Fifa World Cup | ಫಿಫಾ ವಿಶ್ವ ಕಪ್​ ಫೈನಲ್​ಗೂ ಮುನ್ನ ಎಸ್​ಬಿಐ ಪಾಸ್​ಬುಕ್​ ಫುಲ್​ ಟ್ರೆಂಡ್​; ಕಾರಣ ಏನು? - Vistara News

ಕ್ರೀಡೆ

Fifa World Cup | ಫಿಫಾ ವಿಶ್ವ ಕಪ್​ ಫೈನಲ್​ಗೂ ಮುನ್ನ ಎಸ್​ಬಿಐ ಪಾಸ್​ಬುಕ್​ ಫುಲ್​ ಟ್ರೆಂಡ್​; ಕಾರಣ ಏನು?

ಭಾನುವಾರ ನಡೆಯಲಿರುವ ಕತಾರ್​ ಫಿಫಾ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಅರ್ಜೆಂಟೀನಾ ತಂಡ ಮತ್ತು ಹಾಲಿ ಚಾಂಪಿಯನ್​ ಫ್ರಾನ್ಸ್​ ತಂಡ ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ.

VISTARANEWS.COM


on

fifa world cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಕತಾರ್​ ಫಿಫಾ ವಿಶ್ವ ಕಪ್​ ಟೂರ್ನಿ ಅಂತಿಮ ಘಟ್ಟ ತಲುಪಿದ್ದು ಭಾನುವಾರ ಅರ್ಜೆಂಟೀನಾ ಮತ್ತು ಫ್ರಾನ್ಸ್​ ವಿರುದ್ಧ ಫೈನಲ್​ ಪಂದ್ಯ ನಡೆಯಲಿದೆ. ಈ ಮೂಲಕ ಕಳೆದ ಒಂದು ತಿಂಗಳ ಕಾಲ ನಡೆದ ಈ ಕಾಲ್ಚೆಂಡಿನ ಕಾಳಗಕ್ಕೆ ತೆರೆ ಬೀಳಲಿದೆ. ಆದರೆ ಇದೀಗ ಫೈನಲ್​ ಪಂದ್ಯ ನಡೆಯುವ ಮುನ್ನ ಭಾರತೀಯ ಸ್ಟೇಟ್​ ಬ್ಯಾಂಕಿನ ಪಾಸ್​ಬುಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಡಿಸೆಂಬರ್ 18 ರಂದು ನಡೆಯಲಿರುವ ಫಿಫಾ ಫೈನಲ್​ನಲ್ಲಿ ಅರ್ಜೆಂಟೀನಾ ಮತ್ತು ಫ್ರಾನ್ಸ್ ಕತಾರ್‌ನ ರಾಷ್ಟ್ರೀಯ ದಿನದಂದು ಲುಸೈಲ್ ಕ್ರೀಡಾಂಗಣದಲ್ಲಿ ಟ್ರೋಫಿ ಗೆಲ್ಲಲು ಸೆಣಸಾಡಲಿವೆ. ಸೆಮಿಫೈನಲ್​ನಲ್ಲಿ ಕ್ರೊವೇಷ್ಯಾ ತಂಡವನ್ನು ಮಣಿಸಿರುವ ಅರ್ಜೆಂಟೀನಾ ತಂಡ ಮೂರನೇ ಬಾರಿಗೆ ವಿಶ್ವ ಕಪ್ ಗೆಲ್ಲುವ ಕನಸಿನೊಂದಿಗೆ ಅಖಾಡಕ್ಕಿಳಿಯುತ್ತಿದೆ. ಅತ್ತ ಫ್ರಾನ್ಸ್ ತನ್ನ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳಲು ಹೊರಾಟ ನಡೆಸಲಿದೆ. ಆದರೆ ಇದೀಗ ಲಿಯೋನೆಲ್​ ಮೆಸ್ಸಿ ತಂಡ ಫೈನಲ್​ಗೇರುತ್ತಿದ್ದಂತೆ ಭಾರತದಲ್ಲಿ ಪ್ರತಿಷ್ಠಿತ ಎಸ್​ಬಿಐ ಬ್ಯಾಂಕ್​ನ ಪಾಸ್​ಬುಕ್ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ ಪಾಸ್‌ಬುಕ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಲು ಕಾರಣ ಏನೆಂದರೆ ಅರ್ಜೆಂಟೀನಾ ತಂಡದ ಜೆರ್ಸಿ ನಡುವೆ ಇರುವಸಾಮ್ಯತೆ. ಇದರಿಂದ ಪಾಸ್​ಬುಕ್​ ಟ್ರೆಂಟ್​ ಆಗಿದೆ. ಅರ್ಜೆಂಟೀನಾ ತಂಡದ ಆಟಗಾರರು ಧರಿಸುವ ಜೆರ್ಸಿ ಹಾಗೂ ಎಸ್​ಬಿಐ ಪಾಸ್​ಬುಕ್​ ಎರಡಕ್ಕೂ ಸಾಕಷ್ಟು ಹೊಲಿಕೆ ಇದೆ. ಎಸ್​ಬಿಐ ಪಾಸ್​ಬುಕ್ ನೀಲಿ ಹಾಗೂ ಬಿಳಿ ಬಣ್ಣದಿಂದ ಕೂಡಿದ್ದರೆ, ಇತ್ತ ಅರ್ಜೆಂಟೀನಾ ತಂಡದ ಆಟಗಾರರು ಧರಿಸುವ ಜೆರ್ಸಿಯೂ ಕೂಡ ಈ ಎರಡು ಬಣ್ಣಗಳ ಮಿಶ್ರಣದಿಂದ ಕೂಡಿದೆ. ಹೀಗಾಗಿ ಎಸ್‌ಬಿಐ ಪಾಸ್‌ಬುಕ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಆಗಿದೆ.

ಇದಕ್ಕೆ ತಕ್ಕಂತೆ ಕೆಲವರು ಟ್ವಿಟರ್​ನಲ್ಲಿ ಅರ್ಜೆಂಟಿನಾ ತಂಡಕ್ಕೆ ಭಾರತೀಯ ಬ್ಯಾಂಕ್​ ಕೂಡಾ ಬೆಂಬಲ ಸೂಚಿಸಿದೆ ಎಂದು ಅಭಿಮಾನಿಯೊಬ್ಬ ಟ್ವೀಟ್​ ಮಾಡಿದ್ದಾರೆ. ಇನ್ನು ಕೆಲವರು ಅರ್ಜೆಂಟೀನಾ ತಂಡದ ಪಂದ್ಯದ ವೇಳೆ ಎಸ್​ಬಿಐಗೆ ಲಂಚ್​ ಬ್ರೇಕ್​ ನೀಡಬೇಕು ಎಂದು ಹಾಸ್ಯಮಯ ಕಮೆಂಟ್​ ಮಾಡಿದ್ದಾರೆ. ಮತ್ತೊಬ್ಬ ಅಭಿಮಾನಿ ಒಂದೊಮ್ಮೆ ಅರ್ಜೆಂಟೀನಾ ಪಂದ್ಯ ಸೋತರೆ ಎಸ್​ಬಿಐ ಎಲ್ಲ ಹಣವನ್ನು ಕಳೆದುಕೊಳ್ಳುತ್ತದೆ ಎಂದು ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ | Fifa World Cup | ರೊನಾಲ್ಡೊ ಹೊರಗಿಟ್ಟು ತಂಡದ ಸೋಲಿಗೆ ಕಾರಣವಾದ ಕೋಚ್‌ ಫೆರ್ನಾಂಡೊ ಸ್ಯಾಂಟೋಸ್‌ಗೆ ಗೇಟ್​ ಪಾಸ್​

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: 20 ತಂಡಗಳ ಪೈಕಿ 19 ತಂಡ ಪ್ರಕಟ; ಪಾಕಿಸ್ತಾನ ಮಾತ್ರ ಬಾಕಿ

T20 World Cup 2024: 20 ದೇಶಗಳ ಪೈಕಿ 19 ದೇಶಗಳು ತನ್ನ ಸಂಭಾವ್ಯ 15 ಜನರ ತಂಡವನ್ನು ಪ್ರಕಿಟಿಸಿದೆ. ಆದರೆ, ಪಾಕಿಸ್ತಾನ ಮಾತ್ರ ಇನ್ನೂ ತಂಡ ಪ್ರಕಟಕ್ಕೆ ಮೀನ-ಮೇಷ ಎಣಿಸುತ್ತಿದೆ. ತಂಡ ಪ್ರಕಟಿಸದಿರಲು ಕಾರಣ ಏನೆಂಬುದು ಮಾತ್ರ ಇದುವರೆಗೆ ತಿಳಿದು ಬಂದಿಲ್ಲ.

VISTARANEWS.COM


on

T20 World Cup 2024
Koo

ದುಬೈ: ಮುಂಬರುವ ಪುರುಷರ ಟಿ20 ವಿಶ್ವಕಪ್(T20 World Cup 2024)​ ಟೂರ್ನಿಗೆ ಈಗಾಗಲೇ ಪಾಲ್ಗೊಳ್ಳುವ 20 ದೇಶಗಳ ಪೈಕಿ 19 ದೇಶಗಳು ತನ್ನ ಸಂಭಾವ್ಯ 15 ಜನರ ತಂಡವನ್ನು ಪ್ರಕಿಟಿಸಿದೆ. ಆದರೆ, ಪಾಕಿಸ್ತಾನ ಮಾತ್ರ ಇನ್ನೂ ತಂಡ ಪ್ರಕಟಕ್ಕೆ ಮೀನ-ಮೇಷ ಎಣಿಸುತ್ತಿದೆ. ಸದ್ಯದ ಮೂಲಗಳ ಪ್ರಕಾರ ಮೇ 23 ಅಥವಾ 24ರ ವೇಳೆ ಪಾಕ್​ ತಂಡವನ್ನು ಪ್ರಕಟಿಸುವುದು ಪಿಸಿಬಿ ಯೋಜನೆಯಾಗಿದೆ ಎಂದು ತಿಳಿದುಬಂದಿದೆ. ಸದ್ಯ ಪ್ರಕಟಗೊಂಡ 19 ತಂಡಗಳ ಆಟಗಾರರ ಪಟ್ಟಿ ಇಂತಿದೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ನ್ಯೂಜಿಲ್ಯಾಂಡ್​ ತಂಡ


ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ. ಮೀಸಲು ಆಟಗಾರ: ಬೆನ್ ಸಿಯರ್ಸ್.


ಆಸ್ಟ್ರೇಲಿಯಾ ತಂಡ

ಮಿಚೆಲ್ ಮಾರ್ಷ್ (ನಾಯಕ), ಆ್ಯಶ್ಟನ್​ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.

ಇಂಗ್ಲೆಂಡ್​ ತಂಡ


ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜ್ಯಾಕ್ಸ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಮಾರ್ಕ್ ವುಡ್.

ದಕ್ಷಿಣ ಆಫ್ರಿಕಾ ತಂಡ


ಐಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಡ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫಾರ್ಟುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಆನ್ರಿಚ್ ನಾರ್ಜೆ, ಕಗಿಸೊ ರಬಾಡಾ, ರಿಯಾನ್ ರಿಕೆಲ್ಟನ್, ಟ್ರೀಸ್ಟಾನ್ ಸ್ಟಬ್ಸ್​, ತಬ್ರೈಜ್ ಶಂಸಿ. ಮೀಸಲು ಆಟಗಾರು: ಲುಂಗಿ ಎನ್​ಗಿಡಿ, ಬರ್ಗರ್.

ಇದನ್ನೂ ಓದಿ IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

ಅಫಘಾನಿಸ್ಥಾನ ತಂಡ


ರಶೀದ್‌ ಖಾನ್‌ (ನಾಯಕ), ರೆಹಮಾನುಲ್ಲ ಗುರ್ಬಜ್‌, ಇಬ್ರಾಹಿಂ ಜದ್ರಾನ್‌, ಅಜ್ಮತುಲ್ಲ ಒಮರ್‌ಜಾಯ್‌, ನಜೀಬುಲ್ಲ ಜದ್ರಾನ್‌, ಮೊಹಮ್ಮದ್‌ ಇಶಾಖ್‌, ಮೊಹಮ್ಮದ್‌ ನಬಿ, ಗುಲ್ಬದಿನ್‌ ನೈಬ್‌, ಕರೀಂ ಜನ್ನತ್‌, ನಂಗ್ಯಾಲ್‌ ಖರೋಟಿ, ಮುಜೀಬ್‌ ಉರ್‌ ರೆಹಮಾನ್‌, ನೂರ್‌ ಅಹ್ಮದ್‌, ನವೀನ್‌ ಉಲ್‌ ಹಕ್‌, ಫ‌ಜಲ್‌ ಹಕ್‌ ಫಾರೂಖೀ, ಫ‌ರೀದ್‌ ಅಹ್ಮದ್‌ ಮಲಿಕ್‌. ಮೀಸಲು ಆಟಗಾರರು: ಸಾದಿಕ್‌ ಉಲ್ಲ ಅಟಲ್‌, ಹಜ್ರತುಲ್ಲ ಜಜಾಯ್‌, ಮೊಹಮ್ಮದ್‌ ಸಲೀಂ ಸಫಿ.

ಕೆನಡಾ ತಂಡ


ಸಾದ್ ಬಿನ್ ಜಾಫರ್ (ನಾಯಕ), ಆರನ್ ಜಾನ್ಸನ್, ದಿಲೋನ್ ಹೇಲಿಗರ್, ದಿಲ್‌ಪ್ರೀತ್ ಬಜ್ವಾ, ಹರ್ಷ್ ಠಾಕರ್, ಜೆರೆಮಿ ಗಾರ್ಡನ್, ಜುನೈದ್ ಸಿದ್ದಿಕಿ, ಕಲೀಮ್ ಸನಾ, ಕನ್ವರ್‌ಪಾಲ್ ತತ್‌ಗುರ್, ನವನೀತ್ ಧಲಿವಾಲ್, ನಿಕೋಲಸ್ ಕಿರ್ಟನ್, ಪರ್ಗತ್ ಸಿಂಗ್, ರವೀಂದರ್‌ಪಾಲ್ ಸಿಂಗ್, ರಾಯನ್‌ಖಾನ್‌ಸ್ಹಾನ್, ಶ್ವಾಖಾನ್‌ಸ್ಹಾನ್‌ಸ್ಯಾನ್. ಮೀಸಲು ಆಟಗಾರ: ತಜೀಂದರ್ ಸಿಂಗ್, ಆದಿತ್ಯ ವರದರಾಜನ್, ಅಮ್ಮರ್ ಖಾಲಿದ್, ಜತೀಂದರ್ ಮಥಾರು, ಪರ್ವೀನ್ ಕುಮಾರ್.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಪುವಾ ನ್ಯೂಗಿನಿಯಾ, ಐರ್ಲೆಂಡ್

ನೇಪಾಳ ತಂಡ


ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಭುರ್ಟೆಲ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಲಲಿತ್ ರಾಜಬಂಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅಬಿನಾಶ್ ಬೋಹರಾ, ಸಾಗರ್ ಧಕಲ್, ಕಮಲ್ ಸಿಂಗ್ ಐರಿ.

ಒಮಾನ್​ ತಂಡ


ಅಕಿಬ್ ಇಲ್ಯಾಸ್ (ನಾಯಕ), ಜೀಶನ್ ಮಕ್ಸೂದ್, ಕಶ್ಯಪ್ ಪ್ರಜಾಪತಿ, ಪ್ರತೀಕ್ ಅಠವಲೆ (ವಿಕಿ), ಅಯಾನ್ ಖಾನ್, ಶೋಯೆಬ್ ಖಾನ್, ಮೊಹಮ್ಮದ್ ನದೀಮ್, ನಸೀಮ್ ಖುಷಿ (ವಿಕಿ), ಮೆಹ್ರಾನ್ ಖಾನ್, ಬಿಲಾಲ್ ಖಾನ್, ರಫಿಯುಲ್ಲಾ, ಕಲೀಮುಲ್ಲಾ, ಫಯಾಜ್ ಬಟ್, ಶಕೀಲ್ ಅಹ್ಮದ್ , ಖಾಲಿದ್ ಕೈಲ್. ಮೀಸಲು ಆಟಗಾರ: ಜತೀಂದರ್ ಸಿಂಗ್, ಸಮಯ್ ಶ್ರೀವಾಸ್ತವ, ಸುಫ್ಯಾನ್ ಮೆಹಮೂದ್, ಜೇ ಒಡೆದ್ರಾ.

ಸ್ಕಾಟ್ಲೆಂಡ್​ ತಂಡ


ರಿಚಿ ಬೆರಿಂಗ್ಟನ್ (ನಾಯಕ), ಮ್ಯಾಥ್ಯೂ ಕ್ರಾಸ್, ಬ್ರಾಡ್ ಕ್ಯೂರಿ, ಕ್ರಿಸ್ ಗ್ರೀವ್ಸ್, ಒಲಿ ಹೇರ್ಸ್, ಜ್ಯಾಕ್ ಜಾರ್ವಿಸ್, ಮೈಕೆಲ್ ಜೋನ್ಸ್, ಮೈಕೆಲ್ ಲೀಸ್ಕ್, ಬ್ರಾಂಡನ್ ಮೆಕ್‌ಮುಲ್ಲೆನ್, ಜಾರ್ಜ್ ಮನ್ಸೆ, ಸಫ್ಯಾನ್ ಷರೀಫ್, ಕ್ರಿಸ್ ಸೋಲ್, ಚಾರ್ಲಿ ಟಿಯರ್, ಮಾರ್ಕ್ ವ್ಯಾಟಲ್.

ಉಗಾಂಡ ತಂಡ

ಬ್ರಿಯಾನ್ ಮಸಾಬಾ (ನಾಯಕ), ಸೈಮನ್ ಸ್ಸೆಸಾಜಿ, ರೋಜರ್ ಮುಕಾಸಾ, ಕಾಸ್ಮಾಸ್ ಕ್ಯೆವುಟಾ, ದಿನೇಶ್ ನಕ್ರಾನಿ, ಫ್ರೆಡ್ ಅಚೆಲಮ್, ಕೆನ್ನೆತ್ ವೈಸ್ವಾ, ಅಲ್ಪೇಶ್ ರಾಮ್‌ಜಾನಿ, ಫ್ರಾಂಕ್ ನ್ಸುಬುಗಾ, ಹೆನ್ರಿ ಸೆನ್ಯೊಂಡೋ, ಬಿಲಾಲ್ ಹಸುನ್, ರಾಬಿನ್ಸನ್ ಒಬುಯಾ, ರಿಯಾಝತ್ ಅಲಿ ಮಿಯಾಜಿ, ರನಾಕ್​ ಪಟೇಲ್. ಪ್ರಯಾಣ ಮೀಸಲು: ಇನೋಸೆಂಟ್ ಮ್ವೆಬಾಜ್, ರೊನಾಲ್ಡ್ ಲುತಾಯಾ​.

ಅಮೆರಿಕ ತಂಡ

ಮೊನಾಂಕ್ ಪಟೇಲ್ (ನಾಯಕ), ಆರನ್ ಜೋನ್ಸ್ (ಉಪನಾಯಕ), ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಷ್ಟುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸ್ಟೀವನ್ ಟೇಯ್ , ಶಯಾನ್ ಜಹಾಂಗೀರ್. ಮೀಸಲು ಆಟಗಾರರು: ಗಜಾನಂದ್ ಸಿಂಗ್, ಜುವಾನೊಯ್ ಡ್ರೈಸ್‌ಡೇಲ್, ಯಾಸಿರ್ ಮೊಹಮ್ಮದ್.

ವೆಸ್ಟ್​ ಇಂಡೀಸ್​ ತಂಡ


ರೋವ್‌ಮನ್ ಪೊವೆಲ್ (ನಾಯಕ), ಅಲ್ಜಾರಿ ಜೋಸೆಫ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಾಕೇಶ್ ಮೋಟಿ, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಶೆರ್ಫಾನ್ ರೊಥರ್‌ಫೋರ್ಡ್.

ನೆದರ್ಲೆಂಡ್ಸ್‌ ತಂಡ

ಸ್ಕಾಟ್‌ ಎಡ್ವರ್ಡ್ಸ್‌ (ನಾಯಕ), ಆರ್ಯನ್‌ ದತ್ತ, ಬಾಸ್‌ ಡಿ ಲೀಡ್‌, ಡೇನಿಯಲ್‌ ಡೋರಮ್‌, ಫ್ರೆಡ್‌ ಕ್ಲಾಸೆನ್‌, ಕೈಲ್‌ ಕ್ಲೀನ್‌, ಲೋಗನ್‌ ವಾನ್‌ ಬೀಕ್‌, ಮ್ಯಾಕ್ಸ್‌ ಓ’ಡೌಡ್‌, ಮೈಕಲ್‌ ಲೆವಿಟ್‌, ಪಾಲ್‌ ವಾನ್‌ ಮೀಕೆರೆನ್‌, ಸಿಬ್ರಾಂಡ್‌ ಏಂಜೆಲ್‌ಬ್ರೆಟ್‌, ತೇಜ ನಿಡಮನೂರು, ಟಿಮ್‌ ಪ್ರಿಂಗ್ಲ್, ವಿಕ್ರಮ್‌ ಸಿಂಗ್‌, ವೆಸ್ಲಿ ಬರೇಸಿ.

ಐರ್ಲೆಂಡ್ ತಂಡ

ಪಾಲ್ ಸ್ಟರ್ಲಿಂಗ್ (ನಾಯಕ), ಮಾರ್ಕ್ ಅಡೈರ್, ರಾಸ್ ಅಡೈರ್, ಆಂಡ್ರ್ಯೂ ಬಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಲಾರ್ಕನ್ ಟಕರ್ (ವಿಕೆಟ್ ಕೀಪರ್), ಬೆನ್ ವೈಟ್ ಮತ್ತು ಕ್ರೇಗ್ ಯಂಗ್.

ಪಪುವಾ ನ್ಯೂಗಿನಿಯಾ ತಂಡ


ಅಸ್ಸಾದ್ ವಾಲಾ(ನಾಯಕ),ಸಿಜೆ ಅಮಿನಿ(ಉಪನಾಯಕ),ಅಲೆಯ್ ನಾವೊ, ಚಾಡ್ ಸೋಪರ್, ಹಿಲಾ ವರೇ, ಹಿರಿ ಹಿರಿ, ಜ್ಯಾಕ್ ಗಾರ್ಡ್ನರ್, ಜಾನ್ ಕರಿಕೊ, ಕಬುವಾ ವಾಗಿ ಮೋರಿಯಾ, ಕಿಪ್ಲಿಂಗ್ ಡೊರಿಗಾ, ಲೆಗಾ ಸಿಯಾಕಾ, ನಾರ್ಮನ್ ವನುವಾ, ಸೆಮಾ ಕಾಮಿಯಾ, ಸೆಸೆ ಬೌ, ಟೋನಿ ಉರಾ.

ಶ್ರೀಲಂಕಾ ತಂಡ


ವನಿಂದು ಹಸರಂಗ (ನಾಯಕ), ಚರಿತ್ ಅಸಲಂಕಾ, ಕುಸಲ್ ಮೆಂಡಿಸ್, ಪಾತುಂ ನಿಸ್ಸಂಕ, ಕಮಿಂದು ಮೆಂಡಿಸ್, ಸದೀರ ಸಮರವಿಕ್ರಮ, ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕ, ಧನಂಜಯ ಡಿ ಸಿಲ್ವ, ಮಹೇಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಮಥೀಷ್ ತೀಕ್ಷಣ, ದುಷ್ಮಂತ ತುಷಾರ ಚಮೀರ, ನುವಾಂತಾ ಚಮೀರ ಮಧುಶಂಕ. ಪ್ರಯಾಣ ಮೀಸಲು: ಅಸಿತ ಫೆರ್ನಾಂಡೋ, ವಿಜಯಕಾಂತ್ ವ್ಯಾಸಕಾಂತ್, ಭಾನುಕಾ ರಾಜಪಕ್ಸೆ, ಜನಿತ್ ಲಿಯಾನಗೆ.

ಬಾಂಗ್ಲಾದೇಶ ತಂಡ


ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತಸ್ಕಿನ್ ಅಹ್ಮದ್, ಲಿಟ್ಟನ್ ದಾಸ್, ಸೌಮ್ಯ ಸರ್ಕಾರ್, ತಂಝಿದ್ ಹಸನ್ ತಮೀಮ್, ಶಕೀಬ್ ಅಲ್ ಹಸನ್, ತೌಹಿದ್ ಹೃದಯೋಯ್, ಮಹ್ಮುದುಲ್ಲಾ ರಿಯಾದ್, ಜೇಕರ್ ಅಲಿ ಅನಿಕ್, ತನ್ವಿರ್ ಇಸ್ಲಾಂ, ಶಾಕ್ ಮಹೇದಿ ಹಸನ್, ರಿಶಾದ್ ಹೊಸ್ರಿ ಫುಲ್ ರಹ್ಮಾನ್, ಶೋಝಿನ್, ಇಸ್ಲಾಂ, ತಂಝೀಮ್ ಹಸನ್ ಸಾಕಿಬ್. ಪ್ರಯಾಣ ಮೀಸಲು: ಅಫೀಫ್ ಹೊಸೈನ್, ಹಸನ್ ಮಹಮೂದ್.

ನಮೀಬಿಯಾ ತಂಡ


ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಝೇನ್ ಗ್ರೀನ್, ಮೈಕೆಲ್ ವ್ಯಾನ್ ಲಿಂಗೆನ್, ಡೈಲನ್ ಲೀಚರ್, ರೂಬೆನ್ ಟ್ರಂಪೆಲ್ಮನ್, ಜ್ಯಾಕ್ ಬ್ರಾಸೆಲ್, ಬೆನ್ ಶಿಕೊಂಗೊ, ತಂಗೇನಿ ಲುಂಗಮೆನಿ, ನಿಕೊ ಡೇವಿನ್, ಜೆಜೆ ಸ್ಮಿತ್, ಜಾನ್ ಫ್ರಿಲಿಂಕ್, ಜೆಪಿ ಕೋಟ್ಜೆ, ಡೇವಿಡ್ ವೈಸ್, ಮಲನ್ ಸ್ಕೋಲ್ಟ್ಜ್ , ಪಿಡಿ ಬ್ಲಿಗ್ನಾಟ್.

Continue Reading

ವೈರಲ್ ನ್ಯೂಸ್

Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

Viral video: ಗುಜರಾತ್​ ಟೈಟಾನ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ ಮುಖಾಮುಖಿ ನೋಡಲು ಬಂದಿದ್ದ ಅಭಿಮಾನಿಯೊಬ್ಬ ಪಂದ್ಯದ ಬಾಲ್ ಕದಿಯಲು ಯತ್ನಿಸಿದ ವೇಳೆ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದು ಸರಿಯಾಗಿ ಗೂಸಾ ತಿಂದ ಘಟನೆ ಸೋಮವಾರ ನಡೆದಿದೆ.

VISTARANEWS.COM


on

Viral video
Koo

ಅಹಮದಾಬಾದ್:​ ಕ್ರಿಕೆಟ್​ ಅಭಿಮಾನಿಗಳು ತಮ್ಮ ನೆಚ್ಚಿನ ತಂಡ ಮತ್ತು ಆಟಗಾರರನ್ನು ನೋಡಲು ಮೈದಾನಕ್ಕೆ ಬರುವುದು ಸರ್ವೆ ಸಾಮಾನ್ಯ. ಆದರೆ, ಇಲ್ಲೊಬ್ಬ ಭೂಪ ಕೆಕೆಆರ್​(Kolkata Knight Riders) ಮತ್ತು ಗುಜರಾತ್​ ಟೈಟಾನ್ಸ್​(Gujarat Titans) ನಡುವಣ ಪಂದ್ಯದ ವೇಳೆ ಚೆಂಡನ್ನು ಕದ್ದು ಸಿಕ್ಕಿಬಿದ್ದಿದ್ದಾನೆ. ಬಳಿಕ ಪೊಲೀಸರಿಂದ ಈತನಿಗೆ ಹಿಗ್ಗಾಮುಗ್ಗಾ ಗೂಸಾ ಬಿದ್ದಿದೆ. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್(Viral video)​ ಆಗಿದೆ.

ಸೋಮವಾರದ ಐಪಿಎಲ್​ ಪಂದ್ಯದಲ್ಲಿ ಅಹಮದಾಬಾದ್​ನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಗುಜರಾತ್​ ಟೈಟಾನ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್​ ತಂಡಗಳು ಮುಖಾಮುಖಿಯಾಗಬೇಕಿತ್ತು. ಇದೇ ಪಂದ್ಯ ವೀಕ್ಷಣೆಗೆ ಬಂದ ಅಭಿಮಾನಿಯೊಬ್ಬ ರಿಂಕು ಸಿಂಗ್(Rinku Singh)​ ಜೆರ್ಸಿ ತೊಟ್ಟು, ಆಟಗಾರರು ಪಂದ್ಯಕ್ಕೂ ಮುನ್ನ ನಡೆಸುತ್ತಿದ್ದ ಅಭ್ಯಾಸವನ್ನು ನೋಡುತ್ತಿದ್ದ. ಇದೇ ವೇಳೆ ಅಲ್ಲಿದ್ದ ಪಂದ್ಯದ ಬಾಲ್ ಕದಿಯಲು ಪ್ರಯತ್ನಿಸಿದ್ದಾನೆ. ಚೆಂಡು ಕದ್ದು ತನ್ನ ಪ್ಯಾಂಟ್​ನ ಒಳಗಡೆ ಬಚ್ಚಿಟ್ಟಿದ್ದ. ಇದು ಭದ್ರತಾ ಸಿಬ್ಬಂದಿ ಗಮನಕ್ಕೆ ಬಂದಿದೆ. ಕೂಡಲೇ ಆತನನ್ನು ವಿಚಾರಿಸಿದಾಗ ಆತ ಪ್ಯಾಂಟ್​ನ ಒಳಗಡೆ ಬಚ್ಚಿಟ್ಟ ಚೆಂಡನ್ನು ಹಿಂದಿರುಗಿಸಿದ್ದಾನೆ. ಕಳ್ಳತನ ಮಾಡಿದ ತಪ್ಪಿಗಾಗಿ ಭದ್ರತಾ ಸಿಬ್ಬಂದಿ ಆತನಿಗೆ ಸರಿಯಾಗಿ 2 ಗೂಸಾ ಕೊಟ್ಟಿದ್ದಾರೆ.

ಈ ಪಂದ್ಯ ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದುಗೊಂಡಿತು. ಪರಿಣಾಮ ಗುಜರಾತ್​ ಟೈಟಾನ್ಸ್​ ಟೂರ್ನಿಯಿಂದ ಹೊರ ಬಿದ್ದ ಸಂಕಟಕ್ಕೆ ಸಿಲುಕಿತು. ಸ್ಟೇಡಿಯಮ್​ನಲ್ಲಿ ಸೇರಿದ್ದ 45,000 ಅಭಿಮಾನಿಗಳು ಪಂದ್ಯ ಆರಂಭವಾಗುವ ನಿರೀಕ್ಷೆಯಿಂದ ಸ್ಥಳದಿಂದ ಕದಲಲಿಲ್ಲ. ರಾತ್ರಿ 10:56 ಕ್ಕೆ 5 ಓವರ್​ಗಳ ಪಂದ್ಯದ ಕಟ್ ಆಫ್ ಸಮಯವಾಗಿತ್ತು. ಮೈದಾನದ ಸಿಬ್ಬಂದಿ ಎಲ್ಲ ಪ್ರಯತ್ನಗಳನ್ನು ಮಾಡಿದ ಹೊರತಾಗಿಯೂ ಆಡಿಲು ಯಾವುದೇ ಅವಕಾಶ ದೊರೆಯಲಿಲ್ಲ. ರಾತ್ರಿ 10:40 ರ ಸುಮಾರಿಗೆ ಅಧಿಕಾರಿಗಳು ಪಂದ್ಯವನ್ನು ರದ್ದುಗೊಳಿಸಿದರು.

ಇದನ್ನೂ ಓದಿ IPL 2024 : ಆರ್​ಸಿಬಿ, ಆರ್​ಆರ್​ಗೆ ಆಘಾತ; ಐಪಿಎಲ್ ಬೇಡ ಎಂದು ಹೊರಟ ಹಲವು ಆಟಗಾರರು

ಗುಜರಾತ್​ ಟೈಟಾನ್ಸ್ ಪ್ಲೇಆಫ್​ನಲ್ಲಿ ಸ್ಥಾನ ಪಡೆಯುವ ರೇಸ್​​ನಿಂದ ಹೊರಗುಳಿದಿದೆ. ಹಾರ್ದಿಕ್ ಪಾಂಡ್ಯ ನಿರ್ಗಮನ ಮತ್ತು ಮೊಹಮ್ಮದ್ ಶಮಿ ಗಾಯಗೊಂಡ ನಂತರ ಜಿಟಿಗೆ ಉತ್ತಮ ಅನುಕೂಲಗಳು ಸಿಗಲಿಲ್ಲ. ಕೆಕೆಆರ್ ವಿರುದ್ಧದ ಪಂದ್ಯಕ್ಕೆ ಮುಂಚಿತವಾಗಿ ಮುಂದಿನ ಸುತ್ತಿಗೆ ಪ್ರವೇಶಿಸುವ ಅವಕಾಶ ಆ ತಂಡಕ್ಕೆ ಇತ್ತು. ಆದರೆ, ಮಳೆ ಅವರ ಭರವಸೆಗಳನ್ನು ಭಗ್ನಗೊಳಿಸಿತು.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ಕೆಕೆಆರ್​139319 (+1.428)
ರಾಜಸ್ಥಾನ್​ ರಾಯಲ್ಸ್​​​128416 (+0.349)
ಚೆನ್ನೈ​​137614 (+0.528)
ಹೈದರಾಬಾದ್​127514 (+0.406)
ಆರ್​ಸಿಬಿ136712 (+0.387)
ಡೆಲ್ಲಿ136712 (-0.482)
ಲಕ್ನೋ126612 (-0.769)
ಗುಜರಾತ್​135711 (-1.063)
ಮುಂಬೈ13498 (-0.271)
ಪಂಜಾಬ್​​12488 (-0.423)
Continue Reading

ಕ್ರಿಕೆಟ್

T20 World Cup 2024: ನೆದರ್ಲೆಂಡ್ಸ್‌ ಟಿ20 ವಿಶ್ವಕಪ್ ತಂಡದಲ್ಲಿ ಮೂವರು ಭಾರತೀಯ ಆಟಗಾರರಿಗೆ ಸ್ಥಾನ

T20 World Cup 2024: ನೆದರ್ಲೆಂಡ್ಸ್‌ ಜೂನ್​ 4ರಂದು ನೇಪಾಳ ವಿರುದ್ಧ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ವಿಶ್ವಕಪ್​ ಟೂರ್ನಿ ಜೂನ್​ 1ರಿಂದ 29ರ ತನಕ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಸಾಗಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ.

VISTARANEWS.COM


on

T20 World Cup 2024
Koo

ಆಮ್‌ಸ್ಟರ್ಡಮ್‌: ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇರುವಂತೆಯೇ ನೆದರ್ಲೆಂಡ್ಸ್‌(t20 world cup squad netherlands) ತನ್ನ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಅನುಭವಿ ಆಟಗಾರ ಸ್ಕಾಟ್‌ ಎಡ್ವರ್ಡ್ಸ್‌(Scott Edwards) ತಂಡದ ನಾಯಕನಾಗಿದ್ದಾರೆ. ಅಚ್ಚರಿ ಎಂದರೆ ಈ ತಂಡದಲ್ಲಿ ಭಾರತೀಯ ಮೂಲದ ಮೂವರು ಆಟಗಾರರೂ ಕೂಡ ಕಾಣಿಸಿಕೊಂಡಿದ್ದಾರೆ.

ತೇಜ ನಿಡಮನೂರು, ವಿಕ್ರಮ್‌ ಸಿಂಗ್‌ ಮತ್ತು ಆರ್ಯನ್‌ ದತ್ತ ತಂಡದಲ್ಲಿರುವ ಭಾರತೀಯ ಮೂಲದ ಆಟಗಾರರಾಗಿದ್ದಾರೆ. ನೆದರ್ಲೆಂಡ್ಸ್‌ ಜೂನ್​ 4ರಂದು ನೇಪಾಳ ವಿರುದ್ಧ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಆರಂಭಿಸಲಿದೆ. ವಿಶ್ವಕಪ್​ ಟೂರ್ನಿ ಜೂನ್​ 1ರಿಂದ 29ರ ತನಕ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಸಾಗಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. 

ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

ನೆದರ್ಲೆಂಡ್ಸ್‌ ತಂಡ

ಸ್ಕಾಟ್‌ ಎಡ್ವರ್ಡ್ಸ್‌ (ನಾಯಕ), ಆರ್ಯನ್‌ ದತ್ತ, ಬಾಸ್‌ ಡಿ ಲೀಡ್‌, ಡೇನಿಯಲ್‌ ಡೋರಮ್‌, ಫ್ರೆಡ್‌ ಕ್ಲಾಸೆನ್‌, ಕೈಲ್‌ ಕ್ಲೀನ್‌, ಲೋಗನ್‌ ವಾನ್‌ ಬೀಕ್‌, ಮ್ಯಾಕ್ಸ್‌ ಓ’ಡೌಡ್‌, ಮೈಕಲ್‌ ಲೆವಿಟ್‌, ಪಾಲ್‌ ವಾನ್‌ ಮೀಕೆರೆನ್‌, ಸಿಬ್ರಾಂಡ್‌ ಏಂಜೆಲ್‌ಬ್ರೆಟ್‌, ತೇಜ ನಿಡಮನೂರು, ಟಿಮ್‌ ಪ್ರಿಂಗ್ಲ್, ವಿಕ್ರಮ್‌ ಸಿಂಗ್‌, ವೆಸ್ಲಿ ಬರೇಸಿ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಪಪುವಾ ನ್ಯೂಗಿನಿಯಾ, ಐರ್ಲೆಂಡ್

ಕಳೆದ ವಾರವಷ್ಟೇ ಐರ್ಲೆಂಡ್(Ireland T20 World Cup squad) ಮತ್ತು ಪಪುವಾ ನ್ಯೂಗಿನಿಯಾ(Papua New Guinea T20 World Cup squad) 15 ಸದಸ್ಯರ ಸಂಭಾವ್ಯ ತಂಡಗಳನ್ನು ಪ್ರಕಟಿಸಿತ್ತು. ಅನುಭವಿ ಆರಂಭಿಕ ಆಟಗಾರ ಪಾಲ್‌ ಸ್ಟರ್ಲಿಂಗ್ ಐರ್ಲೆಂಡ್ ತಂಡವನ್ನು ಮುನ್ನಡೆಸಿದರೆ, ಪಪುವಾ ನ್ಯೂಗಿನಿಯಾ ತಂಡವನ್ನು ಅಸ್ಸಾದ್ ವಾಲಾ ಮುನ್ನಡೆಸಲಿದ್ದಾರೆ. ಐರ್ಲೆಂಡ್ ಜೂನ್ 5 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ‘ಎ’ ಗುಂಪಿನ ಪಂದ್ಯದಲ್ಲಿ ಭಾರತದ ವಿರುದ್ಧ ಆಡುವ ಮೂಲಕ ತನ್ನ ಅಭಿಯಾನ ಪ್ರಾರಂಭಿಸಲಿದೆ.

ಐರ್ಲೆಂಡ್ ತಂಡ

ಪಾಲ್ ಸ್ಟರ್ಲಿಂಗ್ (ನಾಯಕ), ಮಾರ್ಕ್ ಅಡೈರ್, ರಾಸ್ ಅಡೈರ್, ಆಂಡ್ರ್ಯೂ ಬಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಲಾರ್ಕನ್ ಟಕರ್ (ವಿಕೆಟ್ ಕೀಪರ್), ಬೆನ್ ವೈಟ್ ಮತ್ತು ಕ್ರೇಗ್ ಯಂಗ್.

ಪಪುವಾ ನ್ಯೂಗಿನಿಯಾ ತಂಡ


ಅಸ್ಸಾದ್ ವಾಲಾ(ನಾಯಕ),ಸಿಜೆ ಅಮಿನಿ(ಉಪನಾಯಕ),ಅಲೆಯ್ ನಾವೊ, ಚಾಡ್ ಸೋಪರ್, ಹಿಲಾ ವರೇ, ಹಿರಿ ಹಿರಿ, ಜ್ಯಾಕ್ ಗಾರ್ಡ್ನರ್, ಜಾನ್ ಕರಿಕೊ, ಕಬುವಾ ವಾಗಿ ಮೋರಿಯಾ, ಕಿಪ್ಲಿಂಗ್ ಡೊರಿಗಾ, ಲೆಗಾ ಸಿಯಾಕಾ, ನಾರ್ಮನ್ ವನುವಾ, ಸೆಮಾ ಕಾಮಿಯಾ, ಸೆಸೆ ಬೌ, ಟೋನಿ ಉರಾ.

Continue Reading

ಕ್ರೀಡೆ

RCB vs CSK: ಆರ್​ಸಿಬಿ ಪ್ಲೇ ಆಫ್​ ಹಾದಿಗೆ ಕೊಳ್ಳಿ ಇಡಲಿದೆಯೇ ಮಳೆ; ಹವಾಮಾನ ಇಲಾಖೆ ನೀಡಿದ ಮುನ್ಸೂಚನೆ ಏನು?

RCB vs CSK: ಒಂದೆಡೆ ಆರ್​ಸಿಬಿ ಅಭಿಮಾನಿಗಳು ಮತ್ತೊಂದೆಡೆ ಚೆನ್ನೈ ಅಭಿಮಾನಿಗಳು ಪಂದ್ಯ ನೋಡುವುದಕ್ಕಾಗಿ ಚಾಕತ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ಆದರೆ ಈ ಪಂದ್ಯ ನಡೆಯುವುದು ಅನುಮಾನ ಎನ್ನುವ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.

VISTARANEWS.COM


on

RCB Vs CSK
Koo

ಬೆಂಗಳೂರು: ಆರಂಭಿಕ ಹಂತದಲ್ಲಿ ಸತತ ಸೋಲಿನ ಸುಳಿಗೆ ಸಿಲುಕಿದ್ದ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB vs CSK) ತಂಡ ಇನ್ನೇನು ಟೂರ್ನಿಯಿಂದ(IPL 2024) ಹೊರಬೀಳಬೇಕು ಎನ್ನುವಷ್ಟರಲ್ಲಿ ಉತ್ಕೃಷ್ಟ ಮಟ್ಟದ ಹೋರಾಟ ನೀಡುವ ಮೂಲಕ ಸತತ 5, ಒಟ್ಟು 6 ಪಂದ್ಯಗಳನ್ನು ಗೆದ್ದು ಪ್ಲೇ ಆಫ್​ ರೇಸ್​ನಲ್ಲಿ ತಾನು ಕೂಡ ಪ್ರತಿಸ್ಪರ್ಧಿ ಎನ್ನುವಂತೆ ಕಾಣಿಸಿಕೊಂಡಿದೆ.

ಸದ್ಯ ಅಂಕಪಟ್ಟಿಯಲ್ಲಿ 5ನೇ ಸ್ಥಾನಿಯಾಗಿರುವ ಆರ್​ಸಿಬಿ ತನ್ನ ಕೊನೆಯ ಪಂದ್ಯವನ್ನು ತವರಿನಲ್ಲಿ ಮೇ 18ರಂದು ಬದ್ಧ ಎದುರಾಳಿ ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಆಡಲಿದೆ. ಉಭಯ ತಂಡಗಳಿಗೂ ಇದು ಕೊನೆಯ ಲೀಗ್​ ಪಂದ್ಯವಾಗಿದೆ. ಜತೆಗೆ ಪ್ಲೇ ಆಪ್​ ಪ್ರವೇಶಿಸಬೇಕಿದ್ದರೆ ಗೆಲ್ಲಲೇ ಬೇಕಾದ ಅನಿವಾರ್ಯತೆ ಇತ್ತಂಡಗಳದ್ದು. ಒಂದೆಡೆ ಆರ್​ಸಿಬಿ ಅಭಿಮಾನಿಗಳು ಮತ್ತೊಂದೆಡೆ ಚೆನ್ನೈ ಅಭಿಮಾನಿಗಳು ಪಂದ್ಯ ನೋಡುವುದಕ್ಕಾಗಿ ಚಾಕತ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ಆದರೆ ಈ ಪಂದ್ಯ ನಡೆಯುವುದು ಅನುಮಾನ ಎನ್ನುವ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ.

ಇದನ್ನೂ ಓದಿ IPL 2024 Points Table: ಟೂರ್ನಿಯಿಂದ ಹೊರಬಿದ್ದ ಗುಜರಾತ್​ ಟೈಟಾನ್ಸ್​

ಹೌದು, ಪಂದ್ಯ ನಡೆಯುವ ಮೇ 18 ಶನಿವಾರದಂದು ಬೆಂಗಳೂರಿನಲ್ಲಿ ಭಾರೀ ಮಳೆಯಾಗಲಿದೆ(Rain likely to interrupt RCB Vs CSK match) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಬೆಂಗಳೂರು ಸೇರಿ ರಾಜ್ಯದ ಹಲವು ಭಾಗಗಳಲ್ಲಿ ಸತತವಾಗಿ ಮಳೆಯಾಗುತ್ತಿದೆ. ಜತೆಗೆ ಪಕ್ಕದ ರಾಜ್ಯ ಕೇರಳ, ಮಹಾರಾಷ್ಟದಲ್ಲಿಯೂ ಮಳೆಯಾಗುತ್ತಿದೆ. ಸೋಮವಾರ ಅಹಮದಾಬಾದ್​ನಲ್ಲಿ ಸುರಿದ ಭಾರೀ ಮಳೆಯಿಂದ ಗುಜರಾತ್​ ಮತ್ತು ಕೆಕೆಆರ್​ ನಡುವಣ ಪಂದ್ಯ ಟಾಸ್​ ಕೂಡ ಕಾಣದೆ ರದ್ದುಗೊಂಡಿತ್ತು. ಪಂದ್ಯ ರದ್ದುಗೊಂಡ ಕಾರಣ ಗುಜರಾತ್​ ತಂಡ ಪ್ಲೇ ಆಫ್​ ರೇಸ್​ ಅತ್ಯಂ ಕಂಡು ಟೂರ್ನಿಯಿಂದ ಹೊರಬಿದ್ದ ಸಂಕಟಕ್ಕೆ ಸಿಲುಕಿತು. ಇದೀಗ ಆರ್​ಸಿಬಿ ಪಂದ್ಯಕ್ಕೂ ಮಳೆ ಭೀತಿ ಎದುರಾಗಿರುವುದು ತಂಡ ಸೇರಿ ಅಭಿಮಾನಿಗಳಿಗೂ ಆತಂಕಪಡುವಂತೆ ಮಾಡಿದೆ.

ಆರ್​ಸಿಬಿ ಗೆದ್ದರೂ ಪ್ಲೇ ಆಫ್​ ಟಿಕೆಟ್​ ಖಚಿತವಲ್ಲ!


ಒಂದೊಮ್ಮೆ ಆರ್​ಸಿಬಿ ತಂಡ ಚೆನ್ನೈ ವಿರುದ್ಧ ಗೆದ್ದರೂ ಕೂಡ ಪ್ಲೇ ಆಫ್​ ಟಿಕೆಟ್​ ಖಚಿತವಾಗುವುದಿಲ್ಲ. ಉಳಿದ ಕೆಲವು ತಂಡಗಳು ಸೋತರಷ್ಟೇ ಆರ್‌ಸಿಬಿಗೆ ಪ್ಲೇ ಆಫ್ ಸಾಧ್ಯ. ರನ್‌ರೇಟ್‌ ಲೆಕ್ಕಾಚಾರದಲ್ಲಿ ಚೆನ್ನೈಯನ್ನು ಆರ್‌ಸಿಬಿ ಕನಿಷ್ಠ 18 ರನ್ನುಗಳಿಂದ ಗೆಲ್ಲಬೇಕಿದೆ. ಚೇಸಿಂಗ್‌ ಲೆಕ್ಕಾಚಾರ ಬೇರೆಯೇ ಇದೆ. ಕನಿಷ್ಠ 11 ಎಸೆತ ಬಾಕಿ ಇರುವಾಗಲೇ ಗುರಿ ಮುಟ್ಟಬೇಕು. ಒಂದೊಮ್ಮೆ ಉಳಿದಿರುವ 2 ಪಂದ್ಯದಲ್ಲಿ ಲಕ್ನೋ ಸೂಪರ್​ ಜೈಂಟ್ಸ್​ ಗೆದ್ದರೆ, ಸನ್​ರೈಸರ್ಸ್ ಹೈದರಾಬಾದ್​ ಒಂದು ಪಂದ್ಯ ಗೆದ್ದರೆ ಆಗ ಆರ್​ಸಿಬಿ ಟೂರ್ನಿಯಿಂದ ಅಧಿಕೃತವಾಗಿ ಹೊರಬೇಳಲಿದೆ. ಏಕೆಂದರೆ ಈ ತಂಡಗಳಿಗೆ 16 ಅಂಕ ಸಿಗಲಿದೆ.

Continue Reading
Advertisement
Patanjali case
ದೇಶ5 mins ago

Patanjali Case: ಪತಂಜಲಿ ಕೇಸ್‌- ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌; IMA ಅಧ್ಯಕ್ಷನಿಗೆ ಛೀಮಾರಿ

T20 World Cup 2024
ಕ್ರೀಡೆ23 mins ago

T20 World Cup 2024: 20 ತಂಡಗಳ ಪೈಕಿ 19 ತಂಡ ಪ್ರಕಟ; ಪಾಕಿಸ್ತಾನ ಮಾತ್ರ ಬಾಕಿ

Job News
ಉದ್ಯೋಗ1 hour ago

Job News: ಅಟೆನ್ಷನ್‌ ಪ್ಲೀಸ್‌; ಸರ್ಕಾರಿ ಹುದ್ದೆಗಳ ಅರ್ಜಿ ಸಲ್ಲಿಕೆಗೆ ಇಂದು, ನಾಳೆ ಕೊನೆಯ ದಿನ

kurkure divorce viral news
ವೈರಲ್ ನ್ಯೂಸ್1 hour ago

Viral News: ಕುರ್ಕುರೆ ಪ್ಯಾಕ್‌ ತರದೇ ಹೋದ ಗಂಡನಿಗೆ ಡೈವೋರ್ಸ್!‌

Supriya Sule
ದೇಶ1 hour ago

Supriya Sule: ಇವಿಎಂ ಇದ್ದ ಸ್ಟ್ರಾಂಗ್‌ ರೂಂ ಸಿಸಿಟಿವಿ ಕ್ಯಾಮೆರಾ ಸ್ವಿಚ್‌ ಆಫ್‌; ಸುಪ್ರಿಯಾ ಸುಳೆ ಗಂಭೀರ ಆರೋಪ, EC ರಿಯಾಕ್ಟ್‌

Road Accident
ಕ್ರೈಂ1 hour ago

Road Accident: ಸ್ಕೂಟರ್‌ಗೆ ಟ್ರಕ್‌, ಲಾರಿಗೆ ಬಸ್‌, ಡಿವೈಡರ್‌ಗೆ ಕಾರು ಡಿಕ್ಕಿ; ಅಪಾಯದಿಂದ ಜಸ್ಟ್‌ ಮಿಸ್‌

HD Revanna released from jail Revanna Go straight to HD Deve Gowda house
ಕ್ರೈಂ2 hours ago

HD Revanna Released: ಜೈಲಿಂದ ಬಿಡುಗಡೆಯಾದ ಎಚ್.ಡಿ. ರೇವಣ್ಣ; ನೇರವಾಗಿ ದೇವೇಗೌಡರ ಮನೆಗೆ ದೌಡು

Viral video
ವೈರಲ್ ನ್ಯೂಸ್2 hours ago

Viral video: ರಿಂಕು ಸಿಂಗ್​ ಜೆರ್ಸಿ ತೊಟ್ಟು ಚೆಂಡು ಕದಿಯಲು ಯತ್ನಿಸಿ ಸಿಕ್ಕಿ ಬಿದ್ದ ಭೂಪ!; ಪೊಲೀಸರಿಂದ ಬಿತ್ತು ಹಿಗ್ಗಾಮುಗ್ಗಾ ಗೂಸಾ

Vaishnavi Gowda
ಕಿರುತೆರೆ2 hours ago

Vaishnavi Gowda: ನಟಿ ವೈಷ್ಣವಿ ಗೌಡಗೆ ನೋಟಿಸ್‌ ಕೊಟ್ಟ ಟ್ರಾಫಿಕ್‌ ಪೊಲೀಸರು; ಸೀತಮ್ಮ ಮಾಡಿದ ತಪ್ಪೇನು?

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20242 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ3 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು4 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ10 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ20 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ21 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ21 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ22 hours ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ22 hours ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 day ago

Karnataka Rain : ಕುರಿಗಾಹಿಗಳ ಪ್ರಾಣ ಕಸಿದ ಸಿಡಿಲು; 20ಕ್ಕೂ ಹೆಚ್ಚು ಕುರಿಗಳು ಸಾವು

ಟ್ರೆಂಡಿಂಗ್‌