Steve Smith | ಆಸ್ಟ್ರೇಲಿಯಾದ ಕ್ರಿಕೆಟಿಗ ಸ್ಟೀವ್​ ಸ್ಮಿತ್​ ಟೋಪಿಯನ್ನೇ ಕತ್ತರಿಸಿ ಹಾಕಿದ ಇಲಿ! - Vistara News

ಕ್ರಿಕೆಟ್

Steve Smith | ಆಸ್ಟ್ರೇಲಿಯಾದ ಕ್ರಿಕೆಟಿಗ ಸ್ಟೀವ್​ ಸ್ಮಿತ್​ ಟೋಪಿಯನ್ನೇ ಕತ್ತರಿಸಿ ಹಾಕಿದ ಇಲಿ!

ಸ್ಟೀವ್​ ಸ್ಮಿತ್ (Steve Smith) ಆಸ್ಟ್ರೇಲಿಯಾ ಪ್ರವಾಸ ಹೋಗಿದ್ದ ವೇಳೆ ಡ್ರೆಸಿಂಗ್​ ರೂಮ್​ಗೆ ನುಗ್ಗಿದ್ದ ಇಲಿ ಟೋಪಿಯನ್ನು ಹಾಳು ಮಾಡಿತ್ತು.

VISTARANEWS.COM


on

steve smith
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಡಿಲೇಡ್​ : ವೆಸ್ಟ್​ ಇಂಡೀಸ್​ ವಿರುದ್ಧದ ಟೆಸ್ಟ್​ ಸರಣಿಯ ವೇಳೆ ತಂಡದ ನೇತೃತ್ವ ವಹಿಸಿದ್ದ ಸ್ಟೀವ್​ ಸ್ಮಿತ್ (Steve Smith) ಅವರು ಹರಿದ ಟೋಪಿ ಧರಿಸಿಕೊಂಡು ಮೈದಾನಕ್ಕೆ ಬಂದ ವಿಷಯ ಚರ್ಚೆಗೆ ಕಾರಣವಾಗಿತ್ತು. ಆದರೆ, ತಮ್ಮ ಪರಿಸ್ಥಿತಿಗೆ ಇಲಿಯೇ ಕಾರಣ ಎಂಬುದಾಗಿ ಅವರು ಹೇಳಿಕೊಂಡಿದ್ದಾರೆ.

ಕಾಯಂ ನಾಯಕ ಪ್ಯಾಟ್​ ಕಮಿನ್ಸ್ ಗಾಯಗೊಂಡ ಹಿನ್ನೆಲೆಯಲ್ಲಿ ಸ್ಮಿತ್ ಎರಡನೇ ಟೆಸ್ಟ್​ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿದ್ದರು. ಈ ವೇಳೆ ಅವರ ಬ್ಯಾಗಿ ಗ್ರೀನ್​ ಟೋಪಿ ಹರಿದು ಹೋಗಿತ್ತು. ಬ್ಯಾಗಿ ಗ್ರೀನ್​ ಟೋಫಿ ಆಸ್ಟ್ರೇಲಿಯಾ ಕ್ರಿಕೆಟಿಗರಿಗೆ ಲಭಿಸುವ ಅತ್ಯಂತ ದೊಡ್ಡ ಗೌರವ ಎಂದು ಹೇಳಲಾಗುತ್ತದೆ. ಅದಕ್ಕೆ ಸ್ಮಿತ್​ ಅಗೌರವ ತೋರಿದ್ದಾರೆ ಎಂದು ಆರೋಪ ಮಾಡಲಾಗಿತ್ತು.

ಇದರಲ್ಲಿ ನಮ್ಮದೇನೂ ತಪ್ಪು ಇಲ್ಲ ಎಂಬುದಾಗಿ ಸ್ಟೀವ್​ ಸ್ಮಿತ್​ ಹೇಳಿದ್ದಾರೆ. ಶ್ರೀಲಂಕಾ ಪ್ರವಾಸದಲ್ಲಿರುವಾಗ ಡ್ರೆಸಿಂಗ್​ ರೂಮ್​ನಲ್ಲಿ ಕ್ಯಾಪ್​ ಬಿಟ್ಟು ಹೋಗಿದ್ದೆ. ಇಲಿ ಅದನ್ನು ಕಡಿದು ಹಾಕಿತ್ತು. ಈ ರೀತಿಯಾಗಿ ಅದು ಹಾಳಾಗಿದೆ ಎಂಬುದಾಗಿ ಸ್ವೀಟ್​ ಸ್ಮಿತ್ ಹೇಳಿದ್ದಾರೆ.

ಆಸ್ಟ್ರೇಲಿಯಾ ತಂಡ ಪ್ರವಾಸ ವಿದೇಶಕ್ಕೆ ಪ್ರವಾಸ ಹೋಗುವ ಹೊಸ ಬ್ಯಾಗಿ ಕ್ಯಾಪ್ ಅನ್ನು ಕ್ರಿಕೆಟ್​ ಆಸ್ಟ್ರೇಲಿಯಾ ನೀಡುತ್ತದೆ. ಮುಂದಿನ ಪ್ರವಾಸ ತನಕ ಅದನ್ನು ಉಳಿಸಿಕೊಳ್ಳಬೇಕಾಗುತ್ತದೆ.

ಇದನ್ನೂ ಓದಿ| 18 ತಿಂಗಳ ಬಳಿಕ ಶತಕ ಬಾರಿಸಿದ ಸ್ಟೀವ್‌ ಸ್ಮಿತ್‌, ಕೊಹ್ಲಿ ಶತಕ ಎಂದು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನವೇ ತವರಿಗೆ ಮರಳಲು ಸಿದ್ಧರಾದ ಟೀಮ್​ ಇಂಡಿಯಾದ ಇಬ್ಬರು ಆಟಗಾರರು​

T20 World Cup 2024: ಭಾರತವು ಅಮೆರಿಕದಲ್ಲಿ ಇನ್ನೂ ಒಂದು ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಶುಭಮನ್​ ಗಿಲ್(Shubman Gill)​ ಮತ್ತು ಅವೇಶ್​ ಖಾನ್(Avesh Khan)​ ತವರಿಗೆ ಮರಳಲಿದ್ದಾರೆ ಎಂದು ಕ್ರಿಕ್‌ಬಜ್‌ ವರದಿ ಮಾಡಿದೆ. ಜೂನ್​ 15ರಂದು ಉಭಯ ಆಟಗಾರರು ಭಾರತಕ್ಕೆ ವಾಪಸ್‌ ಆಗಲಿದ್ದಾರೆ ಎಂದು ತಿಳಿಸಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್: ಭಾರತ ಕ್ರಿಕೆಟ್ ತಂಡವು ಈಗಾಗಲೇ 2024 ರ ಟಿ20 ವಿಶ್ವಕಪ್‌(T20 World Cup 2024) ಟೂರ್ನಿಯಲ್ಲಿ ಸೂಪರ್ 8 ಹಂತಕೇರಿದೆ. ಸೂಪರ್ 8 ಮತ್ತು ನಾಕೌಟ್ ಹಂತಕ್ಕಾಗಿ ವೆಸ್ಟ್ ಇಂಡೀಸ್‌ಗೆ ತೆರಳುವ ಮೊದಲು ಭಾರತವು ಅಮೆರಿಕದಲ್ಲಿ ಇನ್ನೂ ಒಂದು ಪಂದ್ಯವನ್ನು ಆಡಲಿದೆ. ಆದರೆ ಈ ಪಂದ್ಯಕ್ಕೂ ಮುನ್ನವೇ ಶುಭಮನ್​ ಗಿಲ್(Shubman Gill)​ ಮತ್ತು ಅವೇಶ್​ ಖಾನ್(Avesh Khan)​ ತವರಿಗೆ ಮರಳಲಿದ್ದಾರೆ ಎಂದು ಕ್ರಿಕ್‌ಬಜ್‌ ವರದಿ ಮಾಡಿದೆ. ಜೂನ್​ 15ರಂದು ಉಭಯ ಆಟಗಾರರು ಭಾರತಕ್ಕೆ ವಾಪಸ್‌ ಆಗಲಿದ್ದಾರೆ ಎಂದು ತಿಳಿಸಿದೆ.

ಶುಭಮನ್ ಗಿಲ್ ಮತ್ತು ಅವೇಶ್ ಖಾನ್ ತಂಡದಲ್ಲಿ ಪ್ರಯಾಣ ಮೀಸಲು ಭಾಗವಾಗಿ ಸ್ಥಾನ ಪಡೆದಿದ್ದರು. ಇವರ ಜತೆ ಸ್ಥಾನ ಪಡೆದಿದ್ದ ರಿಂಕು ಸಿಂಗ್(Rinku Singh) ಮತ್ತು ಖಲೀಲ್ ಅಹ್ಮದ್(Khaleel Ahmed) ತಂಡದ ಜತೆಗೆ ಇರಲಿದ್ದಾರೆ ಎನ್ನಲಾಗಿದೆ. ಗಿಲ್​ ಮತ್ತು ಅವೇಶ್​ ತವರಿಗೆ ಮರಳಲು ಸಿದ್ಧರಾಗಿದ್ದಾರೆ ಎಂದು ತಿಳಿದುಬಂದಿದೆ. ಉಭಯ ಆಟಗಾರರು ತಂಡದೊಂದಿಗೆ ಇದ್ದರೂ ಕೂಡ ಇವರಿಗೆ ಆಡುವ ಅವಕಾಶವಿಲ್ಲ. ಏಕೆಂದರೆ ಇವರು ಪ್ರಧಾನ 15 ಸದಸ್ಯರ ತಂಡದಲ್ಲಿ ಅವಕಾಶ ಪಡೆದಿಲ್ಲ.

ಭಾರತ ತನ್ನ ಕೊನೆಯ ಲೀಗ್​ ಪಂದ್ಯವನ್ನು ಜೂನ್​ 15ರಂದು ಕೆನಡಾ ವಿರುದ್ಧ ಆಡಲಿದೆ. ಆದರೆ ಈ ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿದೆ. ಈ ಪಂದ್ಯಕ್ಕೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಪಂದ್ಯ ರದ್ದಾದರೂ ಕೂಡ ಭಾರತಕ್ಕೆ ಯಾವುದೇ ನಷ್ಟ ಸಂಭವಿಸದು. ಏಕೆಂದರೆ ಭಾರತ ಈಗಾಗಲೇ ಸೂಪರ್​-8 ಪ್ರವೇಶ ಪಡೆದಾಗಿದೆ. ಹೀಗಾಗಿ ಈ ಪಂದ್ಯ ಭಾರತದ ಪಾಲಿಗೆ ಔಪಚಾರಿಕ ಪಂದ್ಯವಿದ್ದಂತೆ.

ಇದನ್ನೂ ಓದಿ PNG vs AFG: ಆಫ್ಘಾನ್​ಗೆ ಗೆಲುವು; ಟಿ20 ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್​

ನ್ಯೂಯಾರ್ಕ್‌ ಪಿಚ್‌ನಲ್ಲಿ ಆಡುವುದು ಸುಲಭವಲ್ಲ: ರೋಹಿತ್​


ಸತತ ಮೂರು ಗೆಲುವು ಸಾಧಿಸಿ ಸೂಪರ್​-8 ಪ್ರವೇಶ ಪಡೆದಿದ್ದರೂ ಕೂಡ ಟೀಮ್​ ಇಂಡಿಯಾದ(Team India) ನಾಯಕ ರೋಹಿತ್​ ಶರ್ಮ(Rohit Sharma) ಅವರು ನ್ಯೂಯಾರ್ಕ್​ನಲ್ಲಿ ಆಡಿದ್ದು ನಿಜಕ್ಕೂ ಸವಾಲಿನಿಂದ ಕೂಡಿತ್ತು ಎಂದು ಹೇಳಿದ್ದಾರೆ.

‘ನಾವು ಮೂರು ಪಂದ್ಯಗಳನ್ನು ಗೆದ್ದಿರಬಹುದು. ಆದರೆ, ಈ ಪಂದ್ಯ ಗೆಲ್ಲಲು ನಾವು ಪಟ್ಟ ಕಷ್ಟ ನಮ್ಮ ತಂಡದ ಆಟಗಾರರಿಗೆ ಮಾತ್ರ ಗೊತ್ತು. ಇಲ್ಲಿ ಯಾವ ತಂಡ ಗೆಲ್ಲಬಹುದು ಎನ್ನುವುದನ್ನು ಊಹಿಸಲು ಕೂಡ ಅಸಾಧ್ಯ. ನಮ್ಮ ತಂಡದ ಗೆಲುವು ಅಷ್ಟು ಸುಲಭವಾಗಿರಲಿಲ್ಲ” ಎಂದು ಹೇಳಿದ್ದಾರೆ.

ರೋಹಿತ್​ ಅವರು ಈ ಹಿಂದೆಯೇ ನಸೌ ಪಿಚ್​ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಈ ಪಿಚ್​ ಮತ್ತು ಮೈದಾನ ಕ್ರಿಕೆಟ್​ ಆಡಲು ಸೂಕ್ತವಾಗಿಲ್ಲ. ಆಟಗಾರರು ಗಾಯಗೊಳ್ಳುವ ಸಾಧ್ಯತೆ ಅಧಿಕವಾಗಿದೆ ಎಂದು ಹೇಳಿದ್ದರು. ಭಾರತ ಸೂಪರ್​-8 ಹಂತದಲ್ಲಿ ಭಾರತಕ್ಕೆ ಮೊದಲ ಪಂದ್ಯದಲ್ಲಿ ಆಸ್ಟ್ರೇಯಾ ತಂಡದ ಸವಾಲು ಎದುರಾಗುವ ಸಾಧ್ಯತೆ ಇದೆ.

Continue Reading

ಕ್ರೀಡೆ

PNG vs AFG: ಆಫ್ಘಾನ್​ಗೆ ಗೆಲುವು; ಟಿ20 ವಿಶ್ವಕಪ್​ನಿಂದ ಹೊರಬಿದ್ದ ನ್ಯೂಜಿಲ್ಯಾಂಡ್​

PNG vs AFG: ಅಫಘಾನಿಸ್ತಾನ(PNG vs AFG) ತಂಡ ಪಪುವಾ ನ್ಯೂ ಗಿನಿಯಾ ವಿರುದ್ಧ 7 ವಿಕೆಟ್​ ಅಂತರದ ಗೆಲುವು ಸಾಧಿಸುವ ಮೂಲಕ ಸೂಪರ್​-8 ಹಂತಕ್ಕೆ ಪ್ರವೇಶ ಪಡೆದಿದೆ. ಅಫಘಾನಿಸ್ತಾನ ಗೆಲುವಿನಿಂದ ನ್ಯೂಜಿಲ್ಯಾಂಡ್(New Zealand)​ ತಂಡ ಟೂರ್ನಿಯಿಂದ ಹೊರಬಿದ್ದ ಸಂಕಟಕ್ಕೆ ಸಿಲುಕಿದೆ.

VISTARANEWS.COM


on

PNG vs AFG
Koo

ಟ್ರಿನಿಡಾಡ್‌: ಶುಕ್ರವಾರ ನಡೆದ ಟಿ20 ವಿಶ್ವಕಪ್​ನ ‘ಸಿ’ ವಿಭಾಗದ ಪಂದ್ಯದಲ್ಲಿ ಅಫಘಾನಿಸ್ತಾನ(PNG vs AFG) ತಂಡ ಪಪುವಾ ನ್ಯೂ ಗಿನಿಯಾ ವಿರುದ್ಧ 7 ವಿಕೆಟ್​ ಅಂತರದ ಗೆಲುವು ಸಾಧಿಸುವ ಮೂಲಕ ಸೂಪರ್​-8 ಹಂತಕ್ಕೆ ಪ್ರವೇಶ ಪಡೆದಿದೆ. ಅಫಘಾನಿಸ್ತಾನ ಗೆಲುವಿನಿಂದ ನ್ಯೂಜಿಲ್ಯಾಂಡ್(New Zealand)​ ತಂಡ ಟೂರ್ನಿಯಿಂದ ಹೊರಬಿದ್ದ ಸಂಕಟಕ್ಕೆ ಸಿಲುಕಿದೆ.

ಇಲ್ಲಿನ ಟರೂಬದಲ್ಲಿರುವ ಬ್ರಿಯಾನ್‌ ಲಾರಾ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್​ ನಡೆಸಿದ ಪಪುವಾ ನ್ಯೂ ಗಿನಿಯಾ ತಂಡ ಫಜಲ್ಹಕ್ ಫಾರೂಕಿ ಮತ್ತು ನವೀನ್​ ಉಲ್​ ಹಕ್​ ಅವರ ಘಾತಕ ದಾಳಿಗೆ ನಲುಗಿ 95 ರನ್​ಗೆ ಸರ್ವಪತನ ಕಂಡಿತು. ಈ ಅಲ್ಪ ಮೊತ್ತವನ್ನು ಬೆನ್ನಟ್ಟಿದ ಅಫಘಾನಿಸ್ತಾನ 15.1 ಓವರ್​ಗಳಲ್ಲಿ ಕೇವಲ 3 ವಿಕೆಟ್​ ಕಳೆದುಕೊಂಡು 101 ರನ್​ ಬಾರಿಸಿ ಗೆಲುವು ದಾಖಲಿಸಿತು. ಅತ್ತ ಏಕದಿನ ಸೇರಿದಂತೆ ಕಳೆದ ಆರೂ ವಿಶ್ವಕಪ್‌ ಪಂದ್ಯಾವಳಿಗಳಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದ ನ್ಯೂಜಿಲ್ಯಾಂಡ್‌ ಈ ಬಾರಿ ಲೀಗ್​ನಿಂದಲೇ ಹೊರಬಿದ್ದ ಅವಮಾನಕ್ಕೆ ಸಿಲುಕಿತು.

ಚೇಸಿಂಗ್​ ವೇಳೆ ಆಫ್ಘಾನ್ ಕೂಡ ಆರಂಭಿಕ ಆಘಾತ ಎದುರಿಸಿತು. ಆರಂಭಿಕರಾದ ಇಬ್ರಾಹಿಂ ಜದ್ರಾನ್(0) ಮತ್ತು ರಹಮಾನುಲ್ಲಾ ಗುರ್ಬಾಜ್(11) ವಿಕೆಟ್ ಬೇಗನೆ​ ಕಳೆದುಕೊಂಡಿತು. ಆದರೆ, ಮೂರನೇ ಕ್ರಮಾಂಕದಲ್ಲಿ ಆಡಲಿಳಿದ ಗುಲ್ಬದಿನ್ ನೈಬ್​ ಅಜೇಯ 49 ರನ್​ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಕೇವಲ ಒಂದು ರನ್​ ಹಿನ್ನಡೆಯಲ್ಲಿ ಅರ್ಧಶತಕ ಬಾರಿಸುವ ಅವಕಾಶ ಕಳೆದುಕೊಂಡರು.

ಇದನ್ನೂ ಓದಿ T20 World Cup : ಒಮನ್ ವಿರುದ್ಧ 8 ವಿಕೆಟ್​ ಜಯ ಗಳಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್​

ಇದಕ್ಕೂ ಮುನ್ನ ಬ್ಯಾಟಿಂಗ್​ ನಡೆಸಿದ ಪಪುವಾ ನ್ಯೂ ಗಿನಿಯಾ ಪರ ಕಿಪ್ಲಿನ್ ಡೋರಿಗಾ(27) ಹೊರತು ಪಡಿಸಿ ಉಳಿದೆಲ್ಲರು ನಿರೀಕ್ಷಿತ ಬ್ಯಾಟಿಂಗ್​ ನಡೆಸುವಲ್ಲಿ ವಿಫಲರಾದರು. ಡೋರಿಗಾ ಅವರ ಸಣ್ಣ ಮಟ್ಟಿನ ಬ್ಯಾಟಿಂಗ್​ ಹೋರಾಟದಿಂದ ತಂಡದ ಮೊತ್ತ ಕನಿಷ್ಠ 100 ಸನಿಹಕ್ಕೆ ಬಂದಿತು. ಕಳೆದ 2 ಪಂದ್ಯಗಳಲ್ಲಿ ಘಾತಕ ಬೌಲಿಂಗ್​ ದಾಳಿ ನಡೆಸಿದ್ದ ಫಜಲ್ಹಕ್ ಫಾರೂಕಿ ಅವರ ಘಾತಕ ಬೌಲಿಂಗ್​ ದಾಳಿ ಈ ಪಂದ್ಯದಲ್ಲಿಯೂ ಮುಂದುವರಿಯಿತು. ಈ ಪಂದ್ಯದಲ್ಲಿ 4 ಓವರ್​ ಎಸೆದು ಕೇವಲ 16 ರನ್​ ವೆಚ್ಚದಲ್ಲಿ 3 ವಿಕೆಟ್​ ಕಿತ್ತು ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಉಳಿದಂತೆ ನವೀನ್​ ಉಲ್ ಹಕ್​ 4 ರನ್​ಗೆ 2 ವಿಕೆಟ್​ ಪಡೆದರು.​


ಇಂಗ್ಲೆಂಡ್​ಗೆ ಭರ್ಜರಿ ಗೆಲುವು


ತಡರಾತ್ರಿ ನಡೆದ ಇನ್ನೊಂದು ಪಂದ್ಯದಲ್ಲಿ ಇಂಗ್ಲೆಂಡ್​ ತಂಡದ ಒಮಾನ್​ ವಿರುದ್ಧ ಭರ್ಜರಿ 8 ವಿಕೆಟ್​ಗಳ ಗೆಲುವು ದಾಖಲಿಸಿ ಸೂಪರ್​-8 ಪ್ರವೇಶದ ಆಸೆಯನ್ನು ಜೀವಂತವಿರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಒಮಾನ್​ ಕೇವಲ 47 ರನ್​ಗೆ ಆಲೌಟ್​ ಆಯಿತು. ಈ ಸಣ್ಣ ಮೊತ್ತವನ್ನು ಬೆನ್ನಟ್ಟಿದ ಇಂಗ್ಲೆಂಡ್​ ಕೇವಲ 3.1 ಓವರ್​ಗಳಲ್ಲಿ ಅಂದರೆ 19 ಎಸೆತಗಳಲ್ಲಿ 2 ವಿಕೆಟ್​ಗೆ 50 ರನ್​ ಬಾರಿಸಿ ಗೆಲುವು ತನ್ನದಾಗಿಸಿಕೊಂಡಿತು.

Continue Reading

ಕ್ರೀಡೆ

Nataša Stanković: ವಿಚ್ಛೇದನದ ವದಂತಿಗಳ ನಡುವೆ ಮತ್ತೊಂದು ರಹಸ್ಯ ಪೋಸ್ಟ್​ ಮಾಡಿದ ಹಾರ್ದಿಕ್ ಪಾಂಡ್ಯ ಪತ್ನಿ

Nataša Stanković: ವಿಚ್ಛೇದನದ ಬಗ್ಗೆ ನಡೆಯುತ್ತಿರುವ ವದಂತಿಗಳ ಮಧ್ಯೆ ಪಾಂಡ್ಯ ಅವರ ಪತ್ನಿ ನತಾಶಾ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮಗ ಅಗಸ್ತ್ಯ ಪಾಂಡ್ಯ ಜತೆಗಿನ ಫೋಟೊಗಳನ್ನು ಹಂಚಿಕೊಂಡು “ಕೆಲವು ಸಂತೋಷದ ಕ್ಷಣಗಳು” ಎಂದು ಬರೆದುಕೊಂಡಿದ್ದಾರೆ

VISTARANEWS.COM


on

Nataša Stanković
Koo

ಮುಂಬಯಿ: ಹಾರ್ದಿಕ್​ ಪಾಂಡ್ಯ(Hardik Pandya) ಮತ್ತು ನತಾಸಾ ಸ್ಟಾಂಕೋವಿಕ್(Nataša Stanković) ದಂಪತಿಗಳ ವಿಚ್ಛೇದನದ ಬಗ್ಗೆ ನಡೆಯುತ್ತಿರುವ ವದಂತಿಗಳ ಮಧ್ಯೆ ಪಾಂಡ್ಯ ಅವರ ಪತ್ನಿ ನತಾಶಾ ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಮಗ ಅಗಸ್ತ್ಯ ಪಾಂಡ್ಯ ಜತೆಗಿನ ಫೋಟೊಗಳನ್ನು ಹಂಚಿಕೊಂಡು “ಕೆಲವು ಸಂತೋಷದ ಕ್ಷಣಗಳು” ಎಂದು ಬರೆದುಕೊಂಡಿದ್ದಾರೆ. ಅವರ ಈ ಪೋಸ್ಟ್​ ಮತ್ತೆ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ನತಾಶ ತನ್ನ ಮಗನೊಂದಿಗೆ ಇರುವ ಮತ್ತು ಕಾರಿನಲ್ಲಿ ಪ್ರಯಾಣಿಸುವ ಸೇರಿ ಕೆಲವು ಫೋಟೊಗಳನ್ನು ಹಂಚಿಕೊಂಡಿದ್ದಾರೆ. ಮೊದಲ ಚಿತ್ರದಲ್ಲಿ, ಅಗಸ್ತ್ಯ ಜತೆಗೆ ಹಾಯಾಗಿ ನಿದ್ದೆ ಮಾಡುತ್ತಿರುವ ಫೋಟೊವನ್ನು ಕಾಣಬಹುದು. 2ನೇ ಫೋಟೊದಲ್ಲಿ ಲಿಫ್ಟ್‌ನಲ್ಲಿ ಕನ್ನಡಿ ಮುಂದೆ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿರುವು, ಮತ್ತೊಂದು ಫೋಟೋದಲ್ಲಿ ತಮ್ಮ ಮಗ ಪುಷ್-ಅಪ್ ಮಾಡುತ್ತಿರುವ ವೀಡಿಯೊವನ್ನು ಸಹ ಪೋಸ್ಟ್ ಮಾಡಿದ್ದಾರೆ. ಇದಕ್ಕೆ “ಕೆಲವು ಸಂತೋಷದ ಕ್ಷಣಗಳು” ಎಂದು ಬರೆದಿದ್ದಾರೆ. ಮತ್ತೊಂದೆಡೆ, ಹಾರ್ದಿಕ್ ಪಾಂಡ್ಯ ತಮ್ಮ ಹೊಸ ಹೇರ್​ ಕಟ್ಟಿಂಗ್​ನ ಫೋಟೊವನ್ನು ತಮ್ಮ ಸ್ಟೋರಿಯಲ್ಲಿ ಹಾಕಿದ್ದಾರೆ. ಇವರಿಬ್ಬರ ಪೋಸ್ಟ್​ ನೋಡುವಾಗ ಈ ಜೋಡಿ ಬೇರೆಯಾಗುವುದು ಖಚಿತ ಎಂದು ನೆಟ್ಟಿಗರು ಮತ್ತೆ ಹೇಳತೊಡಗಿದ್ದಾರೆ.

ನತಾಶ ಸ್ಟಾಂಕೋವಿಕ್ ಮತ್ತು ಹಾರ್ದಿಕ್ ಪಾಂಡ್ಯ ವಿಚ್ಛೇದನದ ವದಂತಿಗಳು ಕೆಲವು ದಿನಗಳಿಂದ ಭಾರೀ ಚರ್ಚೆಯಾಗುತ್ತಿದೆ. ಆದರೆ, ದಂಪತಿ ಈ ಬಗ್ಗೆ ಇದುವರೆಗೂ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಕಳೆದ ವಾರ ನತಾಶ ಒಂದು ಬಿಳಿ ಬಣ್ಣದ ಬಟ್ಟೆ ತೊಟ್ಟು ಒಂದು ಕಪ್ ಬ್ಲ್ಯಾಕ್​ ಚಹಾದ ಫೋಟೊವನ್ನು ಸ್ಟೋರಿಯಲ್ಲಿ ಹಾಕಿದ್ದರು.

ಕೆಲವು ದಿನಗಳ ಹಿಂದೆ ವಿಚ್ಛೇದನದ ಸುದ್ದಿಯ ನಡುವೆ, ನತಾಶಾ ಮೊದಲ ಬಾರಿಗೆ ಪಾಪರಾಜಿಗಳ ಕ್ಯಾಮರಾದಲ್ಲಿ ಸೆರೆಯಾಗಿದ್ದರು. ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದರು. ಈ ವೇಳೆ ನತಾಶಗೆ ಪಾಪರಾಜಿಗಳು ಪಾಂಡ್ಯ ಬಗ್ಗೆ ಪ್ರಶ್ನೆ ಕೇಳಲಾಗಿತ್ತು. ಇದಕ್ಕೆ ನತಾಶ ಯಾವುದೇ ಪ್ರತಿಕ್ರಿಯೆ ನೀಡದೆ ತೆರಳಿದ್ದರು. ಇದಾದ ಬಳಿಕ ನತಾಶಾ ಅವರು ಯೇಸುವಿನ ಚಿತ್ರವನ್ನು ಹಂಚಿಕೊಂಡಿದ್ದರು. ಯೇಸು ತನ್ನ ಜಾಡನ್ನು ಹಿಂಬಾಲಿಸಿದಾಗ ಕುರಿಮರಿ ಮುಂದಾಳತ್ವ ವಹಿಸುತ್ತಿರುವ ಫೋಟೊ ಇದಾಗಿತ್ತು. ಈ ಫೋಟೊವನ್ನು ಕಂಡಾಗ ಈ ಜೋಡಿ ಶೀಘ್ರದಲ್ಲೇ ದೂರವಾಗುವುದು ಖಚಿತ ಎನ್ನುವಂತಿತ್ತು. ಅಲ್ಲದೆ ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು ಎಂದು ವರದಿಯಾಗಿತ್ತು. 

ಇದನ್ನೂ ಓದಿ Hardik Pandya: ಕೌಟುಂಬಿಕ ಸಮಸ್ಯೆ ಬದಿಗೊತ್ತಿ ಭಾರತ ತಂಡದ ಯಶಸ್ಸಿಗಾಗಿ ಕ್ರಿಕೆಟ್​ ಅಭ್ಯಾಸ ಆರಂಭಿಸಿದ ಹಾರ್ದಿಕ್​ ಪಾಂಡ್ಯ

ಹಾರ್ದಿಕ್‌ ಮತ್ತು ನತಾಶಾ ಕಳೆದ 2020ರಲ್ಲೇ ರಿಜಿಸ್ಟರ್‌ ರೀತಿಯಲ್ಲಿ ವಿವಾಹವಾಗಿದ್ದರು. ಮದುವೆಗೂ ಮುನ್ನವೇ ನತಾಶಾ ಅವರು ಗರ್ಭಿಣಿ ಆಗಿದ್ದರು. ಈ ಜೋಡಿಗೆ ಒಬ್ಬ ಪುತ್ರನಿದ್ದಾನೆ. ಈತನ ಹೆಸರು ಅಗಸ್ತ್ಯ. ಕಳೆದ ವರ್ಷ ಫೆ.14 ರಂದು ರಾಜಸ್ಥಾನದ ಉದಯ್‌ಪುರದಲ್ಲಿ ಕ್ರಿಷ್ಚಿಯನ್‌ ಸಂಪ್ರದಾಯದಂತೆ ಹಾರ್ದಿಕ್‌ ಮತ್ತು ನತಾಶಾ ಮತ್ತೊಮ್ಮೆ ಅದ್ದೂರಿಯಾಗಿ ಪುನರ್‌ ವಿವಾಹವಾಗಿದ್ದರು. ಕುಟುಂಬಸ್ಥರು ಮತ್ತು ಗೆಳೆಯರ ಸಮ್ಮುಖದಲ್ಲಿ ಮತ್ತೊಮ್ಮೆ ವಿವಾಹವಾಗಿದ್ದರು. ಇವರ ವಿವಾಹ ಸಮಾರಂಭದಲ್ಲಿ ಕೊಹ್ಲಿ-ಅನುಷ್ಕಾ, ರಾಹುಲ್‌-ಅಥಿಯಾ, ರಾಕಿಣಗ್​ ಸ್ಟಾರ್ ಯಶ್​ ಸೇರಿ ಹಲವು ಗಣ್ಯರೂ ಭಾಗಿಯಾಗಿದ್ದರು.

Continue Reading

ಪ್ರಮುಖ ಸುದ್ದಿ

T20 World Cup : ಒಮನ್ ವಿರುದ್ಧ 8 ವಿಕೆಟ್​ ಜಯ ಗಳಿಸಿ ವಿಶ್ವ ದಾಖಲೆ ಬರೆದ ಇಂಗ್ಲೆಂಡ್​

T20 World Cup :ಟಿ20 ವಿಶ್ವಕಪ್​ ಪಂದ್ಯವೊಂದನ್ನು 100 ಅಥವಾ ಅದಕ್ಕಿಂತ ಹೆಚ್ಚು ಎಸೆತಗಳು (101 ಎಸೆತಗಳು) ಬಾಕಿ ಇರುವಾಗಲೇ ಗೆದ್ದ ಮೊದಲ ಟೆಸ್ಟ್ ಆಡುವ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಇಂಗ್ಲೆಂಡ್ ಪಾತ್ರವಾಗಿದೆ. ಜೋಸ್ ಬಟ್ಲರ್ ಮತ್ತು ಫಿಲ್ ಸಾಲ್ಟ್ ಬೇಗನೆ ಪಂದ್ಯವನ್ನು ಮುಗಿಸಲು ನಿರ್ಧರಿಸಿದ ಬಳಿಕ ಇಂಗ್ಲೆಂಡ್ ಕೇವಲ 3.1 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 50 ರನ್ ಗಳಿಸಿ ಜಯ ಶಾಲಿಯಾಯಿತು.

VISTARANEWS.COM


on

T20 World Cup
Koo

ಬೆಂಗಳೂರು: ಟಿ 20 ವಿಶ್ವಕಪ್ 2024 ರ (T20 World Cup) ಗ್ರೂಪ್ ಬಿ ಪಂದ್ಯದಲ್ಲಿ ಇಂಗ್ಲೆಂಡ್ ತನ್ನ ಎದುರಾಳಿ ಒಮನ್​ ತಂಡವನ್ನು ಕೇವಲ 47 ರನ್​ಗಳಿಗೆ ಆಲೌಟ್ ಮಾಡಿತು ಮತ್ತು ನಂತರ 101 ಎಸೆತಗಳು ಮತ್ತು 8 ವಿಕೆಟ್​ಗಳು ಬಾಕಿ ಇರುವಾಗ ಗುರಿಯನ್ನು ಬೆನ್ನಟ್ಟಿತು. ಆಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆದಿಲ್ ರಶೀದ್ 4 ವಿಕೆಟ್ ಪಡೆದರೆ, ಮಾರ್ಕ್ ವುಡ್ ಹಾಗೂ ಜೋಫ್ರಾ ಆರ್ಚರ್ ತಲಾ 3 ವಿಕೆಟ್ ಪಡೆದರು. ಅಂದ ಹಾಗೆ ಈ ಫಲಿತಾಂಶ ಇಂಗ್ಲೆಂಡ್ ಪಾಲಿಗೆ ಹೊಸ ವಿಶ್ವ ದಾಖಲೆಯನ್ನು ಸೃಷ್ಟಿಸಲು ನೆರವಾಯಿತು.

ಟಿ20 ವಿಶ್ವಕಪ್​ ಪಂದ್ಯವೊಂದನ್ನು 100 ಅಥವಾ ಅದಕ್ಕಿಂತ ಹೆಚ್ಚು ಎಸೆತಗಳು (101 ಎಸೆತಗಳು) ಬಾಕಿ ಇರುವಾಗಲೇ ಗೆದ್ದ ಮೊದಲ ಟೆಸ್ಟ್ ಆಡುವ ರಾಷ್ಟ್ರ ಎಂಬ ಹೆಗ್ಗಳಿಕೆಗೆ ಇಂಗ್ಲೆಂಡ್ ಪಾತ್ರವಾಗಿದೆ. ಜೋಸ್ ಬಟ್ಲರ್ ಮತ್ತು ಫಿಲ್ ಸಾಲ್ಟ್ ಬೇಗನೆ ಪಂದ್ಯವನ್ನು ಮುಗಿಸಲು ನಿರ್ಧರಿಸಿದ ಬಳಿಕ ಇಂಗ್ಲೆಂಡ್ ಕೇವಲ 3.1 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 50 ರನ್ ಗಳಿಸಿ ಜಯ ಶಾಲಿಯಾಯಿತು.

ಈ ಗೆಲುವಿನೊಂದಿಗೆ ಇಂಗ್ಲೆಂಡ್ ಐದು ತಂಡಗಳ ಗ್ರೂಪ್ ಸಿ ಟೇಬಲ್​​ನಲ್ಲಿ ಆಸ್ಟ್ರೇಲಿಯಾ ಮತ್ತು ಎರಡನೇ ಸ್ಥಾನದಲ್ಲಿರುವ ಸ್ಕಾಟ್ಲೆಂಡ್ ನಂತರ ಮೂರನೇ ಸ್ಥಾನಕ್ಕೆ ಏರಿತು. ಎಲ್ಲಕ್ಕಿಂತ ಮುಖ್ಯವಾಗಿ, ಇಂಗ್ಲೆಂಡ್​​ನ ನೆಟ್ ರನ್ ರೇಟ್ ಸ್ಕಾಟ್ಲೆಂಡ್​​ಗಿಂತ ಅಧಿಕವಾಗಿದೆ. ಇಂಗ್ಲೆಂಡ್​​ನ ನೆಟ್ ರನ್ ರೇಟ್ +3.018 ಕ್ಕೆ ಏರಿತು. ಆದಾಗ್ಯೂ, ಅವರ ಸೂಪರ್​ 8 ಅವಕಾಶಗಳು ಇಕ್ಕಟ್ಟಿನಲ್ಲಿದೆ.

ಇಂಗ್ಲೆಂಡ್ ವಿರುದ್ಧದ ತನ್ನ ಮೊದಲ ಪಂದ್ಯ ಮಳೆಯಿಂದಾಗಿ ರದ್ದಾದ ನಂತರ ಒಮಾನ್ ಮತ್ತು ನಮೀಬಿಯಾವನ್ನು ಸೋಲಿಸಿದ ಸ್ಕಾಟ್ಲೆಂಡ್ ತಂಡ 3 ಪಂದ್ಯಗಳಲ್ಲಿ 5 ಅಂಕಗಳನ್ನು ಹೊಂದಿದೆ. ಇಂಗ್ಲೆಂಡ್​ ಸೂಪರ್​ ಹಂತಕ್ಕೇರಲು ಸ್ಕಾಟ್ಲೆಂಡ್ ಗ್ರೂಪ್ ಬಿಯ ತನ್ನ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲಬೇಕು ಹಾಗೂ ಇಂಗ್ಲೆಂಡ್ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ನಮೀಬಿಯಾವನ್ನು ಸೋಲಿಸಬೇಕಾಗುತ್ತದೆ. ಆಂಟಿಗುವಾದಲ್ಲಿ ನಮೀಬಿಯಾ ವಿರುದ್ಧದ ಇಂಗ್ಲೆಂಡ್ ಪಂದ್ಯಕ್ಕೂ ಮುನ್ನ ಸ್ಕಾಟ್ಲೆಂಡ್ ಶನಿವಾರ ಸೇಂಟ್ ಲೂಸಿಯಾದಲ್ಲಿ ಆಸ್ಟ್ರೇಲಿಯಾವನ್ನು ಎದುರಿಸಲಿದೆ.

ಇಂಗ್ಲೆಂಡ್-ಒಮಾನ್ ಪಂದ್ಯದ ವಿವರಣೆ ಹೀಗಿದೆ

ಜೋಸ್ ಬಟ್ಲರ್ ಕೇವಲ 8 ಎಸೆತಗಳಲ್ಲಿ ಅಜೇಯ 24 ರನ್ ಗಳಿಸಿದರು. ಅವರ ಇನಿಂಗ್ಸ್​​ನಲ್ಲಿ 4 ಬೌಂಡರಿ ಮತ್ತು ಒಂದು ಸಿಕ್ಸರ್ ಇತ್ತು. ಅವರು ಇಂಗ್ಲೆಂಡ್ ತಂಡಕ್ಕೆ ಕೇವಲ 3.1 ಓವರ್​ಗಳಲ್ಲಿ ಮೊತ್ತವನ್ನು ಬೆನ್ನಟ್ಟಲು ಸಹಾಯ ಮಾಡಿದರು. ಫಿಲ್ ಸಾಲ್ಟ್ 2 ಸಿಕ್ಸರ್ ಸಮೇತ 12 ರನ್ ಗಳಿಸಿದರು. ಸಾಲ್ಟ್ ಕೇವಲ 3 ಎಸೆತಗಳಲ್ಲಿ ಎರಡು ಸಿಕ್ಸರ್​​ ಬಾರಿಸಿದರು ಮತ್ತು ನಂತರ ಬಿಲಾಲ್ ಖಾನ್ ಎಸೆದ ಮೊದಲ ಓವರ್​ನ ಮೂರನೇ ಎಸೆತದಲ್ಲಿ ಔಟಾದರು.

ಇಂಗ್ಲೆಂಡ್ ನಂತರದಲ್ಲಿ ಬಂದ ವಿಲ್ ಜಾಕ್ಸ್ ಅವರನ್ನು 5 ರನ್ ಗಳಿಗೆ ಕಳೆದುಕೊಂಡಿತು. ಆರ್​ಸಿಬಿಯ ಬ್ಯಾಟ್ಸ್ಮನ್ ಅಬ್ಬರಿಸಲು ಯತ್ನಿಸಿದರೂ ಕಲೀಮುಲ್ಲಾ ಎಸೆತಕ್ಕೆ ಔಟಾದರು. ಆದರೆ, ಒಮಾನ್ ತಂಡವು ಉತ್ಸಾಹಭರಿತ ಇಂಗ್ಲೆಂಡ್ ವಿರುದ್ಧ ಸಂಪೂರ್ಣವಾಗಿ ಶರಣಾಯಿತು. ಜಾನಿ ಬೈರ್ಸ್ಟೋವ್ ಅಜೇಯ 8 ರನ್ ಬಾರಿದರು.

ಇಂಗ್ಲೆಂಡ್ ಭರ್ಜರಿ ಗೆಲುವು


ಈ ಗೆಲುವಿನೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಅಧಿಕ ಎಸೆತಗಳು ಉಳಿದಿರುವಂತೆ (101 ಎಸೆತ) ಗೆಲುವು ದಾಖಲಿಸಿದ ಜಂಟಿ ಆರನೇ ತಂಡವಾಯಿತು ಇಂಗ್ಲೆಂಡ್​. ಫೆಬ್ರವರಿ 2023 ರಲ್ಲಿ ಕೇವಲ 2 ಎಸೆತಗಳಲ್ಲಿ 11 ರನ್​ಗಳನ್ನು ಬೆನ್ನಟ್ಟಿದ ಐಲ್ ಆಫ್ ಮ್ಯಾನ್ ವಿರುದ್ಧದ ಸ್ಪೇನ್ ಈ ವಿಚಾರದಲ್ಲಿ ವಿಶ್ವ ದಾಖಲೆ ಹೊಂದಿದೆ. ಸ್ಪೇನ್​ 118 ಎಸೆತ ಬಾಕಿ ಇರುವಂತೆಯೇ ಗೆಲುವು ದಾಖಲಿಸಿತ್ತು.

ಇದನ್ನೂ ಓದಿ: Anushka Sharma: ಕೊಹ್ಲಿಯಂತೆ ತಾಳ್ಮೆ ಕಳೆದುಕೊಂಡ ಪತ್ನಿ ಅನುಷ್ಕಾ; ವಿಡಿಯೊ ವೈರಲ್​

2014ರಲ್ಲಿ ನೆದರ್ಲೆಂಡ್ಸ್ ವಿರುದ್ಧ ಶ್ರೀಲಂಕಾ 5 ಓವರ್​ಗಳಲ್ಲಿ 40 ರನ್​ಗಳನ್ನು ಚೇಸ್ ಮಾಡಿದಾಗ ಟಿ20ಐ ಕ್ರಿಕೆಟ್​​ನಲ್ಲಿ ಉಳಿದಿರುವ ಎಸೆತಗಳ ವಿಷಯದಲ್ಲಿ ಟೆಸ್ಟ್ ಆಡುವ ರಾಷ್ಟ್ರದ ಅತಿದೊಡ್ಡ ಗೆಲುವಿನ ದಾಖಲೆ ಮಾಡಿತ್ತು.

ಒಮಾನ್ 47 ರನ್ ಗಳಿಗೆ ಆಲೌಟ್ ಆಗಿದ್ದು ಹೇಗೆ?

ಒಮಾನ್ ಬ್ಯಾಟರ್​ಗಳು ಇಂಗ್ಲೆಂಡ್​​ನ ಬೌಲಿಂಗ್ ದಾಳಿಯ ಗುಣಮಟ್ಟಕ್ಕೆ ಸರಿಸಾಟಿಯಾಗಲಿಲ್ಲ. ಜೋಫ್ರಾ ಆರ್ಚರ್ ಮತ್ತು ಮಾರ್ಕ್ ವುಡ್ ಜೋಡಿಯ ವೇಗಕ್ಕೆ ತತ್ತರಿಸಿದ ಒಮಾನ್ 4 ವಿಕೆಟ್ ನಷ್ಟಕ್ಕೆ 25 ರನ್ ಗಳಿಸಿತು. ಒಮಾನ್ ನಿರಂತರವಾಗಿ 150 ಕಿ.ಮೀ ಮತ್ತು ಅದಕ್ಕಿಂತ ಹೆಚ್ಚಿನ ವೇಗದ ಬೌಲಿಂಗ್​ ಎದುರಿಸುವ ಸಾಮರ್ಥ್ಯ ಹೊಂದಿಲ್ಲ.

ಪುರುಷರ ಟಿ 20 ವಿಶ್ವಕಪ್ ಇತಿಹಾಸದಲ್ಲಿ ಒಮಾನ್ ಗಳಿಸಿದ 47 ರನ್ ನಾಲ್ಕನೇ ಕನಿಷ್ಠ ಮೊತ್ತ. ಅಲ್ಲದೇ ವಿಶ್ವ ಕಪ್​ನಲ್ಲಿ ಪಂದ್ಯಾವಳಿಯಲ್ಲಿ ಅವರ ಕನಿಷ್ಠ ಮೊತ್ತವಾಗಿದೆ. ಇದು ಪುರುಷರ ಟಿ 20 ಪಂದ್ಯಗಳಲ್ಲಿ ಇಂಗ್ಲೆಂಡ್ ವಿರುದ್ಧ ತಂಡವೊಂದು ಗಳಿಸಿದ ಕನಿಷ್ಠ ರನ್​ ಕೂಡ ಹೌದು.

ಜೋಫ್ರಾ ಆರ್ಚರ್ ಮತ್ತು ಮಾರ್ಕ್ ವುಡ್ ತಲಾ ಎರಡು ವಿಕೆಟ್ ಪಡೆದರೆ, ಓಮನ್ ಆರಂಭಿಕ ಆಟಗಾರರಾದ ಪ್ರತೀಕ್ ಅಠಾವಳೆ, ಪ್ರಜಾಪತಿ ಕಶ್ಯಪ್, ನಾಯಕ ಅಕಿಬ್ ಇಲ್ಯಾಸ್ ಮತ್ತು ಜೀಶಾನ್ ಮಕ್ಸೂದ್ ಸೇರಿದಂತೆ ಎಲ್ಲರೂ ಒಂದಂಕಿಮೊತ್ತಕ್ಕೆ ಔಟಾದರು.

Continue Reading
Advertisement
Self Harming
ಮೈಸೂರು6 mins ago

Self Harming : 6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?

Italian Parliament
ವೈರಲ್ ನ್ಯೂಸ್12 mins ago

Italian Parliament: ಇಟಲಿ ಪಾರ್ಲಿಮೆಂಟ್‌ನಲ್ಲಿ ಸಂಸದರ ಮಾರಾಮಾರಿ! ವಿಡಿಯೊ ನೋಡಿ

Kotee Movie release today dolly dhananjay
ಸ್ಯಾಂಡಲ್ ವುಡ್15 mins ago

Kotee Movie: ಡಾಲಿ ಧನಂಜಯ್ ಅಭಿನಯದ ‘ಕೋಟಿ’ ಸಿನಿಮಾ ಇಂದು ರಾಜ್ಯಾದ್ಯಂತ ಬಿಡುಗಡೆ

T20 World Cup 2024
ಕ್ರೀಡೆ18 mins ago

T20 World Cup 2024: ಸೂಪರ್​-8 ಪಂದ್ಯಕ್ಕೂ ಮುನ್ನವೇ ತವರಿಗೆ ಮರಳಲು ಸಿದ್ಧರಾದ ಟೀಮ್​ ಇಂಡಿಯಾದ ಇಬ್ಬರು ಆಟಗಾರರು​

Actor Darshan case comparision to serial troll
ಕಿರುತೆರೆ18 mins ago

Actor Darshan: ಚಿನ್ನುಮರಿ ತಂಟೆಗೆ ಹೋದ್ರೆ ಒದೆ, ಪವಿತ್ರಾ ಗೌಡ ತಂಟೆಗೆ ಬಂದ್ರೆ ಕೊಲೆ; ಟ್ರೋಲ್ ಆಗುತ್ತಿದೆ ​ ದರ್ಶನ್​ ಕೊಲೆ ಕೇಸ್​​

CM Award
ಪ್ರಮುಖ ಸುದ್ದಿ28 mins ago

CM Award : ಕಳಂಕಿತ ಡಿವೈಎಸ್ಪಿಜಾವೀದ್​ಗೆ ಸಿಎಂ ಪದಕ ನೀಡುವಂತೆ ಶಿಫಾರಸು; ಶಾಸಕ ಕಂದಕೂರ ವಿರೋಧ

Ajay Devgn Singham Again postponed release on Diwali 2024
ಬಾಲಿವುಡ್32 mins ago

Ajay Devgn: ʻಪುಷ್ಪ’ನಿಗೆ ಹೆದರಿದ ‘ಸಿಂಗಂ’; ಅಜಯ್ ದೇವಗನ್ ಸಿನಿಮಾ ರಿಲೀಸ್​ ಪೋಸ್ಟ್‌ಪೋನ್‌?

Priyanka Gandhi
ದೇಶ58 mins ago

Priyanka Gandhi: ರಾಹುಲ್ ಗಾಂಧಿ ತೆರವು ಮಾಡುವ ವಯನಾಡ್‌ನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ?

Bakrid; CM Yogi gives warning to Muslims
Latest1 hour ago

Yogi Adityanath: ರಸ್ತೆಯಲ್ಲಿ ನಮಾಜ್ ಮಾಡಿದರೆ ಹುಷಾರ್! ಬಕ್ರೀದ್ ಹಿನ್ನೆಲೆಯಲ್ಲಿ ಮುಸ್ಲಿಮರಿಗೆ ಯೋಗಿ ವಾರ್ನಿಂಗ್!

Wimbledon 2024
ಕ್ರೀಡೆ1 hour ago

Wimbledon 2024: ವಿಂಬಲ್ಡನ್ ಟೂರ್ನಿಯಿಂದ ಹಿಂದೆ ಸರಿದ ಟೆನಿಸ್ ದಿಗ್ಗಜ ರಫೆಲ್‌ ನಡಾಲ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌