BITM Silver jubilee | ರಜತ ಮಹೋತ್ಸವದ ಸಂಭ್ರಮದ ಹೊಸ್ತಿಲಲ್ಲಿ ʼಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್ʼ - Vistara News

ಕರ್ನಾಟಕ

BITM Silver jubilee | ರಜತ ಮಹೋತ್ಸವದ ಸಂಭ್ರಮದ ಹೊಸ್ತಿಲಲ್ಲಿ ʼಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್ʼ

BITM Silver jubilee | ಮಾಜಿ ಕೇಂದ್ರ ಸಚಿವೆ ದಿ. ಶ್ರೀಮತಿ ಬಸವರಾಜೇಶ್ವರಿಯವರ ನಾಲ್ಕೂವರೆ ದಶಕದ ರಾಜಕೀಯ ಸೇವೆಯ ಅನುಭವದ ಫಲವೇ ಟಿ.ಇ.ಎಚ್.ಆರ್.ಡಿ. ಟ್ರಸ್ಟ್. ಗುಣಾತ್ಮಕ ಶಿಕ್ಷಣ, ಸತತ ಪರಿಶ್ರಮವೇ ಈ ಸಂಸ್ಥೆಯ ಯಶಸ್ಸಿನ ಗುಟ್ಟಾಗಿದೆ. ಬಿಐಟಿಎಂ ಸಂಸ್ಥೆಯ ರಜತ ಮಹೋತ್ಸವ ಸಂಭ್ರಮಾಚರಣೆ ಡಿ.17ರಂದು ಬಳ್ಳಾರಿಯಲ್ಲಿ ನಡೆಯಲಿದೆ.

VISTARANEWS.COM


on

BITM Silver jubilee
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಳ್ಳಾರಿ: ರಾಜ್ಯದ ಹಿಂದುಳಿದ ಭಾಗದಲ್ಲಿ ಸುದೀರ್ಘವಾಗಿ ಮೂರು ದಶಕಗಳ ಕಾಲ ಅಕ್ಷರ ಸೇವೆ ನೀಡುತ್ತಿರುವ ಹೆಗ್ಗಳಿಕೆಯೊಂದಿಗೆ ಸಾಗುತ್ತಿದೆ ತುಂಗಭದ್ರ ಎಜುಕೇಷನ್ ಹೆಲ್ತ್ ಆ್ಯಂಡ್ ರೂರಲ್ ಡೆವೆಲಪ್‌ಮೆಂಟ್ ಟ್ರಸ್ಟ್ (ಟಿ.ಇ.ಎಚ್.ಆರ್.ಡಿ ಟ್ರಸ್ಟ್). ಅಂದು ರಾಜಕೀಯದ ಮೂಲಕ ಸಮಾಜ ಸೇವೆ ಮಾಡಿದ ಮಾಜಿ ಸಚಿವೆ ಬಸವರಾಜೇಶ್ವರಿ ಕುಟುಂಬದವರು, ಇಂದು ಶಿಕ್ಷಣ ಸಂಸ್ಥೆಯ ಮೂಲಕ ಅಕ್ಷರ ದಾಸೋಹ ಮಾಡುತ್ತಿದ್ದಾರೆ. ತಾಯಿ ಹಾಕಿಕೊಟ್ಟ ಪಥದಲ್ಲಿ ಸಾಗುತ್ತಾ ಜನಮಾನಸದಲ್ಲಿ ಅಚ್ಚಳಿಯದೆ ಇದ್ದಾರೆ. “ಬಸವರಾಜೇಶ್ವರಿ ಸಮೂಹ ಶಿಕ್ಷಣ ಸಂಸ್ಥೆ”ಯ ಅಡಿಯಲ್ಲಿ ಬರುವ “ಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್” ರಜತ ಮಹೋತ್ಸವದ (BITM Silver jubilee) ಸಂಭ್ರಮದ ಹೊಸ್ತಿಲಲ್ಲಿದೆ.

ಹಿಂದುಳಿದ ಜಿಲ್ಲೆಗಳ ಭಾಗ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಕಲ್ಯಾಣ ಕರ್ನಾಟಕದಲ್ಲಿಯೇ ಶೈಕ್ಷಣಿಕ ಸೇವೆ ಮಾಡಬೇಕೆಂಬ ಮಹದಾಸೆಯಲ್ಲಿ ಹಿಂದುಳಿದ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ನೀಡುವ ಅಕ್ಷರದ ಕಲ್ಪತರು ಟಿ.ಇ.ಎಚ್.ಆರ್.ಡಿ. ಟ್ರಸ್ಟ್ ಆಗಿದೆ.

ಬಿಐಟಿಎಂ ಎಂಬ ಕಾಲೇಜು ಇಲ್ಲದಿದ್ದರೆ ಈ ಭಾಗದ ವಿದ್ಯಾರ್ಥಿಗಳಿಗೆ ಗುಣಾತ್ಮಕ ತಾಂತ್ರಿಕ ಶಿಕ್ಷಣ ಮರೀಚಿಕೆಯಾಗುತ್ತಿತ್ತು ಎಂದರೆ ತಪ್ಪಾಗಲಿಕ್ಕಿಲ್ಲ. ಗುಣಾತ್ಮಕ ಶಿಕ್ಷಣ ನೀಡುವ ರಾಜ್ಯದ ಬೆರಳೆಣಿಕೆಯಷ್ಟು ಕಾಲೇಜುಗಳಲ್ಲಿ ಬಿಐಟಿಎಂ ಒಂದು ಎನ್ನುವುದು ಈ ಭಾಗದ ಹೆಗ್ಗಳಿಕೆಯೇ ಸರಿ. ಇದರಿಂದಾಗಿ ರಾಜಧಾನಿಯಲ್ಲಿ ಸಿಗುವಂತಹ ಗುಣಮಟ್ಟದ ತಾಂತ್ರಿಕ ಶಿಕ್ಷಣ ಬಳ್ಳಾರಿಯಲ್ಲಿಯೇ ಸಿಗುತ್ತಿದೆ. ಈ ಸಂಸ್ಥೆಯು ಕಳೆದ ಮೂರು ದಶಕಗಳಿಂದಲೂ ಅಕ್ಷರ ದಾಸೋಹದಲ್ಲಿ ತೊಡಗಿಸಿಕೊಂಡಿದೆ.

ಸಂಸ್ಥೆಯ ಇಣುಕುನೋಟ
ಬಳ್ಳಾರಿ ಸೇರಿ ಸುತ್ತಮುತ್ತಲ ಜಿಲ್ಲೆಗಳ ಜನರ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆಯನ್ನು ದೃಷ್ಟಿಯಲ್ಲಿಟ್ಟುಕೊಂಡು, 1981ರಲ್ಲಿ ಹುಟ್ಟಿಕೊಂಡಿರುವ ಸಂಸ್ಥೆಯೇ ತುಂಗಭದ್ರ ಶಿಕ್ಷಣ, ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿ ಟ್ರಸ್ಟ್(ರಿ). ನರ್ಸರಿ, ಪ್ರಾಥಮಿಕ, ಪ್ರೌಢ, ಪದವಿಪೂರ್ವ, ಪದವಿ, ಸ್ನಾತಕೋತ್ತರ, ತಾಂತ್ರಿಕ ಮತ್ತು ಮ್ಯಾನೇಜ್‌ಮೆಂಟ್ ಕೋರ್ಸ್‌ಗಳ ಮೂಲಕ ಈ ಭಾಗದಲ್ಲಿ ಶಿಕ್ಷಣ ಕ್ರಾಂತಿಯನ್ನು ಈ ಟ್ರಸ್ಟ್ ಮಾಡಿದೆ. ಇಲ್ಲಿನ ವಿದ್ಯಾರ್ಥಿ ಸಮೂಹ ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವ ಜತೆಗೆ ಬೇರೆ ದೇಶದಲ್ಲಿಯೂ ಕೀರ್ತಿ ಪತಾಕೆಯನ್ನು ಹಾರಿಸುತ್ತಿರುವುದು ಇಲ್ಲಿನ ಉತ್ತಮ ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ. ಉತ್ತಮ ಶಿಕ್ಷಣದಲ್ಲಿ ಧನ್ಯತಾಭಾವವನ್ನು ಕಂಡ ಸಂಸ್ಥೆಯು, ಇಲ್ಲಿನ ವಿದ್ಯಾರ್ಥಿಗಳ ಜ್ಞಾನದ ದಾಹವನ್ನು ಮನಗೊಂಡು ವಿದ್ಯಾ ಸಂಸ್ಥೆಗಳನ್ನು ಟ್ರಸ್ಟ್ ಅಡಿಯಲ್ಲಿ ಹುಟ್ಟುಹಾಕುತ್ತಾ ಇಲ್ಲಿನ ಜನರ ಶೈಕ್ಷಣಿಕ ಆಶೋತ್ತರಗಳನ್ನು ಈಡೇರಿಸುತ್ತಾ ಈ ಭಾಗದ ಶೈಕ್ಷಣಿಕ ರಂಗವನ್ನು ವಿಸ್ತಾರಗೊಳಿಸಿ, ಶ್ರೀಮಂತ ಗೊಳಿಸುವತ್ತ ದಾಪುಗಾಲಿಟ್ಟಿದೆ.

ಅಮ್ಮನೇ ಪ್ರೇರಣೆ ಮತ್ತು ಆದರ್ಶ
ಮಾಜಿ ಕೇಂದ್ರ ಸಚಿವರಾದ ದಿ. ಶ್ರೀಮತಿ ಬಸವರಾಜೇಶ್ವರಿಯವರ ಅನುಭವ, ವಿಚಕ್ಷಣೆ ಮತ್ತು ಸಮಾಜದ ಬಗ್ಗೆ ಇದ್ದ ಕಾಳಜಿ ಅಪೂರ್ವವಾದುದು. ಅತ್ಯುತ್ತಮ ಕ್ರಮ ಶಿಕ್ಷಣ, ಶಿಸ್ತು, ಬದ್ಧತೆ, ಸಮಾಜದ ಸಮಗ್ರ ಏಳಿಗೆಗೆ ಪ್ರತಿಯೊಬ್ಬರಿಗೂ ವಿದ್ಯಾಭ್ಯಾಸ ಅತ್ಯಗತ್ಯ ಎಂಬ ತತ್ವದಲ್ಲಿ ನಂಬಿಕೆ ಇಟ್ಟವರು ಶ್ರೀಮತಿ ಬಸವರಾಜೇಶ್ವರಿಯವರಾಗಿದ್ದಾರೆ. ಇವರ ನೇತೃತ್ವದಲ್ಲಿ ತುಂಗಭದ್ರ ಶಿಕ್ಷಣ ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯು 1992ರಲ್ಲಿ ಬಳ್ಳಾರಿಯಲ್ಲಿ ಪ್ರಪಥಮ ಬಾರಿಗೆ “ಸಂಜಯ ಗಾಂಧಿ ಪಾಲಿಟೆಕ್ನಿಕ್” ಅನ್ನು ಪ್ರಾರಂಭವಾಯಿತು. ಅಂದು ಆರಂಭಿಸಿದ ಶಿಕ್ಷಣ ಸಂಸ್ಥೆಯು ವರ್ಷದಿಂದ ವರ್ಷಕ್ಕೆ ಹೆಮ್ಮರವಾಗಿ ಬೆಳೆಯುತ್ತಾ ಬಂದಿದೆ. ಇದೀಗ ಬಸವರಾಜೇಶ್ವರಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ “ಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್” 1997ರಲ್ಲಿ ಪ್ರಾರಂಭವಾಗಿ ಈ ವರ್ಷ “ರಜತ ಮಹೋತ್ಸವ”ದ ಸಂಭ್ರಮದಲ್ಲಿದೆ.

ನ್ಯಾಕ್‌ನಿಂದ “ಎ+” ಗ್ರೇಡ್ ಪಡೆದ ಹೆಗ್ಗಳಿಕೆ
ಈ ಹಿಂದುಳಿದ ಕಲ್ಯಾಣ ಕರ್ನಾಟಕ (ಹೈದರಾಬಾದ್ ಕರ್ನಾಟಕ) ಪ್ರದೇಶದ ವಿದ್ಯಾರ್ಥಿಗಳಿಗೆ ಅತ್ಯುತ್ತಮ ತಾಂತ್ರಿಕ ವಿದ್ಯಾಭ್ಯಾಸ ನೀಡುವ ಇಚ್ಛೆಯಿಂದ ಬಳ್ಳಾರಿಯಲ್ಲಿ 1997ರಲ್ಲಿ ಸ್ಥಾಪಿಸಿದ ಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್ (ಬಳ್ಳಾರಿ ಇಂಜಿನಿಯರಿಂಗ್ ಕಾಲೇಜ್) ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಸ್ವಾಯತ್ತತೆ ಪಡೆದು, ನ್ಯಾಷನಲ್ ಬೋರ್ಡ್ ಆಫ್ ಅಕ್ರೆಡಿಟೇಶನ್ (ಎನ್‌ಬಿಎ) ಮಾನ್ಯತೆಯನ್ನೂ ಪಡೆದುಕೊಂಡಿತ್ತು. ಅಲ್ಲದೆ, ನ್ಯಾಷನಲ್ ಅಸೆಸ್‌ಮೆಂಟ್ & ಅಕ್ರೆಡಿಟೇಷನ್ ಕೌನ್ಸಿಲ್ (ನ್ಯಾಕ್) ನಿಂದ ಎ+ ಗ್ರೇಡ್ ಪಡೆದಿದೆ. ರಾಜ್ಯದ 220 ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಸ್ವಾಯತ್ತತೆ ಪಡೆದ ಕೇವಲ 25 ಕಾಲೇಜಿಗಳಲ್ಲಿ ಬಿಐಟಿಎಂ ಕೂಡ ಒಂದಾಗಿದೆ.

ನಾಲ್ಕೂವರೆ ದಶಕಗಳ ಅನುಭವದ ಫಲ ಈ ಶಿಕ್ಷಣ ಕಲ್ಪನೆ
ಕೃಷಿ ಕುಟುಂಬದಿಂದ ಬಂದ ಬಸವರಾಜೇಶ್ವರಿಯವರು ಓದಿದ್ದು ಬಳ್ಳಾರಿಯ ಸರ್ಕಾರಿ ಬಾಲಕಿಯರ ಪ್ರೌಢ ಶಾಲೆಯಲ್ಲಿ ಎನ್ನುವುದು ವಿಶೇಷ. ನಾಲ್ಕು ದಶಕಗಳ ಕಾಲ ಗೆಜ್ಜಲಗಟ್ಟ ಸಂಸ್ಥಾನದಲ್ಲಿ ಜಹಗೀರದಾರ ಮನೆತನದ ಸೊಸೆಯಾಗಿ, 1956ರಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಸೇರಿ, 1957 ರಿಂದ 1977ರವರೆಗೆ ಮೂರು ಬಾರಿ ಮಾನ್ವಿಯಿಂದ ಶಾಸಕರಾಗಿದ್ದರು. ಸಮಾಜ ಕಲ್ಯಾಣ ಇಲಾಖೆ ಮತ್ತು ಸಣ್ಣ ನೀರಾವರಿ ಇಲಾಖೆ ಸಚಿವರಾಗಿ ಸೇವೆ ಸಲ್ಲಿಸಿದ್ದರು.

1977 ರಿಂದ 1984ರವರೆಗೆ ರಾಯಚೂರಿನ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯರಾಗಿದ್ದರು. ಅಲ್ಲದೆ, ಮುಖ್ಯಮಂತ್ರಿ ಗುಂಡೂರಾವ್ ಅವರ ಸರ್ಕಾರದ ಅವಧಿಯಲ್ಲಿ ವಿಧಾನ ಪರಿಷತ್ ಸಭಾಧ್ಯಕ್ಷರಾಗಿದ್ದರು. 1984, 1989 ಮತ್ತು 1991ರಲ್ಲಿ ಮೂರು ಬಾರಿ ಬಳ್ಳಾರಿ ಸಂಸದರಾಗಿದ್ದರು. 1993ರಿಂದ 1995ರವರೆಗೆ ಪಿ.ವಿ.ನರಸಿಂಹ ರಾವ್ ಅವರ ಸರ್ಕಾರದ ಅವಧಿಯಲ್ಲಿ ಕೇಂದ್ರದ ಮಹಿಳಾ ಮತ್ತು ಕಲ್ಯಾಣ ಸಚಿವರಾಗಿದ್ದರು. ಚೀನಾದ ಬೀಜಿಂಗ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನ ಮತ್ತು ಸಾರ್ಕ್ ಶೃಂಗ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಅಮೆರಿಕ, ಜಪಾನ್, ಹಾಂಕಾಂಗ್, ಸಿಂಗಾಪುರ್, ಮಲೇಷಿಯಾ, ಈಜಿಪ್ಟ್, ಜಾಂಬಿಯಾ ಮುಂತಾದ ದೇಶಗಳಿಗೆ ಭೇಟಿ ನೀಡಿದ ಅನುಭವವೇ ಇಂತಹ ದೊಡ್ಡದೊಂದು ಶಿಕ್ಷಣ ಸಂಸ್ಥೆಯ ಅಡಿಪಾಯಕ್ಕೆ ಕಾರಣವಾಯಿತು.

ಹಲವು ಹುದ್ದೆಗಳ ಅನುಭವವೇ ಶೈಕ್ಷಣಿಕ ಸೇವೆಗೆ ಪ್ರೇರಣೆ
ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವುದಲ್ಲದೇ, ಬಸವರಾಜೇಶ್ವರಿಯವರು ನವಕರ್ನಾಟಕ ಸ್ಟೀಲ್ಸ್ ಲಿಮಿಟೆಡ್ ಸ್ಥಾಪಿಸುವ ಮೂಲಕ ಉದ್ಯಮಿಯೂ ಆಗಿದ್ದರು. ಬೆಂಗಳೂರಿನ ಕರ್ನಾಟಕ ಕೃಷಿಕ ಸಮಾಜದ ಕಾರ್ಯಾಧ್ಯಕ್ಷರಾಗಿ, ರಾಯಚೂರಿನ ಟ್ಯಾಗೂರ್ ಸ್ಮಾರಕ ವಿದ್ಯಾಸಂಸ್ಥೆಯ ಸ್ಥಾಪನಾ ಅಧ್ಯಕ್ಷರಾಗಿ, ಸಂಸದೀಯ ವ್ಯವಹಾರಗಳ ಸ್ಥಾಪನಾ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಅವರ ಹಲವು ಹುದ್ದೆಗಳ ಅನುಭವವೇ ಅವರು ಒಬ್ಬ ಶಿಕ್ಷಣ ಪ್ರೇಮಿಯಾಗಿ ರೂಪುಗೊಳ್ಳಲು ಕಾರಣವಾಯಿತು.

ದೇಶ ಮತ್ತು ವಿದೇಶ ಕಲ್ಪನೆಯಲ್ಲಿ ಶಿಕ್ಷಣ
ದಿ. ಬಸವರಾಜೇಶ್ವರಿಯವರ ತೃತೀಯ ಪುತ್ರರಾದ ಡಾ.ಯಶವಂತ್ ಭೂಪಾಲ್ ಅವರು ಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಅಧ್ಯಕ್ಷರಾಗಿದ್ದಾರೆ. ಇವರು ಕೃಷಿ ಮತ್ತು ರಾಜಕೀಯ ಹಿನ್ನೆಲೆಯ ಕುಟುಂಬದಿಂದ ಬಂದರೂ, ದೇಶ-ವಿದೇಶಗಳಿಗೆ ಭೇಟಿ ನೀಡಿ, ಅಲ್ಲಿನ ಶಿಕ್ಷಣ ಪದ್ಧತಿಯ ಬಗ್ಗೆ ಅಧ್ಯಯನ ಮಾಡಿ, ಸಂಸ್ಥೆಯ ಮತ್ತು ಶಿಕ್ಷಣ ಗುಣಮಟ್ಟದ ಏಳಿಗೆಗೆ ಅವಶ್ಯ ಎನಿಸಿದ ಅಂಶಗಳನ್ನು, ತಮ್ಮ ವಿದ್ಯಾಸಂಸ್ಥೆಗಳಲ್ಲಿ ಅಳವಡಿಸಿಕೊಂಡಿದ್ದು, ಸಂಸ್ಥೆಯ ಗುಣಾತ್ಮಕತೆಗೆ ಹಿಡಿದ ಕೈಗನ್ನಡಿಯಾಗಿದೆ. ಇವರನ್ನು ಈಗಲೂ ತಮ್ಮ ಗೆಜ್ಜಲಗಟ್ಟ ಗ್ರಾಮದಲ್ಲಿ ಕೃಷಿಕರಾಗಿಯೂ ಕಾಣಬಹುದು. ಇವರು ಸಾವಿರಾರು ಜನರಿಗೆ ಶಿಕ್ಷಣ ಸಂಸ್ಥೆಗಳಲ್ಲಿ ಉದ್ಯೋಗ ನೀಡಿ, ಅನ್ನದಾತರಾಗಿದ್ದಾರೆ ಹಾಗೂ ಸಿಬ್ಬಂದಿಯನ್ನು ತಮ್ಮ ಕುಟುಂಬದ ಸದಸ್ಯರೆಂದೇ ಭಾವಿಸುತ್ತಾರೆ. ಈ ಕಲ್ಪನೆಯೇ ಸಂಸ್ಥೆಯು ಆಲದ ಮರದಂತೆ ಹೆಮ್ಮರವಾಗಿ ಬೆಳೆಯಲು ಕಾರಣವಾಗಿದೆ ಎಂದರೆ ಉತ್ಪ್ರೇಕ್ಷೆ ಎನಿಸದು.

ಬಳ್ಳಾರಿ ಇನ್ಸ್‌ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್‌ಮೆಂಟ್‌ ಹೆಗ್ಗಳಿಕೆ ವಿಭಾಗಗಳಿವು
ಪ್ರಸ್ತುತ ಬಿ.ಇ. ಪದವಿಯಲ್ಲಿ 1) ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್, 2) ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್, 3) ಮೆಕಾನಿಕಲ್ ಎಂಜಿನಿಯರಿಂಗ್, 4) ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್, 5) ಸಿವಿಲ್ ಎಂಜಿನಿಯರಿಂಗ್, 6) ಆರ್ಟಿಫಿಸಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷಿನ್ ಲರ್ನಿಂಗ್, 7) ಕಂಪ್ಯೂಟರ್ ಸೈನ್ಸ್ (ಡೇಟಾ ಸೈನ್ಸ್), 8) ಕಂಪ್ಯೂಟರ್ ಸೈನ್ಸ್ (ಆರ್ಟಿಫಿಸಿಲ್ ಇಂಟೆಲಿಜೆನ್ಸ್)ನಲ್ಲಿ ಸುಮಾರು 3800 ವಿದ್ಯಾಥಿಗಳಿಗೆ ಶಿಕ್ಷಣ ನೀಡಲಾಗುತ್ತಿದೆ. ಜತೆಗೆ ಎಂಬಿಎ ಮತ್ತು ಒಂಬತ್ತು ಸಂಶೋಧನಾ ಕೇಂದ್ರಗಳನ್ನೂ ಈ ಶಿಕ್ಷಣ ಸಂಸ್ಥೆ ಹೊಂದಿದೆ.

95 ರಿಂದ ೩೫೦೦ ಸಾವಿರ ಗಡಿದಾಟಿದ ವಿದ್ಯಾರ್ಥಿ ಬಳಗ
ಬಿಐಟಿಎಂ, ಬಳ್ಳಾರಿಯು ಕೇವಲ 95 ವಿದ್ಯಾರ್ಥಿಗಳಿಂದ ಪ್ರಾರಂಭಗೊಂಡು, ಇಂದು 3,800 ವಿದ್ಯಾರ್ಥಿಗಳಿಗೆ ಉತ್ತಮ ತಾಂತ್ರಿಕ ಮತ್ತು ಮ್ಯಾನೇಜ್‌ಮೆಂಟ್ ಶಿಕ್ಷಣ ನೀಡುತ್ತಿದೆ. ಸಾವಿರಾರು ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಪ್ಲೇಸ್‌ಮೆಂಟ್ ಮೂಲಕ, ಉದ್ಯೋಗಾವಕಾಶ ಮಾಡಿ ಕೊಟ್ಟು, ಅವರ ಜೀವನಕ್ಕೆ ಆಧಾರವಾಗಿರುವುದು, ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ಸಂಖ್ಯೆ ಏರುಮುಖದಲ್ಲಿ ಸಾಗಲು ಕಾರಣವಾಗಿದೆ.

BITM Silver jubilee

ಸಂಸ್ಥೆಯ ಸಾರಥಿಗಳಿವರು
ದಿ.ಶ್ರೀಮತಿ ಬಸವರಾಜೇಶ್ವರಿಯವರ ನೇತೃತ್ವದಲ್ಲಿ ಟ್ರಸ್ಟ್ ಪ್ರಾರಂಭಗೊಂಡಿದ್ದು, ಪ್ರಸ್ತುತ ಟ್ರಸ್ಟ್‌ನ ಅಧ್ಯಕ್ಷರಾಗಿ ಡಾ.ಎಸ್.ಜೆ.ವಿ.ಮಹಿಪಾಲ್ ಹಾಗೂ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಬಿಐಟಿಎಂ ಕಾಲೇಜಿನ ಅಧ್ಯಕ್ಷರಾಗಿ ಡಾ.ಯಶವಂತ ಭೂಪಾಲ್, ಟ್ರಸ್ಟಿ, ಗೌರವ ಕಾರ್ಯದರ್ಶಿ ಹಾಗೂ ಬಿಐಟಿಎಂನ ಉಪನಿರ್ದೇಶಕರಾದ ವೈ.ಜೆ.ಪೃಥ್ವಿರಾಜ್ ಭೂಪಾಲ್, ಹಾಗೂ ಟ್ರಸ್ಟಿಗಳಾದ ಎಸ್.ಬಿ.ಅಶೋಕ್ ಭೂಪಾಲ್, ಡಾ.ವಿ.ಜೆ.ಭರತ್ ಮತ್ತು ಅಮರರಾಜ್ ಭೂಪಾಲ್‌ ಅವರು ಸಂಸ್ಥೆಯ ಸಾರಥಿಗಳಾಗಿ ಮುನ್ನಡೆಸುತ್ತಿದ್ದಾರೆ.

ಉತ್ಕೃಷ್ಟ ಆಡಳಿತ ಮಂಡಳಿ
ಬಿಐಟಿಎಂ ಕಾರ್ಯಚಟುವಟಿಕೆಗಾಗಿ ಮಾರ್ಗದರ್ಶನ ಮತ್ತು ಸಲಹೆ ನೀಡಲು ಉತ್ಕೃಷ್ಟವಾದ ಆಡಳಿತ ಮಂಡಳಿಯನ್ನು ಹೊಂದಿದ್ದು, ಇದರಲ್ಲಿ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಪ್ರೊಫೆಸರ್‌ಗಳು, ಬಹುರಾಷ್ಟ್ರಿಯ ಕಂಪನಿಗಳ ಮುಖ್ಯಸ್ಥರು ಹಾಗೂ ಉನ್ನತ ಶ್ರೇಣಿಯ ಅಧಿಕಾರಿಗಳು, ರಾಜ್ಯದ ವಿವಿಧ ತಾಂತ್ರಿಕ ಮಹಾವಿದ್ಯಾಲಯಗಳ ಪ್ರಾಚಾರ್ಯರು ಹಾಗೂ ಪ್ರೊಫೆಸರ್‌ಗಳು, ಖ್ಯಾತ ಲೆಕ್ಕ ಪರಿಶೋಧಕರು ಇರುತ್ತಾರೆ.

ಉತ್ತಮ ಫಲಿತಾಂಶದಲ್ಲೂ ಸೈ
ಫಲಿತಾಂಶದಲ್ಲೂ ರಾಜ್ಯದ ಯಾವುದೇ ಪ್ರತಿಷ್ಠಿತ ಕಾಲೇಜಿಗೂ ಕಡಿಮೆ ಇಲ್ಲ ಎನ್ನುವುದು ಕಾಲೇಜಿನ ಫಲಿತಾಂಶದ ಇತಿಹಾಸದಿಂದ ತಿಳಿಯುತ್ತದೆ. ಶೇ.90-95ರಷ್ಟು ಫಲಿತಾಂಶವನ್ನು ಹೊಂದಿದ್ದು, ಕಾಲೇಜಿನ ಗುಣಮಟ್ಟವನ್ನು ಸಾರಿ ಹೇಳುತ್ತವೆ. ಕಳೆದ ಐದು ವರ್ಷದಲ್ಲಿ ವಿಶ್ವವಿದ್ಯಾಲಯದ 10 ರ‍್ಯಾಂಕ್‌ಗಳಿಗೆ ಕಾಲೇಜಿನ ವಿದ್ಯಾರ್ಥಿಗಳು ಭಾಜನರಾಗಿದ್ದಾರೆ. ಇನ್ನು ಕ್ರೀಡೆಯಲ್ಲಿ ಕಾಲೇಜಿನ ಕ್ರೀಡಾಪಟುಗಳು ವಿಶ್ವವಿದ್ಯಾಲಯದ ಮಟ್ಟದಲ್ಲಿ ಅತ್ಯುತ್ತಮ ಸಾಧನೆಗೈದು, “ಯುನಿವರ್ಸಿಟಿ ಬ್ಲೂ” ಎಂದು ಗುರುತಿಸಲ್ಪಟ್ಟು, ಹಲವಾರು ಕ್ರೀಡೆಗಳಲ್ಲಿ ವಿಶ್ವವಿದ್ಯಾನಿಲಯವನ್ನು ಸಹ ಪ್ರತಿನಿಧಿಸಿದ್ದಾರೆ

ವಿದ್ಯಾರ್ಥಿಗಳ ಉದ್ಯೋಗದ ವಿವರಗಳು
ಈವರಗೆ ಕಾಲೇಜಿನಲ್ಲಿ ಕ್ಯಾಂಪಸ್ ಪ್ಲೇಸ್‌ಮೆಂಟ್ ಮೂಲಕ ಶೇ.78ರಷ್ಟು ವಿದ್ಯಾರ್ಥಿಗಳು ಬಹುರಾಷ್ಟೀಯ ಕಂಪನಿಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ಪಡೆಯುವ ಅತ್ಯಧಿಕ ಪ್ಯಾಕೇಜ್ ವರ್ಷಕ್ಕೆ 27.70 ಲಕ್ಷ ರೂ ಆಗಿದ್ದು, ಸರಾಸರಿ ಪ್ಯಾಕೇಜ್ ವರ್ಷಕ್ಕೆ ರೂ.4.50 ಲಕ್ಷಗಳು ಆಗಿವೆ.

ಇವರೇ ನಮ್ಮ ಶ್ರೇಯಸ್ಸು
ಡಾ. ಯಡವಳ್ಳಿ ಬಸವರಾಜ್, ಪ್ರಾಚಾರ್ಯರು, ಡಾ. ಬಿ.ಎಸ್. ಖೇಣೇದ, ಉಪಪ್ರಾಚಾರ್ಯರು ಮತ್ತು ಡೀನ್ (ಅಕಾಡೆಮಿಕ್ಸ್), ಡಾ. ಯು. ಈರಣ್ಣ, ಡೀನ್ (ವಿದ್ಯಾರ್ಥಿ ಮತ್ತು ಅಧ್ಯಾಪಕ ವ್ಯವಹಾರಗಳು), ಡಾ. ವಿ.ಸಿ.ಪಾಟೀಲ್, ಡೀನ್ (ಸಂಶೋಧನೆ ಮತ್ತು ಅಭಿವೃದ್ಧಿ), ಆಡಳಿತಾಧಿಕಾರಿಯಾಗಿ ಪಿ.ಅಮರೇಶಯ್ಯ, ಹಾಗೂ ಎಲ್ಲ ವಿಭಾಗಗಳ ಮುಖ್ಯಸ್ಥರು ಕಾಲೇಜಿನ ಮುಖ್ಯ ಸ್ತಂಭಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜತೆಗೆ ನುರಿತ ಮತ್ತು ಅಪಾರ ಅನುಭವ ಹೊಂದಿದ 24 ಪ್ರಾಧ್ಯಾಪಕರು, 22 ಅಸೋಸಿಯೇಟ್ ಪ್ರಾಧ್ಯಾಪಕ, 199 ಸಹಾಯಕ ಪ್ರಾಧ್ಯಾಪಕರ ಬಳಗವನ್ನು ಸಂಸ್ಥೆ ಹೊಂದಿದೆ. 48 ಜನರು ಡಾಕ್ಟರೇಟ್ ಪದವಿ, 196 ಸ್ನಾತಕೋತ್ತರ ಪದವಿ ಪಡೆದವರಾಗಿದ್ದು, ಇದರಲ್ಲಿ ಪ್ರಸ್ತುತ 68 ಸಿಬ್ಬಂದಿ ಸಂಶೋಧನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಅಧ್ಯಾಪಕರ ಪ್ರಕಟಣೆಗಳು
ಕಳೆದ ಐದು ವರ್ಷಗಳಲ್ಲಿ ನಮ್ಮ ಅಧ್ಯಾಪಕ ವೃಂದದ ಪ್ರಕಟಣೆಗಳು: ಅಂತಾರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಸಂಶೋಧನಾ ಪ್ರಕಟಣೆ: 620, ರಾಷ್ಟ್ರೀಯ ನಿಯತಕಾಲಿಕೆಗಳಲ್ಲಿ ಸಂಶೋಧನಾ ಪ್ರಕಟಣೆ: 50, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಮ್ಮೇಳನಗಳಲ್ಲಿ ಪ್ರಸ್ತುತಪಡಿಸಲಾದ ಪ್ರಬಂಧಗಳು: 166, ಪ್ರಕಟಿತ ಪುಸ್ತಕಗಳ ಸಂಖ್ಯೆ: 05.

ನಮ್ಮ ದೇವಾಲಯ ಎಂಬ ವಿದ್ಯಾಲಯದ ವಿಸ್ತೀರ್ಣ
ಮಹಾವಿದ್ಯಾಲಯವು 15.00 ಎಕರೆ ವಿಸ್ತೀರ್ಣದ ಕ್ಯಾಂಪಸ್ ಹೊಂದಿದ್ದು, ಹಸಿರು ಗಿಡಗಳು ಮತ್ತು ವಿವಿಧ ರೀತಿಯ ಹೂಬಳ್ಳಿ ಉದ್ಯಾನವನಗಳಿಂದ ಕೂಡಿದ ಸುಂದರ ಪರಿಸರದಲ್ಲಿ 28,000 ಚದರ ಮೀಟರ್‌ನಷ್ಟು ಸುಸಜ್ಜಿತ ಕಟ್ಟಡಗಳಾದ ಅಡ್ಮಿನ್ & ಪಿಜಿ ಬ್ಲಾಕ್, ಮಿಲ್ಲೇನಿಯಂ ಬ್ಲಾಕ್, ರಾಜಶೇಖರ್ ರೆಡ್ಡಿ ಎಲೆಕ್ಟ್ರಿಕಲ್ ಬ್ಲಾಕ್, ಡಾ. ರಾಜ್ ಗೋಪಾಲ್ ಮೆಕಾನಿಕಲ್ ಬ್ಲಾಕ್ ಮತ್ತು ಸಿ.ವಿ.ರಾಮನ್ ಬ್ಲಾಕ್ ನಿರ್ಮಿಸಲಾಗಿದೆ.

ನಮ್ಮ ತಂತ್ರಜ್ಞಾನ ಮತ್ತು ಪುಸ್ತಕ ಸಂಪತ್ತು
ಈಗಿನ ಶೈಕ್ಷಣಿಕ ಗುಣಮಟ್ಟಕ್ಕೆ ಅನುಗುಣವಾಗಿ ಅತ್ಯಾಧುನಿಕ ಕಂಪ್ಯೂಟರ್‌ಗಳು, ಎಲೆಕ್ಟಾನಿಕ್ಸ್, ಎಲೆಕ್ಟ್ರಿಕಲ್, ಸಿವಿಲ್ ಮತ್ತು ಮೆಕಾನಿಕಲ್ ಉಪಕರಣಗಳು, ಪ್ರಯೋಗಾಲಯಗಳು ಮತ್ತು ಡಿಜಿಟಲ್ ತರಗತಿಗಳು, ಸೆಮಿನಾರ್ ಹಾಲ್, ಭವ್ಯವಾದ ಸಭಾಂಗಣ, ಅತ್ಯುತ್ತಮ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳು ಲಭ್ಯವಿದೆ. ಕಾಲೇಜಿನ ಗ್ರಂಥಾಲಯದಲ್ಲಿ ಸುಮಾರು ಒಂದು ಲಕ್ಷಕ್ಕೂ ಮೇಲ್ಪಟ್ಟು ಪುಸ್ತಕಗಳು (ಸಂಪುಟಗಳ ಹಾಗೂ ಶೀರ್ಷಿಕೆಗಳು) ಮತ್ತು ರಾಷ್ಟ್ರೀಯ/ಅಂತಾರಾಷ್ಟ್ರೀಯ ನಿಯತಕಾಲಿಕೆಗಳು ಲಭ್ಯವಿದೆ. ಕಾಲೇಜಿನ ಆವರಣದಲ್ಲಿಯೇ ಸುಸಜ್ಜಿತ ಸುಮಾರು 1400 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತ್ಯೇಕವಾಗಿ ವಾಸಿಸಲು ಅನುಕೂಲವಾಗುವ ತುಂಗಾ, ಭದ್ರ, ಕೃಷ್ಣ, ಕಾವೇರಿ ಮತ್ತು ನೇತ್ರಾವತಿ ವಿದ್ಯಾರ್ಥಿ ವಸತಿ ನಿಲಯಗಳಿವೆ.

ಇದನ್ನೂ ಓದಿ | Bernard Arnault | ಈಗ ವಿಶ್ವದ ಅತ್ಯಂತ ಶ್ರೀಮಂತ ಎಲಾನ್‌ ಮಸ್ಕ್‌ ಅಲ್ಲ, ಬರ್ನಾರ್ಡ್‌ ಅರ್ನಾಲ್ಟ್! ಅದಾನಿ ನಂ.3

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Karnataka Rain: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿ; ಕುಸಿದ ಸೇತುವೆಗಳು!

Karnataka Rain: ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಬೆಳಗಾವಿ, ಮೈಸೂರು, ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ನಾಳೆಯೂ ಕರಾವಳಿ ಭಾಗ, ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

VISTARANEWS.COM


on

ಉಡುಪಿ ಜಿಲ್ಲೆಯ ಸೀತಾ ನದಿ ಹರಿಯುವ ಭಾಗದಲ್ಲಿ ಗ್ರಾಮ, ತೋಟಗದ್ದೆಗಳು ಜಲಾವೃತವಾದ ದೃಶ್ಯ.
Koo

ಬೆಂಗಳೂರು: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿಯಾಗಿದೆ. ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆ ಸೇರಿ ಮಲೆನಾಡು ಭಾಗದಲ್ಲಿ ನಿರಂತರ ಮಳೆಯಿಂದ (Karnataka Rain) ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ನೀರಿನ ರಭಸಕ್ಕೆ ಹಲವೆಡೆ ಸೇತುವೆಗಳು ಕುಸಿದಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಡ್ರೋನ್ ಕಣ್ಣಲ್ಲಿ ಅಘನಾಶಿನಿ ನದಿ ಪ್ರವಾಹ ಸೆರೆ

ಕಾರವಾರ: ಜಿಲ್ಲೆಯ ಕರಾವಳಿಯಲ್ಲಿ ಕಳೆದೊಂದು ವಾರದಿಂದ ವರುಣ ಅಬ್ಬರಿಸುತ್ತಿದ್ದಾನೆ. ವರುಣಾರ್ಭಟಕ್ಕೆ ನದಿಗಳು ಉಕ್ಕಿ ಹರಿದು ಹಲವೆಡೆ ನೆರೆ ಸೃಷ್ಟಿಯಾಗಿದ್ದು, ಡ್ರೋನ್ ಕಣ್ಣಲ್ಲಿ ಅಘನಾಶಿನಿ ನದಿ ಪ್ರವಾಹ ಸೆರೆಯಾಗಿದೆ. ಕುಮಟಾ ತಾಲೂಕಿನ ಹಲವು ಗ್ರಾಮಗಳಲ್ಲಿ ಅಘನಾಶಿನಿ ನೆರೆ ಸೃಷ್ಟಿಸಿದ್ದು, ಹವ್ಯಾಸಿ ಛಾಯಾಚಿತ್ರಗಾರ ಗೋಪಿ ಜಾಲಿ ಡ್ರೋನ್ ಕ್ಯಾಮೆರಾದಲ್ಲಿ ನೆರೆ ಸ್ಥಿತಿಯನ್ನು ಸೆರೆಹಿಡಿದಿದ್ದಾರೆ.

ಸಕಲೇಶಪುರ ಬಳಿ ಹೆದ್ದಾರಿಯ ತಡೆಗೋಡೆ ಕುಸಿತ

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆ ಮುಂದುವರಿದಿದ್ದು, ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭೂ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಕೊಲ್ಲಹಳ್ಳಿ ಬಳಿ ಹೆದ್ದಾರಿಯ ತಡೆಗೋಡೆ ಕುಸಿದಿದೆ. ಸುಮಾರು 500 ಮೀಟರ್ ಉದ್ದಕ್ಕೂ ರಸ್ತೆಗೆ ಹೊಂದಿಕೊಂಡಿದ್ದ ತಡೆ ಗೋಡೆ ಕುಸಿಯುತ್ತಿದೆ. ಮಳೆ ಹೆಚ್ಚಾದರೆ ಚತುಷ್ಪಥ ರಸ್ತೆಯ ಒಂದು ಭಾಗದ ಕಾಂಕ್ರಿಟ್ ರಸ್ತೆಯೇ ಕೊಚ್ಚಿ ಹೋಗೋ ಆತಂಕ ಇದೆ. ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ರಸ್ತೆ ಕುಸಿತ ಆರೋಪ ಕೇಳಿಬಂದಿದೆ. ನೆನ್ನೆ ಕೂಡ ತಾಲೂಕಿನ ಗುಲಗಳಲೆ ಬಳಿ ಕುಸಿದಿದ್ದ ರಾಷ್ಟ್ರೀಯ ಹೆದ್ದಾರಿ ಕುಸಿದಿತ್ತು.

ಸಕಲೇಶಪುರ ತಾಲೂಕಿನ ಮಾರನಹಳ್ಳಿ ಬಳಿ ಮಳೆ ನೀರು ರಭಸಕ್ಕೆ ಸೇತುವೆ ಕೊಚ್ಚಿ ಹೋಗಿದೆ.

ದೊಡ್ಡತಪ್ಲು ಬಳಿ‌ ಗುಡ್ಡ ಕುಸಿತ

ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ‌ ಗುಡ್ಡ ಕುಸಿದಿದ್ದರಿಂದ ಸುಮಾರು ಒಂದುಗಂಟೆಗೂ ಅಧಿಕ ಸಮಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ರಸ್ತೆಗೆ ಕುಸಿದು ಮಣ್ಣು ತೆರವು ಬಳಿಕ ವಾಹನ ಸಂಚಾರ ಮತ್ತೆ ಆರಂಭವಾಗಿದೆ. ಮುಂಜಾಗ್ರತಾ ಕ್ರಮವಾಗಿ ಸಕಲೇಶಪುರ ಕಡೆಯಿಂದ‌ ಮಂಗಳೂರು ಕಡೆಗೆ ಹೋಗೋ ವಾಹನಗಳ‌ ಮಾರ್ಗ ಬದಲಾವಣೆ ಮಾಡಲಾಗಿದ್ದು, ಹಾನುಬಾಳ್ ಮೂಲಕ ತೆರಳಲು ಸೂಚಿಸಿಲಾಗಿದೆ.

ಶೃಂಗೇರಿಯಲ್ಲಿ ನಿಲ್ಲದ ತುಂಗಾ ನದಿ ಆರ್ಭಟ

ಚಿಕ್ಕಮಗಳೂರು: ಜಿಲ್ಲೆಯ ಕೆರೆಕಟ್ಟೆ, ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶೃಂಗೇರಿಯಲ್ಲಿ ತುಂಗಾ ನದಿ ಆರ್ಭಟಿಸುತ್ತಿದೆ. ನದಿ ಅಬ್ಬರಕ್ಕೆ ಭಾರತಿ ತೀರ್ಥ ರಸ್ತೆ ಜಲಾವೃತವಾಗಿದ್ದು, ಪಟ್ಟಣದ ಗಾಂಧಿ ಮೈದಾನವು ಸಂಪೂರ್ಣ ಮುಳುಗಡೆಯಾಗಿದೆ. ನದಿ ಪಾತ್ರದ ಅಂಗಡಿ ಮುಂಗಟ್ಟು, ಮನೆಗಳು ಜಲಾವೃತವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಾಹನ ಸಂಚಾರ ನಿಷೇಧ ಮಾಡಲಾಗಿದೆ.

ಶೃಂಗೇರಿಯ ಗಾಂಧಿ ಮೈದಾನವು ಸಂಪೂರ್ಣ ಮುಳುಗಡೆಯಾಗಿದೆ.

ಭಾರಿ ಮಳೆಗೆ ಮುಳ್ಳಯ್ಯನಗಿರಿ ರಸ್ತೆಯಲ್ಲಿ ಮತ್ತೆ ಗುಡ್ಡ ಕುಸಿದಿದೆ. ದತ್ತಪೀಠಕ್ಕೆ ಹೋಗುವ ಮಾರ್ಗದಲ್ಲೂ ಗುಡ್ಡ ಕುಸಿತಿದ್ದು, ಐದರಿಂದ ಆರು ಕಡೆ ಗುಡ್ಡದ ಮಣ್ಣು ಕುಸಿದಿದೆ. ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಪ್ರವಾಸಿ ತಾಣಗಳಾಗಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರ ವಾಹನಗಳಿಗೆ ನಿಷೇಧ ವಿಧಿಸಲಾಗಿದೆ.

ಮುರಿದು ಬಿದ್ದ ಕಬ್ಬಿಣದ ಸೇತುವೆ

ಭಾರೀ ಮಳೆ ಹಿನ್ನೆಲೆ ಶೃಂಗೇರಿ ತಾಲೂಕಿನ ಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ನೆಮ್ಮಾರು ಗ್ರಾಮದ ತೂಗು ಸೇತುವೆ ಕುಸಿದಿದೆ. ನೋಡ ನೋಡುತ್ತಿದ್ದಂತೆ ಜನರ ಕಣ್ಣೆದುರೇ ಕಬ್ಬಿಣದ ಸೇತುವೆ ಮುರಿದು ಬಿದ್ದಿದೆ.
ಸುಮಾರು ಐದಾರು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಹೊಳೆಹದ್ದು ಸೇತುವೆ ಇದಾಗಿದ್ದು, ಗ್ರಾಮದಿಂದ ಹೊರ ಬರಲಾಗದೆ ಗ್ರಾಮಸ್ಥರು ಸಂಕಷ್ಟ ಅನುಭವಿಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಸೇತುವೆ ಮುಳುಗಡೆಯಿಂದಾಗಿ ಹೊರನಾಡು-ಕಳಸ ಸಂಪರ್ಕ ಕಡಿತವಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ತಾಲೂಕಿನ ಮಲಕಾಪುರ ಕಲ್ಲುಗಣಿಯಲ್ಲಿ‌ ತಡೆಗೋಡೆ ಕುಸಿದಿದೆ.

ಹೊನ್ನಾಳಿ, ಹರಿಹರದಲ್ಲಿ ನದಿ ಪಾತ್ರದ ಪ್ರದೇಶಗಳು ಮುಳುಗಡೆ

ದಾವಣಗೆರೆ: ಮಲೆನಾಡು ಭಾಗದಲ್ಲಿ ಭಾರಿ ಮಳೆಯಿಂದ ದಾವಣಗೆರೆ ಜಿಲ್ಲೆಯ ಸಮೀಪ ತುಂಗಭದ್ರಾ ನದಿ ಮೈತುಂಬಿ ಹರಿಯುತ್ತಿದೆ. ತುಂಗಾ ನದಿಯಿಂದ 75 ಸಾವಿರ ಕ್ಯುಸೆಕ್‌ಗೂ ಹೆಚ್ಚು ನೀರು ಹೊರ ಬಿಟ್ಟ ಹಿನ್ನೆಲೆಯಲ್ಲಿ ಹೊನ್ನಾಳಿ, ಹರಿಹರ ಸೇರಿದಂತೆ ನದಿ ಪಾತ್ರದ ಪ್ರದೇಶಗಳು ಮುಳುಗಡೆಯಾಗಿವೆ.

ಶ್ರೀ ಕ್ಷೇತ್ರ ಉಕ್ಕಡಗಾತ್ರಿ ದೇವಸ್ಥಾನದ ಮುಂಭಾಗಕ್ಕೆ ತುಂಗಭದ್ರಾ ನದಿ ನೀರು ಬಂದಿದ್ದು, ಸ್ನಾನ ಘಟ್ಟ, ಅಂಗಡಿ ಮುಂಗಟ್ಟುಗಳು ಸಂಪೂರ್ಣ ಮುಳುಗಡೆಯಾಗಿವೆ. ಉಕ್ಕಡಗಾತ್ರಿಗೆ ಪ್ರವೇಶ ಮಾಡುವ ಒಂದು ರಸ್ತೆ ಮುಳುಗಡೆಯಾಗಿದೆ. ಸೇತುವೆ ಮಾಡಿಸಿ ಎಂದು ದಶಕಗಳಿಂದ ಹೋರಾಟ ನಡೆಯುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ. ಪ್ರತಿ ಬಾರಿ ನದಿಯಲ್ಲಿ ನೀರು ಹೆಚ್ಚಾದಾಗ ಎರಡು ರಸ್ತೆಗಳು ಬಂದ್ ಆಗಿ ಸಂಚಾರಕ್ಕೆ ತೊಂದರೆಯಾಗುತ್ತದೆ ಎಂದು ಜನರು ಅಸಮಾಧಾನ ಹೊರಹಾಕಿದ್ದಾರೆ. ಹೊನ್ನಾಳಿ, ಹರಿಹರ ಸೇರಿದಂತೆ ಹಲವು ಕಡೆಗಳಲ್ಲಿ ಕೂಡ ವಸತಿ ಪ್ರದೇಶಕ್ಕೆ ನೀರು ನುಗ್ಗುವ ಆತಂಕ ಎದುರಾಗಿದೆ. ನದಿಯಲ್ಲಿ ಹೊರ ಹರಿವು ಕಡಿಮೆಯಾಗದಿದ್ದರೆ ಜನರನ್ನು ಸ್ಥಳಾಂತರ ಮಾಡಲು ಅಧಿಕಾರಿಗಳು ಮುಂದಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ಭಾರಿ ಮಳೆಯಿಂದ ಗೋಪಾಲ ಶಾಹೀರ್ ಎಂಬುವವರ ಮನೆಯ ಚಾವಣಿ ಕುಸಿತಿದೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮೂಲೆ ಗದ್ದೆಮಠದ ಹತ್ತಿರ ಬಿದ್ದ ಬೃಹತ್ ಮರ ಬಿದ್ದಿದೆ.

ಮಡಿಕೇರಿ ಸಮೀಪ ಬಿರುಕು ಬಿಟ್ಟ ಗುಡ್ಡ

ಕೊಡಗು: ಮಡಿಕೇರಿ ಸಮೀಪದ ಮದೆನಾಡು ಸಮೀಪ ರಾಷ್ಟ್ರೀಯ 275ರಲ್ಲಿ ಗುಡ್ಡ ಕುಸಿಯುವ ಆತಂಕ ಉಂಟಾಗಿದೆ. ರಸ್ತೆ ಬದಿ ಇರೋ ಗುಡ್ಡದಲ್ಲಿ ಅಲ್ಲಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಯಾವ ಕ್ಷಣದಲ್ಲಾದರೂ ಗುಡ್ಡ ಕುಸಿದು ಬೀಳುವ ಸಾಧ್ಯತೆ ಇದೆ. ಮಂಜು ಮುಸುಕಿದ ವಾತಾವರಣದಿಂದ ವಾಹನ ಸವಾರರಿಗೆ ದಾರಿ ಸರಿಯಾಗಿ ಕಾಣುತ್ತಿಲ್ಲ. ಬಿರುಕು ಬಿಟ್ಟ ಸ್ಥಳಕ್ಕೆ ಮತ್ತಷ್ಟು ನೀರು ನುಗ್ಗಿದಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಇದೆ.

ಉಡುಪಿ ಜಿಲ್ಲೆಯಲ್ಲಿ ರೆಡ್‌ ಅಲರ್ಟ್‌

ಉಡುಪಿ: ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ. ಪಶ್ಚಿಮ ಘಟ್ಟ, ಹೆಬ್ರಿ, ಕಾರ್ಕಳ, ಆಗುಂಬೆಯಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನು ಸೀತಾ ನದಿಯ ಸುತ್ತಮುತ್ತಲ ಗ್ರಾಮ, ತೋಟಗದ್ದೆಗಳು ಜಲಾವೃತವಾದ ದೃಶ್ಯವನ್ನು ಡ್ರೋನ್ ಕ್ಯಾಮೆರಾದಿಂದ ಛಾಯಾಗ್ರಹಕ ಸಿದ್ಧಾರ್ಥ ನೀಲಾವರ ಸೆರೆಹಿಡಿದಿದ್ದಾರೆ. ಈ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿವೆ.

ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆ

ಮೈಸೂರು: ಕಬಿನಿ ಜಲಾಶಯದಿಂದ 36 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಹಿನ್ನೆಲೆಯಲ್ಲಿ ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ. ಕಬಿನಿ ಡ್ಯಾಂನಿಂದ ಕಪಿಲಾ ನದಿಗೆ ನೀರು ಬಿಡುಗಡೆ ಮಾಡಿದ್ದರಿಂದ
ನಂಜನಗೂಡಿನ ಪರಶುರಾಮ ದೇವಸ್ಥಾನ ಮುಳುಗಡೆಯಾಗಿದೆ. ಇನ್ನು ಮನೆಗಳಿಗೆ ನೀರು ನುಗ್ಗುತ್ತಿರುವ ಹಿನ್ನೆಲೆಯಲ್ಲಿ ನದಿ ಪಕ್ಕದ ನಿವಾಸಿಗಳು ಮನೆ ಖಾಲಿ ಮಾಡುತ್ತಿದ್ದು, ಪ್ರವಾಹದ ಭೀತಿ ಎದುರಿದುತ್ತಿದ್ದಾರೆ.

ಇದನ್ನೂ ಓದಿ | Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈದುಂಬಿ ಧುಮ್ಮಿಕ್ಕುತ್ತಿರುವ ಹೊಗೇನಕಲ್ ಜಲಪಾತ

ಚಾಮರಾಜನಗರ: ಕೆ.ಆರ್.ಎಸ್. ಹಾಗೂ ಕಬಿನಿ ಜಲಾಶಯದಿಂದ ಹೊರಹರಿವು ಹೆಚ್ಚಳ ಹಿನ್ನೆಲೆಯಲ್ಲಿ ಕಾವೇರಿ ರೌದ್ರ ನರ್ತನ ಮಾಡುತ್ತಿದ್ದು, ಇದರಿಂದ ಕರ್ನಾಟಕ- ತಮಿಳುನಾಡು ಗಡಿಯಲ್ಲಿರುವ ಹೊಗೇನಕಲ್ ಜಲಪಾತ ಮೈದುಂಬಿ ಧುಮ್ಮಿಕ್ಕುತ್ತಿದೆ.

Continue Reading

ಪ್ರಮುಖ ಸುದ್ದಿ

Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

Karnataka Jobs Reservation: ಮುಂಜಾನೆ ಸಿಎಂ ಮಾಡಿದ್ದ ಎಕ್ಸ್‌ ಪೋಸ್ಟ್‌ ಬಗ್ಗೆ ಖಾಸಗಿ ಉದ್ಯಮ ವಲಯದಲ್ಲಿ ಕೋಲಾಹಲವೇ ಎದ್ದಿತ್ತು. ಕಿರಣ್‌ ಮಜುಂದಾರ್‌ ಶಾ, ಮೋಹನದಾಸ ಪೈ ಮುಂತಾದವರು ಈ ವಿಧೇಯಕವನ್ನು ಆಕ್ಷೇಪಿಸಿದ್ದರು. ಇದಾದ ಬಳಿಕ ಪೋಸ್ಟ್‌ ಅಳಿಸಿದ್ದ ಸಿಎಂ, ಇದೀಗ ಹೊಸ ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

CM Siddaramaiah karnataka jobs reservation
Koo

ಬೆಂಗಳೂರು: ರಾಜ್ಯದ ಖಾಸಗಿ ಕೈಗಾರಿಕೆಗಳು (Private industry) ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ (Kannadiga employees) ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ (karnataka jobs reservation) ನಿಗದಿಪಡಿಸುವ ವಿಧೇಯಕಕ್ಕೆ (private jobs quota for locals bill) ಸೋಮವಾರ ನಡೆದ ಸಚಿವ ಸಂಪುಟ ಸಭೆಯು (karnataka Cabinet meeting) ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramiah) ತಿಳಿಸಿದ್ದಾರೆ.

ಈ ಬಗ್ಗೆ ಸೋಶಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಅವರು ಪೋಸ್ಟ್‌ ಮಾಡಿದ್ದಾರೆ. ಇಂದು ಮುಂಜಾನೆ ಹಾಕಿದ್ದ ಪೋಸ್ಟ್‌ ಅನ್ನು ಅಳಿಸಿ ಬೇರೊಂದು ಪೋಸ್ಟ್‌ ಹಾಕಿದ್ದು, ಅದರಲ್ಲಿ ಈ ವಿಚಾರ ತಿಳಿಸಿದ್ದಾರೆ. ಪೋಸ್ಟ್‌ನಲ್ಲಿ ಹೀಗಿದೆ:

“ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ. ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ.”

ಮುಂಜಾನೆ ಅವರು ಮಾಡಿದ್ದ ಪೋಸ್ಟ್‌ನಲ್ಲಿ, “ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ ʼಸಿʼ ಮತ್ತು ʼಡಿʼ ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ” ಎಂದು ಬರೆದಿದ್ದರು. ಈ ಬಗ್ಗೆ ಖಾಸಗಿ ಉದ್ಯಮ ವಲಯದಲ್ಲಿ ಕೋಲಾಹಲವೇ ಎದ್ದಿತ್ತು. ಕಿರಣ್‌ ಮಜುಂದಾರ್‌ ಶಾ, ಮೋಹನದಾಸ ಪೈ ಮುಂತಾದವರು ಈ ವಿಧೇಯಕವನ್ನು ಆಕ್ಷೇಪಿಸಿದ್ದರು. ಇದಾದ ಬಳಿಕ ಪೋಸ್ಟ್‌ ಅಳಿಸಿದ್ದ ಸಿಎಂ, ಇದೀಗ ಹೊಸ ಪೋಸ್ಟ್‌ ಮಾಡಿದ್ದಾರೆ.

ಎಚ್ಚರದಿಂದ ಕಾನೂನು ರೂಪಿಸುತ್ತೇವೆ: ಪೊನ್ನಣ್ಣ

“ಖಾಸಗಿ ಕಂಪನಿಗಳು ಹಾಗೂ ಖಾಸಗಿ ವ್ಯಕ್ತಿಗಳ‌ ಮೇಲೆ ಕಾನೂನು ತರಬೇಕಾದರೆ ಸಂವಿಧಾನದ ಆಶಯಗಳಡಿಯ ಹಕ್ಕುಗಳ ಉಲ್ಲಂಘನೆಯಾಗದಂತೆ ಕಾನೂನು ಜಾರಿ ಮಾಡಬೇಕುʼ ಎಂದು ಸಿಎಂ ಕಾನೂನು ಸಲಹೆಗಾರರು ಪೊನ್ನಣ್ಣ ಹೇಳಿದ್ದಾರೆ. ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ವಿಚಾರದಲ್ಲಿ ಮಾತನಾಡಿರುವ ಅವರು, ʼಈ ಕಾನೂನುಗಳನ್ನ ನಾನು ಓದಿಲ್ಲ. ಓದಿದ ಮೇಲೆ‌ ಮಾತನಾಡಬಹುದು. ಗಂಭೀರವಾಗಿ ಅಧ್ಯಯನ ಮಾಡಿ ಅದನ್ನು ಜಾರಿಮಾಡುವ ಕೆಲಸವಾಗುತ್ತೆʼ ಎಂದಿದ್ದಾರೆ.

ʼಖಾಸಗಿ ಕಂಪನಿಗಳಿಗೆ ಹಾಗೂ ವ್ಯಕ್ತಿಗಳಿಗೆ ರಾಜ್ಯಾಂಗ, ರಾಜ್ಯದ ಸಂಸ್ಥೆಗಳಿಗಿಂತ ಹೆಚ್ಚಿನ ಮೂಲಭೂತ ಹಕ್ಕುಗಳಿರುತ್ತವೆ. ಸರ್ಕಾರ ಅದರಲ್ಲಿ ಹಸ್ತಕ್ಷೇಪ ಮಾಡುವ ಅವಕಾಶ ಕಡಿಮೆ. ಕನ್ನಡಿಗರಿಗೆ ಮೀಸಲಾತಿ ಕೋಡುವುದರಲ್ಲಿ ಸಂಶಯವಿಲ್ಲ. ಅದರಲ್ಲಿ ಶಾಲೆಗಳು, ಸರ್ಕಾರದ ಅನುದಾನ ಪಡೆಯುವಂತಹ ಸಂಸ್ಥೆಗಳಲ್ಲಿ ಮೀಸಲಾತಿ ಕೊಡಬಹುದು. ಸಂಪೂರ್ಣ ಖಾಸಗಿ ಸಂಸ್ಥೆಗಳಿಗೆ ಮೀಸಲಾತಿ ಕೋಡುವ ವೇಳೆ ಅದನ್ನು ಸಂಪೂರ್ಣ ಪರಿಶೀಲನೆ ಮಾಡಿ ಕೊಡಬೇಕಾಗುತ್ತದೆ. ಕೋರ್ಟ್‌ಗಳಲ್ಲಿ ನಾಳೆ ಪ್ರಶ್ನೆ ಮಾಡಿದರೆ ಅದರಲ್ಲೂ ಯಶಸ್ವಿಯಾಗಬೇಕು. ಕ್ಯಾಬಿನೆಟ್‌ನಲ್ಲಿ ಮಾಡಿರುತ್ತಾರೆ ಅಂದ್ರೆ ಸಂಪೂರ್ಣ ಅಧ್ಯಯನ ಮಾಡಿರುತ್ತಾರೆ. ಸಿದ್ದರಾಮಯ್ಯ ಅವರ ಸರ್ಕಾರ ಕನ್ನಡಿಗರ ಏಳ್ಗೆಗೆ ಬದ್ಧವಾಗಿದೆ” ಎಂದಿದ್ದಾರೆ.

ಇದನ್ನೂ ಓದಿ: CM Siddaramaiah : ಅಸಮಾನತೆ ತೊಲಗಿದಾಗ ಮಾತ್ರ ಸ್ವಾತಂತ್ರ್ಯಕ್ಕೆ ಬೆಲೆ ಎಂದ ಸಿಎಂ ಸಿದ್ದರಾಮಯ್ಯ

Continue Reading

ಪ್ರಮುಖ ಸುದ್ದಿ

GT World Mall: ರೈತರಿಗೆ ಅವಮಾನ ಮಾಡಿದ ಜಿಟಿ ಮಾಲ್‌ ವಿರುದ್ಧ ಸಚಿವರು ಗರಂ; ʼಪಂಚೆ ಧರಿಸಿಯೇ ಸಿದ್ದರಾಮಯ್ಯ 7 ವರ್ಷ ರಾಜ್ಯ ಆಳ್ಲಿಲ್ವಾ?ʼ

GT World Mall: ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಈ ಕುರಿತು ಗರಂ ಆಗಿದ್ದು, ʼಪಂಚೆ ಧರಿಸಿಕೊಂಡೇ ಏಳು ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯ ರಾಜ್ಯದ ಆಡಳಿತ ಮಾಡುತ್ತಿದ್ದಾರೆ. ಇದರಿಂದ ಅವರು ಪಾಠ ಕಲಿಯಬೇಕುʼ ಎಂದು ಟೀಕಿಸಿದ್ದಾರೆ.

VISTARANEWS.COM


on

gt world mall 3
Koo

ಬೆಂಗಳೂರು: ಪಂಚೆ ಧರಿಸಿದ್ದಾರೆ ಎಂಬ ಕಾರಣದಿಂದ ಮಾಲ್‌ ಒಳಗೆ ಬಿಡದೆ ಕಾಯಿಸಿ ಹಾವೇರಿಯ ರೈತರನ್ನು (Haveri Farmer) ಅವಮಾನ ಮಾಡಿದ ಬೆಂಗಳೂರಿನ ಮಾಗಡಿ ರಸ್ತೆಯ ಜಿಟಿ ಮಾಲ್‌ನ (GT World Mall) ಸಿಬ್ಬಂದಿಯ ವರ್ತನೆಗೆ ರಾಜ್ಯದ ಸಚಿವರುಗಳು (State ministers) ಗರಂ ಆಗಿದ್ದಾರೆ. ಈ ಬಗ್ಗೆ ಪೊಲೀಸ್‌ ನೋಟೀಸ್‌ ನೀಡುವ ಸೂಚನೆ ನೀಡಿದ್ದಾರೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಈ ಕುರಿತು ಗರಂ ಆಗಿದ್ದು, ʼಪಂಚೆ ಧರಿಸಿಕೊಂಡೇ ಏಳು ವರ್ಷಗಳ ಕಾಲ ಸಿಎಂ ಆಗಿ ಸಿದ್ದರಾಮಯ್ಯ ರಾಜ್ಯದ ಆಡಳಿತ ಮಾಡುತ್ತಿದ್ದಾರೆ. ಇದರಿಂದ ಅವರು ಪಾಠ ಕಲಿಯಬೇಕುʼ ಎಂದು ಟೀಕಿಸಿದ್ದಾರೆ. ʼಆ ಮಾಲ್ ನಡೆಸುತ್ತಿರುವವರಿಗೆ ಬುದ್ಧಿ ಕಡಿಮೆ ಇರಬೇಕು. ನಮ್ಮ ಇಲಾಖೆ ಇಲ್ಲವೇ ಪೊಲೀಸ್ ಇಲಾಖೆಯಿಂದ ಈ ಬಗ್ಗೆ ಪತ್ರ ಬರೆಯುತ್ತೇವೆʼ ಎಂದು ಅವರು ಹೇಳಿದ್ದಾರೆ.‌

ಸರ್ಕಾರದಿಂದ ನಿಯಮ ತರುತ್ತೇವೆ: ಚಲುವರಾಯ ಸ್ವಾಮಿ

ರೈತರಿಗೆ ಪ್ರವೇಶ ನಿರಾಕರಣೆ ಮಾಡಿದ ಜಿ‌ಟಿ ಮಾಲ್ ಕ್ರಮವನ್ನು ಕೃಷಿ ಸಚಿವ ಚೆಲುವರಾಯಸ್ವಾಮಿ ಖಂಡಿಸಿದ್ದು, ಈ ವಿಚಾರದಲ್ಲಿ ಸೂಕ್ತ ನಿಯಮ ರೂಪಿಸಲು ಸರ್ಕಾರ ಪ್ರಯತ್ನಿಸಲಿದೆ ಎಂದು ಹೇಳಿದ್ದಾರೆ. ʼನಾವು ಇದನ್ನ ಖಂಡಿಸುತ್ತೇವೆ. ಕೆಲ ವರ್ಷಗಳ ಹಿಂದೆ ಪಂಚೆ ಕಟ್ಟಿಕೊಂಡು ಹೋದರೆ ಕ್ಲಬ್‌ಗಳಲ್ಲಿ ಬಿಡುತ್ತಿರಲಿಲ್ಲ. ಶೂ ಇಲ್ಲದೇ ಪಂಚೆ ಹಾಕಿಕೊಂಡು ಕ್ಲಬ್‌ಗೆ ಹೋಗಬಹುದು ಅಂತ ನಮ್ಮ ಸರ್ಕಾರ ನಿರ್ಧಾರ ಮಾಡಿತ್ತು. ಇದನ್ನು ನಾವು ಅಂದು ಅಧಿವೇಶನದಲ್ಲಿ ಚರ್ಚೆ ಮಾಡಿದ್ದೆವು. ಈಗಲೂ ಇದಕ್ಕೆ ಸರ್ಕಾರ ನಿಯಮ ತರಬೇಕುʼ ಎಂದು ಅವರು ಹೇಳಿದ್ದಾರೆ.

ʼಸರ್ಕಾರದಿಂದ ನಿಯಮ ತರುವ ಬಗ್ಗೆ ಸಿಎಂ ಜತೆ ಚರ್ಚೆ ಮಾಡ್ತೀನಿ. ಸೂಕ್ತ ಆದೇಶ ಹೊರಡಿಸಲು ಹೇಳುತ್ತೇವೆ. ರೈತರಿಗೆ ಅಪಮಾನ ಆಗಬಾರದು. ಮಾಲ್‌ಗಳಿಗೆ ಸೂಕ್ತವಾದ ಸೂಚನೆಯನ್ನು ನೀಡುತ್ತೇವೆ. ಕ್ಲಬ್, ಇಂಟರ್‌ನ್ಯಾಶನಲ್ ಫೆಸ್ಟಿವಲ್‌ನಲ್ಲಿ ಸ್ವಲ್ಪ ಡ್ರೆಸ್ ಕೋಡ್ ಇರುತ್ತದೆ. ಮಾಲ್‌ಗಳಲ್ಲಿ ಪ್ಯಾಂಟ್ ಹಾಕಿದ್ರೇನೇ ಬಿಡೋದು ಅಂತ ಹೇಳೋದು ತಪ್ಪಾಗುತ್ತೆ. ಮೆಟ್ರೋದಲ್ಲೂ ಕೂಡ ಹಿಂದೆ ಹೀಗೇ ಆಗಿತ್ತು. ರೈತರಿಗೆ ಹೀಗೆ ಅವಮಾನ ಆಗಬಾರದು, ಯಾರೂ ಅವಮಾನ ಮಾಡಬಾರದು. ಸಾರ್ವಜನಿಕರು, ರೈತರ ಜೊತೆ ಮಾಲ್ ಸಿಬ್ಬಂದಿ ಗೌರವಯುತವಾಗಿ ನಡೆದುಕೊಳ್ಳಬೇಕು ಎಂಬ ಸೂಚನೆ ಸರ್ಕಾರದಿಂದ ನೀಡಲಾಗುತ್ತದೆ. ಪಂಚೆ ಅಂದ್ರೆ ಯಾಕೆ ತಿರಸ್ಕಾರ ಮನೋಭಾವ ಅನ್ನೋದನ್ನು ಅವರನ್ನೇ ಕೇಳಬೇಕು” ಎಂದು ಚಲುವರಾಯ ಸ್ವಾಮಿ ಹೇಳಿದರು.

ಹಾವೇರಿ ಮೂಲದ ರೈತರನ್ನು ಪಂಚೆ ಉಟ್ಟಿದ್ದಾರೆ (Haveri Farmer wearing Dhoti) ಎಂಬ ಕಾರಣಕ್ಕಾಗಿ ಮಾಲ್‌ ಒಳಗೆ ಬಿಡದೆ ಅವಮಾನ ಮಾಡಿದ ಜಿಟಿ ವರ್ಲ್ಡ್‌ ಮಾಲ್‌ (GT World Mall) ಮುಂದೆ ಇಂದು ರೈತ ಸಂಘಟನೆಗಳ ಹಾಗೂ ಕನ್ನಡ ಸಂಘಟನೆಗಳ ಸದಸ್ಯರು ಪಂಚೆ ಉಟ್ಟು ಪ್ರತಿಭಟನೆ ನಡೆಸಿದ್ದಾರೆ. ರೈತರಿಗೆ ನ್ಯಾಯ ಸಲ್ಲಿಸಲು ಹೋರಾಟ ನಡೆಸಿದ ವಿಸ್ತಾರ ನ್ಯೂಸ್‌ ಹಾಗೂ ಸಾರ್ವಜನಿಕರ ಮುಂದೆ ಮಾಲ್‌ ಮಾಲಿಕರು ಕ್ಷಮೆ ಯಾಚಿಸಿದರು. ಮಾಲ್‌ ಆಡಳಿತದ ವರ್ತನೆಯ ಬಗ್ಗೆ ಸ್ಪಷ್ಟನೆ ಕೇಳಿ ನೋಟೀಸ್‌ ನೀಡಲು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ (Karnataka state human rights commission) ಮುಂದಾಗಿದೆ.

ಘಟನೆಯನ್ನು ವಿರೋಧಿಸಿದ ಕನ್ನಡ ಸಂಘಟನೆಯ ಕಾರ್ಯಕರ್ತರು ರೈತರ ಗೆಟಪ್‌ನಲ್ಲಿ ಬೆಳಗ್ಗೆ ಮಾಲ್‌ ಮುಂದೆ ಜಮಾಯಿಸಿದರು. ಕನ್ನಡ ಸಂಘಟನೆಯ ರೂಪೇಶ್ ರಾಜಣ್ಣ ಆ್ಯಂಡ್ ಟೀಂ ಪಂಚೆ ಧರಿಸಿ ಮಾಲ್‌ ಮುಂದೆ ಸೇರಿದ್ದು, ಪ್ರತಿಭಟನೆಗೆ ಮುಂದಾದರು. ಇಂದು ಪ್ರತಿಭಟನೆ ಹಿನ್ನೆಲೆಯಲ್ಲಿ ಮಾಲ್‌ನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.

ಇದನ್ನೂ ಓದಿ: GT World Mall: ಅನ್ನದಾತನಿಗೆ ಅವಮಾನ ಮಾಡಿದ ಜಿಟಿ ಮಾಲ್‌ ಮುಂದೆ ಪಂಚೆ ಉಟ್ಟು ಪ್ರತಿಭಟನೆ, ಕ್ಷಮೆ ಕೇಳಿದ ಮಾಲೀಕ

Continue Reading

ಕರ್ನಾಟಕ

HD Revanna: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದ ಮಾಜಿ ಸಚಿವ ಎಚ್.ಡಿ.ರೇವಣ್ಣ; ಪಕ್ಕೆಲುಬಿಗೆ ಪೆಟ್ಟು

HD Revanna: ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ತೆರಳಿ ಬರುವ ವೇಳೆ ಎಚ್‌.ಡಿ.ರೇವಣ್ಣ ಅವರು ಕಾಲು ಜಾರಿ ಬಿದ್ದಿದ್ದಾರೆ. ಇದರಿಂದ ಪಕ್ಕೆಲುಬುಗೆ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

VISTARANEWS.COM


on

HD Revanna
Koo

ಹಾಸನ: ದೇವಸ್ಥಾನದಲ್ಲಿ ಕಾಲು ಜಾರಿ ಬಿದ್ದು ಮಾಜಿ ಸಚಿವ ಎಚ್.ಡಿ.ರೇವಣ್ಣ (HD Revanna) ಅವರ ಪಕ್ಕೆಲುಬಿಗೆ ಪೆಟ್ಟಾಗಿದ್ದು, ಚಿಕಿತ್ಸೆಗಾಗಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಕಾದಶಿ ಪ್ರಯುಕ್ತ ಉಪವಾಸವಿದ್ದ ಎಚ್‌.ಡಿ.ರೇವಣ್ಣ, ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ತೆರಳಿದ್ದರು. ಪೂಜೆ ಸಲ್ಲಿಸಿ ಬರುವ ವೇಳೆ ಕಾಲು ಜಾರಿ ಬಿದ್ದಿದ್ದಾರೆ.

ಹರದನಹಳ್ಳಿಯಲ್ಲಿ ಪೂಜೆಯ ಬಳಿಕ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ದೇವಾಲಯಕ್ಕೆ ಎಚ್.ಡಿ.ರೇವಣ್ಣ ಹೊರಟಿದ್ದರು. ಈ ವೇಳೆ ಕಾಲು ಜಾರಿ ಬಿದ್ದಿದ್ದರಿಂದ ಪಕ್ಕೆಲುಬು ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಹೊಳೆನರಸೀಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಪವಾಸ ಹಾಗೂ ತೀವ್ರ ಪಕ್ಕೆಲುಬು ನೋವಿನ ಕಾರಣ ಸುಸ್ತಾಗಿರುವ ಎಚ್.ಡಿ.ರೇವಣ್ಣ ಅವರಿಗೆ ಹೊಳೆನರಸೀಪುರದ ತಾಲೂಕು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ | Ankola landslide Case: ಅಂಕೋಲಾ ಗುಡ್ಡ ಕುಸಿತ ಪ್ರಕರಣ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ವಾಲ್ಮೀಕಿ ನಿಗಮ ಹಗರಣ; ಮಾಜಿ ಸಚಿವ ನಾಗೇಂದ್ರ ಪತ್ನಿಯನ್ನು ವಶಕ್ಕೆ ಪಡೆದ ಇಡಿ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ (Valmiki Corporation Scam) ಸಂಬಂಧಿಸಿ ಮಾಜಿ ಸಚಿವ ಬಿ.ನಾಗೇಂದ್ರ (Ex minister B Nagendra) ಸದ್ಯ ಇಡಿ ಅಧಿಕಾರಿಗಳ (ED Officers) ವಶದಲ್ಲಿದ್ದಾರೆ. ಇದೀಗ ಅವರ ಪತ್ನಿ ಮಂಜುಳಾ ಅವರನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಡಾಲರ್ಸ್ ಕಾಲೋನಿ ನಿವಾಸದಿಂದ ವಶಕ್ಕೆ ಪಡೆದ ಅಧಿಕಾರಿಗಳು ಅವರನ್ನು ಇಡಿ ಕಚೇರಿ ಕರೆ ತಂದಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಮಂಜುಳಾ ಅವರಿಂದ ಮಾಹಿತಿ ಕಲೆ ಹಾಕಲಿದ್ದಾರೆ. ಮಂಜುಳಾ ಅವರ ಹೆಸರಲ್ಲಿ ಹಣದ ವಹಿವಾಟು ನಡೆದಿರುವ ಹಿನ್ನೆಲೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಅವ್ಯವಹಾರ ನಡೆದ ಸಮಯದಲ್ಲಿ ಮಂಜುಳಾ ಅವರ ಬ್ಯಾಂಕ್ ಖಾತೆಗಳಿಗೂ ಹಣ ಬಂದಿರುವ ಹಿನ್ನಲೆಯಲ್ಲಿ ಇಡಿ ಅಧಿಕಾರಿಗಳು ಇದರ ಮೂಲವನ್ನು ಪ್ರಶ್ನಿಸಲಿದ್ದಾರೆ.

ಜುಲೈ 13ರಂದು ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಬಳಿಕ ಯಲಹಂಕದಲ್ಲಿರುವ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ಈ ವೇಳೆ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು 5 ದಿನಗಳ ಕಾಲ ಕಸ್ಟಡಿಗೆ ನೀಡಿದ್ದರು. 18ನೇ ತಾರೀಖಿನಂದು ಬೆಳಿಗ್ಗೆ 11ಕ್ಕೆ ಮತ್ತೆ ಹಾಜರುಪಡಿಸುವಂತೆ ಸೂಚನೆ ನೀಡಿದ್ದರು.

ಏನಿದು ಪ್ರಕರಣ?

ವಾಲ್ಮೀಕಿ ನಿಗಮದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಎಂಬಾತ ಮೇ 26ರಂದು ಶಿವಮೊಗ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಿಗಮದ 187 ಕೋಟಿ ರೂ.ಗಳನ್ನು ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ, ಇದರಲ್ಲಿ 88 ಕೋಟಿ ಹಣ ದುರುಪಯೋಗವಾಗಿದೆ ಎಂದು ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದರು. ಹೀಗಾಗಿ ನಿಗಮದ ಎಂಡಿ ಮತ್ತು ಲೆಕ್ಕಾಧಿಕಾರಿಯನ್ನು ಅಮಾನತು ಮಾಡಲಾಗಿತ್ತು. ನಂತರ ಅಧಿಕಾರಿಗಳ ಬಂಧನವಾಗಿತ್ತು.

ಚಂದ್ರಶೇಖರ್‌ ಬರೆದಿರುವ ಡೆತ್ ನೋಟ್‌ನಲ್ಲಿ ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ ಹಾಗೂ ಯೂನಿಯನ್ ಬ್ಯಾಂಕ್ ಮ್ಯಾನೇಜರ್ ಸುಚಿಸ್ಮಿತಾ ಅವರೇ ನನ್ನ ಸಾವಿಗೆ ಕಾರಣ ಎಂದು ಬರೆದಿಟ್ಟಿದ್ದರು. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಎಂಡಿ ಜೆ.ಜೆ ಪದ್ಮನಾಭ ಹಾಗೂ ಲೆಕ್ಕಾಧಿಕಾರಿ ಪರಶುರಾಮ್‌ರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿತ್ತು. ವಾಲ್ಮೀಕಿ ನಿಗಮಕ್ಕೆ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ. ಕೆ. ಆರ್. ರಾಜ್ ಕುಮಾರ್ ಅವರನ್ನು ನೇಮಿಸಿತ್ತು.

ಪ್ರಕರಣದಲ್ಲಿ ಸರ್ಕಾರದ ಪೂರ್ವ ಅನುಮತಿ ಪಡೆದು ಬ್ಯಾಂಕ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಎಂ.ಡಿ & ಸಿಇಒ ಹಾಗೂ ಎಲ್ಲಾ ನಿರ್ದೇಶಕರು ಸೇರಿ 6 ಬ್ಯಾಂಕ್ ಅಧಿಕಾರಿಗಳ ಮೇಲೆ ಎಫ್‌ಐಆರ್‌ ದಾಖಲಿಸಲಾಗಿತ್ತು. ಇನ್ನು 88 ಕೋಟಿ ದುರುಪಯೋಗ ಹಣವನ್ನು ಈಗಾಗಲೇ ಮುಖ್ಯ ಖಾತೆಗೆ ಅಧಿಕಾರಿಗಳು ವಾಪಸ್ ಪಡೆದಿದ್ದರು. ಬಳಿಕ ಹಗರಣದಲ್ಲಿ ಸಚಿವ ನಾಗೇಂದ್ರ ಹೆಸರು ಕೇಳಿ ಬಂದ ಹಿನ್ನೆಲೆ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು. 

ಇದನ್ನೂ ಓದಿ: Wakf Board Scam: ವಾಲ್ಮೀಕಿ ನಿಗಮದ ಬಳಿಕ ವಕ್ಫ್ ಬೋರ್ಡ್‌ನಲ್ಲಿ ಹಗರಣ ಬೆಳಕಿಗೆ; ಮಾಜಿ ಸಿಇಒ ವಿರುದ್ಧ ಎಫ್‌ಐಆರ್!

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮ ಹಣ ವರ್ಗಾವಣೆ ಕೇಸ್‌ಗೆ ಸಂಬಂಧಿಸಿ ಮತ್ತೊಬ್ಬನನ್ನು ಎಸ್ಐಟಿ ಬಂಧಿಸಿದೆ. ಆಂಧ್ರ ಮೂಲದ ಶ್ರೀನಿವಾಸ್ ರಾವ್ ಬಂಧಿತ ಆರೋಪಿ. ಈತ ಹಗರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾನೆ ಎನ್ನಲಾಗಿದೆ.

Continue Reading
Advertisement
Yezdi Roadster
ಆಟೋಮೊಬೈಲ್8 mins ago

Yezdi Roadster : ಯೆಜ್ಡಿ ರೋಡ್‌ಸ್ಟರ್ ಜತೆಗೆ ಈ ಹಲವು ಆ್ಯಕ್ಸೆಸರಿಗಳಿರುವ ಟ್ರಯಲ್ ಪ್ಯಾಕ್ ಉಚಿತ

Viral Video
ವೈರಲ್ ನ್ಯೂಸ್38 mins ago

Viral Video: 300 ಮೊಸಳೆಗಳಿರುವ ಕೆರೆಯಲ್ಲಿ ಬೈಕ್‌, ಕಾರು ಸ್ಟಂಟ್‌; ಹುಚ್ಚಾಟ ಮೆರೆದ ಯುವಕರಿಗೆ ಆಗಿದ್ದೇನು ಗೊತ್ತಾ?

ಪ್ರಮುಖ ಸುದ್ದಿ40 mins ago

Karnataka Rain: ವರುಣಾರ್ಭಟಕ್ಕೆ ರಾಜ್ಯದ ಹಲವೆಡೆ ನದಿಗಳು ಉಕ್ಕಿ ಹರಿದು ನೆರೆ ಸೃಷ್ಟಿ; ಕುಸಿದ ಸೇತುವೆಗಳು!

Paris Olympics 2024
ಪ್ರಮುಖ ಸುದ್ದಿ45 mins ago

Paris Olympics 2024 : 8 ಚಿನ್ನ, 1 ಬೆಳ್ಳಿ, 3 ಕಂಚು: ಒಲಿಂಪಿಕ್ಸ್ ಹಾಕಿ ಸ್ಪರ್ಧೆಯಲ್ಲಿ ಭಾರತ ತಂಡದ ಸಾಧನೆಗಳ ವಿವರ ಇಲ್ಲಿದೆ

Viral Video
ವೈರಲ್ ನ್ಯೂಸ್1 hour ago

Viral Video: ಸಫಾರಿಯಲ್ಲಿ ಪ್ರವಾಸಿಗರ ಎದುರೇ ಸಿಂಹಗಳ ಕಾಮಕೇಳಿ!

Olympic Games History
ಕ್ರೀಡೆ1 hour ago

Olympic Games History: ಒಲಿಂಪಿಕ್ಸ್​ನಲ್ಲಿ ಗ್ರೀಸ್​ ದೇಶಕ್ಕೆ ವಿಶೇಷ ಮಾನ್ಯತೆ ನೀಡುವುದೇಕೆ?

Amitabh Bachchan holds umbrella for Jaya Bachchan
ಬಾಲಿವುಡ್1 hour ago

Amitabh Bachchan: ಅಮಿತಾಭ್ ರೊಮ್ಯಾಂಟಿಕ್ ಮೂಡ್‌ನಲ್ಲಿದ್ದರೂ ಮುಖ ಊದಿಸಿಕೊಂಡೇ ಇದ್ದ ಜಯಾ ಬಚ್ಚನ್!

Viral Video
ವೈರಲ್ ನ್ಯೂಸ್2 hours ago

Viral Video: ನೋಡ ನೋಡ್ತಿದ್ದಂತೆ ಮೂರನೇ ಮಹಡಿಯಿಂದ ಬಿದ್ದ ಮಹಿಳೆ; ಶಾಕಿಂಗ್‌ ವಿಡಿಯೋ ವೈರಲ್‌

Tauba Tauba
Latest2 hours ago

Tauba Tauba : ಲಂಡನ್‌ ಬೀದಿಯಲ್ಲಿ ‘ತೌಬಾ ತೌಬಾ’ ಹಾಡಿಗೆ ಸಖತ್‌ ಆಗಿ ಸ್ಟೆಪ್ಸ್‌ ಹಾಕಿದ ಬೆಡಗಿಯರು; ವಿಡಿಯೊ ವೈರಲ್

CM Siddaramaiah karnataka jobs reservation
ಪ್ರಮುಖ ಸುದ್ದಿ2 hours ago

Karnataka Jobs Reservation: ಖಾಸಗಿ ಉದ್ಯಮಗಳಲ್ಲಿ ಕನ್ನಡಿಗರಿಗೆ ಶೇ.75 ಮೀಸಲಾತಿ ಮಾತ್ರ; ಆಡಳಿತ ಹುದ್ದೆಗಳಲ್ಲಿ ಶೇ.50; ಉದ್ಯಮಿಗಳಿಗೆ ಬೆಚ್ಚಿತೇ ಸರ್ಕಾರ?

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ2 days ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ2 days ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

karnataka weather Forecast
ಮಳೆ2 days ago

Karnataka Weather : ಮುಂದಿನ 24 ಗಂಟೆಯಲ್ಲಿ ರಣಮಳೆ ಫಿಕ್ಸ್‌; ರೆಡ್‌ ಅಲರ್ಟ್‌ ಘೋಷಣೆ

Karnataka Rain
ಮಳೆ3 days ago

Karnataka Rain : ಧಾರಾಕಾರ ಮಳೆಗೆ ತೇಲಿ ಹೋದ ಸ್ಕೂಲ್‌ ಬಸ್‌; ಕೊಡಗಿನಲ್ಲಿ ಕುಸಿದು ಬಿದ್ದ ಮನೆಗಳ ಗೋಡೆ

karnataka Rain
ಮಳೆ3 days ago

Karnataka Rain : ಭಾರಿ ಗಾಳಿ ಮಳೆ; ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವಿಲವಿಲ ಒದ್ದಾಡಿ ಸತ್ತ ಗಬ್ಬದ ಹಸು

haveri News
ಹಾವೇರಿ3 days ago

Haveri News : ಹಾವೇರಿಯಲ್ಲಿ ಪೊಲೀಸ್ ಠಾಣೆ ಮೆಟ್ಟಿಲೇರಿದ ನಾಯಿ ಜಗಳ; ಊರಿನೊಳಗೆ ದಾಂಧಲೆ ಮಾಡುತ್ತಿದ್ದ ಕರಡಿ ಸೆರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಕಪಿಲಾ ನದಿ ತೀರದಲ್ಲೀಗ ಪ್ರವಾಹ ಭೀತಿ

karnataka Weather Forecast
ಮಳೆ4 days ago

Karnataka Weather : ಶಿರಸಿಯಲ್ಲಿ ಭೂಕುಸಿತ; ಮತ್ತೆ ಕರಾವಳಿ, ಮಲೆನಾಡಿಗೆ ಭಾರಿ ಮಳೆ ಎಚ್ಚರಿಕೆ

ಟ್ರೆಂಡಿಂಗ್‌