Road Accident | ಸ್ವಿಫ್ಟ್, ಇನ್ನೋವಾ ನಡುವೆ ಭೀಕರ ಅಪಘಾತ; ಐವರ ಸಾವು - Vistara News

ಕ್ರೈಂ

Road Accident | ಸ್ವಿಫ್ಟ್, ಇನ್ನೋವಾ ನಡುವೆ ಭೀಕರ ಅಪಘಾತ; ಐವರ ಸಾವು

ಮಂಡ್ಯ ಜಿಲ್ಲೆಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಇನ್ನೋವಾ ಕಾರು ಡಿವೈಡರ್‌ ದಾಟಿ ಸ್ವಿಫ್ಟ್‌ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ದುರಂತ ಸಂಭವಿಸಿದೆ.

VISTARANEWS.COM


on

Road Accident
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಂಡ್ಯ: ಜಿಲ್ಲೆಯ ನಾಗಮಂಗಲ ತಾಲೂಕಿನ ಎ.ನಾಗತಿಹಳ್ಳಿ ಬಳಿಯ ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಸ್ವಿಫ್ಟ್ ಹಾಗೂ ಇನ್ನೋವಾ ಕಾರ್‌ಗಳ ನಡುವೆ ಭಾನುವಾರ ರಾತ್ರಿ ನಡೆದ ಭೀಕರ ಅಪಘಾತದಲ್ಲಿ (Road Accident) ಐದು ಮಂದಿ ಮೃತಪಟ್ಟಿದ್ದಾರೆ.

ಬೆಂಗಳೂರಿನಿಂದ ಹಾಸನದ ಕಡೆಗೆ ಹೋಗುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಹಾಸನದಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ತಮಿಳುನಾಡು ನೋಂದಣಿಯ ಸ್ವಿಫ್ಟ್ ಕಾರಿಗೆ ಡಿಕ್ಕಿಯಾಗಿದೆ. ಅಪಘಾತದ ತೀವ್ರತೆಗೆ ಒಬ್ಬ ಮಹಿಳೆ ಹಾಗೂ ನಾಲ್ವರು ಪುರುಷರು ಸೇರಿ ಐವರು ಮೃತಪಟ್ಟಿದ್ದಾರೆ. ಬಿಂಡಗನವಿಲೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಪಘಾತದಲ್ಲಿ ಎರಡೂ ಕಾರುಗಳು ಭಾಗಶಃ ನಜ್ಜುಗುಜ್ಜಾಗಿವೆ. ಅಪಘಾತ ನಡೆದ ವೇಳೆ ಕೆಲ ಹೊತ್ತು ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇದನ್ನೂ ಓದಿ | Teens drowned | ಕಾರಂಜಾ ಜಲಾಶಯ ಕಾಲುವೆಗೆ ಈಜಲು ಹೋದ ಇಬ್ಬರು ತರುಣರು ನೀರುಪಾಲು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Sexual Harassment Case: ಜನಜಂಗುಳಿಯ ಮಧ್ಯೆ ಮಹಿಳೆಯ ಖಾಸಗಿ ಭಾಗಕ್ಕೆ ಕೈ ಹಾಕಿದ ಬಸ್‍ ಕಂಡಕ್ಟರ್‌!

Sexual Harassment Case: ಹೈದರಾಬಾದ್‌ನ ಮಹಿಳೆಯೊಬ್ಬರು ಬಸ್‌ನಲ್ಲಿ ತನಗಾದ ಕೆಟ್ಟ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ. ಮಹಿಳೆಯೊಬ್ಬಳು ಮಣಿಕೊಂಡದಿಂದ ಹಿಮಾಯತ್ ನಗರಕ್ಕೆ ಹಿಂದಿರುಗಲು ಟಿಎಸ್ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಳು. ಆ ವೇಳೆ ಬಸ್‌ನಲ್ಲಿ ಪ್ರಯಾಣಿಕರು ತುಂಬಿದ್ದರು. ಆಗ ಬಸ್ಸಿನ ಕಂಡಕ್ಟರ್ ಕಿಕ್ಕಿರಿದ ಬಸ್ಸಿನ ಅವಕಾಶವನ್ನು ತೆಗೆದುಕೊಂಡು ಆಕೆಯ ಎದೆ ಭಾಗ ಹಾಗೂ ಸೊಂಟದ ಕೆಳಗಿನ ಖಾಸಗಿ ಭಾಗವನ್ನು ಸ್ಪರ್ಶಿಸಿ ಕಿರುಕುಳ ನೀಡಿದ್ದಾನೆ.

VISTARANEWS.COM


on

Sexual Harassment Case
Koo


ಹೈದರಾಬಾದ್: ಕೆಟ್ಟ ಕಾಮುಕರೇ ತುಂಬಿರುವಂತಹ ಈ ಪ್ರಪಂಚದಲ್ಲಿ ಮಹಿಳೆಯರು ಪ್ರತಿದಿನ ಒಂದಲ್ಲ ಒಂದು ರೀತಿಯಲ್ಲಿ ಲೈಂಗಿಕ ಕಿರುಕುಳ(Sexual Harassment Case )ವನ್ನು ಅನುಭವಿಸುತ್ತಿದ್ದಾರೆ. ಕೆಲವು ಮಹಿಳೆಯರು ಮರ್ಯಾದೆಗೆ ಅಂಜಿ ಅದನ್ನು ಮುಚ್ಚಿದ್ದರೆ ಕೆಲವರು ಅದನ್ನು ಎದುರಿಸಿ ನಿಲ್ಲುತ್ತಾರೆ. ಅಂತಹದೊಂದು ಘಟನೆ ಹೈದರಾಬಾದ್‍ನ ಟಿಎಸ್ಆರ್‌ಟಿಸಿ ಬಸ್‍ನಲ್ಲಿ ನಡೆದಿದ್ದು, ಇದಕ್ಕೆ ಮಹಿಳೆ ತನ್ನ ಆಕ್ರೋಶ ವ್ಯಕ್ತಪಡಿಸಿದ್ದಾಳೆ.

ಹೈದರಾಬಾದ್‍ನ ಮಹಿಳೆಯೊಬ್ಬಳು ಹಿಮಾಯತ್ ನಗರಕ್ಕೆ ಹಿಂದಿರುಗುವಾಗ ಟಿಎಸ್ಆರ್‌ಟಿಸಿ ಬಸ್‍ನಲ್ಲಿ ತನಗಾದ ಕೆಟ್ಟ ಅನುಭವವನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾಳೆ. ಸರ್ಕಾರಿ ಬಸ್ ಕಂಡಕ್ಟರ್ ತನ್ನನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ಅವರು ತಮ್ಮ ಪೋಸ್ಟ್‌ನಲ್ಲಿ ಬರೆದು ಆರೋಪ ಮಾಡಿದ್ದಾಳೆ. ಇದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹೈದರಾಬಾದ್‌ನ 21 ವರ್ಷದ ಮಹಿಳೆಯೊಬ್ಬಳು ಮಣಿಕೊಂಡದಿಂದ ಹಿಮಾಯತ್ ನಗರಕ್ಕೆ ಹಿಂದಿರುಗಲು 65 ಮೀ / 123 ಟಿಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಳು. ಆ ವೇಳೆ ಬಸ್‍ನಲ್ಲಿ ಪ್ರಯಾಣಿಕರು ತುಂಬಿದ್ದರು. ಆಗ ಬಸ್ಸಿನ ಕಂಡಕ್ಟರ್ ಕಿಕ್ಕಿರಿದ ಬಸ್ಸಿನ ಅವಕಾಶವನ್ನು ತೆಗೆದುಕೊಂಡು ಆತ ಆಕೆಯ ಎದೆ ಭಾಗವನ್ನು ಸ್ಪರ್ಶಿಸಲು ಪ್ರಾರಂಭಿಸಿದ. ನಂತರ ಅವನು ಆಕೆಯ ಸೊಂಟದ ಕೆಳಗಿನ ಖಾಸಗಿ ಭಾಗವನ್ನು ಸ್ಪರ್ಶಿಸಿದನಂತೆ. ಹಾಗಾಗಿ ತಾನು ಜೋರಾಗಿ ಕೂಗಿ ಕೊಂಡಿರುವುದಾಗಿ ಪೋಸ್ಟ್‌ನಲ್ಲಿ ತಿಳಿಸಿದ್ದಾಳೆ. ಅಲ್ಲದೇ ಎಷ್ಟು ಜನ ಹದಿಹರೆಯದ ಹುಡುಗಿಯರು ಮೌನವಾಗಿ ಇದನ್ನು ಸಹಿಸಿಕೊಳ್ಳುತ್ತಾರೆ ಎಂಬುದು ತನಗೆ ತಿಳಿದಿಲ್ಲ. ಆದರೆ ಸರ್ಕಾರ ಇದಕ್ಕೆ ಪ್ರತಿಕ್ರಿಯಿಸಬೇಕೆಂದು ತಾನು ಬಯಸುವುದಾಗಿ ತಿಳಿಸಿದ್ದಾಳೆ. ಅದನ್ನು ಆಕೆ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ, ಬಿಆರ್ ಎಸ್ ನಾಯಕ ಕೆ.ಟಿ.ರಾಮರಾವ್, ಹೈದರಾಬಾದ್ ಪೊಲೀಸರು ಮತ್ತು ಮಹಿಳಾ ಸಂಘಗಳಿಗೆ ಟ್ಯಾಗ್ ಮಾಡಿದ್ದಾಳೆ.

ಇದನ್ನೂ ಓದಿ: ಬಾಸ್‌ ಜತೆ ಚಕ್ಕಂದವಾಡುತ್ತಿದ್ದ ಕಿಲಾಡಿ ಪತ್ನಿ; ಡ್ರೋನ್‌ ಬಳಸಿ ಪತ್ತೆ ಹಚ್ಚಿದ ಚಾಲಾಕಿ ಗಂಡ!

ಇದಕ್ಕೆ ಪ್ರತಿಕ್ರಿಯಿಸಿದ ಟಿಎಸ್ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಮತ್ತು ಉಪಾಧ್ಯಕ್ಷ ವಿ.ಸಿ.ಸಜ್ಜನರ್, ಬಸ್ಸಿನ ಕಂಡಕ್ಟರ್ ವಿರುದ್ಧ ರಾಯದುರ್ಗಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ತಿಳಿಸಿದ್ದಾರೆ. ಇಂತಹ ಘಟನೆಗಳನ್ನು ಮತ್ತೆ ನಡೆಯದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಹಾಗೇ ಸಂತ್ರಸ್ತೆ ಸೈಬರಾಬಾದ್ ಕಮಿಷನರೇಟ್‍ನ ರಾಯದುರ್ಗಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಟಿಎಸ್ಆರ್‌ಟಿಸಿ ಎಂಡಿ ಟ್ವೀಟ್ ಮಾಡಿದ್ದಾರೆ. ಅಲ್ಲದೇ ಮಹಿಳಾ ಸಂಘಗಳು ಈ ಘಟನೆಯನ್ನು ತಮ್ಮ ಗಮನಕ್ಕೆ ತಂದಿದ್ದಕ್ಕಾಗಿ ಧನ್ಯವಾದ ತಿಳಿಸಿ, ಸಂತ್ರಸ್ತೆಯ ಸಹಾಯಕ್ಕೆ ನಿಲ್ಲುವುದಾಗಿ, ಆರೋಪಿಯ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂಬುದಾಗಿ ತಿಳಿದುಬಂದಿದೆ.

Continue Reading

ಕರ್ನಾಟಕ

HD Revanna: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ; ಪಕ್ಕೆಲುಬಿಗೆ ಪೆಟ್ಟು

HD Revanna: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ತೆರಳಿ ಬರುವ ವೇಳೆ ಎಚ್‌.ಡಿ.ರೇವಣ್ಣ ಅವರು ಕಾಲು ಜಾರಿ ಬಿದ್ದಿದ್ದಾರೆ. ಇದರಿಂದ ಪಕ್ಕೆಲುಬುಗೆ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

HD Revanna
Koo

ಹಾಸನ: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಎಚ್.ಡಿ.ರೇವಣ್ಣ (HD Revanna) ಅವರ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದ ಎಚ್‌.ಡಿ.ರೇವಣ್ಣ, ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ತೆರಳಿದ್ದರು. ಪೂಜೆ ಸಲ್ಲಿಸಿ ಬರುವ ವೇಳೆ ಕಾಲು ಜಾರಿ ಬಿದ್ದಿದ್ದಾರೆ.

ಹರದನಹಳ್ಳಿಯಲ್ಲಿ ಪೂಜೆಯ ಬಳಿಕ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಎಚ್.ಡಿ.ರೇವಣ್ಣ ಹೊರಟಿದ್ದರು. ಈ ವೇಳೆ ಕಾಲು ಜಾರಿ ಬಿದ್ದಿದ್ದರಿಂದ ಪಕ್ಕೆಲುಬು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪವಾಸ ಹಾಗೂ ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿರುವ ಎಚ್.ಡಿ.ರೇವಣ್ಣ ಅವರಿಗೆ ಹೊಳೆನರಸೀಪುರದ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ | Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation Scam) ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ (Ex minister B Nagendra) ಸದ್ಯ ಇಡಿ ಅಧಿಕಾರಿಗಳ (ED Officers) ವಶದಲ್ಲಿದ್ದಾರೆ. ಇದೀಗ ಅವರ ಪತ್ನಿ ಮಂಜುಳಾ ಅವರನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಿಂದ ವಶಕ್ಕೆ ಪಡೆದ ಅಧಿಕಾರಿಗಳು ಅವರನ್ನು ಇಡಿ ಕಚೇರಿ ಕರೆ ತಂದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಂಜುಳಾ ಅವರಿಂದ ಮಾಹಿತಿ ಕಲೆ ಹಾಕಲಿದ್ದಾರೆ. ಮಂಜುಳಾ ಅವರ ಹೆಸರಲ್ಲಿ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇದರ ಮೂಲವನ್ನು ಪ್ರಶ್ನಿಸಲಿದ್ದಾರೆ.

ಜುಲೈ 13ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ಯಲಹಂಕದಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು 5 ದಿನಗಳ ಕಾಲ ಕಸ್ಟಡಿಗೆ ನೀಡಿದ್ದರು. 18ನೇ ತಾರೀಖಿನಂದು ಬೆಳಿಗ್ಗೆ 11ಕ್ಕೆ ಮತ್ತೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದರು.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಎಂಬಾತ ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ನಿಗಮದ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆದಿದ್ದರು. ಬಳಿಕ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು. 

ಇದನ್ನೂ ಓದಿ: Wakf Board Scam: ವಾಲ್ಮೀಕಿ ನಿಗಮದ ಬಳಿಕ ವಕ್ಫ್ ಬೋರ್ಡ್‌ನಲ್ಲಿ ಹಗರಣ ಬೆಳಕಿಗೆ; ಮಾಜಿ ಸಿಇಒ ವಿರುದ್ಧ ಎಫ್‌ಐಆರ್!

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕೇಸ್‌ಗೆ ಸಂಬಂಧಿಸಿ ಮತ್ತೊಬ್ಬನನ್ನು ಎಸ್ಐಟಿ ಬಂಧಿಸಿದೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾಗಿದೆ.

Continue Reading

ಕರ್ನಾಟಕ

Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ. ಅತ್ಯಂತ ದುರದೃಷ್ಟಕರ ಘಟನೆ. ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

VISTARANEWS.COM


on

Ankola landslide Case
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ (Ankola landslide Case) ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಅವರು, ಅಂಕೋಲಾ ಗುಡ್ಡ ಕುಸಿತ ಪ್ರಕರಣದಲ್ಲಿ ಏಳು ಮಂದಿ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ಈಗಾಗಲೇ 4 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇದು ಅತ್ಯಂತ ದುರದೃಷ್ಟಕರ ಘಟನೆ. ಮೃತ ದುರ್ದೈವಿಗಳ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಘಟನೆಯಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ. ನಿರಂತರ ಮಳೆಯ ನಡುವೆಯೂ ರಕ್ಷಣಾ ಕಾರ್ಯಾಚರಣೆಯನ್ನೂ ಮುಂದುವರೆಸಲಾಗುತ್ತಿದ್ದು, ಉಳಿದ ಮೂವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Viral Video: ಚಾಕೋಲೇಟ್ ತಿನ್ನುವ ಆಸೆಯಾಗಿ ಅಂಗಡಿಗೆ ಹೋಗಿದ್ದ ಬಾಲಕ ಶವವಾಗಿ ಮನೆಗೆ ಬಂದ; ಆಗಿದ್ದೇನು? ವಿಡಿಯೊ ನೋಡಿ

ಏನಿದು ಘಟನೆ?

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಗೆ (Karnataka Rain Effect) ರಾಷ್ಟ್ರೀಯ ಹೆದ್ದಾರಿ 66ರ ಶಿರೂರು ಬಳಿ ಭಾರೀ ಗುಡ್ಡಕುಸಿತ (Karnataka Rain) ಉಂಟಾಗಿತ್ತು. ಗುಡ್ಡದ ಮಣ್ಣಿನಡಿ 7 ಮಂದಿ ಸಿಲುಕಿ ಮೃತಪಟ್ಟಿದ್ದಾರೆ ಎನ್ನಲಾಗಿದ್ದು, ಐವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಗುಡ್ಡ ಕುಸಿದ ರಭಸಕ್ಕೆ ನದಿಗೆ 2 ಗ್ಯಾಸ್ ಟ್ಯಾಂಕರ್‌ಗಳು ಕೊಚ್ಚಿ ಹೋಗಿದ್ದವು. ಗುಡ್ಡದ ಕೆಳಗಿದ್ದ ಲಾರಿ, ಮತ್ತೊಂದು ಟ್ಯಾಂಕರ್‌ ಹಾಗೂ ಚಾಲಕರು ಪಾರಾಗಿದ್ದರು. ತುರ್ತು ಕಾರ್ಯಾಚರಣೆಗೆ ಪೊಲೀಸರು ಧಾವಿಸಿದ್ದು. ಸ್ಥಳದ ಪರಿಸ್ಥಿತಿ ಭೀಕರವಾಗಿದ್ದು, ಹೆದ್ದಾರಿ ಸಂಪೂರ್ಣ ಕತ್ತರಿಸಿಹೋಗಿ ಈ ರಸ್ತೆಯಲ್ಲಿ ವಾಹನ ಸಂಚಾರ ನಿಂತೇ ಹೋಗಿದೆ, ಇದನ್ನು ಸರಿಪಡಿಸಲು ವಾರವಾದರೂ ಬೇಕು ಎಂದು ಕಾರ್ಯಾಚರಣೆ ನಿರತರ ಅಭಿಪ್ರಾಯ. ಎಡೆಬಿಡದೆ ಸುರಿಯುತ್ತಿರುವ ಮಳೆ, ತೆರವು ಕಾರ್ಯಾಚರಣೆಯನ್ನು ಇನ್ನಷ್ಟು ಕಷ್ಟಗೊಳಿಸಿದೆ.

ಗುಡ್ಡದ ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಾರ್ಯಾಚರಣೆಗೆ ಅಡಚಣೆಯಾಗಿದೆ. ಇನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ 66 (ಗೋವಾ-ಮಂಗಳೂರು) ಹೆದ್ದಾರಿ ಸಂಪರ್ಕ ಸ್ಥಗಿತ ಹಿನ್ನೆಲೆ‌ಯಲ್ಲಿ ಲಾರಿಗಳು ಐದಾರು ಕಿ.ಮೀ ದೂರದಷ್ಟು ನಿಂತಲ್ಲೇ ನಿಂತಿವೆ. ಇದರಿಂದ ದೂರದ ರಾಜ್ಯಗಳಿಂದ ಬಂದ ಲಾರಿ ಚಾಲಕರು ಊಟ, ನೀರು ಸಿಗದೇ ಪರದಾಡುತ್ತಿದ್ದಾರೆ.

ಮನೆ ಕುಸಿದು ಮೃತಪಟ್ಟ ವೃದ್ಧನ ಕುಟುಂಬಸ್ಥರಿಗೆ ಪರಿಹಾರ

ಕಾರವಾರದ ಕಿನ್ನರ ಗ್ರಾಮದಲ್ಲಿ ಮನೆ ಕುಸಿದು ವೃದ್ಧ ಸಾವು ಪ್ರಕರಣದ ಹಿನ್ನೆಲೆಯಲ್ಲಿ ಮೃತರ ಕುಟುಂಬಸ್ಥರಿಗೆ ಸಚಿವ ಮಂಕಾಳು ವೈದ್ಯ ಅವರು ಪರಿಹಾರದ ಆದೇಶ ಪತ್ರ ವಿತರಿಸಿದರು.

ನಿನ್ನೆ ಸುರಿದ ಧಾರಾಕಾರ ಮಳೆಗೆ ಕಿನ್ನರ ಗ್ರಾಮದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾಗಿತ್ತು. ಮನೆಯಲ್ಲಿದ್ದ ವೃದ್ಧ ತಿಕರ್ಸ್ ಗುರವ(60) ಗೋಡೆಯಡಿ ಸಿಲುಕಿ ಮೃತಪಟ್ಟಿದ್ದರು. ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹ ಹೊರತೆಗೆದಿದ್ದರು. ಇಂದು ಕಾರವಾರಕ್ಕೆ ಆಗಮಿಸಿದ ವೇಳೆ ಪರಿಹಾರದ ಆದೇಶಪತ್ರವನ್ನು ಸಚಿವರು ಹಸ್ತಾಂತರಿಸಿದರು.

ಇದನ್ನೂ ಓದಿ | Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

ಮನೆ ಹಾನಿಗೆ 1.5 ಲಕ್ಷ, ಜೀವಹಾನಿಗೆ 5 ಲಕ್ಷ ಸೇರಿ ಒಟ್ಟು 6.5 ಲಕ್ಷ ಪರಿಹಾರ ಆದೇಶ ಪತ್ರ ನೀಡಲಾಗಿದೆ. ಈ ವೇಳೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ.ಕೆ, ಶಾಸಕ ಸತೀಶ ಸೈಲ್ ಉಪಸ್ಥಿತರಿದ್ದರು.

Continue Reading

ಕರ್ನಾಟಕ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

Valmiki Corporation Scam: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ ಅವರ ಪತ್ನಿ ಮಂಜುಳಾ ಅವರನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇದರ ಮೂಲವನ್ನು ಪ್ರಶ್ನಿಸಲಿದ್ದಾರೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation Scam) ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ (Ex minister B Nagendra) ಸದ್ಯ ಇಡಿ ಅಧಿಕಾರಿಗಳ (ED Officers) ವಶದಲ್ಲಿದ್ದಾರೆ. ಇದೀಗ ಅವರ ಪತ್ನಿ ಮಂಜುಳಾ ಅವರನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಿಂದ ವಶಕ್ಕೆ ಪಡೆದ ಅಧಿಕಾರಿಗಳು ಅವರನ್ನು ಇಡಿ ಕಚೇರಿ ಕರೆ ತಂದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಂಜುಳಾ ಅವರಿಂದ ಮಾಹಿತಿ ಕಲೆ ಹಾಕಲಿದ್ದಾರೆ. ಮಂಜುಳಾ ಅವರ ಹೆಸರಲ್ಲಿ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇದರ ಮೂಲವನ್ನು ಪ್ರಶ್ನಿಸಲಿದ್ದಾರೆ.

ಜುಲೈ 13ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ಯಲಹಂಕದಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು 5 ದಿನಗಳ ಕಾಲ ಕಸ್ಟಡಿಗೆ ನೀಡಿದ್ದರು. 18ನೇ ತಾರೀಖಿನಂದು ಬೆಳಿಗ್ಗೆ 11ಕ್ಕೆ ಮತ್ತೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದರು.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಎಂಬಾತ ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ನಿಗಮದ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆದಿದ್ದರು. ಬಳಿಕ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು. 

ಇದನ್ನೂ ಓದಿ: Wakf Board Scam: ವಾಲ್ಮೀಕಿ ನಿಗಮದ ಬಳಿಕ ವಕ್ಫ್ ಬೋರ್ಡ್‌ನಲ್ಲಿ ಹಗರಣ ಬೆಳಕಿಗೆ; ಮಾಜಿ ಸಿಇಒ ವಿರುದ್ಧ ಎಫ್‌ಐಆರ್!

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕೇಸ್‌ಗೆ ಸಂಬಂಧಿಸಿ ಮತ್ತೊಬ್ಬನನ್ನು ಎಸ್ಐಟಿ ಬಂಧಿಸಿದೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾಗಿದೆ.

Continue Reading
Advertisement
Viral Video
ವೈರಲ್ ನ್ಯೂಸ್13 mins ago

Viral Video: ಸಫಾರಿಯಲ್ಲಿ ಪ್ರವಾಸಿಗರ ಎದುರೇ ಸಿಂಹಗಳ ಕಾಮಕೇಳಿ!

Olympic Games History
ಕ್ರೀಡೆ15 mins ago

Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

Amitabh Bachchan holds umbrella for Jaya Bachchan
ಬಾಲಿವುಡ್26 mins ago

Amitabh Bachchan: ಅಮಿತಾಭ್ ರೊಮ್ಯಾಂಟಿಕ್ ಮೂಡ್‌ನಲ್ಲಿದ್ದರೂ ಮುಖ ಊದಿಸಿಕೊಂಡೇ ಇದ್ದ ಜಯಾ ಬಚ್ಚನ್!

Viral Video
ವೈರಲ್ ನ್ಯೂಸ್1 hour ago

Viral Video: ನೋಡ ನೋಡ್ತಿದ್ದಂತೆ ಮೂರನೇ ಮಹಡಿಯಿಂದ ಬಿದ್ದ ಮಹಿಳೆ; ಶಾಕಿಂಗ್‌ ವಿಡಿಯೋ ವೈರಲ್‌

Tauba Tauba
Latest1 hour ago

Tauba Tauba : ಲಂಡನ್‌ ಬೀದಿಯಲ್ಲಿ ‘ತೌಬಾ ತೌಬಾ’ ಹಾಡಿಗೆ ಸಖತ್‌ ಆಗಿ ಸ್ಟೆಪ್ಸ್‌ ಹಾಕಿದ ಬೆಡಗಿಯರು; ವಿಡಿಯೊ ವೈರಲ್

CM Siddaramaiah karnataka jobs reservation
ಪ್ರಮುಖ ಸುದ್ದಿ1 hour ago

Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

Kannada New Movie Baila Baila Video Song Hiranya out
ಸ್ಯಾಂಡಲ್ ವುಡ್1 hour ago

Kannada New Movie: ರಾಜವರ್ಧನ್ ‘ಹಿರಣ್ಯ’ ಸಿನಿಮಾದಲ್ಲಿ ಮೈ ಚಳಿ ಬಿಟ್ಟು ಡ್ಯಾನ್ಸ್‌ ಮಾಡಿದ ದಿವ್ಯಾ ಸುರೇಶ್!

Usha Chilukuri Vance
ವಿದೇಶ1 hour ago

Usha Chilukuri Vance: ಟ್ರಂಪ್ ಅವರ ಉಪಾಧ್ಯಕ್ಷ ಅಭ್ಯರ್ಥಿಯ ಪತ್ನಿ ಭಾರತೀಯ ಸಂಸ್ಕೃತಿಯ ಪ್ರತಿಪಾದಕಿ!

Viral News
ಪ್ರಮುಖ ಸುದ್ದಿ1 hour ago

Viral News : ಕುವೈಟ್​ನಲ್ಲಿ ಈ ಚಪ್ಪಲಿಗೆ 1 ಲಕ್ಷ ರೂಪಾಯಿಯಂತೆ; ನಮ್ಮಲ್ಲಿ ಇದು ಬಾತ್​ರೂಮ್​ಗೆ ಹೋಗುವ ಚಪ್ಪಲಿ ಎಂದ ನೆಟ್ಟಿಗರು!

Food Poisoning
ದೇಶ2 hours ago

Food Poisoning: ಮೊಹರಂ ಮೆರವಣಿಗೆ ವೇಳೆ ಷರಬತ್ತು ಸೇವಿಸಿ 400 ಮಂದಿ ಅಸ್ವಸ್ಥ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌