Prerane | ಮೇಲ್ಬೇರು, ಕೆಳಕೊಂಬೆ-ಈ ವೃಕ್ಷವಾದರೂ ಯಾವುದು? - Vistara News

ಧಾರ್ಮಿಕ

Prerane | ಮೇಲ್ಬೇರು, ಕೆಳಕೊಂಬೆ-ಈ ವೃಕ್ಷವಾದರೂ ಯಾವುದು?

“ಪ್ರೇರಣೆʼʼ (Prerane) ಇದು ಧಾರ್ಮಿಕ ಮತ್ತು ಆಧ್ಯಾತ್ಮಿಕ ಚಿಂತನೆಗಳನ್ನು ಬಿತ್ತುವ ಬೆಳಗಿನ ಹೊಳಹು. ಪ್ರತಿ ನಿತ್ಯ ಧಾರ್ಮಿಕ ಚಿಂತಕರು, ಪ್ರವಚನಕಾರರು, ಆಧ್ಯಾತ್ಮಚಿಂತಕರು ಇಲ್ಲಿ ಬರೆಯುತ್ತಿದ್ದಾರೆ. ದೇಹವೆಂಬ ವೃಕ್ಷದ ಕುರಿತ ಒಳನೋಟ ಇಲ್ಲಿದೆ.

VISTARANEWS.COM


on

Prerane
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸುಬ್ರಹ್ಮಣ್ಯ ಸೋಮಯಾಜಿ
ಸಾಮಾನ್ಯವಾಗಿ ಲೋಕದಲ್ಲಿ ನಾವು ನೋಡುವ ವೃಕ್ಷಗಳ ಬೇರು ಕೆಳಗೆ ಭೂಮಿಯ ಆಳದಲ್ಲಿರುತ್ತವೆ. ಕೊಂಬೆಗಳು ಮೇಲೆಲ್ಲಾ ಹರಡಿರುತ್ತವೆ. ಆದರೆ ಶ್ರೀ ಕೃಷ್ಣನು ಗೀತೆಯಲ್ಲಿ-
ಊರ್ಧ್ವಮೂಲಮಧಃಶ್ಶಾಖಾ ಅಶ್ವತ್ಥಮ್ ಪ್ರಾಹುರವ್ಯಯಂ|
ಛಂದಾಂಸಿ ಯಸ್ಯ ಪರ್ಣಾನಿ, ಯಸ್ತಂ ವೇದ ಸ ವೇದವಿತ್||
ಮೇಲೆ ಬೇರು ಕೆಳಗೆ ಕೊಂಬೆಗಳನ್ನುಳ್ಳ ಅಶ್ವತ್ಥವೃಕ್ಷವಿದೆ. ಅದನ್ನು ಆಮೂಲಾಗ್ರವಾಗಿ ಯಾರು ತಿಳಿಯುತ್ತಾರೋ ಅವನನ್ನೇ “ವೇದವಿತ್”- ವೇದವನ್ನು ತಿಳಿದವನು. ಅಥವಾ ಸತ್ಯವನ್ನು ತಿಳಿದವನು ಎಂದಿದ್ದಾನೆ.

ಒಮ್ಮೆ ಶ್ರೀರಂಗ ಮಹಾಗುರುಗಳು ಅವರ ಶಿಷ್ಯರ ಸಮ್ಮುಖದಲ್ಲಿ ಇಂತಹ ಒಂದು ವೃಕ್ಷವನ್ನು ನೀವೆಲ್ಲಾದರೂ ನೋಡಿದ್ದೀರಾ? ಎಂದು ಕೇಳಿದರು. ಅಲ್ಲಿದ್ದವರೆಲ್ಲ ಎಷ್ಟು ಪ್ರಯತ್ನಿಸಿದರೂ ನಿಸರ್ಗದಲ್ಲಿ ಅಂತಹ ಒಂದು ವೃಕ್ಷವನ್ನು ನೋಡಿದ ನೆನಪಾಗಲಿಲ್ಲ. ಮುಂದುವರಿದು ಅವರು, ಇಲ್ಲೇ ಇವೆಯಪ್ಪಾ ಎಂದರು. ಆಗಲೂ ಗೊತ್ತಾಗದಿದ್ದಾಗ ಅವರು ಹೇಳಿದರು- ಆ ವೃಕ್ಷವನ್ನು ಹೊತ್ತುಕೊಂಡು ನಾವೆಲ್ಲರೂ ಓಡಾಡುತ್ತಿದ್ದೇವಪ್ಪಾ, ನಮ್ಮ ಶರೀರವೇ ಅಂತಹ ವೃಕ್ಷವಾಗಿದೆ ಎಂದು ವಿವರಿಸಿದರು.

ನಮ್ಮ ಮಸ್ತಿಷ್ಕ ಅಂದರೆ–ತಲೆ, ಮೇಲಿದೆ. ಅದುವೇ ಈ ಜೀವನ ವೃಕ್ಷದ ಬೇರು. ಅದು ಹೇಳಿದಂತೆ ಶಾಖೆಗಳಂತಿರುವ ಕೈ ಕಾಲುಗಳು ಕಾರ್ಯ ನಿರ್ವಹಿಸುತ್ತವೆ. ನಾವು ಯಾವ ಕ್ರಿಯೆಯನ್ನು ಮಾಡಬೇಕಾದರೂ ತಲೆ ಹೇಳಿದಂತೆಯೇ ಮಾಡಬೇಕು. ತಲೆ ಇಲ್ಲದಿದ್ದರೆ ಕೈ ಕಾಲುಗಳು ನಿಶ್ಚೇಷ್ಟಿತ. ನಮ್ಮ ನಮ್ಮ ಮಟ್ಟಿಗೆ ನಮ್ಮ ತಲೆಯೇ ನಮಗೆ ದೇವರು. ಅದರ ನಿರ್ದೇಶನದಲ್ಲೇ ನಾವು ಬದುಕುವುದು. ಎಂದೇ ತಲೆಯನ್ನು ಚೆನ್ನಾಗಿಟ್ಟುಕೊಂಡರೆ ಜೀವನ ಚೆನ್ನಾಗುತ್ತದೆ.

ಕೆಲವು ವೇಳೆ ಹೊರಗೆ ನಾವು ನೋಡುವ ಕೆಲವು ಮರಗಳಲ್ಲಿ ಮೂಲ ಮರ ಒಂದಾದರೆ ಅದರ ಕೊಂಬೆಯ ಮೇಲೆ ಇನ್ನೊಂದು ಯಾವುದೋ ಬೀಜವು ಮೂಲ ಮರದ ಶಕ್ತಿಯನ್ನು ತೆಗೆದುಕೊಂಡು ತಾನೇ ಬೆಳೆಯುತ್ತಿರುತ್ತದೆ. ಕೆಳಗೆ ಮಾವಿನ ಬೇರು, ಕಾಂಡ ಎಲ್ಲವೂ. ಮೇಲೆ ಬೇವು ಬೆಳೆಯುತ್ತಿದೆ. ಇದನ್ನು ಬದನಿಕೆ ಎನ್ನುತ್ತಾರೆ. ಇದು ಸೃಷ್ಟಿಯ ಆಶಯಕ್ಕೆ ವಿರುದ್ಧವಾದ ಬೆಳವಣಿಗೆ. ವ್ಯವಸಾಯಜ್ಞ ಮರದ ಬೆಳವಣಿಗೆಯನ್ನು ಆಗಾಗ ಗಮನಿಸುತ್ತಾ ಅದಕ್ಕೆ ಸರಿಯಾದ ಕೃಷಿ ಮಾಡುತ್ತಾ ಇದ್ದರೆ ಈ ಬಗೆಯ ಬದನಿಕೆಯನ್ನು ಬೆಳೆಯದಂತೆ ಮರವನ್ನು ರಕ್ಷಿಸಬಹುದು.

ವ್ಯವಸಾಯದ ಬಗ್ಗೆ ಪರಿಚಯವಿಲ್ಲದೇ ಇದ್ದರೆ ಬದನಿಕೆಯ ಫಲವನ್ನೇ ಮಾವಿನ ಹಣ್ಣೆಂದು ಭ್ರಮಿಸುವಂತಾಗುತ್ತದೆ. ಹಾಗೆಯೇ ನಮ್ಮ ಜೀವನವೃಕ್ಷಗಳಲ್ಲಿಯೂ ಸಹಜವಾಗಿ ಭಗವಂತ ಇಟ್ಟ ನಮ್ಮ ತಲೆಯ ರೂಪದ ಬೀಜ, ಬೇರು ಒಂದಾದರೆ ಮುಂದೆ ಸರಿಯಾದ ಕೃಷಿ ಮಾಡದೇ ಬೆಳೆದ ಬದನಿಕೆಯಂತಹ ವೃಕ್ಷವೇ ಬೇರೆಯಾಗಿದೆ.
ನಮ್ಮ ಸಹಜವಾದ ಆನಂದ ಶಾಂತಿ ಸಮೃದ್ಧಿಗಳ ಪರಿಚಯವೇ ನಷ್ಟವಾಗಿ ಬದನಿಕೆಯ ಬದುಕಾಗಿಬಿಟ್ಟಿದೆ ನಮ್ಮದು. ಮಾತ್ರವಲ್ಲ ಈ ಬದನಿಕೆಯನ್ನೇ ಸಹಜ ಎಂದು ತಿಳಿಯುವಷ್ಟು ಭ್ರಮೆಗೆ ಒಳಗಾಗಿದ್ದೇವೆ. ಬೇರಿಗೆ ಒಳ್ಳೆಯ ಸಂಸ್ಕಾರಗಳ ಕೃಷಿ ನಡೆದರೆ ಈ ಜೀವನವೃಕ್ಷದಲ್ಲೂ ಪರಮ ಫಲವನ್ನು ಪಡೆಯಬಹುದು ಎಂಬುದು ಈ ದೇಶದ ಮಹರ್ಷಿಗಳ ಮಾತು.

ಇಲ್ಲಿ ಬೆಳೆದುಬಂದ ಸಂಸ್ಕೃತಿ,ನಾಗರೀಕತೆಗಳೆಲ್ಲವೂ ಮಾನವನ ಮೇಲ್ಬೇರಾದ ಮಸ್ತಿಷ್ಕವನ್ನು ಸಹಜವಾಗಿ ಬೆಳೆಸುವ, ಅದಕ್ಕಾಗಿ ಮಾಡುವ ಕೃಷಿಯಾಗಿಯೇ ಬೆಳೆದುಬಂದಿವೆ ಎಂಬುದನ್ನು ಮರೆಯದಿರೋಣ. ಜೀವನ ವ್ಯವಸಾಯವನ್ನು ಚೆನ್ನಾಗಿ ಬಲ್ಲ ಭಾರತೀಯ ಮಹರ್ಷಿಗಳು ಇಲ್ಲಿನ ಸಂಸ್ಕಾರಗಳು, ಪೂಜೆ ಪುರಸ್ಕಾರಗಳು, ಹೋಮ ಹವನಗಳು, ತೀರ್ಥಕ್ಷೇತ್ರಗಳು,ಗುಡಿ-ಗೋಪುರಗಳು ಎಲ್ಲವನ್ನೂ ನಮ್ಮ ಜೀವನ ವೃಕ್ಷದ ಬೇರಿಗೆ ನೀರೆರೆಯುವ, ಅದನ್ನು ಐಹಿಕ ಪಾರಮಾರ್ಥಿಕ ಎರಡನ್ನೂ ಆನಂದವಾಗಿ ಅನುಭವಿಸುವ ಮಹಾ ಜೀವನ ವೃಕ್ಷವಾಗಿ ಬೆಳೆಸುವ ಸಾಧನಗಳನ್ನಾಗಿಯೇ ತಂದಿದ್ದಾರೆ. ಅವರ ಜೀವಲೋಕದ ಮೇಲಿನ ಅಪಾರವಾದ ಕರುಣೆ ಅವಿಸ್ಮರಣೀಯ.

ವೇದಗಳು ನಮ್ಮ ಶರೀರ-ಪಿಂಡಾಂಡ, ಮತ್ತು ಹೊರಗಿನ ಬ್ರಹ್ಮಾಂಡ ಇವುಗಳ ಸ್ವರೂಪವನ್ನು ಅಂತರಂಗದ ಅನುಭವದಿಂದ ತಿಳಿಸುವುವಾಗಿದೆ. ಅಂತಹ ಸ್ವರೂಪವನ್ನು ಕಾಪಿಟ್ಟುಕೊಂಡಾಗಲೇ ನಮ್ಮ ಒಳ ಹೊರ ಜೀವನಗಳು ಸಮೃದ್ಧ. ಅದುವೇ ಈ ಜೀವನ ವೃಕ್ಷದ ಪರಮಫಲ. ಇಂತಹ ಜೀವನವೃಕ್ಷವಾದ ನಮ್ಮೀ ಶರೀರವನ್ನು ಸಮಗ್ರವಾಗಿ ಅರ್ಥ ಮಾಡಿಕೊಂಡವನೇ ನಿಜವಾದ ವೇದವಿತ್ ಎಂಬ ಭಗವಂತನ ಮಾತು ಎಷ್ಟು ಉದ್ಬೋಧಕವಾಗಿದೆಯಲ್ಲವೇ?.

ಲೇಖಕರು ಆಧ್ಯಾತ್ಮ ಚಿಂತಕರು ಮತ್ತು ಪ್ರವಚನಕಾರರು
ಅಷ್ಟಾಂಗಯೋಗ ವಿಜ್ಞಾನಮಂದಿರಂ

ಇದನ್ನೂ ಓದಿ | Prerane | ನಿಮ್ಮನ್ನು ನೀವು ಬಾಹ್ಯದಿಂದ ನೋಡಿಕೊಳ್ಳಲು ಸಾಧ್ಯವೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಧಾರ್ಮಿಕ

Vastu Tips: ಮನೆಯ ದ್ವಾರದಲ್ಲಿ ಗಣೇಶನ ವಿಗ್ರಹ ಇಡುವುದು ಸರಿಯೇ?

ಎಲ್ಲ ವಿಘ್ನಗಳನ್ನು ದೂರ ಮಾಡುವ ಗಣಪತಿಯನ್ನು ಪೂಜಿಸಿದರೆ ಜೀವನದಲ್ಲಿ ಎಂದಿಗೂ ಸಮಸ್ಯೆಗಳಿರುವುದಿಲ್ಲ ಎಂದೇ ನಂಬಲಾಗುತ್ತದೆ. ಕೆಲವರು ತಮ್ಮ ಮನೆಯ ಮುಂಭಾಗದ ಬಾಗಿಲುಗಳಲ್ಲಿ ಗಣಪತಿಯ ಚಿತ್ರ ಅಥವಾ ವಿಗ್ರಹವನ್ನು ನೇತುಹಾಕುತ್ತಾರೆ. ವಾಸ್ತು ಶಾಸ್ತ್ರದಲ್ಲಿ (Vastu Tips) ಇದನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಗಣೇಶ ವಿಗ್ರಹವನ್ನು ಎಲ್ಲಿ ಇಡಬೇಕು, ಹೇಗೆ ಇಡಬೇಕು ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

By

Vastu Tips
Koo

ಪ್ರಥಮ ಪೂಜಿತ ಗಣಪತಿಯನ್ನು (ganapati) ನಮ್ಮ ನಿತ್ಯದ ಎಲ್ಲ ಕಾರ್ಯದಲ್ಲೂ ಮೊದಲ ಆದ್ಯತೆ (First priority) ನೀಡಲಾಗುತ್ತದೆ. ಎಲ್ಲಾ ದೇವರುಗಳಲ್ಲಿ (god) ಗಣಪತಿಯನ್ನು ಅತ್ಯಂತ ಪೂಜನೀಯ ಎಂದು ಪರಿಗಣಿಸಲಾಗಿದೆ. ಈ ಕಾರಣಕ್ಕಾಗಿ ಪ್ರತಿಯೊಂದು ಕೆಲಸದಲ್ಲೂ ಆತನಿಗೆ ಮೊದಲ ಪೂಜೆಯನ್ನು ಸಲ್ಲಿಸಲಾಗುತ್ತದೆ. ಆದರೆ ಇದಕ್ಕೆ ವಾಸ್ತು ಶಾಸ್ತ್ರದ (Vastu Tips) ಪ್ರಕಾರ ಇದರ ಕುರಿತು ಕೆಲವೊಂದು ನಿಯಮಗಳಿವೆ.

ಎಲ್ಲ ವಿಘ್ನಗಳನ್ನು ದೂರ ಮಾಡುವ ಗಣಪತಿಯನ್ನು ಪೂಜಿಸಿದರೆ ಜೀವನದಲ್ಲಿ ಎಂದಿಗೂ ಸಮಸ್ಯೆಗಳಿರುವುದಿಲ್ಲ ಎಂದೇ ನಂಬಲಾಗುತ್ತದೆ. ಕೆಲವರು ತಮ್ಮ ಮನೆಯ ಮುಂಭಾಗದ ಬಾಗಿಲುಗಳಲ್ಲಿ ಗಣಪತಿಯ ಚಿತ್ರ ಅಥವಾ ವಿಗ್ರಹವನ್ನು ನೇತುಹಾಕುತ್ತಾರೆ. ವಾಸ್ತು ಶಾಸ್ತ್ರದಲ್ಲಿ ಇದನ್ನು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಆದರೆ ಪ್ರವೇಶದ್ವಾರದಲ್ಲಿ ಗಣೇಶನ ಚಿತ್ರವನ್ನು ಪ್ರತಿಷ್ಠಾಪಿಸುವಾಗ ಪ್ರತಿಯೊಬ್ಬರೂ ಕೆಲವೊಂದು ನಿಯಮಗಳನ್ನು ಪಾಲಿಸಬೇಕು.


ಯಾವ ದಿಕ್ಕು ಸೂಕ್ತ?

ವಾಸ್ತು ಶಾಸ್ತ್ರದಲ್ಲಿ ಮನೆಯ ಮುಂಭಾಗದ ದ್ವಾರದ ಮೇಲೆ ಗಣಪತಿ ವಿಗ್ರಹವನ್ನು ಇರಿಸಲು ಕೆಲವೊಂದು ಸೂಚನೆಗಳನ್ನು ಅನುಸರಿಸುವುದು ಮುಖ್ಯವಾಗಿದೆ. ಇದಕ್ಕಾಗಿ ಮನೆಯ ಮುಂಭಾಗದ ಬಾಗಿಲು ಉತ್ತರ ಅಥವಾ ದಕ್ಷಿಣಕ್ಕೆ ಎದುರಾಗಿರಬೇಕು. ಆದರೆ ಮುಖ್ಯ ಪ್ರವೇಶ ದ್ವಾರ ಇರುವಲ್ಲಿ ಪೂರ್ವ ಅಥವಾ ಪಶ್ಚಿಮಕ್ಕೆ ಎದುರಾಗಿರುವ ಗಣೇಶನ ಪ್ರತಿಮೆಯನ್ನು ಇರಿಸಬಾರದು.

ಸ್ಥಾಪನೆ ಸರಿಯಾಗಿರಲಿ

ಮನೆಯ ಮುಂಭಾಗದ ದ್ವಾರದ ಮೇಲೆ ಗಣೇಶನ ವಿಗ್ರಹವನ್ನು ಇರಿಸುವಾಗ ಅದನ್ನು ವಿಧಿವತ್ತಾಗಿ ಸ್ಥಾಪಿಸಬೇಕು. ವಿಗ್ರಹವು ಎಲ್ಲಾ ಸಮಯದಲ್ಲೂ ಒಳಮುಖವಾಗಿರಬೇಕು. ಪಶ್ಚಿಮ, ಉತ್ತರ ಮತ್ತು ಈಶಾನ್ಯ ದೃಷ್ಟಿಕೋನಗಳು ಇದಕ್ಕೆ ಅತ್ಯುತ್ತಮವೆಂದು ಹೇಳಲಾಗುತ್ತದೆ.

ಇದನ್ನೂ ಓದಿ Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

ಬಣ್ಣ ಯಾವುದು?

ವಾಸ್ತು ಶಾಸ್ತ್ರದ ಪ್ರಕಾರ ಕುಟುಂಬದಲ್ಲಿ ಸಮೃದ್ಧಿಯಾಗಬೇಕೆಂದು ಬಯಸಿದರೆ ಬಿಳಿ ಅಥವಾ ಸಿಂಧೂರ ವರ್ಣದ ಗಣೇಶನನ್ನು ಪ್ರತಿಷ್ಠಾಪಿಸಬೇಕು. ಇದನ್ನು ಮಾಡುವುದರಿಂದ ಕುಟುಂಬದಲ್ಲಿ ಸಂಪತ್ತು ಮತ್ತು ಸಂತೋಷವನ್ನುನಿರಂತರವಾಗಿ ಇರುವುದು.

ಪ್ರತಿಮೆಯ ಭಂಗಿ

ಗಣೇಶನ ಪ್ರತಿಮೆಯನ್ನು ಮನೆಯ ಮುಂಭಾಗದ ಬಾಗಿಲಿನಲ್ಲಿ ಕುಳಿತುಕೊಳ್ಳುವ ಭಂಗಿಯಲ್ಲಿ ಇಡಬೇಕು. ಮನೆಯ ದ್ವಾರದ ಹೊರಗೆ ನಿಂತಿರುವ ಗಣೇಶನ ಪ್ರತಿಷ್ಠಾಪನೆಯು ಅದೃಷ್ಟವನ್ನು ತರುವುದಿಲ್ಲ. ಕಾರ್ಯಸ್ಥಳ ಅಥವಾ ಕಚೇರಿಯಲ್ಲಿ ನಿಂತಿರುವ ಗಣೇಶನ ವಿಗ್ರಹವನ್ನು ಇಡಬಹುದು. ಆದರೆ ಮನೆಯಲ್ಲಿ ಇಡಬಾರದು ಎನ್ನುತ್ತದೆ ವಾಸ್ತು ನಿಯಮ.

Continue Reading

ಆರೋಗ್ಯ

Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

ಅಲರ್ಜಿ ತೊಂದರೆಗಳು ಈಗ ಎಲ್ಲರಲ್ಲೂ ಸಾಮಾನ್ಯ. ಇದಕ್ಕೆ ಮುಖ್ಯ ಕಾರಣ ನಮ್ಮ ಆಹಾರ. ಆದರೆ ಅದು ಹೇಗೆ ಬಂತು, ಕಡಿಮೆ ಮಾಡುವುದು ಹೇಗೆ ಎನ್ನುವುದಕ್ಕೆ ನಮ್ಮಲ್ಲಿ ಉತ್ತರವಿರುವುದಿಲ್ಲ. ವೈದ್ಯರನ್ನು ಸಂಪರ್ಕಿಸಿ ಒಂದೆರಡು ದಿನ ಔಷಧ ಪಡೆದು ಸುಮ್ಮನಾಗುತ್ತೇವೆ. ಇದು ಮತ್ತೊಮ್ಮೆ , ಮಗದೊಮ್ಮೆ ಉಂಟಾಗುತ್ತಲೇ ಇರುತ್ತದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಅಲರ್ಜಿಯನ್ನು ನಾವು ಸಣ್ಣ ವಯಸ್ಸಿನಲ್ಲೇ ದೂರ ಮಾಡಬಹುದು. ಅದು ಹೇಗೆ ಎಂಬುದನ್ನು ಸದ್ಗುರು (Sadhguru Jaggi Vasudev) ಹೇಳಿರುವುದು ಹೀಗೆ.

VISTARANEWS.COM


on

By

Sadhguru Jaggi Vasudev
Koo

ಇತ್ತೀಚಿನ ದಿನಗಳಲ್ಲಿ ಸಣ್ಣ ಮಕ್ಕಳು (children’s) ಅಲರ್ಜಿ (allergies ) ತೊಂದರೆಯಿಂದ ಬಳಲುತ್ತಿರುತ್ತಾರೆ. ಎಷ್ಟೇ ಆರೈಕೆ ಮಾಡಿದರೂ ಸಂಪೂರ್ಣ ಗುಣಮುಖರಾಗುವುದಿಲ್ಲ. ಎಷ್ಟೋ ಬಾರಿ ಪೋಷಕರು (parents) ತಮ್ಮ ಮಕ್ಕಳಿಗೆ ಏಕೆ ಈ ತೊಂದರೆ ಕಾಣಿಸಿಕೊಂಡಿತು ಎಂದು ತಮ್ಮನ್ನು ತಾವು ಪ್ರಶ್ನಿಸುತ್ತಲೇ ಇರುತ್ತಾರೆ. ಆದರೆ ಅವರಿಗೆ ಇದಕ್ಕೆ ಉತ್ತರವೇ ಸಿಗುವುದಿಲ್ಲ. ಪ್ರಸಿದ್ಧ ಆಧ್ಯಾತ್ಮಿಕ ಮಾರ್ಗದರ್ಶಿ ಮತ್ತು ಆರೋಗ್ಯ ತಜ್ಞ ಸದ್ಗುರು ಜಗ್ಗಿ ವಾಸುದೇವ್ (Sadhguru Jaggi Vasudev) ಅವರು ಇದೀಗ ಮಕ್ಕಳಲ್ಲಿ ಉಂಟಾಗುವ ಅಲರ್ಜಿ ಸಮಸ್ಯೆಗಳಿಗೆ ಕಾರಣ ಮತ್ತು ಪರಿಹಾರವನ್ನು ಹೇಳಿದ್ದಾರೆ.

ಅಲರ್ಜಿ ತೊಂದರೆಗಳು ಈಗ ಎಲ್ಲರಲ್ಲೂ ಸಾಮಾನ್ಯ. ಇದಕ್ಕೆ ಮುಖ್ಯ ಕಾರಣ ನಮ್ಮ ಆಹಾರ. ಆದರೆ ಅದು ಹೇಗೆ ಬಂತು, ಕಡಿಮೆ ಮಾಡುವುದು ಹೇಗೆ ಎನ್ನುವುದಕ್ಕೆ ನಮ್ಮಲ್ಲಿ ಉತ್ತರವಿರುವುದಿಲ್ಲ. ವೈದ್ಯರನ್ನು ಸಂಪರ್ಕಿಸಿ ಒಂದೆರಡು ದಿನ ಔಷಧ ಪಡೆದು ಸುಮ್ಮನಾಗುತ್ತೇವೆ. ಇದು ಮತ್ತೊಮ್ಮೆ , ಮಗದೊಮ್ಮೆ ಉಂಟಾಗುತ್ತಲೇ ಇರುತ್ತದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಅಲರ್ಜಿಯನ್ನು ನಾವು ಸಣ್ಣ ವಯಸ್ಸಿನಲ್ಲೇ ದೂರ ಮಾಡಬಹುದು ಎಂದಿದ್ದಾರೆ ಅವರು.

ಮಗುವು ಅಲರ್ಜಿಯೊಂದಿಗೆ ಹೋರಾಡುವುದನ್ನು ನೋಡುವುದು ಪ್ರತಿಯೊಬ್ಬ ಪೋಷಕರಿಗೂ ಸಂಕಟ ಮತ್ತು ಅಸಮಾಧಾನವನ್ನು ಉಂಟುಮಾಡುತ್ತದೆ. ಎಷ್ಟೇ ಔಷಧ ಮಾಡಿದರೂ ಇದು ಗುಣವಾಗದೇ ಇರುವುದು ನಮ್ಮನ್ನು ಚಿಂತೆಗೆ ಈಡಾಗುವಂತೆ ಮಾಡುತ್ತದೆ. ಎಷ್ಟೋ ಬಾರಿ ಇದು ಪುಟ್ಟ ಮಕ್ಕಳಿಗೆ ತಮ್ಮ ಬದುಕಿನಲ್ಲಿ ಬೇಸರ, ನಿರಾಸೆಯನ್ನು ಉಂಟು ಮಾಡಬಹುದು. ಆದರೂ ಮಕ್ಕಳ ಈ ಅಲರ್ಜಿ ಸಮಸ್ಯೆಗಳನ್ನು ನೈಸರ್ಗಿಕವಾಗಿ ಪರಿಹರಿಸಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು, ಆಧ್ಯಾತ್ಮಿಕ ಚಿಂತಕರಾದ ಜಗ್ಗಿ ವಾಸುದೇವ್.

ಮಕ್ಕಳಲ್ಲಿ ಅಲರ್ಜಿಯನ್ನು ನಿರ್ವಹಿಸುವ ಕುರಿತು ಅವರು ತಮ್ಮ ಸಲಹೆಯನ್ನು ನೀಡಿದ್ದಾರೆ. ಸುಲಭವಾದ ಜೀವನಶೈಲಿ ಹೊಂದಾಣಿಕೆಯಿಂದ ಶಕ್ತಿಯುತವಾದ ಮನೆ ಚಿಕಿತ್ಸೆಗಳವರೆಗೆ ಎಲ್ಲವೂ ಅಲರ್ಜಿಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ ಮತ್ತು ಮಕ್ಕಳ ಸಾಮಾನ್ಯ ಆರೋಗ್ಯವನ್ನು ಹೆಚ್ಚಿಸಲು ಪ್ರೇರಣೆಯಾಗುತ್ತದೆ ಎನ್ನುತ್ತಾರೆ ಅವರು.
ಇತ್ತೀಚಿಗೆ ಅವರು ಅಲರ್ಜಿಯ ಪ್ರಮುಖ ವಿಷಯವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅಲರ್ಜಿಯನ್ನು ಜಯಿಸಲು ಪ್ರಮುಖ ಮಾರ್ಗಗಳನ್ನು ಸೂಚಿಸಿದ್ದಾರೆ.

ಇದನ್ನೂ ಓದಿ: Priyanka Chopra: ಬೆಳ್ಳುಳ್ಳಿ ಎಸಳು ಪಾದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ? ನಟಿ ಪ್ರಿಯಾಂಕಾ ಚೋಪ್ರಾ ಹೇಳಿದ್ದೇನು?

ಮಕ್ಕಳ ಬಗ್ಗೆ ಮಾತನಾಡಿದ ಅವರು, ಅಲರ್ಜಿಯಿಂದ ಪರಿಹಾರ ಪಡೆಯಲು ಹಲವು ದಾರಿಗಳಿವೆ. ಆರೋಗ್ಯಕರ ಜೀವಿಗಳಿಗೆ ಆಹಾರ ಸೇವನೆಯಲ್ಲಿ ಕೆಲವು ಬದಲಾವಣೆಗಳನ್ನು ಸಲಹೆ ನೀಡಿದ್ದಾರೆ.

ಮಕ್ಕಳಿಗೆ ಅಲರ್ಜಿಗಳು ಹೋಗಬೇಕಾದರೆ ಹಾಲು ಮತ್ತು ಮಾಂಸದ ಉತ್ಪನ್ನಗಳಿಂದ ಅವರನ್ನು ದೂರವಿರಿಸಿ. ಇವು ತುಂಬಾ ಕೆಟ್ಟದಾಗಿ ಅಲರ್ಜಿ ಉಂಟು ಮಾಡಬಲ್ಲದು. ಸ್ವಲ್ಪ ಅಲರ್ಜಿ ಕಾಣಿಸಿ ಕೊಂಡರೆ ಪರವಾಗಿಲ್ಲ. ತುಂಬಾ ಕೆಟ್ಟದಾಗಿ ಅಲರ್ಜಿಯಾಗಿದ್ದರೆ ಮಾಂಸ ಉತ್ಪನ್ನಗಳನ್ನು ತ್ಯಜಿಸಿ ಸಾಕಷ್ಟು ತರಕಾರಿ, ತಾಜಾ ಹಣ್ಣು ಮತ್ತು ವಸ್ತುಗಳನ್ನೇ ಅವರಿಗೆ ಸೇವಿಸಲು ಕೊಡಿ. ಇದರಿಂದ ಅವರು ಬಹುಬೇಗನೆ ಅಲರ್ಜಿ ತೊಂದರೆಯಿಂದ ಗುಣಮುಖರಾಗುತ್ತಾರೆ ಎಂದು ಸದ್ಗುರು ತಿಳಿಸಿದ್ದಾರೆ.

Continue Reading

ದೇಶ

Amarnath Yatra: ವ್ಯಾಪಕ ಬಿಗಿ ಭದ್ರತೆಯೊಂದಿಗೆ ಈ ಬಾರಿಯ ಅಮರನಾಥ ಯಾತ್ರೆ ಆರಂಭ; ಪವಿತ್ರ ಗುಹೆಯತ್ತ ಹೊರಟ ಮೊದಲ ತಂಡ

Amarnath Yatra: ಪವಿತ್ರ ಅಮರನಾಥ ಯಾತ್ರೆ 2024 ಆರಂಭವಾಗಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ. ಶಂಖದ ನಾದ ಮತ್ತು “ಬುಮ್ ಬುಮ್ ಭೋಲೆ”, “ಜೈ ಬಾಬಾ ಬುರ್ಫಾನಿ” ಹಾಗೂ “ಹರ್ ಹರ್ ಮಹಾದೇವ್” ಘೋಷಣೆಗಳ ನಡುವೆ, ಯಾತ್ರಾರ್ಥಿಗಳ ಮೊದಲ ತಂಡವು ಶಿಬಿರದಿಂದ ಸಮುದ್ರ ಮಟ್ಟದಿಂದ 12,756 ಅಡಿ ಎತ್ತರದಲ್ಲಿರುವ ಪವಿತ್ರ ದೇವಾಲಯದತ್ತ ಹೆಜ್ಜೆ ಹಾಕಿದೆ.

VISTARANEWS.COM


on

Amarnath Yatra
Koo

ಶ್ರೀನಗರ: ಪವಿತ್ರ ಅಮರನಾಥ ಯಾತ್ರೆ(Amarnath Yatra)ಗೆ ಇಂದು (ಜೂನ್‌ 29) ಚಾಲನೆ ಸಿಕ್ಕಿದೆ. ಪವಿತ್ರ ಗುಹೆಯ ದರ್ಶನಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಗಂಡರ್ಬಾಲ್ ಜಿಲ್ಲೆಯ ಬಾಲ್ಟಾಲ್ ಬೇಸ್ ಕ್ಯಾಂಪ್‌ನಿಂದ ಯಾತ್ರಾರ್ಥಿಗಳ ಮೊದಲ ತಂಡ ಹೊರಟಿದೆ. ಶಂಖದ ನಾದ ಮತ್ತು “ಬುಮ್ ಬುಮ್ ಭೋಲೆ”, “ಜೈ ಬಾಬಾ ಬುರ್ಫಾನಿ” ಹಾಗೂ “ಹರ್ ಹರ್ ಮಹಾದೇವ್” ಘೋಷಣೆಗಳ ನಡುವೆ, ಯಾತ್ರಾರ್ಥಿಗಳ ಮೊದಲ ತಂಡವು ಶಿಬಿರದಿಂದ ಸಮುದ್ರ ಮಟ್ಟದಿಂದ 12,756 ಅಡಿ ಎತ್ತರದಲ್ಲಿರುವ ಪವಿತ್ರ ದೇವಾಲಯದತ್ತ ಹೆಜ್ಜೆ ಹಾಕಿದೆ.

4,603 ಯಾತ್ರಾರ್ಥಿಗಳ ತಂಡ

4,603 ಯಾತ್ರಾರ್ಥಿಗಳನ್ನು ಒಳಗೊಂಡ ಮೊದಲ ಬ್ಯಾಚ್ ಶುಕ್ರವಾರ ಬಿಗಿ ಭದ್ರತೆಗಳ ನಡುವೆ ಕಾಶ್ಮೀರ ಕಣಿವೆಯನ್ನು ತಲುಪಿತ್ತು. ಈ ವರ್ಷದ 52 ದಿನಗಳ ಸುದೀರ್ಘ ತೀರ್ಥಯಾತ್ರೆ ಆಗಸ್ಟ್ 19ರಂದು ಕೊನೆಗೊಳ್ಳಲಿದೆ. ಅಮರನಾಥ ಯಾತ್ರೆಗೆ ಆನ್‌ಲೈನ್‌ ನೋಂದಣಿ ಏಪ್ರಿಲ್ 15ರಂದು ಶ್ರೀ ಅಮರನಾಥ ದೇವಾಲಯ ಮಂಡಳಿಯ (SASB) ವೆಬ್‌ಸೈಟ್‌ ಮತ್ತು ಪೋರ್ಟಲ್‌ನಲ್ಲಿ ಪ್ರಾರಂಭವಾಗಿದ್ದು, ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದೆ.

ಬಿಗಿ ಭದ್ರತೆ

ಸುಗಮ ಯಾತ್ರೆಯನ್ನು ಖಚಿತಪಡಿಸಿಕೊಳ್ಳಲು ಮೂರು ಹಂತದ ಭದ್ರತೆ ಒದಗಿಸಲಾಗಿದೆ. ಚೆಕ್ ಪಾಯಿಂಟ್‌ ಸ್ಥಾಪನೆ ಸೇರಿದಂತೆ ಸಮಗ್ರ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ. ವರದಿಗಳ ಪ್ರಕಾರ ಈ ವರ್ಷದ ಯಾತ್ರೆಗೆ 3.50 ಲಕ್ಷಕ್ಕೂ ಹೆಚ್ಚು ಜನರು ನೋಂದಾಯಿಸಿಕೊಂಡಿದ್ದಾರೆ. ದೇವಾಲಯಕ್ಕೆ ತೆರಳುವ ಎರಡು ಮಾರ್ಗಗಳಲ್ಲಿ 125 ಅಡುಗೆಮನೆಗಳನ್ನು ಸ್ಥಾಪಿಸಲಾಗಿದೆ ಮತ್ತು 6,000ಕ್ಕೂ ಹೆಚ್ಚು ಸ್ವಯಂಸೇವಕರನ್ನು ನಿಯೋಜಿಸಲಾಗಿದೆ.

ಪ್ರತಿವರ್ಷ ಅಮರನಾಥ ಯಾತ್ರೆಯು ಲಕ್ಷಾಂತರ ಭಕ್ತರು ದೇಶದ ವಿವಿಧ ಭಾಗಗಳಿಂದ ಆಗಮಿಸುತ್ತಾರೆ. ಜುಲೈ-ಆಗಸ್ಟ್‌ (ಹಿಂದೂ ಕ್ಯಾಲೆಂಡರ್‌ನಲ್ಲಿ ಶ್ರಾವಣ ಮಾಸ)ನಲ್ಲಿ ಈ ಯಾತ್ರೆ ನಡೆಯುತ್ತದೆ. ಜಮ್ಮು ಮತ್ತು ಕಾಶ್ಮೀರದ ರಾಜಧಾನಿ ಶ್ರೀನಗರದಿಂದ 141 ಕಿ.ಮೀ. ದೂರದಲ್ಲಿರುವ ಅಮರನಾಥ ಪವಿತ್ರ ಗುಹೆಯು ಲಡಾರ್ ಕಣಿವೆಯಲ್ಲಿದೆ. ಇದು ಹಿಮನದಿಗಳು ಮತ್ತು ಹಿಮದಿಂದ ಆವೃತವಾದ ಪರ್ವತಗಳಿಂದ ಕೂಡಿದೆ. ಹಿಮಾಲಯದ ಅಮರನಾಥ ಯಾತ್ರೆ ಬಹಳ ಹಳೆಯದು ಮತ್ತು ಪವಿತ್ರವಾದದ್ದು. ಇಲ್ಲಿ ಸುಮಾರು 5,000 ವರ್ಷಗಳಷ್ಟು ಹಳೆಯದಾದ ಶಿವಲಿಂಗವಿದೆ. 

ಉಗ್ರ ಕರಿನೆರಳು

ಈ ಬಾರಿ ಅಮರನಾಥ ಯಾತ್ರೆ ಗುರಿಯಾಗಿಸಿ ವಿಧ್ವಂಸಕ ಕೃತ್ಯ ಎಸಗಲು ಪಾಕಿಸ್ತಾನ ಭಾರೀ ಸಂಚು ರೂಪಿಸಿರುವುದು ಬಯಲಾಗಿದೆ. ಲಷ್ಕರ್‌ ಉಗ್ರ ಸಂಘಟನೆ(Lashkar Terrorists) ಮುಖ್ಯಸ್ಥ ಅಬ್ದುಲ್‌ ರೆಹಮಾನ್‌ ಮಕ್ಕಿ ಲಾಹೋರ್‌ ಮತ್ತು ಬಹವಾಲ್‌ಪುರದಲ್ಲಿ ಅತಿ ದೊಡ್ಡ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳನ್ನು ಹಂಚುವ ಬಗ್ಗೆ ಮಹತ್ವ ಸಭೆ ನಡೆಸಿದ್ದಾನೆ. ಅಮರನಾಥ್‌ ಯಾತ್ರೆ ಸಂದರ್ಭದಲ್ಲಿ ವಿವಿಧ ಪ್ರದೇಶಗಳಲ್ಲಿ ದಾಳಿ ನಡೆಸಲು ಜಮ್ಮು ಮತ್ತು ಕಾಶ್ಮೀರಕ್ಕೆ ಅಮೆರಿಕ ನಿರ್ಮಿತ ಶಸ್ತ್ರಾಸ್ತಗಳನ್ನು ಪೂರೈಕೆ ಮಾಡುವುದೇ ಈ ಸಭೆಯ ಪ್ರಮುಖ ಉದ್ದೇಶವಾಗಿತ್ತು ಎಂದು ತಿಳಿದು ಬಂದಿದ್ದು, ಈ ನಿಟ್ಟಿನಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ದಾಳಿಗಳನ್ನು ಮತ್ತು ಕದನ ವಿರಾಮ ಉಲ್ಲಂಘನೆಗಳನ್ನು ತಡೆಯಲು ಭಾರತದ ಸರ್ಕಾರವು ಮುಂದಾಗಿದೆ ಎಂದು ಭಾರತೀಯ ಸೇನೆ ಸ್ಪಷ್ಟಪಡಿಸಿದೆ.

ಇದನ್ನೂ ಓದಿ: Amarnath Yatra: ಆಗಸ್ಟ್‌ನಲ್ಲಿ ಪಾಕ್‌ ನಡೆಸುತ್ತಾ ಡೆಡ್ಲಿ ಅಟ್ಯಾಕ್‌? ಎರಡೆರಡು ಉಗ್ರ ಸಂಘಟನೆಗಳಿಂದ ದೊಡ್ಡ ಪ್ಲ್ಯಾನ್‌!

Continue Reading

ಧಾರ್ಮಿಕ

Ashada Month: ಆಷಾಢವನ್ನು ಅಶುಭ ತಿಂಗಳು ಅನ್ನುವುದೇಕೆ? ಇದಕ್ಕಿದೆ ವೈಜ್ಞಾನಿಕ ಕಾರಣ!

ಆಷಾಢ ಮಾಸವನ್ನು (Ashada Month) ಅಶುಭ ತಿಂಗಳು ಎಂದು ಕರೆಯಲು ಹಲವು ಕಾರಣಗಳೂ ಇವೆ. ಆದರೂ ಈ ಸಂದರ್ಭದಲ್ಲಿ ಹಲವು ವಿಶೇಷ ಆಚರಣೆಗಳನ್ನು ಮಾಡಲಾಗುತ್ತದೆ. ಶುಭ ಕಾರ್ಯಗಳಿಗೆ ಅಶುಭವಾದರೂ ಕೆಲವೊಂದು ಸಂಪ್ರದಾಯ, ಆಚರಣೆಗಳು ಈ ಸಂದರ್ಭದಲ್ಲಿ ಮಾತ್ರ ನಡೆಸಲಾಗುತ್ತದೆ. ಅದು ಯಾವುದು ಗೊತ್ತೆ? ಈ ಕುರಿತ ಮಾಹಿತಿ ಇಲ್ಲಿದೆ, ಓದಿ.

VISTARANEWS.COM


on

By

Ashada Month
Koo

ದಕ್ಷಿಣ ಭಾರತದಲ್ಲಿ (south india) ಆದಿ ಎಂದೂ ಕರೆಯಲ್ಪಡುವ ಆಷಾಢ ಮಾಸ (Ashada Month) ಶುಭ ಕಾರ್ಯಗಳಿಗೆ ಅತ್ಯಂತ ಅಶುಭ (inauspicious) ಮಾಸವೆಂದು ಪರಿಗಣಿಸಲಾಗಿದೆ. ಇದು ಈಗಿನ ನಂಬಿಕೆಯಲ್ಲ. ಇದಕ್ಕೆ ಸಹಸ್ರಾರು ವರ್ಷಗಳ ಹಿನ್ನೆಲೆಯೇ ಇದೆ. ಈ ಸಂದರ್ಭದಲ್ಲಿ ಕೆಲವೊಂದು ನಂಬಿಕೆ, ವಿಶಿಷ್ಟ ಆಚರಣೆಗಳನ್ನೂ ಮಾಡಲಾಗುತ್ತದೆ.

ಸರಿಸುಮಾರು ಜೂನ್- ಜುಲೈನಲ್ಲಿ ಬರುವ ಆಷಾಢ ಮಾಸದಲ್ಲಿ ಭಾರತದಲ್ಲಿ ಗಾಳಿ ಬೀಸುವ ಕಾಲವಾಗಿದೆ. ಮಳೆಗಾಲ ಆರಂಭದ ಸಮಯ. ಆಕಾಶದಲ್ಲಿ ದಟ್ಟ ಮೋಡಗಳು ಆವರಿಸುತ್ತದೆ. ಖಗೋಳಶಾಸ್ತ್ರದ ಪ್ರಕಾರ ಭೂಮಿಯು ಪೂರ್ವ- ಆಷಾಢ ನಕ್ಷತ್ರಪುಂಜದ ಸಮೀಪದಲ್ಲಿರುತ್ತದೆ. ಆದ್ದರಿಂದ ಈ ತಿಂಗಳಲ್ಲಿ ಪೂರ್ಣ ಚಂದ್ರನು ಆ ನಕ್ಷತ್ರಪುಂಜದಲ್ಲಿ ಕಾಣಿಸಿಕೊಳ್ಳುತ್ತಾನೆ. ಸೂರ್ಯ ಮಿಥುನ ರಾಶಿಯಿಂದ ಕರ್ಕಾಟಕಕ್ಕೆ ದಕ್ಷಿಣದ ಕಡೆಗೆ ಚಲಿಸುತ್ತಾನೆ.

ದಕ್ಷಿಣ ಭಾರತದಲ್ಲಿ ಈ ತಿಂಗಳು ನವವಿವಾಹಿತ ದಂಪತಿಗೆ ಬಹಳ ಭಾವನಾತ್ಮಕ ತಿಂಗಳು. ಯಾಕೆಂದರೆ ವಧು ಮತ್ತು ವರರನ್ನು ಈ ಒಂದು ತಿಂಗಳ ಕಾಲ ಬೇರ್ಪಡಿಸಲಾಗುತ್ತದೆ. ಅನೇಕರು ಇದನ್ನು ಸಂಪ್ರದಾಯದ ಭಾಗವಾಗಿ ಅನುಸರಿಸುತ್ತಾರೆ. ಇದಕ್ಕೆ ನಿರ್ದಿಷ್ಟ ಕಾರಣಗಳು ಇಲ್ಲವಾದರೂ ಸಂಪ್ರದಾಯವಂತೂ ಇಂದಿಗೂ ಆಚರಣೆಯಲ್ಲಿದೆ.

1. ಬೇಸಿಗೆಯಲ್ಲಿ ಮಗುವಿನ ಜನನ

ಆಷಾಢ ಮಾಸದಲ್ಲಿ ನವವಿವಾಹಿತರು ಬೇರ್ಪಡಲು ಮುಖ್ಯ ಕಾರಣ ಈ ಸಮಯದಲ್ಲಿ ಮಹಿಳೆ ಗರ್ಭಿಣಿಯಾದರೆ ದಕ್ಷಿಣ ಭಾರತದಲ್ಲಿ ಬೇಸಿಗೆಯ ಮಧ್ಯದಲ್ಲಿ ಅಂದರೆ ಮಾರ್ಚ್, ಏಪ್ರಿಲ್, ಮೇ ತಿಂಗಳಲ್ಲಿ ಮಗುವಿನ ಜನನವಾಗುತ್ತದೆ. ತಾಯಿ ಮತ್ತು ಮಗು ಇಬ್ಬರಿಗೂ ಇದು ಒಳ್ಳೆಯದಲ್ಲ. ಬೇಸಿಗೆಯಲ್ಲಿ ಮಗುವನ್ನು ನೋಡಿಕೊಳ್ಳುವುದು ತುಂಬಾ ಕಷ್ಟಕರವಾಗಿರುತ್ತದೆ ಮತ್ತು ಮಗುವಿಗೆ ತೊಂದರೆಯಾಗುತ್ತದೆ. ಆದ್ದರಿಂದ ನಮ್ಮ ಪೂರ್ವಜರು ನವಜಾತ ಶಿಶುವಿಗೆ ತೊಂದರೆಯಾಗದಂತೆ ವಧು ವರನನ್ನು ಬೇರ್ಪಡಿಸುವ ಯೋಜನೆಯನ್ನು ರೂಪಿಸಿದ್ದಾರೆ ಎನ್ನಲಾಗುತ್ತದೆ.


2. ಕೃಷಿಗೆ ಹೆಚ್ಚಿನ ಪ್ರಾಮುಖ್ಯತೆ

ಜುಲೈ ಮತ್ತು ಆಗಸ್ಟ್ ದಕ್ಷಿಣ ಭಾರತದ ಪ್ರದೇಶಗಳಲ್ಲಿ ಮಾನ್ಸೂನ್ ಆರಂಭವಾಗುತ್ತದೆ. ಈ ಋತುವಿನಲ್ಲಿ ಕೃಷಿಗೆ ಉತ್ತಮವಾದ ಋತುವಾಗಿದೆ. ನದಿ ಮತ್ತು ಸರೋವರಗಳು ನೀರಿನಿಂದ ತುಂಬಿರುತ್ತವೆ. ಜುಲೈ ಮತ್ತು ಆಗಸ್ಟ್ ತಿಂಗಾಲಿನಲ್ಲಿ ಹೊಲಗಳಲ್ಲಿ ಕಷ್ಟಪಟ್ಟು ಕೆಲಸ ಮಾಡಬೇಕಾಗುತ್ತದೆ. ಆದ್ದರಿಂದ ಈ ತಿಂಗಳುಗಳಲ್ಲಿ ಕುಟುಂಬದ ಪ್ರತಿಯೊಬ್ಬರೂ ಇಡೀ ವರ್ಷ ಉತ್ತಮ ಫಲಿತಾಂಶವನ್ನು ಪಡೆಯಲು ಹೊಲದಲ್ಲಿ ಕೆಲಸ ಮಾಡಬೇಕಾಗುತ್ತದೆ. ವಧುವನ್ನು ತನ್ನ ತಂದೆಯ ಮನೆಗೆ ಕಳುಹಿಸಲಾಗುತ್ತದೆ. ಆದ್ದರಿಂದ ಅವಳು ತನ್ನ ಹೆತ್ತವರಿಗೆ ಸಹಾಯ ಮಾಡಬಹುದು ಮತ್ತು ಮದುಮಗನು ಕೃಷಿಯತ್ತ ಗಮನಹರಿಸಬಹುದು. ಕೆಲಸದ ಮೇಲೆ ಗಮನ ಕೇಂದ್ರೀಕರಿಸಲು ಇದು ಒಂದು ಯೋಜನೆಯಾಗಿ ನವದಂಪತಿಯನ್ನು ಬೇರ್ಪಡಿಸಲಾಗುತ್ತದೆ ಎನ್ನಲಾಗುತ್ತದೆ.

3. ಆಯುರ್ವೇದ ನಂಬಿಕೆ

ಆಯುರ್ವೇದ ಶಾಸ್ತ್ರದ ಪ್ರಕಾರ ಮಾನ್ಸೂನ್ ಸಮಯದಲ್ಲಿ ಲೈಂಗಿಕತೆಯನ್ನು ನಿಷೇಧಿಸಲಾಗುತ್ತದೆ. ಮಳೆಗಾಲವು ವಿಶ್ರಾಂತಿ ಮತ್ತು ನವ ಯೌವನ ಪಡೆಯುವ ಕಾಲವಾಗಿದೆ. ಈ ತಿಂಗಳಲ್ಲಿ ಲೈಂಗಿಕತೆಯನ್ನು ಅನುಮತಿಸಲಾಗುವುದಿಲ್ಲ. ಮಾನ್ಸೂನ್ ತಿಂಗಳುಗಳನ್ನು ಅತ್ಯಂತ ದುರ್ಬಲ ತಿಂಗಳುಗಳೆಂದು ಪರಿಗಣಿಸಲಾಗುತ್ತದೆ. ಮಳೆ ಸುರಿಯುವುದರಿಂದ ಸುಲಭವಾಗಿ ರೋಗಗಳನ್ನು ಉಂಟುಮಾಡುತ್ತದೆ. ಹಾಗಾಗಿ ಈ ತಿಂಗಳಲ್ಲಿ ಲೈಂಗಿಕತೆಯು ದೋಷಯುಕ್ತ ಸಮಸ್ಯೆಗಳು ಮತ್ತು ಇತರ ತೊಡಕುಗಳಿಗೆ ಕಾರಣವಾಗಬಹುದು ಎಂಬುದು ಹಳೆಯವರ ಲೆಕ್ಕಾಚಾರವಾಗಿತ್ತು!

4. ಸಾಂಸ್ಕೃತಿಕ ಮಹತ್ವ

ಆಷಾಢ ತಿಂಗಳು ತಮಿಳಿಗರು ಮತ್ತು ಮಲಯಾಳಿಗಳಲ್ಲಿ ಮಹತ್ವದ್ದಾಗಿದೆ. ಯಾಕೆಂದರೆ ಈ ತಿಂಗಳುಗಳನ್ನು ಅಶುಭವೆಂದು ಪರಿಗಣಿಸುವ ಅವರು ಈ ಸಮಯದಲ್ಲಿ ರಾಮಾಯಣವನ್ನು ಓದುತ್ತಾರೆ ಮತ್ತು ಧ್ಯಾನದಲ್ಲಿ ಹೆಚ್ಚು ತೊಡಗುತ್ತಾರೆ. ಅವರು ತಮ್ಮ ಆರೋಗ್ಯವನ್ನು ಬಲಪಡಿಸಲು ಮತ್ತು ಪ್ರತಿರಕ್ಷಣೆಗಾಗಿ ಔಷಧೀಯ ಆಹಾರ ಮತ್ತು ಪಾನೀಯಗಳನ್ನು ತೆಗೆದುಕೊಳ್ಳುತ್ತಾರೆ.


5. ಮೆಹೆಂದಿಗೆ ಪ್ರಾಮುಖ್ಯತೆ

ಭಾರತದ ಅನೇಕ ಸ್ಥಳಗಳಲ್ಲಿ ಜನರು ಆಷಾಢ ಮಾಸದಲ್ಲಿ ಕೈ ಮತ್ತು ಪಾದಗಳಿಗೆ ಮೆಹೆಂದಿಯನ್ನು ಹಚ್ಚುತಾರೆ. ಹವಾಮಾನ ಬದಲಾವಣೆಗಳ ಪರಿಣಾಮ ದೇಹದ ಮೇಲೆ ಆಗದೇ ಇರಲಿ ಎಂದು ಮೆಹೆಂದಿಯನ್ನು ಕೈಗಳಿಗೆ ಹಚ್ಚಿಕೊಳ್ಳಲಾಗುತ್ತದೆ ಎನ್ನಲಾಗುತ್ತದೆ. ಮೆಹೆಂದಿ ಎಲೆಗಳು ಈ ಸಮಯದಲ್ಲಿ ಬೆಳೆಯಲು ಪ್ರಾರಂಭಿಸುತ್ತವೆ. ಇದು ತೀವ್ರವಾದ ಹವಾಮಾನ ಬದಲಾವಣೆಯಿಂದ ಉಂಟಾಗುವ ಸೋಂಕುಗಳನ್ನು ತಡೆಗಟ್ಟುವ ಗುಣಗಳನ್ನು ಹೊಂದಿದೆ.

6. ವ್ರತ, ಪೂಜೆಗೆ ಆದ್ಯತೆ

ಆಷಾಢ ತಿಂಗಳು ಶುಭ ಕಾರ್ಯಕ್ರಮಗಳಿಗೆ ಅಶುಭವಾಗಿದ್ದರೂ ಈ ಸಂದರ್ಭದಲ್ಲಿ ವ್ರತ, ಪೂಜೆಗಳಿಗೆ ಈ ತಿಂಗಳು ಉತ್ತಮ ಎಂದೇ ಭಾವಿಸಲಾಗುತ್ತದೆ. ಹೊರಗೆ ಧಾರಾಕಾರವಾಗಿ ಮಳೆ ಸುರಿಯುವಾಗ ಯಾವುದೇ ಕೆಲಸ ಮಾಡುವುದು ಸಾಧ್ಯವಿಲ್ಲ. ಹೀಗಾಗಿ ಹೆಚ್ಚಿನವರು ಈ ಸಂದರ್ಭದಲ್ಲಿ ಪೂಜೆ, ವ್ರತಾಚರಣೆಯಲ್ಲಿ ತೊಡಗುತ್ತಾರೆ. ಕೆಲವು ದೇವಾಲಯಗಳಲ್ಲಿ ಈ ಸಂದರ್ಭದಲ್ಲಿ ವಿಶೇಷ ಪೂಜೆ, ಉತ್ಸವಗಳೂ ನಡೆಯುತ್ತವೆ.

7. ಬೇವಿಗೆ ಪ್ರಾಮುಖ್ಯತೆ

ದಕ್ಷಿಣ ಭಾರತದಾದ್ಯಂತ ಆಷಾಢ ಮಾಸದಲ್ಲಿ ಮನೆ ಮತ್ತು ಬೀದಿಗಳಲ್ಲಿ ಅನೇಕ ಬೇವಿನ ಎಲೆಗಳನ್ನು ತೂಗು ಹಾಕುತ್ತಾರೆ. ಕಾರಣ ಈ ಋತುವಿನಲ್ಲಿ ಸಾಮಾನ್ಯವಾಗಿ ರಾಜ್ಯದಾದ್ಯಂತ ಭಾರೀ ಗಾಳಿ ಇರುತ್ತದೆ. ಇದರೊಂದಿಗೆ ಮಳೆಯು ಬರುತ್ತದೆ. ಗಾಳಿ, ಮಳೆಯೂ ಅನೇಕ ಸೋಂಕುಗಳನ್ನು ಹಬ್ಬಿಸುವ ಸಾಧ್ಯತೆ ಇರುತ್ತದೆ. ಇದಕ್ಕಾಗಿ ಜನರು ಬೇವನ್ನು ರಕ್ಷಣೆಯಾಗಿ ಬಳಸುತ್ತಾರೆ. ಬೇವಿನ ಸೊಪ್ಪನ್ನು ಖಾದ್ಯಕ್ಕೆ ಸೇರಿಸುತ್ತಾರೆ. ಇದರಿಂದ ಅನೇಕ ರೋಗಗಳನ್ನು ದೂರವಿಡಬಹುದು ಎನ್ನಲಾಗುತ್ತದೆ.

8. ಆಷಾಢ ಕೊಡುಗೆ

ಸಾಮಾನ್ಯವಾಗಿ ಈ ತಿಂಗಳಲ್ಲಿ ವ್ಯಾಪಾರ ವಹಿವಾಟುಗಳು ಕಡಿಮೆಯಾಗುತ್ತವೆ. ಸಾಮಾನ್ಯವಾಗಿ ಭಾರತದ ದಕ್ಷಿಣ ಭಾಗಗಳಲ್ಲಿ ಹೊಸ ಉದ್ಯಮಗಳನ್ನು ಪ್ರಾರಂಭಿಸಲು, ಮನೆಗಳನ್ನು ಬದಲಾಯಿಸಲು ಅಶುಭ ಮಾಸವೆಂದೇ ಇದನ್ನು ಪರಿಗಣಿಸಲಾಗಿದೆ. ಹೀಗಾಗಿ ಹಲವು ವ್ಯಾಪಾರಿಗಳು ಈ ಸಂದರ್ಭದಲ್ಲಿ ವಿಶೇಷ ಕೊಡುಗೆಗಳನ್ನು ಘೋಷಿಸಲು ಪ್ರಾರಂಭಿಸುತ್ತಾರೆ.

ಇದನ್ನೂ ಓದಿ: Vastu Tips: ಈ ವಾಸ್ತು ನಿಯಮ ಪಾಲಿಸಿದರೆ ವ್ಯವಹಾರದಲ್ಲಿ ವೃದ್ಧಿ


9. ಆಟಿ ಕಷಾಯ ಸೇವನೆ

ಆಷಾಢ ಮಾಸದಲ್ಲಿ ಬರುವ ಅಮಾವಾಸ್ಯೆಯಂದು ಹಾಳೆ ಮರದ ತೊಗಟೆಯನ್ನು ತಂದು ಅದಕ್ಕೆ ಬೆಳ್ಳುಳ್ಳಿ, ಶುಂಠಿ, ಓಂ ಕಾಳು ಸೇರಿಸಿ ರಸ ತೆಗೆದು ಒಗ್ಗರಣೆಯನ್ನು ಹಾಕಿ ಕಷಾಯ ಮಾಡಿ ಸೇವಿಸಲಾಗುತ್ತದೆ. ಇದು ಮಳೆಗಾಲದಲ್ಲಿ ಉಂಟಾಗುವ ಅನೇಕ ರೀತಿಯ ಸೋಂಕಿನಿಂದ ನಮ್ಮನ್ನು ರಕ್ಷಿಸುತ್ತದೆ ಎಂಬ ನಂಬಿಕೆ ಜನರಲ್ಲಿದೆ.

Continue Reading
Advertisement
Doctor's Day
ದೇಶ46 seconds ago

Doctor’s Day: ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ವೃದ್ಧಿಗೆ ಕ್ರಮ; ಪ್ರದಾನಿ ಮೋದಿ ಭರವಸೆ

Munawar Faruqui shares first pic with new wife
ಬಾಲಿವುಡ್12 mins ago

Munawar Faruqui: ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ!

Lok sabha Election 2024 DV Sadananda Gowda
ಪ್ರಮುಖ ಸುದ್ದಿ15 mins ago

DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

Karave Protest
ಪ್ರಮುಖ ಸುದ್ದಿ29 mins ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

Actor Darshan grandmother came running distant town to see and not punish him
ಸ್ಯಾಂಡಲ್ ವುಡ್49 mins ago

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

ಚಿಕ್ಕಬಳ್ಳಾಪುರ50 mins ago

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Hurricane Beryl
ಪ್ರಮುಖ ಸುದ್ದಿ54 mins ago

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

NEET UG 2024 Re-Test Result
ದೇಶ1 hour ago

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

National Doctor’s Day
ಆರೋಗ್ಯ1 hour ago

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

hassan murder case
ಕ್ರೈಂ1 hour ago

Murder Case: ಎಸ್‌ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ19 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌