‌ಅತ್ಯಾಚಾರ ಆರೋಪಿಗಳ ಬಿಡುಗಡೆ ಪ್ರಶ್ನಿಸಿದ ಬಿಲ್ಕಿಸ್ ಬಾನೊ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್‌ - Vistara News

ಕೋರ್ಟ್

‌ಅತ್ಯಾಚಾರ ಆರೋಪಿಗಳ ಬಿಡುಗಡೆ ಪ್ರಶ್ನಿಸಿದ ಬಿಲ್ಕಿಸ್ ಬಾನೊ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್‌

ತಮ್ಮ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್‌ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬಿಲ್ಕಿಸ್‌ ಬಾನೊ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

VISTARANEWS.COM


on

Bilkis Bano Case
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ತಮ್ಮ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದ ಅಪರಾಧಿಗಳನ್ನು ಬಿಡುಗಡೆ ಮಾಡಿರುವ ಗುಜರಾತ್‌ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಬಿಲ್ಕಿಸ್‌ ಬಾನೊ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾ ಮಾಡಿದೆ.

2002ರ ಗೋಧ್ರಾ ಹತ್ಯಾಕಾಂಡದ ವೇಳೆ ಬಿಲ್ಕಿಸ್‌ ಬಾನೊ (Bilkis Bano) ಮೇಲೆ ಅತ್ಯಾಚಾರ ಎಸಗಿದ 11 ಅಪರಾಧಿಗಳನ್ನು ಗುಜರಾತ್‌ ಸರ್ಕಾರವು ೧೯೯೨ರ ನೀತಿ ಅನ್ವಯ ಕಳೆದ ಆಗಸ್ಟ್‌ನಲ್ಲಿ ಬಿಡುಗಡೆ ಮಾಡಿದೆ. ಇದರ ಜತೆಗೆ, ಬಿಲ್ಕಿಸ್‌ ಬಾನೊ ಅವರ ಮಗಳು ಸೇರಿ ಏಳು ಕುಟುಂಬಸ್ಥರ ಹತ್ಯೆಯೂ ನಡೆದಿತ್ತು. ಇದರಲ್ಲೂ ಈ ಅಪರಾಧಿಗಳಿದ್ದಾರೆ.

ಗುಜರಾತ್‌ ಸರ್ಕಾರಕ್ಕೆ ಈ ಅಪರಾಧಿಗಳನ್ನು ಬಿಡುಗಡೆ ಮಾಡುವ ಅಧಿಕಾರವಿಲ್ಲ. ಯಾಕೆಂದರೆ ಈ ಪ್ರಕರಣದ ವಿಚಾರಣೆ ನಡೆದಿರುವುದು ಮಹಾರಾಷ್ಟ್ರ ಹೈಕೋರ್ಟ್‌ನಲ್ಲಿ. ಬಿಡುಗಡೆ ವಿಚಾರವನ್ನು ಪರಿಶೀಲಿಸುವ ಅಧಿಕಾರ ಅಲ್ಲಿನ ಸರ್ಕಾರಕ್ಕೆ ಮಾತ್ರವೇ ಇದೆ ಎಂದು ಬಿಲ್ಕಿಸ್‌ ಕಡೆಯ ವಕೀಲರು ವಾದ ಮಂಡಿಸಿದ್ದರು.

ಇದನ್ನೂ ಓದಿ | Bilkis Bano Case | 11 ರೇಪಿಸ್ಟ್‌ಗಳ ಬಿಡುಗಡೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋದ ಸಂತ್ರಸ್ತೆ ಬಿಲ್ಕಿಸ್ ಬಾನೊ

2022ರ ಮೇ ತಿಂಗಳಲ್ಲಿ ನ್ಯಾ.ಅಜಯ್‌ ರಸ್ತೋಗಿ ಮತ್ತು ನ್ಯಾ. ವಿಕ್ರಮ್‌ ನಾಥ್‌ ಅವರನ್ನೊಳಗೊಂಡ ಪೀಠ, ಅಪರಾಧ ನಡೆದಿರುವುದು ಗುಜರಾತ್‌ ರಾಜ್ಯದಲ್ಲೇ ಆದ್ದರಿಂದ, ಅಪರಾಧಿಗಳ ಬಿಡುಗಡೆ ವಿಚಾರದಲ್ಲಿ ಅಲ್ಲಿನ ಸರ್ಕಾರಕ್ಕೆ ಅಧಿಕಾರವಿದೆ ಎಂದು ತೀರ್ಪು ನೀಡಿತ್ತು. ಇದಕ್ಕೂ ಮುನ್ನ, ಮುಂಬಯಿಯಲ್ಲಿ ವಿಚಾರಣೆ ನಡೆದುದರಿಂದ ಅಲ್ಲಿನ ಸರ್ಕಾರವೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಗುಜರಾತ್‌ ಹೈಕೋರ್ಟ್‌ ತೀರ್ಪು ನೀಡಿತ್ತು.

ಈ ಅರ್ಜಿಯ ವಿಚಾರಣೆಯ ಪೀಠದಲ್ಲಿದ್ದ ನ್ಯಾ.ಬೆಲಾ ತ್ರಿವೇದಿ ಅವರು ಇತ್ತೀಚೆಗೆ ವಿಚಾರಣೆಯಿಂದ ಹಿಂದೆ ಸರಿದಿದ್ದರು. ಅಪರಾಧ ನಡೆದ ಅವಧಿಯಲ್ಲಿ ತಾವು ಗುಜರಾತ್‌ ಸರ್ಕಾರದ ಕಾನೂನು ಸಲಹೆಗಾರರಾಗಿದ್ದುದರಿಂದ, ವಿಚಾರಣೆಯಿಂದ ಹಿಂದೆ ಸರಿಯುತ್ತಿರುವುದಾಗಿ ತಿಳಿಸಿದ್ದರು.

ಇದನ್ನೂ ಓದಿ | Bilkis Bano Case | ಬಿಲ್ಕಿಸ್‌ ಬಾನೊ ಅತ್ಯಾಚಾರಿಗಳ ಬಿಡುಗಡೆ, ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಬೇಲಾ ತ್ರಿವೇದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

Rahul Gandhi: ಬಿಜೆಪಿ ಮಾನನಷ್ಟ ಕೇಸ್‌ನಲ್ಲಿ ಸಿಎಂ, ಡಿಸಿಎಂಗೆ ಶರತ್ತುಬದ್ಧ ಜಾಮೀನು; ರಾಹುಲ್‌ ಗಾಂಧಿ ಮೇಲೆ ಕೋರ್ಟ್‌ ಗರಂ

Rahul Gandhi: ವಿಚಾರಣೆಗೆ ಮುನ್ನ ಆಗಮಿಸಿದ ಸಿಎಂ ಹಾಗೂ ಡಿಸಿಎಂ, ಕೋರ್ಟ್ ಹಾಲ್ ಮುಂದೆ ಸಾಮಾನ್ಯರಂತೆ, ಜೊತೆಯಾಗಿ ಕುಳಿತರು. ನಂತರ ನ್ಯಾಯಾಲಯಕ್ಕೆ ಆಗಮಿಸಿದ ನ್ಯಾಯಾಧೀಶ ಕೆ. ಎನ್. ಶಿವಕುಮಾರ್ ಮುಂದೆ ಇಬ್ಬರೂ ಹಾಜರಾದರು.

VISTARANEWS.COM


on

rahul gandhi
Koo

ಬೆಂಗಳೂರು: ಬಿಜೆಪಿಗೆ (BJP) ಮಾನನಷ್ಟ (Defamation Case) ಮಾಡಿರುವ ಪ್ರಕರಣದಲ್ಲಿ ಎಸಿಎಂಎಂ ಕೋರ್ಟ್‌ (ACMM court) ಮುಂದೆ ಇಂದು ಹಾಜರಾದ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಶರತ್ತುಬದ್ಧ ಜಾಮೀನು (Bail) ಪಡೆದರು. ಪ್ರಕರಣದ ಇನ್ನೊಬ್ಬ ಆರೋಪಿ ರಾಹುಲ್‌ ಗಾಂಧಿ (Rahul Gandhi) ಗೈರು ಹಾಜರಾಗಿರುವ ಕುರಿತು ನ್ಯಾಯಾಧೀಶರು ಗರಂ ಆದರು.

ವಿಧಾನ ಪರಿಷತ್‌ ಸದಸ್ಯ, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.‌ ಕೇಶವ ಪ್ರಸಾದ್ ಅವರು ಸಲ್ಲಿಸಿರುವ ಖಾಸಗಿ ದೂರು ಇಂದು ವಿಚಾರಣೆಗೆ ಬಂದಿದ್ದು, ನ್ಯಾಯಾಧೀಶರ ಮುಂದೆ ಸಿಎಂ, ಡಿಸಿಎಂ ಹಾಜರಾದರು. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಮಾಡಿದ ಆರೋಪಗಳ ಹಿನ್ನೆಲೆಯಲ್ಲಿ ಕೈ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗಿದೆ. ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ A4 ಆರೋಪಿಯಾಗಿದ್ದಾರೆ.

ವಿಚಾರಣೆಗೆ ಮುನ್ನ ಆಗಮಿಸಿದ ಸಿಎಂ ಹಾಗೂ ಡಿಸಿಎಂ, ಕೋರ್ಟ್ ಹಾಲ್ ಮುಂದೆ ಸಾಮಾನ್ಯರಂತೆ, ಜೊತೆಯಾಗಿ ಕುಳಿತರು. ನಂತರ ನ್ಯಾಯಾಲಯಕ್ಕೆ ಆಗಮಿಸಿದ ನ್ಯಾಯಾಧೀಶ ಕೆ. ಎನ್. ಶಿವಕುಮಾರ್ ಮುಂದೆ ಇಬ್ಬರೂ ಹಾಜರಾದರು. ಪಾರ್ಟಿ ಪ್ರೆಸಿಡೆಂಟ್ ಹಾಗೂ ಎರಡನೇ ಆರೋಪಿ ಒಂದೇ ಎಂದು ವಕೀಲರು ತಿಳಿಸಿದರು. ಇಬ್ಬರನ್ನೂ ಹೊರ ಹೋಗಬಹುದೆಂದು ಜಡ್ಜ್‌ ಸೂಚಿಸಿದರು. ಇಬ್ಬರಿಗೂ ಶರತ್ತುಬದ್ಧ ಜಾಮೀನು ಮಂಜೂರು ಮಾಡಲಾಯಿತು. ಡಿಸಿಎಂ ಪರ ಎಎಜಿ ಎಸ್.ಎ ಅಹಮದ್ ವಾದಿಸಿದರು.

ನಾಲ್ಕನೇ ಆರೋಪಿ ರಾಹುಲ್ ಗಾಂದಿ ದೆಹಲಿಯಲ್ಲಿದ್ದಾರೆ. ಇಂದು ಇಂಡಿಯಾ ಕೂಟದ ಮೀಟಿಂಗ್ ಇದೆ. ಹೀಗಾಗಿ ರಾಹುಲ್ ಗಾಂಧಿ ಹಾಜರಾಗಲಾಗುತ್ತಿಲ್ಲ. ನಾಲ್ಕನೇ ತಾರೀಕು ಚುನಾವಣೆ ರಿಸಲ್ಟ್ ಇದೆ. ಹೀಗಾಗಿ ಕಾಲಾವಕಾಶ ನೀಡುವಂತೆ ವಿನಂತಿಸಿದರು. ಹಾಗಿದ್ದರೆ ಇಂದೇ ಬಂದು ಮುಗಿಸಿಕೊಂಡು ಹೋಗಬಹುದಿತ್ತಲ್ಲ, ದೆಹಲಿಗೆ ಹೋಗೋದಕ್ಕೆ ಐದು ದಿನ ಬೇಕಾಗಿಲ್ಲವಲ್ಲ ಎಂದು ಜಡ್ಜ್ ಪ್ರಶ್ನಿಸಿದರು. ನಂತರ ಮಧ್ಯಾಹ್ನ ಮೂರು ಗಂಟೆಗೆ ತಮ್ಮ ಆದೇಶವನ್ನು ಕಾಯ್ದಿರಿಸಿದರು.

ದೂರುದಾರರ ಪರ ಹಾಜರಾದ ವಕೀಲ ವಿನೋದ್ ಕುಮಾರ್, “ನ್ಯಾಯಾಲಯದಿಂದ ಸಮನ್ಸ್ ಜಾರಿ ಆದಾಗ ಬರಬೇಕು. ಪದೇ ಪದೆ ಕಾರಣ ನೀಡಿದ್ರೆ ಹೇಗೆ? ಎರಡು ಮೂರು ಸಲ ವಿನಾಯಿತಿ ನೀಡಲು ಅವಕಾಶ ಇಲ್ಲ ಎಂದು ಕಾನೂನಿನಲ್ಲಿ ಸ್ಪಷ್ಟವಾಗಿ ಹೇಳಿದೆ. ಮುಂದೆಯೂ ಬೇರೆ ಬೇರೆ ಸಭೆ ಇದೆ ಅಂತ ಹಾಜರಾಗದೇ ಇರಬಹುದು. ಇವತ್ತಿಗೆ ಎಲೆಕ್ಷನ್ ಮುಗಿಯುತ್ತೆ. ರಾಹುಲ್ ಗಾಂಧಿ ರಾಷ್ಟ್ರೀಯ ನಾಯಕರೇ ಆಗಿರಲಿ, ಕಾನೂನಿನ ಮುಂದೆ ಎಲ್ಲರೂ ಒಂದೇ. ಹೀಗಾಗಿ ರಾಹುಲ್ ಗಾಂಧಿಗೆ ವಾರೆಂಟ್ ಜಾರಿ ಮಾಡಿ” ಎಂದು ಮನವಿ ಮಾಡಿದರು.

ಶರತ್ತುಬದ್ಧ ಜಾಮೀನು ಮಂಜೂರು ಹಿನ್ನೆಲೆಯಲ್ಲಿ ಸಿಎಂ ಹಾಗೂ ಡಿಸಿಎಂ ಶ್ಯೂರಿಟಿ ಪತ್ರಗಳಿಗೆ ಸಹಿ ಹಾಕಿ ತೆರಳಿದರು. “ನನಗೂ ಮತ್ತು ಸಿಎಂಗೆ ಸಮನ್ಸ್ ನೀಡಲಾಗಿತ್ತು. ಹೀಗಾಗಿ ಬಂದಿದ್ದೇವೆ. ರಾಹುಲ್ ಗಾಂಧಿ ಅವರು ಸಹ ಬರಬೇಕಿತ್ತು. ಆದರೆ INDIA ಕೂಟದ ಸಭೆ ಇದೆ. ರಾಹುಲ್ ಗಾಂಧಿ ಸಹ ಬರುತ್ತಾರೆ. ಅವರಿಗೆ ನ್ಯಾಯಾಂಗದ ಮೇಲೆ ಗೌರವ ಇದೆ. ನಾವು ಯಾರನ್ನೂ ರಕ್ಷಣೆ ಮಾಡಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದರು.

ರಾಹುಲ್‌ ಗಾಂಧಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡದಂತೆ ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಿ ವಕೀಲ ಬಿ.ಎನ್ ಜಗದೀಶ್ ವಾದ ಮಂಡಿಸಿದರು.

ಏನಿದು ಪ್ರಕರಣ?

08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.‌ ಕೇಶವ ಪ್ರಸಾದ್ ಖಾಸಗಿ ದೂರ ದಾಖಲು ಮಾಡಿದ್ದರು. ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

ಇದನ್ನೂ ಓದಿ: CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

Continue Reading

ಪ್ರಮುಖ ಸುದ್ದಿ

CM Siddaramaiah: ಸಿಎಂ, ಡಿಸಿಎಂ ಕೂಡ ಇಂದು ಕೋರ್ಟ್‌ ಕಟಕಟೆಯಲ್ಲಿ! ಏನಿದು ಕೇಸ್?‌

CM Siddaramaiah: ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌ ಡಿಕೆ ಶಿವಕುಮಾರ್ ಪರ ವಕೀಲರಾದ ದೀಪು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ.

VISTARANEWS.COM


on

cm Siddaramaiah And DK Shivakumar
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಇಬ್ಬರೂ ಇಂದು ಮಾನನಷ್ಟ ಮೊಕದ್ದಮೆಯೊಂದಕ್ಕೆ (Defamation case) ಸಂಬಂಧಿಸಿ ಎಸಿಎಂಎಂ ನ್ಯಾಯಾಲಯಕ್ಕೆ (ACMM court) ಹಾಜರಾಗಲಿದ್ದಾರೆ. ಬೆಳಗ್ಗೆ ಇಬ್ಬರೂ ಹಾಜರಾಗಿ ಜಾಮೀನು ಅರ್ಜಿ (bail plea) ಸಲ್ಲಿಸಲಿದ್ದಾರೆ.

ವಿಧಾನ ಪರಿಷತ್‌ ಸದಸ್ಯ, ಬಿಜೆಪಿ (BJP) ಮುಖಂಡ ಕೇಶವ ಪ್ರಸಾದ್ ಅವರು ಸಲ್ಲಿಸಿರುವ ಖಾಸಗಿ ದೂರು ವಿಚಾರಣೆಗೆ ಬಂದಿದ್ದು, ಇಂದು ನ್ಯಾಯಾಧೀಶರ ಮುಂದೆ ಸಿಎಂ, ಡಿಸಿಎಂ ಹಾಜರ್ ಆಗುತ್ತಿದ್ದಾರೆ. ವಿಧಾನಸಭೆ ಚುನಾವಣೆ (Assembly election) ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಆರೋಪಿಸಿದ್ದ ಕೈ ನಾಯಕರ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಾಗಿದೆ.

“2500 ಕೋಟಿ ರೂಪಾಯಿ ಬಿಜೆಪಿ ಹೈಕಮಾಂಡ್‌ಗೆ ಕೊಟ್ಟರೆ ಸಿಎಂ ಹುದ್ದೆ ಸಿಗುತ್ತದೆ” ಎಂದಿದ್ದ ಆರೋಪ, ಕೋವಿಡ್ ಕಿಟ್ ಖರೀದಿ ಹಗರಣ, 40% ಕಮಿಷನ್ ಆರೋಪಗಳನ್ನು ಮಾಡಿದ್ದ ಕೈ ನಾಯಕರ ಮೇಲೆ ಕೇಶವ ಪ್ರಸಾದ್‌ ಮಾನನಷ್ಟ ಮೊಕದ್ದಮೆ ಹಾಕಿದ್ದರು. 08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರ ದಾಖಲು ಮಾಡಿದ್ದರು. ಈ ಪ್ರಕರಣದ ಕುರಿತು ಇಂದು ನಡೆಯುವ ವಿಚಾರಣೆಗೆ ಸಿಎಂ, ಡಿಸಿಎಂ ಹಾಜರ್ ಆಗಲಿದ್ದಾರೆ.

ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ. ಐಪಿಸಿ ಸೆಕ್ಷನ್ 499 ಹಾಗೂ 500 ಅಡಿಯಲ್ಲಿ ಖಾಸಗಿ ದೂರು ದಾಖಲಾಗಿದೆ.‌ ಡಿಕೆ ಶಿವಕುಮಾರ್ ಪರ ವಕೀಲರಾದ ದೀಪು 42ನೇ ಎಸಿಎಂಎಂ ಕೋರ್ಟ್‌ಗೆ ಹಾಜರಾಗಿದ್ದಾರೆ.

ಏನು ಹೇಳಿದ್ದರು?

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

ಇದನ್ನೂ ಓದಿ: DK Shivakumar: ಸಿಎಂ, ನನ್ನ ಮೇಲೆ ಶತ್ರು ಭೈರವಿ ಯಾಗ ನಡೆಯುತ್ತಿದೆ; ಡಿಕೆಶಿ ಹೊಸ ಬಾಂಬ್

Continue Reading

ಕರ್ನಾಟಕ

Bhavani Reavanna : ಭವಾನಿ ರೇವಣ್ಣಗೆ ಬಂಧನ ಭೀತಿ; ಜಾಮೀನು ಅರ್ಜಿ ತೀರ್ಪು ಮುಂದಕ್ಕೆ

Bhavani Reavanna : ಇದು ಅವರಿಗೆ ವಿಚಾರಣೆಗೆ ಹಾಜರಾಲು ನೀಡುತ್ತಿರುವ ಎರಡನೇ ನೋಟಿಸ್ ಆಗಿದೆ. ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆಯೊಬ್ಬಳನ್ನು ಅಪಹರಿಸಿರುವ ಪ್ರಕರಣದಲ್ಲಿ ಭವಾನಿ ರೇವಣ್ಣ ಎಸ್​ಐಟಿ ಪೊಲೀಸರ ತನಿಖೆಗೆ ಒಳಪಡಬೇಕಾಗಿತ್ತು. ಆದರೆ, ಯಾವುದೇ ಕಾರಣಕ್ಕೆ ಯಾರಿಗೂ ಕಾಣಿಸದೇ, ಪೊಲೀಸರ ವಿಚಾರಣೆಗೂ ಹಾಜರಾಗದೇ ತಲೆ ಮರಿಸಿಕೊಂಡ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

VISTARANEWS.COM


on

Bhavani Reavanna
Koo

ಬೆಂಗಳೂರು: ಲೈಂಗಿಕ ಹಗರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಭವಾನಿ ರೇವಣ್ಣ (Bhavani Reavanna) ಅವರಿಗೆ ಬಂಧನ ಭೀತಿ ಶುರುವಾಗಿದೆ. ತಮ್ಮನ್ನು ಬಂಧಿಸದಂತೆ ನಿರೀಕ್ಷಣಾ ಜಾಮೀನಿಗಾಗಿ ಭವಾನಿ ಅವರ ವಕೀಲರು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ. ಹೀಗಾಗಿ ಅವರಿಗೆ ಬಂಧನ ಭೀತಿ ಶುರುವಾಗಿದೆ. ಏತನ್ಮಧ್ಯೆ ಲೈಂಗಿಕ ಹಗರಣದಲ್ಲಿನ ಸಂತ್ರಸ್ತೆಯನ್ನು ಅಪಹರಿಸಿದ ಪ್ರಕರಣದ ಆರೋಪಿಯಾಗಿರುವ ಭವಾನಿ ರೇವಣ್ಣ ಅವರಿಗೆ ಎಸ್​ಐಟಿ ಅಧಿಕಾರಿಗಳು ಮತ್ತೊಂದು ನೋಟಿಸ್​ ನೀಡಿದ್ದಾರೆ.

ಇದು ಅವರಿಗೆ ವಿಚಾರಣೆಗೆ ಹಾಜರಾಲು ನೀಡುತ್ತಿರುವ ಎರಡನೇ ನೋಟಿಸ್ ಆಗಿದೆ. ಪ್ರಜ್ವಲ್ ರೇವಣ್ಣ ಅವರಿಂದ ಅನ್ಯಾಯಕ್ಕೆ ಒಳಗಾಗಿದ್ದ ಸಂತ್ರಸ್ತ ಮಹಿಳೆಯೊಬ್ಬಳನ್ನು ಅಪಹರಿಸಿರುವ ಪ್ರಕರಣದಲ್ಲಿ ಭವಾನಿ ರೇವಣ್ಣ ಎಸ್​ಐಟಿ ಪೊಲೀಸರ ತನಿಖೆಗೆ ಒಳಪಡಬೇಕಾಗಿತ್ತು. ಆದರೆ, ಯಾವುದೇ ಕಾರಣಕ್ಕೆ ಯಾರಿಗೂ ಕಾಣಿಸದೇ, ಪೊಲೀಸರ ವಿಚಾರಣೆಗೂ ಹಾಜರಾಗದೇ ತಲೆ ಮರಿಸಿಕೊಂಡ ರೀತಿಯಲ್ಲಿ ವರ್ತಿಸುತ್ತಿದ್ದಾರೆ.

ಒಂದೆಡೆ ಮಗ ಪ್ರಜ್ವಲ್‌ ರೇವಣ್ಣ (prajwal revanna case) ನಿನ್ನೆ ರಾತ್ರಿ ಬಂಧನವಾಗಿದ್ದು, ಇಂದು ಮೆಡಿಕಲ್‌ ಟೆಸ್ಟ್‌ ನಡೆಸಲಾಗುತ್ತಿದೆ. ಇಂದೇ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆಯಲು ಸಿದ್ಧತೆ ನಡೆಸಲಾಗಿದೆ. ಇಂದು ಭವಾನಿ ರೇವಣ್ಣ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ಕೂಡ ತೀರ್ಪಿಗೆ ಬರುತ್ತಿದೆ. ಅದರ ಬೆನ್ನಲ್ಲೇ ಎಸ್‌ಐಟಿ ಮತ್ತೊಂದು ನೋಟೀಸ್ ನೀಡಿದೆ. ಕೆ.ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ನೊಟೀಸ್ ನೀಡಿದೆ. “ಪ್ರಕರಣಕ್ಕೆ ಸಂಬಂಧಿಸಿ 01/06/2024ರಂದು ತನಿಖೆಗೆ ತನಿಖಾಧಿಕಾರಿಗಳು ಬರಲಿದ್ದು, ತಾವು ನೀಡಿದ ಈ ವಿಳಾಸದಲ್ಲಿ ತಮ್ಮನ್ನು ತನಿಖೆಗೆ ಒಳಪಡಿಸಲಾಗುವುದು. ಅಗತ್ಯ ಸಹಕಾರ ನೀಡಬೇಕು” ಎಂದು ನೊಟೀಸ್ ನೀಡಿದ್ದಾರೆ.

ಇದನ್ನೂ ಓದಿ ;Prajwal Revanna Case : ಪ್ರಜ್ವಲ್​ನನ್ನು ಮಹಿಳಾ ಪೊಲೀಸ್ ಸಿಬ್ಬಂದಿಯೇ ಬಂಧಿಸಿದ್ದು ಯಾಕೆ?

“ಈ ಹಿಂದೆ ನೀಡಿದ್ದ ನೋಟೀಸ್‌ಗೆ ನೀವು ಉತ್ತರಿಸಿಲ್ಲ. 15-05-24ರಂದು ನೀಡಿದ ನೋಟೀಸ್‌ಗೆ, ಹೊಳೆನರಸೀಪುರದ ಚನ್ನಾಂಭಿಕ ನಿವಾಸದಲ್ಲಿ ಸ್ಪಷ್ಟನೆ ನೀಡುವುದಾಗಿ ತಿಳಿಸಿದ್ದೀರಿ. ಈ ಪ್ರಕರಣದಲ್ಲಿ ನಿಮ್ಮನ್ನು ವಿಚಾರಣೆಗೆ ಒಳಪಡಿಸುವ ಅವಶ್ಯಕತೆ ಇದೆ. ಆದ್ದರಿಂದ ನೀವು ಹೇಳಿರುವಂತೆ ನಾವು ನಿಮ್ಮನ್ನು 01-06-24ರಂದು ವಿಚಾರಣೆಗೆ ಒಳಪಡಿಸಲಿದ್ದು, ಖುದ್ದು ಹಾಜರಿರಬೇಕು. ಮಹಿಳಾ ಅಧಿಕಾರಿಗಳೊಂದಿಗೆ ಜೂನ್ 1ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆ ಒಳಗೆ ವಿಚಾರಣೆಗೆ ಆಗಮಿಸುತ್ತೇವೆ. ಆ ಸಂದರ್ಭ ಖುದ್ದು ಮನೆಯಲ್ಲಿ ಹಾಜರಿರಬೇಕು” ಎಂದು ಎಸ್‌ಐಟಿ ಮುಖ್ಯಸ್ಥ ಹೇಮಂತ್‌ಕುಮಾರ್‌ ಆದೇಶಿಸಿದ್ದಾರೆ.

ಭವಾನಿ ರೇವಣ್ಣ ಅವರಿಗೆ ಇದುವರೆಗೆ ಎರಡು ನೋಟೀಸ್‌ಗಳನ್ನು ನೀಡಲಾಗಿದೆ. ನಂತರ ಎಸ್ಐಟಿಗೆ ಪತ್ರ ಬರೆದಿದ್ದ ಭವಾನಿ, ಅವಶ್ಯವಿದ್ದರೆ ತನಿಖೆಗೆ ತಮ್ಮ ಮನೆಯಲ್ಲಿ ಲಭ್ಯವಿರುವುದಾಗಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ತಾವು ವಿಚಾರಣೆಗೆ ಬರುತ್ತಿರುವುದಾಗಿ ಎಸ್ಐಟಿಯಿಂದ ನೊಟೀಸ್‌ ಹೋಗಿದೆ. ಹಾಸನ ಹೊಳೆನರಸೀಪುರದ ಹೆಚ್.ಡಿ ರೇವಣ್ಣ ಹಾಗೂ ಭವಾನಿ ನಿವಾಸದ ಬಾಗಿಲಿಗೆ SIT ಟೀಂ ನೋಟೀಸ್ ಅಂಟಿಸಿದೆ. ಹೀಗಾಗಿ ನಾಳೆ ಹೊಳೆನರಸೀಪುರದಲ್ಲಿ ಭವಾನಿ ರೇವಣ್ಣ ಅವರ ಮೊದಲ ಸುತ್ತಿನ ವಿಚಾರಣೆ ನಡೆಯಲಿದೆ.

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತು ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯವು ಮೇ 31ರಂದೇ ಆದೇಶವನ್ನು ಹೊರಡಿಸುವುದಾಗಿ ತಿಳಿಸಿದೆ. ಅತ್ತ, ತಮ್ಮ ವಿರುದ್ಧ ದಾಖಲಾದ ಎರಡೂ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಎಚ್‌.ಡಿ.ರೇವಣ್ಣ ಕೂಡ ಅರ್ಜಿ ಸಲ್ಲಿಸಿದ್ದಾರೆ.

Continue Reading

ಪ್ರಮುಖ ಸುದ್ದಿ

Muslim Personal Law : ಹಿಂದೂ- ಮುಸ್ಲಿಂ ಜೋಡಿಯ ಮದುವೆಗೆ ವೈಯಕ್ತಿಕ ಕಾನೂನಿನ ಮಾನ್ಯತೆ ಇಲ್ಲ ಎಂದ ಕೋರ್ಟ್​, ವಿವರಣೆ ಹೀಗಿದೆ

Muslim Personal Law: ವಿಶೇಷ ವಿವಾಹ ಕಾಯ್ದೆಯಡಿ ತಮ್ಮ ಮದುವೆಯ ನೋಂದಣಿಗೆ ನಿಗದಿಪಡಿಸಿದ ದಿನಾಂಕದಂದು ವಿವಾಹ ಅಧಿಕಾರಿಯ ಮುಂದೆ ಹಾಜರಾಗಲು ಅವರು ಇತರ ಪರಿಹಾರಗಳನ್ನು ನೀಡುವಂತೆ ಜೋಡಿ ರಕ್ಷಣೆ ಕೋರಿತ್ತು. ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಹಿಂದೂ ಮಹಿಳೆ ಮತ್ತು ಮುಸ್ಲಿಂ ಪುರುಷನ ನಡುವಿನ ವಿವಾಹವು ವೈಯಕ್ತಿಕ ಕಾನೂನಿನ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಹೇಳಿ ನ್ಯಾಯಾಲಯವು ರಕ್ಷಣೆ ನಿರಾಕರಿಸಿತ್ತು.

VISTARANEWS.COM


on

Muslim Personal Law
Koo

ಭೋಪಾಲ್​: ಮುಸ್ಲಿಂ ಪುರುಷ ಮತ್ತು ಹಿಂದೂ ಮಹಿಳೆಯ ನಡುವಿನ ವಿವಾಹವು ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ (Muslim Personal Law) ಅಮಾನ್ಯ ಎಂದು ಮಧ್ಯಪ್ರದೇಶ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಅಂತರ್ ಧರ್ಮೀಯ ದಂಪತಿಗೆ ರಕ್ಷಣೆ ನೀಡಲು ನಿರಾಕರಿಸಿತು. ಅರ್ಜಿದಾರರು ಪರಸ್ಪರ ಪ್ರೀತಿಸುತ್ತಿದ್ದರು. ಹೀಗಾಗಿ ವಿಶೇಷ ವಿವಾಹ ಕಾಯ್ದೆಯಡಿ ವಿವಾಹ ನೋಂದಣಾಧಿಕಾರಿಯನ್ನು ಸಂಪರ್ಕಿಸಿದ್ದರು. ಆದರೆ ಕುಟುಂಬದ ಆಕ್ಷೇಪಣೆಗಳಿಂದಾಗಿ, ಅವರು ವಿವಾಹ ಅಧಿಕಾರಿಯ ಮುಂದೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಪರಿಣಾಮವಾಗಿ ಅವರ ಮದುವೆಯನ್ನು ನೋಂದಾಯಿಸಲಾಗಿಲ್ಲ.

ವಿಶೇಷ ವಿವಾಹ ಕಾಯ್ದೆಯಡಿ ತಮ್ಮ ಮದುವೆಯ ನೋಂದಣಿಗೆ ನಿಗದಿಪಡಿಸಿದ ದಿನಾಂಕದಂದು ವಿವಾಹ ಅಧಿಕಾರಿಯ ಮುಂದೆ ಹಾಜರಾಗಲು ಅವರು ಇತರ ಪರಿಹಾರಗಳನ್ನು ನೀಡುವಂತೆ ಜೋಡಿ ರಕ್ಷಣೆ ಕೋರಿತ್ತು. ಮುಸ್ಲಿಂ ವೈಯಕ್ತಿಕ ಕಾನೂನಿನ ಪ್ರಕಾರ ಹಿಂದೂ ಮಹಿಳೆ ಮತ್ತು ಮುಸ್ಲಿಂ ಪುರುಷನ ನಡುವಿನ ವಿವಾಹವು ವೈಯಕ್ತಿಕ ಕಾನೂನಿನ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಹೇಳಿ ನ್ಯಾಯಾಲಯವು ರಕ್ಷಣೆ ನಿರಾಕರಿಸಿತ್ತು.

“ಮಹಮ್ಮದೀಯ ಕಾನೂನಿನ ಪ್ರಕಾರ, ಮುಸ್ಲಿಂ ಹುಡುಗನು ವಿಗ್ರಹಾರಾಧಕ ಅಥವಾ ಅಗ್ನಿ ಆರಾಧಕಳಾಗಿರುವ ಹುಡುಗಿಯನ್ನು ಮದುವೆಯಾಗುವುದು ಮಾನ್ಯ ವಿವಾಹವಲ್ಲ. ಮದುವೆಯನ್ನು ವಿಶೇಷ ವಿವಾಹ ಕಾಯ್ದೆಯಡಿ ನೋಂದಾಯಿಸಿದರೂ ಮಾನ್ಯ ವಿವಾಹವಾಗುವುದಿಲ್ಲ. ಅದು ಫಾಸಿದ್ ವಿವಾಹವಾಗಿರುತ್ತದೆ.

ಇದನ್ನೂ ಓದಿ: Radhika Merchant : ಅನಂತ್​​ ಅಂಬಾನಿ- ರಾಧಿಕಾ ಮರ್ಚೆಂಟ್​ ವಿವಾಹದ ಸ್ಥಳ ಬಹಿರಂಗ; ಇಲ್ಲಿದೆ ವಿವರ

ಮುಸ್ಲಿಂ ಹುಡುಗನೊಬ್ಬ ಹಿಂದೂ ಹುಡುಗಿಯನ್ನು ಮದುವೆಯಾಗುವುದು ಮಾನ್ಯವಾಗುತ್ತದೆಯೇ ಅಥವಾ ಇಲ್ಲವೇ ಎಂಬ ಪ್ರಶ್ನೆಯನ್ನು ನ್ಯಾಯಾಲಯ ಪರಿಗಣಿಸಿದೆ. “ವೈಯಕ್ತಿಕ ಕಾನೂನಿನ ಪ್ರಕಾರ, ಮದುವೆಯ ಆಚರಣೆಗೆ ಕೆಲವು ಆಚರಣೆಗಳನ್ನು ನಿರ್ವಹಿಸುವುದು ಅವಶ್ಯಕ. ವಿಶೇಷ ವಿವಾಹ ಕಾಯ್ದೆಯಡಿ ಮದುವೆಯನ್ನು ನಡೆಸಿದರೆ, ಅಂತಹ ಕಡ್ಡಾಯ ಆಚರಣೆಗಳನ್ನು ನಿರ್ವಹಿಸದ ಕಾರಣ ಅಂತಹ ಮದುವೆಯನ್ನು ಪ್ರಶ್ನಿಸಲಾಗುವುದಿಲ್ಲ. ವಿಶೇಷ ವಿವಾಹ ಕಾಯ್ದೆಯಡಿ ವಿವಾಹವು ವೈಯಕ್ತಿಕ ಕಾನೂನಿನಡಿಯಲ್ಲಿ ನಿಷೇಧಿಸಲಾದ ಮದುವೆಯನ್ನು ಕಾನೂನುಬದ್ಧಗೊಳಿಸುವುದಿಲ್ಲ.

Continue Reading
Advertisement
Karnataka Weather Forecast
ಮಳೆ9 mins ago

Karnataka Weather : ಭಾರಿ ಮಳೆಗೆ ಕೆರೆಯಂತಾದ ರಸ್ತೆಗಳು; ಮುಳುಗಡೆಯಾದ ವಾಹನಗಳು

Star Saree Fashion
ಫ್ಯಾಷನ್13 mins ago

Star Saree Fashion: ಡಿಸೈನರ್‌ ಸೀರೆಯಲ್ಲಿ ನಟಿ ತಾನ್ಯಾ ಹೋಪ್‌ರಂತೆ ಕಾಣಲು ಈ 5 ಸಿಂಪಲ್‌ ರೂಲ್ಸ್ ಫಾಲೋ ಮಾಡಿ!

Arvind Kejriwal
ಪ್ರಮುಖ ಸುದ್ದಿ25 mins ago

Arvind Kejriwal : ಅರವಿಂದ್​ ಕೇಜ್ರಿವಾಲ್​ ಮತ್ತೆ ಜೈಲಿಗೆ ಹೋಗುವುದು ಫಿಕ್ಸ್​

World Milk Day
ಆರೋಗ್ಯ41 mins ago

World Milk Day: ಹಾಲಿಗೊಂದು ದಿನವೇ ಬೇಕೆಂದಿಲ್ಲ, ವರ್ಷವಿಡೀ ಆಚರಿಸಬಹುದು!

Narendra Modi
ಪ್ರಮುಖ ಸುದ್ದಿ49 mins ago

Narendra Modi : 45 ಗಂಟೆಗಳ ಸುದೀರ್ಘ ಧ್ಯಾನ ಪೂರ್ಣಗೊಳಿಸಿದ ಪ್ರಧಾನಿ ಮೋದಿ

KCET Result 2024
ಕರ್ನಾಟಕ55 mins ago

KCET Result 2024: ಸಿಇಟಿ ಫಲಿತಾಂಶ ಪ್ರಕಟ; ರಿಸಲ್ಟ್‌ ನೋಡಲು ಲಿಂಕ್‌ ಇಲ್ಲಿದೆ

Exit Poll Live 2024
Live News1 hour ago

Exit Poll 2024 Live: ಲೋಕಸಭೆ ಚುನಾವಣೆಯಲ್ಲಿ ಯಾರಿಗೆ ಗದ್ದುಗೆ? ಕೆಲವೇ ಕ್ಷಣಗಳಲ್ಲಿ ಎಕ್ಸಿಟ್‌ ಪೋಲ್‌, ಕ್ಷಣಕ್ಷಣದ ಮಾಹಿತಿ ಇಲ್ಲಿದೆ

Shah Rukh Khan shooting for King in Spain
ಬಾಲಿವುಡ್1 hour ago

Shah Rukh Khan: ಮಗಳ ಜತೆ ಶಾರುಖ್ ಅಭಿನಯಿಸಲಿರುವ ಸಿನಿಮಾ ದೃಶ್ಯ ಲೀಕ್‌!

Liquor ban
ಬೆಂಗಳೂರು1 hour ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

IPL 2025 Mega Auction
ಕ್ರೀಡೆ1 hour ago

IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Liquor ban
ಬೆಂಗಳೂರು1 hour ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ4 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು4 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ5 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ6 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು6 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

ಟ್ರೆಂಡಿಂಗ್‌