Bike theft | ಒಂದು ರೌಂಡ್‌ ಓಡಿಸಿ ನೋಡ್ಲಾ ಎಂದು ಕೇಳಿ KTM ಬೈಕ್‌ ಹಿಡಿದುಕೊಂಡು ಹೋದವನು ಮರಳಿ ಬರ್ಲೇ ಇಲ್ಲ! - Vistara News

ಉತ್ತರ ಕನ್ನಡ

Bike theft | ಒಂದು ರೌಂಡ್‌ ಓಡಿಸಿ ನೋಡ್ಲಾ ಎಂದು ಕೇಳಿ KTM ಬೈಕ್‌ ಹಿಡಿದುಕೊಂಡು ಹೋದವನು ಮರಳಿ ಬರ್ಲೇ ಇಲ್ಲ!

ಅದು 2.5 ಲಕ್ಷ ಮೌಲ್ಯದ ಕೆಟಿಎಂ ಬೈಕ್‌. ಅದನ್ನು ಒಂದು ರೌಂಡ್‌ ಓಡಿಸಿನೋಡ್ತೀನಿ, ನಂಗೂ ಒಂದು ತಗೋಬೇಕಿದೆ ಅಂದ ಯುವಕನೊಬ್ಬ ಬೈಕ್‌ ನೊಂದಿಗೆ ಕಣ್ಮರೆ ಆಗಿದ್ದಾನೆ.

VISTARANEWS.COM


on

KTM Bike
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಕಾರವಾರ: ಬೈಕನ್ನು ಒಂದು ರೌಂಡ್ ಓಡಿಸಿ ನೋಡ್ಲಾ ಎಂದು ಕೇಳಿದ ಚಾಲಾಕಿಯೊಬ್ಬ ಬೈಕನ್ನು ಓಡಿಸಿಕೊಂಡು ಹೋಗಿ ಕಣ್ಮರೆಯಾಗಿರುವ ಘಟನೆ (Bike theft) ಅಂಕೋಲಾದ ಬಾಳೆಗುಳಿಯಲ್ಲಿ ನಡೆದಿದೆ. ಪಟ್ಟಣದ ರಾಷ್ಟ್ರೀಯ ಹೆದ್ದಾರಿ 66ರ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಈ ಘಟನೆ ನಡೆದಿದ್ದು ಸಿಸಿ ಕ್ಯಾಮೆರಾದಲ್ಲಿ ದೃಶ್ಯಗಳು ಸೆರೆಯಾಗಿವೆ.

ಪಟ್ಟಣದ ನಿವಾಸಿ ಅರವಿಂದ ತಾಂಡೇಲ ಎಂಬ ಯುವಕ ಕಳೆದ ವಾರವಷ್ಟೇ ಬರೋಬ್ಬರಿ ಎರಡೂವರೆ ಲಕ್ಷ ರೂಪಾಯಿ ನೀಡಿ ನೂತನ ಕೆಟಿಎಂ ಬೈಕ್ ಖರೀದಿಸಿದ್ದರು. ಸಂಬಂಧಿಕರೊಬ್ಬರ ಬೈಕ್ ರಿಪೇರಿಗೆಂದು ಹೆದ್ದಾರಿಗೆ ಹೊಂದಿಕೊಂಡಿರುವ ಯಮಹಾ ಶೋರೂಂ‌ಗೆ ಬಂದಿದ್ದು ಹೊರಗೆ ಬೈಕ್ ನಿಲ್ಲಿಸಿದ್ದರು‌.

ಈ ವೇಳೆ ಶೋರೂಂ ಬಳಿ ಬೈಕ್‌ನಲ್ಲಿ ಬಂದ ಆಸಾಮಿಯೊಬ್ಬ ದುಬಾರಿ ಬೈಕ್ ನೋಡಿ ಆಸಕ್ತಿಯಿಂದ ಪರಿಶೀಲಿಸಿದ್ದಾನೆ. ಅರವಿಂದನಿಗೂ ತನ್ನ ಬೈಕನ್ನು ಯಾರೋ ಒಬ್ಬರು ಭಾರಿ ಕುತೂಹಲದಿಂದ ಪರಿಶೀಲಿಸುತ್ತಿರುವುದು ಖುಷಿ ಕೊಟ್ಟಿದೆ.

ಅರವಿಂದ ಶಾಪ್‌ನಿಂದ ಹೊರಟು ಬೈಕ್‌ನ ಹತ್ತಿರ ಬರುವವರೆಗೆ ಕಾದ ಆತ ಇನ್ನೇನು ಅರವಿಂದ ತನ್ನ ಬೈಕ್‌ನಲ್ಲಿ ಹೊರಡುತ್ತಿದ್ದ ವೇಳೆ ಆತನೊಂದಿಗೆ ಮಾತಿಗಿಳಿದಿದ್ದಾನೆ. ತಾನೂ ಸಹ ಕೆಟಿಎಂ ಬೈಕ್ ಖರೀದಿಸಬೇಕೆಂದಿದ್ದೇನೆಂದ ಆತ ಬೈಕ್ ಬೆಲೆ, ಫೀಚರ್‌ಗಳ ಕುರಿತು ವಿಚಾರಿಸಿದ್ದಾನೆ.

ಹೀಗೆ ಮಾತನಾಡುತ್ತಾ ಒಂದು ಬಾರಿ ಟ್ರಯಲ್ ಓಡಿಸಿ ನೋಡುವುದಾಗಿ ಬೈಕ್ ಕೊಡುವಂತೆ ಕೇಳಿದ್ದು ತನ್ನ ಬೈಕ್ ಕೀ ಇಟ್ಟುಕೊಳ್ಳುವಂತೆ ಹೇಳಿದ್ದಾನೆ. ಕಳ್ಳನ ಮಾತು ನಂಬಿದ ಅರವಿಂದ ಬೈಕ್ ನೀಡಿದ್ದು ಬಳಿಕ ಅಲ್ಲಿಯೇ ಕಾದು ನಿಂತಿದ್ದಾನೆ.

ಆದರೆ ಬೈಕ್ ಪಡೆದುಕೊಂಡು ಹೋದ ಆಸಾಮಿ ಎಷ್ಟು ಹೊತ್ತು ಕಳೆದರೂ ವಾಪಸ್ಸಾಗಿಲ್ಲವಾಗಿಲ್ಲ! ಈ ವೇಳೆ ಯುವಕನಿಗೆ ತಾನು ಬೈಕ್ ಕಳೆದುಕೊಂಡಿದ್ದು ಅರಿವಿಗೆ ಬಂದಿದೆ. ಈ ವೇಳೆ ಕಳ್ಳನ ಬೈಕ್ ತೆಗೆದುಕೊಂಡು ಹೋಗಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ಸಲ್ಲಿಸಿದ್ದು ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | Shimoga News | 3.8 ಕೋಟಿ ರೂ. ಮೌಲ್ಯದ ಕಳವು ಮಾಲುಗಳನ್ನು ವಾರಸುದಾರರಿಗೆ ಹಿಂದಿರುಗಿಸಿದ ಪೊಲೀಸರು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ವಾರಾಂತ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಿಸ್‌ಯಿಲ್ಲದೇ ಮಳೆ ಹಾಜರ್‌

Rain News : ವಾರಾಂತ್ಯದಲ್ಲಿ ಹಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ಜೂನ್‌ 1ರಂದು ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ಪ್ರತ್ಯೇಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆ ಇದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು, ಮಿಂಚು ಮತ್ತು 30-40 ಕಿ.ಮೀ ವ್ಯಾಪ್ತಿಯಲ್ಲಿ ಗಾಳಿ ಬೀಸುವ (Karnataka Weather Forecast) ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ ಮತ್ತು ಚಾಮರಾಜನಗರದಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ‌ಂತೆ ಯಾವುದೇ ಮಳೆ ಮುನ್ಸೂಚನೆ ಇಲ್ಲ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರವಾದ ಮಳೆಯಾಗಲಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸಲಿದೆ.

ಇನ್ನೂ ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯ ನಿರೀಕ್ಷೆ ಇದೆ.

ಬೆಂಗಳೂರಿಗೂ ಮಳೆ ಮುನ್ಸೂಚನೆ

ಬೆಂಗಳೂರು ವ್ಯಾಪ್ತಿಯ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Exit Poll: ಈ ಹಿಂದೆ 5 ಬಾರಿ ಎಕ್ಸಿಟ್ ಪೋಲ್ ಭವಿಷ್ಯ ಉಲ್ಟಾ ಹೊಡೆದಿತ್ತು! ಯಾವಾಗ ನೆನಪಿದೆಯೆ?

ಹಣ್ಣು, ತರಕಾರಿಗಳ ಆರೋಗ್ಯಕರ ಸ್ಮೂದಿ ಎಂಬ ಟ್ರೆಂಡ್‌! ಒಳ್ಳೆಯದೇ, ಕೆಟ್ಟದ್ದೇ?

ಸದ್ಯದ ಯುವಜನರ ಆಹಾರದ ಟ್ರೆಂಡ್‌ ಎಂದರೆ ಅದು ಸ್ಮೂದಿ. ಬಹಳ ಸುಲಭವಾಗಿ ಮಾಡಬಲ್ಲ, ಹೊಟ್ಟೆ ತುಂಬಿಸಿಕೊಳ್ಳಬಹುದಾದ ಹಾಗೂ ಆರೋಗ್ಯಕ್ಕೆ ಒಳ್ಳೆಯದು ಎಂದು ಹೇಳಲಾದ ಟ್ರೆಂಡ್‌ ಆದ ಆಹಾರ ಕ್ರಮ. ಒಂದಿಷ್ಟು ಹಣ್ಣುಗಳನ್ನು ಸೇರಿಸಿ ಮಾಡುವ ಸ್ಮೂದಿ, ತರಕಾರಿಗಳನ್ನು ಸೇರಿಸಿ ಮಾಡುವ ಸ್ಮೂದಿ, ಬೀಜಗಳು ಒಣ ಹಣ್ಣುಗಳು, ವೇಗನ್‌ ಹಾಲು ಇತ್ಯಾದಿ ಇತ್ಯಾದಿ ಹಲವು ಬಗೆಯನ್ನು ಸೇರಿಸಿ ಮಾಡಬಹುದಾದ ಸ್ಮೂದಿಗಳು ಬಹುತೇಕರ ಜೀವನದಲ್ಲಿ ಇಂದು ಪ್ರತಿನಿತ್ಯದ ಆಹಾರ. ಹಲವು ಪೋಷಕಾಂಶಗಳನ್ನು ಒಳಗೊಂಡ, ಒಮ್ಮೆಲೇ ದೇಹಕ್ಕೆ ಬೇಕಾದ ಪೋಷಕಾಂಶಗಳನ್ನು ಸುಲಭವಾಗಿ ದೇಹಕ್ಕೆ ಸಿಗುವಂತೆ ಮಾಡಬಲ್ಲ, ಸುಲಭ ಸರಳವಾದ, ಫಟಾಫಟ್‌ ಮಾಡಬಹುದಾದ ಆಯ್ಕೆ ಇದು ಎಂಬುದರಲ್ಲಿ ಯಾವ ಸಂಶಯವೂ ಇಲ್ಲ. ಹಾಗಾದರೆ, ಈ ಸ್ಮೂದಿಗಳನ್ನು ಕುಡಿಯುವುದರಿಂದ, ದೇಹಕ್ಕೆ ಹಣ್ಣು, ತರಕಾರಿ, ಬೀಜಗಳನ್ನು ತಿಂದಷ್ಟೇ ಲಾಭಗಳು ದೊರೆಯುತ್ತವೆಯೇ ಎಂಬ ಬಗ್ಗೆ ನಿಮಗೆ ಪ್ರಶ್ನೆ ಉದ್ಭವಿಸಿದಲ್ಲಿ ಅದಕ್ಕೆ (Fruit and Veggie Smoothies) ಉತ್ತರ ಇಲ್ಲಿದೆ.

  • ನೀವು ಸ್ಮೂದಿಗಾಗಿ ಬಳಸುವ ಹಣ್ಣು ಹಂಪಲಾಗಿರಬಹುದು, ತರಕಾರಿಗಳಿರಬಹುದು, ಬೀಜ ಒಣಹಣ್ಣುಗಳಿರಬಹುದು, ಅವುಗಳನ್ನು ಹಾಗೆಯೇ ಜಗಿದು ತಿಂದರೆ ಆ ಜಗಿಯುವ ಪ್ರಕ್ರಿಯೆಯಲ್ಲಿ ಬಾಯಲ್ಲಿ ಲಾಲಾರಸವೂ ಅಂದರೆ ಜೊಲ್ಲೂ ಕೂಡಾ ಅದಕ್ಕೆ ಸೇರುತ್ತದೆ. ಈ ರಸ ಜೀರ್ಣಕ್ರಿಯೆಗೆ ಸಹಾಯ ಮಾಡುವ ರಸ. ಜೊತೆಗೆ ಇದು ಬಾಯಿಯನ್ನು ತೇವವಾಗಿ ಇಟ್ಟುಕೊಳ್ಳುವ ರಸವಾದ್ದರಿಂದ ಇದು ಬಾಯಿಯ ಮೂಲಕ ದೇಹಕ್ಕೆ ಇನ್‌ಫೆಕ್ಷನ್‌ ಹೋಗದಂತೆಯೂ ರಕ್ಷಿಸುತ್ತದೆ. ಸ್ಮೂದಿ ಮಾಡಿ ಕುಡಿಯುವುದರಿಂದ ದೇಹದ ಈ ನೈಸರ್ಗಿಕ ಕ್ರಿಯೆಯನ್ನೇ ನೀವು ದೂರ ಮಾಡಿ ಸುಲಭವಾಗಿ ಆಹಾರವನ್ನು ಹೊಟ್ಟೆಗೆ ಕಳುಹಿಸುತ್ತಿದ್ದೀರಿ ಎಂದಾಯಿತು. ಬಾಯಿಗೆ ಕೆಲಸವೇ ಇಲ್ಲ. ಜೀರ್ಣಕ್ರಿಗೆ ಸಹಾಯ ಆಡುವ ಅಂಶಗಳೂ ಅಲ್ಲಿ ಸೇರಲಿಲ್ಲ!
  • ಸ್ಮೂದಿಯನ್ನು ಕುಡಿಯುವುದರಿಂದ ಬಾಯಿಗೆ ಕೆಲಸವಿಲ್ಲದೆ ಅದು ನೇರವಾಗಿ ಹೊಟ್ಟೆಗೆ ಇಳಿಯುತ್ತದೆ. ಅಲ್ಲಿ ನಿಮ್ಮ ಜೊಲ್ಲುರಸ ಅಂದರೆ ಲಾಲಾರಸ ಈ ಆಹಾರದ ಜೊತೆಗೆ ಸರಿಯಾಗಿ ಸೇರಲಿಲ್ಲ ಅಂತಾಯಿತು. ಇದರಿಂದಾಗಿ ನಿಮ್ಮ ಜೀರ್ಣಕ್ರಿಯೆಯ ಸಾಮರ್ಥ್ಯ ನಿಧಾನವಾಗಿ ಕುಂಠಿತವಾಗುತ್ತಾ ಬರುತ್ತದೆ. ಕೇವಲ ಜೀರ್ಣಕ್ರಿಯೆಯಷ್ಟೇ ಅಲ್ಲ, ರೋಗನಿರೋಧಕ ಶಕ್ತಿಯೂ ಕುಂಠಿತವಾಗುತ್ತಾ ಬರುತ್ತದೆ. ಇಂತಹ ಬಗೆಯ ಆಹಾರಕ್ಕೇ ದೇಹ ಹೊಂದಿಕೊಂಡು, ಜೀರ್ಣ ಮಾಡುವ ಶಕ್ತಿ ಇಳಿಕೆಯಾಗುತ್ತದೆ.
  • ಸ್ಮೂದಿಯು ದ್ರವರೂಪದಲ್ಲಿರುವುದರಿಂದ ಸಹಜವಾಗಿಯೇ, ಸ್ಮೂದಿಯಲ್ಲಿರುವ ನೈಸರ್ಗಿಕ ಸಕ್ಕರೆ ಬಹುಬೇಗನೆ ರಕ್ತಕ್ಕೆ ಸೇರಿ ರಕ್ತದಲ್ಲಿರುವ ಸಕ್ಕರೆಯ ಪ್ರಮಾಣ ಇದ್ದಕ್ಕಿದ್ದಂತೆ ಏರಿಕೆಯಾಗುತ್ತದೆ. ಇದರಿಂದಾಗಿ ಸುಸ್ತಿನ ಅನುಭವ, ತಲೆಸುತ್ತಿನಂತ ಸಮಸ್ಯೆಗಳೂ ಮುಂದೆ ತಲೆದೋರಬಹುದು. ಹಣ್ಣುಗಳು, ಹಂಪಲುಗಳು ಹಾಗೂ ತರಕಾರಿಗಳಲ್ಲಿರುವ ನಾರಿನಂಶ ಸರಿಯಾಗಿ ಹೊಟ್ಟೆ ಸೇರದೆ, ವ್ಯರ್ಥವಾಗಬಹುದು. ಪೋಷಕಾಂಶವೂ ನಷ್ಟವಾಗಬಹುದು. ಇವೆಲ್ಲವನ್ನೂ ಜಗಿದು ತಿನ್ನುವಾಗ ಸಿಗಬಹುದಾದ ಆರೋಗ್ಯದ ಲಾಭಗಳೆಲ್ಲವೂ ಸ್ಮೂದಿಯ ಮೂಲಕ ಸಿಗದೇ ಹೋಗುವ ಸಾಧ್ಯತೆಗಳೇ ಹೆಚ್ಚು.
  • ಕೆಲವು ಮಂದಿಗೆ ದೇಹದಲ್ಲಿರುವ ಸಕ್ಕರೆಯ ಅಂಶದ ಏರಿಕೆಯಿಂದಾಗಿ ತಕ್ಷಣ ತಲೆಸುತ್ತು, ತಲೆನೋವು ಮತ್ತಿತರ ಸಮಸ್ಯೆಯೂ ಕಾಡಬಹುದು. ಆದರೆ, ಸ್ಮೂದಿಗೆ ಬಳಸಿದ ಹಣ್ಣು ಹಂಪಲು ಅಥವಾ ತರಕಾರಿ, ಒಣ ಹಣ್ಣು ಬೀಜಗಳನ್ನು ಹಾಗೆಯೇ ತಿನ್ನುವುದರಿಂದ ಈ ಪರಿಣಾಮಗಳು ಕಾಣಿಸಿಕೊಳ್ಳಲಾರದು. ಹಾಗಾಗಿ, ಸ್ಮೂದಿಗಿಂತ ಹಾಗೆಯೇ ತಿನ್ನುವುದೇ ಆರೋಗ್ಯಕ್ಕೆ ಹೆಚ್ಚು ಸೂಕ್ತ ಎಂಬುದನ್ನು ನೆನಪಿಡಿ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿ ತಗ್ಗಿದ ಮಳೆ ಪ್ರಮಾಣ; ಸ್ವಲ್ಪ ಕಡೆ ವರುಣ ಸಾಧಾರಣ, ಗಾಳಿ ರಭಸ ಅಸಾಧಾರಣ

Rain News : ರಾಜ್ಯಾದ್ಯಂತ ಬ್ರೇಕ್‌ ಕೊಟ್ಟಿದ್ದ ವರುಣ ಜೂನ್‌ ಮೊದಲ ವಾರದಿಂದ ಮತ್ತೆ ಅಬ್ಬರಿಸಲಿದ್ದಾನೆ. ಗುಡುಗು ಸಹಿತ ಸಾಧಾರಣ ಮಳೆಯಾಗಲಿದ್ದು, ರಭಸವಾಗಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ (Rain news) ಪ್ರಮಾಣವು ತಗ್ಗಿದೆ. ಕಳೆದ ಎರಡ್ಮೂರು ದಿನದಿಂದ ಮಳೆಯು ಕಣ್ಮರೆಯಾಗಿದೆ. ನಿನ್ನೆ ಗುರುವಾರ ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆಗಳಲ್ಲಿ (Karnataka Weather Forecast) ಮಳೆಯಾಗಿದೆ. ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ (Dry Weather) ಇತ್ತು.

ಶಿವಮೊಗ್ಗದ ಆಗುಂಬೆಯಲ್ಲಿ 5 ಸೆಂ.ಮೀ, ಕೊಡಗಿನ ಗೋಣಿಕೊಪ್ಪಲು 3 ಸೆಂ.ಮೀ ಮಳೆಯಾಗಿದೆ. ಹಾಗೇ ದಕ್ಷಿಣ ಕನ್ನಡದ ಧರ್ಮಸ್ಥಳ, ಉಡುಪಿಯ ಕೋಟ, ಉತ್ತರ ಕನ್ನಡದ ಮಂಕಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಇನ್ನೂ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 41.3 ಡಿ.ಸೆ ದಾಖಲಾಗಿತ್ತು.

ಇದನ್ನೂ ಓದಿ: World No Tobacco Day: ತಂಬಾಕಿನ ಚಟ ಎಷ್ಟೊಂದು ರೋಗಗಗಳಿಗೆ ಕಾರಣ ಆಗುತ್ತದೆ ನೋಡಿ!

ನಾಳೆಯಿಂದ ಮತ್ತೆ ಶುರುವಾಗುತ್ತಾ ಅಬ್ಬರ?

ದಕ್ಷಿಣ ಒಳನಾಡು ಹಾಗೂ ಮಲೆನಾಡಿನ ಭಾಗಗಳಲ್ಲಿ ಮಳೆ ಅಬ್ಬರ ಇರಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ 30-40 ಕಿ.ಮೀ ಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.

ಇನ್ನೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗಲಿದೆ.

ಇದನ್ನೂ ಓದಿ: Kukke Subramanya: ಹೊಳೆ ಉಕ್ಕಿ ಹರಿದು ಕೊಚ್ಚಿ ಹೋದ ಪಿಕ್ಅಪ್ ವಾಹನ; ಚಾಲಕನ ರಕ್ಷಣೆ

ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (40-50 kmph) ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಕಲಬುಲಗಿ, ವಿಜಯಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿಗುಡುಗು ಸಹಿತ ಗಾಳಿಯೊಂದಿಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ 40-50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಮೇಲ್ಮೈ ಮಾರುತಗಳು (30-40 kmph) ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳ ಮೇಲೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಮುಂದಿನ 24 ಗಂಟೆಯಲ್ಲಿ ಬೆಂಗಳೂರಲ್ಲಿ ಭಾಗಶಃ ಮೋಡ ಕವಿಯಲಿದೆ. ಕೆಲವೊಮ್ಮೆ ಹಗುರ ಮಳೆಯಾಗಲಿದ್ದು, ಮೇಲ್ಮೈ ಗಾಳಿಯು ಪ್ರಬಲವಾಗಿರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ರಾಜ್ಯದಲ್ಲಿಂದು ಭಾರಿ ಮಳೆಗೆ ಗುಡುಗು, ಮಿಂಚು ಸಾಥ್‌

Rain News : ರಾಜ್ಯಾದ್ಯಂತ ರಭಸವಾಗಿ ಗಾಳಿ ಬೀಸಲಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

VISTARANEWS.COM


on

By

Karnataka Weather
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ. ರಾಜ್ಯದ ಪ್ರತ್ಯೇಕ ಸ್ಥಳಗಳಲ್ಲಿ 30-40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ತುಮಕೂರು, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಮಂಡ್ಯ, ಮೈಸೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದೆಡೆ ಬಹುಶಃ ಒಣಹವೆ ಇರಲಿದೆ.

ಉತ್ತರಒಳನಾಡಿನ ಬೆಳಗಾವಿ, ಹಾವೇರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದ್ದು, ಉಳಿದ ಭಾಗಗಳಲ್ಲಿ ಒಣ ಹವೆ ಮೇಲುಗೈ ಸಾಧಿಸುವ ನಿರೀಕ್ಷೆಯಿದೆ.

ಮಲೆನಾಡಿನ ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾದರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಹಗುರ ಮಳೆಯಾಗಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಮ ಮಳೆಯಾಗುವ ನಿರೀಕ್ಷೆ ಇದೆ.

ಬೆಂಗಳೂರು ವ್ಯಾಪ್ತಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಇದನ್ನೂ ಓದಿ: BMTC Driver : ಬಿಎಂಟಿಸಿ ಎಲೆಕ್ಟ್ರಿಕಲ್‌ ಬಸ್‌ಗೆ ಪರಭಾಷಿಕರ ನೇಮಕ; ಡಿಸಿ ಕಚೇರಿಗೆ ನುಗ್ಗಿ ಕನ್ನಡಿಗರ ಆಕ್ರೋಶ

ಮಳೆ ಬರುವ ಮುನ್ನ ಈ ವನ್ಯಜೀವಿಧಾಮಗಳನ್ನು ನೋಡಲು ಪ್ರಯತ್ನಿಸಿ

ಮಳೆಗಾಲ ಮತ್ತು ಕಾಡು! ಪ್ರಕೃತಿ ಪ್ರಿಯರ ಅತ್ಯಂತ ಇಷ್ಟದ ಕಾಂಬಿನೇಷನ್‌ ಇದು. ಮಳೆಗಾಲದಲ್ಲೊಮ್ಮೆ ಕಾಡಿಗೆ ಕರೆದರೆ ಯಾವ ಪ್ರಕೃತಿಪ್ರೇಮಿ ಬೇಡ ಅನ್ನಲಾರ ಹೇಳಿ? ವನ್ಯಜೀವಿ ಪ್ರಿಯರ, ಪ್ರಕೃತಿಪ್ರಿಯರ ಈ ಆಸೆಗೆ ತಣ್ಣೀರೆರಚುವಂತೆ ಮಳೆಗಾಲ ಬಂದ ತಕ್ಷಣ ರಾಷ್ಟ್ರೀಯ ಉದ್ಯಾನ/ವನ್ಯಜೀವಿಧಾಮಗಳೆಲ್ಲ ಬಾಗಿಲು ಮುಚ್ಚುತ್ತವೆ. ಕಾಡಿನ ಮದ್ಯದಲ್ಲಿ ಸಫಾರಿ ಹೋಗಲು, ವನ್ಯಜೀವಿಗಳ ಬೆನ್ನು ಹತ್ತಲು ಯಾರಿಗೂ ಆಸ್ಪದವಿಲ್ಲ. ಆದರೂ, ಪ್ರಕೃತಿ ಪ್ರಿಯರೆಲ್ಲ ಇಂತಹ ರಾಷ್ಟ್ರೀಯ ಉದ್ಯಾನ/ ವನ್ಯಜೀವಿಧಾಮಗಳು ಮುಚ್ಚಿಕೊಳ್ಳುವ ಕೆಲವೇ ದಿನಗಳ ಮುಂಚಿತವಾಗಿ ಅಲ್ಲಿಗೆ ಭೇಟಿ ಕೊಡಬೇಕು. ಮಳೆಗಾಲ ಈಗಷ್ಟೇ ಶುರುವಾದ ವನ್ಯಜೀವಿಧಾಮದಲ್ಲಿ ತಿರುಗಾಡಿ ಬರುವುದೇ ಹಬ್ಬ. ಒಂದೆರಡು ಮಳೆ ಸುರಿದು ಕಾಡೆಲ್ಲ ಕಳೆಕಳೆಯಾಗಿ ಹಸಿರಾಗಿ ಚಿಗಿತುಕೊಂಡು ಅದ್ಭುತ ದೃಶ್ಯಗಳನ್ನು ನಿಮಗೆ ನೀಡುವ ಜೊತೆಗೆ ರೋಮಾಂಚಕ ಅನುಭವಗಳನ್ನು ನೀಡುತ್ತವೆ. ಬನ್ನಿ, ಯಾವೆಲ್ಲ ರಾಷ್ಟ್ರೀಯ ಉದ್ಯಾನಗಳನ್ನು ಮಳೆಗಾಲಕ್ಕೆ ಸ್ವಲ್ಪವೇ ಮುನ್ನ ನೀವು ನೋಡುವುದೇ ಒಂದು ಅನುಭವ (wildlife sanctuaries) ಎಂಬುದನ್ನು ತಿಳಿಯೋಣ ಬನ್ನಿ.

Jim Corbett National Park, Uttarakhand

ಜಿಮ್‌ ಕಾರ್ಬೆಟ್‌ ರಾಷ್ಟ್ರೀಯ ಉದ್ಯಾನ, ಉತ್ತರಾಖಂಡ

ಉತ್ತರಾಖಂಡದ ಬಹು ಪ್ರಸಿದ್ಧ ರಾಷ್ಟ್ರೀಯ ಉದ್ಯಾನ ಭಾರತದ ಅತ್ಯಂತ ಹಳೆಯ ವನ್ಯಜೀವಿಧಾಮಗಳಲ್ಲಿ ಒಂದು. ಹುಲಿಗಳನ್ನು ಕಾಣಲು ಇದು ಪ್ರಶಸ್ತ ಜಾಗ. ಜೂನ್‌ ಮದ್ಯದಲ್ಲಿ ಇದು ಮುಚ್ಚಿದರೆ ಮತ್ತೆ ತೆರೆಯುವುದು ಅಕ್ಟೋಬರ್‌ನಲ್ಲಿಯೇ. ಆದರೆ, ಜೂನ್‌ ಆರಂಭದಲ್ಲಿ ಈ ಕಾಡು ನೋಡುವುದು ಬಲು ಸೊಗಸು.

Ranthambore National Park, Rajasthan

ರಣಥಂಬೋರ್‌ ರಾಷ್ಟ್ರೀಯ ಉದ್ಯಾನ, ರಾಜಸ್ಥಾನ

ಭಾರತದ ದೊಡ್ಡ ರಾಷ್ಟ್ರೀಯ ಉದ್ಯಾನಗಳ ಪೈಕಿ ಇದೂ ಒಂದು. ಹುಲಿಗಳನ್ನು ನೋಡಬೇಕೆಂದು ಬಯಸುವ ಪ್ರತಿ ವನ್ಯಜೀವಿ ಪ್ರೇಮಿ ಹಾಗೂ ವನ್ಯಜೀವಿ ಛಾಯಾಗ್ರಾಹಕರು ಈ ರಾಷ್ಟ್ರೀಯ ಉದ್ಯಾನಕ್ಕೆ ಬೇಟಿ ಕೊಡಲು ಬಯಸುವುದು ಸಾಮಾನ್ಯ. ಇದು ಜೂನ್‌ 30ರ ವೇಳೆಗೆ ಮುಚ್ಚುವ ಕಾರಣ ಅದಕ್ಕೂ ಮೊದಲು ಬೇಟಿ ಕೊಟ್ಟರೆ ಅಪರೂಪದ ಅನುಭವಗಳು ನಿಮ್ಮದಾಗಬಹುದು.

Bandhavgarh National Park, Madhya Pradesh

ಬಾಂಧವಗಢ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ

ಹುಲಿಯನ್ನು ನೋಡಲು ಬಯಸುವ ಪ್ರತಿಯೊಬ್ಬ ವನ್ಯಜೀವಿ ಪ್ರಿಯರಿಗೂ ತಿಳಿದ ವನ್ಯಜೀವಿಧಾಮ ಇದು. ಇಲ್ಲಿ ಹುಲಿ ದರ್ಶನದ ಸಾಧ್ಯತೆ ಹೆಚ್ಚು. ಈಗಷ್ಟೇ ಮಳೆಬಿದ್ದ ಕಾಡು ಹಸಿರಾಗಿ ಕಂಗೊಳಿಸುವ ಸಂದರ್ಭ ಮಧ್ಯದಲ್ಲಿ ಆಕಳಿಸುತ್ತಾ ಕುಳಿತ ಹುಲಿಯನ್ನೊಮ್ಮೆ ಕಲ್ಪಿಸಿ ನೋಡಿ. ರೋಮಾಂಚಿತಗೊಳ್ಳುವುದಿಲ್ಲವೇ ಹೇಳಿ! ಜುಲೈನಿಂದ ಅಕ್ಟೋಬರ್‌ವರೆಗೆ ಈದು ಮುಚ್ಚಿರುವ ಕಾರಣ ಜೂನ್‌ನಲ್ಲಿ ಭೇಟಿಕೊಡಲು ಸುಸಮಯ.

Kanha National Park, Madhya Pradesh

ಕನ್ಹಾ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ

ಇದೂ ಕೂಡಾ ಹುಲಿಗಳಿಗೆ ಬಲುಪ್ರಸಿದ್ಧವಾದ ರಾಷ್ಟ್ರೀಯ ಉದ್ಯಾನ. ಮಳೆಗಾಲ ಆರಂಭವಾದ ತಕ್ಷಣ ಕಾಣಲು ಇದು ಬಲು ಚಂದ. ಜೂನ್‌ 30ರಿಂದ ಅಕ್ಟೋಬರ್‌ 15ರವರೆಗೆ ಇದು ಮುಚ್ಚಿರುತ್ತದೆ.

Pench National Park, Madhya Pradesh and Maharashtra

ಪೆಂಚ್‌ ರಾಷ್ಟ್ರೀಯ ಉದ್ಯಾನ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರ

ಮಧ್ಯಪ್ರದೇಶ ಹಾಗೂ ಮಹಾರಾಷ್ಟ್ರದ ಗಡಿಯಲ್ಲಿರುವ ಈ ರಾಷ್ಟ್ರೀಯ ಉದ್ಯಾನ ಅತ್ಯಂತ ಸುಂದರವಾದ ಕಾಡುಗಳಲ್ಲಿ ಒಂದು. ರುಡ್ಯಾರ್ಡ್‌ ಕಿಪ್ಲಿಂಗ್‌ ಅವರ ದಿ ಜಂಗಲ್‌ ಬುಕ್‌ ಇದೇ ಕಾಡಿನಿಂದ ಸ್ಪೂರ್ತಿಗೊಂಡು ರಚಿತವಾದ ಕತೆ. ಹೆಚ್ಚು ಹುಲಿಗಳಿರುವ ಈ ಕಾಡು ಜೂನ್‌ 16ರಿಂದ ಸೆಪ್ಟೆಂಬರ್‌ವರೆಗೆ ಪ್ರವಾಸಿಗರಿಗೆ ಮುಚ್ಚಿರುತ್ತದೆ.

Nagarhole National Park, Karnataka

ನಾಗರಹೊಳೆ ರಾಷ್ಟ್ರೀಯ ಉದ್ಯಾನ, ಕರ್ನಾಟಕ

ನಮ್ಮ ಕರ್ನಾಟಕದ ನಾಗರಹೊಳೆ ರಾಷ್ಟ್ರೀಯ ಉದ್ಯಾನ ಭಾರತದ ಅತ್ಯಂತ ಸುಂದರವಾದ ವನ್ಯಜೀವಿಧಾಮಗಳಲ್ಲಿ ಒಂದು. ಹುಲಿಗಳ ಜೊತೆಗೆ ಆನೆ, ಚಿರತೆ, ಜಿಂಕೆ, ಕಾಡಮ್ಮೆಗಳೂ ಸೇರಿದಂತೆ ಅನೇಕ ಪ್ರಾಣಿಗಳ ಸಂತಿತಿ ಇಲ್ಲಿ ವಿಪುಲವಾಗಿದೆ. ಮಳೆ ಈಗಷ್ಟೇ ಬರಲು ಆರಂಭವಾಗುವ ಸಂದರ್ಭ ಇದು ರಮ್ಯವಾಗಿ ಕಾಣುತ್ತದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ಇದು ಮುಚ್ಚಿರುತ್ತದೆ. ಅಕ್ಟೋಬರ್‌ ತಿಂಗಳಲ್ಲೂ ಇದು ಅದ್ಭುತವಾಗಿ ಕಾಣುತ್ತದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಉತ್ತರ ಕನ್ನಡ

Uttara Kannada News: ಸಂಸ್ಕಾರಯುತ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮುಂಚೂಣಿ: ಹರಿಪ್ರಕಾಶ್‌ ಕೋಣೆಮನೆ

Uttara Kannada News: ಯಲ್ಲಾಪುರ ಪಟ್ಟಣದ ವಿಶ್ವದರ್ಶನ ಕೇಂದ್ರೀಯ ಶಾಲೆಯ ಶಿಕ್ಷಕರಿಗೆ ‘ಪ್ರಶಿಕ್ಷಣ ಭಾರತಿ ‘ ಮತ್ತು ‘ಮ್ಯಾಕ್ ಮಿಲನ್ ‘ ವತಿಯಿಂದ ಎರಡು ದಿನಗಳ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.

VISTARANEWS.COM


on

Vishwadarshan Education Institute President Hariprakash konemane spoke in Training Workshop for Vishwadarshan Central School Teachers at Yallapura
Koo

ಯಲ್ಲಾಪುರ: ಜ್ಞಾನವೇ ಶ್ರೇಷ್ಠವಾದ ಸಂಪತ್ತು ಎಂಬ ಧ್ಯೇಯದೊಂದಿಗೆ ಸದಾ ಸಂಸ್ಕಾರಯುತ ಮತ್ತು ಗುಣಾತ್ಮಕ ಶಿಕ್ಷಣವನ್ನು ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆಯು ಮುಂಚೂಣಿಯಲ್ಲಿ ಸಾಗುತ್ತಿದೆ ಎಂದು ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ್‌ ಕೋಣೆಮನೆ (Uttara Kannada News) ತಿಳಿಸಿದರು.

ಪಟ್ಟಣದ ವಿಶ್ವದರ್ಶನ ಕೇಂದ್ರೀಯ ಶಾಲೆಯ ಶಿಕ್ಷಕರಿಗೆ ‘ಪ್ರಶಿಕ್ಷಣ ಭಾರತಿ ‘ ಮತ್ತು ‘ಮ್ಯಾಕ್ ಮಿಲನ್ ‘ ವತಿಯಿಂದ ಹಮ್ಮಿಕೊಂಡಿದ್ದ ಎರಡು ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: Singapore Open: ದ್ವಿತೀಯ ಸುತ್ತಿಗೆ ಆಟ ಮುಗಿಸಿದ ಭಾರತದ ಪಿ.ವಿ.ಸಿಂಧು

ವಿಶ್ವದರ್ಶನ ಕೇಂದ್ರೀಯ ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ ಪ್ರತಿವರ್ಷವೂ ಶಿಕ್ಷಕರ ಕಲಿಕಾ ಕೌಶಲ್ಯ ಮತ್ತು ಸಾಮರ್ಥ್ಯ ವೃದ್ಧಿಗಾಗಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಲಾಗುತ್ತದೆ ಎಂದರು.

ನಗರಗಳಲ್ಲಿ ದೊರೆಯುವ ಉತ್ತಮ ಗುಣಾತ್ಮಕ ಶಿಕ್ಷಣ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸಿಗಬೇಕು ಎಂಬ ಉದ್ದೇಶದೊಂದಿಗೆ ನಮ್ಮ ಶಿಕ್ಷಣ ಸಂಸ್ಥೆಯು ಸದಾ ಅಗತ್ಯ, ರಚನಾತ್ಮಕವಾದ ಚಟುವಟಿಕೆ ಮತ್ತು ಕಾರ್ಯಕ್ರಮಗಳೊಂದಿಗೆ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸಿಕೊಂಡು ಕಾರ್ಯನಿರ್ವಹಿಸುತ್ತಿದೆ ಎಂದರು.

ರಾಷ್ಟ್ರೋತ್ಥಾನ ಪರಿಷತ್‌ನ ‘ಪ್ರಶಿಕ್ಷಣ ಭಾರತಿ’ಯ ಸಹಯೋಗದಲ್ಲಿ ಪಂಚಮುಖಿ ಶಿಕ್ಷಣದ ಪ್ರಾಮುಖ್ಯತೆ, ಶಿಕ್ಷಕರು ತರಗತಿಗಳಲ್ಲಿ ಪಂಚಮುಖಿ ಶಿಕ್ಷಣದ ಅಂಶಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳಿಗೆ ಅದನ್ನು ಕಲಿಸುವ ಪದ್ಧತಿಗಳ ಕುರಿತು ಒಂದು ದಿನದ ತರಬೇತಿ ನಡೆಯಿತು.

ಸಂಪನ್ಮೂಲ ವ್ಯಕ್ತಿಗಳಾಗಿ ನಿವೃತ್ತ ಉಪನ್ಯಾಸಕ ಎಂ.ಎನ್. ಹೆಗಡೆ ಅವರು ಸಂತೋಷದಾಯಕ ತರಗತಿ ನಿರ್ವಹಣೆಯ ಕುರಿತು, ಉಪನ್ಯಾಸಕ ಡಾ. ಮಹೇಶ್ ಭಟ್ ಅವರು ಪಂಚಮುಖಿ ಶಿಕ್ಷಣ ಹಾಗೂ ಸನಾತನ ಶಿಕ್ಷಣ ಪದ್ಧತಿಯ ಕುರಿತು ಮತ್ತು ಕೀರ್ತಿವತಿ ಮಾತಾಜಿಯವರು ಕಲಿಕಾ ಚಟುವಟಿಕೆ ಆಧಾರಿತ ತರಗತಿ ನಿರ್ವಹಣೆಯ ಕುರಿತು ತರಬೇತಿ ನೀಡಿದರು.

ಎರಡನೇ ದಿನ ಬೆಂಗಳೂರಿನ ಮ್ಯಾಕ್ ಮಿಲನ್ ಸಂಸ್ಥೆಯಿಂದ ತರಗತಿ ನಿರ್ವಹಣೆಯಲ್ಲಿ ಶಿಕ್ಷಕರ ಪಾತ್ರ ಮತ್ತು ಮ್ಯಾಕ್ ಮಿಲನ್ ಸಂಸ್ಥೆಯ ಪಠ್ಯ ಪುಸ್ತಕಗಳ ಬಗ್ಗೆ ಸಮಗ್ರ ಮಾಹಿತಿ ನೀಡಿ, ಶಿಕ್ಷಕರು ತಮ್ಮ ಕಲಿಕಾ ಕೌಶಲ್ಯವನ್ನು ಹೆಚ್ಚಿಸಿಕೊಂಡು ತರಗತಿಯನ್ನು ಸುಗಮ ಗೊಳಿಸುವ ಕುರಿತು ತರಬೇತಿ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಾಚಾರ್ಯರಾದ ಸುಜಾತ ಹಿರೇಮಠ್ ಭಾಗವಹಿಸಿದ್ದರು.

ಇದನ್ನೂ ಓದಿ: Kantara Movie: `ಕಾಂತಾರ ಚಾಪ್ಟರ್‌ 1‌’ ಸಿನಿಮಾಗೆ ಖ್ಯಾತ ಮಾಲಿವುಡ್‌ ನಟ ಎಂಟ್ರಿ!

ನಿವೃತ್ತ ಉಪನ್ಯಾಸಕ ಎಂ.ಎನ್. ಹೆಗಡೆ, ಪ್ರಾಂಶುಪಾಲೆ ಮಹಾದೇವಿ ಭಟ್, ಪಿಯು ವಿಭಾಗದ ಪ್ರಾಚಾರ್ಯ ಡಿ.ಕೆ. ಗಾಂವ್ಕರ್, ಸಂಸ್ಥೆಯ ವ್ಯವಸ್ಥಾಪಕ ಅಜಯ್ ಭಾರತೀಯ, ಕೇಂದ್ರೀಯ ಶಾಲೆಯ ಉಪ ಪ್ರಾಂಶುಪಾಲೆ ಆಸ್ಮಾ ಶೇಖ್ ಹಾಗೂ ಎಲ್ಲ ಶಿಕ್ಷಕರು ಉಪಸ್ಥಿತರಿದ್ದರು.

Continue Reading
Advertisement
IND vs BAN
ಕ್ರೀಡೆ19 mins ago

IND vs BAN: ಇಂದು ಬಾಂಗ್ಲಾ ವಿರುದ್ಧ ಅಭ್ಯಾಸ ಪಂದ್ಯ; ಕೊಹ್ಲಿ ಆಡುವುದು ಅನುಮಾನ

Exit Poll
Lok Sabha Election 202431 mins ago

Exit Poll: ಇಂದು ಸಂಜೆ 6.30ಕ್ಕೆ ಎಕ್ಸಿಟ್ ಪೋಲ್ ರಿಸಲ್ಟ್; ಮತಗಟ್ಟೆ ಸಮೀಕ್ಷೆ ಹೇಗೆ ನಡೆಸುತ್ತಾರೆ?

Kannada Cinema In OTT bad manners 02 Kannada Movie
ಸ್ಯಾಂಡಲ್ ವುಡ್35 mins ago

Kannada Cinema In OTT: ಒಟಿಟಿಗೆ ಲಗ್ಗೆ ಇಟ್ಟ ʼಬ್ಯಾಡ್‌ ಮ್ಯಾನರ್ಸ್‌ʼ, ‘O2’; ಸ್ಟ್ರೀಮಿಂಗ್ ಎಲ್ಲಿ?

hum do humare barah
ಕರ್ನಾಟಕ38 mins ago

Hum Do Humare Barah: ʼಹಮ್ ದೋ, ಹಮಾರೇ ಬಾರಹ್ʼ ಚಿತ್ರ ಬಿಡುಗಡೆಗೆ ಮುಸ್ಲಿಮರ ವಿರೋಧ: “ಪೆನ್‌ಡ್ರೈವ್‌ ಕೇಸ್‌ ಮೇಲೆ ಮಾಡಿ” ಎಂದು ಗರಂ!

Neeraj Chopra
ಕ್ರೀಡೆ54 mins ago

Neeraj Chopra: 2 ತಿಂಗಳು ವಿದೇಶದಲ್ಲಿ ಕಠಿಣ ತರಬೇತಿ ಪಡೆಯಲಿದ್ದಾರೆ ನೀರಜ್ ಚೋಪ್ರಾ

Neha Gowda is pregnant the actress shared the good news
ಕಿರುತೆರೆ1 hour ago

Neha Gowda: ಮೊದಲ ಮಗುವಿನ ನಿರೀಕ್ಷೆಯಲ್ಲಿ ಗೊಂಬೆ-ಚಂದನ್‌ ದಂಪತಿ

Vastu Tips
ಧಾರ್ಮಿಕ1 hour ago

Vastu Tips: ಮನೆಯ ಯಾವ ಕೋಣೆಗೆ ಯಾವ ಬಣ್ಣ ಇದ್ದರೆ ನೆಮ್ಮದಿ ಸಿಗುತ್ತದೆ? ವಾಸ್ತು ಸಲಹೆ ಹೀಗಿದೆ

prajwal revanna case mobile
ಪ್ರಮುಖ ಸುದ್ದಿ1 hour ago

Prajwal Revanna Case: ಪ್ರಜ್ವಲ್‌ ರೇವಣ್ಣ ಮೊಬೈಲ್‌ ಮಂಗಮಾಯ! ಏನಂತಾರೆ ಪ್ರಜ್ವಲ್ಲು?

LPG Price Cut
ವಾಣಿಜ್ಯ1 hour ago

LPG Price Cut: ಎಲ್‌ಪಿಜಿ ಗ್ರಾಹಕರಿಗೆ ಗುಡ್‌ನ್ಯೂಸ್‌; ಕಮರ್ಷಿಯಲ್ ಅಡುಗೆ ಅನಿಲ ದರ ಇಳಿಕೆ

Paris Olympics 2024
ಕ್ರೀಡೆ1 hour ago

Paris Olympics 2024: ಒಲಿಂಪಿಕ್ಸ್‌ಗೆ‌ ಅರ್ಹತೆ ಪಡೆದ ಬಾಕ್ಸರ್ ನಿಶಾಂತ್ ದೇವ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 weeks ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌