ವಿಸ್ತಾರ Explainer | ಏನಿದು ಝಿಕಾ ವೈರಸ್? ಬರದಂತೆ ಹೇಗೆ ತಡೆಯಬಹುದು? - Vistara News

EXPLAINER

ವಿಸ್ತಾರ Explainer | ಏನಿದು ಝಿಕಾ ವೈರಸ್? ಬರದಂತೆ ಹೇಗೆ ತಡೆಯಬಹುದು?

ನಮ್ಮ ರಾಜ್ಯದಲ್ಲಿ ಝಿಕಾ ವೈರಸ್ ಪತ್ತೆಯಾಗಿದ್ದು, ಜನರಲ್ಲಿ ಭೀತಿ ಆವರಿಸಿದೆ. ಆದರೆ, ಸೂಕ್ತ ಮುನ್ನೆಚ್ಚರಿಕೆಗಳನ್ನು ಕೈಗೊಂಡರೆ ಈ ವೈರಸ್‌ ಹಾವಳಿಯಿಂದ ಪಾರಾಗಬಹುದು(ವಿಸ್ತಾರ Explainer).

VISTARANEWS.COM


on

Zika Virus
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರ್ನಾಟಕದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ಐದು ವರ್ಷದ ಬಾಲಕಿಯಲ್ಲಿ ಝಿಕಾ ವೈರಸ್ (Zika Virus) ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಸಾಮಾನ್ಯರಲ್ಲಿ ಒಂದಿಷ್ಟು ಆತಂಕವಂತೂ ಹೆಚ್ಚಿದೆ. ಈಗಿನ್ನೂ ಕೋವಿಡ್‌ನ ಕರಿನೆರಳು ಪೂರ್ಣ ಮಾಸಿಲ್ಲ. ದಡಾರ ಸಾಕಷ್ಟು ಕಡೆಗಳಲ್ಲಿ ಅವಾಂತರ ಸೃಷ್ಟಿಸುತ್ತಿದೆ. ಹಾಗಿರುವಾಗ ಇದೇನು ಹೊಸದೊಂದು ಗಂಟು ಬಿತ್ತಲ್ಲ ಎಂದು ಆತಂಕಗೊಳ್ಳುವುದು ಸಹಜವೇ. ಇದೇನು ಹೊಸ ರೋಗವಲ್ಲ, 1950ರ ದಶಕದಲ್ಲೇ ಇದು ಮಾನವರಲ್ಲಿ ಪತ್ತೆಯಾಗಿತ್ತು. ಇದೀಗ ಅಮೆರಿಕ, ಆಫ್ರಿಕ, ಏಷ್ಯಾ ಮತ್ತು ಫೆಸಿಫಿಕ್‌ ದ್ವೀಪಗಳಲ್ಲಿ ಈ ವೈರಸ್‌ ಪತ್ತೆಯಾಗಿದೆ. ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ ಜೀಕಾ ವೈರಸ್‌ ಸೋಂಕಿಗೆ ತುತ್ತಾಗುವುದನ್ನು ಖಂಡಿತ ತಡೆಯಬಹುದು. ಏನಿದು ವೈರಸ್‌ ಮತ್ತು ಇದು ಬಾರದಂತೆ ನಾವೇನು ಮಾಡಬೇಕು ಎಂಬ ಬಗ್ಗೆ ಇಲ್ಲಿದೆ ಮಾಹಿತಿ(ವಿಸ್ತಾರ Explainer).

ಸೊಳ್ಳೆಯೇ ದೊಡ್ಡ ಶತ್ರು
ಪ್ರಧಾನವಾಗಿ, ಏಡಿಸ್‌ ಸೊಳ್ಳೆಯಿಂದ ಹರಡುವ ರೋಗವಿದು- ಥೇಟ್‌ ಡೆಂಗೆ, ಚಿಕುನ್‌ ಗುನ್ಯಾ ಅಥವಾ ಹಳದಿ ಜ್ವರದ ಮಾದರಿಯಲ್ಲಿ. ಈ ಸೊಳ್ಳೆಗಳು ಹೆಚ್ಚಾಗಿ ದಾಳಿ ಮಾಡುವುದು ಹಗಲು ಹೊತ್ತಿನಲ್ಲಿ. ಹಾಗೆಂದು ಅವು ರಾತ್ರಿಯ ಹೊತ್ತು ಕಚ್ಚದೇ ಕರುಣೆ ತೋರುತ್ತವೆ ಎಂದಲ್ಲ! ಇವು ಮನೆಯ ಒಳಗೆ-ಹೊರಗೆ ಎಂಬ ಭೇದವಿಲ್ಲದೆ, ಎಲ್ಲೆಂದರಲ್ಲಿ ಇರುತ್ತವೆ. ಹಾಗಾಗಿ ಯಾವುದೇ ಕಾರಣಕ್ಕೆ ಸೊಳ್ಳೆಯ ಕಡಿತಕ್ಕೆ ಒಳಗಾಗುವಂತಿಲ್ಲ. ಹಾಗೆಂದು ಸೋಂಕು ಹರಡುವುದಕ್ಕೆ ಇದೊಂದೇ ಮಾರ್ಗವೂ ಅಲ್ಲ. ತಾಯಿಯಿಂದ ಹೊಟ್ಟೆಯಲ್ಲಿರುವ ಮಗುವಿಗೆ, ಎದೆಹಾಲಿನಿಂದ ಮತ್ತು ಅಸುರಕ್ಷಿತ ಲೈಂಗಿಕ ಕ್ರಿಯೆಯಿಂದ ಈ ರೋಗ ಹರಡುತ್ತದೆ. ರಕ್ತಪೂರಣದಿಂದ ಹರಡುವ ಬಗ್ಗೆ ಖಚಿತ ಮಾಹಿತಿ ಲಭ್ಯವಿಲ್ಲ. ಆದರೆ ಖಂಡಿತವಾಗಿಯೂ ಕೋವಿಡ್‌ನಂತೆ ಕೆಮ್ಮು, ಸೀನಿನಿಂದೆಲ್ಲ ಹರಡುವ ರೋಗವಲ್ಲ ಇದು.

ಮಾರಣಾಂತಿಕವಲ್ಲ
ಸೋಂಕಿತ ಸೊಳ್ಳೆಯಿಂದ ಕಚ್ಚಿಸಿಕೊಂಡ ಏಳು ದಿನಗಳ ಒಳಗೆ ರೋಗ ಲಕ್ಷಣಗಳು ಆರಂಭವಾಗುತ್ತವೆ. ಆದರೆ ಸೋಂಕಿತರಲ್ಲಿ ಶೇ. ೨೫ರಷ್ಟು ಜನರಿಗೆ ಮಾತ್ರವೇ ರೋಗಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಸಮಸ್ಯೆಯೆಂದರೆ, ಮೇಲ್ನೋಟಕ್ಕೆ ಲಕ್ಷಣರಹಿತರಾಗಿರುವ ಇಂಥವರನ್ನು ಕಚ್ಚಿದ ಸೊಳ್ಳೆಗಳು ಆರೋಗ್ಯವಂತರನ್ನು ಕಚ್ಚಿದರೆ, ಅವರಿಗೂ ಸೋಂಕು ಅಂಟಿಕೊಳ್ಳುತ್ತದೆ. ಜ್ವರ, ಮೈಕೈ ನೋವು, ತಲೆನೋವು, ಗಂಟು ನೋವು, ಚರ್ಮದ ಮೇಲೆ ಗುಳ್ಳೆಗಳು, ಕಣ್ಣು ಕೆಂಪಾಗುವುದು- ಇವೇ ಮುಂತಾದವು ಈ ಸೋಂಕಿನ ಲಕ್ಷಣಗಳು. ಮೊದಲ ವಾರದ ನಂತರ ಸಾಮಾನ್ಯವಾಗಿ ಈ ಸೋಂಕಿನ ತೀವ್ರತೆ ಕಂಡುಬರುವುದಿಲ್ಲ. ಇಷ್ಟಕ್ಕೂ ಝಿಕಾ ಸೋಂಕು ತೀವ್ರಗೊಂಡು ಆಸ್ಪತ್ರೆಗೆ ದಾಖಲಾಗುವ ಸಂಭವ ಕಡಿಮೆ. ಕಾರಣ, ಈ ರೋಗ ಮಾರಣಾಂತಿಕವೇನಲ್ಲ. ಆದರೆ ಗರ್ಭಿಣಿ ಮಹಿಳೆಯರ ಪಾಲಿಗೆ ಖಂಡಿತಾ ಅಪಾಯಕಾರಿ.

ಗರ್ಭಿಣಿಯರಿಗೆ ಅಪಾಯ
ತಾಯಿಯ ಜೀವಕ್ಕೆ ಈ ರೋಗದಿಂದ ಅಪಾಯವಿಲ್ಲದಿದ್ದರೂ, ಗರ್ಭಸ್ಥ ಶಿಶುವಿನಲ್ಲಿ ಗಂಭೀರವಾಗ ಜನನ ದೋಷಗಳನ್ನು ಈ ವೈರಸ್‌ ಉಂಟುಮಾಡುತ್ತದೆ. ಮೈಕ್ರೊಸೆಫಾಲಿ ಎಂಬ ದೋಷವನ್ನು ಹೊತ್ತ ಮಕ್ಕಳು ಜನಿಸುತ್ತದೆ. ಹುಟ್ಟಿದ ಮಕ್ಕಳ ತಲೆಯ ಗಾತ್ರ ಸಣ್ಣದಿರುತ್ತದೆ ಮತ್ತು ಅವುಗಳ ಮೆದುಳಿನ ಬೆಳವಣಿಗೆ ಅಪೂರ್ಣವಾಗಿರುತ್ತದೆ. ಮಾತ್ರವಲ್ಲ, ಶ್ರವಣ ದೋಷ, ದೃಷ್ಟಿದೋಷದಂಥ ನಾನಾ ರೀತಿಯ ಸಮಸ್ಯೆಗಳು ಮಕ್ಕಳಲ್ಲಿ ಉಂಟಾಗುತ್ತವೆ. ಕೆಲವೊಮ್ಮೆ ಗರ್ಭಪಾತಕ್ಕೂ ಈ ವೈರಸ್‌ ಕಾರಣವಾಗುತ್ತದೆ. ಬೆವರು, ಕಣ್ಣೀರಿನಂಥ ದೇಹದ ಇನ್ಯಾವುದೇ ದ್ರವಗಳಿಗಿಂತಲೂ, ಪುರುಷರ ವೀರ್ಯದಲ್ಲಿ ದೀರ್ಘಕಾಲದವರೆಗೆ ಈ ವೈರಸ್‌ ಕ್ರಿಯಾಶೀಲವಾಗಿ ಇರುತ್ತದೆ. ಹಾಗಾಗಿ ಝಿಕಾ ವೈರಸ್‌ ಹಬ್ಬಿರುವ ಪ್ರದೇಶಗಳಿಗೆ ಪ್ರಯಾಣ ಮಾಡಿದವರು ಕನಿಷ್ಟ ಮೂರು ತಿಂಗಳವರೆಗೆ ಗರ್ಭ ಧರಿಸುವುದನ್ನು ಮುಂದೂಡಿ ಮತ್ತು ಗರ್ಭಿಣಿಯರು ಇಂಥಾ ಸ್ಥಳಗಳಿಗೆ ಹೋಗಲೇಬೇಡಿ ಎನ್ನುತ್ತದೆ ವೈದ್ಯವಿಜ್ಞಾನ.

ವೈರಸ್‌ ಪತ್ತೆ ಹೇಗೆ?
ರಕ್ತಪರೀಕ್ಷೆಯಿಂದ ದೇಹದಲ್ಲಿ ವೈರಸ್‌ ಇದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಬಹುದು. ಒಂದೊಮ್ಮೆ ಪರೀಕ್ಷೆಯಲ್ಲಿ ಝಿಕಾ ವೈರಸ್‌ ಸೋಂಕು ಖಾತ್ರಿಯಾದರೆ, ವೈದ್ಯರನ್ನು ಸಂಪರ್ಕಿಸಿ ಮನೆಯಲ್ಲೇ ಚಿಕಿತ್ಸೆ ಪಡೆಯಬಹುದು. ಕೋವಿಡ್‌ ರೋಗಿಗಳಂತೆ ಅವರನ್ನು ೧೪ ದಿನಗಳ ವ್ಯಷ್ಟಿಯಲ್ಲಿ ಇಡಬೇಕಾದ ಅಗತ್ಯವಿಲ್ಲ. ಸಾಕಷ್ಟು ದ್ರವಾಹಾರ, ವಿಶ್ರಾಂತಿ ಕಡ್ಡಾಯವಾಗಿ ರೋಗಿಗಳಿಗೆ ಬೇಕು. ಮನೆಯ ಎಲ್ಲರೂ ಸೊಳ್ಳೆಪರದೆಯನ್ನು ಬಳಸುವುದು ಅತ್ಯಗತ್ಯ.

ಲಸಿಕೆ ಇದೆಯೇ?
ಇಲ್ಲ. ರೋಗಕ್ಕೆಂದು ನಿರ್ದಿಷ್ಟವಾದ ಯಾವ ಚಿಕಿತ್ಸೆಯೂ ಇಲ್ಲ. ರೋಗಿಗಳಲ್ಲಿರುವ ಸೋಂಕಿನ ಲಕ್ಷಣಗಳ ಪ್ರಕಾರ ವೈದ್ಯರು ಚಿಕಿತ್ಸೆ ನೀಡುತ್ತಾರೆ. ಅಷ್ಟಕ್ಕೂ ಸೋಂಕಿತರೆಲ್ಲರಿಗೆ ಲಕ್ಷಣಗಳು ಕಾಣಿಸಿಕೊಳ್ಳುವುದೂ ಇಲ್ಲ. ಆದರೆ ಗರ್ಭಿಣಿಯರು ಮಾತ್ರ ಈ ಸೋಂಕಿಗೆ ಸಿಲುಕುವುದು ಶಿಶುವಿನ ಪಾಲಿಗೆ ಅಪಾಯಕಾರಿ ಆಗಬಹುದು.

ಏನು ಮಾಡಬಹುದು?

  • ಸೊಳ್ಳೆಗಳ ಮೂಲವನ್ನು ಮೊದಲು ನಾಶಪಡಿಸಿ. ನಿಂತ ನೀರಿನಲ್ಲಿ ಏಡಿಸ್‌ ಸೊಳ್ಳೆಗಳು ಸಂತೋಷದಿಂದ ಸಂಸಾರ ಮಾಡುತ್ತವೆ. ಅಕಾಲಿಕ ಮಳೆಯಿಂದ ಎಲ್ಲೆಂದರೆ ನೀರು ನಿಲ್ಲುವುದು ಸಾಮಾನ್ಯ ದೃಶ್ಯವಾಗಿದೆ. ಅಂಥವು ಮನೆಯ ಸುತ್ತಲೆಲ್ಲೂ ಇಲ್ಲದಂತೆ ನೋಡಿಕೊಳ್ಳಿ.
  • ತುಂಬು ತೋಳಿನ ಮತ್ತು ಕಾಲಿನ ವಸ್ತ್ರಗಳನ್ನೇ ಧರಿಸಿ. ಸೊಳ್ಳೆಗಳಿಂದ ದೂರವಿರಲು ನಿರೋಧಕ ಕ್ರೀಮ್‌, ಸ್ಪ್ರೇಗಳು ನಿಮಗೆ ಸಹನೀಯವಾದರೆ ಅವುಗಳನ್ನು ಬಳಸಿ. ಶಿಶುಗಳಿದ್ದರೆ, ಅವುಗಳ ತೊಟ್ಟಿಲು, ಹಾಸಿಗೆಗಳಿಗೆ ಅವಶ್ಯವಾಗಿ ಸೊಳ್ಳೆಪರದೆ ಕಟ್ಟಿ. ಸೊಳ್ಳೆಗಳ ಉಪಟಳ ತೀರಾ ಹೆಚ್ಚಿರುವ ಪ್ರದೇಶ ನಿಮ್ಮದಾಗಿದ್ದರೆ ಫಾಗಿಂಗ್‌ ಮಾಡುವುದು ಸಹಕಾರಿ.
  • ಯಾವುದೇ ಸಾಕು ಪ್ರಾಣಿಗಳಿಗೆ, ಉದಾ- ಮನೆಯ ನಾಯಿ, ಬೆಕ್ಕುಗಳಿಗೆ ಈ ವೈರಸ್‌ ಹರಡಿಲ್ಲ ಅಥವಾ ಈ ಪ್ರಾಣಿಗಳಿಂದ ಮಾನವರಿಗೆ ಹರಡಿದ ಉದಾಹರಣೆಗಳಿಲ್ಲ.
  • ಝಿಕಾ ವೈರಸ್‌ ಇರುವಂಥ ಸ್ಥಳಗಳಿಗೆ ಅಥವಾ ಸೊಳ್ಳೆಯ ಉಪದ್ರ ಹೆಚ್ಚಿರುವಂಥ ಸ್ಥಳಗಳಿಗೆ ಪ್ರಯಾಣ ಮಾಡುವುದು ಅನಿವಾರ್ಯ ಅಲ್ಲದಿದರೆ, ಪ್ರಯಾಣವನ್ನು ಮುಂದೂಡಿ. ರೋಗ ಲಕ್ಷಣಗಳು ಕಂಡುಬಂದರೆ ಕೂಡಲೆ ವೈದ್ಯರನ್ನು ಸಂಪರ್ಕಿಸಿ. ಈ ರೋಗ ಸಾಮಾನ್ಯವಾಗಿ ಜೀವ ತೆಗೆಯುವಂಥದ್ದಲ್ಲ.

ಜೀಕಾ ನಿರ್ವಹಣೆಗೆ ಸರ್ಕಾರ ಸಿದ್ಧ: ಆರೋಗ್ಯ ಸಚಿವ ಸುಧಾಕರ್
ಪುಣೆ ಲ್ಯಾಬ್ ರಿಪೋರ್ಟ್ ಪ್ರಕಾರ ರಾಜ್ಯದಲ್ಲಿ 5 ವರ್ಷದ ಒಂದು ಹೆಣ್ಣು ಮಗುವಿಗೆ ಝಿಕಾ ವೈರಸ್ ಇರುವುದು ಪತ್ತೆಯಾಗಿದೆ. ಹಾಗಾಗಿ, ಮುಂಜಾಗೃತಾ ಕ್ರಮಕೈಗೊಳ್ಳಲು ಸೂಚಿಸಲಾಗಿದೆ. ರಾಜ್ಯದಲ್ಲಿ ಇದು ಮೊದಲ ಪ್ರಕರಣವಾಗಿದ್ದು, ಸರ್ಕಾರ ಇದನ್ನು ಬಹಳ ಎಚ್ಚರದಿಂದ ಗಮನಿಸುತ್ತಿದೆ ಮತ್ತು ಅದನ್ನು ನಿರ್ವಹಿಸಲು ಸಜ್ಜಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.

ಇದನ್ನೂ ಓದಿ | Zika virus | ರಾಜ್ಯದಲ್ಲಿ ಮೊದಲ ಝಿಕಾ ವೈರಸ್ ರಾಯಚೂರಿನಲ್ಲಿ ಪತ್ತೆ; 5 ವರ್ಷದ ಬಾಲಕಿಗೆ ಪಾಸಿಟಿವ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

CM Siddaramaiah: ‘ಗ್ಯಾರಂಟಿ’ ಹೆಸರಲ್ಲಿ ನಮಗೆ ಗೊತ್ತಿಲ್ಲದಂತೆಯೇ ಜೇಬು ಖಾಲಿ ಆಗುತ್ತಿದೆ. ಇತ್ತೀಚೆಗೆ ಸರಕಾರ ಮಾಡುತ್ತಿರುವ ಬೆಲೆ ಏರಿಕೆಗಳನ್ನು, ಇಷ್ಟರಲ್ಲಿಯೇ ಮಾಡಲಿರುವ ಬೆಲೆಯೇರಿಕೆಗಳನ್ನು ಗಮನಿಸಿ ಈ ಮಾತು ಆಡಲಾಗುತ್ತಿದೆ. ಒಂದು ಕಡೆಯಿಂದ ಕೊಟ್ಟಂತೆ ನಟಿಸುತ್ತಿರುವ ಸರಕಾರ, ಇನ್ನೊಂದು ಕಡೆಯಿಂದ ಅದರ ದುಪ್ಪಟ್ಟು ಹಣ ನಮ್ಮ ಕಿಸೆಯಿಂದ ಪೀಕುತ್ತಿದೆ!

VISTARANEWS.COM


on

cm siddaramaiah price hikes
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್‌ ಸರಕಾರ (Congress government) ರಾಜ್ಯದಲ್ಲಿ ಬಂದ ಕೂಡಲೇ ಚುನಾವಣೆ (Assembly Election) ಸಂದರ್ಭದಲ್ಲಿ ನೀಡಿದ ʼಗ್ಯಾರಂಟಿ ಯೋಜನೆʼಗಳನ್ನು (Guarantee schemes) ಜಾರಿ ಮಾಡಿತು. ಇದಕ್ಕಾಗಿ ಮುಂದೆ ಯಾವ ಬೆಲೆ ತೆರಬೇಕಾಗಲಿದೆಯೋ ಎಂಬ ಆತಂಕ ಆಗಲೇ ರಾಜ್ಯದ ಜನತೆಯನ್ನು ಕಾಡಿತ್ತು. ಅದು ಈ ನಿಜವಾಗುತ್ತಿದೆ. ಒಂದು ಕಡೆಯಿಂದ ಕೊಟ್ಟಂತೆ ನಟಿಸುತ್ತಿರುವ ಸರಕಾರ, ಇನ್ನೊಂದು ಕಡೆಯಿಂದ ಅದರ ದುಪ್ಪಟ್ಟು ಹಣ ನಮ್ಮ ಕಿಸೆಯಿಂದ ಪೀಕುತ್ತಿದೆ!

ಹೌದು, ಈ ಲೆಕ್ಕಾಚಾರ ನೋಡಿದರೆ ನೀವು ಖಂಡಿತಾ ಬಾಯಿ ಬಾಯಿ ಬಡಿದುಕೊಳ್ಳುತ್ತೀರಿ. ‘ಗ್ಯಾರಂಟಿ’ ಹೆಸರಲ್ಲಿ ನಮಗೆ ಗೊತ್ತಿಲ್ಲದಂತೆಯೇ ಜೇಬು ಖಾಲಿ ಆಗುತ್ತಿದೆ. ಇತ್ತೀಚೆಗೆ ಸರಕಾರ ಮಾಡುತ್ತಿರುವ ಬೆಲೆ ಏರಿಕೆಗಳನ್ನು, ಇಷ್ಟರಲ್ಲಿಯೇ ಮಾಡಲಿರುವ ಬೆಲೆಯೇರಿಕೆಗಳನ್ನು ಗಮನಿಸಿ ಈ ಮಾತು ಆಡಲಾಗುತ್ತಿದೆ. ಪೆಟ್ರೋಲ್‌, ಡೀಸೆಲ್‌ ಬೆಲೆ (Petrol price hike) ಏರಿಸಲಾಗಿದೆ; ಹಾಲು ದರವೂ (milk price hike) ಹೆಚ್ಚಿತು. ಮುಂದೆ ಕುಡಿಯವ ಕಾವೇರಿ ನೀರು (Kaveri Water Price hike) ಮತ್ತು ಆಲ್ಕೋಹಾಲ್‌ ದರಕ್ಕೂ (Liquor rates) ಸರಕಾರ ಕೈಹಾಕಲಿದೆ. ಶೀಘ್ರದಲ್ಲೇ ಟೀ- ಕಾಫಿ ರೇಟ್‌ ಏರಿಕೆಯೂ ಆಗಬಹುದು. ಮೆಡಿಕಲ್‌ ಸೀಟು ಶುಲ್ಕಗಳು ಹೆಚ್ಚಲಿವೆ, ಆಟೋ ದರ (Auto Fare) ಅಧಿಕವಾಗಲಿದೆ.

ಈಗ ಲೆಕ್ಕಾಚಾರ ತುಸು ನೋಡೋಣ. ಮೊದಲಿಗೆ ಸರಕಾರ ಏನು ಕೊಟ್ಟಿದೆ ಎಂಬ ಲೆಕ್ಕ.

ಗ್ಯಾರಂಟಿ ಯೋಜನೆಗಳು

ಗೃಹಲಕ್ಷ್ಮೀ – 2,000 ರೂ.
ಯುವನಿಧಿ – ಡಿಪ್ಲೊಮಾ 1500/- ಪದವೀಧರರಿಗೆ 3000/-
ಶಕ್ತಿಯೋಜನೆ – ಮಹಿಳೆಯರಿಗೆ ಸರ್ಕಾರಿ ಬಸ್​​ನಲ್ಲಿ ಉಚಿತ ಪ್ರಯಾಣ
ಅನ್ನಭಾಗ್ಯ – 5ಕೆಜಿ ಅಕ್ಕಿ & 170 ರೂಪಾಯಿ
ಗೃಹಜ್ಯೋತಿ – 200 ಯೂನಿಟ್​​ವರೆಗೆ ಉಚಿತ ವಿದ್ಯುತ್​​

ಇನ್ನು ಬೆಲೆ ಏರಿಕೆಗಳು

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಪೆಟ್ರೋಲ್ – 3 ರೂಪಾಯಿ ಏರಿಕೆ
ಡೀಸೆಲ್ – 3.50 ರೂ. ಏರಿಕೆ
ಪೆಟ್ರೋಲ್ ಸದ್ಯದ ದರ – 103 ರೂ.
ಡೀಸೆಲ್ ಸದ್ಯದ ದರ – 89.20 ರೂ.
1 ದ್ವಿಚಕ್ರ ವಾಹನ – ದಿನಕ್ಕೆ 1 ಲೀಟರ್ ಬಳಕೆ
ತಿಂಗಳಿಗೆ ​ಬಳಕೆ ಸರಾಸರಿ ಹೆಚ್ಚಳ 30 ಲೀಟರ್​​ – ತಿಂಗಳಿಗೆ 100 ರೂ. ಹೆಚ್ಚಳ

ಹಾಲಿನ ದರ ಹೆಚ್ಚಳ

ಹಾಲಿನ ದರ – ವರ್ಷದಲ್ಲಿ 2 ಬಾರಿ ಏರಿಕೆ
ಮೊದಲು ಲೀಟರ್​​ಗೆ ಹೆಚ್ಚಾಗಿದ್ದು – 3 ರೂಪಾಯಿ
ಇದೀಗ ಲೀಟರ್​ಗೆ ಹೆಚ್ಚಾಗಿದ್ದು – 2 ರೂಪಾಯಿ
ಲೀಟರ್ ಹಾಲಿನ ಸದ್ಯದ ದರ – 44 ರೂ. (ನೀಲಿ ಪ್ಯಾಕೆಟ್)
1 ಕುಟುಂಬದಿಂದ ಹಾಲು ಬಳಕೆ – 1 ಲೀಟರ್
ತಿಂಗಳಿಗೆ ಕುಟುಂಬದಿಂದ ಬಳಕೆ – 30 ಲೀಟರ್
ಹಾಲಿನ ದರ ಹೆಚ್ಚಳದಿಂದ ಹೊರೆ – 150 ರೂ.

ತರಕಾರಿ ದರ ಏರಿಕೆ

ಹಣ್ಣು, ತರಕಾರಿ, ಸೊಪ್ಪು ಬೆಲೆ ನಿರಂತರ ಏರಿಕೆ
ಹಣ್ಣು, ತರಕಾರಿ ಏರಿಕೆಯಿಂದ ಹೆಚ್ಚುವರಿ ಹೊರೆ
ಟ್ರಾನ್ಸ್​ಪೋರ್ಟ್ ಚಾರ್ಜಸ್ ಸೇರಿ ವಿವಿಧ ಚಾರ್ಜಸ್
ಪ್ರತಿ ತಿಂಗಳಿಗೆ ಜನರಿಗೆ ಅಂದಾಜು 500 ರೂ. ಹೊರೆ

ದಿನಸಿ ವಸ್ತುಗಳ ಬೆಲೆ ಏರಿಕೆ

ದಿನಸಿ ವಸ್ತುಗಳು, ದಿನಬಳಕೆ ವಸ್ತುಗಳ ಬೆಲೆ ಏರಿಕೆ
ಅಕ್ಕಿ, ಬೇಳೆ, ಡಿಟರ್ಜೆಂಟ್​​ ಸೇರಿ ವಸ್ತುಗಳ ಬೆಲೆ ಗಗನಕ್ಕೆ
ದಿನಸಿ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಹೊರೆ
ತಿಂಗಳಿಗೆ ಅಂದಾಜು 700 ರೂಪಾಯಿಯಷ್ಟು ಜನರಿಗೆ ಹೊರೆ

ಮಾಂಸಪ್ರಿಯರಿಗೂ ಶಾಕ್

ರಾಜ್ಯದಲ್ಲಿ ಮಾಂಸದ ಬೆಲೆಯಲ್ಲೂ ಹೆಚ್ಚಳ
ಮಾಂಸದ ಬೆಲೆ ಹೆಚ್ಚಳದಿಂದ ಹೆಚ್ಚುವರಿ ಹೊರೆ
ಜನರಿಗೆ ತಿಂಗಳಿಗೆ ಅಂದಾಜು 300 ರೂಪಾಯಿ ಹೆಚ್ಚಳ

ಮದ್ಯಪ್ರಿಯರಿಗೆ ಬಿಗ್ ಶಾಕ್

2023ರ ಜುಲೈನಲ್ಲಿ ಬಿಯರ್ 10%, ಮದ್ಯ 20% ಏರಿಕೆ
3 ತಿಂಗಳ ಹಿಂದೆ ಬಿಯರ್ 10%, ಮದ್ಯ 25% ದರ ಹೆಚ್ಚಳ
ಜುಲೈ 1ರಿಂದ ಮತ್ತೆ ಅಬಕಾರಿ ದರ ಹೆಚ್ಚಳಕ್ಕೆ ನಿರ್ಧಾರ?

ವಾಣಿಜ್ಯ ವಿದ್ಯುತ್ ಬಳಕೆದಾರರಿಗೆ ಶಾಕ್!?

ಉಚಿತ ವಿದ್ಯುತ್​ ಮಧ್ಯೆಯೂ ವಾಣಿಜ್ಯ ಬಳಕೆ ವಿದ್ಯುತ್​ ದರ ಏರಿಕೆ
ಕೈಗಾರಿಕೆ ಸೇರಿ ವಾಣಿಜ್ಯ ಬಳಕೆಯ ವಿದ್ಯುತ್​ ದರ ಹೆಚ್ಚಳ
ವಿದ್ಯುತ್ ದರ ಹೆಚ್ಚಳದಿಂದ ವಸ್ತುಗಳ ಮೇಲೆ ಪರಿಣಾಮ
ಅಂದಾಜು 300 ರೂಪಾಯಿಯಷ್ಟು ಹೊರೆ ಬೀಳುವ ಸಾಧ್ಯತೆ

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್?

ಉಚಿತ ಪ್ರಯಾಣದ ನಡುವೆ ಬಸ್ ಟಿಕೆಟ್ ದರ ಏರಿಕೆ ಚಿಂತನೆ
ಗಂಡಸರ ಪ್ರಯಾಣದ ದರ ಹೆಚ್ಚಿಸಲು ಸರ್ಕಾರದ ಚಿಂತನೆ
ಶೀಘ್ರದಲ್ಲೇ ಸರ್ಕಾರಿ ಬಸ್​ಗಳ ಪ್ರಯಾಣದ ದರ ಏರಿಕೆ ಸಾಧ್ಯತೆ
ಖಾಸಗಿ ಬಸ್‌ಗಳ ದರವೂ ದುಬಾರಿಯಾಗುವ ಸಾಧ್ಯತೆ
ಟಿಕೆಟ್ ದರ ಏರಿಕೆಯಿಂದ ಪ್ರತಿ ಕುಟುಂಬಕ್ಕೂ ಹೆಚ್ಚುವರಿ ಹೊರೆ
1 ಕುಟುಂಬಕ್ಕೆ ಅಂದಾಜು 200 ರೂಪಾಯಿಯಷ್ಟು ಹೆಚ್ಚು ಹೊರೆ

ಜನರಿಗೆ ಜಲ‘ಶಾಕ್’!
ರಾಜ್ಯದ ಹಲವು ಕಡೆ ಕುಡಿಯುವ ನೀರಿನ ಸಮಸ್ಯೆ
ಹೆಚ್ಚು ಟ್ಯಾಂಕರ್ ನೀರು ಅವಲಂಬಿಸಿರುವ ಜನರು
ಟ್ಯಾಂಕರ್​ ಮೂಲಕ ನೀರು ತರಿಸಿಕೊಳ್ತಿರುವ ಜನರು
ಒಂದು ಟ್ಯಾಂಕರ್​​ ನೀರಿನ ಬೆಲೆ ಸುಮಾರು ₹2000

ತಿಂಗಳಿಗೆ 1 ಕುಟುಂಬಕ್ಕೆ ಅಂದಾಜು ಹೊರೆ

ಹಾಲು 30 ಲೀಟರ್ ಬಳಕೆ – 150 ರೂ.
ಪೆಟ್ರೋಲ್, ಡೀಸೆಲ್ 30 ಲೀ. – 90 ರೂ.
ತರಕಾರಿ – 500 ರೂಪಾಯಿ
ಮದ್ಯ – 500 ರೂಪಾಯಿ
ವಿದ್ಯುತ್ ವಾಣಿಜ್ಯ ಬಳಕೆ – 300 ರೂ.
ಬಸ್ ಟಿಕೆಟ್ ದರ – 200 ರೂ.
ದಿನಸಿ – 700 ರೂ.
ಮಾಂಸ – 300 ರೂ.
ಟ್ಯಾಂಕರ್ ನೀರು – 2,000 ರೂ.
ಒಟ್ಟು ಅಂದಾಜು ಹೊರೆ – 4740

ವರ್ಷಕ್ಕೆ ಎಷ್ಟು ಹೊರೆ?

ಪ್ರತಿ 1 ಕುಟುಂಬಕ್ಕೆ ತಿಂಗಳಿಗೆ 4740 ರೂ. ಅಧಿಕ ಹೊರೆ
ಪ್ರತಿ 1 ಕುಟುಂಬಕ್ಕೆ ವರ್ಷಕ್ಕೆ 56,880 ರೂ. ಅಧಿಕ ಹೊರೆ

ವರ್ಷಕ್ಕೆ ಎಷ್ಟು ಹೆಚ್ಚುವರಿ ಹೊರೆ?

ಕುಟುಂಬಕ್ಕೆ ಸರ್ಕಾರ ಕೊಡೋದು ವರ್ಷಕ್ಕೆ 24 ಸಾವಿರಕ್ಕೂ ಹೆಚ್ಚು
ಆದರೆ ಪ್ರತಿ 1 ಕುಟುಂಬಕ್ಕೆ ವರ್ಷಕ್ಕೆ 56,880 ರೂ. ಹೊರೆ
ಸರ್ಕಾರ ಕೊಟ್ಟ 24 ಸಾವಿರ ಬಿಟ್ಟರೆ 32,880 ರೂ. ಹೆಚ್ಚುವರಿ ಹೊರೆ
ಪ್ರತಿ 1 ಕುಟುಂಬಕ್ಕೆ ತಿಂಗಳಿಗೆ 4740 ರೂ. ಅಧಿಕ ಹೊರೆ
ಸರ್ಕಾರ ಕೊಡುವ 2 ಸಾವಿರ ಹೊರತುಪಡಿಸಿದರೆ 2740 ರೂ. ಹೆಚ್ಚುವರಿ ಹೊರೆ

ಇದನ್ನೂ ಓದಿ: CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Continue Reading

Latest

Members of Parliament: ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ? ಜೈಲಿನಲ್ಲಿದ್ದವರ ಕತೆಯೇನು?

ಲೋಕ ಸಭಾ ಚುನಾವಣೆ ಬಳಿಕ ಸಂಸದರಾಗಿ (Members of Parliament) ಆಯ್ಕೆಯಾಗುವವರು ಯಾವ ರೀತಿ ಪ್ರಮಾಣ ವಚನ ಸ್ವೀಕರಿಸಬೇಕು ಎಂಬುದನ್ನು ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಮತ್ತು ಪ್ರಮುಖ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗದೇ ಇದ್ದರೆ ಮುಂದಿನ ನಡೆ ಹೇಗಿರುತ್ತದೆ ಎಂಬಿತ್ಯಾದಿ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

By

Members of Parliament
Koo

18ನೇ ಲೋಕಸಭೆಯ (loksabha election) ಮೊದಲ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಹೊಸದಾಗಿ ಚುನಾಯಿತರಾದ ಸಂಸತ್ ಸದಸ್ಯರು (Members of Parliament) ಸೋಮವಾರದಿಂದ ಪ್ರಮಾಣ ವಚನ (taking oath) ಸ್ವೀಕರಿಸಲು ಆರಂಭಿಸಿದ್ದಾರೆ. ಎರಡು ದಿನಗಳಲ್ಲಿ ಕೆಳಮನೆಯ (lower house) 543 ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 26ರಂದು ನೂತನ ಲೋಕಸಭಾ ಸ್ಪೀಕರ್ (Speaker) ಆಯ್ಕೆ ನಡೆಯಲಿದೆ.

ಪ್ರಮಾಣ ವಚನ ಬೋಧಿಸುವವರು ಯಾರು?

ಸಂಸದೀಯ ಪದ್ಧತಿಗಳ ಪ್ರಕಾರ ಪ್ರತಿ ಸಾರ್ವತ್ರಿಕ ಚುನಾವಣೆಯ ಅನಂತರ ಲೋಕಸಭೆಗೆ ಹೊಸದಾಗಿ ಚುನಾಯಿತರಾದ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಸ್ವೀಕರಿಸುವ ಹೊಣೆ ನಿರ್ವಹಿಸುತ್ತಾರೆ. ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಯನ್ನು ನಡೆಸುವ ಜವಾಬ್ದಾರಿ ಕೂಡ ಈ ಹಂಗಾಮಿ ಸ್ಪೀಕರ್‌ದೇ ಆಗಿರುತ್ತದೆ.

ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಅನಾರೋಗ್ಯದ ಕಾರಣ ಅಥವಾ ಅವರ ಸ್ಥಳದಿಂದ ತೆರಳಲು ಸಾಧ್ಯವಾಗದ ಕಾರಣ ಪ್ರಮಾಣ ವಚನ ಸ್ವೀಕರಿಸದಿರುವ ಸಾಧ್ಯತೆಯಿದೆ.

ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ?

1. ಮೊದಲ ದಿನ ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡದ ಚುನಾಯಿತ ಸಂಸದರು ಸದನದ ಅಧಿವೇಶನದ ಪ್ರಾರಂಭದಲ್ಲಿ ಅದೇ ಅಧಿವೇಶನದಲ್ಲಿ ಅಥವಾ ಅನಂತರದ ಅಧಿವೇಶನದಲ್ಲಿ ಯಾವುದೇ ನಂತರದ ದಿನದಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು.

2. ಸಂಸದರ ಕೋರಿಕೆಯ ಮೇರೆಗೆ ಸಭಾಧ್ಯಕ್ಷರ ಚೇಂಬರ್‌ನಲ್ಲಿ ಮಧ್ಯಂತರ ಅವಧಿಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಲಾಗುತ್ತದೆ.

3. ಅನಾರೋಗ್ಯದಿಂದ ಬಳಲುತ್ತಿರುವವರು, ಸದನಕ್ಕೆ ಬರಲು ಸಾಧ್ಯವಾಗದ ಸಂದರ್ಭದಲ್ಲಿ ಅವರು ಬಯಸಿದಲ್ಲಿ ಪ್ರಮಾಣ ಅಥವಾ ದೃಢೀಕರಣವನ್ನು ಮಾಡಬಹುದು. ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಯು ಸದಸ್ಯರಿಗೆ ಸಂಬಂಧಿತ ಪ್ರಮಾಣ ಅಥವಾ ದೃಢೀಕರಣ ಕಾರ್ಡ್ ಅನ್ನು ನೀಡುತ್ತಾರೆ.

4. ಸಂವಿಧಾನದ ಪ್ರಕಾರ ಚುನಾಯಿತ ಸಂಸದರು 60 ದಿನಗಳವರೆಗೆ ಸಂಸತ್ತಿಗೆ ಹಾಜರಾಗದಿದ್ದರೆ ಅವರ ಸ್ಥಾನವನ್ನು ಖಾಲಿ ಎಂದು ಘೋಷಿಸಬಹುದು. ಇದೇ ಆಧಾರದಲ್ಲಿ ನ್ಯಾಯಾಲಯಗಳು ಜೈಲಿನಲ್ಲಿರುವ ಸಂಸದರಿಗೆ ಪ್ರಮಾಣ ವಚನ ಸ್ವೀಕರಿಸುವುದಕ್ಕಾಗಿ ಸಂಸತ್‌ಗೆ ಬರಲು ಅವಕಾಶ ನೀಡಬಹುದು. ಆದರೆ ಪ್ರಮಾಣ ವಚನ ಸ್ವೀಕರಿಸಿದ ಅನಂತರ ಅವರು ಮತ್ತೆ ಜೈಲಿಗೆ ಮರಳಬೇಕಾಗುತ್ತದೆ.

5. ದೃಷ್ಟಿ ಸಮಸ್ಯೆಯಿಂದ ಸದಸ್ಯರಿಗೆ ಸಹಿ ಮಾಡಲು, ಪ್ರಮಾಣ ಪತ್ರ ಓದಲು ಸಾಧ್ಯವಾಗದೇ ಇದ್ದರೆ ಇನ್ನೊಬ್ಬ ಸದಸ್ಯರು ಇವರಿಗೆ ಓದಿ ಹೇಳಬಹುದಾಗಿದೆ.

6. ನ್ಯಾಯಾಲಯದ ಆದೇಶದ ಪರಿಣಾಮವಾಗಿ ಒಬ್ಬ ವ್ಯಕ್ತಿಯು ಸದಸ್ಯರಾಗುವುದನ್ನು ತಡೆದರೆ ಮತ್ತು ಅವರ ಸ್ಥಾನದಲ್ಲಿ ಇನ್ನೊಬ್ಬರು ಚುನಾಯಿತರೆಂದು ಘೋಷಿಸಲ್ಪಟ್ಟರೆ ಮತ್ತೆ ಹೊಸದಾಗಿ ಪ್ರಮಾಣವಚನ ಅಥವಾ ದೃಢೀಕರಣವನ್ನು ಮಾಡಬೇಕು.

7. ಮೊದಲ ಸುತ್ತಿನಲ್ಲಿ ಪ್ರಮಾಣವಚನಕ್ಕೆ ಹಾಜರಾಗದ ಸದಸ್ಯರ ಹೆಸರನ್ನು ಕೊನೆಯಲ್ಲಿ ಮತ್ತೆ ಕರೆಯಲಾಗುತ್ತದೆ.

ಯಾವ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂವಿಧಾನದ ಮೂರನೇ ಶೆಡ್ಯೂಲ್ ಸಂಸತ್ತಿನ ಪ್ರಮಾಣ ವಚನದ ಪಠ್ಯವನ್ನು ಒಳಗೊಂಡಿದೆ. ಅದು ಹೀಗೆ ಹೇಳುತ್ತದೆ: ನಾನು…. ಚುನಾಯಿತನಾದ ಅಥವಾ ನಾಮನಿರ್ದೇಶನಗೊಂಡ ಸದಸ್ಯರ ಸಂಸತ್‌ ಸದಸ್ಯನಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ನಾನು ಕಾನೂನಿನ ಮೂಲಕ ಸ್ಥಾಪಿಸಿದಂತೆ ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುತ್ತೇನೆ ಎಂದು ಸ್ಪಷ್ಟವಾಗಿ ದೃಢಪಡಿಸುತ್ತೇನೆ. ನಾನು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುತ್ತೇನೆ. ನನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ.

ಪ್ರಮಾಣ ವಚನ ಏಕೆ ಮಹತ್ವದ್ದಾಗಿದೆ?

ಲೋಕಸಭೆಯಲ್ಲಿ ಚರ್ಚೆ ಮತ್ತು ಮತ ಚಲಾಯಿಸುವ ಅಧಿಕಾರವನ್ನು ಪಡೆಯಲು ಸಂವಿಧಾನದಲ್ಲಿ (ಆರ್ಟಿಕಲ್ 99) ಸೂಚಿಸಿದಂತೆ ಸಂಸದರು ಪ್ರಮಾಣ ವಚನ ಸ್ವೀಕರಿಸಬೇಕು.

ಕೇವಲ ಚುನಾವಣೆಯಲ್ಲಿ ಗೆದ್ದು ಅವಧಿಯನ್ನು ಪ್ರಾರಂಭಿಸುವುದರಿಂದ ಅವರು ಸದನದ ಕಲಾಪಗಳಲ್ಲಿ ಭಾಗವಹಿಸಲು ಸ್ವಯಂಚಾಲಿತವಾಗಿ ಸಾಧ್ಯವಾಗುವುದಿಲ್ಲ.

ಹೇಗೆ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂಸದರು ಮೊದಲು ತಮ್ಮ ಚುನಾವಣಾ ಪ್ರಮಾಣಪತ್ರವನ್ನು ಲೋಕಸಭೆಯ ಸಿಬ್ಬಂದಿಗೆ ಸಲ್ಲಿಸಬೇಕಾಗುತ್ತದೆ. 1957ರಲ್ಲಿ ನಡೆದ ಘಟನೆಯ ಅನಂತರ ಸಂಸತ್ತು ಈ ಸುರಕ್ಷತೆಯನ್ನು ಸೇರಿಸಿತು. ಮಾನಸಿಕವಾಗಿ ಅಸ್ವಸ್ಥ ವ್ಯಕ್ತಿಯೊಬ್ಬರು ಸಂಸದರೆಂದು ಪೋಸ್ ನೀಡಿ ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು!

ಪ್ರಮಾಣಪತ್ರದ ಜೊತೆಗೆ ಸಂಸದರು ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡಲು ಬಯಸಿದ ಭಾಷೆಯನ್ನು ಸಹ ನಮೂದಿಸಬೇಕು.

ಸದಸ್ಯರು ಪ್ರಮಾಣ ವಚನ ಮಾಡುವಾಗ ಹಂಗಾಮಿ ಸ್ಪೀಕರ್ ಜೊತೆ ಹಸ್ತಲಾಘವ ಮಾಡುತ್ತಾರೆ. ಅನಂತರ ಅವರು ಸದನದಲ್ಲಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಸದಸ್ಯರಿಗೆ ಸ್ಪೀಕರ್‌ ಅನುಮತಿ ನೀಡುತ್ತಾರೆ. ಸದಸ್ಯರು ದಾಖಲಾತಿ ಪುಸ್ತಕದಲ್ಲಿ ಸಹಿ ಮಾಡುತ್ತಾರೆ.

ಯಾವ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು?

ಸಂಸದರು ಇಂಗ್ಲಿಷ್ ಅಥವಾ ಅಸ್ಸಾಮಿ, ಬೆಂಗಾಲಿ, ಬೋಡೋ, ಡೋಗ್ರಿ, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮೈಥಿಲಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒಡಿಯಾ, ಪಂಜಾಬಿ, ಸಂಸ್ಕೃತ, ಸಂತಾಲಿ, ಸಿಂಧಿ, ತಮಿಳು, ತೆಲುಗು ಮತ್ತು ಉರ್ದು.. ಹೀಗೆ 22 ಭಾಷೆಗಳಲ್ಲಿ ಪ್ರಮಾಣವಚನವನ್ನು ಸ್ವೀಕರಿಸಬಹುದು.

ಅರ್ಧದಷ್ಟು ಸಂಸದರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಹಿಂದಿನ ಎರಡು ಲೋಕಸಭೆಯಲ್ಲಿ ಸಂಸ್ಕೃತವು ಜನಪ್ರಿಯ ಭಾಷೆಯಾಗಿ ಮಾರ್ಪಟ್ಟಿದ್ದು, ಹಲವು ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: Bansuri Swaraj: ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಸುಷ್ಮಾ ಸ್ವರಾಜ್‌ರನ್ನು ನೆನಪಿಸಿದ ಮಗಳು! ವಿಡಿಯೊ ನೋಡಿ

ಯಾವಾಗ ಸದನದ ಸದಸ್ಯರಾಗುತ್ತಾರೆ?

ಒಬ್ಬ ವ್ಯಕ್ತಿಯು ಚುನಾವಣಾ ಅಧಿಕಾರಿಯಿಂದ ಚುನಾಯಿತರೆಂದು ಘೋಷಿಸಲ್ಪಟ್ಟ ದಿನಾಂಕದಿಂದ ಸದನದ ಸದಸ್ಯರಾಗುತ್ತಾರೆ. ಸದನವನ್ನು ರಚಿಸುವ ಚುನಾವಣಾ ಆಯೋಗದ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ ಅವರು ಸಂಸದರಾಗಿ ಸಂಬಳವನ್ನು ಸ್ವೀಕರಿಸಲು ಪ್ರಾರಂಭಿಸುತ್ತಾರೆ. ಸಂಸದರು ಸದನದ ಅಧಿವೇಶನಗಳಿಗೆ ಗೈರುಹಾಜರಿಯನ್ನು ಕೇಳಬಹುದಾಗಿದೆ.

Continue Reading

ದೇಶ

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

ವಿಶಾಖಪಟ್ಟಣದ ಋಷಿಕೊಂಡ ಬೆಟ್ಟದ ಬಳಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ 500 ಕೋಟಿ ರೂ. ವೆಚ್ಚದಲ್ಲಿ ಅರಮನೆಯನ್ನು (Rushikonda Palace Issue) ನಿರ್ಮಿಸಿರುವುದು ಭಾರೀ ಟೀಕೆಗೆ ಗುರಿಯಾಗಿದೆ. ವೈಎಸ್‌ಆರ್‌ಸಿ ಆಡಳಿತದಲ್ಲಿ ನಿರ್ಮಿಸಿರುವ ಈ ಯೋಜನೆಯ ಬಗ್ಗೆ ತನಿಖೆ ನಡೆಸುವುದಾಗಿ ಈಗಿನ ಸರ್ಕಾರ ಹೇಳಿದೆ. ಏನಿದು ವಿವಾದ? ಇಲ್ಲಿದೆ ವಿಸ್ತೃತ ಮಾಹಿತಿ.

VISTARANEWS.COM


on

By

Rushikonda Palace Issue
Koo

ಆಂಧ್ರಪ್ರದೇಶದ ಋಷಿಕೊಂಡ ಬೆಟ್ಟದ ಬಳಿ (andrapradesh) ಈ ಹಿಂದೆ ಮುಖ್ಯಮಂತ್ರಿಯಾಗಿದ್ದ (former CM) ಜಗನ್ ಮೋಹನ್ ರೆಡ್ಡಿ (Y.S. Jagan Mohan Reddy) 500 ಕೋಟಿ ರೂ. ವೆಚ್ಚದಲ್ಲಿ ʼರಾಜಾ ಮಹಲ್‌ʼ ಹೆಸರಿನಲ್ಲಿ ಅರಮನೆಯನ್ನು (Rushikonda Palace) ನಿರ್ಮಿಸಿದ್ದರು. ಈಗ ಜಗನ್‌ ಸರ್ಕಾರ ಅಧಿಕಾರ ಕಳೆದುಕೊಂಡು ಟಿಡಿಪಿಯ ಎನ್‌ ಚಂದ್ರಬಾಬು ನಾಯ್ಡು ಅವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದೀಗ ಈ ಅರಮನೆ ಭಾರೀ ಟೀಕೆ ಮತ್ತು ವಿವಾದಕ್ಕೆ ಗುರಿಯಾಗಿದೆ.

ಭಾರಿ ಭ್ರಷ್ಟಾಚಾರದ ಮೂಲಕ ರಾಜ್ಯ ಸರ್ಕಾರದ ಹಣವನ್ನು ಈ ಹಿಂದಿನ ಮುಖ್ಯಮಂತ್ರಿ ಜಗನ್‌ ರೆಡ್ಡಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿರುವ ತೆಲುಗು ದೇಶಂ ಪಕ್ಷ (TDP), ವಿಶಾಖಪಟ್ಟಣಂನ (Vishakhapatnam) ಋಷಿಕೊಂಡದ ಮೇಲೆ ನಿರ್ಮಿಸಲಾದ ಕಟ್ಟಡಗಳ ಡ್ರೋನ್ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಈ ಮೂಲಕ ಇದನ್ನು ಸಾರ್ವಜನಿಕರ ಗಮನಕ್ಕೆ ತಂದಿದೆ.

ಹಿಂದಿನ ವೈಎಸ್‌ಆರ್‌ಸಿ ಆಡಳಿತದಲ್ಲಿ ಋಷಿಕೊಂಡ ಮೇಲೆ ನಿರ್ಮಿಸಲಾದ ಕಟ್ಟಡಗಳಿಗೆ ಭೀಮಿಲಿ ಶಾಸಕ ಗಂಟಾ ಶ್ರೀನಿವಾಸ ರಾವ್ ಭೇಟಿ ನೀಡಿದಾಗ ಋಷಿಕೊಂಡ ಅರಮನೆ ವಿವಾದ ಭುಗಿಲೆದ್ದಿತು. ಟಿಡಿಪಿ ನಾಯಕರು ಈ ಯೋಜನೆಯ ಸ್ವರೂಪ ಮತ್ತು ಪ್ರಕೃತಿಯ ಮೇಲೆ ಇದರ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿರುವ ಟಿಡಿಪಿ ನಾಯಕರು, ‘ಋಷಿಕೊಂಡ ಅರಮನೆ’ ಎಂದು ಕರೆಯಲ್ಪಡುವ ಈ ಅರಮನೆಯನ್ನು ಅಕ್ರಮವಾಗಿ ಮತ್ತು ರಹಸ್ಯವಾಗಿ ನಿರ್ಮಿಸಲಾಗಿದೆ ಎಂದು ದೂರಿದ್ದಾರೆ. ಭೀಮಿಲಿ ಶಾಸಕ ಗಂಟಾ ಶ್ರೀನಿವಾಸ ರಾವ್ ಅವರು ಹಿಂದಿನ ವೈಎಸ್‌ಆರ್ ಕಾಂಗ್ರೆಸ್ (ವೈಎಸ್‌ಆರ್‌ಸಿ) ಆಡಳಿತದಿಂದ ಋಷಿಕೊಂಡದ ಮೇಲೆ ನಿರ್ಮಿಸಲಾದ ಕಟ್ಟಡಗಳಿಗೆ ಭೇಟಿ ನೀಡಿದ ಈ ವಿಷಯ ಹೆಚ್ಚು ಚರ್ಚೆಗೆ ಕಾರಣವಾಯಿತು. ಈ ಕಟ್ಟಡಗಳನ್ನು ‘ರಾಜ ಮಹಲ್’ ಎಂದು ಬಣ್ಣಿಸಿರುವ ಟಿಡಿಪಿ ನಾಯಕ ನಾರಾ ಲೋಕೇಶ್, ಸಾರ್ವಜನಿಕ ನಿಧಿಯ ದುರುಪಯೋಗದ ಬಗ್ಗೆ ದನಿ ಎತ್ತಿದ್ದಾರೆ.

ಋಷಿಕೊಂಡ ನಿರ್ಮಾಣ

ಸಚಿವ ನಾರಾ ಲೋಕೇಶ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ತಮ್ಮ ಕಳವಳವನ್ನು ವ್ಯಕ್ತಪಡಿಸಿ, “ಬಡವರು ತಮ್ಮ ಮಕ್ಕಳ ತಲೆಯ ಮೇಲೆ ಸೂರು ನಿರ್ಮಿಸಲು ಹೆಣಗಾಡುತ್ತಿದ್ದರೆ, ಅವರ ಹಣದಲ್ಲಿ ಜಗನ್‌ ಅರಮನೆಯನ್ನು ನಿರ್ಮಿಸಿದ್ದಾರೆ. ಈ ಬಗ್ಗೆ ತನಿಖೆ ಮಾಡಲಾಗುವುದುʼʼ ಎಂದಿದ್ದಾರೆ. 9.88 ಎಕರೆ ಜಮೀನಿನಲ್ಲಿ ಕಟ್ಟಡವು 5 ಎಕರೆಯಲ್ಲಿ ಇರಬೇಕು, ಉಳಿದ ಪ್ರದೇಶವು ಭೂದೃಶ್ಯ ಮತ್ತು ಪಾರ್ಕಿಂಗ್ ಪ್ರದೇಶವಾಗಿರಬೇಕು ಎಂದು ಹೇಳಲಾಗಿತ್ತು. ಆದರೆ ಬೆಟ್ಟವನ್ನು 15 ಎಕರೆ ಹೆಚ್ಚುವರಿಯಾಗಿ ಅಗೆದಿರುವುದು ದೊಡ್ಡ ಉಲ್ಲಂಘನೆಯಾಗಿದೆ ಎಂದವರು ತಿಳಿಸಿದ್ದಾರೆ.


ಇದನ್ನೂ ಓದಿ: UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

ಜಗನ್‌ ಪಕ್ಷದ ಪ್ರತಿಪಾದನೆ ಏನು?

ವಿಶಾಖಪಟ್ಟಣಂನಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶವನ್ನು ಈ ಪುನರಾಭಿವೃದ್ಧಿ ಯೋಜನೆ ಹೊಂದಿದೆ ಎಂದು ಜಗನ್ ನೇತೃತ್ವದ ಪಕ್ಷವು ಪ್ರತಿಪಾದಿಸಿದೆ. ಈ ಆಸ್ತಿ ಸರ್ಕಾರಿ ಸ್ವಾಮ್ಯದಲ್ಲಿದೆ, ಖಾಸಗಿಯಲ್ಲ ಎಂದು ಹೇಳಿರುವ ಪಕ್ಷದ ಪ್ರಮುಖರು, ರಾಷ್ಟ್ರಪತಿ ಅಥವಾ ಪ್ರಧಾನಮಂತ್ರಿ ವಿಶಾಖಪಟ್ಟಣಕ್ಕೆ ಭೇಟಿ ನೀಡಿದಾಗ ಇದನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಈ ನಡುವೆಯೇ ಯೋಜನೆಯು ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳನ್ನು ಉಲ್ಲಂಘಿಸಿದ ಕಾರಣದಿಂದ ಪರಿಸರವಾದಿಗಳಿಂದಲೂ ವ್ಯಾಪಕ ವಿರೋಧವನ್ನು ಎದುರಿಸುತ್ತಿದೆ.

ಹೇಗಿದೆ ಈ ಅರಮನೆ?

9.88 ಎಕರೆ ಸಮುದ್ರಾಭಿಮುಖ ಸೈಟ್‌ನಲ್ಲಿ ಹರಡಿರುವ ಋಷಿಕೊಂಡ ಅರಮನೆಯು ಒಟ್ಟು 1,41,433 ಚದರ ಮೀಟರ್‌ಗಳ ನಿರ್ಮಾಣ ಪ್ರದೇಶದೊಂದಿಗೆ 12 ಬೆಡ್‌ ರೂಮ್‌ಗಳನ್ನು ಹೊಂದಿದೆ. ಮೂರು ಮಹಲುಗಳನ್ನು ರಚಿಸಲು ರಮಣೀಯವಾದ ಋಶಿಕೊಂಡ ಬೆಟ್ಟಗಳನ್ನು ಧ್ವಂಸಪಡಿಸಲಾಗಿದೆ. ಕೆಲವು ವಾಶ್‌ರೂಮ್‌ಗಳಂತೂ 480 ಚದರ ಅಡಿ ದೊಡ್ಡದಾಗಿದೆ. ಮೀಟಿಂಗ್ ಹಾಲ್‌ಗಳು 7,266 ಚದರ ಮೀಟರ್‌ ವ್ಯಾಪಿಸಿದೆ!

ಆಮದು ಮಾಡಿದ ದುಬಾರಿ ಮಾರ್ಬಲ್‌ಗಳನ್ನು ಬಳಸಿದ್ದು, ವಿಶಾಲವಾದ ಕಾರಿಡಾರ್‌ಗಳನ್ನು ಒಳಗೊಂಡಿದೆ. ವಾಲ್-ಟು-ವಾಲ್ ಸ್ಕ್ರೀನ್ ಹೊಂದಿರುವ ಹೋಮ್ ಥಿಯೇಟರ್ ಬ್ಲಾಕ್‌ ಇದರ ಮತ್ತೊಂದು ಪ್ರಮುಖ ಅಂಶವಾಗಿದೆ. ಸರ್ಕಾರವು ಲ್ಯಾಂಡ್‌ಸ್ಕೇಪಿಂಗ್‌ನಲ್ಲಿ 50 ಕೋಟಿ ರೂ. ಮತ್ತು ಒಳಾಂಗಣ ಅಲಂಕಾರಕ್ಕಾಗಿ 33 ಕೋಟಿ ರೂ. ವೆಚ್ಚ ಮಾಡಿದೆ ಎನ್ನಲಾಗಿದೆ. ರೆಸ್ಟ್ ರೂಮ್ಗ‌ಳನ್ನು ಒಳಗೊಂಡಂತೆ ಸಂಪೂರ್ಣ ಸಂಕೀರ್ಣದ ಉದ್ದಕ್ಕೂ ಸೆಂಟ್ರಲ್‌ ಹವಾನಿಯಂತ್ರಣವಿದೆ. ಸಮುದ್ರದ ನೋಟವನ್ನು ಹೊಂದಿರುವ ಡೈನಿಂಗ್ ಹಾಲ್, ಪ್ರತಿ ಮಲಗುವ ಕೋಣೆಯಲ್ಲಿ 12 ಹಾಸಿಗೆಗಳಿವೆ. ಸ್ಪಾ ಸೇವೆಗಳೊಂದಿಗೆ ಸ್ನಾನಗೃಹಗಳು ವಿಶೇಷ ವೈಶಿಷ್ಟ್ಯಗಳಿಂದ ಕೂಡಿದೆ.

Continue Reading

ದೇಶ

New Criminal Laws: ಹೊಸ ಕ್ರಿಮಿನಲ್ ಕಾನೂನು ಜು.1ರಿಂದ ಜಾರಿ; ಯಾವ ಕಾನೂನು? ಏನು ಬದಲಾವಣೆ? Complete Details!

New criminal laws: ಕಳೆದ ಡಿಸೆಂಬರ್‌ನಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟು ರಾಷ್ಟ್ರಪತಿಗಳಿಂದ ಒಪ್ಪಿಗೆಯನ್ನು ಪಡೆದ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜುಲೈ ಒಂದರಿಂದ ಜಾರಿಗೆ ಬರಲಿವೆ. ಅವುಗಳ ಅನುಷ್ಠಾನಕ್ಕೆ ಬೇಕಾದ ಎಲ್ಲ ವ್ಯವಸ್ಥೆಗಳು ನಡೆಯುತ್ತಿದೆ. ಮೂರು ಹೊಸ ಕಾನೂನುಗಳ ರೂಪುರೇಷೆಗಳೇನು? ಬದಲಾವಣೆಗಳು ಏನೇನು? ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

New criminal laws
Koo

ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನುಗಳು (New criminal laws) ಜುಲೈ 1ರಿಂದ ಜಾರಿಗೆ ಬರಲಿವೆ. ಅವುಗಳ ಅನುಷ್ಠಾನಕ್ಕೆ ಅಗತ್ಯ ತರಬೇತಿ ಈಗಾಗಲೇ ನಡೆಯುತ್ತಿದೆ. ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ (Union law and justice ministe) ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಈ ಬಗ್ಗೆ ವಿವರ ನೀಡಿದ್ದಾರೆ.

ಕೋಲ್ಕತ್ತಾದಲ್ಲಿ (Kolkata) “ಕ್ರಿಮಿನಲ್ ಜಸ್ಟಿಸ್ ಸಿಸ್ಟಮ್ ಆಡಳಿತದಲ್ಲಿ ಭಾರತದ ಪ್ರಗತಿಪರ ಹಾದಿ” ಎಂಬ ಸಮ್ಮೇಳನದಲ್ಲಿ ಮಾತನಾಡಿದ ಅವರು, ಏಕರೂಪ ನಾಗರಿಕ ಸಂಹಿತೆಯ (UCC) ರಾಷ್ಟ್ರವ್ಯಾಪಿ ಅನುಷ್ಠಾನದ ಬಗ್ಗೆಯೂ ಭರವಸೆ ವ್ಯಕ್ತಪಡಿಸಿದ್ದಾರೆ.

ಜುಲೈ 1ರಿಂದ ಎಲ್ಲಾ ಮೂರು ಕಾನೂನುಗಳು – ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆಗಳು ಈ ಹಿಂದಿನ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಎವಿಡೆನ್ಸ್ ಆಕ್ಟ್ ಅನ್ನು ಬದಲಿಸುತ್ತವೆ. ಈಗಿರುವ ಕಾಯಿದೆಗಳಿಗೆ ಹೋಲಿಸಿದರೆ ಈ ಮೂರು ಹೊಸ ಕಾನೂನುಗಳಲ್ಲಿ ಹಲವು ವಿನೂತನ ಉದ್ದೇಶಗಳಿವೆ.

ಮೂರು ಕ್ರಿಮಿನಲ್ ಕಾನೂನುಗಳನ್ನು ಕಳೆದ ವರ್ಷ ಡಿಸೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿತ್ತು. ಅದೇ ತಿಂಗಳು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಿತು. ಆದರೆ, ಅವು ಜಾರಿಗೆ ಬಂದಿರಲಿಲ್ಲ. ಈ ವರ್ಷ ಫೆಬ್ರವರಿ 25ರಂದು ಮೂರು ಕಾನೂನುಗಳು ಜುಲೈ 1ರಂದು ಜಾರಿಗೆ ಬರುತ್ತವೆ ಎಂದು ಸರ್ಕಾರವು ಅಧಿಸೂಚನೆಯನ್ನು ಹೊರಡಿಸಿತ್ತು.

ಪೊಲೀಸ್ ಸಂಶೋಧನೆ ಮತ್ತು ಅಭಿವೃದ್ಧಿ ಬ್ಯೂರೋ (ಬಿಪಿಆರ್‌ಡಿ) ಈ ಹೊಸ ಕಾನೂನುಗಳಿಗೆ ತರಬೇತಿಯನ್ನು ನೀಡುತ್ತಿದೆ. ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯಗಳು ಸಹ ತರಬೇತಿಯನ್ನು ನೀಡುತ್ತಿವೆ. ನ್ಯಾಯಾಧೀಶರಿಗೂ ನ್ಯಾಯಾಂಗ ಇಲಾಖೆಯಿಂದ ತರಬೇತಿ ನೀಡಲಾಗುತ್ತಿದೆ.

ಇದನ್ನೂ ಓದಿ: Opposition Leader: 10 ವರ್ಷ ಬಳಿಕ ಲೋಕಸಭೆಯಲ್ಲಿ ವಿರೋಧಪಕ್ಷ ನಾಯಕ! ಇವರಿಗೆ ಸಿಗುವ ಸವಲತ್ತುಗಳೇನು?

ಹೊಸ ಕ್ರಿಮಿನಲ್ ಕಾನೂನುಗಳು ಯಾವವು?

ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ (Indian Code), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (Indian Civil Protection Code) ಮತ್ತು ಭಾರತೀಯ ಸಾಕ್ಷಿ ಕಾಯಿದೆಯು (Indian Evidence Act) ಜುಲೈ 1ರಿಂದ ಜಾರಿಗೆ ಬರಲಿವೆ. ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು 1872ರ ಭಾರತೀಯ ಸಾಕ್ಷಿ ಕಾಯಿದೆಗೆ ತಿದ್ದುಪಡಿ ಮಾಡಿ ಭಾರತೀಯ ನ್ಯಾಯ ಸಂಹಿತಾ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷಿ ಕಾಯಿದೆ ಎಂದು ಬದಲಿಸಲಾಗಿದೆ.


ಭಯೋತ್ಪಾದಕರ ಆಸ್ತಿ ಮುಟ್ಟುಗೋಲು

ಭಯೋತ್ಪಾದನೆಯನ್ನು ಮೊದಲ ಬಾರಿಗೆ ಭಾರತೀಯ ನ್ಯಾಯ ಸಂಹಿತೆಯಲ್ಲಿ ಸೆಕ್ಷನ್ 113 (1) ಅಡಿಯಲ್ಲಿ ಶಿಕ್ಷಾರ್ಹ ಅಪರಾಧ ಎಂದು ವ್ಯಾಖ್ಯಾನಿಸಲಾಗಿದೆ. ಭಾರತದಲ್ಲಿ ಅಥವಾ ಯಾವುದೇ ವಿದೇಶದಲ್ಲಿ ಭಾರತದ ಏಕತೆ, ಸಮಗ್ರತೆ ಮತ್ತು ಭದ್ರತೆಗೆ ಧಕ್ಕೆ ತರುವ ಉದ್ದೇಶದಿಂದ ಯಾವುದೇ ಕೃತ್ಯವನ್ನು ಎಸಗುವ ವ್ಯಕ್ತಿಯನ್ನು ಈ ಕಾನೂನಿನಲ್ಲಿ ಭಯೋತ್ಪಾದಕ ಎಂದು ವ್ಯಾಖ್ಯಾನಿಸಲಾಗುತ್ತದೆ. ಸಾಮಾನ್ಯ ಸಾರ್ವಜನಿಕರನ್ನು ಅಥವಾ ಅದರ ಒಂದು ಭಾಗವನ್ನು ಬೆದರಿಸಲು ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ಭಯೋತ್ಪಾದಕರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವೂ ಈ ಕಾನೂನಿನ ಅಡಿಯಲ್ಲಿ ಇದೆ. ಭಯೋತ್ಪಾದನೆಗೆ ಸಂಬಂಧಿಸಿದ ಕೃತ್ಯಗಳನ್ನು ಮರಣದಂಡನೆ ಅಥವಾ ಪೆರೋಲ್ ಇಲ್ಲದೆ ಜೀವಾವಧಿ ಶಿಕ್ಷೆಗೆ ಒಳಪಡಿಸಲಾಗಿದೆ. ‘ಆಸ್ತಿಗೆ ಹಾನಿ, ಅಥವಾ ಕರೆನ್ಸಿಯ ತಯಾರಿಕೆ ಅಥವಾ ಕಳ್ಳಸಾಗಣೆಯನ್ನು ಇದು ಒಳಗೊಂಡಿದೆ.

ದೇಶದ್ರೋಹ ಎಂಬುದು ರದ್ದು

ಭಾರತೀಯ ದಂಡ ಸಂಹಿತೆ1860ರ ದೇಶದ್ರೋಹದ ನಿಬಂಧನೆಗಳನ್ನು ರದ್ದುಗೊಳಿಸಲಾಗಿದೆ. ಇದನ್ನು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 152ಕ್ಕೆ ಬದಲಾಯಿಸಲಾಗಿದೆ. ರಾಷ್ಟ್ರದ ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಕಾರ್ಯಗಳ ಮೇಲೆ ಕೇಂದ್ರೀಕರಿಸುವ ವಿಭಾಗಗಳನ್ನು ಪರಿಚಯಿಸಲಾಗಿದೆ.

ಅತ್ಯಾಚಾರ ಮಾಡಿದರೆ ಮರಣ ದಂಡನೆ

ಭಾರತೀಯ ನ್ಯಾಯ ಸಂಹಿತೆ ಲೈಂಗಿಕ ಅಪರಾಧಗಳನ್ನು ಪರಿಹರಿಸಲು ‘ಮಹಿಳೆ ಮತ್ತು ಮಕ್ಕಳ ವಿರುದ್ಧದ ಅಪರಾಧಗಳು’ ಎಂಬ ಅಧ್ಯಾಯವನ್ನು ಪರಿಚಯಿಸಿದೆ. ಇದಲ್ಲದೆ, ಸಂಹಿತೆ 18 ವರ್ಷದೊಳಗಿನ ಬಾಲಕಿಯರ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಗಳಿಗೆ ಮಾರ್ಪಾಡುಗಳನ್ನು ಶಿಫಾರಸು ಮಾಡುತ್ತಿದೆ.

ಅಪ್ರಾಪ್ತ ವಯಸ್ಸಿನ ಮಹಿಳೆಯ ಸಾಮೂಹಿಕ ಅತ್ಯಾಚಾರಕ್ಕೆ ಸಂಬಂಧಿಸಿದ ನಿಬಂಧನೆಯನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯಿದೆ (ಪೋಕ್ಸೊ)ಗೆ ಅನುಗುಣವಾಗಿ ಮಾಡಲಾಗಿದೆ. 18 ವರ್ಷದೊಳಗಿನ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆಗೆ ಅವಕಾಶ ಕಲ್ಪಿಸಲಾಗಿದೆ.

ಅತ್ಯಾಚಾರ ಎಸಗುವವರಿಗೆ ಕಾನೂನಿನ ಪ್ರಕಾರ 10 ವರ್ಷಗಳಿಗಿಂತ ಕಡಿಮೆಯಿಲ್ಲದ ಕಠಿಣ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ. ಆದರೆ ಇದು ಜೀವಾವಧಿಯವರೆಗೆ ಜೈಲು ಶಿಕ್ಷೆಗೆ ವಿಸ್ತರಿಸಬಹುದು ಮತ್ತು ದಂಡಕ್ಕೆ ಸಹ ಹೊಣೆಗಾರರಾಗಬೇಕಾಗುತ್ತದೆ.

ಸಾಮೂಹಿಕ ಅತ್ಯಾಚಾರಕ್ಕೆ 20 ವರ್ಷಗಳ ಜೈಲು ಶಿಕ್ಷೆ ಅಥವಾ ಜೀವಾವಧಿ ಶಿಕ್ಷೆಗೆ ಅವಕಾಶವಿದೆ. ಇದಲ್ಲದೆ ಮದುವೆ, ಉದ್ಯೋಗ, ಬಡ್ತಿಯ ನೆಪದಲ್ಲಿ ಅಥವಾ ಯಾವುದೇ ಆಮಿಷದ ಮೂಲಕ ಮಹಿಳೆಯರ ಲೈಂಗಿಕ ಶೋಷಣೆಯನ್ನು ಅಪರಾಧವೆಂದು ಪರಿಗಣಿಸಲಾಗುತ್ತದೆ.

ಮೊದಲ ಬಾರಿಗೆ ಸಂಘಟಿತ ಅಪರಾಧದ ವ್ಯಾಖ್ಯಾನ

ಸಂಘಟಿತ ಅಪರಾಧಕ್ಕೆ ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸಲಾಗಿದೆ ಮತ್ತು ಭಾರತೀಯ ನ್ಯಾಯ ಸಂಹಿತಾ 111 (1) ಅಡಿಯಲ್ಲಿ ಪದವನ್ನು ಮೊದಲ ಬಾರಿಗೆ ವ್ಯಾಖ್ಯಾನಿಸಲಾಗಿದೆ. ಈ ವ್ಯಾಖ್ಯಾನವು ಸಶಸ್ತ್ರ ದಂಗೆ, ವಿಧ್ವಂಸಕ ಕಾರ್ಯಾಚರಣೆಗಳು, ಪ್ರತ್ಯೇಕತಾವಾದಿ ಚಟುವಟಿಕೆಗಳು ಮತ್ತು ಭಾರತದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಧಕ್ಕೆ ತರುವ ಯಾವುದೇ ಕೃತ್ಯವನ್ನು ಒಳಗೊಂಡಿದೆ. ಶಿಕ್ಷೆಯು ವಿವಿಧ ಅಪರಾಧಗಳಿಗೆ ಮರಣದಂಡನೆ, ಜೀವಾವಧಿ ಶಿಕ್ಷೆ, ದಂಡ ಅಥವಾ ಏಳು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ಒಳಗೊಂಡಿರುತ್ತದೆ.

ಗುಂಪು ಹತ್ಯೆಗೆ ಶಿಕ್ಷೆಯ ಹೆಚ್ಚಳ

ಮೊದಲ ಬಾರಿಗೆ ಮೂಲ ಮಸೂದೆಯು ಗುಂಪು ಹತ್ಯೆ ಮತ್ತು ದ್ವೇಷದ ಅಪರಾಧಗಳನ್ನು ಪ್ರತ್ಯೇಕ ರೀತಿಯ ಕೊಲೆಗಳೆಂದು ವರ್ಗೀಕರಿಸಿದೆ. ಈ ಕಾಯಿದೆಯು ಗುಂಪು ಹತ್ಯೆಯಂತಹ ಅಪರಾಧಗಳಿಗೆ ಗರಿಷ್ಠ ಮರಣದಂಡನೆಯನ್ನು ನೀಡಲು ಬಯಸುತ್ತದೆ.

ದೇಶ ವಿರೋಧಿ ಕೃತ್ಯಗಳಿಗೆ ಜೀವಾವಧಿ ಶಿಕ್ಷೆ

“ಸಶಸ್ತ್ರ ದಂಗೆ ಅಥವಾ ವಿಧ್ವಂಸಕ ಚಟುವಟಿಕೆಗಳಿಗೆ” ಸಂಬಂಧಿಸಿದ ಕೃತ್ಯಗಳ ಸಂದರ್ಭದಲ್ಲಿ ಕಾನೂನುಗಳು ಕಠಿಣ ಶಿಕ್ಷೆಯನ್ನು ಒದಗಿಸುತ್ತವೆ.

ಯಾರಾದರೂ ಉದ್ದೇಶಪೂರ್ವಕವಾಗಿ ಪದಗಳಲ್ಲಿ ಮಾತನಾಡುವ ಅಥವಾ ಬರೆಯುವ ಅಥವಾ ಚಿಹ್ನೆಗಳ ಮೂಲಕ, ಅಥವಾ ಗೋಚರ ಪ್ರಾತಿನಿಧ್ಯದಿಂದ, ಅಥವಾ ವಿದ್ಯುನ್ಮಾನ ಸಂವಹನದ ಮೂಲಕ ಅಥವಾ ಹಣಕಾಸಿನ ಅರ್ಥದ ಬಳಕೆಯಿಂದ ಅಥವಾ ಬೇರೆ ಬೇರೆ ಅಥವಾ ಸಶಸ್ತ್ರ ದಂಗೆ ಅಥವಾ ವಿಧ್ವಂಸಕವನ್ನು ಪ್ರಚೋದಿಸಲು ಪ್ರಯತ್ನಿಸಿದರೆ ಕಠಿಣ ಶಿಕ್ಷೆ ಕಾದಿದೆ. ಅಕ್ರಮ ಚಟುವಟಿಕೆಗಳು, ಅಥವಾ ಪ್ರತ್ಯೇಕತಾವಾದಿ ಚಟುವಟಿಕೆಗಳ ಭಾವನೆಗಳನ್ನು ಪ್ರೋತ್ಸಾಹಿಸುವುದು ಅಥವಾ ಭಾರತದ ಸಾರ್ವಭೌಮತ್ವ ಅಥವಾ ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟು ಮಾಡುತ್ತದೆ ಅಥವಾ ಅಂತಹ ಯಾವುದೇ ಕೃತ್ಯದಲ್ಲಿ ತೊಡಗಿದರೆ ಅಥವಾ ಎಸಗಿದರೆ ಜೀವಾವಧಿ ಶಿಕ್ಷೆ ಅಥವಾ ಏಳು ವರ್ಷಗಳವರೆಗೆ ವಿಸ್ತರಿಸಬಹುದಾದ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ ಮತ್ತು ದಂಡಕ್ಕೆ ಗುರಿಯಾಗಬಹುದು.

ತ್ವರಿತ ವಿಚಾರಣೆ ಮತ್ತು ನ್ಯಾಯ

ಹೊಸ ಕಾನೂನುಗಳ ಪ್ರಕಾರ 90 ದಿನಗಳಲ್ಲಿ ಆರೋಪಪಟ್ಟಿ ಸಲ್ಲಿಸಬೇಕಾಗುತ್ತದೆ ಮತ್ತು ಪರಿಸ್ಥಿತಿಯನ್ನು ನೋಡಿ ನ್ಯಾಯಾಲಯವು ಇನ್ನೂ 90 ದಿನಗಳವರೆಗೆ ಅನುಮತಿ ನೀಡಬಹುದು. ತನಿಖೆಯನ್ನು 180 ದಿನಗಳಲ್ಲಿ ಮುಗಿಸಿ ವಿಚಾರಣೆಗೆ ಕಳುಹಿಸಬೇಕು.

ಇದಲ್ಲದೆ, ಪೊಲೀಸರು 90 ದಿನಗಳಲ್ಲಿ ಪ್ರಕರಣದ ಸ್ಥಿತಿಯನ್ನು ಅಪ್‌ಡೇಟ್‌ ಮಾಡಬೇಕಾಗುತ್ತದೆ. ವಿಚಾರಣೆಯ ಅನಂತರ 30 ದಿನಗಳಲ್ಲಿ ತೀರ್ಪು ನೀಡಬೇಕಾಗುತ್ತದೆ. ಒಂದು ವಾರದೊಳಗೆ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಬೇಕು.
ಮೂರು ವರ್ಷಕ್ಕಿಂತ ಕಡಿಮೆ ಜೈಲು ಶಿಕ್ಷೆಗೆ ಒಳಪಡುವ ಪ್ರಕರಣಗಳಿಗೆ ಸಾಮಾನ್ಯ ವಿಚಾರಣೆ ಸಾಕಾಗುತ್ತದೆ. ಇದರಿಂದ ಸೆಷನ್ ಕೋರ್ಟ್‌ಗಳಲ್ಲಿನ ಪ್ರಕರಣಗಳು ಶೇ. 40ರಷ್ಟು ಕಡಿಮೆಯಾಗಲಿವೆ. ಶೂನ್ಯ ಎಫ್‌ಐಆರ್ ದಾಖಲಿಸುವ ಪದ್ಧತಿಯನ್ನು ಸಾಂಸ್ಥಿಕಗೊಳಿಸಲಾಗಿದೆ. ಎಲ್ಲೇ ಘಟನೆ ನಡೆದರೂ ಎಲ್ಲಿ ಬೇಕಾದರೂ ಎಫ್‌ಐಆರ್‌ ದಾಖಲಿಸಬಹುದು.

ಸಂತ್ರಸ್ತರ ಮಾಹಿತಿ ಹಕ್ಕನ್ನು ಬಲಪಡಿಸಲಾಗಿದೆ. ಎಫ್‌ಐಆರ್‌ನ ಉಚಿತ ಪ್ರತಿಯನ್ನು ಪಡೆಯುವ ಹಕ್ಕು ಬಲಿಪಶುವಿಗೆ ಇದೆ. 90 ದಿನಗಳಲ್ಲಿ ತನಿಖೆಯ ಸ್ಥಿತಿಯನ್ನು ಸಂತ್ರಸ್ತರಿಗೆ ತಿಳಿಸಲು ಅವಕಾಶವಿದೆ. ಹೊಸ ಸಂಹಿತೆಯು ಕ್ರಿಮಿನಲ್ ಪ್ರಕರಣಗಳಲ್ಲಿ ತ್ವರಿತ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸುತ್ತದೆ.

ಇತರ ನಿಬಂಧನೆಗಳು

ಹೊಸ ಕಾನೂನಿನ ಪ್ರಕಾರ ‘ಆರ್ಥಿಕ ಅಪರಾಧಗಳನ್ನು’ ಹೊರತುಪಡಿಸಿ ಘೋರ ಅಪರಾಧಿಗಳಿಗೆ ಮಾತ್ರ ಕೈಕೋಳವನ್ನು ಬಳಸಲಾಗುವುದು. ಅಂಗವೈಕಲ್ಯ ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ಕಾರಣವಾಗುವ ಅಪರಾಧ ಕಾರ್ಯಗಳಿಗೆ ಕಠಿಣ ದಂಡವನ್ನು ಪರಿಚಯಿಸಲಾಗಿದೆ.

ಶಿಕ್ಷೆ ಮನ್ನಾಗೊಳಿಸಲು ಕಾನೂನುಗಳಲ್ಲಿ ಹೊಸ ನಿಬಂಧನೆಯನ್ನು ಮಾಡಲಾಗಿದೆ. ಮರಣದಂಡನೆಗಳನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಬಹುದು. ಏಳು ವರ್ಷಗಳ ಒಳಗಿನ ಸೆರೆವಾಸ ಮತ್ತು ಜೀವಾವಧಿ ಶಿಕ್ಷೆಯನ್ನು ಮಾತ್ರ ಕ್ಷಮಿಸಬಹುದು.

Continue Reading
Advertisement
Priyanka Chopra
ಸಿನಿಮಾ4 mins ago

Priyanka Chopra: ಬೆಳ್ಳುಳ್ಳಿ ಎಸಳು ಪಾದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ? ನಟಿ ಪ್ರಿಯಾಂಕಾ ಚೋಪ್ರಾ ಹೇಳಿದ್ದೇನು?

Electric Shock
ಬಾಗಲಕೋಟೆ5 mins ago

Electric shock : ಬೋರ್‌ವೆಲ್‌ ಆನ್‌ ಮಾಡುತ್ತಿದ್ದಂತೆ ಕರೆಂಟ್‌ ಶಾಕ್‌; ಹಾರಿ ಬಿದ್ದ ರೈತ ಸ್ಪಾಟ್‌ ಡೆತ್‌

Actor Darshan fans starts sticker trend mobile cover 6106
ಸ್ಯಾಂಡಲ್ ವುಡ್32 mins ago

Actor Darshan: ‘ಕೈದಿ ನಂ. 6106…ನಮ್ದೇ ದರ್ಬಾರುʼ ಅಂದ್ರು ಫ್ಯಾನ್ಸ್‌; ಮೊಬೈಲ್ ಕವರ್, ಆಟೋ, ಬೈಕ್‌ಗಳಲ್ಲಿ ಸ್ಟಿಕ್ಟರ್ ಟ್ರೆಂಡ್!

Valmiki Corporation Scam
ಕ್ರೈಂ35 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

Virat Kohli
ಕ್ರಿಕೆಟ್42 mins ago

Virat Kohli: ಕೊಹ್ಲಿ ಕ್ಲಾಸ್ ಪ್ಲೇಯರ್, ಫೈನಲ್​ನಲ್ಲಿ ಆಡುತ್ತಾರೆ ಎಂದು ಬೆಂಬಲ ಸೂಚಿಸಿದ ನಾಯಕ ರೋಹಿತ್​

karnataka Rain
ಮಳೆ43 mins ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Viral Video
Latest44 mins ago

Viral Video: ನಡುರಸ್ತೆಯಲ್ಲಿ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಬಲವಂತವಾಗಿ ಮದುವೆಯಾದ ಯುವಕ!

Viral Video
Latest47 mins ago

Viral Video: ನೋಡುಗರ ಕಣ್ಮನ ಸೆಳೆಯುತ್ತಿದೆ ಅನಂತ್‌ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ ಆಮಂತ್ರಣ ಪತ್ರಿಕೆ

Actor Darshan support by singer dr shamitha malnad
ಸ್ಯಾಂಡಲ್ ವುಡ್1 hour ago

Actor Darshan: ಆರಡಿ ದೇಹವ ಮೂರಡಿ ಬಗ್ಗಿಸಿ ನಮ್ಮೊಂದಿಗೆ ವಿನಯದಿ ಮಾತನಾಡಿದ ದರ್ಶನ್‌ ಅಣ್ಣ ಎಂದ ಖ್ಯಾತ ಗಾಯಕಿ!

airtel price hike
ಪ್ರಮುಖ ಸುದ್ದಿ1 hour ago

Airtel Price Hike: ಜಿಯೋ ನಂತರ ಏರ್‌ಟೆಲ್‌ ಡೇಟಾ ಬಳಕೆದಾರರ ಜೇಬಿಗೂ ಕತ್ತರಿ; 21% ದರ ಏರಿಕೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ43 mins ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ17 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು20 hours ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ7 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌