Paytm share buyback | ಪೇಟಿಎಂನಿಂದ ಪ್ರತಿ ಷೇರಿಗೆ 810 ರೂ.ಗಳಂತೆ ಮರು ಖರೀದಿ, ಷೇರುದಾರರಿಗೆ ಲಾಭವೇನು? - Vistara News

ಪ್ರಮುಖ ಸುದ್ದಿ

Paytm share buyback | ಪೇಟಿಎಂನಿಂದ ಪ್ರತಿ ಷೇರಿಗೆ 810 ರೂ.ಗಳಂತೆ ಮರು ಖರೀದಿ, ಷೇರುದಾರರಿಗೆ ಲಾಭವೇನು?

ಐಪಿಒ ಸಂದರ್ಭ 2,150 ರೂ.ಗೆ ಪೇಟಿಎಂ ಷೇರು ಖರೀದಿಸಿದ್ದ ಷೇರುದಾರರಿಗೆ ಈ ಯೋಜನೆಯಿಂದ ಲಾಭವಾಗದು. ಆದರೆ 810 ರೂ.ಗಿಂತ ಕಡಿಮೆ ದರದಲ್ಲಿ (Paytm share buyback) ಖರೀದಿಸಿದ್ದವರಿಗೆ ಲಾಭವಾಗಲಿದೆ.

VISTARANEWS.COM


on

paytm
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಪೇಟಿಎಂನ ಮಾತೃ ಕಂಪನಿ ವನ್‌ 97 ಕಮ್ಯುನಿಕೇಶನ್ಸ್‌, ತನ್ನ 850 ಕೋಟಿ ರೂ. ಮೌಲ್ಯದ ಷೇರುಗಳನ್ನು ಮುಕ್ತ ಮಾರುಕಟ್ಟೆಯಲ್ಲಿ ಮರು ಖರೀದಿ (Paytm share buyback) ಮಾಡುವುದಾಗಿ ಮಂಗಳವಾರ ತಿಳಿಸಿದೆ. ಪ್ರತಿ ಷೇರಿಗೆ 810 ರೂ.ಗಳ ಲೆಕ್ಕದಲ್ಲಿ ಷೇರುಗಳ ಮರು ಖರೀದಿ ನಡೆಯಲಿದೆ.

ಪೇಟಿಎಂ ಒಟ್ಟು 1,04,93,827 ಷೇರುಗಳನ್ನು ಮರು ಖರೀದಿಸಲು ನಿರ್ಧರಿಸಿದೆ. ಪೇಟಿಎಂ ಷೇರು ದರ ಬುಧವಾರ 530 ರೂ. ಆಗಿತ್ತು.

ಷೇರು ಮರು ಖರೀದಿ ಏಕೆ?

ಕಂಪನಿಗಳು ತಮ್ಮ ಲಾಭಾಂಶವನ್ನು ಡಿವಿಡೆಂಡ್‌ ಅಥವಾ ಷೇರುಗಳ ಮರು ಖರೀದಿ ಮೂಲಕ ಷೇರುದಾರರಿಗೆ ವಿತರಿಸಬಹುದು. ಷೇರುಗಳ ದರ ತೀವ್ರ ಕುಸಿದರೆ, ಷೇರುದಾರರಲ್ಲಿ ಆತ್ಮ ವಿಶ್ವಾಸ ಮೂಡಿಸಲು ಮರು ಖರೀದಿಸಬಹುದು.

ಪೇಟಿಎಂ ಷೇರುದಾರರಿಗೆ ಲಾಭದಾಯಕವೇ?

ಪೇಟಿಎಂನ ಐಪಿಒದಲ್ಲಿ ಷೇರು ದರ 2,150 ರೂ.ಗಳಾಗಿತ್ತು. ಆದರೆ ಇಲ್ಲಿಯವರೆಗೆ 75% ದರ ಕುಸಿತಕ್ಕೀಡಾಗಿತ್ತು. ಸದ್ಯ 530 ರೂ.ಗಳ ಕೆಳಮಟ್ಟದಲ್ಲಿದೆ. ಹೀಗಾಗಿ 2,150 ರೂ.ಗೆ ಐಪಿಒದಲ್ಲಿ ಷೇರು ಖರೀದಿಸಿದವರಿಗೆ ಷೇರುಗಳ ಮರು ಖರೀದಿಯಿಂದ ಪ್ರಯೋಜನವಿಲ್ಲ. 810 ರೂ.ಗಿಂತ ಕಡಿಮೆ ದರದಲ್ಲಿ ಷೇರುಗಳನ್ನು ಖರೀದಿಸಿದ್ದವರಿಗೆ ಮಾತ್ರ ಲಾಭದಾಯಕವಾಗಬಹುದು.

ಪೇಟಿಎಂನ ಟಾಪ್‌ ಮ್ಯಾನೇಜ್‌ಮೆಂಟ್‌ ಮತ್ತು ಸಂಸ್ಥಾಪಕ, ಸಿಇಒ ವಿಜಯ್‌ ಶೇಖರ್‌ ಶರ್ಮಾ ಈ ಷೇರು ವಿಕ್ರಯದಲ್ಲಿ ಭಾಗವಹಿಸುತ್ತಿಲ್ಲ. ಪೇಟಿಎಂನ ಭವಿಷ್ಯದ ಯೋಜನೆಗಳ ಜಾರಿಗೆ ಹಣಕಾಸು ಸಂಪನ್ಮೂಲವನ್ನು ಸಂಗ್ರಹಿಸಲಾಗುತ್ತಿದೆ. ಸೇಲ್ಸ್‌, ಮಾರ್ಕೆಟಿಂಗ್‌, ಟೆಕ್ನಾಲಜಿಗೆ ಹೂಡಿಕೆ ಮಾಡಬೇಕಾಗಿದೆ. ಷೇರುದಾರರಿಗೂ ಸೂಕ್ತ ಮೌಲ್ಯವನ್ನು ನೀಡಲು ಬದ್ಧರಾಗಿದ್ದೇವೆ ಎಂದು ಶರ್ಮಾ ತಿಳಿಸಿದ್ದಾರೆ.

ಪೇಟಿಎಂನಲ್ಲಿ 72.85% ಷೇರು ನಿಯಂತ್ರಣವನ್ನು ವಿದೇಶಿ ಹೂಡಿಕೆದಾರರು ಹೊಂದಿದ್ದಾರೆ. ದೇಶೀ ಸಾಂಸ್ಥಿಕ ಹೂಡಿಕೆದಾರರು ಕೇವಲ 1.82 ಷೇರುಗಳನ್ನು ಹೊಂದಿದ್ದಾರೆ. ಕಾರ್ಪೊರೇಟ್‌ ಮತ್ತು ಇತರರ ಕೈಯಲ್ಲಿ 25.33% ಷೇರುಗಳ ಮಾಲಿಕತ್ವ ಇದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಲೈಫ್‌ಸ್ಟೈಲ್

Ways To Stay Young: ಸಮುದ್ರದಾಳದಲ್ಲಿ ದಿನ ಕಳೆದರೆ ಇಳಿ ವಯಸ್ಸಲ್ಲೂ ಯೌವನ ಮರಳಿ ಬರುತ್ತದೆ!

93 ದಿನಗಳ ಕಾಲ ಸಮುದ್ರದಾಳದಲ್ಲಿ ವಾಸಿಸಿದ್ದರಿಂದ ನೌಕಾಪಡೆ ನಿವೃತ್ತ ಅಧಿಕಾರಿ ವಯಸ್ಸಿನಲ್ಲಿ ಸುಮಾರು ಹತ್ತು ವರ್ಷಗಳಷ್ಟು ಹಿಂದೆ ಹೋಗಿದ್ದಾರಂತೆ. ಅಂದರೆ, ಹತ್ತು ವರ್ಷಗಳಷ್ಟು ಹಿಂದಿನ ದೈಹಿಕ ಆರೋಗ್ಯ ಇವರಿಗೆ ಮರುಕಳಿಸಿದ್ದು, ಇದರಿಂದ ಸಾಗರದಾಳದಲ್ಲಿ ವಾಸಿಸುವ ಮೂಲಕ ಯೌವನವನ್ನು ಮರಳಿ ಪಡೆಯಬಹುದು ಎಂದು ಇವರು (Ways To Stay Young) ಜಗತ್ತಿಗೇ ತೋರಿಸಿಕೊಟ್ಟಿದ್ದಾರೆ.

VISTARANEWS.COM


on

Ways To Stay Young
Koo

56 ವರ್ಷದ ನಿವೃತ್ತ ನೌಕಾದಳದ ಅಧಿಕಾರಿ ಜೋಸೆಫ್‌ ಡಿಟೂರಿ ಇತ್ತೀಚೆಗೆ 93 ದಿನಗಳ ಕಾಲ ಅಟ್ಲಾಂಟಿಕ್‌ ಸಮುದ್ರದಾಳದಲ್ಲಿ ವಾಸಿಸುವ ಮೂಲಕ ಜಗತ್ತನ್ನು ನಿಬ್ಬೆರಗಾಗಿಸಿದ್ದಾರೆ. ಅಷ್ಟೇ ಅಲ್ಲ, ಸಾಗರದಾಳದಲ್ಲಿ ಜೀವಿಸುವುದರಿಂದ ತಮ್ಮ ವಯಸ್ಸನ್ನೂ ಕಡಿಮೆಗೊಳಿಸಿರುವುದು ಇಲ್ಲಿ ಅಚ್ಚರಿಯ ವಿಷಯ.
ಹೌದು. ಒತ್ತಡದ ಪಾಡ್‌ ಒಂದರೊಳಗೆ 93 ದಿನಗಳ ಕಾಲ ಸಮುದ್ರದಾಳದಲ್ಲಿ ವಾಸಿಸಿದ್ದರಿಂದ ಸುಮಾರು ಹತ್ತು ವರ್ಷಗಳಷ್ಟು ವಯಸ್ಸಿನಲ್ಲಿ ಇವರು ಹಿಂದೆ ಹೋಗಿದ್ದಾರಂತೆ. ಅಂದರೆ, ಹತ್ತು ವರ್ಷಗಳಷ್ಟು ಹಿಂದಿನ ದೈಹಿಕ ಆರೋಗ್ಯ ಇವರಿಗೆ ಮರುಕಳಿಸಿದ್ದು, ಇದರಿಂದ ಸಾಗರದಾಳದಲ್ಲಿ ವಾಸಿಸುವ ಮೂಲಕ ಯೌವನವನ್ನು ಮರಳಿ ಪಡೆಯಬಹುದು ಎಂದು (Ways To Stay Young) ಇವರು ಜಗತ್ತಿಗೇ ತೋರಿಸಿಕೊಟ್ಟಿದ್ದಾರೆ.

man spends 93 days under atlantic sea becomes 10 years younger

ದಾಖಲೆ ಅಷ್ಟೇ ಅಲ್ಲ

ಸಮುದ್ರದಾಳದಲ್ಲಿ 93 ದಿನಗಳ ಕಾಲ ಜೀವಿಸುವ ಮೂಲಕ ದಾಖಲೆ ಬರೆಯುವುದಷ್ಟೇ ಅಲ್ಲ, ಮಾನಸಿಕವಾಗಿ, ದೈಹಿಕವಾಗಿ, ಮತ್ತಷ್ಟು ಆರೋಗ್ಯವಂತರಾಗಿ, ಉಲ್ಲಾಸದಾಯಕ ವ್ಯಕ್ತಿಯಾಗಿ ಹೊರ ಜಗತ್ತಿಗೆ ಮರಳಿದ್ದಾರೆ. ಒತ್ತಡದ ಪಾಡ್‌ ಒಂದರಲ್ಲಿ ಸಮುದ್ರದಾಳದಲ್ಲಿ ಜೀವಿಸಿದ ಕಾರಣ, ಮನುಷ್ಯನ ದೇಹದ ಮೇಲೆ ಇದು ಬೀರುವ ಪರಿಣಾಮ ಇತ್ಯಾದಿಗಳನ್ನು ಡಿಟೂರಿ ಅವರು ಜಗತ್ತಿಗೆ ಸಾಬೀತುಪಡಿಸಿ ತೋರಿಸಿದ್ದಾರೆ. ಹೊರ ಬಂದ ಮೇಲೆ ಅವರ ಮೇಲೆ ನಡೆದ ಸಾಕಷ್ಟು ವೈದ್ಯಕೀಯ ಪರೀಕ್ಷೆಗಳು, ಈತ ಸಾಬೀತುಪಡಿಸಿದ ವಿಚಾರಗಳನ್ನು ಅಧಿಕೃತಗೊಳಿಸಿದ್ದು, ಮಾನಸಿಕ ಹಾಗೂ ದೈಹಿಕ ಆರೋಗ್ಯದ ವಿಚಾರದಲ್ಲಿ 93 ದಿನಗಳಲ್ಲಿ ಡಿಟೂರಿ ಅವರು 10 ವರ್ಷಗಳಷ್ಟು ಯೌವನವನ್ನು ಮರಳಿ ಪಡೆದಿದ್ದಾರೆ ಎಂದು ದೃಢಪಡಿಸಿವೆ. ವೈದ್ಯಕೀಯ ಪರೀಕ್ಷೆಗಳ ಪ್ರಕಾರ, ಡಿಟೂರಿ ಅವರ ಸ್ಟೆಮ್‌ ಸೆಲ್‌ (ಕಾಂಡ ಕೋಶ)ಗಳು ಗಣನೀಯವಾಗಿ ಏರಿದ್ದು, ಕೊಲೆಸ್ಟೆರಾಲ್‌ ಮಟ್ಟವು 72 ಪಾಯಿಂಟ್‌ಗಳಷ್ಟು ಕೆಳಗಿಳಿದಿವೆ. ದೇಹದಲ್ಲಿದ್ದ ಇತರ ಯುರಿಯೂತದ ಲಕ್ಷಣಗಳೂ ಕಡಿಮೆಯಾಗಿವೆ. ನಿದ್ದೆಯ ಗುಣಮಟ್ಟದಲ್ಲಿ ಗಣನೀಯ ಸುಧಾರಣೆಯಾಗಿದ್ದು, ಮುಖ್ಯವಾಗಿ ರಾತ್ರಿಯ ಗಾಢ ನಿದ್ದೆಯ ಗುಣಮಟ್ಟ ಶೇ.೬೦ರಷ್ಟು ಏರಿಕೆಯಾಗಿದೆ. ಸಾಮಾನ್ಯವಾಗಿ ಪ್ರತಿ ವ್ಯಕ್ತಿಯ ವರ್ಣತಂತುಗಳು ವಯಸ್ಸಾದ ಹಾಗೆ ಚಿಕ್ಕದಾಗುತ್ತಾ ಬರುವುದರಿಂದ, ಇಲ್ಲಿ, ಡಿಟೂರಿ ಅವರ ವರ್ಣತಂತು ಶೇ.೨೦ರಷ್ಟು ಉದ್ದವಾಗಿದ್ದು, ಇದು ಯೌವನವನ್ನು 10 ವರ್ಷಗಳಷ್ಟು ಮರಳಿಸಿದೆ ಎಂದು ವೈದ್ಯಕೀಯ ಪರೀಕ್ಷೆಗಳಿಂದ ತಿಳಿದುಬಂದಿದೆ.

ಆರೋಗ್ಯ ಸುಧಾರಣೆ

ಡಿಟೂರಿ ಅವರ ಮಿದುಳಿನ ಆರೋಗ್ಯ ಕೂಡಾ ಸಾಕಷ್ಟು ಸುಧಾರಿಸಿದ್ದು, ಅವರು ಮತತೆ ಲವಲವಿಕೆಯಿಂದ ಜೀವನೋತ್ಸಾಹದಿಂದ ಮರಳಿ ಬಂದಿರುವುದು ವಿಶೇಷ. ಸಮುದ್ರದಾಳದಲ್ಲಿ ಹೈಪರ್‌ಬಾರಿಕ್‌ ಚೇಂಬರ್‌ ಒಳಗೆ ಅವರು 93 ದಿನಗಳ ಕಾಲ ಉಳಿದುಕೊಂಡಿದ್ದು, ಇದು ಅವರ ಒಟ್ಟಾರೆ ಆರೋಗ್ಯಕ್ಕೆ ಭಾರೀ ಸಕಾರಾತ್ಮಕ ಪರಿಣಾಮ ಬೀರಿದೆ. ಡಿಟೂರಿ ಅವರೇ ಹೇಳುವಂತೆ, 100 ಚದರ ಅಡಿಯ ಚೇಂಬರ್‌ ಒಳಗೆ ಸಮುದ್ರದಾಳದಲ್ಲಿ ಜೀವಿಸುವ ಸಂದರ್ಭದಲ್ಲಿ ವಾರಕ್ಕೆ ಐದು ದಿನಗಳ ಕಾಲ ಪ್ರತಿ ನಿತ್ಯವೂ ಒಂದು ಗಂಟೆಗಳ ಕಾಲ ವ್ಯಾಯಾಮ ಇತ್ಯಾದಿಗಳನ್ನು ಅವರು ಮಾಡಿದ್ದಾರೆ. ದೈಹಿಕ, ಮಾನಸಿಕ ಆರೋಗ್ಯ ಸದೃಢವಾಗಿರಲು ಹೊರಗೆ ನೆಲದ ಮೇಲಿದ್ದಾಗ ಮಾಡುವ ವ್ಯಾಯಾಮಗಳನ್ನು ಮಾಡಿದ್ದಾರೆ. ಈ ಶಿಸ್ತನ್ನು ಪಾಲಿಸಿದ್ದೂ ಕೂಡಾ ಈ ಆರೋಗ್ಯ ಸುಧಾರಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ICMR Guidelines: ಶಿಶು ಆಹಾರ ಹೇಗಿರಬೇಕು? ಐಸಿಎಂಆರ್‌ ಮಾರ್ಗಸೂಚಿ ಹೀಗಿದೆ

ಸಕಾರಾತ್ಮಕ ಪರಿಣಾಮ

ಜನರು ಪ್ರವಾಸಕ್ಕಾಗಿ ಆಗಾಗ ಹೊರಗೆ ತಿರುಗಾಡಿ ಬರುವ ಬದಲು ಹೀಗೆ ಎರಡು ವಾರಗಳ ಕಾಲ ಸಮುದ್ರದಾಳದಲ್ಲಿ ಕಳೆಯಬಹುದು. ಇದು ದೇಹಾರೋಗ್ಯಕ್ಕೆ, ಮಾನಸಿಕ ಆರೋಗ್ಯಕ್ಕೆ ಕೊಡುವ ಸಕಾರಾತ್ಮಕ ಪರಿಣಾಮವನ್ನು ಅನುಭವಿಸಿ ನೋಡಬಹುದು ಎಂದು ಅವರು ಹೇಳಿದ್ದಾರೆ. ಡಿಟೂರಿ ಅವರು ಈ ಹಿಂದೆಯೂ 2023ರಲ್ಲಿ ಸಮುದ್ರದಾಳದಲ್ಲಿ 74 ದಿನಗಳ ಕಾಲ ಕಳೆದಿದ್ದರು. ಇದೇ ಮೊದಲ ಬಾರಿಗೆ ಸಮುದ್ರದಾಳದಲ್ಲಿ 93 ದಿನಗಳನ್ನು ಕಳೆಯುವ ಮೂಲಕ ದಾಖಲೆ ಬರೆದಿದ್ದಾರೆ. ಈ ಹಿಂದೆಯೂ 100 ದಿನಗಳ ಕಾಲ ಸಮುದ್ರದಡಿಯಲ್ಲಿ 30 ಅಡಿ ಆಳದಲ್ಲಿ ಸ್ಟೀಲ್‌ ಹಾಗೂ ಗ್ಲಾಸ್‌ನಿಂದ ಮಾಡಿದ ಹೊಟೇಲ್‌ ಒಂದರಲ್ಲಿ ಇರುವ ಮೂಲಕವೂ ದಾಖಲೆ ಬರೆದಿದ್ದರು.

Continue Reading

ಪ್ರಮುಖ ಸುದ್ದಿ

Hassan Lok Sabha Constituency : ಅತ್ಯಾಚಾರ ಆರೋಪಿ ಪ್ರಜ್ವಲ್​ ರೇವಣ್ಣ ಹಾಸನದಲ್ಲಿ ಮತ್ತೆ ಗೆಲ್ಲುವರೇ?

Hassan Lok Sabha Constituency: ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಡೂರು, ಶ್ರವಣಬೆಳಗೊಳ, ಅರಸೀಕೆರೆ, ಬೇಲೂರು, ಹಾಸನ, ಹೊಳೆನರಸೀಪುರ, ಅರಕಲಗೂಡು ಮತ್ತು ಸಕಲೇಶಪುರ ವಿಧಾನಸಭಾ ಕ್ಷೇತ್ರಗಳಿವೆ. ಜೆಡಿಎಸ್ 4, ಕಾಂಗ್ರೆಸ್ 2, ಬಿಜೆಪಿ 2 ಸ್ಥಾನಗಳನ್ನು ಹೊಂದಿವೆ.

VISTARANEWS.COM


on

Hassan Lok Sabha Constituency
Koo

ಹಾಸನ ಲೋಕಸಭಾ ಕ್ಷೇತ್ರವು ಆರಂಭದಲ್ಲಿ ಮೈಸೂರು ರಾಜ್ಯದ ಭಾಗವಾಗಿತ್ತು. 1957ರಲ್ಲಿ ಈ ಕ್ಷೇತ್ರವನ್ನು ಹಾಸನ ಎಂದು ಗುರುತಿಸಲಾಯಿತು. 1974 ರಲ್ಲಿ, ಹಾಸನ ಕ್ಷೇತ್ರವು ಕರ್ನಾಟಕದ ಭಾಗವಾಯಿತು. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಈ ಲೋಕಸಭಾ ಕ್ಷೇತ್ರದಲ್ಲಿ ಐದು ಬಾರಿ ಗೆಲುವು ಸಾಧಿಸಿದ್ದಾರೆ. ಎರಡು ಬಾರಿ ಜನತಾದಳದಿಂದ ಹಾಗೂ ಮೂರು ಬಾರಿ ಜೆಡಿಎಸ್ ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕಿಳಿಸಿದೆ. 1999ರಲ್ಲಿ ದೇವೇಗೌಡರನ್ನು ಸೋಲಿಸಿದ್ದ ಮಾಜಿ ಸಂಸದ ದಿವಂಗತ ಜಿ.ಪುಟ್ಟಸ್ವಾಮಿಗೌಡ ಅವರ ಮೊಮ್ಮಗ ಶ್ರೇಯಸ್ ಎಂ.ಪಟೇಲ್ ಅವರನ್ನು ಕಾಂಗ್ರೆಸ್ ಕಣಕ್ಕಿಳಿಸುವ ಮೂಲಕ ದಶಕಗಳ ಹಿಂದಿನ ರಾಜಕೀಯ ಹೋರಾಟಕ್ಕೆ ಮತ್ತೆ ಚಾಲನೆ ಸಿಕ್ಕಿದೆ.

ಬೆಂಗಳೂರಿನಿಂದ 200 ಕಿಲೋಮೀಟರ್ ದೂರದಲ್ಲಿರುವ ಈ ನಗರವು ಹೊಯ್ಸಳ ರಾಜರ ಪ್ರಾಚೀನ ತಾಣಗಳಿಗೆ ನೆಲೆಯಾಗಿದೆ. ಹಾಸನ ಲೋಕಸಭಾ ಕ್ಷೇತ್ರದ ಒಟ್ಟು ಜನಸಂಖ್ಯೆ ಸುಮಾರು 2,016,000. ಈ ಪೈಕಿ 1,561,000 ಮತದಾರರಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರದ ಜನಸಂಖ್ಯೆಯ ಸುಮಾರು 78% ರಷ್ಟು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುತ್ತಿದ್ದರೆ, 22% ರಷ್ಟು ನಗರ ಪ್ರದೇಶಗಳಲ್ಲಿ ವಾಸಿಸುತ್ತಿದ್ದಾರೆ. ಹಾಸನ ಲೋಕಸಭಾ ಕ್ಷೇತ್ರವು ಎಂಟು ವಿಧಾನಸಭಾ ಸ್ಥಾನಗಳನ್ನು ಒಳಗೊಂಡಿದೆ.

ಹಾಸನ ಲೋಕಸಭೆ ಕ್ಷೇತ್ರ ಸಾಮಾನ್ಯ ವರ್ಗದ ಸಂಸತ್ ಸ್ಥಾನವಾಗಿದೆ. ಇದು ಇಡೀ ಹಾಸನ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಯ ಭಾಗವನ್ನು ಒಳಗೊಂಡಿದೆ. ಹಾಸನ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಡೂರು, ಶ್ರವಣಬೆಳಗೊಳ, ಅರಸೀಕೆರೆ, ಬೇಲೂರು, ಹಾಸನ, ಹೊಳೆನರಸೀಪುರ, ಅರಕಲಗೂಡು ಮತ್ತು ಸಕಲೇಶಪುರ ವಿಧಾನಸಭಾ ಕ್ಷೇತ್ರಗಳಿವೆ. ಜೆಡಿಎಸ್ 4, ಕಾಂಗ್ರೆಸ್ 2, ಬಿಜೆಪಿ 2 ಸ್ಥಾನಗಳನ್ನು ಹೊಂದಿವೆ.

ಹಿಂದಿನ ಫಲಿತಾಂಶಗಳು

2019ರ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ 6,76,606 ಮತಗಳನ್ನು ಪಡೆದು ಜಯಗಳಿಸಿದ್ದರು. ಬಿಜೆಪಿಯ ಎ.ಮಂಜು 5,35,382 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದರು. ಬಿಎಸ್ಪಿಯ ವಿನೋದ್ ರಾಜ್ ಕೆ.ಎಚ್ 38,761 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದುಕೊಂಡಿದ್ದರು.2019ರ ಚುನಾವಣೆಯಲ್ಲಿ ಜೆಡಿಎಸ್ ಶೇ.52.92ರಷ್ಟು ಮತಗಳನ್ನು ಪಡೆದಿತ್ತು.

2014ರ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು 5,09,841 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ ನ ಎ.ಮಂಜು 4,09,378 ಮತಗಳನ್ನು ಪಡೆದು ಎರಡನೇ ಸ್ಥಾನ ಪಡೆದರು. ಬಿಜೆಪಿಯ ಸಿ.ಎಚ್.ವಿಜಯಶಂಕರ್ 1,65,688 ಮತಗಳನ್ನು ಪಡೆದು ಮೂರನೇ ಸ್ಥಾನ ಪಡೆದರು. ಜೆಡಿಎಸ್ ಶೇ.44.44ರಷ್ಟು ಮತಗಳನ್ನು ಪಡೆದಿದೆ.

ಇದನ್ನೂ ಓದಿ: Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಎಚ್.ಡಿ.ದೇವೇಗೌಡ ಅವರು ಬಿಜೆಪಿಯ ಕೆ.ಎಚ್.ಹನುಮೇಗೌಡ ಅವರನ್ನು 2,91,113 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಜೆಡಿಎಸ್ ಶೇ.50.63ರಷ್ಟು ಮತಗಳನ್ನು ಪಡೆದಿತ್ತು.

ದೇವೇಗೌಡ ಕುಟುಂಬದ ಭದ್ರಕೋಟೆ

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹಾಸನ ಲೋಕಸಭಾ ಕ್ಷೇತ್ರವನ್ನು ಪಕ್ಷ ಮತ್ತು ಕುಟುಂಬದ ಭದ್ರಕೋಟೆಯಾಗಿ ಪರಿವರ್ತಿಸಿದ್ದಾರೆ. 1991ರಲ್ಲಿ ಅವರ ಮೊದಲ ವಿಜಯದ ನಂತರ, ಅವರು 1998, 2004, 2009 ಮತ್ತು 2014 ರಲ್ಲಿ ಮರು ಆಯ್ಕೆಯಾದರು.

ಹಾಸನ ಲೋಕಸಭಾ ಕ್ಷೇತ್ರದ ಒಟ್ಟು ಜನಸಂಖ್ಯೆ ಸುಮಾರು 2016000. 2011 ರ ಜನಗಣತಿಯ ಅಂಕಿಅಂಶಗಳ ಪ್ರಕಾರ ಸರಾಸರಿ ಸಾಕ್ಷರತಾ ಪ್ರಮಾಣವು ಸುಮಾರು 69.34% ರಷ್ಟಿತ್ತು. ಎಸ್ಸಿ ಮತದಾರರು ಸುಮಾರು 19.5% ರಷ್ಟಿದ್ದರೆ, ಎಸ್ಟಿ ಮತದಾರರು ಸುಮಾರು 1.8% ರಷ್ಟಿದ್ದಾರೆ. ಸುಮಾರು 1294690 ಗ್ರಾಮೀಣ ಮತದಾರರು 78.4% ರಷ್ಟಿದ್ದಾರೆ.

Continue Reading

ಭವಿಷ್ಯ

Dina Bhavishya : ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ದ್ವಾದಶಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮೇಷ ರಾಶಿಯಿಂದ ಸೋಮವಾರ ಮಧ್ಯರಾತ್ರಿ 01:55ಕ್ಕೆ ವೃಷಭ ರಾಶಿಯನ್ನು ಪ್ರವೇಶಿಸುತ್ತಾನೆ. ಇದರಿಂದಾಗಿ ಮೇಷ, ಮಿಥುನ, ಕಟಕ, ತುಲಾ, ವೃಶ್ಚಿಕ, ಕುಂಭ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ವೃಷಭ ರಾಶಿಯವರಿಗೆ ಭರವಸೆಯಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಮಿಥುನ ರಾಶಿಯವರು ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ ಇರಲಿದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (3-06-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ 24:17 ವಾರ: ಸೋಮವಾರ
ನಕ್ಷತ್ರ: ಅಶ್ವಿನಿ 24:03 ಯೋಗ: ಸೌಭಾಗ್ಯ 09:09
ಕರಣ: ಕೌಲವ 13:29 ಅಮೃತ ಕಾಲ: ಸಂಜೆ 05:21 ರಿಂದ 06:51 ರವರಗೆ

ಸೂರ್ಯೋದಯ : 05:52   ಸೂರ್ಯಾಸ್ತ : 06:43

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಇಂದು ನೀವೂ ಮಾನಸಿಕವಾಗಿ ಬಳಲುವ ಸಾಧ್ಯತೆ ಇದೆ. ಅನಿವಾರ್ಯ ಕಾರಣಗಳಿಂದ ಪ್ರಯಾಣ ಮಾಡಬೇಕಾಗಬಹುದು. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಸಂಗಾತಿಯಿಂದ ಸಲಹೆ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ಭರವಸೆಯಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಮಾಡಿದ ಹೂಡಿಕೆ ನಿಮ್ಮ ಅಭ್ಯುದಯ ಮತ್ತು ಆರ್ಥಿಕ ಭದ್ರತೆಯನ್ನು ಹೆಚ್ಚಿಸುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಿರಿ. ಇದಕ್ಕೆ ಪೂರಕವೆಂಬಂತೆ ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಉದ್ಯೋಗದ ಸ್ಥಳದಲ್ಲಿ ಒತ್ತಡವಿದ್ದರೂ ಸಮರ್ಥವಾಗಿ ನಿಭಾಯಿಸುವಿರಿ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಮಿಥುನ:ಭರವಸೆಯ ಹೊಸ ಬೆಳಕು ನಿಮ್ಮ ಬಾಳಿನಲ್ಲಿ ಮೂಡಲಿದೆ. ದೈಹಿಕವಾಗಿ ಮತ್ತು ಮಾನಸಿಕವಾಗಿ ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ ಇರಲಿದೆ. ಉದ್ಯೋಗಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಕಟಕ: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರನ್ನು ಆಕರ್ಷಿಸಲಿದೆ. ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆ ಎಚ್ಚರ ವಹಿಸಿ. ಉದ್ಯೋಗಕ್ಕಾಗಿ ಕೈಗೊಂಡ ಪ್ರಯಾಣ ಫಲಪ್ರದವಾಗಬಹುದು. ದೈಹಿಕವಾಗಿ ಆಯಾಸವಾಗುವ ಸಾಧ್ಯತೆ ಇದೆ. ಆದಷ್ಟು ಸೃಜನಾತ್ಮಕವಾಗಿ ಕಾರ್ಯವನ್ನು ಮಾಡುವುದು ಒಳಿತು. ಅನಿವಾರ್ಯ ಕಾರಣಗಳಿಂದ ಖರ್ಚು ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಚಾಲನೆ ಮಾಡುವಾಗ ಆದಷ್ಟು ಎಚ್ಚರ ವಹಿಸಿ. ಕಳೆದ ದಿನಗಳನ್ನು ಹೋಲಿಸಿದರೆ ಇಂದು ಆರ್ಥಿಕ ಉತ್ತಮವಾಗಲಿದೆ. ನೀವು ಹೆಚ್ಚಿನ ಹಣವನ್ನು ಪಡೆಯುತ್ತೀರಿ. ಒಂದು ಧಾರ್ಮಿಕ ಸ್ಥಳಕ್ಕೆ ಭೇಟಿ ನೀಡುವ ಅಥವಾ ಆಧ್ಯಾತ್ಮಿಕ ವ್ಯಕ್ತಿಗಳ ಸಂಪರ್ಕದಿಂದಾಗಿ ಮನಸ್ಸಿಗೆ ಸಮಾಧಾನ ಸಿಗಲಿದೆ. ನಿಮ್ಮಲ್ಲಿ ಸಕಾರಾತ್ಮಕ ಬದಲಾವಣೆ ಆಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಎಲ್ಲಿಲ್ಲದ ಪ್ರೋತ್ಸಾಹ, ಪ್ರಶಂಸೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಕೆಲವು ಘಟನೆಗಳಿಂದಾಗಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಬಳಲುವ ಸಾಧ್ಯತೆ ಇದೆ. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ. ಹಣಕಾಸು ಆಡಚಣೆಗಳು ನಿವಾರಣೆ ಆಗಲಿವೆ. ಉದ್ಯೋಗಿಗಳಿಗೆ ಸಹೋದ್ಯೋಗಿಗಳಿಂದ ಕಿರಿಕಿರಿ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಕೆಲವು ಅನುಮಾನಗಳು ಮನೆಯ ವಾತಾವರಣವನ್ನು ವಿಷಮ ಸ್ಥಿತಿಗೆ ತಳ್ಳುವ ಸಾಧ್ಯತೆ, ಆದಷ್ಟು ಸಮಾಧಾನ ಚಿತ್ತರಾಗಿ ಆಲೋಚಿಸಿ. ಆರೋಗ್ಯ ಪರಿಪೂರ್ಣವಾಗಿರವಿದೆ. ಅನಾವಶ್ಯಕ ಖರ್ಚುಗಳಿಂದಾಗಿ ಮನಸ್ಸಿನ ಹತೋಟಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ತಕ್ಕಮಟ್ಟಿಗೆ ಲಾಭ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ಅನಿವಾರ್ಯ ಕಾರಣಗಳಿಂದ ಒತ್ತಡ ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಸಾಧಾರಣ ಪ್ರಗತಿ ಇರಲಿದೆ. ಕುಟುಂಬ ಸದಸ್ಯರ ವರ್ತನೆ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ ಇದೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಬಹಳ ದಿನಗಳಿಂದ ದ್ವೇಷಿಸುತ್ತಿರುವ ವ್ಯಕ್ತಿಗಳು ಇಂದು ನಿಮ್ಮ ಸಂಪರ್ಕಕ್ಕೆ ಬರಬಹುದು. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಆರ್ಥಿಕ ಭಾಗವು ಬಲಗೊಳ್ಳುವ ಪೂರ್ಣ ಸಾಧ್ಯತೆ ಇದೆ. ನೀವು ಯಾವುದೇ ವ್ಯಕ್ತಿಗೆ ಸಾಲ ನೀಡಿದ್ದರೆ, ಇಂದು ನೀವು ಆ ಹಣವನ್ನು ಮರಳಿ ಪಡೆಯುವ ನಿರೀಕ್ಷೆಯಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಇಂದು ಭರವಸೆಯ ಹೊಸ ಅವಕಾಶಗಳು ಸಿಗಲಿವೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 1

Horoscope Today

ಮಕರ: ತುಂಬಾ ಚಿಂತೆ ಮತ್ತು ಒತ್ತಡ ನಿಮ್ಮ ಆರೋಗ್ಯವನ್ನು ನಾಶಮಾಡಬಹುದು. ನೀವು ಮಾನಸಿಕ ಸ್ಪಷ್ಟತೆಯನ್ನು ಕಾಯ್ದುಕೊಳ್ಳಲು ಗೊಂದಲ ಮತ್ತು ಹತಾಶೆಯನ್ನು ತಡೆಗಟ್ಟಬೇಕು. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಸಾಧ್ಯವಾದರೆ ದೀರ್ಘಕಾಲದ ಪ್ರಯಾಣವನ್ನು ತಪ್ಪಿಸಿ. ದೈಹಿಕವಾಗಿ ಮತ್ತು ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ವಿಶೇಷವಾಗಿ ಕೆಲಸದ ಸ್ಥಳದಲ್ಲಿ ಉದ್ಭವಿಸುವ ವಿರೋಧಕ್ಕೆ ವಿವೇಚನಾಯುಕ್ತರೂ ಮತ್ತು ಧೈರ್ಯಶಾಲಿಗಳೂ ಆಗಿರಿ, ನಿಮ್ಮ ವಿರುದ್ಧ ಪಿತೂರಿ ನಡೆಯುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಶುಭ. ಅದೃಷ್ಟ ಸಂಖ್ಯೆ: 7

Horoscope Today

ಮೀನ: ಇಂದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಆಸಕ್ತಿಗಳನ್ನು ಅನುಸರಿಸಲೂ ಒಂದು ಒಳ್ಳೆಯ ದಿನವಾಗಲಿದೆ. ದೀರ್ಘ ಕಾಲ ಬಾಕಿಯಿದ್ದ ಕೆಲಸಗಳು ಪೂರ್ಣವಾಗಲಿವೆ. ಸಂಬಂಧಿಕರು ಮತ್ತು ಸ್ನೇಹಿತರಿಂದ ಅನಿರೀಕ್ಷಿತ ಉಡುಗೊರೆಗಳು ದೊರೆಯುವ ಸಾಧ್ಯತೆ ಇದೆ. ಇತರರ ಹಸ್ತಕ್ಷೇಪ ವ್ಯಾಜ್ಯವುಂಟು ಮಾಡುತ್ತದೆ. ಯಾವುದೇ ಪಾಲುದಾರಿಕೆಗೆ ಒಪ್ಪುವ ಮೊದಲು ಆಲೋಚಿಸಿ ಹೆಜ್ಜೆ ಹಾಕಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಅನಿರೀಕ್ಷಿತ ಲಾಭ ದೊರೆಯಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ, ಕೌಟುಂಬಿಕವಾಗಿ ಶುಭ ಫಲ. ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Chamarajanagar Lok Sabha Constituency : ಚಾಮರಾಜನಗರ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್​​ಗೆ ತವಕ

Chamarajanagar Lok Sabha Constituency : ಚಾಮರಾಜನಗರ ಲೋಕಸಭೆ ಕ್ಷೇತ್ರ, ಕರ್ನಾಟಕ ರಾಜ್ಯದ ಅತ್ಯಂತ ಪ್ರಮುಖ ಕ್ಷೇತ್ರಗಳಲ್ಲಿ ಒಂದು. ಈ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರವು 1962 ರಲ್ಲಿ ಅಸ್ತಿತ್ವಕ್ಕೆ ಬಂದಿತು.

VISTARANEWS.COM


on

Chamarajanagar Lok Sabha Constituency
Koo

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರವು (Chamarajanagar Lok Sabha Constituency) ಜನಸಂಖ್ಯೆಯ ದೃಷ್ಟಿಯಿಂದ ಜಿಲ್ಲೆಯು ರಾಜ್ಯದ ಮೂರನೇ ಅತಿದೊಡ್ಡ ಕ್ಷೇತ್ರ. ಈ ಜಿಲ್ಲೆಗೆ ಮೈಸೂರು ರಾಜ ಚಾಮರಾಜ ಒಡೆಯರ್ ಅವರ ಹೆಸರನ್ನು ಇಡಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರವು ಕರ್ನಾಟಕದ ದಕ್ಷಿಣ ಭಾಗದಲ್ಲಿದೆ ಮತ್ತು ಪ್ರಸ್ತುತ ಬಿಜೆಪಿಯ ದಿ. ವಿ ಶ್ರೀನಿವಾಸ್ ಪ್ರಸಾದ್ ಪ್ರತಿನಿಧಿಸುತ್ತಿದ್ದರು. ಭಾರತದ ಚುನಾವಣಾ ಆಯೋಗದ ಪ್ರಕಾರ 2019 ರಲ್ಲಿ ಒಟ್ಟು ಮತದಾರರ ಸಂಖ್ಯೆ 16,86,333. ಕೊಳ್ಳೇಗಾಲದ ಮಾಜಿ ಶಾಸಕ ಎಸ್. ಬಾಲರಾಜ್ ಬಿಜೆಪಿಯಿಂದ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರ ಪುತ್ರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಕಾಂಗ್ರೆಸ್​​ನಿಂದ ಸ್ಪರ್ಧಿಸಲಿದ್ದಾರೆ.

ಚಾಮರಾಜನಗರ ಕ್ಷೇತ್ರವು ಮೈಸೂರು ರಾಜ್ಯದ ಭಾಗವಾಗಿತ್ತು. 1977 ರಿಂದ ಇದನ್ನು ಕರ್ನಾಟಕಕ್ಕೆ ಸೇರಿಸಲಾಗಿದೆ. ಈ ಕ್ಷೇತ್ರದಲ್ಲಿ ಈವರೆಗೆ ಒಟ್ಟು 17 ಚುನಾವಣೆಗಳು ನಡೆದಿದ್ದು, ಅದರಲ್ಲಿ ಕಾಂಗ್ರೆಸ್ 12 ಬಾರಿ ಗೆದ್ದಿದೆ. ಇದಲ್ಲದೆ, ಜನತಾದಳ ಎರಡು ಬಾರಿ ಗೆದ್ದಿದ್ದರೆ ಜೆಡಿಎಸ್ ಮತ್ತು ಜೆಡಿಯು ಅಭ್ಯರ್ಥಿಗಳು ತಲಾ ಒಂದು ಬಾರಿ ಗೆದ್ದಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಗ್ಗಡದೇವನಕೋಟೆ, ನಂಜನಗೂಡು, ವರುಣಾ, ಟಿ.ನರಸೀಪುರ, ಹನೂರು, ಕೊಳ್ಳೇಗಾಲ, ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 7 ಸ್ಥಾನಗಳು ಕಾಂಗ್ರೆಸ್, 1 ಜೆಡಿಎಸ್ ಪಾಲಾಗಿವೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಶ್ರೀನಿವಾಸ್​ ಪ್ರಸಾದ್ ಮೂಲಕ ಮೊದಲ ಬಾರಿಗೆ ಬಿಜೆಪಿ ಜಯಭೇರಿ ಬಾರಿಸಿತ್ತು. ಅದನ್ನು ಉಳಿಸಿಕೊಳ್ಳಲು ಎಲ್ಲ ರೀತಿಯಲ್ಲೂ ಸಜ್ಜಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿದೆ. ಜನತಾದಳವು ಮೊದಲು ಈ ಕಾಂಗ್ರೆಸ್ ಭದ್ರಕೋಟೆಯನ್ನು ಮುರಿದಿತ್ತು. 1999ರಲ್ಲಿ ಶ್ರೀನಿವಾಸ್ ಪ್ರಸಾದ್ ಜನತಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ ಕಾಂಗ್ರೆಸ್ ನ ಆರ್.ಧ್ರುವನಾರಾಯಣ ಅವರು ಕ್ಷೇತ್ರವನ್ನು ಕಸಿದುಕೊಂಡಿದ್ದರು.

ಹೇಗಿದೆ ಮತದಾರರ ಸ್ಥಿತಿ

2011ರ ರ ಜನಗಣತಿಯ ಪ್ರಕಾರ ಚಾಮರಾಜನಗರವು 1020791 ಜನಸಂಖ್ಯೆಯನ್ನು ಹೊಂದಿತ್ತು. ಸರಾಸರಿ ಸಾಕ್ಷರತಾ ಪ್ರಮಾಣವು 61.43% – ಮಹಿಳೆಯರಲ್ಲಿ 54.92% ಮತ್ತು ಪುರುಷರಲ್ಲಿ 67.93% ಆಗಿತ್ತು. ಕ್ಷೇತ್ರದ ಒಟ್ಟು ಮತದಾರರಲ್ಲಿ ಸುಮಾರು 1436492 ಗ್ರಾಮೀಣ ಮತದಾರರು ಸುಮಾರು 85.1% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಕ್ರಮವಾಗಿ 25.2% ಮತ್ತು 13.9% ರಷ್ಟಿದ್ದಾರೆ.

ಇದನ್ನೂ ಓದಿ: Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

ಹಿಂದಿನ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ವಿ .ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್​ನ ಆರ್. ಧ್ರುವನಾರಾಯಣ ಅವರನ್ನು 1,817 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.44.74ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್​ನ ಆರ್.ಧ್ರುವನಾರಾಯಣ ಅವರು ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ ಅವರನ್ನು 1,41,182 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ ಈ ಕ್ಷೇತ್ರದಲ್ಲಿ 50.11% ಮತಗಳನ್ನು ಗಳಿಸಿತ್ತು.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಆರ್.ಧ್ರುವನಾರಾಯಣ ಅವರು ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ ಅವರನ್ನು 4,002 ಮತಗಳ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 37.99% ಮತಗಳನ್ನು ಪಡೆದಿತ್ತು.

Continue Reading
Advertisement
Hassan Lok Sabha Constituency
ಪ್ರಮುಖ ಸುದ್ದಿ23 mins ago

Hassan Lok Sabha Constituency : ಅತ್ಯಾಚಾರ ಆರೋಪಿ ಪ್ರಜ್ವಲ್​ ರೇವಣ್ಣ ಹಾಸನದಲ್ಲಿ ಮತ್ತೆ ಗೆಲ್ಲುವರೇ?

Ways To Stay Young
ಲೈಫ್‌ಸ್ಟೈಲ್23 mins ago

Ways To Stay Young: ಸಮುದ್ರದಾಳದಲ್ಲಿ ದಿನ ಕಳೆದರೆ ಇಳಿ ವಯಸ್ಸಲ್ಲೂ ಯೌವನ ಮರಳಿ ಬರುತ್ತದೆ!

Tattoo Care
ಆರೋಗ್ಯ53 mins ago

Tattoo Care: ಟ್ಯಾಟೂ ಪ್ರಿಯರೇ ಹುಷಾರ್‌! ಎಚ್‌ಐವಿ, ಕ್ಯಾನ್ಸರ್‌ಗೂ ಇದು ಕಾರಣ ಆಗಬಹುದು!

Banglore rain
ಪ್ರಮುಖ ಸುದ್ದಿ1 hour ago

Bangalore Rain News : ಬೆಂಗಳೂರಿನಲ್ಲಿ ಭಾರಿ ಮಳೆ; ಹಲವು ಕಡೆ ಉರುಳಿ ಬಿದ್ದ ಮರಗಳು, ಮೆಟ್ರೋ ಸಂಚಾರಕ್ಕೂ ಅಡಚಣೆ

Chamarajanagar Lok Sabha Constituency
ಪ್ರಮುಖ ಸುದ್ದಿ1 hour ago

Chamarajanagar Lok Sabha Constituency : ಚಾಮರಾಜನಗರ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್​​ಗೆ ತವಕ

Dina Bhavishya
ಭವಿಷ್ಯ1 hour ago

Dina Bhavishya : ಈ ದಿನ ವ್ಯಾಪಾರ ವ್ಯವಹಾರಗಳಲ್ಲಿ ಅನಿರೀಕ್ಷಿತ ಲಾಭ

Amul Milk
ದೇಶ6 hours ago

Amul Milk: ಗ್ರಾಹಕರಿಗೆ ಬಿಗ್‌ ಶಾಕ್‌; ಹಾಲಿನ ಬೆಲೆ ಲೀಟರ್‌ಗೆ 2 ರೂ. ಹೆಚ್ಚಳ

Odisha Assembly Election
ದೇಶ7 hours ago

Odisha Assembly Election: ಒಡಿಶಾ ವಿಧಾನಸಭಾ ಚುನಾವಣೆ; ಬಿಜೆಡಿ-ಬಿಜೆಪಿ ನಡುವೆ ತೀವ್ರ ಹಣಾಹಣಿ: ಹಳೆ ದೋಸ್ತಿಗೆ ಠಕ್ಕರ್‌ ಕೊಡುತ್ತಾ ಕಮಲ ಪಡೆ?

Mysore lok sabha constituency
ಪ್ರಮುಖ ಸುದ್ದಿ8 hours ago

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Haveri Lok Sabha Constituency
ಹಾವೇರಿ8 hours ago

Haveri Lok Sabha Constituency: ಹಾವೇರಿಯಲ್ಲಿ ಅನುಭವಿ vs ಉತ್ಸಾಹಿ; ಯಾರಿಗೆ ಜಯದ ಮಾಲೆ?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ19 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ5 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌