Anurag Kashyap | ಕಾಂತಾರ, ಪುಷ್ಪದಂತಹ ಸಿನಿಮಾಗಳಿಂದ ಬಾಲಿವುಡ್‌ ನಾಶ, ವಿವಾದ ಸೃಷ್ಟಿಸಿದ ನಿರ್ದೇಶಕ ಅನುರಾಗ್‌ ಕಶ್ಯಪ್ - Vistara News

ಪ್ರಮುಖ ಸುದ್ದಿ

Anurag Kashyap | ಕಾಂತಾರ, ಪುಷ್ಪದಂತಹ ಸಿನಿಮಾಗಳಿಂದ ಬಾಲಿವುಡ್‌ ನಾಶ, ವಿವಾದ ಸೃಷ್ಟಿಸಿದ ನಿರ್ದೇಶಕ ಅನುರಾಗ್‌ ಕಶ್ಯಪ್

ದಕ್ಷಿಣ ಭಾರತದ ಆರ್‌ಆರ್‌ಆರ್‌, ಪುಷ್ಪ, ಕೆಜಿಎಫ್‌, ಕಾಂತಾರ ಸೇರಿ ಹಲವು ಸಿನಿಮಾಗಳು ಹಿಟ್‌ ಆಗುತ್ತಿರುವ ಬೆನ್ನಲ್ಲೇ, ದಕ್ಷಿಣ ಭಾರತದ ಸಿನಿಮಾಗಳ ಕುರಿತು ಬಾಲಿವುಡ್‌ ನಿರ್ದೇಶಕ (Anurag Kashyap) ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

VISTARANEWS.COM


on

Anurag Kashyap On Kantara And Pushpa Movies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬೈ: ದೇಶಾದ್ಯಂತ ದಕ್ಷಿಣ ಭಾರತದ ಸಿನಿಮಾಗಳ ಕುರಿತು ಹೆಚ್ಚಿನ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರಲ್ಲೂ, ರಾಜಮೌಳಿ ನಿರ್ದೇಶನದ ಆರ್‌ಆರ್‌ಆರ್‌, ಅಲ್ಲು ಅರ್ಜುನ್‌ ನಟನೆಯ ಪುಷ್ಪ: ದಿ ರೈಸ್‌, ಯಶ್‌ ನಟನೆಯ ಕೆಜಿಎಫ್‌ ಚಾಪ್ಟರ್‌ 2, ರಿಷಬ್‌ ಶೆಟ್ಟಿ ಅವರ ಕಾಂತಾರ ಸಿನಿಮಾಗಳು ಜನಮೆಚ್ಚುಗೆ ಪಡೆದಿವೆ. ದಕ್ಷಿಣ ಭಾರತದ ನಟರೀಗ ದೇಶಾದ್ಯಂತ ಸ್ಟಾರ್‌ ವ್ಯಾಲ್ಯೂ ಗಳಿಸಿದ್ದಾರೆ. ಇದರ ಬೆನ್ನಲ್ಲೇ, ದಕ್ಷಿಣ ಭಾರತದ ಸಿನಿಮಾಗಳನ್ನು ಉಲ್ಲೇಖಿಸುವ ಮೂಲಕ ಬಾಲಿವುಡ್‌ ನಿರ್ದೇಶಕ ಅನುರಾಗ್‌ ಕಶ್ಯಪ್‌ (Anurag Kashyap) ವಿವಾದ ಸೃಷ್ಟಿಸಿದ್ದಾರೆ.

“ದೇಶದಲ್ಲೀಗ ಪ್ಯಾನ್‌ ಇಂಡಿಯಾ ಚಿತ್ರಗಳ ಟ್ರೆಂಡ್‌ ಶುರುವಾಗಿದೆ. ಆದರೆ, ಇಂತಹ ಶೇ.5-10ರಷ್ಟು ಚಿತ್ರಗಳು ಮಾತ್ರ ಯಶಸ್ಸು ಗಳಿಸುತ್ತಿವೆ. ಕಾಂತಾರ, ಪುಷ್ಪದಂತಹ ಸಿನಿಮಾಗಳು ಪ್ಯಾನ್‌ ಇಂಡಿಯಾ ಚಿತ್ರಗಳನ್ನು ನಿರ್ಮಿಸಲು ಉತ್ತೇಜನ ನೀಡುತ್ತಿವೆ. ಇವುಗಳಲ್ಲಿ ಕೆಜಿಎಫ್‌ ಚಾಪ್ಟರ್‌ 2 ಮಾತ್ರ ದೊಡ್ಡ ಯಶಸ್ಸು ಕಂಡಿತು. ಪ್ಯಾನ್‌ ಇಂಡಿಯಾ ಚಿತ್ರಗಳು ಗೆದ್ದರೆ ಮಾತ್ರ ಸಂತಸ. ಇಲ್ಲದಿದ್ದರೆ ದೊಡ್ಡ ಪ್ರಮಾಣದಲ್ಲಿ ನಷ್ಟವಾಗುತ್ತದೆ. ಪುಷ್ಪ, ಕಾಂತಾರದಂತಹ ಸಿನಿಮಾಗಳನ್ನು ಮುಂದಿಟ್ಟುಕೊಂಡು ಬಾಲಿವುಡ್‌ ಸ್ವಯಂ ನಾಶವಾಗುತ್ತಿದೆ” ಎಂದು ಹೇಳಿದ್ದಾರೆ.

ಕಶ್ಯಪ್‌ ಅಭಿಪ್ರಾಯ ಒಪ್ಪದ ಅಗ್ನಿಹೋತ್ರಿ
ಅನುರಾಗ್‌ ಕಶ್ಯಪ್‌ ಹೇಳಿಕೆಗೆ ‘ದಿ ಕಾಶ್ಮೀರ್‌ ಫೈಲ್ಸ್‌’ ನಿರ್ದೇಶಕ ವಿವೇಕ್‌ ಅಗ್ನಿಹೋತ್ರಿ ವಿರೋಧ ವ್ಯಕ್ತಪಡಿಸಿದ್ದಾರೆ. “ಬಾಲಿವುಡ್‌ನ ಶ್ರೀಯುತರಾದ ಅನುರಾಗ್‌ ಕಶ್ಯಪ್‌ ಅವರ ಅಭಿಪ್ರಾಯವನ್ನು ನಾನು ಖಂಡಿತವಾಗಿಯೂ ಒಪ್ಪುವುದಿಲ್ಲ. ನೀವು ಒಪ್ಪುತ್ತೀರಾ” ಎಂದು ಟ್ವಿಟರ್‌ನಲ್ಲಿ ಜನರ ಅಭಿಪ್ರಾಯ ಕೇಳಿದ್ದಾರೆ. ಅನುರಾಗ್‌ ಕಶ್ಯಪ್‌ ಹೇಳಿಕೆಗೆ ಜಾಲತಾಣದಲ್ಲಿ ನೂರಾರು ಜನ ಖಂಡನೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Kantara Movie | ಕಾಂತಾರವನ್ನು ಕೊಂಡಾಡಿದ ಬಾಲಿವುಡ್‌ ನಟ ಹೃತಿಕ್ ರೋಷನ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಗೆದ್ದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್;‌ ಇದು ಸತ್ಯವೇ?

ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಒಂದು ಮತದ ಲೀಡ್‌ನಿಂದ ಗೆದ್ದರೂ ರಾಜೀನಾಮೆ ನೀಡುವುದಾಗಿ ಶಾಸಕ ಪ್ರದೀಪ್‌ ಈಶ್ವರ್‌ ಸವಾಲು ಹಾಕಿದ್ದರು. ಇದೀಗ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ ಗೆದ್ದಿರುವುದರಿಂದ ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ, ಪ್ರದೀಪ್‌ ಈಶ್ವರ್‌ ಅವರು ಸಲ್ಲಿಸಿದ್ದಾರೆ ಎನ್ನಲಾದ ರಾಜೀನಾಮೆ ಪತ್ರವೊಂದು ವೈರಲ್‌ ಆಗಿದೆ. ಆದರೆ, ಅದು ನಕಲಿ ಎಂಬುದು ಗೊತ್ತಾಗಿದೆ.

VISTARANEWS.COM


on

Pradeep Eshwar
Koo

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್‌ (Dr K Sudhakar) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡಿದ್ದ ಸುಧಾಕರ್‌ ಅವರಿಗೆ ಈ ಗೆಲುವು ರಾಜಕೀಯದಲ್ಲಿ ಪುನರ್ಜನ್ಮ ಸಿಕ್ಕಂತಾಗಿದೆ. ಇದರ ಬೆನ್ನಲ್ಲೇ, ಸುಧಾಕರ್‌ ಅವರು ಒಂದೇ ಒಂದು ಮತದಿಂದ ಗೆದ್ದರೂ ರಾಜೀನಾಮೆ ನೀಡುತ್ತೇನೆ ಎಂದಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ (Pradeep Eshwar) ವಿರುದ್ಧ ಆಕ್ರೋಶ, ಟ್ರೋಲ್‌, ಮೀಮ್‌ಗಳು ಹರಿದಾಡುತ್ತಿವೆ. ಇದರ ಮಧ್ಯೆಯೇ, ಪ್ರದೀಪ್‌ ಈಶ್ವರ್‌ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾದ ರಾಜೀನಾಮೆ ಪತ್ರವೊಂದು ವೈರಲ್‌ ಆಗಿದೆ. ಆದರೆ, ಇದು ನಕಲಿ ಪೋಸ್ಟ್‌ ಎಂಬುದು ಬಳಿಕ ಗೊತ್ತಾಗಿದೆ.

ಪತ್ರದಲ್ಲಿ ಏನಿದೆ?

“ಬಾಲ್ಯದಿಂದಲೇ ಪುಣ್ಯಕೋಟಿ ಕಥೆಯನ್ನು ಆದರ್ಶವಾಗಿರಿಸಿಕೊಂಡು, “ಕೊಟ್ಟ ಮಾತು, ಇಟ್ಟ ಹೆಜ್ಜೆ ತಪ್ಪಬಾರದು” ಅನ್ನೋ ಮಾತನ್ನು ಜೀವನದುದ್ದಕ್ಕೂ ಪಾಲಿಸುತ್ತಾ ಬಂದವನು ನಾನು. ಕೆಲ ದಿನಗಳ ಹಿಂದೆ ಮಾಜಿ ಸಚಿವರಾದ ಡಾ.ಕೆ.ಸುಧಾಕರ್‌ ಅವರು ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಒಂದು ಮತವನ್ನು ಲೀಡ್‌ ತೆಗೆದುಕೊಂಡರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಾರ್ವಜನಿಕವಾಗಿ ಹೇಳಿರುತ್ತೇನೆ. ಸುಧಾಕರ್‌ ಅವರು ಸುಮಾರು 20 ಸಾವಿರ ಮತಗಳನ್ನು ನನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿರುವುದರಿಂದ ನಾನು ಹಿಂದೆ ಆಡಿದ ಮಾತಿಗೆ ಬದ್ಧನಾಗಿ, ಸ್ವಇಚ್ಛೆಯಿಂದ ನನ್ನ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡುತ್ತಿದ್ದೇನೆ” ಎಂಬ ಪತ್ರವು ವೈರಲ್‌ ಆಗಿದೆ.

ವೈರಲ್‌ ಆಗಿರುವ ರಾಜೀನಾಮೆ ಪತ್ರ

ಪ್ರದೀಪ್‌ ಈಶ್ವರ್‌ ಅವರು ರಾಜೀನಾಮೆ ನೀಡಿರುವ ಕುರಿತು ವೈರಲ್‌ ಆದ ಪತ್ರವನ್ನು ಪರಿಶೀಲನೆ ನಡೆಸಲಾಗಿದ್ದು, ಅದು ನಕಲಿ ರಾಜೀನಾಮೆ ಪತ್ರ ಎಂಬುದಾಗಿ ತಿಳಿದುಬಂದಿದೆ. ಆದಾಗ್ಯೂ, ಪ್ರದೀಪ್‌ ಈಶ್ವರ್‌ ಅವರು ಸುಧಾಕರ್‌ ಕುರಿತು ಹೇಳಿದ್ದ ಹಳೆಯ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಡಿದ ಮಾತಿನಂತೆ ಪ್ರದೀಪ್‌ ಈಶ್ವರ್‌ ಅವರು ರಾಜೀನಾಮೆ ನೀಡಬೇಕು ಎಂದು ಜನರು, ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಆದರೆ, ಸುಧಾಕರ್‌ ಗೆಲುವಿನ ಕುರಿತು ಪ್ರದೀಪ್‌ ಈಶ್ವರ್‌ ಅವರು ಇದುವರೆಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಡಾ.ಕೆ. ಸುಧಾಕರ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ ಅಭ್ಯರ್ಥಿ ರಕ್ಷಾ ರಾಮಯ್ಯ ವಿರುದ್ಧ 1,62,099 ಮತಗಳ ಅಂತರದಿಂದ ಜಯಭೇರಿ ಮೊಳಗಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಮಾಜಿ ಸಚಿವ ಸುಧಾಕರ್ ಅವರು ಈ ಬಾರಿ ಲೋಕಸಭಾ ಟಿಕೆಟ್ ಪಡೆದು ಗೆದ್ದು ಬೀಗಿದ್ದಾರೆ. ಹೀಗಾಗಿ ಶಾಸಕ ಪ್ರದೀಪ್‌ ಈಶ್ವರ್‌ ಈ ಹಿಂದೆ ಹೇಳಿದ್ದ ಮಾತುಗಳನ್ನು ಉಲ್ಲೇಖಿಸಿ ಬಿಜೆಪಿ ಕಾರ್ಯಕರ್ತರು ಟ್ರೋಲ್‌ ಮಾಡುತ್ತಿದ್ದಾರೆ.

ಇದನ್ನೂ ಓದಿ: Pradeep Eshwar: ಕೈ ಅಭ್ಯರ್ಥಿ ಸೋಲಲು ಪ್ರದೀಪ್ ಈಶ್ವರ್ ಕಾರಣ; ಸ್ವಪಕ್ಷದ ಶಾಸಕನ ವಿರುದ್ಧವೇ ತಿರುಗಿ ಬಿದ್ದ ಕಾಂಗ್ರೆಸ್ ಕಾರ್ಯಕರ್ತರು!

Continue Reading

ಕ್ರೀಡೆ

India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

India vs Ireland: ನಿಧಾನಗತಿಯ ಟ್ರ್ಯಾಕ್​ನಲ್ಲಿ ಆರಂಭದಲ್ಲಿ ರನ್​ ಗಳಿಸಲು ತಿಣುಕಾಡಿದ ರೋಹಿತ್, ಆ​ ಬಳಿಕ ಸಿಡಿದು ನಿಂತರು. ಸತತವಾಗಿ ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇದೇ ವೇಳೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್​ ಪೂರೈಸಿದ ಮೈಲುಗಲ್ಲು ನಿರ್ಮಿಸಿದರು.

VISTARANEWS.COM


on

India vs Ireland
Koo

ನ್ಯೂಯಾರ್ಕ್​: ಹಾರ್ದಿಕ್​ ಪಾಂಡ್ಯ(3), ಜಸ್​ಪ್ರೀತ್​ ಬುಮ್ರಾ(2) ಅವರ ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ, ನಾಯಕ ರೋಹಿತ್​ ಶರ್ಮಾ ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ಐರ್ಲೆಂಡ್(India vs Ireland)​ ವಿರುದ್ಧ 8 ವಿಕೆಟ್​ಗಳ ಗೆಲುವು ಸಾಧಿಸಿದೆ. ಈ ಮೂಲಕ ಟಿ20 ವಿಶ್ವಕಪ್​ ಟೂರ್ನಿಯಲ್ಲಿ (T20 World Cup 2024 ಶುಭಾರಂಭ ಕಂಡಿದೆ. ಭಾರತ ತನ್ನ ದ್ವಿತೀಯ ಪಂದ್ಯವನ್ನು ಜೂನ್​ 9 ರಂದು ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಆಡಲಿದೆ. ಇತ್ತಂಡಗಳ ಈ ಹೈವೋಲ್ಟೇಜ್​ ಪಂದ್ಯ ಕೂಡ ಇದೇ ಸ್ಟೇಡಿಯಂನಲ್ಲಿ ನಡೆಯಲಿದೆ.

ಇಲ್ಲಿನ ನಸೌ ಕೌಂಟಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಗೆದ್ದು ಫೀಲ್ಡಿಂಗ್​ ಆಯ್ದುಕೊಂಡ ನಾಯಕ ರೋಹಿತ್​ ಶರ್ಮಾ ಅವರ ಆಯ್ಕೆಯನ್ನು ಬೌಲರ್​ಗಳು ಸಮರ್ಥಿಸಿಕೊಂಡರು. ಹಾರ್ದಿಕ್​ ಪಾಂಡ್ಯ, ಅರ್ಶದೀಪ್​, ಜಸ್​ಪ್ರೀತ್ ಬುಮ್ರಾ, ಸಿರಾಜ್ ಮತ್ತು ಅಕ್ಷರ್​​ ಜಿದ್ದಿಗೆ ಬಿದ್ದವರಂತೆ ಬೌಲಿಂಗ್​ ದಾಳಿ ನಡೆಸಿ ವಿಕೆಟ್​ ಕಿತ್ತು ಪಾರಮ್ಯ ಮೆರೆದರು. ಭಾರತೀಯ ಬೌಲಿಂಗ್​ ದಾಳಿಯನ್ನು ಸಮರ್ಥವಾಗಿ ಎದುರಿಸುವಲ್ಲಿ ವಿಫಲವಾದ ಐರ್ಲೆಂಡ್​ ಕೇವಲ 96 ರನ್​ಗಳಿಗೆ ಸರ್ವಪತನ ಕಂಡಿತು. ಜವಾಬಿತ್ತ ಭಾರತ, ಈ ಸಣ್ಣ ಮೊತ್ತವನ್ನು 12.2 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 97 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು.

ಕೊಹ್ಲಿವಿಫಲ


ರೋಹಿತ್​ ಶರ್ಮಾ ಮತ್ತು ವಿರಾಟ್​ ಕೊಹ್ಲಿ ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯಲ್ಲಿ ಆರಂಭಿಕರಾಗಿ ಕಣಕ್ಕಿಳಿದರು. ಆದರೆ, ಕೊಹ್ಲಿ ಈ ಪ್ರಯೋಗದಲ್ಲಿ ಯಶಸ್ಸು ಕಾಣಲಿಲ್ಲ. ಕೇವಲ 1 ರನ್​ಗೆ ವಿಕೆಟ್​ ಕಳೆದುಕೊಂಡರು. ಇದಕ್ಕೂ ಮುನ್ನ ಈ ಜೋಡಿ 2019ರಲ್ಲಿ ಅಹಮದಾಬಾದ್​ನಲ್ಲಿ ನಡೆದಿದ್ದ ಇಂಗ್ಲೆಂಡ್​ ವಿರುದ್ಧ ಟಿ20 ಸರಣಿಯಲ್ಲಿ ಆರಂಭಿಕರಾಗಿ ಬ್ಯಾಟ್​ ಬೀಸಿತ್ತು. ಕೊಹ್ಲಿ ಐರ್ಲೆಂಡ್​ ವಿರುದ್ಧ ಆರಂಭಿಕನಾಗಿ ಆಡಿದ ಕಾರಣ ಜೈಸ್ವಾಲ್​ಗೆ ಅವಕಾಶ ಕೈತಪ್ಪಿತು.

ರೋಹಿತ್​ ಅರ್ಧಶತಕ


ನಿಧಾನಗತಿಯ ಟ್ರ್ಯಾಕ್​ನಲ್ಲಿ ಮೊದಲು ರನ್​ ಗಳಿಸಲು ತಿಣುಕಾಡಿದ ರೋಹಿತ್, ಆ​ ಬಳಿಕ ಸಿಡಿದು ನಿಂತರು. ಸತತ ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ ಅರ್ಧಶತಕ ಪೂರ್ತಿಗೊಳಿಸಿದರು. ಇದೇ ವೇಳೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 4 ಸಾವಿರ ರನ್​ ಪೂರೈಸಿದ ಮೈಲುಗಲ್ಲು ನಿರ್ಮಿಸಿದರು. 36 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ ರೋಹಿತ್​, 52 ರನ್​ ಗಳಿಸಿದ ವೇಳೆ ಭುಜದ ಗಾಯದ ಸಮಸ್ಯೆಗೆ ಸಿಲುಕಿ ರಿಟರ್ಡ್ ಹರ್ಟ್ ಆದರು. ಅವರ ಈ ಅರ್ಧಶತಕ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್​ ಸಿಡಿಯಿತು. ಅಂತಿಮವಾಗಿ ರಿಷಭ್​ ಪಂತ್ ಅಜೇಯ 36(3 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಗೆಲುವಿಗೆ ರನ್​ ಬೇಕಿದ್ದಾಗ ಸಿಕ್ಸರ್​ ಬಾರಿಸುವ ಯತ್ನದಲ್ಲಿ ವಿಫಲವಾದ ಸೂರ್ಯಕುಮಾರ್(2)​ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು.

ಇದಕ್ಕೂ ಮುನ್ನ ಇನಿಂಗ್ಸ್​ ಆರಂಭಿಸಿದ ಐರ್ಲೆಂಡ್​ಗೆ ಎಡಗೈ ವೇಗಿ ಅರ್ಶ್​ದೀಪ್​ ತಮ್ಮ ದ್ವಿತೀಯ ಓವರ್​ನಲ್ಲಿ ಆಘಾತವಿಕ್ಕಿದರು. ನಾಯಕ ಪೌಲ್​ ಸ್ಟಿರ್ಲಿಂಗ್(7) ವಿಕೆಟ್​ ಕಿತ್ತು ಭಾರತಕ್ಕೆ ಮೊದಲ ಯಶಸ್ಸು ತಂದುಕೊಟ್ಟರು. ಇಷ್ಟಕ್ಕೇ ತೃಪ್ತಿಯಾಗದ ಅರ್ಶ್​ದೀಪ್ ಇದೇ ಓವರ್​ನ ಅಂತಿಮ ಎಸೆತದಲ್ಲಿ ಮತ್ತೊಂದು ವಿಕೆಟ್​ ಉಡಾಯಿಸಿದರು. ಐರ್ಲೆಂಡ್​ 9 ರನ್​ಗೆ ಆರಂಭಿಕರಿಬ್ಬರ ವಿಕೆಟ್​ ಕಳೆದುಕೊಂಡಿತು.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ನಲ್ಲಿ ನೂತನ ದಾಖಲೆ ಸೃಷ್ಟಿಸಿದ ಲಂಕಾ-ದಕ್ಷಿಣ ಆಫ್ರಿಕಾ ಪಂದ್ಯ

ಅರ್ಶದೀಪ್​ ಬಳಿಕ ಜಸ್​ಪ್ರೀತ್​ ಬುಮ್ರಾ ಮತ್ತು ಹಾರ್ದಿಕ್​ ಪಾಂಡ್ಯ ಕೂಡ ಜಿದ್ದಿಗೆ ಬಿದ್ದವರಂತೆ ಬೌಲಿಂಗ್​ ದಾಳಿ ನಡೆಸಿ ವಿಕೆಟ್​ ಬೇಟೆಯಾಡಿದರು. ಮೊದಲೇ ಆರಂಭಿಕ ಆಘಾತ ಕಂಡಿದ್ದ ಐರ್ಲೆಂಡ್​ಗೆ ಚೇತರಿಸಿಕೊಳ್ಳಲು ಸಮಯವೇ ಸಿಗಲಿಲ್ಲ. ಬಡಬಡನೆ ವಿಕೆಟ್​ ಕಳೆದುಕೊಂಡು ಪೆವಿಯನ್​ ಕಡೆಗೆ ಹೆಜ್ಜೆ ಹಾಕಿದರು. 10ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ನಡೆಸಿದ ಜೋಶುವಾ ಲಿಟಲ್(14) ಮತ್ತು 7ನೇ ಕ್ರಮಾಂಕದ ಬ್ಯಾಟರ್​ ಗರೆಥ್ ಡೆಲಾನಿ ಕೊನೆಯ ಹಂತದಲ್ಲಿ ಶಕ್ತಿ ಮೀರಿ ನಡೆಸಿದ ಹೋರಾಟದ ಫಲದಿಂದ ತಂಡ 100ರ ಸನಿಹದ ಮೊತ್ತ ಕಲೆಹಾಕಿತು.

ಪಾಂಡ್ಯ ಬೌಲಿಂಗ್​ ಕಮಾಲ್​

ಆರಂಭಿಕ ಮೂರು ಓವರ್​ಗಳಲ್ಲಿ ಉತ್ತಮ ಬೌಲಿಂಗ್​ ದಾಳಿ ನಡೆಸಿ 2 ವಿಕೆಟ್​ ಕಿತ್ತಿದ್ದ ಅರ್ಶದೀಪ್​ ಸಿಂಗ್​ ತಮ್ಮ ಅಂತಿಮ ಓವರ್​ನಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್​ ಬಿಟ್ಟುಕೊಟ್ಟು 15 ರನ್​ ಹೊಡೆಸಿಕೊಂಡರು. ಗರೆಥ್ ಡೆಲಾನಿ 14 ಎಸೆತಗಳಿಂದ ತಲಾ 2 ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ 26 ರನ್​ ಗಳಿಸಿ ರನೌಟ್​ ಆದರು. ಇವರ ವಿಕೆಟ್​ ಪತನದೊಂದಿಗೆ ಐರ್ಲೆಂಡ್​ ಬ್ಯಾಟಿಂಗ್​ ಇನಿಂಗ್ಸ್​ ಕೂಡ ಮುಕ್ತಾಯ ಕಂಡಿತು. ಭಾರತ ಪರ ಉಪನಾಯಕ ಹಾರ್ದಿಕ್​ ಪಾಂಡ್ಯ 4 ಓವರ್​ ಎಸೆದು 1 ಮೇಡನ್​ ಸಹಿತ 27 ರನ್​ ವೆಚ್ಚದಲ್ಲಿ 3 ವಿಕೆಟ್​ ಉರುಳಿಸಿದರು. ಉಳಿದಂತೆ ಬುಮ್ರಾ ಮತ್ತು ಅರ್ಶ್​ದೀಪ್​ ತಲಾ 2, ಸಿರಾಜ್​ ಮತ್ತು ಅಕ್ಷರ್​ ತಲಾ 1 ವಿಕೆಟ್​ ಪಡೆದರು. ಆದರೆ ಅನುಭವಿ ಸ್ಪಿನ್ನರ್​ ಜಡೇಜಾ ವಿಕೆಟ್​ ಲೆಸ್​ ಎನಿಸಿಕೊಂಡರು. ಅಲ್ಲದೆ ಒಂದು ಕ್ಯಾಚ್​ ಕೂಡ ಕೈಚೆಲ್ಲಿದರು. ಅಕ್ಷರ್​ ಪಟೇಲ್​ ಅವರು ಒಂದು ವಿಕೆಟ್​ ಕೀಳುವ ಮೂಲಕ ಟಿ20 ಕ್ರಿಕೆಟ್​ನಲ್ಲಿ 50 ವಿಕೆಟ್​ ಪೂರ್ತಿಗೊಳಿಸಿದ ಮೈಲುಗಲ್ಲು ತಲುಪಿದರು.

Continue Reading

ಪ್ರಮುಖ ಸುದ್ದಿ

Sunita Williams: 3ನೇ ಬಾರಿ ಬಾಹ್ಯಾಕಾಶ ಯಾನ ಕೈಗೊಂಡ ಭಾರತ ಮೂಲದ ಸುನೀತಾ ವಿಲಿಯಮ್ಸ್;‌ Video ಇದೆ

Sunita Williams: ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಈಗ ಮತ್ತೆ ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಂಡಿದ್ದಾರೆ.

VISTARANEWS.COM


on

Sunita Williams
Koo

ವಾಷಿಂಗ್ಟನ್:‌ ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ (Sunita Williams) ಅವರು ಮೂರನೇ ಬಾರಿಗೆ ಬಾಹ್ಯಾಕಾಶ ಯಾನ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ನಾಸಾದ ಗಗನಯಾತ್ರಿಗಳಾದ ಬುಚ್ ವಿಲ್ಮೋರ್ ಮತ್ತು ಸುನೀತಾ ವಿಲಿಯಮ್ಸ್ ಅವರು ಬೋಯಿಂಗ್‌ ಸಂಸ್ಥೆಯ ಸ್ಟಾರ್‌ಲೈನರ್ (Boeing Starliner) ಬಾಹ್ಯಾಕಾಶ ನೌಕೆಯ ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಆರಂಭಿಸಿದ್ದಾರೆ. ಸುನೀತಾ ವಿಲಿಯಮ್ಸ್‌ ಅವರು ಬಾಹ್ಯಾಕಾಶಯಾನ ಕೈಗೊಳ್ಳುವ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಫ್ಲೊರಿಡಾದಲ್ಲಿರುವ ಕೇಪ್‌ ಕ್ಯಾನವರಲ್‌ ಸ್ಪೇಸ್‌ ಫೋರ್ಸ್‌ ಸೆಂಟರ್‌ನಿಂದ ಬಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡಲಾಯಿತು. ಬಾಹ್ಯಾಕಾಶದಲ್ಲಿ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರು ಒಂದು ವಾರ ಇರಲಿದ್ದಾರೆ. ನಾಸಾ ಬಾಹ್ಯಾಕಾಶ ವಿಜ್ಞಾನಿಗಳು ಅಭಿವೃದ್ಧಿಪಡಿಸಿದ ಆರನೇ ಬಾಹ್ಯಾಕಾಶ ನೌಕೆ ಎಂಬ ಖ್ಯಾತಿಗೆ ಸ್ಟಾರ್‌ಲೈನರ್‌ ಭಾಜನವಾಯಿತು. ಇದಕ್ಕೂ ಮೊದಲು ಮರ್ಕ್ಯುರಿ, ಜೆಮಿನಿ, ಅಪೋಲೊ, ಸ್ಪೇಸ್‌ ಶಟಲ್‌ ಹಾಗೂ ಸ್ಪೇಸ್‌ಎಕ್ಸ್‌ನ ಕ್ರ್ಯೂ ಡ್ರ್ಯಾಗನ್‌ ಬಾಹ್ಯಾಕಾಶ ನೌಕೆಗಳನ್ನು ಉಡಾವಣೆ ಮಾಡಲಾಗಿತ್ತು.

ಸುನೀತಾ ವಿಲಿಯಮ್ಸ್‌ ಹಿನ್ನೆಲೆ

ಭಾರತದ ಮೂಲದ ಡಾ. ದೀಪಕ್‌ ಪಾಂಡ್ಯಾ ಮತ್ತು ಬೋನಿ ಪಾಂಡ್ಯ ಪುತ್ರಿಯಾಗಿರುವ 59 ವರ್ಷದ ಸುನೀತಾ, ಬಾಹ್ಯಾಕಾಶಕ್ಕೆ ಹೋದ ಮೊದಲ ಮಹಿಳಾ ಗಗನಯಾತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇವರು ಮೊದಲ ಬಾರಿಗೆ 2006ರಲ್ಲಿ ಯಶಸ್ವಿ ಗಗನಯಾತ್ರೆ ಕೈಗೊಂಡಿದ್ದರು. ಇದಾದ ಬಳಿಕ 2012ರಲ್ಲಿ ಮತ್ತೆ ಗಗನಯಾತ್ರೆ ಕೈಗೊಂಡಿದ್ದರು. ಅವರು ಬಾಹ್ಯಾಕಾಶದಲ್ಲಿ ಬರೋಬ್ಬರಿ 322 ದಿನಗಳನ್ನು ಕಳೆದಿದ್ದಾರೆ. ಸುನೀತಾ ವಿಲಿಯಮ್ಸ್ ಅತೀ ಹೆಚ್ಚು ಬಾರಿ ಬಾಹ್ಯಾಕಾಶಕ್ಕೆ ಹಾರಿದ ಹಾಗೂ ಬಾಹ್ಯಾಕಾಶದಲ್ಲಿ ಅಧ್ಯಯನ ನಡೆಸಿದ ಮಹಿಳಾ ಗಗನ ಯಾತ್ರಿ ಎಂದೂ ಗುರುತಿಸಲ್ಪಡುತ್ತಿದ್ದಾರೆ.

ಇದುವರೆಗೆ ಸುನೀತಾ ವಿಲಿಯಮ್ಸ್ ಗರಿಷ್ಠ ಬಾಹ್ಯಾಕಾಶ ಪ್ರಯಾಣ ಮಾಡಿದ್ದಾರೆ. ಮಹತ್ವದ ಅಧ್ಯಯನಕ್ಕಾಗಿ ಮಂಗಳವಾರ ಮೂರನೇ ಬಾರಿ ಬಾಹ್ಯಾಕಾಶಕ್ಕೆ ಹಾರಲಿದ್ದ ಸುನೀತಾ ವಿಲಿಯಮ್ಸ್ ಎಲ್ಲ ತಯಾರಿ ಮಾಡಿಕೊಂಡಿದ್ದರು. ʼʼಕೊಂಚ ನರ್ವಸ್ ಆಗಿದ್ದೇನೆ. ಆದರೆ ಮತ್ತೆ ತವರಿಗೆ ಮರಳು ಅನುಭವವಾಗುತ್ತಿದೆ. ಬಾಹ್ಯಕಾಶವೇ ನನಗೆ ತವರಾಗಿದೆʼʼ ಎಂದು ಸುನೀತಾ ವಿಲಿಯಮ್ಸ್ ಹೇಳಿದ್ದರು.

ಗಣೇಶನ ಆರಾಧಕಿ

ʼʼಯಾವುದೇ ಕೆಲಸಕ್ಕೂ ಮೊದಲು ಗಣೇಶನ ಪ್ರಾರ್ಥಿಸುತ್ತೇನೆ. ಸಿದ್ಧಿ ವಿನಾಯಕ ನನ್ನ ಶುಭ ಸಂಕೇತʼʼ ಎಂದು ಅವರು ಈ ಹಿಂದೆ ಹೇಳಿದ್ದರು. ʼʼಬಾಹ್ಯಾಕಾಶ ಪ್ರಯಾಣ ಸೇರಿದಂತೆ ಯಾವುದೇ ಕೆಲಸಕ್ಕೂ ಗಣೇಶನ ಆಶೀರ್ವಾದ ನನಗೆ ಬೇಕು. ಗಣೇಶ ನನ್ನ ಎಲ್ಲ ಕಾರ್ಯಗಳಿಗೆ ಶಕ್ತಿಯಾಗಿದ್ದಾನೆ. ಪ್ರತಿ ಬಾರಿ ನಾನು ಬಾಹ್ಯಾಕಾಶ ಪ್ರಯಾಣದಲ್ಲೂ ಸಣ್ಣ ಗಣೇಶನ ವಿಗ್ರಹವನ್ನು ತೆಗೆದುಕೊಂಡು ಹೋಗುತ್ತೇನೆʼʼ ಎಂದು ಸುನೀತಾ ವಿಲಿಯಮ್ಸ್ ತಿಳಿಸಿದ್ದರು. ಈ ಹಿಂದೆ ಅವರು ಬಾಹ್ಯಾಕಾಶಕ್ಕೆ ಭಗವದ್ಗೀತೆ ಒಯ್ಯುವ ಮೂಲಕ ಭಾರತೀಯರ ಗಮನ ಸೆಳೆದಿದ್ದರು.

ಇದನ್ನೂ ಓದಿ: Gaganyaan : ಗಗನಯಾನ ಪೈಲೆಟ್​ ಪ್ರಶಾಂತ್​ ನಾಯರ್​ ​ಮದುವೆಯಾದ ಕೇರಳದ ನಟಿ ಲೆನಾ

Continue Reading

ಕರ್ನಾಟಕ

Dr C N Manjunath: ಬೆಂಗಳೂರಿನಲ್ಲೇ ಸುರೇಶ್‌ ವಿರುದ್ಧ ಡಾ. ಮಂಜುನಾಥ್‌ಗೆ 2 ಲಕ್ಷ ಮತಗಳ ಲೀಡ್‌! ಕ್ಷೇತ್ರವಾರು ಪಟ್ಟಿ ಇಲ್ಲಿದೆ

Dr C N Manjunath: ಬಿಜೆಪಿ ಅಭ್ಯರ್ಥಿಗೆ (Dr C N Manjunath) ಬೆಂಗಳೂರು ನಗರದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬಹುದು. ಗ್ರಾಮಾಂತರ ಭಾಗದ ಮತದಾರರು ಡಿ ಕೆ ಸುರೇಶ್‌ ಅವರನ್ನು ಬೆಂಬಲಿಸಬಹುದು. ಹಾಗಾಗಿ ಯಾವುದೇ ಅಭ್ಯರ್ಥಿಯ ಗೆಲುವಿನ ಅಂತರ 50 ಸಾವಿರದ ಒಳಗೇ ಇರಬಹುದು ಎಂಬ ರಾಜಕೀಯ ಪಂಡಿತರ ಲೆಕ್ಕಾಚಾರ ತಪ್ಪಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಡಿ ಕೆ ಸುರೇಶ್‌ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ ಸಿ ಎನ್‌ ಮಂಜುನಾಥ್‌ ಅವರು 2,69,590 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

VISTARANEWS.COM


on

Dr C N Manjunath
Koo

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ (Bangalore Rural Election Result 2024) ಮೂರು ಬಾರಿ ಸಂಸದರಾಗಿ ಭಾರಿ ಅಂತರದಿಂದ ಆಯ್ಕೆಯಾಗಿದ್ದ ಡಿ.ಕೆ. ಸುರೇಶ್‌ ಅವರು ಈ ಬಾರಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್‌ ಮಂಜುನಾಥ್‌ (Dr C N Manjunath) ಅವರ ವಿರುದ್ಧ ಭಾರಿ ಅಂತರದಿಂದ ಸೋತಿದ್ದಾರೆ. ವಿಶೇಷ ಅಂದರೆ ಡಿ.ಕೆ. ಸುರೇಶ್‌ ಅವರಿಗೆ ಅವರ ಹುಟ್ಟೂರು ಕನಕಪುರದಲ್ಲಿ ಮಾತ್ರ 25,677 ಮತಗಳ ಲೀಡ್‌ ಸಿಕ್ಕಿದೆ. ರಾಮನಗರದಲ್ಲಿ ಸಿಕ್ಕಿರುವುದು ಕೇವಲ 145 ಮತಗಳ ಮುನ್ನಡೆ.‌ ಇವೆರಡು ಕ್ಷೇತ್ರಗಳನ್ನು ಬಿಟ್ಟರೆ ಉಳಿದ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲೂ ಡಾ. ಸಿ ಎನ್‌ ಮಂಜುನಾಥ್‌ ಅವರಿಗೇ ಲೀಡ್‌ ಸಿಕ್ಕಿದೆ.

ಬಿಜೆಪಿ ಅಭ್ಯರ್ಥಿಗೆ ಬೆಂಗಳೂರು ನಗರದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸಬಹುದು. ಗ್ರಾಮಾಂತರ ಭಾಗದ ಮತದಾರರು ಡಿ.ಕೆ. ಸುರೇಶ್‌ ಅವರನ್ನು ಬೆಂಬಲಿಸಬಹುದು. ಹಾಗಾಗಿ ಯಾವುದೇ ಅಭ್ಯರ್ಥಿಯ ಗೆಲುವಿನ ಅಂತರ 50 ಸಾವಿರದ ಒಳಗೇ ಇರಬಹುದು ಎಂಬ ರಾಜಕೀಯ ಪಂಡಿತರ ಲೆಕ್ಕಾಚಾರ ತಪ್ಪಾಗಿದೆ. ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ. ಸುರೇಶ್‌ ವಿರುದ್ಧ ಬಿಜೆಪಿ ಅಭ್ಯರ್ಥಿ ಡಾ.ಸಿ. ಎನ್‌ ಮಂಜುನಾಥ್‌ ಅವರು 2,69,590 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ.

ಇದನ್ನೂ ಓದಿ | Lowest Margin of Wins: ಕೇವಲ 48 ಮತ ಅಂತರದ ಗೆಲುವು! ಕಡಿಮೆ ಅಂತರದಿಂದ ಗೆದ್ದವರ ಪಟ್ಟಿ ಇಲ್ಲಿದೆ

ಬೆಂಗಳೂರು ಹೊರಗಿನ ಮಾಗಡಿ, ಚನ್ನಪಟ್ಟಣ, ಕುಣಿಗಲ್‌, ಆನೇಕಲ್‌ ವಿಧಾನಸಭೆ ಕ್ಷೇತ್ರಗಳ ವ್ಯಾಪ್ತಿಯಲ್ಲೂ ಡಾ.ಸಿ. ಎನ್‌. ಮಂಜುನಾಥ್‌ ಅವರೇ 25 ರಿಂದ 35 ಸಾವಿರದ ತನಕ ಮುನ್ನಡೆ ಸಾಧಿಸಿದ್ದಾರೆ. ಆದರೆ ಬೆಂಗಳೂರು ದಕ್ಷಿಣ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರಗಳಲ್ಲಿ ಡಿ.ಕೆ. ಸುರೇಶ್‌ ಅವರಿಗೆ ಭಾರೀ ಹಿನ್ನಡೆಯಾಗಿದೆ. ಡಾ.ಸಿ. ಎನ್‌. ಮಂಜುನಾಥ್‌ ಅವರಿಗೆ ರಾಜರಾಜೇಶ್ವರಿ ನಗರದಲ್ಲಿ 98,997 ಮತಗಳ ಭಾರಿ ಲೀಡ್‌ ಸಿಕ್ಕಿದ್ದರೆ, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ 97,129 ಮತಗಳ ಮುನ್ನಡೆ ಸಿಕ್ಕಿದೆ. ಹೀಗೆ ಬೆಂಗಳೂರು ನಗರದಲ್ಲೇ ಬಿಜೆಪಿ ಅಭ್ಯರ್ಥಿಗೆ ಸುಮಾರು 2 ಲಕ್ಷ ಮತಗಳ ಮುನ್ನಡೆ ಸಿಕ್ಕಂತಾಗಿದೆ. ಇದರ ಪರಿಣಾಮವಾಗಿ ಡಿ.ಕೆ. ಸುರೇಶ್‌ ಅವರು ಭಾರಿ ಅಂತರದಿಂದ ಸೋತಿದ್ದಾರೆ. ಡಾ. ಮಂಜುನಾಥ್‌ ಅವರಿಗೆ ಶೇ.56.2ರಷ್ಟು ಮತಗಳು ಸಿಕ್ಕಿದ್ದರೆ, ಡಿ ಕೆ ಸುರೇಶ್‌ ಅವರಿಗೆ ಶೇ.42.2ರಷ್ಟು ಮತಗಳು ಲಭಿಸಿವೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮತಗಳ ವಿಧಾನಸಭೆ ಕ್ಷೇತ್ರವಾರು ಪಟ್ಟಿ ಈ ಕೆಳಗಿನಂತಿದೆ.

ಒಟ್ಟು ಮತ ಗಳಿಕೆ
ಡಾ. ಮಂಜುನಾಥ್: 1078914
ಡಿ.ಕೆ.ಸುರೇಶ್: 809324
ಗೆಲುವಿನ ಅಂತರ: 2,69,590

ರಾಮನಗರ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 91,945
ಡಿ.ಕೆ.ಸುರೇಶ್: 92,090
ಕ್ಷೇತ್ರದ ಲೀಡ್: 145 (ಕಾಂಗ್ರೆಸ್)

ಮಾಗಡಿ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 1,13,911
ಡಿ.ಕೆ.ಸುರೇಶ್: 83,938
ಕ್ಷೇತ್ರದ ಲೀಡ್: 29973(ಬಿಜೆಪಿ)

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್:106971
ಡಿ.ಕೆ.ಸುರೇಶ್: 85357
ಕ್ಷೇತ್ರದ ಲೀಡ್: 21,614 (ಬಿಜೆಪಿ)

ಕನಕಪುರ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 83,303
ಡಿ.ಕೆ.ಸುರೇಶ್: 1,08,980
ಕ್ಷೇತ್ರದ ಲೀಡ್: 25677 (ಕಾಂಗ್ರೆಸ್)

ಕುಣಿಗಲ್ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 97,248
ಡಿ.ಕೆ.ಸುರೇಶ್: 73,410
ಕ್ಷೇತ್ರದ ಲೀಡ್: 23,838 (ಬಿಜೆಪಿ)

ಅನೇಕಲ್ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 1,37,693
ಡಿ.ಕೆ.ಸುರೇಶ್: 1,15,328
ಕ್ಷೇತ್ರದ ಲೀಡ್: 22,365 (ಬಿಜೆಪಿ)

ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 2,55,756
ಡಿ.ಕೆ.ಸುರೇಶ್: 1,58,627
ಕ್ಷೇತ್ರದ ಲೀಡ್: 97,129 (ಬಿಜೆಪಿ)

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ
ಡಾ. ಮಂಜುನಾಥ್: 1,88,726
ಡಿ.ಕೆ.ಸುರೇಶ್: 89,729
ಕ್ಷೇತ್ರದ ಲೀಡ್: 98,997 (ಬಿಜೆಪಿ)

ಇದನ್ನೂ ಓದಿ | ಲಕ್ಷ್ಮೀ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಶೆಟ್ಟರ್‌ಗೆ 50 ಸಾವಿರ ಮತಗಳ ಲೀಡ್; ಕ್ಷೇತ್ರವಾರು ಪಟ್ಟಿ ಇಲ್ಲಿದೆ!

Continue Reading
Advertisement
Pradeep Eshwar
ಕರ್ನಾಟಕ12 mins ago

ಚಿಕ್ಕಬಳ್ಳಾಪುರದಲ್ಲಿ ಸುಧಾಕರ್‌ ಗೆದ್ದ ಬೆನ್ನಲ್ಲೇ ಪ್ರದೀಪ್‌ ಈಶ್ವರ್‌ ರಾಜೀನಾಮೆ ಪತ್ರ ವೈರಲ್;‌ ಇದು ಸತ್ಯವೇ?

India vs Ireland
ಕ್ರೀಡೆ51 mins ago

India vs Ireland: ರೋಹಿತ್​ ಅರ್ಧಶತಕ; ಐರ್ಲೆಂಡ್​ ವಿರುದ್ಧ ಭಾರತಕ್ಕೆ ಭರ್ಜರಿ​ ಗೆಲುವು

Sunita Williams
ಪ್ರಮುಖ ಸುದ್ದಿ1 hour ago

Sunita Williams: 3ನೇ ಬಾರಿ ಬಾಹ್ಯಾಕಾಶ ಯಾನ ಕೈಗೊಂಡ ಭಾರತ ಮೂಲದ ಸುನೀತಾ ವಿಲಿಯಮ್ಸ್;‌ Video ಇದೆ

Dr C N Manjunath
ಕರ್ನಾಟಕ2 hours ago

Dr C N Manjunath: ಬೆಂಗಳೂರಿನಲ್ಲೇ ಸುರೇಶ್‌ ವಿರುದ್ಧ ಡಾ. ಮಂಜುನಾಥ್‌ಗೆ 2 ಲಕ್ಷ ಮತಗಳ ಲೀಡ್‌! ಕ್ಷೇತ್ರವಾರು ಪಟ್ಟಿ ಇಲ್ಲಿದೆ

New Cancer Drug
ಆರೋಗ್ಯ2 hours ago

New Cancer Drug: ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಕ್ರಾಂತಿ; ಹೊಸ ಔಷಧ ಪ್ರಯೋಗ ಶೇ. 100 ಯಶಸ್ವಿ!

World Environment Day celebration in karatagi
ಕೊಪ್ಪಳ2 hours ago

World Environment Day: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ ಆಗಬೇಕು

500 Rs deposit in the name of new admission children by old students of Government Kannada School Lingasugur
ಕರ್ನಾಟಕ2 hours ago

Raichur News: ಸರ್ಕಾರಿ ಶಾಲೆಗೆ ದಾಖಲಾದ ಮಕ್ಕಳ ಹೆಸರಿನಲ್ಲಿ 500 ರೂ. ಠೇವಣಿ!

Koti Movie
ಸಿನಿಮಾ2 hours ago

Koti Movie: ಡಾಲಿ ಧನಂಜಯ್ ನಟನೆಯ ‘ಕೋಟಿ’ ಚಿತ್ರದ ಟ್ರೈಲರ್ ರಿಲೀಸ್; ಪ್ರೇಕ್ಷಕರಿಂದ ಭಾರಿ ಮೆಚ್ಚುಗೆ

Belagavi Election Result 2024
ಬೆಳಗಾವಿ2 hours ago

ಲಕ್ಷ್ಮೀ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಶೆಟ್ಟರ್‌ಗೆ 50 ಸಾವಿರ ಮತಗಳ ಲೀಡ್; ಕ್ಷೇತ್ರವಾರು ಪಟ್ಟಿ ಇಲ್ಲಿದೆ!

French Open 2024
ಕ್ರೀಡೆ3 hours ago

French Open 2024: ಸೆಮಿಫೈನಲ್​ ಪ್ರವೇಶಿಸಿದ ಬೋಪಣ್ಣ-ಮ್ಯಾಥ್ಯೂ ಜೋಡಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ2 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌