Losing the land | ಸಾಗುವಳಿ ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿ ಬೆಳಲಕಟ್ಟೆಯ ಗ್ರಾಮಸ್ಥರು, ಉಗ್ರ ಹೋರಾಟಕ್ಕೆ ಸಿದ್ಧತೆ - Vistara News

ಶಿವಮೊಗ್ಗ

Losing the land | ಸಾಗುವಳಿ ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿ ಬೆಳಲಕಟ್ಟೆಯ ಗ್ರಾಮಸ್ಥರು, ಉಗ್ರ ಹೋರಾಟಕ್ಕೆ ಸಿದ್ಧತೆ

ಬೆಳಲಕಟ್ಟೆಯ ಗ್ರಾಮಸ್ಥರು ಕಳೆದ 7 ದಶಕಕ್ಕಿಂತಲೂ ಹಿಂದಿನಿಂದ ಸಾಗುವಳಿ ಮಾಡುತ್ತ ಬಂದಿರುವ ಭೂಮಿ ತೆರವಿಗೆ (Losing the land) ಕ್ರಮ ಕೈಗೊಳ್ಳಬೇಕೆಂದು ಗ್ರಾ ಪಂ ಪಿಡಿಒ ಅವರು ತಾ ಪಂ ಕಾರ್ಯನಿರ್ವಾಹಕ ಅಧಿಕಾರಿಗೆ ಪತ್ರ ಬರೆದಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.

VISTARANEWS.COM


on

Grama Panchayat Belakatte village
ಭೂಮಿ ತೆರವಿನ ಭೀತಿಯಲ್ಲಿರುವ ಬೆಳಲಕಟ್ಟೆಯ ಗ್ರಾಮಸ್ಥರು ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಬಾಗಿಲು ತೆರೆಯಲು ಅಡ್ಡಿಪಡಿಸಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವಿವೇಕ ಮಹಾಲೆ, ವಿಸ್ತಾರ ನ್ಯೂಸ್, ಶಿವಮೊಗ್ಗ
ತಾಲೂಕಿನ ಮೇಲಿನಹನಸವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಲಕಟ್ಟೆಯ ಗ್ರಾಮಸ್ಥರು ನೆಲೆ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಏಳು ದಶಕಕ್ಕೂ ಹಿಂದಿನಿಂದ ಸಾಗುವಳಿ ಮಾಡುತ್ತ ಬಂದಿದ್ದ ಇವರು ಭೂಮಿ ಕಳೆದುಕೊಳ್ಳುವ (Losing the land) ಆತಂಕದಲ್ಲಿದ್ದಾರೆ.

ಗ್ರಾಪಂ ಕಚೇರಿಗೆ ಮುತ್ತಿಗೆ
ಇತ್ತೀಚೆಗೆ ಸರ್ವೆ ಅಧಿಕಾರಿಗಳೊಂದಿಗೆ ಆಗಮಿಸಿದ ಗ್ರಾಪಂ ಪಿಡಿಒ ಮತ್ತು ಸಿಬ್ಬಂದಿ ಅವರ ಭೂಮಿಯನ್ನು ಸರ್ವೆ ಮಾಡಿಸಿದ್ದು, ಗ್ರಾಮ ಠಾಣಾ ಜಮೀನು ಎಂದು ಗುರುತು ಹಾಕಿ ಹೋಗಿದ್ದಾರೆ. ಈ ಭೂಮಿ ತೆರವಿಗೆ ಕ್ರಮಕೈಗೊಳ್ಳಬೇಕೆಂದು ಗ್ರಾಮ ಪಂಚಾಯಿತಿ ಪಿಡಿಒ ಅವರು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಪತ್ರ ಬರೆದಿದ್ದಾರೆ. ಇದು ಅಲ್ಲಿನ ಗ್ರಾಮಸ್ಥರಿಗೆ ಆಕಾಶವೇ ಕಳಚಿಬಿದ್ದಂತಾಗಿದೆ.

ಇದರಿಂದ ಆಕ್ರೋಶಗೊಂಡಿರುವ ಗ್ರಾಮಸ್ಥರು ಶುಕ್ರವಾರ (ಡಿ.೧೬) ಬೆಳ್ಳಂಬೆಳಗ್ಗೆ ಮೇಲಿನಹನಸವಾಡಿ ಗ್ರಾಪಂ ಕಚೇರಿಗೆ ಮುತ್ತಿಗೆ ಹಾಕಿ ಬಾಗಿಲು ತೆರೆಯಲು ಅಡ್ಡಿಪಡಿಸಿದ್ದಾರೆ. ಒಕ್ಕಲೆಬ್ಬಿಸುವಂತೆ ತಾಪಂ ಇಒ ಅವರಿಗೆ ಬರೆದ ಪತ್ರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲಿಯವರೆಗೆ ಕಚೇರಿ ಬಾಗಿಲು ತೆರೆಯಲು ಅನುವು ಮಾಡಿಕೊಡುವುದಿಲ್ಲ ಎಂದು ಪಟ್ಟು ಹಿಡಿದ್ದಾರೆ. ಕೊನೆಗೆ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಪೊಲೀಸರ ಸಮ್ಮುಖದಲ್ಲಿ ಕಚೇರಿ ಬಾಗಿಲನ್ನು ತೆರೆಯಲಾಗಿದೆ.

ಇದನ್ನೂ ಓದಿ | KPSC Recruitment 2022 | ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ; ಇನ್ನು ಒಮ್ಮೆ ಬರೆದರೆ ಸಾಕು!

ಕೋರ್ಟ್‌ನಿಂದ ತಡೆಯಾಜ್ಞೆ
ಹಲವು ದಶಕಳಿಂದ ಒಕ್ಕಲುತನ ಮಾಡಿಕೊಂಡು ಬಂದಿರುವ ಗ್ರಾಮಸ್ಥರಿಗೆ ಇಂತಹ ಸಮಸ್ಯೆ ಎದುರಾಗುತ್ತಿರುವುದು ಇದೇ ಮೊದಲೇನಲ್ಲ. ಹಿಂದೆ ಕೂಡ ಇಂತಹ ಪ್ರಸಂಗ ಎದುರಾದಾಗ ಗ್ರಾಮಸ್ಥರು ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರು. ನಾವು ಇನಾಂ ಭೂಮಿಯಲ್ಲಿ ಕೃಷಿ ಮಾಡಿಕೊಂಡು ಬಂದಿದ್ದೇವೆ. ಸರ್ಕಾರದ ಗ್ರಾಮ ಠಾಣಾ ಭೂಮಿಯಲ್ಲ. ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದರೂ ಅಧಿಕಾರಿಗಳು ಮತ್ತೆ ಒಕ್ಕಲೆಬ್ಬಿಸಲು ಮುಂದಾಗಿದ್ದು, ನ್ಯಾಯಾಂಗ ನಿಂದನೆ ಆಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಸಿದ್ದಾರೆ.

ಬೆಳಲಕಟ್ಟೆಯ ಗ್ರಾಮಸ್ಥರು ಸಾಗುವಳಿ ಮಾಡಿಕೊಂಡು ಬಂದ ತೋಟ.

ಗ್ರಾಮ ಪಂಚಾಯಿತಿ ಕ್ರಮವನ್ನು ಪಿಡಿಒ ಉಮೇಶ್ ಅವರು ಸಮರ್ಥಿಸಿಕೊಂಡಿದ್ದಾರೆ. ಕಾಲುವೆ ಏರಿ ಮೇಲೆ ಹಲವು ಕುಟುಂಬಗಳು ವಾಸಿಸುತ್ತಿದ್ದು, ಅಲ್ಲಿನ ಪುಟ್ಟ ಮಗುವೊಂದು ಕಾಲುವೆಗೆ ಬಿದ್ದು ಅವಘಡ ಸಂಭವಿಸಿತ್ತು. ಮುಂಜಾಗ್ರತಾ ಕ್ರಮವಾಗಿ ಆ ಕುಟುಂಬಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಸರ್ಕಾರಿ ಭೂಮಿ ಹುಡುಕಾಟದಲ್ಲಿದ್ದೇವೆ. ಇತ್ತೀಚೆಗೆ ಸರ್ವೆ ಇಲಾಖೆಗೆ ಗ್ರಾಮ ಠಾಣಾ ಭೂಮಿ ಸರ್ವೆ ಮಾಡಿಕೊಂಡುವಂತೆ ಕೇಳಲಾಗಿತ್ತು. ಅದರಂತೆ ಸರ್ವೆ ಆಗಿದ್ದು, ಸುಮಾರು ಮೂರು ಎಕರೆ ಗ್ರಾಮ ಠಾಣಾ ಜಾಗ ಅತಿಕ್ರಮಣಗೊಂಡಿರುವುದು ಬೆಳಕಿಗೆ ಬಂದಿದೆ. ಅದನ್ನು ತೆರವುಗೊಳಿಸಲು ತಾಪಂಗೆ ಪತ್ರ ಬರೆಯಲಾಗಿದೆ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ಗ್ರಾಮ ಪಂಚಾಯಿತಿ ತೆಗೆದುಕೊಂಡಿರುವ ಕ್ರಮದಿಂದ ಗ್ರಾಮಸ್ಥರು ಸಾಗುವಳಿ ಮಾಡುತ್ತ ಬಂದಿರುವ ಭೂಮಿಯನ್ನು ಕಳೆದುಕೊಳ್ಳುವ ಆತಂಕದಲ್ಲಿದ್ದು, ತಾಲೂಕು ಪಂಚಾಯಿತಿ ಇಒ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಗ್ರಾಮಸ್ಥರ ಭವಿಷ್ಯ ಅಡಗಿದೆ. ಇತ್ತ ಗ್ರಾಮಸ್ಥರು ಕೂಡ 15 ದಿನದೊಳಗಾಗಿ ಅಧಿಕಾರಿಗಳು ತಮ್ಮ ನಡೆಯಿಂದ ಹಿಂದೆ ಸರಿಯದಿದ್ದರೆ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಇದನ್ನೂ ಓದಿ | BlackBuck | ಕಾಡಿನಿಂದ ಬಂದ ಕೃಷ್ಣ ಮೃಗವನ್ನು ಅಟ್ಟಾಡಿಸಿದ ನಾಯಿಗಳು, ಆಸ್ಪತ್ರೆ ಪ್ರವೇಶಿಸಿದ್ದರಿಂದ ಉಳಿಯಿತು ಜೀವ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Rain News : ಮೇ 7ರಂದು ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ ಸುರಿದಿದೆ. ರಾಜ್ಯದಲ್ಲಿ ಇನ್ನೊಂದು ವಾರ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಚಿಕ್ಕಮಗಳೂರು/ಹಾಸನ/ಬೆಂಗಳೂರು: ಮಂಗಳವಾರ ಮಧ್ಯಾಹ್ನ ಚಿಕ್ಕಮಗಳೂರು ನಗರದಲ್ಲಿ ಧಾರಾಕಾರ ಮಳೆಯಾಗಿದೆ. ಭಾರಿ ಆಲಿಕಲ್ಲು ಮಳೆಗೆ ಚಿಕ್ಕಮಗಳೂರು ನಗರ ನಿವಾಸಿಗಳು ಥಂಡಾ ಹೊಡೆದಿದ್ದಾರೆ. ಮಳೆಯಿಲ್ಲದೆ ಕಾದ ಕಾವಲಿಯಂತಾಗಿದ್ದ ಕಾಫಿನಾಡಿನಲ್ಲಿ ಕಳೆದೊಂದು ಗಂಟೆಯಿಂದ ಭಯಂಕರ ಮಳೆ ಸುರಿಯುತ್ತಿದೆ.

ರಸ್ತೆಯಲ್ಲಿ ಅರ್ಧ ಅಡಿ ಎತ್ತರದಲ್ಲಿ ನೀರು ಹರಿಯುತ್ತಿದೆ. 41 ಡಿಗ್ರಿ ತಲುಪುತ್ತಿದ್ದ ಬಿಸಿಲ ತಾಪಮಾನಕ್ಕೆ ಜನ ಹೈರಾಣಾಗಿದ್ದರು. ಧಾರಾಕಾರ ಮಳೆ ಕಂಡು ರೈತರು, ಬೆಳೆಗಾರರು ಸಂತಸಗೊಂಡರು. ಇನ್ನೂ ಆಲಿಕಲ್ಲು ಕೈಯಲ್ಲಿ ಹಿಡಿದು ಖುಷಿ ಪಟ್ಟರು.

Karnataka weather Forecast

ಹಾಸನದಲ್ಲೂ ಧಾರಾಕಾರ ಮಳೆ

ಹಾಸನ ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ. ಹಾಸನ, ಹೊಳೆನರಸೀಪುರ, ಅರಸೀಕೆರೆ ಭಾಗಗಳಲ್ಲಿ ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲು ಸಹಿತ ಮಳೆ ಸುರಿಯುತ್ತಿದೆ. ಅರಸೀಕೆರೆಯಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಜೋರಾಗಿ ಆಲಿಕಲ್ಲು ಬೀಳುತ್ತಿರುವುದರಿಂದ ಸವಾರರು ಬೈಕ್‌ ನಿಲ್ಲಿಸಿ ರಸ್ತೆ ಬದಿ ನಿಲ್ಲುವಂತಾಯಿತು. ಬಿಸಿಲಿನಿಂದ ಕಂಗಾಲಾಗಿದ್ದ ಜನತೆಗೆ ವರುಣ ತಂಪೆರೆದಿದ್ದಾನೆ.

ಇದನ್ನೂ ಓದಿ: Karnataka Rains: ಮಳೆಗೆ ಮರ ಬಿದ್ದು ಮಂಡ್ಯದಲ್ಲಿ ವ್ಯಕ್ತಿ ಸಾವು, ಬೆಂಗಳೂರಲ್ಲಿ ಟೆಕ್ಕಿ ಬೆನ್ನು ಮೂಳೆ ಮುರಿತ

ಮಂಗಳವಾರ ಸಂಜೆಗೆ ಲಘು ಮಳೆ ಎಚ್ಚರಿಕೆ

ಮೇ 7ರ ಸಂಜೆಗೆ ದಕ್ಷಿಣ ಕನ್ನಡ, ಕೊಡಗು, ಮಂಡ್ಯ, ಮೈಸೂರು ಸೇರಿದಂತೆ ತುಮಕೂರು, ಉಡುಪಿಯಲ್ಲಿ ಗುಡುಗು ಸಹಿತ ಲಘು ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

ಬೆಂಗಳೂರಲ್ಲಿ ಗುಡುಗು, ಮಿಂಚು ಸಹಿತ ಗಾಳಿ ಮಳೆ

ಬೆಂಗಳೂರು ನಗರ ಮತ್ತು ಸುತ್ತಮುತ್ತ ಮುಂದಿನ 24 ಗಂಟೆಯಲ್ಲಿ ಮುಂಜಾನೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ/ರಾತ್ರಿಯ ಸಮಯದಲ್ಲಿ ಗುಡುಗು ಮಿಂಚು ಜತೆಗೆ ಮಳೆಯಾಗಲಿದೆ. ಈ ವೇಳೆ ಗಾಳಿ ವೇಗವು 40-50 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 35 ಮತ್ತು 22 ಡಿ.ಸೆ ಇರಲಿದೆ.

ಇನ್ನೂ ಕೊಡಗು, ಮೈಸೂರು, ಮಂಡ್ಯ, ಹಾಸನ, ಕೋಲಾರ, ಬೆಂಗಳೂರು ನಗರ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ಮತ್ತು ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (ಗಂಟೆಗೆ 40-50 ಕಿಮೀ) ಹಗುರದಿಂದ ಶುರುವಾಗಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ವಿಜಯನಗರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ (30-40 ಕಿಮೀ) ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Lok Sabha Election 2024: ಮೊದಲೆರಡು ಗಂಟೆಗಳ ಮತದಾನ ನಿರೀಕ್ಷೆಗಿಂತ ಕಡಿಮೆ, ಇನ್ನೂ ಇಳಿಯುವ ಆತಂಕ; ಎಲ್ಲಿ ಎಷ್ಟು?

Lok Sabha Election 2024: ಶಿವಮೊಗ್ಗದಲ್ಲಿ 11.45, ಉತ್ತರ ಕನ್ನಡ ಕ್ಷೇತ್ರದಲ್ಲಿ ಶೇ. 11.42, ಚಿಕ್ಕೋಡಿಯಲ್ಲಿ ಶೇ. 10.81, ಬಳ್ಳಾರಿಯಲ್ಲಿ ಶೇ. 10.37, ಬೆಳಗಾವಿಯಲ್ಲಿ ಶೇ. 9.31, ಧಾರವಾಡದಲ್ಲಿ ಶೇ.9.38, ವಿಜಯಪುರದಲ್ಲಿ 9.22%, ರಾಯಚೂರಿನಲ್ಲಿ ಶೇ. 8.83 , ಹಾವೇರಿಯಲ್ಲಿ ಶೇ. 8.2, ಕಲಬುರಗಿಯಲ್ಲಿ ಶೇ. 8.71 ಮತದಾನ ದಾಖಲಾಯಿತು. ಸರಾಸರಿ ಶೇ. 9.5 ಎಂದು ಅಂದಾಜಿಸಲಾಗಿದೆ. ಇದು ನಿರೀಕ್ಷೆಗಿಂತ ಕಡಿಮೆಯಾಗಿದೆ.

VISTARANEWS.COM


on

lok sabha election 2024 voting second phase
Koo

ಬೆಂಗಳೂರು: ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ 14 ಲೋಕಸಭೆ ಕ್ಷೇತ್ರಗಳಲ್ಲಿ (lok sabha constituency) ನಡೆಯುತ್ತಿರುವ ಲೋಕಸಭೆ ಚುನಾವಣೆ (lok sabha election 2024) ಮತದಾನ (voting) ಬೆಳಗ್ಗಿನ ಮೊದಲ ಎರಡು ಗಂಟೆಗಳಲ್ಲಿ ಸರಾಸರಿ 9.5% ಮತದಾನ ದಾಖಲಿಸಿತು. ಮೊದಲ ಹಂತದ ಚುನಾವಣೆಗೆ ಹೋಲಿಸಿದರೆ ಈ ಪ್ರತಿಕ್ರಿಯೆ ನೀರಸವಾಗಿದೆ. ಮೊದಲ ಹಂತದ ಮತದಾನದಲ್ಲಿ ಮೊದಲ ಎರಡು ಗಂಟೆಗಳಲ್ಲಿ ಸರಾಸರಿ 10% ಮತದಾನ ಕಂಡುಬಂದಿತ್ತು. ಮುಂಜಾನೆ 7 ಗಂಟೆಗೆ ಮತದಾನ ಶುರುವಾಗಿದೆ.

ಶಿವಮೊಗ್ಗದಲ್ಲಿ 11.45, ಉತ್ತರ ಕನ್ನಡ ಕ್ಷೇತ್ರದಲ್ಲಿ ಶೇ. 11.42, ಚಿಕ್ಕೋಡಿಯಲ್ಲಿ ಶೇ. 10.81, ಬಳ್ಳಾರಿಯಲ್ಲಿ ಶೇ. 10.37, ಬೆಳಗಾವಿಯಲ್ಲಿ ಶೇ. 9.31, ಧಾರವಾಡದಲ್ಲಿ ಶೇ.9.38, ವಿಜಯಪುರದಲ್ಲಿ 9.22%, ರಾಯಚೂರಿನಲ್ಲಿ ಶೇ. 8.83 , ಹಾವೇರಿಯಲ್ಲಿ ಶೇ. 8.2, ಕಲಬುರಗಿಯಲ್ಲಿ ಶೇ. 8.71 ಮತದಾನ ದಾಖಲಾಯಿತು. ಸರಾಸರಿ ಶೇ. 9.5 ಎಂದು ಅಂದಾಜಿಸಲಾಗಿದೆ. ಇದು ನಿರೀಕ್ಷೆಗಿಂತ ಕಡಿಮೆಯಾಗಿದೆ.

ಹತ್ತು ಗಂಟೆಯ ಬಳಿಕ ಬಿಸಿಲು ಏರುವುದರಿಂದ, ಬಿಸಿಲಿನ ಹೊಡೆತ ತಪ್ಪಿಸಿಕೊಳ್ಳಲು ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಚಲಾಯಿಸಿದರು. ಮಧ್ಯಾಹ್ನದ ಹೊತ್ತಿನಲ್ಲಿ ಮತದಾನ ಇನ್ನಷ್ಟು ಇಳಿಕೆಯಾಗುವ ಆತಂಕ ಕಂಡುಬಂದಿದೆ. ಸಂಜೆಯ ವೇಳೆ ಮಳೆ ಬರುವ ಸಾಧ್ಯತೆಯೂ ಇರುವುದರಿಂದ, ಸಂಜೆಯೂ ಮತದಾನ ನಿರೀಕ್ಷಿತ ಪ್ರಮಾಣದಲ್ಲಿ ನಡೆಯದ ಆತಂಕ ತಲೆದೋರಿದೆ.

ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿ, ಶಿವಮೊಗ್ಗದಲ್ಲಿ ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರ, ರಾಘವೇಂದ್ರ, ಈಶ್ವರಪ್ಪ, ಹುಬ್ಬಳ್ಳಿಯಲ್ಲಿ ಪ್ರಹ್ಲಾದ್‌ ಜೋಶಿ, ಕಲಬುರಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ ಖರ್ಗೆ, ಕಾರವಾರದಲ್ಲಿ ಅಂಜಲಿ ನಿಂಬಾಳ್ಕರ್ ಸೇರಿದಂತೆ ಹಲವಾರು ಗಣ್ಯರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸಿದರು.

ಕೆಲವೆಡೆ ಮತಯಂತ್ರ ಕೈಕೊಟ್ಟು ಮತದಾರರು ಗಂಟೆಗಟ್ಟಲೆ ಕಾಯುವಂತಾಯಿತು. ತಂತ್ರಜ್ಞರು ಆಗಮಿಸಿ ಸರಿಪಡಿಸಿದ ಬಳಿಕ ಮತ ಹಾಕಲಾಯಿತು. ಮಹಿಳೆಯರಿಗಾಗಿ ಏರ್ಪಡಿಸಿದ ಪಿಂಕ್‌ ಬೂತ್‌ಗಳಲ್ಲಿಯೂ ಉತ್ತಮ ಸ್ಪಂದನ ವ್ಯಕ್ತವಾಯಿತು. ಹಲವು ಕಡೆಗಳಲ್ಲಿ ಮತದಾರರು ಬಹಿಷ್ಕಾರ ವ್ಯಕ್ತಡಿಸಿದರು. ಹಲವೆಡೆ ಶತಾಯುಷಿಗಳು ಆಗಮಿಸಿ ಮತ ಹಾಕುವ ಉತ್ಸಾಹ ತೋರಿದರು. ಒಂದು ಕಡೆ ದಿವ್ಯಾಂಗ ಯುವತಿ ಮೊದಲ ಮತ ಹಾಕಿದಳು. ಉತ್ತರ ಕನ್ನಡದಲ್ಲಿ ನವದುರ್ಗೆಯರ ರೂಪದಲ್ಲಿ ಮೊದಲ ಮತದಾನ ನಡೆದುದು ವಿಶಿಷ್ಟವಾಗಿತ್ತು.

ರಾಜ್ಯದಲ್ಲಿ ಎರಡನೇ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. 14 ಕ್ಷೇತ್ರಗಳಲ್ಲಿ 28,269 ಮತಗಟ್ಟೆ ಸ್ಥಾಪಿಸಿದ್ದು, ಶಾಂತಿಯುತ ಚುನಾವಣೆ ನಡೆಸಲು ಸುಮಾರು 40 ಸಾವಿರ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಮತದಾನ ಕೇಂದ್ರದಲ್ಲಿ ಮತದಾರರ ಅನುಕೂಲಕ್ಕಾಗಿ ಕುಡಿಯುವ ನೀರು ಸೇರಿ ಅಗತ್ಯ ವ್ಯವಸ್ಥೆ ಮಾಡಲಾಗಿದ್ದು, ಮತಗಟ್ಟೆಗಳ ಸುತ್ತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸೂಕ್ತ ಭದ್ರತೆ ಏರ್ಪಡಿಸಲಾಗಿದೆ.

ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧಿಸಿದ್ದರೆ, ಬಿಎಸ್‌ಪಿ 9, ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು 23, ಸ್ವತಂತ್ರ ಅಭ್ಯರ್ಥಿಗಳು 117 ಸೇರಿ ಒಟ್ಟು 227 ಅಭ್ಯರ್ಥಿಗಳು ಸ್ಪರ್ಧೆಗಿಳಿದಿದ್ದಾರೆ. ಇದರಲ್ಲಿ 206 ಪುರುಷ, 21 ಮಹಿಳಾ ಅಭ್ಯರ್ಥಿಗಳಿದ್ದಾರೆ. ಈ ಕ್ಷೇತ್ರಗಳಲ್ಲಿ 2,59,52,958 ಮತದಾರರಿದ್ದು, 1,29,48,978 ಪುರುಷ, 1,29,64,570 ಮಹಿಳಾ ಹಾಗೂ 1,945 ತೃತೀಯ ಲಿಂಗಿ ಮತದಾರರು ಇದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅತೀ ಕಡಿಮೆ 16,41,156 ಮತದಾರರಿದ್ದರೆ, ಅತಿ ಹೆಚ್ಚು ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ 20,98,202 ಮತದಾರರಿದ್ದಾರೆ.

ದೇಶದ 11 ರಾಜ್ಯ ಮತ್ತು ಕೇಂದ್ರಾಡಳಿತದ ಪ್ರದೇಶಗಳ 93 ಕ್ಷೇತ್ರಗಳಲ್ಲಿ ಮೂರನೇ ಹಂತದ ಮತದಾನ ಆರಂಭವಾಗಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಗುಜರಾತ್‌ನ ಅಹಮದಾಬಾದ್‌ನಲ್ಲಿ ಮತದಾನ ಮಾಡಿದರು. ಮೂರನೇ ಹಂತದಲ್ಲಿ ಸುಮಾರು 120 ಮಹಿಳೆಯರು ಸೇರಿದಂತೆ 1,300ಕ್ಕೂ ಹೆಚ್ಚು ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. 8.39 ಕೋಟಿ ಮಹಿಳೆಯರು ಸೇರಿದಂತೆ 17.24 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದು, 18.5 ಲಕ್ಷ ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. 1.85 ಲಕ್ಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.

ಇದನ್ನೂ ಓದಿ: Lok Sabha Election 2024: ಮತ ಹಕ್ಕು ಚಲಾಯಿಸಿದ ಪ್ರಧಾನಿ ಮೋದಿ; ಮತದಾನ ಮಾಡಲು ಕನ್ನಡದಲ್ಲೇ ಕರೆ

Continue Reading

ಮಳೆ

karnataka Weather : ಇಂದು ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ; ಸಂಜೆಗೆ ಭಾರಿ ವರ್ಷಧಾರೆ

Karnataka Weather Forecast : ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಗಳವಾರ ಮಳೆಯು (Rain News) ಅಬ್ಬರಿಸಲಿದೆ. ಜೋರಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯದ ವಿವಿಧೆಡೆ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ (Rain News) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಗುಡುಗು ಸಹಿತ ಮಳೆಯಾಗಲಿದ್ದು, ಬಿರುಗಾಳಿಯು ಜತೆಗೆ ಇರಲಿದೆ. ಹೀಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆಗೆ ಮಳೆಗೂ ಮುನ್ನವೇ ವೋಟ್‌ ಹಾಕಿಬಿಡಿ.

ಆಲಿಕಲ್ಲು ಮಳೆ ಎಚ್ಚರಿಕೆ

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗುಡುಗು ಸಹಿತ ಅಲ್ಲಲ್ಲಿ ಆಲಿಕಲ್ಲು ಮಳೆಯಾಗಲಿದೆ. ಮಲೆನಾಡಿನಲ್ಲಿ ಮಾಯವಾಗಿದ್ದ ಮಳೆಯು ಮತ್ತೆ ಹಾಜರಾತಿ ಹಾಕಿದೆ. ಮಲೆನಾಡಿನ ಕೊಡಗು ಹಾಗೂ ದಕ್ಷಿಣ ಒಳನಾಡಿನ ಮೈಸೂರು ಮತ್ತು ಮಂಡ್ಯದಲ್ಲಿ ಕೆಲವೆಡೆ ಭಾರೀ ಮಳೆಯೊಂದಿಗೆ ಅಬ್ಬರಿಸಲಿದೆ.

ಕರಾವಳಿಯಲ್ಲೂ ಮಳೆಯಿಲ್ಲದೇ ತಾಪಮಾನ ಹೆಚ್ಚಾಗಿತ್ತು. ಮಂಗಳವಾರ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಸೇರಿ ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬಳ್ಳಾರಿಯಲ್ಲೂ ಮಳೆ ಅಬ್ಬರಿಸಲಿದೆ. ಇನ್ನೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯೊಂದಿಗೆ ಗುಡುಗು ಇರಲಿದೆ.

ಬೆಂಗಳೂರಲ್ಲಿ ಸಂಜೆ ಮಳೆ

ರಾಜಧಾನಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರುತ್ತದೆ. ಕೆಲವು ಪ್ರದೇಶಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರದೊಂದಿಗೆ ಸಾಧಾರಣ ಮಳೆಯಾಗಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 37 ಮತ್ತು 24 ಡಿ.ಸೆ ಇರಲಿದೆ.

ಗುಡುಗು ಸಹಿತ ಮಳೆಗೆ ಯೆಲ್ಲೋ ಅಲರ್ಟ್

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

ಮಳೆ ನಡುವೆಯೂ ಈ ಜಿಲ್ಲೆಗಳಿಗೆ ಹೀಟ್‌ ವೇವ್‌

ಒಂದು ಕಡೆ ಮಳೆಯು ಅಬ್ಬರಿಸುತ್ತಿದ್ದರೆ ಇತ್ತ ಹೀಟ್‌ ವೇವ್‌ ಎಚ್ಚರಿಕೆಯನ್ನು ಹವಾಮಾನ ತಜ್ಞರು ನೀಡಿದ್ದಾರೆ. ಏ.7ರಂದು ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ವಿಜಯನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗುವ ಸಾದ್ಯತೆ ಇದೆ.

ಶಾಖ ತರಂಗಕ್ಕೆ ಈ ಜಿಲ್ಲೆಗಳಿಗೆ ಆರೆಂಜ್ ಹಾಗೂ ಯೆಲ್ಲೋ ಎಚ್ಚರಿಕೆ

ವಿಜಯನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ಯಾದಗಿರಿ, ಕೊಪ್ಪಳ, ಕಲಬುರಗಿ, ಬೀದರ್, ಬಾಗಲಕೋಟೆಯ ಜಿಲ್ಲೆಗಳಲ್ಲಿ ತಾಪಮಾನ ದುಪ್ಪಟ್ಟು ಆಗಲಿದೆ. ಹೀಗಾಗಿ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದಂತೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Rain News : ಬೆಂಗಳೂರಲ್ಲಿ ಎರಡು ದಿನಗಳಿಂದ ಕಾಣೆಯಾಗಿದ್ದ, ಸೋಮವಾರ (ಮೇ.6) ಸಂಜೆ ಆಗುತ್ತಿದ್ದಂತೆ ಮಳೆಯು (Bengaluru Rains) ಮತ್ತೆ ಅಬ್ಬರಿಸಿದೆ. ಭಾರಿ ಗಾಳಿಯೊಂದಿಗೆ ಗುಡುಗು, ಸಿಡಿಲಿನ ಮಳೆಯಾಗಿದೆ. ಇನ್ನೊಂದು ವಾರ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
Koo

ಬೆಂಗಳೂರು: ರಾಜ್ಯಾದ್ಯಂದ ಬಿಡುವು ಕೊಟ್ಟ ಮಳೆರಾಯ ಮತ್ತೆ ಅಬ್ಬರಿಸಲು ಸಜ್ಜಾಗುತ್ತಿದ್ದಾನೆ. ಬಿಸಿಲ ಬೇಗೆಯಿಂದ ತತ್ತರಿಸಿದ್ದ ಜನತೆಗೆ ಸಂಜೆ ಆಗುತ್ತಿದ್ದಂತೆ ಮಳೆಯು ಧರೆಗಿಳಿದಿತ್ತು. ಬೆಂಗಳೂರು (Benagluru Rains), ದೇವನಹಳ್ಳಿ, ಏರ್‌ಪೋರ್ಟ್‌ ಸುತ್ತಮುತ್ತ ಜೋರು ಗಾಳಿಯೊಂದಿಗೆ ಮಳೆ ಶುರುವಾಯಿತು. ಆಗಾಗ ಗುಡುಗು ಸಿಡಿಲು ಬಂದು ಹೋಗಿತ್ತು. ಇನ್ನೊಂದು ವಾರ ಬಿರುಗಾಳಿ ಜತೆಗೆ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸಚನೆಯನ್ನು (Karnataka Weather Forecast) ನೀಡಿದೆ.

ಆನೇಕಲ್‌ನ ವಣಕನಹಳ್ಳಿ, ಸೋಲೂರು ಗೊಮ್ಮಾಳಾಪುರ ಭಾಗದಲ್ಲಿ ಆಲಿಕಲ್ಲು ಸಹಿತ ಮಳೆಯಾಗುತ್ತಿದೆ. ಆನೇಕಲ್, ಎಲೆಕ್ಟ್ರಾನಿಕ್ ಸಿಟಿ, ಚಂದಾಪುರ, ಅತ್ತಿಬೆಲೆ, ಹೆಬ್ಬಗೋಡಿಯಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಕಳೆದ ಅರ್ಧ ಗಂಟೆಯಿಂದ ಮಳೆಯು ಸುರಿಯುತ್ತಿದ್ದು, ಕಾದ ಕೆಂಡವಾಗಿದ್ದ ವಾತಾವರಣ ತಂಪಾಗಿದೆ. ಬೆಂಗಳೂರು ನಗರದ ವಿಧಾನಸೌಧ, ಚಾಲುಕ್ಯ ಸರ್ಕಲ್, ಆನಂದ್ ರಾವ್ ಸರ್ಕಲ್, ಮೆಜೆಸ್ಟಿಕ್ ಸೇರಿ ಶಿವಾಜಿನಗರ, ಕೆಂಗೇರಿ ಅಸುಪಾಸು ಮಳೆಯಾಗುತ್ತಿದೆ. ಇನ್ನೂ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವಾಹನ ಸವಾರರು ಮಳೆಯಲ್ಲಿ ಸಿಲುಕಿಕೊಂಡರು. ಇತ್ತ ದಿಢೀರ್‌ ಮಳೆಗೆ ಬಸ್‌ ನಿಲ್ದಾಣ, ಸೇತುವೆ ಕೆಳಗೆ ಆಶ್ರಯಿಸಿದರು.

ಇದನ್ನೂ ಓದಿ: Summer Holiday Fashion: ಸೀಸನ್‌ ಟ್ರೆಂಡ್‌ನ ಟಾಪ್‌ ಲಿಸ್ಟ್‌ನಲ್ಲಿ ಸಮ್ಮರ್‌ ಹಾಲಿಡೇ ಫ್ಯಾಷನ್‌

ದೇವನಹಳ್ಳಿ ಸುತ್ತಮುತ್ತ ತುಂತುರು ಮಳೆ

ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಮಳೆಯಾಗಿದೆ. ಬಿಸಿಲಿನ ಬೇಗೆಯಿಂದ ಬೆಂದಿದ್ದ ಜನತೆಗೆ ಸ್ವಲ್ಪ ಮಟ್ಟಿಗೆ ವರುಣ ತಂಪೆರದಿದ್ದಾನೆ. ಮಳೆ ಆರಂಭವಾಗುತ್ತಿದ್ದಂತೆ ಜನರು ತಮ್ಮ ಮೊಬೈಲ್‌ಗಳಲ್ಲಿ ಮಳೆ ಸೆರೆ ಹಿಡಿಯಲು ಮುಂದಾದ ದೃಶ್ಯ ಕಂಡು ಬಂತು.

ಮೇ 10ರವರೆಗೆ ಮಳೆಯಾರ್ಭಟ

ಚಾಮರಾಜನಗರ ಮತ್ತು ರಾಮನಗರದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಒಂದು ಅಥವಾ ಎರಡು ಸ್ಥಳಗಳಲ್ಲಿ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಕೊಡಗು, ಮೈಸೂರು ಮತ್ತು ಮಂಡ್ಯದಲ್ಲೂ ಕೆಲವೆಡೆ ವ್ಯಾಪಕ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉಡುಪಿ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ವಿಜಯನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಸಾಥ್‌ ನೀಡಲಿದೆ.

ಮತದಾನಕ್ಕೆ ಮಳೆ ಅಡ್ಡಿ

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಪ್ರಕ್ರಿಯೆ ನಡೆಯಲಿದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಹೀಗಾಗಿ ಮತದಾನಕ್ಕೆ ಮಳೆರಾಯ ಅಡ್ಡಿಯಾಗಲಿದ್ದನ್ನಾ ಎಂಬ ಅನುಮಾನವಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Yallapura MLA Shivaram Hebbar voting in Arabail village
ರಾಜಕೀಯ5 mins ago

Lok Sabha Election 2024: ಅಭಿವೃದ್ಧಿ ಕಾರ್ಯಕ್ಕಾಗಿ ನೀತಿ ಸಂಹಿತೆ ಸಡಿಲಿಸಲು ಶಿವರಾಮ ಹೆಬ್ಬಾರ್ ಮನವಿ

Haryana Government
ಪ್ರಮುಖ ಸುದ್ದಿ10 mins ago

Haryana Government : ಹರಿಯಾಣದ ಬಿಜೆಪಿ ಸರ್ಕಾರ ಪತನ ಸಾಧ್ಯತೆ; 3 ಪಕ್ಷೇತರರು ಕಾಂಗ್ರೆಸ್ ಕಡೆಗೆ

Prajwal Revanna Case HD Revanna refuses to face to face with 2nd accused in kidnapping case
ಕ್ರೈಂ12 mins ago

Prajwal Revanna Case: ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ ಜತೆ ಮುಖಾಮುಖಿ ವಿಚಾರಣೆಗೆ ಒಪ್ಪದ ರೇವಣ್ಣ!

Shrikhshetra Siddrabetta Balehonnur Khasa Shakha Math 18th year Anniversary on June 9 says sri veerabhadra shivacharya swamiji
ತುಮಕೂರು16 mins ago

Tumkur News: ಜೂ. 9ಕ್ಕೆ ಸಿದ್ದರಬೆಟ್ಟದ ಬಾಳೆಹೊನ್ನೂರು ಖಾಸಾ ಶಾಖಾ ಮಠದ ವಾರ್ಷಿಕೋತ್ಸವ

Bidar Lok Sabha constituency BJP candidate Bhagwanth Khooba voting in Aurad
ಬೀದರ್‌19 mins ago

Lok Sabha Election 2024: ಔರಾದ್‌ನಲ್ಲಿ ಬಿಜೆಪಿ ಅಭ್ಯರ್ಥಿ ಭಗವಂತ್ ಖೂಬಾ ಮತದಾನ

Lok Sabha Election
ದೇಶ21 mins ago

Lok Sabha Election: 3ನೇ ಹಂತದಲ್ಲಿ ಶೇ.60ರಷ್ಟು ಮತದಾನ, ಕಳೆದ ಬಾರಿಗಿಂತಲೂ ಕಡಿಮೆ

Prajwal Revanna Case HD Revanna suffers heartburn and gastric problems Shift to hospital
ರಾಜಕೀಯ47 mins ago

Prajwal Revanna Case: ಎಚ್.ಡಿ. ರೇವಣ್ಣಗೆ ಎದೆ ಉರಿ, ಗ್ಯಾಸ್ಟ್ರಿಕ್‌ ತೊಂದರೆ; ಆಸ್ಪತ್ರೆಗೆ ಶಿಫ್ಟ್

Lok Sabha Election 2024
Lok Sabha Election 202449 mins ago

Lok Sabha Election 2024: ಕೈಗಳಿಲ್ಲದಿದ್ದರೂ ಮತದಾನ ಮಾಡಿ ಮಾದರಿಯಾದ ಅಂಕಿತ್ ಸೋನಿ

Met Gala 2024
ಫ್ಯಾಷನ್54 mins ago

Met Gala 2024: ಮೆಟ್ ಗಾಲಾದಲ್ಲಿ 200 ಕ್ಯಾರಟ್ ವಜ್ರ ಧರಿಸಿ ಗಮನ ಸೆಳೆದ ಸುಧಾ ರೆಡ್ಡಿ! ಯಾರಿವರು?

IPL 2024: KKR's Flight to Kolkata Unexpectedly Diverted Mid-Air
ಪ್ರಮುಖ ಸುದ್ದಿ60 mins ago

IPL 2024 : ಗುರಿ ಬಿಟ್ಟು ಬೇರೆ ಕಡೆಗೆ ಪ್ರಯಾಣಿಸಿದ ಕೆಕೆಆರ್​ ಆಟಗಾರರಿದ್ದ ವಿಮಾನ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ2 hours ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ4 hours ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ1 day ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ1 day ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ1 day ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

ಟ್ರೆಂಡಿಂಗ್‌