India Energy Week 2023 | ನಾವೀನ್ಯಕಾರರಿಗೆ ಇಂಧನ ಸಪ್ತಾಹದಿಂದ ಅಭೂತಪೂರ್ವ ಅವಕಾಶ: ಹರ್ದೀಪ್ ಎಸ್‌ ಪುರಿ - Vistara News

ಬೆಂಗಳೂರು

India Energy Week 2023 | ನಾವೀನ್ಯಕಾರರಿಗೆ ಇಂಧನ ಸಪ್ತಾಹದಿಂದ ಅಭೂತಪೂರ್ವ ಅವಕಾಶ: ಹರ್ದೀಪ್ ಎಸ್‌ ಪುರಿ

India Energy Week 2023 | ಭಾರತ-ಜಿ20 ಅಧ್ಯಕ್ಷತೆ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ “ಭಾರತ ಇಂಧನ ಸಪ್ತಾಹ-2023” ಅನ್ನು ಬೆಂಗಳೂರಿನಲ್ಲಿ 2023ರ ಫೆಬ್ರವರಿ 6 ರಿಂದ 8ರ ವರೆಗೆ ಆಯೋಜಿಸಲಾಗಿದೆ.

VISTARANEWS.COM


on

India Energy Week 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತದ ಮಹತ್ವಾಕಾಂಕ್ಷೆಯ ಇಂಧನ ಕಾರ್ಯಕ್ರಮದ ಮೊದಲ ಆವೃತ್ತಿ “ಭಾರತ ಇಂಧನ ಸಪ್ತಾಹ-2023” (India Energy Week 2023) ಹಿನ್ನೆಲೆಯಲ್ಲಿ ನಗರದ ಅರಮನೆಯಲ್ಲಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ, ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್‌ ಪುರಿ ನೇತೃತ್ವದಲ್ಲಿ ಶುಕ್ರವಾರ ಪೂರ್ವಭಾವಿ ಸಭೆ ನಡೆಯಿತು.

ಸಭೆಯಲ್ಲಿ ಜಾಗತಿಕ ಇಂಧನ ವಲಯದ ಪ್ರಮುಖ ಸಂಸ್ಥೆಗಳ ಪ್ರತಿನಿಧಿಗಳು, ಇಂಧನ, ಮಾಹಿತಿ ತಂತ್ರಜ್ಞಾನ ಹಣಕಾಸು ಕಂಪನಿಗಳು ಸೇರಿ ಕರ್ನಾಟಕದಲ್ಲಿನ ಪ್ರಮುಖ ಭಾರತೀಯ ಕಂಪನಿಗಳ ಪ್ರತಿನಿಧಿಗಳು, ಅಂತಾರಾಷ್ಟ್ರೀಯ ರಾಜತಾಂತ್ರಿಕ ಸಮುದಾಯದ ಸದಸ್ಯರು ಮತ್ತಿತರರು ಭಾಗವಹಿಸಿದ್ದರು. ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

ಭಾರತ ಇಂಧನ ಸಪ್ತಾಹ-2023ರಲ್ಲಿ ಡಿಸೆಂಬರ್ 23ರಂದು ನವ ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ “ಡ್ಯಾನ್ಸಿಂಗ್ ಚಾರ್ಜ್ ಎಲೆಕ್ಟ್ರಿಕ್ ವಾಹನಗಳು”, 2023ರ ಜನವರಿ 8ರಂದು ನವ ದೆಹಲಿಯಿಂದ ಮಾನೆಸರ್‌ವರೆಗೆ ನಡೆಯಲಿರುವ ಸುಸ್ಥಿರ ಇಂಧನ ವಾಹನಗಳಿಗಾಗಿ ಕಾರ್ ರ್‍ಯಾಲಿ ಸೇರಿ ಹಲವು ಕಾರ್ಯಕ್ರಮಗಳು ಒಳಗೊಂಡಿದ್ದು, ಇವುಗಳ ಮೂಲಕ ಭವಿಷ್ಯದ ಶುದ್ಧ ಹಾಗೂ ಹಸಿರು ಇಂಧನಕ್ಕಾಗಿ ಭಾರತ ಕೈಗೊಂಡಿರುವ ಹಲವು ಹಾದಿಗಳನ್ನು ಬಿಂಬಿಸಲಾಗುತ್ತದೆ.

ಪೂರ್ವಭಾವಿ ಸಭೆಯಲ್ಲಿ ಸಚಿವ ಹರ್ದೀಪ್ ಸಿಂಗ್‌ ಪುರಿ ಮಾತನಾಡಿ, ಇಂಧನ ಮೂಲಸೌಕರ್ಯ, ಉತ್ಪಾದನಾ ವಲಯ ಮತ್ತು ಶೋಧನೆಯಲ್ಲಿ ಭಾರತವನ್ನು ಹೂಡಿಕೆ ಸ್ನೇಹಿಯಾಗಿ ಮಾಡಿರುವುದು ಸೇರಿ ಇಂಧನ ವಲಯದಲ್ಲಿ ಭಾರತ ಅದ್ಭುತ ಸಾಧನೆಯನ್ನು ಪ್ರದರ್ಶಿಸಿದ್ದು, ದೇಶವನ್ನು ಉತ್ಪಾದನಾ ತಾಣವನ್ನಾಗಿ ಪರಿವರ್ತಿಸುವ ಕಾರ್ಯ ನಡೆದಿದೆ ಎಂದರು.

ನೊ ಗೋ ಪ್ರದೇಶಗಳನ್ನು (ಯಾರೂ ಹೋಗಲಾದತಂಹ ಪ್ರದೇಶ) ಶೇಕಡ 99 ತಗ್ಗಿಸುವುದು, ರಾಷ್ಟ್ರೀಯ ದತ್ತಾಂಶ ಭಂಡಾರ (ಎನ್‌ಡಿಆರ್) ಯೋಜನೆ ಮೂಲಕ ಸುಲಭವಾಗಿ ದತ್ತಾಂಶ ಲಭ್ಯವಾಗುವಂತೆ ಮಾಡುವುದು. ಹೈಡ್ರೋಜನ್ ಸಂಪನ್ಮೂಲ ಮೌಲ್ಯಮಾಪನ (ಎಚ್ಆರ್‌ಎ) ಯೋಜನೆ, ಶ್ರೇಣಿ ವ್ಯವಸ್ಥೆಯ ಬಾವಿಗಳ ಉಪಕ್ರಮ ಆರಂಭ, ಉತ್ಕೃಷ್ಟ ನಗರ ಅನಿಲ ವಿತರಣಾ ಯೋಜನೆ, ಅನಿಲ ಮೂಲಸೌಕರ್ಯಕ್ಕೆ ಗಣನೀಯ ಒತ್ತು ಮತ್ತಿತರ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತಿದೆ ಎಂದರು.

ಪ್ರತಿ ದಿನ ಸರಾಸರಿ 60 ಮಿಲಿಯನ್ ಗ್ರಾಹಕರು ಪೆಟ್ರೋಲ್ ಪಂಪ್‌ಗಳಿಗೆ ಭೇಟಿ ನೀಡುತ್ತಿದ್ದು, ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಕಂಡುಬರುವ ತೀವ್ರ ಚಂಚಲತೆಯಿಂದ ರಕ್ಷಿಸಲ್ಪಡುತ್ತಾರೆ ಎಂಬುದನ್ನು ಖಾತ್ರಿಪಡಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಸಚಿವರು ಪುನರುಚ್ಛರಿಸಿದರು.

ಭಾರತ-ಜಿ20 ಅಧ್ಯಕ್ಷತೆ ವಹಿಸಿಕೊಂಡಿರುವ ಹಿನ್ನೆಲೆಯಲ್ಲಿ “ಭಾರತ ಇಂಧನ ಸಪ್ತಾಹ-2023” ಅನ್ನು ಬೆಂಗಳೂರಿನಲ್ಲಿ 2023ರ ಫೆಬ್ರವರಿ 6 ರಿಂದ 8ರ ವರೆಗೆ ಆಯೋಜಿಸಲಾಗಿದೆ. ಈ ಸಪ್ತಾಹಕ್ಕೆ “ಪ್ರಗತಿ, ಸಹಭಾಗಿತ್ವ ಮತ್ತು ಪರಿವರ್ತನೆ” ಎಂಬುದು ಘೋಷವಾಕ್ಯವಾಗಿದೆ. “ಭಾರತ ಇಂಧನ ಸಪ್ತಾಹ-2023” ರಲ್ಲಿ 30ಕ್ಕೂ ಅಧಿಕ ಇಂಧನ ಸಚಿವರು, ಜಾಗತಿಕ ಕಂಪನಿಗಳ 50ಕ್ಕೂ ಅಧಿಕ ಸಿಇಒಗಳು, 30 ಸಾವಿರಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಇದು ಜಾಗತಿಕ ಆರ್ಥಿಕ ಪ್ರಗತಿಯ ಎಂಜಿನ್ ಮತ್ತು ಜಾಗತಿಕ ಬಳಕೆಯ ಚಾಲಕಶಕ್ತಿ ಎರಡೂ ಆಗಿರುವ ಭಾರತದ ಸಾಮರ್ಥ್ಯವನ್ನು ಪ್ರತಿಬಿಂಬಿಸುವ ಅನನ್ಯ ಅವಕಾಶ ಒದಗಿಸುತ್ತದೆ ಎಂದು ತಿಳಿಸಿದರು.

ಬೇಡಿಕೆಯ ಪ್ರಮಾಣ, ತಾಂತ್ರಿಕ ಬದಲಾವಣೆಗಳು ಮತ್ತು ಡಿಜಿಟಲ್ ನಾವಿನ್ಯತೆಯಿಂದಾಗಿ ಇಂಧನ, ಭಾರತದ ಅತ್ಯಂತ ಪ್ರಮುಖ ಕ್ರಿಯಾಶೀಲ ವಲಯವಾಗಿ ಮಾರ್ಪಟ್ಟಿದೆ. ಐಇಡಬ್ಲ್ಯು-2023 ಪ್ರಾದೇಶಿಕ, ಅಂತಾರಾಷ್ಟ್ರೀಯ ನಾಯಕರಿಗೆ ಮತ್ತು ಸಿಇಒಗಳಿಗೆ ಒಗ್ಗೂಡಿ ಕಾರ್ಯತಂತ್ರ, ನೀತಿ ನಿರೂಪಣೆ ಮತ್ತು ತಾಂತ್ರಿಕ ಜ್ಞಾನ ಹಂಚಿಕೆಗೆ ಅಭೂತಪೂರ್ವ ಅವಕಾಶಗಳನ್ನು ಒದಗಿಸಲಿದೆ ಎಂದು ಹೇಳಿದರು.

ಇಂಧನ ಸುರಕ್ಷತೆ, ಇಂಗಾಲ ಪ್ರಮಾಣ ತಗ್ಗಿಸುವ ಮಾರ್ಗೋಪಾಯಗಳು, ಸ್ಥಿತಿ ಸ್ಥಾಪಕತ್ವ ಇಂಧನ ಪೂರೈಕೆ ಸರಣಿ, ಜೈವಿಕ ಇಂಧನ ಮತ್ತು ಹೈಡ್ರೋಜನ್ ಸೇರಿ ಹೊಸ ಬಗೆಯ ಇಂಧನಗಳು, ಮೇಲ್ಮೈ ಮತ್ತು ಮಧ್ಯಮ ವಲಯದ ಹೂಡಿಕೆ ಮತ್ತಿತರ ವಿಷಯಗಳು ಕಾರ್ಯತಾಂತ್ರಿಕ ಸಮಾವೇಶದ ಕಾರ್ಯಸೂಚಿಯಲ್ಲಿ ಸೇರಿವೆ. ಕಾರ್ಯತಾಂತ್ರಿಕ ಸಮಾವೇಶ ಮಾತ್ರವಲ್ಲದೆ, ಸಮಾವೇಶದಲ್ಲಿ ತಾಂತ್ರಿಕ ಮತ್ತು ವಾಣಿಜ್ಯ ಸಮಾವೇಶ ಗೋಷ್ಠಿಗಳು ನಡೆಯಲಿದ್ದು, ಅಲ್ಲಿ ಇಂಧನ ಮಾರುಕಟ್ಟೆಯ ಚಿತ್ರಣದ ಕುರಿತಂತೆ ಸದ್ಯದ ಮತ್ತು ಭವಿಷ್ಯದ ಆಯಾಮಗಳ ಬಗ್ಗೆ ಚರ್ಚೆಗಳನ್ನು ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ | Tata Motors | ಬಿಎಂಟಿಸಿಗೆ 921 ಎಲೆಕ್ಟ್ರಿಕ್​ ಬಸ್​ ಸರಬರಾಜು ಮಾಡುವ ಒಪ್ಪಂದ ಮಾಡಿಕೊಂಡ ಟಾಟಾ ಮೋಟಾರ್ಸ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಬೆಂಗಳೂರು

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Essay on Kempegowda in Kannada: ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜ್ಯಧಾನಿ ಬೆಂಗಳೂರು ಇವತ್ತು ಕೋಟ್ಯಂತರ ಜನರ ಆಶ್ರಯತಾಣವಾಗಿದೆ. ಇಲ್ಲಿನವರಿಗಿಂತ ಹೆಚ್ಚು ಮಂದಿ ಹೊರಗಿನಿಂದ ಬಂದು ಇಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅತ್ಯಂತ ಸುರಕ್ಷಿತ, ಸುಂದರ ಮತ್ತು ಸುಸಜ್ಜಿತ ನಗರವಾಗಿ ಬೆಂಗಳೂರು ಬೆಳೆಯಲು ಕೆಂಪೇಗೌಡ (kempegowda jayanthi) ಅವರ ವಿವೇಚನೆ ಮತ್ತು ದೂರದೃಷ್ಟಿಯೇ ಮುಖ್ಯಕಾರಣ. ಇಂದು ನಾಡಪ್ರಭು ಕೆಂಪೇಗೌಡ ಜಯಂತಿ. ಈ ಹಿನ್ನೆಲೆಯಲ್ಲಿ ಅವರ ಜೀವನ ಮತ್ತು ಸಾಧನೆಯ ಚಿತ್ರಣ ಇಲ್ಲಿದೆ.

VISTARANEWS.COM


on

By

Nadaprabhu Kempegowda
Koo

ಬೆಂಗಳೂರು (bengaluru) ಹೆಸರೆತ್ತಿದ್ದ ತಕ್ಷಣ ನೆನಪಾಗುವುದು (Essay on Kempegowda in Kannada) ನಾಡಪ್ರಭು ಕೆಂಪೇಗೌಡರು ಆಧುನಿಕ (kempegowda jayanthi) ಬೆಂಗಳೂರಿನ ಮೂಲ ಶಿಲ್ಪಿ! ನಾಡಪ್ರಭು ಕೆಂಪೇಗೌಡ (Nadaprabhu Kempegowda). ಬೆಂಗಳೂರಿನ ನಿರ್ಮಾತೃ ಆಗಿರುವ ಇವರು ವಿಜಯನಗರ ಸಾಮ್ರಾಜ್ಯದಲ್ಲಿ (vijayanagara empire) ಮುಖ್ಯಸ್ಥರಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದರು. ಗೌಡ ವಂಶಸ್ಥರಾದ ಇವರು ಆ ಕಾಲದಲ್ಲಿ ಅತ್ಯಂತ ವಿದ್ಯಾವಂತ ಯಶಸ್ವಿ ಆಡಳಿತಗಾರರಲ್ಲಿ ಒಬ್ಬರು ಎಂದು ಗುರುತಿಸಿಕೊಂಡಿದ್ದರು.

ವೇಗವಾಗಿ ಬೆಳೆಯುತ್ತಿರುವ ರಾಜ್ಯ ರಾಜ್ಯಧಾನಿ ಬೆಂಗಳೂರು ಇವತ್ತು ಕೋಟ್ಯಂತರ ಜನರ ಆಶ್ರಯತಾಣವಾಗಿದೆ. ಇಲ್ಲಿನವರಿಗಿಂತ ಹೆಚ್ಚು ಮಂದಿ ಹೊರಗಿನಿಂದ ಬಂದು ಇಲ್ಲಿ ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಅತ್ಯಂತ ಸುರಕ್ಷಿತ, ಸುಂದರ ಮತ್ತು ಸುಸಜ್ಜಿತ ನಗರವಾಗಿ ಬೆಂಗಳೂರು ಬೆಳೆಯಲು ಕೆಂಪೇಗೌಡ ಅವರ ವಿವೇಚನೆ ಮತ್ತು ದೂರದೃಷ್ಟಿಯೇ ಮುಖ್ಯಕಾರಣ.

ವಿಜಯನಗರ ಸಾಮ್ರಾಜ್ಯದ ಸಾಮಂತರಾಗಿದ್ದ ಕೆಂಪೇಗೌಡ ಅವರು 1537ರಲ್ಲೇ ಬೆಂಗಳೂರು ನಗರವನ್ನು ಕಟ್ಟಿದರು. ಬಳಿಕ ಕೆಂಪೇಗೌಡರ ರಾಜಧಾನಿಯನ್ನು ಯಲಹಂಕದಿಂದ ಬೆಂಗಳೂರಿಗೆ ಸ್ಥಳಾಂತರಿಸಲಾಯಿತು. ಎಲ್ಲ ಕುಲ ಕಸುಬುದಾರರಿಗೂ ವ್ಯಾಪಾರ ವಹಿವಾಟಿಗೆ ಅವಕಾಶ ಮಾಡಿಕೊಟ್ಟ ಅವರು, ಬೆಂಗಳೂರು ನಗರವನ್ನು ಪ್ರಮುಖ ವಾಣಿಜ್ಯ ಕೇಂದ್ರವಾಗಿ ಬೆಳೆಯಲು ಕಾರಣರಾದರು.

ಕೆಂಪೇಗೌಡ ಅವರ ಹಿನ್ನೆಲೆ ಏನು?

ಶಾಸನಗಳ ಪ್ರಕಾರ ನಾಡಪ್ರಭು ಕೆಂಪೇಗೌಡರ ಪೂರ್ವಜರು ತಮಿಳುನಾಡಿನಿಂದ ದೇವನಹಳ್ಳಿ ತಾಲೂಕಿನ ಆವತಿ ಗ್ರಾಮಕ್ಕೆ ವಲಸೆ ಬಂದಿದ್ದರು ಎನ್ನಲಾಗುತ್ತದೆ. ರಣಭೈರೇಗೌಡ ಅವರು ಏಳು ತಮ್ಮಂದಿರಾದ ಮಲ್ಲಭೈರೇಗೌಡ, ಸಣ್ಣ ಭೈರೇಗೌಡ, ವೀರೇಗೌಡ, ಮರೀಗೌಡ, ಗಿಡ್ಡೇಗೌಡ, ತಮ್ಮೇಗೌಡ ಮತ್ತು ಗಿಟ್ಟಪ್ಪಗೌಡ ಅವರೊಂದಿಗೆ ಮಕ್ಕಳು ಜಯಗೌಡ, ಸಣ್ಣ ಭೈರೇಗೌಡ, ಹಾವಳಿ ಬೈರೇಗೌಡ ಅವರೊಂದಿಗೆ ಬಂದು ಇಲ್ಲಿ ನೆಲೆಯಾದರು. ತಮ್ಮ ಒಬ್ಬಳೇ ಮಗಳು ದೊಡ್ಡಮ್ಮಳನ್ನು ಆ ಪ್ರಾಂತ್ಯದ ಯಾಕಿಲ ದೊರೆ ಸೆಲ್ವ ನಾಯಕ ಸೊಸೆ ಮಾಡಿಕೊಂಡಿದ್ದರಿಂದ ಅವರೆಲ್ಲ ಇಲ್ಲಿಗೆ ಬಂದರು ಎನ್ನಲಾಗುತ್ತದೆ.

ಮಾಗಡಿ ಕೆಂಪೇಗೌಡ, ಯಲಹಂಕ ಕೆಂಪೇಗೌಡ, ನಾಡಪ್ರಭು ಕೆಂಪೇಗೌಡರು ಬೇರೆ ಬೇರೆಯೇ ಅಥವಾ ಎಲ್ಲರೂ ಒಬ್ಬರೇ ಎನ್ನುವ ಪ್ರಶ್ನೆಗಳು ಈಗಲೂ ಇವೆ. ಕ್ರಿ.ಶ.1420ರಲ್ಲಿ ಅಧಿಕಾರಕ್ಕೆ ಏರಿದ ಯಲಹಂಕ ಕೆಂಪೇಗೌಡ ರಣಭೈರೇಗೌಡ ಅವರ ಹಿರಿಯ ಮಗ ಜಯಗೌಡ ಎನ್ನಲಾಗುತ್ತದೆ. 13 ವರ್ಷಗಳ ಕಾಲ ಆಡಳಿತ ನಡೆಸಿ 1433ರಲ್ಲಿ ಮೃತಪಟ್ಟಿದ್ದರು. ಅವರಿಗೆ ಇಬ್ಬರು ಮಕ್ಕಳು. ಗಿಡ್ಡೇಗೌಡ ಮತ್ತು ಮಾಚಯ್ಯಗೌಡ. ಹಿರಿಯನಾದ ಗಿಡ್ಡೇಗೌಡ, ತಂದೆಯ ಅನಂತರ ಅಧಿಕಾರಕ್ಕೆ ಏರಿದರು.

ಮನೆದೇವರು ಕರಗದಮ್ಮನಿಗೆ ಕೆಂಪಮ್ಮಹರಕೆ ಹೊತ್ತಿದ್ದರಿಂದ ಹಲವು ವರ್ಷಗಳ ಅನಂತರ ಅವರಿಗೆ ಗಂಡು ಮಗು ಹುಟ್ಟಿದ್ದು, ಆ ಮಗುವಿಗೆ ಕೆಂಪನಂಜೇಗೌಡ ಎಂದು ನಾಮಕರಣ ಮಾಡಲಾಯಿತು. 10 ವರ್ಷಗಳ ಕಾಲ ಆಡಳಿತ ನಡೆಸಿದ ಗಿಡ್ಡೇಗೌಡ ಅವರ ಬಳಿಕ ಅಧಿಕಾರಕ್ಕೆ ಬಂದವರು ಕೆಂಪನಂಜೇಗೌಡ. ಇವರು 70 ವರ್ಷಗಳ ಕಾಲ ಯಲಹಂಕವನ್ನು ಆಳಿದ್ದರು. ಇವರ ಹಿರಿಯ ಪುತ್ರ ನಾಡಪ್ರಭು ಕೆಂಪೇಗೌಡ. ಕೆಂಪೇಗೌಡ ಅವರು ಹೆಸರಘಟ್ಟ ಸಮೀಪದ ಐವರುಕಂದಪುರದ (ಐಗೊಂಡಾಪುರ) ಗುರುಕುಲದಲ್ಲಿದ್ದಾಗ ತಮ್ಮ ನಾಯಕತ್ವದ ಕೌಶಲ್ಯವನ್ನು ಪ್ರದರ್ಶಿಸಿದರು.

ವಿಜಯನಗರದೊಂದಿಗೆ ಸಂಬಂಧ

ಕೆಂಪೇಗೌಡರಿಗೆ 1513ರಲ್ಲಿ ಪಟ್ಟಾಭಿಷೇಕ ನಡೆದಿತ್ತು. ಇವರ ಅಧಿಕಾರ ಅವಧಿಯಲ್ಲಿ ವಿಜಯನಗರ ಸಾಮ್ರಾಜ್ಯವನ್ನು ಶ್ರೀಕೃಷ್ಣದೇವರಾಯ ಮತ್ತು ಅಚ್ಯುತರಾಯ ಆಳಿದರು. ಸಣ್ಣ ಗ್ರಾಮವಾಗಿದ್ದ ಬೆಂಗಳೂರನ್ನು ಕೆಂಪೇಗೌಡರು ವಿಸ್ತರಿಸುತ್ತಾ ಬೆಳೆಸಿದರು. ಕ್ರಿ.ಶ.1537ರ ವೇಳೆಗೆ ಬೆಂಗಳೂರಿಗೆ ಕೋಟೆ ಕಟ್ಟಿಸಿ ಅದನ್ನು ರಾಜಧಾನಿಯನ್ನಾಗಿ ಮಾಡಿದರು.

ಬೆಂಗಳೂರಿನ ಕಲ್ಪನೆ

ಕೆಂಪೇಗೌಡ ಅವರು ತಮ್ಮ ಮಂತ್ರಿ ವೀರಣ್ಣ ಮತ್ತು ಸಲಹೆಗಾರ ಗಿಡ್ಡೆ ಗೌಡ ಅವರೊಂದಿಗೆ ಶಿವನಸಮುದ್ರದ ಕಡೆಗೆ ಬೇಟೆಯಾಡಲು ಹೋಗಿದ್ದಾಗ ಬೆಂಗಳೂರನ್ನು ಸುಂದರ ನಗರವನ್ನಾಗಿ ನಿರ್ಮಿಸುವ ಯೋಜನೆ ಮಾಡಿಕೊಂಡರು ಎನ್ನಲಾಗುತ್ತದೆ.

ಹೇಗಿತ್ತು ಪ್ರಾರಂಭ?

ಪ್ರಾರಂಭದಲ್ಲಿ ಕೆಂಪೇಗೌಡ ಅವರು ಬೆಂಗಳೂರು ನಗರದಲ್ಲಿ ಕೋಟೆ, ಕಂಟೋನ್ಮೆಂಟ್, ನೀರಿನ ಜಲಾಶಯಗಳು, ದೇವಾಲಯಗಳು ಮತ್ತು ಎಲ್ಲಾ ವ್ಯಾಪಾರ ಮತ್ತು ವೃತ್ತಿಯ ಜನರು ವಾಸಿಸಲು ಇರಬೇಕು ಎಂದು ಬಯಸಿ ಬೆಂಗಳೂರು- ಪುಣೆ ಹೆದ್ದಾರಿಯಲ್ಲಿ ಬೆಂಗಳೂರಿನಿಂದ 48 ಕಿಲೋಮೀಟರ್ ದೂರದಲ್ಲಿರುವ ಶಿವಗಂಗಾ ಸಂಸ್ಥಾನವನ್ನು ವಶಪಡಿಸಿಕೊಂಡರು. ವಿಜಯನಗರ ಚಕ್ರವರ್ತಿ ಅಚ್ಯುತರಾಯರ ಅನುಮತಿ ಪಡೆದು ಕ್ರಿ.ಶ. 1537ರಲ್ಲಿ ಬೆಂಗಳೂರು ಕೋಟೆ ಮತ್ತು ಪಟ್ಟಣವನ್ನು ನಿರ್ಮಿಸಿದ ಅವರು ಬಳಿಕ ತಮ್ಮ ರಾಜಧಾನಿಯನ್ನು ಯಲಹಂಕದಿಂದ ಹೊಸ ಬೆಂಗಳೂರು ಪೇಟೆಗೆ ಸ್ಥಳಾಂತರಿಸಿದರು.

ಜೈಲು ಸೇರಿದ್ದರು

ಅವಿವಾಹಿತ ಮಹಿಳೆಯರ ಎಡಗೈಯ ಕೊನೆಯ ಎರಡು ಬೆರಳುಗಳನ್ನು ಕತ್ತರಿಸುವ ಪದ್ಧತಿಯನ್ನು ನಿಷೇಧಿಸಿದ ಕೀರ್ತಿ ಇವರದ್ದು. ಬಹುಭಾಷಾ ಮತ್ತು ತೆಲುಗು ಭಾಷೆಯಲ್ಲಿ ಯಕ್ಷಗಾನ ನಾಟಕವಾದ ಗಂಗಾಗೌರಿ ವಿಲಾಸದ ರಚನೆ ಮಾಡಿರುವ ಕೆಂಪೇಗೌಡ ಅವರನ್ನು ನೆರೆಯ ಪಾಳೇಗಾರರ ದೂರಿನ ಬಳಿಕ ಜೈಲಿಗೆ ಹಾಕಲಾಯಿತು ಎನ್ನಲಾಗುತ್ತದೆ. ಐದು ವರ್ಷಗಳ ಕಾಲ ಜೈಲಿನಲ್ಲಿದ್ದ ಅವರು ಬಳಿಕ ಸುಮಾರು 56 ವರ್ಷಗಳ ಕಾಲ ಆಳ್ವಿಕೆ ನಡೆಸಿ 1569ರಲ್ಲಿ ನಿಧನರಾದರು.


54 ಪೇಟೆಗಳ ನಗರ ಬೆಂಗಳೂರು

ಇವತ್ತು ಬೆಂಗಳೂರು ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಐಟಿ ಬಿಟಿ ಕಂಪನಿಗಳ ತವರಾಗಿರುವ ಬೆಂಗಳೂರಿನಲ್ಲಿ ಕೆಂಪೇಗೌಡರು 54 ಪೇಟೆಗಳು ನಿರ್ಮಿಸಿದ್ದರೆಂದು ಹೇಳಲಾಗುತ್ತದೆ. ಎಲ್ಲ ಜಾತಿ, ಸಮುದಾಯದವರಿಗೆ ವಾಸಿಸಲು ಯೋಗ್ಯವಾದ ನಗರವನ್ನು ನಿರ್ಮಿಸಿದ ಅವರ ಸರ್ವಧರ್ಮ ಸಹಿಷ್ಣುತೆಯು ಪ್ರಜೆಗಳ ಮನಗೆದ್ದಿತ್ತು.

ಇದನ್ನೂ ಓದಿ: Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

ಕೆರೆಗಳ ನಿರ್ಮಾಣ

ನದಿ ಮೂಲಗಳೇ ಇರದ ಬೆಂಗಳೂರಿನ ಜನರ ಕೃಷಿ ಮತ್ತು ಕುಡಿಯುವ ನೀರಿಗಾಗಿ ಧರ್ಮಾಂಬುಧಿ ಕೆರೆ, ಕೆಂಪಾಂಬುಧಿ ಕೆರೆ, ಹಲಸೂರು, ಸಂಪಂಗಿ ಕೆರೆ, ಕಾರಂಜಿ ಕೆರೆ, ಸಿದ್ಧಿಕಟ್ಟೆ, ಕೆಂಪಾಪುರ ಅಗ್ರಹಾರ ಕೆರೆ, ಜಕ್ಕರಾಯನಕೆರೆ ಸೇರಿದಂತೆ ನೂರಾರು ಕೆರೆ-ಕುಂಟೆ, ಕಲ್ಯಾಣಿಗಳನ್ನು ನಿರ್ಮಿಸಿದ್ದರು. ಇವರ ಕಾಲದಲ್ಲಿ 347 ದೊಡ್ಡ ಕೆರೆಗಳು, 1200ಕ್ಕೂ ಅಧಿಕ ಸಣ್ಣ ಕೆರೆ-ಕಟ್ಟೆಗಳಿದ್ದವು ಎನ್ನಲಾಗಿದೆ.

ದೇವಾಲಯ ನಿರ್ಮಾಣ

ಕೆಂಪೇಗೌಡರು ಬೆಂಗಳೂರಿನಲ್ಲಿ ಹಲಸೂರಿನ ಸೋಮೇಶ್ವರ, ಗವಿಪುರದ ಗವಿಗಂಗಾಧರೇಶ್ವರ, ಕಾಡು ಮಲ್ಲೇಶ್ವರ, ದೊಡ್ಡ ಗಣಪತಿ, ಧರ್ಮರಾಯಸ್ವಾಮಿ ದೇವಾಲಯಗಳನ್ನು ನಿರ್ಮಿಸಿದ್ದರು ಎನ್ನಲಾಗುತ್ತದೆ. ಕೇಂಪೇಗೌಡರು ಬೆಂಗಳೂರಿನ ಶಿಲ್ಪಿ ಎಂದು ಇಂದಿಗೂ ಜನಜನಿತರಾಗಿದ್ದಾರೆ.

Continue Reading

ಕರ್ನಾಟಕ

Prajwal Revanna Case: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ವಜಾ; ಮತ್ತೆ ಜೈಲೇ ಗತಿ

Prajwal Revanna Case: ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ವಜಾ ಮಾಡಿದೆ.

VISTARANEWS.COM


on

Prajwal revanna Case
Koo

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಜಾಮೀನು ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ, 82ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಜಡ್ಜ್‌ ಸಂತೋಷ್‌ ಗಜಾನನ ಭಟ್‌ ಅವರು ಜಾಮೀನು ಅರ್ಜಿ ವಜಾಗೊಳಿಸಿದ್ದು, ಇದರಿಂದ ಸದ್ಯ ಪ್ರಜ್ವಲ್‌ಗೆ ಜೈಲೇ ಗತಿಯಾಗಿದೆ.

ಮನೆಗೆಲಸದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲು ಪ್ರಕರಣ ದಾಖಲಾಗಿತ್ತು. ನಂತರ ಪ್ರಜ್ವಲ್ ಮೇಲೆ ಅತ್ಯಾಚಾರ ಆರೋಪವನ್ನು ಪ್ರಕರಣದಲ್ಲಿ ಸೇರಿಸಲಾಗಿತ್ತು. ಪ್ರಕರಣದಲ್ಲಿ ಈಗಾಗಲೇ ಮಾಜಿ ಸಚಿವ ಎಚ್‌.ಡಿ. ರೇವಣ್ಣ ಜಾಮೀನು ಪಡೆದುಕೊಂಡಿದ್ದರು. ಆದರೆ, ಪ್ರಜ್ವಲ್‌ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ.

ʼಪ್ರತಿ ದಿನ ಫೋನ್‌ ಮಾಡಿ ಬಟ್ಟೆ ಕಳಚಲು ಹೇಳ್ತಿದ್ದ…ʼ ಪ್ರಜ್ವಲ್‌ ವಿರುದ್ಧ ದಾಖಲಾದ 4ನೇ ದೂರಿನಲ್ಲಿ ಏನಿದೆ?

prajwal revanna case 4th


ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna Case) ವಿರುದ್ಧ ನಾಲ್ಕನೇ ಪ್ರಕರಣ ದಾಖಲಾಗಿದ್ದು, ಆರೋಪಿಯ ಕುರಿತು ಇನ್ನಷ್ಟು ವಿಕೃತಿಯ ದೂರುಗಳು ದಾಖಲಾಗಿವೆ. ಈ ಪ್ರಕರಣದಲ್ಲಿ ಮಾಜಿ ಶಾಸಕ ಪ್ರೀತಂ ಗೌಡ (Preetham Gowda) ಹೆಸರು ಕೂಡ ತಳುಕು ಹಾಕಿಕೊಂಡಿದೆ.

ಸಿಐಡಿ ಸೈಬರ್ ಕ್ರೈಂ (CID Cyber Crime) ಠಾಣೆಯಲ್ಲಿ ಸಂತ್ರಸ್ತೆ ನೀಡಿದ ದೂರಿನನ್ವಯ ಎಫ್ಐಆರ್ (FIR) ದಾಖಲಾಗಿದೆ. ಎಫ್ಐಆರ್‌ನಲ್ಲಿ ಸಂತ್ರಸ್ತೆಯಿಂದ ಉಲ್ಲೇಖವಾಗಿರುವ ಅಂಶಗಳು ಹೀಗಿವೆ: ಮಗನ ಶಾಲೆ‌ ವಿಚಾರಕ್ಕೆ ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಭೇಟಿಯಾಗಿದ್ದರು. ಭೇಟಿ ವೇಳೆ ಸಂತ್ರಸ್ತೆಯಿಂದ ಪ್ರಜ್ವಲ್‌ ಫೋನ್‌ ನಂಬರ್ ಪಡೆದಿದ್ದ. ನಂಬರ್‌ ಪಡೆದು ವಿಡಿಯೊ ಕಾಲ್ ಮಾಡಿ ದಿನ ನಿತ್ಯ ಮಾತಾಡುತ್ತಿದ್ದ.

ನಂತರ ಮಹಿಳೆಗೆ ವಿಡಿಯೊ ಕಾಲ್ ಮಾಡಿ ವಿವಸ್ತ್ರವಾಗುವಂತೆ ಒತ್ತಾಯಿಸುತ್ತಿದ್ದ. ವಿವಸ್ತ್ರಗೊಂಡ ಮಹಿಳೆಯನ್ನು ನೋಡುತ್ತ ಹಸ್ತಮೈಥುನ ಮಾಡಿಕೊಳ್ಳುತ್ತಿದ್ದ. ವಿವಸ್ತ್ರವಾಗಲು ಒಪ್ಪದಿದ್ದಾಗ ವಿಡಿಯೊ ಸೇವ್ ಮಾಡಿಕೊಂಡಿರುವುದಾಗಿಯೂ, ವೈರಲ್ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಆರೋಪಿಸಲಾಗಿದೆ.

ನಂತರ ಏಕಾಏಕಿ ಸಾಮಾಜಿಕ ಜಾಲತಾಣದಲ್ಲಿ ಈ ಫೋಟೊ ವೈರಲ್ ಆಗಿರುವ ವಿಚಾರ ಸಂತ್ರಸ್ತೆ ಗಮನಕ್ಕೆ ಬಂದಿದೆ. ಈ ಕುರಿತು ಪ್ರಜ್ವಲ್‌ನನ್ನು ಸಂತ್ರಸ್ತ ಮಹಿಳೆ ಸಂಪರ್ಕ ಮಾಡಿದ್ದಾರೆ. ಆಗ ʼಸ್ಟೇ ತಂದಿದ್ದೇನೆ, ಏನೂ ಆಗಲ್ಲʼ ಎಂದಿದ್ದರಂತೆ. ಎರಡನೇ ಬಾರಿ ಫೋಟೊ ವೈರಲ್ ಆದಾಗ ಸಂತ್ರಸ್ತೆ ದೂರು ನೀಡಲು ಮುಂದಾಗಿದ್ದರು.

ಇದನ್ನೂ ಓದಿ: Suraj Revanna Case: ಸೂರಜ್‌ ರೇವಣ್ಣಗೇ ʼಹಿಂದಿನಿಂದ ಇರಿದವರುʼ ಯಾರು?

ವೈರಲ್ ಆದ ಕೆಲವು ಫೋಟೊಗಳನ್ನು ಕಿರಣ್, ಶರತ್ ಹಾಗೂ ಪ್ರೀತಂ ಗೌಡ ವೈರಲ್‌ ಮಾಡಿಸಿರುವ ಆರೋಪ ಇದೆ. ಈ ಹಿನ್ನೆಲೆಯಲ್ಲಿ ಒಟ್ಟು ನಾಲ್ಕು ಜನರ ಮೇಲೆ ದೂರು ನೀಡಲು ಮಹಿಳೆ ಮುಂದಾಗಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಎಸ್ಐಟಿ ಅಧಿಕಾರಿಗಳಿಂದ ತನಿಖೆ‌ ಚುರುಕುಗತಿ ಪಡೆದುಕೊಂಡಿದೆ.

Continue Reading

ಬೆಂಗಳೂರು

Bengaluru News: ಗೋ ಶಾಲೆಗಳಿಗೆ 51 ಲಕ್ಷ ರೂ. ದೇಣಿಗೆ ನೀಡಿದ ಗೋಪ್ರೇಮಿ ಮಹೇಂದ್ರ ಮುನ್ನೋತ್

Bengaluru News: ನಮ್ಮ ತಂದೆ-ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ಜೀವನಪೂರ್ತಿ ಪಂಚಾಮೃತವನ್ನು ನೀಡುವ ಗೋಮಾತೆಯ ಋಣವನ್ನು ಖಂಡಿತಾ ತೀರಿಸಬಹುದು. ಗೋವು ನಮ್ಮ ಸನಾತನ ಪರಂಪರೆಯ ದೈವೀಮೂರ್ತಿ ಮಾತ್ರವಲ್ಲ ಒಂದು ರೀತಿಯ ಪಾಪನಾಶಿನಿ. ಅಲ್ಲದೇ ಭಾರತೀಯ ಕೃಷಿ ವ್ಯವಸ್ಥೆಯ ಮಹಾಪಾತ್ರ ಮತ್ತು ಅನ್ನದಾತನ ಜೀವಬಂಧು ಎಂದು ನಟ, ನಿರ್ಮಾಪಕ ಹಾಗೂ ಗೋಪ್ರೇಮಿ ಮಹೇಂದ್ರ ಮನ್ನೋತ್ ಅಭಿಪ್ರಾಯಪಟ್ಟರು.

VISTARANEWS.COM


on

actor producer and Cow lover Mahendra Munnoth donated 51 lakh rupees to cow shelter
Koo

ಬೆಂಗಳೂರು: ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ತಾಯಿಯಂತೆ ನಮ್ಮನ್ನು ಪೊರೆಯುವ ಗೋಮಾತೆಯ ಋಣವನ್ನು ತೀರಿಸಲು ಖಂಡಿತಾ ಸಾಧ್ಯ ಎಂದು ನಟ, ನಿರ್ಮಾಪಕ ಹಾಗೂ ಗೋಪ್ರೇಮಿ ಮಹೇಂದ್ರ ಮುನ್ನೋತ್ ತಿಳಿಸಿದರು.

ನಗರದ ಕನಕಪುರ ರಸ್ತೆಯ ದಿಣ್ಣೆಪಾಳ್ಯದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ಹಮ್ಮಿಕೊಂಡಿದ್ದ ಗೋಪೂಜೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ನಮ್ಮ ತಂದೆ-ತಾಯಿಯ ಋಣವನ್ನು ತೀರಿಸಲು ಅಸಾಧ್ಯ. ಆದರೆ ಜೀವನಪೂರ್ತಿ ಪಂಚಾಮೃತವನ್ನು ನೀಡುವ ಗೋಮಾತೆಯ ಋಣವನ್ನು ಖಂಡಿತಾ ತೀರಿಸಬಹುದು. ಅಲ್ಲದೇ ಗೋವು ನಮ್ಮ ಸನಾತನ ಪರಂಪರೆಯ ದೈವೀಮೂರ್ತಿ ಮಾತ್ರವಲ್ಲ ಒಂದು ರೀತಿಯ ಪಾಪನಾಶಿನಿ. ಅಲ್ಲದೇ ಭಾರತೀಯ ಕೃಷಿ ವ್ಯವಸ್ಥೆಯ ಮಹಾಪಾತ್ರ ಮತ್ತು ಅನ್ನದಾತನ ಜೀವಬಂಧು. ಅಂತಹ ಗೋವನ್ನು ಉಳಿಸಿದರೆ ಕೇವಲ ಗ್ರಾಮ ಮಾತ್ರವಲ್ಲ ಇಡೀ ದೇಶ ಸಮೃದ್ಧಿ, ಸಂಪದ್ಭರಿತ ಭೂಮಿಯಾಗುತ್ತದೆ. ಈ ನಂಬಿಕೆಯನ್ನು ಪ್ರತಿಯೊಬ್ಬ ಭಾರತೀಯನೂ ಅರ್ಥೈಸಿಕೊಳ್ಳಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ: Kalaburagi News: ಪಂಢರಪುರ, ತುಳಜಾಪುರ ಮಾದರಿಯಲ್ಲಿ ಗಾಣಗಾಪುರ ಕ್ಷೇತ್ರ ಅಭಿವೃದ್ಧಿ

ಬೆಂಗಳೂರಿನ ವಿಜಯನಗರ ಮಾರುತಿ ಮೆಡಿಕಲ್ಸ್‌ನ, ಗೋಸೇವಕ ಮಹೇಂದ್ರ ಮುನ್ನೋತ್, ಗೋಶಾಲೆಗಳ ಉಳಿವಿಗಾಗಿ ಮತ್ತು ಗೋವುಗಳ ಸಂರಕ್ಷಣೆಗಾಗಿ ದೇಣಿಗೆ ನೀಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ. ತಮ್ಮ ವ್ಯಾಪಾರದಲ್ಲಿ ಸಂಗ್ರಹಿಸಿದ ಬಹುಪಾಲು ಹಣವನ್ನು ಗೋವುಗಳ ರಕ್ಷಣೆಗೆ, ಪಾಲನೆಗಾಗಿ ವ್ಯಯಿಸುತ್ತಿರುವ ಮಹೇಂದ್ರ ಮನ್ನೋತ್‌ ಅವರ ಕುಟುಂಬ. ಕಳೆದ ಹದಿನಾಲ್ಕು ವರ್ಷಗಳಿಂದ ಪ್ರತೀ ವರ್ಷ ಗೋಶಾಲೆಗಳಿಗೆ ಲಕ್ಷಾಂತರ ರೂಪಾಯಿಗಳನ್ನು ದೇಣಿಗೆ ನೀಡುತ್ತಾರೆ. ಈ ವರ್ಷ ಅವರು ನಾಡಿನ ವಿವಿಧ ಗೋಶಾಲೆಗಳಿಗೆ 51 ಲಕ್ಷ ರೂಪಾಯಿಗಳನ್ನು ದೇಣಿಗೆ ನೀಡಿದ್ದಾರೆ.

ನಾಡಿನಲ್ಲಿ ಅಕ್ರಮವಾಗಿ ಸಾಗಿಸಲ್ಪಡುವ ಗೋವುಗಳನ್ನು ಕಾನೂನಾತ್ಮಕವಾಗಿ ರಕ್ಷಿಸಿದ ನಂತರ ಆ ಗೋವುಗಳನ್ನು ಈ ಗೋಶಾಲೆಗಳಿಗೆ ತಂದು ಬಿಡಲಾಗುತ್ತದೆ. ಅಂತಹ ಗೋವುಗಳನ್ನು ಪೊರೆಯಲು ಗೋಶಾಲೆಗಳಿಗೆ ಶಕ್ತಿಯನ್ನು ತುಂಬವ ಕೆಲಸವನ್ನು ಮಹೇಂದ್ರ ಮುನ್ನೋತ್‌ ಅವರು ತಮ್ಮ ಮಾತಾಪಿತೃಗಳ ಪುಣ್ಯಸ್ಮರಣೆಯ ಹೆಸರಿನಲ್ಲಿ ಈ ಸೇವೆಯನ್ನು ಮಾಡಿಕೊಂಡು ಬಂದಿದ್ದಾರೆ.

ಕನಕಪುರ ರಸ್ತೆಯ ದಿಣ್ಣೆಪಾಳ್ಯದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ 20ಕ್ಕೂ ಹೆಚ್ಚು ಗೋಶಾಲೆಯ ಮುಖ್ಯಸ್ಥರಿಗೆ ಚೆಕ್‌ ರೂಪದಲ್ಲಿ ಹಣವನ್ನು ನೀಡಲಾಯಿತು.

ಇದನ್ನೂ ಓದಿ: PGCET 2024: ಪಿಜಿಸಿಇಟಿ ಪರೀಕ್ಷೆ ಮುಂದೂಡಿಕೆ; ಶೀಘ್ರದಲ್ಲೇ ಹೊಸ ದಿನಾಂಕ ಪ್ರಕಟ

ಈ ವೇಳೆ ಮಹೇಂದ್ರ ಮುನ್ನೋತ್‌ ಅವರ ಪತ್ನಿ ಸುರಕ್ಷಾ ಹಾಗೂ ಕುಟುಂಬದ ಸದಸ್ಯರು, ಗೋಶಾಲೆಯಲ್ಲಿ ನೂರಕ್ಕೂ ಹೆಚ್ಚು ಸಸಿಗಳನ್ನು ನೆಡುವುದರೊಂದಿಗೆ ಗೋಪೂಜೆಯನ್ನೂ ಮಾಡಲಾಯಿತು.

Continue Reading

ಕರ್ನಾಟಕ

Book Release: ಬೆಂಗಳೂರಿನಲ್ಲಿ ಜೂ.29ರಂದು ‘ಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ

Bengaluru News: ಶ್ರೀ ಸಂಸ್ಥಾನ ಶ್ರೀ ರಾಮಚಂದ್ರಾಪುರ ಮಠ ವಿರಚಿತ “ಭಾವರಾಮಾಯಣ ರಾಮಾವತರಣ” ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮವನ್ನು ನಗರದ ಹೊಸಕೆರೆಹಳ್ಳಿಯ ಪಿ.ಇ.ಎಸ್‌. ವಿಶ್ವವಿದ್ಯಾಲಯದ ಜಿ.ಜೆ.ಬಿ.ಸಿ. ಸಭಾಂಗಣದಲ್ಲಿ ಇದೇ ಜೂ. 29ರಂದು ಶನಿವಾರ ಸಂಜೆ 5 ಗಂಟೆಗೆ ಏರ್ಪಡಿಸಲಾಗಿದೆ.

VISTARANEWS.COM


on

Bhaavaramayana Ramavatarana book release programme on June 29 in Bengaluru
Koo

ಬೆಂಗಳೂರು: ಶ್ರೀ ಸಂಸ್ಥಾನ ಶ್ರೀ ರಾಮಚಂದ್ರಾಪುರ ಮಠ ವಿರಚಿತ ʼಭಾವರಾಮಾಯಣ ರಾಮಾವತರಣʼ ಪುಸ್ತಕ ಲೋಕಾರ್ಪಣೆ (Book Release) ಕಾರ್ಯಕ್ರಮವನ್ನು ನಗರದ ಹೊಸಕೆರೆಹಳ್ಳಿಯ ಪಿ.ಇ.ಎಸ್‌. ವಿಶ್ವವಿದ್ಯಾಲಯದ ಜಿ.ಜೆ.ಬಿ.ಸಿ. ಸಭಾಂಗಣದಲ್ಲಿ ಇದೇ ಜೂ. 29ರಂದು ಶನಿವಾರ ಸಂಜೆ 5 ಗಂಟೆಗೆ ಏರ್ಪಡಿಸಲಾಗಿದೆ.

ಇದನ್ನೂ ಓದಿ: Gold Rate Today: ಆಭರಣ ಪ್ರಿಯರಿಗೆ ಗುಡ್‌ನ್ಯೂಸ್‌; ಚಿನ್ನದ ದರ ಇಳಿಕೆ

ಕಾರ್ಯಕ್ರಮದಲ್ಲಿ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾರು ಹಾಗೂ ಶ್ರೀಸಂಸ್ಥಾನ ಗೋಕರ್ಣ ಶ್ರೀ ರಾಮಚಂದ್ರಾಪುರ ಮಠದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಸ್ವಾಮೀಜಿಯವರು ಸಾನ್ನಿಧ್ಯ ವಹಿಸುವರು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಶಿವರಾಜ ವಿ. ಪಾಟೀಲ ಮತ್ತು ಪಿ.ಇ.ಎಸ್‌. ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಎಂ.ಆರ್‌. ದೊರೆಸ್ವಾಮಿ ಉಪಸ್ಥಿತರಿರುವರು.

ಇದನ್ನೂ ಓದಿ: Para Badminton Ranking: ಮೊದಲ ಬಾರಿಗೆ ವಿಶ್ವ ನಂ.1 ಸ್ಥಾನಕ್ಕೇರಿದ ಕನ್ನಡಿಗ ಸುಹಾಸ್‌ ಯತಿರಾಜ್

ಸಂಜೆ 5 ಗಂಟೆಗೆ ಕಲಾಸ್ನೇಹಿ ಹಾಗೂ ನರ್ತನಯೋಗ ಸಂಸ್ಥೆಯ ನಿರ್ದೇಶಕಿ ಸ್ನೇಹಾ ನಾರಾಯಣ ಮತ್ತು ಯೋಗೇಶ್‌ ಕುಮಾರ್‌ ಅವರಿಂದ ಭರತನಾಟ್ಯ, ಸಂಜೆ 5.30 ಕ್ಕೆ ನೂರಕ್ಕೂ ಹೆಚ್ಚು ಗಣ್ಯರಿಂದ ಪುಸ್ತಕ ಲೋಕಾರ್ಪಣೆ, ಶ್ರೀಸಂಸ್ಥಾನದವರೊಂದಿಗೆ ಸಂವಾದ, ಎನ್. ರವಿಶಂಕರ್‌ ಸಂವಾದಕರಾಗಿ ಪಾಲ್ಗೊಳ್ಳುವರು. ಮಂತ್ರಾಲಯ ಶ್ರೀಗಳಿಂದ ಆಶೀರ್ವಚನ ಕಾರ್ಯಕ್ರಮ ಜರುಗಲಿದೆ.

Continue Reading
Advertisement
Monsoon Rain Boots Fashion
ಫ್ಯಾಷನ್15 mins ago

Monsoon Rain Boots Fashion: ಮಕ್ಕಳ ಮಾನ್ಸೂನ್‌ ಫ್ಯಾಷನ್‌ನಲ್ಲಿ ಟ್ರೆಂಡಿಯಾದ 3 ಬಗೆಯ ರೈನ್‌ ಬೂಟ್ಸ್

Narendra Modi
ದೇಶ39 mins ago

Narendra Modi: ಸಂಸತ್ತಿನಲ್ಲಿ ಇಬ್ಬರು ‘ಪುಟಾಣಿ’ ಅತಿಥಿಗಳನ್ನು ಸ್ವಾಗತಿಸಿದ ಮೋದಿ; ಯಾರವರು? Video ನೋಡಿ

Weight Loss Tips
ಆರೋಗ್ಯ45 mins ago

Weight Loss Tips: ನಲವತ್ತರ ನಂತರ ತೂಕ ಇಳಿಸುವುದು ಹೇಗೆ?

Nadaprabhu Kempegowda
ಬೆಂಗಳೂರು52 mins ago

Essay on Kempegowda in Kannada: ನಾಡಪ್ರಭು ಕೆಂಪೇಗೌಡರು ಆಧುನಿಕ ಬೆಂಗಳೂರಿನ ಮೂಲ ಶಿಲ್ಪಿ!

Nitin Gadkari
ದೇಶ1 hour ago

Nitin Gadkari: ಜಿಪಿಎಸ್‌ ತಂತ್ರಜ್ಞಾನದಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಬಂಪರ್;‌ 10 ಸಾವಿರ ಕೋಟಿ ರೂ. ಆದಾಯ!

Paris Fashion Week
ಫ್ಯಾಷನ್2 hours ago

Paris Fashion Week: ಪ್ಯಾರಿಸ್‌ ಹಾಟ್‌ ಕೌಚರ್‌ ಫ್ಯಾಷನ್‌ ವೀಕ್ 2024ರ ಹೈಲೈಟ್ಸ್

Anant Ambani
ದೇಶ2 hours ago

Anant Ambani Video: ಮಹಾರಾಷ್ಟ್ರ ಸಿಎಂ ಹೆಗಲ ಮೇಲೆ ಕೈ ಹಾಕಿದ ಅಂಬಾನಿ ಮಗ! ನೀವೇನಂತೀರಿ?

Viral Video
Latest2 hours ago

Viral Video: ಜಿಮ್‌ಗೆ ಹೋಗುವವರೇ ಹುಷಾರ್‌! ಈ ವಿಡಿಯೊ ನೋಡಿ!

Acharya Pramod Krishnam
ದೇಶ2 hours ago

ಕಾಂಗ್ರೆಸ್‌ನಂತೆ 15 ತಿಂಗಳಲ್ಲಿ ಪ್ರತಿಪಕ್ಷಗಳೂ ರಾಹುಲ್‌ ಗಾಂಧಿಯಿಂದ ನಿರ್ನಾಮ; ಆಚಾರ್ಯ ಪ್ರಮೋದ್‌ ಸ್ಫೋಟಕ ಹೇಳಿಕೆ!

Viral Video
Latest3 hours ago

Viral Video: ಬಾಗಿಲ ಬಳಿ ಇದ್ದ ಆಹಾರ ಪ್ಯಾಕೆಟ್‌ ಕದ್ದೊಯ್ದ ಜೊಮ್ಯಾಟೊ ಡೆಲಿವರಿ ಬಾಯ್‌!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ2 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ5 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ5 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ6 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 weeks ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌