ಮಿಸ್ ಮಾಡಬೇಡಿ, ವೇಶ್ಯೆಯರ ಬದುಕಿನ ಕಥಾನಕದ ಟಾಪ್ 5 ಸಿನಿಮಾ - Vistara News

ಪ್ರಮುಖ ಸುದ್ದಿ

ಮಿಸ್ ಮಾಡಬೇಡಿ, ವೇಶ್ಯೆಯರ ಬದುಕಿನ ಕಥಾನಕದ ಟಾಪ್ 5 ಸಿನಿಮಾ

International Sex Workers Day: ಲೈಂಗಿಕ ಕಾರ್ಯಕರ್ತರಿಗೆ ಸಂಬಂಧಿಸಿದಂತೆ ನೀವು ನೋಡಲೇಬೇಕಾದ 5 ಬಾಲಿವುಡ್ ಸಿನಿಮಾಗಳ ಸಂಕ್ಷಿಪ್ತ ಪರಿಚಯ ಇಲ್ಲಿದೆ.

VISTARANEWS.COM


on

ವೇಶ್ಯೆಯರ ಬದುಕಿನ ಕಥಾನಕದ ಟಾಪ್ 5 ಸಿನಿಮಾ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಗಂಗೂಬಾಯಿ ಕಾಠಿಯಾವಾಡಿ

ಈ ಚಿತ್ರದಲ್ಲಿ ಅಲಿಯಾ ಭಟ್ ಅವಮಾನವನ್ನು ಸ್ವಾಭಿಮಾನವನ್ನಾಗಿ ಪರಿವರ್ತಿಸಿದ ಮತ್ತು ಮುಂಬೈನ ಕೆಂಪು ದೀಪದ ಪ್ರದೇಶವಾದ ಕಾಮಾಟಿಪುರದ ಸುಧಾರಣೆಗಾಗಿ ರಾಜಕೀಯ ಆಕಾಂಕ್ಷೆಗಳನ್ನು ಹೊಂದಿರುವ ಲೈಂಗಿಕ ಕಾರ್ಯಕರ್ತೆಯಾಗಿ ನಟಿಸಿದ್ದಾರೆ. ಹುಸೇನ್ ಜೈದಿ ಅವರ ‘ಮಾಫಿಯಾ ಕ್ವೀನ್ಸ್ ಆಫ್ ಮುಂಬೈ’ ಈ ಐತಿಹಾಸಿಕ ಚಿತ್ರಕ್ಕೆ ಸ್ಫೂರ್ತಿಯಾಗಿದೆ. ಸ್ತ್ರೀವಾದಿ ದೃಷ್ಟಿಕೋನದಿಂದ ಲೈಂಗಿಕ ಕಾರ್ಯಕರ್ತರ ರಹಸ್ಯ ಪ್ರಪಂಚದ ಮುಂದೆ ತೆರೆದಿಡುವ ಹಾಗೂ ಲೈಂಗಿಕ ವ್ಯಾಪಾರವನ್ನು ಕಾನೂನುಬದ್ಧಗೊಳಿಸಬೇಕೇ ಅಥವಾ ಬೇಡವೇ ಎಂಬ ವಿವಾದಗಳಿಗೆ ಇನ್ನಷ್ಟು ಪುಷ್ಟಿ ನೀಡಿದ ಚಿತ್ರ ಇದಾಗಿದೆ.

ಚಮೇಲಿ

ಕರೀನಾ ಕಪೂರ್ ನಟಿಸಿದ ಈ ಚಿತ್ರವು ಚಮೇಲಿ ಎಂಬ ಲೈಂಗಿಕ ಕಾರ್ಯಕರ್ತೆಯ ಕಥಾನಕವನ್ನು ಮನೋಜ್ಞವಾಗಿ ತೆರೆದಿಟ್ಟಿದೆ. ಅವಳು ಚಿಕ್ಕ ಬಾಲಕಿಯಾಗಿದ್ದಾಗ ಅವಳ ಚಿಕ್ಕಪ್ಪ ಅವಳನ್ನು ವೇಶ್ಯಾಗೃಹಕ್ಕೆ ಮಾರಿಬಿಟ್ಟ. ಅವಳು ಕಥಾ ನಾಯಕನ ಒಂಟಿತನ ಮತ್ತು ದುಃಖದ ಜೀವನವನ್ನು ಸುಧಾರಿಸಲು ಪೂರಕ ಸನ್ನಿವೇಶಗಳನ್ನು ನಿರ್ವಹಿಸುತ್ತಾಳೆ. ಈ ಚಿತ್ರವು ಮುಂಬೈನಲ್ಲಿ ಒಂದು ಮಳೆಯ ದಿನ ಒಬ್ಬರಿಗೊಬ್ಬರು ಪರಿಚಯವಾದ ಬ್ಯಾಂಕರ್ ಮತ್ತು ಲೈಂಗಿಕ ಕಾರ್ಯಕರ್ತೆಯ ವಿಷಾದದ ಕತೆಯ ನಿರೂಪಣೆಯಾಗಿದೆ. ಒಂದು ಕ್ಷಣದಲ್ಲಿ ಚಮೇಲಿ ಒರಟು ಸ್ವಭಾವದ ವೇಶ್ಯೆಯಾಗಿ, ಇನ್ನೊಂದು ಕ್ಷಣದಲ್ಲಿ, ನಿಜವಾದ ಪ್ರೀತಿಯನ್ನು ಹುಡುಕಲು ಇನ್ನೂ ಹಾತೊರೆಯುವ ಕೋಮಲ ಸ್ವಭಾವದ ಮಹಿಳೆಯಾಗಿ ಬಿಂಬಿತಳಾಗಿದ್ದಾಳೆ.

ದೇವ್ ಡಿ

ಈ ರೋಮ್ಯಾಂಟಿಕ್ ಡಾರ್ಕ್ ಕಾಮಿಡಿ ಚಲನಚಿತ್ರವು ಕಲ್ಕಿ ಕೊಚ್ಲಿನ್ ಅಮೋಘ ನಟನೆಯ ಕಾರಣದಿಂದಾಗಿ ವಿಮರ್ಶಕರ ಮೆಚ್ಚುಗೆ ಪಡೆದಿದೆ. ಅವರು ಎಂಎಂಎಸ್ ವಿವಾದದಲ್ಲಿ ಸಿಲುಕಿಕೊಂಡಿದ್ದ ಚಂದಾ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರಹಸ್ಯವಾದ ಲೈಂಗಿಕ ಕಾರ್ಯಕರ್ತೆಯ ಜೀವನವನ್ನು ಕೊನೆಗೊಳಿಸಿ, ಸಾಮಾನ್ಯ ಜೀವನಕ್ಕೆ ಮರಳುವ ಕಥಾನಕವಿದೆ. ಕುಡುಕ ದೇವ್, ಚಂದಾ ಅವರನ್ನು ಪ್ರವಾಸಿಗರು ಮತ್ತು ವಿಟ ಪುರುಷರಿಂದ ತುಂಬಿರುವ ನಗರದ ಅನೇಕ ಹೋಟೆಲ್‌ಗಳಲ್ಲಿ ಭೇಟಿಯಾಗುತ್ತಿದ್ದಂತೆ, ಚಲನಚಿತ್ರವು ಪ್ರೇಕ್ಷಕರ ಕುತೂಹಲ ಕೆರಳಿಸುತ್ತದೆ.

ಬೇಗಂ ಜಾನ್

ವಿದ್ಯಾ ಬಾಲನ್ ವೇಶ್ಯೆ ಬೇಗಂ ಜಾನ್‌ಳ ಪಾತ್ರದಲ್ಲಿ ನಟಿಸಿದ ಚಿತ್ರವಿದು. ಇದರಲ್ಲಿ ಆಕೆ ವೇಶ್ಯಾಗೃಹವನ್ನು ನಡೆಸುತ್ತಾಳೆ. ಬೇಗಂ ಜಾನ್‌ಳ ವೇಶ್ಯಾಗೃಹದಲ್ಲಿ ತಮ್ಮ ಕುಟುಂಬದಿಂದ ಪರಿತ್ಯಕ್ತರಾದ ಅನೇಕ ಲೈಂಗಿಕ ಕಾರ್ಯಕರ್ತರು ಆಶ್ರಯ ಪಡೆದಿದ್ದರು. ಅಂಥವರನ್ನು ಬೇಗಂ ಸ್ವತಃ ಪೋಷಿಸುತ್ತಿದ್ದಳು. ಬೇಗಂ ಜಾನ್‌ಳ ಪಾತ್ರದಲ್ಲಿ ವಿದ್ಯಾ ಬಾಲನ್‌ ಸಿಟ್ಟಿನ ಸಿಡುಕಿಯಾಗಿ ಕಾಣಿಸಿಕೊಂಡಿದ್ದಾರೆ. ಪಾಕಿಸ್ತಾನ-ಭಾರತ ವಿಭಜನೆಯ ಸಮಯದಲ್ಲಿ ಬೇಗಮ್ ಜಾನ್ ಮತ್ತು ಅವಳಲ್ಲಿ ಆಶ್ರಯ ಪಡೆದ ವೇಶ್ಯೆಯರು ಆ ಜಾಗವನ್ನು ಬಿಟ್ಟು ತೆರಳಲು ನಿರಾಕರಿಸುತ್ತಾರೆ. ಪ್ರಕ್ಷುಬ್ಧ ರಾಜಕೀಯ ಪರಿಸ್ಥಿತಿಗಳಲ್ಲಿ ಆಕೆಗೆ ತನ್ನ ವ್ಯವಹಾರವನ್ನು ನಿರ್ವಹಿಸಲು ಕಷ್ಟವಾಗುತ್ತದೆ. ಇದು ಭಾರತ ಮತ್ತು ಪಾಕಿಸ್ತಾನದ ಇತಿಹಾಸವನ್ನು ವೇಶ್ಯೆಯರ ದೃಷ್ಟಿಯಲ್ಲಿ ಹೇಳುವ ಒಂದು ರೀತಿಯ ನಿರೂಪಣೆಯಾಗಿದೆ.

ಚಾಂದಿನಿ ಬಾರ್

ಈ ಚಲನಚಿತ್ರವು ಕಠೋರ ಮತ್ತು ದುರ್ಭರವಾದ ಜಗತ್ತಿನಲ್ಲಿ ಜೀವನ ನಿರ್ವಹಣೆಗಾಗಿ ಬಾರ್ ಡ್ಯಾನ್ಸರ್ ಆಗಿ ಕೆಲಸ ಮಾಡಲು ಮುಂಬೈಗೆ ಬರುವ ಯುವತಿಯ ಕಥೆಯನ್ನು ಹೊಂದಿದೆ. ಚಿತ್ರದಲ್ಲಿ ಆ ಯುವತಿಯ ಪಾತ್ರವನ್ನು ಟಬು ನಿರ್ವಹಿಸಿದ್ದಾರೆ. ಚಾಂದಿನಿ ಬಾರ್ ಚಲನಚಿತ್ರವು ಹಿಂದುಳಿದ ಮಹಿಳೆ ಬಾರ್‌ನಲ್ಲಿ ನೃತ್ಯಗಾರ್ತಿಯಾಗಿ ದುಡಿಯುವ ಮತ್ತು ಒಬ್ಬ ಅಪರಾಧಿಯ ಮಗನ ತಾಯಿಯಾಗಿ ಸಮಾಜವನ್ನು ಎದುರಿಸುವ ಕಥಾನಕ ಹೊಂದಿದೆ. ಚಾಂದಿನಿ ಬಾರ್ ಚಿತ್ರದಲ್ಲಿನ ಅಭಿನಯಕ್ಕಾಗಿ ಟಬು ಅತ್ಯುತ್ತಮ ನಟಿ ರಾಷ್ಟ್ರಪ್ರಶಸ್ತಿ ಪಡೆದಿದ್ದಾರೆ.

ಇದನ್ನೂ ಓದಿ | Gallery | ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನಿಕ್ಕಿ ಗಲ್ರಾನಿ ಮತ್ತು ಆದಿ ಪಿನಿಸೆಟ್ಟಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Swati Maliwal: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಂಧನ

Swati Maliwal: ಸೋಮವಾರ ಸಿಎಂ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ ಮುಖ್ಯಮಂತ್ರಿಯ ಕಾರ್ಯದರ್ಶಿ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್ ತಮ್ಮ ಎಫ್‌ಐಆರ್‌ನಲ್ಲಿ ಆರೋಪಿಸಿದ್ದರು. ಈ ಘಟನೆ ರಾಜಕೀಯ ಬಿರುಗಾಳಿ ಎಬ್ಬಿಸಿದೆ.

VISTARANEWS.COM


on

swati maliwal bibhav kumar
Koo

ಹೊಸದಿಲ್ಲಿ: ಆಮ್‌ ಆದ್ಮಿ ಪಕ್ಷದ (Aam Admi Party) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Rajya Sabha MP Swati Maliwal) ಮೇಲೆ ಹಲ್ಲೆ ನಡೆಸಿದ ಆರೋಪಿ, ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ (Bibhav Kumar) ಅನ್ನು ದಿಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸೋಮವಾರ ಸಿಎಂ ಕೇಜ್ರಿವಾಲ್ ಅವರ ನಿವಾಸಕ್ಕೆ ಭೇಟಿ ನೀಡಿದಾಗ ದೆಹಲಿ ಮುಖ್ಯಮಂತ್ರಿಯ ಕಾರ್ಯದರ್ಶಿ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಮಲಿವಾಲ್ ತಮ್ಮ ಎಫ್‌ಐಆರ್‌ನಲ್ಲಿ ಆರೋಪಿಸಿದ್ದರು. ಈ ಘಟನೆ ರಾಜಕೀಯ ಬಿರುಗಾಳಿ ಎಬ್ಬಿಸಿದೆ. ಕೇಜ್ರಿವಾಲ್ ಅವರ ಮೌನವನ್ನು ಬಿಜೆಪಿ ತೀವ್ರವಾಗಿ ಟೀಕಿಸಿದೆ. ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಅವರು ದಾಳಿಯ ಸಮಯದಲ್ಲಿ ಸ್ಪಷ್ಟವಾಗಿ ನಿಷ್ಕ್ರಿಯರಾಗಿದ್ದುದಕ್ಕಾಗಿ ಕೇಜ್ರಿವಾಲ್ ಅವರನ್ನು “ಮುಖ್ಯ ಅಪರಾಧಿ” ಎಂದು ಕರೆದಿದ್ದಾರೆ.

ಮಲಿವಾಲ್‌ ಅವರು ದೆಹಲಿ ಮುಖ್ಯಮಂತ್ರಿ ಮನೆಯಿಂದ ಹೊರಬರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಇದರಲ್ಲಿ ಸಿಎಂ ನಿವಾಸದಲ್ಲಿ ನಿಯೋಜಿಸಲಾದ ಸಿಬ್ಬಂದಿ ಮತ್ತು ಎಎಪಿ ರಾಜ್ಯಸಭಾ ಸಂಸದೆ ನಡುವೆ ವಾಗ್ವಾದ ನಡೆಯುವುದನ್ನು ಕಾಣಬಹುದು.

“ನಾನು ಸಂಪೂರ್ಣವಾಗಿ ಆಘಾತಕ್ಕೊಳಗಾಗಿದ್ದೇನೆ ಮತ್ತು ಸಹಾಯಕ್ಕಾಗಿ ಪದೇ ಪದೆ ಕಿರುಚುತ್ತಿದ್ದೆ. ನನ್ನನ್ನು ರಕ್ಷಿಸಿಕೊಳ್ಳಲೆಂದು ನಾನು ಅವನನ್ನು ನನ್ನ ಕಾಲುಗಳಿಂದ ದೂರ ತಳ್ಳಿದೆ. ಆ ಸಮಯದಲ್ಲಿ ಆತ ನನ್ನ ಮೇಲೆ ಎರಗಿ ಕ್ರೂರವಾಗಿ ಎಳೆದುಕೊಂಡು ಮತ್ತು ಉದ್ದೇಶಪೂರ್ವಕವಾಗಿ ನನ್ನ ಅಂಗಿಯನ್ನು ಮೇಲಕ್ಕೆ ಎಳೆದ” ಎಂದು ಎಫ್ಐಆರ್‌ನಲ್ಲಿ ಹೇಳಲಾಗಿದೆ. “ಬಿಭವ್ ಕುಮಾರ್ ಪಶ್ಚಾತ್ತಾಪ ಪಟ್ಟಿಲ್ಲ. ನನ್ನ ಎದೆ, ಹೊಟ್ಟೆ ಮತ್ತು ಸೊಂಟದ ಪ್ರದೇಶಕ್ಕೆ ತನ್ನ ಕಾಲುಗಳಿಂದ ಒದೆಯುವ ಮೂಲಕ ನನ್ನ ಮೇಲೆ ಹಲ್ಲೆ ನಡೆಸಿದ್ದಾನೆ” ಎಂದು ಸ್ವಾತಿ ದೂರಿದ್ದಾರೆ.

 ಸ್ವಾತಿ ಮಾಲಿವಾಲ್‌ ಆರೋಪ ಸುಳ್ಳು ಎಂದು ಆಪ್‌ ನಾಯಕರೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, ದೆಹಲಿ ಸಿಎಂ ಕಚೇರಿಯಲ್ಲಿ ಗಲಾಟೆ ನಡೆದಿರುವ ಕುರಿತ ವಿಡಿಯೊವನ್ನು ಕೂಡ ಬಿಡುಗಡೆ ಮಾಡಿದ್ದಾರೆ.

ಸ್ವಾತಿ ಮಾಲಿವಾಲ್‌ ಕೇಸ್‌ಗೆ ಟ್ವಿಸ್ಟ್;‌ ತಮ್ಮ ಸಂಸದೆ ವಿರುದ್ಧವೇ ತಿರುಗಿಬಿದ್ದ ಆಪ್‌ ನಾಯಕರು!

“ಸ್ವಾತಿ ಮಾಲಿವಾಲ್‌ ಅವರು ನೀಡಿರುವ ಹೇಳಿಕೆಯು ಸಂಪೂರ್ಣವಾಗಿ ಸುಳ್ಳುಗಳಿಂದ ಕೂಡಿದೆ ಎಂಬುದು ಈ ವಿಡಿಯೊದಿಂದ ಬಯಲಾಗಿದೆ. ಸ್ವಾತಿ ಮಾಲಿವಾಲ್‌ ಅವರು ಹೇಳಿದ ಸುಳ್ಳುಗಳನ್ನು ದೇಶದ ಜನರ ಮುಂದಿಡುತ್ತಿದ್ದೇವೆ” ಎಂದು ಆಪ್‌ ನಾಯಕಿ, ಸಚಿವೆ ಆತಿಶಿ ಅವರು ಸುದ್ದಿಗೋಷ್ಠಿಯಲ್ಲಿ ತಮ್ಮದೇ ಪಕ್ಷದ ನಾಯಕಿ ನೀಡಿರುವ ಹೇಳಿಕೆ ಸುಳ್ಳು ಎಂದು ಹೇಳಿದ್ದಾರೆ. ಹಾಗೆಯೇ, ಅವರು ದೆಹಲಿ ಸಿಎಂ ಕಚೇರಿಯಲ್ಲಿ ನಡೆದ ಗಲಾಟೆ ಕುರಿತ ವಿಡಿಯೊವನ್ನು ಬಿಡುಗಡೆ ಮಾಡಲಾಗಿದೆ.

ವಿಡಿಯೊದಲ್ಲಿ ಏನಿದೆ?

ದೆಹಲಿ ಸಿಎಂ ಕಚೇರಿಗೆ ಭೇಟಿ ನೀಡಿದ ವೇಳೆ ಸ್ವಾತಿ ಮಾಲಿವಾಲ್‌ ಅವರಿಗೆ ಭದ್ರತಾ ಸಿಬ್ಬಂದಿಯು ಹೊರಗೆ ತೆರಳಿ ಎಂಬುದಾಗಿ ಹೇಳಿದ್ದಾರೆ. ಆದರೆ, ನಾನು ಹೊರಗೆ ಹೋಗಲ್ಲ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ಭದ್ರತಾ ಸಿಬ್ಬಂದಿಯೊಬ್ಬರಿಗೆ ಬಾಂಡ್ಲಿ (ಬೊಕ್ಕ ತಲೆಯವರು) ಎಂಬುದಾಗಿ ಬೈದಿದ್ದಾರೆ. ನಾನು ಇದರ ಬಗ್ಗೆ ಎಲ್ಲರಿಗೂ ಹೇಳುತ್ತೇನೆ ಎಂದು ಸ್ವಾತಿ ಮಾಲಿವಾಲ್‌ ಅವರು ದೆಹಲಿ ಸಿಎಂ ಕಚೇರಿಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಮಾಡಿ, ಆದರೆ ಇಲ್ಲಿಂದ ಹೊರಡಿ ಎಂದು ಸಿಬ್ಬಂದಿ ಸೂಚಿಸಿದ್ದಾರೆ. ಆಗ, ಸ್ವಾತಿ ಮಾಲಿವಾಲ್‌ ಅವರು ಭದ್ರತಾ ಸಿಬ್ಬಂದಿಗೆ ಅವಾಚ್ಯವಾಗಿ ಬೈದಿದ್ದಾರೆ. ಇಷ್ಟೆಲ್ಲ ಅಂಶಗಳು ವಿಡಿಯೊದಲ್ಲಿವೆ.

ಇದನ್ನೂ ಓದಿ: Swati Maliwal: ಸ್ವಾತಿ ಮಾಲಿವಾಲ್‌ ಕೇಸ್‌ಗೆ ಟ್ವಿಸ್ಟ್;‌ ತಮ್ಮ ಸಂಸದೆ ವಿರುದ್ಧವೇ ತಿರುಗಿಬಿದ್ದ ಆಪ್‌ ನಾಯಕರು!

Continue Reading

ರಾಜಕೀಯ

HD Deve Gowda: ದೇವೇಗೌಡರಿಗೆ ಜನ್ಮದಿನ ಶುಭ ಕೋರಿದ ಮೋದಿ; ಮಾಜಿ ಪ್ರಧಾನಿಗೆ ಹಲಸಿನ ಹಣ್ಣು ಗಿಫ್ಟ್‌

HD Deve Gowda: ಎಚ್‌.ಡಿ. ದೇವೇಗೌಡರ ಹುಟ್ಟುಹಬ್ಬಕ್ಕೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮೂಲಕ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ, ದೇಶಕ್ಕೆ ದೇವೇಗೌಡ ಸೇವೆ ಗಣನೀಯವಾಗಿದ್ದು, ರಾಜಕೀಯ ವಲಯದಲ್ಲಿ ಅವರನ್ನು ಗೌರವದಿಂದ ಕಾಣಲಾಗುತ್ತದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಅವರ ಆಸಕ್ತಿ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

PM Modi wishes HD Deve Gowda on his 93rd birthday Jackfruit gift to former PM
Koo

ಬೆಂಗಳೂರು: ದಣಿವರಿಯದ ನಾಯಕ, ರಾಜಕೀಯ ಭೀಷ್ಮ, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು (HD DeveGowda) ಇಂದು 93ರ ಹುಟ್ಟುಹಬ್ಬ (HD Deve Gowda birthday) ಆಚರಿಸಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ದೇವೇಗೌಡರಿಗೆ ಶುಭಾಶಯ ಕೋರಿದ್ದಾರೆ. ಈ ವೇಳೆ ಪಕ್ಷದ ಕಾರ್ಯಕರ್ತನೊಬ್ಬ ತನ್ನ ನೆಚ್ಚಿನ ನಾಯಕನಿಗೆ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಿದ್ದಾನೆ. ದೇವೇಗೌಡರು ಅದರ ಪರಿಮಳವನ್ನು ಆಸ್ವಾದಿಸಿ ಖುಷಿಪಟ್ಟರು.

ಎಚ್‌.ಡಿ. ದೇವೇಗೌಡರ ಹುಟ್ಟುಹಬ್ಬಕ್ಕೆ ಸೋಷಿಯಲ್‌ ಮೀಡಿಯಾ ಎಕ್ಸ್‌ ಮೂಲಕ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ, ದೇಶಕ್ಕೆ ದೇವೇಗೌಡ ಸೇವೆ ಗಣನೀಯವಾಗಿದ್ದು, ರಾಜಕೀಯ ವಲಯದಲ್ಲಿ ಅವರನ್ನು ಗೌರವದಿಂದ ಕಾಣಲಾಗುತ್ತದೆ. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಅವರ ಆಸಕ್ತಿ ಗಮನಾರ್ಹವಾಗಿದೆ. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾರೆ.

ಹಲಸಿನ ಹಣ್ಣು ಕೊಟ್ಟ ಕಾರ್ಯಕರ್ತ

ಇನ್ನು ಕಟ್ಟಾ ಅಭಿಮಾನಿಯೊಬ್ಬ ದೇವೇಗೌಡರಿಗೆ ಹಲಸಿನ ಹಣ್ಣನ್ನು ಉಡುಗೊರೆಯಾಗಿ ನೀಡಿದ್ದಾನೆ. ಅದನ್ನು ಅಷ್ಟೇ ಪ್ರೀತಿಪೂರ್ವಕವಾಗಿ, ಖುಷಿ ಖುಷಿಯಿಂದ ದೇವೇಗೌಡ ಅವರು ಸ್ವೀಕರಿಸಿದರು. ಅಲ್ಲದೆ, ಆ ಹಲಸಿನ ಹಣ್ಣಿನ ಬಳಿಗೆ ತಮ್ಮ ಮೂಗನ್ನು ಇಟ್ಟು ಅದರ ಪರಿಮಳವನ್ನು ಆಸ್ವಾದಿಸಿದರು. ಕಾರ್ಯಕರ್ತನ ಗಿಫ್ಟ್‌ ಬಗ್ಗೆ ಬಹಳವೇ ಖುಷಿಪಟ್ಟರು.

ಈ ಅವಮಾನದಿಂದ ಪಾರು ಮಾಡು: ದೇವೇಗೌಡರ ಮೌನ ಪ್ರಾರ್ಥನೆ

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ಇಂದು ತಮ್ಮ ಹುಟ್ಟುಹಬ್ಬವನ್ನು ದೇವಾಲಯ ಭೇಟಿಯೊಂದಿಗೆ (Temple visit) ಸರಳವಾಗಿ ಆಚರಿಸಿಕೊಂಡಿದ್ದಾರೆ. ಮೊಮ್ಮಗ (Prajwal Revanna Case) ನೀಡಿದ ಏಟಿನಿಂದ ಇನ್ನೂ ಪೂರ್ಣವಾಗಿ ಚೇತರಿಸಿಕೊಳ್ಳದ ದೇವೇಗೌಡರು, ದೇವರ ಮುಂದೆ ಈ ಅವಮಾನದಿಂದ ಪಾರು ಮಾಡೆಂದು ಮೌನವಾಗಿ ಪ್ರಾರ್ಥಿಸಿದರು.

ಮೊಮ್ಮಗ ಪ್ರಜ್ವಲ್‌ ಪ್ರಕರಣ ತಂದಿಟ್ಟ ಸಂಕಷ್ಟದಿಂದ ನೊಂದಿರುವ ಗೌಡರು 92 ವರ್ಷದಲ್ಲಿ ಮೊದಲ ಬಾರಿಗೆ ಗಡ್ಡಧಾರಿಯಾಗಿದ್ದರು. ಇಂದು ಮನೆಯಿಂದ ಹೊರಗೆ ಬಂದು ದೇವಾಲಯಕ್ಕೆ ಹೊರಟ ಸಂದರ್ಭದಲ್ಲಿ ಮತ್ತೆ ನೀಟ್‌ ಶೇವ್‌ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಅವರು ಬೆಂಗಳೂರಿನ ಜೆಪಿ ನಗರ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರೆಳಿ ವಿಶೇಷ ಪೂಜೆ ಸಲ್ಲಿಸಿದರು. ಪೂಜೆಯ ಬಳಿಕ ಅವರು ಮತ್ತೆ ಮನೆ ಸೇರಿಕೊಂಡರು.

ಜನ್ಮದಿನವಾಗಿದ್ದರೂ ದೇವೇಗೌಡರ ನಿವಾಸದ ಮುಂದೆ ಇಂದು ಹಬ್ಬದ ವಾತಾವರಣ ಕಂಡುಬಂದಿಲ್ಲ. ಇಂದು ಯಾರನ್ನೂ ಭೇಟಿ ಆಗುವುದಿಲ್ಲ. ಇದ್ದಲ್ಲಿಂದಲೇ ಹಾರೈಸಿ ಎಂದು ದೇವೇಗೌಡರು ಸಂದೇಶ ರವಾನಿಸಿದ್ದಾರೆ. “ಇಂದು ನನ್ನ ಜನ್ಮ ದಿನ. ಮನೆ ಬಳಿ ಬಂದು ಯಾರೂ ಆಚರಣೆ ಮಾಡದಂತೆ ಮನವಿ ಮಾಡಿದ್ದೇನೆ. ಅವರು ಇದ್ದಲ್ಲಿಯೇ ಹಾರೈಸಿ ಎಂದು ಹೇಳಿದ್ದೇನೆ” ಎಂದಿದ್ದಾರೆ.

ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ

“ಪ್ರಜ್ವಲ್ ರೇವಣ್ಣ ಬಗ್ಗೆ, ರೇವಣ್ಣ ಪ್ರಕರಣ (HD Revanna Case) ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಪ್ರಜ್ವಲ್ ರೇವಣ್ಣ ಹೊರಗಡೆ ಹೋಗಿದ್ದಾರೆ. ರೇವಣ್ಣ ಪ್ರಕರಣದ ಜಾಮೀನು ಅರ್ಜಿ ಸೋಮವಾರ ವಿಚಾರಣೆ ಇದೆ. ಅದರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕಾನೂನಿನ ಪ್ರಕಾರ ಏನೇನು ಕ್ರಮ ಕೈಗೊಳ್ಳಬೇಕೊ ಅದನ್ನು ತೆಗೆದುಕೊಳ್ಳುವಂತೆ ಕುಮಾರಸ್ವಾಮಿಯವರು ಹೇಳಿದ್ದಾರೆ. ಈ ಪ್ರಕರಣದಲ್ಲಿ ಬಹಳ ಜನ ಇದ್ದಾರೆ. ಇದರಲ್ಲಿ ಯಾರೇ ಇದ್ದರೂ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಿ ಎಂದಿದ್ದಾರೆ. ಆ ಘಟನೆ ಬಗ್ಗೆ ಕುಮಾರಸ್ವಾಮಿಯವರು (HD Kumaraswamy) ಇಡೀ ನಮ್ಮ ಕುಟುಂಬದ ಪರವಾಗಿ ಮಾತನಾಡುತ್ತಾರೆ. ಕಾನೂನು ಏನಿದೆಯೋ ಆ ಕಾನೂನು ವ್ಯಾಪ್ತಿಯಲ್ಲಿ ಏನೇನು ಕ್ರಮ ಕೈಗೊಳ್ಳಬೇಕೋ ಆ ಕ್ರಮ ಕೈಗೊಳ್ಳೋದು ಸರ್ಕಾರದ ಜವಾಬ್ದಾರಿ ಅಂತ ಹೇಳಿದ್ದಾರೆ. ನಾನು ಅದನ್ನು ಪುನರುಚ್ಚರಿಸುತ್ತೇನೆ” ಎಂದು ದೇವೇಗೌಡರು ಹೇಳಿದರು.

ಕುಮಾರಸ್ವಾಮಿಗೆ ಹೋರಾಟದ ಛಲ ಇದೆ

ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ದೇವರಾಜೇಗೌಡ 100 ಕೋಟಿ ರೂ. ಆಫರ್ ಆರೋಪದ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ ಅವರು, “ಇದೆಲ್ಲದಕ್ಕೂ ಕುಮಾರಸ್ವಾಮಿಯವರು ಉತ್ತರ ಕೊಟ್ಟಿದ್ದಾರೆ. ನಾನು ಅದರ ಬಗ್ಗೆ ಮಾತನಾಡೊಲ್ಲ. ಕುಮಾರ ಸ್ವಾಮಿಯವರು ಎಲ್ಲ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡ್ತಿದ್ದಾರೆ. ಕುಮಾರಸ್ವಾಮಿಯವರಿಗೆ ಹೋರಾಟದ ಛಲ ಇದೆ. ಹೀಗಾಗಿ ಅವರು ಎಲ್ಲ ವಿಚಾರವನ್ನೂ ಹೇಳ್ತಾರೆ. ಜೂನ್ 4ರ ನಂತರ ನಾನು ಮಾಧ್ಯಮಗಳ ಮುಂದೆ ಮಾತಾಡ್ತೀನಿ. ಅಲ್ಲಿಯವರೆಗೂ ನಾನು ಯಾರ ಜೊತೆಯೂ ಮಾತನಾಡೊಲ್ಲ” ಎಂದಿದ್ದಾರೆ.

“ಇದರಲ್ಲಿ ಅನೇಕ ಜನ ಇದ್ದಾರೆ. ನಾನು ಅವರ್ಯಾರ ಹೆಸರನ್ನೂ ಹೇಳಲು ಹೋಗಲ್ಲ. ಈ ವಿಚಾರದಲ್ಲಿ ಯಾರ್ಯಾರು ಇದ್ದಾರೆ ಅವರೆಲ್ಲರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ನ್ಯಾಯ ಸಿಗಬೇಕು. ಯಾವ ಹೆಣ್ಣು ಮಕ್ಕಳು ಅಪಾಯಕ್ಕೆ ಸಿಕ್ಕಿದ್ದಾರೆ, ಅವರಿಗೆ ಪರಿಹಾರ ನೀಡಬೇಕು. ಈ ಎಲ್ಲ ವಿಚಾರಗಳನ್ನು ಕುಮಾರಸ್ವಾಮಿ ಬಿಡಿಸಿ ಬಿಡಿಸಿ ಹೇಳಿದ್ದಾರೆ. ಪ್ರಜ್ವಲ್ ಬಗ್ಗೆ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ಯಾವ ತಕರಾರೂ ಇಲ್ಲ. ಆದರೆ ರೇವಣ್ಣ ಅವರ ಬಗ್ಗೆ ಮಾಡಿರುವುದು ರಾಜ್ಯದ ಜನತೆಗೆ ಗೊತ್ತಿದೆ. ಯಾವ ರೀತಿ ಕೇಸ್ ದಾಖಲು ಮಾಡಿದ್ದಾರೆ ಅಂತ ನೋಡಿ. ಒಂದು ಕೇಸ್, ಮೂರು ಬೇಲ್ ಕೊಟ್ಟಿದ್ದಾರೆ. ಇನ್ನೊಂದು ನಾಡಿದ್ದು ಜಡ್ಜ್‌ಮೆಂಟ್ ಇದೆ. ಅದು ಯಾವ ರೀತಿ ನಡೆಯಿತು ಅನ್ನೋದನ್ನ ನಾನು ವಿಶ್ಲೇಷಣೆ ಮಾಡಲ್ಲ” ಎಂದಿದ್ದಾರೆ.

ಇದನ್ನೂ ಓದಿ: Prajwal Revanna Case: ಪೆನ್‌ಡ್ರೈವ್‌ ಕೇಸ್‌ನಲ್ಲಿ ಶಾಮೀಲಾಗಲು ಡಿಕೆಶಿಯಿಂದ 100 ಕೋಟಿ ರೂಪಾಯಿ ಆಫರ್; ದೇವರಾಜೇಗೌಡ ಆರೋಪ

ಇದು ರಾಜಕೀಯವಾಗಿ ದೇವೆಗೌಡರ ಕುಟುಂಬಕ್ಕೆ ಹಿನ್ನಡೆ ಉಂಟುಮಾಡುವ ಕೆಲಸವಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ನಿಜ, ಒಟ್ಟಾರೆ ಏನು ನಡೆದಿದೆ, ದೇವರಾಜೇಗೌಡರ ಹೇಳಿಕೆಯಂತೆ, ಇದರಲ್ಲಿ ತುಂಬ ಜನ ಇದ್ದಾರೆ. ಬೇರೆ ಬೇರೆಯವರೆಲ್ಲ ಇದ್ದಾರೆ” ಎಂದಿದ್ದಾರೆ.

“ಇವತ್ತು ನನ್ನ 91 ವರ್ಷ ಮುಗಿಯಿತು. ನಾನು ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿಕೊಂಡು ಬಂದಿದ್ದೇನೆ. ನಾನು ನನ್ನ ಅಭಿಮಾನಿಗಳಿಗೆ ಈ ವರ್ಷದ ಹುಟ್ಟುಹಬ್ಬದ ಆಚರಣೆ ಮಾಡಬಾರದು ಅಂತ ವಿನಂತಿಸಿದ್ದೇನೆ. ಅಭಿಮಾನಿಗಳು ದೇವಸ್ಥಾನದಲ್ಲಿ ಪೂಜೆ ಮಾಡಿದ್ದಾರೆ. ರಾಜ್ಯದ ಎಲ್ಲ ಅಭಿಮಾನಿಗಳಿಗೆ ಶುಭ ಕೋರುತ್ತೇನೆ” ಎಂದು ಅವರು ತಿಳಿಸಿದ್ದಾರೆ.

Continue Reading

ಕ್ರೀಡೆ

Virat kohli : ತಮ್ಮ ಜೀವನದ ಎರಡು ಆಘಾತಕಾರಿ ಸಂದರ್ಭಗಳನ್ನು ವಿವರಿಸಿದ ವಿರಾಟ್ ಕೊಹ್ಲಿ

Virat kohli: 2016ರಲ್ಲಿ ಭಾರತದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿ 273 ರನ್ ಬಾರಿಸಿದ್ದರು. ಆದಾಗ್ಯೂ, ವೆಸ್ಟ್ ಇಂಡೀಸ್ ವಿರುದ್ಧದ ಸೆಮಿಫೈನಲ್​ನಲ್ಲಿ ಭಾರತದ ಭರವಸೆಗಳು ಭಗ್ನಗೊಂಡಿದ್ದರು. ಇದು ಕೊಹ್ಲಿಗೆ ಆಘಾತವನ್ನುಂಟು ಮಾಡಿದ ಎರಡನೇ ಘಟನೆ.

VISTARANEWS.COM


on

Virat kohli
Koo

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಋತು ತನ್ನ ಅಂತ್ಯ ತಲುಪುತ್ತಿದ್ದಂತೆ, ಸ್ಟಾರ್ ಬ್ಯಾಟರ್​ ವಿರಾಟ್ ಕೊಹ್ಲಿ (Virat Kohli ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bangalore) ತಂಡವನ್ನು ಪ್ಲೇಆಫ್​ಗೆ ಕೊಂಡೊಯ್ಯುವ ಪ್ರಮುಖ ಜವಾಬ್ದಾರಿ ಅವರ ಮೇಲಿದೆ. ಪ್ರಸ್ತುತ 13 ಪಂದ್ಯಗಳಲ್ಲಿ 661 ರನ್​ಗಳೊಂದಿಗೆ ಋತುವಿನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಈ ಮೂಲಕ ಚೊಚ್ಚಲ ಐಪಿಎಲ್ ಪ್ರಶಸ್ತಿಗೆ ಮುನ್ನಡೆಸುವ ಕೊಹ್ಲಿ ಅವರ ನಿಶ್ಚಯ ದೃಢವಾಗಿದೆ.

35 ವರ್ಷದ ಆಟಗಾರ ಇತ್ತೀಚೆಗೆ ತಮ್ಮನ್ನು ಇಂದಿಗೂ ಕಾಡುತ್ತಿರುವ ಎರಡು ಕ್ರಿಕೆಟ್ ವೃತ್ತಿ ಜೀವನದ ಆಘಾತಕಾರಿ ಘಟನೆಗಳ ಬಗ್ಗೆ ವಿವರಿಸಿದ್ದಾರೆ. ಮೊದಲನೆಯದು ಐಪಿಎಲ್ 2016 ಋತುವಿನಲ್ಲಿ, ಅಲ್ಲಿ 973 ರನ್​ಗಳೊಂದಿಗೆ ಅಗ್ರ ರನ್ ಸ್ಕೋರರ್ ಆಗಿದ್ದರೂ, ಸನ್ರೈಸರ್ಸ್ ಹೈದರಾಬಾದ್ (ಎಸ್ಆರ್​ಎಚ್​ ) ವಿರುದ್ಧದ ಫೈನಲ್​​ನಲ್ಲಿ ಹೃದಯ ವಿದ್ರಾವಕ ಸೋಲು ಅವರಿಗೆ ಸಾಕಷ್ಟು ಬೇಸರ ಉಂಟು ಮಾಡಿತ್ತು.

2016ರಲ್ಲಿ ಭಾರತದಲ್ಲಿ ನಡೆದ ಐಸಿಸಿ ಟಿ20 ವಿಶ್ವಕಪ್​ನಲ್ಲಿ ಕೊಹ್ಲಿ 273 ರನ್ ಬಾರಿಸಿದ್ದರು. ಆದಾಗ್ಯೂ, ವೆಸ್ಟ್ ಇಂಡೀಸ್ ವಿರುದ್ಧದ ಸೆಮಿಫೈನಲ್​ನಲ್ಲಿ ಭಾರತದ ಭರವಸೆಗಳು ಭಗ್ನಗೊಂಡಿದ್ದರು. ಇದು ಕೊಹ್ಲಿಗೆ ಆಘಾತವನ್ನುಂಟು ಮಾಡಿದ ಎರಡನೇ ಘಟನೆ.

“2016 ರಲ್ಲಿ ನನ್ನ ಜೀವನದಲ್ಲಿ ಎರಡು ಸಂದರ್ಭಗಳು ಇದ್ದವು. ಮೊದಲನೆಯದು ವಿಶ್ವ ಟಿ 20 ಮತ್ತು ನಂತರ ಐಪಿಎಲ್ ಫೈನಲ್. ವಿಶ್ವ ಟಿ 20 ಸೋಲಿನಿಂದ ಹೊರಬರಲು ನನಗೆ ಕೆಲವು ದಿನಗಳು ಬೇಕಾಯಿತು ಏಕೆಂದರೆ ನಾನು ಭಾರತಕ್ಕಾಗಿ ಈ ಸಾಧನೆ ಮಾಡಬಹುದು ಎಂದು ಭಾವಿಸಿದ್ದೆ”ಎಂದು ಕೊಹ್ಲಿ ಜಿಯೋ ಸಿನೆಮಾಗೆ ತಿಳಿಸಿದರು.

ಗವಾಸ್ಕರ್​​ಗೆ ವಿರಾಟ್​ ಕೊಹ್ಲಿಯನ್ನು ಬೈಯುವುದೇ ಕೆಲಸ, ಇದೀಗ ಮತ್ತೊಂದು ಬಾರಿ ಟೀಕೆ

ಟಿ20 ಸ್ವರೂಪದಲ್ಲಿ (T20 Cricket) ತಮ್ಮ ಸ್ಟ್ರೈಕ್ ರೇಟ್ ಬಗ್ಗೆ ಹೇಳಿಕೆ ನೀಡಿದ್ದವರಿಗೆ ವಿರಾಟ್ ಕೊಹ್ಲಿ (Virat kohli) ಪ್ರತ್ಯುತ್ತರ ನೀಡಿದ್ದರು. ಅದರಲ್ಲಿ ಮುಖ್ಯವಾಗಿ ಮಾಜಿ ಆಟಗಾರ ಸುನೀಲ್​ ಗವಾಸ್ಕರ್​ ಅವರ ಹೇಳಿಕೆಗಳ ಬಗ್ಗೆ ವ್ಯಂಗ್ಯವಾಡಿದ್ದರು. ಇದೀಗ ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ (Sunil Gavaskar) ಅವರು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪ್ರಮುಖ ಪಂದ್ಯಕ್ಕೆ ಮುಂಚಿತವಾಗಿ ಮತ್ತೊಂದು ಬಾರಿ ಕೊಹ್ಲಿಯನ್ನು ತೆಗಳಿದ್ದಾರೆ. ಕೊಹ್ಲಿಯನ್ನು ಆಧುನಿಕ ಯುಗದ ದಂತಕಥೆಯಾಗಿ ಪರಿವರ್ತಿಸುವಲ್ಲಿ ಎಂಎಸ್ ಧೋನಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಗವಾಸ್ಕರ್ ಹೇಳಿಕೆ ನೀಡಿದ್ದಾರೆ. ಇದೀಗ ನೇರ ಟೀಕೆಯ ಬದಲು ಹೋಲಿಕೆ ಮಾಡಿ ಟೀಕೆ ಮಾಡಲು ಶುರು ಮಾಡಿದ್ದಾರೆ.

ಇದನ್ನೂ ಓದಿ: IPL 2024 : ಬೆಂಗಳೂರಿನ ಬೀದಿ ಬೀದಿಗಳಲ್ಲಿ ‘ಧೋನಿ, ಧೋನಿ’ ಘೋಷಣೆ, ಇಲ್ಲಿದೆ ವಿಡಿಯೊ

ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಮುಂಬೈ ಇಂಡಿಯನ್ಸ್​ ತಂಡದ ಅಂತಿಮ ಲೀಗ್ ಪಂದ್ಯದ ನಡುವೆ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತ್ತು. ಆ ವೇಳೆ ಮಾತನಾಡಿದ ಗವಾಸ್ಕರ್, ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಪ್ರಾರಂಭಿಸಿದಾಗ “ಸ್ಟಾರ್ಟ್-ಸ್ಟಾಪ್” (ಅಡೆ ತಡೆಯಿಂದ ತುಂಬಿದ) ವೃತ್ತಿಜೀವನ ಹೊಂದಿದ್ದರು. ಧೋನಿ ಅವರ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿಯೇ ವೃತ್ತಿಜೀವನ ರೂಪುಗೊಂಡಿತು ಎಂದು ಹೇಳಿದರು.

“ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದಾಗ, ಅದು ಸ್ಟಾಪ್-ಸ್ಟಾರ್ಟ್ ವೃತ್ತಿಜೀವನವಾಗಿತ್ತು. ಎಂಎಸ್ ಧೋನಿ ಅವರಿಗೆ ಸ್ವಲ್ಪ ಹೆಚ್ಚುವರಿ ಅವಕಾಶ ನೀಡಿದ್ದು. ಅದರಿಂದಾಗಿ ಇಂದು ನಾವು ನೋಡುವ ಕೊಹ್ಲಿ ಇದ್ದಾರೆ ಎಂದು ಅವರು ಸ್ಟಾರ್ ಸ್ಪೋರ್ಟ್ಸ್​ನಲ್ಲಿ ಹೇಳಿದರು.‘ಟಿ 20 ಕ್ರಿಕೆಟ್​ನಲ್ಲಿ ತಮ್ಮ ಸ್ಟ್ರೈಕ್ ರೇಟ್ ಬಗ್ಗೆ ಟೀಕಾಕಾರರಿಗೆ ತಿರುಗೇಟು ನೀಡಲು ಆರ್​ಸಿಬಿಯ ಮಾಜಿ ಬ್ಯಾಟರ್​ ನಿರ್ಧರಿಸಿದ ನಂತರ ಅವರಿಬ್ಬರ ನಡುವೆ ವಕೆಲವು ದಿನಗಳ ಹಿಂದೆ ವಾಕ್ಸಮರ ನಡೆಸಿದ್ದರು.

Continue Reading

ಪ್ರಮುಖ ಸುದ್ದಿ

Virat kohli : ಗವಾಸ್ಕರ್​​ಗೆ ವಿರಾಟ್​ ಕೊಹ್ಲಿಯನ್ನು ಬೈಯುವುದೇ ಕೆಲಸ, ಇದೀಗ ಮತ್ತೊಂದು ಬಾರಿ ಟೀಕೆ

Virat kohli:: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಮುಂಬೈ ಇಂಡಿಯನ್ಸ್​ ತಂಡದ ಅಂತಿಮ ಲೀಗ್ ಪಂದ್ಯದ ನಡುವೆ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತ್ತು. ಆ ವೇಳೆ ಮಾತನಾಡಿದ ಗವಾಸ್ಕರ್, ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಪ್ರಾರಂಭಿಸಿದಾಗ “ಸ್ಟಾರ್ಟ್-ಸ್ಟಾಪ್” (ಅಡೆ ತಡೆಯಿಂದ ತುಂಬಿದ) ವೃತ್ತಿಜೀವನ ಹೊಂದಿದ್ದರು. ಧೋನಿ ಅವರ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿಯೇ ವೃತ್ತಿಜೀವನ ರೂಪುಗೊಂಡಿತು ಎಂದು ಹೇಳಿದ್ದಾರೆ.

VISTARANEWS.COM


on

Virat Kohli
Koo

ನವದೆಹಲಿ: ಟಿ20 ಸ್ವರೂಪದಲ್ಲಿ (T20 Cricket) ತಮ್ಮ ಸ್ಟ್ರೈಕ್ ರೇಟ್ ಬಗ್ಗೆ ಹೇಳಿಕೆ ನೀಡಿದ್ದವರಿಗೆ ವಿರಾಟ್ ಕೊಹ್ಲಿ (Virat kohli) ಪ್ರತ್ಯುತ್ತರ ನೀಡಿದ್ದರು. ಅದರಲ್ಲಿ ಮುಖ್ಯವಾಗಿ ಮಾಜಿ ಆಟಗಾರ ಸುನೀಲ್​ ಗವಾಸ್ಕರ್​ ಅವರ ಹೇಳಿಕೆಗಳ ಬಗ್ಗೆ ವ್ಯಂಗ್ಯವಾಡಿದ್ದರು. ಇದೀಗ ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ (Sunil Gavaskar) ಅವರು ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪ್ರಮುಖ ಪಂದ್ಯಕ್ಕೆ ಮುಂಚಿತವಾಗಿ ಮತ್ತೊಂದು ಬಾರಿ ಕೊಹ್ಲಿಯನ್ನು ತೆಗಳಿದ್ದಾರೆ. ಕೊಹ್ಲಿಯನ್ನು ಆಧುನಿಕ ಯುಗದ ದಂತಕಥೆಯಾಗಿ ಪರಿವರ್ತಿಸುವಲ್ಲಿ ಎಂಎಸ್ ಧೋನಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಗವಾಸ್ಕರ್ ಹೇಳಿಕೆ ನೀಡಿದ್ದಾರೆ. ಇದೀಗ ನೇರ ಟೀಕೆಯ ಬದಲು ಹೋಲಿಕೆ ಮಾಡಿ ಟೀಕೆ ಮಾಡಲು ಶುರು ಮಾಡಿದ್ದಾರೆ.

ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ ಮುಂಬೈ ಇಂಡಿಯನ್ಸ್​ ತಂಡದ ಅಂತಿಮ ಲೀಗ್ ಪಂದ್ಯದ ನಡುವೆ ಮಳೆಯಿಂದಾಗಿ ಪಂದ್ಯ ಸ್ಥಗಿತಗೊಂಡಿತ್ತು. ಆ ವೇಳೆ ಮಾತನಾಡಿದ ಗವಾಸ್ಕರ್, ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಪ್ರಾರಂಭಿಸಿದಾಗ “ಸ್ಟಾರ್ಟ್-ಸ್ಟಾಪ್” (ಅಡೆ ತಡೆಯಿಂದ ತುಂಬಿದ) ವೃತ್ತಿಜೀವನ ಹೊಂದಿದ್ದರು. ಧೋನಿ ಅವರ ಮೇಲೆ ಇಟ್ಟಿರುವ ನಂಬಿಕೆಯಿಂದಾಗಿಯೇ ವೃತ್ತಿಜೀವನ ರೂಪುಗೊಂಡಿತು ಎಂದು ಹೇಳಿದರು.

“ವಿರಾಟ್ ಕೊಹ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದಾಗ, ಅದು ಸ್ಟಾಪ್-ಸ್ಟಾರ್ಟ್ ವೃತ್ತಿಜೀವನವಾಗಿತ್ತು. ಎಂಎಸ್ ಧೋನಿ ಅವರಿಗೆ ಸ್ವಲ್ಪ ಹೆಚ್ಚುವರಿ ಅವಕಾಶ ನೀಡಿದ್ದು. ಅದರಿಂದಾಗಿ ಇಂದು ನಾವು ನೋಡುವ ಕೊಹ್ಲಿ ಇದ್ದಾರೆ ಎಂದು ಅವರು ಸ್ಟಾರ್ ಸ್ಪೋರ್ಟ್ಸ್​ನಲ್ಲಿ ಹೇಳಿದರು.‘ಟಿ 20 ಕ್ರಿಕೆಟ್​ನಲ್ಲಿ ತಮ್ಮ ಸ್ಟ್ರೈಕ್ ರೇಟ್ ಬಗ್ಗೆ ಟೀಕಾಕಾರರಿಗೆ ತಿರುಗೇಟು ನೀಡಲು ಆರ್​ಸಿಬಿಯ ಮಾಜಿ ಬ್ಯಾಟರ್​ ನಿರ್ಧರಿಸಿದ ನಂತರ ಅವರಿಬ್ಬರ ನಡುವೆ ವಕೆಲವು ದಿನಗಳ ಹಿಂದೆ ವಾಕ್ಸಮರ ನಡೆಸಿದ್ದರು.

ಸ್ಪಿನ್ನ ವೇಳೆ ನಿಧಾನ ಆಟ

ಟಿ20 ಸ್ವರೂಪದಲ್ಲಿ, ವಿಶೇಷವಾಗಿ ಮಧ್ಯಮ ಓವರ್​ಗಳಲ್ಲಿ ಮತ್ತು ಸ್ಪಿನ್ನರ್​ಗಳ ವಿರುದ್ಧ ನಿಧಾನಗತಿಯ ಸ್ಕೋರ್ ಉದ್ದೇಶದ ಬಗ್ಗೆ ಕೊಹ್ಲಿ ಟೀಕೆಗೆ ಒಳಗಾಗಿದ್ದರು. ಆದಾಗ್ಯೂ, ಈ ಋತುವಿನ ಆರಂಭದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಅಜೇಯ 70 ರನ್ ಗಳಿಸಿದ ನಂತರ, ಅವರು ಸ್ಪಿನ್ನರ್​ಗಳ ವಿರುದ್ಧ 179 ಸ್ಟ್ರೈಕ್ ರೇಟ್ನಲ್ಲಿ 61 ರನ್ ಗಳಿಸಿದ ನಂತರ, ಕೊಹ್ಲಿ ತಮ್ಮ ಟೀಕಾಕಾರರ ವಿರುದ್ಧ ವಾಗ್ದಾಳಿ ನಡೆಸಿದ್ದರು. “ಸ್ಟ್ರೈಕ್ ರೇಟ್ ಮತ್ತು ನಾನು ಸ್ಪಿನ್ ಅನ್ನು ಚೆನ್ನಾಗಿ ಆಡದಿರುವ ಬಗ್ಗೆ ಮಾತನಾಡಲು ಎಲ್ಲರೂ ಇಷ್ಟಪಡುತ್ತಾರೆ. ಆದರೆ ನನಗೆ ಇದು ತಂಡಕ್ಕಾಗಿ ಪಂದ್ಯವನ್ನು ಗೆಲ್ಲುವುದರ ಪ್ರಶ್ನೆಯಾಗಿದೆ. ಮತ್ತು ನೀವು ಇದನ್ನು 15 ವರ್ಷಗಳಿಂದ ಮಾಡಲು ಒಂದು ಕಾರಣವಿದೆ. ಏಕೆಂದರೆ ನೀವು ಈ ದಿನವನ್ನು ಹಿಂದೆಯೂ ಮಾಡಿದ್ದೀರ. ನೀವು ನಿಮ್ಮ ತಂಡಗಳಿಗಾಗಿ ಪಂದ್ಯಗಳನ್ನು ಗೆದ್ದಿದ್ದೀರಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: IPL 2024 : ಬೆಂಗಳೂರಿನ ಬೀದಿ ಬೀದಿಗಳಲ್ಲಿ ‘ಧೋನಿ, ಧೋನಿ’ ಘೋಷಣೆ, ಇಲ್ಲಿದೆ ವಿಡಿಯೊ

ಕಾಮೆಂಟರಿ ಬಾಕ್ಸ್​ಗಳಲ್ಲಿ ಕುಳಿತು ಆಟದ ಬಗ್ಗೆ ಮಾತನಾಡುವುದು ಸುಲಭ. ನನಗೆ, ಇದು ನನ್ನ ಕೆಲಸವನ್ನು ಮಾಡುವ ಕುರಿತ ಆಸಕ್ತಿಯಾಗಿದೆ. ಜನರು ಆಟದ ಬಗ್ಗೆ ತಮ್ಮದೇ ಆದ ಆಲೋಚನೆಗಳು ಮತ್ತು ಊಹೆಗಳ ಬಗ್ಗೆ ಮಾತನಾಡಬಹುದು. ಆದರೆ ಅದನ್ನು ಹಗಲು ರಾತ್ರಿ ಕ್ರಿಕೆಟ್ ಆಡಿದವರಿಗೆ ಏನಾಗುತ್ತಿದೆ ಎಂದು ತಿಳಿದಿದೆ ಎಂದು ಹೇಳಿದ್ದಾರೆ.

ಗವಾಸ್ಕರ್ ತಿರುಗೇಟು

ಗವಾಸ್ಕರ್ ಕೂಡ ಕೊಹ್ಲಿಯ ಸ್ಫೋಟಕ ಹೇಳಿಕೆಗಳ ವಿರುದ್ಧ ವಾಗ್ದಾಳಿ ನಡೆಸಿದರು. “ನೀವು 118 ಸ್ಟ್ರೈಕ್ ರೇಟ್ ಹೊಂದಿದ್ದರೆ ಹೇಗೆ|vನೀವು ಬಂದು ಮೊದಲ ಎಸೆತವನ್ನು ಎದುರಿಸುತ್ತೀರಿ, ನಂತರ ನೀವು 14 ಅಥವಾ 15 ನೇ ಓವರ್​​ನ್ಲಿ ಔಟ್ ಆಗುತ್ತೀರಿ ಮತ್ತು ನಿಮ್ಮ ಸ್ಟ್ರೈಕ್ ರೇಟ್ 118 ಆಗಿರುತ್ತದೆ. ಅದಕ್ಕಾಗಿ ನೀವು ಚಪ್ಪಾಳೆ ಬಯಸಿದರೆ ತಪ್ಪು. ನಾವೆಲ್ಲರೂ ಸ್ವಲ್ಪ ಕ್ರಿಕೆಟ್ ಆಡಿದ್ದೇವೆ, ಸಾಕಷ್ಟು ಕ್ರಿಕೆಟ್ ಅಲ್ಲ. ಆದರೆ ನಾವು ಕಣ್ನಾರೆ ನೋಡುವುದರ ಬಗ್ಗೆ ಮಾತನಾಡುತ್ತೇವೆ. ನಮಗೆ ಯಾವುದೇ ಇಷ್ಟಗಳು ಮತ್ತು ಇಷ್ಟಪಡದಿರುವಿಕೆಗಳು ಇರಬೇಕಾಗಿಲ್ಲ. ನಮಗೆ ಇಷ್ಟಗಳು ಅಥವಾ ಇಷ್ಟಪಡದಿರುವಿಕೆಗಳು ಇದ್ದರೂ ಸ, ಏನಾಗುತ್ತಿದೆ ಎಂಬುದರ ಬಗ್ಗೆ ನಾವು ನಿಜವಾಗಿಯೂ ಮಾತನಾಡುತ್ತೇವೆ ಎಂದು ಹೇಳಿದ್ದರು.

ಸಿಎಸ್ಕೆ ವಿರುದ್ಧದ ಪಂದ್ಯಕ್ಕೆ ಮುಂಚಿತವಾಗಿ ಆರ್​ಸಿಬಿ ವಗುರುವಾರ ಗವಾಸ್ಕರ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ಫ್ರಾಂಚೈಸಿ ಹಂಚಿಕೊಂಡ ವೀಡಿಯೊದಲ್ಲಿ, 35 ವರ್ಷದ ನಟ ಮಿಸ್ಟರ್ ನಾಗ್ಸ್ (ದ್ಯಾನಿಶ್​ ಸೇಠ್​) ಮೂಲಕ ತಮಾಷೆ ಮಾಡಲಾಗಿದೆ. ನೋಡಿ ವಿರಾಟ್, ನಾನು ನಿಮ್ಮ ಸ್ನೇಹಿತನ ಬಗ್ಗೆ ಮಾತನಾಡಲು ಬಯಸುತ್ತೇನೆ. ನನ್ನದಲ್ಲ, ನಿನ್ನ ಸ್ನೇಹಿತ. ಅವರು ನಿಮ್ಮ ಬಗ್ಗೆ ಸಾಕಷ್ಟು ಒಳ್ಳೆಯ ವಿಷಯಗಳನ್ನು ಹೇಳುತ್ತಿರುತ್ತಾರೆ. ಅವರೇ ಸುನಿಲ್ ಎಂದು ಹೇಳಲಾಗಿದೆ.

Continue Reading
Advertisement
swati maliwal bibhav kumar
ಪ್ರಮುಖ ಸುದ್ದಿ2 mins ago

Swati Maliwal: ಆಪ್‌ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ನಡೆಸಿದ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ಬಂಧನ

PM Modi wishes HD Deve Gowda on his 93rd birthday Jackfruit gift to former PM
ರಾಜಕೀಯ2 mins ago

HD Deve Gowda: ದೇವೇಗೌಡರಿಗೆ ಜನ್ಮದಿನ ಶುಭ ಕೋರಿದ ಮೋದಿ; ಮಾಜಿ ಪ್ರಧಾನಿಗೆ ಹಲಸಿನ ಹಣ್ಣು ಗಿಫ್ಟ್‌

Virat kohli
ಕ್ರೀಡೆ11 mins ago

Virat kohli : ತಮ್ಮ ಜೀವನದ ಎರಡು ಆಘಾತಕಾರಿ ಸಂದರ್ಭಗಳನ್ನು ವಿವರಿಸಿದ ವಿರಾಟ್ ಕೊಹ್ಲಿ

Robbery case
ವಿಜಯಪುರ19 mins ago

Robbery Case : ಕ್ಯಾಂಟರ್‌ ಅಡ್ಡಗಟ್ಟಿದ ದರೋಡೆಕೋರರು; ಖಾರದ ಪುಡಿ ಎರಚಿ 32 ಲಕ್ಷ ರೂ. ದೋಚಿ ಪರಾರಿ

Nitin Gadkari
Lok Sabha Election 202428 mins ago

Nitin Gadkari: ಯಾವ ಸರ್ಕಾರದಿಂದಲೂ ಸಂವಿಧಾನ ಬದಲಾಯಿಸಲು ಸಾಧ್ಯವಿಲ್ಲ: ನಿತಿನ್‌ ಗಡ್ಕರಿ

Mother Teresa Series life in the works
ಸಿನಿಮಾ38 mins ago

Mother Teresa Series: 30 ಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ ‘ಮದರ್ ಥೆರೆಸಾʼ ಸಿರೀಸ್‌!

Virat Kohli
ಪ್ರಮುಖ ಸುದ್ದಿ58 mins ago

Virat kohli : ಗವಾಸ್ಕರ್​​ಗೆ ವಿರಾಟ್​ ಕೊಹ್ಲಿಯನ್ನು ಬೈಯುವುದೇ ಕೆಲಸ, ಇದೀಗ ಮತ್ತೊಂದು ಬಾರಿ ಟೀಕೆ

gold rate today aditi
ಚಿನ್ನದ ದರ1 hour ago

Gold Rate Today: ಬಂಗಾರದ ದರಗಳಲ್ಲಿ ಭಾರಿ ಏರಿಕೆ; ಇಂದು ಕೊಳ್ಳಲು ಮುಂದಾಗುತ್ತೀರಾ? ಗಮನಿಸಿ

Advisory for Students
ವಿದೇಶ1 hour ago

Advisory for Students: ಕಿರ್ಗಿಸ್ತಾನದಲ್ಲಿನ ವಿದ್ಯಾರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಭಾರತ, ಪಾಕಿಸ್ತಾನ; ಕಾರಣವೇನು?

Gas Cylinder Blast
ಬೆಳಗಾವಿ1 hour ago

Gas Cylinder Blast: ಲೈಟ್ ಆನ್ ಮಾಡುತ್ತಿದ್ದಂತೆ ಸಿಲಿಂಡರ್‌ ಸ್ಫೋಟ; ಪತಿ- ಪತ್ನಿ ಗಂಭೀರ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case JDS calls CD Shivakumar pen drive gang
ರಾಜಕೀಯ17 hours ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ1 day ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ2 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು2 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ3 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ4 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20244 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌