KPTCL Scam | ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಪ್ರಮುಖ ಆರೋಪಿ ಬಂಧನ - Vistara News

ಕ್ರೈಂ

KPTCL Scam | ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಪ್ರಮುಖ ಆರೋಪಿ ಬಂಧನ

ರಾಯಭಾಗ ತಾಲೂಕಿನ ಕೋಳಿಗುಡ್ಡ ಗ್ರಾಮದ ಆರೋಪಿ ಬಂಧನದೊಂದಿಗೆ ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಒಟ್ಟು ಬಂಧಿತರ ಸಂಖ್ಯೆ 35ಕ್ಕೆ ಏರಿದೆ.

VISTARANEWS.COM


on

KPTCL Scam
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ (KPTCL Scam) ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಪ್ರಮುಖ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ. ಜಿಲ್ಲೆಯ ಗೋಕಾಕ ನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ರಾಯಭಾಗ ತಾಲೂಕಿನ ಕೋಳಿಗುಡ್ಡ ಗ್ರಾಮದ ಸೋಮನಗೌಡ ಪಾಟೀಲ ಬಂಧಿತ ವ್ಯಕ್ತಿ. ಈತನ ಬಂಧನದೊಂದಿಗೆ ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ‌ಅಕ್ರಮದಲ್ಲಿ ಬಂಧಿತರ ಸಂಖ್ಯೆ 35ಕ್ಕೆ ಏರಿದೆ. ಗದಗಿನ ಪರೀಕ್ಷಾ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ, ಅಭ್ಯರ್ಥಿಗಳಿಗೆ ರವಾನಿಸಿದ ಆರೋಪದಲ್ಲಿ ಸೋಮಗೌಡ ಪಾಟೀಲನನ್ನು ಬಂಧಿಸಲಾಗಿದೆ.

ಗದಗ ಮುನಿಸಿಪಲ್ ಪಿಯು ಕಾಲೇಜಿನ ಉಪ ಪ್ರಾಚಾರ್ಯ ಮಾರುತಿ ಸೋನವಣೆ, ಪುತ್ರ ಸುಮಿತ್‌ಕುಮಾರ್‌‌ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಸೋಮನಗೌಡ, ಬಂಧಿತ ಸುಮಿತ್‌ ಕುಮಾರ್‌ ಜತೆಗೆ ಡೀಲ್ ಕುದರಿಸಿದ್ದ. ಸೋಮನಗೌಡ, ಅಭ್ಯರ್ಥಿಗಳಿಂದ 7.10 ಲಕ್ಷ ರೂಪಾಯಿ ಪಡೆದು ಅದರಲ್ಲಿ 4.50 ಲಕ್ಷ ರೂ. ಸುಮಿತ್‌ಕುಮಾರ್‌ಗೆ ನೀಡಿದ್ದ. ನಂತರ ಆ.7ರಂದು ಸೋಮನಗೌಡ ವಾಟ್ಸ್‌ ಆ್ಯಪ್‌ಗೆ ಸುಮಿತ್‌ಕುಮಾರ್ ಪ್ರಶ್ನೆ ಪತ್ರಿಕೆ ಕಳುಹಿಸಿದ್ದ. ಬಳಿಕ ಸೋಮನಗೌಡ ಪಾಟೀಲ ಆ ಪ್ರಶ್ನೆ ಪತ್ರಿಕೆಯನ್ನು ಉತ್ತರ ಹೇಳುವ ತಂಡಕ್ಕೆ ರವಾನಿಸಿದ್ದ. ಹೀಗಾಗಿ ಈತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ | Fraud case | ಓಎಲ್‌ಎಕ್ಸ್‌ನಲ್ಲಿ ಸೈಟ್, ಮನೆ ಮಾರಲು ಮುಂದಾಗಿದ್ದೀರಾ? ವಂಚಕರಿದ್ದಾರೆ ಹುಷಾರು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬೆಂಗಳೂರು ಗ್ರಾಮಾಂತರ

Murder Case: ಆನೇಕಲ್‌ನಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ

Murder Case : ಕುಡಿದು ಬಂದು ಗಲಾಟೆ ಮಾಡುತ್ತಿದ್ದ ತಮ್ಮನನ್ನು ಅಣ್ಣನೇ ದೊಣ್ಣೆಯಿಂದ ಹೊಡೆದು ಕೊಂದು ಹಾಕಿದ್ದಾನೆ. ಸರ್ಜಾಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Murder Case
Koo

ಆನೇಕಲ್: ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ (Murder Case) ನಡೆದಿದೆ. ದೊಣ್ಣೆಯಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರದ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಪಂಡಿತನ ಅಗ್ರಹಾರದಲ್ಲಿ ಘಟನೆ ನಡೆದಿದೆ. ಆನಂದ (27) ಕೊಲೆಯಾದವರು.

ಮಣಿಕಂಠ(32) ಕೊಲೆ ಮಾಡಿದ ಆರೋಪಿ ಆಗಿದ್ದಾನೆ. ತಮಿಳುನಾಡು ಮೂಲದ ಈ ಅಣ್ಣ-ತಮ್ಮಂದಿರು ಪಂಡಿತನ ಅಗ್ರಹಾರದಲ್ಲಿ ಗಾರೆ ಕೆಲಸಕ್ಕಾಗಿ ಬಂದಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿ ಆನಂದ್ ತಂದೆ-ತಾಯಿ ಜತೆಗೆ ವಾಸವಿದ್ದರೆ, ಇತ್ತ ಮಣಿಕಂಠ ಮಂಡ್ಯದಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ.

ನಿನ್ನೆ ತಂದೆ-ತಾಯಿಯನ್ನು ನೋಡಿಕೊಂಡು ಹೋಗಲು ಮಣಿಕಂಠ ಬಂದಿದ್ದ. ಆನಂದ ಕುಡಿದು ಬಂದು ನಿತ್ಯ ಗಲಾಟೆ ಮಾಡುತ್ತಿದ್ದ. ಸುಖಾ ಸುಮ್ಮನೆ ತಂದೆ, ತಾಯಿ, ಅಣ್ಣನ ಜತೆಗೆ ಕಿರಿಕ್ ತೆಗೆಯುತ್ತಿದ್ದ. ಕಳೆದ ರಾತ್ರಿ ಹನ್ನೊಂದು ಗಂಟೆ ಸುಮಾರಿಗೆ ಕುಡಿದು ಬಂದು ಆನಂದ ಗಲಾಟೆ ಮಾಡಿದ್ದ. ಗಲಾಟೆ ವಿಕೋಪಕ್ಕೆ ತಿರುಗಿ ದೊಣ್ಣೆಯಿಂದ ಮಣಿಕಂಠ ಆನಂದ್‌ಗೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಆನಂದ್‌ ಸ್ಥಳದಲ್ಲೆ ಮೃತಪಟ್ಟಿದ್ದಾನೆ.

Murder case
Murder case

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸರ್ಜಾಪುರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಆರೋಪಿ ಮಣಿಕಂಠನನ್ನು ಸರ್ಜಾಪುರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Continue Reading

ಗದಗ

Missing Case : ಬಸ್ ನಿಲ್ದಾಣದಲ್ಲಿ ಕಳೆದು ಹೋಗಿದ್ದ 5 ವರ್ಷದ ಮಗು: ಎರಡೇ ಗಂಟೆಯಲ್ಲಿ ತಾಯಿ ಮಡಿಲು ಸೇರಿಸಿದ ಪೊಲೀಸರು

Missing Case : ಬಸ್‌ ನಿಲ್ದಾಣದಲ್ಲಿ ತಾಯಿಯಿಂದ ದೂರಾಗಿದ್ದ ಮಗುವೊಂದು ಪೊಲೀಸರ ಸಹಾಯದಿಂದ ವಾಪಸ್‌ ತಾಯಿಯ ಮಡಿಲು ಸೇರಿದೆ.

VISTARANEWS.COM


on

By

missing case
Koo

ಗದಗ: ಇತ್ತೀಗಷ್ಟೇ ಉತ್ತರ ಪ್ರದೇಶದಲ್ಲಿ ಚಲಿಸುತ್ತಿದ್ದ ರೈಲಿನ ಎಮರ್ಜೆನ್ಸಿ ಕಿಟಕಿಯಿಂದ ಪುಟ್ಟ ಮಗುವೊಂದು ಹೊರ ಬಿದ್ದಿತ್ತು. ತಕ್ಷಣ ಚೈನ್ ಮೂಲಕ ರೈಲು ನಿಲ್ಲಿಸಿದ ಪುಟ್ಟ ಬಾಲಕಿಯ ತಂದೆ, ಸುಮಾರು 16 ಕಿಮೀ ಹಿಂದೆ ಓಡಿ, ತನ್ನ ಮಗಳು ಬಿದ್ದ ಜಾಗವನ್ನು ಪತ್ತೆ ಮಾಡಿದ್ದ. ಕಗ್ಗತ್ತಲಿನ ನಿರ್ಜನ ಪ್ರದೇಶದಲ್ಲಿ ತನ್ನ ಮಗುವಿನ ಆರ್ತನಾದ ಕೇಳಿ, ತನ್ನ ಕರುಳ ಬಳ್ಳಿಯನ್ನು ತಾಯಿ ಒಡಲಲ್ಲಿ ಸೇರಿಸಿದ್ದ. ಕರುಳಕುಡಿಯ ಘಟನೆ ಉತ್ತರ ಪ್ರದೆಶದಲ್ಲಿ ನಡೆದಿದೆ ಅಂದರೂ, ಇಡೀ ಭಾರತವೇ ಈ ತಂದೆ ಮಗಳ ಕಥೆಗೆ ಕಂಬನಿ ಮಿಡಿದಿತ್ತು. ಇದೀಗ ಆ ಘಟನೆ ಮಾಸುವ ಮುನ್ನವೇ, ಮುದ್ರಣ ಕಾಶಿ ಗದಗ ಜಿಲ್ಲೆಯಲ್ಲಿ ತಾಯಿಯಿಂದ ದೂರವಾಗಿದ್ದ ಐದು ವರ್ಷದ ಪುಟ್ಟ ಕಂದಮ್ಮ (missing case) ಮತ್ತೆ ತಾಯಿಯ ಮಡಿಲು ಸೇರಿದ್ದಾಳೆ.

ಹೌದು, ಚಿತ್ರದುರ್ಗ ಮೂಲದ ತಾಯಿ ಶಶಿಕಲಾ,(ಊರು ಹಾಗೂ ತಾಯಿಯ ಹೆಸರು ಬದಲಾಯಿಸಲಾಗಿದೆ) ತನ್ನ ನಾಲ್ಕು ಹೆಣ್ಣು ಮಕ್ಕಳು ಹಾಗೂ ಓರ್ವ ಸಂಬಂಧಿ ಜತೆಗೂಡಿ, ಕಳೆದ ಎರಡು ದಿನಗಳ ಹಿಂದೆ, ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಆಗಮಿಸಿದ್ದರು. ದೇವರ ದರ್ಶನ ಮುಗಿಸಿ ಮರಳಿ ಮಧ್ಯಾಹ್ನದ ವೇಳೆಗೆ ನರಗುಂದ ಪಟ್ಟಣದ ಮೂಲಕ ಹೊಸಪೇಟೆಯ ಹುಲಿಗೆಮ್ಮ ದೇವಿ ದರ್ಶನಕ್ಕೆ ತೆರಳುವವರಿದ್ದರು. ನರಗುಂದ ಪಟ್ಟಣಕ್ಕೆ ಆಗಮಿಸಿದ್ದ, ತಾಯಿ ಶಶಿಕಲಾ ಹಾಗೂ ಮಕ್ಕಳು, ಗದಗ ಬಸ್ ಹತ್ತಿದ್ದರು. ಹುಣ್ಣಿಮೆ ಹತ್ತಿರವಿದ್ದ ಕಾರಣ, ಬಹುತೇಕ ಧಾರ್ಮಿಕ ಕ್ಷೇತ್ರಗಳಿಗೆ ತೆರಳುವ ಬಸ್ಸುಗಳು ಸಾಕಷ್ಟು ಗಿಜಿಗುಡುತ್ತಿದ್ದವು.

ಇದೇ ವೇಳೆ, ತಾಯಿ ಶಶಿಕಲಾ ಹಾಗೂ ಮಕ್ಕಳು ಗದಗ ನಗರಕ್ಕೆ ತೆರಳುವ ಬಸ್ಸನ್ನ ಹತ್ತಿದ್ದಾರೆ. ಬಸ್ಸಿನೊಳಗೆ ಸಾಕಷ್ಟು ಪ್ರಯಾಣಿಕರಿದ್ದ ಹಿನ್ನೆಲೆ, ನಾಲ್ಕು ಹೆಣ್ಣುಮಕ್ಕಳಲ್ಲಿ ಒಂದಿಬ್ಬರು ಮುಂದಿನ ಸೀಟ್‌ನಲ್ಲಿ ತಾಯಿ ಶಶಿಕಲಾ ಕಣ್ಣಿಗೆ ಕಂಡಿದ್ದಾರೆ. ಹೀಗಾಗಿ ತನ್ನ ನಾಲ್ಕೂ ಮಕ್ಕಳು ನನ್ನ ಜತೆಗೆ ಬಸ್ಸಿನಲ್ಲಿದ್ದಾರೆ ಎಂದು ಭಾವಿಸಿದ ತಾಯಿ ಶಶಿಕಲಾ, ನರಗುಂದದಿಂದ ಗದಗ ಬಸ್ ನಿಲ್ದಾಣದವರೆಗೂ ಪ್ರಯಾಣ ಮುಂದುವರೆಸಿದ್ದಳು. ಇನ್ನೇನು ಗದಗ ಬಸ್ ನಿಲ್ದಾಣದಲ್ಲಿ ತನ್ನ ಮಕ್ಕಳನ್ನ ಬಸ್ಸಿನಿಂದ ಇಳಿಸಿಕೊಳ್ಳುವಾಗ, ನಾಲ್ಕು ಮಕ್ಕಳಲ್ಲಿ ಮೂವರಷ್ಟೇ ಬಸ್ಸಿನಲ್ಲಿ ತನ್ನ ಜತೆಗೆ ಬಂದಿರುವುದು ಎಂದು ಗೊತ್ತಾಗಿದೆ. ತಕ್ಷಣ ಅಳುತ್ತಾ, ಗೋಗರೆಯುತ್ತಾ ಗದಗ ನಗರದ ಶಹರ ಪೊಲೀಸ್ ಠಾಣೆಗೆ ಆಗಮಿಸಿ, ತನ್ನ ಮೂವರು ಮಕ್ಕಳಲ್ಲಿ, ಕೊನೆಯ ಐದು ವರ್ಷದ ಮಗಳು ಸ್ನೇಹ (ಮಗುವಿನ ಹೆಸರು ಬದಲಾಯಿಸಲಾಗಿದೆ) ಕಾಣ್ತಿಲ್ಲ ಎಂದು ಪೊಲೀಸರೆದುರು ತನ್ನ ಕರುಳಬಳ್ಳಿಯ ಕಥೆ ವಿವರಿಸಿದ್ದಳು.

Missing case
Missing case

ತನ್ನ ನಾಲ್ಕು ಮಕ್ಕಳಲ್ಲಿ ಓರ್ವ ಮಗಳು ಸ್ನೇಹಾ ನರಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ಕಳೆದುಹೋಗಿದ್ದಳು. ಹೌದು, ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ, ಬಸ್ ಅನ್ನು ಹತ್ತುವಾಗ, ಐದು ವರ್ಷದ ಪುಟ್ಟ ಬಾಲಕಿ ಸ್ನೇಹ ಗದ್ದಲದ ನಡುವೆ ಬಸ್ ಹತ್ತಲು ಆಗದೇ, ನಿಲ್ದಾಣದಲ್ಲಿಯೇ ಉಳಿದುಕೊಂಡುಬಿಟ್ಟಿದ್ದಳು. ತನ್ನ ನಾಲ್ಕೂ ಮಕ್ಕಳು ತನ್ನ ಜತೆಯೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದಾರೆಂದು ತಿಳಿದಿದ್ದ ತಾಯಿ ಶಶಿಕಲಾಗೆ, ಕೊನೆಯ ಪುಟ್ಟ ಮಗಳು ಸ್ನೇಹ, ತನ್ನ ಜೊತೆಗೆ ಪ್ರಯಾಣಿಸುತ್ತಿಲ್ಲ ಅನ್ನೋದು ಗೊತ್ತಾಗಲೇ ಇಲ್ಲ. ಹೀಗೆ, ತನ್ನ ತಾಯಿ ಹಾಗೂ ತನ್ನ ಅಕ್ಕಂದಿರನ್ನು ಕಳೆದುಕೊಂಡಿದ್ದ, ಪುಟ್ಟ ಬಾಲಕಿ ಸ್ನೇಹ, ಸುಮಾರು ಎರಡು ಗಂಟೆಗಳ ಕಾಲ ನರಗುಂದದ ಬಸ್ ನಿಲ್ದಾಣದಲ್ಲಿ ಅಳುತ್ತಾ ಕುಳಿತಿದ್ದಳು.

ಇದನ್ನು ಗಮನಿಸಿದ ಸ್ಥಳೀಯ ಕಾಲೇಜು ವಿದ್ಯಾರ್ಥಿಯೋರ್ವ, ಪುಟ್ಟ ಮಗುವಿನ ಆಕ್ರಂದನ ನೋಡಲಾರದೇ, ಸ್ಥಳೀಯ ಪೊಲೀಸ್ ಠಾಣೆಗೆ ಬಾಲಕಿಯನ್ನು ಕರೆತಂದು ಪೊಲೀಸರಿಗೆ ಒಪ್ಪಿಸಿದ್ದ. ತಡಮಾಡದ ಪೊಲೀಸ್ ಪಡೆ, ತಮ್ಮ ವಾಟ್ಸಪ್ ಗ್ರೂಪ್‌ಗಳಲ್ಲಿ ಮಗು ಮಿಸ್ಸಿಂಗ್ ಆಗಿರುವ ಮಾಹಿತಿಯನ್ನ, ಜಿಲ್ಲೆಯ ಎಲ್ಲ ಸ್ಟೇಷನ್‌ಗಳಿಗೂ ರವಾನಿಸಿತ್ತು. ಇದೇ ಸಮಯಕ್ಕೆ ಗದಗ ನಗರದ ಶಹರ ಪೊಲೀಸ್ ಠಾಣೆಗೂ, ತಾಯಿ, ಮಗು ಕಳೆದುಕೊಂಡ ಬಗ್ಗೆ, ಇತ್ತ, ಮಗು ತನ್ನವರನ್ನ ಕಳೆದುಕೊಂಡ ಬಗ್ಗೆ ಎರೆಡೂ ಕಡೆಯಿಂದಲೂ ಕರುಳ ಬಳ್ಳಿಯ ದೂರುಗಳು ಬಂದು ಮುಟ್ಟಿದ್ದವು.

ವಾಟ್ಸಪ್ ಮೂಲಕ ಬಂದ ಮಗುವಿನ ಫೋಟೋವನ್ನ ಪೊಲೀಸರು, ತಾಯಿ ಶಶಿಕಲಾಗೆ ತೋರಿಸಿ, ಇವಳೇನಾ ನೋಡು ನಿನ್ನ ಮಗಳು ಎಂದಾಗ, ತಾಯಿಗೆ ಮತ್ತೇ ಪುನರ್ಜನ್ಮ ಬಂದಂತಾಗಿತ್ತು. ಇತ್ತ ನರಗುಂದ ಪೊಲೀಸ್ ಠಾಣೆಯಲ್ಲಿದ್ದ ಪುಟ್ಟ ಮಗು ಸ್ನೇಹಳಿಗೂ ನಿನ್ನ ತಾಯಿ, ನಿನ್ನ ಅಕ್ಕಂದಿರು ನಿನ್ನ ಕರೆದುಕೊಂಡು ಹೋಗೋಕೆ ಇಲ್ಲಿಗೆ ಬರುತ್ತಿದ್ದಾರೆ ಅಂದಾಗ, ಅಕ್ಷರಶಃ ಮಗು ಕಣ್ಣೀರಿನಲ್ಲೇ, ಸಂಭ್ರಮಿಸಿ, ಮುಗಿಲೆತ್ತರದ ತನ್ನ ದುಃಖಕ್ಕೆ ಧಣಿವರಿಸಿದ್ದಳು. ಇತ್ತ 60 ಕಿಲೋ. ಮೀಟರ್ ದೂರದಷ್ಟು ತನ್ನ ಮಗುವನ್ನ ಬಿಟ್ಟು ಹೋಗಿದ್ದ, ತಾಯಿ ಶಶಿಕಲಾಗೆ, ಮತ್ತೇ ಮರಳಿ ತನ್ನ ಮಗಳ ಅಪ್ಪುಗೆ ಪಡೆಯೋಕೆ, ನರಗುಂದ ಪೊಲೀಸ್ ಠಾಣೆ ಆರು ಸಾವಿರ ಕೀಲೋಮೀಟರ್ ನಷ್ಟು ದೂರವಾದಂತೆ ಭಾಸವಾಗಿತ್ತು.

ಅದೇನೆ‌ ಇರಲಿ. ಕೊನೆಗೂ ಪೊಲೀಸರ ಸುರಕ್ಷತೆಯಲ್ಲಿದ್ದ ಮಗು ಸ್ನೇಹಾಳನ್ನು ತಾಯಿ ಶಶಿಕಲಾಗೆ ಸುರಕ್ಷಿತವಾಗಿ ಹಸ್ತಾಂತರಿಸಲಾಗಿದೆ. ಅದೇನೆ ಇರಲಿ, ಪಾಲಕರೇ ನಿಮ್ಮ ಮಕ್ಕಳ ಬಗ್ಗೆ ಕಾಳಜಿ ಇರಲಿ ಎಂದು ಹೇಳುತ್ತಾ, ಬಾಲಕಿಯನ್ನ ಠಾಣೆಗೆ ಒಪ್ಪಿಸಿದ ಕಾಲೇಜು ವಿದ್ಯಾರ್ಥಿ ಹಾಗೂ ಇದೆಲ್ಲದರ ಜವಾಬ್ದಾರಿ ಹೊತ್ತಿದ್ದ ಖಾಕಿ ಪಡೆಗೆ ತಾಯಿ ಶಶಿಕಲಾ, ಪುಟ್ಟ ಮಗು ಸ್ನೇಹಾ ಮತ್ತು ಆಕೆಯ ಅಕ್ಕಂದಿರು ಕೃತಜ್ಞನತೆ ಸಲ್ಲಿಸಿದರು.

Continue Reading

ಚಿತ್ರದುರ್ಗ

Self Harming: ಪ್ರೀತ್ಸೆ ಅಂತ ಪ್ರಾಣ ತಿಂದ ಯುವಕ; ಕಾಲೇಜು ಕಟ್ಟಡದ ಮೇಲಿಂದು ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ

Self Harming: ಯುವಕನ ಕಾಟಕ್ಕೆ ಬೇಸತ್ತ ಯುವತಿಯೊಬ್ಬಳು ಕಾಲೇಜು ಕಟ್ಟದ ಮೇಲಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

VISTARANEWS.COM


on

By

Self Harming
Koo

ಚಿತ್ರದುರ್ಗ/ ಬೆಂಗಳೂರು: ಕಾಲೇಜು ಕಟ್ಟಡದ ಮೇಲಿಂದ ಜಿಗಿದು ವಿದ್ಯಾರ್ಥಿನಿ (Self Harming) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಟ್ಟಡ ಮೇಲಿಂದ ಬಿದ್ದು ತೀವ್ರ ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತಪಟ್ಟಿದ್ದಾಳೆ. ಚಿತ್ರದುರ್ಗ ನಗರದ ಚಿತ್ರಾ ಡಾನ್ ಬೋಸ್ಕೋ ಕಾಲೇಜಲ್ಲಿ ಪ್ರಥಮ ಬಿಎಸ್ಸಿ ಓದುತ್ತಿದ್ದ ಪ್ರೇಮಾ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟವಳು.

ಚಿತ್ರದುರ್ಗದ ಮೆದೆಹಳ್ಳಿ ನಿವಾಸಿ ಆಗಿದ್ದ ಪ್ರೇಮಾ, ಶುಕ್ರವಾರ ಬೆಳಗ್ಗೆ ಕಾಲೇಜಿಗೆ ಬಂದು ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಸ್ಥಳಕ್ಕೆ ಬಡಾವಣೆ ಪೊಲೀಸ್ ಠಾಣೆ ಪಿಎಸ್‌ಐ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಪ್ರೇಮಾಳಿಗೆ ಯುವಕನೊಬ್ಬ ಕಿರುಕುಳ ನೀಡುತ್ತಿದ್ದ ಎನನ್ಲಾಗಿದೆ. ತರುಣ್‌ ಎಂಬಾತ ಪ್ರೀತಿ‌ ಮಾಡುವಂತೆ ಪ್ರೇಮಾಳಿಗೆ ಪೀಡುಸುತ್ತಿದ್ದ ಎನ್ನಲಾಗಿದೆ. ವಾಟ್ಸ್‌ ಆ್ಯಪ್‌ನಲ್ಲಿ ನಿತ್ಯವೂ ಚಾಟಿಂಗ್ ಮಾಡಿ ಕಿರಿಕಿರಿ ಮಾಡುತ್ತಿದ್ದ. ಆತ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ತರುಣ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದರು.

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ ಕ್ರಾಸ್ ಬಳಿ ನಡೆದಿದೆ. ಇಬ್ರಾಜ್ ಗುರುಂಗ(49) ಆತ್ಮಹತ್ಯೆಗೆ ಶರಣಾದವರು. ಅಸ್ಸಾಂ ಮೂಲದ ಇಬ್ರಾಜ್ ಗುರುಂಗ ಪ್ಯೊಚರ್ ಕಿಚನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಂಡ್ಲವಾಡಿ ಬಳಿ ಬಾಡಿಗೆ ಮನೆಯಲ್ಲಿ ಮೂವರು ಸ್ನೇಹಿತರೊಂದಿಗೆ ವಾಸವಿದ್ದರು. ಕಳೆದ ರಾತ್ರಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸ್ನೇಹಿತರು ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಆನೇಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರೆ. ಮೃತದೇಹವನ್ನು ಆನೇಕಲ್ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿ ಸಾವು

ಚಲಿಸುತ್ತಿದ್ದ ರೈಲಿನಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ – ರಾಜಾನುಕುಂಟೆ ರೈಲ್ವೆ ಮಾರ್ಗದ ಮಧ್ಯೆ ಘಟನೆ ನಡೆದಿದೆ. 55 ವರ್ಷದ ಅಪರಿಚಿತ ವ್ಯಕ್ತಿ ಮೃತಪಟ್ಟಿದ್ದಾರೆ. ಆತ್ಮಹತ್ಯೆಯೋ ಅಥವಾ ಆಕಸ್ಮಿಕ ಸಾವೋ ಎನ್ನುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಲಿಸುತ್ತಿದ್ದ ರೈಲಿನಿಂದ ಬಿದ್ದು ಸಾವನ್ನಪ್ಪಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಬೆಂಗಳೂರು

Fraud Case : ಲೋಕಸಭೆ ಚುನಾವಣೆಗೆ ಟಿಕೆಟ್‌ ಕೊಡಿಸುವುದಾಗಿ ಕೋಟಿ ರೂ. ಲೂಟಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸಹೋದರನ ವಿರುದ್ಧ ಎಫ್‌ಐಆರ್‌ ದಾಖಲು

Fraud Case : ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಮಾಜಿ ಶಾಸಕನಿಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಸಹೋದರ ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಕೊಟ್ಟ ಹಣ ಕೇಳಿದರೆ ಹಲ್ಲೆ ಮಾಡಿ, ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ.

VISTARANEWS.COM


on

By

Fraud case Union Minister Pralhad Joshis brother duped of ticket for Lok Sabha polls
ಮಾಜಿ ಶಾಸಕ ದೇವಾನಂದ್ ಚೌಹಾಣ್ ಹಾಗೂ ಗೋಪಾಲ್‌ ಜೋಶಿ
Koo

ಬೆಂಗಳೂರು: ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi) ಸಹೋದರನ ವಿರುದ್ಧ ವಂಚನೆ ಆರೋಪ ಕೇಳಿ ಬಂದಿದೆ. ಪ್ರಲ್ಹಾದ ಜೋಶಿ ಸಹೋದರ ಗೋಪಾಲ್‌ ಜೋಶಿ ಎಂಬುವವರು ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಬರೋಬ್ಬರಿ 2 ಕೋಟಿ ರೂ. ವಂಚಿಸಿರುವುದಾಗಿ (Fraud Case) ಎಫ್‌ಐಆರ್‌ ದಾಖಲಾಗಿದೆ. ಗೋಪಾಲ್ ಜೋಶಿ ಸೇರಿದಂತೆ ಸಹೋದರಿ ವಿಜಯಲಕ್ಷ್ಮಿ ಜೋಶಿ, ಪುತ್ರ ಅಜಯ್ ಜೋಶಿ ವಿರುದ್ಧವೂ ಕೇಸ್ ದಾಖಲಾಗಿದೆ.

ಮಾಜಿ ಶಾಸಕ ದೇವಾನಂದ್ ಚೌಹಾಣ್ ಅವರ ಪತ್ನಿ ಸುನೀತಾ ಚೌಹಾಣ್ ಎಂಬುವರಿಂದ ಬಸವೇಶ್ವರ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. 2018ರಲ್ಲಿ ನಾಗಠಾಣಾ ಕ್ಷೇತ್ರದಿಂದ ಜೆಡಿಎಸ್‌ (JDS)ದೇವಾನಂದ್ ಚೌಹಾಣ್ ಶಾಸಕರಾಗಿದ್ದರು. 2023ರ ಚುನಾವಣೆಯಲ್ಲಿ ಅದೇ ಕ್ಷೇತ್ರದಿಂದ ಸ್ಪರ್ಧಿಸಿ ದೇವಾನಂದ್ ಚೌಹಾಣ್ ಸೋತಿದ್ದರು. ಬಳಿಕ ಪರಿಚಯಸ್ಥ ಶೇಖರ್ ನಾಯಕ್ ಮೂಲಕ ಗೋಪಾಲ್ ಜೋಶಿ ಪರಿಚಯವಾಗಿದ್ದರು. ಮಾರ್ಚ್ ಮೊದಲ ವಾರ ಹುಬ್ಬಳ್ಳಿಯಲ್ಲಿ ಗೋಪಾಲ್ ಜೋಶಿ ಚೌಹಾಣ್ ದಂಪತಿಯನ್ನು ಭೇಟಿ ಮಾಡಿದ್ದರು. ಈ ವೇಳೆ 2024ರ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿದ್ದರು. ನನ್ನ ತಮ್ಮನಿಗೆ ಕೇಂದ್ರ ಸರ್ಕಾರದಲ್ಲಿ ವರ್ಚಸ್ಸು ಚೆನ್ನಾಗಿದೆ. ಪ್ರಹ್ಲಾದ್ ಜೋಶಿ ಹೇಳಿದಂತೆ ಮೋದಿ, ಅಮಿತ್ ಶಾ ಕೇಳುತ್ತಾರೆ. ಹೀಗಾಗಿ ಬಿಜಾಪುರ ಕ್ಷೇತ್ರದಿಂದ ನಿಮಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿದ್ದರು.

ಗೋಪಾಲ್ ಜೋಶಿ ಟಿಕೆಟ್‌ಗೆ ಬರೋಬ್ಬರಿ 5 ಕೋಟಿ ರೂ. ಬೇಡಿಕೆ ಇಟ್ಟಿದ್ದರು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಚೇರಿಯಲ್ಲಿಯೇ ಡೀಲ್ ನಡೆದಿತ್ತು. ಆದರೆ 5 ಕೋಟಿ ರೂ.‌ಸಾಧ್ಯವಿಲ್ಲ ಎಂದು ಚೌಹಣ್ ದಂಪತಿ ಹೊರಟು ಹೋಗಿದ್ದರು ಎನ್ನಲಾಗಿದೆ. ಬಳಿಕ ಗೋಪಾಲ್ ಜೋಶಿ ಮತ್ತು ಶೇಖರ್ ಇಬ್ಬರು ಚೌಹಣ್ ದಂಪತಿ ಮನವೊಲಿಸಿದ್ದರು. ಸದ್ಯಕ್ಕೆ 25 ಲಕ್ಷ ರೂ. ಕೊಟ್ಟು ಉಳಿದ ಹಣಕ್ಕೆ ಚೆಕ್ ಕೊಡಿ ಎಂದಿದ್ದರಂತೆ. ಹೀಗಾಗಿ ಬೆಂಗಳೂರಿನ ಬಸವೇಶ್ವರ ನಗರದಲ್ಲಿರುವ ಗೋಪಾಲ್ ಜೋಶಿ ಸಹೋದರಿ ವಿಜಯಲಕ್ಷ್ಮಿ ಮನೆಗೆ 25 ಲಕ್ಷ ರೂ. ಹಣವನ್ನು ತಂದು ಸುನೀತಾ ಚೌಹಣ್ ನೀಡಿದ್ದರು. ಆದರೆ ದೇವನಾಂದ್‌ಗೆ ಗೋಪಾಲ್ ಜೋಶಿ ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸಲಿಲ್ಲ.

ಸುನೀತಾ ಚೌಹಾಣ್ ತಮ್ಮ 25 ಲಕ್ಷ ರೂ.‌ ಹಣ ನೀಡುವಂತೆ ಕೇಳಿದ್ದಾರೆ. ಹಣ ಕೇಳಿದರೆ 200 ಕೋಟಿ ರೂ. ಪ್ರಾಜೆಕ್ಟ್ ಹಣ ಬರಬೇಕು ಕೊಡುವುದಾಗಿ ಸಬೂಬು ನೀಡಿದ್ದಾರೆ. ಅಷ್ಟಲ್ಲದೇ ಗೋಪಾಲ್ ಜೋಶಿ, ಸುನೀತಾ ಬಳಿ ಮತ್ತೆ 1.75 ಕೋಟಿ ರೂ. ಹಣ ಕೇಳಿದ್ದರು. ಮುಂದಿನ ಚುನಾವಣೆಗೆ ಸಹಾಯ ಮಾಡುವುದಾಗಿ ಹಣ ಕೇಳಿದ್ದರು. ಈ ಮಾತನ್ನು ನಂಬಿ ಮತ್ತೆ 1.75 ಕೋಟಿ ಹಣವನ್ನು ವಿಜಯಲಕ್ಷ್ಮಿಗೆ ಸುನೀತಾ ಚೌಹಣ್ ನೀಡಿದ್ದರು. ಆದರೆ ಹಣ ಕೇಳಿದಾಗ ಸಬೂಬು ಗೋಪಾಲ್, ವಿಜಯಲಕ್ಷ್ಮಿ ಹೇಳುತ್ತಿದ್ದರು.

ಈ ವೇಳೆ ಗೋಪಾಲ್ ಜೋಶಿ ಪುತ್ರ ಅಜಯ್ ಜೋಶಿ ಹಣ ನಾನು ವಾಪಸ್ ಕೊಡುವುದಾಗಿ ಹೇಳಿದ್ದರು. ಆದರೆ ಯಾರು ಕೂಡ ಸುನೀತಾಗೆ ಹಣ ವಾಪಸ್ ನೀಡಿರಲಿಲ್ಲ. ಕಳೆದ ಆ. 1ರಂದು ವಿಜಯಲಕ್ಷ್ಮಿ ಮನೆ ಬಳಿ ಬಂದಿದ್ದ ಸುನೀತಾ, ಹಣ ಕೇಳಿದಾಗ, ಹಲ್ಲೆ ಮಾಡಿ, ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ಪೊಲೀಸರ ಮೊರೆ ಹೋಗಿರುವ ಸುನೀತಾ ಚೌಹಣ್ ಬಸವೇಶ್ವರ ನಗರ ಠಾಣೆಯಲ್ಲಿ ವಂಚನೆ, ಜಾತಿ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ.

Continue Reading
Advertisement
Dina Bhavishya
ಭವಿಷ್ಯ21 ಗಂಟೆಗಳು ago

Dina Bhavishya : ಈ ದಿನ ಹೂಡಿಕೆ ವ್ಯವಹಾರದಿಂದ ದೂರವಿರಿ

Dina bhavishya
ಭವಿಷ್ಯ2 ದಿನಗಳು ago

Dina Bhavishya: ಈ ರಾಶಿಯವರಿಗೆ ಉತ್ಸಾಹದ ವಾತಾವರಣ; ಆಪ್ತರೊಂದಿಗೆ ಪ್ರಯಾಣ ಸಾಧ್ಯತೆ

namma Metro
ಬೆಂಗಳೂರು3 ದಿನಗಳು ago

Namma Metro : ನಮ್ಮ ಮೆಟ್ರೋ ಪ್ರಯಾಣಿಕರಿಗಾಗಿ ಝೀರೋ-ಕೆವೈಸಿ ನ್ಯಾಷನಲ್ ಕಾಮನ್ ಮೊಬಿಲಿಟಿ ಕಾರ್ಡ್ ಲಭ್ಯ

Murder Case
ಬೆಂಗಳೂರು ಗ್ರಾಮಾಂತರ3 ದಿನಗಳು ago

Murder Case: ಆನೇಕಲ್‌ನಲ್ಲಿ ಅಣ್ಣನಿಂದಲೇ ತಮ್ಮನ ಬರ್ಬರ ಹತ್ಯೆ

Dina bhavishya
ಭವಿಷ್ಯ3 ದಿನಗಳು ago

Dina Bhavishya: ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ; ಮಾತಿನಲ್ಲಿ ಹಿಡಿತವಿರಲಿ

Breast Cancer Awareness Month celebrated through bikethon
ಬೆಂಗಳೂರು3 ದಿನಗಳು ago

Breast cancer: ಬೈಕಥಾನ್‌ ಮೂಲಕ ಗಲ್ಲಿ ಗಲ್ಲಿಯಲ್ಲೂ ಸ್ತನ ಕ್ಯಾನ್ಸರ್‌ ಜಾಗೃತಿ ಮೂಡಿಸಿದ ಬೈಕರ್ಸ್‌ಗಳು

Karnataka Rain
ಮಳೆ4 ದಿನಗಳು ago

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain
ಮಳೆ4 ದಿನಗಳು ago

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Dina Bhavishya
ಭವಿಷ್ಯ4 ದಿನಗಳು ago

Dina Bhavishya : ಹೂಡಿಕೆ ವ್ಯವಹಾರಗಳನ್ನು ಈ ದಿನ ಮಾಡುವುದು ಬೇಡವೇ ಬೇಡ

Karnataka Rain
ಮಳೆ5 ದಿನಗಳು ago

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

galipata neetu
ಕಿರುತೆರೆ11 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ1 ವರ್ಷ ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ1 ವರ್ಷ ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ11 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ3 ವಾರಗಳು ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 ತಿಂಗಳುಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 ತಿಂಗಳುಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 ತಿಂಗಳುಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ3 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ3 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು3 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ3 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ3 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌