ಉತ್ತರಪ್ರದೇಶದಲ್ಲಿ 80,000 ಕೋಟಿ ರೂ. ವೆಚ್ಚದ 1,406 ಯೋಜನೆಗಳಿಗೆ ಪ್ರಧಾನಿ ಮೋದಿ ಇಂದು ಶಂಕುಸ್ಥಾಪನೆ - Vistara News

ದೇಶ

ಉತ್ತರಪ್ರದೇಶದಲ್ಲಿ 80,000 ಕೋಟಿ ರೂ. ವೆಚ್ಚದ 1,406 ಯೋಜನೆಗಳಿಗೆ ಪ್ರಧಾನಿ ಮೋದಿ ಇಂದು ಶಂಕುಸ್ಥಾಪನೆ

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಪ್ರದೇಶದಲ್ಲಿ 80 ಸಾವಿರ ಕೋಟಿ ರೂ. ವೆಚ್ಚದ ಅನೇಕ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಉತ್ತರಪ್ರದೇಶದ ಆರ್ಥಿಕ ಬೆಳವಣಿಗೆಗೆ ಇದು ಮಹತ್ವದ್ದು.

VISTARANEWS.COM


on

modi yogi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಉತ್ತರಪ್ರದೇಶದಲ್ಲಿ ಶುಕ್ರವಾರ 80,000 ಕೋಟಿ ರೂ. ವೆಚ್ಚದ 1,406 ಯೋಜನೆಗಳಿಗೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಹಲವಾರು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.

” ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಉತ್ತರಪ್ರದೇಶ ಹೊಸ ಉತ್ತರಪ್ರದೇಶವಾಗುತ್ತಿದೆ. ಹೂಡಿಕೆಗೆ ದೇಶದಲ್ಲೇ ಉತ್ತಮ ತಾಣವಾಗುತ್ತಿದೆ. ಹೂಡಿಕೆದಾರರ ಚಿತ್ತ ಉತ್ತರಪ್ರದೇಶದ ಕಡೆಗೆ ಹರಿದಿದೆ. ಇದಕ್ಕೆ ಈ ಯೋಜನೆಗಳ ಶಂಕುಸ್ಥಾಪನೆಯೇ ಸಾಕ್ಷಿಯಾಗಿದೆʼʼ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಟ್ವೀಟ್‌ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 11 ಗಂಟೆಗೆ ಲಖನೌಗೆ ತಲುಪಲಿದ್ದು, ಉತ್ತರಪ್ರದೇಶ ಹೂಡಿಕೆದಾರರ ಶೃಂಗದ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಕೃಷಿ, ಎಲೆಕ್ಟ್ರಾನಿಕ್ಸ್‌, ಮಾಹಿತಿ ತಂತ್ರಜ್ಞಾನ, ಎಂಎಸ್‌ಎಂಇ, ಉತ್ಪಾದನೆ, ನವೀಕರಿಸಬಹುದಾದ ಇಂಧನ, ರಕ್ಷಣೆ, ಏರೊಸ್ಪೇಸ್, ಜವಳಿ ಇತ್ಯಾದಿ ಕ್ಷೇತ್ರಗಳಿಗೆ ಸಂಬಂಧಿಸಿದ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಉತ್ತರಪ್ರದೇಶವನ್ನು ಒಂದು ಟ್ರಿಲಿಯನ್‌ ಡಾಲರ್‌ ಆರ್ಥಿಕತೆಯನ್ನಾಗಿಸಲು ಇದು ಮುಖ್ಯ.

ಕಳೆದ ಐದು ವರ್ಷಗಳಲ್ಲಿ ಉತ್ತರಪ್ರದೇಶದಲ್ಲಿ ಮಾಹಿತಿ ತಂತ್ರಜ್ಞಾನದ ದಿಗ್ಗಜ ಕಂಪನಿಗಳು ಭಾರಿ ಹೂಡಿಕೆಯನ್ನು ಮಾಡಿವೆ. ಎಲೆಕ್ಟ್ರಾನಿಕ್ಸ್‌ ಮತ್ತು ಆಹಾರ ಸಂಸ್ಕರಣೆ ವಲಯದ ಉದ್ದಿಮೆಗಳೂ ತಲೆ ಎತ್ತಿಕೊಂಡಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಸಮವಸ್ತ್ರ; ನಿಯಮದಲ್ಲಿ ಬದಲಾವಣೆ: ಕಾರಣವೇನು?

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಕೆಲವೊಂದು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ಜತೆಗೆ ಅರ್ಚಕರ ಸಮವಸ್ತ್ರ ಮತ್ತು ಬಣ್ಣ ಬದಲಾಗಿದೆ. ಅರ್ಚಕರು ದೇವಾಲಯಕ್ಕೆ ಮೊಬೈಲ್ ಫೋನ್‌ಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಹೊಸ ಡ್ರೆಸ್‌ ಕೋಡ್‌ ಜುಲೈ 1ರಿಂದಲೇ ಜಾರಿಗೆ ಬಂದಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

VISTARANEWS.COM


on

Ayodhya Ram Mandir
Koo

ಲಕ್ನೋ: ಅಯೋಧ್ಯೆ ರಾಮ ಮಂದಿರ (Ayodhya Ram Mandir)ದ ಕೆಲವೊಂದು ನಿಯಮಗಳಲ್ಲಿ ಬದಲಾವಣೆ ತರಲಾಗಿದೆ. ಜತೆಗೆ ಅರ್ಚಕರ ಸಮವಸ್ತ್ರ ಮತ್ತು ಬಣ್ಣ ಬದಲಾಗಿದೆ. ಅರ್ಚಕರು ದೇವಾಲಯಕ್ಕೆ ಮೊಬೈಲ್ ಫೋನ್‌ಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ ಎಂದು ದೇವಾಲಯದ ಟ್ರಸ್ಟ್‌ನ ಅಧಿಕಾರಿಗಳು ತಿಳಿಸಿದ್ದಾರೆ. ಇಲ್ಲಿಯವರೆಗೆ ಗರ್ಭಗುಡಿಯ ಪುರೋಹಿತರು ಕೇಸರಿ ಬಟ್ಟೆಗಳನ್ನು ಅಂದರೆ ಕೇಸರಿ ಪೇಟ, ಕೇಸರಿ ಕುರ್ತಾ ಮತ್ತು ಧೋತಿ ಧರಿಸುತ್ತಿದ್ದರು. ಇದೀಗ ಪುರೋಹಿತರು ಹಳದಿ (ಪಿತಾಂಬರಿ) ಬಣ್ಣದ ಧೋತಿ, ಅದೇ ಬಣ್ಣದ ಕುರ್ತಾ ಮತ್ತು ಪೇಟ ಧರಿಸುತ್ತಿದ್ದಾರೆ.

ಹೊಸ ಡ್ರೆಸ್‌ ಕೋಡ್‌ ಜುಲೈ 1ರಿಂದಲೇ ಜಾರಿಗೆ ಬಂದಿದೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಹೊಸ ಪುರೋಹಿತರಿಗೆ ಹಳದಿ ಪೇಟ ಕಟ್ಟಲು ತರಬೇತಿ ನೀಡಲಾಗಿದೆ ಎಂದೂ ಅವರು ಹೇಳಿದ್ದಾರೆ.

ಹೇಗಿದೆ ಹೊಸ ಸಮವಸ್ತ್ರ?

‘ಚೌಬಂದಿ’ ಎಂದು ಕರೆಯಲ್ಪಡುವ ಹೊಸ ಕುರ್ತಾದಲ್ಲಿ ಯಾವುದೇ ಬಟನ್‌ ಇರುವುದಿಲ್ಲ ಮತ್ತು ಅದನ್ನು ಕಟ್ಟಲು ದಾರವನ್ನು ಬಳಸಲಾಗುತ್ತದೆ. ಹಳದಿ ಬಣ್ಣದ ‘ಧೋತಿ’ಯನ್ನು ಹತ್ತಿ ಬಟ್ಟೆಯಿಂದ ತಯಾರಿಸಲಾಗುತ್ತದೆ. ಇದು ಪಾದವನ್ನೂ ಮುಚ್ಚಲಿದೆ. ದೇವಾಲಯದಲ್ಲಿ ಮುಖ್ಯ ಅರ್ಚಕರು ಮತ್ತು ನಾಲ್ವರು ಸಹಾಯಕ ಅರ್ಚಕರು ಇದ್ದಾರೆ. ಈಗ ಪ್ರತಿ ಸಹಾಯಕ ಪುರೋಹಿತರೊಂದಿಗೆ ಐವರು ಪುರೋಹಿತರು ತರಬೇತಿ ಪಡೆಯುತ್ತಿದ್ದಾರೆ.

ಪುರೋಹಿತರ ಪ್ರತಿ ತಂಡವು ಮುಂಜಾನೆ 3.30ರಿಂದ ರಾತ್ರಿ 11ರವರೆಗೆ ಪಾಳಿಯಲ್ಲಿ ಐದು ಗಂಟೆಗಳ ಕಾಲ ಸೇವೆ ಸಲ್ಲಿಸುತ್ತಿದೆ. ʼʼರಾಮ ಮಂದಿರದಲ್ಲಿ ಅರ್ಚಕರಿಗೆ ಹೊಸ ಡ್ರೆಸ್ ಕೋಡ್ ಜಾರಿಗೆ ತರಲಾಗಿದೆ. ಈಗ ಮುಖ್ಯ ಅರ್ಚಕರು, ನಾಲ್ವರು ಸಹಾಯಕ ಪುರೋಹಿತರು ಮತ್ತು 20 ತರಬೇತಿ ಪುರೋಹಿತರು ಸೇರಿದಂತೆ ಎಲ್ಲ ಪುರೋಹಿತರು ಹಳದಿ ಬಣ್ಣದ ತಲೆಯ ಸಫಾ, ಚೌಬಂದಿ ಮತ್ತು ಧೋತಿ ಧರಿಸಲಿದ್ದಾರೆ” ಎಂದು ರಾಮ ಮಂದಿರದ ಸಹಾಯಕ ಅರ್ಚಕ ಸಂತೋಷ್ ಕುಮಾರ್ ತಿವಾರಿ ತಿಳಿಸಿದ್ದಾರೆ.

ಕಾರಣವೇನು?

ಏಕರೂಪತೆಯನ್ನು ಕಾಪಾಡಿಕೊಳ್ಳಲು ಮತ್ತು ಭದ್ರತೆಯನ್ನು ಖಚಿತಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಅರ್ಚಕರು ತಮ್ಮ ಫೋನ್‌ಗಳನ್ನು ದೇವಾಲಯಗಳಿಗೆ ಕೊಂಡೊಯ್ಯುವುದನ್ನು ನಿಷೇಧಿಸಿದ್ದು ಕೂಡ ಭದ್ರತಾ ಕ್ರಮದ ಒಂದು ಭಾಗ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಇತ್ತೀಚೆಗೆ ದೇವಾಲಯದ ಚಿತ್ರಗಳು ಆನ್‌ಲೈನ್‌ನಲ್ಲಿ ಸೋರಿಕೆಯಾದ ಹಿನ್ನೆಲೆಯಲ್ಲಿ ಅಧಿಕಾರಿಗಳು ಈ ನಿಯಮ ಜಾರಿಗೊಳಿಸಿದ್ದಾರೆ.

ಕಡಿಮೆಯಾದ ಭಕ್ತರ ದಟ್ಟಣೆ

ಅಯೋಧ್ಯೆ ರಾಮಮಂದಿರ ಹಿಂದೂಗಳ ಪವಿತ್ರ ಯಾತ್ರಾ ಸ್ಥಳವಾಗಿ ಹೊರಹೊಮ್ಮಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುವುದು ಕೋಟ್ಯಂತರ ಹಿಂದೂಗಳ ಕನಸಾಗಿತ್ತು. ಹಾಗಾಗಿ ರಾಮಮಂದಿರ ಉದ್ಘಾಟನೆಯಾದ ಬೆನ್ನಿಗೇ ಲಕ್ಷಾಂತರ ಸಂಖ್ಯೆಯ ಭಕ್ತರು ರಾಮನ ದರ್ಶನಕ್ಕೆ ಬರುತ್ತಿದ್ದರು. ಆದರೆ ಮಂದಿರ ಉದ್ಘಾಟನೆಯಾಗಿ ಈಗಾಗಲೇ ಆರು ತಿಂಗಳು ಕಳೆದಿರುವುದರಿಂದ ಭಕ್ತರ ಸಂಖ್ಯೆ ಸಹಜವಾಗಿಯೇ ಕಡಿಮೆಯಾಗುತ್ತಿದೆ.

ಕಳೆದ ಆರು ವಾರಗಳಲ್ಲಿ ಅಯೋಧ್ಯೆ ನಗರಕ್ಕೆ ಬರುವ ವಿಮಾನಗಳು, ರೈಲುಗಳು ಮತ್ತು ಬಸ್ ಸೇವೆ ಗಮನಾರ್ಹವಾಗಿ ಕಡಿಮೆಯಾಗುತ್ತ ಬಂದಿದೆ. ಕೆಲವು ವಿಶೇಷ ರೈಲುಗಳ ಕಾರ್ಯಾಚರಣೆ ನಿಲ್ಲಿಸಲಾಗಿದೆ. ಇತರ ರಾಜ್ಯಗಳಿಂದ ಅಯೋಧ್ಯೆಗೆ ಬರುವ ವಿಶೇಷ ಬಸ್ಸುಗಳ ಸಂಖ್ಯೆಯಲ್ಲೂ ಕಡಿತವಾಗಿದೆ. ಜನವರಿ 22ರಂದು ಪ್ರಾಣ ಪ್ರತಿಷ್ಠಾ ಸಮಾರಂಭ ನಡೆದ ನಂತರ ಅಯೋಧ್ಯೆಗೆ ಬರುವ ಭಕ್ತರ ಸಂಖ್ಯೆ ವಿಪರೀತ ಹೆಚ್ಚಾಗಿತ್ತು. ಜನವರಿಯಿಂದ ಮಾರ್ಚ್ 2024ರವರೆಗೆ ಪ್ರತಿದಿನ ಸುಮಾರು 1.5 ಲಕ್ಷ ಭಕ್ತರು ಭೇಟಿ ನೀಡುತ್ತಿದ್ದರು. ಆದರೆ ಏಪ್ರಿಲ್‌ನಿಂದ ಭಕ್ತರ ಸಂಖ್ಯೆ ಕಡಿಮೆಯಾಗುತ್ತ ಬಂತು. 

ಇದನ್ನೂ ಓದಿ: Samrat Choudhary: ಅಯೋಧ್ಯೆಯಲ್ಲಿ ತಲೆ ಬೋಳಿಸಿಕೊಂಡು ರಾಮನಿಗೆ ಪೇಟ ಅರ್ಪಿಸಿದ ಬಿಹಾರ ಡಿಸಿಎಂ! ಇದಕ್ಕಿದೆ ವಿಶೇಷ ಕಾರಣ!

Continue Reading

ದೇಶ

Fire accident: ಮಾಲ್‌ನಲ್ಲಿ ಭೀಕರ ಅಗ್ನಿ ಅವಘಡ; ಭಾರೀ ಸಾವು-ನೋವಿನ ಶಂಕೆ

Fire accident: ಮಾಲ್‌ನಲ್ಲಿದ್ದ ಬಟ್ಟೆಯ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡು ಏಕಾಏಕಿ ಇಡೀ ಮಾಲ್‌ಗೆ ಆವರಿಸಿತ್ತು. ದಟ್ಟ ಹೊಗೆ ತುಂಬಿಕೊಳ್ಳುತ್ತಿದ್ದಂತೆ ಗಾಬರಿಗೊಂಡ ಜನ ಸ್ಥಳದಿಂದ ಓಡಲು ಶುರು ಮಾಡಿದ್ದಾರೆ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನ ನಡೆಸಿವೆ. ತಕ್ಷಣ ಮಾಲ್‌ನ ಒಳಗಿದ್ದ ಜನರನ್ನು ಸುರಕ್ಷಿತವಾಗಿ ಹೊರ ಕರೆ ತರುವಲ್ಲಿ ಯಶಸ್ವಿ ಆಗಿದೆ.

VISTARANEWS.COM


on

Fire accident
Koo

ನೋಯ್ಡಾ: ಉತ್ತರಪ್ರದೇಶದ ಮಾಲ್‌ವೊಂದರಲ್ಲಿ ಭಾರೀ ಅಗ್ನಿ ಅವಘಡ(Fire accident) ಸಂಭವಿಸಿದೆ. ನೋಯ್ಢಾದ ಲಾಜಿಕ್ಸ್‌ ಮಾಲ್‌(Logix Mall)ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಇದುವರೆಗೆ ಯಾವುದೇ ಸಾವು ನೋವು ಪ್ರಕರಣಗಳು ವರದಿ ಆಗಿಲ್ಲ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಜನರನ್ನು ಸುರಕ್ಷಿತವಾಗಿ ಹೊರಗೆ ಕರೆತರಲಾಗುತ್ತಿದೆ.

ಮಾಲ್‌ನಲ್ಲಿದ್ದ ಬಟ್ಟೆಯ ಶೋರೂಂನಲ್ಲಿ ಬೆಂಕಿ ಕಾಣಿಸಿಕೊಂಡು ಏಕಾಏಕಿ ಇಡೀ ಮಾಲ್‌ಗೆ ಆವರಿಸಿತ್ತು. ದಟ್ಟ ಹೊಗೆ ತುಂಬಿಕೊಳ್ಳುತ್ತಿದ್ದಂತೆ ಗಾಬರಿಗೊಂಡ ಜನ ಸ್ಥಳದಿಂದ ಓಡಲು ಶುರು ಮಾಡಿದ್ದಾರೆ. ಘಟನೆ ಬಗ್ಗೆ ವರದಿಯಾಗುತ್ತಿದ್ದಂತೆ ಪೊಲೀಸರು ಅಗ್ನಿ ಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಪ್ರಯತ್ನ ನಡೆಸಿವೆ. ತಕ್ಷಣ ಮಾಲ್‌ನ ಒಳಗಿದ್ದ ಜನರನ್ನು ಸುರಕ್ಷಿತವಾಗಿ ಹೊರ ಕರೆ ತರುವಲ್ಲಿ ಯಶಸ್ವಿ ಆಗಿದೆ.

ಇನ್ನು ಘಟನಾ ಸ್ಥಳದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದು, ಒಳಗೆ ಹಲವಾರು ಜನ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಈ ಅಗ್ನಿ ಅವಘಡಕ್ಕೆ ನಿಜವಾದ ಕಾರಣ ಏನೆಂಬುದು ತಿಳಿದಿಲ್ಲ. ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ದೆಹಲಿಯ ವಿವೇಕ್‌ ವಿಹಾರ್‌ನಲ್ಲಿರುವ ನ್ಯೂ ಬಾರ್ನ್‌ ಬೇಬಿ ಕೇರ್‌ ಆಸ್ಪತ್ರೆ(Hospital)ಯ ಕಳೆದ ತಿಂಗಳು ಏಕಾಏಕಿ ಅಗ್ನಿ ಅವಘಡ ಸಂಭವಿಸಿದ್ದು, ವೆಂಟಿಲೇಟರ್‌ನಲ್ಲಿದ್ದ ಮಗು ಸೇರಿದಂತೆ ಒಟ್ಟು 7 ಮಕ್ಕಳು ಸಾವನ್ನಪ್ಪಿದ್ದರು. ಇನ್ನು ಘಟನೆಯಲ್ಲಿ 12 ಮಕ್ಕಳನ್ನು ರಕ್ಷಿಸಲಾಗಿತ್ತು. ಮೂರು ಅಂತಸ್ತಿನ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನೋಡ ನೋಡುತ್ತಿದ್ದಂತೆ ಬೆಂಕಿ ಕೆನ್ನಾಲೆ ವ್ಯಾಪಿಸುತ್ತಲೇ ಹೋಗಿತ್ತು. ತಕ್ಷಣ ಅಗ್ನಿ ಶಾಮಕದಳಕ್ಕೆ ಕರೆ ಮಾಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕದಳ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಬೆಂಕಿಯ ಜ್ವಾಲೆಗೆ 7 ಜನ ಮಕ್ಕಳು ಬಲಿಯಾಗಿದ್ದಾರೆ.

ಇದಕ್ಕೂ ಮುನ್ನ ಗುಜರಾತ್‌ನ ರಾಜ್‌ಕೋಟ್‌ (Rajkot) ನಗರದಲ್ಲಿರುವ ಗೇಮಿಂಗ್‌ ಜೋನ್‌ (Gaming Zone) ಒಂದರಲ್ಲಿ ಶನಿವಾರ (ಮೇ 25) ಸಂಜೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 27ಜನ ಮೃತಪಟ್ಟಿದ್ದರು. 9 ಮಕ್ಕಳು, ಮಹಿಳೆಯರು ಸೇರಿ 27 ಮಂದಿ ಮೃತಪಟ್ಟಿರುವ ಪ್ರಕರಣವು ದೇಶವನ್ನೇ ಬೆಚ್ಚಿಬೀಳಿಸಿತ್ತು.

ಇದನ್ನೂ ಓದಿ:Hathras Stampede: ಹತ್ರಾಸ್‌ನಲ್ಲಿ ಕಾಲ್ತುಳಿತ; 6 ಜನರನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸರು

Continue Reading

ಶಿಕ್ಷಣ

Edu Guide: ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: IDFC FIRST ಬ್ಯಾಂಕ್‌ನಿಂದ 2 ಲಕ್ಷ ರೂ. ಸ್ಕಾಲರ್‌ಶಿಪ್‌; ಹೀಗೆ ಅಪ್ಲೈ ಮಾಡಿ

Edu Guide: ಎಂಬಿಎ ಓದುತ್ತಿರುವ ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌. ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ನೀಡುವ ಸ್ಕಾಲರ್‌ಶಿಪ್‌ಗೆ ಅರ್ಜಿ ಆಹ್ವಾನಿಸಲಾಗಿದೆ. 2 ಲಕ್ಷ ರೂ. ನೀಡುವ ಸ್ಕಾಲರ್‌ಶಿಪ್‌ ಇದಾಗಿದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ ಜುಲೈ 31. ಅರ್ಜಿ ಸಲ್ಲಿಸುವ ವಿಧಾನ, ಯಾರೆಲ್ಲ ಅರ್ಹರು ಮುಂತಾದ ವಿವರ ಇಲ್ಲಿದೆ.

VISTARANEWS.COM


on

Edu Guide
Koo

ಬೆಂಗಳೂರು: ದೇಶದಲ್ಲಿ ಶಿಕ್ಷಣದ ಬಗ್ಗೆ ಜಾಗೃತಿ ಮೂಡುತ್ತಿದೆ. ನಗರ, ಗ್ರಾಮಾಂತರ ಪ್ರದೇಶಗಳಲ್ಲಿ ಸಾಕ್ಷರತೆ ಪ್ರಮಾಣ ಹೆಚ್ಚಾಗುತ್ತಿದೆ. ಅದಾಗ್ಯೂ ಉನ್ನತ ಶಿಕ್ಷಣ ಎನ್ನುವುದು ಇನ್ನೂ ಹಲವು ಕಡೆ ಗಗನ ಕುಸುಮ ಎನಿಸಿಕೊಂಡಿದೆ. ಅದರಲ್ಲಿಯೂ ಎಂಜಿನಿಯರಿಂಗ್‌, ಮೆಡಿಕಲ್‌, ಎಂಬಿಎಯಂತಹ ಉನ್ನತ ಶಿಕ್ಷಣದಲ್ಲಿದಲ್ಲಿನ ದುಬಾರಿ ಫೀಸ್‌ ಕಾರಣದಿಂದ ಹಣ ಹೊಂದಿಸಲು ಬಡ ಮತ್ತು ಮಧ್ಯಮ ವರ್ಗದ ಮಂದಿ ಇಂದಿಗೂ ಪರದಾಡುತ್ತಿದ್ದಾರೆ. ಇದೇ ಕಾರಣಕ್ಕೆ ಸರ್ಕಾರಗಳು ಮತ್ತು ಬ್ಯಾಂಕ್‌ನಂತಹ ಕೆಲವು ಖಾಸಗಿ ಸಂಸ್ಥೆಗಳು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್‌ ನೀಡಲು ಮುಂದು ಬಂದಿವೆ (Scholarship For Students). ಈ ಪೈಕಿ ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ನೀಡುವ ಸ್ಕಾಲರ್‌ಶಿಪ್‌ ಪ್ರಮುಖವಾದುದು (IDFC FIRST Bank MBA Scholarship 2024-26). ಬ್ಯಾಂಕ್‌ ಬಡ ಎಂಬಿಎ ವಿದ್ಯಾರ್ಥಿಗಳಿಗೆ 2 ವರ್ಷಕ್ಕೆ 2 ಲಕ್ಷ ರೂ. ಒದಗಿಸುತ್ತಿದೆ. ಇದಕ್ಕೆ ಯಾರೆಲ್ಲ ಅರ್ಹರು? ಅಪ್ಲೈ ಮಾಡುವುದು ಹೇಗೆ? ಮುಂತಾದ ವಿವರ ಇಲ್ಲಿದೆ (Edu Guide).

ಏನಿದು ಯೋಜನೆ?

ಐಡಿಎಫ್‌ಸಿ ಫಸ್ಟ್‌ ಬ್ಯಾಂಕ್‌ ಎಂಬಿಎ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ನೆರವಾಗುವ ಉದ್ದೇಶದಿಂದ ಈ ಯೋಜನೆಯನ್ನು 2018ರಲ್ಲಿ ಪರಿಚಯಿಸಿದೆ. ಈ ಯೋಜನೆ ಮೂಲಕ ಅರ್ಹ ವಿದ್ಯಾರ್ಥಿಗಳ ಶಿಕ್ಷಣಕ್ಕೆ 2 ಲಕ್ಷ ರೂ. ನೆರವು ಒದಗಿಸಲಾಗುತ್ತದೆ. ಇದುವರೆಗೆ 152 ಕಾಲೇಜುಗಳ ಸುಮಾರು 1,154 ವಿದ್ಯಾರ್ಥಿಗಳು ಸ್ಕಾಲರ್‌ಶಿಪ್‌ ಪಡೆದುಕೊಂಡಿದ್ದಾರೆ.

ಯಾರೆಲ್ಲ ಅರ್ಹರು?

ಈ ಬಾರಿಯ ಸ್ಕಾಲರ್‌ಶಿಪ್‌ನ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಅರ್ಹರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 31. ಸ್ಕಾಲರ್‌ಶಿಪ್‌ಗೆ ಈ ಕೆಳಗಿನ ಅರ್ಹತೆ ಅಗತ್ಯ.

  • ಭಾರತೀಯ ನಾಗರಿಕರಾಗಿರಬೇಕು.
  • ಕುಟುಂಬದ ವಾರ್ಷಿಕ ಆದಾಯ 6 ಲಕ್ಷ ರೂ. ಅಥವಾ ಅದಕ್ಕಿಂತ ಕಡಿಮೆ ಇರಬೇಕು.
  • ಪಟ್ಟಿಯಲ್ಲಿ ಇರುವ ಕಾಲೇಜಿನಲ್ಲಿ ಪ್ರವೇಶ ಪಡೆದಿರಬೇಕು (ಕಾಲೇಜಿನ ಪಟ್ಟಿ ಕೆಳಗೆ ನೀಡಲಾಗಿದೆ).
  • 2 ವರ್ಷಗಳ ಪೂರ್ಣ ಅವಧಿಯ ಎಂಬಿಎ ಕೋರ್ಸ್‌ನ ಮೊದಲ ವರ್ಷದಲ್ಲಿರಬೇಕು.
  • ಆಧಾರ್‌ ನಂಬರ್‌ ಜತೆ ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ ಹೊಂದಿರಬೇಕು.

ಅಗತ್ಯ ದಾಖಲೆಗಳು

  • ಕಾಲೇಜಿಗೆ ಪ್ರವೇಶ ಪಡೆದಿರುವ ಪುರಾವೆ (ಕಾಲೇಜು ಹೆಸರು, ಅಡ್ಮಿಷನ್‌ ವರ್ಷ ಇತ್ಯಾದಿ ಮಾಹಿತಿ ಒಳಗೊಂಡಿರಬೇಕು).
  • ಶುಲ್ಕ ಪಾವತಿಯ ರಸೀದಿ.
  • ಪದವಿ ತರಗತಿಯ ಅಂಕಪಟ್ಟಿ ಮತ್ತು ಉತ್ತೀರ್ಣ ಪ್ರಮಾಣಪತ್ರದ ಪ್ರತಿ.
  • ಆದಾಯ ಪ್ರಮಾಣ ಪತ್ರ.

ಕಾಲೇಜಿನ ಪಟ್ಟಿ ವೀಕ್ಷಿಸಲು ಇಲ್ಲಿ ಕ್ಲಿಕ್‌ ಮಾಡಿ (https://d2w7l1p59qkl0r.cloudfront.net/static/files/list-of-institutions-idfc-first-bank-mba-scholarship-2024-26.pdf)

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.buddy4study.com/page/idfc-first-bank-mba-scholarship#scholarships)
  • ಹೆಸರು ನೋಂದಾಯಿಸಿ.
  • ಈಗ IDFC FIRST Bank MBA Scholarship 2024-26 ಪುಟ ಕಾಣಿಸುತ್ತದೆ.
  • ವಿವರಗಳನ್ನು ಓದಿ ‘Apply Now’ ಬಟನ್‌ ಕ್ಲಿಕ್‌ ಮಾಡಿ.
  • ಆಧಾರ್‌ ನಂಬರ್‌ನೊಂದಿಗೆ ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ ನಮೂದಿಸಿ.
  • ಈಗ ಯುಆರ್‌ಎಲ್‌, ಯೂಸರ್‌ ಐಡಿ, ಮತ್ತು ಪಾಸ್‌ವರ್ಡ್‌ ಸ್ವೀಕರಿಸುತ್ತೀರಿ.
  • ಅದನ್ನು ಬಳಸಿ ಲಾಗಿನ್‌ ಆಗಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಇದನ್ನೂ ಓದಿ: Edu Guide: ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಸಿಗಲಿವೆ ಇವೆಲ್ಲ ಸ್ಕಾಲರ್‌ಶಿಪ್‌

Continue Reading

ಆರೋಗ್ಯ

Brain-Eating Amoeba: ಮೆದುಳು ತಿನ್ನುವ ಅಮೀಬಾಕ್ಕೆ ಮತ್ತೊಂದು ಬಲಿ; 2 ತಿಂಗಳ ಅಂತರದಲ್ಲಿ 3ನೇ ಪ್ರಕರಣ

Brain-Eating Amoeba: ಅಪರೂಪದ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕೇರಳದಲ್ಲಿ ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ. ಬುಧವಾರ ರಾತ್ರಿ ಮೃತಪಟ್ಟ ಕೇರಳದ ಕೋಝಿಕ್ಕೋಡ್‌ ಜಿಲ್ಲೆಯ 12 ವರ್ಷ ಬಾಲಕನಿಗೆ ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್ (ಮೆದುಳು ತಿನ್ನುವ ಅಮೀಬಾ) ಸೋಂಕು ತಗುಲಿದ್ದು ದೃಧಪಟ್ಟಿದ್ದು, ಕಳೆದ ಎರಡು ತಿಂಗಳಲ್ಲಿ ಸಂಭವಿಸಿದ ಇಂತಹ ಮೂರನೇ ಸಾವಿನ ಪ್ರಕರಣ ಇದಾಗಿದೆ.

VISTARANEWS.COM


on

Brain-Eating Mmoeba
Koo

ತಿರುವನಂತಪುರಂ: ಅಪರೂಪದ ಮೆದುಳು ತಿನ್ನುವ ಅಮೀಬಾ (Brain-Eating Amoeba) ಸೋಂಕಿಗೆ ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ. ಬುಧವಾರ ರಾತ್ರಿ ಮೃತಪಟ್ಟ ಕೇರಳದ ಕೋಝಿಕ್ಕೋಡ್‌ ಜಿಲ್ಲೆಯ 12 ವರ್ಷ ಬಾಲಕನಿಗೆ ಅಮೀಬಿಕ್ ಮೆನಿಂಗೊ ಎನ್ಸೆಫಾಲಿಟಿಸ್ (ಮೆದುಳು ತಿನ್ನುವ ಅಮೀಬಾ) ಸೋಂಕು ತಗುಲಿದ್ದು ದೃಧಪಟ್ಟಿದ್ದು, ಕಳೆದ ಎರಡು ತಿಂಗಳಲ್ಲಿ ಸಂಭವಿಸಿದ ಇಂತಹ ಮೂರನೇ ಸಾವಿನ ಪ್ರಕರಣ ಇದಾಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಬಾಲಕನನ್ನು ಮೃದುಲ್‌ ಇ.ಪಿ. ಎಂದು ಗುರುತಿಸಲಾಗಿದೆ. ಕೋಝಿಕ್ಕೋಡ್‌ ಜಿಲ್ಲೆಯ ಫೆರೊಕೆ ಮೂಲದ ಈತನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. 7ನೇ ತರಗತಿಯಲ್ಲಿ ಓದುತ್ತಿದ್ದ ಮೃದುಲ್‌ನಲ್ಲಿ ಕೆಲವು ದಿನಗಳ ಹಿಂದೆ ಸೋಂಕಿನ ಲಕ್ಷಣಗಳಾದ ತೀವ್ರ ತಲೆನೋವು, ವಾಕರಿಕೆ, ವಾಂತಿ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಜೂನ್‌ 24ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೊಳದಲ್ಲಿ ಸ್ನಾನ ಮಾಡಿದ ನಂತರ ಬಾಲಕನಿಗೆ ಸೋಂಕು ತಗುಲಿರಬಹುದು ಎಂದು ಶಂಕಿಸಲಾಗಿದೆ. ಕೊಳಗಳು ಮತ್ತು ಸರೋವರಗಳಂತಹ ಸಿಹಿನೀರಿನ ಮೂಲಗಳಲ್ಲಿ ಕಂಡುಬರುವ ಈ ಅಮೀಬಾ ಮೂಗಿನ ಮೂಲಕ ಶರೀರವನ್ನು ಸೇರಿ ಮಾರಣಾಂತಿಕವಾಗುತ್ತದೆ. ಇದು ಮೆದುಳಿನ ಜೀವಕೋಶಗಳನ್ನು ತಿನ್ನುವುದರಿಂದ ಇದನ್ನು ಮೆದುಳು ತಿನ್ನುವ ಅಮೀಬಾ ಎಂದೇ ಕರೆಯಲಾಗುತ್ತದೆ.

ಆರಂಭದಲ್ಲಿ ಮೃದುಲ್‌ನನ್ನು ಎರಡು ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಯಿತು ಮತ್ತು ನಂತರ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಅಲ್ಲಿ ಆ್ಯಂಟಿ ಮೈಕ್ರೊಬಿಯಲ್ ಚಿಕಿತ್ಸೆ ನೀಡಲಾಯಿತು. ಆದಾಗ್ಯೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಘಟನೆ ಬಳಿಕ ರಾಮನಾಟುಕರ ಮುನ್ಸಿಪಾಲಿಟಿ ಮೃದುಲ್‌ ಸ್ನಾನ ಮಾಡಿದ್ದ ಕೊಳಕ್ಕೆ ಸಾರ್ವಜನಿಕರ ಪ್ರವೇಸವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಮೂರನೇ ಪ್ರಕರಣ

ಈ ಹಿಂದೆ ಜೂನ್ 25ರಂದು ಕಣ್ಣೂರು ಜಿಲ್ಲೆಯ 13 ವರ್ಷದ ಬಾಲಕಿ ಮತ್ತು ಮೇ 21ರಂದು ಮಲಪ್ಪುರಂನ 5 ವರ್ಷದ ಬಾಲಕಿ ಈ ಸೋಂಕಿಗೆ ಒಳಗಾಗಿ ಸಾವನ್ನಪ್ಪಿದ್ದರು. “ನಾವು ರಾಜ್ಯದಲ್ಲಿ ಸಂಭವಿಸಿದ ಈ ಮೂರು ಸಾವುಗಳನ್ನು ಕೂಲಂಕುಷವಾಗಿ ಅಧ್ಯಯನ ಮಾಡುತ್ತಿದ್ದೇವೆ. ಕಣ್ಗಾವಲು ತೀವ್ರಗೊಳಿಸಿದ್ದೇವೆ. ನಾವು ಮೃದುಲ್‌ನಂತೆ ಅದೇ ಕೊಳದಲ್ಲಿ ಸ್ನಾನ ಮಾಡಿದ ಇತರರನ್ನು ಪರೀಕ್ಷಿಸಿದ್ದೇವೆ. ಆದರೆ ಇಲ್ಲಿಯವರೆಗೆ ಯಾರಲ್ಲಿಯೂ ಸೋಂಕಿನ ಲಕ್ಷಣ ಕಂಡು ಬಂದಿಲ್ಲʼʼ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜನರು ಭಯಭೀತರಾಗುವ ಅಗತ್ಯವಿಲ್ಲ ಎಂದು ಆರೋಗ್ಯ ಅಧಿಕಾರಿ ಹೇಳಿದ್ದಾರೆ. “ಕೊಳಗಳು ಅಥವಾ ಸರೋವರಗಳಲ್ಲಿ ಸ್ನಾನ ಮಾಡುವುದನ್ನು ಸಂಪೂರ್ಣವಾಗಿ ತಪ್ಪಿಸುವ ಅಗತ್ಯವಿಲ್ಲ. ಏಕೆಂದರೆ ಇದು ಅತ್ಯಂತ ಅಪರೂಪದ ಸೋಂಕು. ಅಮೀಬಾ ಪ್ರಭೇದಗಳ ಉಪಸ್ಥಿತಿಯನ್ನು ಪರೀಕ್ಷಿಸಲು ನಾವು ವಿವಿಧ ಜಲ ಮೂಲಗಳ ಮಾದರಿಗಳನ್ನು ಪರೀಕ್ಷಿಸುತ್ತೇವೆ. ಮಳೆ ತೀವ್ರಗೊಳ್ಳುತ್ತಿದ್ದಂತೆ ಸೋಂಕುಗಳ ಹರಡುವ ಸಾಧ್ಯತೆ ಕಡಿಮೆಯಾಗುತ್ತದೆ” ಎಂದು ಅವರು ಧೈರ್ಯ ತುಂಬಿದ್ದಾರೆ.

ಇದನ್ನೂ ಓದಿ: Brain eating amoeba | ಮೆದುಳು ತಿನ್ನುವ ಅಮೀಬಾ! ಏನಿದು ವಿಚಿತ್ರ ಕಾಯಿಲೆ?

ಹೇಗೆ ಹರಡುತ್ತದೆ?

ಈ ರೋಗಾಣು ಇರುವ ನೀರಿನಲ್ಲಿ ಈಜುವುದು ಅಥವಾ ಇನ್ನಾವುದಾದರೂ ರೀತಿಯಿಂದ ಈ ನೀರು ಮೂಗಿನೊಳಗೆ ಹೋದರೆ, ಆ ವ್ಯಕ್ತಿಗೆ ಈ ಅಮೀಬಾ ಸೋಂಕು ತಗುಲುತ್ತದೆ. ತುಂಬ ದಿನದಿಂದ ಈಜುಕೊಳದ ನೀರು ಬದಲಿಸದೆ ಇದ್ದರೆ ಅಲ್ಲಿಯೂ ಈ ಅಮೀಬಾ ಇರಬಹುದು. ಅದರಲ್ಲೂ ಕಲುಷಿತ ನೀರಿನಲ್ಲಿ ಈ ಅಮೀಬಾ ಉತ್ಪತ್ತಿ ಪ್ರಮಾಣ ಹೆಚ್ಚು. ನೀರೊಳಗೆ ಮುಖ ಒಳಗೆ ಹಾಕಿ ಈಜಿದಾಗ, ಸರೋವರ, ಕೊಳ, ನದಿ ನೀರಿನಲ್ಲಿ ಮುಖ ಮುಳುಗಿಸಿದಾಗ, ಕಲುಷಿತ ನೀರಿನಲ್ಲಿ ತಲೆ ಸ್ನಾನ ಮಾಡಿದಾಗ ಈ ಅಮೀಬಾ ಮೂಗಿನ ಮೂಲಕ ಮೆದುಳು ಸೇರುವ ಸಾಧ್ಯತೆ ಹೆಚ್ಚು.

Continue Reading
Advertisement
Viral Video
ವೈರಲ್ ನ್ಯೂಸ್10 mins ago

Viral Video: ವೇದಿಕೆಯಲ್ಲೇ ಎಲ್ಲರೆದುರು ಟಾಪ್‌ ಎತ್ತಿ ಸ್ತನ ಪ್ರದರ್ಶಿಸಿದ ಸಚಿವೆ- ವಿಡಿಯೋ ಭಾರೀ ವೈರಲ್‌

karnataka rain
ಮಳೆ13 mins ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Ayodhya Ram Mandir
ದೇಶ16 mins ago

Ayodhya Ram Mandir: ಅಯೋಧ್ಯೆ ರಾಮ ಮಂದಿರದ ಅರ್ಚಕರಿಗೆ ಹೊಸ ಸಮವಸ್ತ್ರ; ನಿಯಮದಲ್ಲಿ ಬದಲಾವಣೆ: ಕಾರಣವೇನು?

Latest21 mins ago

Self Harming: ಮೊದಲ ರಾತ್ರಿಯ ಟೆನ್ಶನ್‌ಗೆ ವರ ಆತ್ಮಹತ್ಯೆ? ಉತ್ತರ ಪ್ರದೇಶದಲ್ಲೊಂದು ವಿಲಕ್ಷಣ ಘಟನೆ

Valmiki Corporation Scam
ಪ್ರಮುಖ ಸುದ್ದಿ24 mins ago

Valmiki Corporation Scam: ವಾಲ್ಮೀಕಿ ನಿಗಮ ಹಗರಣದಲ್ಲಿ ಮುಂದುವರಿದ ಮಾಜಿ ಸಚಿವರ ಪಿಎಸ್‌ ವಿಚಾರಣೆ; ನಾಗೇಂದ್ರಗೆ ಢವಢವ!

Team India's Victory Parade
ಕ್ರಿಕೆಟ್25 mins ago

Team India’s Victory Parade: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ನಲ್ಲಿ ಹಲವು ಅಭಿಮಾನಿಗಳಿಗೆ ಗಾಯ; ಆಸ್ಪತ್ರೆಗೆ ದಾಖಲು

Viral News
Latest30 mins ago

Viral News: ಕಾಮ ದಾಹ ತಣಿಸಿಕೊಳ್ಳಲು ವಿದ್ಯಾರ್ಥಿಗಳನ್ನೇ ಬಳಸಿಕೊಂಡ ಶಿಕ್ಷಕಿಗೆ ಶಿಕ್ಷೆ

Dengue Fever
ಕರ್ನಾಟಕ44 mins ago

Dengue Fever: ಡೆಂಗ್ಯೂ ಆತಂಕ; ರಾಜಧಾನಿಯಲ್ಲಿ ಇನ್ಮುಂದೆ ಎಲ್ಲೆಂದರಲ್ಲಿ ಕಸ ಬಿಸಾಡಿದರೆ ಬೀಳಲಿದೆ ಭಾರಿ ದಂಡ!

Fire accident
ದೇಶ55 mins ago

Fire accident: ಮಾಲ್‌ನಲ್ಲಿ ಭೀಕರ ಅಗ್ನಿ ಅವಘಡ; ಭಾರೀ ಸಾವು-ನೋವಿನ ಶಂಕೆ

Rashmika Mandanna Kubera interesting first look
ಕಾಲಿವುಡ್1 hour ago

Rashmika Mandanna: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ರಶ್ಮಿಕಾ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka rain
ಮಳೆ13 mins ago

Karnataka Rain: ಮಳೆಗೆ ಮನೆಗಳಿಗೆ ನುಗ್ಗುತ್ತಿವೆ ಹಾವುಗಳು! ಕುಸಿದು ಬಿತ್ತು ಮನೆಗಳು

Elephant attack in Hassan and Chikmagalur
ಹಾಸನ1 hour ago

Elephant Attack : ಕಾಫಿ ತೋಟದ‌ ಕೆಲಸಗಾರನನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಒಂಟಿ ಸಲಗ

Physical Abuse
ಬೆಂಗಳೂರು3 hours ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Self Harming in bengaluru
ಬೆಂಗಳೂರು3 hours ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

karnataka Weather Forecast Rain
ಮಳೆ8 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ20 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ21 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ22 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ1 day ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಟ್ರೆಂಡಿಂಗ್‌