Raj B Shetty | ʻಸ್ವಾತಿ ಮುತ್ತಿನ ಮಳೆ ಹನಿಯೇʼ ಸಿನಿಮಾದ ರಾಜ್ ಬಿ ಶೆಟ್ಟಿ ಲುಕ್ ರಿವೀಲ್‌! - Vistara News

ಸಿನಿಮಾ

Raj B Shetty | ʻಸ್ವಾತಿ ಮುತ್ತಿನ ಮಳೆ ಹನಿಯೇʼ ಸಿನಿಮಾದ ರಾಜ್ ಬಿ ಶೆಟ್ಟಿ ಲುಕ್ ರಿವೀಲ್‌!

ʻʻಸ್ವಾತಿ ಮುತ್ತಿನ ಮಳೆ ಹನಿಯೇʼʼ ಸಿನಿಮಾದ ರಾಜ್‌ ಬಿ. ಶೆಟ್ಟಿ (Raj B Shetty) ಅವರ ಲುಕ್‌ ರಿವೀಲ್‌ ಆಗಿದೆ.

VISTARANEWS.COM


on

Raj B Shetty
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ʻಗರುಡ ಗಮನ ವೃಷಭ ವಾಹನʼ ಸಿನಿಮಾ ಬಳಿಕ ನಟ, ನಿರ್ದೇಶಕ ರಾಜ್​​ ಬಿ. ಶೆಟ್ಟಿ (Raj B Shetty) ʻʻಸ್ವಾತಿ ಮುತ್ತಿನ ಮಳೆ ಹನಿಯೇʼʼ (Swathi Mutthina Male haniye) ಸಿನಿಮಾ ಮೂಲಕ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ರಾಜ್‌ ಬಿ. ಶೆಟ್ಟಿ ಅವರ ಲುಕ್‌ ರಿವೀಲ್‌ ಆಗಿದೆ. ಈ ಸಿನಿಮಾವನ್ನು ಸ್ಯಾಂಡಲ್​ವುಡ್ ಕ್ವೀನ್, ನಟಿ ರಮ್ಯಾ ಅವರ ಆ್ಯಪಲ್​ ಬಾಕ್ಸ್ ಸ್ಟುಡಿಯೋಸ್ ಅಡಿ ನಿರ್ಮಾಣ ಮಾಡಲಾಗುತ್ತಿದೆ.

ಈಗಾಗಲೇ ಚಿತ್ರತಂಡ ಸಿನಿಮಾ ಶೂಟಿಂಗ್ ​ಅನ್ನು ಒಂದೇ ಶೆಡ್ಯೂಲ್​ನಲ್ಲಿ ಪೂರ್ಣಗೊಳಿಸಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ವರ್ಕ್​​ನಲ್ಲಿ ಬ್ಯುಸಿಯಾಗಿದೆ. ಈ ನಡುವೆಯೇ ಸಿನಿಮಾ ಟೈಟಲ್ ಕುರಿತಂತೆ ವಿವಾದವೊಂದು ಸಖತ್ ಸದ್ದು ಮಾಡಿತ್ತು. ಟೈಟಲ್ ವಿರುದ್ಧ ಹಿರಿಯ ನಿರ್ದೇಶಕ ಎಸ್.ವಿ ರಾಜೇಂದ್ರಸಿಂಗ್ ಬಾಬು ಅವರು ಫಿಲ್ಮ್‌ ಚೇಂಬರ್ ಮೆಟ್ಟಿಲೇರಿದ್ದರು.

ಇದನ್ನೂ ಓದಿ | Raj B. Shetty Birthday | ಒಂದು ಮೊಟ್ಟೆಯ ಕಥೆ ಖ್ಯಾತಿಯ ರಾಜ್‌ ಬಿ ಶೆಟ್ಟಿಗೆ ಜನುಮ ದಿನದ ಸಂಭ್ರಮ

ʻ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಸಿನಿಮಾ ಶೀರ್ಷಿಕೆ ನನ್ನದು. ಈ ಶೀರ್ಷಿಕೆಯನ್ನು ಯಾರೂ ಬಳಸದಂತೆ ಕ್ರಮ ತಗೆದುಕೊಳ್ಳಬೇಕುʼ ಎಂದು ಎಂದು ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ವಾಣಿಜ್ಯ ಮಂಡಳಿಗೆ ವಕೀಲರ ಮುಖೇನ ಪತ್ರವೊಂದನ್ನು ಬರೆದಿದ್ದರು. ಪೊಗರು ಚಿತ್ರದ ನಿರ್ಮಾಪಕ ಗಂಗಾಧರ್ ಅವರು, ʻʻನನ್ನ ಬಳಿ ಇದ್ದ ಸ್ವಾತಿ ಮುತ್ತಿನ ಮಳೆ ಹನಿಯೇ ಟೈಟಲ್ ಅನ್ನು ನಾನು ಕಾನೂನಾತ್ಮಕವಾಗಿಯೇ ರಮ್ಯಾ ಅವರಿಗೆ ಕೊಟ್ಟಿದ್ದೇನೆ. ಸಿನಿಮಾ ಶೂಟಿಂಗ್ ಆರಂಭ ಮುನ್ನವೇ ಅವರು ನನ್ನ ಬಳಿಯಿಂದ ಟೈಟಲ್ ಪಡೆದುಕೊಂಡಿದ್ದಾರೆʼʼ ಎಂದು ತಿಳಿಸಿದ್ದರು.

ಉಳಿದಂತೆ, ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದಲ್ಲಿ ಸಿರಿ ರವಿಕುಮಾರ್ ನಾಯಕಿಯಾಗಿ ರಾಜ್ ಬಿ. ಶೆಟ್ಟಿ ಅವರಿಗೆ ಜೋಡಿಯಾಗಿದ್ದಾರೆ.

ಇದನ್ನೂ ಓದಿ | Raj B Shetty | ಮಾಲಿವುಡ್‌ಗೆ ಎಂಟ್ರಿ ಕೊಟ್ಟ ರಾಜ್‌ ಬಿ ಶೆಟ್ಟಿ: ನಾಯಕಿ ರಾಷ್ಟ್ರ ಪ್ರಶಸ್ತಿ ವಿಜೇತೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

Maharaj: ಬಾಲಿವುಡ್‌ ನಟ ಆಮೀರ್‌ ಖಾನ್‌ ಪುತ್ರ ಜುನೈದ್‌ ಖಾನ್‌ ನಟಿಸಿರುವ ಮೊದಲ ಸಿನಿಮಾ ಮಹಾರಾಜ್‌ ಬಿಡುಗಡೆಗೆ ಗುಜರಾತ್‌ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳು ಸಿನಿಮಾದಲ್ಲಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಕಾರಣ ತಡೆಯಾಜ್ಞೆ ನೀಡಲಾಗಿದೆ.

VISTARANEWS.COM


on

Maharaj
Koo

ಗಾಂಧಿನಗರ: ಬಾಲಿವುಡ್‌ ನಟ ಆಮೀರ್‌ ಖಾನ್‌ (Aamir Khan) ಅವರ ಪುತ್ರ ಜುನೈದ್‌ ಖಾನ್‌ (Junaid Khan) ನಟಿಸಿರುವ ಮೊದಲ ಸಿನಿಮಾಗೇ ಕೋರ್ಟ್‌ ತಡೆಯಾಜ್ಞೆ ನೀಡಿದೆ. ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳಿವೆ ಎಂಬುದಾಗಿ ಹಿಂದು ಸಂಘಟನೆಗಳು ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಗುಜರಾತ್‌ ಹೈಕೋರ್ಟ್‌, ಜುನೈದ್‌ ಖಾನ್‌ ನಟಿಸಿರುವ ಮೊದಲ ಸಿನಿಮಾ ‘ಮಹಾರಾಜ್’ (Maharaj)‌ ಬಿಡುಗಡೆಗೆ ತಡೆಯಾಜ್ಞೆ ನೀಡಿದೆ. ಇದರಿಂದ ಆಮೀರ್‌ ಖಾನ್‌ ಹಾಗೂ ಜುನೈದ್‌ ಖಾನ್‌ಗೆ ತುಸು ಹಿನ್ನಡೆಯಾದಂತಾಗಿದೆ.

ಸಿದ್ಧಾರ್ಥ್‌ ಪಿ. ಮಲ್ಹೋತ್ರಾ ಅವರು ಮಹಾರಾಜ್‌ ಸಿನಿಮಾವನ್ನು ನಿರ್ದೇಶಿಸಿದ್ದರೆ, ಆದಿತ್ಯ ಚೋಪ್ರಾ ನಿರ್ಮಾಪಕರಾಗಿದ್ದಾರೆ. ಜೂನ್‌ 14ರಂದೇ ನೆಟ್‌ಫ್ಲಿಕ್ಸ್‌ನಲ್ಲಿ ಸಿನಿಮಾ ರಿಲೀಸ್‌ ಆಗಬೇಕಿತ್ತು. ಆದರೆ, ಭಗವಾನ್‌ ಕೃಷ್ಣನ ಆರಾಧಕರು ಹಾಗೂ ವಲ್ಲಭಾಚಾರ್ಯ ಅವರ ಅನುಯಾಯಿಗಳು ನ್ಯಾಯಾಲಯದ ಮೊರೆ ಹೋದ ಕಾರಣ, ನ್ಯಾಯಾಲಯವು ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ನೀಡಿದೆ. ಹಿಂದುಗಳ ಭಾವನೆಗಳಿಗೆ ಧಕ್ಕೆ ತರುವ ಅಂಶಗಳು ಸಿನಿಮಾದಲ್ಲಿವೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಕಾರಣ ತಡೆಯಾಜ್ಞೆ ನೀಡಲಾಗಿದೆ. ಹಾಗೆಯೇ, ಸಾಮಾಜಿಕ ಜಾಲತಾಣದಲ್ಲಿ ಬಾಯ್ಕಾಟ್‌ ನೆಟ್‌ಫ್ಲಿಕ್‌ ಅಭಿಯಾನವೂ ಆರಂಭವಾಗಿದೆ.

ಸಿನಿಮಾದಲ್ಲಿ ಏನಿದೆ? ಯಾಕಿಷ್ಟು ವಿವಾದ?

1862ರಲ್ಲಿ ಪುಷ್ಟಿಮಾರ್ಗ ವೈಷ್ಣವ ಪಂಥದ ಮಹಾರಾಜರ ಕುರಿತು ಕರ್ಸನ್‌ದಾಸ್‌ ಮುಲ್ಝಿ ಎಂಬ ಪತ್ರಕರ್ತ ಬರೆದ ಲೇಖನಗಳ ಪ್ರಕರಣವಾಗಿದೆ. ವೈಷ್ಣವ ಪಂಥದ ಮಹಾರಾಜರು ತಮ್ಮ ಅನುಯಾಯಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಾರೆ, ಧಾರ್ಮಿಕ ಆಚರಣೆಗಳ ಹೆಸರಿನಲ್ಲಿ ಅವರನ್ನು ದುರ್ಬಳಕೆ ಮಾಡಿಕೊಳ್ಳುತ್ತಾರೆ ಎಂಬುದು ಸೇರಿ ಹಲವು ಲೇಖನಗಳನ್ನು ಗುಜರಾತಿ ವಾರಪತ್ರಿಕೆ ‘ಸತ್ಯಪ್ರಕಾಶ’ದಲ್ಲಿ ಬರೆದಿದ್ದರು.

ಮಹಾರಾಜರ ಅನುಯಾಯಿಗಳು ಸೇರಿ ಹಿಂದುಗಳು ಕರ್ಸನ್‌ದಾಸ್‌ ಮುಲ್ಝಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿ, ಬ್ರಿಟಿಷ್‌ ನ್ಯಾಯಾಲಯದ ಮೆಟ್ಟಿಲು ಕೂಡ ಹತ್ತಿತ್ತು. 16ನೇ ಶತಮಾನದಲ್ಲಿ ವಲ್ಲಭಾಚಾರ್ಯ ಅವರು ಪುಷ್ಟಿಮಾರ್ಗವನ್ನು ಸಂಸ್ಥಾಪಿಸಿದ್ದು, ಕೃಷ್ಣನ ಆರಾಧಕರು ಈ ಮಾರ್ಗವನ್ನು ಅನುಸರಿಸುತ್ತಾರೆ. ವೈಷ್ಣವ ಪಂಥದ ಮಹಾರಾಜರ ಕುರಿತು ಅವಹೇಳನಕಾರಿಯಾಗಿ ಲೇಖನ ಬರೆದಿದ್ದ ಕರ್ಸನ್‌ದಾಸ್‌ ಮುಲ್ಝಿಯ ಪಾತ್ರವನ್ನೇ ಜುನೈದ್‌ ಖಾನ್‌ ನಿಭಾಯಿಸಿದ್ದಾರೆ.

ಇದನ್ನೂ ಓದಿ: Hamare Baarah: ಮುಸ್ಲಿಂ ಮಹಿಳೆಯರ ಕುರಿತ ʻಹಮಾರೆ ಬಾರಾʼ ಸಿನಿಮಾ ಬಿಡುಗಡೆಗೆ ಸುಪ್ರೀಂ ಕೋರ್ಟ್ ತಡೆ

Continue Reading

ವೈರಲ್ ನ್ಯೂಸ್

Viral Video: ಮಗನಿಗೆ ಮುಸಲ್ಮಾನರ ಕ್ಯಾಪ್‌ ಹಾಕಿದ ನಟಿ; ಸೋಷಿಯಲ್‌ ಮೀಡಿಯಾದಲ್ಲಿ ಚರ್ಚೆ!

ಕಿರುತೆರೆ ನಟಿ ಕಿಶ್ವರ್ ಮರ್ಚೆಂಟ್ ಅವರು ಪೋಸ್ಟ್ (Viral Video) ಮಾಡಿರುವ ವಿಡಿಯೋದಲ್ಲಿ ಪತಿ ಮತ್ತು ನಟ ಸುಯ್ಯಾಶ್ ರಾಯ್‌ ಅವರು ಮಗ ನಿರ್ವೈರ್‌ಗೆ ಮುಸ್ಲಿಮರು ನಡೆಸುವ ಪ್ರಾರ್ಥನೆ ವಿಧಿಗಳನ್ನು ಕಲಿಸುತ್ತಿರುವುದನ್ನು ನೋಡಿರುವ ಸಾಕಷ್ಟು ಮಂದಿ ಬೇರೆ ಬೇರೆ ಅಭಿಪ್ರಾಯಗಳ ಮೂಲಕ ಪ್ರತಿಕ್ರಿಯಿಸಿದ್ದಾರೆ.

VISTARANEWS.COM


on

By

Viral Video
Koo

ಕಿರುತೆರೆ ನಟಿ (TV actress) ಕಿಶ್ವರ್ ಮರ್ಚೆಂಟ್ (Kishwer Merchantt) ಅವರು ಸಾಮಾಜಿಕ ಜಾಲತಾಣದಲ್ಲಿ (social media) ಮಗ ಸ್ಕಲ್ ಕ್ಯಾಪ್ (skull cap) ಧರಿಸಿರುವ ವಿಡಿಯೋವನ್ನು (Viral Video) ಪೋಸ್ಟ್ ಮಾಡಿದ್ದು, ಇದು ಭಾರಿ ಚರ್ಚೆ ಹುಟ್ಟಿಸಿದೆ. ನಟಿಯನ್ನು ಟ್ರೋಲ್ ಮಾಡಿ ಅನೇಕರು ಕಾಮೆಂಟ್‌ಗಳನ್ನು ಮಾಡಿದ್ದಾರೆ.

ನಟ ಸುಯ್ಯಶ್ ರಾಯ್‌ (Suyyash Rai) ಅವರನ್ನು ವಿವಾಹವಾಗಿರುವ ಕಿಶ್ವರ್ ಮರ್ಚೆಂಟ್ ಅವರ ಮಗ ನಿರ್ವೈರ್ ಸ್ಕಲ್ ಕ್ಯಾಪ್ ಧರಿಸಿರುವ ವಿಡಿಯೋವನ್ನು ಪೋಸ್ಟ್ ಮಾಡಿದ ಬಳಿಕ ಟ್ರೋಲ್‌ಗೆ ಗುರಿಯಾಗಿದ್ದಾರೆ. ಆದರೆ ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಿಶ್ವರ್, ನಾನು ಹಿಂದೂವನ್ನು ಮದುವೆಯಾಗಿರುವ ಮುಸ್ಲಿಂ. ಆದರೂ ನಾನು ಚರ್ಚ್, ಗುರುದ್ವಾರ ಅಥವಾ ದೇವಸ್ಥಾನಕ್ಕೆ ಹೋಗುತ್ತೇನೆ. ನಾನು, ನನ್ನ ಮಗನನ್ನು ಎಲ್ಲೆಲ್ಲಿಗೋ ಕರೆದುಕೊಂಡು ಹೋಗುತ್ತೇನೆ ಮತ್ತು ದೇವರು ನಿಜವಾಗಿ ಒಬ್ಬನೇ ಎಂದು ನಂಬುವಂತೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ವಿಡಿಯೋದಲ್ಲಿ ಏನಿದೆ?

ಕಿಶ್ವರ್ ಮರ್ಚೆಂಟ್ ಅವರು ಪೋಸ್ಟ್ ಮಾಡಿರುವ ವಿಡಿಯೋದಲ್ಲಿ ಅವರ ಮಗ ನಿರ್ವೈರ್ ಮುಸ್ಲಿಂ ಆಚರಣೆಗಳನ್ನು ಮಾಡುತ್ತಿರುವುದು ಕಂಡು ಬಂದಿದೆ. ಕಿಶ್ವರ್ ಅವರ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾದ ಈ ವಿಡಿಯೋದಲ್ಲಿ ಅವರ ಪತಿ ಮತ್ತು ನಟ ಸುಯ್ಯಾಶ್ ರಾಯ್‌ ಅವರು ಮಗ ನಿರ್ವೈರ್‌ಗೆ ಮುಸ್ಲಿಮರು ನಡೆಸುವ ಪ್ರಾರ್ಥನೆ ವಿಧಿಗಳನ್ನು ಕಲಿಸುತ್ತಿರುವುದನ್ನು ಕಾಣಬಹುದು. ಈ ವಿಡಿಯೋದಲ್ಲಿ ಯುವಕ ಸ್ಕಲ್ ಕ್ಯಾಪ್ ಧರಿಸಿದ್ದಾನೆ.
ಇದರಿಂದ ಕಿಶ್ವರ್ ಸಾಕಷ್ಟು ದ್ವೇಷದ ಕಾಮೆಂಟ್‌ಗಳನ್ನು ಸ್ವೀಕರಿಸಿದರು ಮತ್ತು ಅವರ ಮಗ ನಿರ್ವೈರ್‌ ನನ್ನು ಟ್ರೋಲ್ ಮಾಡಲಾಯಿತು.

ಮುಸ್ಲಿಂ ಆಗಿರುವ ಕಿಶ್ವರ್ ಅವರು ಹಿಂದೂ ಆಗಿರುವ ಸುಯ್ಯಶ್ ರಾಯ್‌ ಅವರನ್ನು ವಿವಾಹವಾಗಿದ್ದಾರೆ. ಮುಸ್ಲಿಮರು ಎಂದಾದರೂ ಭಗವಾನ್ ಅಥವಾ ರಾಮ್ ಎಂಬ ಪದವನ್ನು ಹೇಳುತ್ತಾರಾ? ಮುಸ್ಲಿಂ ಎಂದಾದರೂ ದೇವಸ್ಥಾನಕ್ಕೆ ಹೋಗುತ್ತಾನಾ? ಹಾಗೆ, ನಾವು ಇನ್ನೂ ಮಸೀದಿಗಳಿಗೆ ಹೋಗುತ್ತೇವೆ ಎಂದು ಪ್ರಶ್ನಿಸುವ ಕಾಮೆಂಟ್‌ಗಳು ಇದ್ದವು.

ಈ ಕುರಿತು ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿದ ಕಿಶ್ವರ್‌, ನಾನು ಮುಸ್ಲಿಂ ಆದರೂ ಗುರುದ್ವಾರ ಚರ್ಚ್‌ನಲ್ಲಿ ಪ್ರಾರ್ಥನೆ ಸಲ್ಲಿಸುತ್ತೇನೆ. ದೀಪಾವಳಿ ಮತ್ತು ಕ್ರಿಸ್‌ಮಸ್‌ನಂತಹ ಎಲ್ಲಾ ಹಬ್ಬಗಳನ್ನು ಆಚರಿಸುತ್ತೇನೆ. ಪತಿ ಹಿಂದೂವಾದರೂ ಮಗ ಬೇರೆ ಧರ್ಮದ ಬಗ್ಗೆ ಕಲಿಯುವ ಬಗ್ಗೆ ಅವರಲ್ಲಿ ಯಾವುದೇ ಆತಂಕ ವಿಲ್ಲ ಎಂದು ಹೇಳಿದ್ದಾರೆ.


ತಂದೆ ಮಗನ ಮುದ್ದಾದ ವಿಡಿಯೋ

ಈ ವಿಡಿಯೋ ತಂದೆ ಮಗನದ್ದು ತುಂಬಾ ಮುದ್ದಾಗಿದೆ. ಆದ್ದರಿಂದ ನಾನು ಅದನ್ನು ಪೋಸ್ಟ್ ಮಾಡಿದ್ದೇನೆ. ನಾನು ಹಿಂದೂವನ್ನು ಮದುವೆಯಾಗಿರುವ ಮುಸ್ಲಿಂ ಎಂದು ಹೆಚ್ಚಿನವರಿಗೆ ತಿಳಿದಿಲ್ಲ ಎಂದು ನಾನು ಭಾವಿಸುತ್ತೇನೆ. ನನ್ನ ಪ್ರಕಾರ ಮಗ ಸಣ್ಣ ವಯಸ್ಸಿನಿಂದಲೇ ಎಲ್ಲ ಆಚರಣೆಗಳನ್ನು ನೋಡುತ್ತಿದ್ದಾನೆ. ಈ ಮುದ್ದಾದ ವಿಡಿಯೋಗಾಗಿ ಟ್ರೋಲ್ ಮಾಡುವುದು ಮೂರ್ಖತನ. ಆ ಜನರು ಕೇವಲ ಬುದ್ಧಿಹೀನರು ಮತ್ತು ಅವರು ಕೇವಲ ದ್ವೇಷವನ್ನು ಹರಡಲು ಅಲ್ಲಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: YouTuber Dhruv Rathee: ಧ್ರುವ ರಾಥಿಯ ಮೋದಿ ವಿರೋಧಿ ವಿಡಿಯೊ ಗೊತ್ತು; ಅವರ ಲವ್‌ ಸ್ಟೋರಿ ಗೊತ್ತಾ?

ಮಗನಿಗೆ ಹಿಂದೂ ಹೆಸರನ್ನು ಇಟ್ಟಿದ್ದೇನೆ. ದೇವರು ಒಬ್ಬನೇ ಎಂದು ನಂಬುವ ಮೂಲಕ ತನ್ನ ಮಗನಿಗೆ ಪ್ರತಿಯೊಂದು ಧರ್ಮವನ್ನು ಕಲಿಸಲು ಬಯಸುತ್ತಾನೆ ಎಂದು ಕಿಶ್ವರ್ ತಿಳಿಸಿದ್ದಾರೆ.

ಅವನು ಮುಸಲ್ಮಾನರ ಟೋಪಿ ಧರಿಸಿ ಮುಂದೆ ಎಲ್ಲವನ್ನೂ ಕೆಟ್ಟದಾಗಿ ಮಾಡುತ್ತಾನೆ ಎನ್ನುವುದು ಅಸಹ್ಯಕರವಾಗಿದೆ. ಹೀಗೆ ಹೇಳುವವರ ಬಗ್ಗೆ ನನಗೆ ಅನುಕಂಪವಿದೆ. ಯಾಕೆಂದರೆ ಮಕ್ಕಳ ಚಿಂತನೆಗಳು ಅವರ ಪಾಲನೆಯಲ್ಲಿರುತ್ತದೆ. ನನ್ನ ಮಗು ಹಾಗೆ ಇರಬೇಕೆಂದು ನಾನು ಬಯಸುವುದಿಲ್ಲ ಮತ್ತು ಅದಕ್ಕಾಗಿಯೇ ನಾನು ಅವನನ್ನು ಎಲ್ಲೆಡೆ ಕರೆದುಕೊಂಡು ಹೋಗುತ್ತೇನೆ. ದೇವರು ಒಬ್ಬನೇ ಎಂದು ನಂಬುವಂತೆ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

Continue Reading

ಸಿನಿಮಾ

Actor Darshan: ʻಡೆವಿಲ್ʼ ಸಿನಿಮಾಗೆ ದರ್ಶನ್‌ ಪಡೆದಿದ್ದು ಬರೋಬ್ಬರಿ 22 ಕೋಟಿ ರೂ.; ಶಾಕ್‌ನಲ್ಲಿ ನಿರ್ಮಾಪಕ!

VISTARANEWS.COM


on

Actor Darshan devil 22 crore taken by producer
Koo

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್‌ ಅವರನ್ನು (Actor Darshan) ಆರು ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಆರೋಪ ಸಾಬೀತಾದರೆ ಅವರನ್ನು ಚಿತ್ರರಂಗದಿಂದ ಬ್ಯಾನ್ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.  ಇನ್ನೇನು ದಚ್ಚು ಫ್ಯಾನ್ಸ್‌ ʻಡೆವಿಲ್‌ʼ ಸಿನಿಮಾ ರಿಲೀಸ್‌ಗೆ ಕಾಯುತ್ತಿರುವಾಗಲೇ ʻದಾಸʼ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದಾರೆ. ಈ ಮುಂಚೆಯೂ ಹಲವು ಪ್ರಕರಣಗಳಲ್ಲಿ ದರ್ಶನ್‌ ಪೊಲೀಸರು ಅತಿಥಿಯಾಗಿದ್ದರೂ ಈ ಬಾರಿ ಗಂಭೀರ ಪ್ರಕರಣವಾಗಿರುವುದರಿಂದ ದರ್ಶನ್‌ಗೆ ಜೈಲು ಶಿಕ್ಷೆ ಗ್ಯಾರಂಟಿ ಎನ್ನಲಾಗುತ್ತಿದೆ. ಇದೀಗ ದರ್ಶನ್‌ ಡೆವಿಲ್‌ ಸಿನಿಮಾಗಾಗಿ 22 ಕೋಟಿ ರೂ. ಸಂಭಾವನೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾಟೇರ ಯಶಸ್ಸಿನ ಬಳಿಕ ಡೆವಿಲ್‌ ಎಂಬ ಸಿನಿಮಾದಲ್ಲಿ ದರ್ಶನ್‌ ನಟಿಸುತ್ತಿದ್ದಾರೆ. ಈ ವರ್ಷ ಚಿತ್ರಮಂದಿರಗಳಿಗೆ ಆಗಮಿಸುವ ನಿರೀಕ್ಷೆಯಿತ್ತು. ಈ ಸಿನಿಮಾದ ಶೂಟಿಂಗ್‌ ಭರದಿಂದ ನಡೆಯುತ್ತಿತ್ತು. ಈ ಚಿತ್ರದ ಗ್ಲಿಂಪ್ಸ್‌ ವಿಡಿಯೋ ಕೂಡ ರಿಲೀಸ್‌ ಮಾಡಲಾಗಿತ್ತು. ಡೆವಿಲ್‌ನಲ್ಲಿ ಬಾಲಿವುಡ್‌ ನಟ ಮಹೇಶ್‌ ಮಂಜ್ರೇಕರ್‌ ಕೂಡ ನಟಿಸುತ್ತಿದ್ದಾರೆ. ಪ್ರಕಾಶ್‌ ವೀರ್‌ ನಿರ್ದೇಶನದ ಡೆವಿಲ್‌ ಸಿನಿಮಾಗೆ ದರ್ಶನ್‌ ಬರೋಬ್ಬರಿ 22 ಕೋಟಿ ರೂ. ಪಡೆದುಕೊಂಡಿದ್ದರು.

ಟೀಸರ್ ನಿಂದಲೇ ಕೌತುಕ ಹುಟ್ಟಿಸಿದ ಡೆವಿಲ್ ಸಿನಿಮಾ ಕೇವಲ 25 ದಿನ ಶೂಟಿಂಗ್ ಆಗಿದೆ. ಮೊದಲ ಶೆಡ್ಯೂಲ್ ಚಿತ್ರೀಕರಣದ ವೇಳೆ ದರ್ಶನ್ ಆಕ್ಷನ್ ಸಿಕ್ವೇನ್ಸ್ ಮಾಡೋದಿಕ್ಕೆ ಹೋಗಿ ಎಡಗೈಯಿ ಮುರಿದುಕೊಂಡರು. ಹೀಗಾಗಿ ದಾಸ ಶಸ್ತ್ರ ಚಿಕಿತ್ಸೆಗೆ ಒಳಗಾದ ಕಾರಣ ಈ ಸಿನಿಮಾ ಶೂಟಿಂಗ್ ಮುಂದಕ್ಕೆ ಹಾಕಲಾಗಿತ್ತು. ಈ ಘಟನೆ ನಡೆಯುವ ಎರಡು ದಿನದ ಹಿಂದೆ ಡೆವಿಲ್ ಚಿತ್ರದ ಎರಡನೇ ಹಂತದ ಶೂಟಿಂಗ್ ಆರಂಭವಾಗಿತ್ತು. ನಿನ್ನೆ ದರ್ಶನ್ ಭಾಗವಹಿಸಬೇಕಿತ್ತು ಅಷ್ಟರಲ್ಲಿ ಡಿ ಬಾಸ್ ಪೊಲೀಸರ ಅತಿಥಿಯಾಗಿದ್ದರು.

ಇದನ್ನೂ ಓದಿ: Actor Darshan: ಆರ್ ಆರ್​​ ನಗರ ವಾಸ್ತು ಸರಿಯಿಲ್ಲ, ಕೇಸುಗಳು ಬೀಳ್ತವೆ ಎಂದಿದ್ದರು ಆರ್ಯವರ್ಧನ್​ ಗುರೂಜಿ; ದರ್ಶನ್ ವಿಷಯದಲ್ಲಿ ಸತ್ಯವಾಯ್ತೇ?

ಈ ಕಡೆ ದರ್ಶನ್ ಅರೆಸ್ಟ್ ಆಗಿದ್ದಾರೆ ಎಂಬ ಸುದ್ದಿ ಕೇಳಿದ ತಕ್ಷಣ ನಿರ್ದೇಶಕ ಪ್ರಕಾಶ್ ಶಾಕ್‌ಗೆ ಒಳಗಾಗಿ ನಿನ್ನೆ ಶೂಟಿಂಗ್‌ವನ್ನು ಸ್ಟಾಪ್ ಮಾಡಿದ್ದಾರೆ ಎನ್ನಲಾಗಿದೆ. ಡೆವಿಲ್ ಚಿತ್ರವನ್ನ ಡಿಸೆಂಬರ್ 25ಕ್ಕೆ ಬಿಡುಗಡೆ ಮಾಡುತ್ತೇವೆ ಎಂದ ನಿರ್ದೇಶಕ ಪ್ರಕಾಶ್ ಕಂಗಾಲು ಆಗಿದ್ದಾರೆ. ಕಾರಣ ದರ್ಶನ್ ಹೊರಗಡೆ ಬರುವರೆಗೆ ಡೆವಿಲ್ ಹೀರೋ ಸಿನಿಮಾ ಶೂಟಿಂಗ್ ಶುರುವಾಗೋದಿಲ್ಲ. ಹಾಗೇ ಡಿಸೆಂಬರ್ ನಲ್ಲಿ ಡೆವಿಲ್ ಚಿತ್ರ ಬಿಡುಗಡೆ ಇಲ್ಲದೆ ಮುಂದಿನ ವರ್ಷಕ್ಕೆ ಹೋಗುತ್ತೆ. ಅಷ್ಟಕ್ಕೂ ದರ್ಶನ್ ಸಿನಿಮಾಗೆ ತೆಗೆದುಕೊಂಡಿರುವ ಸಂಭಾವನೆ ಬರೋಬ್ಬರಿ 22 ಕೋಟಿ ರೂ. ಎನ್ನಲಾಗಿದೆ ಡೆವಿಲ್ ಚಿತ್ರದ ಬಳಿಕ ದರ್ಶನ್ ನಟಿಸಲು ಒಪ್ಪಿಕೊಂಡ ಚಿತ್ರ ಸಿಂಧೂರ ಲಕ್ಷ್ಮಣ.

ಕ್ರಾಂತಿ ಸಿನಿಮಾ ಮಾಡಿದ್ದ ನಿರ್ಮಾಪಕ ಬಿ ಸುರೇಶ್ ನಿರ್ಮಾಣದ ಹಾಗು ತರುಣ್ ಸುಧೀರ್ ನಿರ್ದೇಶನದ ಸಿಂಧೂರು ಲಕ್ಷ್ನಣ ಸಿನಿಮಾ ಶುರುವಾಗಬೇಕಿತ್ತು. ಆದರೆ ದರ್ಶನ್ ಎಡವಟ್ಟಿನಿಂದ ಸಿಂಧೂರ ಲಕ್ಷ್ಮಣ ಸಿನಿಮಾ ಶೂಟಿಂಗ್ ಕೂಡ ಮುಂದಿನ ವರ್ಷಕ್ಕೆ ಹೋಗಲಿದೆ. ಈ ಸಿನಿಮಾ ದರ್ಶನ್ ಪಡೆದಿರೋ ಅಡ್ವಾನ್ಸ್ 3 ಕೋಟಿ ರೂ. ಯಂತೆ.

ಈ ಚಿತ್ರದ ಮಧ್ಯೆ ದರ್ಶನ್ ಮತ್ತೊಂದು ಬಿಗ್ ಬಜೆಟ್ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದರು. ಅದು ಜೋಗಿ ಪ್ರೇಮ್ ನಿರ್ದೇಶನದ ಕನ್ನಡದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೋಡಕ್ಷನ್ ದರ್ಶನ್ ಬಹುಕೋಟೆ ವೆಚ್ಚದ ಸಿನಿಮಾ ಮಾಡುವುದಾಗಿ ಒಪ್ಪಿಕೊಂಡಿದ್ದಾರೆ. ಈ ಚಿತ್ರಕ್ಕೆ ಅಡ್ವಾನ್ಸ್ ಹಣ ಎಂದು ದರ್ಶನ್ 3 ರಿಂದ 5 ಕೋಟಿ ಪಡೆದಿದ್ದಾರೆ ಎನ್ನುವುದು ಗಾಂಧಿನಗರದ ಮಾತು.

ಈ ಪ್ರಾಜೆಕ್ಟ್ ಮುಗಿದ ಮೇಲೆ ದರ್ಶನ್ ಮತ್ತೆ ಜಗ್ಗುದಾದ ಸಿನಿಮಾ ನಿರ್ದೇಶಕರಾದ ರಾಘವೇಂದ್ರ ಹೆಗ್ಡೆ ಜೊತೆ ಸಿನಿಮಾ ಮಾಡ್ತಾ ಇದ್ದಾರೆ.‌ ಸಿಂಧೂರ ಲಕ್ಷ್ಮಣ ಚಿತ್ರ ಶೂಟಿಂಗ್ ಮುಗಿದ ಬಳಿಕ ಈ ಚಿತ್ರದ ಸ್ಟಾರ್ ಆಗೋದು ಬಹುಶಃ 2025ನೇ ವರ್ಷದ ಅಂತ್ಯದಲ್ಲಿ. ಈ ಚಿತ್ರಕ್ಕೆ ದರ್ಶನ್ ಮುಂಗಡ ಹಣ ಎಂದು 5 ಕೋಟಿ ರೂ. ಪಡೆದಿದ್ದಾರೆ ಎನ್ನಲಾಗಿದೆ.

ಈ ಚಿತ್ರಗಳ ಬಳಿಕ ದರ್ಶನ್ ತೆಲುಗಿನ ಅತ್ತಾರಿಂಟಿಕಿ ದಾರೇದಿ ಚಿತ್ರದ ನಿರ್ಮಾಪಕರಾದ ಬಿ.ವಿ.ಎಸ್. ಎನ್ ಪ್ರಸಾದ್ ಜೊತೆ ಸಿನಿಮಾ ಮಾತಕಥೆ ಆಗಿ 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರಂತೆ‌. ಈ ಸಿನಿಮಾ ಶುರುವಾಗೋದಿಕ್ಕೆ ಇನ್ನು ಒಂದು ವರ್ಷ ಆಗುತ್ತೆ. ಇದರ ಜತೆಗೆ ತಮಿಳು ನಿರ್ಮಾಪಕ ರಮೇಶ್ ಪಿಳ್ಳೈ ಜೊತೆ ಚಿತ್ರ ಮಾಡುವುದಾಗಿ ದರ್ಶನ್ ಮಾತುಕತೆ ಆಗಿತ್ತು. ಈ ಸಿನಿಮಾ ಮಾಡುವುದಾಗಿ ಅಡ್ವಾನ್ಸ್ ಹಣ ಅಂತಾ 25 ಲಕ್ಷ ಪಡೆದಿದ್ದರಂತೆ‌. ಹಾಗೇ ಮತ್ತೊಬ್ಬ ಹೈದರಾಬಾದ್ ನಿರ್ಮಾಪಕ ರಘುನಾಥ್ ಎಂಬುವರ ಜತೆ ಸಿನಿಮಾ ಮಾತುಕತೆ ಆಗಿದೆ‌. ಈ ಚಿತ್ರಕ್ಕೂ ದರ್ಶನ್ 25 ಲಕ್ಷ ಅಡ್ವಾನ್ಸ್ ಹಣ ಪಡೆದಿದ್ದಾರಂತೆ‌. ಇದೀಗ ದರ್ಶನ್‌ ಅವರನ್ನು ನಂಬಿಕೊಂಡು ಸಿನಿಮಾಗಳಿಗೆ ಈಗಾಗಲೇ ಕೋಟಿಗಟ್ಟಲೆ ಹಣ ಹೂಡಿಕೆ ಮಾಡಿರುವ ನಿರ್ಮಾಪಕರ ಗತಿ ಏನು? ಹಾಗೇ ಸಿನಿಮಾಗಳೆ ಬರುತ್ತಿಲ್ಲ ಎಂಬ ಗಾಸಿಪ್‌ಗಳ ಮಧ್ಯೆ ವರ್ಷಕ್ಕೆ ಒಂದೆರಡು ಸಿನಿಮಾ ಮಾಡುತ್ತಿದ್ದ ದರ್ಶನ್‌ ಜೈಲು ಪಾಲಾದರೆ ಏನು ಕಥೆ? ಎಂದು ಫ್ಯಾನ್ಸ್‌ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

Continue Reading

ಸ್ಯಾಂಡಲ್ ವುಡ್

Duniya Vijay: ವಿಚ್ಛೇದನ ಕೋರಿ ದುನಿಯಾ ವಿಜಯ್ ಸಲ್ಲಿಸಿದ್ದ ಅರ್ಜಿ ವಜಾ

Duniya Vijay: ಕ್ರೌರ್ಯದ ಆಧಾರದ ಮೇಲೆ ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಇದನ್ನು ಸಾಬೀತುಪಡಿಸಲು ವಿಫಲವಾದ ಕಾರಣ ಅರ್ಜಿ ವಜಾ ಆಗಿದೆ.ಸದ್ಯ ಕೀರ್ತಿ ಗೌಡ ಅವರೊಂದಿಗೆ ದಾಂಪತ್ಯ ಜೀವನ ಮುಂದುವರಿಸಿದ್ದಾರೆ. ಆದರೆ ಈವರೆಗೂ ವಿಜಯ್‌ ಹಾಗೂ ನಾಗರತ್ನ ಡಿವೋರ್ಸ್‌ ಪಡೆದಿರಲಿಲ್ಲ.

VISTARANEWS.COM


on

Duniya Vijay divorce filed was dismissed
Koo

ಬೆಂಗಳೂರು: ನಟ ದುನಿಯಾ ವಿಜಯ್ (Duniya Vijay) ಅವರು ಪತ್ನಿ ನಾಗರತ್ನ ಅವರಿಂದ ವಿಚ್ಛೇದನ ಬೇಕು ಎಂದು ಅರ್ಜಿ ಸಲ್ಲಿಸಿದ್ದರು. 2018ರಲ್ಲಿಯೇ ಅರ್ಜಿ ಸಲ್ಲಿಸಲಾಗಿದ್ದು, ಈಗ ವಜಾ ಆಗಿದೆ. ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಅವರಿಂದ ವಿಜಯ್‌ ದೂರವಾಗಿದ್ದಾರೆ. ಸದ್ಯ ಕೀರ್ತಿ ಗೌಡ ಅವರೊಂದಿಗೆ ದಾಂಪತ್ಯ ಜೀವನ ಮುಂದುವರಿಸಿದ್ದಾರೆ. ಆದರೆ ಈವರೆಗೂ ವಿಜಯ್‌ ಹಾಗೂ ನಾಗರತ್ನ ಡಿವೋರ್ಸ್‌ ಪಡೆದಿರಲಿಲ್ಲ.

ದುನಿಯಾ ವಿಜಯ್ ಪರ ವಕೀಲೆ ರಾಜ ರಾಜೇಶ್ವರಿ ಮಾಧ್ಯಮದ ಮುಂದೆ ಈ ಬಗ್ಗೆ ಮಾತನಾಡಿ ʻʻಅರ್ಜಿ ವಜಾ ಆಗಿದೆ. ವಿಜಯ್ ಅವರನ್ನು ಸಂಪರ್ಕ ಮಾಡಿ ಮುಂದೆ ಏನು ಮಾಡಬೇಕು ಎಂದು ಹೇಳುತ್ತೇವೆ. ವಿಜಯ್ ಅವರು ಶೂಟಿಂಗ್‌ನಲ್ಲಿ ಇದ್ದಾರೆ. ವಿಜಯ್ ಅವರಿಗೆ ಈ ಬಗ್ಗೆ ಇನ್ನೂ ಹೇಳಿಲ್ಲ. ಮಕ್ಕಳ ಫ್ಯೂಚರ್ ದೃಷ್ಟಿಯಿಂದ ಮಾತಾಡಿ ಹೇಳುತ್ತೇವೆ. ಇದು ಇಲ್ಲಿಗೆ ಮುಗಿದಿಲ್ಲ. ಹೈಕೋರ್ಟ್‌ಗೆ ಹೋಗಬೇಕಾ ಎನ್ನುವುದರ ಬಗ್ಗೆ ವಿಜಯ್ ಅವರ ಜತೆ ಚರ್ಚೆ ಮಾಡಿ ಹೇಳುತ್ತೇವೆʼʼಎಂದರು.

ಕ್ರೌರ್ಯದ ಆಧಾರದ ಮೇಲೆ ನಟ ದುನಿಯಾ ವಿಜಯ್ ಅವರು ಪತ್ನಿ ನಾಗರತ್ನ ವಿರುದ್ಧ ಅರ್ಜಿ ಸಲ್ಲಿಸಿದ್ದರು. ಇದನ್ನು ಸಾಬೀತುಪಡಿಸಲು ವಿಫಲವಾದ ಕಾರಣ ಅರ್ಜಿ ವಜಾ ಆಗಿದೆ. ಬೆಂಗಳೂರಿನ ಶಾಂತಿನಗರ ಕೌಟುಂಬಿಕ ನ್ಯಾಯಾಲಯ ಆದೇಶ ನೀಡಿದೆ.

ಇದನ್ನೂ ಓದಿ: Duniya Vijay: ಇಂದು ದುನಿಯಾ ವಿಜಯ್‌-ನಾಗರತ್ನ ವಿಚ್ಛೇದನ ತೀರ್ಪು, ಕೀರ್ತಿ ಗೌಡ ಜತೆಗಿನ ದಾಂಪತ್ಯಕ್ಕೆ ಸಿಗುವುದೇ ಅಂಕಿತ?

2019ರಲ್ಲಿ ಮಹಿಳಾ ಆಯೋಗದ ಮುಂದೆ ದುನಿಯಾ ವಿಜಯ್‌ ಅವರು ‘ನಾಗರತ್ನ ಜತೆ ಬಾಳಲು ನನ್ನಿಂದ ಸಾಧ್ಯವಿಲ್ಲ’ ಎಂದು ವಿಜಯ್ ಹೇಳಿದ್ದರಂತೆ. ಜತೆಗೆ ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತೇನೆ. ನಾಗರತ್ನಗೆ ಜೀವನಾಂಶ ನೀಡಿದ್ದೇನೆ ಎಂದಿದ್ದರು. ಆದರೆ ನಾಗರತ್ನ ಮಾತ್ರ ಪ್ರತಿ ಸಲವೂ ಕೋರ್ಟ್‌ಗೆ ಬಂದಾಗ ಗಂಡ ಬೇಕು ಎಂದು ಹೇಳುತ್ತಿದ್ದರಂತೆ.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗರತ್ನ ವಿರುದ್ಧ ಎಫ್‍ಐಆರ್

ನಟ ದುನಿಯಾ ವಿಜಯ್ ಅವರ ಎರಡನೇ ಪತ್ನಿ ಕೀರ್ತಿಗೌಡ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಪತ್ನಿ ನಾಗರತ್ನ ವಿರುದ್ಧ ಎಫ್‍ಐಆರ್ ಕೂಡ ದಾಖಲಾಗಿತ್ತು. ದುನಿಯಾ ವಿಜಯ್ ಜೈಲು ಪಾಲಾಗಿದ್ದ ಸಂದರ್ಭದಲ್ಲಿ ಕೀರ್ತಿಗೌಡ ಅವರ ಮನೆಗೆ ಏಕಾಏಕಿ ನುಗ್ಗಿ ನಾಗರತ್ನ ಕೀರ್ತಿ ಮೇಲೆ ಹಲ್ಲೆ ನಡೆಸಿದ್ದರು. ಇದರ ಸತ್ಯಾಸತ್ಯತೆ ಸಿಸಿಟಿವಿ ಕ್ಯಾಮರಾ ಪರಿಶೀಲನೆ ಸಂದರ್ಭದಲ್ಲಿ ಗೊತ್ತಾಗಿದ್ದು ಅದರ ಆಧಾರದ ಮೇಲೆ ಪೊಲೀಸರು ಕೇಸು ದಾಖಲಿಸಿದ್ದರು.

ಸುಮಾರು ಎರಡೂವರೆ ವರ್ಷದ ಹಿಂದೆ ಮನಸ್ತಾಪ

ಎಲ್ಲರಿಗೂ ತಿಳಿದಿರುವಂತೆ ದುನಿಯಾ ವಿಜಯ್ ಮತ್ತು ನಾಗರತ್ನ ಅವರ ಮಧ್ಯೆ ಸುಮಾರು ಎರಡೂವರೆ ವರ್ಷದ ಹಿಂದೆ ಮನಸ್ತಾಪ ಉಂಟಾಗಿ, ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಇಬ್ಬರು ವಿಚ್ಛೇದನಕ್ಕೆ ಮುಂದಾಗಿದ್ದರು. ಆದರೆ , ಅಂತಿಮ ಕ್ಷಣದಲ್ಲಿ ಇಬ್ಬರು ಒಪ್ಪಂದ ಮಾಡಿಕೊಂಡು ಮತ್ತೆ ಒಟ್ಟಿಗೆ ಜೀವನ ನಡೆಸಲು ನಿರ್ಧರಿಸಿದ್ದರು

ಅಂದು ಕೋರ್ಟ್ ನಲ್ಲಿ, ವಕೀಲರ ಮುಂದೆ ದುನಿಯಾ ವಿಜಿ ಮತ್ತು ನಾಗರತ್ನ ಅವರು ಒಪ್ಪಂದ ಮಾಡಿಕೊಂಡಿದ್ದರಂತೆ. ಅದನ್ನ ಸ್ವತಃ ವಿಜಯ್‌ ಅವರೇ ಹೇಳಿದ್ದಾರೆ. ತಂದೆ-ತಾಯಿಯನ್ನು ಚೆನ್ನಾಗಿ ನೋಡ್ಕೋಬೇಕು. ಮನೆಯಲ್ಲಿ ನೆಮ್ಮದಿಯಾಗಿರಬೇಕು ಎಂದು ಷರತ್ತು ವಿಧಿಸಿ ರಾಜಿಯಾಗಿದ್ದೆ. ಆದರೆ, ಅಲ್ಲಿಂದ ಬಂದ ಮೇಲೂ ನಮ್ಮ ಮಧ್ಯೆ ಬಾಂಧವ್ಯ ಸರಿಯಾಗಿಲ್ಲ. ಹಾಗಾಗಿ ಬೇರೆ ಹೋಗಲು ನಿರ್ಧರಿಸಿದೆ” ಎಂದು ನಟ ವಿಜಯ್‌ ಈ ಮುಂಚೆ ತಿಳಿಸಿದ್ದರು. ಆದರೆ ಡಿವೋರ್ಸ್‌ ನೀಡಲು ವಜಯ್‌ ಮುಂದಾಗಿರಲಿಲ್ಲ. ಬೇರೆ ಮದುವೆ ಆಗುವುದಾಗಿ ಹೇಳಿ, ಕೀರ್ತಿ ಗೌಡ ಅವರನ್ನ ವಿವಾಹ ಮಾಡಿಕೊಂಡು ವಿಜಯ್‌ ಜೀವನ ನಡೆಸುತ್ತಿದ್ದರು.

Continue Reading
Advertisement
Junk Food Side Effects
ಆರೋಗ್ಯ12 mins ago

Junk Food Side Effects: ಗೇಮಿಂಗ್‌ ದಾಸರಾದ ಮಕ್ಕಳು ಜಂಕ್‌ ಫುಡ್‌ ವ್ಯಸನಿಗಳಾಗುವ ಸಂಭವ ಹೆಚ್ಚು!

Narendra Modi
ಪ್ರಮುಖ ಸುದ್ದಿ23 mins ago

Narendra Modi: ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಯ ಅಪುಲಿಯಾಗೆ ತಲುಪಿದ ಪ್ರಧಾನಿ ಮೋದಿ

karnataka weather Forecast
ಮಳೆ42 mins ago

Karnataka Weather : ಬೆಂಗಳೂರಲ್ಲಿ ಮುಂದುವರಿಯಲಿದೆ ಭರ್ಜರಿ ಮಳೆ; ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Amith Shah
ಪ್ರಮುಖ ಸುದ್ದಿ50 mins ago

Amit Shah: ತಮಿಳಿಸೈಗೆ ಅಮಿತ್ ಶಾ ಬೈಗುಳದ ವಿಡಿಯೋ; ವಿವಾದಕ್ಕೆ ತೆರೆ ಎಳೆದ ತಮಿಳುನಾಡು ಬಿಜೆಪಿ ನಾಯಕಿ

Leg Cramps At Night
ಆರೋಗ್ಯ1 hour ago

Leg Cramps At Night: ರಾತ್ರಿ ಮಲಗಿದಾಗ ಕಾಡುವ ಕಾಲುನೋವಿಗೆ ಇದೆ ಪರಿಹಾರ!

Dina Bhavishya
ಭವಿಷ್ಯ2 hours ago

Dina Bhavishya: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ

Jammu Kashmir
ದೇಶ7 hours ago

Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Forest department agrees to give 500 acres for yEttina hole project work says DCM DK Shivakumar
ಕರ್ನಾಟಕ7 hours ago

DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

Maharaj
ಸಿನಿಮಾ8 hours ago

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

ISIS Terrorists
ಕರ್ನಾಟಕ9 hours ago

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ7 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌