೊಚ್ಚಿ ಹೋದ ಮಂಡಲೂರು ಸೇತುವೆ

ಭಾನುವಾರ ರಾತ್ರಿ ಸುರಿದ ಮಳೆಯಿಂದ ಮಂಡಲೂರು ಸೇತುವೆ ಕೊಚ್ಚಿ ಹೋಗಿದೆ. ದಾವಣಗೆರೆಯ ಮಂಡಲೂರಿನಿಂದ ಕಾಟಿಹಳ್ಳಿ ತಾಂಡಕ್ಕೆ ಸಂಪರ್ಕ ಕಲ್ಪಿಸುವ ಸೇತುವೆಯು ಕೊಚ್ಚಿ ಹೋದ ಕಾರಣದಿಂದ ಸಂಚಾರಕ್ಕೆ ಅಡಚಣೆ ಆಗಿತ್ತು. ಮಂಡಲೂರು ಗ್ರಾಮಕ್ಕೆ ಬರಲು ಹೋಗಲು ಆಗದೆ ಕಾಟಿಹಳ್ಳಿ ತಾಂಡದ ಜನರಿಗೆ ತೊಂದರೆ ಅನುಭವಿಸಿದರು. ಸೇತುವೆ ತುರ್ತು ಕಾಮಗಾರಿ ಆರಂಭಿಸುವಂತೆ ಗ್ರಾಮಸ್ಥರು ಆಗ್ರಹಿಸಿದರು.

ಕೊಡಗಿಗೂ ಎಂಟ್ರಿ ಕೊಟ್ಟ ಮುಂಗಾರು ಮಳೆ

ಸೋಮವಾರ ಕೊಡಗು ಜಿಲ್ಲೆಯ ಹಲವೆಡೆ ತುಂತುರು ಮಳೆ ಆರಂಭವಾಗಿದೆ. ಕಳೆದ ಹಲವು ದಿನಗಳಿಂದ ಜಿಲ್ಲೆಯಲ್ಲಿ ಬಿಸಿಲ ವಾತವರಣವಿತ್ತು. ಸೋಮವಾರ ಮಧ್ಯಾಹ್ನದ ನಂತರ ಮಡಿಕೇರಿ ಸೇರಿದಂತೆ ಜಿಲ್ಲೆಯ ಹಲವೆಡೆ ಮಳೆಯಾಗಿದ್ದು, ಮನ್ಸೂನ್ ಮಾದರಿಯ ವಾತಾವರಣ ಕಂಡು ಬಂತು. ಮಳೆಯಿಂದಾಗಿ ಕೊಡಗಿನ ರೈತಾಪಿ ವರ್ಗದಲ್ಲಿ ಮಂದಹಾಸ ಮೂಡಿದೆ. ಇತ್ತ ದಿಢೀರ್‌ ಮಳೆಗೆ ಸಾರ್ವಜನಿಕರು ಹಾಗೂ ದ್ವಿಚಕ್ರ ವಾಹನ ಸವಾರರು ಪರದಾಡಿದರು.

ಚಿತ್ರದುರ್ಗದಲ್ಲಿ ಮಳೆಗೆ ಬೆಳೆ ನಾಶ

ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಆರ್ಭಟಕ್ಕೆ ಮೊಳಕಾಲ್ಮುರು ತಾಲೂಕಿನಲ್ಲಿ ಅವ್ಯವಸ್ಥೆ ಆಗಿದೆ. ಪಕ್ಕುರ್ತಿ ಗ್ರಾಮದಲ್ಲಿ ಮಳೆಯಿಂದಾಗಿ ಶೇಂಗಾ, ಹತ್ತಿ, ಕಲ್ಲಂಗಡಿ, ಕನಕಾಂಬರ ಬೆಳೆ ನಾಶವಾಗಿದೆ. ಮಳೆ ರಭಸಕ್ಕೆ ನಾಲ್ಕು ಬೋರ್ವೆಲ್,ವಿದ್ಯುತ್ ಪರಿಕರ,ಪೈಪ್ ಲೈನ್ ಕೊಚ್ಚಿ ಹೋಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಸಿಡಿಲಿಗೆ ಆಕಳು ಬಲಿ; ಹಲವೆಡೆ ಮಳೆ ಅವಾಂತರಕ್ಕೆ ಜನರು ತತ್ತರ

Karnataka Rain : ಸಿಡಿಲು ಬಡಿದು ಆಕಳು ಬಲಿಯಾಗಿದ್ದರೆ, ರಾಜ್ಯದಲ್ಲಿ ಮಳೆ (Rain News) ಅವಾಂತರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ನೋಡಿದಷ್ಟು ದೂರ ಮಳೆ ನೀರಿನಿಂದ ರಸ್ತೆಗಳು ಜಲಾವೃತಗೊಮಡಿದೆ.

VISTARANEWS.COM


on

By

karnataka Rain
Koo

ಬೆಂಗಳೂರು: ರಾಜಧಾನಿ ಬೆಂಗಳೂರು ಮಾತ್ರವಲ್ಲದೇ ವಿವಿಧ ಜಿಲ್ಲೆಗಳಲ್ಲೂ ಮಳೆಯು (Karnataka Rain) ಅವಾಂತರವೇ ಸೃಷ್ಟಿಸಿದೆ. ಗುಡುಗು ಸಿಡಿಲು ಸಹಿತ ಸುರಿದ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಮುಖ್ಯವಾಗಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲೇ ಭಾರಿ ಮಳೆಯಾಗಿದ್ದು, ಮನೆಗಳಿಗೆ (Rain News) ನೀರು ನುಗ್ಗಿದೆ. ಜತೆಗೆ ಜಮೀನುಗಳು ಜಲಾವೃತಗೊಂಡಿದೆ. ವಿಜಯಪುರದಲ್ಲಿ ಸಿಡಿಲು ಬಡಿದು ಆಕಳು ಸ್ಥಳದಲ್ಲೇ ಮೃತಪಟ್ಟಿದೆ. ಹಾಗಾದರೆ ಯಾವ್ಯಾವ ಜಿಲ್ಲೆಗಳಲ್ಲಿ ಏನೆಲ್ಲ ಅನಾಹುತಗಳು ಸಂಭವಿಸಿದೆ ಎಂದು (Karnataka weather Forecast) ಮಾಹಿತಿ ಇಲ್ಲಿದೆ.

Karnataka rain

ಯಾದಗಿರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಗೆ ಪ್ರಮುಖ ರಸ್ತೆಗಳು ಕೆರೆಯಂತಾಗಿದ್ದವು. ವರುಣನ ಅಬ್ಬರದಿಂದ ಬೈಕ್ ಸವಾರರು ಪರದಾಡಬೇಕಾಯಿತು.

Karnataka Rain

ರಾಯಚೂರಿನ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ರಾತ್ರಿಯಿಂದ ಮುಂದುವರೆದ ಮಳೆ ಮುಂದುವರಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ರಾತ್ರಿಯಿಂದ ಹಲವೆಡೆ ವಿದ್ಯುತ್ ವ್ಯತ್ಯಯದಿಂದಾಗಿ ಸಾರ್ವಜನಿಕರು ಪರದಾಡಿದರು. ಕಳೆದ 10 ಗಂಟೆಯಿಂದಲೂ ಬಿಟ್ಟು ಬಿಡದೇ ಮಳೆ ಸುರಿಯುತ್ತಿದೆ.

karnataka Rain

ವಿಜಯನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಬಾಳೆ, ಕಬ್ಬು, ಮೆಕ್ಕೆಜೋಳ ಸೇರಿದಂತೆ ಇತರೆ ಬೆಳೆಗಳಿಗೆ ನೀರು ನುಗ್ಗಿದೆ. ಹೊಸಪೇಟೆಯ ಜಂಬುನಾಥನ ಹಳ್ಳಿ ಪ್ರದೇಶದ ರಾಯರಕೆರೆ ಭಾಗದಲ್ಲಿನ ರೈತರ ಬೆಳೆಗಳು ನೀರುಪಾಲಾಗಿದೆ.

ಬಾಗಲಕೋಟೆ ಜಿಲ್ಲೆ ಇಲಕಲ್ಲ ತಾಲ್ಲೂಕಿನ ಕರಡಿ ಗ್ರಾಮದಲ್ಲಿ ಭಾರಿ ಮಳೆಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಇಲಕಲ್ ತಾಲ್ಲೂಕಿನಲ್ಲಿ ರಾತ್ರಿ ಸುರಿದ ಮಳೆಗೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದೆ. ಕರಡಿ ಗ್ರಾಮದ ಸಂಪರ್ಕ ರಸ್ತೆ ಹಳ್ಳದ ನೀರಿನಿಂದ ಜಲಾವೃತಗೊಂಡಿದೆ. ಕರಡಿ ರಸ್ತೆ ಮೇಲ್ಸೇತುವೆ ಕಾಮಗಾರಿಯಿಂದ ನೀರು ರಸ್ತೆಗೆ ನುಗ್ಗಿದೆ. ಕರಡಿ, ದಾಸಬಾಳ, ಪಾಲತಿ, ಕೊಣ್ಣೂರ, ಹುನಗುಂದ ಸಂಪರ್ಕ ಕಡಿತಗೊಂಡಿದೆ.

karnataka Rain

ತಡರಾತ್ರಿಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ವಿಜಯಪುರ ನಗರದ ಜುಮನಾಳ, ಸಾರವಾಡ, ಹೊನಗನಹಳ್ಳಿ ಸೇರಿದಂತೆ ಭಾರಿ ಮಳೆಯಾಗಿದೆ. ವಿಜಯಪುರ ನಗರದ ಮೀನಾಕ್ಷಿ ವೃತ್ತ ಜಲಾವೃತಗೊಂಡಿದ್ದು, ನೀರು ತುಂಬಿದ ರಸ್ತೆಯಲ್ಲೇ ಸವಾರರು ವಾಹನ ಚಲಾಯಿಸಿದ್ದಾರೆ.

karnataka Rain

ದಾವಣಗೆರೆಯಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿತ್ತು. ದಾವಣಗೆರೆ ತಾಲೂಕಿನ ಅನಗೋಡು, ಮಾಯಕೊಂಡ, ಹುಣಸೇಕಟ್ಟೆ, ಹೆಬ್ಬಾಳು, ನರಗನಹಳ್ಳಿ ಹಾಗೂ ಹೊನ್ನಯಕನಹಳ್ಳಿ ಒಬಣ್ಣನಹಳ್ಳಿ ಭಾವಿಹಾಳ್ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಭರ್ಜರಿ ಮಳೆಯಾಗಿದೆ. ಹೆಬ್ಬಾಳು ನರಗನಹಳ್ಳಿ, ಕೊಡಗನೂರು ಸೇರಿದಂತೆ ಇತರೆ ಕೆರೆಗಳಿಗೆ ನೀರು ಹರಿದು ಬಂದಿದೆ. ಮಳೆಯ ರಭಸಕ್ಕೆ ಹೊಲಗಳಿಗೆ ನೀರು ನುಗ್ಗಿದ್ದು, ಗುಲಾಬಿ ಗಿಡಗಳು ನೆಲಕಚ್ಚಿದೆ.

karnataka rain

ಈಶಾನ್ಯ ಪದವೀಧರ ಕ್ಷೇತ್ರದ ಮತದಾನಕ್ಕೂ ಮಳೆ ಎಫೆಕ್ಟ್‌ ತಟ್ಟಿದೆ. ರಾಯಚೂರಲ್ಲಿ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಪವರ್ ಕಟ್ ಆಗಿದ್ದು, ಸಿಬ್ಬಂದಿ ಮೊಬೈಲ್ ಟಾರ್ಚ್ ಬೆಳಕಿನಲ್ಲಿ ಮತದಾನ ನಡೆದಿದೆ. ಪವರ್ ಇಲ್ಲದೆ ಮೊಬೈಲ್ ‌ಟಾರ್ಚ್ ಬಳಸಿ ಮತದಾನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಮತಗಟ್ಟೆ ನಂ.84ರಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಮತದಾನ ಮಾಡಬೇಕಾಯಿತು.

Karnataka Rain

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ‌ ಹಿರೇಮಸಳಿ ಗ್ರಾಮದಲ್ಲಿ ಸಿಡಿಲು ಬಡಿದು ಆಕಳು ಮೃತಪಟ್ಟಿದೆ. ಶಿವಯೋಗಿ ಹೊಸಮನಿ ಎಂಬುವವರಿಗೆ ಸೇರಿದ ಆಕಳನ್ನು ಹೊಲದಲ್ಲಿ ಮರದ ಕೆಳಗೆ ಕಟ್ಟಲಾಗಿತ್ತು. ಈ ವೇಳೆ ಸಿಡಿಲು ಬಡಿದು ಆಕಳು ಮೃತಪಟ್ಟಿದೆ. ಇಂಡಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Rain

ಯಾದಗಿರಿ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಮಳೆಗೆ ಕೃಪಾ ನಗರ ಹಾಗೂ ಹೊಸಳ್ಳಿ ಕ್ರಾಸ್ ಸಮೀಪದ 20ಕ್ಕೂ ಹೆಚ್ಚು ಗುಡಿಸಲು ಒಳಗೆ ನೀರು ನುಗ್ಗಿದೆ. ಅಲೆಮಾರಿ ಜನಾಂಗದವರು ವಾಸ ಮಾಡುವ ಗುಡಿಸಲು ನೀರುಪಾಲಾಗಿದ್ದು, ರಾತ್ರಿ ಪೂರ್ತಿ ಜಾಗರಣೆ ಮಾಡಿದ್ದಾರೆ. ಸರಕಾರ ವಾಸಕ್ಕೆ ಮನೆ ಸೌಲಭ್ಯ ಕಲ್ಪಿಸುವಂತೆ ಅಲೆಮಾರಿ ಜನಾಂಗದವರು ಒತ್ತಾಯಿಸಿದ್ದಾರೆ.

Karnataka Rain

ಕೊಪ್ಪಳದ ನಗರದ ಗಣೇಶ ನಗರದಲ್ಲಿ ಭಾರಿ ಮಳೆಗೆ ಮನೆಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಗಣೇಶ ನಗರ ಬಡಾವಣೆಯ ಹತ್ತಾರು ಮನೆಗಳ ಮುಂದೆ ಜಲಾವೃತಗೊಂಡಿದ್ದು, ಭಾಗ್ಯನಗರ ಪಟ್ಟಣ ಪಂಚಾಯತ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Karnataka Rain

ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ ತಾಲೂಕಿನ ಕಿತ್ನೂರು ಸರ್ಕಾರಿ ಶಾಲೆ ಆವರಣವು ಕೆರೆಯಂತಾಗಿತ್ತು. ನಿನ್ನೆ ರಾತ್ರಿ ಸುರಿದ ಮಳೆಗೆ ಶಾಲಾ ಆವರಣದಲ್ಲಿ ಮಳೆ ನೀರು ತುಂಬಿತ್ತು.

Karnataka Rain

ಯಾದಗಿರಿಯ ಹೊಸಳ್ಳಿ ಕ್ರಾಸ್ ಸಮೀಪದಲ್ಲಿ 3 ಮನೆಗಳಿಗೆ ಮಳೆ ನೀರು ನುಗ್ಗಿದೆ. ಧವಸ ಧಾನ್ಯ ಹಾಗೂ ಅಗತ್ಯ ವಸ್ತುಗಳಿಗೆ ಹಾನಿಯಾಗಿದೆ. ಕೃಷ್ಣಾ ದೇಗುಲ ಜಲ ದಿಗ್ಬಂಧನವಾಗಿದೆ. ನಗರಸಭೆ ಅಧಿಕಾರಿಗಳ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

karnataka Rain

ತುಮಕೂರಿನ ತಿಪಟೂರಿನಲ್ಲಿ ಧಾರಕಾರವಾಗಿ ಸುರಿದ ಮಳೆಗೆ ಕುಡಿಯುವ ನೀರಿನ ಕೆರೆಗೆ ಕಲುಷಿತ ನೀರು ಸೇರ್ಪಡೆಯಾಗಿದೆ. ತಿಪಟೂರು ಪಟ್ಟಣದ ಕಲುಷಿತ ನೀರು ಈಚನೂರು ಕೆರೆಗೆ ಸೇರ್ಪಡೆಯಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಲು ಸ್ಥಳೀಯರು ಮನವಿ ಮಾಡಿದ್ದಾರೆ.

Karnataka Rain

ಬಾಗಲಕೋಟೆಯ ಬಾದಾಮಿ ಭಾಗದಲ್ಲಿ ರಾತ್ರಿ ಸುರಿದ ಮಳೆಯು ಅವಾಂತರವನ್ನೇ ಸೃಷ್ಟಿಸಿದೆ. ನಿರ್ಮಾಣ ಹಂತದ ಕಾಲುವೆಯಿಂದ ನೀರು ನುಗ್ಗಿದ್ದು, 4 ಎಕರೆ ಜಮೀನಿನಲ್ಲಿ ಬೆಳೆದ ಕಬ್ಬು, ಗೋವಿನಜೋಳ ನಾಶವಾಗಿದೆ. ಹನುಮಂತ ಚೂರಿ ಎಂಬ ರೈತರ ಬೆಳೆ ಹಾನಿಯಾಗಿದೆ.

karnataka Rain

ಯಾದಗಿರಿಯಲ್ಲಿ ಮಳೆ ಆರ್ಭಟಕ್ಕೆ ಕಿರಾಣಿ ಅಂಗಡಿಗೆ ನೀರು ನುಗ್ಗಿ ಅಪಾರ ಪ್ರಮಾಣದ ವಸ್ತುಗಳು ಹಾನಿಯಾಗಿವೆ. ನರಸಿಂಹ ಅವರಿಗೆ ಸೇರಿದ ಕಿರಾಣಿ ಅಂಗಡಿ ಹಾಳಾಗಿದೆ. ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕಿಡಿಕಾರಿದ್ದಾರೆ.

karnataka Rain

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ರಾಂಪುರ ಗ್ರಾಮದ ರಾಷ್ಟ್ರೀಯ ಹೆದ್ದಾರಿ‌ 150ಎ ರಲ್ಲಿನ ಅಂಡರ್ ಪಾಸ್ ಜಲಾವೃತಗೊಂಡಿತ್ತು. ವಿವಿಧ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಅಂಡರ್ ಪಾಸ್‌ನಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಹೈರಾಣಾದರು. ನೀರಿನಲ್ಲಿ ವಾಹನ ತಳ್ಳಿಕೊಂಡು ಹೋದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರಿಗೆ ಆವರಿಸಿದ ಮುಂಗಾರು; ಹಲವೆಡೆ ಇಂದು ಗಾಳಿಯೊಂದಿಗೆ ಭಯಂಕರ ಮಳೆ

Karnataka Weather Forecast : ರಾಜಧಾನಿ ಬೆಂಗಳೂರು (Bengaluru rains) ಸೇರಿದಂತೆ ದಕ್ಷಿಣ ಕರ್ನಾಟಕಕ್ಕೆ ಅಧಿಕೃತವಾಗಿ ಮುಂಗಾರು (monsoon rain) ಆವರಿಸಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ರಾಜ್ಯಾದ್ಯಂತ ಸೋಮವಾರದಂದು ಗುಡುಗು ಸಹಿತ ಭಾರಿ ಮಳೆಯಾಗುವ (Rain News) ಸೂಚನೆ ನೀಡಲಾಗಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ (Bengaluru rains) ಶನಿವಾರ- ಭಾನುವಾರ ಅಬ್ಬರಿಸಿದ ಮಳೆಗೆ (Rain News) ಜನರು ತತ್ತರಿಸಿ ಹೋಗಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ. ಇಂದು ಕೂಡ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಗಾಳಿಯೊಂದಿಗೆ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

karnataka Weather Forecast

ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಕರ್ನಾಟಕದ ಬಹುತೇಕ ಭಾಗವನ್ನು ಮುಂಗಾರು ಆವರಿಸಿದೆ. ಇದರ ಪ್ರಭಾವದಿಂದಾಗಿ ಜೂನ್‌ 7ರ ವರೆಗೆ ಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಪ್ರಮುಖವಾಗಿ ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ ಹಾಗೂ ರಾಮನಗರ, ಶಿವಮೊಗ್ಗ, ವಿಜಯನಗರದಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆ ಇದೆ.

ಉಳಿದಂತೆ ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲೂ ಸಾಧಾರಣ ಮಳೆಯಾಗಲಿದೆ. ಕೆಲವೊಮ್ಮೆ ಗುಡುಗು, ಮಿಂಚು ಸಂಭವವಿದೆ. ಉಡುಪಿ ಹಾಗೂ ಉತ್ತರ ಕನ್ನಡದಲ್ಲಿ ವ್ಯಾಪಕ ಮಳೆಯಾಗಲಿದೆ.

ಇದನ್ನೂ ಓದಿ: CET Ranking : ಸಿಇಟಿ ರ‍್ಯಾಂಕಿಂಗ್‌ನಲ್ಲಿ ಎಂಜಿನಿಯರಿಂಗ್‌ನ 10 ಟಾಪರ್ಸ್‌ಗಳು ಬೆಂಗಳೂರಿನ ವಿದ್ಯಾರ್ಥಿಗಳು!

ಈ ಜಿಲ್ಲೆಗಳಿಗೆ ಎಚ್ಚರಿಕೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರಿನಲ್ಲಿ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು ಗಂಟೆಗೆ 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲೂ ಗಾಳಿ ವೇಗವು ಗಂಟೆಗೆ 30-40ಕಿ.ಮೀ ವ್ಯಾಪ್ತಿಯಲ್ಲಿ ಇರಲಿದೆ. ಹೀಗಾಗಿ ಈ ಮೇಲಿನ ಜಿಲ್ಲೆಗಳಿಗೆ ಎಚ್ಚರಿಕೆಯನ್ನು ನೀಡಲಾಗಿದೆ.

ತಾಪಮಾನದ ಮುನ್ಸೂಚನೆ

ಮುಂದಿನ 48 ಗಂಟೆಗಳಲ್ಲಿ ಕರ್ನಾಟಕದ ಒಳನಾಡಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು 2-3 ಡಿಗ್ರಿ ಸೆಲ್ಸಿಯಸ್‌ನಿಂದ ಕ್ರಮೇಣ ಕಡಿಮೆಯಾಗುವ ಸಾಧ್ಯತೆಯಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕೊಪ್ಪಳ

Koppal Lok Sabha Constituency: ಮಾಜಿ ಶಾಸಕರ ಪುತ್ರರ ನಡುವಿನ ಸ್ಪರ್ಧೆಯಲ್ಲಿ ಯಾರಾಗುವರು ಸಂಸದ?

Koppal Lok Sabha Constituency: ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಬಸವರಾಜ್‌ ಕ್ಯಾವಟರ್‌ ಅವರು ಇದೇ ಮೊದಲ ಬಾರಿಗೆ ಚುನಾವಣೆ ರಾಜಕೀಯಕ್ಕೆ ಧುಮುಕಿದ್ದಾರೆ. ರಾಜಶೇಖರ್‌ ಹಿಟ್ನಾಳ್‌ ಅವರು ಎರಡು ಬಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಇವರ ಸಹೋದರ ಕೆ. ರಾಘವೇಂದ್ರ ಹಿಟ್ನಾಳ್‌ ಅವರು ಕೊಪ್ಪಳ ಕ್ಷೇತ್ರದ ಶಾಸಕರಾಗಿದ್ದಾರೆ. ಮಹಿಳೆಯರ ಮತಗಳನ್ನು ಸೆಳೆಯಲು ಗ್ಯಾರಂಟಿ ಯೋಜನೆಗಳಿವೆ. ಹಾಗಾಗಿ, ಕೊಪ್ಪಳದ ಲೋಕಸಭೆ ಚುನಾವಣೆಯು ಕುತೂಹಲ ಕೆರಳಿಸಿದೆ.

VISTARANEWS.COM


on

Koppal Lok Sabha Constituency
Koo

ಕೊಪ್ಪಳ: ಕೊಪ್ಪಳದಲ್ಲಿ ಮಾಜಿ ಶಾಸಕರ ಪುತ್ರರ ನಡುವೆ ಲೋಕಸಭೆ ಚುನಾವಣೆ (Koppal Lok Sabha Constituency) ಸಮರ ನಡೆದಿದ್ದು, ಬದಲಾದ ರಾಜಕೀಯ ವಿದ್ಯಮಾನದಲ್ಲಿ ಯಾರು ಗೆಲುವು ಸಾಧಿಸಲಿದ್ದಾರೆ ಎಂಬ ಕುತೂಹಲ ಮೂಡಿದೆ. ಕೊಪ್ಪಳ ಮಾಜಿ ಶಾಸಕ ಕೆ. ಬಸವರಾಜ್‌ ಹಿಟ್ನಾಳ್‌ ಅವರ ಪುತ್ರ ಕೆ. ರಾಜಶೇಖರ್‌ ಹಿಟ್ನಾಳ್‌ (Rajashekar Hitnal) ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದಾರೆ. ಇನ್ನು ಬಿಜೆಪಿಯಿಂದ ಕುಷ್ಟಗಿ ಮಾಜಿ ಶಾಸಕ ಕೆ. ಶರಣಪ್ಪ ಅವರ ಪುತ್ರ ಡಾ.ಬಸವರಾಜ್‌ ಕ್ಯಾವಟರ್‌ (Dr Basavaraj Kyavator) ಅವರು ಕಣಕ್ಕಿಳಿದಿದ್ದು, ತೀವ್ರ ಜಿದ್ದಾಜಿದ್ದಿ ಏರ್ಪಟ್ಟಿದೆ.

ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಬಸವರಾಜ್‌ ಕ್ಯಾವಟರ್‌ ಅವರು ಇದೇ ಮೊದಲ ಬಾರಿಗೆ ಚುನಾವಣೆ ರಾಜಕೀಯಕ್ಕೆ ಧುಮುಕಿದ್ದಾರೆ. ಖಂಡಿತವಾಗಿಯೂ ನರೇಂದ್ರ ಮೋದಿ ಅವರ ಅಲೆಯು ಕೆಲಸ ಮಾಡಲಿದೆ. ಆದರೆ, ಟಿಕೆಟ್‌ ವಂಚಿತ ಸಂಗಣ್ಣ ಕರಡಿ ಅವರು ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಬಸವರಾಜ್‌ ಕ್ಯಾವಟರ್‌ ಅವರಿಗೆ ನುಂಗಲಾರದ ತುತ್ತಾಗಿದೆ. ಹಾಗಾಗಿ, ಕೊಪ್ಪಳ ಲೋಕಸಭೆ ಚುನಾವಣೆ ಫಲಿತಾಂಶವು ಕುತೂಹಲ ಕೆರಳಿಸಿದೆ.

ರಾಜಶೇಖರ್‌ ಹಿಟ್ನಾಳ್‌ ಅವರು ಎರಡು ಬಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಇವರ ಸಹೋದರ ಕೆ. ರಾಘವೇಂದ್ರ ಹಿಟ್ನಾಳ್‌ ಅವರು ಕೊಪ್ಪಳ ಕ್ಷೇತ್ರದ ಶಾಸಕರಾಗಿದ್ದಾರೆ. ಮಹಿಳೆಯರ ಮತಗಳನ್ನು ಸೆಳೆಯಲು ಗ್ಯಾರಂಟಿ ಯೋಜನೆಗಳಿವೆ. ಡಾ.ಬಸವರಾಜ್‌ ಕ್ಯಾವಟರ್‌ ಅವರ ರಾಜಕೀಯ ಅನುಭವದ ಕೊರತೆಯನ್ನು ಪ್ಲಸ್‌ ಪಾಯಿಂಟ್ ಅನ್ನಾಗಿ ಮಾಡಿಕೊಂಡಿದ್ದಾರೆ. ಆದರೂ, ತೀವ್ರ ಪೈಪೋಟಿ ಇದೆ.

ಮತದಾರರ ಸಂಖ್ಯೆ

ಪುರುಷರು9.12 ಲಕ್ಷ
ಮಹಿಳೆಯರು9.38 ಲಕ್ಷ
ಲಿಂಗತ್ವ ಅಲ್ಪಸಂಖ್ಯಾತರು132
ಒಟ್ಟು18.51 ಲಕ್ಷ

2014, 2019ರ ಫಲಿತಾಂಶ ಏನಾಗಿತ್ತು?

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಗಣ್ಣ ಕರಡಿ ವಿರುದ್ಧ ಕಾಂಗ್ರೆಸ್‌ ಮಾಜಿ ಶಾಸಕ ಬಸವರಾಜ್‌ ಹಿಟ್ನಾಳ್‌ ಸೋಲನುಭವಿಸಿದ್ದರು. ಇನ್ನು 2019ರ ಲೋಕಸಭೆ ಚುನಾವಣೆಯಲ್ಲಿ ಬಸವರಾಜ್‌ ಹಿಟ್ನಾಳ್‌ ಅವರ ಪುತ್ರ ರಾಜಶೇಖರ್‌ ಹಿಟ್ನಾಳ್‌ ಅವರು ಸ್ಪರ್ಧಿಸಿ, ಬಿಜೆಪಿಯ ಸಂಗಣ್ಣ ಕರಡಿ ಅವರ ವಿರುದ್ಧವೇ ಪರಾಭವಗೊಂಡಿದ್ದರು. ಸುಮಾರು 38 ಸಾವಿರ ಮತಗಳಿಂದ ರಾಜಶೇಖರ್‌ ಹಿಟ್ನಾಳ್‌ ಅವರು ಸೋಲನುಭವಿಸಿದ್ದರು. ಈಗ ರಾಜಶೇಖರ್‌ ಹಿಟ್ನಾಳ್‌ ಅವರಿಗೆ ಮೊದಲ ಬಾರಿಗೆ ಸಂಗಣ್ಣ ಕರಡಿಯೇತರ ಕುಟುಂಬದವರು ಎದುರಾಳಿಯಾಗಿದ್ದಾರೆ.

ಇದನ್ನೂ ಓದಿ: Lok Sabha Election 2024: ಬಳ್ಳಾರಿಯ ಮತ ಎಣಿಕೆ ಕೇಂದ್ರಕ್ಕೆ ಡಿಸಿ ಭೇಟಿ: ಅಂತಿಮ ಸಿದ್ಧತೆ ಪರಿಶೀಲನೆ

Continue Reading
Advertisement
Nishant Agarwal
ದೇಶ6 seconds ago

Nishant Agarwal: ಬ್ರಹ್ಮೋಸ್‌ ಕ್ಷಿಪಣಿ ಕುರಿತು ಪಾಕ್‌ಗೆ ಮಾಹಿತಿ; ಮಾಜಿ ಎಂಜಿನಿಯರ್‌ ನಿಶಾಂತ್‌ ಅಗರ್ವಾಲ್‌ಗೆ ಜೀವಾವಧಿ ಶಿಕ್ಷೆ!

Bangalore Rain
ಕರ್ನಾಟಕ3 mins ago

Bangalore Rain: ಮಳೆ ಹಾನಿ ಬಗ್ಗೆ ಬೆಸ್ಕಾಂಗೆ ದೂರುಗಳ ಸುರಿಮಳೆ; ಉರುಳಿ ಬಿದ್ದ 176 ವಿದ್ಯುತ್ ಕಂಬ, 9 ಟ್ರಾನ್ಸ್‌ಫಾರ್ಮರ್‌ಗೆ ಹಾನಿ

Karnataka Rain
ಮಳೆ22 mins ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Rishab Shetty Shivamma Yarehanchinala Official Trailer out
ಸ್ಯಾಂಡಲ್ ವುಡ್25 mins ago

Rishab Shetty: ರಿಷಬ್ ನಿರ್ಮಾಣದ ‘ಶಿವಮ್ಮ’ ಟ್ರೈಲರ್‌ ಔಟ್‌; ಜೂನ್‌ 14ಕ್ಕೆ ತೆರೆಗೆ

Mira Road Tragedy
ಕ್ರೀಡೆ30 mins ago

Mira Road Tragedy: ಸಿಕ್ಸರ್​ ಬಾರಿಸಿ ಮರು ಕ್ಷಣವೇ ಪ್ರಾಣ ಕಳೆದುಕೊಂಡ ಕ್ರಿಕೆಟಿಗ​; ದುರಂತ ವಿಡಿಯೊ ವೈರಲ್​

Shivamogga Lok Sabha Constituency
ಶಿವಮೊಗ್ಗ36 mins ago

Shivamogga Lok Sabha Constituency: ತ್ರಿಕೋನ ಕದನದ ಶಿವಮೊಗ್ಗದಲ್ಲಿ ಯಾರಿಗೆ ವಿಜಯದ ಮಾಲೆ?

Pakistan Army
ವಿದೇಶ37 mins ago

Pakistan Army: ಪಾಕಿಸ್ತಾನ ಸೇನೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಮೊದಲ ಮಹಿಳಾ ಬ್ರಿಗೇಡಿಯರ್ ಆಗಿ ಇತಿಹಾಸ ಬರೆದ ಡಾ. ಹೆಲೆನ್ ಮೇರಿ

Self Harming
ಕ್ರೈಂ49 mins ago

Self Harming: ಐಎಎಸ್‌ ದಂಪತಿ ಪುತ್ರಿ ಬಹುಮಹಡಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ

mlc election nomination
ಪ್ರಮುಖ ಸುದ್ದಿ55 mins ago

MLC Election: ಕಾಂಗ್ರೆಸ್‌ನ 7, ಬಿಜೆಪಿಯ 3, ಜೆಡಿಎಸ್‌ನ ಒಬ್ಬ ಅಭ್ಯರ್ಥಿಯಿಂದ ಮೇಲ್ಮನೆಗೆ ನಾಮಪತ್ರ ಸಲ್ಲಿಕೆ

Snake Rescue Snakes spotted in heavy rain
ಮಳೆ57 mins ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ22 mins ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ57 mins ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

ಟ್ರೆಂಡಿಂಗ್‌