JDS Pancharatna Yatre | ಇಂದಿನಿಂದ ಮಾಗಡಿಯಿಂದ ಎಚ್‌ಡಿಕೆ ಯಾತ್ರೆ ಪುನರಾರಂಭ - Vistara News

ಕರ್ನಾಟಕ

JDS Pancharatna Yatre | ಇಂದಿನಿಂದ ಮಾಗಡಿಯಿಂದ ಎಚ್‌ಡಿಕೆ ಯಾತ್ರೆ ಪುನರಾರಂಭ

ಮಳೆಯಿಂದ ಸ್ಥಗತವಾಗಿದ್ದ ಜೆಡಿಎಸ್‌ನ ಪಂಚರತ್ನ ರಥಯಾತ್ರೆ ಇಂದಿನಿಂದ ಮಾಗಡಿ ವಿಧಾನಸಭೆ ಕ್ಷೇತ್ರದಿಂದ ಮತ್ತೆ ಆರಂಭವಾಗಲಿದೆ.

VISTARANEWS.COM


on

jds-panchrathna-rathyathre
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮಾಗಡಿ: ಮಳೆಯಿಂದ ಸ್ಥಗತವಾಗಿದ್ದ ಜೆಡಿಎಸ್‌ನ ಪಂಚರತ್ನ ರಥಯಾತ್ರೆ ಇಂದಿನಿಂದ ಮಾಗಡಿ ವಿಧಾನಸಭೆ ಕ್ಷೇತ್ರದಿಂದ ಮತ್ತೆ ಆರಂಭವಾಗಲಿದೆ.

ಮಳೆಯಿಂದ ಸ್ಥಗಿತವಾಗಿದ್ದ ಯಾತ್ರೆ, ಇಂದು ಮರು ಆರಂಭಗೊಂಡು ರಾಮನಗರ ಜಿಲ್ಲೆಯಲ್ಲಿ 4 ದಿನ ನಡೆಯಲಿದೆ. ಇಂದು ಸಂಜೆ 5 ಗಂಟೆಗೆ ಮಾಗಡಿ ಶ್ರೀ ರಂಗನಾಥ ಸ್ವಾಮಿ ದೇಗುಲದಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಮಾಗಡಿಯ ಶ್ರೀ ಸೋಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಮಾಗಡಿ ಜೆಡಿಎಸ್ ಭವನದಲ್ಲಿ ಪಂಚರತ್ನ ಕಾರ್ಯಕ್ರಮ, ಮಾಗಡಿಯ ಕೋಟೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿವೆ.

ಇದನ್ನೂ ಓದಿ | JDS Pancharatna | ನಿರಂತರ ಮಳೆಯಿಂದ ಜೆಡಿಎಸ್‌ ಪಂಚರತ್ನ ರಥಯಾತ್ರೆ ಮುಂದೂಡಿಕೆ; ಡಿ.15ರಿಂದ ಮತ್ತೆ ಆರಂಭ

ಡಿಸೆಂಬರ್ 15ರಂದು ಮಾಗಡಿಯಲ್ಲಿ ರಥಯಾತ್ರೆ ಮರು ಆರಂಭವಾಗಲಿದ್ದು, ಡಿ. 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ. ಡಿ. 27ರಂದು ಮತ್ತೆ ತುಮಕೂರು ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದೆ. ಡಿ. 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ.

ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದ್ದು, 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಪಂಚರತ್ನ ಕಾರ್ಯಕ್ರಮಕ್ಕೂ ಮುನ್ನ ಎಚ್‌ಡಿಕೆ ಅವರು ಬೆಂಗಳೂರಿನ ಜೆಪಿ ಭವನದಲ್ಲಿ ಸಭೆ ಕರೆದಿದ್ದು, ಜೆಡಿಎಸ್ ಪಕ್ಷದ ಎಲ್ಲಾ ಶಾಸಕರು ಹಾಗೂ ಮುಂದಿನ ಸಂಭವನೀಯ ಅಭ್ಯರ್ಥಿಗಳ ಜೊತೆ ಚರ್ಚಿಸಲಿದ್ದಾರೆ. ಪಂಚರತ್ನ ಯಾತ್ರೆಗೆ ಆಯಾ ಶಾಸಕರ ಕ್ಷೇತ್ರಗಳಲ್ಲಿ ಆಗಿರುವ ಸಿದ್ಧತೆ, ಮುಂದಿನ ಚುನಾವಣಾ ಸಿದ್ಧತೆ, ಸಂಭವನೀಯ ಅಭ್ಯರ್ಥಿಗಳ ಕಾರ್ಯವೈಖರಿ, ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ | JDS Pancharatna Yatre | ಪಂಚರತ್ನ ರಥಯಾತ್ರೆಯಲ್ಲಿ ಮಗುವಿಗೆ ನಾಮಕರಣ ಮಾಡಿದ ಮಾಜಿ ಸಿಎಂ ಕುಮಾರಸ್ವಾಮಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Rain :‌ ಮುಂದುವರಿದ ಮಳೆ ಅಬ್ಬರ; ಸಿಡಿಲು ಬಡಿದು ಹೊತ್ತಿ ಉರಿದ ಮನೆ, ಸೇತುವೆ ಮುಳುಗಡೆ

Karnataka Rain : ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದ್ದು, ಕಲಬುರಗಿಯಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದಿದೆ. ಕೊಡಗಿನಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಬೆಂಗಳೂರಲ್ಲಿ ಅಂಡರ್‌ಪಾಸ್‌ ಜಲಾವೃತಗೊಂಡಿತ್ತು.

VISTARANEWS.COM


on

By

karnataka Weather Forecast
Koo

ಕಲಬುರಗಿ/ಕೊಪ್ಪಳ: ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದ್ದು, ಕಲಬುರಗಿಯಲ್ಲಿ ಸಿಡಿಲು ಬಡಿದು ಮನೆಯೊಂದು ಹೊತ್ತಿ ಉರಿದಿದೆ. ಕಲಬುರಗಿ ತಾಲೂಕಿನ ಹೊನ್ನ ಕಿರಣಗಿ ಗ್ರಾಮದಲ್ಲಿ‌ಘಟನೆ ನಡೆದಿದೆ.

ರಾಜಕುಮಾರ್ ನಿಂಗಯ್ಯ ಕೋಣಿನ್ ಅವರ ಮನೆಗೆ ಸಿಡಿಲು ಬಡಿದಿದ್ದು, ಸ್ವಲ್ಪದರಲ್ಲೆ ಅನಾಹುತವೊಂದು ತಪ್ಪಿದೆ. ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು ಬೆಂಕಿಯನ್ನು ‌ನಂದಿಸಿದ್ದಾರೆ. ಫರತಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕೊಡಗಿನಲ್ಲಿ ಮುಂದುವರೆದ ಆರಿದ್ರಾ ಮಳೆ

ಕೊಡಗಿನಲ್ಲಿ ಆರಿದ್ರಾ ಮಳೆ ಅಬ್ಬರಕ್ಕೆ ನದಿ ತೋರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದೆ. ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಕಾವೇರಿ ನದಿ ನೀರಿನ ಮಟ್ಟದಲ್ಲೂ ಗಣನೀಯ ಏರಿಕೆ ಕಂಡಿದೆ.

ಅಂಡರ್‌ ಪಾಸ್‌ ಜಲಾವೃತ

ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಮಳೆಗೆ ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯ ಅಂಡರ್ ಪಾಸ್‌ನಲ್ಲಿ ನೀರು ನಿಂತಿದೆ. ನಿನ್ನೆ ಸುರಿದ ಮಳೆಗೆ ಅಂಡರ್ ಪಾಸ್ ಜಲಾವೃತವಾಗಿದ್ದು, ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು.

ಕೂಡ್ಲಿಗಿಯಲ್ಲಿ ಮಳೆಗಾಗಿ ವಿಶೇಷ ಪೂಜೆ

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಮತ್ತೊಂದು ಕಡೆ ಮಳೆಗಾಗಿ ವಿಶೇಷ ಪೂಜೆ ನಡೆದಿದೆ. ವಿಜಯನಗರದ ಕೂಡ್ಲಿಗಿ ಪಟ್ಟಣದ ಕೋಟೆ ಪ್ರದೇಶದಲ್ಲಿ ಮಳೆಗಾಗಿ ಕೊಂತೆಮ್ಮ ಗಂಗೆ ಪೂಜೆಯನ್ನು ಗ್ರಾಮಸ್ಥರು ನೆರವೇರಿಸಿದ್ದಾರೆ. ಪಂಚ ಮುತ್ತೈದೆಯರು, ಪಂಚ ಕನ್ನಿಕೇಯರಿಂದ ವರುಣನ ಕೃಪೆಗಾಗಿ ಕೊಂತೆಮ್ಮ ಗಂಗೆ ಪೂಜೆ ಸಲ್ಲಿಸಿದರು.

ಮೂರು ಕಾಲು ದಾರಿ ಸೇರುವ ವೃತ್ತದಲ್ಲಿ ನೀರು ತುಂಬಿದ ಕುಂಬವೊಂದನ್ನು ಅಲಂಕಾರ ಮಾಡಿ, ಅದನ್ನೇ ಮಳೆ ಕೊಂತೆಮ್ಮಳೆಂದು ವಿಧಿವತ್ತಾಗಿ ಪಂಚ ಮುತ್ತೈದೆಯರಿಂದ ಪ್ರತಿಷ್ಠಾಪನೆ ಮಾಡಿ ಮಳೆಗಾಗಿ ವಿಶೇಷ ಪೂಜೆ ನೆರವೇರಿಸಿದರು.

ಇದನ್ನೂ ಓದಿ: Karnataka Weather : ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ; ಕರಾವಳಿ-ಮಲೆನಾಡಿಗೆ ಎಚ್ಚರಿಕೆ

ಸೇತುವೆ ಮುಳುಗಡೆ

ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳಲ್ಲಿ ಮಳೆ ಮುಂದುವರಿದಿದೆ. ನಿರಂತರ ಮಳೆಯಿಂದ ಪಂಚಗಂಗಾ ಒಳಹರಿವಿನ ಪ್ರಮಾಣ ಹೆಚ್ಚಳಗೊಂಡಿದೆ. ಪಂಚಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಬ್ರಿಡ್ಜ್ ಕಮ್ ಬ್ಯಾರೇಜ್ ಮುಳುಗಡೆಯಾಗಿದೆ.

ಕೊಲ್ಹಾಪುರ ಜಿಲ್ಲೆಯ ಶಿಂಗನಾಪುರ ಬಳಿ ಇರುವ ಸೇತುವೆ ಮುಳುಗಡೆಗೊಂಡಿದ್ದು, ವಾಹಗಳ ಸಂಚಾರಕ್ಕೆ ತೊಂದರೆಯುಂಟಾಗಿದೆ. ಇತ್ತ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದ ಕೊಲ್ಹಾಪುರ ಜಿಲ್ಲಾಡಳಿತ ಹಾಗೂ ಪೊಲೀಸರ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Reels Obsession: ಎಕೆ 47, ಬಾಡಿಗಾರ್ಡ್ಸ್‌, ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡಿದವನು ಜೈಲುಪಾಲು!

Reels Obsession: ಬೆಂಗಳೂರಿನಲ್ಲಿ ಹೀಗೆ ಶೋ ಕೊಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದಾರೆ.

VISTARANEWS.COM


on

reels obsession
Koo

ಬೆಂಗಳೂರು: ರಿಲ್ಸ್ ಶೋಗಾಗಿ ಶೋಕಿ (Reels Obsession) ಮಾಡಿದವನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದಾರೆ. ಈತ ಎಕೆ 47 (AK 47 Rifle) ರೈಫಲ್‌ ಹಿಡಿದ ಗನ್ ಮ್ಯಾನ್‌ಗಳನ್ನು ಬಾಡಿಗಾರ್ಡ್ಸ್‌ (Bodyguards) ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ಶೋಕಿ ಮಾಡುತ್ತಿದ್ದ. ಬೀದಿಬೀದಿಯಲ್ಲಿ ಈತನ ಗನ್‌ ಝಳಪಿಸುವಿಕೆ ಕಂಡು ಜನ ಆತಂಕಕ್ಕೊಳಗಾಗಿದ್ದರು.

ಬೆಂಗಳೂರಿನಲ್ಲಿ ಹೀಗೆ ಶೋ ಕೊಡಲು ಹೋಗಿ ಜೈಲು ಸೇರಿದ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದಾರೆ.

ಈತ ಬಾಡಿಗಾರ್ಡ್ಸ್‌ ಥರ ಮನುಷ್ಯರನ್ನಿಟ್ಟುಕೊಂಡು, ಅವರ ಕೈಲಿ ಎಕೆ 47 ಮಾದರಿಯ ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್‌ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಅರುಣ್ ಕಟಾರೆ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಮಾಹಿತಿ ನೀಡಿದ್ದರು.

ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿ ಈತನನ್ನು ಬಂಧಿಸಲಾಗಿದೆ. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿದೆ. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿದ್ದಾರೆ.

ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದ ಗೌರಿಬಿದನೂರು ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ (Dead Body Found) ಪತ್ತೆಯಾಗಿದೆ. ಮೃತನ ಕೈ ಮೇಲೆ ಲಕ್ಷ್ಮಿ ಎಂಬ ಹಚ್ಚೆ ಗುರುತು ಪತ್ತೆಯಾಗಿದೆ.

ಪ್ರೀತಿ-ಪ್ರೇಮ ಹಿನ್ನೆಲೆಯಲ್ಲಿ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ದುಷ್ಕರ್ಮಿಗಳು ಕೊಲೆ ಮಾಡಿ ಮರಕ್ಕೆ ನೇತು ಹಾಕಿ ಹೋಗಿರುವ ಅನುಮಾನವಿದೆ. ಮರದಲ್ಲಿ ನೇತಾಡುತ್ತಿದ್ದ ಮೃತದೇಹವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಗೌರಿಬಿದನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರದಲ್ಲಿದ್ದ ಮೃತದೇಹವನ್ನು ಕೆಳಗಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತನ ಗುರುತು ಪತ್ತೆಯಾಗಿಲ್ಲ. ಸದ್ಯ ಪೊಲೀಸರು ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case : ರೌಡಿಯಾಗಲು ಹೊರಟವನನ್ನು ಕೊಂದು ಹಾಕಿದ್ರು ಪುಂಡರು

Continue Reading

ಬೆಂಗಳೂರು

Inspirational Story: ಕಣ್ಣೆದುರೆ ಸುಟ್ಟು ಕರಕಲಾದ ಮಗಳ ದುರಂತ ಅಂತ್ಯ; ಬಡಮಕ್ಕಳಿಗೆ ದಾರಿದೀಪವಾದ ಎಎಸ್‌ಐ

Inspirational Story: ಮಗಳ ದುರಂತ ಸಾವಿನಿಂದ ನೊಂದಿದ್ದ ಎಎಸ್‌ಐ ಲೋಕೇಶಪ್ಪ ಬಡಮಕ್ಕಳಲ್ಲಿ ಮಗಳನ್ನು ಕಾಣುತ್ತಿದ್ದಾರೆ. ಮಗಳ ಶಿಕ್ಷಣಕ್ಕೆ ಖರ್ಚಾಗುತ್ತಿದ್ದ ಹಣವನ್ನು ಬಡ ಮಕ್ಕಳ ಶಾಲಾ ಸಾಮಾಗ್ರಿಗಳಿಗೆ ಧನ ಸಹಾಯ ಮಾಡುತ್ತಿದ್ದಾರೆ

VISTARANEWS.COM


on

By

Inspirational Story
ಪೂರ್ವ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಲೋಕೇಶಪ್ಪ
Koo

ಬೆಂಗಳೂರು: ಜನ-ಸಾಮಾನ್ಯರ ರಕ್ಷಣೆ ಮಾಡುವ ಆ ಎಎಸ್‌ಐಗೆ ಮಗಳೇ ಜೀವವಾಗಿದ್ದಳು. ಆಕೆಯ ಭವಿಷ್ಯಕ್ಕಾಗಿ ನೂರಾರು ಕನಸು ಕಂಡಿದ್ದರು. ಆದರೆ ವಿಧಿಯಾಟವೇ ಬೇರೆಯಾಗಿತ್ತು. ಸಾಕಿ ಸಾಲುಹಿದ್ದ ಮಗಳು ಅಗ್ನಿ ದುರಂತದಲ್ಲಿ ತಂದೆ ಕಣ್ಣೆದುರೇ ಸುಟ್ಟು ಕರಕಲಾಗಿದ್ದಳು. ಮಗಳ ಅಗಲಿಕೆಯಿಂದ ಮನನೊಂದಿದ್ದ ಅವರು ಕೊರಗಿ ಕಂಗಲಾಗಿದ್ದರು. ಆದರೆ ಮಗಳ ಸಾವಿಗೆ ಗೌರವ ಸರ್ಮಪಿಸಬೇಕೆಂದು ಆ ಖಾಕಿ ಇಟ್ಟ ಹೆಜ್ಜೆ ಹಲವು ಮಕ್ಕಳ ಭವಿಷ್ಯಕ್ಕೆ ದಾರಿ (Inspirational Story) ದೀಪವಾಗಿದೆ.

ಪೂರ್ವ ವಿಭಾಗದ ಸೆನ್ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕೆಲಸ ಮಾಡುತ್ತಿರುವ ಲೋಕೇಶಪ್ಪ ಬಡ ಮಕ್ಕಳಿಗೆ ಮಾಡಿದ ದಾನದಿಂದಲೇ ಹೆಸರು ಮಾಡಿದ್ದಾರೆ. 2019ರಲ್ಲಿ ಬೆಂಕಿ ಅವಘಡದಲ್ಲಿ ತಮ್ಮ ಮಗಳು ಹರ್ಷಾಲಿಯನ್ನು ಕಳೆದುಕೊಂಡಿದ್ದರು. ಇದರಿಂದ ಮನನೊಂದಿದ್ದ ಅವರು ಮಗಳ ಸಾವಿನ ಗೌರವಾರ್ಥವಾಗಿ ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸಹಾಯ ಮಾಡುತ್ತಿದ್ದಾರೆ.

ಕಳೆದ ಒಂದು ವರ್ಷದಿಂದ ತಮ್ಮ ಮಗಳ ಶಿಕ್ಷಣಕ್ಕೆ ಖರ್ಚಾಗುತ್ತಿದ್ದ ಹಣವನ್ನು ಬಡ ಮಕ್ಕಳ ಶಾಲಾ ಸಾಮಾಗ್ರಿಗಳಿಗೆ ಧನಸಹಾಯ ಮಾಡುತ್ತಿದ್ದಾರೆ. ಲೊಕೇಶಪ್ಪ ಪತ್ನಿ ಕೂಡ ಮಗಳನ್ನು ಕಳೆದುಕೊಂಡು ತೀವ್ರವಾಗಿ ನೊಂದಿದ್ದರು. ಹೀಗಾಗಿ ಶಿಕ್ಷಣ ಇಲಾಖೆಯ ಕೆಲಸ ಬಿಟ್ಟು , ಹರ್ಷಾಲಿ ಹೆಸರಿನಲ್ಲಿ ಎನ್‌ಜಿಒ ಶುರು ಮಾಡಿ ಅದರ ಮೂಲಕ ಬಡ ಮಕ್ಕಳಿಗೆ ಸಹಾಯ ಮಾಡುತ್ತಿದ್ದಾರೆ.

ಇದನ್ನೂ ಓದಿ: Inspirational Story: 25 ವರ್ಷಗಳ ಹಿಂದೆ ಕಸದ ತೊಟ್ಟಿಯಲ್ಲಿ ಸಿಕ್ಕ ಅಂಧ ಹೆಣ್ಣುಮಗುವಿನ ಸಾಧನೆ ನೋಡಿ!

ಇನ್ನು ಲೋಕೇಶಪ್ಪ ದಂಪತಿ ಕಳೆದ ಒಂದು ವರ್ಷದಿಂದ ಈ ಕಾರ್ಯವನ್ನು ನೆರವೇರಿಸಿಕೊಂಡು ಬರುತ್ತಿದ್ದಾರೆ. ಮೈಸೂರು 1, ಹಾಸನ 4 , ಬೆಂಗಳೂರು 1 ಶಾಲೆ ಸೇರಿ ಒಟ್ಟು ಆರು ಸರ್ಕಾರಿ ಶಾಲೆಗಳಲ್ಲಿರುವ ಬಡ ಮಕ್ಕಳನ್ನು ಗುರುತಿಸಿದ್ದಾರೆ. ಅವರ ವಿದ್ಯಾಭ್ಯಾಸಕ್ಕೆ ಬೇಕಾದ ಪರಿಕರಗಳಾದ ಪುಸ್ತಕ, ಪೆನ್ನು, ಪೆನ್ಸಿಲ್, ವಾಟರ್ ಬಾಟಲ್ ಸೇರಿದಂತೆ ಹಲವು ವಸ್ತುಗಳನ್ನ ವಿತರಣೆ ಮಾಡುತ್ತಿದ್ದಾರೆ.

ಆರು ಶಾಲೆಗಳ ಸುಮಾರು 600‌ ಮಕ್ಕಳ ವಿದ್ಯಾಭ್ಯಾಸಕ್ಕೆ ಧನಸಹಾಯ ಮಾಡಿದ್ದಾರೆ. ಬೆಂಗಳೂರಿನ 200 ಮಕ್ಕಳು ಸೇರಿದಂತೆ 600 ಮಕ್ಕಳಿಗೆ ಆಸರೆಯಾಗಿದ್ದಾರೆ. ಸದ್ಯ ಎಎಸ್‌ಐ ಅವರ ಕೆಲಸಕ್ಕೆ ಹಲವೆಡೆ ಪ್ರಶಂಸೆ ವ್ಯಕ್ತವಾಗುತ್ತಿದೆ. ಬಡ ಮಕ್ಕಳಲ್ಲಿ ತನ್ನ ಮಗಳನ್ನ ಕಾಣುತ್ತಿರುವ ಎಎಸೈ ಲೊಕೇಶಪ್ಪ ಪ್ರತಿ ವರ್ಷವೂ ಕೂಡ ಮಗಳ ಸಾವಿನ ದಿನವನ್ನು ದಾನ ಮಾಡುವ ಮೂಲಕ ಸ್ಮರಣಾರ್ಥ ದಿನವಾಗಿ ಮಾಡಲು ನಿರ್ಧರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

DV Sadananda Gowda: ವಿಪಕ್ಷ ನಾಯಕನಾಗಿ ಇರುವವರು ಅಧ್ಯಯನ ಮಾಡಬೇಕು. ಜನರ ವಿಶ್ವಾಸ ಗಳಿಸಬೇಕು. ನಾನೂ ಪರಿಷತ್ ವಿಪಕ್ಷ ನಾಯಕ‌ನಾಗಿದ್ದೆ. ನನ್ನ ಇಡೀ ಅವಧಿಯಲ್ಲಿ ಸಮರ್ಥ ವಿಪಕ್ಷ ನಾಯಕನಾಗಿದ್ದಾಗ, ಸಿದ್ದರಾಮಯ್ಯ ಅವರೇ ಕ್ಷಮೆ‌ ಕೇಳಿದ್ದರು. ವಿಪಕ್ಷ ನಾಯಕನಾದವನಿಗೆ ತಾಳ್ಮೆ ಇರಬೇಕು ಎಂದಿದ್ದಾರೆ ಸದಾನಂದ ಗೌಡ.

VISTARANEWS.COM


on

Lok sabha Election 2024 DV Sadananda Gowda
Koo

ಬೆಂಗಳೂರು: ಮಾಜಿ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ (BJP Leader) ಸದಾನಂದ ಗೌಡ (DV Sadananda Gowda) ಸಿಡಿದೆದ್ದಿದ್ದಾರೆ. ಪಕ್ಷವಿರೋಧಿಗಳ ಮೇಲೆ ಕ್ರಮ ಕೈಗೊಳ್ಳದಿದ್ದುದಕ್ಕೆ ಪಕ್ಷದ ರಾಜ್ಯ ನಾಯಕತ್ವವನ್ನು ಟೀಕಿಸಿದ್ದಾರೆ. ‌ʼಆರ್.ಅಶೋಕ್‌ (R Ashok) ಅವರಿಗೆ ಆಡಳಿತ ಪಕ್ಷದಲ್ಲಿದ್ದು ಗೊತ್ತೇ ಹೊರತು ವಿಪಕ್ಷ ನಾಯಕನಾಗಿ (Opposition Leader) ಅನುಭವವಿಲ್ಲʼ ಎಂದಿದ್ದಾರೆ.

“ನಮ್ಮ ಪಕ್ಷ ಇಷ್ಟು ಇಷ್ಟು ಹಾಳಾಗಲು ಕಾರಣ ಪಕ್ಷ ವಿರೋಧಿ ಚಟುವಟಿಕೆ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳದಿರುವುದು. ಮಾತಾಡುವವರಿಗೆ ಮಣೆ ಹಾಕ್ತಾರೆ. ಹಾಗೆ ಮಾತಾಡುವವರನ್ನು ಹಾಗೆ ಮಾಡಬೇಡ ಅಂತ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಇಲ್ಲವೇ ಅವರನ್ನು ಪಕ್ಷದಿಂದ ದೂರ ಇಡಬೇಕು. ನಾನು ಪಕ್ಷದ ಅಧ್ಯಕ್ಷ ಆಗಿದ್ದಾಗ ಜನಾರ್ದನ ರೆಡ್ಡಿ, ರೇಣುಕಾಚಾರ್ಯ, ಯತ್ನಾಳ್ ಅವರನ್ನ ಸಸ್ಪೆಂಡ್ ಮಾಡಿದ್ದೇನೆ. ಎಷ್ಟೇ ದೊಡ್ಡವರಾಗಿದ್ರೂ ಪಕ್ಷ ವಿರೋಧಿ ಆದವರನ್ನು ಬಿಡುತ್ತಿರಲಿಲ್ಲ” ಎಂದು ಸದಾನಂದ ಗೌಡ ಹೇಳಿದ್ದಾರೆ.

“ನಾನು ಮೊನ್ನೆ ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ಅವರ ಜೊತೆ ಇದೇ ವಿಚಾರ ಚರ್ಚೆ ಮಾಡಿದ್ದೇನೆ. ತಪ್ಪು ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದರಿಂದ ಪಕ್ಷದ ಸಂಘಟನೆಗೆ ಆಕ್ಸಿಲರೇಟರ್ ಕೊಟ್ಟಂತೆ ಆಗ್ತಿತ್ತು. ನಾನು ಅಧ್ಯಕ್ಷ ಆಗಿದ್ದಾಗ ಯಡಿಯೂರಪ್ಪ ಅವರದ್ದು ಒಂದು ಗುಂಪು, ಅನಂತ್ ಕುಮಾರ್ ಅವರದ್ದು ಒಂದು ಗುಂಪು ಇತ್ತು. ನಾನು ಯಾವ ಗುಂಪನ್ನೂ ಸೇರದೆ ಕೆಲಸ ಮಾಡಿದೆ. ಇದರಿಂದಾಗಿ ನನ್ನನ್ನು ದೂರ ಮಾಡಿದರು. ಮೊನ್ನೆ ಕಾಂಗ್ರೆಸ್ ಪಕ್ಷದ ನಾಯಕ ನನ್ನನ್ನು ಅವರ ಪಕ್ಷಕ್ಕೆ ಆಹ್ವಾನಿಸಿದರು. ನಾಲ್ಕು ಶರ್ಟು, ಪ್ಯಾಂಟ್ ತನ್ನಿ ಅಂತ ಅಂದರು. ನಾನು ಮತ್ತೊಬ್ಬ ಜಗದೀಶ್ ಶೆಟ್ಟರ್ ಆಗಲು ಇಷ್ಟ ಇಲ್ಲ ಎಂದೆ” ಎಂದು ಗೌಡ ಹೇಳಿದರು.

“ನನ್ನನ್ನು ಭ್ರಷ್ಟಾಚಾರ ಹೆಸರಲ್ಲಿ ಮುಖ್ಯಮಂತ್ರಿ ಮಾಡಲಾಯಿತು. ಆದರೆ ನಾನು ಭ್ರಷ್ಟಾಚಾರ ರಹಿತ ಆಡಳಿತ ಮಾಡಿದೆ. ಸಕಾಲವನ್ನು ಜಾರಿಗೆ ತಂದು ಕೆಲಸ ಮಾಡಿದೆ. ಜನರಿಗೆ ಸಕಾಲದಲ್ಲಿ ಸೇವೆ ಸಿಗುವ ಕೆಲಸ ಮಾಡಿದೆ. ಆದರೆ ನಂತರ ಬಂದ ಬಿಜೆಪಿಯವರು, ಕಾಂಗ್ರೆಸ್ ಅವರು ಅದನ್ನು ಮಾಡಿದ್ರಾ? ಇವರೇ ಭ್ರಷ್ಟಾಚಾರ ಆಡಳಿತ ಶುರು ಮಾಡಿದರು” ಎಂದು ಅವರು ಕಿಡಿ ಕಾರಿದರು.

ವಿಪಕ್ಷ ನಾಯಕ ಆರ್. ಅಶೋಕ್ ಬಗ್ಗೆ ಕಾಂಗ್ರೆಸ್ ನಾಯಕರ ಹೇಳಿಕೆ ವಿಚಾರದಲ್ಲಿ ಕೇಳಲಾದ ಪ್ರಶ್ನೆಗೆ, “ಸಂಘಟನೆಯಲ್ಲಿ ಬಲಿಷ್ಠತೆ ಇಲ್ಲದಾಗ ಆರೋಪ ಬರುತ್ತದೆ. ಸಂಘಟನೆ ಬಲಿಷ್ಠ ಆಗಬೇಕು. ಆಡಳಿತ ಪಕ್ಷದವರ ಮನಸ್ಸಿಗೂ ಇವರ ಸಂಘಟನೆ ಬಲಿಷ್ಠ ಇಲ್ಲ ಎನಿಸಿರಬೇಕು. ಹಾಗಾಗಿ ಅವರು ಅಶೋಕ್ ಬಗ್ಗೆ ಹೇಳಿರಬಹುದು. ಅಶೋಕ್ ಅವರು ಹಿಂದಿನಿಂದಲೂ ಪ್ರತೀ ಬಾರಿ ಆಡಳಿತ ಪಕ್ಷದಲ್ಲಿ ಇದ್ದರು. ಹಾಗಾಗಿ ಆಡಳಿತದ ಕಡೆ ಅವರ ಮನಸ್ಸಿದೆ. ವಿಪಕ್ಷ ನಾಯಕನಾಗಿ ಇರುವವರು ಅಧ್ಯಯನ ಮಾಡಬೇಕು. ಜನರ ವಿಶ್ವಾಸ ಗಳಿಸಬೇಕು. ನಾನೂ ಪರಿಷತ್ ವಿಪಕ್ಷ ನಾಯಕ‌ನಾಗಿದ್ದೆ. ನನ್ನ ಇಡೀ ಅವಧಿಯಲ್ಲಿ ಸಮರ್ಥ ವಿಪಕ್ಷ ನಾಯಕನಾಗಿದ್ದಾಗ, ಸಿದ್ದರಾಮಯ್ಯ ಅವರೇ ಕ್ಷಮೆ‌ ಕೇಳಿದ್ದರು. ವಿಪಕ್ಷ ನಾಯಕನಾದವನಿಗೆ ತಾಳ್ಮೆ ಇರಬೇಕು” ಎಂದು ಉತ್ತರಿಸಿದರು.

“ಪಕ್ಷ ಸಂಘಟನೆ ತಳಮಟ್ಟದಿಂದ ಆಗಬೇಕು. ಕೇವಲ ಸ್ಥಾನದಲ್ಲಿ ಕೂರಿಸಿದ್ರೆ ಆಗಲ್ಲ. ತಳಮಟ್ಟದಲ್ಲಿ ಕೆಲಸ ಮಾಡುವ ಟೀಮ್ ಕೊರತೆ ಇದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಮೇಲೆ ನಾನು ಆರೋಪ ಮಾಡಲ್ಲ. ಅವರು ಈಗಷ್ಟೇ ಬಂದಿದ್ದಾರೆ, ಬಂದ ತಕ್ಷಣ ಚುನಾವಣೆ ಬಂದಿದೆ. ಕರ್ನಾಟಕದಲ್ಲಿ ಬಿಜೆಪಿ ಕೇಡರ್ ಬೇಸ್ ಪಾರ್ಟಿ. ಕಾರ್ಯಕರ್ತರನ್ನು ಕಳೆದುಕೊಳ್ತಿದ್ದೇವೆ‌. ಇದು ನಮಗೆ ಎಚ್ಚರಿಕೆಯ ಗಂಟೆ. ನಮಲ್ಲಿ ಶಕ್ತಿ ಇದೆ, ಕಮಿಟೆಡ್ ಕಾರ್ಯಕರ್ತರಿದ್ದಾರೆ. ಆದರೆ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ಫೇಲ್ಯೂರ್ ಆಗಿದ್ದಾರೆ” ಎಂದು ನುಡಿದರು.

“ಚುನಾವಣೆಯಲ್ಲಿ ನಮ್ಮ ನಿರೀಕ್ಷೆಯ ಫಲಿತಾಂಶ ಸಿಕ್ಕಲಿಲ್ಲ. ವಿಧಾನಸಭೆ ಚುನಾವಣೆ ಬಳಿಕ ರಾಜ್ಯದಲ್ಲಿ ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ಕಾಂಗ್ರೆಸ್ ಅಭೂತಪೂರ್ವ ಗೆಲುವಿನ ಬಳಿಕ, ಪಕ್ಷದಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಮೋದಿ ಇಮೇಜ್ ಮೇಲೆ ಚುನಾವಣೆ ನಡೆದುಬಿಡುತ್ತೆ ಅಂತ ಓವರ್ ಕಾನ್ಪಿಡೆನ್ಸ್‌ನಿಂದಾಗಿ ನಮ್ಮ 9 ಸ್ಥಾನ ಕಳೆದುಕೊಳ್ಳಬೇಕಾಯ್ತು. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿತ್ತು” ಎಂದು ಗೌಡ ವಿಶ್ಲೇಷಿಸಿದರು.

“ಕಾಂಗ್ರೆಸ್ ಇದ್ದಾಗಲೂ ಅನೇಕ ಬಾರಿ ಬಿಜೆಪಿ ಗೆದ್ದಿದೆ. ಆದರೆ ಈ ಬಾರಿ ಸಾಕಷ್ಟು ವಿಫಲವಾಗಿದೆ. ಇದಕ್ಕೆ ನನ್ನನ್ನೂ ಸೇರಿದಂತೆ ಎಲ್ಲರ ತಪ್ಪಿದೆ. ಕೋಹ್ಲಿ 76 ರನ್ ಹೊಡೆದ್ರೂ, ಕಪ್ ತಗೊಂಡಿದ್ದು ರೋಹಿತ್ ಶರ್ಮ. ಹಾಗೆ ಎಲ್ಲರ ತಪ್ಪು ಪಕ್ಷಕ್ಕೆ ಹಿನ್ನಡೆಯಾಗಿದೆ. ನಮಗೆ ಹಳೆ ಮೈಸೂರಿನಲ್ಲಿ ಜೆಡಿಎಸ್‌ ಇತ್ತು. ಅವರ ಜೊತೆ ಸೇರಿದ್ದಕ್ಕೆ ಬಿಜೆಪಿ ಗೆದ್ದಿತು ಅಂತ ಜನ ಮಾತಾಡ್ತಿದ್ದಾರೆ. ತುಮಕೂರು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಎಲ್ಲೆಡೆ ಕಷ್ಟ ಆಗಿತ್ತು. ಜೆಡಿಎಸ್‌ ಜೊತೆ ಸೇರಿದ್ರೂ ಕೂಡ ನಮ್ಮ ಗೆಲುವಿನ ಮಾರ್ಜಿನ್ ಕಡಿಮೆ ಆಗಿದೆ. 4ರಂದು ರಾಜ್ಯ ಕಾರ್ಯಕಾರಿಣಿ ಸಭೆ ಇದೆ. ಎಲ್ಲಾ ಮಾಹಿತಿ ಪಡೆದು ಚರ್ಚೆ ಮಾಡಬೇಕಿದೆ” ಎಂದು ಗೌಡ ತಿಳಿಸಿದರು.

ಇದನ್ನೂ ಓದಿ: DV Sadananda Gowda : ಕಾಂಗ್ರೆಸ್‌ ಸೇರಲ್ಲ ಎಂದ ಡಿ.ವಿ ಸದಾನಂದ ಗೌಡ; ಇನ್ನು ಬಿಜೆಪಿ ಶುದ್ಧೀಕರಣ ಮಾಡ್ತಾರಂತೆ!

Continue Reading
Advertisement
Sheikh Abdul Rashid
ದೇಶ1 min ago

Sheikh Abdul Rashid: ಸೆರೆಮನೆಯಿಂದ ನೇರ ಸಂಸತ್‌ಗೆ ಎಂಟ್ರಿ! ಜೈಲಿನಿಂದಲೇ ಸ್ಪರ್ಧಿಸಿ ಗೆದ್ದ ಸಂಸದನ ಪ್ರಮಾಣವಚನಕ್ಕೆ NIA ಅಸ್ತು

karnataka Weather Forecast
ಮಳೆ6 mins ago

Karnataka Rain :‌ ಮುಂದುವರಿದ ಮಳೆ ಅಬ್ಬರ; ಸಿಡಿಲು ಬಡಿದು ಹೊತ್ತಿ ಉರಿದ ಮನೆ, ಸೇತುವೆ ಮುಳುಗಡೆ

reels obsession
ಕ್ರೈಂ10 mins ago

Reels Obsession: ಎಕೆ 47, ಬಾಡಿಗಾರ್ಡ್ಸ್‌, ಸುಂದರಿಯರ ನಡುವೆ ರೀಲ್ಸ್‌ ಶೋಕಿ ಮಾಡಿದವನು ಜೈಲುಪಾಲು!

Parliament Sessions
ದೇಶ12 mins ago

Parliament Sessions: ಲೋಕಸಭೆಯಲ್ಲಿ ನೀಟ್‌ ವಿವಾದ ಚರ್ಚೆಗೆ ಆಗ್ರಹಿಸಿ ಸಭಾತ್ಯಾಗ ಮಾಡಿದ ಪ್ರತಿಪಕ್ಷ

Darshan support by Adviti Shetty Block the bad commenter
ಸ್ಯಾಂಡಲ್ ವುಡ್20 mins ago

Actor Darshan: ಕೆಟ್ಟ ಕಮೆಂಟ್‌ ಮಾಡೋರನ್ನ ಬ್ಲಾಕ್‌ ಮಾಡಿ, ದರ್ಶನ್‌ ನಿರಪರಾಧಿ ಆಗಿ ಹೊರ ಬರಲಿ ಎಂದ ಅದ್ವಿತಿ ಶೆಟ್ಟಿ

Inspirational Story
ಬೆಂಗಳೂರು37 mins ago

Inspirational Story: ಕಣ್ಣೆದುರೆ ಸುಟ್ಟು ಕರಕಲಾದ ಮಗಳ ದುರಂತ ಅಂತ್ಯ; ಬಡಮಕ್ಕಳಿಗೆ ದಾರಿದೀಪವಾದ ಎಎಸ್‌ಐ

Doctor's Day
ದೇಶ56 mins ago

Doctor’s Day: ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ವೃದ್ಧಿಗೆ ಕ್ರಮ; ಪ್ರಧಾನಿ ಮೋದಿ ಭರವಸೆ

Munawar Faruqui shares first pic with new wife
ಬಾಲಿವುಡ್1 hour ago

Munawar Faruqui: ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ!

Lok sabha Election 2024 DV Sadananda Gowda
ಪ್ರಮುಖ ಸುದ್ದಿ1 hour ago

DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

Karave Protest
ಪ್ರಮುಖ ಸುದ್ದಿ1 hour ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ20 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌